Assembly Session: ಇಂದಿನಿಂದ ವಿಧಾನ ಮಂಡಲ ಅಧಿವೇಶನ, ರಂಗೇರಲಿರುವ ಕೈ- ಕಮಲ ಕದನ; ಚಕಮಕಿಗೆ ಅಸ್ತ್ರ- ಪ್ರತ್ಯಸ್ತ್ರಗಳು ಸಜ್ಜು - Vistara News

ಪ್ರಮುಖ ಸುದ್ದಿ

Assembly Session: ಇಂದಿನಿಂದ ವಿಧಾನ ಮಂಡಲ ಅಧಿವೇಶನ, ರಂಗೇರಲಿರುವ ಕೈ- ಕಮಲ ಕದನ; ಚಕಮಕಿಗೆ ಅಸ್ತ್ರ- ಪ್ರತ್ಯಸ್ತ್ರಗಳು ಸಜ್ಜು

Assembly Session: ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ಮುಡಾ (MUDA Scam), ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ (Valmiki Corporation Scam), ಬೆಲೆ ಏರಿಕೆ (Price Hike) ಸೇರಿದಂತೆ ವಿವಿಧ ವಿಚಾರಗಳನ್ನು ಪ್ರಸ್ತಾವಿಸಿ ಸರ್ಕಾರದ ವಿರುದ್ಧ ಮುಗಿಬೀಳಲಿದೆ. ಸಿದ್ದರಾಮಯ್ಯ (CM Siddaramaiah) ಸರ್ಕಾರ ಕೂಡ ನಿನ್ನೆ ಅಧಿಕಾರಿಗಳ ಸಭೆ ನಡೆಸಿ ಪ್ರತ್ಯುತ್ತರ ನೀಡಲು ಸೂಕ್ತ ಸಿದ್ಧತೆ ಮಾಡಿಕೊಂಡಿದೆ.

VISTARANEWS.COM


on

assembly session
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಧಾನ ಮಂಡಲದ ಉಭಯ ಸದನಗಳ ಕಲಾಪ (Assembly Session) ಸೋಮವಾರ (ಜುಲೈ 15) ಆರಂಭವಾಗಲಿದ್ದು, ಒಂಬತ್ತು ದಿನ ನಡೆಯಲಿದೆ. ಆಡಳಿತ ಪಕ್ಷದ ವಿರುದ್ಧ ಸಮರ ಸಾರಲು ಪ್ರತಿಪಕ್ಷಗಳು ಸಜ್ಜಾಗಿವೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ಮುಡಾ ಹಗರಣ (MUDA Scam), ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ (Valmiki Corporation Scam), ಬೆಲೆ ಏರಿಕೆ (Price Hike) ಸೇರಿದಂತೆ ವಿವಿಧ ವಿಚಾರಗಳನ್ನು ಪ್ರಸ್ತಾವಿಸಿ ಸರ್ಕಾರದ ವಿರುದ್ಧ ಮುಗಿಬೀಳಲಿದೆ. ಸಿದ್ದರಾಮಯ್ಯ (CM Siddaramaiah) ಸರ್ಕಾರ ಕೂಡ ನಿನ್ನೆ ಅಧಿಕಾರಿಗಳ ಸಭೆ ನಡೆಸಿ ಪ್ರತ್ಯುತ್ತರ ನೀಡಲು ಸೂಕ್ತ ಸಿದ್ಧತೆ ಮಾಡಿಕೊಂಡಿದೆ.

ಅಧಿಕಾರಿಗಳ ಸಭೆ

ಅಧಿವೇಶನಕ್ಕೆ ಪೂರ್ವಭಾವಿಯಾಗಿ ನಿನ್ನೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ವಿಧಾನ ಮಂಡಲ ಅಧಿವೇಶನ ಚರ್ಚೆಗೆ ಸಮರ್ಪಕ ಉತ್ತರ ನೀಡಲು ಅಧಿಕಾರಿಗಳಿಗೆ ಸೂಚಿಸಿದರು. ಅಧಿವೇಶನದಲ್ಲಿ ಚರ್ಚೆಯಾಗುವ ವಿಷಯಗಳಿಗೆ ಸಮರ್ಪಕ ಉತ್ತರ ನೀಡಲು ಸಿದ್ಧರಾಗಿರುವಂತೆ, ಅಧಿವೇಶನದಲ್ಲಿ ಖುದ್ದು ಹಾಜರಿದ್ದು ಸಚಿವರಿಗೆ ತಮ್ಮ ಇಲಾಖೆಗಳ ವಿಷಯಗಳ ಕುರಿತ ಮಾಹಿತಿ ಒದಗಿಸಬೇಕು ಎಂದು ಸಿಎಂ ನಿರ್ದೇಶನ ನೀಡಿದರು.

ಸಿಎಂ ನಿನ್ನೆ ಎಲ್ಲ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ವಿವಿಧ ಇಲಾಖೆಗಳಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇರುವ ವಿಷಯಗಳ ಕುರಿತು ಇಲಾಖಾ ಕಾರ್ಯದರ್ಶಿಗಳಿಂದ ಮುಖ್ಯಮಂತ್ರಿಗಳು ಸವಿಸ್ತಾರವಾಗಿ ಸಿಎಂ ಮಾಹಿತಿ ಪಡೆದರು. ಚರ್ಚೆಯ ಸಾಧ್ಯತೆ ಇರುವ ವಿಷಯಗಳ ಕುರಿತು ದತ್ತಾಂಶಗಳನ್ನು ಸಂಗ್ರಹಿಸಲು ಸಹ ಸೂಚನೆ ನೀಡಿದರು. ಎಲ್ಲ ಕಾರ್ಯದರ್ಶಿಗಳೂ, ಇಲಾಖಾ ಮುಖ್ಯಸ್ಥರು ಅಧಿವೇಶನದಲ್ಲಿ ಹಾಜರಿರಬೇಕು, ಸಚಿವರಿಗೆ ಸಮರ್ಪಕವಾಗಿ ಮಾಹಿತಿ ನೀಡಬೇಕು. ಆಯಾ ಇಲಾಖಾ ಸಚಿವರು ಚರ್ಚೆಯ ವಿಷಯಗಳಿಗೆ ಉತ್ತರಿಸಬೇಕು, ಅಗತ್ಯವಿದ್ದರೆ ನಾನು ಮಧ್ಯಪ್ರವೇಶಿಸುತ್ತೇನೆ ಎಂದು ತಿಳಿಸಿದರು. ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಹಾಗೂ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಸಮರ ಸಾರಲು ಸಜ್ಜಾಗಿರುವ ಮೈತ್ರಿಕೂಟ

ಸರ್ಕಾರದ ವಿರುದ್ಧ ಮುಗಿಬೀಳಲು ಸಜ್ಜಾಗಿರುವ ಬಿಜೆಪಿ, ಜೆಡಿಎಸ್‌ಗಳು ಮುಡಾ ಹಗರಣ, ವಾಲ್ಮೀಕಿ ನಿಗಮ ಹಗರಣಗಳನ್ನೇ ಪ್ರಮುಖ ಅಸ್ತ್ರವಾಗಿ ಹಿಡಿದು ಸಿಎಂ ಅವರನ್ನು ಟಾರ್ಗೆಟ್ ಮಾಡಲಿವೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ಹಗರಣ ಸರ್ಕಾರಕ್ಕೆ ದೊಡ್ಡ ಮಟ್ಟದ ಮುಜುಗರ ತಂದಿದೆ. ಇದು ಈ ಬಾರಿಯ ಸರ್ಕಾರದ ಮೊದಲ ಬಹು ಕೋಟಿ ಹಗರಣ. ಪ್ರಕರಣ ಸಂಬಂಧ ಮಾಜಿ ಸಚಿವ ನಾಗೇಂದ್ರ ಬಂಧನ ಆಗಿದ್ದು, ಇನ್ನೂ ಹಲವರ ಬಂಧನ ಮಾಡುವ ಸಾಧ್ಯತೆ ಇದೆ. ನಿಗಮದ ಅಧ್ಯಕ್ಷ, ಶಾಸಕ ದದ್ದಲ್ ರಾಜೀನಾಮೆ ನೀಡದಿರುವ ಬಗ್ಗೆ ಪ್ರತಿಪಕ್ಷ ಧ್ವನಿ ಎತ್ತಲಿದೆ.

ಇನ್ನು ಮುಡಾ ಹಗರಣ ನಾಲ್ಕುವರೆ, ಐದು ಸಾವಿರ ಕೋಟಿ ರೂಪಾಯಿಗಳ ಹಗರಣ. ಇಲ್ಲಿ ಸ್ವತಃ ಸಿಎಂ ಕುಟುಂಬದ ಮೇಲೆ ಭ್ರಷ್ಟಾಚಾರ ಆರೋಪವಿದೆ. ನಿಯಮ ಬಾಹಿರವಾಗಿ 14 ಬದಲಿ ನಿವೇಶನ ಪಡೆದಿರುವ, ಇತರೆ ರಾಜಕಾರಣಿಗಳ ವಿರುದ್ಧವೂ ಅಕ್ರಮ ಸೈಟ್ ಪಡೆದಿರುವ ಆರೋಪ ಇದೆ.

ಇನ್ನು SCP-TSP ಹಗರಣದಲ್ಲಿ ಸರ್ಕಾರದ ಗ್ಯಾರಂಟಿಗೆ ದಲಿತರ ಹಣ ಬಳಕೆ ಮಾಡಿದ ಆರೋಪವಿದೆ. ಅಧಿಕಾರಕ್ಕೆ ಬಂದ ಮೂರೇ ತಿಂಗಳಲ್ಲಿ SC, STಗಳಿಗೆ ಮೀಸಲಿಟ್ಟ ಹಣವನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡಿಕೊಳ್ಳಲಾಗಿದೆ. ಶಕ್ತಿ ಯೋಜನೆಗೆ ಮೊದಲು 11 ಸಾವಿರ ಕೋಟಿ ಹಣ ದುರ್ಬಳಕೆ, ಎರಡನೇ ಬಾರಿ ಶಕ್ತಿ ಯೋಜನೆಗೆ 14 ಸಾವಿರ ಕೋಟಿ ಹಣ ಬಳಕೆ ಮಾಡಲಾಗಿದೆ ಎನ್ನಲಾಗಿದೆ.

ಎರಡು ಸಾವಿರ ಕೋಟಿ‌ ರೂಪಾಯಿ ಮೊತ್ತದ ಅಪೆಕ್ಸ್ ಬ್ಯಾಂಕ್ ಹಗರಣದಲ್ಲಿ, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿದ್ದಾಗ ಹಾಲಿ ಸಚಿವ ರಾಜಣ್ಣ ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಆರೋಪ ಬಂದಿದೆ. ನಿಯಮಬಾಹಿರವಾಗಿ ಸಾಲ ನೀಡಿರುವ ಆರೋಪ, ಬ್ಯಾಂಕ್‌ನಲ್ಲಿ ಠೇವಣಿದಾರ ಅಲ್ಲದವರಿಗೆ, ಸಕ್ಕರೆ ಕಾರ್ಖಾನೆ, ಇತರೆ ಸಂಸ್ಥೆಗಳಿಗೆ ಸಾಲ ನೀಡಿರುವ ಆರೋಪವಿದ್ದು, ಸಚಿವ ಕೆ.ಎನ್ ರಾಜಣ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸುವ ಸಂಭವ ಇದೆ.

ಸರ್ಕಾರದ ಪ್ರತ್ಯುತ್ತರವೇನು?

ಮುಡಾ ಕೇಸ್ ಪ್ರತಿಯಾಗಿ ಸೂಡಾ ಅಕ್ರಮ ಪ್ರಸ್ತಾಪ ಮಾಡಲು ಕಾಂಗ್ರೆಸ್‌ ಪ್ಲಾನ್ ಮಾಡಿಕೊಂಡಿದೆ. ಶಿವಮೊಗ್ಗ ಪ್ರಾಧಿಕಾರದಲ್ಲೂ ಸೈಟ್ ಹಂಚಿಕೆ ಗೋಲ್ ಮಾಲ್ ನಡೆದಿದ್ದು, ಬಿಜೆಪಿ ನಾಯಕರು ಹಾಗೂ ಅವರ ಕುಟುಂಬಸ್ಥರು ಶಾಮೀಲು ಆಗಿರುವ ಬಗ್ಗೆ ಮಾಹಿತಿಯಿದೆ ಎಂದು ಮಾಹಿತಿ ಸಂಗ್ರಹಿಸಲಾಗಿದ್ದು, ಈ‌ ಕುರಿತು ಸದನದಲ್ಲಿ ದಾಖಲೆ ಬಿಡುಗಡೆ ಮಾಡಲು ಚಿಂತಿಸಲಾಗಿದೆ.

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಕಾಲದಲ್ಲಿ ಮುಡಾ ಸೈಟ್ ಹಂಚಿಕೆ ಅಕ್ರಮ ಆಗಿದೆ. 48 ನಿವೇಶನ ಹಂಚಿಕೆಯ ವೇಳೆಯಲ್ಲಿ ಮಾಜಿ ಸಿಎಂ ಹೆಚ್ಡಿಕೆಗೂ 60 ಸಾವಿರ ಅಡಿ ನಿವೇಶನ ನೀಡಲಾಗಿದೆ‌. ಈ ಪ್ರಕರಣವನ್ನ ಸ್ವತಃ ಯಡಿಯೂರಪ್ಪ ಅವರೇ ಪರಿಷತ್ ನಲ್ಲಿ ಪ್ರಸ್ತಾಪ ಮಾಡಿದ್ದರು. ಜೊತೆಗೆ ಅಂದಿನ ಸಭಾಪತಿಗೆ ದಾಖಲೆ ಸಹ ನೀಡಿದ್ದರು ಎಂದು ಪ್ರಸ್ತಾಪ ಮಾಡಲು ಕೈ ಪಡೆ ತಯಾರಿ ನಡೆಸಿದೆ.

ವಾಲ್ಮೀಕಿ ‌ನಿಗಮದ ಅಕ್ರಮದ ಪ್ರತಿಯಾಗಿ ದೇವರಾಜ ಅರಸು ಟ್ರಕ್ ಟರ್ಮಿನಲ್ ಅಕ್ರಮ ಪ್ರಸ್ತಾಪ ಮಾಡಲಾಗುತ್ತಿದೆ. ಬಿಜೆಪಿ ಕಾಲದಲ್ಲಿ ಟ್ರಕ್ ಟರ್ಮಿನಲ್ ‌ನಿಗಮದಲ್ಲಿ‌ 200 ಕೋಟಿಗೂ ಹೆಚ್ಚು ಭ್ರಷ್ಟಾಚಾರ ನಡೆದಿದೆ. ಇದಕ್ಕೆ ಪೂರಕವಾಗಿ ವೀರಯ್ಯ ಬಂಧನವಾಗಿದೆ. ವೀರಯ್ಯ ಬಂಧನ ಪ್ರಸ್ತಾಪ ಮಾಡುವ ಮೂಲಕ ಬಿಜೆಪಿಗೆ ತಿರುಗೇಟು ಕೊಡುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌ ಇದೆ. ಜೊತೆಗೆ ಈ ಹಗರಣದಲ್ಲಿ ಮಾಜಿ ಸಿಎಂ ಬೊಮ್ಮಾಯಿ, ಮಾಜಿ ಸಚಿವ ಶ್ರೀರಾಮಲು ಹೆಸರು ಉಲ್ಲೇಖ ಮಾಡುವ ಸಾಧ್ಯತೆಯಿದೆ.

ಇತರ ಆರೋಪಗಳು

ಇನ್ನು ಸರ್ಕಾರದಲ್ಲಿ ನಿರಂತರ ವರ್ಗಾವಣೆ ಮಾಡ್ತಿರುವ ಆರೋಪಗಳಿದ್ದು, ಪದೇ ಪದೆ ವರ್ಗಾವಣೆ ಮಾಡ್ತಿರುವ ಆರೋಪವಿದೆ. ಸ್ವಪಕ್ಷೀಯರೇ ಇದರ ವಿರುದ್ಧ ಧ್ವನಿ ಎತ್ತಿರೋದು ಸರ್ಕಾರಕ್ಕೆ ಮುಜುಗರ ತಂದಿದೆ. ಹೈನುಗಾರಿಕೆ ಮಾಡುವ ರೈತರಿಗೆ ಕಳೆದ ವರ್ಷದಿಂದ ಬೆಂಬಲ ಬೆಲೆ ತಲುಪಿಲ್ಲ. ಹಾಲಿನ ದರ ಹೆಚ್ಚಳ ಮಾಡಿ ಗ್ರಾಹಕರಿಂದ ಹಣ ಪಡೆಯುತ್ತಿರುವ ಸರ್ಕಾರ ರೈತರಿಗೆ ಕಳೆದ ವರ್ಷದಿಂದ ಒಂದು ಸಾವಿರ ಕೋಟಿ ಪ್ರೋತ್ಸಾಹ ದನ ಬಾಕಿ ಉಳಿಸಿಕೊಂಡಿದೆ. ಗ್ಯಾರಂಟಿ ಯೋಜನೆ ಸರಿದೂಗಿಸಲು ಹಲವು ರೀತಿ ದರ ಏರಿಕೆ ಮಾಡಿದೆ. ಪೆಟ್ರೋಲ್, ಡೀಸೆಲ್ ಸೆಸ್ ದರ ಹೆಚ್ಚಳ, ಪ್ರಾಪರ್ಟಿ, ಗೈಡ್ ಲೈನ್ಸ್ ವ್ಯಾಲ್ಯು, ಅಬಕಾರಿ ಸುಂಕ ಹೆಚ್ಚಳ, ಇದರಿಂದ ಇತರೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಾರ್ವಜನಿಕರ ಆಕ್ರೋಶವನ್ನು ಪ್ರತಿಪಕ್ಷಗಳು ಪ್ರಸ್ತಾವಿಸಲಿವೆ.

ಇದನ್ನೂ ಓದಿ: MUDA Scam: ಮುಡಾ ಕೇಸ್ ತನಿಖೆಗೆ ಏಕಸದಸ್ಯ ಆಯೋಗ ರಚಿಸಿದ ರಾಜ್ಯ ಸರ್ಕಾರ; ಅಧಿವೇಶನಕ್ಕೂ ಮುನ್ನವೇ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಯತ್ನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

‌2nd PUC Exam Result: ದ್ವಿತೀಯ ಪಿಯುಸಿ ಪರೀಕ್ಷೆ- 3 ಫಲಿತಾಂಶ ಪ್ರಕಟ, 23.73% ವಿದ್ಯಾರ್ಥಿಗಳು ಪಾಸ್

‌2nd PUC Exam Result: ಜೂನ್/ಜುಲೈ 2024ರ ದ್ವಿತೀಯ ಪಿಯುಸಿ ಪರೀಕ್ಷೆ- 3 ಅನ್ನು ದಿನಾಂಕ ಜೂನ್‌ 24ರಿಂದ ಜುಲೈ 5ರವರೆಗೆ ಒಟ್ಟು 248 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ಒಟ್ಟು 12 ಮೌಲ್ಯಮಾಪನ ಶಿಬಿರಗಳಲ್ಲಿ ದಿನಾಂಕ ಜುಲೈ 9ರಿಂದ 14ರವರೆಗೆ 2293 ಮೌಲ್ಯಮಾಪಕರಿಂದ ನಡೆಸಲಾಯಿತು.

VISTARANEWS.COM


on

2nd Puc Result
Koo

ಬೆಂಗಳೂರು: 2024ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ- 3 ಫಲಿತಾಂಶಗಳನ್ನು (2nd PUC Exam Result) ಪ್ರಕಟಿಸಲಾಗಿದೆ. 23.73% ವಿದ್ಯಾರ್ಥಿಗಳು (PUC Students) ಉತ್ತೀರ್ಣರಾಗಿದ್ದಾರೆ. ಶಾಲಾ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಳಿ ಫಲಿತಾಂಶದ (PUC Result) ಅಂಕಿ ಅಂಶ ಬಿಡುಗಡೆ ಮಾಡಿದ್ದು, ಪರೀಕ್ಷೆಗೆ ಹಾಜರಾದ 75,466 ವಿದ್ಯಾರ್ಥಿಗಳಲ್ಲಿ 17,911 ಮಂದಿ ಪಾಸ್ (Pass) ಆಗಿದ್ದಾರೆ.

ಜೂನ್/ಜುಲೈ 2024ರ ದ್ವಿತೀಯ ಪಿಯುಸಿ ಪರೀಕ್ಷೆ- 3 ಅನ್ನು ದಿನಾಂಕ ಜೂನ್‌ 24ರಿಂದ ಜುಲೈ 5ರವರೆಗೆ ಒಟ್ಟು 248 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ಒಟ್ಟು 12 ಮೌಲ್ಯಮಾಪನ ಶಿಬಿರಗಳಲ್ಲಿ ದಿನಾಂಕ ಜುಲೈ 9ರಿಂದ 14ರವರೆಗೆ 2293 ಮೌಲ್ಯಮಾಪಕರಿಂದ ನಡೆಸಲಾಯಿತು.

ಫಲಿತಾಂಶವನ್ನು ಇಂದು ಮಧ್ಯಾಹ್ನ 3:00 ಗಂಟೆಗೆ ಕಾಲೇಜುಗಳಲ್ಲಿ ಪ್ರಕಟಿಸಲಾಗುತ್ತಿದೆ. ಪರೀಕ್ಷೆ-3ರ ಫಲಿತಾಂಶವನ್ನು https://karresults.nic.in ವೆಬ್‌ಸೈಟ್‌ನಲ್ಲಿಯೂ ಪ್ರಚುರಪಡಿಸಲಾಗಿದೆ. ಫಲಿತಾಂಶವನ್ನು ಉತ್ತಮ ಪಡಿಸಿಕೊಳ್ಳಲು ಪರೀಕ್ಷೆ ಬರೆದ ವಿದ್ಯಾರ್ಥಿಗಳು ಪರೀಕ್ಷೆ 1, ಪರೀಕ್ಷೆ 2 ಮತ್ತು ಪರೀಕ್ಷೆ- 3ರಲ್ಲಿ ವಿಷಯವಾರು ಗಳಿಸಿದ ಅತಿಹೆಚ್ಚು ಅಂಕಗಳನ್ನು ಪರಿಗಣಿಸಿ ಅಂತಿಮ ಫಲಿತಾಂಶವನ್ನು https://kseab.karnataka.gov.in ಅಂತರ್ಜಾಲದಲ್ಲಿ ನಂತರ ಪ್ರಕಟಿಸಲಾಗುವುದು ಎಂದು ಮಂಡಳಿ ತಿಳಿಸಿದೆ.

ಪರೀಕ್ಷೆಗೆ ನೋಂದಾಯಿಸಿದವರ ಸಂಖ್ಯೆ 76,005, ಹಾಜರಾದವರು 75,466, ಉತ್ತೀರ್ಣರಾದವರು 17,911 ಹಾಗೂ ಶೇಕಡವಾರು ಫಲಿತಾಂಶ 23.73. ಉತ್ತೀರ್ಣರಾದವರಲ್ಲಿ ಬಾಲಕಿಯರ ಪ್ರಮಾಣ 26.65% ಹಾಗೂ ಬಾಲಕರು 21.65%. ಕಲಾ ವಿಭಾಗದಲ್ಲಿ 21.71%, ವಾಣಿಜ್ಯದಲ್ಲಿ 23.58% ಹಾಗೂ ವಿಜ್ಞಾನದಲ್ಲಿ 27.06% ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ.

ಉತ್ತರ ಪತ್ರಿಕೆಯ ಸ್ಕ್ಯಾನಿಂಗ್‌ ಪ್ರತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 17ರಿಂದ 21
ಸ್ಕ್ಯಾನಿಂಗ್‌ ಪ್ರತಿಯನ್ನು ಅಂತರ್ಜಾಲದಲ್ಲಿ ಡೌನ್‌ಲೋಡ್‌ ಮಾಡಿಕೊಳ್ಳುವ ದಿನಾಂಕ: ಜುಲೈ 18ರಿಂದ 22
ಮರುಮೌಲ್ಯಮಾಪನ ಹಾಗೂ ಮರುಎಣಿಕೆಗೆ ಅರ್ಜಿ ಸಲ್ಲಿಸಲು ಜುಲೈ 18ರಿಂದ 24. ಸ್ಕ್ಯಾನಿಂಗ್‌ ಪ್ರತಿ ತೆಗೆದುಕೊಂಡವರಿಗೆ ಮಾತ್ರ ಅವಕಾಶ.
ಸ್ಕ್ಯಾನಿಂಗ್‌ ಪ್ರತಿ ಪಡೆಯಲು ಪ್ರತಿ ಪೇಪರ್‌ಗೆ ಶುಲ್ಕ- 530 ರೂ.
ಮರುಮೌಲ್ಯಮಾಪನ ಶುಲ್ಕ ಪ್ರತಿ ವಿಷಯಕ್ಕೆ- 1670 ರೂ.

ಈ ಬಾರಿ ಆಯ್ಕೆಯಾದ 105 ಸಂಸದರು ಪಿಯುಸಿ ದಾಟಿಲ್ಲ!

ಹೊಸದಿಲ್ಲಿ: ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಗೆದ್ದು ಸಂಸತ್ತು ಪ್ರವೇಶಿಸಿರುವ ಶೇ. 19ರಷ್ಟು ನೂತನ ಸಂಸದರ (MPs) ಶೈಕ್ಷಣಿಕ ಅರ್ಹತೆ (education qualification) 12 ನೇ ತರಗತಿಗಿಂತ ಕೆಳಗಿದೆ. ಶೇ. 77ರಷ್ಟು ಅಭ್ಯರ್ಥಿಗಳು ಪದವಿ ಮತ್ತು ಅದಕ್ಕಿಂತ ಹೆಚ್ಚಿನ ಶಿಕ್ಷಣ ಅರ್ಹತೆಯನ್ನು ಪಡೆದಿದ್ದಾರೆ ಎಂದು ಅಸೋಸಿಯೇಷನ್ ​​ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ವರದಿ ಹೇಳಿದೆ.

ವಿಜೇತ ಅಭ್ಯರ್ಥಿಗಳಲ್ಲಿ ಸುಮಾರು 105 ಮಂದಿ ತಮ್ಮ ಶೈಕ್ಷಣಿಕ ಅರ್ಹತೆಯನ್ನು 5ನೇ ತರಗತಿ ಮತ್ತು 12 ನೇ ತರಗತಿಯ ನಡುವೆ ಎಂದು ಘೋಷಿಸಿದ್ದಾರೆ. 420 ಅಭ್ಯರ್ಥಿಗಳು ಪದವಿ ಅಥವಾ ಅದಕ್ಕಿಂತ ಹೆಚ್ಚಿನ ಪದವಿಯನ್ನು ಹೊಂದಿರುವುದಾಗಿ ಹೇಳಿಕೊಂಡಿದ್ದಾರೆ. 17 ವಿಜೇತ ಅಭ್ಯರ್ಥಿಗಳು ಡಿಪ್ಲೊಮಾ ಮಾಡಿದ್ದು, ಒಬ್ಬ ವಿಜೇತರು “ಕೇವಲ ಸಾಕ್ಷರರು” ಎಂದು ಹೇಳಿಕೊಂಡಿದ್ದಾರೆ. ಚುನಾವಣಾ ಕಣದಲ್ಲಿ ಇಳಿಯುವಾಗ ತಾವು ಅನಕ್ಷರಸ್ಥರೆಂದು ಘೋಷಿಸಿಕೊಂಡ ಎಲ್ಲಾ 121 ಅಭ್ಯರ್ಥಿಗಳು ಸೋಲು ಅನುಭವಿಸಿದ್ದಾರೆ.

ಯಾರು ಎಷ್ಟು?

5ನೇ ತರಗತಿಯವರೆಗೆ ಓದಿರುವ ಇಬ್ಬರು ವಿಜೇತ ಅಭ್ಯರ್ಥಿಗಳಿದ್ದರೆ, ನಾಲ್ವರು 8 ನೇ ತರಗತಿಯವರೆಗೆ ಓದಿದ್ದೇವೆ ಎಂದು ಹೇಳಿದ್ದಾರೆ. 34 ಅಭ್ಯರ್ಥಿಗಳು ತಾವು 10 ನೇ ತರಗತಿಯವರೆಗೆ ಮತ್ತು 65 ಅಭ್ಯರ್ಥಿಗಳು 12ನೇ ತರಗತಿಯವರೆಗೆ ಓದಿರುವುದಾಗಿ ಘೋಷಿಸಿದ್ದಾರೆ.

ಕೃಷಿಕರು

ಪಿ ಆರ್ ಎಸ್ ಶಾಸಕಾಂಗ ಸಂಶೋಧನೆ ವಿಶ್ಲೇಷಣೆಯ ಪ್ರಕಾರ 543 ಸಂಸದರಲ್ಲಿ ಛತ್ತೀಸ್‌ಗಢದ ಶೇ. 91 ಸಂಸದರು, ಮಧ್ಯಪ್ರದೇಶದಿಂದ ಶೇ. 72 ಮತ್ತು ಗುಜರಾತ್‌ನ ಶೇ. 65 ಸಂಸದರು ಕೃಷಿಯನ್ನು ತಮ್ಮ ವೃತ್ತಿ ಎಂದು ಘೋಷಿಸಿದ್ದಾರೆ.
18ನೇ ಲೋಕಸಭೆಗೆ ಚುನಾಯಿತರಾದ ಸಂಸದರಲ್ಲಿ ಸುಮಾರು ಶೇ. 7 ರಷ್ಟು ಮಂದಿ ವಕೀಲರು ಮತ್ತು ಶೇ. 4ರಷ್ಟು ಮಂದಿ ವೈದ್ಯಕೀಯ ವೃತ್ತಿಯವರು ಇದ್ದಾರೆ.

ಇದನ್ನೂ ಓದಿ: UGCET 2024: ಅರ್ಹತಾ ಅಂಕ ಶೇ 45ಕ್ಕೆ ಇಳಿಕೆ ; ಆರ್ಕಿಟೆಕ್ಚರ್ ಕೋರ್ಸ್‌ಗೆ ಅರ್ಜಿ ಸಲ್ಲಿಸಲು ಜು. 13ರವರೆಗೆ ಅವಕಾಶ

Continue Reading

Latest

Stuck in Lift: ಫ್ಯಾನಿಲ್ಲ, ಲೈಟಿಲ್ಲ, ಆಹಾರವಿಲ್ಲ; 2 ದಿನ ಲಿಫ್ಟ್‌ನಲ್ಲಿ ಸಿಲುಕಿದ್ದವನ ಸ್ಥಿತಿ ಹೇಗಿರಬಹುದು ಊಹಿಸಿ!

Stuck in Lift: ಸ್ಥಳೀಯ ಸಿಪಿಐ ನಾಯಕ ಮತ್ತು ಸ್ಥಳೀಯ ಶಾಸಕರ ಹಾಸ್ಟೆಲ್‌ನ ಸಿಬ್ಬಂದಿ ರವೀಂದ್ರನ್ ಅವರು ಬೆನ್ನುನೋವಿನ ಚಿಕಿತ್ಸೆಗಾಗಿ ತಿರುವನಂತಪುರಂನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಹೋಗಿದ್ದರು. ಎಕ್ಸ್-ರೇ ನಂತರ ಅವರು ಲಿಫ್ಟ್ ಮೂಲಕ ವೈದ್ಯರ ಬಳಿಗೆ ಹೋಗುತ್ತಿದ್ದಾಗ ಅದು ಸಡನ್ ಆಗಿ ನಿಂತಿದೆ. ಆಗ ಅವರು ತಮ್ಮ ಫೋನ್ ಬಳಸಿ ಲಿಫ್ಟ್ ಒಳಗೆ ಬರೆದ ಹಲವಾರು (ಸಹಾಯವಾಣಿ) ಸಂಖ್ಯೆಗಳಿಗೆ ಕಾಲ್ ಮಾಡಿದರೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. 42 ಗಂಟೆಗಳ ಕಾಲ ಲಿಫ್ಟ್ ಒಳಗೆ ಸಿಲುಕಿಕೊಂಡಿದ್ದರು. ಅವರ ಕರಾಳ ಅನುಭವ ಇಲ್ಲಿದೆ ಓದಿ.

VISTARANEWS.COM


on

Stuck in Lift
Koo

ವ್ಯಕ್ತಿ ಲಿಫ್ಟ್‌ನೊಳಗೆ ಸಿಲುಕಿಕೊಂಡು ಒದ್ದಾಡುವಂತಹ ದೃಶ್ಯಗಳನ್ನು ನಾವು ಹೆಚ್ಚು ಸಿನಿಮಾಗಳಲ್ಲಿ ನೋಡಿರುತ್ತೇವೆ. ಆದರೆ ಆಸ್ಪತ್ರೆಯೊಂದರಲ್ಲಿ 59 ವರ್ಷದ ವ್ಯಕ್ತಿಯೊಬ್ಬರು ಭರ್ತಿ 42 ಗಂಟೆಗಳ ಕಾಲ ಲಿಫ್ಟ್ (Stuck in Lift) ಒಳಗೆ ಸಿಲುಕಿಕೊಂಡಿದ್ದು, ಸುಮಾರು ಎರಡು ದಿನಗಳ ಕಾಲ ಅವರು ಲಿಫ್ಟ್‌ನೊಳಗೆ ಪರದಾಡಿದ ರೀತಿ ಕೇಳಿದರೆ ಯಾರಿಗಾದರೂ ಗಾಬರಿಯಾಗುವುದು ಖಂಡಿತ.

ಸ್ಥಳೀಯ ಸಿಪಿಐ ನಾಯಕ ಮತ್ತು ಸ್ಥಳೀಯ ಶಾಸಕರ ಹಾಸ್ಟೆಲ್‍ನ ಸಿಬ್ಬಂದಿ ರವೀಂದ್ರನ್ ಅವರು ಬೆನ್ನುನೋವಿನ ಚಿಕಿತ್ಸೆಗಾಗಿ ತಿರುವನಂತಪುರಂನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿದರು. ಎಕ್ಸ್-ರೇ ನಂತರ, ಅವರು ಲಿಫ್ಟ್‌ ಮೂಲಕ ವೈದ್ಯರ ಬಳಿಗೆ ಹೋಗುತ್ತಿದ್ದಾಗ ಅದು ಸಡನ್ ಆಗಿ ನಿಂತಿದೆ. ಆಗ ಅವರು ತಮ್ಮ ಫೋನ್ ಬಳಸಿ ಲಿಫ್ಟ್ ಒಳಗೆ ಬರೆದ ಹಲವಾರು (ಸಹಾಯವಾಣಿ) ಸಂಖ್ಯೆಗಳಿಗೆ ಕಾಲ್ ಮಾಡಿದರೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ನಂತರ ಅವರ ಫೋನ್ ಕೆಳಗೆ ಬಿದ್ದು ಹಾಳಾಗಿದೆ. ನಂತರ ಅವರು ಲಿಫ್ಟ್‌ನ ಒಂದು ಮೂಲೆಯಲ್ಲಿ ಕುಳಿತು ಯಾರಾದರೂ ಬರುತ್ತಾರೆ ಎಂದು ಕಾಯತೊಡಗಿದ್ದಾರೆ.

ಅನಿವಾರ್ಯವಾದಾಗ ಲಿಫ್ಟ್‌ನ ಒಂದು ಮೂಲೆಯಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾರೆ. ಅವರಿಗೆ ಬಾಯಾರಿಕೆ, ಹಸಿವು ಆದ ಕಾರಣ ನಿದ್ರೆ ಕೂಡ ಬರಲಿಲ್ಲ. ಅವರು ನಿಯಮಿತವಾಗಿ ಆಲರಂ ಬೆಲ್ ಅನ್ನು ಒತ್ತುತ್ತಲೇ ಇದ್ದರಂತೆ. ಲಿಫ್ಟ್ ಚೇಂಬರ್‌ನಲ್ಲಿ ಫ್ಯಾನ್ ಮತ್ತು ಬೆಳಕು ಎರಡೂ ಇರಲಿಲ್ಲ. ಸ್ವಲ್ಪ ಗಾಳಿ ಒಳಗೆ ಬರುತ್ತಿದ್ದರಿಂದ ಅವರ ಜೀವ ಉಳಿದಿದೆ. ಕೊನೆಗೆ ಅವರು ತಮ್ಮ ನೈತಿಕ ಸ್ಥೈರ್ಯವನ್ನು ಉಳಿಸಿಕೊಳ್ಳಲು, ತಮ್ಮ ಹೆಂಡತಿ ಬರೆದು ಪ್ರಕಟಿಸಿದ ಕವಿತೆಗಳನ್ನು ಮೆಲುಕು ಹಾಕಿದರಂತೆ. ಎರಡು ದಿನ ಲಿಫ್ಟ್‌ನಲ್ಲಿ ಸಿಕ್ಕಿ ಬಿದ್ದು ಹೊರ ಬಂದಿರುವ ರವೀಂದ್ರನ್ ಆ ಸಂಕಷ್ಟದ ಕ್ಷಣಗಳನ್ನು ಮೆಲುಕು ಹಾಕಿದ್ದಾರೆ.

ಇತ್ತ ಅವರ ಪತ್ನಿ ಮತ್ತು ಮಕ್ಕಳು ಅವರು ಮನೆಗೆ ಬರದಿದ್ದರೂ ತಲೆಕೆಡಿಸಿಕೊಂಡಿರಲಿಲ್ಲ. ಯಾಕೆಂದರೆ ಅವರು ಆಗಾಗ ಕೆಲಸದ ನಿಮಿತ್ತ ಮನೆಗೇ ಬರುತ್ತಿರಲಿಲ್ಲವಂತೆ. ಆದರೆ ಭಾನುವಾರ ಅವರು ಮನೆಗೆ ಹಿಂತಿರುಗದಿದ್ದಾಗ ಮತ್ತು ಅವರ ಪೋನ್‌ಗೆ ಕರೆ ಮಾಡಿದರೂ ಅದು ಸಿಗದಿದ್ದಾಗ ಅವರಿಗೆ ಚಿಂತೆ ಶುರುವಾಗಿದೆ. ಹಾಗಾಗಿ ಶಾಸಕರ ಹಾಸ್ಟೆಲ್ ಮತ್ತು ಸಿಪಿಐ ಕಚೇರಿಗೆ ಕರೆ ಮಾಡಿದಾಗ ರವೀಂದ್ರನ್ ಶನಿವಾರ ಮಧ್ಯಾಹ್ನದಿಂದ ಕಾಣೆಯಾಗಿರುವುದು ತಿಳಿದುಬಂದಿದೆ.

ಇದನ್ನೂ ಓದಿ:  ಕಾಮುಕರ ಹಾವಳಿ ಮಿತಿ‌ ಮೀರಿದೆ; ಬೀದಿ ನಾಯಿಯನ್ನೂ ಇವರು ಬಿಡುತ್ತಿಲ್ಲ! ಆಘಾತಕಾರಿ ವಿಡಿಯೊ

Stuck in Lift

ಭಾನುವಾರ ಮಧ್ಯಾಹ್ನದ ವೇಳೆಗೆ, ಅವರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ದೂರು ದಾಖಲಿಸಿದ್ದರು ಮತ್ತು ಹಾಗಾಗಿ ಅವರನ್ನು ಪೊಲೀಸರು ಹುಡುಕಾಡಿದ್ದಾರೆ. ಕೊನೆಯಲ್ಲಿ ಸೋಮವಾರ ಬೆಳಗ್ಗೆ ಲಿಫ್ಟ್ ಆಪರೇಟರ್ ನಿಧಾನವಾಗಿ ಕರ್ತವ್ಯಕ್ಕೆ ಹಾಜರಾದಾಗ ರವೀಂದ್ರನ್ ಲಿಫ್ಟ್‌ನಲ್ಲಿ ಸಿಕ್ಕಿ ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ. ತಕ್ಷಣ ಅವರನ್ನು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ತನಿಖೆಗೆ ಆದೇಶಿಸಿದ್ದು, ಲಿಫ್ಟ್ ಆಪರೇಟರ್‌ಗಳು ಸೇರಿದಂತೆ ಮೂವರನ್ನು ಅಮಾನತುಗೊಳಿಸಲಾಗಿದೆ.

Continue Reading

ಕರ್ನಾಟಕ

7th Pay Commission: ಸರ್ಕಾರಿ ನೌಕರರ ವೇತನ, ಪಿಂಚಣಿ 58% ಹೆಚ್ಚಳ; ಸಂಪೂರ್ಣ ಲೆಕ್ಕ ಕೊಟ್ಟ ಸಿದ್ದರಾಮಯ್ಯ

7th Pay Commission: ಕರ್ನಾಟಕದಲ್ಲಿ ರಾಜ್ಯ 7ನೇ ವೇತನ ಆಯೋಗದ ಶಿಫಾರಸುಗಳನ್ನು ಆಗಸ್ಟ್‌ 1ರಿಂದಲೇ ಜಾರಿಗೆ ತರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಇದರಿಂದಾಗಿ ರಾಜ್ಯದ 5 ಲಕ್ಷ ಸರ್ಕಾರಿ ನೌಕರರು ಹಾಗೂ 5 ಲಕ್ಷ ನಿವೃತ್ತ ನೌಕರರಿಗೆ ಭಾರಿ ಅನುಕೂಲವಾಗಲಿದೆ. ಇದರ ಬೆನ್ನಲ್ಲೇ ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯೋಗದ ಶಿಫಾರಸುಗಳ ಜಾರಿ ಕುರಿತು ಮಾಹಿತಿ ನೀಡಿದ್ದಾರೆ.

VISTARANEWS.COM


on

7th Pay Commission
Koo

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ (Karnataka State Government Employees Association) ಬಹುದಿನಗಳ ಬೇಡಿಕೆಯನ್ನು ರಾಜ್ಯ ಸರ್ಕಾರವು (Karnataka Government) ಈಡೇರಿಸಿದೆ. ಆಗಸ್ಟ್‌ 1ರಿಂದಲೇ 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಇದರ ಬೆನ್ನಲ್ಲೇ, 7ನೇ ವೇತನ ಆಯೋಗದ ಜಾರಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದು, “ನೌಕರರ ವೇತನ ಪರಿಷ್ಕರಣೆಯಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕ 20,208 ಕೋಟಿ ರೂ. ಹೆಚ್ಚುವರಿ ವೆಚ್ಚ ಉಂಟಾಗುತ್ತದೆ. ಈ ಹೆಚ್ಚುವರಿ ವೆಚ್ಚಕ್ಕೆ 2024-25ರ ಆಯವ್ಯಯದಲ್ಲಿ ಅಗತ್ಯ ಅನುದಾನ ಮೀಸಲಿಡಲಾಗಿದೆ” ಎಂದು ತಿಳಿಸಿದರು. ವಿಧಾನಸಭೆ ಅಧಿವೇಶನದಲ್ಲಿ ಸಿದ್ದರಾಮಯ್ಯ ಅವರು 7ನೇ ವೇತನ ಆಯೋಗದ ಜಾರಿ ಕುರಿತು ಮಾಹಿತಿ ನೀಡಿದ್ದು, ಅದರ ವಿವರ ಹೀಗಿದೆ.

“ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆ, ಪಿಂಚಣಿ ಪರಿಷ್ಕರಣೆಯ ಬೇಡಿಕೆಗಳನ್ನು ಪರಿಷ್ಕರಿಸಲು ದಿನಾಂಕ: 19.11.2022ರಂದು 7ನೇ ರಾಜ್ಯ ವೇತನ ಆಯೋಗವನ್ನು ರಚಿಸಲಾಗಿತ್ತು. ಅದರಂತೆ, ವೇತನ ಆಯೋಗವು 24.03.2024ರಂದು ವರದಿಯನ್ನು ಸಲ್ಲಿಸಿತ್ತು. 7ನೇ ರಾಜ್ಯ ವೇತನ ಆಯೋಗದ ಶಿಫಾರಸಿನಂತೆ ಸರ್ಕಾರಿ ನೌಕರರ ವೇತನ, ವೇತನ ಸಂಬಂಧಿತ ಭತ್ಯೆ, ಪಿಂಚಣಿಯನ್ನು ದಿನಾಂಕ: 01.07.2022ರಿಂದ ಅನ್ವಯವಾಗುವಂತೆ ಪರಿಷ್ಕರಿಸಿ ದಿನಾಂಕ: 01.08.2024ರಿಂದ ಅನುಷ್ಠಾನಗೊಳಿಸಲು ದಿನಾಂಕ: 15.07.2024ರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ” ಎಂದು ತಿಳಿಸಿದ್ದಾರೆ.

ಸಿಎಂ ನೀಡಿದ ಮಾಹಿತಿಯ ಆಡಿಯೊ

ಅದರಂತೆ, “01.07.2022ಕ್ಕೆ ನೌಕರರ ಮೂಲ ವೇತನಕ್ಕೆ ಶೇಕಡ 31ರಷ್ಟು ತುಟ್ಟಿ ಭತ್ಯೆ ಮತ್ತು ಶೇ. 27.50 ರಷ್ಟು ಫಿಟ್‌ಮೆಂಟ್ ಸೇರಿಸಿ ವೇತನ ಮತ್ತು ಪಿಂಚಣಿಯನ್ನು ಪರಿಷ್ಕರಿಸಲಾಗುವುದು. ಇದರಿಂದ ನೌಕರರ ಮೂಲ ವೇತನ ಮತ್ತು ಪಿಂಚಣಿಯಲ್ಲಿ ಶೇ.58.50 ರಷ್ಟು ಹೆಚ್ಚಳವಾಗುತ್ತದೆ. ಮನೆಬಾಡಿಗೆ ಭತ್ಯೆಯಲ್ಲಿ ಶೇ.32ರಷ್ಟು ಹೆಚ್ಚಳವಾಗುತ್ತದೆ. ನೌಕರರ ಕನಿಷ್ಟ ಮೂಲವೇತನವು 17 ಸಾವಿರ ರೂ.ನಿಂದ 27 ಸಾವಿರ ರೂ.ಗೆ, ಗರಿಷ್ಠ ವೇತನವು 1,50,600 ರೂ.ನಿಂದ 2,41,200 ರೂ.ಗೆ ಪರಿಷ್ಕರಣೆಯಾಗುತ್ತದೆ” ಎಂದು ವಿವರಿಸಿದರು.

“ನೌಕರರ ಕನಿಷ್ಠ ಪಿಂಚಣಿಯು 8,500 ರೂ.ನಿಂದ 13,500 ರೂ.ಗೆ ಮತ್ತು ಗರಿಷ್ಠ ಪಿಂಚಣಿಯು 75,300 ರೂ.ನಿಂದ 1,20,600 ರೂ.ಗೆ ಪರಿಷ್ಕರಣೆಗೊಳ್ಳುತ್ತದೆ. ಈ ಪರಿಷ್ಕರಣೆಯು, ಅನುದಾನಿತ ಶಿಕ್ಷಣ ಸಂಸ್ಥೆ ಮತ್ತು ಸ್ಥಳೀಯ ಸಂಸ್ಥೆಗಳ ನೌಕರರು, ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೆ ಅನ್ವಯವಾಗುತ್ತದೆ” ಎಂದು ವಿವರಿಸಿದರು. ಈಗಾಗಲೇ ರಾಜ್ಯ ಸರ್ಕಾರದ ನಿರ್ಧಾರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ: 7th Pay Commission: 7ನೇ ವೇತನ ಆಯೋಗ ಜಾರಿ; ನೌಕರರ ಸಂಬಳ ಎಷ್ಟು ಹೆಚ್ಚಾಗಲಿದೆ? ಇಲ್ಲಿದೆ ಪಟ್ಟಿ

Continue Reading

Latest

Viral Video: ಸ್ಟ್ರೆಚರ್‌ ಇಲ್ಲದ ಸರ್ಕಾರಿ ಆಸ್ಪತ್ರೆ; ಪತಿಯನ್ನು ಬೆನ್ನ ಮೇಲೆ ಹೊತ್ತು ನಡೆದ ಪತ್ನಿ! ಮನಮಿಡಿಯುವ ವಿಡಿಯೊ

Viral Video: ಕಾಲಿನ ಮೂಳೆ ಮುರಿತಕ್ಕೊಳಗಾದ ಪತಿಗೆ ಚಿಕಿತ್ಸೆ ನೀಡಲು ಪತ್ನಿ ಭಿಂಡ್ ಜಿಲ್ಲಾ ಆಸ್ಪತ್ರೆಗೆ ಕರೆತಂದಿದ್ದಳು. ಆದರೆ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವಾರ್ಡ್‌ಗೆ ಸಾಗಿಸಲು ಸ್ಟ್ರೆಚರ್ ಲಭ್ಯವಿರಲಿಲ್ಲ. ತನ್ನ ಗಂಡನನ್ನು ಶಸ್ತ್ರಚಿಕಿತ್ಸಾ ವಾರ್ಡ್‌ಗೆ ಕರೆದುಕೊಂಡು ಹೋಗುವುದು ಅನಿವಾರ್ಯವಾದ ಕಾರಣ ಅವಳು ಅವನನ್ನು ಆಸ್ಪತ್ರೆಯ ಮೂಲಕ ಸುಮಾರು 50 ಮೀಟರ್ ದೂರ ತನ್ನ ಬೆನ್ನಿನ ಮೇಲೆ ಹೊತ್ತುಕೊಂಡು ನಡೆದಿದ್ದಾಳೆ. ಈ ವಿಡಿಯೊ ನಮ್ಮ ಆಡಳಿತ ವ್ಯವಸ್ಥೆಯ ಮೇಲಿನ ಆಕ್ರೋಶಕ್ಕೆ ಕಾರಣವಾಗಿದೆ.

VISTARANEWS.COM


on

Viral Video
Koo


ಸರ್ಕಾರಿ ಆಸ್ಪತ್ರೆಗಳು ಬಡವರಿಗಾಗಿ ಇದ್ದರೂ ಅವು ಬಡವರಿಗೆ ಸರಿಯಾಗಿ ಸೇವೆಗಳನ್ನು ಒದಗಿಸುತ್ತಿಲ್ಲ. ಬದಲಾಗಿ ಬಡವರ ಜೊತೆ ಅಲ್ಲಿನ ಸಿಬ್ಬಂದಿಗಳು ತುಂಬಾ ಕ್ರೂರವಾಗಿ ವರ್ತಿಸುತ್ತಾರೆ. ಅಂತಹದೊಂದು ಘಟನೆ ಇದೀಗ ಮಧ್ಯಪ್ರದೇಶದಲ್ಲಿ ಜಿಲ್ಲಾ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಮಹಿಳೆಯೊಬ್ಬರು ಗಾಯಗೊಂಡ ಪತಿಯನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕರೆತಂದರು. ಆದರೆ ಅಲ್ಲಿ ಅವರಿಗಾದ ಗತಿ ನೋಡಿದರೆ ಸರ್ಕಾರಿ ಆಸ್ಪತ್ರೆಗಳ ಬೇಜವಾಬ್ದಾರಿತನ ಬಯಲಿಗೆ ಬರುತ್ತದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿ ಟೀಕೆಗೆ ಕಾರಣವಾಗಿದೆ.

ಪತಿ ಕಾಲಿನ ಮೂಳೆ ಮುರಿತಕ್ಕೊಳಗಾದ ಹಿನ್ನೆಲೆಯಲ್ಲಿ ಆತನಿಗೆ ಚಿಕಿತ್ಸೆ ನೀಡಲು ಪತ್ನಿ ಭಿಂಡ್ ಜಿಲ್ಲಾ ಆಸ್ಪತ್ರೆಗೆ ಕರೆತಂದಿದ್ದಾಳೆ. ಆದರೆ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವಾರ್ಡ್‌ಗೆ ಸಾಗಿಸಲು ಸ್ಟ್ರೆಚರ್ ಲಭ್ಯವಿರಲಿಲ್ಲ. ತನ್ನ ಗಂಡನನ್ನು ಶಸ್ತ್ರಚಿಕಿತ್ಸಾ ವಾರ್ಡ್‌ಗೆ ಕರೆದುಕೊಂಡು ಹೋಗುವುದು ಅನಿವಾರ್ಯವಾದ ಕಾರಣ ಅವಳು ಅವನನ್ನು ಆಸ್ಪತ್ರೆಯ ಮೂಲಕ ಸುಮಾರು 50 ಮೀಟರ್ ದೂರ ತನ್ನ ಬೆನ್ನಿನ ಮೇಲೆ ಹೊತ್ತುಕೊಂಡು ನಡೆದಿದ್ದಾಳೆ. ಇದನ್ನು ವಿಡಿಯೊ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ಸಖತ್ ವೈರಲ್ ಆಗಿದೆ. ಇದು ಸಾರ್ವಜನಿಕರ ಆಕ್ರೋಶ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಟೀಕೆಗಳಿಗೆ ಕಾರಣವಾಗಿದೆ. ಹಾಗಾಗಿ ಆಸ್ಪತ್ರೆಯ ಅಧಿಕಾರಿಗಳ ಮೇಲೆ ಒತ್ತಡ ಹೇರಲಾಗಿದೆ ಎನ್ನಲಾಗಿದೆ.

ಈ ವೀಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ಟೀಕೆ ಮತ್ತು ಟ್ರೋಲ್‌ಗಳನ್ನು ಹುಟ್ಟುಹಾಕಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಂಜೀವ್ ಶ್ರೀವಾಸ್ತವ ಈ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ. ಘಟನೆಯ ಬಗ್ಗೆ ಪ್ರತಿಕ್ರಿಯಿಸಲು ಸಿವಿಲ್ ಸರ್ಜನ್ ಉಸ್ತುವಾರಿ ಡಾ.ಜೆ.ಎಸ್.ಯಾದವ್ ನಿರಾಕರಿಸಿದ್ದಾರೆ. ಸ್ಟ್ರೆಚರ್ ಅಲಭ್ಯತೆಯ ಹಿಂದಿನ ಕಾರಣಗಳನ್ನು ವಿವರಿಸಲು ಸಹಾಯಕ ವ್ಯವಸ್ಥಾಪಕ ಸಾಕೇತ್ ಚೌರಾಸಿಯಾ ಅವರಿಗೆ ನೋಟಿಸ್ ನೀಡಲಾಗಿದೆ ಎಂಬುದಾಗಿ ತಿಳಿದು ಬಂದಿದೆ.

ಇದನ್ನೂ ಓದಿ: ರೈಲ್ವೆ ಸೇತುವೆ ಮೇಲೆ ಫೋಟೊಶೂಟ್‌; ರೈಲು ಬಂದಾಗ 90 ಅಡಿ ಆಳಕ್ಕೆ ಜಿಗಿದ ದಂಪತಿ!

ಈ ಘಟನೆಯು ಭಿಂಡ್ ಜಿಲ್ಲಾ ಆಸ್ಪತ್ರೆಯ ಸೌಲಭ್ಯಗಳು ಮತ್ತು ಸೇವೆಗಳ ಸ್ಥಿತಿಯ ಬಗ್ಗೆ ಜನರಲ್ಲಿ ಕಳವಳವನ್ನು ಹೆಚ್ಚಿಸಿದೆ, ಸ್ಥಳೀಯರು ರೋಗಿಗಳ ಆರೈಕೆ ಮತ್ತು ಮೂಲಸೌಕರ್ಯಗಳಲ್ಲಿ ಸುಧಾರಣೆಗಳನ್ನು ತರುವಂತೆ ಒತ್ತಾಯಿಸಲಾಗಿದೆ. ಈ ಮಹಿಳೆಯಯನ್ನು ನೋಡಿದರೆ ಪುರಾಣದ ಸತಿ ಸಾವಿತ್ರಿ ನೆನಪಾಗುತ್ತಿದ್ದಾಳೆ.

Continue Reading
Advertisement
Rishabh Pant
ಕ್ರಿಕೆಟ್16 seconds ago

Rishabh Pant: ಸಹ ಆಟಗಾರ ಖಲೀಲ್​ ಅಹ್ಮದ್​ರನ್ನು ಸ್ಮಿಮ್ಮಿಂಗ್‌ ಪೂಲ್​ಗೆ ತಳ್ಳಿ ಹಾಕಿದ ಪಂತ್​; ವಿಡಿಯೊ ವೈರಲ್​

Karnataka Rain
ಮಳೆ37 seconds ago

Karnataka Rain : ಭಾರಿ ಮಳೆಗೆ ಕಾರಿನ ಮೇಲೆ ಬಿದ್ದ ತೆಂಗಿನ ಮರ; ಮಲಗಿದ್ದ‌ ವ್ಯಕ್ತಿ ಮೇಲೆ ಗೋಡೆ ಕುಸಿತ

2nd Puc Result
ಪ್ರಮುಖ ಸುದ್ದಿ6 mins ago

‌2nd PUC Exam Result: ದ್ವಿತೀಯ ಪಿಯುಸಿ ಪರೀಕ್ಷೆ- 3 ಫಲಿತಾಂಶ ಪ್ರಕಟ, 23.73% ವಿದ್ಯಾರ್ಥಿಗಳು ಪಾಸ್

Stuck in Lift
Latest12 mins ago

Stuck in Lift: ಫ್ಯಾನಿಲ್ಲ, ಲೈಟಿಲ್ಲ, ಆಹಾರವಿಲ್ಲ; 2 ದಿನ ಲಿಫ್ಟ್‌ನಲ್ಲಿ ಸಿಲುಕಿದ್ದವನ ಸ್ಥಿತಿ ಹೇಗಿರಬಹುದು ಊಹಿಸಿ!

7th Pay Commission
ಕರ್ನಾಟಕ27 mins ago

7th Pay Commission: ಸರ್ಕಾರಿ ನೌಕರರ ವೇತನ, ಪಿಂಚಣಿ 58% ಹೆಚ್ಚಳ; ಸಂಪೂರ್ಣ ಲೆಕ್ಕ ಕೊಟ್ಟ ಸಿದ್ದರಾಮಯ್ಯ

Viral Video
Latest31 mins ago

Viral Video: ಸ್ಟ್ರೆಚರ್‌ ಇಲ್ಲದ ಸರ್ಕಾರಿ ಆಸ್ಪತ್ರೆ; ಪತಿಯನ್ನು ಬೆನ್ನ ಮೇಲೆ ಹೊತ್ತು ನಡೆದ ಪತ್ನಿ! ಮನಮಿಡಿಯುವ ವಿಡಿಯೊ

7th Pay Commission
ಕರ್ನಾಟಕ41 mins ago

7th Pay Commission: ಆ.1ರಿಂದ ನೌಕರರ ವೇತನ ಹೆಚ್ಚಳ; ಸರ್ಕಾರಕ್ಕೆ ವಾರ್ಷಿಕ 20,208 ಕೋಟಿ ಹೆಚ್ಚುವರಿ ಹೊರೆ ಎಂದ ಸಿಎಂ

Sexual Abuse
Latest43 mins ago

Sexual Abuse: ಹೆಣ್ಣು ಮಕ್ಕಳಿಗೆ ಈಗ ಶಾಲೆ ಕೂಡ ಸುರಕ್ಷಿತವಲ್ಲ! ಶಾಲಾ ಶೌಚಾಲಯದಲ್ಲಿ ಬಾಲಕಿ ಮೇಲೆ ಬಾಲಕನಿಂದ ಅತ್ಯಾಚಾರ

MAX Teaser
ಸ್ಯಾಂಡಲ್ ವುಡ್49 mins ago

MAX Teaser: ಬಹುನಿರೀಕ್ಷಿತ ʼಮ್ಯಾಕ್ಸ್ʼ ಚಿತ್ರದ ಟೀಸರ್‌ ಔಟ್‌; ರೌಡಿಗಳ ಅಡ್ಡದಲ್ಲಿ ನಿಂತು ಲಾಂಗ್‌ ಬೀಸಿದ ಸುದೀಪ್‌

Soldier 2
ಸಿನಿಮಾ52 mins ago

Soldier 2: ಮುಂದಿನ ವರ್ಷ ‘ಸೋಲ್ಜರ್ 2’ ಶೂಟಿಂಗ್; ಮತ್ತೆ ಒಂದಾಗಲಿದ್ದಾರೆಯೇ ಬಾಬಿ ಡಿಯೋಲ್-ಪ್ರೀತಿ ಜಿಂಟಾ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ4 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ21 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌