Terrorist Attack: ಕಾಶ್ಮೀರದಲ್ಲಿ ಮೂವರು ಭಯೋತ್ಪಾದಕರನ್ನು ಗುಂಡಿಕ್ಕಿ ಕೊಂದ ಸೇನೆ - Vistara News

ಪ್ರಮುಖ ಸುದ್ದಿ

Terrorist Attack: ಕಾಶ್ಮೀರದಲ್ಲಿ ಮೂವರು ಭಯೋತ್ಪಾದಕರನ್ನು ಗುಂಡಿಕ್ಕಿ ಕೊಂದ ಸೇನೆ

Terrorist Attack: ಜುಲೈ 6 ಮತ್ತು 7 ರಂದು ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಗುಂಡಿನ ಚಕಮಕಿಗಳಲ್ಲಿ ಭದ್ರತಾ ಪಡೆಗಳು ಆರು ಭಯೋತ್ಪಾದಕರನ್ನು ಹತ್ಯೆ ಮಾಡಿದ ಕೇವಲ ಒಂದು ವಾರದ ನಂತರ ಈ ಕಾರ್ಯಾಚರಣೆಯು ನಡೆದಿದೆ.

VISTARANEWS.COM


on

Terrorist Attack
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶ್ರೀನಗರ: ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ (LOC) ಭದ್ರತಾ ಪಡೆಗಳು (Security Forces) ಉಗ್ರರ ಒಳನುಸುಳುವಿಕೆ (Infiltration) ಪ್ರಯತ್ನವನ್ನು (Terrorist Attack) ವಿಫಲಗೊಳಿಸಿದ್ದು, ಮೂವರು ಭಯೋತ್ಪಾದಕರನ್ನು ಕೊಂದುಹಾಕಿದ್ದಾರೆ (Terrorists killed) ಎಂದು ಭಾರತೀಯ ಸೇನೆ (Indian Army) ಭಾನುವಾರ ತಿಳಿಸಿದೆ.

ಎಲ್‌ಒಸಿಯಲ್ಲಿ ಕುಪ್ವಾರದ ಕೆರಾನ್ ಸೆಕ್ಟರ್‌ನಲ್ಲಿ ಒಳನುಸುಳುವಿಕೆಯ ಪ್ರಯತ್ನವನ್ನು ವಿಫಲಗೊಳಿಸಲಾಯಿತು. “ಕೆರಾನ್ ಸೆಕ್ಟರ್‌ನಲ್ಲಿನ ಎಲ್‌ಒಸಿಯಲ್ಲಿ ನಡೆಯುತ್ತಿರುವ ಒಳನುಸುಳುವಿಕೆ-ವಿರೋಧಿ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲಾಗಿದೆ. ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಚಿನಾರ್ ಕಾರ್ಪ್ಸ್ ಎಕ್ಸ್‌ನ ವಕ್ತಾರರು ತಿಳಿಸಿದ್ದಾರೆ.

ಇನ್ನೂ ಕಾರ್ಯಾಚರಣೆ ಮುಂದುವರಿದಿದೆ ಎಂದು ಸೇನೆ ತಿಳಿಸಿದೆ. ಹತ್ಯೆಗೀಡಾದ ಉಗ್ರರ ಗುರುತು ಕುರಿತು ಇನ್ನೂ ಮಾಹಿತಿ ಹೊರಬಿದ್ದಿಲ್ಲ. ಜುಲೈ 6 ಮತ್ತು 7 ರಂದು ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಗುಂಡಿನ ಚಕಮಕಿಗಳಲ್ಲಿ ಭದ್ರತಾ ಪಡೆಗಳು ಆರು ಭಯೋತ್ಪಾದಕರನ್ನು ಹತ್ಯೆ ಮಾಡಿದ ಕೇವಲ ಒಂದು ವಾರದ ನಂತರ ಈ ಕಾರ್ಯಾಚರಣೆಯು ನಡೆದಿದೆ. ಗುಂಡಿನ ಚಕಮಕಿಯಲ್ಲಿ ಸೇನೆಯು ತನ್ನ ಇಬ್ಬರು ಸೈನಿಕರನ್ನು ಕಳೆದುಕೊಂಡಿತ್ತು.

ಜುಲೈ 6 ರಂದು ಚಿನಿಗಾಮ್‌ನಲ್ಲಿ ನಾಲ್ವರು ಭಯೋತ್ಪಾದಕರು ಮತ್ತು ಒಬ್ಬ ಯೋಧ (Soldier) ಸಾವನ್ನಪ್ಪಿದ್ದರೆ, ಮೊಡೆರ್‌ಗಾಮ್‌ನಲ್ಲಿ ಇನ್ನೊಬ್ಬ ಯೋಧ ಸಾವನ್ನಪ್ಪಿದ್ದರು. ಜುಲೈ 7 ರಂದು ಮಾಡರ್‌ಗಾಮ್ ಕಾರ್ಯಾಚರಣೆ ಮುಕ್ತಾಯಗೊಳ್ಳುತ್ತಿದ್ದಂತೆ ಉಳಿದ ಇಬ್ಬರು ಭಯೋತ್ಪಾದಕರನ್ನು ಕೊಲ್ಲಲಾಯಿತು.

ಜೂನ್ 23 ರಂದು, ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನ ಎಲ್‌ಒಸಿ ಬಳಿ ಭದ್ರತಾ ಪಡೆಗಳು ನಡೆಸಿದ ಒಳನುಸುಳುವಿಕೆ ವಿರೋಧಿ ಕಾರ್ಯಾಚರಣೆಯಲ್ಲಿ ಭಯೋತ್ಪಾದಕನನ್ನು ಕೊಲ್ಲಲಾಯಿತು. ಉರಿ ಸೆಕ್ಟರ್‌ನ ಎಲ್‌ಒಸಿಯ ಬಾಸ್‌ಗ್ರೇನ್ ಗ್ರಾಮದ ಬಳಿಯ ಕಣಿವೆಯೊಳಗೆ ನುಸುಳಲು ಭಯೋತ್ಪಾದಕರ ಗುಂಪಿನ ಒಳನುಸುಳುವಿಕೆಯ ಪ್ರಯತ್ನವನ್ನು ಭಾರತೀಯ ಸೇನೆಯು ವಿಫಲಗೊಳಿಸಿತು.

ಏಪ್ರಿಲ್‌ನಲ್ಲಿ, ರುಸ್ತಮ್ ಪೋಸ್ಟ್ ಬಳಿಯ ಉರಿಯಲ್ಲಿ ಸೇನೆಯು ಇಬ್ಬರು ನುಸುಳುಕೋರರನ್ನು ಕೊಂದಿತು. ಉರಿ ಸೆಕ್ಟರ್‌ನ ಎಲ್‌ಒಸಿಯ ಸಬುರಾ ನುಲ್ಲಾ ಬಳಿ ಭದ್ರತಾ ಪಡೆಗಳಿಂದ ಹತ್ಯೆಗೀಡಾದ ಇಬ್ಬರು ನುಸುಳುಕೋರರಿಗೆ ಪಾಕಿಸ್ತಾನಿ ಪಡೆ ಬೆಂಬಲ ನೀಡಿತ್ತು ಎಂದು ಭಾರತೀಯ ಸೇನೆ ಹೇಳಿದೆ. ಇದು ಈ ವರ್ಷದ ಮೊದಲ ಒಳನುಸುಳುವಿಕೆ ಪ್ರಯತ್ನವಾಗಿದೆ. ಭಾರತೀಯ ಪಡೆಗಳು ಎಚ್ಚರದಿಂದಿದ್ದು ಇದನ್ನು ತಪ್ಪಿಸಿವೆ.

ಕಳೆದ ವರ್ಷ ನವೆಂಬರ್‌ನಲ್ಲಿ ಉರಿ ಸೆಕ್ಟರ್‌ನಲ್ಲಿ ಇದೇ ರೀತಿಯ ಒಳನುಸುಳುವಿಕೆ ಪ್ರಯತ್ನವನ್ನು ಸೇನೆ (Indian army) ವಿಫಲಗೊಳಿಸಿತ್ತು ಮತ್ತು ಇಬ್ಬರು ಭಯೋತ್ಪಾದಕರನ್ನು ಕೊಂದಿತ್ತು.

ಇದನ್ನೂ ಓದಿ: PM Modi Russia Visit: ಭಾರತ-ರಷ್ಯಾ ಜಂಟಿ ಹೇಳಿಕೆ ಬಿಡುಗಡೆ; ಜಮ್ಮು & ಕಾಶ್ಮೀರದ ಭಯೋತ್ಪಾದಕ ದಾಳಿಗೆ ಖಂಡನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral News: ಬಾಸ್‌ ಜತೆ ಚಕ್ಕಂದವಾಡುತ್ತಿದ್ದ ಕಿಲಾಡಿ ಪತ್ನಿ; ಡ್ರೋನ್‌ ಬಳಸಿ ಪತ್ತೆ ಹಚ್ಚಿದ ಚಾಲಾಕಿ ಗಂಡ!

Viral News: ಗಂಡನಿಗೆ ಹೆಂಡತಿಯ ಮೇಲೆ ಅನುಮಾನ, ಹೆಂಡತಿಗೆ ಗಂಡನ ಮೇಲೆ ಅನುಮಾನ ಇದು ಈಗ ಸಾಮಾನ್ಯವಾಗಿ ಬಿಟ್ಟಿದೆ. ಚೀನಾದಲ್ಲಿ ವಾಸಿಸುವ ವ್ಯಕ್ತಿಯೊಬ್ಬನಿಗೆ ತನ್ನ ಪತ್ನಿ ತನ್ನನ್ನು ನಿರ್ಲಕ್ಷಿಸುತ್ತಿರುವುದು ತಿಳಿದುಬಂದಿದೆ. ಇದರಿಂದ ಆತನಿಗೆ ತನ್ನ ಪತ್ನಿಯ ಮೇಲೆ ಅನುಮಾನ ಶುರುವಾಗಿದೆ. ಹಾಗಾಗಿ ಆತ ತನ್ನ ಹೆಂಡತಿಯ ಚಲನವಲನಗಳನ್ನು ಪತ್ತೆಹಚ್ಚಲು ಡ್ರೋನ್ ಅನ್ನು ಬಳಸಲು ಆತ ನಿರ್ಧರಿಸಿದ. ಕೊನೆಗೂ ಆತನ ಪತ್ನಿ ಬಾಸ್‌ ಜತೆ ಸರಸವಾಡುತ್ತಿರುವುದು ಡ್ರೋನ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ

VISTARANEWS.COM


on

Viral News
Koo

ಅಕ್ರಮ ಸಂಬಂಧದ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಕೇಳಿಬರುತ್ತಿದೆ. ಪತಿ ಪತ್ನಿಯರು ಒಬ್ಬರು, ಇನ್ನೊಬ್ಬರಿಗೆ ತಿಳಿಯದಂತೆ ತಮ್ಮ ಕಚೇರಿಗಳಲ್ಲಿ, ಅಥವಾ ಇನ್ನಿತರ ಸ್ಥಳಗಳಲ್ಲಿ ಬೇರೆಯವರೊಡನೆ ಅಕ್ರಮ ಸಂಬಂಧವನ್ನು ಹೊಂದುವ ಪ್ರಕರಣಗಳು ಬಯಲಾಗುತ್ತಿವೆ. ಇದು ಈಗ ಸಾಮಾನ್ಯ ಎಂಬಂತಾಗಿ ಬಿಟ್ಟಿದೆ. ಆದರೆ ಇದೀಗ ಮಹಿಳೆಯೊಬ್ಬಳು ತಮ್ಮ ಬಾಸ್ ಜೊತೆ ಅಕ್ರಮ ಸಂಬಂಧವನ್ನು ಹೊಂದಿದ್ದು, ಇದರಿಂದ ಅನುಮಾನಗೊಂಡಿದ್ದ ಪತಿ ತನ್ನ ಹೆಂಡತಿಯ ರಹಸ್ಯ ಸಂಬಂಧವನ್ನು ಕಂಡುಹಿಡಿಯಲು ಡ್ರೋನ್ ಬಳಸಿ ಯಶಸ್ವಿಯಾಗಿದ್ದಾನೆ. ಈ ಸುದ್ದಿ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral News )ಆಗಿದೆ.

Viral News

ಮಧ್ಯ ಹುಬೈ ಪ್ರಾಂತ್ಯದ ಶಿಯಾನ್‍ನಲ್ಲಿ ವಾಸಿಸುವ 33 ವರ್ಷದ ವ್ಯಕ್ತಿಯೊಬ್ಬನಿಗೆ ತನ್ನ ಪತ್ನಿ ತನ್ನನ್ನು ನಿರ್ಲಕ್ಷಿಸುತ್ತಿರುವುದು ತಿಳಿದುಬಂದಿದೆ. ಇದರಿಂದ ಆತನಿಗೆ ತನ್ನ ಪತ್ನಿಯ ಮೇಲೆ ಅನುಮಾನ ಶುರುವಾಗಿದೆ. ಅಲ್ಲದೇ ಆತನ ಪತ್ನಿಗೆ ಕೆಲಸದಲ್ಲಿ ಪ್ರಮೋಷನ್ ಸಿಕ್ಕಿದ್ದು, ತನ್ನ ಹೆತ್ತವರನ್ನು ಆಗಾಗ ಭೇಟಿ ಮಾಡಲು ಹೋಗುವುದು ಆತನಲ್ಲಿ ಅನುಮಾನವನ್ನುಂಟುಮಾಡಿದೆ. ಹಾಗಾಗಿ ಆತ ತನ್ನ ಹೆಂಡತಿಯ ಚಲನವಲನಗಳನ್ನು ಪತ್ತೆಹಚ್ಚಲು ಡ್ರೋನ್ ಅನ್ನು ಬಳಸಲು ನಿರ್ಧರಿಸಿದನು. ಪತ್ನಿಯ ಹಿಂದೆ ಡ್ರೋನ್ ಅನ್ನು ಕಳುಹಿಸಿದ ಆತ ಆಕೆ ಕಾರೊಂದರಲ್ಲಿ ದೂರದ ಪರ್ವತ ಪ್ರದೇಶಕ್ಕೆ ಹೋಗುವುದು ಕಂಡುಬಂದಿದೆ. ನಂತರ ಅಲ್ಲಿ ಅವಳು ಇನ್ನೊಬ್ಬ ವ್ಯಕ್ತಿಯೊಂದಿಗೆ ಕೈ ಕೈ ಹಿಡಿದು ನಡೆದು ಪಾಳುಬಿದ್ದ ಮಣ್ಣಿನ ಗೋಡೆಯ ಮನೆಯೊಳಗೆ ಹೋಗುತ್ತಿರುವುದು ಕಂಡಿದೆ. ಸುಮಾರು 20 ನಿಮಿಷಗಳ ನಂತರ, ಅವರು ಕಟ್ಟಡದಿಂದ ಹೊರಬಂದು ನಂತರ ಅವಳು ತನ್ನ ಕೆಲಸ ಮಾಡುವ ಕಾರ್ಖಾನೆಗೆ ಹಿಂತಿರುಗಿದ್ದಾಳೆ. ಆಗ ಪತಿಗೆ ಆಕೆಗೆ ಅಕ್ರಮ ಸಂಬಂಧವಿರುವುದು ತಿಳಿದು ಬಂದಿದೆ.

ಹಾಗಾಗಿ ಡ್ರೋನ್‍ನಿಂದ ಸಂಗ್ರಹಿಸಿದ ಪುರಾವೆಗಳಿಂದ ವಿಚ್ಛೇದನ ಪಡೆಯಲು ಮುಂದಾಗಿದ್ದಾನೆ ಎನ್ನಲಾಗಿದೆ. ಹಾಗೇ ಅವಳಿಗೆ ತನ್ನ ಬಾಸ್ ಜೊತೆ ಅಕ್ರಮ ಸಂಬಂಧವಿದ್ದು, ಕಾರ್ಖಾನೆಯಲ್ಲಿ ಅವರಿಗೆ ಸಂಬಂಧ ಹೊಂದಲು ಸಮಸ್ಯೆಯಾಗುತ್ತದೆ ಎಂದು ದೂರದ ಕಾಡಿನಲ್ಲಿ ಈ ಕೆಲಸ ಮಾಡಲು ಮುಂದಾಗಿರುವುದಾಗಿ ಪತಿ ತಿಳಿಸಿದ್ದಾನೆ. ಈ ವಿಚಾರವನ್ನು ಆತ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದು, ಪತ್ನಿಯ ಮೋಸವನ್ನು ಡ್ರೋನ್ ಮೂಲಕ ಬಯಲು ಮಾಡಿರುವ ಬಗ್ಗೆ ನೆಟ್ಟಿಗರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಕೆಲವರು ಡ್ರೋನ್ ತಂತ್ರಜ್ಞಾನದಿಂದ ಆತನ ಪತ್ನಿಯ ಮೋಸ ಬಯಲಾಗಿದೆ ಎಂದು ಹೊಗಳಿದ್ದಾರೆ. ಹಾಗೇ ಡ್ರೋನ್‍ನಂತಹ ತಂತ್ರಜ್ಞಾನ ಇರುವ ಈ ಕಾಲದಲ್ಲಿ ಇಂತಹ ಮೋಸ ನಡೆಯುವುದಿಲ್ಲ ಎಂದು ಮತ್ತೊಬ್ಬರು ಕಾಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ:  ಹೆಣ್ಣು ಮಕ್ಕಳಿಗೆ ಈಗ ಶಾಲೆ ಕೂಡ ಸುರಕ್ಷಿತವಲ್ಲ! ಶಾಲಾ ಶೌಚಾಲಯದಲ್ಲಿ ಬಾಲಕಿ ಮೇಲೆ ಬಾಲಕನಿಂದ ಅತ್ಯಾಚಾರ

ಡ್ರೋನ್ ತಂತ್ರಜ್ಞಾನ ಇತೀಚಿನ ದಿನಗಳಲ್ಲಿ ಹೆಚ್ಚಿನ ಕೆಲಸಕ್ಕೆ ಬಳಸಲಾಗುತ್ತಿದೆ. ಏಪ್ರಿಲ್ 2022ರಲ್ಲಿ ಶಾಂಘೈನಲ್ಲಿ ಕಟ್ಟುನಿಟ್ಟಾದ ಕೋವಿಡ್ -19 ಲಾಕ್‍ಡೌನ್ ಇದ್ದಾಗ, ವ್ಯಕ್ತಿಯೊಬ್ಬರು ಎತ್ತರದ ಕಟ್ಟಡದಲ್ಲಿ ವಾಸಿಸುತ್ತಿದ್ದ ನೆರೆಹೊರೆಯವರಿಗೆ ಮೀನು ಮತ್ತು ತರಕಾರಿಗಳಂತಹ ದೈನಂದಿನ ಅಗತ್ಯ ವಸ್ತುಗಳನ್ನು ಡ್ರೋನ್‍ನಲ್ಲಿ ವಿತರಿಸಿ ಗಮನ ಸೆಳೆದಿದ್ದರು.

Continue Reading

ಪ್ರಮುಖ ಸುದ್ದಿ

‌2nd PUC Exam Result: ದ್ವಿತೀಯ ಪಿಯುಸಿ ಪರೀಕ್ಷೆ- 3 ಫಲಿತಾಂಶ ಪ್ರಕಟ, 23.73% ವಿದ್ಯಾರ್ಥಿಗಳು ಪಾಸ್

‌2nd PUC Exam Result: ಜೂನ್/ಜುಲೈ 2024ರ ದ್ವಿತೀಯ ಪಿಯುಸಿ ಪರೀಕ್ಷೆ- 3 ಅನ್ನು ದಿನಾಂಕ ಜೂನ್‌ 24ರಿಂದ ಜುಲೈ 5ರವರೆಗೆ ಒಟ್ಟು 248 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ಒಟ್ಟು 12 ಮೌಲ್ಯಮಾಪನ ಶಿಬಿರಗಳಲ್ಲಿ ದಿನಾಂಕ ಜುಲೈ 9ರಿಂದ 14ರವರೆಗೆ 2293 ಮೌಲ್ಯಮಾಪಕರಿಂದ ನಡೆಸಲಾಯಿತು.

VISTARANEWS.COM


on

2nd Puc Result
Koo

ಬೆಂಗಳೂರು: 2024ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ- 3 ಫಲಿತಾಂಶಗಳನ್ನು (2nd PUC Exam Result) ಪ್ರಕಟಿಸಲಾಗಿದೆ. 23.73% ವಿದ್ಯಾರ್ಥಿಗಳು (PUC Students) ಉತ್ತೀರ್ಣರಾಗಿದ್ದಾರೆ. ಶಾಲಾ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಳಿ ಫಲಿತಾಂಶದ (PUC Result) ಅಂಕಿ ಅಂಶ ಬಿಡುಗಡೆ ಮಾಡಿದ್ದು, ಪರೀಕ್ಷೆಗೆ ಹಾಜರಾದ 75,466 ವಿದ್ಯಾರ್ಥಿಗಳಲ್ಲಿ 17,911 ಮಂದಿ ಪಾಸ್ (Pass) ಆಗಿದ್ದಾರೆ.

ಜೂನ್/ಜುಲೈ 2024ರ ದ್ವಿತೀಯ ಪಿಯುಸಿ ಪರೀಕ್ಷೆ- 3 ಅನ್ನು ದಿನಾಂಕ ಜೂನ್‌ 24ರಿಂದ ಜುಲೈ 5ರವರೆಗೆ ಒಟ್ಟು 248 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ಒಟ್ಟು 12 ಮೌಲ್ಯಮಾಪನ ಶಿಬಿರಗಳಲ್ಲಿ ದಿನಾಂಕ ಜುಲೈ 9ರಿಂದ 14ರವರೆಗೆ 2293 ಮೌಲ್ಯಮಾಪಕರಿಂದ ನಡೆಸಲಾಯಿತು.

ಫಲಿತಾಂಶವನ್ನು ಇಂದು ಮಧ್ಯಾಹ್ನ 3:00 ಗಂಟೆಗೆ ಕಾಲೇಜುಗಳಲ್ಲಿ ಪ್ರಕಟಿಸಲಾಗುತ್ತಿದೆ. ಪರೀಕ್ಷೆ-3ರ ಫಲಿತಾಂಶವನ್ನು https://karresults.nic.in ವೆಬ್‌ಸೈಟ್‌ನಲ್ಲಿಯೂ ಪ್ರಚುರಪಡಿಸಲಾಗಿದೆ. ಫಲಿತಾಂಶವನ್ನು ಉತ್ತಮ ಪಡಿಸಿಕೊಳ್ಳಲು ಪರೀಕ್ಷೆ ಬರೆದ ವಿದ್ಯಾರ್ಥಿಗಳು ಪರೀಕ್ಷೆ 1, ಪರೀಕ್ಷೆ 2 ಮತ್ತು ಪರೀಕ್ಷೆ- 3ರಲ್ಲಿ ವಿಷಯವಾರು ಗಳಿಸಿದ ಅತಿಹೆಚ್ಚು ಅಂಕಗಳನ್ನು ಪರಿಗಣಿಸಿ ಅಂತಿಮ ಫಲಿತಾಂಶವನ್ನು https://kseab.karnataka.gov.in ಅಂತರ್ಜಾಲದಲ್ಲಿ ನಂತರ ಪ್ರಕಟಿಸಲಾಗುವುದು ಎಂದು ಮಂಡಳಿ ತಿಳಿಸಿದೆ.

ಪರೀಕ್ಷೆಗೆ ನೋಂದಾಯಿಸಿದವರ ಸಂಖ್ಯೆ 76,005, ಹಾಜರಾದವರು 75,466, ಉತ್ತೀರ್ಣರಾದವರು 17,911 ಹಾಗೂ ಶೇಕಡವಾರು ಫಲಿತಾಂಶ 23.73. ಉತ್ತೀರ್ಣರಾದವರಲ್ಲಿ ಬಾಲಕಿಯರ ಪ್ರಮಾಣ 26.65% ಹಾಗೂ ಬಾಲಕರು 21.65%. ಕಲಾ ವಿಭಾಗದಲ್ಲಿ 21.71%, ವಾಣಿಜ್ಯದಲ್ಲಿ 23.58% ಹಾಗೂ ವಿಜ್ಞಾನದಲ್ಲಿ 27.06% ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ.

ಉತ್ತರ ಪತ್ರಿಕೆಯ ಸ್ಕ್ಯಾನಿಂಗ್‌ ಪ್ರತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 17ರಿಂದ 21
ಸ್ಕ್ಯಾನಿಂಗ್‌ ಪ್ರತಿಯನ್ನು ಅಂತರ್ಜಾಲದಲ್ಲಿ ಡೌನ್‌ಲೋಡ್‌ ಮಾಡಿಕೊಳ್ಳುವ ದಿನಾಂಕ: ಜುಲೈ 18ರಿಂದ 22
ಮರುಮೌಲ್ಯಮಾಪನ ಹಾಗೂ ಮರುಎಣಿಕೆಗೆ ಅರ್ಜಿ ಸಲ್ಲಿಸಲು ಜುಲೈ 18ರಿಂದ 24. ಸ್ಕ್ಯಾನಿಂಗ್‌ ಪ್ರತಿ ತೆಗೆದುಕೊಂಡವರಿಗೆ ಮಾತ್ರ ಅವಕಾಶ.
ಸ್ಕ್ಯಾನಿಂಗ್‌ ಪ್ರತಿ ಪಡೆಯಲು ಪ್ರತಿ ಪೇಪರ್‌ಗೆ ಶುಲ್ಕ- 530 ರೂ.
ಮರುಮೌಲ್ಯಮಾಪನ ಶುಲ್ಕ ಪ್ರತಿ ವಿಷಯಕ್ಕೆ- 1670 ರೂ.

ಈ ಬಾರಿ ಆಯ್ಕೆಯಾದ 105 ಸಂಸದರು ಪಿಯುಸಿ ದಾಟಿಲ್ಲ!

ಹೊಸದಿಲ್ಲಿ: ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಗೆದ್ದು ಸಂಸತ್ತು ಪ್ರವೇಶಿಸಿರುವ ಶೇ. 19ರಷ್ಟು ನೂತನ ಸಂಸದರ (MPs) ಶೈಕ್ಷಣಿಕ ಅರ್ಹತೆ (education qualification) 12 ನೇ ತರಗತಿಗಿಂತ ಕೆಳಗಿದೆ. ಶೇ. 77ರಷ್ಟು ಅಭ್ಯರ್ಥಿಗಳು ಪದವಿ ಮತ್ತು ಅದಕ್ಕಿಂತ ಹೆಚ್ಚಿನ ಶಿಕ್ಷಣ ಅರ್ಹತೆಯನ್ನು ಪಡೆದಿದ್ದಾರೆ ಎಂದು ಅಸೋಸಿಯೇಷನ್ ​​ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ವರದಿ ಹೇಳಿದೆ.

ವಿಜೇತ ಅಭ್ಯರ್ಥಿಗಳಲ್ಲಿ ಸುಮಾರು 105 ಮಂದಿ ತಮ್ಮ ಶೈಕ್ಷಣಿಕ ಅರ್ಹತೆಯನ್ನು 5ನೇ ತರಗತಿ ಮತ್ತು 12 ನೇ ತರಗತಿಯ ನಡುವೆ ಎಂದು ಘೋಷಿಸಿದ್ದಾರೆ. 420 ಅಭ್ಯರ್ಥಿಗಳು ಪದವಿ ಅಥವಾ ಅದಕ್ಕಿಂತ ಹೆಚ್ಚಿನ ಪದವಿಯನ್ನು ಹೊಂದಿರುವುದಾಗಿ ಹೇಳಿಕೊಂಡಿದ್ದಾರೆ. 17 ವಿಜೇತ ಅಭ್ಯರ್ಥಿಗಳು ಡಿಪ್ಲೊಮಾ ಮಾಡಿದ್ದು, ಒಬ್ಬ ವಿಜೇತರು “ಕೇವಲ ಸಾಕ್ಷರರು” ಎಂದು ಹೇಳಿಕೊಂಡಿದ್ದಾರೆ. ಚುನಾವಣಾ ಕಣದಲ್ಲಿ ಇಳಿಯುವಾಗ ತಾವು ಅನಕ್ಷರಸ್ಥರೆಂದು ಘೋಷಿಸಿಕೊಂಡ ಎಲ್ಲಾ 121 ಅಭ್ಯರ್ಥಿಗಳು ಸೋಲು ಅನುಭವಿಸಿದ್ದಾರೆ.

ಯಾರು ಎಷ್ಟು?

5ನೇ ತರಗತಿಯವರೆಗೆ ಓದಿರುವ ಇಬ್ಬರು ವಿಜೇತ ಅಭ್ಯರ್ಥಿಗಳಿದ್ದರೆ, ನಾಲ್ವರು 8 ನೇ ತರಗತಿಯವರೆಗೆ ಓದಿದ್ದೇವೆ ಎಂದು ಹೇಳಿದ್ದಾರೆ. 34 ಅಭ್ಯರ್ಥಿಗಳು ತಾವು 10 ನೇ ತರಗತಿಯವರೆಗೆ ಮತ್ತು 65 ಅಭ್ಯರ್ಥಿಗಳು 12ನೇ ತರಗತಿಯವರೆಗೆ ಓದಿರುವುದಾಗಿ ಘೋಷಿಸಿದ್ದಾರೆ.

ಕೃಷಿಕರು

ಪಿ ಆರ್ ಎಸ್ ಶಾಸಕಾಂಗ ಸಂಶೋಧನೆ ವಿಶ್ಲೇಷಣೆಯ ಪ್ರಕಾರ 543 ಸಂಸದರಲ್ಲಿ ಛತ್ತೀಸ್‌ಗಢದ ಶೇ. 91 ಸಂಸದರು, ಮಧ್ಯಪ್ರದೇಶದಿಂದ ಶೇ. 72 ಮತ್ತು ಗುಜರಾತ್‌ನ ಶೇ. 65 ಸಂಸದರು ಕೃಷಿಯನ್ನು ತಮ್ಮ ವೃತ್ತಿ ಎಂದು ಘೋಷಿಸಿದ್ದಾರೆ.
18ನೇ ಲೋಕಸಭೆಗೆ ಚುನಾಯಿತರಾದ ಸಂಸದರಲ್ಲಿ ಸುಮಾರು ಶೇ. 7 ರಷ್ಟು ಮಂದಿ ವಕೀಲರು ಮತ್ತು ಶೇ. 4ರಷ್ಟು ಮಂದಿ ವೈದ್ಯಕೀಯ ವೃತ್ತಿಯವರು ಇದ್ದಾರೆ.

ಇದನ್ನೂ ಓದಿ: UGCET 2024: ಅರ್ಹತಾ ಅಂಕ ಶೇ 45ಕ್ಕೆ ಇಳಿಕೆ ; ಆರ್ಕಿಟೆಕ್ಚರ್ ಕೋರ್ಸ್‌ಗೆ ಅರ್ಜಿ ಸಲ್ಲಿಸಲು ಜು. 13ರವರೆಗೆ ಅವಕಾಶ

Continue Reading

Latest

Stuck in Lift: ಫ್ಯಾನಿಲ್ಲ, ಲೈಟಿಲ್ಲ, ಆಹಾರವಿಲ್ಲ; 2 ದಿನ ಲಿಫ್ಟ್‌ನಲ್ಲಿ ಸಿಲುಕಿದ್ದವನ ಸ್ಥಿತಿ ಹೇಗಿರಬಹುದು ಊಹಿಸಿ!

Stuck in Lift: ಸ್ಥಳೀಯ ಸಿಪಿಐ ನಾಯಕ ಮತ್ತು ಸ್ಥಳೀಯ ಶಾಸಕರ ಹಾಸ್ಟೆಲ್‌ನ ಸಿಬ್ಬಂದಿ ರವೀಂದ್ರನ್ ಅವರು ಬೆನ್ನುನೋವಿನ ಚಿಕಿತ್ಸೆಗಾಗಿ ತಿರುವನಂತಪುರಂನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಹೋಗಿದ್ದರು. ಎಕ್ಸ್-ರೇ ನಂತರ ಅವರು ಲಿಫ್ಟ್ ಮೂಲಕ ವೈದ್ಯರ ಬಳಿಗೆ ಹೋಗುತ್ತಿದ್ದಾಗ ಅದು ಸಡನ್ ಆಗಿ ನಿಂತಿದೆ. ಆಗ ಅವರು ತಮ್ಮ ಫೋನ್ ಬಳಸಿ ಲಿಫ್ಟ್ ಒಳಗೆ ಬರೆದ ಹಲವಾರು (ಸಹಾಯವಾಣಿ) ಸಂಖ್ಯೆಗಳಿಗೆ ಕಾಲ್ ಮಾಡಿದರೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. 42 ಗಂಟೆಗಳ ಕಾಲ ಲಿಫ್ಟ್ ಒಳಗೆ ಸಿಲುಕಿಕೊಂಡಿದ್ದರು. ಅವರ ಕರಾಳ ಅನುಭವ ಇಲ್ಲಿದೆ ಓದಿ.

VISTARANEWS.COM


on

Stuck in Lift
Koo

ವ್ಯಕ್ತಿ ಲಿಫ್ಟ್‌ನೊಳಗೆ ಸಿಲುಕಿಕೊಂಡು ಒದ್ದಾಡುವಂತಹ ದೃಶ್ಯಗಳನ್ನು ನಾವು ಹೆಚ್ಚು ಸಿನಿಮಾಗಳಲ್ಲಿ ನೋಡಿರುತ್ತೇವೆ. ಆದರೆ ಆಸ್ಪತ್ರೆಯೊಂದರಲ್ಲಿ 59 ವರ್ಷದ ವ್ಯಕ್ತಿಯೊಬ್ಬರು ಭರ್ತಿ 42 ಗಂಟೆಗಳ ಕಾಲ ಲಿಫ್ಟ್ (Stuck in Lift) ಒಳಗೆ ಸಿಲುಕಿಕೊಂಡಿದ್ದು, ಸುಮಾರು ಎರಡು ದಿನಗಳ ಕಾಲ ಅವರು ಲಿಫ್ಟ್‌ನೊಳಗೆ ಪರದಾಡಿದ ರೀತಿ ಕೇಳಿದರೆ ಯಾರಿಗಾದರೂ ಗಾಬರಿಯಾಗುವುದು ಖಂಡಿತ.

ಸ್ಥಳೀಯ ಸಿಪಿಐ ನಾಯಕ ಮತ್ತು ಸ್ಥಳೀಯ ಶಾಸಕರ ಹಾಸ್ಟೆಲ್‍ನ ಸಿಬ್ಬಂದಿ ರವೀಂದ್ರನ್ ಅವರು ಬೆನ್ನುನೋವಿನ ಚಿಕಿತ್ಸೆಗಾಗಿ ತಿರುವನಂತಪುರಂನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿದರು. ಎಕ್ಸ್-ರೇ ನಂತರ, ಅವರು ಲಿಫ್ಟ್‌ ಮೂಲಕ ವೈದ್ಯರ ಬಳಿಗೆ ಹೋಗುತ್ತಿದ್ದಾಗ ಅದು ಸಡನ್ ಆಗಿ ನಿಂತಿದೆ. ಆಗ ಅವರು ತಮ್ಮ ಫೋನ್ ಬಳಸಿ ಲಿಫ್ಟ್ ಒಳಗೆ ಬರೆದ ಹಲವಾರು (ಸಹಾಯವಾಣಿ) ಸಂಖ್ಯೆಗಳಿಗೆ ಕಾಲ್ ಮಾಡಿದರೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ನಂತರ ಅವರ ಫೋನ್ ಕೆಳಗೆ ಬಿದ್ದು ಹಾಳಾಗಿದೆ. ನಂತರ ಅವರು ಲಿಫ್ಟ್‌ನ ಒಂದು ಮೂಲೆಯಲ್ಲಿ ಕುಳಿತು ಯಾರಾದರೂ ಬರುತ್ತಾರೆ ಎಂದು ಕಾಯತೊಡಗಿದ್ದಾರೆ.

ಅನಿವಾರ್ಯವಾದಾಗ ಲಿಫ್ಟ್‌ನ ಒಂದು ಮೂಲೆಯಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾರೆ. ಅವರಿಗೆ ಬಾಯಾರಿಕೆ, ಹಸಿವು ಆದ ಕಾರಣ ನಿದ್ರೆ ಕೂಡ ಬರಲಿಲ್ಲ. ಅವರು ನಿಯಮಿತವಾಗಿ ಆಲರಂ ಬೆಲ್ ಅನ್ನು ಒತ್ತುತ್ತಲೇ ಇದ್ದರಂತೆ. ಲಿಫ್ಟ್ ಚೇಂಬರ್‌ನಲ್ಲಿ ಫ್ಯಾನ್ ಮತ್ತು ಬೆಳಕು ಎರಡೂ ಇರಲಿಲ್ಲ. ಸ್ವಲ್ಪ ಗಾಳಿ ಒಳಗೆ ಬರುತ್ತಿದ್ದರಿಂದ ಅವರ ಜೀವ ಉಳಿದಿದೆ. ಕೊನೆಗೆ ಅವರು ತಮ್ಮ ನೈತಿಕ ಸ್ಥೈರ್ಯವನ್ನು ಉಳಿಸಿಕೊಳ್ಳಲು, ತಮ್ಮ ಹೆಂಡತಿ ಬರೆದು ಪ್ರಕಟಿಸಿದ ಕವಿತೆಗಳನ್ನು ಮೆಲುಕು ಹಾಕಿದರಂತೆ. ಎರಡು ದಿನ ಲಿಫ್ಟ್‌ನಲ್ಲಿ ಸಿಕ್ಕಿ ಬಿದ್ದು ಹೊರ ಬಂದಿರುವ ರವೀಂದ್ರನ್ ಆ ಸಂಕಷ್ಟದ ಕ್ಷಣಗಳನ್ನು ಮೆಲುಕು ಹಾಕಿದ್ದಾರೆ.

ಇತ್ತ ಅವರ ಪತ್ನಿ ಮತ್ತು ಮಕ್ಕಳು ಅವರು ಮನೆಗೆ ಬರದಿದ್ದರೂ ತಲೆಕೆಡಿಸಿಕೊಂಡಿರಲಿಲ್ಲ. ಯಾಕೆಂದರೆ ಅವರು ಆಗಾಗ ಕೆಲಸದ ನಿಮಿತ್ತ ಮನೆಗೇ ಬರುತ್ತಿರಲಿಲ್ಲವಂತೆ. ಆದರೆ ಭಾನುವಾರ ಅವರು ಮನೆಗೆ ಹಿಂತಿರುಗದಿದ್ದಾಗ ಮತ್ತು ಅವರ ಪೋನ್‌ಗೆ ಕರೆ ಮಾಡಿದರೂ ಅದು ಸಿಗದಿದ್ದಾಗ ಅವರಿಗೆ ಚಿಂತೆ ಶುರುವಾಗಿದೆ. ಹಾಗಾಗಿ ಶಾಸಕರ ಹಾಸ್ಟೆಲ್ ಮತ್ತು ಸಿಪಿಐ ಕಚೇರಿಗೆ ಕರೆ ಮಾಡಿದಾಗ ರವೀಂದ್ರನ್ ಶನಿವಾರ ಮಧ್ಯಾಹ್ನದಿಂದ ಕಾಣೆಯಾಗಿರುವುದು ತಿಳಿದುಬಂದಿದೆ.

ಇದನ್ನೂ ಓದಿ:  ಕಾಮುಕರ ಹಾವಳಿ ಮಿತಿ‌ ಮೀರಿದೆ; ಬೀದಿ ನಾಯಿಯನ್ನೂ ಇವರು ಬಿಡುತ್ತಿಲ್ಲ! ಆಘಾತಕಾರಿ ವಿಡಿಯೊ

Stuck in Lift

ಭಾನುವಾರ ಮಧ್ಯಾಹ್ನದ ವೇಳೆಗೆ, ಅವರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ದೂರು ದಾಖಲಿಸಿದ್ದರು ಮತ್ತು ಹಾಗಾಗಿ ಅವರನ್ನು ಪೊಲೀಸರು ಹುಡುಕಾಡಿದ್ದಾರೆ. ಕೊನೆಯಲ್ಲಿ ಸೋಮವಾರ ಬೆಳಗ್ಗೆ ಲಿಫ್ಟ್ ಆಪರೇಟರ್ ನಿಧಾನವಾಗಿ ಕರ್ತವ್ಯಕ್ಕೆ ಹಾಜರಾದಾಗ ರವೀಂದ್ರನ್ ಲಿಫ್ಟ್‌ನಲ್ಲಿ ಸಿಕ್ಕಿ ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ. ತಕ್ಷಣ ಅವರನ್ನು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ತನಿಖೆಗೆ ಆದೇಶಿಸಿದ್ದು, ಲಿಫ್ಟ್ ಆಪರೇಟರ್‌ಗಳು ಸೇರಿದಂತೆ ಮೂವರನ್ನು ಅಮಾನತುಗೊಳಿಸಲಾಗಿದೆ.

Continue Reading

ಕರ್ನಾಟಕ

7th Pay Commission: ಸರ್ಕಾರಿ ನೌಕರರ ವೇತನ, ಪಿಂಚಣಿ 58% ಹೆಚ್ಚಳ; ಸಂಪೂರ್ಣ ಲೆಕ್ಕ ಕೊಟ್ಟ ಸಿದ್ದರಾಮಯ್ಯ

7th Pay Commission: ಕರ್ನಾಟಕದಲ್ಲಿ ರಾಜ್ಯ 7ನೇ ವೇತನ ಆಯೋಗದ ಶಿಫಾರಸುಗಳನ್ನು ಆಗಸ್ಟ್‌ 1ರಿಂದಲೇ ಜಾರಿಗೆ ತರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಇದರಿಂದಾಗಿ ರಾಜ್ಯದ 5 ಲಕ್ಷ ಸರ್ಕಾರಿ ನೌಕರರು ಹಾಗೂ 5 ಲಕ್ಷ ನಿವೃತ್ತ ನೌಕರರಿಗೆ ಭಾರಿ ಅನುಕೂಲವಾಗಲಿದೆ. ಇದರ ಬೆನ್ನಲ್ಲೇ ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯೋಗದ ಶಿಫಾರಸುಗಳ ಜಾರಿ ಕುರಿತು ಮಾಹಿತಿ ನೀಡಿದ್ದಾರೆ.

VISTARANEWS.COM


on

7th Pay Commission
Koo

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ (Karnataka State Government Employees Association) ಬಹುದಿನಗಳ ಬೇಡಿಕೆಯನ್ನು ರಾಜ್ಯ ಸರ್ಕಾರವು (Karnataka Government) ಈಡೇರಿಸಿದೆ. ಆಗಸ್ಟ್‌ 1ರಿಂದಲೇ 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಇದರ ಬೆನ್ನಲ್ಲೇ, 7ನೇ ವೇತನ ಆಯೋಗದ ಜಾರಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದು, “ನೌಕರರ ವೇತನ ಪರಿಷ್ಕರಣೆಯಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕ 20,208 ಕೋಟಿ ರೂ. ಹೆಚ್ಚುವರಿ ವೆಚ್ಚ ಉಂಟಾಗುತ್ತದೆ. ಈ ಹೆಚ್ಚುವರಿ ವೆಚ್ಚಕ್ಕೆ 2024-25ರ ಆಯವ್ಯಯದಲ್ಲಿ ಅಗತ್ಯ ಅನುದಾನ ಮೀಸಲಿಡಲಾಗಿದೆ” ಎಂದು ತಿಳಿಸಿದರು. ವಿಧಾನಸಭೆ ಅಧಿವೇಶನದಲ್ಲಿ ಸಿದ್ದರಾಮಯ್ಯ ಅವರು 7ನೇ ವೇತನ ಆಯೋಗದ ಜಾರಿ ಕುರಿತು ಮಾಹಿತಿ ನೀಡಿದ್ದು, ಅದರ ವಿವರ ಹೀಗಿದೆ.

“ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆ, ಪಿಂಚಣಿ ಪರಿಷ್ಕರಣೆಯ ಬೇಡಿಕೆಗಳನ್ನು ಪರಿಷ್ಕರಿಸಲು ದಿನಾಂಕ: 19.11.2022ರಂದು 7ನೇ ರಾಜ್ಯ ವೇತನ ಆಯೋಗವನ್ನು ರಚಿಸಲಾಗಿತ್ತು. ಅದರಂತೆ, ವೇತನ ಆಯೋಗವು 24.03.2024ರಂದು ವರದಿಯನ್ನು ಸಲ್ಲಿಸಿತ್ತು. 7ನೇ ರಾಜ್ಯ ವೇತನ ಆಯೋಗದ ಶಿಫಾರಸಿನಂತೆ ಸರ್ಕಾರಿ ನೌಕರರ ವೇತನ, ವೇತನ ಸಂಬಂಧಿತ ಭತ್ಯೆ, ಪಿಂಚಣಿಯನ್ನು ದಿನಾಂಕ: 01.07.2022ರಿಂದ ಅನ್ವಯವಾಗುವಂತೆ ಪರಿಷ್ಕರಿಸಿ ದಿನಾಂಕ: 01.08.2024ರಿಂದ ಅನುಷ್ಠಾನಗೊಳಿಸಲು ದಿನಾಂಕ: 15.07.2024ರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ” ಎಂದು ತಿಳಿಸಿದ್ದಾರೆ.

ಸಿಎಂ ನೀಡಿದ ಮಾಹಿತಿಯ ಆಡಿಯೊ

ಅದರಂತೆ, “01.07.2022ಕ್ಕೆ ನೌಕರರ ಮೂಲ ವೇತನಕ್ಕೆ ಶೇಕಡ 31ರಷ್ಟು ತುಟ್ಟಿ ಭತ್ಯೆ ಮತ್ತು ಶೇ. 27.50 ರಷ್ಟು ಫಿಟ್‌ಮೆಂಟ್ ಸೇರಿಸಿ ವೇತನ ಮತ್ತು ಪಿಂಚಣಿಯನ್ನು ಪರಿಷ್ಕರಿಸಲಾಗುವುದು. ಇದರಿಂದ ನೌಕರರ ಮೂಲ ವೇತನ ಮತ್ತು ಪಿಂಚಣಿಯಲ್ಲಿ ಶೇ.58.50 ರಷ್ಟು ಹೆಚ್ಚಳವಾಗುತ್ತದೆ. ಮನೆಬಾಡಿಗೆ ಭತ್ಯೆಯಲ್ಲಿ ಶೇ.32ರಷ್ಟು ಹೆಚ್ಚಳವಾಗುತ್ತದೆ. ನೌಕರರ ಕನಿಷ್ಟ ಮೂಲವೇತನವು 17 ಸಾವಿರ ರೂ.ನಿಂದ 27 ಸಾವಿರ ರೂ.ಗೆ, ಗರಿಷ್ಠ ವೇತನವು 1,50,600 ರೂ.ನಿಂದ 2,41,200 ರೂ.ಗೆ ಪರಿಷ್ಕರಣೆಯಾಗುತ್ತದೆ” ಎಂದು ವಿವರಿಸಿದರು.

“ನೌಕರರ ಕನಿಷ್ಠ ಪಿಂಚಣಿಯು 8,500 ರೂ.ನಿಂದ 13,500 ರೂ.ಗೆ ಮತ್ತು ಗರಿಷ್ಠ ಪಿಂಚಣಿಯು 75,300 ರೂ.ನಿಂದ 1,20,600 ರೂ.ಗೆ ಪರಿಷ್ಕರಣೆಗೊಳ್ಳುತ್ತದೆ. ಈ ಪರಿಷ್ಕರಣೆಯು, ಅನುದಾನಿತ ಶಿಕ್ಷಣ ಸಂಸ್ಥೆ ಮತ್ತು ಸ್ಥಳೀಯ ಸಂಸ್ಥೆಗಳ ನೌಕರರು, ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೆ ಅನ್ವಯವಾಗುತ್ತದೆ” ಎಂದು ವಿವರಿಸಿದರು. ಈಗಾಗಲೇ ರಾಜ್ಯ ಸರ್ಕಾರದ ನಿರ್ಧಾರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ: 7th Pay Commission: 7ನೇ ವೇತನ ಆಯೋಗ ಜಾರಿ; ನೌಕರರ ಸಂಬಳ ಎಷ್ಟು ಹೆಚ್ಚಾಗಲಿದೆ? ಇಲ್ಲಿದೆ ಪಟ್ಟಿ

Continue Reading
Advertisement
Viral News
Latest18 mins ago

Viral News: ಬಾಸ್‌ ಜತೆ ಚಕ್ಕಂದವಾಡುತ್ತಿದ್ದ ಕಿಲಾಡಿ ಪತ್ನಿ; ಡ್ರೋನ್‌ ಬಳಸಿ ಪತ್ತೆ ಹಚ್ಚಿದ ಚಾಲಾಕಿ ಗಂಡ!

Rishabh Pant
ಕ್ರಿಕೆಟ್21 mins ago

Rishabh Pant: ಸಹ ಆಟಗಾರ ಖಲೀಲ್​ ಅಹ್ಮದ್​ರನ್ನು ಸ್ವಿಮ್ಮಿಂಗ್ ಪೂಲ್‌​ಗೆ ತಳ್ಳಿ ಹಾಕಿದ ಪಂತ್​; ವಿಡಿಯೊ ವೈರಲ್​

Karnataka Rain
ಮಳೆ21 mins ago

Karnataka Rain : ಭಾರಿ ಮಳೆ ಎಫೆಕ್ಟ್‌-ಮಲಗಿದ್ದ‌ ವ್ಯಕ್ತಿ ಮೇಲೆ ಬಿದ್ದ ಗೋಡೆ; ಮರ ಬಿದ್ದು ಕಾರು ಜಖಂ, ಚಾಲಕ ಜಸ್ಟ್‌ ಮಿಸ್‌

2nd Puc Result
ಪ್ರಮುಖ ಸುದ್ದಿ27 mins ago

‌2nd PUC Exam Result: ದ್ವಿತೀಯ ಪಿಯುಸಿ ಪರೀಕ್ಷೆ- 3 ಫಲಿತಾಂಶ ಪ್ರಕಟ, 23.73% ವಿದ್ಯಾರ್ಥಿಗಳು ಪಾಸ್

Stuck in Lift
Latest33 mins ago

Stuck in Lift: ಫ್ಯಾನಿಲ್ಲ, ಲೈಟಿಲ್ಲ, ಆಹಾರವಿಲ್ಲ; 2 ದಿನ ಲಿಫ್ಟ್‌ನಲ್ಲಿ ಸಿಲುಕಿದ್ದವನ ಸ್ಥಿತಿ ಹೇಗಿರಬಹುದು ಊಹಿಸಿ!

7th Pay Commission
ಕರ್ನಾಟಕ48 mins ago

7th Pay Commission: ಸರ್ಕಾರಿ ನೌಕರರ ವೇತನ, ಪಿಂಚಣಿ 58% ಹೆಚ್ಚಳ; ಸಂಪೂರ್ಣ ಲೆಕ್ಕ ಕೊಟ್ಟ ಸಿದ್ದರಾಮಯ್ಯ

Viral Video
Latest52 mins ago

Viral Video: ಸ್ಟ್ರೆಚರ್‌ ಇಲ್ಲದ ಸರ್ಕಾರಿ ಆಸ್ಪತ್ರೆ; ಪತಿಯನ್ನು ಬೆನ್ನ ಮೇಲೆ ಹೊತ್ತು ನಡೆದ ಪತ್ನಿ! ಮನಮಿಡಿಯುವ ವಿಡಿಯೊ

7th Pay Commission
ಕರ್ನಾಟಕ1 hour ago

7th Pay Commission: ಆ.1ರಿಂದ ನೌಕರರ ವೇತನ ಹೆಚ್ಚಳ; ಸರ್ಕಾರಕ್ಕೆ ವಾರ್ಷಿಕ 20,208 ಕೋಟಿ ಹೆಚ್ಚುವರಿ ಹೊರೆ ಎಂದ ಸಿಎಂ

Sexual Abuse
Latest1 hour ago

Sexual Abuse: ಹೆಣ್ಣು ಮಕ್ಕಳಿಗೆ ಈಗ ಶಾಲೆ ಕೂಡ ಸುರಕ್ಷಿತವಲ್ಲ! ಶಾಲಾ ಶೌಚಾಲಯದಲ್ಲಿ ಬಾಲಕಿ ಮೇಲೆ ಬಾಲಕನಿಂದ ಅತ್ಯಾಚಾರ

MAX Teaser
ಸ್ಯಾಂಡಲ್ ವುಡ್1 hour ago

MAX Teaser: ಬಹುನಿರೀಕ್ಷಿತ ʼಮ್ಯಾಕ್ಸ್ʼ ಚಿತ್ರದ ಟೀಸರ್‌ ಔಟ್‌; ರೌಡಿಗಳ ಅಡ್ಡದಲ್ಲಿ ನಿಂತು ಲಾಂಗ್‌ ಬೀಸಿದ ಸುದೀಪ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ4 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ22 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌