Rain News: ಮಳೆಯ ಅಬ್ಬರಕ್ಕೆ ಧಡಾರ್‌ ಎಂದು ನೆಲಕಚ್ಚಿದ ಕೊಟ್ಟಿಗೆಹಾರ ಬಸ್‌ ನಿಲ್ದಾಣ! - Vistara News

ಪ್ರಮುಖ ಸುದ್ದಿ

Rain News: ಮಳೆಯ ಅಬ್ಬರಕ್ಕೆ ಧಡಾರ್‌ ಎಂದು ನೆಲಕಚ್ಚಿದ ಕೊಟ್ಟಿಗೆಹಾರ ಬಸ್‌ ನಿಲ್ದಾಣ!

VISTARANEWS.COM


on

rain news kottigehara bus stand collapse
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕಮಗಳೂರು: ಮಲೆನಾಡಿನಲ್ಲಿ (Western Ghats) ಧಾರಾಕಾರ ಮಳೆ (Rain News) ಹಾವಳಿ ಎಬ್ಬಿಸುತ್ತಿದೆ. ನಿನ್ನೆ ಸುರಿದ ಭಾರಿ ಮಳೆಗೆ ಮೂಡಿಗೆರೆ (Mudigere) ತಾಲೂಕಿನ ಕೊಟ್ಟಿಗೆಹಾರ ಬಸ್ ನಿಲ್ದಾಣ (Kottigehara Bus Stand) ಧರೆಗುರುಳಿದೆ. ನೋಡ ನೋಡುತ್ತಿದ್ದಂತೆ ಇಡೀ ಬಸ್ ನಿಲ್ದಾಣವೇ (bus stand collapse) ಧ್ವಂಸವಾಗಿದೆ.

ಕೊಟ್ಟಿಗೆಹಾರದ ಬಸ್ ನಿಲ್ದಾಣದಲ್ಲಿ ಭಾರಿ ಅವಘಡ ಸಂಭವಿಸಿದ್ದು, ಬಸ್ ನಿಲ್ದಾಣದ ಸುತ್ತಮುತ್ತ ಗೋಡೆಗಳು ನಾಶವಾಗಿವೆ. ಭಾರಿ ಮಳೆ ಹಿನ್ನಲೆ ಕೊಟ್ಟಿಗೆಹಾರದಲ್ಲಿ ವಿದ್ಯುತ್ ಸಂಪರ್ಕವೂ ಸ್ಥಗಿತವಾಗಿದ್ದು, ಕತ್ತಲೆಯಲ್ಲಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಪರದಾಡಿದರು. ಗೋಡೆಗಳು ಬಿದ್ದ ಶಬ್ದಕ್ಕೆ ಸ್ಥಳೀಯರು ಬೆಚ್ಚಿಬಿದ್ದರು.

ಶೃಂಗೇರಿಯಲ್ಲಿ ಮುಳುಗಡೆ

ಭಾರಿ ಮಳೆಯಿಂದಾಗಿ ತುಂಗಾ ನದಿ ಅಪಾಯದ ಮಟ್ಟ ಮೀರಿದ್ದು, ಶೃಂಗೇರಿ ಪಟ್ಟಣದ ಗಾಂಧಿ ಮೈದಾನಕ್ಕೆ ನೀರು ನುಗ್ಗಿದೆ. ನದಿ ತಟದಲ್ಲಿದ್ದ ಅಂಗಡಿ ಮುಂಗಟ್ಟು, ಪಾರ್ಕಿಂಗ್ ಜಾಗ ಮುಳುಗಡೆಯಾಗಿವೆ. ಪಟ್ಟಣದ ಯಾತ್ರಿ ನಿವಾಸದ ವರೆಗೂ ನದಿಯ ನೀರು ನುಗ್ಗಿದೆ. ನದಿ ಪಕ್ಕದ ಪ್ಯಾರಲಲ್ ರಸ್ತೆಯೂ ಸಂಪೂರ್ಣ ಮುಳುಗಡೆಯಾಗಿದ್ದು, ಶೃಂಗೇರಿಯಲ್ಲಿ ನದಿ ಪಾತ್ರದ ನಿವಾಸಿಗಳಿಗೆ ಎಚ್ಚರಿಕೆ ನೀಡಲಾಗಿದೆ.

ಶಾಲೆಗಳಿಗೆ ರಜೆ

ಚಿಕ್ಕಮಗಳೂರಿನಲ್ಲಿ ಮಳೆ ಅಬ್ಬರ ಹಿನ್ನೆಲೆಯಲ್ಲಿ ಮಲೆನಾಡಿನ ಆರು ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಮೂಡಿಗೆರೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ನೀಡಿದ್ದಾರೆ.

ಶಿವಮೊಗ್ಗದಲ್ಲಿ ರೆಡ್‌ ಅಲರ್ಟ್‌

ಶಿವಮೊಗ್ಗ: ಭಾರೀ ಮಳೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಜೆ ಘೋಷಣೆ ಮಾಡಿದ್ದಾರೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದ್ದು, ಶಿವಮೊಗ್ಗ ಜಿಲ್ಲಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡದಲ್ಲಿ ವೃದ್ಧೆ ರಕ್ಷಣೆ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮಳೆ ಅಬ್ಬರದ ಪರಿಣಾಮ, ಜಲಾವೃತಗೊಂಡ ಮನೆಯಲ್ಲಿದ್ದ ರೋಗಿಯನ್ನು ಹೊರತರಲು ಗ್ರಾಮಸ್ಥರು ಹರಸಾಹಸ ಪಡಬೇಕಾಯಿತು. ಕಾರವಾರ ತಾಲೂಕಿ‌ನ ಚೆಂಡಿಯಾ ಗ್ರಾಮದಲ್ಲಿ ಹೆಚ್ಚಿದ ನೀರಿನ ಪ್ರಮಾಣದಿಂದಾಗಿ ಮನೆಗೆ ನೀರು ನುಗ್ಗಿತ್ತು.

ಅಸ್ತಮಾ ರೋಗದಿಂದ ಬಳಲುತ್ತಿದ್ದ ಸ್ವಾತಿ ರತ್ನಾಕರ ನಾಯ್ಕ (67) ಹಾಗೂ ಅವರ ಪತಿ ನೀರು ನುಗ್ಗಿದ ಮನೆಯಲ್ಲೇ ಉಳಿದಿದ್ದರು. ದಂಪತಿಗಳನ್ನು ತಾಲೂಕಾಡಳಿತ ಹಾಗೂ ಸ್ಥಳೀಯರು ಮನವೊಲಿಸಿ ಮನೆಯಿಂದ ಹೊರತಂದರು. ನಾಲ್ಕು ಅಡಿ ನೀರಿನಲ್ಲೇ ರೋಗಿಯನ್ನ ಹೊತ್ತು ತಂದು ಅಂಬ್ಯುಲೆನ್ಸ್ ಮೂಲಕ ಸರ್ಕಾರಿ ಆಸ್ಪತ್ರೆ ಗೆ ರವಾನಿಸಿದರು.

ತುರ್ತು ಕಾರ್ಯಾಚರಣೆ ಕೇಂದ್ರ

ಕಾರವಾರ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಜುಲೈ 18ರ ವರೆಗೆ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಈ ಅವಧಿಯಲ್ಲಿ ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಸಮಸ್ಯೆಯಾಗದಂತೆ ಜಿಲ್ಲೆಯ ಸಾರ್ವಜನಿಕರ ರಕ್ಷಣೆಗಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ 24×7 ಕಾರ್ಯ ನಿರ್ವಹಿಸುವ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ (Uttara Kannada News) ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿನ ತುರ್ತು ಕಾರ್ಯಾಚರಣೆ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿ ಮಾತನಾಡಿದ ಅವರು, ಜಿಲ್ಲಾಧಿಕಾರಿ ಕಚೇರಿಯಲ್ಲಿ ತೆರೆದಿರುವ ತುರ್ತು ಕಾರ್ಯಾಚರಣೆ ಕೇಂದ್ರದಲ್ಲಿ ಪೊಲೀಸ್, ಅಗ್ನಿಶಾಮಕ, ಹೆಸ್ಕಾಂ, ಅರಣ್ಯ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದ್ದು, ಸಾರ್ವಜನಿಕರು ಮಳೆಯಿಂದಾಗಿ ಯಾವುದೇ ಅಪಾಯವಾದಲ್ಲಿ ಕೂಡಲೇ ಉಚಿತ ಸಹಾಯವಾಣಿ ಸಂಖ್ಯೆ 1077 ಗೆ ಅಥವಾ ಮೊ.ಸಂ. ಸಂಖ್ಯೆ. 9483511015 ಕರೆ, ವಾಟ್ಸಾಪ್ ಮೂಲಕ ಮಾಹಿತಿ ನೀಡಿದಲ್ಲಿ ತಕ್ಷಣ ನೆರವಿಗೆ ಧಾವಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಮಳೆಯಿಂದಾಗಿ, 2 ಮನೆಗಳು ಸಂಪೂರ್ಣ ನಾಶ, 2 ಮನೆಗಳಿಗೆ ತೀವ್ರ ಹಾನಿ ಮತ್ತು 18 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಕಾರವಾರದಲ್ಲಿ 2, ಕುಮಟಾದಲ್ಲಿ 1 ಹಾಗೂ ಹೊನ್ನಾವರದಲ್ಲಿ 2 ಸೇರಿದಂತೆ ಒಟ್ಟು 5 ಕಾಳಜಿ ಕೇಂದ್ರಗಳನ್ನು ತೆರೆದಿದ್ದು ಒಟ್ಟು 93 ಜನರಿಗೆ ಆಶ್ರಯ ಒದಗಿಸಿ ಅಗತ್ಯ ಉಟೋಪಚಾರ ಮತ್ತು ವೈದ್ಯಕೀಯ ನೆರವು ಒದಗಿಸಲಾಗಿದೆ ಎಂದರು.

ತಗ್ಗು ಪ್ರದೇಶಗಳಲ್ಲಿ ಮತ್ತು ಗುಡ್ಡ ಕುಸಿಯಬಹುದಾದ ಅಪಾಯಕಾರಿ ಪ್ರದೇಶಗಳಲ್ಲಿ ವಾಸಿಸುತ್ತಿರುವ ಸಾರ್ವಜನಿಕರು, ಮುನ್ನೆಚ್ಚರಿಕೆ ಕ್ರಮವಾಗಿ ಸ್ವಯಂ ಪ್ರೇರಿತರಾಗಿ ಕಾಳಜಿ ಕೇಂದ್ರಗಳಿಗೆ ಬಂದು ಆಶ್ರಯ ಪಡೆಯುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: KSRTC Package Tour: ಜೋಗ ಜಲಪಾತ ವೀಕ್ಷಣೆಗೆ ಕೆಎಸ್‌ಆರ್‌ಟಿಸಿ ಪ್ಯಾಕೇಜ್‌ ಟೂರ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಅಂಚೆ ಇಲಾಖೆಯಿಂದ ಬೃಹತ್‌ ನೇಮಕಾತಿ; ಕರ್ನಾಟಕದಲ್ಲಿಯೂ ಇದೆ 1,940 ಹುದ್ದೆ: ಹೀಗೆ ಅಪ್ಲೈ ಮಾಡಿ

Job Alert: ಭಾರತೀಯ ಅಂಚೆ ಇಲಾಖೆ ಬಹುನಿರೀಕ್ಷಿತ ಗ್ರಾಮೀಣ ಡಾಕ್ ಸೇವಕ್‌ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ನಮ್ಮ ರಾಜ್ಯದಲ್ಲಿ 1,940 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಗ್ರಾಮೀಣ ಡಾಕ್‌ ಸೇವಕ್‌ (ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌ ಮತ್ತು ಅಸಿಸ್ಟಂಟ್‌ ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌) ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ ಕೊನೆಯ ದಿನ ಆಗಸ್ಟ್‌ 5. ಅರ್ಜಿ ಸಲ್ಲಿಸುವ ವಿಧಾನದ ಮಾಹಿತಿ ಇಲ್ಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಭಾರತೀಯ ಅಂಚೆ ಇಲಾಖೆ (India Post Office) ಬಹುನಿರೀಕ್ಷಿತ ಗ್ರಾಮೀಣ ಡಾಕ್ ಸೇವಕ್‌ (Gramin Dak Sevak) ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ದೇಶಾದ್ಯಂತ ಸುಮಾರು 44,228 ಹುದ್ದೆಗಳು ಖಾಲಿ ಇವೆ. ಈ ಪೈಕಿ ನಮ್ಮ ರಾಜ್ಯದಲ್ಲಿ 1,940 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ (Karnataka Postal Circle Recruitment 2024). ಗ್ರಾಮೀಣ ಡಾಕ್‌ ಸೇವಕ್‌ (ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌ ಮತ್ತು ಅಸಿಸ್ಟಂಟ್‌ ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌) ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ ಕೊನೆಯ ದಿನ ಆಗಸ್ಟ್‌ 5 (Job Alert).

ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆ?

ಬಾಗಲಕೋಟೆ 23, ಬಳ್ಳಾರಿ 50, ಬೆಂಗಳೂರು ಜಿಪಿಒ 4, ಬೆಳಗಾವಿ 33, ಬೆಂಗಳೂರು ಪೂರ್ವ 83, ಬೆಂಗಳೂರು ದಕ್ಷಿಣ 62, ಬೆಂಗಳೂರು ಪಶ್ಚಿಮ 39, ಬೀದರ್ 59, ಚನ್ನಪಟ್ಟಣ 87, ಚಿಕ್ಕಮಗಳೂರು 60, ಚಿಕ್ಕೋಡಿ 19, ಚಿತ್ರದುರ್ಗ 27, ದಾವಣಗೆರೆ ಕಚೇರಿ 40, ಧಾರವಾಡ 22, ಗದಗ 18, ಗೋಕಾಕ್ 7, ಹಾಸನ 78, ಹಾವೇರಿ 44, ಕಲಬುರಗಿ 83, ಕಾರವಾರ 43, ಕೊಡಗು 76, ಕೋಲಾರ 106, ಕೊಪ್ಪಳ 36, ಮಂಡ್ಯ 65, ಮಂಗಳೂರು 62, ಮೈಸೂರು 42, ನಂಜನಗೂಡು 66, ಪುತ್ತೂರು 89, ರಾಯಚೂರು 63, ಆರ್‌ಎಂಎಸ್‌ ಎಚ್‌ಬಿ 3, ಆರ್‌ಎಂಎಸ್‌ ಕ್ಯೂ 9, ಶಿವಮೊಗ್ಗ 89, ಶಿರಸಿ 66, ತುಮಕೂರು 107, ಉಡುಪಿ 90, ವಿಜಯಪುರ 40, ಯಾದಗಿರಿ 50 ಹುದ್ದೆಗಳಿವೆ.

ವಿದ್ಯಾರ್ಹತೆ ಮತ್ತು ವಯೋಮಿತಿ

ಭಾರತದ ಯಾವುದೇ ಶಿಕ್ಷಣ ಮಂಡಳಿ ನಡೆಸುವ 10ನೇ ತರಗತಿ ಪರೀಕ್ಷೆಯಲ್ಲಿ (ಇಂಗ್ಲಿಷ್‌ ಮತ್ತು ಗಣಿತ ವಿಷಯ ಒಳಗೊಂಡಿರುವುದು ಕಡ್ಡಾಯ) ಪಾಸಾದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 40 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಅರ್ಜಿ ಶುಲ್ಕವಾಗಿ ಸಾಮಾನ್ಯ / ಒಬಿಸಿ ವಿಭಾಗದ ಅಭ್ಯರ್ಥಿಗಳು 100 ರೂ. ಪಾವತಿಸಬೇಕು. ಎಸ್‌ಸಿ / ಎಸ್‌ಟಿ / ಅಂಗವಿಕಲ ವಿಭಾಗದ ಮತ್ತು ಎಲ್ಲ ವರ್ಗದ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. 10ನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದವರಿಗೆ ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌-12,000 ರೂ. -29,380 ರೂ., ಅಸಿಸ್ಟಂಟ್‌ ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌-10,000 ರೂ. – 24,470 ರೂ. ಮಾಸಿಕ ವೇತನ ಇದೆ.

India Post GDS Recruitment 2024 ಅಧಿಕೃತ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://indiapostgdsonline.gov.in/)
  • ಹೆಸರು ನೋಂದಾಯಿಸಿ.
  • ಲಾಗಿನ್‌ ಆಗಿ ವಿವರಗಳನ್ನು ಭರ್ತಿ ಮಾಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ, ಸಹಿಯನ್ನು ಸೂಕ್ತ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಪದವೀಧರರಿಗೆ ಗುಡ್‌ನ್ಯೂಸ್‌; SCDCC ಬ್ಯಾಂಕ್‌ನಲ್ಲಿದೆ 123 ಹುದ್ದೆ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

Continue Reading

Latest

Viral Video: ಕಾಮುಕರ ಹಾವಳಿ ಮಿತಿ‌ ಮೀರಿದೆ; ಬೀದಿ ನಾಯಿಯನ್ನೂ ಇವರು ಬಿಡುತ್ತಿಲ್ಲ! ಆಘಾತಕಾರಿ ವಿಡಿಯೊ

Viral Video : ವೃದ್ಧನೊಬ್ಬ ಬೀದಿಯಲ್ಲಿ ಮಲಗಿದ್ದ ಗಂಡು ನಾಯಿಯ ಖಾಸಗಿ ಭಾಗಗಳನ್ನು ಪದೇ ಪದೇ ಸ್ಪರ್ಶಿಸುವ ಮೂಲಕ ಕಿರುಕುಳ ನೀಡಿದ್ದಾನೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಮುಂಬೈನ ಸ್ಟ್ರೀಟ್ ಅನಿಮಲ್ಸ್ ಎಂಬ ಇನ್ಸ್ಟಾಗ್ರಾಮ್ ಪುಟದಲ್ಲಿ ಪೋಸ್ಟ್ ಮಾಡಲಾಗಿದೆ. ವಿಡಿಯೊದಲ್ಲಿ ಕೆಲವು ಅಸಹ್ಯವಾದ ತುಣುಕುಗಳನ್ನು ಸೆನ್ಸಾರ್ ಮಾಡಲಾಗಿದ್ದು, ಅಲ್ಲಿ ವೃದ್ಧ ವ್ಯಕ್ತಿ ಬೀದಿ ನಾಯಿಯನ್ನು ತನ್ನ ಕಡೆಗೆ ಸೆಳೆಯುವುದು ಮತ್ತು ಅನುಚಿತವಾಗಿ ಸ್ಪರ್ಶಿಸುವುದು ಕಂಡುಬಂದಿದೆ. ನಾಗರಿಕ ಸಮಾಜ ತಲೆತಗ್ಗಿಸುವ ವಿಡಿಯೊ ಈಗ ಬಹಿರಂಗವಾಗಿದೆ.

VISTARANEWS.COM


on

Viral Video
Koo


ಮುಂಬೈ : ಕಾಮುಕರು ತಮ್ಮ ಕಾಮದಾಟಕ್ಕೆ ಮನುಷ್ಯರನ್ನು ಮಾತ್ರವಲ್ಲ ಪ್ರಾಣಿಗಳನ್ನು ಕೂಡ ಬಳಸಿಕೊಳ್ಳುತ್ತಿದ್ದಾರೆ. ತಮ್ಮ ಲೈಂಗಿಕ ಬಯಕೆಯನ್ನು ತೀರಿಸಿಕೊಳ್ಳಲು ಮೂಕ ಪ್ರಾಣಿಗಳ ಮೇಲೂ ದೌರ್ಜನ್ಯ ಎಸಗುತ್ತಿದ್ದಾರೆ. ಇದೀಗ ಅಂತಹದೊಂದು ಘಟನೆ ಬೆಳಕಿಗೆ ಬಂದಿದ್ದು, ವಿಕೃತ ಕಾಮುಕನೊಬ್ಬ ಬೀದಿ ನಾಯಿಗೆ ಪದೇ ಪದೇ ಲೈಂಗಿಕ ಕಿರುಕುಳ ನೀಡಿದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಗುರ್ಗಾಂವ್‍ನ ಸೆಕ್ಟರ್ 48ರಲ್ಲಿ ವೃದ್ಧನೊಬ್ಬ ಬೀದಿಯಲ್ಲಿ ಮಲಗಿದ್ದ ಗಂಡು ನಾಯಿಯ ಖಾಸಗಿ ಭಾಗಗಳನ್ನು ಪದೇ ಪದೇ ಸ್ಪರ್ಶಿಸುವ ಮೂಲಕ ಬಹಿರಂಗವಾಗಿ ಕಿರುಕುಳ ನೀಡಿದ್ದಾನೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಮುಂಬೈನ ಸ್ಟ್ರೀಟ್ ಅನಿಮಲ್ಸ್ ಎಂಬ ಇನ್ಸ್ಟಾಗ್ರಾಮ್ ಪುಟದಲ್ಲಿ ಪೋಸ್ಟ್ ಮಾಡಲಾಗಿದೆ. ವಿಡಿಯೊದಲ್ಲಿ ಕೆಲವು ಅಸಹ್ಯವಾದ ತುಣುಕುಗಳನ್ನು ಸೆನ್ಸಾರ್ ಮಾಡಲಾಗಿದ್ದು, ಅಲ್ಲಿ ವೃದ್ಧ ವ್ಯಕ್ತಿ ಬೀದಿ ನಾಯಿಯನ್ನು ತನ್ನ ಕಡೆಗೆ ಸೆಳೆಯುವುದು ಮತ್ತು ಅನುಚಿತವಾಗಿ ಸ್ಪರ್ಶಿಸುವುದು ಕಂಡುಬಂದಿದೆ.

ಇದರಲ್ಲಿ ಮೊದಲು ವ್ಯಕ್ತಿಯು ನಾಯಿಯನ್ನು ನೆಲದ ಮೇಲೆ ಮಲಗುವಂತೆ ಒತ್ತಾಯಿಸುವುದನ್ನು ತೋರಿಸುತ್ತದೆ. ಆತ ತನ್ನ ಕೈಗಳಿಂದ ನಾಯಿಯ ಮೈಯನ್ನು ಸವರುತ್ತಿದ್ದಾನೆ. ನಾಯಿ ಎಚ್ಚರಗೊಂಡು ನೇರವಾಗಿ ನಿಲ್ಲಲು ಪ್ರಯತ್ನಿಸಿದಾಗ, ಆತ ಪದೇ ಪದೇ ಪ್ರಾಣಿಯನ್ನು ವಿಶ್ರಾಂತಿ ಪಡೆಯುವಂತೆ ಮಾಡಿದ. ನಂತರ ಅವನು ಅದರ ಖಾಸಗಿ ಭಾಗಗಳನ್ನು ಸ್ಪರ್ಶಿಸುವುದನ್ನು ಮುಂದುವರಿಸಿದ.

ಮತ್ತೊಂದು ಘಟನೆಯಲ್ಲಿ, ಅದೇ ವ್ಯಕ್ತಿ ಮತ್ತೊಮ್ಮೆ ತಮ್ಮ ನಿವಾಸದ ಹೊರಗೆ ಬೀದಿ ನಾಯಿಗೆ ಕಿರುಕುಳ ನೀಡುತ್ತಿರುವುದು ಕಂಡುಬಂದಿದೆ. ಅವನು ನಾಯಿಯ ಜನನಾಂಗಗಳನ್ನು ಕಂಡುಹಿಡಿಯಲು ಮತ್ತು ಅವುಗಳನ್ನು ಮಟ್ಟಲು ಪ್ರಯತ್ನಿಸುತ್ತಿದ್ದ. ಇದಲ್ಲದೆ, ವ್ಯಕ್ತಿಯು ಕುರ್ಚಿಯ ಮೇಲೆ ಕುಳಿತು ತನ್ನ ಬರಿಗೈಯಿಂದ ನಾಯಿಯನ್ನು ಅನುಚಿತವಾಗಿ ಸ್ಪರ್ಶಿಸುವುದನ್ನು ವೀಡಿಯೊ ತೋರಿಸುತ್ತದೆ. ಆದರೆ ವ್ಯಕ್ತಿಯ ಈ ಅನುಚಿತ ವರ್ತನೆಯ ಬಗ್ಗೆ ಕ್ರಮ ಕೈಗೊಳ್ಳಲು ಸ್ಥಳೀಯ ಯುವತಿಯೊಬ್ಬಳು ಪೊಲೀಸರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಆತನ ವಿರುದ್ಧ ಯಾವುದೇ ಪೊಲೀಸ್ ಕ್ರಮ ದಾಖಲಾಗಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಮೊಬೈಲ್‌ನಲ್ಲಿ ಮಾತನಾಡುತ್ತ ರಸ್ತೆ ದಾಟಿದರೆ ಏನಾಗುತ್ತದೆ ನೋಡಿ; ಬೆಚ್ಚಿ ಬೀಳಿಸುವ ವಿಡಿಯೊ

Viral Video

ಪ್ರಾಣಿಗಳ ಮೇಲಿನ ಲೈಂಗಿಕ ದೌರ್ಜನ್ಯ ಭಾರತದಲ್ಲಿ ಮಾತ್ರವಲ್ಲ ಎಲ್ಲಾ ಕಡೆ ನಡೆಯುತ್ತಿದೆ. ಇದೀಗ ಬರೋಬ್ಬರಿ 60ಕ್ಕೂ ಹೆಚ್ಚು ನಾಯಿಗಳನ್ನು ಅತ್ಯಾಚಾರ ಮಾಡಿ, ಕೊಂದ ಪ್ರಕರಣದಲ್ಲಿ ಖ್ಯಾತ ಪ್ರಾಣಿಶಾಸ್ತ್ರಜ್ಞ ಆಡಂ ಬ್ರಿಟನ್‌ಗೆ 249 ವರ್ಷಗಳ ಜೈಲು ಶಿಕ್ಷೆಯಾಗಿದೆ. ಆತ ನಾಯಿಗಳನ್ನು ಕೋಣೆಗಳಲ್ಲಿ ಕೂಡಿ ಹಾಕಿ ವಿಚಿತ್ರವಾಗಿ ಹಿಂಸಿಸುತ್ತಿದ್ದನು. ಅತ್ಯಾಚಾರವೆಸಗಿ ಬರ್ಬರವಾಗಿ ಕೊಂದಿದ್ದನು ಎನ್ನಲಾಗಿತ್ತು. ವಿಚಾರಣೆಯ ವೇಳೆ ಈತನೂ ತನ್ನ ತಪ್ಪನ್ನು ಒಪ್ಪಿದ್ದನು. ಹೀಗಾಗಿ ಆತನಿಗೆ ಕೋರ್ಟ್ ಈಗ ಶಿಕ್ಷೆ ವಿಧಿಸಿದೆ.

Continue Reading

ದೇಶ

Jitan Sahani: ಬಿಹಾರದಲ್ಲಿ ವಿಕಾಸಶೀಲ ಇನ್ಸಾನ್‌ ಪಕ್ಷದ ಮುಖ್ಯಸ್ಥನ ತಂದೆಯ ಭೀಕರ ಹತ್ಯೆ; ಮನೆ ತುಂಬ ರಕ್ತ!

Jitan Sahani: ರಾಜಕೀಯ ಕಾರಣದಿಂದಾಗಿ ಮುಕೇಶ್‌ ಸಹಾನಿ ಅವರ ತಂದೆಯನ್ನು ಮನೆಯಲ್ಲಿಯೇ ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಜಿತನ್‌ ಸಹಾನಿ ಅವರು ರಕ್ತದ ಮಡುವಿನಲ್ಲಿ ಶವವಾಗಿ ಬಿದ್ದಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ

VISTARANEWS.COM


on

Jitan Sahani
Koo

ಬಿಹಾರ: ತಮಿಳುನಾಡಿನಲ್ಲಿ ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಅವರನ್ನು ಹತ್ಯೆ ಮಾಡಿದ ಕೆಲವೇ ದಿನಗಳಲ್ಲಿ ಬಿಹಾರದಲ್ಲೂ (Bihar) ರಾಜಕೀಯ ಪ್ರೇರಿತ ಹಿಂಸಾಚಾರ ನಡೆದಿದೆ. ವಿಕಾಸಶೀಲ ಇನ್ಸಾನ್‌ ಪಕ್ಷದ (VHP) ಮುಖ್ಯಸ್ಥ ಮುಕೇಶ್‌ ಸಹಾನಿ (Mukesh Sahani) ಅವರ ತಂದೆ ಜಿತನ್‌ ಸಹಾನಿ (Jitan Sahani) ಅವರನ್ನು ಮನೆಯಲ್ಲಿಯೇ ಭೀಕರವಾಗಿ ಹತ್ಯೆ ಮಾಡಲಾಗಿದೆ. ದರ್ಭಾಂಗದಲ್ಲಿರುವ ಜಿತನ್‌ ಸಹಾನಿ ಅವರ ಮನೆಗೆ ಸೋಮವಾರ (ಜುಲೈ 15) ರಾತ್ರಿ ನುಗ್ಗಿದ ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ಕೊಚ್ಚಿ ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಮುಕೇಶ್‌ ಸಹಾನಿ ಅವರು ವಿಐಪಿ ಪಕ್ಷದ ಮುಖ್ಯಸ್ಥರಾಗಿದ್ದು, ಮಲ್ಲಾಹ್‌ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಇವರು ಇದಕ್ಕೂ ಮೊದಲು ಬಿಹಾರದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಖಾತೆ ಸಚಿವರಾಗಿದ್ದರು. ಮಲ್ಲಾಹ್‌ ಸಮುದಾಯದವರ ಬೆಂಬಲವು ಮುಕೇಶ್‌ ಸಹಾನಿ ಅವರಿಗಿದೆ. ಇದೇ ರಾಜಕೀಯ ಕಾರಣದಿಂದಾಗಿ ಮುಕೇಶ್‌ ಸಹಾನಿ ಅವರ ತಂದೆಯನ್ನು ಮನೆಯಲ್ಲಿಯೇ ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಜಿತನ್‌ ಸಹಾನಿ ಅವರು ರಕ್ತದ ಮಡುವಿನಲ್ಲಿ ಶವವಾಗಿ ಬಿದ್ದಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನಲ್ಲಿ ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಚೆನ್ನೈನ ಪೆರಂಬೂರ್‌ನಲ್ಲಿರುವ ಸದಯಪ್ಪನ್‌ ಸ್ಟ್ರೀಟ್‌ನಲ್ಲಿರುವ ಅವರ ನಿವಾಸದ ಬಳಿ ಜುಲೈ 5ರಂದು ಸಂಜೆ 7.30ರ ವೇಳೆಗೆ ಸುಮಾರು 6 ಜನರ ಗ್ಯಾಂಗ್‌ ದಾಳಿ ಮಾಡಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಆರ್ಮ್‌ಸ್ಟ್ರಾಂಗ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಉಪಯೋಗ ಆಗಲಿಲ್ಲ. ದಾಳಿಯಲ್ಲಿ ಇನ್ನಿಬ್ಬರು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗಿತ್ತು.

ತಮಿಳುನಾಡು ಬಿಎಸ್‌ಪಿ ಘಟಕದ ಅಧ್ಯಕ್ಷರಾಗಿದ್ದ ಆರ್ಮ್‌ಸ್ಟ್ರಾಂಗ್‌ ಅವರು ಇದಕ್ಕೂ ಮೊದಲು ಗ್ರೇಟರ್‌ ಚೆನ್ನೈ ಕಾರ್ಪೊರೇಷನ್‌ನ ಕೌನ್ಸಿಲರ್‌ ಆಗಿದ್ದರು. ಚುನಾವಣಾ ರಾಜಕೀಯದಲ್ಲಿ ಹೆಚ್ಚು ತೊಡಗಿಸಿಕೊಳ್ಳದ ಆರ್ಮ್‌ಸ್ಟ್ರಾಂಗ್‌ ಅವರು ರಾಜ್ಯದಲ್ಲಿ ದಲಿತರ ಪರ ಚಿಂತಕ, ಅಂಬೇಡ್ಕರ್‌ವಾದಿ ಎಂಬುದಾಗಿಯೇ ಹೆಚ್ಚು ಗುರುತಿಸಿಕೊಂಡಿದ್ದರು. ಹಾಗಾಗಿ, ಆರ್ಮ್‌ಸ್ಟ್ರಾಂಗ್‌ ಅವರು ರಾಜಕೀಯದಲ್ಲಿ ಹೆಚ್ಚಿನ ಶತ್ರುಗಳನ್ನು ಹೊಂದಿರಲಿಲ್ಲ. ಪ್ರಕರಣದ ಕುರಿತು ಈಗಲೂ ತನಿಖೆ ನಡೆಯುತ್ತಿದ್ದು, ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಇದನ್ನೂ ಓದಿ: Arvind Kejriwal: “ಜೈಲಿನಲ್ಲಿ ಕೇಜ್ರಿವಾಲ್‌ ಹತ್ಯೆಗೆ ಸಂಚು”- ಸಂಚಲನ ಮೂಡಿಸ್ತಿದೆ ಆಪ್‌ ಆರೋಪ

Continue Reading

ಪ್ರಮುಖ ಸುದ್ದಿ

Karnataka Assembly Live: ಸದನದಲ್ಲಿ ಇಂದು ಕಿಡಿಯೆಬ್ಬಿಸಲಿರುವ ವಾಲ್ಮೀಕಿ ಹಗರಣ; ಉತ್ತರ ನೀಡಲು ಸಿಎಂ ಸಜ್ಜು; ಇಲ್ಲಿದೆ ಕ್ಷಣಕ್ಷಣದ ಲೈವ್‌

Karnataka Assembly Live: ಇಂದು ಸಹ ಬಿಜೆಪಿ ಹಾಗೂ ಜೆಡಿಎಸ್ ಶಾಸಕರಿಂದ ಈ ಚರ್ಚೆ ಮುಂದುವರಿಯಲಿದೆ. ಬಿಜೆಪಿಯ ಸಿಟಿ ರವಿ, ಸುನೀಲ್‌ ಕುಮಾರ್‌, ಯತ್ನಾಳ್ ಮುಂತಾದವರು ಈ ಚರ್ಚೆಯನ್ನು ಮುನ್ನಡೆಸಲಿದ್ದಾರೆ. ಬಳಿಕ ಸಿಎಂ ಸಿದ್ದರಾಮಯ್ಯ ಅವರು ಉತ್ತರ ನೀಡುವ ನಿರೀಕ್ಷೆ ಇದೆ. ನಿನ್ನೆ ಆಶೋಕ್ ಮಾತನಾಡುವಾಗಲೇ ಈ ಬಗ್ಗೆ ಸಿದ್ದರಾಮಯ್ಯ ಸುಳಿವು ನೀಡಿದ್ದರು.

VISTARANEWS.COM


on

karnataka assembly live
Koo

ಬೆಂಗಳೂರು: ವಿಧಾನ ಮಂಡಲ ಮಳೆಗಾಲದ ಅಧಿವೇಶನ (Karnataka Assembly Live, Karnataka Assembly monsoon session) ಇಂದು ಇನ್ನಷ್ಟು ರಂಗೇರಲಿದೆ. ವಾಲ್ಮೀಕಿ ನಿಗಮದ ಅವ್ಯವಹಾರ (Valmiki corporation Scam) ಪ್ರಕರಣದ ಕುರಿತು ನಿನ್ನೆ ವಿಧಾನಸಭೆ ಕಲಾಪದಲ್ಲಿ ಸುದೀರ್ಘ ಚರ್ಚೆ ನಡೆದಿದ್ದು, ವಿಪಕ್ಷ ನಾಯಕ ಆರ್. ಆಶೋಕ್ (R Ashok) ಅವರು ಈ ಚರ್ಚೆಯನ್ನು ಮುನ್ನಡೆಸಿದ್ದರು. ಇಂದು ಅದು ಮುಂದುವರಿಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಕೂಡ ಇದಕ್ಕೆ ಉತ್ತರ ನೀಡಲಿದ್ದಾರೆ.

ನಿನ್ನೆ ಮಾತನಾಡಿದ ಆರ್.‌ ಅಶೋಕ್‌, ಸರ್ಕಾರದ ತಪ್ಪು ನಡೆಗಳ ಬಗ್ಗೆ ಪ್ರಸ್ತಾಪ ಮಾಡಿದ್ದರು. ಹೈಕಮಾಂಡ್‌ಗೆ ಕಪ್ಪಕಾಣಿಕೆ ಸಲ್ಲಿಸಲು ನಿಗಮದ ಹಣವನ್ನು ದುರುಪಯೋಗ ಮಾಡಲಾಗಿದೆ ಎಂದಿದ್ದ ಅಶೋಕ್‌, 187 ಕೋಟಿ ರೂಪಾಯಿ ಅವ್ಯವಹಾರದ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದರು. ಈ ಹಣ ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಹೇಗೆ ವಿನಿಯೋಗವಾಗಬೇಕಿತ್ತು, ಹೇಗೆ ಅಕ್ರಮವಾಗಿದೆ ಎಂಬುದನ್ನು ಎಳೆ ಎಳೆಯಾಗಿ ಬಿಡಿಸಿಟ್ಟಿದ್ದರು. ಆ ಮೂಲಕ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದರು.

ಇಂದು ಸಹ ಬಿಜೆಪಿ ಹಾಗೂ ಜೆಡಿಎಸ್ ಶಾಸಕರಿಂದ ಈ ಚರ್ಚೆ ಮುಂದುವರಿಯಲಿದೆ. ಬಿಜೆಪಿಯ ಸಿಟಿ ರವಿ, ಸುನೀಲ್‌ ಕುಮಾರ್‌, ಯತ್ನಾಳ್ ಮುಂತಾದವರು ಈ ಚರ್ಚೆಯನ್ನು ಮುನ್ನಡೆಸಲಿದ್ದಾರೆ. ಬಳಿಕ ಸಿಎಂ ಸಿದ್ದರಾಮಯ್ಯ ಅವರು ಉತ್ತರ ನೀಡುವ ನಿರೀಕ್ಷೆ ಇದೆ. ನಿನ್ನೆ ಆಶೋಕ್ ಮಾತನಾಡುವಾಗಲೇ ಈ ಬಗ್ಗೆ ಸಿದ್ದರಾಮಯ್ಯ ಸುಳಿವು ನೀಡಿದ್ದರು. ʼನಿಮ್ಮ ವಾದವನ್ನ ಸಮಾಧಾನವಾಗಿ ಕೇಳ್ತೀನಿ. ನಾನು ಉತ್ತರ ಕೊಡುವಾಗಲೂ ಅಷ್ಟೇ ಸಮಾಧಾನದಿಂದ ಕೇಳಬೇಕುʼ ಎಂದಿದ್ದರು.

ʼ187 ಕೋಟಿ ಅಲ್ಲ ಅದು ಬರೀ 87 ಕೋಟಿ ಮಾತ್ರ ವರ್ಗಾವಣೆ ಆಗಿರುವುದು. ಹಣ ಎಲ್ಲಿಯವರೆಗೂ ಸರ್ಕಾರದ ಸುಪರ್ದಿಯಲ್ಲಿರುತ್ತೆ, ಬಳಿಕ ಆ ಹಣ ಯಾರಿಗೆ ಹೋಗುತ್ತೆ ಈ ಬಗ್ಗೆ ಸಂಪೂರ್ಣ ಮಾಹಿತಿ ಕೊಡ್ತೀನಿ. ಇದರಲ್ಲಿ ಯಾರ ಪಾತ್ರ ಎಷ್ಟಿದೆ. ಈ ಹಿಂದೆ ಹೇಗೆ ವ್ಯವಹಾರ ನಡೆದಿದೆ ಅದೆಲ್ಲವನ್ನ ಸಂಪೂರ್ಣವಾಗಿ ಕೊಡ್ತೀನಿʼ ಎಂದು ಹೇಳಿದ್ದರು. ಎಂದರೆ ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದ ಪ್ರಕರಣಗಳನ್ನೂ ಸಿಎಂ ಪ್ರಸ್ತಾವಿಸುವುದು ಖಚಿತವಾಗಿದೆ.

ಇದರಿಂದ ಸದನದಲ್ಲಿ ಇಂದು ಏಟು ಎದಿರೇಟು ಖಚಿತವಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಆಡಳಿತ ಪಕ್ಷ ಸದದ್ಯರು ಸಾಥ್‌ ನೀಡಲಿದ್ದು, ವಿಪಕ್ಷ ಶಾಸಕರು ಕೆರಳಿ ಪ್ರತಿಭಟನೆ ನಡೆಸುವುದೂ ಬಹುತೇಕ ಖಚಿತವಾಗಿದೆ. ಸ್ಪೀಕರ್‌ ಯು.ಟಿ ಖಾದರ್‌ ಅವರು ಶಾಂತಚಿತ್ತರಾಗಿಯೇ ಸದನದ ಕಲಾಪವನ್ನು ನಿರ್ವಹಿಸುತ್ತಿದ್ದರೂ, ಹಲವು ಬಾರಿ ಶಾಸಕರ ವರ್ತನೆ ಅವರಿಗೂ ಸವಾಲಾಗುತ್ತಿದೆ.

ನಿನ್ನೆ ಅಧಿವೇಶನ ಆರಂಭಕ್ಕೂ ಮುನ್ನ ವಿಧಾನಸೌಧದ ನೂತನ ದ್ವಾರವನ್ನು ಸಿಎಂ ಉದ್ಘಾಟಿಸಿದ್ದರು. ವಿಧಾನಸಭೆಯ ಸಭಾಂಗಣವನ್ನು ಇನ್ನಷ್ಟು ಸುಂದರವಾಗಿ ವಿನ್ಯಾಸಗೊಳಿಸಲಾಗಿದ್ದು, ಇದಕ್ಕೆ ಸದಸ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಕಲಾಪ ಆರಂಭದಲ್ಲಿ ಸಂವಿಧಾನದ ಪೀಠಿಕೆಯನ್ನು ಓದಲಾಯಿತು. ನಂತರ ಅಗಲಿದ ಗಣ್ಯರಿಗೆ ಸಂತಾಪ ಸೂಚನೆ ಮಂಡಿಸಲಾಯಿತು.

ಇದನ್ನೂ ಓದಿ: Assembly Session: ಅಧಿವೇಶನದಲ್ಲಿ ಹಗರಣಗಳ ಸದ್ದು; ಮೊದಲ ದಿನವೇ ಮುಗಿಬಿದ್ದ ವಿಪಕ್ಷ ನಾಯಕರು, ಹೆದರಲ್ಲ ಎಂದ ಸಿಎಂ!

Continue Reading
Advertisement
Job Alert
ಉದ್ಯೋಗ2 mins ago

Job Alert: ಅಂಚೆ ಇಲಾಖೆಯಿಂದ ಬೃಹತ್‌ ನೇಮಕಾತಿ; ಕರ್ನಾಟಕದಲ್ಲಿಯೂ ಇದೆ 1,940 ಹುದ್ದೆ: ಹೀಗೆ ಅಪ್ಲೈ ಮಾಡಿ

Viral Video
Latest17 mins ago

Viral Video: ಕಾಮುಕರ ಹಾವಳಿ ಮಿತಿ‌ ಮೀರಿದೆ; ಬೀದಿ ನಾಯಿಯನ್ನೂ ಇವರು ಬಿಡುತ್ತಿಲ್ಲ! ಆಘಾತಕಾರಿ ವಿಡಿಯೊ

Jitan Sahani
ದೇಶ25 mins ago

Jitan Sahani: ಬಿಹಾರದಲ್ಲಿ ವಿಕಾಸಶೀಲ ಇನ್ಸಾನ್‌ ಪಕ್ಷದ ಮುಖ್ಯಸ್ಥನ ತಂದೆಯ ಭೀಕರ ಹತ್ಯೆ; ಮನೆ ತುಂಬ ರಕ್ತ!

karnataka assembly live
ಪ್ರಮುಖ ಸುದ್ದಿ44 mins ago

Karnataka Assembly Live: ಸದನದಲ್ಲಿ ಇಂದು ಕಿಡಿಯೆಬ್ಬಿಸಲಿರುವ ವಾಲ್ಮೀಕಿ ಹಗರಣ; ಉತ್ತರ ನೀಡಲು ಸಿಎಂ ಸಜ್ಜು; ಇಲ್ಲಿದೆ ಕ್ಷಣಕ್ಷಣದ ಲೈವ್‌

David Warner
ಕ್ರೀಡೆ46 mins ago

David Warner: ​ಚಾಂಪಿಯನ್ಸ್ ಟ್ರೋಫಿಗೆ ವಾರ್ನರ್​ ಆಯ್ಕೆ ಇಲ್ಲ ಎಂದ ಜಾರ್ಜ್​ ಬೈಲಿ

Kannada New Movie
ಸ್ಯಾಂಡಲ್ ವುಡ್50 mins ago

Kannada New Movie: ಸೆಟ್ಟೇರಿತು ‘ಆಕಾಶ್’, ‘ಅರಸು’ ಚಿತ್ರಗಳ ಡೈರೆಕ್ಟರ್ ಹೊಸ ಸಿನಿಮಾ; ಕಿರುತೆರೆಯ ಈ ಪ್ರತಿಭೆ ನಾಯಕ

Kannada In Madrasa
ಕರ್ನಾಟಕ1 hour ago

Kannada In Madrasa: ರಾಜ್ಯದ ಮದರಸಾಗಳಲ್ಲಿ ಇನ್ನು ಕನ್ನಡ ಕಲಿಕೆ ಕಡ್ಡಾಯ; ಶೀಘ್ರವೇ ಆದೇಶ!

murder case set fire bagalakote
ಕ್ರೈಂ1 hour ago

Horrible Murder Case: ಶೆಡ್‌ ಹೊರಗಿನಿಂದ ಲಾಕ್‌ ಮಾಡಿ ಬೆಂಕಿ ಇಟ್ಟ ದುಷ್ಟರು; ಇಬ್ಬರು ಸಜೀವ ದಹನ

Iti Acharya
ಸಿನಿಮಾ1 hour ago

Iti Acharya: ಬಾಲಿವುಡ್‌ಗೆ ಕಾಲಿಟ್ಟ ಮತ್ತೊಬ್ಬ ಕನ್ನಡತಿ; ದಕ್ಷಿಣ ಭಾರತದ ಚಿತ್ರಗಳ ಬಳಿಕ ಹಿಂದಿಯಲ್ಲೂ ಅಭಿನಯ

Karnataka Assembly
ಕ್ರೀಡೆ1 hour ago

Karnataka Assembly: ಬಿಜೆಪಿಯಿಂದಲೇ ರಾಹುಲ್​ಗೆ ಶ್ಲಾಘನೆ; ಸದನದಲ್ಲಿ ಅಭಿನಂದನೆಗೆ ನಿರ್ಣಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ17 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ24 hours ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ3 days ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

ಟ್ರೆಂಡಿಂಗ್‌