Yogi Adityanath: ಅತಿಯಾದ ಆತ್ಮವಿಶ್ವಾಸವೇ ಮುಳುವಾಯ್ತು; ಬಿಜೆಪಿ ಸೋಲಿನ ಆತ್ಮವಲೋಕನ ಮಾಡಿದ ಯೋಗಿ ಆದಿತ್ಯನಾಥ್ - Vistara News

ರಾಜಕೀಯ

Yogi Adityanath: ಅತಿಯಾದ ಆತ್ಮವಿಶ್ವಾಸವೇ ಮುಳುವಾಯ್ತು; ಬಿಜೆಪಿ ಸೋಲಿನ ಆತ್ಮವಲೋಕನ ಮಾಡಿದ ಯೋಗಿ ಆದಿತ್ಯನಾಥ್

Yogi Adityanath: ಅತಿಯಾದ ಆತ್ಮವಿಶ್ವಾಸ, ದಲಿತ ಮತಗಳ ವರ್ಗಾವಣೆ, ಸಾಧನೆಗಳನ್ನು ಬಳಸಿಕೊಳ್ಳುವಲ್ಲಿನ ವೈಫಲ್ಯ ಮತ್ತು ಸಾಮಾಜಿಕ ಮಾಧ್ಯಮಗಳನ್ನು ಸರಿಯಾಗಿ ಬಳಸದಿರುವುದೇ 2024ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ (BJP)ಯ ಕಳಪೆ ಪ್ರದರ್ಶನಕ್ಕೆ ಪ್ರಮುಖ ಕಾರಣ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ. ಲಕ್ನೋದಲ್ಲಿ ಬಿಜೆಪಿಯ ಕಾರ್ಯಕಾರಿ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಮತ್ತೊಮ್ಮೆ ಯಶಸ್ಸು ಸಾಧಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದ್ದಾರೆ.

VISTARANEWS.COM


on

Yogi Adityanath
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಕ್ನೋ: ಅತಿಯಾದ ಆತ್ಮವಿಶ್ವಾಸ, ದಲಿತ ಮತಗಳ ವರ್ಗಾವಣೆ, ಸಾಧನೆಗಳನ್ನು ಬಳಸಿಕೊಳ್ಳುವಲ್ಲಿನ ವೈಫಲ್ಯ ಮತ್ತು ಸಾಮಾಜಿಕ ಮಾಧ್ಯಮಗಳನ್ನು ಸರಿಯಾಗಿ ಬಳಸದಿರುವುದೇ 2024ರ ಲೋಕಸಭಾ ಚುನಾವಣೆ (Lok Sabha Election)ಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ (BJP)ಯ ಕಳಪೆ ಪ್ರದರ್ಶನಕ್ಕೆ ಪ್ರಮುಖ ಕಾರಣ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ತಿಳಿಸಿದ್ದಾರೆ.

ಲಕ್ನೋದಲ್ಲಿ ಬಿಜೆಪಿಯ ಕಾರ್ಯಕಾರಿ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, “ನಾವು ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಧ್ವಜವನ್ನು ಹಾರಿಸಬೇಕಾಗಿದೆ. ರಾಜ್ಯದ 10 ಸ್ಥಾನಗಳಲ್ಲಿ ನಡೆಯಲಿರುವ ವಿಧಾನಸಭಾ ಉಪಚುನಾವಣೆ ಮತ್ತು 2027ರ ವಿಧಾನಸಭಾ ಚುನಾವಣೆಗೆ ಎಲ್ಲರೂ ಈಗಿನಿಂದಲೇ ಸಕ್ರಿಯರಾಗಿರಬೇಕು. ಎಲ್ಲ ಲೋಕಸಭಾ ಮತ್ತು ರಾಜ್ಯಸಭಾ ಸಂಸದರು, ಶಾಸಕರು, ಎಂಎಲ್‌ಸಿಗಳು, ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಮೇಯರ್‌ಗಳು, ಕೌನ್ಸಿಲರ್‌ಗಳು, ಕಾರ್ಯಕರ್ತರು ಸೇರಿ ಎಲ್ಲರೂ 2027ರ ಚುನಾವಣೆಗೆ ಈಗಿನಿಂದಲೇ ತಯಾರಿ ಪ್ರಾರಂಭಿಸಬೇಕುʼʼ ಎಂದು ಆದಿತ್ಯನಾಥ್ ಕರೆ ನೀಡಿದ್ದಾರೆ.

ಪಕ್ಷದ ಕಳಪೆ ಪ್ರದರ್ಶನದ ಹಿಂದಿನ ಕಾರಣಗಳನ್ನು ಎತ್ತಿ ತೋರಿಸಿದ ಮುಖ್ಯಮಂತ್ರಿ, “ಪ್ರಧಾನಿ ಮೋದಿ ಅವರ ಸಮರ್ಥ ನಾಯಕತ್ವದಲ್ಲಿ ನಾವು ರಾಜ್ಯದಲ್ಲಿ ಪ್ರತಿಪಕ್ಷಗಳ ಮೇಲೆ ನಿರಂತರ ಒತ್ತಡವನ್ನು ಕಾಯ್ದುಕೊಂಡಿದ್ದೇವೆ. 2014, 2017, 2019 ಮತ್ತು 2022ರಲ್ಲಿ ಉತ್ತಮ ಯಶಸ್ಸು ಸಾಧಿಸಿದ್ದೇವೆ. ಆದರೆ ಈ ಬಾರಿ ಮತಗಳ ಬದಲಾವಣೆ ಮತ್ತು ಅತಿಯಾದ ಆತ್ಮವಿಶ್ವಾಸ ನಮ್ಮ ನಿರೀಕ್ಷೆಗಳನ್ನು ಹುಸಿಗೊಳಿಸಿದೆ. ಈ ಹಿಂದೆ ಸೋಲನ್ನು ಒಪ್ಪಿಕೊಂಡು ತಮ್ಮ ಎಲ್ಲ ಭರವಸೆಯನ್ನು ಕಳೆದುಕೊಂಡಿದ್ದ ಪ್ರತಿಪಕ್ಷಗಳು ಈಗ ಸಿಕ್ಕ ಯಶಸ್ಸಿನಿಂದ ಮೆರೆಯುತ್ತಿವೆʼʼ ಎಂದು ಹೇಳಿದ್ದಾರೆ.

“ಬಿಜೆಪಿ ಸಂವಿಧಾನದ ಬಗ್ಗೆ ಅತ್ಯುನ್ನತ ಗೌರವ ಹೊಂದಿರುವ ಪಕ್ಷ. ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನದ ಮೂಲ ಪ್ರತಿಯನ್ನು ಹೊಸ ಸಂಸತ್ ಭವನದಲ್ಲಿ ಸ್ಥಾಪಿಸಿದ್ದಾರೆ. ಬಿಜೆಪಿ ಎಸ್‌ಸಿ-ಎಸ್‌ಟಿ ಮತ್ತು ಹಿಂದುಳಿದ ವರ್ಗಗಳ ಹಕ್ಕುಗಳನ್ನು ರಕ್ಷಿಸಲು ಬದ್ಧವಾಗಿದೆ. ಆದರೆ ಪ್ರತಿಪಕ್ಷಗಳು ವದಂತಿಗಳನ್ನು ಹರಡಿ, ಗೊಂದಲವನ್ನು ಸೃಷ್ಟಿಸಿವೆ. ಇದು ಜಾತಿಯ ಹೆಸರಿನಲ್ಲಿ ಜನರನ್ನು ವಿಭಜಿಸಿತು. ನಾವು ಈ ಬಗ್ಗೆ ಜಾಗರೂಕರಾಗಿರಬೇಕು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಬಾಬಾ ಸಾಹೇಬ್ ಅವರ ಹೆಸರಿನಲ್ಲಿದ್ದ ಕನೌಜ್ ವೈದ್ಯಕೀಯ ಕಾಲೇಜಿನ ಹೆಸರನ್ನು ಎಸ್‌ಪಿ ಸರ್ಕಾರ ರಾಜ್ಕಿಯಾ ವೈದ್ಯಕೀಯ ಕಾಲೇಜು ಎಂದು ಬದಲಾಯಿಸಿರುವುದನ್ನು ಉದಾಹರಣೆಯಾಗಿ ಉಲ್ಲೇಖಿಸಿದ ಅವರು, “ಬಾಬಾ ಸಾಹೇಬ್ ಡಾ.ಭೀಮರಾವ್ ಅಂಬೇಡ್ಕರ್ ಅವರ ಹೆಸರನ್ನು ಮರುನಾಮಕರಣ ಮಾಡಿದ್ದು ಬಿಜೆಪಿ ಸರ್ಕಾರ. ಅದೇ ರೀತಿ ಹಿಂದುಳಿದ ಜಾತಿಗೆ ಸೇರಿದ ರಾಜು ಪಾಲ್, ರಮೇಶ್ ಪಾಲ್ ಮತ್ತು ರಮೇಶ್ ಯಾದವ್ ಅವರ ಹತ್ಯೆಯ ವಿರುದ್ಧ ಯಾರೂ ಧ್ವನಿ ಎತ್ತಲಿಲ್ಲ. ಸಂತ್ರಸ್ತರ ಧ್ವನಿಗೆ ಬೆಂಬಲ ನೀಡಲು ಬಿಜೆಪಿ ಸರ್ಕಾರ ಬರಬೇಕಾಯಿತು” ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ತಿಳಿಸಿದ್ದಾರೆ.

ಇದನ್ನೂ ಓದಿ: Suvendu Adhikari: ಉಪಚುನಾವಣೆಯಲ್ಲಿ ಭಾರಿ ವಂಚನೆ? 2 ಲಕ್ಷ ಹಿಂದುಗಳ ವೋಟಿಂಗ್‌ ಹಕ್ಕು ಕಸಿಯಲಾಗಿತ್ತು ಎಂದ ಬಿಜೆಪಿ ನಾಯಕ

ಬಿಜೆಪಿ ಸರ್ಕಾರವು ಯಾವುದೇ ತಾರತಮ್ಯವಿಲ್ಲದೆ ಎಲ್ಲರಿಗೂ ಯೋಜನೆಗಳ ಪ್ರಯೋಜನಗಳನ್ನು ನೀಡಿದೆ ಎಂದು ಅವರು ಹೇಳಿದ್ದಾರೆ. ಇದಲ್ಲದೆ ಸಮಾಜವಾದಿ ಪಕ್ಷದ ನಾಯಕರು ದಲಿತ ಚಿಂತಕರು ಮತ್ತು ಮಹಾಪುರುಷರನ್ನು ಅವಮಾನಿಸಿದ್ದಾರೆ ಎಂದು ದೂರಿದ್ದಾರೆ. “ಎಸ್‌ಸಿ ಸರ್ಕಾರ 2016ರಲ್ಲಿ ದಲಿತ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್‌ ನಿಲ್ಲಿಸಿತ್ತು. ಇದನ್ನು 2017ರಲ್ಲಿ ಬಿಜೆಪಿ ಪುನರಾರಂಭಿಸಿದೆʼʼ ಎಂದು ವಿವರಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Karnataka Assembly Live: ಸದನದಲ್ಲಿ ಇಂದು ಕಿಡಿಯೆಬ್ಬಿಸಲಿರುವ ವಾಲ್ಮೀಕಿ ಹಗರಣ; ಉತ್ತರ ನೀಡಲು ಸಿಎಂ ಸಜ್ಜು; ಇಲ್ಲಿದೆ ಕ್ಷಣಕ್ಷಣದ ಲೈವ್‌

Karnataka Assembly Live: ಇಂದು ಸಹ ಬಿಜೆಪಿ ಹಾಗೂ ಜೆಡಿಎಸ್ ಶಾಸಕರಿಂದ ಈ ಚರ್ಚೆ ಮುಂದುವರಿಯಲಿದೆ. ಬಿಜೆಪಿಯ ಸಿಟಿ ರವಿ, ಸುನೀಲ್‌ ಕುಮಾರ್‌, ಯತ್ನಾಳ್ ಮುಂತಾದವರು ಈ ಚರ್ಚೆಯನ್ನು ಮುನ್ನಡೆಸಲಿದ್ದಾರೆ. ಬಳಿಕ ಸಿಎಂ ಸಿದ್ದರಾಮಯ್ಯ ಅವರು ಉತ್ತರ ನೀಡುವ ನಿರೀಕ್ಷೆ ಇದೆ. ನಿನ್ನೆ ಆಶೋಕ್ ಮಾತನಾಡುವಾಗಲೇ ಈ ಬಗ್ಗೆ ಸಿದ್ದರಾಮಯ್ಯ ಸುಳಿವು ನೀಡಿದ್ದರು.

VISTARANEWS.COM


on

karnataka assembly live
Koo

ಬೆಂಗಳೂರು: ವಿಧಾನ ಮಂಡಲ ಮಳೆಗಾಲದ ಅಧಿವೇಶನ (Karnataka Assembly Live, Karnataka Assembly monsoon session) ಇಂದು ಇನ್ನಷ್ಟು ರಂಗೇರಲಿದೆ. ವಾಲ್ಮೀಕಿ ನಿಗಮದ ಅವ್ಯವಹಾರ (Valmiki corporation Scam) ಪ್ರಕರಣದ ಕುರಿತು ನಿನ್ನೆ ವಿಧಾನಸಭೆ ಕಲಾಪದಲ್ಲಿ ಸುದೀರ್ಘ ಚರ್ಚೆ ನಡೆದಿದ್ದು, ವಿಪಕ್ಷ ನಾಯಕ ಆರ್. ಆಶೋಕ್ (R Ashok) ಅವರು ಈ ಚರ್ಚೆಯನ್ನು ಮುನ್ನಡೆಸಿದ್ದರು. ಇಂದು ಅದು ಮುಂದುವರಿಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಕೂಡ ಇದಕ್ಕೆ ಉತ್ತರ ನೀಡಲಿದ್ದಾರೆ.

ನಿನ್ನೆ ಮಾತನಾಡಿದ ಆರ್.‌ ಅಶೋಕ್‌, ಸರ್ಕಾರದ ತಪ್ಪು ನಡೆಗಳ ಬಗ್ಗೆ ಪ್ರಸ್ತಾಪ ಮಾಡಿದ್ದರು. ಹೈಕಮಾಂಡ್‌ಗೆ ಕಪ್ಪಕಾಣಿಕೆ ಸಲ್ಲಿಸಲು ನಿಗಮದ ಹಣವನ್ನು ದುರುಪಯೋಗ ಮಾಡಲಾಗಿದೆ ಎಂದಿದ್ದ ಅಶೋಕ್‌, 187 ಕೋಟಿ ರೂಪಾಯಿ ಅವ್ಯವಹಾರದ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದರು. ಈ ಹಣ ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಹೇಗೆ ವಿನಿಯೋಗವಾಗಬೇಕಿತ್ತು, ಹೇಗೆ ಅಕ್ರಮವಾಗಿದೆ ಎಂಬುದನ್ನು ಎಳೆ ಎಳೆಯಾಗಿ ಬಿಡಿಸಿಟ್ಟಿದ್ದರು. ಆ ಮೂಲಕ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದರು.

ಇಂದು ಸಹ ಬಿಜೆಪಿ ಹಾಗೂ ಜೆಡಿಎಸ್ ಶಾಸಕರಿಂದ ಈ ಚರ್ಚೆ ಮುಂದುವರಿಯಲಿದೆ. ಬಿಜೆಪಿಯ ಸಿಟಿ ರವಿ, ಸುನೀಲ್‌ ಕುಮಾರ್‌, ಯತ್ನಾಳ್ ಮುಂತಾದವರು ಈ ಚರ್ಚೆಯನ್ನು ಮುನ್ನಡೆಸಲಿದ್ದಾರೆ. ಬಳಿಕ ಸಿಎಂ ಸಿದ್ದರಾಮಯ್ಯ ಅವರು ಉತ್ತರ ನೀಡುವ ನಿರೀಕ್ಷೆ ಇದೆ. ನಿನ್ನೆ ಆಶೋಕ್ ಮಾತನಾಡುವಾಗಲೇ ಈ ಬಗ್ಗೆ ಸಿದ್ದರಾಮಯ್ಯ ಸುಳಿವು ನೀಡಿದ್ದರು. ʼನಿಮ್ಮ ವಾದವನ್ನ ಸಮಾಧಾನವಾಗಿ ಕೇಳ್ತೀನಿ. ನಾನು ಉತ್ತರ ಕೊಡುವಾಗಲೂ ಅಷ್ಟೇ ಸಮಾಧಾನದಿಂದ ಕೇಳಬೇಕುʼ ಎಂದಿದ್ದರು.

ʼ187 ಕೋಟಿ ಅಲ್ಲ ಅದು ಬರೀ 87 ಕೋಟಿ ಮಾತ್ರ ವರ್ಗಾವಣೆ ಆಗಿರುವುದು. ಹಣ ಎಲ್ಲಿಯವರೆಗೂ ಸರ್ಕಾರದ ಸುಪರ್ದಿಯಲ್ಲಿರುತ್ತೆ, ಬಳಿಕ ಆ ಹಣ ಯಾರಿಗೆ ಹೋಗುತ್ತೆ ಈ ಬಗ್ಗೆ ಸಂಪೂರ್ಣ ಮಾಹಿತಿ ಕೊಡ್ತೀನಿ. ಇದರಲ್ಲಿ ಯಾರ ಪಾತ್ರ ಎಷ್ಟಿದೆ. ಈ ಹಿಂದೆ ಹೇಗೆ ವ್ಯವಹಾರ ನಡೆದಿದೆ ಅದೆಲ್ಲವನ್ನ ಸಂಪೂರ್ಣವಾಗಿ ಕೊಡ್ತೀನಿʼ ಎಂದು ಹೇಳಿದ್ದರು. ಎಂದರೆ ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದ ಪ್ರಕರಣಗಳನ್ನೂ ಸಿಎಂ ಪ್ರಸ್ತಾವಿಸುವುದು ಖಚಿತವಾಗಿದೆ.

ಇದರಿಂದ ಸದನದಲ್ಲಿ ಇಂದು ಏಟು ಎದಿರೇಟು ಖಚಿತವಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಆಡಳಿತ ಪಕ್ಷ ಸದದ್ಯರು ಸಾಥ್‌ ನೀಡಲಿದ್ದು, ವಿಪಕ್ಷ ಶಾಸಕರು ಕೆರಳಿ ಪ್ರತಿಭಟನೆ ನಡೆಸುವುದೂ ಬಹುತೇಕ ಖಚಿತವಾಗಿದೆ. ಸ್ಪೀಕರ್‌ ಯು.ಟಿ ಖಾದರ್‌ ಅವರು ಶಾಂತಚಿತ್ತರಾಗಿಯೇ ಸದನದ ಕಲಾಪವನ್ನು ನಿರ್ವಹಿಸುತ್ತಿದ್ದರೂ, ಹಲವು ಬಾರಿ ಶಾಸಕರ ವರ್ತನೆ ಅವರಿಗೂ ಸವಾಲಾಗುತ್ತಿದೆ.

ನಿನ್ನೆ ಅಧಿವೇಶನ ಆರಂಭಕ್ಕೂ ಮುನ್ನ ವಿಧಾನಸೌಧದ ನೂತನ ದ್ವಾರವನ್ನು ಸಿಎಂ ಉದ್ಘಾಟಿಸಿದ್ದರು. ವಿಧಾನಸಭೆಯ ಸಭಾಂಗಣವನ್ನು ಇನ್ನಷ್ಟು ಸುಂದರವಾಗಿ ವಿನ್ಯಾಸಗೊಳಿಸಲಾಗಿದ್ದು, ಇದಕ್ಕೆ ಸದಸ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಕಲಾಪ ಆರಂಭದಲ್ಲಿ ಸಂವಿಧಾನದ ಪೀಠಿಕೆಯನ್ನು ಓದಲಾಯಿತು. ನಂತರ ಅಗಲಿದ ಗಣ್ಯರಿಗೆ ಸಂತಾಪ ಸೂಚನೆ ಮಂಡಿಸಲಾಯಿತು.

ಇದನ್ನೂ ಓದಿ: Assembly Session: ಅಧಿವೇಶನದಲ್ಲಿ ಹಗರಣಗಳ ಸದ್ದು; ಮೊದಲ ದಿನವೇ ಮುಗಿಬಿದ್ದ ವಿಪಕ್ಷ ನಾಯಕರು, ಹೆದರಲ್ಲ ಎಂದ ಸಿಎಂ!

Continue Reading

ಕರ್ನಾಟಕ

Assembly Session: ಸರ್ವೆ ಇಲಾಖೆ ಸಮಸ್ಯೆಗಳ ಪರಿಹಾರಕ್ಕೆ ಚುರುಕಿನ ಕ್ರಮ: ಸಚಿವ ಕೃಷ್ಣ ಬೈರೇಗೌಡ

Assembly Session: ಸರ್ವೇ ಇಲಾಖೆಯಲ್ಲಿ ಸಾಕಷ್ಟು ಸಮಸ್ಯೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನತಾ ದರ್ಶನ ಕಾರ್ಯಕ್ರಮದಲ್ಲೂ ಸರ್ವೇ ಇಲಾಖೆಗೆ ಸಂಬಂಧಿಸಿದಂತೆ ಸಾಕಷ್ಟು ದೂರುಗಳು ಬರುತ್ತಿವೆ. ಈ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲೂ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

VISTARANEWS.COM


on

Assembly Session Government is making sincere efforts to solve the problems in the Survey Department says Minister Krishna Byre Gowda
Koo

ಬೆಂಗಳೂರು: ಸರ್ವೇ ಇಲಾಖೆಯಲ್ಲಿ ಹಲವಾರು ಸಮಸ್ಯೆಗಳಿದ್ದು, ಇದರಿಂದ ರೈತರು ಸಂಕಷ್ಟಕ್ಕೀಡಾಗಿರುವುದು ನಮ್ಮ ಗಮನದಲ್ಲಿದೆ. ಅಲ್ಲದೆ, ಈ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ (Assembly Session) ತಿಳಿಸಿದರು.

ವಿಧಾನಸಭೆ ಪ್ರಶ್ನೋತ್ತರ ಅವಧಿಯ ವೇಳೆ ರಾಯಭಾಗ ಕ್ಷೇತ್ರದ ಬಿಜೆಪಿ ಶಾಸಕ ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಅವರು ಸರ್ವೇ ಇಲಾಖೆ ಸಮಸ್ಯೆಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಸರ್ವೇ ಇಲಾಖೆಯಲ್ಲಿ ಸಾಕಷ್ಟು ಸಮಸ್ಯೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನತಾ ದರ್ಶನ ಕಾರ್ಯಕ್ರಮದಲ್ಲೂ ಸರ್ವೇ ಇಲಾಖೆಗೆ ಸಂಬಂಧಿಸಿದಂತೆ ಸಾಕಷ್ಟು ದೂರುಗಳು ಬರುತ್ತಿವೆ. ಈ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲೂ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಅವರು ವಿವರಿಸಿದರು.

ಇದನ್ನೂ ಓದಿ: KSRTC Package Tour: ಜೋಗ ಜಲಪಾತ ವೀಕ್ಷಣೆಗೆ ಕೆಎಸ್‌ಆರ್‌ಟಿಸಿ ಪ್ಯಾಕೇಜ್‌ ಟೂರ್‌!

ಗ್ರಾಮ ಲೆಕ್ಕಿಗರು 1,000 ಹಾಗೂ 750 ಜನ ಸರ್ವೇಯರ್ ಭರ್ತಿ

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಯ ಬಗ್ಗೆ ವಿಧಾನಸಭೆಗೆ ಮಾಹಿತಿ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ರಾಜ್ಯದಲ್ಲಿ 1,000 ಗ್ರಾಮ ಆಡಳಿತಾಧಿಕಾರಿಗಳು ಹಾಗೂ 750 ಸರ್ಕಾರಿ ಸರ್ವೇಯರ್ ಭರ್ತಿ ಪ್ರಕಿಯೆ ನಡೆದಿದೆ. ಇದರ ಜತೆಗೆ 100ಕ್ಕೂ ಅಧಿಕ ಪರವಾನಗಿ ಹೊಂದಿರುವ ಖಾಸಗಿ ಸರ್ವೇಯರ್‌ ಹಾಗೂ 35 ಎ.ಡಿ.ಎಲ್.ಆರ್ ನೇಮಕಾತಿಗೆ ಅರ್ಜಿ ಕರೆಯಲಾಗಿದೆ. ಮುಂದಿನ 3 ರಿಂದ 6 ತಿಂಗಳ ಒಳಗಾಗಿ ಈ ಎಲ್ಲಾ ಹುದ್ದೆಗಳನ್ನೂ ನ್ಯಾಯಸಮ್ಮತವಾಗಿ ಭರ್ತಿ ಮಾಡುವಂತೆ ಕೆಪಿಎಸ್‌ಸಿ ಗೆ ಸೂಚಿಸಲಾಗಿ ಎಂದು ತಿಳಿಸಿದರು.

“ಸರ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿದರೆ ಸ್ವಾಭಾವಿಕವಾಗಿ ಸರ್ವೇ ಇಲಾಖೆಗೆ ಬಲ ಬರಲಿದೆ. ಈ ಹುದ್ದೆಗಳಲ್ಲದೆ, ಹೆಚ್ಚುವರಿಯಾಗಿ ಹೊಸ ಹುದ್ದೆಗಳ ಸೃಷ್ಟಿಗೂ ಮುಖ್ಯಮಂತ್ರಿಗಳ ಬಳಿ ಮನವಿ ಸಲ್ಲಿಸಿದ್ದು ಮತ್ತಷ್ಟು ಹುದ್ದೆಗಳನ್ನು ಸೃಷ್ಟಿಸಲು ಸರ್ಕಾರ ಸಿದ್ದವಾಗಿದೆ. ಇದರ ಜತೆಗೆ ನಮ್ಮ ಸಿಬ್ಬಂದಿಗಳ ಕೆಲಸದ ವೇಗ ಹೆಚ್ಚಾಗಲು ಮೂರು ಪಟ್ಟು ಸರ್ವೇ ಕೆಲದ ವೇಗ ಪಡೆಯಲು ಆಧುನಿಕ ಉಪಕರಣವಾದ ರೋವರ್‌ ಬಳಸಿ ಸರ್ವೇ ನಡೆಸಲೂ ಸೂಚಿಸಲಾಗಿದೆ. ಈ ಮೂಲಕ ರೈತರ ಸಮಸ್ಯೆಗಳನ್ನು ಬಗೆಹರಿಸುವ ಹಾಗೂ ಸರ್ವೇ ಇಲಾಖೆಯನ್ನು ಬಲಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ ಎಂದರು.

ಅರಗ ಜ್ಞಾನೇಂದ್ರರ ಪ್ರಶ್ನೆಗೆ ಸಚಿವರ ಖಡಕ್‌ ಉತ್ತರ

ಸಚಿವ ಕೃಷ್ಣ ಬೈರೇಗೌಡ ಉತ್ತರಿಸುತ್ತಿದ್ದ ವೇಳೆ ಮಧ್ಯಪ್ರವೇಶಿಸಿದ ಬಿಜೆಪಿ ಶಾಸಕ, ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, “ಮಲೆನಾಡಿನ ರೈತರ ಸಮಸ್ಯೆ ಬೆಂಗಳೂರಿನಿಂದ ತೇರ್ಗಡೆಯಾಗಿ ಹೋದ ಸರ್ವೇಯರ್‌ಗೆ ಗೊತ್ತಾಗೋದೆ ಇಲ್ಲ. ಇಷ್ಟಕ್ಕೂ ಅವರು ಬೆಂಗಳೂರಿನಿಂದ ಹೊರಟು ಮಲೆನಾಡಿಗೆ ಬಂದು ತಲುಪುವುದರ ಒಳಗಾಗಿ ಡೆಪ್ಯುಟೇಷನ್ ಮೇಲೆ ಮತ್ತೆ ಬೆಂಗಳೂರಿಗೆ ಹಿಂತಿರುಗುತ್ತಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: Viral Video: ತರಕಾರಿ ಮಾರುವವಳ ಮಗ ಸಿಎ ಪರೀಕ್ಷೆಯಲ್ಲಿ ಪಾಸ್‌; ಹೃದಯಸ್ಪರ್ಶಿ ವಿಡಿಯೊ ಇಲ್ಲಿದೆ

ಈ ಆರೋಪಕ್ಕೆ ಖಡಕ್ ಆಗಿಯೇ ಉತ್ತರ ಕೊಟ್ಟ ಸಚಿವ ಕೃಷ್ಣ ಬೈರೇಗೌಡ, “ಕಳೆದ ಒಂದು ವರ್ಷದಲ್ಲಿ ನಾನು ವೈಯಕ್ತಿಕವಾಗಿ ಒಂದೇ ಒಂದು ಕೇಸ್ ಕೂಡ ಡೆಪ್ಯುಟೇಶನ್ ಮಾಡಿಲ್ಲ. ಡೆಪ್ಯುಟೇಷನ್ ಎನ್ನುವ ಮಾತೇ ಇಲ್ಲ. ಅಲ್ಲದೆ, ಡೆಪ್ಯುಟೇಷನ್ ಮೇಲೆ ಇತರೆಡೆ ಹೋದ ಅಧಿಕಾರಿಗಳನ್ನೂ ಸಹ ಹಿಂದಕ್ಕೆ ವಾಪಸ್ ಕರೆಸಲಾಗಿದೆ” ಎಂದು ಮಾಹಿತಿ ನೀಡಿದರು.

Continue Reading

ಕರ್ನಾಟಕ

Assembly Session: ಜುಲೈ 18ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಸಿದ್ದರಾಮಯ್ಯ

Assembly Session: ವಿಧಾನ ಮಂಡಲ ಅಧಿವೇಶನ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ಸಿಎಂ‌ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

VISTARANEWS.COM


on

Assembly Session
Koo

ಬೆಂಗಳೂರು: ವಿಧಾನಮಂಡಲ ಅಧಿವೇಶನ (Assembly Session) ಹಿನ್ನೆಲೆಯಲ್ಲಿ ಜುಲೈ 18ರಂದು ಗುರುವಾರ ಸಂಜೆ 6.30ಕ್ಕೆ ಸಿಎಂ ಸಿದ್ದರಾಮಯ್ಯ ಅವರು ನಗರದ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ (Congress Legislature Party meeting) ಕರೆದಿದ್ದಾರೆ. ಜುಲೈ 26ರವರೆಗೆ ವಿಧಾನ ಮಂಡಲದ ಅಧಿವೇಶನ ನಡೆಯುಲಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ಸಿಎಂ‌ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ (CLP meeting) ಕರೆದಿದ್ದಾರೆ.

ಜುಲೈ 18ರಂದು ಸಂಜೆ 6.30 ಗಂಟೆಗೆ ಅರಮನೆ ರಸ್ತೆಯ ಸಿ.ಐ.ಡಿ. ಕಛೇರಿ ಮುಂಭಾಗದಲ್ಲಿರುವ “ಹೋಟೆಲ್ ರ‍್ಯಾಡಿಸನ್ ಬ್ಲೂ (ಏಟ್ರಿಯಾ)” ನಲ್ಲಿ ‘ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ’ಯನ್ನು ಕರೆಯಲಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಹಾಗೂ ಸಿಎಂ ಸಿದ್ದರಾಮಯ್ಯ ಅವರು ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಈ ಸಭೆಯಲ್ಲಿ ರಾಜ್ಯ ಕೆ.ಪಿ.ಸಿ.ಸಿ. ಅಧ್ಯಕ್ಷರು ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ್ ರವರು, ವಿಧಾನ ಪರಿಷತ್ತಿನ ಸಭಾ ನಾಯಕರಾದ ಎನ್.ಎಸ್. ಭೋಸರಾಜು ಹಾಗೂ ಪಕ್ಷದ ಕಾರ್ಯಾಧ್ಯಕ್ಷರು ಸಭೆಯಲ್ಲಿ ಉಪಸ್ಥಿತರಿರುತ್ತಾರೆ. ಆದ್ದರಿಂದ, ಎಲ್ಲಾ ಸದಸ್ಯರು ತಪ್ಪದೇ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಬೇಕೆಂದು ಮುಖ್ಯಮಂತ್ರಿಗಳ ಕಾರ್ಯದರ್ಶಿ ಸೂಚಿಸಿದ್ದಾರೆ.

ಇದನ್ನೂ ಓದಿ | Rahul Gandhi: ಹಿಂದುತ್ವದ ಅವಹೇಳನ; ರಾಹುಲ್ ಗಾಂಧಿ ವಿರುದ್ಧ ಬಂಟ್ವಾಳದ ಪವರ್ ಫುಲ್ ದೇವಿಗೆ ದೂರು!

7th Pay Commission: 7ನೇ ವೇತನ ಆಯೋಗದ‌ ಶಿಫಾರಸು ಜಾರಿಗೆ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್; ನೌಕರರಿಗೆ ಗುಡ್‌ ನ್ಯೂಸ್

Cauvery Dispute

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕರ್ನಾಟಕದಲ್ಲಿ 7ನೇ ವೇತನ ಆಯೋಗದ (7th Pay Commission) ಶಿಫಾರಸುಗಳ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದೆ. ಇದರಿಂದಾಗಿ ರಾಜ್ಯದ ಲಕ್ಷಾಂತರ ನೌಕರರ ವೇತನ (Karnataka Government Employees) ಜಾಸ್ತಿಯಾಗಲಿದೆ. ಆಗಸ್ಟ್‌ 1ರಿಂದಲೇ ಏಳನೇ ವೇತನ ಆಯೋಗದ ಜಾರಿಗೆ ಕರ್ನಾಟಕ ಸರ್ಕಾರ (Karnataka Government) ತೀರ್ಮಾನ ಮಾಡಿದೆ.

ಸರ್ಕಾರಿ ನೌಕರರ ಬೇಡಿಕೆ ಈಡೇರಿಸದಿದ್ದರೆ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌ ಷಡಾಕ್ಷರಿ (CS Shadakshari) ಅವರು ರಾಜ್ಯ ಸರ್ಕಾರಕ್ಕೆ ಈಗಾಗಲೇ ಎಚ್ಚರಿಕೆ ನೀಡಿದ್ದರು. ಕೆಲ ವರ್ಷಗಳಿಂದಲೂ ಏಳನೇ ವೇತನ ಆಯೋಗ ಜಾರಿಗೊಳಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘವು ಆಗ್ರಹಿಸುತ್ತಲೇ ಇತ್ತು.

ಇದರೊಂದಿಗೆ ರಾಜ್ಯ ಸರ್ಕಾರಿ ನೌಕರರ ಮಹತ್ವದ ಬೇಡಿಕೆ ಈಡೇರಿದಂತಾಗಿದೆ. ಇದಲ್ಲದೆ, ರಾಜ್ಯದ ಎನ್.ಪಿ.ಎಸ್. ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್.ಪಿ.ಎಸ್. ನೌಕರರನ್ನು ಓ.ಪಿ.ಎಸ್. ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿ. ಈಗಾಗಲೇ ಪಂಜಾಬ್, ರಾಜಸ್ಥಾನ, ಚತ್ತೀಸ್‌ ಘಡ, ಜಾರ್ಖಂಡ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿರುವಂತೆ ಹಾಗೂ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಕರ್ನಾಟಕದಲ್ಲೂ ಸಹ ಎನ್.ಪಿ.ಎಸ್.
ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು ಎಂಬುದು ಮತ್ತೊಂದು ಬೇಡಿಕೆಯಾಗಿದೆ.

ಇದನ್ನೂ ಓದಿ: OPS News: ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌; ಅರ್ಹರಿಗೆ ಒಪಿಎಸ್‌, ಪ್ರಸ್ತಾವನೆ ಸಲ್ಲಿಕೆಗೆ ಆದೇಶ

ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ಚಿಕಿತ್ಸೆ ನೀಡುವ “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ” (ಕೆ.ಎ.ಎಸ್.ಎಸ್)ಯನ್ನು ಜಾರಿಗೆ ತರಲು ಈ ಹಿಂದಿನ ರಾಜ್ಯ ಸರ್ಕಾರವು 2021-22ರ ಆಯವ್ಯದಲ್ಲಿ ಘೋಷಿಸಿತ್ತು. ಈಗಾಗಲೇ ಸಚಿವ ಸಂಪುಟದ ಅನುಮೋದನೆ ಪಡೆದು ದಿನಾಂಕ: 05-09-2022 ರಂದು ಸರ್ಕಾರಿ ಆದೇಶ ಹೊರಡಿಸಿರುತ್ತದೆ. ಈ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ವೇತನದಿಂದ ಪ್ರತಿ ತಿಂಗಳು ವೃಂದವಾರು ವಂತಿಗೆ ಕಟಾವಣೆಯಾಗಲಿದ್ದು, ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಹೊರೆಯಾಗುವುದಿಲ್ಲ. ಯೋಜನೆಯ ಅನುಷ್ಟಾನಾಧಿಕಾರಿಗಳು ತಾಂತ್ರಿಕ ಹಾಗೂ ಇನ್ನಿತರೆ ಕಾರಣಗಳನ್ನು ನೀಡಿ ಈ ಯೋಜನೆಯನ್ನು ಜಾರಿಗೊಳಿಸಲು ಅನಗತ್ಯ ವಿಳಂಬ ಮಾಡುತ್ತಿದ್ದು, ಚಿಕಿತ್ಸೆ ಪಡೆಯಲು ನೌಕರರಿಗೆ ಆರ್ಥಿಕ ಹೊರೆಯಾಗುತ್ತಿರುವುದರಿಂದ ಶೀಘ್ರವಾಗಿ ಈ ಯೋಜನೆಯನ್ನು ಲೋಕಾರ್ಪಣೆ ಮಾಡಬೇಕು ಎಂಬುದು ಮತ್ತೊಂದು ಬೇಡಿಕೆಯಾಗಿದೆ.

Continue Reading

ವೈರಲ್ ನ್ಯೂಸ್

Viral Video: ಬಾಂಬ್‌ ಇಡಲು ಮುಸ್ಲಿಮರು ಬೇಕು, ಉನ್ನತ ಸ್ಥಾನ ಮಾತ್ರ ಹಿಂದೂಗಳಿಗೆ; ಟಿಎಂಸಿ ನಾಯಕನ ಸ್ಫೋಟಕ ಹೇಳಿಕೆ!

Viral Video: ಬಾಂಬ್ ತಯಾರಿಕೆಯಿಂದ ಪ್ರಾರಂಭಿಸಿ ನಾವು ಮುಸ್ಲಿಮರು ಎಲ್ಲಾ ಕೊಳಕು ಕೆಲಸಗಳನ್ನು ಮಾಡುತ್ತಾರೆ. ಆದರೆ ಅಧಿಕಾರ ಮಾತ್ರ ಹಿಂದೂಗಳಿಗೆ ಎಂದು ತೃಣಮೂಲ ಕಾಂಗ್ರೆಸ್‌ ವಿರುದ್ಧ ಆ ಪಕ್ಷದ ಮುಸ್ಲಿಂ ನಾಯಕರೇ ದನಿ ಎತ್ತಿದ್ದಾರೆ. ಅವರ ಈ ಹೇಳಿಕೆ ಭಾರಿ ಸಂಚಲನ ಮೂಡಿಸಿದೆ. ಸ್ವಂತ ಬೂತ್‌ಗಳಲ್ಲಿ ಗೆಲ್ಲಲು ಸಾಧ್ಯವಿಲ್ಲದವರು ಪಕ್ಷವನ್ನು ಮುನ್ನಡೆಸಲು ಯಾವ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತಾರೆ? ಹಿಂದೂಗಳು ಎಲ್ಲಾ ಕೋರ್ ಕಮಿಟಿಗಳ ಚುಕ್ಕಾಣಿ ಹಿಡಿದಿದ್ದಾರೆ. ನಾವು ಅದರ ಬಗ್ಗೆ ಯೋಚಿಸಬೇಕಾಗಿದೆ ಎಂದೂ ಅವರು ಬೇಸರ ವ್ಯಕ್ತಪಡಿಸಿದ್ದರು.

VISTARANEWS.COM


on

By

Viral Video
Koo

ಹಿಂದೂಗಳು (hindu) ಪಕ್ಷದ ಉನ್ನತ ಸ್ಥಾನಗಳನ್ನು ಕಸಿದುಕೊಳ್ಳುತ್ತಿದ್ದಾರೆ ಮತ್ತು ಮುಸ್ಲಿಮರು (muslim) ಬಾಂಬ್ ತಯಾರಿಸುವ ಕೊಳಕು ಕೆಲಸ ಮಾಡುತ್ತಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ನ (TMC) ಅಲ್ಪಸಂಖ್ಯಾತ ಮೋರ್ಚಾ ನಾಯಕ ಮೊಹಮ್ಮದ್ ಯೂನಸ್ ಆರೋಪಿಸಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ. ಈ ವಿಚಾರ ಈಗ ಭಾರಿ ಚರ್ಚೆಗೆ ಕಾರಣವಾಗಿದೆ.

ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯ ಸೈಂಥಿಯಾ ನಗರದಲ್ಲಿ ಈ ಘಟನೆ ನಡೆದಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಇದರ ವಿಡಿಯೋದಲ್ಲಿ ಯೂನಸ್ ಅವರು ಅಲ್ಪಸಂಖ್ಯಾತರು ಎಲ್ಲಿ ಕೆಲಸ ಮಾಡಬೇಕು, ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದ್ದಾರೆ. ಬಹುಸಂಖ್ಯಾತ ಹಿಂದೂಗಳು ಪಕ್ಷದ ಎಲ್ಲಾ ಉನ್ನತ ಸ್ಥಾನಗಳನ್ನು ಪಡೆದಿದ್ದಾರೆ. ನಾವು ಅವರ ಕಣ್ಣುಗಳಲ್ಲಿ ಇರುವುದನ್ನು ನಮ್ಮ ಅಸ್ತಿತ್ವವನ್ನು ಅವರಿಗೆ ತೋರಿಸಬೇಕಾಗಿದೆ ಎಂದು ಹೇಳಿದರು.

ಸ್ವಂತ ಬೂತ್‌ಗಳಲ್ಲಿ ಗೆಲ್ಲಲು ಸಾಧ್ಯವಿಲ್ಲದವರು ಪಕ್ಷವನ್ನು ಮುನ್ನಡೆಸಲು ಯಾವ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತಾರೆ? ಹಿಂದೂಗಳು ಎಲ್ಲಾ ಕೋರ್ ಕಮಿಟಿಗಳ ಚುಕ್ಕಾಣಿ ಹಿಡಿದಿದ್ದಾರೆ. ನಾವು ಅದರ ಬಗ್ಗೆ ಯೋಚಿಸಬೇಕಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಬಾಂಬ್ ತಯಾರಿಕೆಯಿಂದ ಪ್ರಾರಂಭಿಸಿ ನಾವು ಮುಸ್ಲಿಮರು ಎಲ್ಲಾ ಕೊಳಕು ಕೆಲಸಗಳನ್ನು ಮಾಡುತ್ತೇವೆ ಎಂದಿರುವ ಅವರ ಹೇಳಿಕೆ ಭಾರಿ ಸಂಚಲನ ಮೂಡಿಸಿದೆ. ಅವರನ್ನು ಪಕ್ಷದಿಂದ ಅಮಾನತುಗೊಳಿಸುವ ಚಿಂತನೆಯೂ ನಡೆಯುತ್ತಿದೆ.
ಈ ಕುರಿತು ಮಾತನಾಡಿದ ಬಿಜೆಪಿ ನಾಯಕ ಧ್ರುಬಾ ಸಹಾ, ಅವರು ಬಾಂಬ್‌ಗಳನ್ನು ತಯಾರಿಸುತ್ತಾರೆ, ಬೂತ್‌ಗಳನ್ನು ವಶಪಡಿಸಿಕೊಳ್ಳುತ್ತಾರೆ ಮತ್ತು ಟಿಎಂಸಿಯ ಗೆಲುವನ್ನು ಖಚಿತಪಡಿಸಿಕೊಳ್ಳಲು ಜನರ ಪ್ರಜಾಸತ್ತಾತ್ಮಕ ಹಕ್ಕನ್ನು ಕೊಲ್ಲುತ್ತಾರೆ ಎನ್ನುವುದನ್ನು ಒಪ್ಪಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು. ಈ ತಿಂಗಳ ಆರಂಭದಲ್ಲಿ ಕೋಲ್ಕತ್ತಾದ ಮೇಯರ್ ಫಿರ್ಹಾದ್ ಹಕೀಮ್ ಅವರು ಜನರನ್ನು ಇಸ್ಲಾಂಗೆ ಮತಾಂತರಿಸುವಂತೆ ಮುಕ್ತ ಕರೆ ನೀಡಿರುವುದನ್ನೂ ಬಿಜೆಪಿ ನಾಯಕ ಸಹಾ ಪ್ರಸ್ತಾಪಿಸಿದ್ದಾರೆ.

ಫಿರ್ಹಾದ್ ಹಕೀಮ್ ಅವರು ಇತ್ತೀಚೆಗೆ ನಡೆದ ಅಖಿಲ ಭಾರತ ಕುರಾನ್ ಸ್ಪರ್ಧೆಯಲ್ಲಿ ಮಾತನಾಡಿ, ಇಸ್ಲಾಂ ಧರ್ಮದಲ್ಲಿ ಹುಟ್ಟದೇ ಇರುವವರು ದುರದೃಷ್ಟದಿಂದ ಜನಿಸಿದರು, ನಾವು ಅವರಿಗೆ ಮತಾಂತರಕ್ಕೆ ಕರೆಯುತ್ತೇವೆ. ಅಲ್ಲಾನನ್ನು ಸಂತೋಷಪಡಿಸಿ ಎಂದು ಹೇಳುತ್ತೇವೆ ಎಂದಿದ್ದರು.

ಮುಸ್ಲಿಮೇತರರಲ್ಲಿ ನಾವು ಇಸ್ಲಾಂ ಧರ್ಮವನ್ನು ಹರಡಬೇಕಾಗಿದೆ. ನಾವು ಯಾರನ್ನಾದರೂ ಇಸ್ಲಾಮಿನ ಹಾದಿಯಲ್ಲಿ ತರಲು ಸಾಧ್ಯವಾದರೆ, ನಂಬಿಕೆಯ ಹರಡುವಿಕೆಯನ್ನು ಖಚಿತಪಡಿಸಿಕೊಳ್ಳುವ ಮೂಲಕ ನಾವು ನಿಜವಾದ ಮುಸ್ಲಿಮರೆಂದು ಸಾಬೀತುಪಡಿಸುತ್ತೇವೆ ಎಂದು ಅವರು ತಿಳಿಸಿದ್ದರು. ಸಾವಿರಾರು ಜನರು ನಾವು ಧರಿಸುವ ಸ್ಕಲ್ ಕ್ಯಾಪ್ ಧರಿಸಿ ಕುಳಿತಾಗ ನಾವು ಶಕ್ತಿಯನ್ನು ಪ್ರದರ್ಶಿಸಿದಂತಾಗುತ್ತದೆ. ಇದು ಏಕತೆಯನ್ನು ತೋರಿಸುತ್ತದೆ ಮತ್ತು ಯಾರೂ ನಮ್ಮನ್ನು ಬಗ್ಗುಬಡಿಯಲು ಸಾಧ್ಯವಿಲ್ಲ ಎನ್ನುವುದನ್ನು ತೋರಿಸುತ್ತದೆ ಎಂದು ಅವರು ಹೇಳಿದ್ದರು.


ಇಸ್ಲಾಂ ಧರ್ಮದಲ್ಲಿ ಜನಿಸಿದ ಕಾರಣ ಪ್ರವಾದಿ ಮತ್ತು ಅಲ್ಲಾ ನಮಗೆ ಜನ್ನತ್‌ಗೆ ಸ್ಪಷ್ಟವಾದ ಮಾರ್ಗವನ್ನು ಒದಗಿಸಿದ್ದಾರೆ. ನಾವು ಯಾವುದೇ ಪಾಪಗಳನ್ನು ಮಾಡದಿದ್ದರೆ, ನಾವು ನೇರವಾಗಿ ಜನ್ನತ್‌ಗೆ ಹೋಗುತ್ತೇವೆ ಎಂದು ತಿಳಿಸಿದ್ದರು.

ಇದನ್ನೂ ಓದಿ: Viral Video: ರೈಲ್ವೆ ಸೇತುವೆ ಮೇಲೆ ಫೋಟೊಶೂಟ್‌; ರೈಲು ಬಂದಾಗ 90 ಅಡಿ ಆಳಕ್ಕೆ ಜಿಗಿದ ದಂಪತಿ!

ಸಾರ್ವಜನಿಕ ಥಳಿತಕ್ಕೆ ಸಮರ್ಥನೆ

ಮುಸ್ಲಿಂ ರಾಷ್ಟ್ರದಲ್ಲಿ ಮಹಿಳೆಯ ಮೇಲೆ ತಾಲಿಬಾನ್ ಮಾದರಿಯ ಸಾರ್ವಜನಿಕ ಥಳಿತವನ್ನು ಟಿಎಂಸಿ ಶಾಸಕ ಹಮೀದುಲ್ ರೆಹಮಾನ್ ಇತ್ತೀಚೆಗೆ ಸಮರ್ಥಿಸಿಕೊಂಡಿದ್ದರು. ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯ ಚೋಪ್ರಾದಲ್ಲಿ ಸಾರ್ವಜನಿಕವಾಗಿ ಮಹಿಳೆಯ ಮೇಲೆ ಥಳಿಸಲಾಗಿತ್ತು.

ಪತಿ ಇಲ್ಲದ ಸಮಯದಲ್ಲಿ ಮಹಿಳೆ ಅನೈತಿಕ ಕೆಲಸ ಮಾಡುತ್ತಿದ್ದಾಳೆ ಎಂದು ಆರೋಪಿಸಿ ಗ್ರಾಮಸ್ಥರು ಸಭೆ ನಡೆಸಿ ಸಾಮೂಹಿಕವಾಗಿ ಆಕೆಯನ್ನು ಥಳಿಸಿದ್ದರು. ಘಟನೆ ನಡೆದ ಪ್ರದೇಶ ‘ಮುಸ್ಲಿಂ ರಾಷ್ಟ್ರ’ ಎಂದು ಹಮೀದುಲ್ ರೆಹಮಾನ್ ಹೇಳಿಕೊಂಡಿದ್ದರು.

Continue Reading
Advertisement
Job Alert
ಉದ್ಯೋಗ9 mins ago

Job Alert: ಅಂಚೆ ಇಲಾಖೆಯಿಂದ ಬೃಹತ್‌ ನೇಮಕಾತಿ; ಕರ್ನಾಟಕದಲ್ಲಿಯೂ ಇದೆ 1,940 ಹುದ್ದೆ: ಹೀಗೆ ಅಪ್ಲೈ ಮಾಡಿ

Viral Video
Latest24 mins ago

Viral Video: ಕಾಮುಕರ ಹಾವಳಿ ಮಿತಿ‌ ಮೀರಿದೆ; ಬೀದಿ ನಾಯಿಯನ್ನೂ ಇವರು ಬಿಡುತ್ತಿಲ್ಲ! ಆಘಾತಕಾರಿ ವಿಡಿಯೊ

Jitan Sahani
ದೇಶ32 mins ago

Jitan Sahani: ಬಿಹಾರದಲ್ಲಿ ವಿಕಾಸಶೀಲ ಇನ್ಸಾನ್‌ ಪಕ್ಷದ ಮುಖ್ಯಸ್ಥನ ತಂದೆಯ ಭೀಕರ ಹತ್ಯೆ; ಮನೆ ತುಂಬ ರಕ್ತ!

karnataka assembly live
ಪ್ರಮುಖ ಸುದ್ದಿ51 mins ago

Karnataka Assembly Live: ಸದನದಲ್ಲಿ ಇಂದು ಕಿಡಿಯೆಬ್ಬಿಸಲಿರುವ ವಾಲ್ಮೀಕಿ ಹಗರಣ; ಉತ್ತರ ನೀಡಲು ಸಿಎಂ ಸಜ್ಜು; ಇಲ್ಲಿದೆ ಕ್ಷಣಕ್ಷಣದ ಲೈವ್‌

David Warner
ಕ್ರೀಡೆ53 mins ago

David Warner: ​ಚಾಂಪಿಯನ್ಸ್ ಟ್ರೋಫಿಗೆ ವಾರ್ನರ್​ ಆಯ್ಕೆ ಇಲ್ಲ ಎಂದ ಜಾರ್ಜ್​ ಬೈಲಿ

Kannada New Movie
ಸ್ಯಾಂಡಲ್ ವುಡ್57 mins ago

Kannada New Movie: ಸೆಟ್ಟೇರಿತು ‘ಆಕಾಶ್’, ‘ಅರಸು’ ಚಿತ್ರಗಳ ಡೈರೆಕ್ಟರ್ ಹೊಸ ಸಿನಿಮಾ; ಕಿರುತೆರೆಯ ಈ ಪ್ರತಿಭೆ ನಾಯಕ

Kannada In Madrasa
ಕರ್ನಾಟಕ1 hour ago

Kannada In Madrasa: ರಾಜ್ಯದ ಮದರಸಾಗಳಲ್ಲಿ ಇನ್ನು ಕನ್ನಡ ಕಲಿಕೆ ಕಡ್ಡಾಯ; ಶೀಘ್ರವೇ ಆದೇಶ!

murder case set fire bagalakote
ಕ್ರೈಂ1 hour ago

Horrible Murder Case: ಶೆಡ್‌ ಹೊರಗಿನಿಂದ ಲಾಕ್‌ ಮಾಡಿ ಬೆಂಕಿ ಇಟ್ಟ ದುಷ್ಟರು; ಇಬ್ಬರು ಸಜೀವ ದಹನ

Iti Acharya
ಸಿನಿಮಾ2 hours ago

Iti Acharya: ಬಾಲಿವುಡ್‌ಗೆ ಕಾಲಿಟ್ಟ ಮತ್ತೊಬ್ಬ ಕನ್ನಡತಿ; ದಕ್ಷಿಣ ಭಾರತದ ಚಿತ್ರಗಳ ಬಳಿಕ ಹಿಂದಿಯಲ್ಲೂ ಅಭಿನಯ

Karnataka Assembly
ಕ್ರೀಡೆ2 hours ago

Karnataka Assembly: ಬಿಜೆಪಿಯಿಂದಲೇ ರಾಹುಲ್​ಗೆ ಶ್ಲಾಘನೆ; ಸದನದಲ್ಲಿ ಅಭಿನಂದನೆಗೆ ನಿರ್ಣಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ17 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ24 hours ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ3 days ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

ಟ್ರೆಂಡಿಂಗ್‌