Paris Olympics 2024 : ಒಲಿಂಪಿಕ್ಸ್​ ಕ್ರೀಡಾಕೂಟದ ಇತಿಹಾಸ ಏನು? ಇದನ್ನು ಆಯೋಜಿಸುವವರು ಯಾರು? - Vistara News

ಕ್ರೀಡೆ

Paris Olympics 2024 : ಒಲಿಂಪಿಕ್ಸ್​ ಕ್ರೀಡಾಕೂಟದ ಇತಿಹಾಸ ಏನು? ಇದನ್ನು ಆಯೋಜಿಸುವವರು ಯಾರು?

Paris Olympics 2024 : ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಸುಮಾರು 3,000 ವರ್ಷಗಳ ಇತಿಹಾಸವಿದೆ. ಒಲಿಂಪಿಯಾದಲ್ಲಿ ಮೊದಲು ನಡೆದ ಕ್ರೀಡಾ ಸ್ಪರ್ಧೆಗಳು ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ನಡೆದಿದ್ದವು. ಒಲಿಂಪಿಕ್ಸ್​ ಆರಂಭದ ನಿಖರ ದಿನಾಂಕ ತಿಳಿದಿಲ್ಲ. ಆದರೆ ಕ್ರಿ.ಪೂ 776 ರಲ್ಲಿ ಎಂದು ದಾಖಲಿಸಲಾಗಿದೆ. ಕ್ರೀಡಾಕೂಟದ ಐತಿಹ್ಯವು ಪುರಾಣಗಳೊಂದಿಗೆ ಬೆರೆತಿರುವುದರಿಂದ ಕ್ರೀಡಾಕೂಟದ ಹುಟ್ಟಿಗೆ ನಿಖರವಾದ ಕಾರಣ ತಿಳಿದಿಲ್ಲ.

VISTARANEWS.COM


on

Paris Olympics 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಜುಲೈ 26ರಂದು ಒಲಿಂಪಿಕ್ಸ್​ ಕ್ರೀಡಾಕೂಟು ಫ್ರಾನ್ಸ್​ನ ರಾಜಧಾನಿ ಪ್ಯಾರಿಸ್​​ನಲ್ಲಿ (Paris Olympics 2024) ಆರಂಭವಾಗಿದೆ. ಪ್ರತಿ ನಾಲ್ಕು ವರ್ಷಕ್ಕೊಮ್ಮೆ ನಡೆಯುವ ಬೃಹತ್ ಕ್ರೀಡಾಕೂಟದ ಆತಿಥ್ಯ ವಹಿಸಿರುವ ಫ್ರಾನ್ಸ್ ನ ಒಲಿಂಪಿಕ್ಸ್​ ಸಂಸ್ಥೆ ಕ್ರೀಡಾಕೂಟವನ್ನು ಅದ್ಧೂರಿಯಾಗಿ ನಡೆಸಲು ಸಿದ್ಧತೆ ನಡೆಸಿಕೊಳ್ಳುತ್ತಿದೆ. ಈಗಾಗಲೇ ಬಹುತೇಕ ತಯಾರಿ ನಡೆದಿದ್ದು ಉದ್ಘಾಟನೆಗೆ ಕ್ಷಣಗಣನೆ ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ಒಲಿಂಪಿಕ್ಸ್​ ಕ್ರೀಡಾಕೂಟದ ಹಿನ್ನೆಲೆಯೇನು? ಯಾವ ಉದ್ದೇಶಕ್ಕೆ ಅದನ್ನು ಆರಂಭಿಸಲಾಯಿತು ಎಂಬುದನ್ನು ನೋಡೋಣ.

ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಸುಮಾರು 3,000 ವರ್ಷಗಳ ಇತಿಹಾಸವಿದೆ. ಒಲಿಂಪಿಯಾದಲ್ಲಿ ಮೊದಲು ನಡೆದ ಕ್ರೀಡಾ ಸ್ಪರ್ಧೆಗಳು ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ನಡೆದಿದ್ದವು. ಒಲಿಂಪಿಕ್ಸ್​ ಆರಂಭದ ನಿಖರ ದಿನಾಂಕ ತಿಳಿದಿಲ್ಲ. ಆದರೆ ಕ್ರಿ.ಪೂ 776 ರಲ್ಲಿ ಎಂದು ದಾಖಲಿಸಲಾಗಿದೆ. ಕ್ರೀಡಾಕೂಟದ ಐತಿಹ್ಯವು ಪುರಾಣಗಳೊಂದಿಗೆ ಬೆರೆತಿರುವುದರಿಂದ ಕ್ರೀಡಾಕೂಟದ ಹುಟ್ಟಿಗೆ ನಿಖರವಾದ ಕಾರಣ ತಿಳಿದಿಲ್ಲ.

ಪ್ರಾಚೀನ ಕ್ರೀಡಾಕೂಟದ ಆವೃತ್ತಿಗಳ ನಡುವಿನ ನಾಲ್ಕು ವರ್ಷಗಳ ಅಂತರವನ್ನು “ಒಲಿಂಪಿಯಾಡ್” ಎಂದು ಹೆಸರಿಸಲಾಯಿತು. ಆ ವೇಳೆ ಸಮಯವನ್ನು ವರ್ಷಗಳ ಬದಲು ಒಲಿಂಪಿಯಾಡ್​ಗಳಲ್ಲಿ ಎಣಿಸಲಾಗುತ್ತಿತ್ತು. ಆದರೆ ಆಧುನಿಕ ಒಲಿಂಪಿಕ್ಸ್​ ಆರಂಭಗೊಂಡಿದ್ದು 1894 ರಲ್ಲಿ. ಪಿಯರೆ ಡಿ ಕೂಬರ್ಟಿನ್ ಒಲಿಂಪಿಕ್ ಕ್ರೀಡಾಕೂಟವನ್ನು ಪುನರುಜ್ಜೀವನಗೊಳಿಸಿದ್ದರು. 1896 ರಲ್ಲಿ ಆಧುನಿಕ ಯುಗದ ಮೊದಲ ಕ್ರೀಡಾಕೂಟವನ್ನು ರೋಮ್​ನ ಅಥೆನ್ಸ್ ನಲ್ಲಿ ನಡೆಸಲಾಯಿತು.

ವೃತ್ತಿಪರ ಕ್ರೀಡಾಕೂಟ ಆರಂಭವಾಗಿದ್ದು ಯಾವಾಗ?

1970 ರ ದಶಕದ ಮೊದಲು ಕ್ರೀಡಾಕೂಟವು ಅಧಿಕೃತವಾಗಿ ಹವ್ಯಾಸಿ ಸ್ಥಾನಮಾನ ಹೊಂದಿರುವ ಸ್ಪರ್ಧಿಗಳಿಗೆ ಸೀಮಿತವಾಗಿತ್ತು. 1980 ರ ದಶಕದಲ್ಲಿ ಅನೇಕ ಸ್ಪರ್ಧೆಗಳನ್ನು ವೃತ್ತಿಪರ ಕ್ರೀಡಾಪಟುಗಳಿಗೆ ತೆರೆಯಲಾಯಿತು. ಪ್ರಸ್ತುತ, ಕ್ರೀಡಾಕೂಟವು ಎಲ್ಲರಿಗೂ ಮುಕ್ತವಾಗಿದೆ, ಕೆಲವೊಮ್ಮೆ 32 ವಿವಿಧ ಕ್ರೀಡೆಗಳಲ್ಲಿನ ಸ್ಪರ್ಧೆಗಳನ್ನು ಒಳಗೊಂಡಿದೆ.

ಒಲಿಂಪಿಕ್ ಸ್ಪರ್ಧೆಯ ಆರಂಭಿಕ ಶತಮಾನಗಳಲ್ಲಿ, ಎಲ್ಲಾ ಸ್ಪರ್ಧೆಗಳು ಒಂದೇ ದಿನದಲ್ಲಿ ನಡೆಯುತ್ತಿದ್ದವು. ನಂತರ ಕ್ರೀಡಾಕೂಟವು ನಾಲ್ಕು ದಿನಗಳ ಕಾಲ ನಡೆಯಿತು ಎಂದು ಹೇಳಲಾಗುತ್ತಿದೆ. ಒಲಿಂಪಿಕ್ ಕ್ರೀಡಾಕೂಟವು ಸ್ವತಂತ್ರವಾಗಿ ಹುಟ್ಟಿದ ಗ್ರೀಕರಿಗೆ ಸೀಮಿತವಾಗಿತ್ತು.

ಇದನ್ನೂ ಓದಿ: Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್ ಯಾವಾಗ ಆರಂಭ? ಬೃಹತ್​ ಕ್ರೀಡಾಕೂಟಕ್ಕೆ ನಡೆಸಿರುವ ಸಿದ್ಧತೆಗಳೇನು?

ಆಧುನಿಕ ಒಲಿಂಪಿಕ್ಸ್​ ಆರಂಭ ಯಾವಾಗ?

ಪ್ರಾಚೀನ ಕ್ರೀಡಾಕೂಟವನ್ನು ಗ್ರೀಸ್ ನ ಒಲಿಂಪಿಯಾದಲ್ಲಿ ಕ್ರಿ.ಪೂ 776 ರಿಂದ ಕ್ರಿ.ಶ 393 ರವರೆಗೆ ನಡೆಸಲಾಗಿದ್ದರೂ, ಒಲಿಂಪಿಕ್ಸ್ ಮರಳಲು 1503 ವರ್ಷಗಳು ಬೇಕಾಯಿತು. ಮೊದಲ ಆಧುನಿಕ ಒಲಿಂಪಿಕ್ಸ್ 1896 ರಲ್ಲಿ ಗ್ರೀಸ್ ನ ಅಥೆನ್ಸ್ ನಲ್ಲಿ ನಡೆಯಿತು. ಇದರ ಪುನರ್ಜನ್ಮಕ್ಕೆ ಕಾರಣನಾದ ವ್ಯಕ್ತಿ ಬ್ಯಾರನ್ ಪಿಯರೆ ಡಿ ಕೂಬರ್ಟಿನ್ ಎಂಬ ಫ್ರೆಂಚ್ ವ್ಯಕ್ತಿ. ಅವರು 1894 ರಲ್ಲಿ ಈ ಕಲ್ಪನೆಯನ್ನು ಚಾಲ್ತಿಗೆ ತಂದರು. 1900ರಲ್ಲಿ ಅವರ ಹುಟ್ಟೂರಾದ ಪ್ಯಾರಿಸ್​ನಲ್ಲಿ ಆಧುನಿಕ ಕ್ರೀಡಾಕೂಟವನ್ನು ಅನಾವರಣಗೊಳಿಸುವುದು ಅವರ ಮೂಲ ಆಲೋಚನೆಯಾಗಿತ್ತು. ಆದರೆ 34 ದೇಶಗಳ ಪ್ರತಿನಿಧಿಗಳು ಈ ಪರಿಕಲ್ಪನೆಯಿಂದ ಪ್ರೇರಿತರಾಗಿ ಅದೇ ವರ್ಷ ಆರಂಭಿಸಿದ್ದರು.

ಒಲಿಂಪಿಕ್ ಜ್ಯೋತಿ

ಒಲಿಂಪಿಕ್ ಜ್ಯೋತಿ ಕಲ್ಪನೆಯನ್ನು ಮೊದಲು 1928 ರಲ್ಲಿ ಆಮ್​ಸ್ಟರ್​ಡ್ಯಾಮ್​ನಲ್ಲಿ ನಡೆದ ಒಲಿಂಪಿಕ್ ಕ್ರೀಡಾಕೂಟದಲ್ಲಿ ಉದ್ಘಾಟಿಸಲಾಯಿತು. ಪ್ರಾಚೀನ ಒಲಿಂಪಿಕ್ ಕ್ರೀಡಾಕೂಟದಲ್ಲಿ ಟಾರ್ಚ್ ರಿಲೇ ಇರಲಿಲ್ಲ. ಆದಾಗ್ಯೂ, ಅಥೆನ್ಸ್ ನಲ್ಲಿ ನಡೆಯುವುದು ಸೇರಿದಂತೆ ಇತರ ಪ್ರಾಚೀನ ಗ್ರೀಕ್ ಅಥ್ಲೆಟಿಕ್ ಉತ್ಸವಗಳಲ್ಲಿ ಟಾರ್ಚ್ ರಿಲೇಗಳು ನಡೆದವು. ಆಧುನಿಕ ಒಲಿಂಪಿಕ್ ಟಾರ್ಚ್ ರಿಲೇಯನ್ನು ಮೊದಲ ಬಾರಿಗೆ ಬರ್ಲಿನ್ ನಲ್ಲಿ ನಡೆದ 1936ರ ಒಲಿಂಪಿಕ್ ಕ್ರೀಡಾಕೂಟದಲ್ಲಿ ಸ್ಥಾಪಿಸಲಾಯಿತು. ಅದೇ ರೀತಿ ಒಲಿಂಪಿಕ್ ಪ್ರತಿಜ್ಞೆಯನ್ನು 1920 ರಲ್ಲಿ ಪರಿಚಯಿಸಲಾಗಿತ್ತು.

ಒಲಿಂಪಿಕ್ಸ್​ನ ಆಯೋಜಕರು ಯಾರು?

ಒಲಿಂಪಿಕ್ ಕ್ರೀಡಾಕೂಟದ ಆಯೋಜನೆಯನ್ನು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಆತಿಥೇಯ ನಗರದ ದೇಶದ ರಾಷ್ಟ್ರೀಯ ಒಲಿಂಪಿಕ್ ಸಮಿತಿಗೆ ವಹಿಸುತ್ತದೆ. ಅಲ್ಲದೆ ಅದಕ್ಕಾಗಿ ಸಂಘಟನಾ ಸಮಿತಿಯನ್ನು ರಚಿಸುತ್ತದೆ. ಅದು ನೇರವಾಗಿ ಐಒಸಿಯೊಂದಿಗೆ ಸಂವಹನ ನಡೆಸುತ್ತದೆ ಮತ್ತು ಸೂಚನೆಗಳನ್ನು ಪಡೆಯುತ್ತದೆ. ಸಂಘಟನಾ ಸಮಿತಿಯು ಕಾರ್ಯನಿರ್ವಾಹಕ ಮಂಡಳಿಯ ಸದಸ್ಯರನ್ನು ಒಳಗೊಂಡಿದೆ. ಐಒಸಿ ಸದಸ್ಯ ಅಥವಾ ಆಯಾ ದೇಶದ ಸದಸ್ಯರು. ಎನ್ಒಸಿಯ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿ ಮತ್ತು ಆತಿಥೇಯ ನಗರವನ್ನು ಪ್ರತಿನಿಧಿಸುವ ಕನಿಷ್ಠ ಒಬ್ಬ ಸದಸ್ಯರು ಇರುತ್ತಾರೆ. ಜತೆಗೆ ಸಾರ್ವಜನಿಕ ಪ್ರಾಧಿಕಾರಗಳ ಪ್ರತಿನಿಧಿಗಳು ಮತ್ತು ಇತರ ಪ್ರಮುಖರು ಇರುತ್ತಾರೆ.

ರಚನೆಯ ಸಮಯದಿಂದ ವಿಸರ್ಜಿಸುವ ಸಮಯದವರೆಗೆ ಒಸಿಒಜಿ ಒಲಿಂಪಿಕ್ ಚಾರ್ಟರ್, ಐಒಸಿ, ರಾಷ್ಟ್ರೀಯ ಒಲಿಂಪಿಕ್ ಸಮಿತಿ ಮತ್ತು ಆತಿಥೇಯ ನಗರದ ನಡುವೆ ಮಾಡಿಕೊಂಡ ಒಪ್ಪಂದ ಮತ್ತು ಐಒಸಿ ಕಾರ್ಯನಿರ್ವಾಹಕ ಮಂಡಳಿಯ ಸೂಚನೆಗಳನ್ನು ಅನುಸರಿಸಬೇಕು. ಸಂಘಟನಾ ಸಮಿತಿಯು ತನ್ನ ಕೆಲಸವನ್ನು ಯೋಜನೆಯ ಅವಧಿಯೊಂದಿಗೆ ಪ್ರಾರಂಭಿಸುತ್ತದೆ, ನಂತರ ಸಂಘಟನೆಯ ಅವಧಿಯು ಕ್ರೀಡಾಕೂಟದ ಸಮಯದಲ್ಲಿ ಅನುಷ್ಠಾನ ಅಥವಾ ಕಾರ್ಯಾಚರಣೆಯ ಹಂತದಲ್ಲಿ ಕೊನೆಗೊಳ್ಳುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

David Warner: ​ಚಾಂಪಿಯನ್ಸ್ ಟ್ರೋಫಿಗೆ ವಾರ್ನರ್​ ಆಯ್ಕೆ ಇಲ್ಲ ಎಂದ ಜಾರ್ಜ್​ ಬೈಲಿ

David Warner: ಡೇವಿಡ್ ವಾರ್ನರ್ ಬಯಸಿದರೂ, ಅವರನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ. ಅವರು ಎಲ್ಲಾ ಮೂರು ಸ್ವರೂಪಗಳಿಂದಲೂ ನಿವೃತ್ತರಾಗಿದ್ದಾರೆ. ಅವರ ಕೊಡುಗೆಯನ್ನು ನಾವು ಶ್ಲಾಘಿಸಲೇಬೇಕು. ಚಾಂಪಿಯನ್ಸ್ ಟ್ರೋಫಿಗೆ ಅವರನ್ನು ಆಯ್ಕೆ ಮಾಡುವ ಯಾವುದೇ ಯೋಜನೆಯಿಲ್ಲ ಎಂದು ಆಸ್ಟ್ರೇಲಿಯಾ ತಂಡದ ಮುಖ್ಯ ಆಯ್ಕೆಗಾರ ಜಾರ್ಜ್​ ಬೈಲಿ(George Bailey) ತಿಳಿಸಿದ್ದಾರೆ.

VISTARANEWS.COM


on

David Warner
Koo

ಸಿಡ್ನಿ: ಈಗಾಗಲೇ ಮೂರು ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದ ಆಸ್ಟ್ರೇಲಿಯಾ ತಂಡದ ಎಡಗೈ ಬ್ಯಾಟರ್​ ಡೇವಿಡ್​ ವಾರ್ನರ್(David Warner)​ ಅವರು ಕೆಲ ದಿನಗಳ ಹಿಂದಷ್ಟೇ ತಂಡ ಬಯಸಿದರೆ ತಮ್ಮ ನಿವೃತ್ತಿಯನ್ನು ಹಿಂಪಡೆಯಲು ಯೋಚಿಸಿದ್ದಾರೆ. ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯಲಿರುವ ಮುಂದಿನ ವರ್ಷ ನಡೆಯುವ ಚಾಂಪಿಯನ್ಸ್ ಟ್ರೋಫಿ(Champions Trophy)ಯಲ್ಲಿ ಆಡಲು ಸಿದ್ಧ ಎಂದು ಹೇಳಿದ್ದರು. ಆದರೆ, ವಾರ್ನರ್​ ಅವರ ಈ ಇಂಗಿತವನ್ನು ಪುರಸ್ಕರಿಸುವುದಿಲ್ಲ ಎಂದು ಆಸ್ಟ್ರೇಲಿಯಾ ತಂಡದ ಮುಖ್ಯ ಆಯ್ಕೆಗಾರ ಜಾರ್ಜ್​ ಬೈಲಿ(George Bailey) ತಿಳಿಸಿದ್ದಾರೆ.

ತಂಡಕ್ಕೆ ಸಹಾಯ ಬೇಕಾದಲ್ಲಿ ತಾನು ಆಯ್ಕೆಗೆ ಲಭ್ಯವಿರುವುದಾಗಿ ವಾರ್ನರ್​ ಹೇಳಿದ್ದರು. ಇದೇ ವಿಚಾರವಾಗಿ ಮಾತನಾಡಿದ ಆಯ್ಕೆ ಸಮಿತಿಯ ಮುಖ್ಯಸ್ಥ ಜಾರ್ಜ್​ ಬೈಲಿ, “ಡೇವಿಡ್ ವಾರ್ನರ್ ಬಯಸಿದರೂ, ಅವರನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ. ಅವರು ಎಲ್ಲಾ ಮೂರು ಸ್ವರೂಪಗಳಿಂದಲೂ ನಿವೃತ್ತರಾಗಿದ್ದಾರೆ. ಅವರ ಕೊಡುಗೆಯನ್ನು ನಾವು ಶ್ಲಾಘಿಸಲೇಬೇಕು. ಚಾಂಪಿಯನ್ಸ್ ಟ್ರೋಫಿಗೆ ಅವರನ್ನು ಆಯ್ಕೆ ಮಾಡುವ ಯಾವುದೇ ಯೋಜನೆಯಿಲ್ಲ” ಎಂದು ಹೇಳಿದ್ದಾರೆ. ಬೈಲಿಯ ಈ ಹೇಳಿಕೆ ನೋಡುವಾಗ ವಾರ್ನರ್​ಗೆ ಚಾಂಪಿಯನ್ಸ್​ ಟ್ರೋಫಿ ಆಡುವ ಅವಕಾಶ ಸಿಗುವುದು ಕಷ್ಟ ಎನ್ನುವುದು ಸ್ಪಷ್ಟವಾಗಿದೆ.

ಕಳೆದ ತಿಂಗಳು ಮುಕ್ತಾಯ ಕಂಡಿದ್ದ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 8ರ ಹಂತದಲ್ಲಿ ಆಸ್ಟ್ರೇಲಿಯಾ ಸೋತು ಹೊರಬಿದ್ದ ತಕ್ಷಣ ವಾರ್ನರ್​ ಅವರು ತಮ್ಮ 15 ವರ್ಷಗಳ ಕ್ರಿಕೆಟ್​ ವೃತ್ತಿ ಜೀವನಕ್ಕೆ ತೆರೆ ಎಳೆದಿದ್ದರು.  110 ಟಿ20 ಪಂದ್ಯಗಳನ್ನು ಆಡಿರುವ ವಾರ್ನರ್‌ 3,277 ರನ್‌ ಗಳಿಸಿದ್ದಾರೆ. ಈ ವರ್ಷದ ಜನವರಿಯಲ್ಲಿ ಟೆಸ್ಟ್‌ ಹಾಗೂ ಏಕದಿನ ಕ್ರಿಕೆಟ್‌ಗೂ ವಾರ್ನರ್‌ ವಿದಾಯ ಹೇಳಿದ್ದರು.

ಇದನ್ನೂ ಓದಿ Champions Trophy 2025: ಚಾಂಪಿಯನ್ಸ್‌ ಟ್ರೋಫಿಯಿಂದ ಭಾರತ ಹಿಂದೆ ಸರಿದರೆ ಯಾವ ತಂಡಕ್ಕೆ ಸಿಗಲಿದೆ ಅವಕಾಶ?

112 ಟೆಸ್ಟ್‌ಗಳಿಂದ ಅವರು 2011 ಮತ್ತು 2024 ರ ನಡುವೆ 26 ಶತಕಗಳು ಮತ್ತು 37 ಅರ್ಧಶತಕಗಳೊಂದಿಗೆ 44.59 ಸರಾಸರಿಯಲ್ಲಿ 8,786 ರನ್ ಗಳಿಸಿದ್ದಾರೆ. 161 ಏಕದಿನ ಪಂದ್ಯಗಳಿಂದ 45.30 ಸರಾಸರಿಯಲ್ಲಿ 22 ಶತಕ ಮತ್ತು 33 ಅರ್ಧ ಶತಕಗಳ ಸಹಾಯದಿಂದ 6,932 ರನ್ ಗಳಿಸಿದ್ದಾರೆ. 37 ವರ್ಷದ ಡೇವಿಡ್​ ವಾರ್ನರ್​, 2009ರಲ್ಲಿ ಮೆಲ್ಬೋರ್ನ್​ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಆಡುವ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು.

ರಿಕಿ ಪಾಂಟಿಂಗ್, ಆ್ಯಡಂ ಗಿಲ್ ಕ್ರಿಸ್ಟ್​, ಶೇನ್​ ವಾರ್ನ್​ ಅವರಂತಹ ದಿಗ್ಗಜ ಆಟಗಾರರೊಂದಿಗೆ ಆಡಿದ ಅನುಭವವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ನನ್ನ ಕ್ರಿಕೆಟ್​ ವೃತ್ತಿಜೀವನದಲ್ಲಿ ಸಾಧಿಸುವುದು ಇನ್ನೂ ಯಾವುದೂ ಉಳಿದಿಲ್ಲ. ಮೂರು ಮಾದರಿಯ (ಏಕದಿನ, ಟೆಸ್ಟ್ ಮತ್ತು ಟಿ20) ವಿಶ್ವಕಪ್​ ತಂಡದ ಸದಸ್ಯ ಎನ್ನುವುದು ನಿಜಕ್ಕೂ ಹೆಮ್ಮೆಯ ಸಂಗತಿ. ನನ್ನ ಕ್ರಿಕೆಟ್​ ಜರ್ನಿಯಲ್ಲಿ ಸಹಕರಿಸಿದ ಎಲ್ಲ ಸಿಬ್ಬಂದಿ, ಸಹ ಆಟಗಾರರಿಗೆ ನಾನು ಚಿರಋಣಿ ಎಂದು ವಾರ್ನರ್​ ಹೇಳಿ ತಮ್ಮ ನಿವೃತ್ತಿ ಪ್ರಕಟಿಸಿದ್ದರು.

Continue Reading

ಕ್ರೀಡೆ

Karnataka Assembly: ಬಿಜೆಪಿಯಿಂದಲೇ ರಾಹುಲ್​ಗೆ ಶ್ಲಾಘನೆ; ಸದನದಲ್ಲಿ ಅಭಿನಂದನೆಗೆ ನಿರ್ಣಯ

Karnataka Assembly: ದ್ರಾವಿಡ್ ಅವರಿಗೆ “ಭಾರತ ರತ್ನ” ಪ್ರಶಸ್ತಿಯಿಂದ ಗೌರವಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುನೀಲ್ ಗವಾಸ್ಕರ್ ಒತ್ತಾಯಿಸಿದ್ದರು. “ಭಾರತ ಸರಕಾರವು ದ್ರಾವಿಡ್​ಗೆ ಭಾರತ ರತ್ನ ಪ್ರಶಸ್ತಿಯಿಂದ ಗೌರವಿಸಿದರೆ ಅದು ಅವರಿಗೆ ಸಲ್ಲುವ ಸೂಕ್ತ ಗೌರವವಾಗುತ್ತದೆ. ಈ ಗೌರವಕ್ಕೆ ಅವರು ಸಂಪೂರ್ಣವಾಗಿ ಅರ್ಹರಾಗಿದ್ದಾರೆ ಎಂದು ಕೇಳಿದ್ದರು.

VISTARANEWS.COM


on

Karnataka Assembly
Koo

ಬೆಂಗಳೂರು: ಟಿ20 ವಿಶ್ವಕಪ್‌ ವಿಜೇತ ಭಾರತ ತಂಡದ ಕೋಚ್‌, ಕನ್ನಡಿಗ ರಾಹುಲ್‌ ದ್ರಾವಿಡ್‌(Rahul Dravid) ಅವರಿಗೆ ಅಭಿನಂದಿಸುವ ನಿರ್ಣಯವನ್ನು ವಿಧಾನಸಭೆ ತೆಗೆದುಕೊಳ್ಳಬೇಕೆಂದು ರಾಜಾಜಿನಗರದ ಬಿಜೆಪಿ ಶಾಸಕ ಸುರೇಶ್ ಕುಮಾರ್(S. Suresh Kumar) ಆಗ್ರಹಿಸಿದ್ದಾರೆ. ಇದಕ್ಕೆ ಸ್ಪೀಕರ್‌ ಯು.ಟಿ. ಖಾದರ್‌(U. T. Khader) ಸಹಮತ ವ್ಯಕ್ತಪಡಿಸಿ ಈ ನಿರ್ಣಯವನ್ನು ಅಂಗೀಕರಿಸಿದ್ದಾರೆ.

ಭಾರತ ತಂಡ 17 ವರ್ಷಗಳ ಬಳಿಕ 2ನೇ ಟಿ20 ವಿಶ್ವಕಪ್​ ಗೆಲ್ಲುವಂತಾಗಲು ಕೋಚ್​ ರಾಹುಲ್‌ ದ್ರಾವಿಡ್‌ ಅವರ ತರಬೇತಿ ಹಾಗೂ ಮಾರ್ಗದರ್ಶನವೂ ಮಹತ್ವದ ಪಾತ್ರ ವಹಿಸಿದೆ. ಹೀಗಾಗಿ ಈ ಸದನ ಒಕ್ಕೊರಲಿನಿಂದ ಅವರನ್ನು ಅಭಿನಂದಿಸುವ ನಿರ್ಣಯ ತೆಗೆದುಕೊಳ್ಳಬೇಕು ಎಂದು ಸುರೇಶ್‌ ಕುಮಾರ್‌ ಹೇಳಿದರು. ಇದಕ್ಕೆ ಸಹಮತ ವ್ಯಕ್ತಪಡಿಸಿದ ಸ್ಪೀಕರ್‌ ಯು.ಟಿ. ಖಾದರ್‌, “ಈ ಬಗ್ಗೆ ಈಗಾಗಲೇ ಚರ್ಚಿಸಲಾಗಿದೆ. ದ್ರಾವಿಡ್‌ ಅವರನ್ನು ಅಭಿನಂದಿಸುವ ನಿರ್ಣಯವನ್ನು ತಕ್ಷಣ ಮಂಡಿಸುವುದಕ್ಕೆ ಸೂಚನೆ ನೀಡಲಾಗುವುದು’ ಎಂದರು.

ಕಳೆದ ವಾರ ಬೆಂಗಳೂರಿನ(Bengaluru) ಕ್ರಿಕೆಟ್​ ಅಕಾಡೆಮಿಯ ವಿದ್ಯಾರ್ಥಿಗಳು ಗಾರ್ಡ್‌ ಆಫ್‌ ಹಾನರ್‌ (ಗೌರವ ವಂದನೆ) ಮೂಲಕ(guard of honour) ದ್ರಾವಿಡ್​ಗೆ ಅಭಿನಂದಿಸಿದ್ದರು.

ರಾಹುಲ್​ ದ್ರಾವಿಡ್​ ಅವರು ಎನ್​ಸಿಎ ಕ್ರಿಕೆಟ್​ ಅಕಾಡೆಮಿಗೆ(cricket academy in Bengaluru) ಆಗಮಿಸುತ್ತಿದ್ದಂತೆ ಅಧಿಕಾರಿಗಳು ಮತ್ತು ಇಲ್ಲಿ ಕ್ರಿಕೆಟ್​ ಅಭ್ಯಾಸ ನಡೆಸುತ್ತಿರುವ ವಿದ್ಯಾರ್ಥಿಗಳು ಬ್ಯಾಟ್​ ಎತ್ತಿ ಗಾರ್ಡ್‌ ಆಫ್‌ ಹಾನರ್‌ ಮೂಲಕ ಗೌರವ ಸಲ್ಲಿಸಿದರು. ದ್ರಾವಿಡ್​ ಕೂಡ ಸಂತಸದಿಂದಲೇ ಎಲ್ಲರ ಕೈ ಕುಲುಕಿ ಧನ್ಯವಾದ ತಿಳಿಸಿದ್ದರು.

ದ್ರಾವಿಡ್​ಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಒತ್ತಾಯಿಸಿದ ಗವಾಸ್ಕರ್


ಪ್ರಧಾನ ಕೋಚ್ ಆಗಿದ್ದ ರಾಹುಲ್ ದ್ರಾವಿಡ್ ಅವರಿಗೆ “ಭಾರತ ರತ್ನ” ಪ್ರಶಸ್ತಿಯಿಂದ ಗೌರವಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುನೀಲ್ ಗವಾಸ್ಕರ್ ಒತ್ತಾಯಿಸಿದ್ದರು. “ಭಾರತ ಸರಕಾರವು ದ್ರಾವಿಡ್​ಗೆ ಭಾರತ ರತ್ನ ಪ್ರಶಸ್ತಿಯಿಂದ ಗೌರವಿಸಿದರೆ ಅದು ಅವರಿಗೆ ಸಲ್ಲುವ ಸೂಕ್ತ ಗೌರವವಾಗುತ್ತದೆ. ಈ ಗೌರವಕ್ಕೆ ಅವರು ಸಂಪೂರ್ಣವಾಗಿ ಅರ್ಹರಾಗಿದ್ದಾರೆ ಎಂದು ಕೇಳಿದ್ದರು.

ಇದನ್ನೂ ಓದಿ Rahul Dravid : ತಮಗೆ ನೀಡಿದ 2.5 ಕೋಟಿ ರೂಪಾಯಿ ನಿರಾಕರಿಸಿ ಸಮಾನತೆ ತತ್ವ ಸಾರಿದ ರಾಹುಲ್ ದ್ರಾವಿಡ್​

ದ್ರಾವಿಡ್​ ಆಟಗಾರರಾಗಿ ಮತ್ತು ತಂಡದ ನಾಯಕರಾಗಿ ವಿದೇಶಗಳಲ್ಲಿ ಭಾರತಕ್ಕೆ ಗೆಲುವು ತಂದು ಕೊಟ್ಟಿದ್ದಾರೆ. ವೆಸ್ಟ್ ಇಂಡೀಸ್​ನಲ್ಲಿ ಗೆಲ್ಲುವುದು ಅಸಾಧ್ಯ ಎಂಬ ಕಾಲದಲ್ಲಿ ಅವರು ಭಾರತಕ್ಕೆ ಸರಣಿ ಗೆಲುವನ್ನು ತಂದಿದ್ದಾರೆ. ಇಂಗ್ಲೆಂಡ್​ನಲ್ಲಿ ಟೆಸ್ಟ್ ಸರಣಿಗಳನ್ನು ಗೆದ್ದಿರುವ ಕೇವಲ ಮೂರು ಭಾರತೀಯ ನಾಯಕರ ಪೈಕಿ ಅವರು ಕೂಡ ಒಬ್ಬರಾಗಿದ್ದಾರೆ. ಈ ಹಿಂದೆ, ಅವರು ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯ ಅಧ್ಯಕ್ಷರಾಗಿ ಅತ್ಯುತ್ತಮ ಕ್ರಿಕೆಟ್ ಪ್ರತಿಭೆಗಳನ್ನು ಹೊರತಂದಿದ್ದಾರೆ. ಬಳಿಕ ಭಾರತೀಯ ಹಿರಿಯರ ಕ್ರಿಕೆಟ್ ತಂಡದ ಕೋಚ್ ಆಗಿ ಉತ್ತಮ ನಿರ್ವಹಣೆ ನೀಡಿದ್ದಾರೆ ಎಂದು ಗವಾಸ್ಕರ್​ ಬರೆದುಕೊಂಡಿದ್ದಾರೆ.

1996ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ರಾಹುಲ್‌ ದ್ರಾವಿಡ್‌ 2012ರ ವರೆಗೆ ಭಾರತ ತಂಡದ ಪರವಾಗಿ ಆಡಿದ್ದರು. ಆದರೆ ವಿಶ್ವಕಪ್ ಎನ್ನುವುದು ಅವರಿಗೆ ಕನಸಾಗಿತ್ತು. ಈ ಕೊರಗು ಕೂಡ ಅವರಲ್ಲಿತ್ತು. ನಾಯಕನಾಗಿ, ಆಟಗಾರನಾಗಿ ಗೆಲ್ಲಲಾಗದ ವಿಶ್ವಕಪ್‌ ಅನ್ನು ತರಬೇತುದಾರನಾಗಿ ಗಳಿಸಿಕೊಂಡಿದ್ದಾರೆ. ಅದು ಕೂಡ ತಮ್ಮ ಕೊನೆಯ ಮಾರ್ಗದರ್ಶನದಲ್ಲಿ ಎನ್ನುವುದು ವಿಶೇಷ.

2007ರಲ್ಲಿ ವೆಸ್ಟ್​ ಇಂಡೀಸ್​ನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ರಾಹುಲ್​ ದ್ರಾವಿಡ್​ ಅವರ ನಾಯಕತ್ವದಲ್ಲಿ ಭಾರತ ಅತ್ಯಂತ ಕಳಪೆ ಪ್ರದರ್ಶನ ತೋರುವ ಮೂಲಕ ಲೀಗ್​ ಹಂತದಿಂದಲೇ ನಿರ್ಗಮಿಸಿತ್ತು. ದುರ್ಬಲ ಬಾಂಗ್ಲಾದೇಶ ವಿರುದ್ದವೂ ಕೂಡ ಗೆಲುವು ಸಾಧಿಸಲು ಸಾಧ್ಯವಾಗ ಅವಮಾನಕ್ಕೆ ಸಿಲುಕಿತ್ತು. ಅಂದು ಅವಮಾನ ಎದುರಿಸಿದ ವಿಂಡೀಸ್​ ನೆಲದಲ್ಲೇ ಇದೀಗ ದ್ರಾವಿಡ್​ ತರಬೇತುದಾರನಾಗಿ ವಿಶ್ವಕಪ್​ ಕಪ್​ ಗೆದ್ದು ಸಂಭ್ರಮಿಸಿ ತಮ್ಮ ಎಲ್ಲ ಹಿಂದಿನ ನೋವನ್ನು ಮರೆತಿದ್ದಾರೆ. ಸದ್ಯ ಕೋಚ್​ ಹುದ್ದೆಯಿಂದ ಕೆಳಗಿಳಿದಿರುವ ದ್ರಾವಿಡ್​ ತಮ್ಮ ಇಬ್ಬರು ಮಕ್ಕಳ ಕ್ರಿಕೆಟ್​ ಭವಿಷ್ಯ ರೂಪಿಸುವಲ್ಲಿ ಹೆಚ್ಚಿನ ಕಾಳಜಿ ವಹಿಸಿಕೊಳ್ಳಬಹುದು.

Continue Reading

ಕ್ರೀಡೆ

Hardik Pandya: ರೋಡ್​ ಶೋದಲ್ಲಿ ಚಕ್ ದೇ! ಇಂಡಿಯಾ ಹಾಡಿದ ಹಾರ್ದಿಕ್​ ಪಾಂಡ್ಯ; ವಿಡಿಯೊ ವೈರಲ್​

Hardik Pandya: ಹಾರ್ದಿಕ್​ ಅವರು ವಿಶ್ವಕಪ್​ ಟೂರ್ನಿಯಲ್ಲಿ ಅಮೋಘ ಬ್ಯಾಟಿಂಗ್​ ಮತ್ತು ಬೌಲಿಂಗ್​ ಪ್ರದರ್ಶನ ತೋರುವ ಮೂಲಕ ಭಾರತ ತಂಡ ವಿಶ್ವಕಪ್​ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.  ಒಟ್ಟು 144 ರನ್​ ಮತ್ತು 11 ವಿಕೆಟ್​ ಕಿತ್ತ ಸಾಧನೆ ಮಾಡಿದ್ದರು.

VISTARANEWS.COM


on

Hardik Pandya
Koo

ಅಹಮದಾಬಾದ್​: ಟಿ20 ವಿಶ್ವಕಪ್​ ಗೆದ್ದ ಭಾರತ ತಂಡದ ಭಾಗವಾಗಿದ್ದ, ಉಪನಾಯಕ ಹಾರ್ದಿಕ್​ ಪಾಂಡ್ಯಗೆ(Hardik Pandya) ಅವರ ತವರಾದ ವಡೋದರದಲ್ಲಿ(Vadodara) ಭರ್ಜರಿಯಾಗಿ ರೋಡ್​ ಶೋ ಮೂಲಕ ಅಭಿನಂದಿಸಲಾಯಿತು. ಕಿಕ್ಕಿರಿದು ಸೇರಿದ ಅಭಿಮಾನಿಗಳ ಮುಂದೆ ಪಾಂಡ್ಯ ಚಕ್ ದೇ! ಇಂಡಿಯಾ(Chak De India) ಹಾಡನ್ನು(Hardik Pandya singing) ಜೋರಾಗಿ ಹಾಡಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ವಿಶ್ವಕಪ್​ ಮುಗಿದು ಭಾರತಕ್ಕೆ ಬಂದಿದ್ದ ಹಾರ್ದಿಕ್​ ಪಾಂಡ್ಯ ಮುಂಬೈಯಲ್ಲಿ ಕೆಲ ದಿನಗಳ ಕಾಲ ನೆಲೆಸಿದ್ದರು. ಇದೀಗ ತವರಾದ ವಡೋದರಕ್ಕೆ ಬಂದಿದ್ದಾರೆ. ಇಲ್ಲಿ ತವರಿನ ಅಭಿಮಾನಿಗಳು ಅವರಿಗೆ ಭರ್ಜರಿ ಅಭಿನಂದನಾ ಕಾರ್ಯಕ್ರಮ ನಡೆಸಿದ್ದಾರೆ. ತೆರೆದ ವಾಹನದಲ್ಲಿ ರೋಡ್​ ಶೋ ಮಾಡಿ ಪಾಂಡ್ಯಗೆ ಸ್ವಾಗತ ಕೋರಲಾಯಿತು. ಬಹು ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದರು. ಹಾರ್ದಿಕ್​ ಸಹೋದರ ಕೃಣಾಲ್​ ಪಾಂಡ್ಯ ಕೂಡ ರೋಡ್​ ಶೋದಲ್ಲಿ ಭಾಗಿಯಾಗಿದ್ದರು.

ಹಾರ್ದಿಕ್​ ಅವರು ವಿಶ್ವಕಪ್​ ಟೂರ್ನಿಯಲ್ಲಿ ಅಮೋಘ ಬ್ಯಾಟಿಂಗ್​ ಮತ್ತು ಬೌಲಿಂಗ್​ ಪ್ರದರ್ಶನ ತೋರುವ ಮೂಲಕ ಭಾರತ ತಂಡ ವಿಶ್ವಕಪ್​ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಒಟ್ಟು 144 ರನ್​ ಮತ್ತು 11 ವಿಕೆಟ್​ ಕಿತ್ತ ಸಾಧನೆ ಮಾಡಿದ್ದರು. ಅದರಲ್ಲೂ ಫೈನಲ್​ನಲ್ಲಿ ಸೋಲಿನ ಭೀತಿಯಲ್ಲಿದ್ದ ಭಾರತಕ್ಕೆ ಅಪಾಯಕಾರಿ ಕ್ಲಾಸೆನ್​ ಮತ್ತು ಮಿಲ್ಲರ್​ ವಿಕೆಟ್​ ಭೇಟೆಯಾಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಇದನ್ನೂ ಓದಿ Hardik Pandya : ಪತ್ನಿ ಜತೆ ವಿಚ್ಛೇದನ ಸುದ್ದಿ ನಡುವೆ ರಷ್ಯನ್ ಮಾಡೆಲ್​ ಜತೆ ಕಾಣಿಸಿಕೊಂಡ ಹಾರ್ದಿಕ್ ಪಾಂಡ್ಯ; ಯಾರವರು?

ಹಾರ್ದಿಕ್ ಪಾಂಡ್ಯ(Hardik Pandya) ಅವರು ಪತ್ನಿ, ಸರ್ಬಿಯಾದ ನಟಿ ನತಾಶಾ ಸ್ಟಾನ್‌ಕೋವಿಕ್‌(Natasa Stankovic) ಅವರಿಗೆ ವಿಚ್ಛೇದನ ನೀಡಲಿದ್ದಾರೆ, ಜತೆಗೆ ವಿಚ್ಛೇದನ(Hardik Pandya and Natasa Stankovic divorce) ಪ್ರಕ್ರಿಯೆಯ ಭಾಗವಾಗಿ, ತಮ್ಮ ಆಸ್ತಿಯಲ್ಲಿ ಶೇ. 70 ರಷ್ಟು ಭಾಗವನ್ನು ನತಾಶಾಗೆ ವರ್ಗಾಯಿಸಬೇಕಿದೆ ಎನ್ನಲಾಗಿತ್ತು. ಈ ಎಲ್ಲ ಮಾತುಗಳ ಮಧ್ಯೆಯೂ ಪಾಂಡ್ಯ ದೇಶದ ಕರ್ತವ್ಯಕ್ಕೆ ಹಾಜರಾಗಿ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.

ಕೆಲ ದಿನಗಳ ಹಿಂದೆ ನತಾಶಾ ಸ್ಟಾನ್‌ಕೋವಿಕ್‌(Nataša Stanković)ಗೆ ಪಾಂಡ್ಯ ವಿಚ್ಛೇದನ ನೀಡಲಿದ್ದಾರೆ ಎಂಬ ಸುದ್ದಿ ಹರಿದಾಡಿದ ಬೆನ್ನಲ್ಲೇ ಹಾರ್ದಿಕ್​ ಪಾಂಡ್ಯ ಅವರು ಸುಂದರ ಹುಡುಗಿಯ ಜತೆಗಿರುವ ಫೋಟೊ ಮತ್ತು ವಿಡಿಯೊ ವೈರಲ್​ ಆಗಿತ್ತು.

ಹಾರ್ದಿಕ್​ ಪಾಂಡ್ಯ ಜತೆ ಕಾಣಿಸಿಕೊಂಡಿದ್ದ ಈ ಹುಡುಗಿಯ ಹೆಸರು ಪ್ರಾಚಿ ಸೋಲಂಕಿ(Prachi Solanki). ಈಕೆ ಪ್ರಸಿದ್ಧ ಮೇಕಪ್ ಆರ್ಟಿಸ್ಟ್​, ಹಾಗೂ ಸೋಷಿಯಲ್ ಮೀಡಿಯಾ ಇನ್ಫುಲೆನ್ಸರ್ ಆಗಿದ್ದಾಳೆ. ಹಾರ್ದಿಕ್​ ಜತೆಗಿರುವ ಹಲವು ಸುಂದರ ಕ್ಷಣದ ಫೋಟೊ ಮತ್ತು ವಿಡಿಯೊವನ್ನು ತನ್ನ ಅಧಿಕೃತ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಪೋಸ್ಟ್​ ಮಾಡಿರುವ ಸೋಲಂಕಿ, ವಿಶ್ವಕಪ್​ ಹೀರೋ ಅವರನ್ನು ಭೇಟಿ ಮಾಡಿದೆ ಎಂದು ಬರೆದುಕೊಂಡು ಲವ್​ ಎಮೊಜಿಯನ್ನು ಹಾಕಿದ್ದಾರೆ. ವಿಡಿಯೊದಲ್ಲಿ ಪಾಂಡ್ಯ ಜತೆ ಸೋಲಂಕಿ ಅತ್ಯಂತ ಆತ್ಮೀಯವಾಗಿ ಕಂಡುಬಂದಿದ್ದಳು.

ಸೋಲಂಕಿ ಅವರು ಹಾರ್ದಿಕ್​ ಮನೆಗೆ ಬಂದು ಭೇಟಿಯಾಗಿರುವುದು ನೆಟ್ಟಿಗರಿಗೆ ಹಲವು ಅನುಮಾನ ಮೂಡುವಂತೆ ಮಾಡಿದೆ. ಪಾಂಡ್ಯ ಕುಟುಂಬದ ಸದ್ಯರೊಂದಿಗೂ ಸೋಲಂಕಿ ಆತ್ಮೀಯವಾಗಿರುವ ಫೋಟೊವನ್ನು ಕೂಡ ಹಂಚಿಕೊಂಡಿದ್ದಾರೆ. ಸದ್ಯಕ್ಕೆ ಇದೊಂದು ಆತ್ಮೀಯ ಭೇಟಿಯಂತೆ ತೋರುತ್ತಿದ್ದರೂ ಕೂಡ ನೆಟ್ಟಿಗರು ಮಾತ್ರ ಶೀಘ್ರದಲ್ಲೇ ಪಾಂಡ್ಯ ಸೋಲಂಕಿಯನ್ನು ವಿವಾಹವಾಗಲಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚಿಸಲು ಆರಂಭಿಸಿದ್ದಾರೆ.

Continue Reading

ಕ್ರೀಡೆ

Paris Olympics 2024: ಮೊಟ್ಟಮೊದಲ ಒಲಿಂಪಿಕ್ಸ್ ಕ್ರೀಡಾಕೂಟದ 10 ಕುತೂಹಲಕರ ಸಂಗತಿಗಳಿವು

Paris Olympics 2024: ಒಲಿಂಪಿಕ್ ಕ್ರೀಡಾಕೂಟವನ್ನು ವಿಶ್ವದ ಅತಿದೊಡ್ಡ ಕ್ರೀಡಾಕೂಟವೆಂದು ಪರಿಗಣಿಸಲಾಗಿದೆ. ಒಲಿಂಪಿಕ್ಸ್ ಕಲ್ಪನೆಯನ್ನು ಉತ್ತೇಜಿಸಲು ಪ್ರತಿ ವರ್ಷ ಜೂನ್ 23 ರಂದು ವಿಶ್ವ ಒಲಿಂಪಿಕ್ ದಿನವನ್ನು ಆಚರಿಸಲಾಗುತ್ತದೆ. ಮೊದಲ ಒಲಿಂಪಿಕ್ ಕ್ರೀಡಾಕೂಟ (First Olympic Games) ಹಲವು ಪ್ರಮುಖ ಸ್ಮರಣೀಯ ಘಟನೆಗಳಿಗೆ ಕಾರಣವಾಗಿತ್ತು.

VISTARANEWS.COM


on

By

Paris Olympics 2024
Koo

ಈ ಬಾರಿ ಪ್ಯಾರಿಸ್ ನಲ್ಲಿ ಜುಲೈ 26ರಿಂದ ಆಗಸ್ಟ್ 11ರವರೆಗೆ (Paris Olympics 2024) ಒಲಿಂಪಿಕ್ಸ್ ಕ್ರೀಡಾಕೂಟ (Olympic Games) ನಡೆಯಲಿದೆ. ಈಗಿನ ಒಲಿಂಪಿಕ್ಸ್ ಕ್ರೀಡಾಕೂಟವು ಸಾಕಷ್ಟು ಆಧುನೀಕರಣಗೊಂಡಿದೆ. ಮೊದಲ ಒಲಿಂಪಿಕ್ಸ್ ಕ್ರೀಡಾಕೂಟವು ಅಥೆನ್ಸ್ ನಲ್ಲಿ (Athens) 1896ರ ಏಪ್ರಿಲ್‌ 6ರಿಂದ 15ರವರೆಗೆ ಆಯೋಜಿಸಲಾಗಿತ್ತು. ಮೊದಲ ಒಲಿಂಪಿಕ್ ಕ್ರೀಡಾಕೂಟ (First Olympic Games) ಹಲವು ಪ್ರಮುಖ ಸ್ಮರಣೀಯ ಘಟನೆಗಳಿಗೆ ಕಾರಣವಾಗಿತ್ತು.

ಒಲಿಂಪಿಕ್ ಕ್ರೀಡಾಕೂಟವನ್ನು ವಿಶ್ವದ ಅತಿದೊಡ್ಡ ಕ್ರೀಡಾಕೂಟವೆಂದು ಪರಿಗಣಿಸಲಾಗಿದೆ. ಒಲಿಂಪಿಕ್ಸ್ ಕಲ್ಪನೆಯನ್ನು ಉತ್ತೇಜಿಸಲು ಪ್ರತಿ ವರ್ಷ ಜೂನ್ 23ರಂದು ವಿಶ್ವ ಒಲಿಂಪಿಕ್ ದಿನವನ್ನು ಆಚರಿಸಲಾಗುತ್ತದೆ. ಅಥೆನ್ಸ್‌ನಲ್ಲಿ ನಡೆದ ಮೊದಲ ಒಲಂಪಿಕ್ಸ್ ಉದ್ಘಾಟನೆ ಸ್ಪರ್ಧೆಗಳಲ್ಲಿ ಒಟ್ಟು 280 ಕ್ರೀಡಾಪಟುಗಳು ಭಾಗವಹಿಸಿದ್ದರು. ಅಥ್ಲೆಟಿಕ್ಸ್ ನಲ್ಲಿ 43 ಸ್ಪರ್ಧಿಗಳಿದ್ದರು.

ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುವ ಆಟಗಾರರು ಅನೇಕ ಸ್ಪರ್ಧಿಗಳನ್ನು ಸೋಲಿಸಿದ ಅನಂತರ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳಲು ಅರ್ಹರಾಗುತ್ತಾರೆ. ಒಲಿಂಪಿಕ್ ಕ್ರೀಡಾಕೂಟದ ಆತಿಥ್ಯವು ಆತಿಥೇಯ ರಾಷ್ಟ್ರದ ಅತಿದೊಡ್ಡ ಸಾಧನೆಯಾಗಿದೆ. ಅಮೆರಿಕ ಈವರೆಗೆ 9 ಬಾರಿ ಒಲಿಂಪಿಕ್ ಕ್ರೀಡಾಕೂಟವನ್ನು ಆಯೋಜಿಸಿದೆ. ಇದು ಇತರ ದೇಶಗಳಿಗಿಂತ ಹೆಚ್ಚಿನದಾಗಿದೆ. ಇದುವರೆಗೆ 6 ಒಲಿಂಪಿಕ್ ಕ್ರೀಡಾಕೂಟಗಳನ್ನು ಆಯೋಜಿಸಿದ ಫ್ರಾನ್ಸ್ ಅನಂತರದ ಸ್ಥಾನದಲ್ಲಿದೆ.

ಮೊದಲ ಒಲಿಂಪಿಕ್ ಕ್ರೀಡಾಕೂಟದ ಹತ್ತು ಪ್ರಮುಖ ಸಂಗತಿಗಳು

1. ಮೊದಲ ಒಲಂಪಿಕ್ಸ್ ಗ್ರೀಸ್ ದೇಶದ ಅಥೆನ್ಸ್‌ನಲ್ಲಿ 1896ರ ಏಪ್ರಿಲ್ 6ರಿಂದ 15ರವರೆಗೆ ನಡೆಯಿತು.

2. ಅಥೆನ್ಸ್‌ನಲ್ಲಿ ನಡೆದ ಒಲಿಂಪಿಕ್ಸ್ ಗೇಮ್ಸ್‌ ಅನ್ನು ಕಿಂಗ್ ಜಾರ್ಜ್ I ಉದ್ಘಾಟಿಸಿದ್ದರು.

3. ಮೊದಲ ಒಲಿಂಪಿಕ್ಸ್‌ನಲ್ಲಿ ಒಟ್ಟು 14 ದೇಶಗಳು ಭಾಗವಹಿಸಿವೆ.

First Olympic Games


4. 1896ರ ಏಪ್ರಿಲ್ 6ರಂದು ಅಮೆರಿಕನ್ ಆಟಗಾರ ಜೇಮ್ಸ್ ಕೊನೊಲಿ ಟ್ರಿಪಲ್ ಜಂಪ್ ಅನ್ನು ಗೆದ್ದು ಮೊದಲ ಒಲಿಂಪಿಕ್ ಚಾಂಪಿಯನ್ ಆದರು. ಎತ್ತರ ಜಿಗಿತದಲ್ಲಿ ದ್ವಿತೀಯ ಹಾಗೂ ಉದ್ದ ಜಿಗಿತದಲ್ಲಿ ತೃತೀಯ ಸ್ಥಾನವನ್ನು ಅವರು ಗಳಿಸಿದರು.

5. ಜರ್ಮನಿಯ ಕಾರ್ಲ್ ಶುಹ್ಮನ್ ಅವರು 1896ರಲ್ಲಿ ಅಥೆನ್ಸ್‌ನ ಸ್ಟಾರ್ ತಾರೆಯಾಗಿದ್ದರು. ಜಿಮ್ನಾಸ್ಟಿಕ್ಸ್, ಅಥ್ಲೆಟಿಕ್ಸ್, ವೇಟ್‌ಲಿಫ್ಟಿಂಗ್ ಮತ್ತು ಗ್ರೀಕೊ-ರೋಮನ್ ಕುಸ್ತಿಯಲ್ಲಿ ಸ್ಪರ್ಧಿಸಿ ಅವರು ಉದ್ಘಾಟನಾ ಆಧುನಿಕ ಕ್ರೀಡಾಕೂಟದಲ್ಲಿ ನಾಲ್ಕು ಚಿನ್ನದ ಪದಕಗಳನ್ನು ಗೆದ್ದರು.

6. ಮೊದಲ ಒಲಿಂಪಿಕ್ಸ್ ನಲ್ಲಿ ಅಮೆರಿಕವು ಗರಿಷ್ಠ ಸಂಖ್ಯೆಯ 14 ಚಿನ್ನದ ಪದಕಗಳನ್ನು ಗೆದ್ದುಕೊಂಡಿತು.

7. ಮೊದಲ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಒಟ್ಟು 241 ಆಟಗಾರರು ಸ್ಪರ್ಧಿಸಿದ್ದರು.

7. ಅಥೆನ್ಸ್‌ನಲ್ಲಿ ಒಲಿಂಪಿಕ್ಸ್ ಅಂಗವಾಗಿ ಒಟ್ಟು 43 ಕಾರ್ಯಕ್ರಮಗಳನ್ನು ನಡೆಸಲಾಗಿತ್ತು.

8. ಒಲಿಂಪಿಕ್ಸ್‌ನಲ್ಲಿ ಮೊದಲ ಸ್ಥಾನ ಪಡೆದ ವಿಜೇತರಿಗೆ ಬೆಳ್ಳಿ ಪದಕ ಮತ್ತು ಆಲಿವ್ ಗುಚ್ಛ ನೀಡಲಾಯಿತು. ಎರಡನೇ ಸ್ಥಾನದಲ್ಲಿರುವವರಿಗೆ ತಾಮ್ರದ ಪದಕ, ಲಾರೆಲ್ ಗುಚ್ಛ ಮತ್ತು ಪ್ರಮಾಣಪತ್ರ ನೀಡಲಾಯಿತು.

First Olympic Games


9. ಪದಕದ ಮುಂಭಾಗದ ಭಾಗವು ಜೀಸಸ್‌ನ ಮುಖವನ್ನು ಹೊಂದಿದ್ದು, ಅವನು ಕೈಯಲ್ಲಿ ರೆಕ್ಕೆಯ ವಿಜಯದೊಂದಿಗೆ ಗ್ಲೋಬ್ ಅನ್ನು ಹಿಡಿದಿದ್ದಾನೆ. ಗ್ರೀಕ್ ಭಾಷೆಯಲ್ಲಿ “ಒಲಿಂಪಿಯಾ” ಎಂಬ ಶೀರ್ಷಿಕೆಯನ್ನು ಇದು ಒಳಗೊಂಡಿತ್ತು. ಹಿಂಭಾಗವು ಆಕ್ರೊಪೊಲಿಸ್ ಸೈಟ್ ಅನ್ನು ಗ್ರೀಕ್ ಭಾಷೆಯಲ್ಲಿ “1896ರಲ್ಲಿ ಅಥೆನ್ಸ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಒಲಿಂಪಿಕ್ ಕ್ರೀಡಾಕೂಟ” ಎಂಬ ಶೀರ್ಷಿಕೆಯೊಂದಿಗೆ ಹೊಂದಿತ್ತು.

ಇದನ್ನೂ ಓದಿ: Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್ ಯಾವಾಗ ಆರಂಭ? ಬೃಹತ್​ ಕ್ರೀಡಾಕೂಟಕ್ಕೆ ನಡೆಸಿರುವ ಸಿದ್ಧತೆಗಳೇನು?

10. ಅಥೆನ್ಸ್ 1896ರ ಒಲಿಂಪಿಕ್ ಕ್ರೀಡಾಕೂಟದ ಅಧಿಕೃತ ವರದಿಯು ಎರಡು ಭಾಗಗಳನ್ನು ಒಳಗೊಂಡಿತ್ತು. “ದ ಒಲಿಂಪಿಕ್ ಗೇಮ್ಸ್ ಇನ್ ಏನ್ಷಿಯಂಟ್ ಟೈಮ್ಸ್” ಶೀರ್ಷಿಕೆಯಲ್ಲಿ ಕ್ರೀಡಾಕೂಟದ ಮೊದಲು ಪ್ರಕಟವಾಯಿತು. 1896ರಲ್ಲಿ ಒಲಿಂಪಿಕ್ ಗೇಮ್ಸ್ ಕ್ರೀಡಾಕೂಟದ ಅನಂತರ ಪ್ರಕಟವಾಯಿತು.
ಎರಡು ಸಂಪುಟಗಳನ್ನು ಫ್ರೆಂಚ್-ಗ್ರೀಕ್ ಮತ್ತು ಇಂಗ್ಲಿಷ್-ಜರ್ಮನ್ ಎಂಬ ಎರಡು ದ್ವಿಭಾಷಾ ಆವೃತ್ತಿಗಳ ರೂಪದಲ್ಲಿ ನಾಲ್ಕು ಭಾಷೆಗಳಲ್ಲಿ ಪ್ರಕಟಿಸಲಾಯಿತು. ಈ ಅಧಿಕೃತ ವರದಿಯು ವಿವಿಧ ಹೊಸ ಆವೃತ್ತಿಗಳ ವಿಷಯವಾಗಿತ್ತು.

Continue Reading
Advertisement
Viral Video
Latest4 mins ago

Viral Video: ಕಾಮುಕರ ಹಾವಳಿ ಮಿತಿ‌ ಮೀರಿದೆ; ಬೀದಿ ನಾಯಿಯನ್ನೂ ಇವರು ಬಿಡುತ್ತಿಲ್ಲ! ಆಘಾತಕಾರಿ ವಿಡಿಯೊ

Jitan Sahani
ದೇಶ12 mins ago

Jitan Sahani: ಬಿಹಾರದಲ್ಲಿ ವಿಕಾಸಶೀಲ ಇನ್ಸಾನ್‌ ಪಕ್ಷದ ಮುಖ್ಯಸ್ಥನ ತಂದೆಯ ಭೀಕರ ಹತ್ಯೆ; ಮನೆ ತುಂಬ ರಕ್ತ!

karnataka assembly live
ಪ್ರಮುಖ ಸುದ್ದಿ30 mins ago

Karnataka Assembly Live: ಸದನದಲ್ಲಿ ಇಂದು ಕಿಡಿಯೆಬ್ಬಿಸಲಿರುವ ವಾಲ್ಮೀಕಿ ಹಗರಣ; ಉತ್ತರ ನೀಡಲು ಸಿಎಂ ಸಜ್ಜು; ಇಲ್ಲಿದೆ ಕ್ಷಣಕ್ಷಣದ ಲೈವ್‌

David Warner
ಕ್ರೀಡೆ33 mins ago

David Warner: ​ಚಾಂಪಿಯನ್ಸ್ ಟ್ರೋಫಿಗೆ ವಾರ್ನರ್​ ಆಯ್ಕೆ ಇಲ್ಲ ಎಂದ ಜಾರ್ಜ್​ ಬೈಲಿ

Kannada New Movie
ಸ್ಯಾಂಡಲ್ ವುಡ್37 mins ago

Kannada New Movie: ಸೆಟ್ಟೇರಿತು ‘ಆಕಾಶ್’, ‘ಅರಸು’ ಚಿತ್ರಗಳ ಡೈರೆಕ್ಟರ್ ಹೊಸ ಸಿನಿಮಾ; ಕಿರುತೆರೆಯ ಈ ಪ್ರತಿಭೆ ನಾಯಕ

Kannada In Madrasa
ಕರ್ನಾಟಕ51 mins ago

Kannada In Madrasa: ರಾಜ್ಯದ ಮದರಸಾಗಳಲ್ಲಿ ಇನ್ನು ಕನ್ನಡ ಕಲಿಕೆ ಕಡ್ಡಾಯ; ಶೀಘ್ರವೇ ಆದೇಶ!

murder case set fire bagalakote
ಕ್ರೈಂ1 hour ago

Horrible Murder Case: ಶೆಡ್‌ ಹೊರಗಿನಿಂದ ಲಾಕ್‌ ಮಾಡಿ ಬೆಂಕಿ ಇಟ್ಟ ದುಷ್ಟರು; ಇಬ್ಬರು ಸಜೀವ ದಹನ

Iti Acharya
ಸಿನಿಮಾ1 hour ago

Iti Acharya: ಬಾಲಿವುಡ್‌ಗೆ ಕಾಲಿಟ್ಟ ಮತ್ತೊಬ್ಬ ಕನ್ನಡತಿ; ದಕ್ಷಿಣ ಭಾರತದ ಚಿತ್ರಗಳ ಬಳಿಕ ಹಿಂದಿಯಲ್ಲೂ ಅಭಿನಯ

Karnataka Assembly
ಕ್ರೀಡೆ1 hour ago

Karnataka Assembly: ಬಿಜೆಪಿಯಿಂದಲೇ ರಾಹುಲ್​ಗೆ ಶ್ಲಾಘನೆ; ಸದನದಲ್ಲಿ ಅಭಿನಂದನೆಗೆ ನಿರ್ಣಯ

Anant Radhika Wedding
ವಾಣಿಜ್ಯ1 hour ago

Anant Radhika Wedding: ನಮ್ಮಿಂದ ಏನಾದರು ತಪ್ಪಾಗಿದ್ದರೆ ದಯವಿಟ್ಟು ಕ್ಷಮಿಸಿ; ನೀತಾ ಅಂಬಾನಿ ವಿನಮ್ರ ಮನವಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ17 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ23 hours ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ3 days ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

ಟ್ರೆಂಡಿಂಗ್‌