Anant Ambani Wedding: ರಾಧಿಕಾ-ಅನಂತ್ ಅಂಬಾನಿ ಆರತಕ್ಷತೆ; ಮನಸೂರೆಗೊಂಡ ಗಾಯಕಿ ಶ್ರೇಯಾ ಘೋಷಾಲ್, ಎಆರ್ ರೆಹಮಾನ್ ಗಾಯನ! - Vistara News

ಬಾಲಿವುಡ್

Anant Ambani Wedding: ರಾಧಿಕಾ-ಅನಂತ್ ಅಂಬಾನಿ ಆರತಕ್ಷತೆ; ಮನಸೂರೆಗೊಂಡ ಗಾಯಕಿ ಶ್ರೇಯಾ ಘೋಷಾಲ್, ಎಆರ್ ರೆಹಮಾನ್ ಗಾಯನ!

Anant Ambani Wedding: ಗುರುʼ ಚಿತ್ರದಲ್ಲಿ ಐಶ್ವರ್ಯಾ ರೈ ನಟಿಸಿರುವ ʻಬರ್ಸೋ ರೇʼ ಸಾಂಗ್‌ವನ್ನು ಶ್ರೇಯಾ ಹಾಡಿದರು. ಚಿತ್ರದ ಸಂಯೋಜಕ ಎಆರ್ ರೆಹಮಾನ್ ಕೂಡ ವೇದಿಕೆಯಲ್ಲಿ ಅವರೊಂದಿಗೆ ಸೇರಿಕೊಂಡರು. ಸಂಗೀತ ಸಂಯೋಜಕ ಎಆರ್ ರೆಹಮಾನ್ (Anant Ambani Wedding) ಮತ್ತು ಗಾಯಕಿ ಶ್ರೇಯಾ ಘೋಷಾಲ್ ಅವರು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ ಅವರ ಆರತಕ್ಷತೆಯಲ್ಲಿ ಪ್ರದರ್ಶನ ನೀಡಿದರು. ಶ್ರೇಯಾ ಘೋಷಾಲ್ ತಮ್ಮ ಅನೇಕ ಹಿಟ್‌ ಹಾಡುಗಳನ್ನು ಹಾಡಿ ರಂಜಿಸಿದರು.

VISTARANEWS.COM


on

Anant Ambani Wedding AR Rahman Shreya Ghoshal sings wedding reception
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆಸ್ಕರ್-ವಿಜೇತ ಸಂಗೀತ ಸಂಯೋಜಕ ಎಆರ್ ರೆಹಮಾನ್ (Anant Ambani Wedding) ಮತ್ತು ಗಾಯಕಿ ಶ್ರೇಯಾ ಘೋಷಾಲ್ ಅವರು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ ಅವರ ಆರತಕ್ಷತೆಯಲ್ಲಿ ಪ್ರದರ್ಶನ ನೀಡಿದರು. ಶ್ರೇಯಾ ಘೋಷಾಲ್ ತಮ್ಮ ಅನೇಕ ಹಿಟ್‌ ಹಾಡುಗಳನ್ನು ಹಾಡಿ ರಂಜಿಸಿದರು.

ʻಗುರುʼ ಚಿತ್ರದಲ್ಲಿ ಐಶ್ವರ್ಯಾ ರೈ ನಟಿಸಿರುವ ʻಬರ್ಸೋ ರೇʼ ಸಾಂಗ್‌ವನ್ನು ಶ್ರೇಯಾ ಹಾಡಿದರು. ಚಿತ್ರದ ಸಂಯೋಜಕ ಎಆರ್ ರೆಹಮಾನ್ ಕೂಡ ವೇದಿಕೆಯಲ್ಲಿ ಅವರೊಂದಿಗೆ ಸೇರಿಕೊಂಡರು.

ಶ್ರೇಯಾ ಮೋಹಿತ್ ಚೌಹಾಣ್ ಜತೆಗೆ ಯಶ್ ಚೋಪ್ರಾ ಅವರ 2012 ರ ರೋಮ್ಯಾಂಟಿಕ್ ಡ್ರಾಮಾ ʻಜಬ್ ತಕ್ ಹೈ ಜಾನ್‌ʼನ ರೆಹಮಾನ್ ಸಂಯೋಜನೆಯ ಹಾಡನ್ನು ಹಾಡಿದರು. ಮೂಲ ಹಾಡಿನಲ್ಲಿ ಶಾರುಖ್ ಖಾನ್ ಮತ್ತು ಕತ್ರಿನಾ ಕೈಫ್ ಕಾಣಿಸಿಕೊಂಡಿದ್ದಾರೆ. ಸಾರಾ ಅಲಿ ಖಾನ್‌ ನಟನೆಯ ಆನಂದ್ ಎಲ್ ರೈ ಅವರ 202 ರ ಚಿತ್ರ ʻಅತ್ರಾಂಗಿ ರೇʼ ಯಿಂದ ರೆಹಮಾನ್ ಸಂಯೋಜನೆಯ ʻಚಕಾ ಚಕ್ʼ ಹಾಡನ್ನೂ ಶ್ರೇಯಾ ಹಾಡಿದ್ದಾರೆ. ಶ್ರೇಯಾ ಮತ್ತು ಮೋಹಿತ್ ಅವರು ಮುಕೇಶ್ ಛಾಬ್ರಾ ಅವರ 2020 ರ ಚೊಚ್ಚಲ ನಿರ್ದೇಶನದ ʻದಿಲ್ ಬೇಚಾರʼದಿಂದ ರೆಹಮಾನ್ ಅವರ ಸಂಯೋಜನೆಯ ʻತಾರೆ ಗಿನ್ʼ ಸಾಂಗ್‌ ಕೂಡ ಹಾಡಿದರು. ಮೂಲತಃ ದಿವಂಗತ ಸುಶಾಂತ್ ಸಿಂಗ್ ರಜಪೂತ್ ಮತ್ತು ಸಂಜನಾ ಸಂಘಿ ನಟನೆಯ ಸಿನಿಮಾ ಇದು.

ಇದನ್ನೂ ಓದಿ: Anant Ambani Wedding: ಅನಂತ್ ಅಂಬಾನಿ ಆರತಕ್ಷತೆಯಲ್ಲಿ ದುಬಾರಿ ಲೆಹೆಂಗಾ ಧರಿಸಿ ಅಪ್ಸರೆಯಂತೆ ಕಂಡ ತಮನ್ನಾ ಭಾಟಿಯಾ!

ಅನಂತ್ ಮತ್ತು ರಾಧಿಕಾ ಅವರ ಮದುವೆಯ ಆರತಕ್ಷತೆಯಲ್ಲಿ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಸೇರಿದ್ದರು. ಗೋವಿಂದ, ಸನ್ನಿ ಡಿಯೋಲ್, ಬಾಬಿ ಡಿಯೋಲ್, ಮಧುರ್ ಭಂಡಾರ್ಕರ್, ಸುಭಾಷ್ ಘಾಯ್, ರಾಜ್‌ಕುಮಾರ್ ರಾವ್-ಪತ್ರಲೇಖಾ, ಬಿಪಾಶಾ ಬಸು-ಕರಣ್ ಸಿಂಗ್ ಗ್ರೋವರ್, ಅರ್ಜುನ್ ಕಪೂರ್, ಡಯಾನಾ ಪೆಂಟಿ, ಅಟ್ಲೀ, ಜಾಕಿ ಭಗ್ನಾನಿ-ರಾಕುಲ್ ಪ್ರೀತ್ ಸಿಂಗ್ ಮತ್ತು ಆಯುಷ್ಮಾನ್ ಖುರಾನಾ ಸೇರಿದಂತೆ ಇತರರು ಭಾಗವಹಿಸಿದ್ದರು.

ಮುಂಬೈನಲ್ಲಿರುವ ಜಿಯೋ ವರ್ಲ್ಡ್‌ ಕನ್ವೆನ್ಶನ್‌ ಸೆಂಟರ್‌ನಲ್ಲಿ ಶುಕ್ರವಾರ (ಜುಲೈ 12) ರಾತ್ರಿ ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್‌ ಅವರು ಸಾವಿರಾರು ಗಣ್ಯರು (Anant Ambani Wedding), ಸೆಲೆಬ್ರಿಟಿಗಳ ಮಧ್ಯೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Soldier 2: ಮುಂದಿನ ವರ್ಷ ‘ಸೋಲ್ಜರ್ 2’ ಶೂಟಿಂಗ್; ಮತ್ತೆ ಒಂದಾಗಲಿದ್ದಾರೆಯೇ ಬಾಬಿ ಡಿಯೋಲ್-ಪ್ರೀತಿ ಜಿಂಟಾ?

ಆಕ್ಷನ್ -ಥ್ರಿಲ್ಲರ್ ಚಿತ್ರವಾದ ʼಸೋಲ್ಜರ್ʼ ʼಕುಚ್ ಕುಚ್ ಹೋತಾ ಹೈʼ ಅನಂತರ ವರ್ಷದ ಎರಡನೇ ಅತಿ ಹೆಚ್ಚು ಗಳಿಕೆಯಾಗಿ ಚಿತ್ರವಾಗಿ ಹೊರಹೊಮ್ಮಿತ್ತು. ಅತ್ಯದ್ಭುತ ಸಂಗೀತದ ಜೊತೆಗೆ ನಟನಟಿಯ ನಡುವಿನ ಕೆಮೆಸ್ಟ್ರಿಯನ್ನು ಸಾಕಷ್ಟು ಪ್ರೇಕ್ಷಕರ ಮನ ಗೆದ್ದಿತ್ತು. ಚಿತ್ರದ ಜನಪ್ರಿಯತೆಗೆ ಇದು ಪ್ರಮುಖ ಕಾರಣವಾಗಿತ್ತು. ಕೆಲವು ಸಮಯದ ಹಿಂದೆಯಷ್ಟೇ ಬಾಬಿ ಡಿಯೋಲ್ ಅವರು ʼಸೋಲ್ಜರ್‌ʼನ ಮುಂದಿನ ಭಾಗದ (Soldier 2) ಬಗ್ಗೆ ಸುಳಿವು ನೀಡಿದ್ದರು. ನಿರ್ಮಾಪಕ ತೌರಾನಿ ಅವರು ಈಗ ಈ ಬಗ್ಗೆ ವಿವರ ನೀಡಿದ್ದಾರೆ.

VISTARANEWS.COM


on

By

Soldier 2
Koo

ಸೋಲ್ಜರ್ ಸೋಲ್ಜರ್ ಮೀಟಿ ಬಾತೆ ಬೋಲ್ ಕರ್.. 1998ರಲ್ಲಿ ಬಿಡುಗಡೆಯಾದ ರಮೇಶ್ ತೌರಾನಿಯವರ (Ramesh Taurani) ಸೋಲ್ಜರ್ (Soldier) ಚಿತ್ರದ ಈ ಹಾಡು ಆಗ ಬಹುಜನರ ಮನ ಗೆದ್ದಿತ್ತು. ಸೈನಿಕನೊಬ್ಬನ ಜೀವನ ಕಥೆಯನ್ನು ಆಧರಿಸಿ ಬಂದಿರುವ ಈ ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ ಭರ್ಜರಿ ಯಶಸ್ಸನ್ನೂ ಗಳಿಸಿತ್ತು. ಇದೀಗ ಇದರ ಮುಂದುವರಿದ ಭಾಗ ಸೋಲ್ಜರ್ 2ನ (Soldier 2) ಚಿತ್ರೀಕರಣ ಮುಂದಿನ ವರ್ಷ ಆರಂಭಗೊಳ್ಳಲಿದೆ ಎಂಬುದನ್ನು ಚಿತ್ರದ ನಿರ್ದೇಶಕರೇ ಸ್ಪಷ್ಟಪಡಿಸಿದ್ದಾರೆ.

ಅಬ್ಬಾಸ್- ಮಸ್ತಾನ್ (Abbas-Mustan) ಮತ್ತು ಬಾಬಿ ಡಿಯೋಲ್ (Bobby Deol) ನಡುವಿನ ಜಂಟಿ ಸಹಯೋಗದಲ್ಲಿ ನಿರ್ಮಾಣಗೊಂಡ ಮೊದಲ ಚಿತ್ರ ಸೋಲ್ಜರ್. ಬಾಲಿವುಡ್ ನ ಕ್ಯೂಟ್ ನಟಿ ಪ್ರೀತಿ ಜಿಂಟಾ (Preity Zinta) ಈ ಚಿತ್ರದ ಮೂಲಕವೇ ಬಾಲಿವುಡ್ ಅಂಗಳಕ್ಕೆ ಪಾದಾರ್ಪಣೆ ಮಾಡಿದ್ದರು.


ಆಕ್ಷನ್ -ಥ್ರಿಲ್ಲರ್ ಚಿತ್ರವಾದ ಸೋಲ್ಜರ್ ಆ ವರ್ಷದಲ್ಲಿ ಕುಚ್ ಕುಚ್ ಹೋತಾ ಹೈ ಅನಂತರ ವರ್ಷದ ಎರಡನೇ ಅತಿ ಹೆಚ್ಚು ಗಳಿಕೆಯಾಗಿ ಚಿತ್ರವಾಗಿ ಹೊರಹೊಮ್ಮಿತು. ಅತ್ಯದ್ಭುತ ಸಂಗೀತದ ಜೊತೆಗೆ ನಟನಟಿಯ ನಡುವಿನ ಕೆಮೆಸ್ಟ್ರಿಯನ್ನು ಸಾಕಷ್ಟು ಪ್ರೇಕ್ಷಕರ ಮನ ಗೆದ್ದಿತು. ಚಿತ್ರದ ಜನಪ್ರಿಯತೆಗೆ ಇದು ಪ್ರಮುಖ ಕಾರಣವಾಯಿತು.

ಕೆಲವು ಸಮಯದ ಹಿಂದೆಯಷ್ಟೇ ಬಾಬಿ ಡಿಯೋಲ್ ಅವರು ಸೋಲ್ಜರ್‌ನ ಉತ್ತರಭಾಗದ ಬಗ್ಗೆ ಸುಳಿವು ನೀಡಿದ್ದರು. ತೌರಾನಿ ಅವರು ಅದರ ಉತ್ತರಭಾಗವನ್ನು ನಿರ್ಮಿಸಲು ಬಯಸುತ್ತಿದ್ದಾರೆ ಎಂದು ಹೇಳಿದ್ದರು. ಇತ್ತೀಚೆಗೆ ಇಷ್ಕ್ ವಿಷ್ಕ್‌ನ ಉತ್ತರ ಭಾಗವನ್ನು ಇಷ್ಕ್ ವಿಷ್ಕ್ ರೀಬೌಂಡ್ ಎಂಬ ಶೀರ್ಷಿಕೆಯೊಂದಿಗೆ ಬಿಡುಗಡೆ ಮಾಡಿದ ಹಿರಿಯ ನಿರ್ಮಾಪಕರು, ಸೋಲ್ಜರ್ ಫ್ರ್ಯಾಂಚೈಸ್‌ನೊಂದಿಗೆ ಬರುವ ಅವರ ಯೋಜನೆ ಶೀಘ್ರದಲ್ಲೇ ಕಾರ್ಯರೂಪಕ್ಕೆ ಬರಲಿದೆ ಎಂದು ಖಚಿತಪಡಿಸಿದ್ದಾರೆ.


ಖಂಡಿತವಾಗಿಯೂ ಸೋಲ್ಜರ್‌ನ ಮುಂದಿನ ಭಾಗವನ್ನು ತಯಾರಿಸುತ್ತಿದ್ದೇವೆ. ಮುಂದಿನ ವರ್ಷ ಚಿತ್ರದ ಚಿತ್ರೀಕರಣ ಆರಂಭಿಸಲಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಶಾಹಿದ್ ಕಪೂರ್, ಅಮೃತಾ ರಾವ್ ಮತ್ತು ಶೆನಾಜ್ ಖಜಾನೆ ಇಶ್ಕ್ ವಿಷ್ಕ್ ರೀಬೌಂಡ್‌ನಲ್ಲಿ ಇಲ್ಲ. ಆದರೆ ಬಾಬಿ ಡಿಯೋಲ್ ಮತ್ತು ಪ್ರೀತಿ ಜಿಂಟಾ ಸೋಲ್ಜರ್ 2 ನಲ್ಲಿ ತಮ್ಮ ಪಾತ್ರಗಳನ್ನು ನಿರ್ವಹಿಸುತ್ತಾರೆಯೇ ಎಂಬುದು ಖಚಿತವಾಗಿಲ್ಲ. ಕಥೆಯು ಹೇಗೆ ರೂಪುಗೊಳ್ಳುತ್ತದೆ ಎಂಬುದರ ಆಧಾರದ ಮೇಲೆ ಬಾಬಿ ಮತ್ತು ಪ್ರೀತಿ ಅದರ ಭಾಗವಾಗುತ್ತಾರೆಯೇ ಇಲ್ಲವೇ ಎಂಬುದನ್ನು ತಿಳಿಯಬಹುದು ಎಂದು ತೌರಾನಿ ತಿಳಿಸಿದ್ದಾರೆ.

ʼಕ್ಯಾ ಕೆಹೆನಾʼ ಚಿತ್ರ ಪ್ರೀತಿ ಜಿಂಟಾ ಅವರ ಮೊದಲ ಚಿತ್ರವಾಗಿದ್ದರೂ ʼಸೋಲ್ಜರ್ʼ ಪ್ರೀತಿ ಅವರಿಗೆ ಹೆಚ್ಚು ಖ್ಯಾತಿ ತಂದುಕೊಟ್ಟಿತು. ತೌರಾನಿ ನಿರ್ಮಿಸಿದ ಚಿತ್ರಗಳಲ್ಲಿ ಮೆರಿ ಕ್ರಿಸ್‌ಮಸ್, ಅಜಬ್ ಪ್ರೇಮ್ ಕಿ ಗಜಬ್ ಕಹಾನಿ ಕೂಡ ಒಂದು, ಮೊದಲು ಪ್ರೀತಿ ಝಿಂಟಾ ಕ್ಯಾ ಕೆಹನಾಗೆ ಸಹಿ ಮಾಡಿದ್ದರು. ಆದರೆ ಚಿತ್ರ ತಡವಾಗಿ ಬಿಡುಗಡೆಯಾಯಿತು. ಕ್ಯಾ ಕೆಹೆನಾ ಮತ್ತು ಸೋಲ್ಜರ್ ನ ಶೂಟಿಂಗ್ ಕಾರ್ಯಗಳು ಏಕಕಾಲಕ್ಕೆ ನಡೆಯುತ್ತಿತ್ತು.


ಕ್ಯಾ ಕೆಹನಾ ಬಿಡುಗಡೆ ವಿಳಂಬಕ್ಕೆ ಕಾರಣ?

ಏಪ್ರಿಲ್ 1998ರ ವೇಳೆಗೆ ʼಸೋಲ್ಜರ್ʼ ಸಿದ್ಧವಾಗಿತ್ತು. ನಾವು ಅದನ್ನು ಆಗಸ್ಟ್‌ನಲ್ಲಿ ಬಿಡುಗಡೆ ಮಾಡಲು ಬಯಸಿದ್ದೆವು. ಆದರೆ ಸಾಧ್ಯವಾಗಲಿಲ್ಲ. ಕಾರಣ ವಿಧು ವಿನೋದ್ ಚೋಪ್ರಾ ನಿರ್ಮಿಸಿದ ʼಕರೀಬ್ʼ ಎಂಬ ಬಾಬಿ ಅಭಿನಯದ ಮತ್ತೊಂದು ಚಿತ್ರದ ಸಂಗೀತ ಹಕ್ಕುಗಳನ್ನು ನಾವು ಹೊಂದಿದ್ದೆವು. ಅದರ ಸಂಗೀತವನ್ನು ಜೂನ್‌ನಲ್ಲಿ ಮತ್ತು ಚಿತ್ರವನ್ನು ಆಗಸ್ಟ್‌ನಲ್ಲಿ ಬಿಡುಗಡೆ ಮಾಡಲು ನಾವು ಬಯಸಿದ್ದೇವು ಎಂದು ಚೋಪ್ರಾ ಹೇಳಿದರು. ಬಾಬಿಯ ಎರಡು ಚಿತ್ರಗಳು ಒಂದೇ ತಿಂಗಳಲ್ಲಿ ಬಿಡುಗಡೆಯಾಗುವುದು ನಮಗೂ ಇಷ್ಟವಿರಲಿಲ್ಲ ಎಂದು ತೌರಾನಿ ಹೇಳಿದರು.

ಇದನ್ನೂ ಓದಿ:Iti Acharya: ಬಾಲಿವುಡ್‌ಗೆ ಕಾಲಿಟ್ಟ ಮತ್ತೊಬ್ಬ ಕನ್ನಡತಿ; ದಕ್ಷಿಣ ಭಾರತದ ಚಿತ್ರಗಳ ಬಳಿಕ ಹಿಂದಿಯಲ್ಲೂ ಅಭಿನಯ

ಎರಡೂ ಟ್ರೇಲರ್‌ಗಳು ಒಂದೇ ಸಮಯದಲ್ಲಿ ಬಿಡುಗಡೆಯಾದರೆ ಅವು ಹೇಗೆ ಇರುತ್ತವೆ ಎಂದು ನಾವು ಚಿಂತಿಸಿದ್ದೆವು. ಒಂದೇ ನಟ ನಟಿಸಿರುವ ಎರಡು ಚಿತ್ರಗಳಿಗೆ ಪ್ರಚಾರಕ್ಕೂ ತೊಂದರೆಯಾಗುತ್ತಿತ್ತು. ಅದಕ್ಕಾಗಿಯೇ ನಾವು ʼಕರೀಬ್‌ʼ ಮೊದಲೇ ಬಿಡುಗಡೆ ಮಾಡಬೇಕಾಗಿತ್ತು. ಹೀಗಾಗಿ ʼಕ್ಯಾ ಕೆಹನಾʼ ಚಿತ್ರದ ಬಿಡುಗಡೆಗೆ ಕೊಂಚ ವಿಳಂಬವಾಯಿತು ಎಂದು ಹಳೆಯ ಸಂಗತಿಯನ್ನು ವಿವರಿಸಿದರು.

Continue Reading

ಸಿನಿಮಾ

Iti Acharya: ಬಾಲಿವುಡ್‌ಗೆ ಕಾಲಿಟ್ಟ ಮತ್ತೊಬ್ಬ ಕನ್ನಡತಿ; ದಕ್ಷಿಣ ಭಾರತದ ಚಿತ್ರಗಳ ಬಳಿಕ ಹಿಂದಿಯಲ್ಲೂ ಅಭಿನಯ

Iti Acharya: ನಟಿ, ಮಾಡೆಲ್‌ ಇತಿ ಆಚಾರ್ಯ ಇದೀಗ ಬಾಲಿವುಡ್‌ನತ್ತ ಮುಖ ಮಾಡಿದ್ದಾರೆ. ದಕ್ಷಿಣ ಭಾರತದ ಚಿತ್ರಗಳಲ್ಲಿ ನಟಿಸಿರುವ ಈ ಕನ್ನಡತಿ ಇದೀಗ ʼದಿ ಶೂಸ್ ಐ ವೋರ್ʼ ಎಂಬ ಹೊಸ ಹಿಂದಿ ಚಿತ್ರದಲ್ಲಿ ಇತಿ ನಾಯಕಿಯಾಗಿ ಬಣ್ಣ ಹಚ್ಚುತ್ತಿದ್ದಾರೆ. ಯುವ ಪ್ರತಿಭೆ ಸಂಜಯ್ ಚರಣ್ ನಿರ್ದೇಶನದ ಈ ಸಿನಿಮಾದಲ್ಲಿ ʼಇನ್ನಮುಲ್ಕ್ʼ ಮತ್ತು ʼಸ್ಕ್ಯಾಮ್ʼ ಖ್ಯಾತಿಯ ಫೈಸಲ್ ರಶೀದ್‌ಗೆ ಜೋಡಿಯಾಗಿ ಅವರು ಅಭಿನಯಿಸಲಿದ್ದಾರೆ. ಇತಿ ಆಚಾರ್ಯ ಕನ್ನಡದ ʼಕವಚʼ, ʼಧ್ವನಿʼ, ʼಡೀಲ್‌ ರಾಜಾʼ, ʼಪಂಗನಾಮʼ ಸಿನಿಮಾಗಳಲ್ಲಿ ನಟಿಸಿದ್ದಾರೆ.

VISTARANEWS.COM


on

Iti Acharya
Koo

ಮುಂಬೈ: ಕಿರಿಕ್‌ ಪಾರ್ಟಿ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ ಪ್ರವೇಶಿಸಿ ಬಳಿಕ ಟಾಲಿವುಡ್‌ನಲ್ಲಿ ಮಿಂಚಿ ಕಾಲಿವುಡ್‌ನಲ್ಲೂ ಛಾಪು ಮೂಡಿಸಿದ ಕನ್ನಡತಿ ರಶ್ಮಿಕಾ ಮಂದಣ್ಣ (Rashmika Mandanna) ಇದೀಗ ಬಾಲಿವುಡ್‌ನಲ್ಲಿ ಗಟ್ಟಿಯಾಗಿ ನೆಲೆಯೂರುವ ಸೂಚನೆ ನೀಡಿದ್ದಾರೆ. ಸ್ಟಾರ್‌ ನಟರ ಬ್ಯಾಕ್‌ ಟು ಬ್ಯಾಕ್‌ ಚಿತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇವರ ಜತೆಗೆ ಇನ್ನೊಬ್ಬ ಸ್ಯಾಂಡಲ್‌ವುಡ್‌ ನಟಿಯೂ ಇದೀಗ ಬಾಲಿವುಡ್‌ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಅವರೇ ನಟಿ, ಮಾಡೆಲ್‌ ಇತಿ ಆಚಾರ್ಯ (Iti Acharya).

ಇತಿ ಆಚಾರ್ಯ ನಟನೆ ಜತೆಗೆ ಮಾಡೆಲಿಂಗ್‌ನಲ್ಲಿಯೂ ಮಿಂಚುತ್ತಿದ್ದಾರೆ. 2016ರ ಮಿಸ್ ಸೌತ್ ಇಂಡಿಯಾ ವಿನ್ನರ್ ಕಿರೀಟ ಮುಡಿಗೇರಿಸಿಕೊಂಡಿರುವ ಈ ಕನ್ನಡತಿ ಆರ್.ವಿ.ಎಸ್.ಪಿ. ಪ್ರೊಡಕ್ಷನ್ ಹೌಸ್ ಮೂಲಕ ನಿರ್ಮಾಪಕಿ ಆಗಿಯೂ ಗುರುತಿಸಿಕೊಂಡಿದ್ದಾರೆ. ಕನ್ನಡ ಮಾತ್ರವಲ್ಲದೇ ಹಿಂದಿ, ತಮಿಳು, ಮಲಯಾಳಂ ಸಿನಿಮಾಗಳಲ್ಲೂ ಇತಿ ಆಚಾರ್ಯ ಬ್ಯುಸಿಯಾಗಿದ್ದಾರೆ. ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ಹೋರ್ಡಿಂಗ್ಸ್‌ನಲ್ಲಿ ಕಾಣಿಸಿಕೊಂಡ ಹಿರಿಮೆ ಅವರದ್ದು. ಅಮೇರಿಕಾದ ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ ಮೆರ್ಲಿನ್ ಬಾಬಾಜಿ ಸಾಂಗ್‌ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಇತಿ ಆಚಾರ್ಯ ಅವರು ಜನಪ್ರಿಯತೆ ಪಡೆದಿದ್ದಾರೆ.

ಜುಲೈ 15ರಂದು ಹುಟ್ಟುಹಬ್ಬ ಆಚರಿಸಿಕೊಂಡ ಇತಿ ಆಚಾರ್ಯ ಹೊಸ ಸಿನಿಮಾದ ಅಪ್‌ಡೇಟ್ ಹಂಚಿಕೊಂಡಿದ್ದಾರೆ. ʼದಿ ಶೂಸ್ ಐ ವೋರ್ʼ ಎಂಬ ಹೊಸ ಹಿಂದಿ ಚಿತ್ರದಲ್ಲಿ ಇತಿ ನಾಯಕಿಯಾಗಿ ಬಣ್ಣ ಹಚ್ಚುತ್ತಿದ್ದಾರೆ. ಯುವ ಪ್ರತಿಭೆ ಸಂಜಯ್ ಚರಣ್ ನಿರ್ದೇಶನದ ಈ ಸಿನಿಮಾದಲ್ಲಿ ʼಇನ್ನಮುಲ್ಕ್ʼ ಮತ್ತು ʼಸ್ಕ್ಯಾಮ್ʼ ಖ್ಯಾತಿಯ ಫೈಸಲ್ ರಶೀದ್‌ಗೆ ಜೋಡಿಯಾಗಿ ಅವರು ಅಭಿನಯಿಸಲಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಇತಿ ಆಚಾರ್ಯ, ʼʼನಾನು ಈ ಸಿನಿಮಾದ ಭಾಗವಾಗಿರುವುದಕ್ಕೆ ಖುಷಿ ಇದೆ. ತುಂಬಾ ಉತ್ಸುಕಳಾಗಿದ್ದೇನೆ. ಈ ಪಯಣದಲ್ಲಿ ಸಾಕಷ್ಟು ಕಲಿಯುವುದು ಇದೆ. ವಿಭಿನ್ನ ಕಥೆಯಾಗಿದ್ದು, ಇದೊಂದು ಟೆಕ್ನಿಕಲ್ ಸಿನಿಮಾʼʼ ಎಂದಿದ್ದಾರೆ.

ಇದನ್ನೂ ಓದಿ: Rakshit Shetty: ರಕ್ಷಿತ್‌ ಶೆಟ್ಟಿಗೆ ತಪ್ಪದ ಸಂಕಷ್ಟ; ಮತ್ತೊಂದು ದೂರು ದಾಖಲು!

ಇತಿ ಆಚಾರ್ಯ ಕನ್ನಡದ ʼಕವಚʼ, ʼಧ್ವನಿʼ, ʼಡೀಲ್‌ ರಾಜಾʼ, ʼಪಂಗನಾಮʼ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅದೇ ರೀತಿ ಮಲಯಾಳಂ, ತೆಲುಗು ಮತ್ತು ತಮಿಳಿನ ಸಿನಿಮಾಗಳಲ್ಲಿಯೂ ಅಭಿನಯಿಸಿದ್ದಾರೆ. ಇದೀಗ ಬಾಲಿವುಡ್‌ಗೆ ತೆರಳಿ ಬಹುಭಾಷಾ ನಟಿ ಎನಿಸಿಕೊಂಡಿದ್ದಾರೆ.

Continue Reading

ದೇಶ

Rakul Preet Singh: ಡ್ರಗ್ಸ್‌ ಕೇಸ್;‌ ನಟಿ ರಕುಲ್‌ ಪ್ರೀತ್‌ ಸಿಂಗ್‌ ಸಹೋದರನ ಬಂಧನ

Rakul Preet Singh: ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನೂ ಬಂಧಿಸಿರುವ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಹಾಜರುಪಡಿಸಲಿದ್ದಾರೆ. ವೈದ್ಯಕೀಯ ಪರೀಕ್ಷೆಯ ಬಳಿಕ ಅವರನ್ನು ಕೋರ್ಟ್‌ಗೆ ಹಾಜರುಪಡಿಸಲಾಗುತ್ತದೆ ಎಂದು ತಿಳಿದುಬಂದಿದೆ. ಅಮನ್‌ ಪ್ರೀತ್‌ ಸಿಂಗ್‌ ಕೂಡ ಡ್ರಗ್ಸ್‌ ಸೇವಿಸಿದ್ದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

VISTARANEWS.COM


on

Rakul Preet Singh
Koo

ಹೈದರಾಬಾದ್:‌ ಡ್ರಗ್ಸ್‌ ಪ್ರಕರಣಕ್ಕೆ (Drugs Case) ಸಂಬಂಧಿಸಿದಂತೆ ಬಹುಭಾಷಾ ನಟಿ ರಕುಲ್‌ ಪ್ರೀತ್‌ ಸಿಂಗ್‌ (Rakul Preet Singh) ಅವರ ಸಹೋದರ ಅಮನ್‌ ಪ್ರೀತ್‌ ಸಿಂಗ್‌ (Aman Preet Singh) ಅವರನ್ನು ಹೈದರಾಬಾದ್‌ನಲ್ಲಿ ಬಂಧಿಸಲಾಗಿದೆ. ಹೈದರಾಬಾದ್‌ ಹೊರವಲಯದಲ್ಲಿರುವ ರಾಜೇಂದ್ರ ನಗರದಲ್ಲಿ ರಾಜೇಂದ್ರ ನಗರ ಪೊಲೀಸರು ಹಾಗೂ ವಿಶೇಷ ಕಾರ್ಯಾಚರಣೆಗಳ ತಂಡವು (SOT) ಜಂಟಿ ಕಾರ್ಯಾಚರಣೆ ನಡೆಸಿದ್ದು, ಸುಮಾರು 2 ಕೋಟಿ ರೂ. ಮೌಲ್ಯದ 200 ಗ್ರಾಂ ಕೊಕೇನ್‌ ವಶಪಡಿಸಿಕೊಳ್ಳಲಾಗಿದೆ. ಇದೇ ವೇಳೆ ಅಮನ್‌ ಪ್ರೀತ್‌ ಸಿಂಗ್‌ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಹೈದರಾಬಾದ್‌ಗೆ ಮಾದಕವಸ್ತುವನ್ನು ಸಾಗಿಸಿದ್ದು, ಹಣಕಾಸು ವಹಿವಾಟು ಸೇರಿ ಹಲವು ಆರೋಪಗಳಲ್ಲಿ ಅಮನ್‌ ಪ್ರೀತ್‌ ಸಿಂಗ್‌ ಅವರನ್ನು ಬಂಧಿಸಲಾಗಿದೆ. ಅಮನ್‌ ಪ್ರೀತ್‌ ಸಿಂಗ್‌ ಸೇರಿ 30 ಜನರ ಬಳಿ ಡ್ರಗ್ಸ್‌ ಇರುವ ಕುರಿತು ನಿಖರ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಇದೇ ಪ್ರಕರಣದಲ್ಲಿ, ಅಮನ್‌ ಪ್ರೀತ್‌ ಸಿಂಗ್‌, ಅನಿಕೇತ್‌ ರೆಡ್ಡಿ, ಪ್ರಸಾದ್‌, ಮಧುಸೂದನ್‌ ಹಾಗೂ ನಿಖಿಲ್‌ ದಮನ್‌ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

ಐವರನ್ನೂ ಬಂಧಿಸಿರುವ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಹಾಜರುಪಡಿಸಲಿದ್ದಾರೆ. ವೈದ್ಯಕೀಯ ಪರೀಕ್ಷೆಯ ಬಳಿಕ ಅವರನ್ನು ಕೋರ್ಟ್‌ಗೆ ಹಾಜರುಪಡಿಸಲಾಗುತ್ತದೆ ಎಂದು ತಿಳಿದುಬಂದಿದೆ. ಅಮನ್‌ ಪ್ರೀತ್‌ ಸಿಂಗ್‌ ಕೂಡ ಡ್ರಗ್ಸ್‌ ಸೇವಿಸಿದ್ದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. “ಮೊದಲಿಗೆ ಐವರು ಗ್ರಾಹಕರನ್ನು ನಾವು ಪೊಲೀಸ್‌ ಠಾಣೆಗೆ ಕರೆದುಕೊಂಡು ಬಂದು ಯುರಿನ್‌ ಟೆಸ್ಟ್‌ ಕಿಟ್‌ ಮೂಲಕ ತಪಾಸಣೆ ನಡೆಸಿದಾಗ, ಪಾಸಿಟಿವ್‌ ರಿಪೋರ್ಟ್‌ ಬಂದಿತು. ಬಳಿಕ ಅವರನ್ನು ವಶಕ್ಕೆ ಪಡೆಯಲಾಯಿತು. ಈಗ ಐವರನ್ನೂ ವೈದ್ಯಕೀಯ ಪರೀಕ್ಷೆಗಾಗಿ ಕಳುಹಿಸಲಾಗುವುದು” ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿಗಿ ನೀಡಿದ್ದಾರೆ.

2021 ಹಾಗೂ 2022ರ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸದಂತೆ ರಕುಲ್‌ ಪ್ರೀತ್‌ ಸಿಂಗ್‌ ಅವರನ್ನು ಇದಕ್ಕೂ ಮೊದಲು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಇ.ಡಿ ಅಧಿಕಾರಿಗಳು ರಕುಲ್‌ ಪ್ರೀತ್‌ ಸಿಂಗ್‌ ಅವರಿಗೆ ಸಮನ್ಸ್‌ ನೀಡಿ, ಅವರನ್ನು ಕರೆಸಿಕೊಂಡು ಹೇಳಿಕೆ ದಾಖಲಿಸಿಕೊಂಡಿದ್ದರು. ಮಾದಕವಸ್ತು ಸಾಗಣೆ ಹಾಗೂ ಸೇವನೆ ಪ್ರಕರಣದಲ್ಲಿ ರಕುಲ್‌ ಪ್ರೀತ್ ಸಿಂಗ್‌ ಸೇರಿ ರಾಣಾ ದಗ್ಗುಬಾಟಿ, ನವದೀಪ್‌, ರವಿತೇಜ ಸೇರಿ ಹಲವರ ಹೆಸರುಗಳು ಕೇಳಿಬಂದಿದ್ದವು.

ಇದನ್ನೂ ಓದಿ: Rakul Preet Singh: ರಕುಲ್‌ ಪ್ರೀತ್‌ ಸಿಂಗ್‌ ವಿವಾಹದ ಇನ್ನಷ್ಟು ಫೋಟೊಗಳು ರಿವೀಲ್‌!

Continue Reading

ಬಾಲಿವುಡ್

Radhika Merchant : ರಾಧಿಕಾ ಪರಿಚಯಿಸಿದ್ದಕ್ಕಾಗಿ ನಟನ ಮಗನಿಗೆ 30 ಕೋಟಿ ರೂ. ಅಪಾರ್ಟ್‌ಮೆಂಟ್ ಉಡುಗೊರೆಯಾಗಿ ಕೊಟ್ರಾ ಅಂಬಾನಿ?

Radhika Merchant : ಅಂಬಾನಿ ಕುಟುಂಬ ಸುಮಾರು 30 ಕೋಟಿ ರೂ. ಮೌಲ್ಯದ ಅಪಾರ್ಟ್‌ಮೆಂಟ್ ಅನ್ನು ಮೀಜನ್ ಜಾವೇದ್‌ಗೆ ಉಡುಗೊರೆಯಾಗಿ ಕೊಟ್ಟಿದ್ದಾರೆ ಎಂದು ಟ್ವೀಟ್‌ ಮೂಲಕ ಆರೋಪಿಸಿದ್ದಾರೆ. ಇದೀಗ ಈ ಬಗ್ಗೆ ನಟ ಜಾವೇದ್ ಜಾಫ್ರಿ ಹೇಳಿಕೆಯನ್ನು ತಳ್ಳಿ ಹಾಕಿದ್ದಾರೆ.

VISTARANEWS.COM


on

Koo

ಬೆಂಗಳೂರು: ಮುಂಬೈನಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ (Radhika Merchant) ಅದ್ಧೂರಿಯಾಗಿ ವಿವಾಹವಾಗಿದ್ದಾರೆ. ಇದೀಗ ಕಮಾಲ್ ಆರ್ ಖಾನ್ ಎಂಬುವರು ನಟ ಜಾವೇದ್ ಜಾಫ್ರಿ ಮಗ ಮೀಜನ್ ಜಾವೇದ್ ಅವರು ರಾಧಿಕಾರನ್ನು ಅನಂತ್ ಅಂಬಾನಿಗೆ ಪರಿಚಯಿಸಿದ್ದರು. ಅದಕ್ಕಾಗಿಯೇ ಅಂಬಾನಿ ಕುಟುಂಬ ಸುಮಾರು 30 ಕೋಟಿ ರೂ. ಮೌಲ್ಯದ ಅಪಾರ್ಟ್‌ಮೆಂಟ್ ಅನ್ನು ಮೀಜನ್ ಜಾವೇದ್‌ಗೆ ಉಡುಗೊರೆಯಾಗಿ ಕೊಟ್ಟಿದ್ದಾರೆ ಎಂದು ಟ್ವೀಟ್‌ ಮೂಲಕ ಆರೋಪಿಸಿದ್ದಾರೆ. ಇದೀಗ ಈ ಬಗ್ಗೆ ನಟ ಜಾವೇದ್ ಜಾಫ್ರಿ ಹೇಳಿಕೆಯನ್ನು ತಳ್ಳಿ ಹಾಕಿದ್ದಾರೆ.

ಕಮಾಲ್ ಆರ್ ಖಾನ್ ಎಂಬುವರು ತಮ್ಮ ಎಕ್ಸ್‌ ಹ್ಯಾಂಡಲ್‌ನಲ್ಲಿ ಹೀಗೆ ಬರೆದಿದ್ದಾರೆ. ʻʻನಟ ಜಾವೇದ್‌ ಜಾಫ್ರಿ ಮಗ ಮೀಜನ್‌ ಜಾವೇದ್‌ ಜಾಫ್ರಿ ಮುಂಬೈನ ಸಂಧು ಪ್ಯಾಲೆಸ್‌ನಲ್ಲಿ ತಂಗಿದ್ದಾರೆ, ಏಕೆಂದರೆ ಮುಕೇಶ್‌ ಅಂಬಾನಿ ಅವರಿಗೆ ₹ 30 ಕೋಟಿ ಮೌಲ್ಯದ ಅಪಾರ್ಟ್ಮೆಂಟ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ವಾಸ್ತವವಾಗಿ ಮೀಜಾನ್ ಅವರು ರಾಧಿಕಾ ಮರ್ಚೆಂಟ್ ಅವರನ್ನು ಅನಂತ್ ಅಂಬಾನಿಗೆ ಪರಿಚಯಿಸಿದರುʼʼಎಂದು ಬರೆದುಕೊಂಡಿದ್ದಾರೆ. ಈ ಹೇಳಿಕೆಯನ್ನು ಜಾವೇದ್ ಜಾಫ್ರಿ ಹೇಳಿಕೆಯನ್ನು ತಳ್ಳಿ ಹಾಕಿದ್ದಾರೆ. ಜಾವೇದ್ ಅವರು ಕಮಾಲ್ ಅವರ ಟ್ವೀಟ್ ಅನ್ನು ಮರು ಪೋಸ್ಟ್ ಮಾಡಿ ಏನು ಬೇಕಾದರೂ ಬೇಕಾ ಬಿಟ್ಟಿ ಮಾತನಾಡುತ್ತಾರೆ ಎಂಬರ್ಥದಲ್ಲಿ ಟ್ವೀಟ್‌ ಮಾಡಿದ್ದಾರೆ . ನೆಟ್ಟಿಗರು ಕೂಡ ʻಕೆಆರ್‌ಕೆ ಇನ್ನೂ ವಾಟ್ಸಾಪ್ ಫಾರ್ವರ್ಡ್‌ಗಳನ್ನು ನಂಬುತ್ತಾರೆʼಎಂದು ಕಮೆಂಟ್‌ ಮಾಡಿದ್ದಾರೆ.

Paris Olympics 2024 : ಜಿಯೋಸಿನಿಮಾದಲ್ಲಿ ಪ್ಯಾರಿಸ್​ ಒಲಿಂಪಿಕ್ಸ್​​ ಉಚಿತ ನೇರಪ್ರಸಾರಇದನ್ನೂ ಓದಿ:

ಮೀಜನ್ ಜಾವೇದ್ ಅವರು ಅನಂತ್ ಅಂಬಾನಿಯವರ ಆತ್ಮೀಯ ಸ್ನೇಹಿತರಾಗಿದ್ದಾರೆ. ಮೀಜನ್ ಜಾವೇದ್ ಎಲ್ಲಾ ಮದುವೆಯ ಹಬ್ಬಗಳಲ್ಲಿ ಭಾಗವಹಿಸುತ್ತಿದ್ದರು. ಮೀಜಾನ್ ಅವರು ʻಪದ್ಮಾವತ್ʼ, ʻಬಾಜಿರಾವ್ ಮಸ್ತಾನಿʼ ಮತ್ತು ʻಗಂಗೂಬಾಯಿ ಕಥಿವಾಡಿʼಯಲ್ಲಿ ಸಂಜಯ್ ಲೀಲಾ ಬನ್ಸಾಲಿ ಅವರಿಗೆ ಸಹಾಯಕ ನಿರ್ದೇಶಕರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಅವರು ಬನ್ಸಾಲಿಯವರ 2019 ರ ನಿರ್ಮಾಣದ ಮಲಾಲ್‌ನಲ್ಲಿ ಚಲನಚಿತ್ರ ನಿರ್ಮಾಪಕರ ಸೋದರ ಸೊಸೆ ಶರ್ಮಿನ್ ಸೆಗಲ್ ಎದುರು ನಾಯಕರಾಗಿ ನಟಿಸಿದರು.

ಕಳೆದ ವರ್ಷ ಹಂಗಾಮಾ 2 (2021) ಮತ್ತು ಯಾರಿಯಾನ್ 2 ನಲ್ಲಿ ನಟಿಸಿದ್ದಾರೆ. ಅವರು ಮುಂದೆ ಮಿರಾಂಡಾ ಬಾಯ್ಸ್ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಜಾವೇದ್ ಕೊನೆಯದಾಗಿ 2022 ರ ನೆಟ್‌ಫ್ಲಿಕ್ಸ್ ಇಂಡಿಯಾ ಚಲನಚಿತ್ರ ʻಜಾದುಗರ್‌ʼನಲ್ಲಿ ಕಾಣಿಸಿಕೊಂಡರು.

Continue Reading
Advertisement
CM Siddaramaiah
ಕರ್ನಾಟಕ4 mins ago

CM Siddaramaiah: ಆಸ್ತಿ ಬಗ್ಗೆ ತಪ್ಪು ಮಾಹಿತಿ; ಸಿಎಂ ವಿರುದ್ಧ ಚುನಾವಣಾ ಆಯೋಗಕ್ಕೆ ಮತ್ತೆರಡು ದೂರು

Viral News
Latest22 mins ago

Viral News: ಬಾಸ್‌ ಜತೆ ಚಕ್ಕಂದವಾಡುತ್ತಿದ್ದ ಕಿಲಾಡಿ ಪತ್ನಿ; ಡ್ರೋನ್‌ ಬಳಸಿ ಪತ್ತೆ ಹಚ್ಚಿದ ಚಾಲಾಕಿ ಗಂಡ!

Rishabh Pant
ಕ್ರಿಕೆಟ್26 mins ago

Rishabh Pant: ಸಹ ಆಟಗಾರ ಖಲೀಲ್​ ಅಹ್ಮದ್​ರನ್ನು ಸ್ವಿಮ್ಮಿಂಗ್ ಪೂಲ್‌​ಗೆ ತಳ್ಳಿ ಹಾಕಿದ ಪಂತ್​; ವಿಡಿಯೊ ವೈರಲ್​

Karnataka Rain
ಮಳೆ26 mins ago

Karnataka Rain : ಭಾರಿ ಮಳೆ ಎಫೆಕ್ಟ್‌-ಮಲಗಿದ್ದ‌ ವ್ಯಕ್ತಿ ಮೇಲೆ ಬಿದ್ದ ಗೋಡೆ; ಮರ ಬಿದ್ದು ಕಾರು ಜಖಂ, ಚಾಲಕ ಜಸ್ಟ್‌ ಮಿಸ್‌

2nd Puc Result
ಪ್ರಮುಖ ಸುದ್ದಿ31 mins ago

‌2nd PUC Exam Result: ದ್ವಿತೀಯ ಪಿಯುಸಿ ಪರೀಕ್ಷೆ- 3 ಫಲಿತಾಂಶ ಪ್ರಕಟ, 23.73% ವಿದ್ಯಾರ್ಥಿಗಳು ಪಾಸ್

Stuck in Lift
Latest37 mins ago

Stuck in Lift: ಫ್ಯಾನಿಲ್ಲ, ಲೈಟಿಲ್ಲ, ಆಹಾರವಿಲ್ಲ; 2 ದಿನ ಲಿಫ್ಟ್‌ನಲ್ಲಿ ಸಿಲುಕಿದ್ದವನ ಸ್ಥಿತಿ ಹೇಗಿರಬಹುದು ಊಹಿಸಿ!

7th Pay Commission
ಕರ್ನಾಟಕ53 mins ago

7th Pay Commission: ಸರ್ಕಾರಿ ನೌಕರರ ವೇತನ, ಪಿಂಚಣಿ 58% ಹೆಚ್ಚಳ; ಸಂಪೂರ್ಣ ಲೆಕ್ಕ ಕೊಟ್ಟ ಸಿದ್ದರಾಮಯ್ಯ

Viral Video
Latest56 mins ago

Viral Video: ಸ್ಟ್ರೆಚರ್‌ ಇಲ್ಲದ ಸರ್ಕಾರಿ ಆಸ್ಪತ್ರೆ; ಪತಿಯನ್ನು ಬೆನ್ನ ಮೇಲೆ ಹೊತ್ತು ನಡೆದ ಪತ್ನಿ! ಮನಮಿಡಿಯುವ ವಿಡಿಯೊ

7th Pay Commission
ಕರ್ನಾಟಕ1 hour ago

7th Pay Commission: ಆ.1ರಿಂದ ನೌಕರರ ವೇತನ ಹೆಚ್ಚಳ; ಸರ್ಕಾರಕ್ಕೆ ವಾರ್ಷಿಕ 20,208 ಕೋಟಿ ಹೆಚ್ಚುವರಿ ಹೊರೆ ಎಂದ ಸಿಎಂ

Sexual Abuse
Latest1 hour ago

Sexual Abuse: ಹೆಣ್ಣು ಮಕ್ಕಳಿಗೆ ಈಗ ಶಾಲೆ ಕೂಡ ಸುರಕ್ಷಿತವಲ್ಲ! ಶಾಲಾ ಶೌಚಾಲಯದಲ್ಲಿ ಬಾಲಕಿ ಮೇಲೆ ಬಾಲಕನಿಂದ ಅತ್ಯಾಚಾರ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ4 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ22 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌