ʼಆಕಾಸʼಕ್ಕೆ ಮೂರೇ ಗೇಣು! ಕೈಗೆಟಕುವ ದರದಲ್ಲಿ ವಿಮಾನ ಪ್ರಯಾಣ, ಭಾನುವಾರ ಶುರು! - Vistara News

ಪ್ರಮುಖ ಸುದ್ದಿ

ʼಆಕಾಸʼಕ್ಕೆ ಮೂರೇ ಗೇಣು! ಕೈಗೆಟಕುವ ದರದಲ್ಲಿ ವಿಮಾನ ಪ್ರಯಾಣ, ಭಾನುವಾರ ಶುರು!

ಭಾರತದ ವಿಮಾನ ರಂಗದಲ್ಲಿ ಹೊಸ ಭರವಸೆಗಳೊಂದಿಗೆ ಅಗ್ಗದ ದರದಲ್ಲಿ ಜನ ಸಾಮಾನ್ಯರಿಗೆ ವಿಮಾನ ಸೇವೆ ನೀಡಲು ಆಕಾಸ ಏರ್‌, ಆಗಸ್ಟ್‌ 7ರಂದು ತನ್ನ ಚೊಚ್ಚಲ ಹಾರಾಟವನ್ನು ಮುಂಬಯಿ-ಅಹಮದಾಬಾದ್‌ ನಡುವೆ ಆರಂಭಿಸುತ್ತಿದೆ.

VISTARANEWS.COM


on

akasa air
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾರತದ ಆಕಾಶದಲ್ಲಿ ಹೊಚ್ಚ ಹೊಸ ಏರ್‌ಲೈನ್‌ ಆಕಾಸ ಏರ್ ತನ್ನ ಹಾರಾಟವನ್ನು ‌ ಆಗಸ್ಟ್‌ ೭ರಂದು ಆರಂಭಿಸುತ್ತಿದ್ದು, ಪ್ರಯಾಣಿಕರನ್ನು ಆಕರ್ಷಿಸಲು ಸಜ್ಜಾಗಿದೆ. ಖ್ಯಾತ ಹೂಡಿಕೆದಾರ ರಾಕೇಶ್‌ ಜುಂಜುನ್‌ವಾಲಾ ಅವರ ಕನಸಿನ ಕೂಸಾಗಿರುವ ಆಕಾಸ ಏರ್‌ಲೈನ್‌, ಭಾರಿ ನಿರೀಕ್ಷೆಗಳನ್ನು ಹುಟ್ಟು ಹಾಕಿದೆ! ಹಾಗಾದರೆ ಆಕಾಸ ಏರ್‌ಲೈನ್‌ ಹುಟ್ಟುಹಾಕಿರುವ ನಿರೀಕ್ಷೆಗಳೇನು? ಇದರಿಂದ ಭಾರತದ ವಿಮಾನಯಾನ ರಂಗದಲ್ಲಿ ಏನೆಲ್ಲಾ ಬದಲಾವಣೆಗಳು ಆಗಲಿವೆ? ಜನ ಸಾಮಾನ್ಯರಿಗೂ ವಿಮಾನದಲ್ಲಿ ಸುಲಭವಾಗಿ ಪ್ರಯಾಣಿಸುವಂತಾಗಲು ಆಕಾಸ ಏರ್‌ ನೆರವಾಗಲಿದೆಯೇ? ಏರ್‌ಟಿಕೆಟ್‌ ವೆಚ್ಚ ಕಡಿಮೆಯಾಗಲಿದೆಯೇ? ಈ ಎಲ್ಲ ಪ್ರಶ್ನೆಗಳಿಗೆ ವಿಸ್ತಾರ ನ್ಯೂಸ್‌ನ ಬಿಸಿನೆಸ್‌ & ಎಕಾನಮಿ ವಿಭಾಗದ ಕನ್ಸಲ್ಟಿಂಗ್‌ ಎಡಿಟರ್‌ ಆಗಿರುವ ಗಿರಿ ಪ್ರಕಾಶ್‌ ಅವರು ವಿವರಿಸಿದ್ದಾರೆ.

ಆಕಾಸ ಏರ್‌ನ ಮೊದಲ ವಿಮಾನ ಹಾರಾಟ ಆರಂಭ ಆ.೭ರಿಂದ ಶುರುವಾಗುತ್ತಿದೆ. ಹಾಗಾದರೆ ಭಾರತದ ವಿಮಾನಯಾನ ರಂಗದಲ್ಲಿ ಏನಾದರೂ ಹೊಸ ಬದಲಾವಣೆಯನ್ನು ನಿರೀಕ್ಷಿಸಬಹುದೇ?

ಬಹಳ ಬದಲಾವಣೆಯನ್ನು ನಿರೀಕ್ಷಿಸಬಹುದು. ಮೊದಲನೆಯದಾಗಿ ಪ್ರಯಾಣಿಕರಿಗೆ ಹೊಸ ಆಯ್ಕೆ ಸಿಗುತ್ತದೆ. ಏರ್‌ಲೈನ್‌ಗಳ ಸಂಖ್ಯೆ ಹೆಚ್ಚಾದರೆ ಏರ್‌ ಟಿಕೆಟ್‌ ದರ ಇಳಿಕೆಯಾಗಬಹುದು. ಆಕಾಸ ಏರ್‌ ಅಗ್ಗದ ವೆಚ್ಚದ ಏರ್‌ಲೈನ್‌ ವಿಭಾಗದಲ್ಲಿ ಇರುವುದರಿಂದ ಜನ ಸಾಮಾನ್ಯರಿಗೆ ಕಡಿಮೆ ದರದಲ್ಲಿ ಟಿಕೆಟ್‌ ಸಿಗುವುದರಿಂದ ದೊಡ್ಡಮಟ್ಟಿನ ಅನುಕೂಲವಾಗಲಿದೆ. ಎರಡನೆಯದಾಗಿ ವಿಮಾನಯಾನದ ಸಂಪರ್ಕ ಹೆಚ್ಚುತ್ತದೆ. ಏರ್‌ಲೈನ್‌ಗಳ ನಡುವೆ ಪೈಪೋಟಿ ಉಂಟಾಗುತ್ತದೆ. ಇದು ಇಂಡಸ್ಟ್ರಿಗೂ, ಬಳಕೆದಾರರಿಗೂ ಅನುಕೂಲ.

ಜನ ಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ವಿಮಾನಯಾನದ ಕನಸು ನನಸಾಗಲಿದೆಯೇ?

ಹೌದು. ಆಕಾಸ ಏರ್‌ಲೈನ್‌ ಭಾನುವಾರ ಆರಂಭವಾಗುತ್ತಿದೆ. ಬಳಿಕ ಜೆಟ್‌ ಏರ್‌ವೇಸ್‌ ಪುನರಾರಂಭವಾಗುತ್ತದೆ. ಇನ್ನೂ ಒಂದೆರಡು ಏರ್‌ಲೈನ್‌ಗಳು ಅಸ್ತಿತ್ವಕ್ಕೆ ಬರಲಿದೆ. ಇದು ಬಹಳ ಒಳ್ಳೆಯದು. ಮೂಲತಃ ವಿಮಾನಗಳಲ್ಲಿ ಬಳಕೆಯಾಗುವ ಎಟಿಎಫ್‌ ( Aviation Turbine Fuel) ಇಂಧನದ ದರ ಹೆಚ್ಚಳವಾಗಿದೆ. ಎಟಿಎಫ್‌ ಜಿಎಸ್‌ಟಿ ವ್ಯಾಪ್ತಿಗೆ ಸದ್ಯ ಬಂದಿಲ್ಲ. ಇದು ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ವಿಷಯವಾಗಿದೆ. ರಾಜ್ಯ ಸರ್ಕಾರಗಳು ಎಟಿಎಫ್‌ ಮೇಲೆ ಅಬಕಾರಿ ಸುಂಕವನ್ನು ವಿಧಿಸುತ್ತವೆ. ಹೀಗಾಗಿ ಏರ್‌ ಟಿಕೆಟ್‌ ವೆಚ್ಚ ದುಬಾರಿಯಾಗಿದೆ. ಅದರ ಬದಲಿಗೆ ಎಟಿಎಫ್‌ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತಂದರೆ, ಅಥವಾ ರಾಜ್ಯ ಸರ್ಕಾರಗಳೇ ಎಟಿಎಫ್‌ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿದರೆ, ಏರ್‌ಲೈನ್‌ಗಳಿಗೆ ಇಂಧನ ವೆಚ್ಚ ಕಡಿಮೆಯಾಗಲಿದೆ. ಹಾಗೂ ಅದನ್ನು ಗ್ರಾಹಕರಿಗೆ ವರ್ಗಾಯಿಸಬಹುದು. ಆಗ ಟಿಕೆಟ್‌ ದರ ಕಡಿಮೆಯಾಗುತ್ತದೆ. ಎರಡನೆಯದಾಗಿ ಹಲವು ಏರ್‌ಪೋರ್ಟ್‌ಗಳು ಖಾಸಗೀಕರಣವಾಗಿವೆ. ದಿಲ್ಲಿ, ಬೆಂಗಳೂರು, ಮುಂಬಯಿ, ಅಲ್ಲಿ ಏರ್‌ಲೈನ್‌ಗಳಿಗೆ ತಗಲುವ ವೆಚ್ಚ ಹೆಚ್ಚುತ್ತದೆ. ವಿಮಾನದ ಲ್ಯಾಂಡಿಂಗ್‌, ಟೇಕಾಫ್‌ಗೆ ತಗಲುವ ಖರ್ಚಿನಲ್ಲಿ ಹೆಚ್ಚಳವಾಗಿದೆ. ಆದರೆ ಇನ್ನೂ ಒಂದೆರಡು ವರ್ಷಗಳಲ್ಲಿ ಜನರಿಗೆ ರೈಲ್ವೆ ಟಿಕೆಟ್‌ನಂತೆ ಏರ್ ಟಿಕೆಟ್‌ ಕಡಿಮೆ ಬೆಲೆಗೆ ಸಿಗುವ ವಿಶ್ವಾಸ ಇದೆ.

ರಾಕೇಶ್‌ ಜುಂಜುನ್‌ವಾಲಾ ಷೇರು ಮಾರುಕಟ್ಟೆಯ ದಿಗ್ಗಜರು. ಏರ್‌ಲೈನ್‌ ಇಂಡಸ್ಟ್ರಿಯಲ್ಲಿ ಅವರಿಂದ ಏನನ್ನು ನಿರೀಕ್ಷಿಸಬಹುದು?

ಆಕಾಸ ಏರ್‌ನಲ್ಲಿ ರಾಕೇಶ್‌ ಜುಂಜುನ್‌ವಾಲಾ ೪೦% ಷೇರುಗಳನ್ನು ಹೊಂದಿದ್ದಾರೆ. ೨೫ ಮಿಲಿಯನ್‌ ಡಾಲರ್‌ ಹೂಡಿಕೆ ಮಾಡಿದ್ದಾರೆ. (ಅಂದಾಜು ೧೯೭ ಕೋಟಿ ರೂ.) ಏರ್‌ಲೈನ್‌ ಕ್ಷೇತ್ರದಲ್ಲಿ ಸುದೀರ್ಘ ವೃತ್ತಿಪರ ಅನುಭವ ಇರುವವರನ್ನು ಆಕಾಸ ಏರ್‌ಗೆ ಕರೆ ತಂದಿದ್ದಾರೆ. ವಿನಯ್‌ ದುಬೆ ಅವರು ಆಕಾಸ್‌ ಏರ್‌ನ ಸಹ ಸಂಸ್ಥಾಪಕ ಮತ್ತು ಸಿಇಒ. ಅವರು ಈ ಹಿಂದೆ ಜೆಟ್‌ ಏರ್‌ವೇಸ್‌ನ ಸಿಇಒ ಆಗಿದ್ದರು. ಆದಿತ್ಯ ಘೋಷ್‌ ಹಲವಾರು ವರ್ಷ ಇಂಡಿಗೊದ ಸಿಇಒ ಆಗಿದ್ದರು. ಇಂಡಿಗೊ ಏರ್‌ಲೈನ್‌ ಈಗ ಮಾರುಕಟ್ಟೆಯಲ್ಲಿ ೫೮% ಪಾಲನ್ನು ಗಳಿಸಿರುವುದರಲ್ಲಿ ಅವರ ಪಾತ್ರ ದೊಡ್ಡದು. ಅವರು ಈಗ ಆಕಾಸ ಏರ್‌ಲೈನ್‌ಗೆ ಸೇರ್ಪಡೆಯಾಗಿದ್ದಾರೆ. ಆಕಾಸ ಏರ್‌ಲೈನ್‌ ಆಡಳಿತ ಮಂಡಳಿಯಲ್ಲಿ ರಾಕೇಶ್‌ ಜುಂಜುನ್‌ವಾಲಾ ಅವರನ್ನು ಪ್ರತಿನಿಧಿಸಲಿದ್ದಾರೆ. ಅದೇ ರೀತಿ ಪ್ರವೀಣ್‌ ನಾಯರ್‌ ಕೂಡ ಸಹ ಸಂಸ್ಥಾಪಕರು. ರಾಕೇಶ್‌ ಜುಂಜುನ್‌ವಾಲಾ ತಾವಾಗಿಯೇ ಆಕಾಸ ಏರ್‌ಲೈನ್‌ನಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ವೃತ್ತಿಪರರ ಮೂಲಕ ನಡೆಸುತ್ತಾರೆ. ಅದು ಏರ್‌ಲೈನ್‌ಗೂ ಒಳ್ಳೆಯದು. ಸಾಮಾನ್ಯವಾಗಿ ಬೇರೆ ಏರ್‌ಲೈನ್‌ಗಳಲ್ಲಿ ಸ್ಥಾಪಕರೇ ನಡೆಸುತ್ತಾರೆ. ಅವರಿಗೆ ಏರ್‌ಲೈನ್‌ ನಡೆಸಿ ಅನುಭವ ಇರಲೂಬಹುದು, ಇಲ್ಲದೆಯೂ ಇರಬಹುದು. ಉದಾಹರಣೆಗೆ ವಿಜಯ್‌ ಮಲ್ಯ ಅವರಿಗೆ ಲಿಕ್ಕರ್‌ ಉದ್ದಿಮೆಯಲ್ಲಿ ತೊಡಗಿಸಿಕೊಂಡಿದ್ದವರು. ಕಿಂಗ್‌ಫಿಶರ್‌ ಚೇರ್ಮನ್‌ ಆಗಿದ್ದರು. ಆದರೆ ಲಿಕ್ಕರ್‌ ಬಿಸಿನೆಸ್‌ ಅನ್ನು ಏರ್‌ಲೈನ್‌ ಬಿಸಿನೆಸ್‌ಗೆ ಹೋಲಿಸಲಾಗದು. ಮದ್ಯದ ಉದ್ದಿಮೆಯಲ್ಲಿ ೪೦ % ಲಾಭ ಸಿಗುತ್ತದೆ. ಆದರೆ ಏರ್‌ಲೈನ್‌ ಇಂಡಸ್ಟ್ರಿಯಲ್ಲಿ ೧೦ ವರ್ಷ ಆದ ಮೇಲೆ ೨% ಲಾಭ ಸಿಗುತ್ತದೆ. ಕಿಂಗ್‌ಫಿಶರ್‌ ವಿಫಲವಾಗಲು ಇದೂ ಒಂದು ಕಾರಣ. ಆಕಾಸ ಏರ್‌ಲೈನ್‌ ನುರಿತ ವೃತ್ತಿಪರರಿಂದ ನಡೆಯಲಿರುವುದರಿಂದ ಸಫಲವಾಗುವ ನಿರೀಕ್ಷೆ ಇದೆ.

ವಿಮಾನಯಾನದ ಸುರಕ್ಷತೆ ಕುರಿತ ಸ್ಥಿತಿ ಗತಿ ಹೇಗಿದೆ?

ಬೋಯಿಂಗ್‌ನ ಎರಡು ೭೩೭ ಮ್ಯಾಕ್ಸ್‌ ವಿಮಾನಗಳು ೨೦೧೮-೨೦೨೦ರ ಅವಧಿಯಲ್ಲಿ ಭೀಕರ ಅಪಘಾತಕ್ಕೀಡಾಯಿತು. ಬೋಯಿಂಗ್‌ ಸಂಸ್ಥೆ ವಿಮಾನದ ಉತ್ಪಾದನೆಯನ್ನೇ ಸ್ಥಗಿತಗೊಳಿಸಿತ್ತು. ಈಗ ಆಕಾಸ ಏರ್‌, ೭೨ ಬೋಯಿಂಗ್‌ ೭೩೭ ಮ್ಯಾಕ್ಸ್‌ ೮ ವಿಮಾನಗಳನ್ನು ಖರೀದಿಸುತ್ತಿದೆ. ಇದರ ಬೆಲೆ ೯ ಶತಕೋಟಿ ಡಾಲರ್‌ (ಅಂದಾಜು ೭೧,೧೦೦ ಕೋಟಿ ರೂ.). ಬಹಳ ಧೈರ್ಯ ಮಾಡಿ ಆಕಾಸ ಏರ್‌ ಈ ಮೆಗಾ ಆರ್ಡರ್‌ ಅನ್ನು ಮಾಡಿದೆ. ಮೊದಲ ಬಾರಿಗೆ ಬಾಡಿಗೆ ವಿಮಾನಗಳ ಬದಲಿಗೆ ಹೊಸ ವಿಮಾನಗಳನ್ನೇ ರಾಕೇಶ್‌ ಜುಂಜುನ್‌ವಾಲಾ ಖರೀದಿಸಿದ್ದಾರೆ. ಸಾಮಾನ್ಯವಾಗಿ ಹೊಸ ಏರ್‌ಲೈನ್‌ಗಳು ೪-೫ ವರ್ಷ ಹಳೆಯ ವಿಮಾನಗಳನ್ನು ಲೀಸ್‌ಗೆ ಪಡೆದು ಹಾರಾಟ ಆರಂಭಿಸುತ್ತಾರೆ. ಆದರೆ ಜುಂಜುನ್‌ವಾಲಾ ಹೊಸ ವಿಮಾನಗಳನ್ನೇ ಖರೀದಿಸುತ್ತಿದ್ದಾರೆ. ಮಾತ್ರವಲ್ಲದೆ ಬೋಯಿಂಗ್‌ ೭೩೭ ಮ್ಯಾಕ್ಸ್‌ನಂಥ ೧೮೯ ಪ್ರಯಾಣಿಕರನ್ನು ಕರೆದೊಯ್ಯಬಲ್ಲ ವಿಮಾನವನ್ನೇ ಖರೀದಿಸುತ್ತಿದ್ದಾರೆ. ಇದು ದೊಡ್ಡ ಸಾಹಸವೇ ಸರಿ. ಭಾರತದಲ್ಲಿ ಏರ್‌ಲೈನ್‌ ಯಶಸ್ವಿಯಾಗಬೇಕಾದ ಅಗತ್ಯ ಇದೆ.

ಆಕಾಸ ಏರ್‌ಗೆ ಮುಂದಿರುವ ಸವಾಲುಗಳೇನು?

ಆಕಾಸ ಏರ್‌ಗೆ ಸಹಜವಾಗಿ ದೊಡ್ಡ ಸವಾಲು ಇದೆ. ಇಂಡಿಗೊ ಏರ್‌ಲೈನ್‌ ಮಾರುಕಟ್ಟೆ ಪಾಲು ೫೮% ಇದೆ. ಪ್ರಯಾಣಿಕರಿಗೆ ಹೊಸ ವಿಮಾನಯಾನದ ಅನುಭವ ನೀಡುವುದಾಗಿ ಹೇಳಿದ್ದಾರೆ. ಅದು ಹೇಗೆ ಎಂಬುದು ಗೊತ್ತಿಲ್ಲ. ೧.೯ ಕೋಟಿ ಪ್ರಯಾಣಿಕರು ಭಾರತದಲ್ಲಿ ವಿಮಾನಗಳನ್ನು ಬಳಸುತ್ತಿದ್ದಾರೆ. ಅದು ಹೆಚ್ಚಿದರೆ ಆಕಾಸ ಏರ್‌ಗೆ ಅನುಕೂಲವಾಗಲಿದೆ. ಈಗ ಹಲವು ಮಂದಿ ಏರ್‌ ಟಿಕೆಟ್‌ ದರ ದುಬಾರಿಯಾದ್ದರಿಂದ ಪ್ರಯಾಣ ಮಾಡದಿರಬಹುದು. ಆಕಾಸ್‌ ಏರ್‌ ಎರಡು ಮಹತ್ವದ ಮಾರ್ಗಗಳನ್ನು ಆಯ್ಕೆ ಮಾಡಿಕೊಂಡಿದೆ. ಅವೆಂದರೆ ಮುಂಬಯಿ-ಅಹಮದಾಬಾದ್‌ ಮತ್ತು ಬೆಂಗಳೂರು-ಕೊಚ್ಚಿನ್‌ ಮಾರ್ಗದಲ್ಲಿ ವಿಮಾನ ಸೇವೆ ಆರಂಭಿಸುತ್ತಿದ್ದಾರೆ. ಆದರೆ ಈ ಮಾರ್ಗದಲ್ಲಿ ಪೈಪೋಟಿಯೂ ಇದೆ.

ಬೆಂಗಳೂರಿಗರಿಗೆ ಆಕಾಸ ಏರ್‌ಲೈನ್‌ನಿಂದ ಪ್ರಯೋಜನ ಏನು?

ಆಕಾಸ ಏರ್‌ ಬೆಂಗಳೂರು-ಕೊಚ್ಚಿನ್‌ ನಡುವೆ ವಿಮಾನ ಹಾರಾಟ ಆರಂಭಿಸುತ್ತಿದೆ. ಮುಂಬಯಿ-ಅಹಮದಾಬಾದ್‌ ಬಳಿಕ ಎರಡನೇ ಮಾರ್ಗವಾಗಿ ಬೆಂಗಳೂರು-ಕೊಚ್ಚಿನ್‌ ಅನ್ನು ಆಯ್ಕೆ ಮಾಡಿರುವುದು ಗಮನಾರ್ಹ. ಅತಿ ಹೆಚ್ಚು ಸಂಚಾರ ದಟ್ಟಣೆ ಇರುವ ಮಾರ್ಗಗಳಲ್ಲಿ ಇದೂ ಒಂದು. ಕಿಂಗ್‌ಫಿಶರ್‌ ಆರಂಭವಾದಾಗ ಮೊದಲ ವಿಮಾನ ಮುಂಬಯಿ-ಬೆಂಗಳೂರು ನಡುವೆ ಹಾರಿತ್ತು. ಬೆಂಗಳೂರಿಗೆ ಆಕಾಸ ಏರ್‌ ಭಾರಿ ಮಹತ್ವ ನೀಡಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡನೇ ಟರ್ಮಿನಲ್‌ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್‌ನಲ್ಲಿ ಉದ್ಘಾಟಿಸಲಿದ್ದಾರೆ. ದಕ್ಷಿಣ ಏಷ್ಯಾದಲ್ಲಿಯೇ ವೇಗವಾಗಿ ಬೆಳೆಯುತ್ತಿರುವ ಏರ್‌ಪೋರ್ಟ್‌ಗಳಲ್ಲಿ ಇದೂ ಒಂದಾಗಿದೆ. ಸ್ಪೈಸ್‌ ಜೆಟ್‌, ಏರ್‌ ವಿಸ್ತಾರ, ಗೋ ಫಸ್ಟ್, ಇಂಡಿಗೊ, ಏರ್‌ ಏಷ್ಯಾ, ಏರ್‌ ಇಂಡಿಯಾ, ಮುಂಬರಲಿರುವ ಆಕಾಸ ಏರ್‌ ಸೇರಿದಂತೆ ಏಳೆಂಟು ಏರ್‌ಲೈನ್‌ಗಳಿಂದ ಭಾರತದ ವೈಮಾನಿಕ ರಂಗದಲ್ಲಿ ಸಾಕಷ್ಟು ಬದಲಾವಣೆಗಳನ್ನು ಭವಿಷ್ಯದಲ್ಲಿ ನಿರೀಕ್ಷಿಸಬಹುದು.

ಆಕಾಸ ಏರ್‌ ಹಾರಾಟ ಯಾವಾಗ? ಎಲ್ಲಿಂದ ಎಲ್ಲಿಗೆ?

  • ಆಕಾಸ ಏರ್‌ನ ಮೊದಲ ವಿಮಾನ ಹಾರಾಟ ಆಗಸ್ಟ್‌ ೭ರಂದು ಮುಂಬಯಿನಿಂದ ಅಹಮದಾಬಾದ್‌ಗೆ.
  • ಆಗಸ್ಟ್‌ ೧೩ರಿಂದ ಬೆಂಗಳೂರಿನಿಂದ ಕೊಚ್ಚಿನ್‌ಗೆ ವಿಮಾನ ಹಾರಾಟ.
  • ಆಗಸ್ಟ್‌ ೨೩ರಿಂದ ಬೆಂಗಳೂರು-ಅಹಮದಾಬಾದ್‌ಗೆ ಹಾರಾಟ.
  • ಆಗಸ್ಟ್‌ ೩೦ರಿಂದ ಬೆಂಗಳೂರು-ಮುಂಬಯಿಗೆ ಹಾರಾಟ
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Rohit Sharma : ರೋಹಿತ್ ಶರ್ಮಾ ದೌರ್ಬಲ್ಯವನ್ನು ಬೊಟ್ಟು ಮಾಡಿ ತೋರಿಸಿದ ವಾಸಿಮ್​ ಜಾಫರ್​

Rohit Sharma : ಮುಂಬರುವ ಟಿ 20 ವಿಶ್ವಕಪ್​​ನಲ್ಲಿ ಭಾರತ ತಂಡವು ಪಾಕಿಸ್ತಾನವನ್ನು ಎದುರಿಸಲು ಸಜ್ಜಾಗಿದೆ ಮತ್ತು ಸಾಂಪ್ರದಾಯಿಕ ಎದುರಾಳಿ ತಂಡ ವಿಶ್ವದ ಅಗ್ರ ಎಡಗೈ ವೇಗಿಗಳಲ್ಲಿ ಒಬ್ಬರಾದ ಶಾಹೀನ್ ಅಫ್ರಿದಿ ಅವರನ್ನು ಹೊಂದಿದ್ದಾರೆ. ಇದಲ್ಲದೆ ಇತರ ನುರಿತ ಎಡಗೈ ಆಟಗಾರರು ಕಾಣಿಸಿಕೊಳ್ಳಲಿದ್ದಾರೆ.

VISTARANEWS.COM


on

Rohit Sharma
Koo

ಬೆಂಗಳೂರು: ಹಾಲಿ ಆವೃತ್ತಿಯಲ್ಲಿ ಐಪಿಎಲ್​ನಲ್ಲಿ (IPL 2024) ಮುಂಬೈ ಇಂಡಿಯನ್ಸ್ (Mumbai Indian’s) ತಂಡದ ಆರಂಭಿಕ ಬ್ಯಾಟರ್​ ರೋಹಿತ್ ಶರ್ಮಾ (Rohit Sharma) ಮಿಂಚುತ್ತಿಲ್ಲ. ಅವರು ಕನಿಷ್ಠ ಮೊತ್ತಗಳಿಗೆ ಔಟ್​ ಆಗುತ್ತಿದ್ದಾರೆ. ಬಲಗೈ ಬ್ಯಾಟರ್​​ ಕಳೆದ ತಿಂಗಳು ಸಿಎಸ್ಕೆ (CSK) ವಿರುದ್ಧ ಶತಕ ಬಾರಿಸಿದರೂ ಅದನ್ನು ಮುಂದುವರಿಸಲು ಅವರಿಗೆ ಸಾಧ್ಯವಾಗಿಲ್ಲ. ಅಂತೆಯೇ ಕಳೆದ ಮೂರು ಇನಿಂಗ್ಸ್​ಗಳಲ್ಲಿ ರೋಹಿತ್ ಎರಡಂಕಿ ಮೊತ್ತವನ್ನು ಮುಟ್ಟಲು ಸಾಧ್ಯವಾಗಿಲ್ಲ. ಒಟ್ಟಾರೆಯಾಗಿ, ಅವರು ಈ ಋತುವಿನಲ್ಲಿ ಇಲ್ಲಿಯವರೆಗೆ 10 ಇನಿಂಗ್ಸ್​​ಗಳಲ್ಲಿ 35 ಸರಾಸರಿ ಮತ್ತು 158.29 ಸ್ಟ್ರೈಕ್ ರೇಟ್​ನೊಂದಿಗೆ 315 ರನ್ ಗಳಿಸಿದ್ದಾರೆ.

ಟಿ 20 ವಿಶ್ವಕಪ್ 2024 ಸಮೀಪಿಸುತ್ತಿರುವುದರಿಂದ ರೋಹಿತ್ ಶರ್ಮಾ ಅವರ ಫಾರ್ಮ್ ಮತ್ತು ಅವರು ಔಟಾಗುತ್ತಿರುವ ವಿಧಾನದ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಅನುಭವಿ ಆರಂಭಿಕ ಆಟಗಾರ ಪ್ರಸ್ತುತ ನಡೆಯುತ್ತಿರುವ ಐಪಿಎಲ್​ನಲ್ಲಿ ಎಡಗೈ ವೇಗಿಗಳಿಂದ ಆಗಾಗ್ಗೆ ತೊಂದರೆಗೀಡಾಗಿದ್ದಾರೆ. ಟ್ರೆಂಟ್ ಬೌಲ್ಟ್ ಎರಡು ಬಾರಿ ವಿಕೆಟ್ ಪಡೆದರೆ, ರೋಹಿತ್ ಶರ್ಮಾ ಅವರನ್ನು ಸ್ಯಾಮ್ ಕರ್ರನ್, ಖಲೀಲ್ ಅಹ್ಮದ್ ಮತ್ತು ಮೊಹ್ಸಿನ್ ಖಾನ್ ತಲಾ ಒಂದು ಬಾರಿ ಔಟ್ ಮಾಡಿದ್ದಾರೆ.

ಮುಂಬರುವ ಟಿ 20 ವಿಶ್ವಕಪ್​​ನಲ್ಲಿ ಭಾರತ ತಂಡವು ಪಾಕಿಸ್ತಾನವನ್ನು ಎದುರಿಸಲು ಸಜ್ಜಾಗಿದೆ ಮತ್ತು ಸಾಂಪ್ರದಾಯಿಕ ಎದುರಾಳಿ ತಂಡ ವಿಶ್ವದ ಅಗ್ರ ಎಡಗೈ ವೇಗಿಗಳಲ್ಲಿ ಒಬ್ಬರಾದ ಶಾಹೀನ್ ಅಫ್ರಿದಿ ಅವರನ್ನು ಹೊಂದಿದ್ದಾರೆ. ಇದಲ್ಲದೆ ಇತರ ನುರಿತ ಎಡಗೈ ಆಟಗಾರರು ಕಾಣಿಸಿಕೊಳ್ಳಲಿದ್ದಾರೆ.

ಕೆಕೆಆರ್ ವಿರುದ್ಧದ ಮುಂಬೈ ಇಂಡಿಯನ್ಸ್ನ ಮುಂದಿನ ಪಂದ್ಯಕ್ಕೆ ಮುಂಚಿತವಾಗಿ, ಭಾರತದ ಮಾಜಿ ಬ್ಯಾಟ್ಸ್ಮನ್ ವಾಸಿಮ್ ಜಾಫರ್ ಎಡಗೈ ವೇಗದ ಬೌಲರ್​ಗಳ ವಿರುದ್ಧ ರೋಹಿತ್ ಶರ್ಮಾ ಯಾಕೆ ವೈಫಲ್ಯ ಹೊಂದುತ್ತಿದ್ದಾರೆ ಎಂಬ ಮಾಹಿತಿಯನ್ನು ಬಹಿರಂಗ ಮಾಡಿದ್ದಾರೆ.

ಎಡಗೈ ವೇಗಿಗಳ ವಿರುದ್ಧ ಅವರು ಸಾಖಷ್ಟು ಸಮಸ್ಯೆ ಹೊಂದಿದ್ದಾರೆ. ಅವರು ತನ್ನ ಮುಂಭಾಗದ ಕಾಲನ್ನು ಇಡುವ ರೀತಿಯಿಂದಲೇ ತೊಂದರೆಯಾಗುತ್ತಿದೆ. ಎಲ್ಲರಿಗೂ ಅದು ಅರ್ಥವಾಗಿದೆ. ಬಲಗೈ ಬೌಲರ್​ಗಳ ಸಹ ಅವರನ್ನು ಔಟ್ ಮಾಡಲು ಒಂದು ಮಾರ್ಗ ಕಂಡುಕೊಂಡಿದ್ದಾರೆ. ಆದರೆ ಎಡಗೈ ಆಟಗಾರರು ಕೋನವನ್ನು ಸೃಷ್ಟಿಸಿ ಬೌಲಿಂಗ್ ಮಾಡುತ್ತಾರೆ. ಅದು ಅವರಿಗೆ ಕಷ್ಟಕರವಾಗಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಅವರು ಅವರ ಹಿಂದಕ್ಕೆ ಹೋಗಿ ಚೆಂಡನ್ನು ಎದುರಿಸುತ್ತಾರೆ. ಕೆಲವೊಮ್ಮೆ ಸ್ವಿಂಗ್ ಆಗುವುದನ್ನು ತಪ್ಪಿಸಲು ಮುಂದಕ್ಕೆ ನಡೆಯುತ್ತಾರೆ,” ಎಂದು ಜಾಫರ್ ಹೇಳಿದ್ದಾರೆ.

ಇದನ್ನೂ ಓದಿ: Rohit Sharm : ರೋಹಿತ್ ಶರ್ಮಾ ದೌರ್ಬಲ್ಯವನ್ನು ಬೊಟ್ಟು ಮಾಡಿ ತೋರಿಸಿದ ವಾಸಿಮ್​ ಜಾಫರ್​

ರೋಹಿತ್​ಗೆ ತನ್ನದೇ ಆದ ಸಮಸ್ಯೆಗಳಿದ್ದವು. ಟ್ರೆಂಟ್ ಬೌಲ್ಟ್ ಅವರನ್ನು ಲಾಂಗ್ ಸ್ವಿಂಗ್​ನೊಂದಿಗೆ ಔಟ್ ಮಾಡುತ್ತಾರೆ. ಖಲೀಲ್ ವಿರುದ್ಧವೂ ತನ್ನ ಚಲನೆಯನ್ನು ತಪ್ಪಾಗಿ ಮಾಡಿದರು. ನಾನು ಇದನ್ನು ಯೋಜಿತ ವಿಕೆಟ್​ ಎಂದು ಕರೆಯುವುದಿಲ್ಲ. ಆದರೂ ಅವರ ಆಟದಲ್ಲಿ ಒಂದು ಲೋಪದೋಷವಿದೆ. ಅದು ರೋಹಿತ್​ಗೆ ತಿಳಿದಿದೆ. ಅವರು ಪ್ರತಿದಾಳಿ ಮಾಡಲು ಪ್ರಯತ್ನಿಸುತ್ತಾರೆ. ತಮ್ಮ ಆಕ್ರಮಣಕಾರಿ ಕೌಶಲ್ಯದ ಮೂಲಕ ಸಮಸ್ಯೆಯನ್ನು ತಪ್ಪಿಸಲು ಪ್ರಯತ್ನಿಸುತ್ತಾರೆ, “ಎಂದು ಜಾಫರ್ ಹೇಳಿದ್ದಾರೆ.

ಸಲಹೆ ನೀಡಿದ ಜಾಫರ್​

ಇದೇ ವೇಳೆ ಜಾಫರ್​ ಬ್ಯಾಟಿಂಗ್ ಸಲಹೆಯನ್ನೂ ನೀಡಿದ್ದಾರೆ. ಆಕ್ರಮಣಕಾರಿ ಮಾರ್ಗವನ್ನು ತೆಗೆದುಕೊಳ್ಳಬಾರದು. ಬದಲಿಗೆ ಮೊದಲ ಎರಡು ಓವರ್​ಗಳಲ್ಲಿ ಚೆಂಡನ್ನು ಟೈಮಿಂಗ್ ಮಾಡುವತ್ತ ಗಮನ ಹರಿಸಬೇಕು ಎಂದು ಜಾಫರ್ ರೋಹಿತ್ಗೆ ಸಲಹೆ ನೀಡಿದರು.

ರೋಹಿತ್ ಸ್ವಲ್ಪ ಹೆಚ್ಚು ಸಮಯ ತೆಗೆದುಕೊಳ್ಳಬೇಕಾಗಿದೆ ಎಂದು ನಾನು ಭಾವಿಸುತ್ತೇನೆ. ತಮ್ಮ ಇನ್ನಿಂಗ್ಸ್ ನ ಆರಂಭದಲ್ಲಿಯೇ ಚೆಂಡನ್ನು ಬಾರಿಸಲು ಪ್ರಯತ್ನಿಸುತ್ತಿದ್ದಾರೆ. ಅವರು ಚೆಂಡನ್ನು ತುಂಬಾ ಜೋರಾಇ ಹೊಡೆಯಲು ಪ್ರಯತ್ನಿಸುವ ಬದಲು ಒಂದೆರಡು ಓವರ್​ಗಳನ್ನು ತೆಗೆದುಕೊಳ್ಳಬಹುದು ಮತ್ತು ಸಮಯವನ್ನು ನೋಡಬಹುದು. “ಎಂದು ಅವರು ಹೇಳಿದರು.

Continue Reading

ಕ್ರೈಂ

Prajwal Revanna Case: ವಿಡಿಯೊದಲ್ಲಿ ಪ್ರಜ್ವಲ್‌ ಮುಖ ಕಾಣಲ್ಲ; ಗಂಡಸ್ತನವಿದ್ದರೆ ರಾಹುಲ್‌ ಗಾಂಧಿಗೆ ನೋಟಿಸ್‌ ಕೊಡಿ: ಸಿಎಂಗೆ ಎಚ್‌ಡಿಕೆ ಸವಾಲು

Prajwal Revanna Case: ನಿಮಗೆ ಬೇಕಿರುವುದು ಆ ಸಂತ್ರಸ್ತರಿಗೆ ಪರಿಹಾರ ಕೊಡಿಸುವುದಲ್ಲ. ಚುನಾವಣೆ ಪ್ರಚಾರಕ್ಕೆ ಬಳಸಿಕೊಂಡು ಗೆಲ್ಲಬೇಕು ಹಾಗೂ ಪ್ರಧಾನಿ ನರೇಂದ್ರ‌ ಮೋದಿಯವರ ಹೆಸರು ಕೆಡಿಸಬೇಕು ಎಂಬುದಷ್ಟೇ ನಿಮಗೆ ಬೇಕಿದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಅದರಲ್ಲಿ ಏನೂ ರಾಜೀ‌ ಇಲ್ಲ. ನಾವೂ ಎಲ್ಲ ರೀತಿಯ ದಾಖಲೆಗಳನ್ನೂ ತರುತ್ತೇವೆ. ನಾವೇನೂ ಪಲಾಯನವಾದಿಗಳಲ್ಲ. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರ ಪಾತ್ರವಾಗಲೀ, ನನ್ನ ಪಾತ್ರವಾಗಲೀ ಈ ಪ್ರಕರಣದಲ್ಲಿ ಇಲ್ಲ. ಆದರೂ ನಮ್ಮ ಹೆಸರನ್ನು ಎಳೆದು ತರಲಾಗುತ್ತಿದೆ ಎಂದು ಎಚ್‌.ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Prajwal Revanna Case face not visible in videos says HD Kumaraswamy
Koo

ರಾಯಚೂರು: ಪ್ರಜ್ವಲ್ ರೇವಣ್ಣ (Prajwal Revanna Case) 400 ಮಹಿಳೆಯರನ್ನು ರೇಪ್ ಮಾಡಿದ್ದಾರೆ ಎಂದು ರಾಹುಲ್ ಗಾಂಧಿ (Rahul Gandhi) ಹೇಳುತ್ತಾರೆ. ಅವರಿಗೆ ಈ ಮಾಹಿತಿ ಕೊಟ್ಟವರು ಯಾರು? ನೀವು (ಸರ್ಕಾರದವರು) ಕೊಟ್ಟಿದ್ದೀರಾ? ಈ ಕುರಿತು ಬೇಕಾಬಿಟ್ಟಿ ಹೇಳಿಕೆ ನೀಡಿರುವ ರಾಹುಲ್‌ಗೆ ನೋಟಿಸ್‌ ಕೊಡುವಂತೆ ಎಸ್‌ಐಟಿಗೆ ನಿರ್ದೇಶನ ನೀಡಿ. ಈ ಸರ್ಕಾರಕ್ಕೆ‌ ಮಾನ, ಮರ್ಯಾದೆ ಇದ್ದಿದ್ದರೆ, ಹೆಣ್ಣು‌ಮಕ್ಕಳ‌ ಫೋಟೊಗಳನ್ನು ಇಡೀ ದೇಶಕ್ಕೆ ಕಳುಹಿಸುತ್ತಿರಲಿಲ್ಲ. ನಿಮಗೆ‌ ಹೆಣ್ಣು ಮಕ್ಕಳ ಮೇಲೆ ಗೌರವ ಇದೆಯಾ? ನಿಮಗೆ‌ ಗಂಡಸ್ತನ, ತಾಕತ್ತಿದ್ದರೆ ರಾಹುಲ್ ಗಾಂಧಿಗೆ ನೋಟಿಸ್‌ ಕೊಡಿ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಸವಾಲು ಹಾಕಿದರು.

ಈ ಕುರಿತು ರಾಯಚೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ನೀವು‌ ಬಿಟ್ಟಿರುವ ವಿಡಿಯೊಗಳಲ್ಲಿ ಪ್ರಜ್ವಲ್ ಮುಖವೇ ಇಲ್ಲ. ಹಾಗಂತ ನಾನೇನು ಆ ವಿಡಿಯೊಗಳನ್ನು ನೋಡಿಲ್ಲ. ಇಷ್ಟಾದರೂ ಸಹಿಸಿಕೊಂಡಿದ್ದೇವೆ ಎಂದು ಕಿಡಿಕಾರಿದರು.

ಕಾಂಗ್ರೆಸ್‌ನ ಮಹಾನಾಯಕ ತೋಟದಲ್ಲಿ‌ ಏನೇನಾಗಿದೆ? ನೀನೇನು 6 – 7 ಜನರನ್ನು ಹೋಟೆಲ್‌ನಲ್ಲಿ ತೆಗೆದುಕೊಂಡು ಹೋಗಿ ಇಟ್ಟೀದಿಯಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ನಾವೂ ಎಲ್ಲ ರೀತಿಯ ದಾಖಲೆಗಳನ್ನೂ ತರುತ್ತೇವೆ

ನಿಮಗೆ ಬೇಕಿರುವುದು ಆ ಸಂತ್ರಸ್ತರಿಗೆ ಪರಿಹಾರ ಕೊಡಿಸುವುದಲ್ಲ. ಚುನಾವಣೆ ಪ್ರಚಾರಕ್ಕೆ ಬಳಸಿಕೊಂಡು ಗೆಲ್ಲಬೇಕು ಹಾಗೂ ಪ್ರಧಾನಿ ನರೇಂದ್ರ‌ ಮೋದಿಯವರ ಹೆಸರು ಕೆಡಿಸಬೇಕು ಎಂಬುದಷ್ಟೇ ನಿಮಗೆ ಬೇಕಿದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಅದರಲ್ಲಿ ಏನೂ ರಾಜೀ‌ ಇಲ್ಲ. ನಾವೂ ಎಲ್ಲ ರೀತಿಯ ದಾಖಲೆಗಳನ್ನೂ ತರುತ್ತೇವೆ. ನಾವೇನೂ ಪಲಾಯನವಾದಿಗಳಲ್ಲ. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರ ಪಾತ್ರವಾಗಲೀ, ನನ್ನ ಪಾತ್ರವಾಗಲೀ ಈ ಪ್ರಕರಣದಲ್ಲಿ ಇಲ್ಲ. ಆದರೂ ನಮ್ಮ ಹೆಸರನ್ನು ಎಳೆದು ತರಲಾಗುತ್ತಿದೆ ಎಂದು ಎಚ್‌.ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

ಪೆನ್‌ಡ್ರೈವ್‌ ಲೀಕ್‌ ಬಗ್ಗೆ ಹೊರಜಗತ್ತಿಗೆ ಗೊತ್ತಾದ ದಿನವೇ ಹೇಳಿದ್ದೇನೆ. ಈ ನೆಲದ ಕಾನೂನಿಗೆ ತಲೆ ಬಾಗಬೇಕು. ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದು ಹೇಳಿದ್ದೇನೆ. ಆದರೂ‌ ಕ್ಯಾಮರಾ ಹಿಡಿದು ನನ್ನ ಮುಂದೆಯೇ ಏಕೆ ಬರುತ್ತೀರಿ? ಎಂದು ಮಾಧ್ಯಮದವರಿಗೆ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಏನೋ‌ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ.
ಎಸ್.ಐ.ಟಿ. ಜತೆ ಚಿಂತನೆ ಮಾಡುತ್ತೇವೆ ಎಂದು ಹೇಳಿ ಏಪ್ರಿಲ್‌ 28ಕ್ಕೆ ಎಫ್.ಐ.ಆರ್ ಮಾಡಿಸಿದ್ದೀರಿ. ಈ ವಿಚಾರದಲ್ಲಿ ಪದೇ ಪದೆ ಪ್ರಧಾನಿ ಮೋದಿ ಹಾಗೂ ಬಿಜೆಪಿಯವರನ್ನು ಏಕೆ ಎಳೆಯುತ್ತೀರಿ? ಅದಕ್ಕೂ‌ ಪ್ರಧಾನಿಗೂ ಸಂಬಂಧ ಏನು? ಎಂದು ಎಚ್‌.ಡಿ. ಕುಮಾರಸ್ವಾಮಿ ಕೇಳಿದರು.

ಸುಮ್ಮನೆ ನನ್ನನ್ನು ಕೆಣಕಿದ್ದಾರೆ

ನೋಟಿಸ್ ಕೊಟ್ಟ ನಂತರ ಒಂದು ವಾರ ಸಮಯ ಕೇಳಲಾಗಿದೆ. ರೇವಣ್ಣ ಅವರು ಎರಡು ದಿನ ಸಮಯ‌ ಕೇಳಿದ್ದಾರೆ. 8, 10 ಹತ್ತು ಬಾರಿ ಸಮನ್ಸ್ ಕೊಟ್ಟು ಸಮನ್ಸ್‌ಗೇ ಗೌರವ ಕಳಿದಿದ್ದೀರಿ. ದೇವೇಗೌಡರನ್ನು, ಪ್ರಧಾನಿಯವರನ್ನು ಎಳೆದು ತಂದಿದ್ದೀರಿ. ನಿಮ್ಮ ಸರ್ಕಾರದಲ್ಲಿ ನೀವೇ ಈ ರೀತಿಯ ಹೇಳಿಕೆಗಳನ್ನು ಕೊಡುವುದರ ಮುಖಾಂತರ ತನಿಖೆಯ ಹಾದಿಯನ್ನು ತಪ್ಪಿಸುವುದಲ್ಲದೆ, ಪ್ರಚಾರಕ್ಕೋಸ್ಕರ ಈ ಪ್ರಕರಣವನ್ನು ಬಳಸಿಕೊಳ್ಳುತ್ತಿದ್ದೀರಿ. ಕೆಲವರು ಕುಮಾರಸ್ವಾಮಿಯೇ ಈ‌ ಪೆನ್‌ಡ್ರೈವ್‌ ಬಿಟ್ಟಿದ್ದಾಗಿ ಹೇಳುತ್ತಾರೆ. ಇಲ್ಲಿ‌ ನನ್ನ ಹೆಸರನ್ನು ತರಲಾಗಿದೆ. ಸುಮ್ಮನೆ ನನ್ನನ್ನು ಕೆಣಕಿದ್ದಾರೆ ಎಂದು ಎಚ್‌.ಡಿ. ಕುಮಾರಸ್ವಾಮಿ ಗುಡುಗಿದರು.

ಇದನ್ನೂ ಓದಿ: Prajwal Revanna Case‌: ಗನ್‌ ಪಾಯಿಂಟ್‌ನಲ್ಲಿ ಜೆಡಿಎಸ್‌ ನಾಯಕಿ ಮೇಲೆ ಪ್ರಜ್ವಲ್‌ರಿಂದ ರೇಪ್‌? ಎಫ್‌ಐಆರ್‌ನಲ್ಲಿದೆ ಇಂಚಿಂಚು ಡಿಟೇಲ್ಸ್!

ತಂದೆ – ತಾಯಿಗೆ ಆತ್ಮಸ್ಥೈರ್ಯ ತುಂಬಲು ಹೋಗಿದ್ದೆ

ರಾಜ್ಯದ‌ ಮುಖ್ಯಮಂತ್ರಿಗೆ ತಂದೆ – ತಾಯಿ‌ ಮೇಲೆ ಗೌರವ ಇದೆಯೇ? ಸಿದ್ದರಾಮಯ್ಯ ಅವರಿಗೆ ಮನುಷ್ಯತ್ವ ಇಲ್ಲದಿರಬಹುದು. ಆದರೆ, ನಮಗೆ ಇದೆ. ನಾನು ಬಂದಿರುವ ಸಂಸ್ಕೃತಿ ನಮಗೆ ಇದನ್ನು ಕಲಿಸಿದೆ. ನನ್ನ ತಂದೆ – ತಾಯಿ ನೋವಿನಲ್ಲಿದಾರೆ. ಅವರಿಗೆ ಆತ್ಮಸ್ಥೈರ್ಯ ತುಂಬುವುದಕ್ಕೆ ನಾನು ಅವರ ಜತೆ ಎರಡು ದಿನ ಇದ್ದೆ. ನಮ್ಮ ಮನೆಗೆ ಯಾವ ವಕೀಲರು ಬಂದಿದ್ದರು? ಇವತ್ತು ಆರೋಪಿ‌ ಸ್ಥಾನದಲ್ಲಿ‌ ನಿಲ್ಲಿಸಿದ್ದೀರಿ ಎಂದು ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.

Continue Reading

ಪ್ರಮುಖ ಸುದ್ದಿ

Covishield Vaccine: ಕೋವಿಶೀಲ್ಡ್ ಪಡೆದವರು ಫ್ರಿಡ್ಜ್ ನೀರು, ಐಸ್ ಕ್ರೀಂ, ಕೂಲ್‌ ಡ್ರಿಂಕ್ಸ್‌ ಸೇವಿಸಬಾರದು: ತಪ್ಪು ಮಾಹಿತಿ ಕೊಟ್ಟ ಕಾಲೇಜುಗಳಿಗೆ ನೋಟಿಸ್

Covishield Vaccine: ಕೋವಿಶೀಲ್ಡ್ ಲಸಿಕೆ ಅಡ್ಡಪಾರಿಣಾಮಗಳ ಸಂಬಂಧ ಸೂಚನಾ ಪತ್ರ ಹೊರಡಿಸಿ ಎಡವಟ್ಟು ಮಾಡಿಕೊಂಡಿದ್ದ ಚಿಕ್ಕಬಳ್ಳಾಪುರದ ಹಲವು ಕಾಲೇಜು ಆಡಳಿತ ಮಂಡಳಿಗಳ ವಿರುದ್ಧ ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗಿದೆ.

VISTARANEWS.COM


on

Covishield Vaccine
Koo

ಚಿಕ್ಕಬಳ್ಳಾಪುರ: ಕೋವಿಶೀಲ್ಡ್ ಲಸಿಕೆ ಪಡೆದವರಲ್ಲಿ ದಿಢೀರ್‌ ಹೃದಯಾಘಾತ, ರಕ್ತ ಹೆಪ್ಪುಗಟ್ಟುವುದು ಸೇರಿ ಹಲವು ರೀತಿಯ ಅಡ್ಡಪರಿಣಾಮಗಳು ಉಂಟಾಗಲಿವೆ ಎಂಬ ಸುದ್ದಿಗಳು ವರದಿಯಾದ ಹಿನ್ನೆಲೆಯಲ್ಲಿ ಲಸಿಕೆ ಪಡೆದವರಲ್ಲಿ ಆತಂಕ ಮೂಡಿದೆ. ಈ ನಡುವೆ ಕೋವಿಶೀಲ್ಡ್ ಲಸಿಕೆ ಪಡೆದವರು ಫ್ರಿಡ್ಜ್ ನೀರು, ಐಸ್ ಕ್ರೀಂ ಹಾಗೂ ತಂಪು ಪಾನೀಯ ಸೇವನೆ ಮಾಡದಂತೆ ಹಲವು ಕಾಲೇಜು ಆಡಳಿತ ಮಂಡಳಿಗಳು ಸೂಚನಾ ಪತ್ರದ ಮೂಲಕ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ್ದವು. ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಬೆನ್ನಲ್ಲೇ, ತಪ್ಪು ಮಾಹಿತಿ ನೀಡಿದ ನಗರದ ವಿವಿಧ ಕಾಲೇಜುಗಳ ವಿರುದ್ಧ ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗಿದೆ.

ನಗರದ ಸಿದ್ದರಾಮಯ್ಯ ಲಾ ಕಾಲೇಜು ಹಾಗೂ ಜಚನಿ ಪ್ರಥಮ ದರ್ಜೆ ಕಾಲೇಜುಗಳಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಸರ್ವೇಕ್ಷಣ ಅಧಿಕಾರಿಗಳಿಂದ ನೋಟಿಸ್ ನೀಡಲಾಗಿದೆ. ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ದಿಢೀರ್ ಹೃದಯಾಘಾತ, ರಕ್ತ ಹೆಪ್ಪುಗಟ್ಟುವ ಸಾಧ್ಯತೆ ಇದೆ. ಹೀಗಾಗಿ ಆರೋಗ್ಯ ಇಲಾಖೆ ಸೂಚನೆ ಪ್ರಕಾರ ಈ ಲಸಿಕೆ ಪಡೆದವರು ಫ್ರಿಡ್ಜ್ ನೀರು, ಐಸ್ ಕ್ರೀಂ ಹಾಗೂ ತಂಪು ಪಾನೀಯಗಳು ಸೇವನೆ ಮಾಡಬಾರದು ಎಂದು ಕಾಲೇಜು ಆಡಳಿತ ಮಂಡಳಿಗಳು ಸೂಚನಾ ಪತ್ರ ಹೊರಡಿಸಿದ್ದವು.

ವಾಟ್ಸ್‌ಆ್ಯಪ್‌ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಕಾಲೇಜುಗಳ ಸೂಚನಾ ಪತ್ರಗಳು ವೈರಲ್‌ ಆಗಿದ್ದರಿಂದ ತಕ್ಷಣ ಎಚ್ಚೆತ್ತ ಜಿಲ್ಲಾಡಳಿತ, ವಿದ್ಯಾರ್ಥಿಗಳಿಗೆ ತಪ್ಪು ಮಾಹಿತಿ ನೀಡಿದ ಹಿನ್ನೆಲೆ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ನೇತೃತ್ವದ ಡಿಜಾಸ್ಟರ್ ಮ್ಯಾನೇಜ್ಮೆಂಟ್ ಕಮಿಟಿ ಮುಂದಾಗಿದೆ. ಸೂಚನಾ ಪತ್ರಗಳ ಬಗ್ಗೆ ಸೂಕ್ತ ಸ್ಪಷ್ಟನೆ ನೀಡುವಂತೆ ನೋಟಿಸ್‌ ನೀಡಲಾಗಿದೆ.

ಇದನ್ನೂ ಓದಿ | Covishield vaccine: ಕೋವಿಶೀಲ್ಡ್‌ ‌ ತಗೋಬೇಡಿ, ಒಳ್ಳೆಯದಲ್ಲ ಎಂದು ಅಪ್ಪುಗೆ ಮನವಿ ಮಾಡಿದ್ದ ಅಭಿಮಾನಿ: ಪೋಸ್ಟ್‌ ವೈರಲ್‌!

ಆರೋಗ್ಯ ಇಲಾಖೆ ಯಾವುದೇ ಸುತ್ತೋಲೆ ಹೊರಡಿಸಿಲ್ಲ

ಕೋವಿಶೀಲ್ಡ್‌ ಲಸಿಕೆ ಪಡೆದವರು ಫ್ರಿಡ್ಜ್‌ನಲ್ಲಿಟ್ಟ ನೀರು, ತಂಪು ಪಾನೀಯಗಳು ಹಾಗೂ ಐಸ್‌ಕ್ರೀಂ ಸೇವಿಸಬಾರದು ಎಂಬ ಕಾಲೇಜು ಆಡಳಿತ ಮಂಡಳಿಗಳ ಸೂಚನಾ ಪತ್ರ ವೈರಲ್‌ ಆಗಿದ್ದರಿಂದ ಸಾರ್ವಜನಿಕರಲ್ಲಿ ಗೊಂದಲ ಮೂಡಿತ್ತು. ಹೀಗಾಗಿ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದ್ದು, ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮಗಳ ಬಗ್ಗೆ ಇಲಾಖೆಯಿಂದ ಯಾವುದೇ ಸುತ್ತೋಲೆ ಹೊರಡಿಸಿಲ್ಲ ಎಂದು ತಿಳಿಸಿದೆ.

ರಕ್ಷಿತ್‌ ಗಣಪತಿ ಎಂಬುವವರು, ಎಕ್ಸ್‌ ಖಾತೆಯಲ್ಲಿ ಚಿಕ್ಕಬಳ್ಳಾಪುರದ ಸಿದ್ದರಾಮಯ್ಯ ಲಾ ಕಾಲೇಜಿನ ಸೂಚನಾ ಪತ್ರ ಹಾಕಿ, “ಇದು ನಿಜವೇ? ಈ ಪತ್ರ ನೆನ್ನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ, ದಯವಿಟ್ಟು ಸ್ಪಷ್ಟನೆ ನೀಡಿ ಎಂದು ಕೋರಿ, ಸಿಎಂ ಸಿದ್ದರಾಮಯ್ಯ, ಆರೋಗ್ಯ ಇಲಾಖೆಗೆ ಟ್ಯಾಗ್‌ ಮಾಡಿದ್ದರು. ಇದಕ್ಕೆ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.

Continue Reading

ಪ್ರಮುಖ ಸುದ್ದಿ

T20 World Cup : ವಿಶ್ವ ಕಪ್​​ ಟೂರ್ನಿಗೆ ಭಾರತದ ಇಬ್ಬರು ಅಂಪೈರ್​ಗಳು ಆಯ್ಕೆ; ಯಾರೆಲ್ಲ ಅವರು?

T20 World Cup: ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು ಪಾಕಿಸ್ತಾನ ನಡುವಿನ ಪುರುಷರ ಟಿ 20 ವಿಶ್ವಕಪ್ 2022 ಫೈನಲ್​​ನಲ್ಲಿ ಕಾಣಿಸಿಕೊಂಡ ಕುಮಾರ್ ಧರ್ಮಸೇನಾ, ಕ್ರಿಸ್ ಗಫಾನೆ ಮತ್ತು ಪಾಲ್ ರೀಫೆಲ್ ಅವರೊಂದಿಗೆ ಕಳೆದ ವರ್ಷ ಐಸಿಸಿ ವರ್ಷದ ಡೇವಿಡ್ ಶೆಫರ್ಡ್ ಟ್ರೋಫಿ ವಿಜೇತ ರಿಚರ್ಡ್ ಇಲ್ಲಿಂಗ್​ವರ್ತ್​​ ಎಲೈಟ್ ಅಂಪೈರ್​ಗಳ ಪಟ್ಟಿಯಲ್ಲಿ ಸೇರಿದ್ದಾರೆ.

VISTARANEWS.COM


on

T20 World Cup
Koo

ನವದೆಹಲಿ: ಜೂನ್ 1 ರಿಂದ ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ನಡೆಯಲಿರುವ ಐಸಿಸಿ ಪುರುಷರ ಟಿ 20 ವಿಶ್ವಕಪ್ 2024 ರ (T20 World Cup) ಮೊದಲ ಸುತ್ತಿನ ಪಂದ್ಯಗಳಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) 26 ಮ್ಯಾಚ್ ಅಧಿಕಾರಿಗಳ ಪಟ್ಟಿಯನ್ನು ಬಹಿರಂಗಪಡಿಸಿದೆ. ಈ ಪಟ್ಟಿಯಲ್ಲಿ 20 ಅಂಪೈರ್​ಗಳು ಮತ್ತು ಆರು ಮ್ಯಾಚ್ ರೆಫರಿಗಳು ಇದ್ದಾರೆ. ಭಾರತದಿಂದ ಅಂಪೈರ್​ಗಳಾಗಿ ನಿತಿನ್ ಮೆನನ್​ ಹಾಗೂ ಜಯರಾಮ್​ ಮದನ್​ಗೋಪಾಲ್ ಮತ್ತು ರೆಫರಿಯಾಗಿ ಜಾವಗಲ್ ಶ್ರೀನಾಥ್​ ಆಯ್ಕೆಯಾಗಿದ್ದಾರೆ.

ಅವರು ಒಂಬತ್ತನೇ ಪುರುಷರ ಟಿ 20 ವಿಶ್ವಕಪ್​​ ಟೂರ್ನಿಯಲ್ಲಿ ಅಂಪೈರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. 28 ದಿನಗಳ ಕಾಲ 9 ಸ್ಥಳಗಳಲ್ಲಿ 55 ಪಂದ್ಯಗಳನ್ನು ಆಡಲಾಗಿದ್ದು, ಇದುವರೆಗಿನ ಅತಿದೊಡ್ಡ ಐಸಿಸಿ ಟಿ 20 ವಿಶ್ವಕಪ್ ಇದಾಗಿದೆ.

ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು ಪಾಕಿಸ್ತಾನ ನಡುವಿನ ಪುರುಷರ ಟಿ 20 ವಿಶ್ವಕಪ್ 2022 ಫೈನಲ್​​ನಲ್ಲಿ ಕಾಣಿಸಿಕೊಂಡ ಕುಮಾರ್ ಧರ್ಮಸೇನಾ, ಕ್ರಿಸ್ ಗಫಾನೆ ಮತ್ತು ಪಾಲ್ ರೀಫೆಲ್ ಅವರೊಂದಿಗೆ ಕಳೆದ ವರ್ಷ ಐಸಿಸಿ ವರ್ಷದ ಡೇವಿಡ್ ಶೆಫರ್ಡ್ ಟ್ರೋಫಿ ವಿಜೇತ ರಿಚರ್ಡ್ ಇಲ್ಲಿಂಗ್​ವರ್ತ್​​ ಎಲೈಟ್ ಅಂಪೈರ್​ಗಳ ಪಟ್ಟಿಯಲ್ಲಿ ಸೇರಿದ್ದಾರೆ.

ಇದನ್ನೂ ಓದಿ: RCB vs GT: ಮಳೆ ಭೀತಿಯ ಮಧ್ಯೆ ಹ್ಯಾಟ್ರಿಕ್​ ಗೆಲುವಿನ ನಿರೀಕ್ಷೆಯಲ್ಲಿ ಆರ್​ಸಿಬಿ

ಮ್ಯಾಚ್ ರೆಫರಿಗಳ ತಂಡದಲ್ಲಿ 2022 ರ ಫೈನಲ್​​ನ ಅಂಪೈರ್ ಆಗಿದ್ದ ರಂಜನ್ ಮದುಗಲೆ ಮತ್ತು ಸ್ವರೂಪದ ಅತ್ಯಂತ ಅನುಭವಿ ರೆಫರಿ ಜೆಫ್ ಕ್ರೋವ್ ಇದ್ದಾರೆ.

ಆಯ್ದ ಗುಂಪಿನಲ್ಲಿ ನಾವು ಅನುಭವಿ ಪಂದ್ಯದ ಅಧಿಕಾರಿಗಳು ಮತ್ತು ಇತರ ಉನ್ನತ ಕಾರ್ಯಕ್ಷಮತೆಯ ಸದಸ್ಯರನ್ನು ಹೊಂದಿದ್ದೇವೆ. ಅವರು ತಮ್ಮ ಬಲವಾದ ಮತ್ತು ಸ್ಥಿರ ಪ್ರದರ್ಶನಕ್ಕೆ ಖ್ಯಾತಿ ಪಡೆದವರು. ಉತ್ತಮ-ಗುಣಮಟ್ಟದ ಪಂದ್ಯದ ಅಧಿಕಾರಿಗಳ ಅಭಿವೃದ್ಧಿ ಮತ್ತು ಫಲಿತಾಂಶ ನಿರೀಕ್ಷೆ ಮಾಡಬಹುದು ಎಂದು ಐಸಿಸಿ ಹೇಳಿದೆ.

28 ದಿನಗಳಲ್ಲಿ 20 ತಂಡಗಳು ಮತ್ತು 55 ಪಂದ್ಯಗಳನ್ನು ಆಡಲಿವೆ. ಇದು ಇದುವರೆಗಿನ ಅತಿದೊಡ್ಡ ಟಿ 20 ವಿಶ್ವಕಪ್ ಆಗಿದೆ ಮತ್ತು ನಾವು ಒಟ್ಟುಗೂಡಿಸಿದ ತಂಡದ ಬಗ್ಗೆ ನಮಗೆ ಹೆಮ್ಮೆ ಇದೆ. ನಮ್ಮ ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಾರೆ ಎಂಬ ವಿಶ್ವಾಸ ನಮಗಿದೆ. ಅತ್ಯಂತ ರೋಮಾಂಚಕಾರಿ ಪಂದ್ಯಾವಳಿ ಎಂದು ಭರವಸೆ ನೀಡಿದ್ದಕ್ಕಾಗಿ ನಾವು ಅವರಿಗೆ ಶುಭ ಹಾರೈಸುತ್ತೇವೆ, “ಎಂದು ಹೇಳಿದರು.

ಅಂಪೈರ್​​ಗಳು:

ಕ್ರಿಸ್ ಬ್ರೌನ್, ಕುಮಾರ್ ಧರ್ಮಸೇನಾ, ಕ್ರಿಸ್ ಗಫಾನಿ, ಮೈಕೆಲ್ ಗೌಫ್, ಆಡ್ರಿಯನ್ ಹೋಲ್ಡ್ಸ್ಟಾಕ್, ರಿಚರ್ಡ್ ಇಲ್ಲಿಂಗ್ವರ್ತ್, ಅಲ್ಲಾಹುದ್ದೀನ್ ಪಾಲೇಕರ್, ರಿಚರ್ಡ್ ಕೆಟಲ್ಬರೋ, ಜಯರಾಮನ್ ಮದನಗೋಪಾಲ್, ನಿತಿನ್ ಮೆನನ್, ಸ್ಯಾಮ್ ನೊಗಾಜ್ಸ್ಕಿ, ಅಹ್ಸಾನ್ ರಾಜಾ, ರಶೀದ್ ರಿಯಾಜ್, ಪಾಲ್ ರೀಫೆಲ್, ಲ್ಯಾಂಗ್ಟನ್ ರುಸೆರೆ, ಶಾಹಿದ್ ಸೈಕತ್, ರಾಡ್ನಿ ಟಕರ್, ಅಲೆಕ್ಸ್ ವಾರ್ಫ್, ಜೋಯಲ್ ವಿಲ್ಸನ್ ಮತ್ತು ಆಸಿಫ್ ಯಾಕೂಬ್.

ಮ್ಯಾಚ್ ರೆಫರಿಗಳು:

ಡೇವಿಡ್ ಬೂನ್, ಜೆಫ್ ಕ್ರೋವ್, ರಂಜನ್ ಮದುಗಲೆ, ಆಂಡ್ರ್ಯೂ ಪೈಕ್ರಾಫ್ಟ್, ರಿಚಿ ರಿಚರ್ಡ್ಸನ್ ಮತ್ತು ಜಾವಗಲ್ ಶ್ರೀನಾಥ್.

Continue Reading
Advertisement
Rohit Sharma
ಪ್ರಮುಖ ಸುದ್ದಿ5 mins ago

Rohit Sharma : ರೋಹಿತ್ ಶರ್ಮಾ ದೌರ್ಬಲ್ಯವನ್ನು ಬೊಟ್ಟು ಮಾಡಿ ತೋರಿಸಿದ ವಾಸಿಮ್​ ಜಾಫರ್​

Prajwal Revanna Case face not visible in videos says HD Kumaraswamy
ಕ್ರೈಂ11 mins ago

Prajwal Revanna Case: ವಿಡಿಯೊದಲ್ಲಿ ಪ್ರಜ್ವಲ್‌ ಮುಖ ಕಾಣಲ್ಲ; ಗಂಡಸ್ತನವಿದ್ದರೆ ರಾಹುಲ್‌ ಗಾಂಧಿಗೆ ನೋಟಿಸ್‌ ಕೊಡಿ: ಸಿಎಂಗೆ ಎಚ್‌ಡಿಕೆ ಸವಾಲು

Covishield Vaccine
ಪ್ರಮುಖ ಸುದ್ದಿ22 mins ago

Covishield Vaccine: ಕೋವಿಶೀಲ್ಡ್ ಪಡೆದವರು ಫ್ರಿಡ್ಜ್ ನೀರು, ಐಸ್ ಕ್ರೀಂ, ಕೂಲ್‌ ಡ್ರಿಂಕ್ಸ್‌ ಸೇವಿಸಬಾರದು: ತಪ್ಪು ಮಾಹಿತಿ ಕೊಟ್ಟ ಕಾಲೇಜುಗಳಿಗೆ ನೋಟಿಸ್

T20 World Cup
ಪ್ರಮುಖ ಸುದ್ದಿ27 mins ago

T20 World Cup : ವಿಶ್ವ ಕಪ್​​ ಟೂರ್ನಿಗೆ ಭಾರತದ ಇಬ್ಬರು ಅಂಪೈರ್​ಗಳು ಆಯ್ಕೆ; ಯಾರೆಲ್ಲ ಅವರು?

Namesakes
ದೇಶ31 mins ago

Namesake: ರಾಹುಲ್‌ಗಳು, ಲಾಲುಗಳು; ಒಂದೇ ಹೆಸರಿನವರ ಸ್ಪರ್ಧೆ ಕುರಿತು ಕೋರ್ಟ್‌ ಮಹತ್ವದ ಹೇಳಿಕೆ

Saanya Iyer
ಫ್ಯಾಷನ್51 mins ago

Saanya Iyer: ಗ್ರ್ಯಾಂಡ್‌ ಲೆಹೆಂಗಾದಲ್ಲಿ ರಾಣಿಯಂತೆ ಕಂಗೊಳಿಸಿದ ನಟಿ ಸಾನ್ಯಾ ಅಯ್ಯರ್‌

Bharti Singh admitted to hospital
ಬಾಲಿವುಡ್55 mins ago

Bharti Singh: ಬಾಲಿವುಡ್‌ ಖ್ಯಾತ ನಿರೂಪಕಿ ಆಸ್ಪತ್ರೆಗೆ ದಾಖಲು

RCB vs GT
ಕ್ರೀಡೆ1 hour ago

RCB vs GT: ಬೆಂಗಳೂರಿನಲ್ಲಿ ನಾಳೆ ಐಪಿಎಲ್‌ ಹಬ್ಬ: ತಡರಾತ್ರಿಯೂ ಇದೆ ಮೆಟ್ರೋ ಸೇವೆ, ಪಾರ್ಕಿಂಗ್‌ ಎಲ್ಲೆಲ್ಲಿ?

Kidnap case in Bengaluru
ಬೆಂಗಳೂರು1 hour ago

Kidnap Case : ಗಾಂಜಾ ಮತ್ತಲ್ಲಿ ಆರ್ಮಿ ಆಫೀಸರ್ ಮಗನನ್ನೇ ಕಿಡ್ನ್ಯಾಪ್ ಮಾಡಿದ ಗೆಳೆಯರು

Costly wedding gift
ವಾಣಿಜ್ಯ1 hour ago

Costly wedding gift: ಮಗನಿಗೆ ಬಂಗಲೆ, ಸೊಸೆಗೆ ನೆಕ್ಲೇಸ್ ಗಿಫ್ಟ್‌ ಕೊಟ್ಟ ಅಂಬಾನಿ; ಬೆಲೆ ಕೇಳಿದರೆ ಅಚ್ಚರಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru Rains
ಮಳೆ2 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ13 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ23 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಟ್ರೆಂಡಿಂಗ್‌