Actor Yash: ಯಶ್‌ ಅಭಿನಯದ ಈ ಸೂಪರ್‌ ಹಿಟ್‌ ಚಿತ್ರ ರಿ-ರಿಲೀಸ್‌; ಎರಡೂವರೆ ವರ್ಷಗಳ ಬಳಿಕ ರಾಕಿಂಗ್‌ ಸ್ಟಾರ್‌ ಥಿಯೇಟರ್‌ಗೆ ಎಂಟ್ರಿ - Vistara News

ಸಿನಿಮಾ

Actor Yash: ಯಶ್‌ ಅಭಿನಯದ ಈ ಸೂಪರ್‌ ಹಿಟ್‌ ಚಿತ್ರ ರಿ-ರಿಲೀಸ್‌; ಎರಡೂವರೆ ವರ್ಷಗಳ ಬಳಿಕ ರಾಕಿಂಗ್‌ ಸ್ಟಾರ್‌ ಥಿಯೇಟರ್‌ಗೆ ಎಂಟ್ರಿ

Actor Yash: ಯಶ್‌ ಅಭಿಮಾನಿಗಳಿಗೆ ಇಲ್ಲಿದೆ ಗುಡ್‌ನ್ಯೂಸ್‌. ಎರಡೂವರೆ ವರ್ಷಗಳ ಬಳಿಕ ಯಶ್‌ ಅಬಿನಯದ ಸೂಪರ್‌ ಹಿಟ್‌ ಚಿತ್ರವೊಂದು ಶೀಘ್ರದಲ್ಲೇ ಥಿಯೇಟರ್‌ಗಳಲ್ಲಿ ಮರು ಬಿಡುಗಡೆಯಾಗಲಿದೆ. ಈ ಮೂಲಕ ಅಭಿಮಾನಿಗಳು ಎರಡೂವರೆ ವರ್ಷಗಳ ಕಾಯುವಿಕೆ ಅಂತ್ಯವಾಗಲಿದೆ. ಹಾಗಾದರೆ ಯಾವ ಸಿನಿಮಾ? ಯಾವಾಗ ರಿ-ರಿಲೀಸ್‌? ಇಲ್ಲಿದೆ ಉತ್ತರ.

VISTARANEWS.COM


on

Actor Yash
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ರಶಾಂತ್‌ ನೀಲ್‌ (Prashanth Neel) ನಿರ್ದೇಶನದ ಕೆಜಿಎಫ್‌ (KGF) ಸರಣಿ ಚಿತ್ರಗಳ ಬಳಿಕ ಸ್ಯಾಂಡಲ್‌ವುಡ್‌ ಸ್ಟಾರ್‌ ರಾಕಿಂಗ್‌ ಸ್ಟಾರ್‌ ಯಶ್‌ (Actor Yash) ಖದರೇ ಬದಲಾಗಿದೆ. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಹವಾ ಎಬ್ಬಿಸಿದ್ದಾರೆ. ‘ಕೆಜಿಎಫ್‌ 2’ (KGF 2) ತೆರೆಕಂಡು ಎರಡೂವರೆ ವರ್ಷ ಕಳೆದರೂ ಯಶ್‌ ಅಭಿನಯದ ಯಾವ ಚಿತ್ರವೂ ಬಿಡುಗಡೆಯಾಗಿಲ್ಲ ಎಂದು ಬೇಸರಗೊಂಡಿರುವ ಅಭಿಮಾನಿಗಳಿಗೆ ಇಲ್ಲಿದೆ ಗುಡ್‌ನ್ಯೂಸ್‌. ಹೌದು, ಯಶ್‌ ಅಬಿನಯದ ಸೂಪರ್‌ ಹಿಟ್‌ ಚಿತ್ರವೊಂದು ಶೀಘ್ರದಲ್ಲೇ ಥಿಯೇಟರ್‌ಗಳಲ್ಲಿ ಮರು ಬಿಡುಗಡೆಯಾಗಲಿದೆ. ಈ ಮೂಲಕ ಅಭಿಮಾನಿಗಳು ಎರಡೂವರೆ ವರ್ಷಗಳ ಕಾಯುವಿಕೆ ಅಂತ್ಯವಾಗಲಿದೆ. ಹಾಗಾದರೆ ಯಾವ ಸಿನಿಮಾ? ಯಾವಾಗ ರಿ-ರಿಲೀಸ್‌? ಇಲ್ಲಿದೆ ಉತ್ತರ.

ಜುಲೈ 26 ಯಶ್‌ ಅಭಿಮಾನಿಗಳಿಗೆ ಹಬ್ಬ

ಜುಲೈ 26ರಂದು ಯಶ್‌ ಅಭಿನಯದ ಸೂಪರ್‌ ಹಿಟ್‌ ಚಿತ್ರ ʼರಾಜಾಹುಲಿʼ ಥಿಯೇಟರ್‌ಗಳಲ್ಲಿ ರಿ-ರಿಲೀಸ್‌ ಆಗಲಿದೆ. ಭೂಮಿ ಫಿಲಂಸ್‌ ಸಂಸ್ಥೆ ಚಿತ್ರವನ್ನು ವಿತರಣೆ ಮಾಡಲಿದೆ. ಯಶ್‌ ವೃತ್ತಿ ಜೀವನದ ಮತ್ತು ಸ್ಯಾಂಡಲ್‌ವುಡ್‌ನಲ್ಲಿ ಅತೀ ಹೆಚ್ಚು ಕಲೆಕ್ಷನ್‌ ಮಾಡಿದ ʼಕೆಜಿಎಫ್‌ 2ʼ 2022ರ ಏಪ್ರಿಲ್‌ 14ರಂದು ರಿಲೀಸ್‌ ಆಗಿ ಕೋಟಿ ಕೋಟಿ ರೂ. ಬಾಚಿಕೊಂಡಿತ್ತು. ಅದಾದ ಬಳಿಕ ಅವರ ಯಾವ ಚಿತ್ರವೂ ಬಿಡುಗಡೆಯಾಗಿಲ್ಲ. ಹೀಗಾಗಿ ಈಗ ʼರಾಜಾಹುಲಿʼಯ ರಿ-ರಿಲೀಸ್‌ ಸುದ್ದಿ ಕೇಳಿ ರಾಕಿಂಗ್‌ ಸ್ಟಾರ್‌ ಅಭಿಮಾನಿಗಳು ಥ್ರಿಲ್‌ ಆಗಿದ್ದಾರೆ.

ಮೇಘನಾ ರಾಜ್‌ ನಾಯಕಿ

ʼರಾಜಾಹುಲಿʼ ಚಿತ್ರದಲ್ಲಿ ಮೇಘನಾ ರಾಜ್‌ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಯಶ್‌ ಮತ್ತು ಮೇಘನಾ ಕಾಂಬಿನೇಷನ್‌ನ ಮೊದಲ ಚಿತ್ರ ಇದು ಎನ್ನುವುದೂ ವಿಶೇಷ. ಹಳ್ಳಿ ಸೊಗಡಿನ ಕಥೆಯನ್ನು ಒಳಗೊಂಡ ಈ ಸಿನಿಮಾದಲ್ಲಿ ಯಶ್‌ ರಾಜಾಹುಲಿಯಾಗಿ ಮತ್ತು ಮೇಘನಾ ಕಾವೇರಿ ಪಾತ್ರದಲ್ಲಿ ಮೋಡಿ ಮಾಡಿದ್ದಾರೆ. ಇವರಿಬ್ಬರ ಜೋಡಿಯನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಬಾಕ್ಸ್‌ ಆಫೀಸ್‌ನಲ್ಲಿಯೂ ಈ ಚಿತ್ರ ಸದ್ದು ಮಾಡಿದೆ.

ʼರಾಜಾಹುಲಿʼ 2013ರ ನವೆಂಬರ್‌ 1ರಂದು ತೆರೆಕಂಡು ಸುಮಾರು 12 ಕೋಟಿ ರೂ. ಕಲೆಕ್ಷನ್‌ ಮಾಡಿದೆ. ಇದು ತಮಿಳಿನ ʼಸುಂದರ ಪಾಂಡಿಯನ್‌ʼ ಚಿತ್ರದ ರಿಮೇಕ್‌. ನಿರ್ಧೇಶಕ ಗುರು ದೇಶಪಾಂಡೆ ಕನ್ನಡದ ನೇಟಿವಿಟಿಗೆ ತಕ್ಕಂತೆ ಬದಲಾವಣೆ ಮಾಡಿ ಇದನ್ನು ತೆರೆ ಮೇಲೆ ತಂದಿದ್ದಾರೆ. ಯಶ್‌-ಮೇಘನಾ ಜತೆಗೆ ವಶಿಷ್ಟ ಎನ್‌. ಸಿಂಹ, ಚಿಕ್ಕಣ್ಣ, ಚರಣ್‌ರಾಜ್‌, ಮಿತ್ರ, ಎಂ.ಎನ್‌.ಲಕ್ಷ್ಮೀದೇವಿ, ಅರುಣ್‌ ಬಾಲರಾಜ್‌ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ.

ಇದನ್ನೂ ಓದಿ: Actor Yash: ರಾಕಿಂಗ್‌ ಸ್ಟಾರ್‌ ಯಶ್‌ ʼಟಾಕ್ಸಿಕ್‌ʼ ಸಿನಿಮಾದಿಂದ ಹೊರ ಬಿತ್ತು ಬಿಗ್‌ ಅಪ್‌ಡೇಟ್‌!

ಇದು ಮೊದಲ ಸಲವಲ್ಲ

ವಿಶೇಷ ಎಂದರೆ ಯಶ್‌ ಅಬಿನಯದ ಚಿತ್ರವೊಂದು ರಿ-ರಿಲೀಸ್‌ ಆಗುತ್ತಿರುವುದು ಇದು ಮೊದಲ ಸಲ್ಲ. ಈ ಹಿಂದೆ ಅವರ ʼಮಿ. & ಮಿ. ರಾಮಾಚಾರಿʼ ಮರು ಬಿಡುಗಡೆಯಾಗಿತ್ತು. ಸದ್ಯ ಯಶ್‌ ಬಹುನಿರೀಕ್ಷಿತ ʼಟಾಕ್ಸಿಕ್‌ʼ ಚಿತ್ರದಲ್ಲಿ ನಿರತರಾಗಿದ್ದಾರೆ. ಮಲಯಾಳಂನ ಗೀತು ಮೋಹನ್‌ದಾಸ್‌ ನಿರ್ದೇಶನದ ಈ ಪ್ಯಾನ್‌ ಇಂಡಿಯಾ ಸಿನಿಮಾ ಈಗಾಗಲೇ ಕುತೂಹಲ ಕೆರಳಿಸಿದೆ. ಸದ್ಯ ಚಿತ್ರತಂಡ ಟೀಸರ್‌ ರಿಲೀಸ್‌ ಮಾಡಿದ್ದು ಬಿಟ್ಟರೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ. ಮುಂದಿನ ವರ್ಷ ತೆರೆ ಕಾಣಲಿರುವ ಈ ಸಿನಿಮಾದಲ್ಲಿ ಕಾಲಿವುಡ್‌ ಸೂಪರ್‌ ಸ್ಟಾರ್‌ ನಯನತಾರಾ ಅಭಿನಯಿಸುತ್ತಾರೆ ಎನ್ನಲಾಗಿದ್ದು, ಅಧಿಕೃತ ಮಾಹಿತಿ ಇನ್ನೂ ಹೊರ ಬಿದ್ದಿಲ್ಲ. ಈ ಮಧ್ಯೆ ಇತ್ತೀಚೆಗೆ ನಡೆದ ಅನಂತ್‌ ಅಂಬಾನಿ-ರಾದಿಕಾ ಮರ್ಚಂಟ್‌ ಮದುವೆಯಲ್ಲಿ ಯಶ್‌ ಭಾಗಿಯಾಗಿದ್ದು, ಫೋಟೊ, ವಿಡಿಯೊ ವೈರಲ್‌ ಆಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Kannada New Movie: ಸೆಟ್ಟೇರಿತು ‘ಆಕಾಶ್’, ‘ಅರಸು’ ಚಿತ್ರಗಳ ಡೈರೆಕ್ಟರ್ ಹೊಸ ಸಿನಿಮಾ; ಕಿರುತೆರೆಯ ಈ ಪ್ರತಿಭೆ ನಾಯಕ

Kannada New Movie: ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ಅಭಿನಯದ ʼಆಕಾಶ್ʼ, ʼಅರಸುʼ ಮುಂತಾದ ಹಿಟ್ ಸಿನಿಮಾಗಳ ನಿರ್ದೇಶಕ ಮಹೇಶ್ ಬಾಬು ಹೊಸ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಈ ಬಾರಿ ಅವರು ಕಿರುತೆರೆ ನಟ ಸ್ಮೈಲ್ ಗುರು ರಕ್ಷಿತ್ ಅವರನ್ನು ನಾಯಕನಾಗಿ ಕನ್ನಡ ಬೆಳ್ಳಿಪರದೆಗೆ ಕರೆದುಕೊಂಡು ಬರುತ್ತಿದ್ದಾರೆ. ಶೀರ್ಷಿಕೆ ಅಂತಿಮವಾಗದ ಈ ಸಿನಿಮಾದ ಮುಹೂರ್ತ ಬೆಂಗಳೂರಿನ ಅಭಯ ಹಸ್ತ ಬಲಮುರಿ ದೇಗುಲದಲ್ಲಿ ನಡೆದಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ (Puneeth Rajkumar) ಅಭಿನಯದ ʼಆಕಾಶ್ʼ, ʼಅರಸುʼ, ಪ್ರಜ್ವಲ್‌ ದೇವರಾಜ್‌ ನಟನೆಯ ʼಮೆರವಣಿಗೆʼಯಂತಹ ಹಿಟ್ ಸಿನಿಮಾಗಳ ನಿರ್ದೇಶಕ ಮಹೇಶ್ ಬಾಬು (Mahesh Babu) ಹೊಸ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಹೊಸ ಪ್ರತಿಭೆಗಳನ್ನು ಪರಿಚಯಿಸುವ ಅವರು ಇದೀಗ ಈ ಚಿತ್ರದ ಮೂಲಕ ಕಿರುತೆರೆ ನಟ ಸ್ಮೈಲ್ ಗುರು ರಕ್ಷಿತ್ ಅವರನ್ನು ನಾಯಕನಾಗಿ ಕನ್ನಡ ಬೆಳ್ಳಿಪರದೆಗೆ ಕರೆದುಕೊಂಡು ಬರುತ್ತಿದ್ದಾರೆ. ಮಹೇಶ್ ಬಾಬು ಹಾಗೂ ರಕ್ಷಿತ್ ಹೊಸ ಸಿನಿಮಾ ಇತ್ತೀಚೆಗೆ ಸೆಟ್ಟೇರಿದೆ. ಬೆಂಗಳೂರಿನ ಅಭಯ ಹಸ್ತ ಬಲಮುರಿ ದೇಗುಲದಲ್ಲಿ ಮುಹೂರ್ತ ನೆರವೇರಿದೆ (Kannada New Movie).

ಮಹೇಶ್ ಬಾಬು ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದ ಶೀರ್ಷಿಕೆ ಏನು ಎಂಬುದು ಇನ್ನೂ ಬಹಿರಂಗಗೊಂಡಿಲ್ಲ. ಸದ್ಯಕ್ಕೆ ಇದನ್ನು ‘ಪ್ರೊಡಕ್ಷನ್ ನಂ 2’ ಎಂದು ಕರೆಯಲಾಗುತ್ತಿದೆ. ʼನೆನಪಿರಲಿʼ ಪ್ರೇಮ್ ಈ ಸಿನಿಮಾದ ಮುಹೂರ್ತ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಮೊದಲ ದೃಶ್ಯಕ್ಕೆ ಅವರು ಆರಂಭ ಫಲಕ ತೋರಿದರು. ಬಳಿಕ ಚಿತ್ರತಂಡಕ್ಕೆ ಅವರು ಶುಭ ಹಾರೈಸಿದರು.

ಎ ಕ್ಲಾಸ್ ಸಿನಿ ಫಿಲ್ಮ್ಸ್ ಪ್ರೊಡಕ್ಷನ್ ಸಂಸ್ಥಾಪಕ ಅನುರಾಗ್ ಆರ್ ತಾಯಿ ಕ್ಯಾಮೆರಾ ಚಾಲನೆ ಮಾಡುವ ಮೂಲಕ ಶುಭ ಕೋರಿದರು. ಈ ಸಿನಿಮಾದಲ್ಲಿ ಸ್ಮೈಲ್ ಗುರು ರಕ್ಷಿತ್‌ಗೆ ಜೋಡಿಯಾಗಿ ಸುದೀಪ್‌ ಅಭಿನಯದ ‘ವೀರ ಮದಕರಿ’ಯಲ್ಲಿ ಬಾಲನಟಿಯಾಗಿ ಕಾಣಿಸಿಕೊಂಡಿದ್ದ ಜೆರುಶಾ ನಟಿಸಲಿದ್ದಾರೆ. ಮತ್ತೊಬ್ಬ ನಾಯಕಿಯ ಹೆಸರನ್ನು ಚಿತ್ರತಂಡ ಶೀಘ್ರದಲ್ಲಿಯೇ ರಿವೀಲ್ ಮಾಡಲಿದೆ.

ಎಂಎಂಎಂ ಪಿಕ್ಚರ್ಸ್ ಹಾಗೂ ಎ ಕ್ಲಾಸ್ ಸಿನಿ ಫಿಲ್ಮ್ಸ್‌ ಜಂಟಿಯಾಗಿ ಈ ಚಿತ್ರ ನಿರ್ಮಾಣ ಮಾಡುತ್ತಿದೆ. ಈ ನಿರ್ಮಾಣ ಸಂಸ್ಥೆಯಡಿ ಅನುರಾಗ್ ಆರ್. ಹಾಗೂ ಮಿಥುನ್ ಕೆಎಸ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಸತ್ಯ ಛಾಯಾಗ್ರಹಣ, ಸತೀಶ್ ಚಂದ್ರಯ್ಯ ಸಂಕಲನ ಚಿತ್ರಕ್ಕಿದೆ. ನಾಯಕ ಸ್ಮೈಲ್ ಗುರು ರಕ್ಷಿತ್ ಕಥೆ ಬರೆದಿದ್ದು, ವಿಜಯ್ ಈಶ್ವರ್ ಸಂಭಾಷಣೆ ಒದಗಿಸಲಿದ್ದಾರೆ. ಶೀಘ್ರದಲ್ಲಿಯೇ ಚಿತ್ರತಂಡ ಅದ್ಧೂರಿಯಾಗಿ ಟೈಟಲ್ ರಿವೀಲ್ ಮಾಡುವ ಯೋಜನೆ ಹಾಕಿಕೊಂಡಿದೆ. ಮೊದಲ ಹಂತದ ಚಿತ್ರೀಕರಣವನ್ನು ಬೆಂಗಳೂರಿನಲ್ಲಿ ಮುಗಿಸಲಿರುವ ಚಿತ್ರತಂಡ ಎರಡನೇ ಹಂತದ ಶೂಟಿಂಗ್‌ಗಾಗಿ ಮಲೆನಾಡಿನತ್ತ ಹೆಜ್ಜೆ ಹಾಕಲಿದೆ.

ಇದನ್ನೂ ಓದಿ: Kannada New Movie: ಕಣ್ಮನ ಸೆಳೆಯುತ್ತಿದೆ ”ಕಡಲೂರ ಕಣ್ಮಣಿ” ಚಿತ್ರದ ಟ್ರೇಲರ್

ಮಹೇಶ್‌ ಬಾಬು ಅವರು 2005ರಲ್ಲಿ ತೆರೆಕಂಡ ʼಆಕಾಶ್‌ʼ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದರು. ಪುನೀತ್‌ ರಾಜ್‌ಕುಮಾರ್‌-ರಮ್ಯಾ ಅಭಿನಯದ ಈ ಸಿನಿಮಾ ಸೂಪರ್‌ ಹಿಟ್‌ ಎನಿಸಿಕೊಂಡಿತ್ತು. ಬಳಿಕ 2007ರಲ್ಲಿ ಮತ್ತೆ ಪುನೀತ್‌ ರಾಜ್‌ಕುಮಾರ್‌-ರಮ್ಯಾ ಕಾಂಬಿನೇಷನ್‌ನಲ್ಲಿ ಮಹೇಶ್‌ ಬಾಬು ʼಅರಸುʼ ಸಿನಿಮಾ ತೆರೆಗೆ ತಂದರು. ಈ ಚಿತ್ರದಲ್ಲಿ ಮಲಯಾಳಂ ನಟಿ, ರಾಷ್ಟ್ರಪ್ರಶಸ್ತಿ ಪುರಸ್ಕೃತೆ ಮೀರಾ ಜಾಸ್ಮಿನ್‌ ಕೂಡ ಅಭಿನಯಿಸಿದ್ದರು. ಈ ಚಿತ್ರವೂ ಸೂಪರ್‌ ಹಿಟ್‌ ಆಗಿತ್ತು. ಅದಾದ ಬಳಿಕ ಮಹೇಶ್‌ ಬಾಬು ಅವರು ಶಿವರಾಜ್‌ ಕುಮಾರ್‌ ಅವರ ʼಪರಮೇಶ ಪಾನ್‌ವಾಲಾʼ, ʼಮೆರವಣಿಗೆʼ ಮೊದಲದ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಮಾತ್ರವಲ್ಲ ದರ್ಶನ್‌ ಅಭಿನಯದ ʼಅಭಯ್‌ʼ ಚಿತ್ರಕ್ಕೂ ಮಹೇಶ್‌ ಬಾಬು ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಹೀಗೆ ಒಂದೂವರೆ ದಶಕಗಳಿಂದ ಸ್ಯಾಂಡಲ್‌ವುಡ್‌ನಲ್ಲಿ ಸಕ್ರಿಯರಾಗಿವ ಅವರು ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

Continue Reading

ಸಿನಿಮಾ

Iti Acharya: ಬಾಲಿವುಡ್‌ಗೆ ಕಾಲಿಟ್ಟ ಮತ್ತೊಬ್ಬ ಕನ್ನಡತಿ; ದಕ್ಷಿಣ ಭಾರತದ ಚಿತ್ರಗಳ ಬಳಿಕ ಹಿಂದಿಯಲ್ಲೂ ಅಭಿನಯ

Iti Acharya: ನಟಿ, ಮಾಡೆಲ್‌ ಇತಿ ಆಚಾರ್ಯ ಇದೀಗ ಬಾಲಿವುಡ್‌ನತ್ತ ಮುಖ ಮಾಡಿದ್ದಾರೆ. ದಕ್ಷಿಣ ಭಾರತದ ಚಿತ್ರಗಳಲ್ಲಿ ನಟಿಸಿರುವ ಈ ಕನ್ನಡತಿ ಇದೀಗ ʼದಿ ಶೂಸ್ ಐ ವೋರ್ʼ ಎಂಬ ಹೊಸ ಹಿಂದಿ ಚಿತ್ರದಲ್ಲಿ ಇತಿ ನಾಯಕಿಯಾಗಿ ಬಣ್ಣ ಹಚ್ಚುತ್ತಿದ್ದಾರೆ. ಯುವ ಪ್ರತಿಭೆ ಸಂಜಯ್ ಚರಣ್ ನಿರ್ದೇಶನದ ಈ ಸಿನಿಮಾದಲ್ಲಿ ʼಇನ್ನಮುಲ್ಕ್ʼ ಮತ್ತು ʼಸ್ಕ್ಯಾಮ್ʼ ಖ್ಯಾತಿಯ ಫೈಸಲ್ ರಶೀದ್‌ಗೆ ಜೋಡಿಯಾಗಿ ಅವರು ಅಭಿನಯಿಸಲಿದ್ದಾರೆ. ಇತಿ ಆಚಾರ್ಯ ಕನ್ನಡದ ʼಕವಚʼ, ʼಧ್ವನಿʼ, ʼಡೀಲ್‌ ರಾಜಾʼ, ʼಪಂಗನಾಮʼ ಸಿನಿಮಾಗಳಲ್ಲಿ ನಟಿಸಿದ್ದಾರೆ.

VISTARANEWS.COM


on

Iti Acharya
Koo

ಮುಂಬೈ: ಕಿರಿಕ್‌ ಪಾರ್ಟಿ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ ಪ್ರವೇಶಿಸಿ ಬಳಿಕ ಟಾಲಿವುಡ್‌ನಲ್ಲಿ ಮಿಂಚಿ ಕಾಲಿವುಡ್‌ನಲ್ಲೂ ಛಾಪು ಮೂಡಿಸಿದ ಕನ್ನಡತಿ ರಶ್ಮಿಕಾ ಮಂದಣ್ಣ (Rashmika Mandanna) ಇದೀಗ ಬಾಲಿವುಡ್‌ನಲ್ಲಿ ಗಟ್ಟಿಯಾಗಿ ನೆಲೆಯೂರುವ ಸೂಚನೆ ನೀಡಿದ್ದಾರೆ. ಸ್ಟಾರ್‌ ನಟರ ಬ್ಯಾಕ್‌ ಟು ಬ್ಯಾಕ್‌ ಚಿತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇವರ ಜತೆಗೆ ಇನ್ನೊಬ್ಬ ಸ್ಯಾಂಡಲ್‌ವುಡ್‌ ನಟಿಯೂ ಇದೀಗ ಬಾಲಿವುಡ್‌ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಅವರೇ ನಟಿ, ಮಾಡೆಲ್‌ ಇತಿ ಆಚಾರ್ಯ (Iti Acharya).

ಇತಿ ಆಚಾರ್ಯ ನಟನೆ ಜತೆಗೆ ಮಾಡೆಲಿಂಗ್‌ನಲ್ಲಿಯೂ ಮಿಂಚುತ್ತಿದ್ದಾರೆ. 2016ರ ಮಿಸ್ ಸೌತ್ ಇಂಡಿಯಾ ವಿನ್ನರ್ ಕಿರೀಟ ಮುಡಿಗೇರಿಸಿಕೊಂಡಿರುವ ಈ ಕನ್ನಡತಿ ಆರ್.ವಿ.ಎಸ್.ಪಿ. ಪ್ರೊಡಕ್ಷನ್ ಹೌಸ್ ಮೂಲಕ ನಿರ್ಮಾಪಕಿ ಆಗಿಯೂ ಗುರುತಿಸಿಕೊಂಡಿದ್ದಾರೆ. ಕನ್ನಡ ಮಾತ್ರವಲ್ಲದೇ ಹಿಂದಿ, ತಮಿಳು, ಮಲಯಾಳಂ ಸಿನಿಮಾಗಳಲ್ಲೂ ಇತಿ ಆಚಾರ್ಯ ಬ್ಯುಸಿಯಾಗಿದ್ದಾರೆ. ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ಹೋರ್ಡಿಂಗ್ಸ್‌ನಲ್ಲಿ ಕಾಣಿಸಿಕೊಂಡ ಹಿರಿಮೆ ಅವರದ್ದು. ಅಮೇರಿಕಾದ ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ ಮೆರ್ಲಿನ್ ಬಾಬಾಜಿ ಸಾಂಗ್‌ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಇತಿ ಆಚಾರ್ಯ ಅವರು ಜನಪ್ರಿಯತೆ ಪಡೆದಿದ್ದಾರೆ.

ಜುಲೈ 15ರಂದು ಹುಟ್ಟುಹಬ್ಬ ಆಚರಿಸಿಕೊಂಡ ಇತಿ ಆಚಾರ್ಯ ಹೊಸ ಸಿನಿಮಾದ ಅಪ್‌ಡೇಟ್ ಹಂಚಿಕೊಂಡಿದ್ದಾರೆ. ʼದಿ ಶೂಸ್ ಐ ವೋರ್ʼ ಎಂಬ ಹೊಸ ಹಿಂದಿ ಚಿತ್ರದಲ್ಲಿ ಇತಿ ನಾಯಕಿಯಾಗಿ ಬಣ್ಣ ಹಚ್ಚುತ್ತಿದ್ದಾರೆ. ಯುವ ಪ್ರತಿಭೆ ಸಂಜಯ್ ಚರಣ್ ನಿರ್ದೇಶನದ ಈ ಸಿನಿಮಾದಲ್ಲಿ ʼಇನ್ನಮುಲ್ಕ್ʼ ಮತ್ತು ʼಸ್ಕ್ಯಾಮ್ʼ ಖ್ಯಾತಿಯ ಫೈಸಲ್ ರಶೀದ್‌ಗೆ ಜೋಡಿಯಾಗಿ ಅವರು ಅಭಿನಯಿಸಲಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಇತಿ ಆಚಾರ್ಯ, ʼʼನಾನು ಈ ಸಿನಿಮಾದ ಭಾಗವಾಗಿರುವುದಕ್ಕೆ ಖುಷಿ ಇದೆ. ತುಂಬಾ ಉತ್ಸುಕಳಾಗಿದ್ದೇನೆ. ಈ ಪಯಣದಲ್ಲಿ ಸಾಕಷ್ಟು ಕಲಿಯುವುದು ಇದೆ. ವಿಭಿನ್ನ ಕಥೆಯಾಗಿದ್ದು, ಇದೊಂದು ಟೆಕ್ನಿಕಲ್ ಸಿನಿಮಾʼʼ ಎಂದಿದ್ದಾರೆ.

ಇದನ್ನೂ ಓದಿ: Rakshit Shetty: ರಕ್ಷಿತ್‌ ಶೆಟ್ಟಿಗೆ ತಪ್ಪದ ಸಂಕಷ್ಟ; ಮತ್ತೊಂದು ದೂರು ದಾಖಲು!

ಇತಿ ಆಚಾರ್ಯ ಕನ್ನಡದ ʼಕವಚʼ, ʼಧ್ವನಿʼ, ʼಡೀಲ್‌ ರಾಜಾʼ, ʼಪಂಗನಾಮʼ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅದೇ ರೀತಿ ಮಲಯಾಳಂ, ತೆಲುಗು ಮತ್ತು ತಮಿಳಿನ ಸಿನಿಮಾಗಳಲ್ಲಿಯೂ ಅಭಿನಯಿಸಿದ್ದಾರೆ. ಇದೀಗ ಬಾಲಿವುಡ್‌ಗೆ ತೆರಳಿ ಬಹುಭಾಷಾ ನಟಿ ಎನಿಸಿಕೊಂಡಿದ್ದಾರೆ.

Continue Reading

ದೇಶ

Anant Ambani Wedding: ಮಗನ ಮದುವೆಯಲ್ಲಿ ರಿಲಯನ್ಸ್ ಉದ್ಯೋಗಿಗಳಿಗೂ ಭರ್ಜರಿ ಔತಣ ನೀಡಿದ ಮುಖೇಶ್ ಅಂಬಾನಿ

Anant Ambani Wedding: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ ಅವರ ವಿವಾಹವು ಮುಂಬೈನಲ್ಲಿ ಅದ್ಧೂರಿಯಾಗಿ ನೆರವೇರಿದೆ. ಈ ಹಿನ್ನೆಲೆಯಲ್ಲಿ ಅಂಬಾನಿ ಕುಟುಂಬ 4 ದಿನಗಳ ಕಾಲ ವೈಭವದ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಸೋಮವಾರ ತೆರೆ ಬಿದ್ದಿದ್ದು, ಕೊನೆಯ ದಿನ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಪಾಲ್ಗೊಂಡಿದ್ದರು.

VISTARANEWS.COM


on

Anant Ambani Wedding
Koo

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಕೇಶ್ ಅಂಬಾನಿ (Mukesh Ambani) ಅವರ ಕಿರಿಯ ಪುತ್ರ ಅನಂತ್ ಅಂಬಾನಿ (Anant Ambani Wedding) ಮತ್ತು ಕೈಗಾರಿಕೋದ್ಯಮಿ ವೀರೇನ್ ಮರ್ಚಂಟ್‌ ಅವರ ಪುತ್ರಿ ರಾಧಿಕಾ ಮರ್ಚಂಟ್‌ (Radhika Merchant) ಅವರ ವಿವಾಹವು ಮುಂಬೈನಲ್ಲಿ ಅದ್ಧೂರಿಯಾಗಿ ನೆರವೇರಿದೆ. ಈ ಹಿನ್ನೆಲೆಯಲ್ಲಿ ಅಂಬಾನಿ ಕುಟುಂಬ 4 ದಿನಗಳ ಕಾಲ ವೈಭವದ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಸೋಮವಾರ ತೆರೆ ಬಿದ್ದಿದೆ. ಕೊನೆಯ ದಿನವಾದ ಸೋಮವಾರ ಜಿಯೋ ವರ್ಲ್ಡ್ ಡ್ರೈವ್‌ನಲ್ಲಿ ಮಾಧ್ಯಮ ಪ್ರತಿನಿಧಿಗಳು, ರಿಲಯನ್ಸ್ ಉದ್ಯೋಗಿಗಳು ಮತ್ತು ಅಂಬಾನಿ ಕುಟುಂಬದ ಸಿಬ್ಬಂದಿಗೆ ವಿಶೇಷ ಸಮಾರಂಭ ಆಯೋಜಿಸಲಾಗಿತ್ತು.

ಮಾಧ್ಯಮಗಳು ಮತ್ತು ರಿಲಯನ್ಸ್‌ ಸಿಬ್ಬಂದಿಗೆಂದು ವಿಶೇಷವಾಗಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಪಾಲ್ಗೊಂಡಿದ್ದರು. ಅಕ್ಷಯ್‌ ಕುಮಾರ್‌ ಅವರಿಗೆ ಕೋವಿಡ್ ಬಾಧಿಸಿದ್ದ ಹಿನ್ನೆಲೆಯಲ್ಲಿ ಅವರು ಮದುವೆಯಲ್ಲಿ ಪಾಲ್ಗೊಂಡಿರಲಿಲ್ಲ. ಹೀಗಾಗಿ ಸೋಮವಾರ ಅವರು ಸಮಾರಂಭದಕ್ಕೆ ಪತ್ನಿ ಟ್ವಿಂಕಲ್‌ ಖನ್ನಾ ಜತೆಗೆ ಆಗಮಿಸಿದ ವಧು-ವರರಿಗೆ ಶುಭಾಶಯ ತಿಳಿಸಿದ್ದರು.

ಯಾರೆಲ್ಲ ಭಾಗಿ?

ಅಂಬಾನಿ ಆಸ್ತಿಗಳ ಹೌಸ್ ಕೀಪಿಂಗ್, ಸೆಕ್ಯುರಿಟಿ, ಸೆಕ್ರೆಟರಿಯಲ್‌ ಮತ್ತು ನಿರ್ವಹಣಾ ವಿಭಾಗಗಳ ಉದ್ಯೋಗಿಗಳು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ. ಸಾವಿರಾರು ಕಾರ್ಮಿಕರು ಮತ್ತು ಅವರ ಕುಟುಂಬಗಳ ಜತೆಗೆ ಮಾಧ್ಯಮ ಪ್ರತಿನಿಧಿಗಳೂ ಪಾಲ್ಗೊಂಡಿದ್ದರು. ಈ ಮೂಲಕ ಅನಂತ್‌-ರಾಧಿಕಾ ಮದುವೆಯ ಆಚರಣೆಗೆ ತೆರೆ ಎಳೆಯಲಾಗಿದೆ.

ಗಣ್ಯರ ದಂಡೇ ಉಪಸ್ಥಿತಿ

ಸಮಾರಂಭಕ್ಕೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ಕೂಡ ಆಗಮಿಸಿ ಮದುಮಕ್ಕಳನ್ನು ಆಶೀರ್ವದಿಸಿದ್ದರು. ಜತೆಗೆ ನಟ-ನಟಿಯರು, ಕ್ರಿಕೆಟಿಗರು, ಬೇರೆ ದೇಶಗಳ ನಾಯಕರಿಂದ ಹಿಡಿದು ಸಾವಿರಾರು ಗಣ್ಯರು, ಸೆಲೆಬ್ರಿಟಿಗಳು ಪಾಲ್ಗೊಂಡಿದ್ದರು. ಮಹೇಂದ್ರ ಸಿಂಗ್‌ ಧೋನಿ, ಅಮಿತಾಭ್‌ ಬಚ್ಚನ್‌, ಯಶ್‌, ದೀಪಿಕಾ ಪಡುಕೋಣೆ, ಆಲಿಯಾ ಭಟ್‌, ರಣವೀರ್‌ ಸಿಂಗ್‌, ರಣಬೀರ್‌ ಕಪೂರ್‌, ಅನನ್ಯಾ ಪಾಂಡೆ, ರಜನಿಕಾಂತ್‌, ಮಹೇಶ್‌ ಬಾಬು, ಹಾರ್ದಿಕ್‌ ಪಾಂಡ್ಯ, ಐಶ್ವರ್ಯಾ ರೈ, ದಿಶಾ ಪಟಾಣಿ, ನಯನತಾರಾ, ವಿಘ್ನೇಶ್‌ ಶಿವನ್‌, ಜೆನಿಲಿಯಾ, ರಿತೇಶ್‌ ದೇಶ್‌ಮುಖ್‌, ಮಾಧುರಿ ದೀಕ್ಷಿತ್‌, ಶಾರುಖ್‌ ಖಾನ್‌, ಸಲ್ಮಾನ್‌ ಖಾನ್‌, ಸೂರ್ಯ, ಜ್ಯೋತಿಕಾ, ರಶ್ಮಿಕಾ ಮಂದಣ್ಣ, ಪ್ರಿಯಾಂಕಾ ಚೋಪ್ರಾ, ಬ್ರಿಟನ್‌ ಮಾಜಿ ಪ್ರಧಾನಿಗಳಾದ ಬೋರಿಸ್‌ ಜಾನ್ಸನ್‌, ಟೋನಿ ಬ್ಲೇರ್‌ ಸೇರಿ ಹಲವು ಗಣ್ಯರು ಪಾಲ್ಗೊಂಡಿದ್ದರು.

ಇದನ್ನೂ ಓದಿ: ಧೋನಿಯಿಂದ ರಜನಿಕಾಂತ್‌ವರೆಗೆ; ಅನಂತ್‌ ಅಂಬಾನಿ ಮದುವೆಯಲ್ಲಿ ಪಾಲ್ಗೊಂಡ ಗಣ್ಯರ ಫೋಟೊ, ವಿಡಿಯೊಗಳು ಇಲ್ಲಿವೆ

5 ಸಾವಿರ ಕೋಟಿ ರೂ. ಖರ್ಚು

ಅದ್ಧೂರಿ ವಿವಾಹ ಸಮಾರಂಭಕ್ಕೆ ಅಂದಾಜು ವೆಚ್ಚ 4,000ರಿಂದ 5000 ಕೋಟಿ ರೂ. ಎನ್ನಲಾಗಿದೆ. ಇದು ಅವರ ನಿವ್ವಳ ಆದಾಯದ ಶೇ. 0.5ರಷ್ಟು ಮಾತ್ರ! ವರದಿಗಳ ಪ್ರಕಾರ ಮುಖೇಶ್ ಅಂಬಾನಿ ಅವರ ನಿವ್ವಳ ಆದಾಯ ಮೌಲ್ಯವು 7.65 ಲಕ್ಷ ಕೋಟಿ ರೂ. ಮಾರ್ಚ್‌ನಲ್ಲಿ ಮದುವೆಯ ಪೂರ್ವಭಾವಿ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆದಿತ್ತು. ಅಂಬಾನಿ ಕುಟುಂಬದ ವಿವಾಹ ಕಾರ್ಯಕ್ರಮದಲ್ಲಿ ಜಾಗತಿಕ ಗಾಯನ ಐಕಾನ್‌ಗಳಾದ ಜಸ್ಟಿನ್ ಬೀಬರ್, ರಿಹಾನ್ನಾ, ದಿಲ್ಜಿತ್ ದೋಸಾಂಜ್ ಸೇರಿದಂತೆ ಹಾಲಿವುಡ್‌-ಬಾಲಿವುಡ್‌ನ ಅನೇಕ ಸೆಲೆಬ್ರಿಟಿಗಳು ಪಾಲ್ಗೊಂಡಿದ್ದರು.

Continue Reading

ಪ್ರಮುಖ ಸುದ್ದಿ

Rakshit Shetty: ಬ್ಯಾಚಲರ್‌ ಪಾರ್ಟಿ ‌’ಕಿರಿಕ್’; ಕೇಸ್‌ ಬೆನ್ನಲ್ಲೇ ಕಾನೂನು ಹೋರಾಟ ಎಂದ ರಕ್ಷಿತ್‌ ಶೆಟ್ಟಿ; ಇಲ್ಲಿದೆ ಪತ್ರ

Rakshit Shetty: ನಟ ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಜನವರಿ 26 ರಂದು ರಿಲೀಸ್‌ ಆಗಿತ್ತು. ಕಾಮಿಡಿ ಜಾನರ್‌ನ ಈ ಸಿನಿಮಾದಲ್ಲಿ ನಟ ದಿಗಂತ್, ಲೂಸ್ ಮಾದ ಯೋಗಿ, ಅಚ್ಯುತ್ ಕುಮಾ‌ರ್, ನಟಿ ಸಿರಿ ರವಿಕುಮಾರ್‌ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು. ಕಿರಿಕ್ ಪಾರ್ಟಿ’ ಚಿತ್ರದ ಬರಹಗಾರ ಅಭಿಜಿತ್ ಮಹೇಶ್ ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದರು. ಕಿರಿಕ್‌ ಪಾರ್ಟಿಯ ಬರಹಗಾರರಲ್ಲಿ ಅಭಿಜಿತ್ ಮಹೇಶ್ ಕೂಡ ಒಬ್ಬರು. ಈ ಸಿನಿಮಾದಲ್ಲಿ ಬಳಕೆಯಾದ ಎರಡು ಹಾಡುಗಳ ಕುರಿತು ಈಗ ವಿವಾದ ಸೃಷ್ಟಿಯಾಗಿದೆ.

VISTARANEWS.COM


on

Rakshit Shetty
Koo

ಬೆಂಗಳೂರು: ಸ್ಯಾಂಡಲ್‌ವುಟ್‌ ನಟ, ನಿರ್ಮಾಪಕ, ನಿರ್ದೇಶಕ ರಕ್ಷಿತ್‌ ಶೆಟ್ಟಿ (Rakshit Shetty) ವಿರುದ್ಧ ಕಾಪಿರೈಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿ (Bachelor Party Kannada Movie) ಬಳಸಿದ ಒಮ್ಮೆ ನಿನ್ನನ್ನು ಹಾಗೂ ನ್ಯಾಯ ಎಲ್ಲಿದೆ ಎಂಬ ಹಾಡುಗಳ ಕಾಪಿರೈಟ್‌ ವಿಚಾರಕ್ಕೆ ಸಂಬಂಧಿಸಿದಂತೆ ಕೇಸ್‌ ದಾಖಲಾಗಿದೆ. ಇದರ ಬೆನ್ನಲ್ಲೇ, ರಕ್ಷಿತ್‌ ಶೆಟ್ಟಿ ಒಡೆತನದ ಪರಂವಃ ಸ್ಟುಡಿಯೋಸ್‌ನಿಂದ (Paramvah Studios) ಸುದೀರ್ಘ ಪತ್ರ ಬರೆದಿದ್ದು, ಕಾನೂನು ಹೋರಾಟ ಮಾಡುವುದಾಗಿ ಘೋಷಿಸಲಾಗಿದೆ.

ಪರಂವಃ ಪತ್ರದ ಸಾರಾಂಶ ಹೀಗಿದೆ…

“ನಾವು ಈ ಬಹಿರಂಗ ಪತ್ರವನ್ನು ಎಂಆರ್‌ಟಿ ಮ್ಯೂಸಿಕ್ ಸಂಸ್ಥೆ ನಮ್ಮ ಮೇಲೆ ಎರಡು ಹಾಡಿನ ಹಕ್ಕು ಉಲ್ಲಂಘನೆಯ ಆರೋಪ ಮಾಡಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಲು ಬರೆದಿರುತ್ತೇವೆ. ಮೊದಲಿಗೆ ಸ್ಪಷ್ಟಿಕರಿಸಲು, ಚಿತ್ರದಲ್ಲಿ ಬಳಕೆಯಾಗಿರುವ ತುಣುಕುಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ. ಕಾರಣ, ಚಿತ್ರದಲ್ಲಿ ಈ ಹಾಡುಗಳು ಯಾವ ಭಾಗದಲ್ಲಿ, ಯಾವ ರೀತಿಯಲ್ಲಿ ಬಳಕೆಯಾಗಿದೆ ಎಂದು. ಅಲ್ಲದೆ, ಬಳಕೆಯ ರೂಪವನ್ನು ನಿಮ್ಮ ಗಮನಕ್ಕೆ ತರುತ್ತಿದ್ದೇವೆ” ಎಂಬುದಾಗಿ ಪತ್ರವನ್ನು ಹಂಚಿಕೊಳ್ಳಲಾಗಿದೆ.

“ಈ ಮುಂಚೆ, ಅಂದರೆ, ಬ್ಯಾಚುಲರ್ ಪಾರ್ಟಿ ಸಿನಿಮ ತೆರೆಕಾಣುವುದಕ್ಕೂ ಮುನ್ನವೆ ನಾವು ಎಂ ಆರ್ ಟಿ ಸಂಸ್ಥೆಯ ಮುಖ್ಯಸ್ಥರೊಂದಿಗೆ ಈ ಕುರಿತು ಮಾತು ಕತೆ ನಡೆಸಿದ್ದೆವು. ಆದರೆ ಅವರು ನಮ್ಮ ಮುಂದೆ ಇಟ್ಟ ಶುಲ್ಕ, ನಮ್ಮ ಬಜೆಟ್‌ ಅನ್ನು ಮೀರಿತ್ತು. ಎಂ ಆರ್ ಟಿ ಸಂಸ್ಥೆ ಶುಲ್ಕದ ಕುರಿತಾಗಿ ಮರು ಮಾತುಕತೆಗೆ ತಯಾರಿರರಿಲ್ಲ. ಈಗ ನಮ್ಮ ಮೇಲೆ ಹಾಡಿನ ಉಲ್ಲಂಘನೆಯ ಆರೋಪ ಬಂದಿದ್ದು, ಎಫ್ ಐ ಆರ್ ದಾಖಲಾಗಿದೆ. ಇದು ನಿಜವಾಗಿಯು ಹಾಡಿನ ಹಕ್ಕು ಉಲ್ಲಂಘನೆಯೆ? ಹೌದಾಗಿದ್ದೇ ಆದಲ್ಲಿ, ನಾವು ತರಬೇಕಾದ ದಂಡವಾದರೂ ಎಷ್ಟು? ಏಕೆಂದರೆ ಎಂ ಆರ್ ಟಿ ಸಂಸ್ಥೆಯಿಂದ ಕೇಳಲ್ಪಟ್ಟದ್ದು ಬೃಹತ್ ಮೊತ್ತ ಎಂದರೆ ತಪ್ಪಾಗಲಾರದು. ಅಲ್ಲವಾದರೆ, ಈ ತರಹದ ಆರೋಪವನ್ನು ಈಗಾಗಲಿ ಅಥವಾ ಮುಂಬರುವ ದಿನಗಳಲ್ಲಾಗಲಿ ಹೇಗೆ ಸಹಿಸಿಕೊಳ್ಳುವುದು! ಇದೊಂದು ಯಕ್ಷ ಪ್ರಶ್ನೆ! ಇದಕ್ಕೆ ಉತ್ತರ ನಾವು ಹುಡುಕ ಬಯಸುತ್ತೇವೆ” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಹಾಗಾಗಿ, ನ್ಯಾಯ ಮತ್ತು ಪ್ರಭುದ್ಧತೆಯನ್ನು ಕಾಪಾಡಿಕೊಳ್ಳಲು ನಾವು ಇದನ್ನು ನ್ಯಾಯಸ್ಥಾನದಲ್ಲಿಯೇ ನಿರ್ಧಾರವಾಗಿಲಿ ಎಂದು ನ್ಯಾಯಾಲಯದ ಮೊರೆ ಹೋಗುತ್ತಿದ್ದೇವೆ. ಇದರಿಂದ ಇನ್ನು ಮುಂಬರುವ ದಿನಗಳಲ್ಲಿ, ನಮಗಷ್ಟೇ ಅಲ್ಲ, ಬೇರೆ ಇನ್ಯಾವ ಸಿಸಿಮಾ ಕರ್ಮಿಗೂ ಈ ಪರಿಸ್ಥಿತಿ ಹಾಗೂ ಗೊಂದಲ ಎದುರಾಗಬಾರದೆಂದು, ನಮ್ಮ ಈ ಪ್ರಾಮಾಣಿಕ ಪ್ರಯತ್ನ” ಎಂದು ಪರಂವಃ ಸ್ಟುಡಿಯೋಸ್‌ ಪತ್ರದ ಮೂಲಕ ತಿಳಿಸಿದೆ. ಹಾಗೆಯೇ, ಸಿನಿಮಾದಲ್ಲಿ ಬಳಸಲಾದ ಎರಡು ಹಾಡುಗಳ ವಿಡಿಯೊವನ್ನು ಕೂಡ ಹಂಚಿಕೊಳ್ಳಲಾಗಿದೆ.

    ಏನಿದು ಪ್ರಕರಣ?

    ʻನ್ಯಾಯ ಎಲ್ಲಿದೆʼ ಟೈಟಲ್ ಸಾಂಗ್ ಹಾಗೂ ‘ಒಮ್ಮೆ ನಿನ್ನನ್ನೂ ಕಣ್ತುಂಬ ನೋಡುವಾಸೆ” ಹಾಡುಗಳನ್ನು ಕದ್ದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಹಿಂದೆ ನವೀನ್ ಕುಮಾರ್ ಎಂಬುವವರ ಜತೆ ಹಾಡುಗಳ ಬಗ್ಗೆ ಮಾತುಕತೆ ನಡೆದಿತ್ತು. ನವೀನ್ ಕುಮಾರ್ ಹಾಡುಗಳ ಕಾಪಿರೈಟ್ ಪಡೆದು ಮಾರಾಟ ಮಾಡುವ ಬ್ಯುಸಿನೆಸ್ ಮೆನ್ ಆಗಿದ್ದರು. ಇವರ ಜತೆ ಹಾಡಿಗೆ ಸಂಬಂಧಿಸಿದ ಮಾತುಕತೆ ನಡೆದಿತ್ತು. ಆದರೆ ನಾನಾ ಕಾರಣಕ್ಕೆ ಈ ಡೀಲ್ ಮುರಿದು ಬಿದ್ದಿತ್ತು. ಆದರೂ ಆ ಹಾಡನ್ನು ಮಾಲೀಕರ ಅನುಮತಿ ಇಲ್ಲದೆ ಬಳಕೆ ಆಗಿತ್ತು. ಚಿತ್ರದಲ್ಲಿ ಎರಡೂ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಮಾಡಿದ್ದಾರೆಂದು ನವೀನ್‌ರಿಂದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಂದು ಕಿರಿಕ್ ಪಾರ್ಟಿ ಇಂದು ಬ್ಯಾಚುಲರ್ ಪಾರ್ಟಿ ವಿವಾದ ಶುರು ಆದಂತಾಗಿದೆ.

    ಇದನ್ನೂ ಓದಿ: Rakshit Shetty: ರಕ್ಷಿತ್‌ ಶೆಟ್ಟಿಗೆ ತಪ್ಪದ ಸಂಕಷ್ಟ; ಮತ್ತೊಂದು ದೂರು ದಾಖಲು!

    Continue Reading
    Advertisement
    Rohit Sharma
    ಕ್ರೀಡೆ14 mins ago

    Rohit Sharma: ‘ಎಲಾ ಉನ್ನಾರು?’; ತೆಲುಗಿನಲ್ಲಿ ಮಾತನಾಡಿದ ರೋಹಿತ್ ಶರ್ಮ; ವಿಡಿಯೊ ವೈರಲ್​

    karnataka rain
    ಮಳೆ29 mins ago

    Karnataka Rain : ಚಿಕ್ಕಮಗಳೂರು, ಹಾಸನದಲ್ಲಿ ಭಾರಿ ಮಳೆಗೆ ಮನೆಗಳು ನೆಲಸಮ

    ಪ್ರಮುಖ ಸುದ್ದಿ37 mins ago

    Karnataka Assembly Live: ಡಿಸಿಎಂ ಡಿಕೆ ಶಿವಕುಮಾರ್-‌ ಅಶ್ವಥ್‌ ನಾರಾಯಣ್‌ ವಾಗ್ಯುದ್ಧ; ಗದ್ದಲ

    Alcohol Delivery
    ದೇಶ40 mins ago

    Alcohol Delivery: ಎಣ್ಣೆ ಪ್ರಿಯರಿಗೆ ಗುಡ್‌ ನ್ಯೂಸ್;‌ ಇನ್ನು ಸ್ವಿಗ್ಗಿಯಲ್ಲಿ ಮನೆ ಬಾಗಿಲಿಗೆ ಬರಲಿದೆ ಆಲ್ಕೋಹಾಲ್!

    Doda Encounter
    ದೇಶ42 mins ago

    Doda Encounter: ಜಮ್ಮು- ಕಾಶ್ಮೀರದಲ್ಲಿ ಉಗ್ರರ ದಾಳಿ; ಬಿಜೆಪಿಯ ತಪ್ಪು ನೀತಿಯೇ ಕಾರಣ ಎಂದ ರಾಹುಲ್‌ ಗಾಂಧಿ

    7th Pay Commission
    ಕರ್ನಾಟಕ1 hour ago

    7th Pay Commission: ರಜೆ, ಪಿಂಚಣಿ, ಬಡ್ತಿ; 7ನೇ ವೇತನ ಆಯೋಗದ ಜಾರಿ ಬಳಿಕ ಸಂಬಳದ ಜತೆ ಏನೆಲ್ಲ ಸೌಲಭ್ಯ ಸಿಗಲಿವೆ? ಇಲ್ಲಿದೆ ಮಾಹಿತಿ

    IND vs SL
    ಕ್ರಿಕೆಟ್1 hour ago

    IND vs SL: ಶ್ರೀಲಂಕಾ ಪ್ರವಾಸಕ್ಕೆ ಇಂದು ಭಾರತ ತಂಡ ಪ್ರಕಟ ಸಾಧ್ಯತೆ: ಯಾರಿಗೆಲ್ಲ ಸಿಗಲಿದೆ ಅವಕಾಶ?

    Gauri Lankesh murder
    ಕ್ರೈಂ1 hour ago

    Gauri Lankesh Murder: ಗೌರಿ ಲಂಕೇಶ್‌ ಹತ್ಯೆ ಪ್ರಕರಣದ 3 ಆರೋಪಿಗಳಿಗೆ ಜಾಮೀನು

    karnataka Rain
    ಮಳೆ1 hour ago

    Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

    Road Accident
    ದೇಶ1 hour ago

    Road Accident: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ ವೇಯಲ್ಲಿ ಭೀಕರ ಅಪಘಾತ; ಪಂಢರಪುರಕ್ಕೆ ತೆರಳುತ್ತಿದ್ದ ಐವರು ಭಕ್ತರ ಸಾವು

    Sharmitha Gowda in bikini
    ಕಿರುತೆರೆ9 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ9 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ9 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    galipata neetu
    ಕಿರುತೆರೆ8 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ10 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Kannada Serials
    ಕಿರುತೆರೆ9 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ9 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ7 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    varun
    ಕಿರುತೆರೆ8 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Kannada Serials
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    karnataka Rain
    ಮಳೆ1 hour ago

    Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

    karnataka Weather Forecast
    ಮಳೆ19 hours ago

    Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    karnataka Rain
    ಮಳೆ1 day ago

    Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

    karnataka weather Forecast
    ಮಳೆ1 day ago

    Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

    Karnataka Rain
    ಮಳೆ2 days ago

    Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

    karnataka Rain
    ಮಳೆ2 days ago

    Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

    haveri News
    ಹಾವೇರಿ2 days ago

    Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

    karnataka Rain
    ಮಳೆ2 days ago

    Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

    karnataka Weather Forecast
    ಮಳೆ3 days ago

    Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

    karnataka Rain
    ಮಳೆ3 days ago

    Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

    ಟ್ರೆಂಡಿಂಗ್‌