Teachers Recruitment: 10 ಸಾವಿರ ಶಿಕ್ಷಕರ ನೇಮಕಕ್ಕೆ ಶೀಘ್ರದಲ್ಲೇ ಅಧಿಸೂಚನೆ: ಸಚಿವ ಮಧು ಬಂಗಾರಪ್ಪ - Vistara News

ಕರ್ನಾಟಕ

Teachers Recruitment: 10 ಸಾವಿರ ಶಿಕ್ಷಕರ ನೇಮಕಕ್ಕೆ ಶೀಘ್ರದಲ್ಲೇ ಅಧಿಸೂಚನೆ: ಸಚಿವ ಮಧು ಬಂಗಾರಪ್ಪ

Teachers Recruitment: ಆರ್ಥಿಕ ಇಲಾಖೆ ಅನುಮತಿ ಕೊಟ್ಟ ಬಳಿಕ 10 ಸಾವಿರ ಹುದ್ದೆ ನೇಮಕ ಪ್ರಕ್ರಿಯೆ ಶುರು ಮಾಡುತ್ತೇವೆ. 10 ಸಾವಿರ ಹುದ್ದೆಗಳ ಪೈಕಿ 6,500 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ಕೊಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

VISTARANEWS.COM


on

Teachers Recruitment
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. 10 ಸಾವಿರ ಶಿಕ್ಷಕರ ನೇಮಕಾತಿ (Teachers Recruitment) ಪ್ರಕ್ರಿಯೆಗೆ ಸಿದ್ಧತೆ ನಡೆದಿದ್ದು, ‌ಆರ್ಥಿಕ ‌ಇಲಾಖೆ ಒಪ್ಪಿಗೆ ನೀಡಿದ ಕೂಡಲೇ‌ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭ ಮಾಡುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ವಿಧಾನ ಪರಿಷತ್ ಪಶ್ನೋತ್ತರ ಕಲಾಪದಲ್ಲಿ (monsoon session) ಬಿಜೆಪಿ ಸದಸ್ಯ ತಳವಾರ್ ಸಾಬಣ್ಣ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷರ ಕೊರತೆ ಇದೆ. ಶಿಕ್ಷಕರಿಲ್ಲದ ಕಾರಣ ಪ್ರತಿ ಬಾರಿ ಫಲಿತಾಂಶದಲ್ಲಿ ಕಲ್ಯಾಣ ಕರ್ನಾಟಕ ಹಿಂದೆ ಬೀಳುತ್ತಿದೆ. ಈ ಭಾಗದಲ್ಲಿ 19 ಸಾವಿರ ಶಿಕ್ಷಕರ ಕೊರತೆ ಇದ್ದು, ಶಾಲಾ ಕೊಠಡಿಗಳ ಸಮಸ್ಯೆ ಇದೆ. ಕೂಡಲೇ ಶಿಕ್ಷಕರ ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಸಚಿವ ಮಧು ಬಂಗಾರಪ್ಪ ಉತ್ತರ ನೀಡಿ, ಶಿಕ್ಷಣ ಇಲಾಖೆಯಲ್ಲಿ 50 ಸಾವಿರ ಶಿಕ್ಷಕರ ಕೊರತೆ ಇದೆ. 10 ಸಾವಿರ ಶಿಕ್ಷಕರ ನೇಮಕಕ್ಕೆ ಆರ್ಥಿಕ ಇಲಾಖೆಗೆ ಪತ್ರ ಬರೆಯಲಾಗಿದೆ. ಆರ್ಥಿಕ ಇಲಾಖೆ ಅನುಮತಿ ಕೊಟ್ಟ ಬಳಿಕ 10 ಸಾವಿರ ಹುದ್ದೆ ನೇಮಕ ಪ್ರಕ್ರಿಯೆ ಶುರು ಮಾಡುತ್ತೇವೆ. 10 ಸಾವಿರ ಹುದ್ದೆಗಳ ಪೈಕಿ 6,500 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ಕೊಡಲಾಗುತ್ತದೆ. ಸದ್ಯ ಶಿಕ್ಷಕರ ಕೊರತೆ ನೀಗಿಸಲು ಅತಿಥಿ ಶಿಕ್ಷಕರ ನೇಮಕ ಮಾಡಲಾಗಿದ್ದು, ಆರ್ಥಿಕ ಇಲಾಖೆ ಅನುಮತಿ ಕೊಟ್ಟ ಬಳಿಕ ಶೀಘ್ರವೇ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ | DK Shivakumar: `ಲೋಕಾಯುಕ್ತಕ್ಕೆ ಕೊಟ್ಟ ಮೇಲೆ ಸಿಬಿಐಗೇನು ಕೆಲಸ?’ ಅಕ್ರಮ ಆಸ್ತಿ ಕೇಸ್‌ ಬಗ್ಗೆ ಡಿಕೆ ಶಿವಕುಮಾರ್‌ ಪ್ರಶ್ನೆ

ಈ ವೇಳೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು ಮಾತನಾಡಿ, ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ 6500 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಆಗಿದೆ‌. ಕಲ್ಯಾಣ ಕರ್ನಾಟಕ ಭಾಗದ ಹುದ್ದೆ ತುಂಬಲು ಆರ್ಥಿಕ ಇಲಾಖೆ ಅನುಮತಿ ಬೇಕಿಲ್ಲ ಅನ್ನೋ ನಿಯಮ ಇದೆ. ಹೀಗಾಗಿ ಶಿಕ್ಷಕರ ನೇಮಕಕ್ಕೆ ಪ್ರಕ್ರಿಯೆ ಶುರುವಾಗಿದೆ. ಆದಷ್ಟು ಬೇಗ ನೇಮಕ ಪ್ರಕ್ರಿಯೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು.

ಎಲ್ಲ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು

ಬೆಂಗಳೂರು: ಎಲ್ಲ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಿಯೇ ಮಾಡುತ್ತೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ವಿಧಾನ ಪರಿಷತ್ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ್ ಭಂಡಾರಿ ಅವರು ಮಂಗಳೂರು ಹಾಗೂ ಉಡುಪಿಯಲ್ಲಿ ಯಾವಾಗ ಮೆಡಿಕಲ್ ಕಾಲೇಜು ಮಾಡುತ್ತೀರಾ ಎಂದು ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ಸಚಿವರು, 22 ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಆಗಿದೆ. ಇದು ಪಾಲಿಸಿ ಮ್ಯಾಟರ್. ಹಣಕಾಸು ಇಲಾಖೆ ಹಂತ ಹಂತವಾಗಿ ಮಾಡಲು ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ | Pooja Khedkar: ಎಂಬಿಬಿಎಸ್ ಪ್ರವೇಶಕ್ಕೆ ಒಬಿಸಿ ಕೆನೆಪದರ ರಹಿತ ಪ್ರಮಾಣಪತ್ರ ಸಲ್ಲಿಸಿದ್ದ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್

ಕೇಂದ್ರ ಸರ್ಕಾರ ಪಿಪಿಪಿ‌ ಮಾದರಿಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಅನುಮತಿ ನೀಡಿದೆ. ಈ ಬಗ್ಗೆ ಸಿಎಂ ಜತೆಗೆ ಚರ್ಚೆ ಮಾಡಿ ಪರಿಶೀಲನೆ ನಡೆಸುತ್ತೇವೆ. ಇದು ಸರ್ಕಾರದ ಪಾಲಿಸಿ ಮ್ಯಾಟರ್ ಅಗಿದ್ದು, ಎಲ್ಲ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಿಯೇ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಅಂಚೆ ಇಲಾಖೆಯಿಂದ ಬೃಹತ್‌ ನೇಮಕಾತಿ; ಕರ್ನಾಟಕದಲ್ಲಿಯೂ ಇದೆ 1,940 ಹುದ್ದೆ: ಹೀಗೆ ಅಪ್ಲೈ ಮಾಡಿ

Job Alert: ಭಾರತೀಯ ಅಂಚೆ ಇಲಾಖೆ ಬಹುನಿರೀಕ್ಷಿತ ಗ್ರಾಮೀಣ ಡಾಕ್ ಸೇವಕ್‌ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ನಮ್ಮ ರಾಜ್ಯದಲ್ಲಿ 1,940 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಗ್ರಾಮೀಣ ಡಾಕ್‌ ಸೇವಕ್‌ (ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌ ಮತ್ತು ಅಸಿಸ್ಟಂಟ್‌ ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌) ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ ಕೊನೆಯ ದಿನ ಆಗಸ್ಟ್‌ 5. ಅರ್ಜಿ ಸಲ್ಲಿಸುವ ವಿಧಾನದ ಮಾಹಿತಿ ಇಲ್ಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಭಾರತೀಯ ಅಂಚೆ ಇಲಾಖೆ (India Post Office) ಬಹುನಿರೀಕ್ಷಿತ ಗ್ರಾಮೀಣ ಡಾಕ್ ಸೇವಕ್‌ (Gramin Dak Sevak) ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ದೇಶಾದ್ಯಂತ ಸುಮಾರು 44,228 ಹುದ್ದೆಗಳು ಖಾಲಿ ಇವೆ. ಈ ಪೈಕಿ ನಮ್ಮ ರಾಜ್ಯದಲ್ಲಿ 1,940 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ (Karnataka Postal Circle Recruitment 2024). ಗ್ರಾಮೀಣ ಡಾಕ್‌ ಸೇವಕ್‌ (ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌ ಮತ್ತು ಅಸಿಸ್ಟಂಟ್‌ ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌) ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ ಕೊನೆಯ ದಿನ ಆಗಸ್ಟ್‌ 5 (Job Alert).

ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆ?

ಬಾಗಲಕೋಟೆ 23, ಬಳ್ಳಾರಿ 50, ಬೆಂಗಳೂರು ಜಿಪಿಒ 4, ಬೆಳಗಾವಿ 33, ಬೆಂಗಳೂರು ಪೂರ್ವ 83, ಬೆಂಗಳೂರು ದಕ್ಷಿಣ 62, ಬೆಂಗಳೂರು ಪಶ್ಚಿಮ 39, ಬೀದರ್ 59, ಚನ್ನಪಟ್ಟಣ 87, ಚಿಕ್ಕಮಗಳೂರು 60, ಚಿಕ್ಕೋಡಿ 19, ಚಿತ್ರದುರ್ಗ 27, ದಾವಣಗೆರೆ ಕಚೇರಿ 40, ಧಾರವಾಡ 22, ಗದಗ 18, ಗೋಕಾಕ್ 7, ಹಾಸನ 78, ಹಾವೇರಿ 44, ಕಲಬುರಗಿ 83, ಕಾರವಾರ 43, ಕೊಡಗು 76, ಕೋಲಾರ 106, ಕೊಪ್ಪಳ 36, ಮಂಡ್ಯ 65, ಮಂಗಳೂರು 62, ಮೈಸೂರು 42, ನಂಜನಗೂಡು 66, ಪುತ್ತೂರು 89, ರಾಯಚೂರು 63, ಆರ್‌ಎಂಎಸ್‌ ಎಚ್‌ಬಿ 3, ಆರ್‌ಎಂಎಸ್‌ ಕ್ಯೂ 9, ಶಿವಮೊಗ್ಗ 89, ಶಿರಸಿ 66, ತುಮಕೂರು 107, ಉಡುಪಿ 90, ವಿಜಯಪುರ 40, ಯಾದಗಿರಿ 50 ಹುದ್ದೆಗಳಿವೆ.

ವಿದ್ಯಾರ್ಹತೆ ಮತ್ತು ವಯೋಮಿತಿ

ಭಾರತದ ಯಾವುದೇ ಶಿಕ್ಷಣ ಮಂಡಳಿ ನಡೆಸುವ 10ನೇ ತರಗತಿ ಪರೀಕ್ಷೆಯಲ್ಲಿ (ಇಂಗ್ಲಿಷ್‌ ಮತ್ತು ಗಣಿತ ವಿಷಯ ಒಳಗೊಂಡಿರುವುದು ಕಡ್ಡಾಯ) ಪಾಸಾದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 40 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಅರ್ಜಿ ಶುಲ್ಕವಾಗಿ ಸಾಮಾನ್ಯ / ಒಬಿಸಿ ವಿಭಾಗದ ಅಭ್ಯರ್ಥಿಗಳು 100 ರೂ. ಪಾವತಿಸಬೇಕು. ಎಸ್‌ಸಿ / ಎಸ್‌ಟಿ / ಅಂಗವಿಕಲ ವಿಭಾಗದ ಮತ್ತು ಎಲ್ಲ ವರ್ಗದ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. 10ನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದವರಿಗೆ ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌-12,000 ರೂ. -29,380 ರೂ., ಅಸಿಸ್ಟಂಟ್‌ ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌-10,000 ರೂ. – 24,470 ರೂ. ಮಾಸಿಕ ವೇತನ ಇದೆ.

India Post GDS Recruitment 2024 ಅಧಿಕೃತ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://indiapostgdsonline.gov.in/)
  • ಹೆಸರು ನೋಂದಾಯಿಸಿ.
  • ಲಾಗಿನ್‌ ಆಗಿ ವಿವರಗಳನ್ನು ಭರ್ತಿ ಮಾಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ, ಸಹಿಯನ್ನು ಸೂಕ್ತ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಪದವೀಧರರಿಗೆ ಗುಡ್‌ನ್ಯೂಸ್‌; SCDCC ಬ್ಯಾಂಕ್‌ನಲ್ಲಿದೆ 123 ಹುದ್ದೆ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

Continue Reading

ಪ್ರಮುಖ ಸುದ್ದಿ

Karnataka Assembly Live: ಸದನದಲ್ಲಿ ಇಂದು ಕಿಡಿಯೆಬ್ಬಿಸಲಿರುವ ವಾಲ್ಮೀಕಿ ಹಗರಣ; ಉತ್ತರ ನೀಡಲು ಸಿಎಂ ಸಜ್ಜು; ಇಲ್ಲಿದೆ ಕ್ಷಣಕ್ಷಣದ ಲೈವ್‌

Karnataka Assembly Live: ಇಂದು ಸಹ ಬಿಜೆಪಿ ಹಾಗೂ ಜೆಡಿಎಸ್ ಶಾಸಕರಿಂದ ಈ ಚರ್ಚೆ ಮುಂದುವರಿಯಲಿದೆ. ಬಿಜೆಪಿಯ ಸಿಟಿ ರವಿ, ಸುನೀಲ್‌ ಕುಮಾರ್‌, ಯತ್ನಾಳ್ ಮುಂತಾದವರು ಈ ಚರ್ಚೆಯನ್ನು ಮುನ್ನಡೆಸಲಿದ್ದಾರೆ. ಬಳಿಕ ಸಿಎಂ ಸಿದ್ದರಾಮಯ್ಯ ಅವರು ಉತ್ತರ ನೀಡುವ ನಿರೀಕ್ಷೆ ಇದೆ. ನಿನ್ನೆ ಆಶೋಕ್ ಮಾತನಾಡುವಾಗಲೇ ಈ ಬಗ್ಗೆ ಸಿದ್ದರಾಮಯ್ಯ ಸುಳಿವು ನೀಡಿದ್ದರು.

VISTARANEWS.COM


on

karnataka assembly live
Koo

ಬೆಂಗಳೂರು: ವಿಧಾನ ಮಂಡಲ ಮಳೆಗಾಲದ ಅಧಿವೇಶನ (Karnataka Assembly Live, Karnataka Assembly monsoon session) ಇಂದು ಇನ್ನಷ್ಟು ರಂಗೇರಲಿದೆ. ವಾಲ್ಮೀಕಿ ನಿಗಮದ ಅವ್ಯವಹಾರ (Valmiki corporation Scam) ಪ್ರಕರಣದ ಕುರಿತು ನಿನ್ನೆ ವಿಧಾನಸಭೆ ಕಲಾಪದಲ್ಲಿ ಸುದೀರ್ಘ ಚರ್ಚೆ ನಡೆದಿದ್ದು, ವಿಪಕ್ಷ ನಾಯಕ ಆರ್. ಆಶೋಕ್ (R Ashok) ಅವರು ಈ ಚರ್ಚೆಯನ್ನು ಮುನ್ನಡೆಸಿದ್ದರು. ಇಂದು ಅದು ಮುಂದುವರಿಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಕೂಡ ಇದಕ್ಕೆ ಉತ್ತರ ನೀಡಲಿದ್ದಾರೆ.

ನಿನ್ನೆ ಮಾತನಾಡಿದ ಆರ್.‌ ಅಶೋಕ್‌, ಸರ್ಕಾರದ ತಪ್ಪು ನಡೆಗಳ ಬಗ್ಗೆ ಪ್ರಸ್ತಾಪ ಮಾಡಿದ್ದರು. ಹೈಕಮಾಂಡ್‌ಗೆ ಕಪ್ಪಕಾಣಿಕೆ ಸಲ್ಲಿಸಲು ನಿಗಮದ ಹಣವನ್ನು ದುರುಪಯೋಗ ಮಾಡಲಾಗಿದೆ ಎಂದಿದ್ದ ಅಶೋಕ್‌, 187 ಕೋಟಿ ರೂಪಾಯಿ ಅವ್ಯವಹಾರದ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದರು. ಈ ಹಣ ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಹೇಗೆ ವಿನಿಯೋಗವಾಗಬೇಕಿತ್ತು, ಹೇಗೆ ಅಕ್ರಮವಾಗಿದೆ ಎಂಬುದನ್ನು ಎಳೆ ಎಳೆಯಾಗಿ ಬಿಡಿಸಿಟ್ಟಿದ್ದರು. ಆ ಮೂಲಕ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದರು.

ಇಂದು ಸಹ ಬಿಜೆಪಿ ಹಾಗೂ ಜೆಡಿಎಸ್ ಶಾಸಕರಿಂದ ಈ ಚರ್ಚೆ ಮುಂದುವರಿಯಲಿದೆ. ಬಿಜೆಪಿಯ ಸಿಟಿ ರವಿ, ಸುನೀಲ್‌ ಕುಮಾರ್‌, ಯತ್ನಾಳ್ ಮುಂತಾದವರು ಈ ಚರ್ಚೆಯನ್ನು ಮುನ್ನಡೆಸಲಿದ್ದಾರೆ. ಬಳಿಕ ಸಿಎಂ ಸಿದ್ದರಾಮಯ್ಯ ಅವರು ಉತ್ತರ ನೀಡುವ ನಿರೀಕ್ಷೆ ಇದೆ. ನಿನ್ನೆ ಆಶೋಕ್ ಮಾತನಾಡುವಾಗಲೇ ಈ ಬಗ್ಗೆ ಸಿದ್ದರಾಮಯ್ಯ ಸುಳಿವು ನೀಡಿದ್ದರು. ʼನಿಮ್ಮ ವಾದವನ್ನ ಸಮಾಧಾನವಾಗಿ ಕೇಳ್ತೀನಿ. ನಾನು ಉತ್ತರ ಕೊಡುವಾಗಲೂ ಅಷ್ಟೇ ಸಮಾಧಾನದಿಂದ ಕೇಳಬೇಕುʼ ಎಂದಿದ್ದರು.

ʼ187 ಕೋಟಿ ಅಲ್ಲ ಅದು ಬರೀ 87 ಕೋಟಿ ಮಾತ್ರ ವರ್ಗಾವಣೆ ಆಗಿರುವುದು. ಹಣ ಎಲ್ಲಿಯವರೆಗೂ ಸರ್ಕಾರದ ಸುಪರ್ದಿಯಲ್ಲಿರುತ್ತೆ, ಬಳಿಕ ಆ ಹಣ ಯಾರಿಗೆ ಹೋಗುತ್ತೆ ಈ ಬಗ್ಗೆ ಸಂಪೂರ್ಣ ಮಾಹಿತಿ ಕೊಡ್ತೀನಿ. ಇದರಲ್ಲಿ ಯಾರ ಪಾತ್ರ ಎಷ್ಟಿದೆ. ಈ ಹಿಂದೆ ಹೇಗೆ ವ್ಯವಹಾರ ನಡೆದಿದೆ ಅದೆಲ್ಲವನ್ನ ಸಂಪೂರ್ಣವಾಗಿ ಕೊಡ್ತೀನಿʼ ಎಂದು ಹೇಳಿದ್ದರು. ಎಂದರೆ ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದ ಪ್ರಕರಣಗಳನ್ನೂ ಸಿಎಂ ಪ್ರಸ್ತಾವಿಸುವುದು ಖಚಿತವಾಗಿದೆ.

ಇದರಿಂದ ಸದನದಲ್ಲಿ ಇಂದು ಏಟು ಎದಿರೇಟು ಖಚಿತವಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಆಡಳಿತ ಪಕ್ಷ ಸದದ್ಯರು ಸಾಥ್‌ ನೀಡಲಿದ್ದು, ವಿಪಕ್ಷ ಶಾಸಕರು ಕೆರಳಿ ಪ್ರತಿಭಟನೆ ನಡೆಸುವುದೂ ಬಹುತೇಕ ಖಚಿತವಾಗಿದೆ. ಸ್ಪೀಕರ್‌ ಯು.ಟಿ ಖಾದರ್‌ ಅವರು ಶಾಂತಚಿತ್ತರಾಗಿಯೇ ಸದನದ ಕಲಾಪವನ್ನು ನಿರ್ವಹಿಸುತ್ತಿದ್ದರೂ, ಹಲವು ಬಾರಿ ಶಾಸಕರ ವರ್ತನೆ ಅವರಿಗೂ ಸವಾಲಾಗುತ್ತಿದೆ.

ನಿನ್ನೆ ಅಧಿವೇಶನ ಆರಂಭಕ್ಕೂ ಮುನ್ನ ವಿಧಾನಸೌಧದ ನೂತನ ದ್ವಾರವನ್ನು ಸಿಎಂ ಉದ್ಘಾಟಿಸಿದ್ದರು. ವಿಧಾನಸಭೆಯ ಸಭಾಂಗಣವನ್ನು ಇನ್ನಷ್ಟು ಸುಂದರವಾಗಿ ವಿನ್ಯಾಸಗೊಳಿಸಲಾಗಿದ್ದು, ಇದಕ್ಕೆ ಸದಸ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಕಲಾಪ ಆರಂಭದಲ್ಲಿ ಸಂವಿಧಾನದ ಪೀಠಿಕೆಯನ್ನು ಓದಲಾಯಿತು. ನಂತರ ಅಗಲಿದ ಗಣ್ಯರಿಗೆ ಸಂತಾಪ ಸೂಚನೆ ಮಂಡಿಸಲಾಯಿತು.

ಇದನ್ನೂ ಓದಿ: Assembly Session: ಅಧಿವೇಶನದಲ್ಲಿ ಹಗರಣಗಳ ಸದ್ದು; ಮೊದಲ ದಿನವೇ ಮುಗಿಬಿದ್ದ ವಿಪಕ್ಷ ನಾಯಕರು, ಹೆದರಲ್ಲ ಎಂದ ಸಿಎಂ!

Continue Reading

ಕರ್ನಾಟಕ

Kannada In Madrasa: ರಾಜ್ಯದ ಮದರಸಾಗಳಲ್ಲಿ ಇನ್ನು ಕನ್ನಡ ಕಲಿಕೆ ಕಡ್ಡಾಯ; ಶೀಘ್ರವೇ ಆದೇಶ!

Kannada In Madrasa: ವಾರದಲ್ಲಿ ಕನಿಷ್ಠ 2-3 ಗಂಟೆ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿಯೇ ಬೋಧನೆ ಮಾಡಬೇಕು. ಆ ಮೂಲಕ ಮಕ್ಕಳು ಕನ್ನಡ ಕಲಿಯುವಂತಾಗಬೇಕು ಎಂಬ ದೃಷ್ಟಿಯಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಯೋಜನೆ ರೂಪಿಸಿದೆ. ಹಾಗೊಂದು ವೇಳೆ, ಪ್ರಾಧಿಕಾರವು ಆದೇಶ ಹೊರಡಿಸಿದರೆ, ಮುಸ್ಲಿಂ ಮಕ್ಕಳು ಮದರಸಾಗಳಲ್ಲಿ ಕನ್ನಡ ಕಲಿಯಲಿದ್ದಾರೆ.

VISTARANEWS.COM


on

Kannada In Madrasa
Koo

ಬೆಂಗಳೂರು: ಕರ್ನಾಟಕದ ಮದರಸಾಗಳಲ್ಲಿ ಉರ್ದುವಿನಲ್ಲೇ ಬೋಧನೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಕನ್ನಡ ಕಲಿಕೆಗೂ (Kannada In Madrasa) ರಾಜ್ಯ ಸರ್ಕಾರವು (Karnataka Government) ಪ್ರಾಮುಖ್ಯತೆ ನೀಡಲು ಮುಂದಾಗಿದೆ. ಇನ್ನುಮುಂದೆ ರಾಜ್ಯದ ಮದರಸಾಗಳಲ್ಲಿ (Madrasas In Karnataka) ಕಡ್ಡಾಯವಾಗಿ ಕನ್ನಡದಲ್ಲೇ ಬೋಧನೆ ಮಾಡಬೇಕು ಎಂಬ ದಿಸೆಯಲ್ಲಿ ಆದೇಶ ಹೊರಡಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಹೊಸ ಯೋಜನೆ ರೂಪಿಸಿದೆ. ಈ ಕುರಿತಂತೆ ಕನ್ನಡ ಕಡ್ಡಾಯಗೊಳಿಸಿ ಶೀಘ್ರದಲ್ಲೇ ಆದೇಶ ಹೊರಡಿಸಲಾಗುತ್ತದೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಸಾವಿರಾರು ಮದರಸಾಗಳಿದ್ದು, ಮುಸ್ಲಿಂ ವಿದ್ಯಾರ್ಥಿಗಳಿಗೆ ಬೋಧಕರು ಕನ್ನಡದಲ್ಲಿ ಪಾಠ ಮಾಡಲು, ಕನ್ನಡ ಕಲಿಸಲು ಹಿಂದೇಟು ಹಾಕುತ್ತಿದ್ದಾರೆ. ಇದಕ್ಕಾಗಿಯೇ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಹೊಸ ಯೋಜನೆ ರೂಪಿಸಿದೆ. ಕನ್ನಡದಲ್ಲೇ ಪಾಠ ಮಾಡಬೇಕು. ವಾರದಲ್ಲಿ ಕನಿಷ್ಠ 2-3 ಗಂಟೆ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿಯೇ ಬೋಧನೆ ಮಾಡಬೇಕು. ಆ ಮೂಲಕ ಮಕ್ಕಳು ಕನ್ನಡ ಕಲಿಯುವಂತಾಗಬೇಕು ಎಂಬ ದೃಷ್ಟಿಯಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಯೋಜನೆ ರೂಪಿಸಿದೆ. ಹಾಗೊಂದು ವೇಳೆ, ಪ್ರಾಧಿಕಾರವು ಆದೇಶ ಹೊರಡಿಸಿದರೆ, ಮುಸ್ಲಿಂ ಮಕ್ಕಳು ಮದರಸಾಗಳಲ್ಲಿ ಕನ್ನಡ ಕಲಿಯಲಿದ್ದಾರೆ.

ಮದರಸಾಗಳಲ್ಲಿ ರಾಮನ ಕುರಿತು ಅಧ್ಯಯನ

ಉತ್ತರಾಖಂಡದ ಮದರಸಾಗಳಲ್ಲೂ ಶ್ರೀರಾಮನ ಕುರಿತು ಅಧ್ಯಯನ ನಡೆಯಬೇಕು ಎಂದು ಹೊಸ ಪಠ್ಯವನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಆ ಮೂಲಕ ಇನ್ನು ಮುಸ್ಲಿಂ ವಿದ್ಯಾರ್ಥಿಗಳು ಕೂಡ ರಾಮನ ಕುರಿತು ಅಧ್ಯಯನ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಇದು ಧಾರ್ಮಿಕ ಸೌಹಾರ್ದತೆಯ ಸಂಕೇತವೂ ಆಗಿದೆ ಎನ್ನಲಾಗುತ್ತಿದೆ.

ಹೌದು, ಈ ಕುರಿತು ಉತ್ತರಾಖಂಡ ವಕ್ಫ್‌ ಬೋರ್ಡ್‌ ಚೇರ್ಮನ್‌ ಆಗಿರುವ ಶಾದಾಬ್‌ ಶಾಮ್ಸ್‌ ಅವರೇ ಕೆಲ ತಿಂಗಳ ಹಿಂದೆ ಮಾಹಿತಿ ನೀಡಿದ್ದರು. “ಮದರಸಾ ಆಧುನೀಕರಣ ಯೋಜನೆಯ ಭಾಗವಾಗಿ ಇನ್ನು ಮುಂದೆ ಉತ್ತರಾಖಂಡದ ಮದರಸಾಗಳಲ್ಲೂ ಶ್ರೀರಾಮನ ಕುರಿತ ಪಠ್ಯಗಳನ್ನು ಅಳವಡಿಸಿಕೊಳ್ಳಲಾಗುತ್ತದೆ. ಮುಸ್ಲಿಂ ವಿದ್ಯಾರ್ಥಿಗಳು ಪ್ರವಾದಿ ಮೊಹಮ್ಮದರ ಜತೆಗೆ ಶ್ರೀರಾಮನ ಕುರಿತು ಕೂಡ ಅಧ್ಯಯನ ಮಾಡಲಿದ್ದಾರೆ” ಎಂದು ತಿಳಿಸಿದ್ದರು.

ಶಾದಾಬ್‌ ಶಾಮ್ಸ್‌ ಅವರು ಬಿಜೆಪಿ ಮುಖಂಡರೂ ಆಗಿದ್ದು, ಅವರು ಮದರಸಾಗಳಲ್ಲಿ ಬೋಧನೆ ಮಾಡುವ ಮೌಲ್ವಿಗಳನ್ನೂ ಒಪ್ಪಿಸಿದ್ದಾರೆ. ಧರ್ಮ, ಜಾತಿಯ ಸಂಕೋಲೆಗಳು ಇಲ್ಲದೆಯೇ ರಾಮನನ್ನು ಆರಾಧಿಸಬಹುದು. ಆತನ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬಹುದು ಎಂಬ ಮನೋಭಾವದಿಂದ ಶಾದಾಬ್‌ ಶಾಮ್ಸ್‌ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಉತ್ತರಾಖಂಡದ ವಕ್ಫ್‌ ಬೋರ್ಡ್‌ ವ್ಯಾಪ್ತಿಗೆ ಸುಮಾರು 117 ಮದರಸಾಗಳು ಬರುತ್ತವೆ. ಡೆಹ್ರಾಡೂನ್, ಹರಿದ್ವಾರ, ಉಧಾಮ್‌ ಸಿಂಗ್‌ ನಗರ ಹಾಗೂ ನೈನಿತಾಲ್‌ ಜಿಲ್ಲೆ ಸೇರಿ ಹಲವೆಡೆ ವಕ್ಫ್‌ ಬೋರ್ಡ್‌ ವ್ಯಾಪ್ತಿಯ ಮದರಸಾಗಳಲ್ಲಿ ರಾಮನ ಕುರಿತ ಅಧ್ಯಾಯಗಳನ್ನು ಸೇರಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Madrasa: ಉತ್ತರ ಪ್ರದೇಶದಲ್ಲಿ ಮದರಸಾ ಶಿಕ್ಷಣ ರದ್ದುಪಡಿಸುವ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ

Continue Reading

ಕ್ರೈಂ

Horrible Murder Case: ಶೆಡ್‌ ಹೊರಗಿನಿಂದ ಲಾಕ್‌ ಮಾಡಿ ಬೆಂಕಿ ಇಟ್ಟ ದುಷ್ಟರು; ಇಬ್ಬರು ಸಜೀವ ದಹನ

Horrible Murder Case: ನೀಚರು ಮೊದಲಿಗೆ ಶೆಡ್ ಹೊರಗಿನಿಂದ ಲಾಕ್ ಮಾಡಿ, ಶೆಡ್ ಪಕ್ಕದಲ್ಲಿದ್ದ ಸಿಂಟ್ಯಾಕ್ಸ್‌ಗೆ ಸುಮಾರು 100 ಲೀಟರ್ ಪೆಟ್ರೋಲ್ ಸುರಿದಿದ್ದಾರೆ. 2 ಎಚ್‌ಪಿ ಮೆಷಿನ್‌ನಿಂದ ಶೆಡ್ ಸುತ್ತ ಪೆಟ್ರೋಲ್ ಹೊಡೆದು ಬೆಂಕಿ ಹಚ್ಚಿರುವ ಶಂಕೆ ಇದೆ. ಬೆಂಕಿಯ ಕೆನ್ನಾಲಿಗೆಗೆ ಇಡೀ ಶೆಡ್ ಸುಟ್ಟು ಕರಕಲಾಗಿದೆ.

VISTARANEWS.COM


on

murder case set fire bagalakote
Koo

ಬಾಗಲಕೋಟೆ: ಪಾತಕಿಗಳು ಶೆಡ್‌ನ ಬಾಗಿಲು ಹೊರಗಿನಿಂದ ಲಾಕ್‌ ಮಾಡಿ ಬೆಂಕಿ ಕೊಟ್ಟ (set fire) ಪರಿಣಾಮ ಒಂದೇ ಕುಟುಂಬದ ಇಬ್ಬರು ಸಜೀವವಾಗಿ (Burn to death) ಸುಟ್ಟುಹೋಗಿದ್ದಾರೆ. ಇನ್ನೂ ಇಬ್ಬರು ಸುಟ್ಟ ಗಾಯಗಳೊಂದಿಗೆ ಸಾವು ಬದುಕಿನ ನಡುವೆ ಸೆಣಸಾಡುತ್ತಿದ್ದಾರೆ. ಈ ಭಯಾನಕ ಹತ್ಯಾಕಾಂಡ ಪ್ರಕರಣ (Horrible Murder Case) ಬಾಗಲಕೋಟೆ (Bagalakote news) ಜಿಲ್ಲೆ ಮುಧೋಳ (Mudhol news) ತಾಲ್ಲೂಕಿನ ಬೆಳಗಲಿಯಲ್ಲಿ ನಡೆದಿದೆ.

ಬೆಳಗಲಿ ಪಟ್ಟಣದ ತೋಟದ ಮನೆಯಲ್ಲಿ ಈ ಘೋರ ಕೃತ್ಯ ಎಸಗಲಾಗಿದೆ. ಕುಟುಂಬ ಸಮೇತ ಸುಟ್ಟು ಹಾಕುವ ಉದ್ದೇಶದಿಂದಲೇ ದುಷ್ಟರು ತಡರಾತ್ರಿ ತಗಡಿನ ಶೆಡ್‌ನ ಬಾಗಿಲು ಹೊರಗಿನಿಂದ ಲಾಕ್‌ ಮಾಡಿ, ಪೆಟ್ರೋಲ್ ಸುರಿದು ಶೆಡ್‌ಗೆ ಬೆಂಕಿ ಹಚ್ಚಿದ್ದಾರೆ. ದುರಂತದಲ್ಲಿ ಜೈಬಾನ್ ಪೆಂಡಾರಿ (60), ಶಭಾನಾ ಪೆಂಡಾರಿ (22) ಸಾವಿಗೀಡಾಗಿದ್ದಾರೆ. ದಸ್ತಗೀರ್ ಸಾಬ್ ಪೆಂಡಾರಿ (60), ಶುಭನ್ ಪೆಂಡಾರಿ (26) ತೀವ್ರವಾಗಿ ಸುಟ್ಟ ಗಾಯಗಳೊಂದಿಗೆ ಮುಧೋಳ ತಾಲ್ಲೂಕಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.

ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಎಸ್ಪಿ ಅಮರನಾಥ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಡರಾತ್ರಿ 2:30ರ ಸುಮಾರಿಗೆ ಈ ಬರ್ಬರ ಕೃತ್ಯ ಎಸಗಲಾಗಿದೆ. ನೀಚರು ಮೊದಲಿಗೆ ಶೆಡ್ ಹೊರಗಿನಿಂದ ಲಾಕ್ ಮಾಡಿ, ಶೆಡ್ ಪಕ್ಕದಲ್ಲಿದ್ದ ಸಿಂಟ್ಯಾಕ್ಸ್‌ಗೆ ಸುಮಾರು 100 ಲೀಟರ್ ಪೆಟ್ರೋಲ್ ಸುರಿದಿದ್ದಾರೆ. 2 ಎಚ್‌ಪಿ ಮೆಷಿನ್‌ನಿಂದ ಶೆಡ್ ಸುತ್ತ ಪೆಟ್ರೋಲ್ ಹೊಡೆದು ಬೆಂಕಿ ಹಚ್ಚಿರುವ ಶಂಕೆ ಇದೆ. ಬೆಂಕಿಯ ಕೆನ್ನಾಲಿಗೆಗೆ ಇಡೀ ಶೆಡ್ ಸುಟ್ಟು ಕರಕಲಾಗಿದೆ.

ಮೃತರು ಹಾಗೂ ಗಾಯಾಳುಗಳು ಒಂದೇ ಕುಟುಂಬದವರು. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪರಿಚಿತರೇ ಕೃತ್ಯ ಎಸಗಿರುವ ಶಂಕೆ ಇದೆ. ಕುಟುಂಬದ ಬಗೆಗೆ ವೈಯಕ್ತಿಕ ದ್ವೇಷ ಹೊಂದಿದ್ದವರು, ಕುಟುಂಬವನ್ನು ಸ್ಥಳದಿಂದ ಒಕ್ಕಲೆಬ್ಬಿಸಲು ಬಯಸಿದವರು, ಕೌಟುಂಬಿಕ ದ್ವೇಷ ಹಾಗೂ ಜಮೀನು ವ್ಯಾಜ್ಯ ಹೊಂದಿದವರನ್ನು ಪ್ರಶ್ನಿಸಲಾಗುತ್ತಿದೆ.

ಬೆಂಗಳೂರಲ್ಲಿ ಹಾಡಹಗಲೇ‌‌ ಪುಂಡಾಟ, 15 ಮಂದಿಯಿಂದ ಯುವಕನ ಮೇಲೆ ಹಲ್ಲೆ

ಬೆಂಗಳೂರು: ಬೆಂಗಳೂರಿನ ಬೀದಿಯಲ್ಲಿ ಹಾಡಹಗಲೇ ನಡೆದ ರಾಜಾರೋಷ ಹಲ್ಲೆಯೊಂದರ ದೃಶ್ಯವನ್ನು ಸಾರ್ವಜನಿಕರು ವಿಡಿಯೋ ಮಾಡಿ ಸೋಶಿಯಲ್‌ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಇದು ಮೆಟ್ರೋ ನಗರದ ಮಾನ ತೆಗೆಯುತ್ತಿದೆ. ವಿದ್ಯಾರಣ್ಯಪುರದಲ್ಲಿ ಘಟನೆ ನಡೆದಿದೆ.

15 ಜನ ಪುಂಡರು ಒಬ್ಬ ಯುವಕನ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯವನ್ನು ಸಾರ್ವಜನಿಕರು ವಿಡಿಯೋ ಸಮೇತ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಸಿಸಿಟಿವಿಯಲ್ಲೂ ಯುವಕನ ಮೇಲಿನ ಹಲ್ಲೆಯ ದೃಶ್ಯ ಸೆರೆಯಾಗಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ನರಸೀಪುರ ಬಳಿ ನಡೆದ ಘಟನೆಯಿದು. ಹಲ್ಲೆಗೊಳಗಾದವನು ಹಾಗೂ ಹಲ್ಲೆ ಮಾಡಿದವರ ಕುರಿತ ವಿವರಗಳನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.

ಹಲ್ಲೆಯಿಂದ‌ ಯುವಕನ‌ ಮುಖ ಮತ್ತು ಮೂಗಿನ‌ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಈ ಕುರಿತು ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರು ಮತ್ತು ಈಶಾನ್ಯ ಡಿಸಿಪಿಗೆ ಟ್ಯಾಗ್ ಮಾಡಿ ಪೋಸ್ಟ್ ಮಾಡಲಾಗಿದೆ. ʼಬಿಎನ್‌ಎಸ್ 109 ಅಂದರೆ ಕೊಲೆ‌ ಯತ್ನ?ʼ ಎಂದು ಉಲ್ಲೇಖಿಸಿ ಪೋಸ್ಟ್‌ ಮಾಡಲಾಗಿದೆ.

ಇದನ್ನೂ ಓದಿ: Crime News: ಶಾಕಿಂಗ್‌; 8 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿದ ಅಪ್ರಾಪ್ತ ಬಾಲಕರು

Continue Reading
Advertisement
Rishabh Pant
ಕ್ರೀಡೆ1 min ago

Rishabh Pant: ಡೆಲ್ಲಿ ತೊರೆದು ಮುಂದಿನ ಐಪಿಎಲ್​ನಲ್ಲಿ ಈ ಫ್ರಾಂಚೈಸಿ ಪರ ಆಡಲಿದ್ದಾರೆ ರಿಷಭ್​ ಪಂತ್​

Job Alert
ಉದ್ಯೋಗ11 mins ago

Job Alert: ಅಂಚೆ ಇಲಾಖೆಯಿಂದ ಬೃಹತ್‌ ನೇಮಕಾತಿ; ಕರ್ನಾಟಕದಲ್ಲಿಯೂ ಇದೆ 1,940 ಹುದ್ದೆ: ಹೀಗೆ ಅಪ್ಲೈ ಮಾಡಿ

Viral Video
Latest27 mins ago

Viral Video: ಕಾಮುಕರ ಹಾವಳಿ ಮಿತಿ‌ ಮೀರಿದೆ; ಬೀದಿ ನಾಯಿಯನ್ನೂ ಇವರು ಬಿಡುತ್ತಿಲ್ಲ! ಆಘಾತಕಾರಿ ವಿಡಿಯೊ

Jitan Sahani
ದೇಶ35 mins ago

Jitan Sahani: ಬಿಹಾರದಲ್ಲಿ ವಿಕಾಸಶೀಲ ಇನ್ಸಾನ್‌ ಪಕ್ಷದ ಮುಖ್ಯಸ್ಥನ ತಂದೆಯ ಭೀಕರ ಹತ್ಯೆ; ಮನೆ ತುಂಬ ರಕ್ತ!

karnataka assembly live
ಪ್ರಮುಖ ಸುದ್ದಿ53 mins ago

Karnataka Assembly Live: ಸದನದಲ್ಲಿ ಇಂದು ಕಿಡಿಯೆಬ್ಬಿಸಲಿರುವ ವಾಲ್ಮೀಕಿ ಹಗರಣ; ಉತ್ತರ ನೀಡಲು ಸಿಎಂ ಸಜ್ಜು; ಇಲ್ಲಿದೆ ಕ್ಷಣಕ್ಷಣದ ಲೈವ್‌

David Warner
ಕ್ರೀಡೆ56 mins ago

David Warner: ​ಚಾಂಪಿಯನ್ಸ್ ಟ್ರೋಫಿಗೆ ವಾರ್ನರ್​ ಆಯ್ಕೆ ಇಲ್ಲ ಎಂದ ಜಾರ್ಜ್​ ಬೈಲಿ

Kannada New Movie
ಸ್ಯಾಂಡಲ್ ವುಡ್60 mins ago

Kannada New Movie: ಸೆಟ್ಟೇರಿತು ‘ಆಕಾಶ್’, ‘ಅರಸು’ ಚಿತ್ರಗಳ ಡೈರೆಕ್ಟರ್ ಹೊಸ ಸಿನಿಮಾ; ಕಿರುತೆರೆಯ ಈ ಪ್ರತಿಭೆ ನಾಯಕ

Kannada In Madrasa
ಕರ್ನಾಟಕ1 hour ago

Kannada In Madrasa: ರಾಜ್ಯದ ಮದರಸಾಗಳಲ್ಲಿ ಇನ್ನು ಕನ್ನಡ ಕಲಿಕೆ ಕಡ್ಡಾಯ; ಶೀಘ್ರವೇ ಆದೇಶ!

murder case set fire bagalakote
ಕ್ರೈಂ1 hour ago

Horrible Murder Case: ಶೆಡ್‌ ಹೊರಗಿನಿಂದ ಲಾಕ್‌ ಮಾಡಿ ಬೆಂಕಿ ಇಟ್ಟ ದುಷ್ಟರು; ಇಬ್ಬರು ಸಜೀವ ದಹನ

Iti Acharya
ಸಿನಿಮಾ2 hours ago

Iti Acharya: ಬಾಲಿವುಡ್‌ಗೆ ಕಾಲಿಟ್ಟ ಮತ್ತೊಬ್ಬ ಕನ್ನಡತಿ; ದಕ್ಷಿಣ ಭಾರತದ ಚಿತ್ರಗಳ ಬಳಿಕ ಹಿಂದಿಯಲ್ಲೂ ಅಭಿನಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ17 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ24 hours ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ3 days ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

ಟ್ರೆಂಡಿಂಗ್‌