Anshuman Gaekwad : ಕ್ಯಾನ್ಸರ್ ಚಿಕಿತ್ಸೆಗಾಗಿ ಅಂಶುಮಾನ್ ಗಾಯಕ್ವಾಡ್​ಗೆ 1 ಕೋಟಿ ರೂ. ನೆರವು ನೀಡಿದ ಬಿಸಿಸಿಐ - Vistara News

ಪ್ರಮುಖ ಸುದ್ದಿ

Anshuman Gaekwad : ಕ್ಯಾನ್ಸರ್ ಚಿಕಿತ್ಸೆಗಾಗಿ ಅಂಶುಮಾನ್ ಗಾಯಕ್ವಾಡ್​ಗೆ 1 ಕೋಟಿ ರೂ. ನೆರವು ನೀಡಿದ ಬಿಸಿಸಿಐ

Anshuman Gaekwad : ಪರಿಸ್ಥಿತಿಯನ್ನು ಅವಲೋಕಿಸಿದ ಜಯ್​ ಶಾ ವೈಯಕ್ತಿಕವಾಗಿ ಗಾಯಕ್ವಾಡ್ ಅವರ ಕುಟುಂಬದ ಜತೆ ಮಾತನಾಡಿದ್ದಾರೆ. ನೆರವಿನ ಭರವಸೆ ನೀಡಿದ್ದಾರೆ. ಗಾಯಕ್ವಾಡ್ ಅವರ ಕ್ರಿಕೆಟ್ ಪ್ರಯಾಣವು ಗಮನಾರ್ಹ ಸಾಧನೆಗಳಲ್ಲಿ ಒಂದಾಗಿದೆ. ಈ ಬಗ್ಗೆ ಮಾಜಿ ಕ್ರಿಕೆಟಿಗ ದಿಲೀಪ್ ವೆಂಗ್​ಸರ್ಕಾರ್​​ ಈ ಹಿಂದೆ ಬಿಸಿಸಿಐ ಖಜಾಂಚಿ ಆಶಿಶ್ ಶೆಲಾರ್ ಅವರೊಂದಿಗೆ ಮಾತನಾಡಿದ್ದರು.

VISTARANEWS.COM


on

Anshuman Gaekwad
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಭಾರತ ಕ್ರಿಕೆಟ್​ ತಂಡ ಪರ ಆಡಿದ ಆಟಗಾರರೊಬ್ಬರ ಆರೋಗ್ಯಕ್ಕೆ ದೊಡ್ಡ ಮೊತ್ತವನ್ನು ಪಾವತಿಸಿದ್ದಾರೆ. ರಕ್ತದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಹಿರಿಯ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ (Anshuman Gaekwad) ಅವರಿಗೆ ಆರ್ಥಿಕ ನೆರವು ಕೊಡಲು ತಕ್ಷಣ ಒಂದು ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸೂಚನೆ ನೀಡಿದ್ದಾರೆ. ಕಳೆದ ಒಂದು ವರ್ಷದಿಂದ ತಮ್ಮ ಅನಾರೋಗ್ಯದ ವಿರುದ್ಧ ಹೋರಾಡುತ್ತಿರುವ 71 ವರ್ಷದ ಅವರಿಗೆ ಇದು ಭರವಸೆಯಾಗಿದೆ.

ಮಾಜಿ ಕ್ರಿಕೆಟಿಗ ಸಂದೀಪ್ ಪಾಟೀಲ್ ಅವರು ಮಿಡ್-ಡೇ ಪತ್ರಿಕೆಗೆ ಬರೆದ ತಮ್ಮ ಅಂಕಣದಲ್ಲಿ ಗಾಯಕ್ವಾಡ್ ಅವರನ್ನು ಲಂಡನ್​​ನ ಕಿಂಗ್ಸ್ ಕಾಲೇಜು ಆಸ್ಪತ್ರೆಯಲ್ಲಿ ಭೇಟಿಯಾಗಿದ್ದಾಗಿ ಬಹಿರಂಗಪಡಿಸಿದ್ದರು. ಈ ವೇಳೆ ಗಾಯಕ್ವಾಡ್ ಅವರ ಸ್ಥಿತಿ ಬೆಳಕಿಗೆ ಬಂದಿದೆ. ಈ ವಿಷಯ ದೊಡ್ಡ ಚರ್ಚೆಗೆ ಕಾರಣವಾಯಿತು. ದೇಶಕ್ಕಾಗಿ ಆಡಿ ಆಟಗಾರರ ಬಗ್ಗೆ ಆರೋಗ್ಯ ಬಿಕ್ಕಟ್ಟಿನ ಸಮಯದಲ್ಲಿ ಕ್ರಿಕೆಟ್ ಮಂಡಳಿಯ ಜವಾಬ್ದಾರಿ ತೆಗೆದುಕೊಂಡಿಲ್ಲ ಎಂಬ ವಿಷಯ ಚರ್ಚೆಗಳನ್ನು ಹುಟ್ಟುಹಾಕಿತು. ಯಾಕೆಂದರೆ ಭಾರತದ ಮಾಜಿ ಕ್ರಿಕೆಟಿಗ ಸಂದೀಪ್ ಪಾಟೀಲ್ ಕೂಡ ಗಾಯಕ್ವಾಡ್ ಅವರ ವೈದ್ಯಕೀಯ ನೆರವಿಗೆ ಧನಸಹಾಯ ನೀಡುವಂತೆ ಬಿಸಿಸಿಐಗೆ ಮನವಿ ಮಾಡಿದ್ದರು. ಆದರೆ ಅದಕ್ಕೆ ಸ್ಪಂದನೆ ಸಿಕ್ಕಿರಲಿಲ್ಲ.

1983 ರ ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಕೂಡ ಗಾಯಕ್ವಾಡ್ ಅವರ ಚಿಕಿತ್ಸೆಗೆ ಸಹಾಯ ಮಾಡಲು ತಮ್ಮ ಪಿಂಚಣಿ ದಾನ ಮಾಡಲು ನಿರ್ಧರಿಸಿರುವುದಾಗಿ ಹೇಳಿದ್ದರು. ಮಾಜಿ ಆಟಗಾರರಿಗೆ ಸಹಾಯ ಮಾಡಬೇಕು ಎಂದು ಅವರು ಒತ್ತಾಯಿಸಿದ್ದರು.

ಪರಿಸ್ಥಿತಿಯನ್ನು ಅವಲೋಕಿಸಿದ ಜಯ್​ ಶಾ ವೈಯಕ್ತಿಕವಾಗಿ ಗಾಯಕ್ವಾಡ್ ಅವರ ಕುಟುಂಬದ ಜತೆ ಮಾತನಾಡಿದ್ದಾರೆ. ನೆರವಿನ ಭರವಸೆ ನೀಡಿದ್ದಾರೆ. ಗಾಯಕ್ವಾಡ್ ಅವರ ಕ್ರಿಕೆಟ್ ಪ್ರಯಾಣವು ಗಮನಾರ್ಹ ಸಾಧನೆಗಳಲ್ಲಿ ಒಂದಾಗಿದೆ. ಈ ಬಗ್ಗೆ ಮಾಜಿ ಕ್ರಿಕೆಟಿಗ ದಿಲೀಪ್ ವೆಂಗ್​ಸರ್ಕಾರ್​​ ಈ ಹಿಂದೆ ಬಿಸಿಸಿಐ ಖಜಾಂಚಿ ಆಶಿಶ್ ಶೆಲಾರ್ ಅವರೊಂದಿಗೆ ಮಾತನಾಡಿದ್ದರು.

ಇದನ್ನೂ ಓದಿ: Legends World Cup 2024 : ಪಾಕಿಸ್ತಾನ ತಂಡವನ್ನು ಸೋಲಿಸಿ ಲೆಜೆಂಡ್ಸ್​ ವಿಶ್ವ ಕಪ್-2024 ಟ್ರೋಫಿ ಗೆದ್ದ ಭಾರತ

40 ಟೆಸ್ಟ್ ಪಂದ್ಯಗಳು ಮತ್ತು ವಿಶ್ವಕಪ್​​ನಲ್ಲಿ ಕಾಣಿಸಿಕೊಂಡಿರುವ ಗಾಯಕ್ವಾಡ್ 32.08 ಸರಾಸರಿಯಲ್ಲಿ 1,959 ರನ್ ಗಳಿಸಿದ್ದಾರೆ. 2000 ರಿಂದ 2001 ರವರೆಗೆ ಭಾರತೀಯ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರರಾಗಿ ಸೇವೆ ಸಲ್ಲಿಸಿದರು ಮತ್ತು 1999 ರ ವಿಶ್ವಕಪ್ ಸಮಯದಲ್ಲಿ ಕೀನ್ಯಾ ಕ್ರಿಕೆಟ್ ತಂಡಕ್ಕೆ ತರಬೇತುದಾರರಾಗಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Karnataka Assembly Live: ವಾಲ್ಮೀಕಿ ಹಗರಣ ಚರ್ಚೆಯ ನಡುವೆ ಗದ್ದಲ ಸೃಷ್ಟಿಸಿದ ರೇವಣ್ಣ ಪ್ರಕರಣ; ರೊಚ್ಚಿಗೆದ್ದ ರೇವಣ್ಣ

Karnataka Assembly Session: ವಾಲ್ಮೀಕಿ ನಿಗಮ ಚರ್ಚೆಯ ಸಂದರ್ಭದಲ್ಲಿ ಆರೋಪಿತರ ಜಾಮೀನು ವಿಷಯವನ್ನು ವಿಪಕ್ಷ ನಾಯಕ ಆರ್‌. ಅಶೋಕ್‌ ಅವರು ಉಲ್ಲೇಖಿಸಿದರು. ʼವಾಲ್ಮೀಕಿ ಹಗರಣದ ಪ್ರಮುಖ ಆರೋಪಿಗಳು ಇನ್ನು ಆರಾಮಾಗಿ ಓಡಾಡಿಕೊಂಡಿದ್ದಾರೆ. ಆದರೆ ರೇವಣ್ಣ ಅವರ ಪ್ರಕರಣದಲ್ಲಿ ಜಾಮೀನಿಗಾಗಿ ಅವರು ಎಷ್ಟೊಂದು ಒದ್ದಾಡಬೇಕಾಯಿತುʼ ಎಂದು ಹೇಳಿದರು.

VISTARANEWS.COM


on

Karnataka assembly live hd revanna
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ (Valmiki Corporation Scam) ಸಂಬಂಧಿಸಿ ವಿಧಾನಸಭೆಯಲ್ಲಿ (Karnataka Assembly Live) ನಡೆದಿರುವ ಚರ್ಚೆಯ ನಡುವೆ ಮಾಜಿ ಸಚಿವ ಎಚ್‌ಡಿ ರೇವಣ್ಣ (HD Revanna Case) ಪ್ರಕರಣ ಉಲ್ಲೇಖಗೊಂಡು ಕೆಲ ಕಾಲ ಗದ್ದಲ ಎಬ್ಬಿಸಿತು. ಆಡಳಿತ ಪಕ್ಷದ ಶಾಸಕರ ಮಾತಿನಿಂದ ರೊಚ್ಚಿಗೆದ್ದ ರೇವಣ್ಣ ಅವರು, ಪ್ರಕರಣ ದಾಖಲಿಸಿಕೊಂಡ ಡಿಜಿ ವಿರುದ್ಧ ಹಾಗೂ ಸರ್ಕಾರದ ವಿರುದ್ಧ ಕಿಡಿ ಕಾರಿದರು.

ವಾಲ್ಮೀಕಿ ನಿಗಮ ಚರ್ಚೆಯ ಸಂದರ್ಭದಲ್ಲಿ ಆರೋಪಿತರ ಜಾಮೀನು ವಿಷಯವನ್ನು ವಿಪಕ್ಷ ನಾಯಕ ಆರ್‌. ಅಶೋಕ್‌ ಅವರು ಉಲ್ಲೇಖಿಸಿದರು. ʼವಾಲ್ಮೀಕಿ ಹಗರಣದ ಪ್ರಮುಖ ಆರೋಪಿಗಳು ಇನ್ನು ಆರಾಮಾಗಿ ಓಡಾಡಿಕೊಂಡಿದ್ದಾರೆ. ಆದರೆ ರೇವಣ್ಣ ಅವರ ಪ್ರಕರಣದಲ್ಲಿ ಜಾಮೀನಿಗಾಗಿ ಅವರು ಎಷ್ಟೊಂದು ಒದ್ದಾಡಬೇಕಾಯಿತುʼ ಎಂದು ಹೇಳಿದರು.

ಆಗ ಮಧ್ಯಪ್ರವೇಶ ಮಾಡಿದ ಶಾಸಕ ರಿಜ್ವಾನ್, ʼರೇವಣ್ಣ ಹಾಗೂ ವಾಲ್ಮೀಕಿ ನಿಗಮದ ಪ್ರಕರಣ ತುಲನೆ ಮಾಡೋದು ಸರಿಯಲ್ಲ. ರೇವಣ್ಣ ಪ್ರಕರಣದಲ್ಲಿ ರಾಜ್ಯದ ಹೆಣ್ಣು ಮಕ್ಕಳ ಮಾನಹರಣವಾಗಿದೆ. ಹೆಣ್ಣು ಮಕ್ಕಳು ತಲೆ ತಗ್ಗಿಸುವಂತಾಗಿದೆ. ಹಣ ವಾಪಸ್‌ ಬರಬಹುದು, ಆದರೆ ಮಾನ ಮರಳಿ ಬರುವುದಿಲ್ಲʼ ಎಂದು ರಿಜ್ವಾನ್ ಟೀಕಿಸಿದರು.

ಈ ವೇಳೆ ಎದ್ದು ನಿಂತ ಶಾಸಕ ರೇವಣ್ಣ, ʼನನ್ನ ಹೆಸರು ಹೇಳಿದ್ದಾರೆ. ಆದ್ದರಿಂದ ನಾನು ಮಾತಾಡಬೇಕು. ನಾನು ತಪ್ಪು ಮಾಡಿದ್ರೆ ನನ್ನ ಗಲ್ಲಿಗೆ ಹಾಕಲಿ. ನನ್ನ ಮಗ ತಪ್ಪು ಮಾಡಿದ್ದರೆ ಅವನನ್ನು ಗಲ್ಲಿಗೆ ಹಾಕಲಿ. ಆದರೆ ನಾನು 40 ವರ್ಷಗಳಿಂದ ರಾಜಕಾರಣದಲ್ಲಿದ್ದೇನೆ. ಯಾವುದೋ ಹೆಣ್ಣುಮಗಳನ್ನು ಕರೆತಂದು ನನ್ನ ಮೇಲೆ ಕೇಸ್ ಹಾಕಿಸಿದ್ದಾರೆ. ಸ್ವತಃ ಡಿಜಿ ಮುಂದೆ ಕುಳಿತುಕೊಂಡು ಕೇಸ್ ಬರೆದುಕೊಳ್ಳುತ್ತಾನೆ. ಡಿಜಿ ಆಗಲು ಆತ ನಾಲಾಯಕ್‌ʼ ಎಂದು ಕಿಡಿ ಕಾರಿದರು. ಈ ಹಂತದಲ್ಲಿ ರೇವಣ್ಣ ಭಾವುಕರಾದರು.

ನಂತರ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್‌, ʼರೇವಣ್ಣ ಅಧಿಕಾರಿಗಳ ಮೇಲೆ ಆರೋಪ ಮಾಡಿದ್ದಾರೆ. ಅವರಿಗೆ ಅನ್ಯಾಯ ಆಗಿದ್ರೆ ನೋಟೀಸ್ ಕೊಟ್ಟು ಚರ್ಚೆ ಮಾಡಲಿʼ ಎಂದು ಹೇಳಿದರು. ಇದಕ್ಕೆ ರೇವಣ್ಣ ಸಮ್ಮತಿಸಿದರು.

ಡಿಸಿಎಂ- ಅಶ್ವಥ್‌ ನಾರಾಯಣ ಚಕಮಕಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕುರಿತು ನಡೆಯುತ್ತಿರುವ ಚರ್ಚೆಯ ವೇಳೆ ವಿಧಾನಸಭೆ ಗದ್ದಲದ ಗೂಡಾಯಿತು. ಸಿಎಂ ಗೈರುಹಾಜರಿಯನ್ನು ಬಿಜೆಪಿ ಶಾಸಕ ಅಶ್ವಥ್‌ ನಾರಾಯಣ್‌ ಆಕ್ಷೇಪಿಸಿದರು. ಈ ಸಂದರ್ಭದಲ್ಲಿ ಅವರು ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ನಡುವೆ ಮಾತಿನ ಚಕಮಕಿ ನಡೆದು ಗೊಂದಲ ಸೃಷ್ಟಿಯಾಯಿತು. ಸ್ಪೀಕರ್‌ ಯು.ಟಿ ಖಾದರ್‌ ಸದನವನ್ನು ಮುಂದೂಡಿದರು.

ವಾಲ್ಮೀಕಿ ನಿಗಮದ ಹಗರಣದ ಕುರಿತು ವಿಪಕ್ಷ ನಾಯಕ ಆರ್.‌ ಅಶೋಕ್‌ ಇಂದು ಚರ್ಚೆಯನ್ನು ಮುಂದುವರಿಸಿದರು. ಆದರೆ ಈ ಚರ್ಚೆಯ ವೇಳೆ ಸಿಎಂ ಸಿದ್ದರಾಮಯ್ಯ ಸದನದಲ್ಲಿ ಗೈರುಹಾಜರಾಗಿದ್ದರು. ಇದಕ್ಕೆ ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಆಕ್ಷೇಪ ವ್ಯಕ್ತಪಡಿಸಿದರು. ʼನೇರವಾಗಿ ಇದು ಮುಖ್ಯಮಂತ್ರಿಗಳಿಗೆ ಸಂಬಂಧಿಸಿದ ವಿಚಾರ. ಹಣಕಾಸು ಸಚಿವರಾಗಿರೋ ಸಿಎಂ ಅವರ ಮೇಲೆ ಇದರಲ್ಲಿ ನೇರವಾಗಿ ಗಂಭೀರ ಆರೋಪ ಇದೆʼ ಎಂದ ಅಶ್ವಥ್ ನಾರಾಯಣ್, ಕೂಡಲೇ ಅವರನ್ನು ಕರೆಸಿ ಎಂದು ಆಗ್ರಹಿಸಿದರು.

ಈ ವೇಳೆ ಸದನದಲ್ಲಿ ಎದ್ದು ನಿಂತ ಡಿಸಿಎಂ ಡಿಕೆ ಶಿವಕುಮಾರ್‌, ಸಿಎಂ ಪರವಾಗಿ ಬ್ಯಾಟಿಂಗ್ ಮಾಡಿದರು. ಸಚಿವ ಜಮೀರ್ ಅಹ್ಮದ್ ಖಾನ್, ಕೆಜೆ ಜಾರ್ಜ್ ಕೂಡ ಅವರಿಗೆ ಸಾಥ್‌ ನೀಡಿದರು. ಇದರಿಂದ ರೊಚ್ಚಿಗೆದ್ದ ಬಿಜೆಪಿ ಶಾಸಕರು ಡಿಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಎಲ್ಲರೂ ಎದ್ದು ನಿಂತು ʼನೀವೇನು ಎಲ್ಲರಿಗೂ ಗೊತ್ತಿದೆʼ ಎಂದು ಕಿಡಿಕಾರಿದರು. ಆಡಳಿತ, ವಿಪಕ್ಷ ಶಾಸಕರ ನಡುವೆ ವಾಗ್ವಾದ ಹೆಚ್ಚಿ ಗೊಂದಲ ಮೂಡಿದ ಕಾರಣ ವಿಧಾ‌ನಸಭೆ ಕಲಾಪವನ್ನು ಸ್ಪೀಕರ್ ಹತ್ತು ನಿಮಿಷ ಮುಂದೂಡಿದರು.

ಇದನ್ನೂ ಓದಿ: Karnataka Assembly Live: ಸದನದಲ್ಲಿ ಇಂದು ಕಿಡಿಯೆಬ್ಬಿಸಲಿರುವ ವಾಲ್ಮೀಕಿ ಹಗರಣ; ಉತ್ತರ ನೀಡಲು ಸಿಎಂ ಸಜ್ಜು; ಇಲ್ಲಿದೆ ಕ್ಷಣಕ್ಷಣದ ಲೈವ್‌

Continue Reading

ಕರ್ನಾಟಕ

Assembly Session 2024: ಮೈಸೂರು ಪೇಪರ್ ಮಿಲ್ಸ್‌ ಪುನರಾರಂಭಕ್ಕೆ ಸರ್ಕಾರ ಚಿಂತನೆ: ಸಚಿವ ಎಂ.ಬಿ. ಪಾಟೀಲ್

Assembly Session 2024: ಹಣಕಾಸಿನ ಸಮಸ್ಯೆಯಿಂದ ಮೈಸೂರು ಪೇಪರ್ ಮಿಲ್ಸ್‌ ಅನ್ನು 2015ರಲ್ಲಿ ಸ್ಥಗಿತ ಮಾಡಲಾಗಿತ್ತು. ಈ ಕಾರ್ಖಾನೆಯ ಪುನರಾರಂಭಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

VISTARANEWS.COM


on

Assembly Session 2024
Koo

ಬೆಂಗಳೂರು: ಹಣಕಾಸಿನ ಸಮಸ್ಯೆಯಿಂದ 2015ರಲ್ಲಿ ಸ್ಥಗಿತ ಮಾಡಲಾಗಿದ್ದ ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆ (ಎಂಪಿಎಂ) ಪುನರಾರಂಭಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಖಾಸಗಿ ಸಹಭಾಗಿತ್ವದಲ್ಲಿ ಮೈಸೂರು ಪೇಪರ್ ಮಿಲ್ಸ್‌ (Assembly Session 2024) ಪುನಾರಂಭಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಮಂಗಳವಾರ ಕಾಂಗ್ರೆಸ್ ಸದಸ್ಯೆ ಬಿಲ್ಕಿಸ್ ಬಾನು ಅವರು ಕೇಳಿದ ಪ್ರಶ್ನೆಗೆ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಉತ್ತರ ನೀಡಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನಡೆದ ಅಧಿವೇಶನ ಸಮಯದಲ್ಲೂ ಮೈಸೂರು ಕಾಗದ ಕಾರ್ಖಾನೆ ಪುನರಾರಂಭದ ಬಗ್ಗೆ ಸಚಿವರು ಮಾತನಾಡಿದ್ದರು. ಹಣಕಾಸಿನ ಸಮಸ್ಯೆಯಿಂದ ಮೈಸೂರು ಪೇಪರ್ ಮಿಲ್ಸ್‌ ಅನ್ನು 2015ರಲ್ಲಿ ಸ್ಥಗಿತ ಮಾಡಲಾಗಿತ್ತು. ಜೂನ್ 2023ರ ಅಂತ್ಯಕ್ಕೆ 1,482 ಕೋಟಿ ಸಂಚಿತ ನಷ್ಟ ಆಗಿತ್ತು. ಖಾಸಗಿ ಅವರು ಕಂಪನಿ ಅವರಿಗೂ 3 ಬಾರಿ ಆಹ್ವಾನ ಮಾಡಿದ್ದೇವೆ. ಆದರೂ ಯಾರೂ ಕಾರ್ಖಾನೆ ಪ್ರಾರಂಭಕ್ಕೆ ಮುಂದೆ ಬರಲಿಲ್ಲ ಎಂದು ಮಾಹಿತಿ ನೀಡಿದ್ದರು, ಇದೀಗ ಮತ್ತೊಮ್ಮೆ ಮೈಸೂರು ಪೇಪರ್ ಮಿಲ್ಸ್‌ ಪುನರಾರಂಭ ಮಾಡುವುದಾಗಿ ಕಲಾಪದಲ್ಲಿ ತಿಳಿಸಿದ್ದಾರೆ.

ಕಾಗದ ಕಾರ್ಖಾನೆಗೆ ನೀಲಗಿರಿ ಅವಶ್ಯಕತೆ ಇದೆ. ಆದರೆ ನಮ್ಮಲ್ಲಿ ನೀಲಗಿರಿ ಬೆಳೆಯಲು ನಿಷೇಧ ಇದೆ. ಹೀಗಾಗಿ ಖಾಸಗಿ ಅವರು ಮುಂದೆ ಬರುತ್ತಿಲ್ಲ. ನಾವು ಕೂಡ ಮೈಸೂರು ಕಾಗದ ಕಾರ್ಖಾನೆ ಪ್ರಾರಂಭ ಮಾಡಲು ಉತ್ಸುಕರಾಗಿದ್ದೇವೆ. ಅರಣ್ಯ ಇಲಾಖೆಯ ತಜ್ಞರ ಸಮಿತಿಯು ನೀಲಗಿರಿ ಬೆಳೆಯಲು ಕಾರ್ಗಾನೆಗೆ ವಿನಾಯಿತಿ ನೀಡುವ ಸಂಬಂಧ ಪರಿಶೀಲಿಸಿ ವರದಿ ನೀಡಬೇಕಿದೆ. ಕಂಪನಿಯ ಸಾಲ, ಬಾಕಿ ಕುರಿತು ಆರ್ಥಿಕ ಇಲಾಖೆ ಜೊತೆ ಸಮಾಲೋಚನೆ ಮಾಡಲಾಗುತ್ತಿದೆ. ಇವೆರಡೂ ವಿಷಯಗಳ ಬಗ್ಗೆ ನಿರ್ಧಾರ ಆದ ಮೇಲೆ ಕಾರ್ಖಾನೆ ಪ್ರಾರಂಭದ ಬಗ್ಗೆ ಕ್ರಮವಹಿಸುತ್ತೇವೆ ಎಂದು ಈ ಹಿಂದೆ ಸಚಿವರು ಭರವಸೆ ನೀಡಿದ್ದರು.

ಸರ್ಕಾರದಿಂದ ಯಾವುದೇ ಬೃಹತ್ ಕೈಗಾರಿಕೆ ಪ್ರಾರಂಭಿಸುವುದಿಲ್ಲ

ರಾಜ್ಯದಲ್ಲಿ ಹೊಸ ಕೈಗಾರಿಕೆ, ಉದ್ಯೋಗ ಸೃಷ್ಟಿ ಕುರಿತು ಪ್ರಕಾಶ್ ರಾಥೋಡ್ ಪ್ರಶ್ನೆಗೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಉತ್ತರಿಸಿ, ಸರ್ಕಾರದಿಂದ ಯಾವುದೇ ಬೃಹತ್ ಕೈಗಾರಿಕೆ ಪ್ರಾರಂಭಿಸುವುದಿಲ್ಲ. ಕಳೆದ ಸಾಲಿನಲ್ಲಿ 591 ಕೋಟಿ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಗಳಿಂದ 1,56,989 ಉದ್ಯೋಗ ಸೃಷ್ಟಿಯಾಗಲಿದೆ. ಈ ಯೋಜನೆಗಳ ಅನುಷ್ಠಾನಕ್ಕೆ 3-4 ವರ್ಷ ಬೇಕಾಗುತ್ತದೆ ಎಂದು ತಿಳಿಸಿದರು.

ಉತ್ತರ ಕರ್ನಾಟಕಕ್ಕೆ ಯಾವುದೇ ಕೈಗಾರಿಕೆಗಳನ್ನ ತರುತ್ತಿಲ್ಲ ಎಂಬ ರಾಥೋಡ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಹಲವರು ಹೇಳುತ್ತಿದ್ದಾರೆ. ಅದರ ಬಗ್ಗೆ ಚರ್ಚೆ ಮಾಡಬೇಕು, ಅದು ಸುಲಭ ಇಲ್ಲ. ಕೇಂದ್ರ ಸರ್ಕಾರ ಏನಾದರೂ ಸಹಕಾರ ನೀಡಿದರೆ ಕೈಗಾರಿಕೆಗಳು ತರಬಹುದು. ಸಿ.ಟಿ. ರವಿಯವರು ಸಹಕಾರ ಕೊಟ್ಟರೆ ಮಾಡಬಹುದು. ಕುಮಾರ ಸ್ವಾಮಿಯವರು ಕೇಂದ್ರ ಮಂತ್ರಿಯಾಗಿದ್ದಾರೆ. ಅವರಿಗೆ ಮನವಿ ಮಾಡಿದ್ದೇವೆ ಎಂದರು.

ಇದನ್ನೂ ಓದಿ | Karnataka Assembly Live: ಡಿಸಿಎಂ ಡಿಕೆ ಶಿವಕುಮಾರ್-‌ ಅಶ್ವಥ್‌ ನಾರಾಯಣ್‌ ವಾಗ್ಯುದ್ಧ; ಗದ್ದಲ

ತುಮಕೂರು- ಚಿತ್ರದುರ್ಗ ನಡುವೆ ಹೊಸ ಏರ್‌ಪೋರ್ಟ್ ಕುರಿತು ಬಿಜೆಪಿಯ ನವೀನ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಬಗ್ಗೆ ಯಾವುದೇ ಪ್ರಸ್ತಾವನೆ ರಾಜ್ಯ ಸರ್ಕಾರದ ಮುಂದಿಲ್ಲ ಎಂದು ಹೇಳಿದರು.

Continue Reading

ವಿದೇಶ

Donald Trump: ಬೆದರಿಕೆಗೆ ಬಗ್ಗದ ಡೊನಾಲ್ಡ್‌ ಟ್ರಂಪ್;‌ ಕಿವಿಗೆ ಬ್ಯಾಂಡೇಜ್‌ ಕಟ್ಟಿಕೊಂಡು ಜನರೆದುರು ಪ್ರತ್ಯಕ್ಷ!

Donald Trump: ಡೊನಾಲ್ಡ್‌ ಟ್ರಂಪ್‌ ಅವರು ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಪೆನ್ಸಿಲ್ವೇನಿಯಾದ ಬಟ್ಲರ್ನ್‌ನಲ್ಲಿ ಜುಲೈ 13ರ ಸಂಜೆ ಆಯೋಜಿಸಿದ್ದ ರ‍್ಯಾಲಿಯ ವೇಳೆ ನಡೆದ ಗುಂಡಿನ ದಾಳಿಯಿಂದ ಪಾರಾದ ಬಳಿಕ ಡೊನಾಲ್ಡ್ ಟ್ರಂಪ್ ಅವರು ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಅವರು ಕಿವಿಗೆ ಬ್ಯಾಂಡೇಜ್‌ ಕಟ್ಟಿಕೊಂಡು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ಮೂಲಕ ಬೆದರಿಕೆಗೆ ಜಗ್ಗುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ.

VISTARANEWS.COM


on

Donald Trump
Koo

ವಾಷಿಂಗ್ಟನ್:‌ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ (US Presidential Election 2024) ಕೆಲವೇ ತಿಂಗಳು ಬಾಕಿ ಉಳಿದಿವೆ. ರಿಪಬ್ಲಿಕನ್‌ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರು ಕಣಕ್ಕಿಳಿದಿದ್ದಾರೆ. ಇನ್ನು ಜುಲೈ 23ರಂದು ಡೊನಾಲ್ಡ್‌ ಟ್ರಂಪ್‌ ಅವರ ಮೇಲೆ ಗುಂಡಿನ ದಾಳಿ ಮೂಲಕ ಹತ್ಯೆಗೆ ಯತ್ನಿಸಿದ ಬಳಿಕ ಮಾಜಿ ಅಧ್ಯಕ್ಷರು ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಗುಂಡು ತಗುಲಿದ ಕಿವಿಗೆ ಬ್ಯಾಂಡೇಜ್‌ ಕಟ್ಟಿಕೊಂಡಿರುವ ಡೊನಾಲ್ಡ್‌ ಟ್ರಂಪ್‌, ಸಾರ್ವಜನಿಕವಾಗಿ ಪ್ರತ್ಯಕ್ಷರಾಗಿದ್ದಾರೆ.

ಜುಲೈ 15ರಂದು ಪಿಸರ್ವ್‌ ಫೋರಂ ಮಿಲ್ವೌಕಿಯಲ್ಲಿನಡೆದ ರಿಪಬ್ಲಿಕನ್‌ ನ್ಯಾಷನಲ್‌ ಕನ್ವೆನ್ಶನ್‌ನಲ್ಲಿ ಡೊನಾಲ್ಡ್‌ ಟ್ರಂಪ್‌ ಅವರು ಕಾಣಿಸಿಕೊಂಡಿದ್ದು, ಸಾವಿರಾರು ಜನ ಟ್ರಂಪ್‌ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಸಮಾವೇಶದಲ್ಲಿ ನೆರೆದಿದ್ದ ಜನರನ್ನು ಕಂಡು, ಅವರು ಕೂಗುತ್ತಿದ್ದ ಘೋಷಣೆ ಕೇಳಿ ಡೊನಾಲ್ಡ್‌ ಟ್ರಂಪ್‌ ಅವರು ಭಾವುಕರಾಗಿದ್ದಾರೆ. ಬೆಂಬಲ ನೀಡಿದ ಪ್ರತಿಯೊಬ್ಬರಿಗೂ ಟ್ರಂಪ್‌ ಅವರು ಧನ್ಯವಾದ ತಿಳಿಸಿದ್ದಾರೆ. ಇದರೊಂದಿಗೆ, ಗುಂಡಿನ ದಾಳಿ ಬಳಿಕ ಡೊನಾಲ್ಡ್‌ ಟ್ರಂಪ್‌ ಅವರ ಮೇಲೆ ಅನುಕಂಪ ಸೃಷ್ಟಿಯಾಗಿದೆ ಎಂದು ಹೇಳಲಾಗುತ್ತಿದೆ.

ಅಮೆರಿಕದ ಮಾಧ್ಯಮ ವರದಿಗಳು ಶೂಟರ್‌ನನ್ನು 20 ವರ್ಷದ ಥಾಮಸ್ ಮ್ಯಾಥ್ಯೂ ಕ್ರೂಕ್ಸ್ ಎಂದು ಗುರುತಿಸಿವೆ. ನ್ಯೂಯಾರ್ಕ್ ಪೋಸ್ಟ್ ಪ್ರಕಾರ, ಪೆನ್ಸಿಲ್ವೇನಿಯಾದ ಬೆಥೆಲ್ ಪಾರ್ಕ್‌ನಿಂದ ಕ್ರೂಕ್ಸ್, ಬಟ್ಲರ್‌ನಲ್ಲಿ ಹೊರಾಂಗಣ ರ‍್ಯಾಲಿಯಲ್ಲಿ ಟ್ರಂಪ್ ಮೇಲೆ ಗುಂಡು ಹಾರಿಸಿದ್ದಾನೆ. ಅದರಲ್ಲಿ ಒಂದು ಬುಲೆಟ್ ಟ್ರಂಪ್ ಕಿವಿಗೆ ತಾಗಿತು. ಬಟ್ಲರ್ ಫಾರ್ಮ್ ಶೋ ಮೈದಾನದಲ್ಲಿ ವೇದಿಕೆಯಿಂದ 130 ಗಜಗಳಷ್ಟು ದೂರದಲ್ಲಿರುವ ಉತ್ಪಾದನಾ ಘಟಕದ ಚಾವಣಿಯ ಮೇಲೆ ಕ್ರೂಕ್ಸ್ ಗನ್‌ ಸಮೇತ ಇದ್ದ ಎನ್ನಲಾಗಿದೆ. ಇದಾದ ಕೆಲವೇ ಕ್ಷಣಗಳಲ್ಲಿ ಅಮೆರಿಕದ ಭದ್ರತಾ ಸಿಬ್ಬಂದಿಯು ಥಾಮಸ್ ಮ್ಯಾಥ್ಯೂ ಕ್ರೂಕ್ಸ್‌ನನ್ನು ಹೊಡೆದುರುಳಿಸಿದರು.

ಡೊನಾಲ್ಡ್‌ ಟ್ರಂಪ್‌ ಅವರು ಗುಂಡಿನ ದಾಳಿ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದರು. ಟ್ರಂಪ್‌ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಘಟನೆ ಬಗ್ಗೆ ಪೋಸ್ಟ್‌ವೊಂದನ್ನು ಮಾಡಿದ್ದು, ನಾನು ಗುಸುಗುಸು ಶಬ್ದ, ಗುಂಡೇಟಿನ ಶಬ್ದ ಕೇಳಿದಾಗ ಏನೋ ತಪ್ಪಾಗಿದೆ ಎಂದು ನನಗೆ ತಕ್ಷಣ ತಿಳಿದಿತ್ತು ಮತ್ತು ಗುಂಡು ಚರ್ಮವನ್ನು ಸೀಳುತ್ತಿರುವುದನ್ನು ತಕ್ಷಣವೇ ಅನುಭವಿಸಿದೆ, ನಮ್ಮ ದೇಶದಲ್ಲಿ ಇಂತಹ ಕೃತ್ಯ ನಡೆಯುವುದು ನಂಬಲಸಾಧ್ಯ ಎಂದು ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದರು.

ಇದನ್ನೂ ಓದಿ: Trump Assassination Bid: ಟ್ರಂಪ್‌ ಮೇಲೆ ಗುಂಡಿನ ದಾಳಿ; ಶೂಟರ್‌ ಫೋಟೋ ರಿಲೀಸ್‌- ಆತನ ಸ್ನೇಹಿತರು ಹೇಳಿದ್ದೇನು?

Continue Reading

ಪ್ರಮುಖ ಸುದ್ದಿ

Karnataka Assembly Live: ಡಿಸಿಎಂ ಡಿಕೆ ಶಿವಕುಮಾರ್-‌ ಅಶ್ವಥ್‌ ನಾರಾಯಣ್‌ ವಾಗ್ಯುದ್ಧ; ಗದ್ದಲ

Karnataka Assembly Live: ವಾಲ್ಮೀಕಿ ನಿಗಮದ ಹಗರಣದ ಕುರಿತು ವಿಪಕ್ಷ ನಾಯಕ ಆರ್.‌ ಅಶೋಕ್‌ ಇಂದು ಚರ್ಚೆಯನ್ನು ಮುಂದುವರಿಸಿದರು. ಆದರೆ ಈ ಚರ್ಚೆಯ ವೇಳೆ ಸಿಎಂ ಸಿದ್ದರಾಮಯ್ಯ ಸದನದಲ್ಲಿ ಗೈರುಹಾಜರಾಗಿದ್ದರು. ಇದಕ್ಕೆ ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಆಕ್ಷೇಪ ವ್ಯಕ್ತಪಡಿಸಿದರು.

VISTARANEWS.COM


on

Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ (Valmiki Corporation Scam) ಕುರಿತು ನಡೆಯುತ್ತಿರುವ ಚರ್ಚೆಯ ವೇಳೆ ವಿಧಾನಸಭೆ ಕಲಾಪ (Karnataka Assembly Live) ಗದ್ದಲದ ಗೂಡಾಯಿತು. ಸಿಎಂ ಸಿದ್ದರಾಮಯ್ಯ (CM Siddaramaiah) ಗೈರುಹಾಜರಿಯನ್ನು ಬಿಜೆಪಿ ಶಾಸಕ ಅಶ್ವಥ್‌ ನಾರಾಯಣ್‌ (Ashwath narayan) ಆಕ್ಷೇಪಿಸಿದರು. ಈ ಸಂದರ್ಭದಲ್ಲಿ ಅವರು ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ನಡುವೆ ಮಾತಿನ ಚಕಮಕಿ ನಡೆದು ಗೊಂದಲ ಸೃಷ್ಟಿಯಾಯಿತು. ಸ್ಪೀಕರ್‌ ಯು.ಟಿ ಖಾದರ್‌ (Speaker UT Khader) ಸದನವನ್ನು ಮುಂದೂಡಿದರು.

ವಾಲ್ಮೀಕಿ ನಿಗಮದ ಹಗರಣದ ಕುರಿತು ವಿಪಕ್ಷ ನಾಯಕ ಆರ್.‌ ಅಶೋಕ್‌ ಇಂದು ಚರ್ಚೆಯನ್ನು ಮುಂದುವರಿಸಿದರು. ಆದರೆ ಈ ಚರ್ಚೆಯ ವೇಳೆ ಸಿಎಂ ಸಿದ್ದರಾಮಯ್ಯ ಸದನದಲ್ಲಿ ಗೈರುಹಾಜರಾಗಿದ್ದರು. ಇದಕ್ಕೆ ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಆಕ್ಷೇಪ ವ್ಯಕ್ತಪಡಿಸಿದರು. ʼನೇರವಾಗಿ ಇದು ಮುಖ್ಯಮಂತ್ರಿಗಳಿಗೆ ಸಂಬಂಧಿಸಿದ ವಿಚಾರʼ ಎಂದ ಅಶ್ವಥ್ ನಾರಾಯಣ್, ಕೂಡಲೇ ಅವರನ್ನು ಕರೆಸಿ ಎಂದು ಆಗ್ರಹಿಸಿದರು.

ಈ ವೇಳೆ ಸದನದಲ್ಲಿ ಎದ್ದು ನಿಂತ ಡಿಸಿಎಂ ಡಿಕೆ ಶಿವಕುಮಾರ್‌, ಸಿಎಂ ಪರವಾಗಿ ಬ್ಯಾಟಿಂಗ್ ಮಾಡಿದರು. ಸಚಿವ ಜಮೀರ್ ಅಹ್ಮದ್ ಖಾನ್, ಕೆಜೆ ಜಾರ್ಜ್ ಕೂಡ ಅವರಿಗೆ ಸಾಥ್‌ ನೀಡಿದರು. ʼಸಿಎಂಗೆ ಗೌರವ ಕೊಡೋದನ್ನು ಕಲಿಯಿರಿʼ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್‌ ಹಾಗೂ ಅಶ್ವಥ್‌ ನಾರಾಯಣ್‌ ನಡುವೆ ಮಾತಿಕ ಚಕಮಕಿ ನಡೆಯಿತು. ರೊಚ್ಚಿಗೆದ್ದ ಬಿಜೆಪಿ ಶಾಸಕರು ಡಿಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಆಡಳಿತ, ವಿಪಕ್ಷ ಶಾಸಕರ ನಡುವೆ ವಾಗ್ವಾದ ಹೆಚ್ಚಿ ಗೊಂದಲ ಮೂಡಿದ ಕಾರಣ ವಿಧಾ‌ನಸಭೆ ಕಲಾಪವನ್ನು ಸ್ಪೀಕರ್ ಹತ್ತು ನಿಮಿಷ ಮುಂದೂಡಿದರು.

ದದ್ದಲ್‌ ಜೊತೆಗೆ ಸ್ಪೀಕರ್‌ ಸಭೆ

ವಿಧಾನಸಭೆಯ ಸ್ಪೀಕರ್ ಕಚೇರಿಯಲ್ಲಿ ಇಂದು ಶಾಸಕ, ವಾಲ್ಮೀಕಿ ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್‌ ಅವರು ಸಿಎಂ ಸಿದ್ದರಾಮಯ್ಯ, ಸಭಾಧ್ಯಕ್ಷ ಯುಟಿ ಖಾದರ್‌‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಸಿಎಂ‌ ಕಾನೂನು ಸಲಹೆಗಾರ ಪೊನ್ನಣ್ಣ ಕೂಡ ಜೊತೆಗಿದ್ದರು. ಇದಕ್ಕೂ ಮುನ್ನ ದದ್ದಲ್‌, ಗೃಹ ಸಚಿವ ಪರಮೇಶ್ವರ್‌ ಜೊತೆಗೆ ಮಾತುಕತೆ ನಡೆಸಿದರು. ಇಂದು ಮುಂಜಾನೆ ದದ್ದಲ್‌ ಅವರಿಗೆ ಇಡಿ ವಿಚಾರಣೆಗೆ ಹಾಜರಾಗಲು ನೋಟೀಸ್‌ ನೀಡಿದೆ ಎನ್ನಲಾಗಿದ್ದು, ತನಗೆ ಯಾವುದೇ ನೋಟೀಸ್‌ ಬಂದಿಲ್ಲ ಎಂದು ದದ್ದಲ್‌ ಹೇಳಿದ್ದಾರೆ. ಇದೀಗ ಸ್ಪೀಕರ್, ಸಿಎಂ ಜೊತೆಗಿನ ಅವರ ಮಾತುಕತೆ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: Karnataka Assembly Live: ವಿಧಾನಸಭೆ ಕಲಾಪಕ್ಕೆ ಹಾಜರಾಗಿ ಸೇಫ್‌ ಆದ ಬಸವನಗೌಡ ದದ್ದಲ್‌! ವಿಧಾನ ಮಂಡಲ ಕಲಾಪ ಲೈವ್‌ ಇಲ್ಲಿದೆ

Continue Reading
Advertisement
Karnataka assembly live hd revanna
ಪ್ರಮುಖ ಸುದ್ದಿ3 mins ago

Karnataka Assembly Live: ವಾಲ್ಮೀಕಿ ಹಗರಣ ಚರ್ಚೆಯ ನಡುವೆ ಗದ್ದಲ ಸೃಷ್ಟಿಸಿದ ರೇವಣ್ಣ ಪ್ರಕರಣ; ರೊಚ್ಚಿಗೆದ್ದ ರೇವಣ್ಣ

Assembly Session 2024
ಕರ್ನಾಟಕ10 mins ago

Assembly Session 2024: ಮೈಸೂರು ಪೇಪರ್ ಮಿಲ್ಸ್‌ ಪುನರಾರಂಭಕ್ಕೆ ಸರ್ಕಾರ ಚಿಂತನೆ: ಸಚಿವ ಎಂ.ಬಿ. ಪಾಟೀಲ್

Donald Trump
ವಿದೇಶ13 mins ago

Donald Trump: ಬೆದರಿಕೆಗೆ ಬಗ್ಗದ ಡೊನಾಲ್ಡ್‌ ಟ್ರಂಪ್;‌ ಕಿವಿಗೆ ಬ್ಯಾಂಡೇಜ್‌ ಕಟ್ಟಿಕೊಂಡು ಜನರೆದುರು ಪ್ರತ್ಯಕ್ಷ!

Karnataka Rain
ಮಳೆ30 mins ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

Actor Mithra
ಸ್ಯಾಂಡಲ್ ವುಡ್31 mins ago

Actor Mithra: ಖಡಕ್‌ ವಿಲನ್‌ ಆಗಿ ʼಕರಾವಳಿʼಯಲ್ಲಿ ಅಬ್ಬರಿಸಲಿದ್ದಾರೆ ಕಾಮಿಡಿ ಸ್ಟಾರ್ ಮಿತ್ರ; ಕಾಲಿವುಡ್‌ಗೂ ಎಂಟ್ರಿ

Rohit Sharma
ಕ್ರೀಡೆ46 mins ago

Rohit Sharma: ‘ಎಲಾ ಉನ್ನಾರು?’; ತೆಲುಗಿನಲ್ಲಿ ಮಾತನಾಡಿದ ರೋಹಿತ್ ಶರ್ಮ; ವಿಡಿಯೊ ವೈರಲ್​

karnataka rain
ಮಳೆ1 hour ago

Karnataka Rain : ಚಿಕ್ಕಮಗಳೂರು, ಹಾಸನದಲ್ಲಿ ಭಾರಿ ಮಳೆಗೆ ಮನೆಗಳು ನೆಲಸಮ

ಪ್ರಮುಖ ಸುದ್ದಿ1 hour ago

Karnataka Assembly Live: ಡಿಸಿಎಂ ಡಿಕೆ ಶಿವಕುಮಾರ್-‌ ಅಶ್ವಥ್‌ ನಾರಾಯಣ್‌ ವಾಗ್ಯುದ್ಧ; ಗದ್ದಲ

Alcohol Delivery
ದೇಶ1 hour ago

Alcohol Delivery: ಎಣ್ಣೆ ಪ್ರಿಯರಿಗೆ ಗುಡ್‌ ನ್ಯೂಸ್;‌ ಇನ್ನು ಸ್ವಿಗ್ಗಿಯಲ್ಲಿ ಮನೆ ಬಾಗಿಲಿಗೆ ಬರಲಿದೆ ಆಲ್ಕೋಹಾಲ್!

Doda Encounter
ದೇಶ1 hour ago

Doda Encounter: ಜಮ್ಮು- ಕಾಶ್ಮೀರದಲ್ಲಿ ಉಗ್ರರ ದಾಳಿ; ಬಿಜೆಪಿಯ ತಪ್ಪು ನೀತಿಯೇ ಕಾರಣ ಎಂದ ರಾಹುಲ್‌ ಗಾಂಧಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ30 mins ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ20 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌