Rakshit Shetty: ಬ್ಯಾಚಲರ್‌ ಪಾರ್ಟಿ ‌'ಕಿರಿಕ್'; ಕೇಸ್‌ ಬೆನ್ನಲ್ಲೇ ಕಾನೂನು ಹೋರಾಟ ಎಂದ ರಕ್ಷಿತ್‌ ಶೆಟ್ಟಿ; ಇಲ್ಲಿದೆ ಪತ್ರ - Vistara News

ಪ್ರಮುಖ ಸುದ್ದಿ

Rakshit Shetty: ಬ್ಯಾಚಲರ್‌ ಪಾರ್ಟಿ ‌’ಕಿರಿಕ್’; ಕೇಸ್‌ ಬೆನ್ನಲ್ಲೇ ಕಾನೂನು ಹೋರಾಟ ಎಂದ ರಕ್ಷಿತ್‌ ಶೆಟ್ಟಿ; ಇಲ್ಲಿದೆ ಪತ್ರ

Rakshit Shetty: ನಟ ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಜನವರಿ 26 ರಂದು ರಿಲೀಸ್‌ ಆಗಿತ್ತು. ಕಾಮಿಡಿ ಜಾನರ್‌ನ ಈ ಸಿನಿಮಾದಲ್ಲಿ ನಟ ದಿಗಂತ್, ಲೂಸ್ ಮಾದ ಯೋಗಿ, ಅಚ್ಯುತ್ ಕುಮಾ‌ರ್, ನಟಿ ಸಿರಿ ರವಿಕುಮಾರ್‌ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು. ಕಿರಿಕ್ ಪಾರ್ಟಿ’ ಚಿತ್ರದ ಬರಹಗಾರ ಅಭಿಜಿತ್ ಮಹೇಶ್ ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದರು. ಕಿರಿಕ್‌ ಪಾರ್ಟಿಯ ಬರಹಗಾರರಲ್ಲಿ ಅಭಿಜಿತ್ ಮಹೇಶ್ ಕೂಡ ಒಬ್ಬರು. ಈ ಸಿನಿಮಾದಲ್ಲಿ ಬಳಕೆಯಾದ ಎರಡು ಹಾಡುಗಳ ಕುರಿತು ಈಗ ವಿವಾದ ಸೃಷ್ಟಿಯಾಗಿದೆ.

VISTARANEWS.COM


on

Rakshit Shetty
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸ್ಯಾಂಡಲ್‌ವುಟ್‌ ನಟ, ನಿರ್ಮಾಪಕ, ನಿರ್ದೇಶಕ ರಕ್ಷಿತ್‌ ಶೆಟ್ಟಿ (Rakshit Shetty) ವಿರುದ್ಧ ಕಾಪಿರೈಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿ (Bachelor Party Kannada Movie) ಬಳಸಿದ ಒಮ್ಮೆ ನಿನ್ನನ್ನು ಹಾಗೂ ನ್ಯಾಯ ಎಲ್ಲಿದೆ ಎಂಬ ಹಾಡುಗಳ ಕಾಪಿರೈಟ್‌ ವಿಚಾರಕ್ಕೆ ಸಂಬಂಧಿಸಿದಂತೆ ಕೇಸ್‌ ದಾಖಲಾಗಿದೆ. ಇದರ ಬೆನ್ನಲ್ಲೇ, ರಕ್ಷಿತ್‌ ಶೆಟ್ಟಿ ಒಡೆತನದ ಪರಂವಃ ಸ್ಟುಡಿಯೋಸ್‌ನಿಂದ (Paramvah Studios) ಸುದೀರ್ಘ ಪತ್ರ ಬರೆದಿದ್ದು, ಕಾನೂನು ಹೋರಾಟ ಮಾಡುವುದಾಗಿ ಘೋಷಿಸಲಾಗಿದೆ.

ಪರಂವಃ ಪತ್ರದ ಸಾರಾಂಶ ಹೀಗಿದೆ…

“ನಾವು ಈ ಬಹಿರಂಗ ಪತ್ರವನ್ನು ಎಂಆರ್‌ಟಿ ಮ್ಯೂಸಿಕ್ ಸಂಸ್ಥೆ ನಮ್ಮ ಮೇಲೆ ಎರಡು ಹಾಡಿನ ಹಕ್ಕು ಉಲ್ಲಂಘನೆಯ ಆರೋಪ ಮಾಡಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಲು ಬರೆದಿರುತ್ತೇವೆ. ಮೊದಲಿಗೆ ಸ್ಪಷ್ಟಿಕರಿಸಲು, ಚಿತ್ರದಲ್ಲಿ ಬಳಕೆಯಾಗಿರುವ ತುಣುಕುಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ. ಕಾರಣ, ಚಿತ್ರದಲ್ಲಿ ಈ ಹಾಡುಗಳು ಯಾವ ಭಾಗದಲ್ಲಿ, ಯಾವ ರೀತಿಯಲ್ಲಿ ಬಳಕೆಯಾಗಿದೆ ಎಂದು. ಅಲ್ಲದೆ, ಬಳಕೆಯ ರೂಪವನ್ನು ನಿಮ್ಮ ಗಮನಕ್ಕೆ ತರುತ್ತಿದ್ದೇವೆ” ಎಂಬುದಾಗಿ ಪತ್ರವನ್ನು ಹಂಚಿಕೊಳ್ಳಲಾಗಿದೆ.

“ಈ ಮುಂಚೆ, ಅಂದರೆ, ಬ್ಯಾಚುಲರ್ ಪಾರ್ಟಿ ಸಿನಿಮ ತೆರೆಕಾಣುವುದಕ್ಕೂ ಮುನ್ನವೆ ನಾವು ಎಂ ಆರ್ ಟಿ ಸಂಸ್ಥೆಯ ಮುಖ್ಯಸ್ಥರೊಂದಿಗೆ ಈ ಕುರಿತು ಮಾತು ಕತೆ ನಡೆಸಿದ್ದೆವು. ಆದರೆ ಅವರು ನಮ್ಮ ಮುಂದೆ ಇಟ್ಟ ಶುಲ್ಕ, ನಮ್ಮ ಬಜೆಟ್‌ ಅನ್ನು ಮೀರಿತ್ತು. ಎಂ ಆರ್ ಟಿ ಸಂಸ್ಥೆ ಶುಲ್ಕದ ಕುರಿತಾಗಿ ಮರು ಮಾತುಕತೆಗೆ ತಯಾರಿರರಿಲ್ಲ. ಈಗ ನಮ್ಮ ಮೇಲೆ ಹಾಡಿನ ಉಲ್ಲಂಘನೆಯ ಆರೋಪ ಬಂದಿದ್ದು, ಎಫ್ ಐ ಆರ್ ದಾಖಲಾಗಿದೆ. ಇದು ನಿಜವಾಗಿಯು ಹಾಡಿನ ಹಕ್ಕು ಉಲ್ಲಂಘನೆಯೆ? ಹೌದಾಗಿದ್ದೇ ಆದಲ್ಲಿ, ನಾವು ತರಬೇಕಾದ ದಂಡವಾದರೂ ಎಷ್ಟು? ಏಕೆಂದರೆ ಎಂ ಆರ್ ಟಿ ಸಂಸ್ಥೆಯಿಂದ ಕೇಳಲ್ಪಟ್ಟದ್ದು ಬೃಹತ್ ಮೊತ್ತ ಎಂದರೆ ತಪ್ಪಾಗಲಾರದು. ಅಲ್ಲವಾದರೆ, ಈ ತರಹದ ಆರೋಪವನ್ನು ಈಗಾಗಲಿ ಅಥವಾ ಮುಂಬರುವ ದಿನಗಳಲ್ಲಾಗಲಿ ಹೇಗೆ ಸಹಿಸಿಕೊಳ್ಳುವುದು! ಇದೊಂದು ಯಕ್ಷ ಪ್ರಶ್ನೆ! ಇದಕ್ಕೆ ಉತ್ತರ ನಾವು ಹುಡುಕ ಬಯಸುತ್ತೇವೆ” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಹಾಗಾಗಿ, ನ್ಯಾಯ ಮತ್ತು ಪ್ರಭುದ್ಧತೆಯನ್ನು ಕಾಪಾಡಿಕೊಳ್ಳಲು ನಾವು ಇದನ್ನು ನ್ಯಾಯಸ್ಥಾನದಲ್ಲಿಯೇ ನಿರ್ಧಾರವಾಗಿಲಿ ಎಂದು ನ್ಯಾಯಾಲಯದ ಮೊರೆ ಹೋಗುತ್ತಿದ್ದೇವೆ. ಇದರಿಂದ ಇನ್ನು ಮುಂಬರುವ ದಿನಗಳಲ್ಲಿ, ನಮಗಷ್ಟೇ ಅಲ್ಲ, ಬೇರೆ ಇನ್ಯಾವ ಸಿಸಿಮಾ ಕರ್ಮಿಗೂ ಈ ಪರಿಸ್ಥಿತಿ ಹಾಗೂ ಗೊಂದಲ ಎದುರಾಗಬಾರದೆಂದು, ನಮ್ಮ ಈ ಪ್ರಾಮಾಣಿಕ ಪ್ರಯತ್ನ” ಎಂದು ಪರಂವಃ ಸ್ಟುಡಿಯೋಸ್‌ ಪತ್ರದ ಮೂಲಕ ತಿಳಿಸಿದೆ. ಹಾಗೆಯೇ, ಸಿನಿಮಾದಲ್ಲಿ ಬಳಸಲಾದ ಎರಡು ಹಾಡುಗಳ ವಿಡಿಯೊವನ್ನು ಕೂಡ ಹಂಚಿಕೊಳ್ಳಲಾಗಿದೆ.

    ಏನಿದು ಪ್ರಕರಣ?

    ʻನ್ಯಾಯ ಎಲ್ಲಿದೆʼ ಟೈಟಲ್ ಸಾಂಗ್ ಹಾಗೂ ‘ಒಮ್ಮೆ ನಿನ್ನನ್ನೂ ಕಣ್ತುಂಬ ನೋಡುವಾಸೆ” ಹಾಡುಗಳನ್ನು ಕದ್ದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಹಿಂದೆ ನವೀನ್ ಕುಮಾರ್ ಎಂಬುವವರ ಜತೆ ಹಾಡುಗಳ ಬಗ್ಗೆ ಮಾತುಕತೆ ನಡೆದಿತ್ತು. ನವೀನ್ ಕುಮಾರ್ ಹಾಡುಗಳ ಕಾಪಿರೈಟ್ ಪಡೆದು ಮಾರಾಟ ಮಾಡುವ ಬ್ಯುಸಿನೆಸ್ ಮೆನ್ ಆಗಿದ್ದರು. ಇವರ ಜತೆ ಹಾಡಿಗೆ ಸಂಬಂಧಿಸಿದ ಮಾತುಕತೆ ನಡೆದಿತ್ತು. ಆದರೆ ನಾನಾ ಕಾರಣಕ್ಕೆ ಈ ಡೀಲ್ ಮುರಿದು ಬಿದ್ದಿತ್ತು. ಆದರೂ ಆ ಹಾಡನ್ನು ಮಾಲೀಕರ ಅನುಮತಿ ಇಲ್ಲದೆ ಬಳಕೆ ಆಗಿತ್ತು. ಚಿತ್ರದಲ್ಲಿ ಎರಡೂ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಮಾಡಿದ್ದಾರೆಂದು ನವೀನ್‌ರಿಂದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಂದು ಕಿರಿಕ್ ಪಾರ್ಟಿ ಇಂದು ಬ್ಯಾಚುಲರ್ ಪಾರ್ಟಿ ವಿವಾದ ಶುರು ಆದಂತಾಗಿದೆ.

    ಇದನ್ನೂ ಓದಿ: Rakshit Shetty: ರಕ್ಷಿತ್‌ ಶೆಟ್ಟಿಗೆ ತಪ್ಪದ ಸಂಕಷ್ಟ; ಮತ್ತೊಂದು ದೂರು ದಾಖಲು!

    ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
    ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
    Continue Reading
    Click to comment

    Leave a Reply

    Your email address will not be published. Required fields are marked *

    ಪ್ರಮುಖ ಸುದ್ದಿ

    Karnataka Assembly Live: ಡಿಸಿಎಂ ಡಿಕೆ ಶಿವಕುಮಾರ್-‌ ಅಶ್ವಥ್‌ ನಾರಾಯಣ್‌ ವಾಗ್ಯುದ್ಧ; ಗದ್ದಲ

    Karnataka Assembly Live: ವಾಲ್ಮೀಕಿ ನಿಗಮದ ಹಗರಣದ ಕುರಿತು ವಿಪಕ್ಷ ನಾಯಕ ಆರ್.‌ ಅಶೋಕ್‌ ಇಂದು ಚರ್ಚೆಯನ್ನು ಮುಂದುವರಿಸಿದರು. ಆದರೆ ಈ ಚರ್ಚೆಯ ವೇಳೆ ಸಿಎಂ ಸಿದ್ದರಾಮಯ್ಯ ಸದನದಲ್ಲಿ ಗೈರುಹಾಜರಾಗಿದ್ದರು. ಇದಕ್ಕೆ ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಆಕ್ಷೇಪ ವ್ಯಕ್ತಪಡಿಸಿದರು.

    VISTARANEWS.COM


    on

    Koo

    ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ (Valmiki Corporation Scam) ಕುರಿತು ನಡೆಯುತ್ತಿರುವ ಚರ್ಚೆಯ ವೇಳೆ ವಿಧಾನಸಭೆ ಕಲಾಪ (Karnataka Assembly Live) ಗದ್ದಲದ ಗೂಡಾಯಿತು. ಸಿಎಂ ಸಿದ್ದರಾಮಯ್ಯ (CM Siddaramaiah) ಗೈರುಹಾಜರಿಯನ್ನು ಬಿಜೆಪಿ ಶಾಸಕ ಅಶ್ವಥ್‌ ನಾರಾಯಣ್‌ (Ashwath narayan) ಆಕ್ಷೇಪಿಸಿದರು. ಈ ಸಂದರ್ಭದಲ್ಲಿ ಅವರು ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ನಡುವೆ ಮಾತಿನ ಚಕಮಕಿ ನಡೆದು ಗೊಂದಲ ಸೃಷ್ಟಿಯಾಯಿತು. ಸ್ಪೀಕರ್‌ ಯು.ಟಿ ಖಾದರ್‌ (Speaker UT Khader) ಸದನವನ್ನು ಮುಂದೂಡಿದರು.

    ವಾಲ್ಮೀಕಿ ನಿಗಮದ ಹಗರಣದ ಕುರಿತು ವಿಪಕ್ಷ ನಾಯಕ ಆರ್.‌ ಅಶೋಕ್‌ ಇಂದು ಚರ್ಚೆಯನ್ನು ಮುಂದುವರಿಸಿದರು. ಆದರೆ ಈ ಚರ್ಚೆಯ ವೇಳೆ ಸಿಎಂ ಸಿದ್ದರಾಮಯ್ಯ ಸದನದಲ್ಲಿ ಗೈರುಹಾಜರಾಗಿದ್ದರು. ಇದಕ್ಕೆ ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಆಕ್ಷೇಪ ವ್ಯಕ್ತಪಡಿಸಿದರು. ʼನೇರವಾಗಿ ಇದು ಮುಖ್ಯಮಂತ್ರಿಗಳಿಗೆ ಸಂಬಂಧಿಸಿದ ವಿಚಾರʼ ಎಂದ ಅಶ್ವಥ್ ನಾರಾಯಣ್, ಕೂಡಲೇ ಅವರನ್ನು ಕರೆಸಿ ಎಂದು ಆಗ್ರಹಿಸಿದರು.

    ಈ ವೇಳೆ ಸದನದಲ್ಲಿ ಎದ್ದು ನಿಂತ ಡಿಸಿಎಂ ಡಿಕೆ ಶಿವಕುಮಾರ್‌, ಸಿಎಂ ಪರವಾಗಿ ಬ್ಯಾಟಿಂಗ್ ಮಾಡಿದರು. ಸಚಿವ ಜಮೀರ್ ಅಹ್ಮದ್ ಖಾನ್, ಕೆಜೆ ಜಾರ್ಜ್ ಕೂಡ ಅವರಿಗೆ ಸಾಥ್‌ ನೀಡಿದರು. ʼಸಿಎಂಗೆ ಗೌರವ ಕೊಡೋದನ್ನು ಕಲಿಯಿರಿʼ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್‌ ಹಾಗೂ ಅಶ್ವಥ್‌ ನಾರಾಯಣ್‌ ನಡುವೆ ಮಾತಿಕ ಚಕಮಕಿ ನಡೆಯಿತು. ರೊಚ್ಚಿಗೆದ್ದ ಬಿಜೆಪಿ ಶಾಸಕರು ಡಿಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಆಡಳಿತ, ವಿಪಕ್ಷ ಶಾಸಕರ ನಡುವೆ ವಾಗ್ವಾದ ಹೆಚ್ಚಿ ಗೊಂದಲ ಮೂಡಿದ ಕಾರಣ ವಿಧಾ‌ನಸಭೆ ಕಲಾಪವನ್ನು ಸ್ಪೀಕರ್ ಹತ್ತು ನಿಮಿಷ ಮುಂದೂಡಿದರು.

    ದದ್ದಲ್‌ ಜೊತೆಗೆ ಸ್ಪೀಕರ್‌ ಸಭೆ

    ವಿಧಾನಸಭೆಯ ಸ್ಪೀಕರ್ ಕಚೇರಿಯಲ್ಲಿ ಇಂದು ಶಾಸಕ, ವಾಲ್ಮೀಕಿ ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್‌ ಅವರು ಸಿಎಂ ಸಿದ್ದರಾಮಯ್ಯ, ಸಭಾಧ್ಯಕ್ಷ ಯುಟಿ ಖಾದರ್‌‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಸಿಎಂ‌ ಕಾನೂನು ಸಲಹೆಗಾರ ಪೊನ್ನಣ್ಣ ಕೂಡ ಜೊತೆಗಿದ್ದರು. ಇದಕ್ಕೂ ಮುನ್ನ ದದ್ದಲ್‌, ಗೃಹ ಸಚಿವ ಪರಮೇಶ್ವರ್‌ ಜೊತೆಗೆ ಮಾತುಕತೆ ನಡೆಸಿದರು. ಇಂದು ಮುಂಜಾನೆ ದದ್ದಲ್‌ ಅವರಿಗೆ ಇಡಿ ವಿಚಾರಣೆಗೆ ಹಾಜರಾಗಲು ನೋಟೀಸ್‌ ನೀಡಿದೆ ಎನ್ನಲಾಗಿದ್ದು, ತನಗೆ ಯಾವುದೇ ನೋಟೀಸ್‌ ಬಂದಿಲ್ಲ ಎಂದು ದದ್ದಲ್‌ ಹೇಳಿದ್ದಾರೆ. ಇದೀಗ ಸ್ಪೀಕರ್, ಸಿಎಂ ಜೊತೆಗಿನ ಅವರ ಮಾತುಕತೆ ಕುತೂಹಲ ಮೂಡಿಸಿದೆ.

    ಇದನ್ನೂ ಓದಿ: Karnataka Assembly Live: ವಿಧಾನಸಭೆ ಕಲಾಪಕ್ಕೆ ಹಾಜರಾಗಿ ಸೇಫ್‌ ಆದ ಬಸವನಗೌಡ ದದ್ದಲ್‌! ವಿಧಾನ ಮಂಡಲ ಕಲಾಪ ಲೈವ್‌ ಇಲ್ಲಿದೆ

    Continue Reading

    ದೇಶ

    Alcohol Delivery: ಎಣ್ಣೆ ಪ್ರಿಯರಿಗೆ ಗುಡ್‌ ನ್ಯೂಸ್;‌ ಇನ್ನು ಸ್ವಿಗ್ಗಿಯಲ್ಲಿ ಮನೆ ಬಾಗಿಲಿಗೆ ಬರಲಿದೆ ಆಲ್ಕೋಹಾಲ್!

    Alcohol Delivery: ಆನ್‌ಲೈನ್‌ ಸರಬರಾಜು ಪ್ಲಾಟ್‌ಫಾರ್ಮ್‌ಗಳಾದ ಸ್ವಿಗ್ಗಿ, ಬಿಗ್‌ಬ್ಯಾಸ್ಕೆಟ್‌, ಜೊಮ್ಯಾಟೋ ಸೇರಿ ಹಲವು ಪ್ಲಾಟ್‌ಫಾರ್ಮ್‌ಗಳ ಮೂಲಕ ಶೀಘ್ರದಲ್ಲೇ ಮನೆಯ ಬಾಗಿಲಿಗೇ ಲಿಕ್ಕರ್‌ ಬಾಟಲಿಗಳನ್ನು ಪೂರೈಸಲಾಗುತ್ತದೆ ಎಂಬುದಾಗಿ ಎಕನಾಮಿಕ್‌ ಟೈಮ್ಸ್‌ ವರದಿ ಮಾಡಿದೆ. ಕರ್ನಾಟಕದ ಬೆಂಗಳೂರು ಸೇರಿ ಹಲವು ನಗರಗಳಲ್ಲಿ ಈ ಸೌಲಭ್ಯ ಇರಲಿದೆ ಎಂಬುದು ಗಮನಾರ್ಹವಾಗಿದೆ.

    VISTARANEWS.COM


    on

    Alcohol Delivery
    Koo

    ನವದೆಹಲಿ: ಪರಿಚಯದವರ ಕಣ್ಣುತಪ್ಪಿಸಿ ಬಾರ್‌ಗೆ ಹೋಗುವ ಗೋಜು, ಕೌಂಟರ್‌ನಲ್ಲಿ ಅವಸರದಲ್ಲಿಯೇ ಮದ್ಯವನ್ನು ಹೀರಿ, ಉಪ್ಪಿನಕಾಯಿ ನೆಕ್ಕಿ ಬರುವ ಗಡಿ ಬಿಡಿ ಇರಲ್ಲ, ಆಫೀಸಿನಿಂದ ಮನೆಗೆ ಬರುತ್ತಲೇ ಊಟ ಆರ್ಡರ್‌ ಮಾಡಿದಂತೆ, ಬಿಯರ್‌, ವೈನ್‌ ಸೇರಿ ಯಾವುದೇ ಮದ್ಯದ ಬಾಟಲಿಗಳನ್ನು ಇನ್ನು ಸ್ವಿಗ್ಗಿ (Swiggy), ಜೊಮ್ಯಾಟೋದಂತಹ ಆನ್‌ಲೈನ್‌ ಕಂಪನಿಗಳ ಮೂಲಕವೇ‌ ಮನೆಯ ಬಾಗಿಲಿಗೆ ತಂದು ಕೊಡುವಂತೆ (Alcohol Home Delivery) ಆರ್ಡರ್‌ ಮಾಡಬಹುದಾಗಿದೆ. ಹೌದು, ಎಣ್ಣೆ ಪ್ರಿಯರು ಓದಿರುವ ಸುದ್ದಿ, ವಾಕ್ಯಗಳು ಸರಿಯಾಗಿಯೇ ಇವೆ. ಶೀಘ್ರದಲ್ಲೇ ಕರ್ನಾಟಕ ಸೇರಿ ದೇಶಾದ್ಯಂತ ಮದ್ಯದ ಹೋಮ್‌ ಡೆಲಿವರಿ (Alcohol Delivery) ಆಗಲಿದೆ.

    ಆನ್‌ಲೈನ್‌ ಸರಬರಾಜು ಪ್ಲಾಟ್‌ಫಾರ್ಮ್‌ಗಳಾದ ಸ್ವಿಗ್ಗಿ, ಬಿಗ್‌ಬ್ಯಾಸ್ಕೆಟ್‌, ಜೊಮ್ಯಾಟೋ ಸೇರಿ ಹಲವು ಪ್ಲಾಟ್‌ಫಾರ್ಮ್‌ಗಳ ಮೂಲಕ ಶೀಘ್ರದಲ್ಲೇ ಮನೆಯ ಬಾಗಿಲಿಗೇ ಲಿಕ್ಕರ್‌ ಬಾಟಲಿಗಳನ್ನು ಪೂರೈಸಲಾಗುತ್ತದೆ ಎಂಬುದಾಗಿ ಎಕನಾಮಿಕ್‌ ಟೈಮ್ಸ್‌ ವರದಿ ಮಾಡಿದೆ. ಸದ್ಯ, ನವದೆಹಲಿ, ಕರ್ನಾಟಕ, ಹರಿಯಾಣ, ಪಂಜಾಬ್‌, ತಮಿಳುನಾಡು, ಗೋವಾ ಹಾಗೂ ಕೇರಳ ರಾಜ್ಯಗಳಲ್ಲಿ ಆನ್‌ಲೈನ್‌ ಪ್ಲಾಟ್‌ಫಾರ್ಮ್‌ಗಳು ಹೋಮ್‌ ಡೆಲಿವರಿ ಕುರಿತ ಪೈಲಟ್‌ ಪ್ರಾಜೆಕ್ಟ್‌ಅನ್ನು ಕೈಗೆತ್ತಿಕೊಂಡಿದ್ದು, ಶೀಘ್ರದಲ್ಲೇ ದೇಶಾದ್ಯಂತ ಹೋಮ್‌ ಡೆಲಿವರಿ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

    ಆರಂಭಿಕ ಹಂತದಲ್ಲಿ ಮನೆ ಬಾಗಿಲಿಗೆ ಮದ್ಯ ಪೂರೈಸುವ ವ್ಯವಸ್ಥೆ ಜಾರಿಯಾದರೆ, ಹಂತ ಹಂತವಾಗಿ ದೇಶಾದ್ಯಂತ ನಗರ, ಪಟ್ಟಣಗಳಿಗೆ ಯೋಜನೆಯನ್ನು ವಿಸ್ತರಿಸಲಾಗುತ್ತದೆ. ಬಿಯರ್‌, ವೈನ್‌, ಕಡಿಮೆ ಬೆಲೆಯ ಲಿಕ್ಕರ್‌ಗಳನ್ನು ಮೊದಲಿಗೆ ಪೂರೈಕೆ ಮಾಡಲಾಗುತ್ತದೆ. ಗ್ರಾಹಕರು ಊಟ, ತಿಂಡಿ ಆರ್ಡರ್‌ ಮಾಡಿದಂತೆಯೇ, ಸ್ವಿಗ್ಗಿ, ಜೊಮ್ಯಾಟೋ, ಬಿಗ್‌ಬ್ಯಾಸ್ಕೆಟ್‌ ಅಪ್ಲಿಕೇಷನ್‌ಗಳ ಮೂಲಕ ಮನೆಯ ಬಾಗಿಲಿನವರೆಗೆ ಮದ್ಯವನ್ನು ಪೂರೈಸಲಾಗುತ್ತದೆ ಎಂದು ತಿಳಿದುಬಂದಿದೆ. ಇದರಿಂದ ಮದ್ಯ ಪ್ರಿಯರು ಆರಾಮವಾಗಿ ಮನೆಯಲ್ಲೇ ಕುಳಿತು ಮದ್ಯ ಸೇವನೆ ಮಾಡಬಹುದಾಗಿದೆ.

    “ಭಾರತವು ಆಧುನಿಕತೆಗೆ ತೆರೆದುಕೊಂಡಿದ್ದು, ಮದ್ಯದ ಕುರಿತು ಇದ್ದ ಕಲ್ಪನೆಯೇ ಬದಲಾಗಿಹೋಗಿದೆ. ಮನೆಯಲ್ಲಿ ಟಿ.ವಿ ನೋಡುತ್ತ, ಊಟ ಮಾಡುತ್ತಲೇ ವೈನ್‌ ಹೀರುವ, ಹೆಣ್ಣುಮಕ್ಕಳು ಕೂಡ ಮದ್ಯ ಸೇವನೆ ಮಾಡುವ ಪ್ರಮಾಣ ಜಾಸ್ತಿಯಾಗಿದೆ. ಇನ್ನು, ಮಳೆ, ಚಂಡಮಾರುತ ಸೇರಿ ಯಾವುದೇ ತುರ್ತು ಸಂದರ್ಭಗಳಲ್ಲಿ ಜನ ಮದ್ಯವನ್ನು ಮಳಿಗೆಗಳಿಗೆ ಹೋಗಿ ಖರೀದಿ ಮಾಡಲು ಆಗುವುದಿಲ್ಲ. ಇದಕ್ಕೆ ಆನ್‌ಲೈನ್‌ ಡೆಲಿವರಿಯು ಪ್ರಮುಖ ಉಪಾಯವಾಗಿದೆ” ಎಂದು ಆನ್‌ಲೈನ್‌ ಪ್ಲಾಟ್‌ಫಾರ್ಮ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

    ಕೊರೊನಾ ಲಾಕ್‌ಡೌನ್‌ ಸಂದರ್ಭದಲ್ಲಿ ಕೆಲವು ಕಡೆ ಆನ್‌ಲೈನ್‌ ಮೂಲಕ ಮದ್ಯದ ಪೂರೈಕೆ ವ್ಯವಸ್ಥೆ ಜಾರಿಗೆ ಬಂದಿತ್ತಾದರೂ ಅದು ದೇಶಾದ್ಯಂತ ಜಾರಿಗೊಳಿಸಲು ಸಾಧ್ಯವಾಗಿರಲಿಲ್ಲ. ಸದ್ಯ, ದೇಶದಲ್ಲಿ ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಮಾತ್ರ ಮದ್ಯವನ್ನು ಆನ್‌ಲೈನ್‌ ಮೂಲಕ ಹೋಮ್‌ ಡೆಲಿವರಿ ಮಾಡಲಾಗುತ್ತಿದೆ. ಇನ್ನು ಕೆಲವೇ ತಿಂಗಳಲ್ಲಿ ದೇಶಾದ್ಯಂತ ಈ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ತಿಳಿದುಬಂದಿದೆ.

    ಇದನ್ನೂ ಓದಿ: Murder Case: ಮದ್ಯಪಾನ ಮಾಡಿ ಬಂದು ಅಜ್ಜಿಯನ್ನೇ ಕೊಂದ ಅಪ್ರಾಪ್ತ ಬಾಲಕ

    Continue Reading

    ಕರ್ನಾಟಕ

    7th Pay Commission: ರಜೆ, ಪಿಂಚಣಿ, ಬಡ್ತಿ; 7ನೇ ವೇತನ ಆಯೋಗದ ಜಾರಿ ಬಳಿಕ ಸಂಬಳದ ಜತೆ ಏನೆಲ್ಲ ಸೌಲಭ್ಯ ಸಿಗಲಿವೆ? ಇಲ್ಲಿದೆ ಮಾಹಿತಿ

    7th Pay Commission: ಏಳನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಆಗಸ್ಟ್‌ 1ರಿಂದಲೇ ಏಳನೇ ವೇತನ ಆಯೋಗದ ಶಿಫಾರಸುಗಳು ಜಾರಿಗೆ ಬರಲಿವೆ. ಇದರಿಂದ ಕರ್ನಾಟಕದ ಲಕ್ಷಾಂತರ ನೌಕರರಿಗೆ ಹಾಗೂ ನಿವೃತ್ತ ನೌಕರರಿಗೆ ಅನುಕೂಲವಾಗಲಿದೆ. ಹಾಗಾದರೆ, ರಾಜ್ಯ ಸರ್ಕಾರವು ಏಳನೇ ವೇತನ ಆಯೋಗದ ಜಾರಿಗೆ ತೀರ್ಮಾನಿಸಲು ಕಾರಣಗಳು ಏನೇನು? ಆಯೋಗದ ಶಿಫಾರಸುಗಳು ಏನಿದ್ದವು ಎಂಬುದರ ಮಾಹಿತಿ ಇಲ್ಲಿದೆ.

    VISTARANEWS.COM


    on

    7th Pay Commission
    Koo

    ಬೆಂಗಳೂರು: ಕರ್ನಾಟಕದಲ್ಲಿ ರಾಜ್ಯ 7ನೇ ವೇತನ ಆಯೋಗದ (7th Pay Commission) ಶಿಫಾರಸುಗಳನ್ನು ಆಗಸ್ಟ್‌ 1ರಿಂದಲೇ ಜಾರಿಗೆ ತರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಏಳನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದರಿಂದಾಗಿ ರಾಜ್ಯದ 5 ಲಕ್ಷ ಸರ್ಕಾರಿ ನೌಕರರು ಹಾಗೂ 5 ಲಕ್ಷ ನಿವೃತ್ತ ನೌಕರರಿಗೆ ಭಾರಿ ಅನುಕೂಲವಾಗಲಿದೆ. ಹಾಗಾದರೆ, ಕರ್ನಾಟಕ ಸರ್ಕಾರವು (Karnataka Government) 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ಮನಸ್ಸು ಮಾಡಿದ್ದು ಏಕೆ? ಶಿಫಾರಸುಗಳು ಏನಿದ್ದವು ಎಂಬುದರ ಕಿರು ಮಾಹಿತಿ ಹೀಗಿದೆ…

    ವೇತನ ಆಯೋಗದ ಪ್ರಮುಖ ಶಿಫಾರಸುಗಳು

    1. 7ನೇ ರಾಜ್ಯ ವೇತನ ಆಯೋಗವು ಶೇ.31 ತುಟ್ಟಿ ಭತ್ಯೆಯನ್ನು ವಿಲೀನಗೊಳಿಸುವ ಮೂಲಕ ಮತ್ತು ಶೇ.27.50ರಷ್ಟು ಫಿಟ್‌ಮೆಂಟ್ ಪ್ರಯೋಜನವನ್ನು ಒದಗಿಸುವ ಮೂಲಕ ರಾಜ್ಯ ಸರ್ಕಾರಿ ನೌಕರರ ಕನಿಷ್ಠ ಮೂಲ ವೇತನವನ್ನು ತಿಂಗಳಿಗೆ ಅಸ್ತಿತ್ವದಲ್ಲಿರುವ ರೂ.17,000 ರಿಂದ ರೂ.27,000ಕ್ಕೆ ಪರಿಷ್ಕರಿಸುವುದು.

    2. ವೇತನ ರಚನೆಯಲ್ಲಿ ಕನಿಷ್ಠ ಮತ್ತು ಗರಿಷ್ಠ ವೇತನದ ನಡುವೆ ಅಸ್ತಿತ್ವದಲ್ಲಿರುವ 1:8.86 ರ ಅನುಪಾತವನ್ನು ಹೆಚ್ಚು ಕಡಿಮೆ ಹಾಗೇ ಉಳಿಸಿಕೊಳ್ಳುವುದು ಮತ್ತು ಗರಿಷ್ಠ ವೇತನವನ್ನು 2,41,200 ರೂ.ಗೆ ನಿಗದಿಪಡಿಸುವುದು.

    3. ಹೊಸ ವೇತನ ಶ್ರೇಣಿಗಳನ್ನು ದಿನಾಂಕ: 01.07.2022 ರಿಂದ ಕಾಲ್ಪನಿಕವಾಗಿ ಅನ್ವಯಿಸುತ್ತದೆ. ಅನುಷ್ಠಾನಗೊಳಿಸುವ ನೈಜ್ಯ ದಿನಾಂಕವನ್ನು ರಾಜ್ಯ ಸರ್ಕಾರವು ನಿರ್ಧರಿಸುವುದು.

    4. ನೌಕರರ ಕುಟುಂಬದ ಕನಿಷ್ಠ ಬಳಕೆ ವೆಚ್ಚದ ಲೆಕ್ಕಾಚಾರಕ್ಕಾಗಿ ಬಳಸಲಾಗುವ ಅಕ್ರೋಯ್ತಾ
    ಸೂತ್ರವನ್ನು ಚಾಲ್ತಿಯಲ್ಲಿರುವ ‘1’ ಮತ್ತು ‘0.8’, ರ ಪ್ರಮಾಣದ ಬದಲಿಗೆ ಪ್ರಾತಿನಿಧಿಕ ಕುಟುಂಬದ
    ವಯಸ್ಕ ಪುರುಷ ಮತ್ತು ಮಹಿಳಾ ಸದಸ್ಯರಿಗೆ ‘1’ ಸಮಾನ ಪ್ರಮಾಣವನ್ನು ನೀಡುವ ಮೂಲಕ, ಎರಡೂ ಲಿಂಗಗಳನ್ನು ಸಮಾನವಾಗಿ ಪರಿಗಣಿಸಿ, ಸ್ವಲ್ಪ ಮಟ್ಟಿಗೆ ಮಾರ್ಪಡಿಸಲಾಗಿದೆ.

    5. ಪರಿಷ್ಕೃತ ಪ್ರತ್ಯೇಕ (Individual) ವೇತನ ಶ್ರೇಣಿಗಳೊಂದಿಗೆ, ಪರಿಷ್ಕೃತ ಮುಖ್ಯ ಶ್ರೇಣಿಯನ್ನು ರೂಪಿಸಲಾಗಿದೆ. ಚಾಲ್ತಿಯಲ್ಲಿರುವ ರೂ.400ರಿಂದ ರೂ.3,100ರ ಬದಲಿಗೆ ವಾರ್ಷಿಕ ಬಡ್ತಿ ದರಗಳು ಮುಖ್ಯ ಶ್ರೇಣಿಯಾದ್ಯಂತ ರೂ.650 ರಿಂದ ರೂ.5,000 ವರೆಗೆ ಆಗಿರುತ್ತದೆ.

    6. ಪ್ರಸ್ತುತ ಜಾರಿಯಲ್ಲಿರುವಂತೆ, ಒಂದು ಕ್ಯಾಲೆಂಡರ್ ವರ್ಷದಲ್ಲಿ 1ನೇ ಜನವರಿ ಅಥವಾ 1ನೇ ಜುಲೈನಲ್ಲಿ ವಾರ್ಷಿಕ ಬಡ್ತಿ ದರಗಳನ್ನು ಮಂಜೂರು ಮಾಡುವುದನ್ನು ಮುಂದುವರುಸಲು ಆಯೋಗವು ಶಿಫಾರಸು ಮಾಡುತ್ತದೆ.

    7. ಕೇಂದ್ರದ ತುಟ್ಟಿ ಭತ್ಯೆ ಸೂತ್ರ ಮತ್ತು ಮಾದರಿಯನ್ನು ಅಳವಡಿಸಿಕೊಳ್ಳುವುದನ್ನು ಮುಂದುವರಿಸಲಾಗುತ್ತದೆ. ದಿನಾಂಕ: 01.07.2022 ರಂತೆ 361.704 ಸೂಚ್ಯಂಕ ಮಟ್ಟದಲ್ಲಿ ಸಂಪೂರ್ಣವಾಗಿ ತಟಸ್ಥಗೊಂಡಿರುವ ತುಟ್ಟಿ ಭತ್ಯೆಯೊಂದಿಗೆ, ದಿನಾಂಕ: 01.07.2022 ರಿಂದ, ಭಾರತ ಸರ್ಕಾರವು ಮಂಜೂರು ಮಾಡಿದ ಪ್ರತಿ ಶೇ.1 ರಷ್ಟು ತುಟ್ಟಿಭತ್ಯೆಗೆ, ರಾಜ್ಯ ಸರ್ಕಾರಿ ನೌಕರರಿಗೆ ಮಂಜೂರು ಮಾಡಬೇಕಾದ ತುಟ್ಟಿಭತ್ಯೆಯು ಪರಿಷ್ಕೃತ ಮೂಲ ವೇತನದ ಶೇ.0.722 ರಷ್ಟು ಆಗಿರುತ್ತದೆ.

    8. ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು, ಸ್ಥಳೀಯ ಸಂಸ್ಥೆಗಳು ಮತ್ತು ವಿಶ್ವವಿದ್ಯಾನಿಲಯಗಳ ಬೋಧಕೇತರ ಸಿಬ್ಬಂದಿಯ ವೇತನ ಶ್ರೇಣಿಗಳನ್ನು ರಾಜ್ಯ ಸರ್ಕಾರಿ ನೌಕರರಿಗೆ ಪರಿಷ್ಕರಿಸಿದ ರೀತಿಯಲ್ಲಿಯೇ ಪರಿಷ್ಕರಿಸಬೇಕು.

    9. ರಾಜ್ಯ ಸರ್ಕಾರವು, ಕೇಂದ್ರದ ವೇತನ ರಚನೆಯನ್ನು ಅಳವಡಿಸಿಕೊಳ್ಳಲು ಒಂದು ವಿಧಾನವನ್ನು ಆಯೋಗವು ರೂಪಿಸಿದೆ. ಆದಾಗ್ಯೂ ಪ್ರಸ್ತುತ, ರಾಜ್ಯ ಸರ್ಕಾರವು ಮುಖ್ಯ ಶ್ರೇಣಿ ಮತ್ತು ವಿಭಜಿತ ಪ್ರತ್ಯೇಕ ವೇತನ ಶ್ರೇಣಿಗಳನ್ನು ಒಳಗೊಂಡಿರುವ ಅಸ್ತಿತ್ವದಲ್ಲಿರುವ ವೇತನದ ಮಾದರಿಯನ್ನು ರಾಜ್ಯ ಸರ್ಕಾರವು ಉಳಿಸಿಕೊಳ್ಳುವುದು ಸೂಕ್ತವೆಂದು ಅಭಿಪ್ರಾಯಪಟ್ಟಿದೆ. ಭಾರತ ಸರ್ಕಾರವು ತನ್ನ ನೌಕರರಿಗೆ ಮುಂದಿನ ವೇತನವನ್ನು ಪರಿಷ್ಕರಿಸಿದಾಗ ರಾಜ್ಯ ಸರ್ಕಾರವು ಕೇಂದ್ರೀಯ ವೇತನ ರಚನೆಯ ಆಧಾರದ ಮೇಲೆ ಪರ್ಯಾಯ ರಚನೆಯನ್ನು ಅಳವಡಿಸಿಕೊಳ್ಳಲು ಸೂಕ್ತ ಸಮಯವಾಗಿರುತ್ತದೆ.

    10. ಮಾಸಿಕ ಪಿಂಚಣಿ ಪ್ರಮಾಣವು ಅಂತಿಮವಾಗಿ ಪಡೆದ ಮೂಲ ವೇತನದ ಶೇ.50ರಷ್ಟರಲ್ಲಿಯೇ ಮುಂದುವರಿಯುತ್ತದೆ ಮತ್ತು ಕುಟುಂಬ ಪಿಂಚಣಿಯು ಅಂತಿಮವಾಗಿ ಪಡೆದ ಮೂಲ ವೇತನದ ಶೇ.30ರಷ್ಟು ಮುಂದುವರಿಯುತ್ತದೆ. ಅದರಂತೆ, ಕನಿಷ್ಠ ಪಿಂಚಣಿಯನ್ನು ರೂ.13,500 (ಕನಿಷ್ಠ ವೇತನ ರೂ. 27,000ರ ಶೇ.50 ರಷ್ಟು) ಮತ್ತು ಗರಿಷ್ಠ ಪಿಂಚಣಿಯನ್ನು ರೂ.1,20,600 (ಗರಿಷ್ಠ ರೂ.2,41,200 ವೇತನದ ಶೇ.50 ರಷ್ಟು) ಪರಿಷ್ಕರಿಸುವುದು.

    11. 70-80 ವರ್ಷ ವಯಸ್ಸಿನ ಪಿಂಚಣಿದಾರರಿಗೆ ಮೂಲ ಪಿಂಚಣಿಯ ಹೆಚ್ಚುವರಿ ಶೇ.10 ರಷ್ಟನ್ನು ಆಯೋಗವು ಶಿಫಾರಸು ಮಾಡುತ್ತದೆ.

    Cash

    12. ಆಯೋಗವು ಪಿಂಚಣಿದಾರರು ಮತ್ತು ಕುಟುಂಬ ಪಿಂಚಣಿದಾರರನ್ನು ಒಳಗೊಳ್ಳುವ ಉದ್ದೇಶಿತ “ಸಂಧ್ಯಾಕಿರಣ” ಯೋಜನೆಯನ್ನು ತ್ವರಿತವಾಗಿ ಜಾರಿಗೊಳಿಸಲು ಒತ್ತಾಯಿಸುತ್ತದೆ ಮತ್ತು ಈ ಮಧ್ಯೆ, ರಾಜ್ಯ ಸರ್ಕಾರವು ಈ ಯೋಜನೆಯ ಅನುಷ್ಠಾನವನ್ನು ಪ್ರಾರಂಭಿಸುವವರೆಗೆ ಎಲ್ಲಾ ಪಿಂಚಣಿದಾರರು ಮತ್ತು ಕುಟುಂಬ ಪಿಂಚಣಿದಾರರಿಗೆ ವೈದ್ಯಕೀಯ ಭತ್ಯೆಯಾಗಿ ತಿಂಗಳಿಗೆ ರೂ.500 ಪಾವತಿಸುವುದು.

    13. ಪಿಂಚಣಿದಾರರು ಆತ ಅಥವಾ ಆಕೆಯು ಮರಣದ ಹೊಂದಿದಲ್ಲಿ, ಅವರ ಅಂತ್ಯಕ್ರಿಯೆ ವೆಚ್ಚಗಳನ್ನು ಭರಿಸಲು ರೂ.10,000 ಗಳ ಮೊತ್ತವನ್ನು ಪಿಂಚಣಿದಾರರ ನಾಮ ನಿರ್ದೇಶಿತನಿಗೆ ಪಾವತಿಸುವುದು.

    14. ಕರ್ನಾಟಕ ಸರ್ಕಾರಿ ನೌಕರರ (ಕುಟುಂಬ ಪಿಂಚಣಿ) ನಿಯಮಗಳು, 2002ರಲ್ಲಿ ಮಹಿಳಾ ಸರ್ಕಾರಿ ನೌಕರರು / ಪಿಂಚಣಿದಾರರು ತಮ್ಮ ಮಗು / ಮಕ್ಕಳನ್ನು ಕೆಲವು ಸಂದರ್ಭಗಳಲ್ಲಿ ಸಂಗಾತಿಯ ಬದಲಿಗೆ ಕುಟುಂಬ ಪಿಂಚಣಿಗೆ ನಾಮ ನಿರ್ದೇಶನ ಮಾಡಲು ಅವಕಾಶ ಕಲ್ಪಿಸಬಹುದು ಎಂದು ಆಯೋಗವು ಪ್ರಸ್ತಾಪಿಸಿದೆ.

    15. ಎ, ಬಿ ಮತ್ತು ಸಿ ಸ್ಥಳಗಳ ಮೂರು ವರ್ಗಗಳಿಗೆ ಅಸ್ತಿತ್ವದಲ್ಲಿರುವ ಶೇ.24, ಶೇ.16 ಮತ್ತು ಶೇ.8 ರಿಂದ ಪರಿಷ್ಕೃತ ಮೂಲ ವೇತನದ ಕನಿಷ್ಠ ಶೇ.20, ಶೇ.15 ಮತ್ತು ಶೇ. 7.5 ಕ್ಕೆ ಅನುಕ್ರಮವಾಗಿ ಮನೆ ಬಾಡಿಗೆ ದರಗಳನ್ನು ಪರಿಷ್ಕರಿಸಲಾಗಿದೆ. ಶಿಫಾರಸು ಮಾಡಲಾದ ಪರಿಷ್ಕೃತ ವೇತನ ಶ್ರೇಣಿಗಳ ಆಧಾರದ ಮೇಲೆ, ಇದು 3 ವರ್ಗಗಳಿಗೆ ತಿಂಗಳಿಗೆ ರೂ.1,320, ರೂ.1,330 ಮತ್ತು ರೂ.690 ಅನುಕ್ರಮವಾಗಿ ಹೆಚ್ಚಳವಾಗಿರುವುದರಿಂದ ನಿಶ್ಚಳವಾಗಿ ಮನೆ ಬಾಡಿಗೆ ಭತ್ಯೆಯಲ್ಲಿ ಸುಮಾರು ಶೇ.40 ರಷ್ಟು ಹೆಚ್ಚಳವಾಗಿದೆ.

    16. ಸೋಲಾರ್ ವಾಟರ್ ಹೀಟರ್, ಸೋಲಾರ್ ಕುಕ್ಕರ್. ಮೊಪೆಡ್ ಮತ್ತು ಮೋಟಾರು ವಾಹನಗಳ ದುರಸ್ತಿ ಮತ್ತು ಉಪಕರಣಗಳಿಗೆ ಮುಂಗಡಗಳನ್ನು ಸ್ಥಗಿತಗೊಳಿಸುವುದು.

    17. ವೃಂದ ಎ ನೌಕರರಿಗೆ ಗರಿಷ್ಠ ರೂ.65 ಲಕ್ಷ ಮತ್ತು ಇತರ ನೌಕರರಿಗೆ ರೂ.40 ಲಕ್ಷಗಳ ಗೃಹ ನಿರ್ಮಾಣ ಭತ್ಯೆಯನ್ನು ಪರಿಷ್ಕರಿಸಿದೆ. ನೌಕರರ ಸೇವಾವಧಿಯಲ್ಲಿ ರಜೆ ಪ್ರಯಾಣ ಭತ್ಯೆಯ ಪ್ರಯೋಜನವನ್ನು ಎರಡು ಬಾರಿಯಿಂದ ಮೂರು ಬಾರಿಗೆ ಹೆಚ್ಚಿಸುವುದು.

    18. ಸರ್ಕಾರಿ ನೌಕರರ ತರಬೇತಿಯ ಗುಣಮಟ್ಟವನ್ನು ಸುಧಾರಿಸುವುದಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಬೇಕೆಂದು ಗುರುತಿಸಿ, ತರಬೇತಿ ಸಂಸ್ಥೆಗಳಲ್ಲಿನ ಅಧ್ಯಾಪಕರ ಗುಣಮಟ್ಟವನ್ನು ಹೆಚ್ಚಿಸಲು, ಎಲ್ಲ ಸರ್ಕಾರಿ ತರಬೇತಿ ಸಂಸ್ಥೆಗಳಲ್ಲಿ ನಿಯೋಜಿತ ಅಥವಾ ಅಧ್ಯಾಪಕರಾಗಿ ನೇಮಕಗೊಂಡ ನೌಕರರಿಗೆ ಅಸ್ತಿತ್ವದಲ್ಲಿರುವ ವಿಶೇಷ ಭತ್ಯೆಯನ್ನು ಶೇ.25ಕ್ಕೆ ಹೆಚ್ಚಿಸುವುದು.

    19. ಪೋಷಕರು ಅಥವಾ ಅತ್ತೆ/ಮಾವಂದಿರು ಅಥವಾ ಕುಟುಂಬದ ಹಿರಿಯರು ಅಥವಾ ಗಂಭೀರ ಅನಾರೋಗ್ಯದಿಂದ ಬಳಲುತ್ತಿರುವ ಸಣ್ಣ ಮಕ್ಕಳನ್ನು ಆರೈಕೆ ಮಾಡಲು ನೌಕರರಿಗೆ ಆರೈಕೆ ರಜೆ ಎಂಬ ಹೊಸ ಪ್ರಯೋಜನವನ್ನು ಒದಗಿಸಬೇಕೆಂದು ಹಾಗೂ ರಜೆಯ ಅವಧಿಯಲ್ಲಿ ಶೇ.50 ರಷ್ಟು ವೇತನದೊಂದಿಗೆ ಈ ರಜೆಯ ಗರಿಷ್ಠ ಅವಧಿಯು 180 ದಿನಗಳಿಗೆ (6 ತಿಂಗಳು) ನಿಗದಿಪಡಿಸಲು ಆಯೋಗವು ಶಿಫಾರಸು ಮಾಡಿದೆ.

    20. ಸೇವೆಗೆ ಸೇರುವ 60 ದಿನಗಳ ಮೊದಲು ಮಗುವಿಗೆ ಜನ್ಮ ನೀಡಿದ ಮಹಿಳಾ ಸರ್ಕಾರಿ ನೌಕರರಿಗೆ ಸೇವೆಗೆ ಸೇರುವ ಸಮಯದಲ್ಲಿ ನವಜಾತ ಶಿಶುವಿನ ಆರೈಕೆಯ ಅವಧಿಯಲ್ಲಿ ಇರುವವರಿಗೆ 18 ವಾರಗಳ ಹೆರಿಗೆ ರಜೆಯನ್ನು ಶಿಫಾರಸು ಮಾಡಿದೆ.

    ಇದನ್ನೂ ಓದಿ: 7th Pay Commission: 7ನೇ ವೇತನ ಆಯೋಗ ಜಾರಿ; ನೌಕರರ ಸಂಬಳ ಎಷ್ಟು ಹೆಚ್ಚಾಗಲಿದೆ? ಇಲ್ಲಿದೆ ಪಟ್ಟಿ

      Continue Reading

      ಪ್ರಮುಖ ಸುದ್ದಿ

      Actor Darshan: ರೇಣುಕಾ ಸ್ವಾಮಿ ದೇಹ ಪೋಸ್ಟ್‌ ಮಾರ್ಟಮ್‌ ಮಾಡಿದ ವೈದ್ಯ ಪವಿತ್ರ ಗೌಡ ಆಪ್ತೆಯ ಪತಿ!

      Actor Darshan: ಶಾಕಿಂಗ್ ಸಂಗತಿ ಏನು ಅಂದರೆ ರೇಣುಕಾ ಸ್ವಾಮಿಯ ಶವ ಪೋಸ್ಟ್‌ಮಾರ್ಟಮ್ ಮಾಡಿದ್ದೇ ಸಮತಳ ಪತಿ! ಸಮತ ಪತಿ ಡಾ. ಸುರೇಶ್ ಅವರಿಂದ ರೇಣುಕಾ ಸ್ವಾಮಿ ಶವದ ಮರಣೋತ್ತರ ಪರೀಕ್ಷೆ ನಡೆದಿತ್ತು. ಆ ಮರಣೋತ್ತರ ಪರೀಕ್ಷೆ ಪೊಲೀಸರ ಕೈ ಸೇರುವ ಮೊದಲೇ ಜೈಲಿನಲ್ಲಿ ದರ್ಶನ್ ಹಾಗೂ ಪವಿತ್ರರನ್ನು ಸಮತ ಭೇಟಿ ಮಾಡಿದ್ದಳು.

      VISTARANEWS.COM


      on

      actor darshan samata husband
      Koo

      ಬೆಂಗಳೂರು: ನಟ ದರ್ಶನ್ (Actor Darshan) ಗ್ಯಾಂಗ್‌ನಿಂದ ನಡೆದ ರೇಣುಕಾಸ್ವಾಮಿ ಕೊಲೆ (Renuka Swamy Murder) ಪ್ರಕರಣದ ವಿಚಾರಣೆಗೆ ಮತ್ತೊಂದು ಟ್ವಿಸ್ಟ್‌ ದೊರೆತಿದೆ. ಮೃತ ರೇಣುಕಾಸ್ವಾಮಿ ಶವ ಪೋಸ್ಟ್‌ ಮಾರ್ಟಮ್‌ (Post Martem) ನಡೆಸಿದ ವೈದ್ಯ ಬೇರೆ ಯಾರೂ ಅಲ್ಲ, ಜೈಲಿನಲ್ಲಿ ದರ್ಶನ್‌ ಹಾಗೂ ಪವಿತ್ರ ಗೌಡ (Pavitra Gowda) ಅವರನ್ನು ಭೇಟಿಯಾಗಿದ್ದ ಪವಿತ್ರ ಆಪ್ತೆ ಸಮತ ಅವರ ಪತಿ!

      ಅಂದರೆ, ಈ ಪ್ರಕರಣದ ಸಾಕ್ಷ್ಯಗಳನ್ನು ತಿರುಚುವಲ್ಲಿ ಸಮತ ಕೈವಾಡ ಇದೆಯಾ, ಇದ್ದರೆ ಎಷ್ಟು ಎನ್ನುವ ಬಗ್ಗೆ ಈಗ ಪೊಲೀಸರು ತಲೆ ಕೆಡಿಸಿಕೊಂಡಿದ್ದಾರೆ. ಆ ಶಾಕಿಂಗ್ ಸ್ಟೋರಿಯ ಕಥನಾಯಕಿಯೇ ಪವಿತ್ರಗೌಡ ಸ್ನೇಹಿತೆ ಸಮತ. ಕೊಲೆ ಕೇಸ್‌ನಲ್ಲಿ ಜೈಲುಪಾಲಾಗಿರುವ ಪವಿತ್ರ ಗೌಡಳನ್ನು ಸಮತ ಭೇಟಿ ಮಾಡಿದ್ದಳು. ಪವಿತ್ರ ಗೌಡ ಮಾತ್ರವಲ್ಲದೇ ದರ್ಶನ್ ಜೊತೆಗೂ ಮಾತುಕತೆ ನಡೆಸಿದ್ದಳು. ಸಮತಳ ಜೈಲು ಭೇಟಿಯಿಂದ ತನಿಖಾಧಿಕಾರಿಗಳ ತಲೆಯಲ್ಲಿ ಅನುಮಾನ ಮೂಡಿತ್ತು. ಡೌಟ್ ಹಿನ್ನೆಲೆಯಲ್ಲಿ, ವಿಚಾರಣೆಗೆ ಹಾಜರಾಗುವಂತೆ ತನಿಖಾಧಿಕಾರಿ ನೋಟೀಸ್ ನೀಡಿದ್ದರು.

      ಸಮತಳನ್ನು ಆಡುಗೋಡಿ ಟೆಕ್ನಿಕಲ್ ಸೆಲ್‌ನಲ್ಲಿ ತೀವ್ರವಾಗಿ ವಿಚಾರಣೆಗೆ ಒಳಪಡಿಸಿದಾಗ, ಪೊಲೀಸರೇ ಒಂದು ಕ್ಷಣ ಶಾಕ್ ಆಗುವಂಥ ಸಂಗತಿ ಬೆಳಕಿಗೆ ಬಂದಿತ್ತು. ಆ ವಿಚಾರ, ರೇಣುಕ ಸ್ವಾಮಿ ದೇಹದ ಪೋಸ್ಟ್‌ಮಾರ್ಟಮ್ ಮಾಡಿದ ವೈದ್ಯರ ಮೇಲೂ ಪೊಲೀಸರಿಗೆ ಅನುಮಾನ ಮೂಡಿಸುವಂತಿತ್ತು. ಆ ಅನುಮಾನ ಮೂಡಲು ಕಾರಣವಾದದ್ದು ಸಮತಳ ಪತಿಯ ವರ್ತನೆ. ಸಮತಳಿಂದ ಪವಿತ್ರ ಗೌಡ ಹಾಗೂ ದರ್ಶನ್ ಭೇಟಿ ಬಳಿಕ ಕೇಸ್‌ನಲ್ಲಿ ಈ ಬಿಗ್ ಟ್ವಿಸ್ಟ್ ದೊರೆತಿದೆ.

      ಶಾಕಿಂಗ್ ಸಂಗತಿ ಏನು ಅಂದರೆ ರೇಣುಕಾ ಸ್ವಾಮಿಯ ಶವ ಪೋಸ್ಟ್‌ಮಾರ್ಟಮ್ ಮಾಡಿದ್ದೇ ಸಮತಳ ಪತಿ! ಸಮತ ಪತಿ ಡಾ. ಸುರೇಶ್ ಅವರಿಂದ ರೇಣುಕಾ ಸ್ವಾಮಿ ಶವದ ಮರಣೋತ್ತರ ಪರೀಕ್ಷೆ ನಡೆದಿತ್ತು. ಆ ಮರಣೋತ್ತರ ಪರೀಕ್ಷೆ ಪೊಲೀಸರ ಕೈ ಸೇರುವ ಮೊದಲೇ ಜೈಲಿನಲ್ಲಿ ದರ್ಶನ್ ಹಾಗೂ ಪವಿತ್ರರನ್ನು ಸಮತ ಭೇಟಿ ಮಾಡಿದ್ದಳು. ಹಾಗಾದರೆ ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿದ್ದುವ ಯತ್ನ ನಡೆದಿತ್ತೇ? ಈ ಅನುಮಾನದಲ್ಲಿ ಸಮತಳನ್ನು ತನಿಖಾ ತಂಡ ತೀವ್ರ ವಿಚಾರಣೆಗೆ ಒಳಪಡಿಸಿತ್ತು.

      ತನಿಖೆಗೊಳಪಡಿಸಿ ಸಮತ ನೀಡಿದ ಹೇಳಿಕೆಯನ್ನು ಪೊಲೀಸರು ದಾಖಲು ಮಾಡಿಕೊಂಡಿದ್ದಾರೆ. ಜೊತೆಗೆ ಸಮತ ಪತಿ ಡಾ. ಸುರೇಶ್ ಅವರ ಕಾಲ್ ಡಿಟೇಲ್ಸ್, ಚಾಟಿಂಗ್ಸ್ ಪರಿಶೀಲಿಸಲಾಗಿದೆ. ರೇಣುಕಾ ಸ್ವಾಮಿ ಶವ ಮರಣೋತ್ತರ ಪರೀಕ್ಷೆ ನಡೆಸುವ ವೇಳೆ, ತಮ್ಮ ಡ್ಯೂಟಿಗೆ ರಜೆ ಇದ್ದರೂ ಸುರೇಶ್‌ ಕರ್ತವ್ಯಕ್ಕೆ ಹಾಜರಾಗಿದ್ದರು. ತಾನೇ ಖುದ್ದು ಮುಂದೆ ನಿಂತು ರೇಣುಕಾಸ್ವಾಮಿ ಶವ ಮರಣೋತ್ತರ ಪರೀಕ್ಷೆ ಮಾಡಿಸಿದ್ದರು.

      ಪವಿತ್ರ ಗೌಡ ಕ್ಲೋಸ್ ಫ್ರೆಂಡ್ ಪತಿಯಾಗಿರುವ ಕಾರಣ ಮರಣೋತ್ತರ ಪರೀಕ್ಷೆ ವರದಿಯನ್ನು ಮತ್ತೊಮ್ಮೆ ಪರಿಶೀಲನೆ ಮಾಡಲಾಗುತ್ತಿದೆ. ಪರಿಶೀಲನೆ ನಡೆಸಿ ಡಾ. ಪ್ರದೀಪ್ ಎಂಬ ವೈದ್ಯರಿಂದ ಪೊಲೀಸರಿಗೆ ಮತ್ತೆ ಮರಣೋತ್ತರ ಪರೀಕ್ಷಾ ವರದಿ ಸಲ್ಲಿಕೆ ಮಾಡಲಾಗುತ್ತಿದೆ. ಜೈಲಿಗೆ ತರಾತುರಿಯಿಂದ ಬಂದು ದರ್ಶನ್‌ ಹಾಗೂ ಪವಿತ್ರರನ್ನು ಭೇಟಿಯಾದದ್ದೇ ಇದೀಗ ಈ ಪ್ರಕರಣದ ಸಾಕ್ಷಿ ನಾಶದ ಪ್ರಯತ್ನದಲ್ಲಿ ಇನ್ನೊಂದು ಬಿಗ್‌ ಟ್ವಿಸ್ಟ್‌ ನೀಡಿದೆ.

      ಇದನ್ನೂ ಓದಿ: Actor Darshan: ಪವಿತ್ರಾ ಗೌಡ ಆರೋಗ್ಯದಲ್ಲೂ ಏರುಪೇರು; ಚಿಕಿತ್ಸೆ ನೀಡಿದ ವೈದ್ಯರು

      Continue Reading
      Advertisement
      Rakshit Shetty Richard Anthony Produce By Hombale
      ಅವಿಭಾಗೀಕೃತ1 second ago

      Actor Mithra: ಖಡಕ್‌ ವಿಲನ್‌ ಆಗಿ ʼಕರಾವಳಿʼಯಲ್ಲಿ ಅಬ್ಬರಿಸಲಿದ್ದಾರೆ ಕಾಮಿಡಿ ಸ್ಟಾರ್ ಮಿತ್ರ; ಕಾಲಿವುಡ್‌ಗೂ ಎಂಟ್ರಿ

      Rohit Sharma
      ಕ್ರೀಡೆ15 mins ago

      Rohit Sharma: ‘ಎಲಾ ಉನ್ನಾರು?’; ತೆಲುಗಿನಲ್ಲಿ ಮಾತನಾಡಿದ ರೋಹಿತ್ ಶರ್ಮ; ವಿಡಿಯೊ ವೈರಲ್​

      karnataka rain
      ಮಳೆ30 mins ago

      Karnataka Rain : ಚಿಕ್ಕಮಗಳೂರು, ಹಾಸನದಲ್ಲಿ ಭಾರಿ ಮಳೆಗೆ ಮನೆಗಳು ನೆಲಸಮ

      ಪ್ರಮುಖ ಸುದ್ದಿ38 mins ago

      Karnataka Assembly Live: ಡಿಸಿಎಂ ಡಿಕೆ ಶಿವಕುಮಾರ್-‌ ಅಶ್ವಥ್‌ ನಾರಾಯಣ್‌ ವಾಗ್ಯುದ್ಧ; ಗದ್ದಲ

      Alcohol Delivery
      ದೇಶ41 mins ago

      Alcohol Delivery: ಎಣ್ಣೆ ಪ್ರಿಯರಿಗೆ ಗುಡ್‌ ನ್ಯೂಸ್;‌ ಇನ್ನು ಸ್ವಿಗ್ಗಿಯಲ್ಲಿ ಮನೆ ಬಾಗಿಲಿಗೆ ಬರಲಿದೆ ಆಲ್ಕೋಹಾಲ್!

      Doda Encounter
      ದೇಶ43 mins ago

      Doda Encounter: ಜಮ್ಮು- ಕಾಶ್ಮೀರದಲ್ಲಿ ಉಗ್ರರ ದಾಳಿ; ಬಿಜೆಪಿಯ ತಪ್ಪು ನೀತಿಯೇ ಕಾರಣ ಎಂದ ರಾಹುಲ್‌ ಗಾಂಧಿ

      7th Pay Commission
      ಕರ್ನಾಟಕ1 hour ago

      7th Pay Commission: ರಜೆ, ಪಿಂಚಣಿ, ಬಡ್ತಿ; 7ನೇ ವೇತನ ಆಯೋಗದ ಜಾರಿ ಬಳಿಕ ಸಂಬಳದ ಜತೆ ಏನೆಲ್ಲ ಸೌಲಭ್ಯ ಸಿಗಲಿವೆ? ಇಲ್ಲಿದೆ ಮಾಹಿತಿ

      IND vs SL
      ಕ್ರಿಕೆಟ್1 hour ago

      IND vs SL: ಶ್ರೀಲಂಕಾ ಪ್ರವಾಸಕ್ಕೆ ಇಂದು ಭಾರತ ತಂಡ ಪ್ರಕಟ ಸಾಧ್ಯತೆ: ಯಾರಿಗೆಲ್ಲ ಸಿಗಲಿದೆ ಅವಕಾಶ?

      Gauri Lankesh murder
      ಕ್ರೈಂ1 hour ago

      Gauri Lankesh Murder: ಗೌರಿ ಲಂಕೇಶ್‌ ಹತ್ಯೆ ಪ್ರಕರಣದ 3 ಆರೋಪಿಗಳಿಗೆ ಜಾಮೀನು

      karnataka Rain
      ಮಳೆ1 hour ago

      Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

      Sharmitha Gowda in bikini
      ಕಿರುತೆರೆ9 months ago

      Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

      Kannada Serials
      ಕಿರುತೆರೆ9 months ago

      Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

      Bigg Boss- Saregamapa 20 average TRP
      ಕಿರುತೆರೆ9 months ago

      Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

      galipata neetu
      ಕಿರುತೆರೆ8 months ago

      Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

      Kannada Serials
      ಕಿರುತೆರೆ10 months ago

      Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

      Kannada Serials
      ಕಿರುತೆರೆ9 months ago

      Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

      Bigg Boss' dominates TRP; Sita Rama fell to the sixth position
      ಕಿರುತೆರೆ9 months ago

      Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

      geetha serial Dhanush gowda engagement
      ಕಿರುತೆರೆ7 months ago

      Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

      varun
      ಕಿರುತೆರೆ8 months ago

      Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

      Kannada Serials
      ಕಿರುತೆರೆ10 months ago

      Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

      karnataka Rain
      ಮಳೆ1 hour ago

      Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

      karnataka Weather Forecast
      ಮಳೆ19 hours ago

      Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

      karnataka Rain
      ಮಳೆ1 day ago

      Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

      karnataka weather Forecast
      ಮಳೆ1 day ago

      Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

      Karnataka Rain
      ಮಳೆ2 days ago

      Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

      karnataka Rain
      ಮಳೆ2 days ago

      Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

      haveri News
      ಹಾವೇರಿ2 days ago

      Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

      karnataka Rain
      ಮಳೆ2 days ago

      Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

      karnataka Weather Forecast
      ಮಳೆ3 days ago

      Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

      karnataka Rain
      ಮಳೆ3 days ago

      Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

      ಟ್ರೆಂಡಿಂಗ್‌