Murder Case: ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಬಾಲಕಿ ಶವ ಪತ್ತೆ ಕೇಸ್‌; ತಾಯಿಯ ಅಕ್ರಮ ಸಂಬಂಧಕ್ಕೆ ಬಲಿಯಾದಳಾ 5 ವರ್ಷದ ಪುತ್ರಿ? - Vistara News

ಕರ್ನಾಟಕ

Murder Case: ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಬಾಲಕಿ ಶವ ಪತ್ತೆ ಕೇಸ್‌; ತಾಯಿಯ ಅಕ್ರಮ ಸಂಬಂಧಕ್ಕೆ ಬಲಿಯಾದಳಾ 5 ವರ್ಷದ ಪುತ್ರಿ?

Murder Case: ಜುಲೈ 3ರಂದು ಬೆಂಗಳೂರಿನ ಮೆಜೆಸ್ಟಿಕ್‌ ರೈಲು ನಿಲ್ದಾಣದ ಟ್ಯಾಕ್ಸಿ ಪಾರ್ಕಿಂಗ್‌ ಸ್ಥಳದಲ್ಲಿ‌ ಬಾಲಕಿಯ ಮೃತದೇಹ ಪತ್ತೆಯಾಗಿತ್ತು. ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾಳೆ ಎಂದು ತಾಯಿಯೇ ಹತ್ಯೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

VISTARANEWS.COM


on

Murder Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಬಾಲಕಿ ಮೃತದೇಹ ಪತ್ತೆ ಪ್ರಕರಣದಲ್ಲಿ (Murder Case) ಬಾಲಕಿಯ ಗುರುತನ್ನು ರೈಲ್ವೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಜುಲೈ 3ರಂದು ರೈಲು ನಿಲ್ದಾಣದ ಟ್ಯಾಕ್ಸಿ ಪಾರ್ಕಿಂಗ್‌ ಸ್ಥಳದಲ್ಲಿ‌ ಶವವಾಗಿ ಪತ್ತೆಯಾಗಿದ್ದ ಬಾಲಕಿಯ ಹೆಸರು ಮರಿಯಮ್ (5) ಕೊಲೆಯಾದವಳು ಎಂದು ತಿಳಿದುಬಂದಿದೆ. ಮತ್ತೊಂದೆಡೆ ಬಾಲಕಿಯ ಕೊಲೆಯ ಸುತ್ತ ಸಾಕಷ್ಟು ಅನುಮಾನಗಳು ವ್ಯಕ್ತವಾಗಿದ್ದು, ಸದ್ಯ ಬಾಲಕಿಯ ಪೋಷಕರು ಯಾರು ಎಂಬುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.

ತಾಯಿಯ ಅಕ್ರಮ ಸಂಬಂಧಕ್ಕೆ ಬಲಿಯಾದಳಾ ಬಾಲಕಿ?

ಕೊಲೆಯಾದ ಮರಿಯಮ್ ತಾಯಿ ಹೀನಾ, ರಾಜು ಎಂಬಾತನ ಜತೆ ಅನೈತಿಕ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. ಗಂಡ ಶಿವು ಎಂಬಾತನನ್ನು ಬಿಟ್ಟು ರಾಜು ಜತೆ ಹೀನಾ ಭಿಕ್ಷಾಟನೆ ಮಾಡುತ್ತಿದ್ದಳು. ಇವರಿಬ್ಬರ ಜೊತೆಯೇ ಕೊಲೆಯಾದ ಮರಿಯಮ್ ಇರುತ್ತಿದ್ದಳು.

ಮಗಳು ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾಳೆ ಎಂದು ಹೀನಾ, ಪ್ರೇಮಿಯ ಜತೆ ಸೇರಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಮರಿಯಮ್ ಮೃತದೇಹ ದೊರೆತ ದಿನದಿಂದಲೂ ಹೀನಾ, ರಾಜು ನಾಪತ್ತೆಯಾಗಿದ್ದಾರೆ. ಹೀಗಾಗಿ ಪೊಲೀಸರಿಗೆ ಅವರ ಮೇಲೆ ಸಾಕಷ್ಟು ಅನುಮಾನ ಮೂಡಿದೆ. ಸದ್ಯ ಕೊಲೆಯಾದ ಮರಿಯಮ್ ತಾಯಿ ಹೀನಾ, ಪ್ರಿಯತಮ ರಾಜುಗಾಗಿ ರೈಲ್ವೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಹೀನಾ ಹಾಗೂ ರಾಜು ಬಗ್ಗೆ ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ರೈಲ್ವೆ ಪೊಲೀಸರು ಪ್ರಕಟಣೆ ನೀಡಿದ್ದಾರೆ.

ಇದನ್ನೂ ಓದಿ | Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

ಸಪ್ಲೇಯರ್‌ ಸಿಟ್ಟಿಗೆ ಬಲಿಯಾದ ಹೋಟೆಲ್‌ ಮಾಲೀಕ

Murder case

ಬೆಂಗಳೂರು ಗ್ರಾಮಾಂತರ: ಕಳೆದ ಜೂ.18ರಂದು ಎಲೆಕ್ಟ್ರಾನಿಕ್ ಸಿಟಿ ಸಮೀಪದ ಸಿಲಿಕಾನ್ ಟೌನ್‌ನಲ್ಲಿ ಕುಂದಾಪುರ ಮೂಲದ ವಿಜಯೇಂದ್ರ ಶೆಟ್ಟಿ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ (Attempt to murder) ನಡೆದಿತ್ತು. ಬಾಯಿಗೆ ಬಂದಂತೆ ಬೈದಿದ್ದಕ್ಕೆ ಸಿಟ್ಟಾದ ಸಪ್ಲೇಯರ್‌, ರಾಡಿನಿಂದ ಹೊಡೆದು ಕೋಮಾಗೆ ಕಳಿಸಿದ್ದ. ಸತತ 27 ದಿನಗಳ ಕಾಲ ಸಾವು-ಬದುಕಿನ ಮಧ್ಯೆ ಹೋರಾಡಿದ ವಿಜಯೇಂದ್ರ ಶೆಟ್ಟಿ, ಚಿಕಿತ್ಸೆ ಫಲಿಸದೇ ಭಾನುವಾರ (Murder case) ಕೊನೆಯುಸಿರೆಳೆದಿದ್ದಾರೆ.

ಪೊಲೀಸರ ದಿಕ್ಕು ತಪ್ಪಿಸಿದ್ದ ಹಂತಕ

ಕೃತ್ಯ ನಡೆದ ಬಳಿಕ ಪೊಲೀಸರ ದಿಕ್ಕು ತಪ್ಪಿಸಲು ಹೋಗಿ ಆರೋಪಿ ಸಪ್ಲೇಯರ್‌ ಮಂಜಪ್ಪ (Attempt To Murder) ಜೈಲುಪಾಲಾಗಿದ್ದ. ಮಂಜುನಾಥ್ ಟಿಪನ್ ಸೆಂಟರ್‌ನಲ್ಲಿ ಸಪ್ಲೇಯರ್‌ ಆಗಿದ್ದ ಮಂಜಪ್ಪ ತನಗೆ ಅನ್ನ ಹಾಕಿದ ಮಾಲೀಕ ಬೈದ ಎಂದು ರಾತ್ರಿ ಮಲಗಿದ್ದ ವೇಳೆ ಮಾರಣಾಂತಿಕ ಹಲ್ಲೆ ನಡೆಸಿದ್ದ.

ವಿಜಯೇಂದ್ರರ ಚಿರಾಟ ಕೇಳಿ ಅಕ್ಕ-ಪಕ್ಕದವರು ಸಹಾಯಕ್ಕೆ ಧಾವಿಸಿದ್ದರು. ಬಳಿಕ ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡು ತನಿಖೆಗೀಳಿದ ಪೊಲೀಸರಿಗೆ ಶಾಕ್‌ ಕಾದಿತ್ತು. ಯಾಕಂದರೆ ಮಾಲೀಕನ ಹೆಣ ಉರುಳಿಸಲು ಜತೆಗೆ ಇದ್ದ ಹೋಟೆಲ್ ಸಿಬ್ಬಂದಿಯೇ ಮುಂದಾಗಿದ್ದ.

ಮಾಲೀಕ ವಿಜಯೇಂದ್ರ ಹೋಟೆಲ್‌ನಲ್ಲಿ ದಿನನಿತ್ಯ ಬಾಯಿಗೆ ಬಂದಂತೆ ಬಯ್ಯುತ್ತಿದ್ದರಂತೆ. ಇದರಿಂದ ಕುಪಿತಗೊಂಡಿದ್ದ ಸಪ್ಲೇಯರ್ ಮಂಜಪ್ಪನಿಂದ ಕೊಲೆಗೆ ಸ್ಕೆಚ್ ಹಾಕಿದ್ದ. ಅದರಂತೆ ವಿಜಯೇಂದ್ರ ಮಲಗಿದ್ದ ವೇಳೆ ಎಂಟ್ರಿ ಕೊಟ್ಟ ಮಂಜಪ್ಪ ಜಿಮ್ ರಾಡ್‌ನಿಂದ ತಲೆಗೆ ಬಲವಾಗಿ ಹಲ್ಲೆ ನಡೆಸಿ ಕಾಲ್ಕಿತ್ತಿದ್ದ.

ರಕ್ತದ ಮಡುವಿನಲ್ಲಿ ಬಿದ್ದು ಅಸ್ವಸ್ಥಗೊಂಡಿದ್ದ ವಿಜಯೇಂದ್ರ ಅವರನ್ನು ಸ್ಥಳೀಯರು, ಹೋಟೆಲ್‌ ಸಿಬ್ಬಂದಿ ಆಸ್ಪತ್ರೆಗೆ ಸೇರಿಸಿದ್ದರು. ಬೆಳಗ್ಗೆ ವಾಪಸ್‌ ಕೃತ್ಯ ನಡೆದ ಸ್ಥಳಕ್ಕೆ ಬಂದಿದ್ದ ಮಂಜಪ್ಪ, ಏನು ಗೊತ್ತಿಲ್ಲದಂತೆ ನಾಟಕವಾಡಿದ್ದ. ಮಾತ್ರವಲ್ಲ ಯಾವುದೇ ಅಂಜಿಕೆಯಿಲ್ಲದೇ ಮಾಧ್ಯಮಗಳಿಗೆ ಹೇಳಿಕೆಯನ್ನೂ ಕೊಟ್ಟಿದ್ದ.

ಇದನ್ನೂ ಓದಿ | https://vistaranews.com/crime/self-harming-married-woman-selfharming-with-lover/694219.html

ಆದರೆ ಪೊಲೀಸರ ತನಿಖೆ ವೇಳೆ ಸಪ್ಲೇಯರ್ ಮಂಜಪ್ಪನ ಕೃತ್ಯ ಬಯಲಾಗಿತ್ತು. ಬಳಿಕ ಆರೋಪಿ ಮಂಜಪ್ಪನನ್ನು ಬಂಧಿಸಿರುವ ಪೊಲೀರು ಜೈಲಿಗೆ ಅಟ್ಟಿದ್ದಾರೆ. ಇತ್ತ ವಿಜಯೇಂದ್ರ ಮಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ವಿಜಯೇಂದ್ರ ಕೋಮಾ ಸ್ಥಿತಿಯಲ್ಲಿದ್ದರು. ಆದರೆ 27 ದಿನಗಳ ಈ ಹೋರಾಟದಲ್ಲಿ ಗಂಭೀರ ಗಾಯಗೊಂಡಿದ್ದ ವಿಜಯೇಂದ್ರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Road Accident: ಕೊಡಗಿನ ಸುಂಟಿಕೊಪ್ಪ ಬಳಿ ಟಿಪ್ಪರ್-ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರ ದುರ್ಮರಣ

Road Accident: ಕೊಡಗು ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಕೊಡಗರ ಹಳ್ಳಿಯಲ್ಲಿ ಭೀಕರ ಅಪಘಾತ ನಡೆದಿದೆ.

VISTARANEWS.COM


on

Road Accident
Koo

ಕೊಡಗು: ಬೈಕ್ ಹಾಗೂ‌ ಟಿಪ್ಪರ್ ನಡುವೆ ಭೀಕರ ಅಪಘಾತ ನಡೆದು, ಇಬ್ಬರು ಸವಾರರು ದುರ್ಮರಣ ಹೊಂದಿರುವ ಘಟನೆ (Road Accident) ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಕೊಡಗರ ಹಳ್ಳಿಯಲ್ಲಿ ನಡೆದಿದೆ. ಮಂಜು (25) ಹಾಗೂ ರಕ್ಷಿತ್ (24) ಮೃತರು.

ಸುಂಟಿಕೊಪ್ಪದಿಂದ ಕುಶಾಲನಗರ ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ಕುಶಾಲನಗರದಿಂದ ಮಡಿಕೇರಿ ಕಡೆ ಬರುತ್ತಿದ್ದ ಟಿಪ್ಪರ್ ಡಿಕ್ಕಿಯಾಗಿವೆ, ಇದರಿಂದ ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ | Sexual Abuse: ಮಧ್ಯವಯಸ್ಕ ಮಹಿಳೆಯ ಮೇಲೆ ಮಗನ ಸ್ನೇಹಿತನಿಂದಲೇ ಅತ್ಯಾಚಾರ!

ಓವರ್ ಟೇಕ್ ಮಾಡಲು ಹೋಗಿ ರಸ್ತೆ ಪಕ್ಕದ ತಗ್ಗಿಗೆ ಬಿದ್ದ ಬೈಕ್; ಇಬ್ಬರಿಗೆ ಗಾಯ

ಬಾಗಲಕೋಟೆ: ಓವರ್ ಟೇಕ್ ಮಾಡಲು ಹೋಗಿ ರಸ್ತೆ ಪಕ್ಕದ ತಗ್ಗಿಗೆ ಬೈಕ್ ಬಿದ್ದ ಹಿನ್ನೆಲೆಯಲ್ಲಿ ಪಿಯುಸಿ ಓದುವ ಇಬ್ಬರು ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಬೈಕ್‌ನಿಂದ ಬಿದ್ದು ಕೈ ಮುರಿದು ಏಳೋಕಾಗದೇ ಸ್ಥಳದಲ್ಲೇ ಓರ್ವ ವಿದ್ಯಾರ್ಥಿ ನರಳಾಡುತ್ತಿದ್ದ. ಮತ್ತೋರ್ವನ ಮುಖ, ಹಣೆ, ತಲೆ, ಮೂಗಿಗೆ ಗಾಯಗಳಾಗಿ ರಕ್ತಸ್ರಾವವಾಗುತ್ತಿತ್ತು.

ಬಾದಾಮಿ ತಾಲೂಕಿನ ಹಾಲಿಗೇರಿ ಗ್ರಾಮದ ಬಳಿ ಘಟನೆ ನಡೆದಿದೆ. ಅಪಘಾತದಲ್ಲಿ ಬಸಯ್ಯ ಸೂಳಿಕೇರಿ (17), ಪ್ರಶಾಂತ್ (17) ಎಂಬ ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಕಾಲೇಜು ಮುಗಿಸಿ ಕೆರೂರು ಪಟ್ಟಣದಿಂದ ಮನೆಗೆ ಹೋಗುವ ವೇಳೆ ಅಪಘಾತ ನಡೆದಿದೆ.

ರಾಯಚೂರಿನಲ್ಲಿ ಮೊಹರಂನಲ್ಲಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ವ್ಯಕ್ತಿ ಸುಟ್ಟು ಭಸ್ಮ

ರಾಯಚೂರು: ರಾಯಚೂರಿನಲ್ಲಿ ಮೊಹರಂ ಆಚರಣೆ ವೇಳೆ ಕೊಂಡ ಹಾಯುವಾಗ (Muharram 2024) ವ್ಯಕ್ತಿಯೊಬ್ಬ ಆಯತಪ್ಪಿ ಬಿದ್ದು ಸುಟ್ಟು ಭಸ್ಮವಾಗಿದ್ದಾರೆ. ರಾಯಚೂರಿನ ಮಸ್ಕಿ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ತಡರಾತ್ರಿ ಘಟನೆ ನಡೆದಿದೆ. ಸ್ಥಳೀಯ ನಿವಾಸಿ ಯಮನಪ್ಪ ನಾಯಕ್ (45)ಮೃತ ದುರ್ದೈವಿ.

ನಿಗಿ ನಿಗಿ ಕೆಂಡದಲ್ಲಿ ಬೇಯುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಮೊಹರಂ ಹಬ್ಬ ಆಚರಣೆ ವೇಳೆ ಕೊಂಡ ಹಾಯುವುದು ಪದ್ಧತಿ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿದೆ. ಅದರಂತೆ ಬೆಂಕಿ ಹಾಯಲು ಯಮನಪ್ಪ ಮುಂದಾಗಿದ್ದರು. ಕೊಂಡ ಹಾಯುವಾಗ ಆಯತಪ್ಪಿ ಬೆಂಕಿಯೊಳಗೆ ಬಿದ್ದ ಪರಿಣಾಮ ಸುಟ್ಟುಕರಕಲಾಗಿದ್ದಾರೆ.

ಕೂಡಲೇ ಅಲ್ಲಿದ್ದವರು ಬೆಂಕಿ ಹಾರಿಸಲು ನೀರು ಎರಚಿ ರಕ್ಷಣೆ ಮುಂದಾದರೂ, ಆದರೆ ತೀವ್ರ ಬೆಂಕಿ ಆವರಿಸಿ ಯಮನಪ್ಪ ಸುಟ್ಟುಭಸ್ಮವಾದರು. ತುರುವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸ್‌ರಿಂದ ಲಾಠಿ ಚಾರ್ಜ್

Sexual Abuse: ಮಧ್ಯವಯಸ್ಕ ಮಹಿಳೆಯ ಮೇಲೆ ಮಗನ ಸ್ನೇಹಿತನಿಂದಲೇ ಅತ್ಯಾಚಾರ!

ಮೊಹರಂ ಹಬ್ಬದ ಆಚರಣೆ ವೇಳೆ ಪೊಲೀಸ್‌ರಿಂದ ಲಾಠಿ ಚಾರ್ಜ್ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಪಾಶ್ಚಾಪೂರ ಗ್ರಾಮದಲ್ಲಿ ಘಟನೆ ನಡೆದಿದೆ. ಪಾಶ್ಚಾಪುರ ಗ್ರಾಮದ ನಡುವಿನ ಪೇಟೆ ಬಳಿ ಬಂದಾಗ ಏಕಾಏಕಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ ಎನ್ನಲಾಗಿದೆ. ಹೀಗಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಿದರು. ಎರಡು ದೇವರ ಭೇಟಿ ಸಂದರ್ಭದಲ್ಲಿ ಟೊನ್ನೆಬಾವು, ಕರಬಾಲ ಎಂಬ ಸಂಪ್ರದಾಯದ ಆಚರಣೆ ವೇಳೆ ಘಟನೆ ನಡೆದಿದೆ. ಸ್ಥಳದಲ್ಲಿದ್ದ ಯಮಕನಮರಡಿ ಪೊಲೀಸ್ ಠಾಣೆಯ ಎಎಸ್‌ಐ ಮುರಗೋಡ ಹಾಗೂ ಓರ್ವ ಪೋಲಿಸ್ ಪೇದೆ ಮೇಲೆ ಹಲ್ಲೆ ನಡೆಸಲಾಗಿದೆ. ಉದ್ದೇಶಪೂರ್ವಕವಾಗಿ ಪೊಲೀಸರ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪಿದೆ.

Continue Reading

ಕರ್ನಾಟಕ

Assembly Session: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ; ಏನೆಲ್ಲ ಅರ್ಹತೆ ಇರಬೇಕು?

Assembly Session: ಖಾಸಗಿ ಕ್ಷೇತ್ರಗಳಲ್ಲಿ ದುಡಿಯುವ ಕನ್ನಡಿಗರಿಗೆ ಉದ್ಯೋಗ ಮೀಸಲು ನೀಡುವ ವಿಧೇಯಕವನ್ನು ವಿಧಾನ ಮಂಡಲದಲ್ಲಿ ಮಂಡಿಸಲು ಸೋಮವಾರ ನಡೆದ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇದೇ ಅಧಿವೇಶನದಲ್ಲಿ ವಿಧೇಯಕವನ್ನು ಮಂಡಿಸಿ ಅಂಗೀಕಾರ ಪಡೆಯುವುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.

VISTARANEWS.COM


on

Assembly Session Job reservation for Kannadigas in private sectors Cabinet meeting approves bill
Koo

ಬೆಂಗಳೂರು: ಖಾಸಗಿ ಕ್ಷೇತ್ರಗಳಲ್ಲಿ ದುಡಿಯುವ ಕನ್ನಡಿಗರಿಗೆ ಉದ್ಯೋಗ ಮೀಸಲು ನೀಡುವ ವಿಧೇಯಕವನ್ನು ವಿಧಾನ ಮಂಡಲದಲ್ಲಿ ಮಂಡಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆಯಲ್ಲಿ (Assembly Session) ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇದೇ ಅಧಿವೇಶನದಲ್ಲಿ ವಿಧೇಯಕವನ್ನು ಮಂಡಿಸಿ ಅಂಗೀಕಾರ ಪಡೆಯುವುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.

‘ದಿ ಕರ್ನಾಟಕ ಸ್ಟೇಟ್ ಎಂಪ್ಲಾಯ್ಮೆಂಟ್ ಆಫ್ ಲೋಕಲ್ ಕ್ಯಾಡಿಡೇಟ್ಸ್ ಇನ್ ದಿ ಇಂಡಸ್ಟ್ರೀಸ್, ಫ್ಯಾಕ್ಟರೀಸ್ ಆ್ಯಂಡ್ ಲೋಕಲ್ ಎಷ್ಟಾಬ್ಲಿಷ್‌ಮೆಂಟ್ ಬಿಲ್-2024 ವಿಧೇಯಕದಂತೆ ಮ್ಯಾನೇಜ್‌ಮೆಂಟ್ ಹುದ್ದೆಗಳು ಶೇ.50 ಹಾಗೂ ನಾನ್ ಮ್ಯಾನೇಜ್‌ಮೆಂಟ್ ಶೇ.75 ರಷ್ಟು ಹುದ್ದೆಗಳು ಸ್ಥಳೀಯರಿಗೆ ಮೀಸಲಿಡಲಾಗುತ್ತದೆ.

ಇದನ್ನೂ ಓದಿ: Assembly Session: ಕಾರ್ಮಿಕ ಇಲಾಖೆಯಿಂದ ಸಿನಿ ಕಾರ್ಮಿಕರಿಗೆ ಭರ್ಜರಿ ಗಿಫ್ಟ್!

ಕರ್ನಾಟಕದಲ್ಲಿಯೇ ಹುಟ್ಟಿದವರು, ಕರ್ನಾಟಕದಲ್ಲಿ 15 ವರ್ಷದಿಂದ ವಾಸಿಸುತ್ತಿರುವವರು, ಕನ್ನಡ ಓದಲು, ಬರೆಯಲು ಮತ್ತು ಮಾತನಾಡಲು ಬರುವವರು, ನೋಡಲ್ ಏಜೆನ್ಸಿ ನಡೆಸುವ ಕನ್ನಡ ಪರೀಕ್ಷೆಯಲ್ಲಿ ಪಾಸಾದವರನ್ನು ಸ್ಥಳೀಯರು ಎಂದು ಪರಿಗಣಿಸಲಾಗುವುದು. ಮ್ಯಾನೇಜ್‌ಮೆಂಟ್‌ನಲ್ಲಿ ಸೂಪರ್‌ವೈಸ‌ರ್, ಮ್ಯಾನೇಜಿರಿಯಲ್, ಟೆಕ್ನಿಕಲ್, ಆಪರೇಷನಲ್, ಆಡಳಿತ ಸೇರಿ ಉನ್ನತ ಹುದ್ದೆಗಳಲ್ಲಿ ಶೇ.50 ಉದ್ಯೋಗ ಸ್ಥಳೀಯರಿಗೆ ಮೀಸಲಿಡಲಾಗುವುದು. ಇನ್ನು ನಾನ್-ಮ್ಯಾನೇಜ್‌ಮೆಂಟ್ನಲ್ಲಿ ಕ್ಲರ್ಕ್‌ಗಳು, ಕೌಶಲ, ಕೌಶಲ ರಹಿತ ಹಾಗೂ ಅರೆಕೌಶಲ, ಗುತ್ತಿಗೆ ನೌಕರ ಹಾಗೂ ಐಟಿ ಹುದ್ದೆಗಳಲ್ಲಿ ಶೇ.75 ಮೀಸಲು ಸ್ಥಳೀಯರಿಗೆ ನೀಡುವ ವಿಧೇಯಕ ಇದಾಗಿದೆ.

ಸ್ಥಳೀಯರಿಗೆ ಉದ್ಯೋಗ ನೀಡದಿದ್ದರೆ ದಂಡ ವಿಧಿಸುವ ಅಂಶವನ್ನೂ ವಿಧೇಯಕದಲ್ಲಿ ಸೇರಿಸಲಾಗಿದೆ. ಕನಿಷ್ಠ 10 ಸಾವಿರ ರೂ. ಹಾಗೂ 25 ಸಾವಿರ ರೂ.ಗಳ ವರೆಗೆ ದಂಡ ವಿಸ್ತರಣೆ ಮಾಡಲು ಅವಕಾಶ ನೀಡಲಾಗುತ್ತದೆ. ಆ ನಂತರವೂ ಉದ್ಯೋಗ ನೀಡದೇ ಹೋದರೆ ದಿನಕ್ಕೆ 100 ರೂ. ದಂಡ ವಿಧಿಸಲಾಗುತ್ತದೆ.

ಇದನ್ನೂ ಓದಿ: Lakshmi Hebbalkar: ವಿಶೇಷ ಶಾಲೆಗಳ ಶಿಕ್ಷಕರ ವೇತನ ಪರಿಷ್ಕರಣೆಗೆ ಅಗತ್ಯ ಕ್ರಮ: ಹೆಬ್ಬಾಳಕರ್ ಭರವಸೆ

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಬೇಕು. ಈ ನಿಟ್ಟಿನಲ್ಲಿ ವಿಧೇಯಕವು ಮಹತ್ವದ ಪಾತ್ರ ವಹಿಸಲಿದೆ. ಕನ್ನಡಿಗ ನೌಕರರ ಜೀವನ ಭದ್ರತೆಗೆ ಇದು ಸಹಾಯವಾಗಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ತಿಳಿಸಿದ್ದಾರೆ.

Continue Reading

ಕರ್ನಾಟಕ

Assembly Session: ಲೂಟಿಕೋರರ ಪಿತಾಮಹ ನೀನು: ಸದನದಲ್ಲಿ ಅಶ್ವತ್ಥ್ ನಾರಾಯಣ ವಿರುದ್ಧ ಗುಡುಗಿದ ಡಿಕೆಶಿ!

Assembly Session: ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ನಂತರ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಅವರ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

Assembly Session
Koo

ಬೆಂಗಳೂರು: ವಿಧಾನಮಂಡಲದ ಅಧಿವೇಶನದಲ್ಲಿ (Assembly Session) ಎರಡನೇ ದಿನವಾದ ಮಂಗಳವಾರವೂ ವಾಲ್ಮೀಕಿ ನಿಗಮದ ಹಗರಣವು (Valmiki Corporation Scam) ಸದ್ದು ಮಾಡಿದೆ. ಚರ್ಚೆಯ ವೇಳೆ ಸಿಎಂ ಸಿದ್ದರಾಮಯ್ಯ (CM Siddaramaiah) ಗೈರುಹಾಜರಿಯನ್ನು ಬಿಜೆಪಿ ಶಾಸಕ ಡಾ.ಸಿ.ಎನ್. ಅಶ್ವತ್ಥ್‌ ನಾರಾಯಣ್‌ (Ashwath narayan) ಆಕ್ಷೇಪಿಸಿದರು. ಈ ವೇಳೆ ʼಲೂಟಿಕೋರರ ಪಿತಾಮಹʼ ನೀನು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿರುವುದು ಕಂಡುಬಂದಿದೆ.

ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ನಂತರ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ಚರ್ಚೆ ಮೇಲಿನ ಪ್ರಸ್ತಾಪ ಮುಂದುವರಿಸಲು ಮುಂದಾದರು. ಈ ವೇಳೆ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಅವರು, ವಾಲ್ಮೀಕಿ ನಿಗಮದ ಹಗರಣದಲ್ಲಿ ಹಗಲು ದರೋಡೆ ಮಾಡಿರುವ ಮುಖ್ಯಮಂತ್ರಿಗಳು ಗೈರಾಗಿದ್ದಾರೆ. ಅವರು ಸದನಕ್ಕೆ ಹಾಜರಾಗಬೇಕು ಎಂದು ಪಟ್ಟು ಹಿಡಿದರು.

ಅಶೋಕ್ ಚರ್ಚೆ ಮಾಡುವಾಗ ಸಿಎಂ ಸಿದ್ದರಾಮಯ್ಯ ಗೈರಾದ ಹಿನ್ನೆಲೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ ಶಾಸಕ ಅಶ್ವತ್ಥ್‌ ನಾರಾಯಣ್, ನೇರವಾಗಿ ಇದು ಮುಖ್ಯಮಂತ್ರಿಗಳಿಗೆ ಸಂಬಂಧಿಸಿದ ವಿಚಾರ. ಹಣಕಾಸು ಸಚಿವರಾಗಿರೋ ಸಿಎಂ ಮೇಲೆ ಗಂಭೀರ ಆರೋಪ ಇದೆ. ಕೂಡಲೇ ಅವರನ್ನು ಕರೆಸಿ ಅಂತ ಆಗ್ರಹಿಸಿದರು. ಈ ವೇಳೆ ಸದನದಲ್ಲಿ ಎದ್ದು ನಿದ್ದು ಸಿಎಂ ಪರವಾಗಿ ಬ್ಯಾಟಿಂಗ್ ಮಾಡಿದ ಡಿಸಿಎಂ ಡಿಕೆಶಿ, ಸಿಎಂಗೆ ಗೌರವ ಕೊಡೋದನ್ನು ಕಲಿಯಿರಿ ಅಂತ ಆಕ್ರೋಶ ಹೊರಹಾಕಿದರು. ಈ ವೇಳೇ ಲೂಟಿಕೋರರ ಪಿತಾಮಹ ನೀನು ಅಂತ ಅಶ್ವತ್ಥ್‌ ನಾರಾಯಣ್ ಕಡೆ ಬೊಟ್ಟು ಮಾಡಿ ಕಿಡಿಕಾರಿದರು. ಈ ವೇಳೆ ಡಿಸಿಎಂ ವಿರುದ್ಧ ಮುಗಿಬಿದ್ದ ಬಿಜೆಪಿ ಶಾಸಕರು, ನೀವೇನು ಎಂಬುವುದು ಎಲ್ಲರಿಗೂ ಗೊತ್ತಿದೆ ಅಂತ ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ | Lakshmi Hebbalkar: ವಿಶೇಷ ಶಾಲೆಗಳ ಶಿಕ್ಷಕರ ವೇತನ ಪರಿಷ್ಕರಣೆಗೆ ಅಗತ್ಯ ಕ್ರಮ: ಹೆಬ್ಬಾಳಕರ್ ಭರವಸೆ

ಈ ವೇಳೆ ಮಾತನಾಡಿದ ಶಿವಕುಮಾರ್ ಅವರು, ಸಿದ್ದರಾಮಯ್ಯ ಅವರು ಈ ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದಾಗ ವಿಷಯದ ಚರ್ಚೆಗೆ ಪ್ರಸ್ತಾಪ ಮಾಡಿದಾಗೆಲ್ಲ ಬಿಜೆಪಿಯ ಮುಖ್ಯಮಂತ್ರಿಗಳು ಸದನದಲ್ಲಿ ಹಾಜರಿರುತ್ತಿದ್ದರೇ? ಅವರು ಗೈರಾಗಿರಲಿಲ್ಲವೇ? ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಶ್ವತ್ಥ್ ನಾರಾಯಣ ಅವರು ಮಾಡಬಾರದನ್ನು ಮಾಡಿರುವುದಕ್ಕೇ ಜನ ನಮ್ಮನ್ನು ಇಲ್ಲಿ ಕೂರಿಸಿ, ನಿಮ್ಮನ್ನು ಅಲ್ಲಿ ಕೂರಿಸಿ ತೀರ್ಪು ಕೊಟ್ಟಿದ್ದಾರೆ” ಎಂದು ಹರಿಹಾಯ್ದರು.

“ನನ್ನ ಹೆಸರು ಹೇಳಿ ಆಪಾದನೆ ಮಾಡಲಾಗಿದೆ, ಸಾಕ್ಷಿ ನೀಡಬೇಕು” ಎಂದು ಅಶ್ವತ್ಥ್ ನಾರಾಯಣ ಹೇಳಿದಾಗ “ಮಾಡಬಾರದ್ದು ಮಾಡಿರುವ ನಿಮ್ಮದನ್ನು ತೆಗೆಯುತ್ತೇವೆ, ಮಾತನಾಡುತ್ತೇವೆ ತಡೆಯಿರಿ” ಎಂದು ಗುಡುಗಿದರು.

“ನನ್ನ ವಿರುದ್ದ ಮಾಡಿದ ಆಪಾದನೆ ಹಿಟ್ ಆ್ಯಂಡ್ ರನ್” ಎಂದು ಅಶ್ವತ್ಥ್ ನಾರಾಯಣ ಗದ್ದಲ ಎಬ್ಬಿಸಿದಾಗ “ರಾಮನಗರದ ಕಸ ಗುಡಿಸುತ್ತೇನೆ ಎಂದು ಹೇಳಿದ ನಿಮಗೆ ವಿಧಾನಸಭೆ ಚುನಾವಣೆಯಲ್ಲಿ ಒಂದೇ ಒಂದು ಸೀಟು ಗೆಲ್ಲಲು ಆಗಲಿಲ್ಲ” ಎಂದು ಡಿಸಿಎಂ ಕುಟುಕಿದರು.

ಮುಂದುವರಿದು “ಇಷ್ಟು ಹೊತ್ತಿನ ತನಕ ಮುಖ್ಯಮಂತ್ರಿಗಳು ಕುಳಿತಿರಲಿಲ್ಲವೇ? ಸದನದಲ್ಲಿ ನಾವೆಲ್ಲಾ ಕುಳಿತಿಲ್ಲವೇ? ಮುಖ್ಯಮಂತ್ರಿಗಳ ಮೇಲೆ ಆರೋಪವಿದೆ ಎಂದು ಹೇಗೆ ಹೇಳುತ್ತಾರೆ ಇವರು?” ಎಂದು ಬಿಜೆಪಿ ಶಾಸಕರ ಮೇಲೆ ಡಿಸಿಎಂ ಮುಗಿಬಿದ್ದರು. ʼ ಈ ರೀತಿ ಯಾರ ಹೆಸರನ್ನು ಬೇಕಾದರೂ ನಾವು ಬಳಸಿಕೊಳ್ಳಬಹುದೇ” ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಹೇಳಿದಾಗ “ಇವರು (ಅಶ್ವತ್ಥ್ ನಾರಾಯಣ) ಮುಖ್ಯಮಂತ್ರಿಗಳ ಹೆಸರನ್ನು ಹೇಗೆ ಬಳಸಿಕೊಂಡರು? ಎಂದು ಕಟುವಾಗಿ ಮರುಪ್ರಶ್ನಿಸಿದರು.

ಶಿವಕುಮಾರ್ ಅವರ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಶಾಸಕರು ಗದ್ದಲ ಮಾಡಿದಾಗ ಕಲಾಪವನ್ನು ಮುಂದೂಡಲಾಯಿತು. “ಎಸ್ಐಟಿ ಎಂದರೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್ ಎಂದು ಶಾಸಕ ಸುರೇಶ್ ಕುಮಾರ್ ಹೇಳಿದ್ದಾರೆ, ಇದನ್ನು ಸಹ ಕಡತದಿಂದ ತೆಗೆದುಹಾಕಬೇಕು” ಎಂದು ಡಿಸಿಎಂ ಅವರು ಸ್ವೀಕರ್ ಗೆ ಮನವಿ ಮಾಡಿದರು.

ಇದನ್ನೂ ಓದಿ | D. S. Veeraiah: ಅರಸು ಟ್ರಕ್ ಟರ್ಮಿನಲ್ ಹಗರಣ;‌ ಡಿ.ಎಸ್‌.ವೀರಯ್ಯಗೆ ಜು.30ರವರೆಗೆ ನ್ಯಾಯಾಂಗ ಬಂಧನ

ಇದೇ ವೇಳೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದಾಗ “ ನಾನು ಸ್ಪೀಕರ್ ಅವರ ಬಳಿ ಮನವಿ ಮಾಡುತ್ತಿದ್ದೇನೆ. ನನಗೂ ಈ ಸದನದ ಕಾನೂನು ಗೊತ್ತಿದೆ” ಎಂದಾಗ, “ನೀವು ಸಿಬಿಐ ಬಗ್ಗೆ ಹೇಳಿದ್ದೀರಲ್ಲ” ಎಂದು ವಿಪಕ್ಷ ನಾಯಕ ಅಶೋಕ್ ಹೇಳಿದರು. “ಮೊದಲು ಹೇಳಿದವರು ನೀವು ಮತ್ತು ದೇವೇಗೌಡರು” ಎಂದು ಶಿವಕುಮಾರ್ ಅವರು ತಿರುಗೇಟು ಕೊಟ್ಟರು.

Continue Reading

ಕೊಪ್ಪಳ

Koppala News: ಕನಕಗಿರಿಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ

Koppala News: ಕನಕಗಿರಿ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವ-ಸಹಾಯ ಗುಂಪಿನ ಸದಸ್ಯರಿಗೆ ಹಮ್ಮಿಕೊಳ್ಳಲಾಗಿದ್ದ ಆರು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭ ನಡೆಯಿತು.

VISTARANEWS.COM


on

Entrepreneurship Development Training Concluding Ceremony at Kanakagiri
Koo

ಕನಕಗಿರಿ: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವ-ಸಹಾಯ ಗುಂಪಿನ ಸದಸ್ಯರಿಗೆ ಹಮ್ಮಿಕೊಳ್ಳಲಾಗಿದ್ದ ಆರು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭ (Koppala News) ನಡೆಯಿತು.

ಇದನ್ನೂ ಓದಿ: KSRTC Package Tour: ಸೋಮನಾಥಪುರ, ತಲಕಾಡು, ಮಧ್ಯರಂಗ, ಭರಚುಕ್ಕಿ, ಗಗನಚುಕ್ಕಿಗೆ ಕೆಎಸ್‌ಆರ್‌ಟಿಸಿ ಪ್ಯಾಕೇಜ್‌ ಟೂರ್‌; ದರವೆಷ್ಟು?

ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಬೆಂಗಳೂರು, ಸಂಜೀವಿನಿ-ಕೆ.ಎಸ್.ಆರ್.ಎಲ್.ಪಿ.ಎಸ್ ಬೆಂಗಳೂರು, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಕೊಪ್ಪಳ ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಜಶೇಖರ್‌ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.

ಇದನ್ನೂ ಓದಿ: Karnataka Rain : ಭಾರಿ ಮಳೆ ಎಫೆಕ್ಟ್‌-ಮಲಗಿದ್ದ‌ ವ್ಯಕ್ತಿ ಮೇಲೆ ಬಿದ್ದ ಗೋಡೆ; ಮರ ಬಿದ್ದು ಕಾರು ಜಖಂ, ಚಾಲಕ ಜಸ್ಟ್‌ ಮಿಸ್‌

ಈ ಸಂಧರ್ಭದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಭಾರಿ ಪ್ರಾಂಶುಪಾಲ ಮಾರೆಪ್ಪ ಎನ್‌., ತಾಲೂಕಿನ ವಲಯ ಮೇಲ್ವೀಚಾರಕಿ ರೇಣುಕಾ ಕೆ ದೇವರಮನಿ, ಸಿಡಾಕ್‌ ಸಂಸ್ಥೆಯ ತರಬೇತಿ ಸಂಯೋಜಕರಾದ ಅಕ್ಷತಾ ಮತ್ತು ಶೋಭಾ, ಸಂಜೀವಿನಿ ಯೋಜನೆಯ ಬಿಆರ್‌ಪಿ ಇಪಿ ಮತ್ತು ಉದ್ಯಮಶೀಲತಾ ತರಬೇತಿಗೆ ಹಾಜರಾದ ಸ್ವ ಸಹಾಯ ಗುಂಪಿನ ಮಹಿಳಾ ಸದಸ್ಯರು ಪಾಲ್ಗೊಂಡಿದ್ದರು.

Continue Reading
Advertisement
R Ashwin
ಪ್ರಮುಖ ಸುದ್ದಿ7 mins ago

R Ashwin : ಸುನೀಲ್ ನರೈನ್ ರೀತಿ ಆರಂಭಿಕರಾಗಿ 20 ಎಸೆತಕ್ಕೆ 45 ರನ್ ಬಾರಿಸಿದ ಆರ್.​ ಅಶ್ವಿನ್​; ಇಲ್ಲಿದೆ ವಿಡಿಯೊ

Children Mobile Addiction
ಆರೋಗ್ಯ11 mins ago

Children Mobile Addiction: ನಮ್ಮ ಮಕ್ಕಳು ಎಷ್ಟು ಹೊತ್ತು ಮೊಬೈಲ್‌ ನೋಡಬಹುದು?

Road Accident
ಕರ್ನಾಟಕ15 mins ago

Road Accident: ಕೊಡಗಿನ ಸುಂಟಿಕೊಪ್ಪ ಬಳಿ ಟಿಪ್ಪರ್-ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರ ದುರ್ಮರಣ

Assembly Session Job reservation for Kannadigas in private sectors Cabinet meeting approves bill
ಕರ್ನಾಟಕ22 mins ago

Assembly Session: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ; ಏನೆಲ್ಲ ಅರ್ಹತೆ ಇರಬೇಕು?

Paris Olympics 2024
ಪ್ರಮುಖ ಸುದ್ದಿ58 mins ago

Paris Olympics 2024 : ಟೋಕಿಯೊದಲ್ಲಿ ನಡೆದ 2020ರ ಒಲಿಂಪಿಕ್ಸ್​ನಲ್ಲಿ ಭಾರತ ಗೆದ್ದ ಪದಕಗಳ ಸಂಖ್ಯೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Dog Ethnicwear
ಫ್ಯಾಷನ್1 hour ago

Dog Ethnicwear: ನಾಯಿಗಳಿಗೂ ಬಂತು ಎಥ್ನಿಕ್‌ ವೇರ್ಸ್! ಎಷ್ಟು ಮುದ್ದಾಗಿ ಕಾಣಿಸುತ್ತಿವೆ!

SIM Cards
ಗ್ಯಾಜೆಟ್ಸ್1 hour ago

SIM Cards: ಮಿತಿ ಮೀರಿ ಮೊಬೈಲ್‌ ಸಿಮ್ ಹೊಂದಿದ್ದೀರಾ? ಕಾದಿದೆ ಭಾರಿ ದಂಡ, ಶಿಕ್ಷೆ!

Assembly Session
ಕರ್ನಾಟಕ1 hour ago

Assembly Session: ಲೂಟಿಕೋರರ ಪಿತಾಮಹ ನೀನು: ಸದನದಲ್ಲಿ ಅಶ್ವತ್ಥ್ ನಾರಾಯಣ ವಿರುದ್ಧ ಗುಡುಗಿದ ಡಿಕೆಶಿ!

Ananth Ambani Fashion
ಫ್ಯಾಷನ್1 hour ago

Ananth Ambani Fashion: ಅನಂತ್‌ ಅಂಬಾನಿ ಬಳಿ ಇದೆ ಡೈಮಂಡ್‌ ಬ್ರೂಚ್‌ಗಳ ಕಲೆಕ್ಷನ್‌! ಇವುಗಳ ಮೌಲ್ಯ ಎಷ್ಟಿರಬಹುದು?

Entrepreneurship Development Training Concluding Ceremony at Kanakagiri
ಕೊಪ್ಪಳ1 hour ago

Koppala News: ಕನಕಗಿರಿಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ7 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ9 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 day ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌