Cauvery Dispute: ತಮಿಳುನಾಡಿಗೆ ನಿತ್ಯ 1 ಟಿಎಂಸಿ ಕಾವೇರಿ ನೀರು ಬಿಡಲು ಸೂಚನೆ; ಸರ್ವಪಕ್ಷ‌ ಸಭೆ ಕರೆದ ಸಿಎಂ ಸಿದ್ದರಾಮಯ್ಯ - Vistara News

ರಾಜಕೀಯ

Cauvery Dispute: ತಮಿಳುನಾಡಿಗೆ ನಿತ್ಯ 1 ಟಿಎಂಸಿ ಕಾವೇರಿ ನೀರು ಬಿಡಲು ಸೂಚನೆ; ಸರ್ವಪಕ್ಷ‌ ಸಭೆ ಕರೆದ ಸಿಎಂ ಸಿದ್ದರಾಮಯ್ಯ

Cauvery Dispute: ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಈ ಮಧ್ಯೆ ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ಪ್ರತಿದಿನ 1 ಟಿಎಂಸಿ ಅಡಿ ನೀರು ಬಿಡಲು ಕರ್ನಾಟಕಕ್ಕೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಇಂದು (ಜುಲೈ 14) ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಸರ್ವಪಕ್ಷ‌ ಸಭೆ ಕರೆದಿದ್ದಾರೆ. ವಿಧಾನಸೌಧದಲ್ಲಿ ಸಂಜೆ 4 ಗಂಟೆಗೆ ಸಭೆ ನಡೆಯಲಿದೆ.

VISTARANEWS.COM


on

Cauvery Dispute
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿ (Cauvery water regulation commitee-CWRC) ತಮಿಳುನಾಡಿಗೆ (Tamil Nadu) ಪ್ರತಿದಿನ 1 ಟಿಎಂಸಿ (TMC) ಅಡಿ ನೀರು ಬಿಡಲು ಕರ್ನಾಟಕಕ್ಕೆ (Karnataka) ಸೂಚಿಸಿದೆ. ಕಾವೇರಿ ಬಿಕ್ಕಟ್ಟು (Cauvery Dispute) ಮತ್ತೆ ತಲೆದೋರಿರುವ ಹಿನ್ನೆಲೆಯಲ್ಲಿ ಇಂದು (ಜುಲೈ 14) ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಸರ್ವಪಕ್ಷ‌ ಸಭೆ ಕರೆದಿದ್ದಾರೆ.

ವಿಧಾನಸೌಧದಲ್ಲಿ ಇಂದು ಸಂಜೆ 4 ಗಂಟೆಗೆ ಸಭೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಜಲ ಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಬಿಜೆಪಿ, ಜೆಡಿಎಸ್, ಸರ್ವೋದಯ ಪಕ್ಷದ ನಾಯಕರು ಸೇರಿದಂತೆ ರಾಜ್ಯದ ಕೇಂದ್ರ ಸಚಿವರು, ಕಾವೇರಿ ಕಣಿವೆಯ ಸಂಸದರು, ಸಚಿವರು ಹಾಗೂ ಶಾಸಕರು ಭಾಗಿಯಾಗಲಿದ್ದಾರೆ.

ಕಾವೇರಿ ನೀರಾವರಿ ನಿಯಂತ್ರಣ ಸಮಿತಿಯು ಪ್ರತಿದಿನ ತಮಿಳುನಾಡಿಗೆ 1 ಟಿಎಂಸಿ ನೀರು ಬಿಡುಗಡೆಗೆ ಆದೇಶ ನೀಡಿದ್ದು, ಇದಕ್ಕೆ ವಿರೋದ ವ್ಯಕ್ತವಾದ ಹಿನ್ನೆಲೆಯಲ್ಲಿ ಮುಂದಿನ ನಡೆಯನ್ನು ಚರ್ಚಿಸುವ ನಿಟ್ಟಿನಲ್ಲಿ ಈ ಸಭೆ ಕರೆಯಲಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ನೀರು ಬಿಡಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ.

ಮಳೆ ಕೊರತೆ

ಸದ್ಯಕ್ಕೆ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಜೂನ್ – ಜುಲೈ ತಿಂಗಳಲ್ಲಿ ಆಗಬೇಕಿದ್ದ ಮಳೆ ಸರಿಯಾಗಿ ಆಗಿಲ್ಲ. ಶೇ. 28ರಷ್ಟು ಮಳೆ ಕೊರತೆ ಎದುರಾಗಿದೆ. ಹೀಗಾಗಿ ನೀರು ಬಿಡಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಸಿಡಬ್ಲ್ಯುಆರ್‌ಸಿ ಆದೇಶದ ವಿರುದ್ಧ ಸಿಡಬ್ಲ್ಯುಎಂಎಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಈಗಾಗಲೇ ತೀರ್ಮಾನಿಸಿದೆ. ಇದೀಗ ಸಂದಿಗ್ಧ ಪರಿಸ್ಥಿತಿಯಲ್ಲಿ ಸರ್ಕಾರದ ಜತೆ ಕೈ ಜೋಡಿಸುವಂತೆ ಪ್ರತಿಪಕ್ಷಗಳಲ್ಲಿ ಮುಖ್ಯಮಂತ್ರಿ ಮನವಿ ಮಾಡಲಿದ್ದಾರೆ. ದೆಹಲಿಯಲ್ಲಿ ನಡೆದಿದ್ದ ನೂತನ ಸಂಸದರ ಸಭೆಯ ವೇಳೆ ಕರ್ನಾಟಕದ ಕಷ್ಟದ ಸಮಯದಲ್ಲಿ ರಾಜ್ಯದ ಹಿತ ಕಾಪಾಡುವಂತೆ ಸಿದ್ದರಾಮಯ್ಯ ಮನವಿ ಮಾಡಿದ್ದರು.

ಸದ್ಯ ಮುಂಗಾರು ಆರಂಭದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿರುವ ಕಾರಣ ಮುಂದೆ‌ ಹೀಗೆ ಮಳೆ ಕೈ ಕೊಟ್ಟರೆ ಸಮಸ್ಯೆ ಆಗಬಹುದು ಎಂದು ರಾಜ್ಯ ಸರ್ಕಾರ ಲೆಕ್ಕಾಚಾರ ಹಾಕಿಕೊಂಡಿದೆ. ಈಗಿನ ಪರಿಸ್ಥಿತಿಯಲ್ಲಿ ನಿರಂತರವಾಗಿ ತಮಿಳುನಾಡಿಗೆ ನೀರು ಬಿಟ್ಟರೆ ಮುಂದೆ ಸಮಸ್ಯೆ ಆಗಲಿದೆ. ಹೀಗಾಗಿ ನಾವು ನೀರು ಬಿಡಲು ಸಾಧ್ಯವಿಲ್ಲ ಎಂಬ ನಿರ್ಣಯವನ್ನ ತಗೆದುಕೊಂಡಿದ್ದೇವೆ. ಪ್ರತಿಪಕ್ಷಗಳೆಲ್ಲ ಸರ್ಕಾರದ ಪರವಾಗಿ ನಿಲ್ಲಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Cauvery Dispute: ಕರ್ನಾಟಕದಿಂದ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ; ತಮಿಳುನಾಡಿಗೆ CWRC ಚಾಟಿ

ಜತೆಗೆ ಕೇಂದ್ರದ ಬಳಿಗೆ ನಿಯೋಗ ಕೊಂಡೊಯ್ಯುವ ಬಗ್ಗೆಯೂ ಪ್ರತಿಪಕ್ಷಗಳ ಸಲಹೆ ಕೇಳಲಿದ್ದಾರೆ. ನೀರು ಬೀಡಲು ಸದ್ಯಕ್ಕೆ ಸಾಧ್ಯವಿಲ್ಲ. ಇದರ ಬಗ್ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಇನ್ನೊಂದು ಕಡೆ ಕೇಂದ್ರ ನೀರಾವರಿ ಸಚಿವರ ಬಳಿಗೂ ನಿಯೋಗ ಕೊಂಡೊಯ್ದು ರಾಜ್ಯದ ವಾಸ್ತವ ಪರಿಸ್ಥಿತಿ ಸಲ್ಲಿಸೋಣ ಎಂದು ಮುಖ್ಯಮಂತ್ರಿ ಪ್ರತಿಪಕ್ಷಗಳ ಬಳಿ ಹೇಳುವ ಸಾಧ್ಯತೆ ಇದೆ. ಮಾತ್ರವಲ್ಲ ಕೇಂದ್ರ ಸಚಿವರು ಸಹ ಕೇಂದ್ರ ಸರ್ಕಾರಕ್ಕೆ ರಾಜ್ಯದ ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಂಡಬೇಕು ಎಂದು ಸಿದ್ದರಾಮಯ್ಯ ವಿನಂತಿಸಲಿದ್ದಾರೆ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Assembly Session: ಲೂಟಿಕೋರರ ಪಿತಾಮಹ ನೀನು: ಸದನದಲ್ಲಿ ಅಶ್ವತ್ಥ್ ನಾರಾಯಣ ವಿರುದ್ಧ ಗುಡುಗಿದ ಡಿಕೆಶಿ!

VISTARANEWS.COM


on

Assembly Session
Koo

ಬೆಂಗಳೂರು: ವಿಧಾನಮಂಡಲದ ಅಧಿವೇಶನದಲ್ಲಿ (Assembly Session) ಎರಡನೇ ದಿನವಾದ ಮಂಗಳವಾರವೂ ವಾಲ್ಮೀಕಿ ನಿಗಮದ ಹಗರಣವು (Valmiki Corporation Scam) ಸದ್ದು ಮಾಡಿದೆ. ಚರ್ಚೆಯ ವೇಳೆ ಸಿಎಂ ಸಿದ್ದರಾಮಯ್ಯ (CM Siddaramaiah) ಗೈರುಹಾಜರಿಯನ್ನು ಬಿಜೆಪಿ ಶಾಸಕ ಡಾ.ಸಿ.ಎನ್. ಅಶ್ವತ್ಥ್‌ ನಾರಾಯಣ್‌ (Ashwath narayan) ಆಕ್ಷೇಪಿಸಿದರು. ಈ ವೇಳೆ ʼಲೂಟಿಕೋರರ ಪಿತಾಮಹʼ ನೀನು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿರುವುದು ಕಂಡುಬಂದಿದೆ.

ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ನಂತರ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ಚರ್ಚೆ ಮೇಲಿನ ಪ್ರಸ್ತಾಪ ಮುಂದುವರಿಸಲು ಮುಂದಾದರು. ಈ ವೇಳೆ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಅವರು, ವಾಲ್ಮೀಕಿ ನಿಗಮದ ಹಗರಣದಲ್ಲಿ ಹಗಲು ದರೋಡೆ ಮಾಡಿರುವ ಮುಖ್ಯಮಂತ್ರಿಗಳು ಗೈರಾಗಿದ್ದಾರೆ. ಅವರು ಸದನಕ್ಕೆ ಹಾಜರಾಗಬೇಕು ಎಂದು ಪಟ್ಟು ಹಿಡಿದರು.

ಅಶೋಕ್ ಚರ್ಚೆ ಮಾಡುವಾಗ ಸಿಎಂ ಸಿದ್ದರಾಮಯ್ಯ ಗೈರಾದ ಹಿನ್ನೆಲೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ ಶಾಸಕ ಅಶ್ವತ್ಥ್‌ ನಾರಾಯಣ್, ನೇರವಾಗಿ ಇದು ಮುಖ್ಯಮಂತ್ರಿಗಳಿಗೆ ಸಂಬಂಧಿಸಿದ ವಿಚಾರ. ಹಣಕಾಸು ಸಚಿವರಾಗಿರೋ ಸಿಎಂ ಮೇಲೆ ಗಂಭೀರ ಆರೋಪ ಇದೆ. ಕೂಡಲೇ ಅವರನ್ನು ಕರೆಸಿ ಅಂತ ಆಗ್ರಹಿಸಿದರು. ಈ ವೇಳೆ ಸದನದಲ್ಲಿ ಎದ್ದು ನಿದ್ದು ಸಿಎಂ ಪರವಾಗಿ ಬ್ಯಾಟಿಂಗ್ ಮಾಡಿದ ಡಿಸಿಎಂ ಡಿಕೆಶಿ, ಸಿಎಂಗೆ ಗೌರವ ಕೊಡೋದನ್ನು ಕಲಿಯಿರಿ ಅಂತ ಆಕ್ರೋಶ ಹೊರಹಾಕಿದರು. ಈ ವೇಳೇ ಲೂಟಿಕೋರರ ಪಿತಾಮಹ ನೀನು ಅಂತ ಅಶ್ವತ್ಥ್‌ ನಾರಾಯಣ್ ಕಡೆ ಬೊಟ್ಟು ಮಾಡಿ ಕಿಡಿಕಾರಿದರು. ಈ ವೇಳೆ ಡಿಸಿಎಂ ವಿರುದ್ಧ ಮುಗಿಬಿದ್ದ ಬಿಜೆಪಿ ಶಾಸಕರು, ನೀವೇನು ಎಂಬುವುದು ಎಲ್ಲರಿಗೂ ಗೊತ್ತಿದೆ ಅಂತ ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ | Lakshmi Hebbalkar: ವಿಶೇಷ ಶಾಲೆಗಳ ಶಿಕ್ಷಕರ ವೇತನ ಪರಿಷ್ಕರಣೆಗೆ ಅಗತ್ಯ ಕ್ರಮ: ಹೆಬ್ಬಾಳಕರ್ ಭರವಸೆ

ಈ ವೇಳೆ ಮಾತನಾಡಿದ ಶಿವಕುಮಾರ್ ಅವರು, ಸಿದ್ದರಾಮಯ್ಯ ಅವರು ಈ ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದಾಗ ವಿಷಯದ ಚರ್ಚೆಗೆ ಪ್ರಸ್ತಾಪ ಮಾಡಿದಾಗೆಲ್ಲ ಬಿಜೆಪಿಯ ಮುಖ್ಯಮಂತ್ರಿಗಳು ಸದನದಲ್ಲಿ ಹಾಜರಿರುತ್ತಿದ್ದರೇ? ಅವರು ಗೈರಾಗಿರಲಿಲ್ಲವೇ? ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಶ್ವತ್ಥ್ ನಾರಾಯಣ ಅವರು ಮಾಡಬಾರದನ್ನು ಮಾಡಿರುವುದಕ್ಕೇ ಜನ ನಮ್ಮನ್ನು ಇಲ್ಲಿ ಕೂರಿಸಿ, ನಿಮ್ಮನ್ನು ಅಲ್ಲಿ ಕೂರಿಸಿ ತೀರ್ಪು ಕೊಟ್ಟಿದ್ದಾರೆ” ಎಂದು ಹರಿಹಾಯ್ದರು.

“ನನ್ನ ಹೆಸರು ಹೇಳಿ ಆಪಾದನೆ ಮಾಡಲಾಗಿದೆ, ಸಾಕ್ಷಿ ನೀಡಬೇಕು” ಎಂದು ಅಶ್ವತ್ಥ್ ನಾರಾಯಣ ಹೇಳಿದಾಗ “ಮಾಡಬಾರದ್ದು ಮಾಡಿರುವ ನಿಮ್ಮದನ್ನು ತೆಗೆಯುತ್ತೇವೆ, ಮಾತನಾಡುತ್ತೇವೆ ತಡೆಯಿರಿ” ಎಂದು ಗುಡುಗಿದರು.

“ನನ್ನ ವಿರುದ್ದ ಮಾಡಿದ ಆಪಾದನೆ ಹಿಟ್ ಆ್ಯಂಡ್ ರನ್” ಎಂದು ಅಶ್ವತ್ಥ್ ನಾರಾಯಣ ಗದ್ದಲ ಎಬ್ಬಿಸಿದಾಗ “ರಾಮನಗರದ ಕಸ ಗುಡಿಸುತ್ತೇನೆ ಎಂದು ಹೇಳಿದ ನಿಮಗೆ ವಿಧಾನಸಭೆ ಚುನಾವಣೆಯಲ್ಲಿ ಒಂದೇ ಒಂದು ಸೀಟು ಗೆಲ್ಲಲು ಆಗಲಿಲ್ಲ” ಎಂದು ಡಿಸಿಎಂ ಕುಟುಕಿದರು.

ಮುಂದುವರಿದು “ಇಷ್ಟು ಹೊತ್ತಿನ ತನಕ ಮುಖ್ಯಮಂತ್ರಿಗಳು ಕುಳಿತಿರಲಿಲ್ಲವೇ? ಸದನದಲ್ಲಿ ನಾವೆಲ್ಲಾ ಕುಳಿತಿಲ್ಲವೇ? ಮುಖ್ಯಮಂತ್ರಿಗಳ ಮೇಲೆ ಆರೋಪವಿದೆ ಎಂದು ಹೇಗೆ ಹೇಳುತ್ತಾರೆ ಇವರು?” ಎಂದು ಬಿಜೆಪಿ ಶಾಸಕರ ಮೇಲೆ ಡಿಸಿಎಂ ಮುಗಿಬಿದ್ದರು. ʼ ಈ ರೀತಿ ಯಾರ ಹೆಸರನ್ನು ಬೇಕಾದರೂ ನಾವು ಬಳಸಿಕೊಳ್ಳಬಹುದೇ” ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಹೇಳಿದಾಗ “ಇವರು (ಅಶ್ವತ್ಥ್ ನಾರಾಯಣ) ಮುಖ್ಯಮಂತ್ರಿಗಳ ಹೆಸರನ್ನು ಹೇಗೆ ಬಳಸಿಕೊಂಡರು? ಎಂದು ಕಟುವಾಗಿ ಮರುಪ್ರಶ್ನಿಸಿದರು.

ಶಿವಕುಮಾರ್ ಅವರ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಶಾಸಕರು ಗದ್ದಲ ಮಾಡಿದಾಗ ಕಲಾಪವನ್ನು ಮುಂದೂಡಲಾಯಿತು. “ಎಸ್ಐಟಿ ಎಂದರೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್ ಎಂದು ಶಾಸಕ ಸುರೇಶ್ ಕುಮಾರ್ ಹೇಳಿದ್ದಾರೆ, ಇದನ್ನು ಸಹ ಕಡತದಿಂದ ತೆಗೆದುಹಾಕಬೇಕು” ಎಂದು ಡಿಸಿಎಂ ಅವರು ಸ್ವೀಕರ್ ಗೆ ಮನವಿ ಮಾಡಿದರು.

ಇದನ್ನೂ ಓದಿ | D. S. Veeraiah: ಅರಸು ಟ್ರಕ್ ಟರ್ಮಿನಲ್ ಹಗರಣ;‌ ಡಿ.ಎಸ್‌.ವೀರಯ್ಯಗೆ ಜು.30ರವರೆಗೆ ನ್ಯಾಯಾಂಗ ಬಂಧನ

ಇದೇ ವೇಳೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದಾಗ “ ನಾನು ಸ್ಪೀಕರ್ ಅವರ ಬಳಿ ಮನವಿ ಮಾಡುತ್ತಿದ್ದೇನೆ. ನನಗೂ ಈ ಸದನದ ಕಾನೂನು ಗೊತ್ತಿದೆ” ಎಂದಾಗ, “ನೀವು ಸಿಬಿಐ ಬಗ್ಗೆ ಹೇಳಿದ್ದೀರಲ್ಲ” ಎಂದು ವಿಪಕ್ಷ ನಾಯಕ ಅಶೋಕ್ ಹೇಳಿದರು. “ಮೊದಲು ಹೇಳಿದವರು ನೀವು ಮತ್ತು ದೇವೇಗೌಡರು” ಎಂದು ಶಿವಕುಮಾರ್ ಅವರು ತಿರುಗೇಟು ಕೊಟ್ಟರು.

Continue Reading

ಕರ್ನಾಟಕ

Assembly Session: ಸರ್ಕಾರಕ್ಕೆ ವಾಲ್ಮೀಕಿ ಜನಾಂಗದ ಶಾಪ ತಟ್ಟಬಾರದೆಂದರೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ; ಆರ್‌. ಅಶೋಕ್‌ ಆಗ್ರಹ

Assembly Session: ವಾಲ್ಮೀಕಿ ಜನಾಂಗದ ಶಾಪ ಸರ್ಕಾರಕ್ಕೆ ತಟ್ಟಬಾರದೆಂದರೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್ಥಿಕ ಸಚಿವರೂ ಆಗಿರುವುದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಆಗ್ರಹಿಸಿದ್ದಾರೆ.

VISTARANEWS.COM


on

R Ashok demands that Valmiki Development Corporation scam should be investigated by CBI and CM Siddaramaiah should resign
Koo

ಬೆಂಗಳೂರು: ವಾಲ್ಮೀಕಿ ಜನಾಂಗದ ಶಾಪ ಸರ್ಕಾರಕ್ಕೆ ತಟ್ಟಬಾರದೆಂದರೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್ಥಿಕ ಸಚಿವರೂ ಆಗಿರುವುದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ (Assembly Session) ಆಗ್ರಹಿಸಿದರು.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದ ಕುರಿತು ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ನಡೆದಿದೆ ಎಂದು ಸರ್ಕಾರವೇ ಒಪ್ಪಿಕೊಂಡಿದೆ. ವಸಂತ ನಗರದ ಯೂನಿಯನ್‌ ಬ್ಯಾಂಕ್‌ ಹಾಗೂ ಎಂಜಿ ರಸ್ತೆಯ ಬ್ಯಾಂಕ್‌ ಖಾತೆಗೆ ಹಣ ಹಾಕಲಾಗಿದೆ. ಎರಡು ಖಾತೆ ತೆರೆಯಬಾರದು ಎಂದು ಸರ್ಕಾರವೇ ಆದೇಶ ಮಾಡಿರುವಾಗ ಅದನ್ನು ಉಲ್ಲಂಘಿಸಲಾಗಿದೆ. ಕಳ್ಳತನ ಆಗಿರುವುದೇ 187 ಕೋಟಿ ರೂ. ಎಂದಿರುವಾಗ ಅದು 89 ಕೋಟಿ ರೂ. ಎಂದು ಹೇಳಲು ಸಾಧ್ಯವಿಲ್ಲ. ಇದಕ್ಕಾಗಿಯೇ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಕಾಸು ಇಲಾಖೆಯವರು ತಮಗೆ ಗೊತ್ತಿರಲಿಲ್ಲ ಎಂದು ಹೇಳಿದರೂ ಅದು ದೊಡ್ಡ ತಪ್ಪು ಎಂದರು.

ಇದನ್ನೂ ಓದಿ: Karnataka Rain : ಭಾರಿ ಮಳೆ ಎಫೆಕ್ಟ್‌-ಮಲಗಿದ್ದ‌ ವ್ಯಕ್ತಿ ಮೇಲೆ ಬಿದ್ದ ಗೋಡೆ; ಮರ ಬಿದ್ದು ಕಾರು ಜಖಂ, ಚಾಲಕ ಜಸ್ಟ್‌ ಮಿಸ್‌

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆಗೆ ವಿಶೇಷ ತನಿಖಾ ದಳ ನಿಯೋಜಿಸಲಾಗಿದೆ. ಹಾಗೆಯೇ ಎಚ್‌.ಡಿ.ರೇವಣ್ಣ, ಪ್ರಜ್ವಲ್‌ ರೇವಣ್ಣ ಹಾಗೂ ಭವಾನಿ ರೇವಣ್ಣ ಅವರ ತನಿಖೆಗೆ ವಿಶೇಷ ತನಿಖಾ ದಳ ನಿಯೋಜಿಸಲಾಗಿದೆ. ಎಸ್‌ಐಟಿ ತನಿಖೆ ಆರಂಭವಾದಾಗಲೇ ಅವರು ಭಯಗೊಂಡು ನ್ಯಾಯಾಲಯಕ್ಕೆ ಹೋಗಿದ್ದರು. ಆದರೆ ನಿಗಮದ ತನಿಖೆ ಆರಂಭವಾದಾಗ ಸಚಿವರಿಗೆ ಹಾಗೂ ಅಧ್ಯಕ್ಷರಿಗೆ ಯಾವುದೇ ಭಯ ಇರಲಿಲ್ಲ. “ಸಿಬಿಐ ತನಿಖೆಯಾದರೆ ಎರಡು ವರ್ಷ ಜೈಲು ಹಾಗೂ ನಮ್ಮವರು ಬಂದರೆ ಬಿಡುಗಡೆ” ಎಂದು ಬಿಡುಗಡೆಯಾದ ಆಡಿಯೋದಲ್ಲಿ ಅಧಿಕಾರಿಗಳು ಮಾತಾಡಿದ್ದಾರೆ. ನಿಗಮದ ಹಗರಣದ ತನಿಖೆಯಲ್ಲಿ ಎಸ್‌ಐಟಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.

ಬೇನಾಮಿ ಹಣ ಬಂದ ಕೂಡಲೇ ಸಹಜವಾಗಿ ಇಲ್ಲಿ ಜಾರಿ ನಿರ್ದೇಶನಾಲಯ ಬಂದು ತನಿಖೆ ಮಾಡಿದೆ. ಹಾಗೆಯೇ ಸಿಬಿಐ ಕೂಡ ಕಾನೂನು ಪ್ರಕಾರ ಮಧ್ಯಪ್ರವೇಶ ಮಾಡಿ ತನಿಖೆ ಮಾಡುತ್ತಿದೆ. ಆದರೆ ಎಸ್‌ಐಟಿಯನ್ನು ಕಾಂಗ್ರೆಸ್‌ ಸರ್ಕಾರ ನೇಮಿಸಿದ್ದು, ತನಿಖೆ ವೇಗವಾಗಿ ನಡೆದಿಲ್ಲ. ಇಲ್ಲಿ ತಾರತಮ್ಯ ನಡೆದಿದೆ ಎಂದು ದೂರಿದರು.

ಹಗರಣವಾಗಿದೆ ಎಂದು ಗೊತ್ತಾದಾಗ ಸಮಾಜ ಕಲ್ಯಾಣ ಇಲಾಖೆಯ ಸಚಿವರು ಇದು ತಮ್ಮ ವ್ಯಾಪ್ತಿಯದ್ದಲ್ಲ ಎಂದು ಹೇಳಿದರು. ಆರ್ಥಿಕ ಇಲಾಖೆಯವರೂ ಇದನ್ನೇ ಹೇಳಿದರು. ಮುಖ್ಯಮಂತ್ರಿಯನ್ನು ಕೇಳಿದರೆ ಇದು ನನಗೆ ಸಂಬಂಧವಿಲ್ಲ ಎಂದರು. ಹೀಗೆ ಯಾರೂ ಒಪ್ಪಿಕೊಳ್ಳದೆ ಮತ್ತೊಬ್ಬರ ಮೇಲೆ ತಪ್ಪು ಹೇರುವ ಕೆಲಸ ಮಾಡಿದ್ದಾರೆ. ಇದು ಹೊಣೆ ಇಲ್ಲದ ಸರ್ಕಾರ ಎಂದು ದೂರಿದರು.

ಎಲ್ಲ ಶಾಸಕರಿಗೆ ಸಂಬಂಧಿಸಿದ್ದು

ಇದು 224 ಶಾಸಕರಿಗೂ ಸಂಬಂಧಪಟ್ಟ ಸಂಗತಿ. ಒಂದು ವರ್ಷದಿಂದ ನಿಗಮದಿಂದ ದಲಿತರಿಗೆ 187 ಕೋಟಿ ರೂ. ಮೊತ್ತದ ಯೋಜನೆ ಸಿಕ್ಕಿಲ್ಲ. ಈ ಹಣವನ್ನು ಮುಖ್ಯಮಂತ್ರಿಯೇ ನೀಡಬೇಕು. ಇದಕ್ಕೆ ಯಾರು ಜವಾಬ್ದಾರಿ? ಯೋಜನೆ ಮುಂದುವರಿಸುವುದಕ್ಕೆ ಯಾರನ್ನು ಹೊಣೆಗಾರರಾಗಿ ಮಾಡುತ್ತಾರೆ? ಇದು ಕ್ಷೇತ್ರದ ಮತದಾರರಿಗೆ ತಲುಪಬೇಕಾದ ಹಣ. ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತರ ಮನೆಗೆ ಹೋಗಿ ಒಂದು ದಿನ ವಾಸ್ತವ್ಯ ಮಾಡಲಿ. ದಲಿತರು ಎಷ್ಟು ಕಷ್ಟ ಪಡುತ್ತಾರೆ ಎಂದು ಗೊತ್ತಾಗುತ್ತದೆ. ಅಂತಹ ಜನರ ಹಣವನ್ನು ಕದ್ದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: KSRTC Package Tour: ಸೋಮನಾಥಪುರ, ತಲಕಾಡು, ಮಧ್ಯರಂಗ, ಭರಚುಕ್ಕಿ, ಗಗನಚುಕ್ಕಿಗೆ ಕೆಎಸ್‌ಆರ್‌ಟಿಸಿ ಪ್ಯಾಕೇಜ್‌ ಟೂರ್‌; ದರವೆಷ್ಟು?

ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಚಂದ್ರಶೇಖರನ್‌ ಕುಟುಂಬ ಬೀದಿಗೆ ಬಂದಿದೆ ಎಂಬ ಸುದ್ದಿ ಪತ್ರಿಕೆಯಲ್ಲಿ ಬಂದಿದೆ. ಆ ಮನೆಯನ್ನೇ ಕುಟುಂಬದವರು ಖಾಲಿ ಮಾಡಿ ಹೋಗಿದ್ದಾರೆ. ಆ ಕುಟುಂಬವೀಗ ಬೀದಿಗೆ ಬಂದಿದೆ. ಸಚಿವರು ಬಂದು ಸಮಾಧಾನ ಹೇಳಿದ್ದಾರೆಯೇ ಹೊರತು, ಏನೂ ಪರಿಹಾರ ಸಿಕ್ಕಿಲ್ಲ ಎಂದು ಮೃತ ಅಧಿಕಾರಿಯ ಪತ್ನಿ ಹೇಳಿದ್ದಾರೆ. ಇದೇ ರೀತಿ ನಮ್ಮ ಮನೆಯ ಹೆಣ್ಣುಮಕ್ಕಳಿಗೆ ಆಗಿದ್ದರೆ ಸಹಿಸಿಕೊಳ್ಳುತ್ತಿದ್ದೆವಾ? ಎಂದು ಪ್ರಶ್ನಿಸಿದರು.

Continue Reading

ಕರ್ನಾಟಕ

Lakshmi Hebbalkar: ವಿಶೇಷ ಶಾಲೆಗಳ ಶಿಕ್ಷಕರ ವೇತನ ಪರಿಷ್ಕರಣೆಗೆ ಅಗತ್ಯ ಕ್ರಮ: ಹೆಬ್ಬಾಳಕರ್ ಭರವಸೆ

Lakshmi Hebbalkar: 1982ರ ರಾಜ್ಯ ಅನುಸಂಧಾನ ಸಂಹಿತೆಯಡಿ ನಡೆಯುತ್ತಿರುವ ವಿಶೇಷ ಶಾಲೆಗಳ ವಿಶೇಷ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಯ ಬೇಡಿಕೆಗಳನ್ನು ಇಲಾಖೆ ಸಹಾನುಭೂತಿಯಿಂದ ಪರಿಶೀಲಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಸದ್ಯ ವಿಶೇಷ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ‌ ಶಿಕ್ಷಕರು ಹಾಗೂ ಶಿಕ್ಷಕೇತರರಿಗೆ ಕಳೆದ 14 ವರ್ಷಗಳಿಂದ ವೇತನ ಪರಿಷ್ಕರಣೆ ಆಗಿಲ್ಲ ಎನ್ನುವುದು ಗಮನಕ್ಕೆ ಬಂದಿದೆ. ಹೀಗಾಗಿ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಇಲಾಖೆಯೊಂದಿಗೆ ಚರ್ಚೆ ನಡೆಸಲಾಗುವುದು. ಜತೆಗೆ ಪ್ರತಿ ತಿಂಗಳು ವೇತನ ಭರಿಸುವ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

VISTARANEWS.COM


on

Necessary action will be taken for salary revision of special schools teachers says minister Lakshmi Hebbalkar
Koo

ಬೆಂಗಳೂರು: ರಾಜ್ಯದ ವಿಶೇಷ ವಸತಿ ಶಾಲೆಗಳಲ್ಲಿ ಸೇವಾ ನಿರತ ಸಿಬ್ಬಂದಿಯ ವೇತನ ಪರಿಷ್ಕರಣೆ ಸೇರಿದಂತೆ ಮೂಲಭೂತ ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಶೀಘ್ರವೇ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ತಿಳಿಸಿದ್ದಾರೆ.

ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ವಿಶೇಷಚೇತನ ಮಕ್ಕಳ ವಸತಿ ಶಾಲೆಗಳ ಸಭೆಯಲ್ಲಿ ಮಾತನಾಡಿದ‌ ಸಚಿವರು, 1982ರ ರಾಜ್ಯ ಅನುಸಂಧಾನ ಸಂಹಿತೆಯಡಿ ನಡೆಯುತ್ತಿರುವ ವಿಶೇಷ ಶಾಲೆಗಳ ವಿಶೇಷ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಯ ಬೇಡಿಕೆಗಳನ್ನು ಇಲಾಖೆ ಸಹಾನುಭೂತಿಯಿಂದ ಪರಿಶೀಲಿಸಲಿದೆ ಎಂದು ಹೇಳಿದರು.

ಇದನ್ನೂ ಓದಿ: KSRTC Package Tour: ಸೋಮನಾಥಪುರ, ತಲಕಾಡು, ಮಧ್ಯರಂಗ, ಭರಚುಕ್ಕಿ, ಗಗನಚುಕ್ಕಿಗೆ ಕೆಎಸ್‌ಆರ್‌ಟಿಸಿ ಪ್ಯಾಕೇಜ್‌ ಟೂರ್‌; ದರವೆಷ್ಟು?

ಸದ್ಯ ವಿಶೇಷ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ‌ ಶಿಕ್ಷಕರು ಹಾಗೂ ಶಿಕ್ಷಕೇತರರಿಗೆ ಕಳೆದ 14 ವರ್ಷಗಳಿಂದ ವೇತನ ಪರಿಷ್ಕರಣೆ ಆಗಿಲ್ಲ ಎನ್ನುವುದು ಗಮನಕ್ಕೆ ಬಂದಿದೆ. ಹೀಗಾಗಿ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಇಲಾಖೆಯೊಂದಿಗೆ ಚರ್ಚೆ ನಡೆಸಲಾಗುವುದು. ಜತೆಗೆ ಪ್ರತಿ ತಿಂಗಳು ವೇತನ ಭರಿಸುವ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು.

ಮಾನಸಿಕ ಭಿನ್ನ ಸಾಮರ್ಥ್ಯದ 25 ವಯೋಮಿತಿ ಮೀರಿದವರಿಗಾಗಿ ವೃತ್ತಿಪರ ತರಬೇತಿ ಕೇಂದ್ರ ಅಥವಾ ಪಾಲನಾ ಕೇಂದ್ರವನ್ನು ರಾಜ್ಯಾದ್ಯಂತ ನಡೆಸುವ ಬಗ್ಗೆ ಪರಿಶೀಲಿಸಿ ಕ್ರಮವಹಿಸಲಾಗುವುದು ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ: Olympics On Television: ಒಲಿಂಪಿಕ್ಸ್​ ಕ್ರೀಡಾಕೂಟ ಮೊದಲ ಬಾರಿಗೆ ಟಿವಿಯಲ್ಲಿ ಪ್ರಸಾರ ಕಂಡಿದ್ದು ಯಾವಾಗ?

ಸಭೆಯಲ್ಲಿ ಬೈಲಹೊಂಗಲ ಶಾಸಕ ಮಹಾಂತೇಶ್ ಕೌಜಲಗಿ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಆಯುಕ್ತ ವಾಸಿರೆಡ್ಡಿ ವಿಜಯ ಜ್ಯೋತ್ಸ್ನಾ, ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ನಿರ್ದೇಶಕ ಸಿದ್ದೇಶ್ವರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಅಧಿಕಾರಿಗಳು, ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರ ಹಾಗೂ ಶಿಕ್ಷಕೇತರ ಸಂಘ ಹಾಗೂ ಕರ್ನಾಟಕ ರಾಜ್ಯ ವಿಕಲಚೇತನರ ಸೇವಾ ಸಂಸ್ಥೆಗಳ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Assembly Session: ಕಾರ್ಮಿಕ ಇಲಾಖೆಯಿಂದ ಸಿನಿ ಕಾರ್ಮಿಕರಿಗೆ ಭರ್ಜರಿ ಗಿಫ್ಟ್!

Assembly Session: ಸಿನಿಮಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕೆಲಸ ಮಾಡುವ ಕಾರ್ಮಿಕರ ಕಲ್ಯಾಣಕ್ಕಾಗಿ ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕಲ್ಯಾಣ) ವಿಧೇಯಕ, 2024 ಅನ್ನು ರೂಪಿಸಿ ಜಾರಿಗೆ ತರಲು ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದ್ದು, ವಿಧಾನ ಮಂಡಲದಲ್ಲಿ ಸಹ ಅಂಗೀಕಾರ ಪಡೆಯಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.

VISTARANEWS.COM


on

Assembly Session Minister Santosh Lad gave a huge gift to the film workers from the labor department
Koo

ಬೆಂಗಳೂರು: ಸಿನಿಮಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕೆಲಸ ಮಾಡುವ ಕಾರ್ಮಿಕರ ಕಲ್ಯಾಣಕ್ಕಾಗಿ ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕಲ್ಯಾಣ) ವಿಧೇಯಕ 2024ಅನ್ನು ರೂಪಿಸಿ ಜಾರಿಗೆ ತರಲು ಸಂಪುಟ ಸಭೆಯಲ್ಲಿ (Assembly Session) ಅನುಮೋದನೆ ಪಡೆಯಲಾಗಿದ್ದು, ವಿಧಾನ ಮಂಡಲದಲ್ಲಿ ಸಹ ಅಂಗೀಕಾರ ಪಡೆಯಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.

ಈ ವಿಧೇಯಕದಿಂದ ಈ ಕ್ಷೇತ್ರದಲ್ಲಿ ಕೆಲಸ ಮಾಡುವ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಿದ ಶ್ರೇಯ ಸರ್ಕಾರಕ್ಕೆ ಸಿಗಲಿದೆ. ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಈ ವಿಧೇಯಕ ಜಾರಿಯಾಗುವುದಲ್ಲಿ ಮಹತ್ವದ ಪಾತ್ರ ವಹಿಸಿದ್ದು, ಇಲಾಖೆಯ ಮೂಲಕ ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಈ ವಿಧೇಯಕ ಜಾರಿಯಿಂದ ಅಸಂಖ್ಯಾತ ಕಾರ್ಮಿಕರ ಬಾಳಿಗೆ ಭದ್ರತೆ ದೊರೆಯಲಿದೆ.

ಇದನ್ನೂ ಓದಿ: KSRTC Package Tour: ಸೋಮನಾಥಪುರ, ತಲಕಾಡು, ಮಧ್ಯರಂಗ, ಭರಚುಕ್ಕಿ, ಗಗನಚುಕ್ಕಿಗೆ ಕೆಎಸ್‌ಆರ್‌ಟಿಸಿ ಪ್ಯಾಕೇಜ್‌ ಟೂರ್‌; ದರವೆಷ್ಟು?

ಕಳೆದ ಹಲವು ವರ್ಷಗಳಿಂದ ಈ ಯೋಜನೆ ಜಾರಿಗೆ ಸಾಕಷ್ಟು ಪ್ರಯತ್ನಗಳು ನಡೆದಿದ್ದವು. ಆದರೆ ಅವು ಸಾಕಾರಗೊಂಡಿರಲಿಲ್ಲ, ಇದೀಗ ಸಚಿವ ಸಂತೋಷ್‌ ಲಾಡ್‌ ಅವರು ಈ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇರಿಸಿದ್ದಾರೆ. ಕಳೆದ ಸರ್ಕಾರದ ಅವಧಿಯಲ್ಲೂ ಸಾಕಷ್ಟು ಪ್ರಯತ್ನಗಳು ನಡೆದಿದ್ದವು. ಆದರೆ ಅವುಗಳು ಕಾರ್ಯರೂಪಕ್ಕೆ ಬಂದಿರಲಿಲ್ಲ. ಈ ಬಾರಿ ಸಂತೋಷ್‌ ಲಾಡ್‌ ಅವರ ಅವಿರತ ಪ್ರಯತ್ನದ ಫಲವಾಗಿ ಈಗ ಕಾಲ ಕೂಡಿ ಬಂದಿದೆ. ಮನರಂಜನಾ ಕ್ಷೇತ್ರದ ಕಾರ್ಮಿಕರು ಸರಿಯಾದ ಉದ್ಯೋಗ ಭದ್ರತೆ ಇಲ್ಲದೆ ಯಾವುದೇ ಸೌಲಭ್ಯ ಇಲ್ಲದೇ ಅನಿಶ್ಚಿತತೆಯಲ್ಲಿ ಇರುವವರಿಗೆ ವರದಾನವಾಗಲಿದೆ. ಸಂತೋಷ್‌ ಲಾಡ್‌ ಅವರು ಕಾರ್ಮಿಕ ಸಚಿವರಾದಾಗಿನಿಂದ ಇಂತಹ ಹಲವಾರು ಹೊಸ ಕ್ರಮಗಳನ್ನು ಜಾರಿಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಗಿಗ್‌ ಕಾರ್ಮಿಕರಿಗಾಗಿಯೂ ಅವರು ಹೊಸ ಯೋಜನೆ ಜಾರಿ ಮಾಡಿದ್ದಾರೆ.

ವಿಧೇಯಕದ ಪ್ರಮುಖ ಅಂಶಗಳು

ಸಿನಿಮಾ ಮತ್ತು ಸಾಂಸ್ಕೃತಿಕ ರಂಗಗಳಲ್ಲಿ ದುಡಿಯುತ್ತಿರುವ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ ಸಾಮಾಜಿಕ ಭದ್ರತಾ ಸೌಲಭ್ಯಗಳಾದ ಜೀವವಿಮೆ, ಅಪಘಾತ ಪರಿಹಾರ, ಹೆರಿಗೆ ಭತ್ಯೆ, ಶವಸಂಸ್ಕಾರ ವೆಚ್ಚ, ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಮುಂತಾದ ಸೌಲಭ್ಯಗಳನ್ನು ಹಂತ ಹಂತವಾಗಿ ಒದಗಿಸಲಾಗುವುದು.

ಸಿನಿಮಾ ಹಾಗೂ ಸಂಬಂಧಿತ ಕ್ಷೇತ್ರಗಳ ಪ್ರದರ್ಶನದ ಟಿಕೆಟ್‌ಗಳ ಮೇಲೆ ಶೇ.2ರಷ್ಟು ಮೀರದಂತೆ ಆದರೆ ಶೇ.1 ಕ್ಕೆ ಕಡಿಮೆಯಿಲ್ಲದಷ್ಟು ಸುಂಕ ವಿಧಿಸುವ ಮೂಲಕ ಹಾಗೂ ಸಂಬಂಧಿತ ಸಂಸ್ಥೆಗಳಿಂದ ವಂತಿಗೆ ಸಂಗ್ರಹಿಸುವ ಮೂಲಕ ಸಿನಿಮಾ ಹಾಗೂ ಸಾಂಸ್ಕೃತಿಕ ಕಾರ್ಯಕರ್ತರ ಕಲ್ಯಾಣ ನಿಧಿ ಸ್ಥಾಪಿಸಿ ಆವಶ್ಯಕವಿರುವ ನಿಧಿ ಸಂಗ್ರಹಣೆಗೆ ಉದ್ದೇಶಿಸಲಾಗಿದೆ.

ನಿಧಿ ಸಂಗ್ರಹಣೆ, ನಿರ್ವಹಣೆ ಹಾಗೂ ಫಲಾನುಭವಿಗಳಿಗೆ ಸಾಮಾಜಿಕ ಭದ್ರತಾ ಸೌಲಭ್ಯಗಳ ವಿತರಣೆಗೆ ಪ್ರತ್ಯೇಕವಾದ Karnataka Cine and Cultural Activities Welfare Board ಅನ್ನು ರಚಿಸಲು ಉದ್ದೇಶಿಸಲಾಗಿದೆ. ಸಿನಿಮಾ ಮತ್ತು ಇತರೆ ಸಾಂಸ್ಕೃತಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡ ತಂತ್ರಜ್ಞರು, ಕಾರ್ಮಿಕರಿಗೆ ನಿಯಮಿತವಾಗಿ ಕೆಲಸವಿರುವುದಿಲ್ಲ. ಅವರು ಅವಶ್ಯಕತೆ ಇರುವ ಅವಧಿಯಲ್ಲಿ ಮಾತ್ರವೇ ಕೆಲಸದಲ್ಲಿ ತೊಡಗಿರುತ್ತಾರೆ. ಕೆಲವು ಅವಧಿ ಅವರು ನಿರುದ್ಯೋಗಿಯಾಗಿರುತ್ತಾರೆ. ಈ ಯೋಜನೆಯ ಜಾರಿಗೆ ರಾಜ್ಯ ಸರ್ಕಾರದ ಅನುದಾನವನ್ನು ಅವಲಂಬಿಸುವ ಬದಲು ಪ್ರತ್ಯೇಕ ಸಂಪನ್ಮೂಲವನ್ನು ಕ್ರೋಡೀಕರಿಸಲಾಗುವುದು.

ಇದನ್ನೂ ಓದಿ: Olympics On Television: ಒಲಿಂಪಿಕ್ಸ್​ ಕ್ರೀಡಾಕೂಟ ಮೊದಲ ಬಾರಿಗೆ ಟಿವಿಯಲ್ಲಿ ಪ್ರಸಾರ ಕಂಡಿದ್ದು ಯಾವಾಗ?

ಈ ವಿಧೇಯಕ ಸಂಬಂಧ ಆರ್ಥಿಕ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಇಲಾಖೆ, ಕಾನೂನು ಇಲಾಖೆ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆ ಜತೆಗೆ ಸಭೆ ನಡೆಸಿ ಸಮಾಲೋಚನೆ ನಡೆಸಲಾಗಿದೆ.

Continue Reading
Advertisement
Assembly Session
ಕರ್ನಾಟಕ30 seconds ago

Assembly Session: ಲೂಟಿಕೋರರ ಪಿತಾಮಹ ನೀನು: ಸದನದಲ್ಲಿ ಅಶ್ವತ್ಥ್ ನಾರಾಯಣ ವಿರುದ್ಧ ಗುಡುಗಿದ ಡಿಕೆಶಿ!

Ananth Ambani Fashion
ಫ್ಯಾಷನ್12 mins ago

Ananth Ambani Fashion: ಅನಂತ್‌ ಅಂಬಾನಿ ಬಳಿ ಇದೆ ಡೈಮಂಡ್‌ ಬ್ರೂಚ್‌ಗಳ ಕಲೆಕ್ಷನ್‌! ಇವುಗಳ ಮೌಲ್ಯ ಎಷ್ಟಿರಬಹುದು?

Entrepreneurship Development Training Concluding Ceremony at Kanakagiri
ಕೊಪ್ಪಳ18 mins ago

Koppala News: ಕನಕಗಿರಿಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ

Pooja Khedkar
ದೇಶ19 mins ago

Pooja Khedkar: ಪೂಜಾ ಖೇಡ್ಕರ್‌ಗೆ ಮತ್ತೊಂದು ಬಿಗ್‌ ಶಾಕ್‌; ತರಬೇತಿಗೆ ತಡೆ, ಅಕಾಡೆಮಿಗೆ ವಾಪಸ್‌

Clearance of footpaths in Shira
ತುಮಕೂರು20 mins ago

Shira News: ಶಿರಾದಲ್ಲಿ ಫುಟ್‌ಪಾತ್‌ಗಳ ತೆರವು ಕಾರ್ಯಾಚರಣೆ

karnataka weather Forecast
ಮಳೆ22 mins ago

Karnataka Weather : ನಾಳೆಗೂ ಮಳೆ ಮುನ್ನೆಚ್ಚರಿಕೆ; ಸೆ.30ರವರೆಗೆ ಈ ಪ್ರವಾಸಿ ತಾಣಗಳಲ್ಲಿ ಟ್ರಕ್ಕಿಂಗ್‌ ನಿಷೇಧ

R Ashok demands that Valmiki Development Corporation scam should be investigated by CBI and CM Siddaramaiah should resign
ಕರ್ನಾಟಕ23 mins ago

Assembly Session: ಸರ್ಕಾರಕ್ಕೆ ವಾಲ್ಮೀಕಿ ಜನಾಂಗದ ಶಾಪ ತಟ್ಟಬಾರದೆಂದರೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ; ಆರ್‌. ಅಶೋಕ್‌ ಆಗ್ರಹ

Necessary action will be taken for salary revision of special schools teachers says minister Lakshmi Hebbalkar
ಕರ್ನಾಟಕ25 mins ago

Lakshmi Hebbalkar: ವಿಶೇಷ ಶಾಲೆಗಳ ಶಿಕ್ಷಕರ ವೇತನ ಪರಿಷ್ಕರಣೆಗೆ ಅಗತ್ಯ ಕ್ರಮ: ಹೆಬ್ಬಾಳಕರ್ ಭರವಸೆ

Assembly Session Minister Santosh Lad gave a huge gift to the film workers from the labor department
ಕರ್ನಾಟಕ28 mins ago

Assembly Session: ಕಾರ್ಮಿಕ ಇಲಾಖೆಯಿಂದ ಸಿನಿ ಕಾರ್ಮಿಕರಿಗೆ ಭರ್ಜರಿ ಗಿಫ್ಟ್!

Sadananda Suvarna
ಕರ್ನಾಟಕ47 mins ago

Sadananda Suvarna : ʼಗುಡ್ಡದ ಭೂತʼ ಖ್ಯಾತಿಯ ಹಿರಿಯ ರಂಗಕರ್ಮಿ, ನಿರ್ದೇಶಕ ಸದಾನಂದ ಸುವರ್ಣ ಇನ್ನಿಲ್ಲ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ6 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ7 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 day ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌