ನನ್ನ ದೇಶ ನನ್ನ ದನಿ ಅಂಕಣ: ಗೋವಾದಲ್ಲಿ ಹಿಂದೂಗಳ ಮೇಲಿತ್ತು ಜುಟ್ಟಿನ ತೆರಿಗೆ! - Vistara News

ಅಂಕಣ

ನನ್ನ ದೇಶ ನನ್ನ ದನಿ ಅಂಕಣ: ಗೋವಾದಲ್ಲಿ ಹಿಂದೂಗಳ ಮೇಲಿತ್ತು ಜುಟ್ಟಿನ ತೆರಿಗೆ!

ನನ್ನ ದೇಶ ನನ್ನ ದನಿ ಅಂಕಣ: ನಮ್ಮ ಪಠ್ಯಪುಸ್ತಕಗಳಲ್ಲಿ “ವಾಸ್ಕೋ ಡ ಗಾಮಾ ಭಾರತವನ್ನು ಕಂಡುಹಿಡಿದ” ಎಂಬ ಸಾಲುಗಳನ್ನೇ ನಾವೆಲ್ಲಾ ಹಿಂದೆ ಓದಿದ್ದುಂಟು. ಹತ್ತಾರು ಸಾವಿರ ವರ್ಷಗಳ ಸಮೃದ್ಧ ಇತಿಹಾಸದ ಭಾರತವನ್ನು ಈತ ಕಂಡುಹಿಡಿದನಂತೆ! ಆತ ಭಾರತಕ್ಕೆ ಮೊದಲ ಬಾರಿಗೆ ಬಂದಿದ್ದು 1498ರಲ್ಲಿ. ಕ್ರೈಸ್ತ ಕ್ರೌರ್ಯ ಪರಂಪರೆಯ ಅವನ ಮತ್ತು ಪೋರ್ತುಗೀಸರ ಅನ್ಯಾಯ, ಅತ್ಯಾಚಾರಗಳಿಗೆ ಅಂಕೆಯೇ ಇರಲಿಲ್ಲ.

VISTARANEWS.COM


on

goa ನನ್ನ ದೇಶ ನನ್ನ ದನಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಈ ಅಂಕಣವನ್ನು ಇಲ್ಲಿ ಆಲಿಸಿ:

ajjampura manjunath ನನ್ನ ದೇಶ ನನ್ನ ದನಿ

ನನ್ನ ದೇಶ ನನ್ನ ದನಿ ಅಂಕಣ: ನಮ್ಮ ದೇಶದ ಗತ-ಇತಿಹಾಸವೇ (History of India) ಹಾಗೆ. ನಂಬಲು ಅಸಾಧ್ಯವಾದ ಸಂಗತಿಗಳೇ ಅಧಿಕಾಧಿಕ. ಗೋವಾ (Goa) ಎಂದರೆ ಭೂಮಿಯ ಮೇಲಿನ ಸ್ವರ್ಗ ಎಂಬ ಅಪವ್ಯಾಖ್ಯಾನವಿದೆ. ಮದ್ಯಪಾನ (Liquor consuming) ಇತ್ಯಾದಿಗಳನ್ನು ವೈಭವೀಕರಿಸಿ, ಪ್ರವಾಸಿಗರನ್ನು (Tourists) ಆಕರ್ಷಿಸುವ ದೋಚುವ ಹುನ್ನಾರ ನಡೆದೇ ಇದೆ. ತತ್ಸಂಬಂಧೀ ಆದಾಯವೇ ಪ್ರಮುಖವಾಗಿ ಹೋಗಿ ಆ ರಾಜ್ಯಕ್ಕೆ ಮುಕ್ತಿಯೇ ಇಲ್ಲವಾಗಿದೆ. ಹಿಂದಿನ ಗೋಮಾಂತಕದ (Gomanthaka) ದೇವಾಲಯಗಳ (Temples) ಬಗೆಗೆ, ವಿಭಿನ್ನ-ವಿಶಿಷ್ಟ ಸಂಸ್ಕೃತಿಯ ಬಗೆಗೆ ಕೇಳುವವರೇ ಇಲ್ಲ. ಮತಾಂತರೀ ಕ್ರೈಸ್ತರ (Conversion) ಭಯಂಕರ ಹಿಂಸಾಪರ್ವಕ್ಕೆ (Violence) ಭಾರತದಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ತುತ್ತಾದವರು ಗೋವಾದ ಹಿಂದೂಗಳು.

ಆದರೂ, ಸೇಂಟ್ (ಖಂಡಿತಾ ಆತ ಸಂತನೂ ಅಲ್ಲ, ಸಜ್ಜನನೂ ಅಲ್ಲ) ಫ್ರಾನ್ಸಿಸ್ ಕ್ಸಾವಿಯರ್ (ಸಾಮಾನ್ಯ ಯುಗದ 16ನೆಯ ಶತಮಾನ)ನನ್ನೇ ಸಾಲಾಗಿ ನಿಂತು ನಮಸ್ಕರಿಸಿ ಬರುವ ಮೂರ್ಖ ಹಿಂದೂಗಳು ನಾವಾಗಿದ್ದೇವೆ. ಈತ ತನ್ನ ಕಿಂಗ್-ಗೆ ಪತ್ರ ಬರೆದು ಗೋವಾದಲ್ಲಿ Inquisition ಅತ್ಯಂತ ಆವಶ್ಯಕ ಎಂದು ಒತ್ತಾಯಿಸಿದ್ದ. ಈ ಹಿಂಸೆಗೆ ಬಲಿಯಾದವರ ಅಧಿಕೃತ ಸಂಖ್ಯೆಯೇ 16202. ಇದರಲ್ಲಿ 4012 ಮಂದಿ ಮಹಿಳೆಯರೇ ಇದ್ದರು. ಪೋರ್ತುಗೀಸರ ಎಲ್ಲ ವಸಾಹತುಗಳಲ್ಲಿಯೂ ಯಾತನಾ ಶಿಬಿರಗಳಿದ್ದವು (Concentration Camps). ಹಿಂದೂಗಳ ಮೇಲೆ ಇವರದ್ದು “ಅಚ್ಚುಕಟ್ಟಾದ ಹಿಂಸಾವಿಧಾನ”. ಜರ್ಮನಿಯ ನಾಜಿಗಳನ್ನು ನೆನಪಿಸುವಂತಹುದು. ವಿಚಾರಣೆಯ ಅವಧಿಯಲ್ಲಿ ದುರದೃಷ್ಟಶಾಲಿ ಹಿಂದೂಗಳು ಮಾಡುವ ಚೀತ್ಕಾರ, ವಿಸರ್ಜನೆಗಳ ಬಗೆಗೆ ಗುಮಾಸ್ತರು ವಿವರವಾಗಿ ಬರೆದಿಡುತ್ತಿದ್ದರು. ಕಾಲಿಗೆ ಭಾರ ಕಟ್ಟಿ ಹಿಂಭಾಗದಿಂದ ಕೈಗಳಿಗೆ ಹಗ್ಗ ಕಟ್ಟಿ ಆಪಾದಿತನನ್ನು ಮೇಲೆಳೆಯುತ್ತಿದ್ದರು. ಹೆಬ್ಬೆರಳಿನ ಉಗುರಿನ ಕಣ್ಣುಗಳಿಗೆ ಸೂಜಿಗಳಿಂದ ಚುಚ್ಚುತ್ತಿದ್ದರು. ಬಿಸಿ ಎಣ್ಣೆ, ಸುಣ್ಣದ ನೀರು, ಉರಿಯುವ ಗಂಧಕ ಇವೆಲ್ಲವನ್ನೂ ಹಿಂಸೆಗೆ ಧಾರಾಳವಾಗಿ ಬಳಸುತ್ತಿದ್ದರು. ಉರಿಯುವ ಕೊಳ್ಳಿಗಳಿಂದ ಕಂಕುಳಿಗೆ ತಿವಿಯುತ್ತಿದ್ದರು. ದೊಡ್ಡ ರಾಟೆಯ ಮೇಲೆ ಆಪಾದಿತರನ್ನು ಹಿಗ್ಗಿಸಿ ಸಾಯಿಸುತ್ತಿದ್ದರು. ಹಿಂದೂ ಸಂಪ್ರದಾಯ, ಆಚರಣೆಗಳನ್ನು ಅನುಸರಿಸಿಕೊಂಡು ಬಂದುದೇ ಇವರ ಅಪರಾಧ!

ಪೋರ್ತುಗೀಸರ ದುರಾಡಳಿತದ ಗೋವಾದ್ದು ಭಯಂಕರ ಇತಿಹಾಸ. ಇವರ ಅಮಾನುಷ ಹಿಂಸಾಚಾರದ ಘಟನಾವಳಿ ಬಹಳ ದೊಡ್ಡದೇ ಇದೆ. ಕೆಲವಂತೂ ತೀರ ವಿಚಿತ್ರ ಎನ್ನಿಸುವಂತಿವೆ. ಇಸ್ಲಾಮೀ ಆಕ್ರಮಣಕಾರಿಗಳ ದುರಾಡಳಿತ ಕಾಲದ “ಜಿಜಿಯಾ” ತೆರಿಗೆಯನ್ನು ಹೋಲುವ ಈ ಪೋರ್ತುಗೀಸ್ ಕ್ರೂರಿಗಳ ಅನೇಕ ತೆರಿಗೆಗಳು ಮಾನವ ಸಮಾಜವೇ ತಲೆ ತಗ್ಗಿಸುವಂತಹುವು. ಅದರಲ್ಲೊಂದು ಈ ಜುಟ್ಟಿನ ತೆರಿಗೆ. ಹೀಗೊಂದು ತೆರಿಗೆಯಿತ್ತೆಂಬುದೇ ನಮ್ಮಲ್ಲಿ ಬಹಳ ಜನರಿಗೆ ತಿಳಿಯದು.

ಸಾಮಾನ್ಯ ಯುಗದ 17ನೆಯ ಶತಮಾನದ ಆದ್ಯಂತ ಗೋವಾದ ಪೋರ್ತುಗೀಸ್ ಆಳರಸರಿಗೆ ಹಣದ ಅಭಾವವಿತ್ತು, ಭ್ರಷ್ಟಾಚಾರ ಮಿತಿ ಮೀರಿತ್ತು. ಹೇಗೆಲ್ಲಾ ಜನರ ತಲೆ ಒಡೆದು ಹಣ – ತೆರಿಗೆ ದೋಚಬಹುದು, ಎಂದೇ ಯೋಚಿಸುತ್ತಿದ್ದರು. ಚರ್ಚಿನ ದಂಡಾಧಿಕಾರದ ಮತ್ತು ಪರಮತ ಹಿಂಸೆಯ ಉದ್ದೇಶದ (Inquisition) ವಿಕೃತ ಶಿಕ್ಷಾವಿಧಾನಗಳು ಅಲ್ಲಿದ್ದ ಹಿಂದುಗಳಲ್ಲಿ ಅಸುರಕ್ಷತೆಯನ್ನು ಹುಟ್ಟುಹಾಕಿದ್ದವು. ವ್ಯಾಪಾರ, ವ್ಯವಹಾರ, ಕೃಷಿ ಇತ್ಯಾದಿಗಳು ಅತಂತ್ರವಾಗಿದ್ದವು. 1704ರ ಅಕ್ಟೋಬರ್ ತಿಂಗಳ 12ರಂದು ನಡೆದ ಆಡಳಿತಗಾರರ ಮತ್ತು ಚರ್ಚಿನ ಮುಖ್ಯಸ್ಥರ ಸಭೆಯಲ್ಲಿ ಹೇಗೆಲ್ಲಾ ಗೋವಾದ ಹಿಂದುಗಳನ್ನು ದೋಚಬಹುದು, ತೆರಿಗೆ ಹೆಸರಿನಲ್ಲಿ ಲೂಟಿ ಮಾಡಬಹುದು ಎಂದು ಸಮಾಲೋಚಿಸಲಾಯಿತು. ಪಕ್ಕದಲ್ಲಿದ್ದ ಬಿಜಾಪುರದ ಆದಿಲ್ ಶಾಹೀ ಮತ್ತು ಮೊಘಲರ ಆಡಳಿತದ ಜಿಜಿಯಾ ರೀತಿಯ ತೆರಿಗೆಯನ್ನು ಯಾವ ರೀತಿ ವಿಧಿಸಬಹುದು, ಎಂಬ ಚರ್ಚೆಯೂ ಆಯಿತು.

ಪಣಜಿಯಲ್ಲಿ 1972ರಲ್ಲಿ ಪ್ರಕಟವಾದ ವಿ.ಟಿ.ಗುಣೆ ಅವರ “a Detailed Subject-Index and a Table of Contents in Brief” ಕೃತಿಯು ವಿಶದಪಡಿಸುವಂತೆ, ಬಹುಪಾಲು ಹಿಂದೂಗಳು ಜುಟ್ಟು ಬಿಡುವುದರಿಂದ ಈ “ಜುಟ್ಟಿನ ತೆರಿಗೆ” ವಿಧಿಸಲು ತೀರ್ಮಾನಿಸಲಾಯಿತು. ಕ್ರೈಸ್ತೇತರರು ಮಾತ್ರ ಈ ತೆರಿಗೆಯನ್ನು ತೆರಬೇಕಾಗಿತ್ತು. ಸಣ್ಣ ವ್ಯಾಪಾರಿಗಳು, ಅಕ್ಕಸಾಲಿಗರು ಮೂರು ಕ್ಸೆರಾಫಿನ್ (ಗೋವಾ ಪೋರ್ತುಗೀಸರ ನಾಣ್ಯ) ತೆರಬೇಕು; ಸಗಟು ವ್ಯಾಪಾರಿಗಳು ಐದು ಕ್ಸೆರಾಫಿನ್ ಮತ್ತು ಉಳಿದವರು ಎರಡು ಕ್ಸೆರಾಫಿನ್ ತೆರಿಗೆ ಕಟ್ಟಬೇಕು, ಎಂದು ತೀರ್ಮಾನಿಸಲಾಯಿತು. ಈ ಜುಟ್ಟಿನ ತೆರಿಗೆ ದೋಚಲು ನಿಗದಿತವಾದ ಪಡೆಯು, ತೆರಿಗೆದಾರರ ಪಟ್ಟಿ ಸಿದ್ಧಪಡಿಸಿಕೊಂಡು ಗೋವಾದ ಹಿಂದೂಗಳ ಭರ್ತ್ಸನೆಯಲ್ಲಿ ಹಿಂಸೆಯಲ್ಲಿ ನಿರತವಾಯಿತು. ಅಕ್ಷರಶಃ ನಿಯಂತ್ರಣವೇ ಇರಲಿಲ್ಲ. ಕೆಲವೆಡೆ ಐವತ್ತು, ನೂರು ಕ್ಸೆರಾಫಿನ್ ಗಳಷ್ಟು ಹಣ ಕಿತ್ತುಕೊಂಡ ಉದಾಹರಣೆಗಳೂ ಇದ್ದವು.

goa ನನ್ನ ದೇಶ ನನ್ನ ದನಿ

ತುಂಬಾ ಹಿಂದೆ ಅಂದರೆ, 1567ರಲ್ಲಿಯೇ ಗೋವಾದಲ್ಲಿ ನಡೆದ ಆಡಳಿತಗಾರರ ಮತ್ತು ಚರ್ಚಿನ ಮುಖ್ಯಸ್ಥರ ಮೊದಲ ಸಭೆಯಲ್ಲಿ ಹಿಂದೂಗಳ ವಿಗ್ರಹಾರಾಧನೆ, ಸಂಪ್ರದಾಯಗಳು, ಪೂಜೆಗಳು, ಆಚಾರ ವಿಚಾರಗಳು, ಮೈಮೇಲೆ ಗಂಧವನ್ನು ಲೇಪಿಸಿಕೊಳ್ಳುವುದು, ತುಳಸೀ ಪೂಜೆ ಮಾಡುವುದು ಇತ್ಯಾದಿ ಎಲ್ಲವನ್ನೂ ಟೀಕಿಸಲಾಯಿತು, ನಿಷೇಧಿಸಲಾಯಿತು. ಜನಿವಾರ ಹಾಕುವ ಸಮುದಾಯಗಳು ಜನಿವಾರವನ್ನು ಅಡಗಿಸಿಕೊಳ್ಳಬೇಕಿತ್ತು. ಜುಟ್ಟು ಬಿಟ್ಟವರ ಮೇಲೆಯೂ ದಾಳಿ ಹೆಚ್ಚಾಗುತ್ತಹೋಯಿತು. 1868ರಲ್ಲಿ ಲಿಸ್ಬೋವಾದಲ್ಲಿ ಪ್ರಕಟವಾದ ಪೋರ್ತುಗೀಸ್ ಭಾಷೆಯ “Subsidios para a Historia da India Portuguesa” (ಲೇಖಕ: ಆರ್.ಜೆ.ಡೇ ಲಿಮಾ ಫೆಲ್ನರ್ : ಪುಟಗಳು 58, 62 ಇತ್ಯಾದಿ) ಗ್ರಂಥದಲ್ಲಿ ಗೋವಾ ಹಿಂದೂಗಳ ಮೇಲಾಗುತ್ತಿದ್ದ ಬೀಭತ್ಸ ಹಿಂಸೆಯ ವಿವರಗಳಿವೆ.

ಎಸ್.ಜೆ.ಸೆಬಾಸ್ಟಿಯೋ ಫರ್ನಾಂಡಿಸ್ ಎಂಬವನು ಬರೆದ ಪತ್ರವೊಂದರಲ್ಲಿ ಕೆಲವು ಭಯಾನಕ ವಿವರಗಳಿವೆ: “ಹಿಂಸೆ ತಾಳಲಾರದೆ ಹಿಂದೂವೊಬ್ಬ ಕೊನೆಗೊಮ್ಮೆ ಬಲವಂತದ ಮತಾಂತರಕ್ಕೆ ಒಪ್ಪಿದರೆ, ಬ್ಯಾಪ್ಟೈಸಾಗಲು ಸಿದ್ಧನಾದರೆ ಜೆಸ್ಯೂಟ್ ಬ್ರದರ್ ಒಬ್ಬ ತಕ್ಷಣವೇ ಅವನ ಜುಟ್ಟು ಕತ್ತರಿಸುತ್ತಾನೆ. ಮರವೊಂದಕ್ಕೆ ಆ ಜುಟ್ಟನ್ನು ನೇತುಹಾಕಲಾಗುತ್ತದೆ. ಅಲ್ಲಿ ಸೇರಿದ ಕ್ರೈಸ್ತ ಯುವಕರೆಲ್ಲಾ ಆ ಜುಟ್ಟಿಗೆ ಉಗಿಯುತ್ತಾರೆ, ಆ ಮರಕ್ಕೆ ಕಲ್ಲುಗಳನ್ನು ಎಸೆಯುತ್ತಾರೆ, ಕುಣಿದು ಸಂಭ್ರಮಿಸುತ್ತಾರೆ. ಎಲ್ಲ ಸೇರಿ ಹಿಂದೂ ದೇವತೆಗಳಿಗೆ ಕೆಟ್ಟ ಕೆಟ್ಟ ಮಾತುಗಳನ್ನಾಡುತ್ತಾರೆ, ಬೈಯುತ್ತಾರೆ. ಮುಗ್ಧರಾದ ನಾವು ಇಂತಹುದನ್ನು ನಂಬುವುದು ಕಷ್ಟ. ಪೋರ್ತುಗಲ್ ನ ಕಿಂಗ್-ಗೆ, ಅಂದಿನ ಗೋವಾದ ಚೀಫ್ ರೆವಿನ್ಯೂ ಕಮ್ ಟ್ರೋಲರ್ (Comptroller) ಆಗಿದ್ದ ಸಿಮಾವ್ ಬೊಟೆಲ್ಹೋ ಬರೆದ ಪತ್ರದಲ್ಲಿಯೂ ಇಂತಹ ಅಮಾನುಷ ರಾಕ್ಷಸೀ ವ್ಯವಹಾರಗಳ ಚಿತ್ರಣವಿದೆ. “ಅವಹೇಳನ, ಶಿಕ್ಷೆ, ಹಿಂಸೆಗಳಿಗೆ ಸಾಕಾಗಿಹೋದ ಹಿಂದೂಗಳು ಬ್ಯಾಪ್ಟೈಸಾಗಲು ಒಪ್ಪಿದ ಕೂಡಲೇ, ಅವರೆಲ್ಲರ ತಲೆಯನ್ನು ಬೋಳಿಸಲಾಗುತ್ತದೆ. ವಿಗ್ರಹಾರಾಧನೆಯ ಅಪರಾಧಕ್ಕೆ ಆ ಎಲ್ಲ ಹಿಂದೂಗಳಿಗೆ ಗೋಮಾಂಸವನ್ನು ಒತ್ತಾಯಪೂರ್ವಕವಾಗಿ ತಿನ್ನಿಸಲಾಗುತ್ತದೆ” ಎಂಬ ವಿವರಗಳು ಈ ಪತ್ರದಲ್ಲಿವೆ.

ನಮ್ಮ ಪಠ್ಯಪುಸ್ತಕಗಳಲ್ಲಿ “ವಾಸ್ಕೋ ಡ ಗಾಮಾ ಭಾರತವನ್ನು ಕಂಡುಹಿಡಿದ” ಎಂಬ ಸಾಲುಗಳನ್ನೇ ನಾವೆಲ್ಲಾ ಹಿಂದೆ ಓದಿದ್ದುಂಟು. ಹತ್ತಾರು ಸಾವಿರ ವರ್ಷಗಳ ಸಮೃದ್ಧ ಇತಿಹಾಸದ ಭಾರತವನ್ನು ಈತ ಕಂಡುಹಿಡಿದನಂತೆ! ಆತ ಭಾರತಕ್ಕೆ ಮೊದಲ ಬಾರಿಗೆ ಬಂದಿದ್ದು 1498ರಲ್ಲಿ. ಕ್ರೈಸ್ತ ಕ್ರೌರ್ಯ ಪರಂಪರೆಯ ಅವನ ಮತ್ತು ಪೋರ್ತುಗೀಸರ ಅನ್ಯಾಯ, ಅತ್ಯಾಚಾರಗಳಿಗೆ ಅಂಕೆಯೇ ಇರಲಿಲ್ಲ. ಹೀಗಿದ್ದೂ ನಮ್ಮಲ್ಲಿ ಎಂತಹ ದೇಶದ್ರೋಹಿಗಳು, ವಂಚಕರು, ಸಮಯಸಾಧಕರು ಇದ್ದಾರೆ ಎಂದರೆ, 1998ರಲ್ಲಿ ಈ ವಾಸ್ಕೋ ಡ ಗಾಮಾನ ಭಾರತ ಭೇಟಿಯ 500 ವರ್ಷಗಳ ಸಂಭ್ರಮಾಚರಣೆಗೆ ಸಿದ್ಧತೆ ನಡೆದಿತ್ತು. ಜನರು ಥೂ ಎಂದು ಹೀನಾಮಾನವಾಗಿ ಉಗಿದ ಮೇಲೆ, ಈ “ಆಚರಣೆ” ರದ್ದಾಯಿತು. ನಾವು ಸ್ವಾಭಿಮಾನ ಶೂನ್ಯರಾದರೆ, ನಮ್ಮ ಅಸ್ಮಿತೆಯನ್ನೇ ಮರೆತರೆ, ಶತ್ರುಗಳನ್ನು – ಆಕ್ರಮಣಕಾರಿ ರಿಲಿಜನ್ನಿನವರನ್ನೇ ಆರಾಧಿಸಲು ತೊಡಗಿದರೆ, ಭಾರತ-ಶತ್ರುಗಳನ್ನು ಅರ್ಥ ಮಾಡಿಕೊಳ್ಳದೇಹೋದರೆ, ಮತ್ತೆ ಪರಾಕ್ರಾಂತರಾಗುತ್ತೇವೆ. ಎಚ್ಚೆತ್ತುಕೊಳ್ಳದೇ ಹೋದರೆ ಈ ಬಾರಿ ಹೇಳಹೆಸರಿಲ್ಲದಂತಾಗುತ್ತೇವೆ.

ಎಚ್ಚರ, ಜಾಗೃತಿ, ಸ್ವರಕ್ಷಣೆಗಳು ನಮ್ಮ ಕಣ್ಣು ತೆರೆಸಲಿ.

ಇದನ್ನೂ ಓದಿ: ನನ್ನ ದೇಶ ನನ್ನ ದನಿ: ಜಗತ್ತಿನ ಇತಿಹಾಸ ಕನ್ನಡದಲ್ಲಿ ತರಲು ಆಸೆಪಟ್ಟಿದ್ದ ನಿರಂಜನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: ಅಪರ್ಣಾ ಅಕ್ಕ, ಹೋಗಿ ಬನ್ನಿ…

ರಾಜಮಾರ್ಗ ಅಂಕಣ: ಅಕ್ಕ ಇದ್ದದ್ದೇ ಹಾಗೆ! ಅದೇ ಪಾಸಿಟಿವ್ ಸೌಲ್. ಯಾವ ನೋವಿದ್ದರೂ ನಗು ಮತ್ತು ನಗು ಮಾತ್ರ. ಬಿಗ್ ಬಾಸ್ ವೇದಿಕೆಯಲ್ಲಿ ಅವರು ಕಾಣಿಸಿಕೊಂಡಾಗ ಅದು ನಿಮಗೆ ಸೂಟ್ ಆಗೋದಿಲ್ಲ ಅಕ್ಕ ಎಂದು ಮೆಸೇಜ್ ಹಾಕಿದ್ದೆ. ಅದಕ್ಕೆ ಅವರು ಒಂದು ನಗುವ ಇಮೋಜಿ ಹಾಕಿದ್ದರು.

VISTARANEWS.COM


on

ರಾಜಮಾರ್ಗ ಅಂಕಣ Anchor Aparna
Koo
Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಕನ್ನಡದ ನಿರೂಪಣಾ ಕ್ಷೇತ್ರದ ಲೆಜೆಂಡ್ ಇವತ್ತು ನಮ್ಮನ್ನೆಲ್ಲ ದುಃಖದ ಕಡಲಲ್ಲಿ ಮುಳುಗಿಸಿ ನಿರ್ಗಮಿಸಿದ್ದಾರೆ. ಅಲ್ಪ ಕಾಲದ ಅನಾರೋಗ್ಯ ಅವರನ್ನು ಸೆಳೆದುಕೊಂಡು ಹೋಗಿದೆ ಎಂದರೆ ನನಗೆ ನಂಬಲು ಕಷ್ಟವಾಗುತ್ತಿದೆ.

1983ರಲ್ಲಿ ಪುಟ್ಟಣ್ಣ ಕಣಗಾಲ್ ನಿರ್ದೇಶನದ ʼಮಸಣದ ಹೂವು’ ಸಿನೆಮಾದ ಕಥಾನಾಯಕಿ ಆಗಿ ಅವರು ನಾಡಿಗೆ ಪರಿಚಿತರಾದರು. ಮುಂದೆ ಹಲವಾರು ಸಿನೆಮಾಗಳಲ್ಲಿ ಅವರ ಪ್ರತಿಭೆ ಪ್ರಕಾಶನಕ್ಕೆ ಬಂದಿತು. ಪ್ರೀತಿ ಇಲ್ಲದ ಮೇಲೆ ಧಾರಾವಾಹಿಯಲ್ಲಿ ಅನಂತನಾಗ್ ಮಗಳಾಗಿ ಅಪರ್ಣಾ ಭಾರೀ ಮಿಂಚಿದರು.

ಆದರೆ ಮುಂದೆ ಅವರಾಗಿ ಆರಿಸಿಕೊಂಡದ್ದು ನಿರೂಪಣಾ ಕ್ಷೇತ್ರವನ್ನು. ಯಾವುದೇ ವೇದಿಕೆಯ ಕಾರ್ಯಕ್ರಮದ ನಿರೂಪಣೆಗೆ ಅಪರ್ಣಾ ಇದ್ದಾರೆ ಎಂದರೆ ಯಶಸ್ಸು ನೂರಕ್ಕೆ ನೂರು ನಿಶ್ಚಿತ ಅನ್ನುವ ನಂಬಿಕೆಯು ಎಂದಿಗೂ ಸುಳ್ಳಾದ ನಿದರ್ಶನವೇ ಇಲ್ಲ ಎನ್ನಬಹುದು. ಅದು ರಾಜಕೀಯ, ಧಾರ್ಮಿಕ, ಸಾಹಿತ್ಯಿಕ, ಪುಸ್ತಕ ಬಿಡುಗಡೆ, ಭಾವಗೀತೆಗಳ ಯಾವುದೇ ಕಾರ್ಯಕ್ರಮ ಇರಲಿ ಅಲ್ಲಿ ಅಪರ್ಣಾ ಇರಲೇ ಬೇಕು ಎನ್ನುವ ಮಾತು ಜನಜನಿತ ಆಗಿತ್ತು. ಪ್ರತೀಯೊಂದು ಕಾರ್ಯಕ್ರಮಕ್ಕೂ ಆಕೆಯು ಚಂದವಾದ ಸಿದ್ಧತೆ ಮಾಡದೇ ವೇದಿಕೆ ಏರುತ್ತಲೇ ಇರಲಿಲ್ಲ.

ನವಿರಾದ ಮತ್ತು ಸಾಹಿತ್ಯಿಕವಾದ ಕನ್ನಡ, ಪ್ರೌಢವಾದ ಮತ್ತು ಸುಲಲಿತ ಭಾಷೆ, ಸ್ಪಷ್ಟವಾದ ಉಚ್ಛಾರ ಸಮೀಚೀನ ಪದಗಳ ಬಳಕೆ, ಆಳವಾದ ಧ್ವನಿ, ನಿರರ್ಗಳತೆ ಮತ್ತು ಭಾವನಾತ್ಮಕ ಟಚ್ ಇವುಗಳು ಕೇವಲ ಅಪರ್ಣಾ ಅವರ ಬ್ರ್ಯಾಂಡ್‌ಗಳು. ನಿರಂತರವಾಗಿ 12 ಘಂಟೆಗಳ ಒಂದು ವೇದಿಕೆಯ ಕಾರ್ಯಕ್ರಮವನ್ನು ವಿರಾಮವೇ ಇಲ್ಲದೆ ನಿರೂಪಣೆ ಮಾಡಿದ ದಾಖಲೆಯು ಅವರ ಹೆಸರಲ್ಲಿ ಇದೆ.

ದೂರದರ್ಶನದ ಸಾವಿರಾರು ಕಾರ್ಯಕ್ರಮಗಳ ನಿರೂಪಣೆ, ವಾಯ್ಸ್ ಒವರ್ ಗಳು, ಸ್ಕ್ರಿಪ್ಟಗಳು ಅವರ ಅಗಾಧವಾದ ಪ್ರತಿಭೆಯ ಎರಕಗಳೇ ಆಗಿವೆ. ಅವರು ತುಂಬಾ ಪುಸ್ತಕ ಓದುತ್ತಿದ್ದರು. ಓದುವ ಅಭ್ಯಾಸ ಅಪ್ಪನ ಮೂಲಕ ಬಂದಿತು ಎಂದು ಅವರು ಹೇಳುತ್ತಿದ್ದರು.

ಅವರ ಜೊತೆಗೆ ಹಲವಾರು ವೇದಿಕೆಯ ನಿರೂಪಣೆಯ ಕಾರ್ಯಕ್ರಮಗಳನ್ನು ಬೆಂಗಳೂರಿನಲ್ಲಿ ಹಂಚಿಕೊಂಡ ಭಾಗ್ಯ ನನ್ನದು. ನಾನವರನ್ನು ಅಕ್ಕಾ ಎಂದೇ ಕರೆಯುವುದು. ಅವರು ತಮ್ಮ ಎಂದು ನನ್ನನ್ನು ಕರೆದರೆ ನನಗೆ ಖುಷಿ.

ನಾಲ್ಕು ವರ್ಷಗಳ ಹಿಂದೆ ಅವರ ಬಗ್ಗೆ ‘ಇಂದಿನ ಐಕಾನ್’ ಸರಣಿಯಲ್ಲಿ ಲೇಖನ ಬರೆದಿದ್ದೆ. ಅದು ಯಾರೋ ಅವರ ಗೆಳೆಯರ ಮೂಲಕ ಅವರಿಗೆ ತಲುಪಿತ್ತು. ಆಗ ಅವರೇ ಫೋನ್ ಮಾಡಿ ಮೆಚ್ಚುಗೆ ಹೇಳಿ ಥ್ಯಾಂಕ್ಸ್ ಎಂದಿದ್ದರು. ಅದರ ನಂತರವೂ ನನ್ನ ಹಲವಾರು ಲೇಖನ ವಾಟ್ಸಾಪ್ ಮೂಲಕ ಅವರಿಗೆ ತಲುಪಿದಾಗ ತುಂಬಾ ಚಂದ ಬರಿತೀರಿ ಎಂದೆಲ್ಲ ಬೆನ್ನು ತಟ್ಟುವ ಮಾತು.

ಅಕ್ಕ ಇದ್ದದ್ದೇ ಹಾಗೆ! ಅದೇ ಪಾಸಿಟಿವ್ ಸೌಲ್. ಯಾವ ನೋವಿದ್ದರೂ ನಗು ಮತ್ತು ನಗು ಮಾತ್ರ. ಬಿಗ್ ಬಾಸ್ ವೇದಿಕೆಯಲ್ಲಿ ಅವರು ಕಾಣಿಸಿಕೊಂಡಾಗ ಅದು ನಿಮಗೆ ಸೂಟ್ ಆಗೋದಿಲ್ಲ ಅಕ್ಕ ಎಂದು ಮೆಸೇಜ್ ಹಾಕಿದ್ದೆ. ಅದಕ್ಕೆ ಅವರು ಒಂದು ನಗುವ ಇಮೋಜಿ ಹಾಕಿದ್ದರು.

ಅಪರ್ಣಾ ಅಕ್ಕ ಇಂದು ನಿರ್ಗಮಿಸಿದ ಸುದ್ದಿ ಬಂದಿದೆ. ಇಡೀ ನಾಡಿಗೆ ಅದು ಶಾಕಿಂಗ್. ಯಾಕೆಂದರೆ ನಿರೂಪಣೆಯ ಕ್ಷೇತ್ರಕ್ಕೆ ಆಕೆ ಒಂದು ಲೆಜೆಂಡ್. ಈ ಸುದ್ದಿಯು ಸುಳ್ಳಾಗಲಿ ದೇವರೇ ಎಂದು ಈಗಲೂ ಒಳಮನಸ್ಸು ಹೇಳುತ್ತ ಇದೆ.

ಅಪರ್ಣ ಒಳ್ಳೆಯ ಅಕ್ಕ. ಹೋಗಿ ಬನ್ನಿ ಅಕ್ಕ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಿವಾಹ ವಿಚ್ಛೇದನ ಮತ್ತು ಭಾರತೀಯ ಸಮಾಜ

Continue Reading

ಅಂಕಣ

ರಾಜಮಾರ್ಗ ಅಂಕಣ: ವಿವಾಹ ವಿಚ್ಛೇದನ ಮತ್ತು ಭಾರತೀಯ ಸಮಾಜ

ರಾಜಮಾರ್ಗ ಅಂಕಣ: ಬ್ರಿಟಿಷರು ಭಾರತಕ್ಕೆ ಕೊಟ್ಟು ಹೋದ ವಿಷಫಲಗಳಲ್ಲಿ ಈ ವಿಚ್ಛೇದನದ ಕಾನೂನು ಕೂಡ ಒಂದು. ಮದುವೆಯಾಗಿ ಮೊದಲ ರಾತ್ರಿಯಲ್ಲಿ ಗಂಡನಿಂದ ವಿಚ್ಛೇದನ ಬಯಸುವ ಹುಡುಗಿಯರೂ ಇದ್ದಾರೆ (ಮಿಲನ ಸಿನೆಮಾ ನೆನಪಾಯಿತಾ?). ಇಲ್ಲಿ ಹುಡುಗ ಮತ್ತು ಹುಡುಗಿ ಇಬ್ಬರೂ ಸಮಾನ ಅಪರಾಧಿಗಳು.

VISTARANEWS.COM


on

ರಾಜಮಾರ್ಗ ಅಂಕಣ divorce
Koo

ಆ ಮಾಡರ್ನ್ ಹುಡುಗಿಯ ಮಾತು ಕೇಳಿ ನಾನು ಟಿವಿ ಸ್ಟುಡಿಯೋದಲ್ಲಿ ಬೆವತಿದ್ದೆ!

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಹತ್ತು ವರ್ಷಗಳ ಹಿಂದೆ ನನ್ನ ಟಿವಿ ಡಿಬೇಟಿಗೆ (TV Debate) ಬಂದಿದ್ದ ಒಬ್ಬಳು ಮಾಡರ್ನ್ ಹುಡುಗಿ ʼಡೈವೋರ್ಸ್ (Divorce) ಅನ್ನೋದು ಸ್ತ್ರೀ ಸ್ವಾತಂತ್ರ್ಯದ (Woman freedom) ಪ್ರತೀಕ’ ಎಂದಿದ್ದಳು! ಆಕೆಯ ಮಾತಿನ ವರಸೆ ನೋಡಿ ನಾನು ಹವಾನಿಯಂತ್ರಿತ ಸ್ಟುಡಿಯೋ ಒಳಗೆ ಬೆವರಲು ಆರಂಭಿಸಿದ್ದೆ.

ಅಲ್ಲಿಗೇ ಅವಳ ವಾದವು ನಿಲ್ಲಲಿಲ್ಲ. ʼಈ ಕೆಲವು ಸಿನೆಮಾ ತಾರೆಯರ ಖಾಸಗಿ ಬದುಕು ಇಷ್ಟೊಂದು ಯಾಕೆ ಬರ್ಬಾದ್ ಆಗಿರುತ್ತದೆ?’ ಎಂದು ನಾನು ಕೇಳಿದಾಗ ಅವಳು ಹೇಳಿದ್ದು ʼಅದು ಅವರವರ ಖಾಸಗಿ ಬದುಕು ಸರ್, ನಾವದನ್ನು ಪ್ರಶ್ನೆ ಮಾಡಲು ಹೋಗಬಾರದು’ ಎಂದಿದ್ದಳು! (ಈಗ ಪ್ರತೀ ದಿನವೂ ಒಂದಲ್ಲ ಒಂದು ಸೆಲೆಬ್ರಿಟಿ ದಂಪತಿಗಳ ವಿಚ್ಛೇದನದ (Celebrity divorce) ವರದಿಗಳು ಪತ್ರಿಕೆಯ ಹೆಡ್ ಲೈನ್ ಆಗಿ ಬರುತ್ತಿವೆ).

ಅದಕ್ಕೆ ಅವಳ ಬಳಿ ಸಮರ್ಥನೆ ಕೂಡ ಇತ್ತು!

ತನ್ನ ಹಣೆಯ ಮೇಲೆ ಒರಗುತ್ತಿದ್ದ ಮುಂಗುರುಳನ್ನು ಒಮ್ಮೆ ಎಡದಿಂದ ಬಲಕ್ಕೆ, ಮತ್ತೊಮ್ಮೆ ಬಲದಿಂದ ಎಡಕ್ಕೆ ಹಾರಿಸುತ್ತ ಆಕೆಯ ಮಾತು ಅಣೆಕಟ್ಟು ಒಡೆದ ನದಿಯ ಪ್ರವಾಹದಂತೆ ಮುಂದುವರೆಯಿತು. ಭಾರತದ ಮಹಾನಟ ಎಂದು ಕರೆಸಿಕೊಂಡ ಕಮಲಹಾಸನ್ ತಾನು ಎರಡು ಬಾರಿ ಮದುವೆ ಆದ ಹುಡುಗಿಯರಿಗೆ ಸೋಡಾ ಚೀಟಿ ಕೊಟ್ಟು ಇದೀಗ ಮೂರನೇ ಹುಡುಗಿಯ ಜೊತೆಗೆ ‘ಲಿವಿಂಗ್ ಇನ್ ರಿಲೇಶನ್ ‘ಮೆಂಟೇನ್ ಮಾಡ್ತಾ ಇದ್ದಾನೆ. ಅವನು ಹೇಳಿದ ಮಾತು ‘ನನಗೆ ಭಾರತೀಯ ಮದುವೆಗಳಲ್ಲಿ ನಂಬಿಕೆ ಇಲ್ಲ’ ಎಂದು!

ಅಪ್ಪನಂತೆ ಮಗಳು!

ಅದನ್ನು ಗಟ್ಟಿಯಾಗಿ ಅನುಸರಿಸಿದ ಅವನ ಮಗಳು ಶ್ರುತಿ ಹಾಸನ್ (ಆಕೆ ಕೂಡ ಪ್ರಸಿದ್ಧ ಸಿನೆಮಾ ನಟಿ) ನಾನು ಮದುವೆನೇ ಆಗೋದಿಲ್ಲ ಎಂಬ ಹೇಳಿಕೆ ಕೊಟ್ಟಿದ್ದಾಳೆ! ಹೆಣ್ಣಿನ ಬದುಕಿಗೆ ಮದುವೆ ಆಕೆಯ ಪ್ರಕಾರ ಅನಿವಾರ್ಯ ಅಲ್ಲವಂತೆ! ಅದೇ ಶ್ರುತಿ ಹಾಸನ್ ಮೂರು ಮೂರು ತಿಂಗಳಿಗೆ ಒಬ್ಬೊಬ್ಬ ಹುಡುಗನ ಜೊತೆಗೆ ಡೇಟಿಂಗ್ ಮಾಡಿ ಚಾಪೆ ಎಸೆದ ಹಾಗೆ ಅವರನ್ನು ಮಡಚಿ ಎಸೆಯುತ್ತಿದ್ದಾಳೆ!

ಭಾರತೀಯ ಸಮಾಜವು ಇಂದು ಎತ್ತ ಸಾಗುತ್ತಿದೆ?

ಇವೆಲ್ಲವೂ ನನ್ನಂತಹ ಹಿರಿಯರಿಗೆ ಆತಂಕ ಕೊಡುವ ಸಂಗತಿಗಳು. ಬ್ರಿಟಿಷರು ಭಾರತಕ್ಕೆ ಕೊಟ್ಟು ಹೋದ ವಿಷಫಲಗಳಲ್ಲಿ ಈ ವಿಚ್ಛೇದನದ ಕಾನೂನು ಕೂಡ ಒಂದು. ನಮ್ಮ ಪಾಶ್ಚಿಮಾತ್ಯ ಅನುಕರಣೆಗಳು ಈ ಮಟ್ಟಕ್ಕೆ ಹೋಗಬಾರದಿತ್ತು ಎಂದು ನನಗೆ ಅನ್ನಿಸುತ್ತಿದೆ. ನನ್ನ ನ್ಯಾಯವಾದಿ ಗೆಳೆಯರೊಬ್ಬರು ಹೇಳುವಂತೆ ಡೈವೋರ್ಸ್ ಪ್ರಮಾಣ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಾ ಇದೆ. ಅವರೆಲ್ಲರೂ ಸುಶಿಕ್ಷಿತರು ಮತ್ತು ಸುಸಂಸ್ಕೃತ ಕುಟುಂಬಗಳಿಂದ ಬಂದವರು! ಹೆಚ್ಚಿನವರು ನಗರ ಪ್ರದೇಶಗಳಿಂದ ಬಂದವರು. ನನ್ನ ಆತಂಕ ಏನೆಂದರೆ ಅವರಲ್ಲಿ ಹೆಚ್ಚಿನವರು ಇನ್ನೂ ಸಣ್ಣ ಪ್ರಾಯದವರು. ಹೆಚ್ಚಿನವರು ಮದುವೆ ಆಗಿ ಒಂದು ವರ್ಷದ ಒಳಗೆ ವಿಚ್ಛೇದನಕ್ಕೆ ಅರ್ಜಿ ಹಾಕ್ತಾ ಇದ್ದಾರೆ! ಮದುವೆಯಾಗಿ ಮೊದಲ ರಾತ್ರಿಯಲ್ಲಿ ಗಂಡನಿಂದ ವಿಚ್ಛೇದನ ಬಯಸುವ ಹುಡುಗಿಯರೂ ಇದ್ದಾರೆ (ಮಿಲನ ಸಿನೆಮಾ ನೆನಪಾಯಿತಾ?). ಇಲ್ಲಿ ಹುಡುಗ ಮತ್ತು ಹುಡುಗಿ ಇಬ್ಬರೂ ಸಮಾನ ಅಪರಾಧಿಗಳು.

ಇಲ್ಲಿ ವಿಚ್ಛೇದನಕ್ಕೆ ಹುಡುಗ ಅಥವಾ ಹುಡುಗಿ ಕೊಡುವ ಕಾರಣಗಳೂ ಕೆಲವೊಮ್ಮೆ ತುಂಬಾ ಸಿಲ್ಲಿ ಎಂದು ನನಗೆ ಅನ್ನಿಸುತ್ತದೆ.

viral news divorce

ವಿಚ್ಛೇದನಕ್ಕೆ ಅವರು ಕೊಡುವ ಸಿಲ್ಲಿ ಕಾರಣಗಳ ಸ್ಯಾಂಪಲ್ ಇಲ್ಲಿವೆ.

1) ಗಂಡ ತನ್ನ ತಾಯಿಯ ಜೊತೆ ತುಂಬಾ ಅನ್ಯೋನ್ಯ ಆಗಿದ್ದಾನೆ ಮತ್ತು ಎಲ್ಲಾ ವಿಷಯಗಳನ್ನು ಅಮ್ಮನ ಜೊತೆ ಶೇರ್ ಮಾಡುತ್ತಾನೆ.

2) ಹೆಂಡತಿಯ ತಂದೆ, ತಾಯಿ ಪದೇ ಪದೇ ಅವರ ಮನೆಗೆ ಭೇಟಿ ಕೊಡುತ್ತಾರೆ ಮತ್ತು ಆಕೆಯ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಾರೆ.

3) ಮದುವೆಗೆ ಮೊದಲು ಹೆಂಡತಿಗೆ (ಗಂಡನಿಗೂ) ಒಂದು ಅಫೇರ್ ಇತ್ತು ಮತ್ತು ಅದನ್ನು ಅವರು ಮುಚ್ಚಿಟ್ಟಿದ್ದಾರೆ.

4) ಹೆಂಡತಿ (ಕೆಲವೊಮ್ಮೆ ಗಂಡ ಕೂಡ) ತನ್ನ ಕಲೀಗ್ಸ್ ಜೊತೆ ತುಂಬಾ ಸಲಿಗೆಯಿಂದ ಇದ್ದಾರೆ.

5) ಮದುವೆ ಆದ ನಂತರ ಹೆಂಡತಿಗೆ ಮೂರು ಪ್ರಮೋಶನ್ ಸಿಕ್ಕಿವೆ. ಗಂಡನಿಗೆ ಒಂದೂ ಸಿಕ್ಕಿಲ್ಲ!

6) ಗಂಡನಿಗೆ ನಿದ್ದೆಯಲ್ಲಿ ಗೊರಕೆ ಹೊಡೆಯುವ ಅಭ್ಯಾಸ ಇದೆ.

7) ಹೆಂಡತಿ ವಿಪರೀತ ಖರ್ಚು ಮಾಡುತ್ತಾಳೆ.

8) ಗಂಡನಿಗೆ ಅಡುಗೆ ಮಾಡಲು ಬರೋದಿಲ್ಲ. ಎಲ್ಲವನ್ನೂ ನಾನೇ ಮಾಡಬೇಕು.

9) ಗಂಡ ಅಥವಾ ಹೆಂಡತಿ ನನ್ನ ಖಾಸಗಿ ಬದುಕಿನಲ್ಲಿ ಅತಿಯಾಗಿ ಮೂಗು ತೂರಿಸುತ್ತಾರೆ.

10) ಗಂಡ (ಅಥವಾ ಹೆಂಡತಿ) ಮಾಡರ್ನ್ ಇಲ್ಲ. ಹಳ್ಳಿ ಗುಗ್ಗು ತರ ಬಿಹೇವ್ ಮಾಡ್ತಾರೆ.

11) ಗಂಡ ನನ್ನ ಗಮನಕ್ಕೆ ಬಾರದೇ ಯಾರಿಗೋ ಸಾಲ ಕೊಟ್ಟಿದ್ದಾನೆ.

12) ಅವಳಿಗೆ ದುರಹಂಕಾರ ಜಾಸ್ತಿ. ಪ್ರತಿಯೊಂದಕ್ಕೂ ಎದುರು ಮಾತಾಡುತ್ತಾಳೆ!

13) ಹೆಂಡತಿ ಗಂಡನ ಮನೆಯ ಎಲ್ಲ ಸಂಗತಿಗಳನ್ನು ತನ್ನ ತಾಯಿ ಮನೆಗೆ ಫೋನ್ ಮೂಲಕ ರವಾನೆ ಮಾಡುತ್ತಾಳೆ!

ವಿಚ್ಚೇದನದ ಅರ್ಜಿಗಳನ್ನು ಜಾಲಾಡಿದಾಗ ಇಂತಹ ಅನೇಕ ಸಿಲ್ಲಿ ಕಾರಣಗಳು ಸಿಗುತ್ತವೆ. ಗಂಡ (ಅಥವಾ ಹೆಂಡತಿ) ಪಾರ್ಟಿಗೆ ಬರೋದಿಲ್ಲ, ಡ್ರಿಂಕ್ಸ್ ತೆಗೆದುಕೊಳ್ಳೋದಿಲ್ಲ ಎಂಬ ಕಾರಣಕ್ಕೆ ವಿಚ್ಛೇದನಕ್ಕೆ ಅರ್ಜಿ ಹಾಕಿದ ಅನೇಕ ದಂಪತಿಗಳು ನನ್ನ ಆಪ್ತ ವಲಯದಲ್ಲಿ ಇದ್ದಾರೆ!

ಅವರು ಮುಂದೊಡ್ಡುವ ಯಾವ ಸಮಸ್ಯೆಗಳು ಪರಿಹಾರ ಆಗದ ಸಮಸ್ಯೆಗಳು ಅಲ್ಲ. ಯಾವ ಭಿನ್ನಮತವನ್ನು ಎದುರೆದುರು ಕುಳಿತು ಕಣ್ಣಲ್ಲಿ ಕಣ್ಣಿಟ್ಟು ಮಾತಾಡಿ ಪರಿಹಾರ ಮಾಡಿಕೊಳ್ಳಬಹುದು. ಕೌನ್ಸೆಲಿಂಗ್ ಮೊರೆ ಹೋಗಿ ಪರಿಹಾರ ಕಂಡುಕೊಳ್ಳಬಹುದು. ಸಣ್ಣ ಪುಟ್ಟ ತಪ್ಪುಗಳಾದಾಗ ಸಹಜವಾದ ಭಾವನೆಗಳಿಂದ ಸಾರಿ ಕಣೇ (ಅಥವಾ ಸಾರಿ ಕಣೋ) ಅಂದರೆ ಇಬ್ಬರೂ ಕರಗಿಬಿಡುತ್ತಾರೆ.

ಇಲ್ಲಿ ಇಬ್ಬರೂ ಒಂದೆಳೆ ಕಾಂಪ್ರೋ ಆಗಬೇಕು ಅಷ್ಟೇ!

ಮೊದಲು ಎಗರಾಡಿದ್ದು ಅವಳೇ, ಅವಳು ಬಂದು ಸಾರಿ ಕೇಳಬೇಕು ಎಂದು ಗಂಡ ಹಟ ಹಿಡಿಯುವುದರಿಂದ ಅಥವಾ ಅವನೇ ಬಂದು ಮಾತಾಡಿಸಲಿ ಎಂದು ಹೆಂಡತಿ ಹಟ ಹಿಡಿಯುವುದರಿಂದ ಸಂಬಂಧಗಳು ಕೆಡುತ್ತವೆ.

ಅತಿಯಾದ ಹಿಂಸೆ, ಲೈಂಗಿಕ ಅಸಾಮರ್ಥ್ಯ, ಹೊಂದಾಣಿಕೆಯ ಕೊರತೆ, ವ್ಯಸನಗಳು, ಗುಣಪಡಿಸಲು ಆಗದ ಕಾಯಿಲೆಗಳು…ಮೊದಲಾದ ಕಾರಣಕ್ಕೆ ವಿಚ್ಛೇದನ ಪಡೆದರೆ ಅದನ್ನು ಒಪ್ಪಿಕೊಳ್ಳಬಹುದು. ವಿಚ್ಛೇದನ ಪಡೆದವರು ಮತ್ತೆ ಬೇರೆ ಮದುವೆ ಆಗಿ ಸುಖವಾಗಿರುವುದು ಕೂಡ ಸಂತಸದ ವಿಷಯ. ಆದರೆ ಸಣ್ಣ ಸಣ್ಣ ಕಾರಣಕ್ಕೆ ಎಲ್ಲರೂ ವಿಚ್ಛೇದನದ ಮೊರೆ ಹೋದರೆ ಭಾರತೀಯ ಸಮಾಜವು ಹೇಗಿರಬಹುದು?

ಇದನ್ನೂ ಓದಿ: ರಾಜಮಾರ್ಗ ಅಂಕಣ: ದಕ್ಷಿಣ ಆಫ್ರಿಕಾದಲ್ಲಿ ಚಿನ್ನದ ಪದಕ ಗೆದ್ದ ಕಾರ್ಕಳದ ಬೋಳ ಅಕ್ಷತಾ ಪೂಜಾರಿ

Continue Reading

ಅಂಕಣ

ರಾಜಮಾರ್ಗ ಅಂಕಣ: ದಕ್ಷಿಣ ಆಫ್ರಿಕಾದಲ್ಲಿ ಚಿನ್ನದ ಪದಕ ಗೆದ್ದ ಕಾರ್ಕಳದ ಬೋಳ ಅಕ್ಷತಾ ಪೂಜಾರಿ

ರಾಜಮಾರ್ಗ ಅಂಕಣ: ಕಾರ್ಕಳ ತಾಲೂಕಿನ ಬೋಳ ಎಂಬ ಪುಟ್ಟ ಗ್ರಾಮದಿಂದ ಲಂಡನ್, ಅಮೆರಿಕ, ಆಫ್ರಿಕ, ದುಬಾಯಿ, ಕಝಾಕಿಸ್ತಾನ್ ತಲುಪಿದ ಬೋಳ ಅಕ್ಷತಾ ಪೂಜಾರಿಯ ಹೋರಾಟ ಮತ್ತು ಸಾಹಸಗಳು ಸಾವಿರಾರು ಗ್ರಾಮೀಣ ಸಾಧಕರಿಗೆ ಸ್ಫೂರ್ತಿ ಆಗಬಲ್ಲದು. ಸರಕಾರ ಆಕೆಯನ್ನು ದೊಡ್ಡದಾಗಿ ಗುರುತಿಸಬೇಕು.

VISTARANEWS.COM


on

ರಾಜಮಾರ್ಗ ಅಂಕಣ bola akshta pujari
Koo

ಪವರ್ ಲಿಫ್ಟಿಂಗ್ ಮತ್ತು ಬೆಂಚ್ ಪ್ರೆಸ್ ವಿಭಾಗದಲ್ಲಿ ಮತ್ತೆ ಆಕೆಯಿಂದ ವಿಶ್ವವಿಕ್ರಮ!

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಈ ಶನಿವಾರ ದಕ್ಷಿಣ ಆಫ್ರಿಕಾದ ಫೊಚೇಫಸ್ಟಮ್ ನಗರದಲ್ಲಿ ನಡೆದ ಏಷಿಯಾ ಪೆಸಿಫಿಕ್ ಆಫ್ರಿಕನ್ (ಅಂದರೆ ಎರಡು ಖಂಡಗಳ ಮಟ್ಟದ) ಪವರ್ ಲಿಫ್ಟಿಂಗ್ (power lifting) ಮತ್ತು ಬೆಂಚ್ ಪ್ರೆಸ್ (bench press) ವಿಭಾಗದಲ್ಲಿ ಸ್ಪರ್ಧಿಸಿದ್ದ ಭಾರತದ ಬೋಳ ಅಕ್ಷತಾ ಪೂಜಾರಿ (Bola Akshata Pujrai ಈ ಬಾರಿಯೂ ಚಿನ್ನದ ಪದಕ (gold medal) ಗೆದ್ದಿದ್ದಾರೆ! ಆಕೆ ನನ್ನೂರು ಕಾರ್ಕಳ ತಾಲೂಕಿನ ಬೋಳ ಎಂಬ ಪುಟ್ಟ ಗ್ರಾಮದವರು ಅನ್ನೋದು ನಮಗೆಲ್ಲ ಹೆಮ್ಮೆ. ನಾನು ಬಾಲ್ಯದಿಂದಲೂ ಆಕೆಯ ಬೆಳವಣಿಗೆಯನ್ನು ಗಮನಿಸಿದ್ದೇನೆ ಅನ್ನುವುದು ನನಗೆ ಅಭಿಮಾನ.

ಈ ಬಾರಿ ಆಕೆ ಸ್ಪರ್ಧೆ ಮಾಡಿದ್ದು 52 ಕೆಜಿ ದೇಹತೂಕದ ಸೀನಿಯರ್ ವಿಭಾಗದಲ್ಲಿ. ಅಲ್ಲಿ ಸ್ಪರ್ಧೆ ತುಂಬಾ ಕಠಿಣ ಆಗಿದ್ದು 18 ಮಂದಿ ವಿದೇಶದ ಸ್ಪರ್ಧಿಗಳು ಇದ್ದರು! ಅಲ್ಲಿ ಅಕ್ಷತಾ ಪೂಜಾರಿ ಚಿನ್ನದ ಪದಕ ಗೆದ್ದು ತ್ರಿವರ್ಣ ಧ್ವಜ ಹಾರಿಸಿದ್ದಾರೆ ಅಂದರೆ ಅದು ಎಷ್ಟೊಂದು ದೊಡ್ಡ ಸಾಧನೆ!

ಆಕೆ ವಿಶ್ವಮಟ್ಟದ ಪದಕ ಗೆದ್ದಿರುವುದು ಇದೇ ಮೊದಲಲ್ಲ!

ಆಕೆಯ ಯಶೋಗಾಥೆಯು ಆರಂಭ ಆದದ್ದು 2011ರಲ್ಲಿ. ಅಂದು ಆಕೆ ಲಂಡನ್ ಕಾಮನ್ ವೆಲ್ತ್ ಕೂಟದಲ್ಲಿ ಭಾಗವಹಿಸಿ 8 ಚಿನ್ನದ ಪದಕ ಪಡೆದಿದ್ದರು! ಅದರ ಮುಂದಿನ ವರ್ಷ (2012) ಮತ್ತೆ ಏಷಿಯನ್ ಕೂಟದಲ್ಲಿ ಗೋಲ್ಡ್! ಮತ್ತೆ 2014ರಲ್ಲಿ ವರ್ಲ್ಡ್ ಚಾಂಪಿಯನಶಿಪನಲ್ಲಿ ಗೋಲ್ಡ್! 2018ರಲ್ಲಿ ಏಷಿಯನ್ ದುಬಾಯಿ ಕೂಟದ ಗೋಲ್ಡ್! 2022ರಲ್ಲಿ ಕಝಾಕ್ ಸ್ಥಾನ ಕೂಟದಲ್ಲಿ ಸಿಲ್ವರ್ ಮೆಡಲ್! ಮತ್ತು ಈ ಬಾರಿ ಸೌಥ್ ಆಫ್ರಿಕಾ ಕೂಟದಲ್ಲಿ ಗೋಲ್ಡ್ ಮೆಡಲ್!

ಒಬ್ಬಳು ಹಳ್ಳಿಯ ಸಾಮಾನ್ಯ ಕೃಷಿಕ ಕುಟುಂಬದಿಂದ ಬಂದ ಓರ್ವ ಸೀದಾಸಾದಾ ಹುಡುಗಿ ಇಷ್ಟೊಂದು ವಿದೇಶದ ಕೂಟಗಳಿಗೆ ಹೋಗಿ ಭಾರತವನ್ನು ಪ್ರತಿನಿಧಿಸುವುದೇ ದೊಡ್ಡ ಅಚ್ಚರಿ ಆಗಿರುವಾಗ ಈಕೆ ಹೋದಲ್ಲೆಲ್ಲ ಪದಕಗಳ ಗೊಂಚಲನ್ನು ಗೆದ್ದು ತರುತ್ತಿರುವುದು ನಿಜಕ್ಕೂ ವಿಸ್ಮಯವೇ ಸರಿ. ಅದರ ಜೊತೆಗೆ ಕಳೆದ 14 ವರ್ಷಗಳಲ್ಲಿ ಆಕೆ ಭಾರತದಲ್ಲಿ ಬೇರೆ ಬೇರೆ ನಗರಗಳಲ್ಲಿ ನಡೆದ ಪವರ್ ಲಿಫ್ಟಿಂಗ್ ಕೂಟಗಳಲ್ಲಿ ಭಾಗವಹಿಸಿ ಹೋದಲ್ಲೆಲ್ಲ ಪದಕಗಳನ್ನು ಗೆದ್ದಿದ್ದಾರೆ! ಆಕೆಯ ಬೋಳದ ಮನೆಯ ಶೋಕೇಸಿನಲ್ಲಿ ಮಿಂಚುತ್ತಿರುವ ಹೊಳೆಯುವ ಪದಕಗಳು ಯಾರಿಗಾದರೂ ಸ್ಫೂರ್ತಿಯ ಚಿಲುಮೆ ಆಗುವುದು ಖಂಡಿತ!

ಅಕ್ಷತಾ ಬಾಲ್ಯದಿಂದಲೂ ಗಟ್ಟಿಗಿತ್ತಿ!

ಅಕ್ಷತಾ ಬೋಳ ಗ್ರಾಮದ ಕೃಷಿ ಸಂಸ್ಕೃತಿಯ ಕೆಳಮಧ್ಯಮ ಕುಟುಂಬದಿಂದ ಬಂದವರು. ಅವರ ಮನೆಯಲ್ಲಿ ಯಾರೂ ಹೆಚ್ಚು ಓದಿದವರು ಇರಲಿಲ್ಲ. ಹೈಸ್ಕೂಲ್ ವಿದ್ಯಾಭ್ಯಾಸಕ್ಕೆ ಆಕೆ 6-7 ಕಿಮೀ ದೂರದ ಬೆಳ್ಮಣ್ ಜ್ಯೂ. ಕಾಲೇಜಿಗೆ ಬೆಳಿಗ್ಗೆ ಮತ್ತು ಸಂಜೆ ನಡೆದುಕೊಂಡು ಬರುತ್ತಿದ್ದರು! ಹಸಿವು ಆಕೆಗೆ ಅಭ್ಯಾಸ ಆಗಿತ್ತು. ಕ್ರೀಡೆಯಲ್ಲಿ ಅತೀವ ಆಸಕ್ತಿ ಆಕೆಗೆ ಹೇಗೆ ಬಂತು ಎನ್ನುವುದು ಆಕೆಗೇ ಗೊತ್ತಿಲ್ಲ. ಮುಂದೆ ಪದವಿಯ ಶಿಕ್ಷಣಕ್ಕಾಗಿ ನಿಟ್ಟೆ ವಿದ್ಯಾಸಂಸ್ಥೆಯನ್ನು ಸೇರಿದ್ದು ಆಕೆಯ ಬದುಕಿನಲ್ಲಿ ಮಹತ್ವದ ತಿರುವು ಆಯಿತು. ಅಲ್ಲಿ ಆಕೆಗೆ ಪವರ್ ಲಿಫ್ಟಿಂಗ್ ಆರಿಸಿಕೊಳ್ಳಲು ಸಲಹೆ ದೊರೆಯಿತು ಮತ್ತು ಒಳ್ಳೆಯ ಕೋಚ್ ದೊರಕಿದರು. ಅಲ್ಲಿ ಅಕ್ಷತಾ ಬೆಳಿಗ್ಗೆ ಮತ್ತು ಸಂಜೆ ಕನಿಷ್ಠ 4 ಘಂಟೆ ಜಿಮ್ ನಲ್ಲಿ ಬೆವರು ಬಸಿಯುತ್ತಿದ್ದರು. ಸಾಧನೆಯ ಹಸಿವು ಕಿಡಿ ಆಗಿದ್ದು ನಿಟ್ಟೆಯಲ್ಲೇ ಎಂದು ಹೇಳಬಹುದು. ʼಪವರ್ ಲಿಫ್ಟಿಂಗ್ ಇಂಡಿಯಾ’ ಎಂಬ ರಾಷ್ಟ್ರಮಟ್ಟದ ಸಂಸ್ಥೆಯು ಆಕೆಗೆ ಇಷ್ಟೊಂದು ಅವಕಾಶಗಳನ್ನು ಮಾಡಿಕೊಟ್ಟಿತು ಮತ್ತು ಇದೇ ವಿಭಾಗದಲ್ಲಿ ಮಿಂಚುತ್ತಿದ್ದ ವಿಜಯ್ ಕಾಂಚನ್ ಎಂಬ ಸಾಧಕರು ಆಕೆಗೆ ಗುರುವಾಗಿ ಸಿಕ್ಕರು.

ಮನೆಯಂಗಳದಲ್ಲಿ ಬಾವಿಯನ್ನು ಕೊರೆದರು

ಅಕ್ಷತಾ ಸಾಧನೆಯ ಹಾದಿಯು ಸುಲಭದ್ದು ಆಗಿರಲಿಲ್ಲ. ತನಗಾದ ಕಿರುಕುಳ, ಅಪಮಾನ, ನೋವು ಎಲ್ಲವೂ ಆಕೆಯನ್ನು ಗಟ್ಟಿ ಮಾಡಿತು ಎಂದು ನನ್ನ ಭಾವನೆ. ತನ್ನದೇ ಮನೆಯಂಗಳದಲ್ಲಿ ಆಕೆ ತನ್ನ ಕುಟುಂಬದ ಸದಸ್ಯರ ಜೊತೆ ಸೇರಿಕೊಂಡು ಒಂದು ಆಳವಾದ ಬಾವಿ ಕೊರೆದದ್ದು ಬಹಳ ದೊಡ್ಡ ಸುದ್ದಿ ಆಗಿತ್ತು. ಕೊರೋನಾ ಸಮಯದಲ್ಲಿ ಕೂಡ ಆಕೆ ತನ್ನ ತರಬೇತಿಯನ್ನು ನಿಲ್ಲಿಸಲಿಲ್ಲ ಅನ್ನುವುದು ನಿಜಕ್ಕೂ ಗ್ರೇಟ್!

ನನಗೆ ಅದಕ್ಕಿಂತ ಕಠಿಣ ಅನ್ನಿಸಿದ್ದು ಆಕೆ ಉದ್ಯೋಗ ಪಡೆಯಲು ಮಾಡಿದ ಸ್ವಾಭಿಮಾನಿ ಹೋರಾಟ. ತನ್ನ ಚಿನ್ನದ ಪದಕಗಳನ್ನು ಆಕೆ ತೆಗೆದುಕೊಂಡು ಕಚೇರಿಯಿಂದ ಕಚೇರಿಗೆ ಅಲೆಯುವ ದೃಶ್ಯ ನನಗೆ ಭಾರೀ ನೋವು ಕೊಡುತ್ತಿತ್ತು. ಆಗ ನಿಟ್ಟೆಯ ಒಂದು ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿ (ಈಗ ಮಾಜಿ) ಬಂದಿದ್ದಾಗ ನಾನು ಆಕೆಯನ್ನು ಕರೆದುಕೊಂಡು ಫೈಲ್ ಮುಂದಿಟ್ಟು ಸರಕಾರಿ ನೌಕರಿ ನೀಡಲು ವಿನಂತಿ ಮಾಡಿದ್ದೆ. ಆಗ ಆ ಸಿಎಂ ನಿರುತ್ಸಾಹ ತೋರಿಸಿ ‘ಏನಮ್ಮಾ, ಪವರ್ ಲಿಫ್ಟಿಂಗಿಗೆ ಮಾನ್ಯತೆ ಇದೆಯಾ? ಅದು ಒಲಿಂಪಿಕ್ಸ್ ಕೂಟದಲ್ಲಿ ಬರ್ತದಾ?’ ಎಂದೆಲ್ಲ ಕೇಳಿದ್ದರು.

ಈ ಪ್ರಶ್ನೆಯನ್ನು ಅಕ್ಷತಾ ಹಲವು ಬಾರಿ ಎದುರಿಸಿದ್ದಾರೆ. ಆದರೆ ಲಂಡನ್ ಕಾಮನ್ ವೆಲ್ತ್ ಕೂಟದಲ್ಲಿ ಆಕೆ 8 ಪದಕಗಳನ್ನು ಗೆದ್ದದ್ದು, ವರ್ಲ್ಡ್ ಚಾಂಪಿಯನಶಿಪ್ ಕೂಟದಲ್ಲಿ ಚಿನ್ನದ ಪದಕವನ್ನು ಗೆದ್ದದ್ದು ಭಾರತವನ್ನು ಪ್ರತಿನಿಧಿಸಿ ಎನ್ನುವುದನ್ನು ಎಲ್ಲರೂ ಮರೆಯುತ್ತಾರೆ! ಇದು ನಿಜವಾಗಿಯೂ ಕ್ರೀಡಾಲೋಕದ ದುರಂತ ಅಲ್ಲವೇ?

ಇದಕ್ಕಿಂತ ದೊಡ್ಡ ದುರಂತ ಎಂದರೆ…

ಆಕೆ ಪ್ರತೀ ಬಾರಿ ವಿದೇಶದ ಲಿಫ್ಟಿಂಗ್ ಕೂಟಗಳಿಗೆ ಹಾಜರಾಗುವಾಗ ‘ಪವರ್ ಲಿಫ್ಟಿಂಗ್ ಇಂಡಿಯಾ’ ಸಂಸ್ಥೆಯು ಅನುಮತಿ ಮತ್ತು ಮಾರ್ಗದರ್ಶನ ಮಾಡುತ್ತದೆ. ಆದರೆ ಆಕೆಯ ಪ್ರಯಾಣದ ಮತ್ತು ಇತರ ಖರ್ಚುಗಳಿಗೆ ಸರಕಾರದ ಅನುದಾನ ಇಲ್ಲ, ನೀವೇ ಹೊಂದಿಸಿಕೊಳ್ಳಬೇಕು ಎನ್ನುವ ಪತ್ರ ಬರೆಯುತ್ತದೆ. ಆಗೆಲ್ಲ ಅಕ್ಷತಾ ನೆರವಿಗೆ ಬರುವುದು ಆಕೆಯ ಅಭಿಮಾನಿಗಳು, ಗೆಳೆಯರು ಮತ್ತು ಒಂದಿಷ್ಟು ಕ್ರೀಡಾಭಿಮಾಮಾನಿ ಸಂಘಟನೆಗಳು ಅಂದರೆ ನೀವು ನಂಬಲೇಬೇಕು. ಸ್ವಾಭಿಮಾನಿ ಅಕ್ಷತಾ ಅವರಿಗೆ ಇದು ತುಂಬಾ ನೋವು ಕೊಡುವ ಸಂಗತಿ. ಈ ಬಾರಿ ಕೂಡ ಆಕೆ ತನ್ನ ಆಫ್ರಿಕಾ ಪ್ರಯಾಣಕ್ಕೆ ಒಂದು ಲಕ್ಷ ಮೂವತ್ತು ಸಾವಿರ ದುಡ್ಡು ಹೊಂದಿಸಬೇಕಾಯಿತು! ಇದನ್ನೆಲ್ಲ ಗಮನಿಸಿದಾಗ ಆಕೆಯ ಕ್ರೀಡಾ ಸಾಧನೆ ನಮಗೆ ಇನ್ನಷ್ಟು ಹೊಳೆದು ಕಾಣುತ್ತದೆ. ಸರಕಾರದ ಕ್ರೀಡಾ ಇಲಾಖೆ, ಕ್ರೀಡಾಭಿಮಾನಿ ಸಂಘಟನೆಗಳು, ಜನಪ್ರತಿನಿಧಿಗಳು ಅಕ್ಷತಾ ಅವರಂತಹ ಕ್ರೀಡಾ ಸಾಧಕರ ನೆರವಿಗೆ ನಿಲ್ಲದೆ ಹೋದರೆ ನೂರಾರು ಕ್ರೀಡಾ ಪ್ರತಿಭೆಗಳು ನಲುಗಿ ಹೋಗುವ ಅಪಾಯ ಇದೆ. ಅಂದಹಾಗೆ ಅಕ್ಷತಾಗೆ ಆಫ್ರಿಕಾದಲ್ಲಿ ಬೆಸ್ಟ್ ಲಿಫ್ಟರ್ ಆಫ್ ದ ಟೂರ್ನಿ ಪ್ರಶಸ್ತಿ ಕೂಡ ದೊರೆತಿದೆ.

ಭರತವಾಕ್ಯ

ಏನಿದ್ದರೂ ಕಾರ್ಕಳ ತಾಲೂಕಿನ ಬೋಳ ಎಂಬ ಪುಟ್ಟ ಗ್ರಾಮದಿಂದ ಲಂಡನ್, ಅಮೆರಿಕ, ಆಫ್ರಿಕ, ದುಬಾಯಿ, ಕಝಾಕಿಸ್ತಾನ್ ತಲುಪಿದ ಆಕೆಯ ಹೋರಾಟ ಮತ್ತು ಸಾಹಸಗಳು ಸಾವಿರಾರು ಗ್ರಾಮೀಣ ಸಾಧಕರಿಗೆ ಸ್ಫೂರ್ತಿ ಆಗಬಲ್ಲದು. ಸರಕಾರ ಆಕೆಯನ್ನು ದೊಡ್ಡದಾಗಿ ಗುರುತಿಸಬೇಕು. ಆಕೆಯ ಬದುಕಿನ ಕಥೆಯು ಹೈಸ್ಕೂಲಿನ ಕನ್ನಡ ಪಠ್ಯಪುಸ್ತಕದಲ್ಲಿ ಸ್ಥಾನ ಪಡೆಯಬೇಕು. ಏನಂತೀರಿ?

ಅಭಿನಂದನೆಗಳು ಅಕ್ಷತಾ. ಯು ಮೇಡ್ ಅಸ್ ಪ್ರೌಡ್.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಕ್ಯಾಪ್ಟನ್ ಪ್ರಾಂಜಲ್ ಪರಾಕ್ರಮಕ್ಕೆ ಒಲಿದ ಶೌರ್ಯ ಚಕ್ರ

Continue Reading

ಅಂಕಣ

ಧವಳ ಧಾರಿಣಿ ಅಂಕಣ: ಕಿಷ್ಕಿಂಧಾ ಕಾಂಡದಲ್ಲಿನ ರಾಜನೀತಿಯ ವಿಲಕ್ಷಣ ಘಟನೆ

ಧವಳ ಧಾರಿಣಿ ಅಂಕಣ: ಲಕ್ಷ್ಮಣನ ಮೂಲಕ ಸುಗ್ರೀವನ ಹತ್ತಿರ ಸ್ನೇಹವನ್ನು ಯಾಚಿಸುವುದು ತನ್ನ ಪತ್ನಿಯನ್ನು ರಾವಣನಿಂದ ಬಿಡಿಸಿಕೊಂಡು ಬರಲು ಸಹಕಾರಿಯಾಗಲೆಂದು. ರಾಜನೀತಿಗೆ ಅನುಗುಣವಾದ ಸಂಗತಿಯನ್ನು ರಾಮ ಇಲ್ಲಿ ಅನುಸರಿಸಿದ್ದಾನೆಯೇ ಹೊರತೂ ಮತ್ತೇನೂ ಅಲ್ಲ.

VISTARANEWS.COM


on

ಧವಳ ಧಾರಿಣಿ ಅಂಕಣ rama and sugreeva
Koo

ರಾಮ ಸುಗ್ರೀವನಲ್ಲಿ ಶರಣಾಗತಿಯನ್ನು ಕೋರಿದ ಅಪರೂಪದ ಸನ್ನಿವೇಶ

dhavala dharini by Narayana yaji

ಧವಳ ಧಾರಿಣಿ ಅಂಕಣ: ಸರ್ವಲೋಕಸ್ಯ ಧರ್ಮಾತ್ಮಾ ಶರಣ್ಯಃ ಶರಣಂ ಪುರಾ.
ಗುರುರ್ಮೇ ರಾಘವಃ ಸೋSಯಂ ಸುಗ್ರೀವಂ ಶರಣಂ ಗತಃ৷৷ಕಿ. ಕಾಂ.4.20৷৷

ಧರ್ಮಾತ್ಮನಾದ (ಶ್ರೀರಾಮನು) ಈ ಹಿಂದೆ ಹೇಗೆ ಸಕಲ ಲೋಕಗಳಿಗೆ ರಕ್ಷಕನಾಗಿದ್ದನೋ, ಎಲ್ಲರಿಗೂ ಆಶ್ರಯಭೂತನಾಗಿದ್ದನೋ, ನನ್ನ ಗುರುವಾದ ಈ ರಘುವರನು ಇಂದು ಸುಗ್ರೀವನನ್ನು ಆಶ್ರಯಿಸಲು ಬಂದಿರುವನು.

ಪಂಪಾನದಿಯ ತೀರದಲ್ಲಿ ಹನುಮಂತ ರಾಮ ಲಕ್ಷ್ಮಣರನ್ನು ಪರೀಕ್ಷಿಸಲು ಭಿಕ್ಷುವಿನ ವೇಷ ಧರಿಸಿ ಅವರೆದುರು ನಿಂತು ಅವರ ಪರಿಚಯ ಕೇಳಿದಾಗ ಲಕ್ಷ್ಮಣ ತಾವು ಸುಗ್ರೀವನಲ್ಲಿ ಶರಣಾಗಲು/ ಆಶ್ರಯ ಕೋರಲು ಬಂದಿದ್ದೇವೆ ಎಂದು ಹೇಳುತ್ತಾನೆ.

ಕಿಷ್ಕಿಂಡಾ ಕಾಂಡದ ನಾಲ್ಕನೆಯ ಸರ್ಗದಲ್ಲಿ ಬರುವ ಈ ರೀತಿಯ ಎಂಟು ಶ್ಲೋಕಗಳನ್ನು ಓದುತ್ತಾ ಹೋದಂತೆ ಒಮ್ಮೆಲೇ ರಾಮನ ಕುರಿತಾದ ನಮ್ಮ ಭಾವನೆಗಳೆಲ್ಲವುದಕ್ಕೂ ವಿರುದ್ಧವಾದ “ರಾಮ ಸುಗ್ರೀವನಲ್ಲಿ ಶರಣಾಗತಿಯನ್ನು ಬಯಸಿ ಬಂದಿದ್ದಾನೆ” ಎನ್ನುವ ಮಾತುಗಳು ನೋಡಿ ಆಶ್ಚರ್ಯ ಮೂಡುತ್ತದೆ. ಕೆಲ ಕಾಲ ನಾವು ಓದುತ್ತಿರುವುದು ವಾಲ್ಮೀಕಿ ಬರೆದ ರಾಮಾಯಣವೋ ಅಥವಾ ಇನ್ಯಾರದೋ ಎನ್ನುವ ಸಂಶಯಕ್ಕೆ ಒಳಗಾಗುತ್ತೇವೆ. ರಾಮನ ಹದಿನಾರು ಗುಣಗಳಲ್ಲಿ ಒಂದಾದ “ಕಸ್ಯ ಬಿಭ್ಯತಿ ದೇವಾಶ್ಚ ಜಾತರೋಷಸ್ಯ ಸಂಯುಗೇ- ಸಿಟ್ಟುಗೊಂಡು ರಾಮನೇನಾದರೂ ಯುದ್ಧಕ್ಕೆ ನಿಂತರೆ ದೇವತೆಗಳೂ ಸಹ ಅಂಜುವರು” ಎನ್ನುವ ಪರಾಕ್ರಮಗಳನ್ನು ವರ್ಣಿಸಿದ ಕವಿ ಇಲ್ಲಿ ಎಲ್ಲವನ್ನೂ ಕಳೆದುಕೊಂಡು ದೀನನಾಗಿ ಮುಳುಗುವವನಿಗೆ ಹುಲ್ಲುಕಡ್ಡಿಯಾದರೂ ಆಗಬಹುದು ಎನ್ನುವ ರೀತಿಯಲ್ಲಿ ನಿಂತಿದ್ದಾನೆ. ಲಕ್ಷ್ಮಣ ಹನುಮಂತನ ಹತ್ತಿರ ಒಮ್ಮೆ ಸುಗ್ರೀವನನ್ನು ಭೆಟ್ಟಿ ಮಾಡಿಸು ಎಂದು ಯಾಚಿಸುವಾಗ ಉಪಯೋಗಿಸುವ ಶಬ್ದಗಳನ್ನು ಗಮನಿಸಿ:

  1. ರಾಮಶ್ಚ ಸುಗ್ರೀವಂ ಶರಣಂ ಗತೌ
  2. ಸುಗ್ರೀವಂ ನಾಥಮಿಚ್ಛತಿ
  3. ಸುಗ್ರೀವಂ ಶರಣಂ ಗತಃ
  4. ಶರಣ್ಯಶ್ಶರಣಂ ಪುರಾ…. ಸುಗ್ರೀವಂ ಶರಣಂ ಗತಃ
  5. ಸುಗ್ರೀವಂ ವಾನರೇನ್ದ್ರಂ ತು ರಾಮಶ್ಶರಣಮಾಗತಃ
  6. ಶರಣಂ ಗತೇ

ಇವೆಲ್ಲದಕ್ಕಿಂತಲೂ ಮಿಗಿಲಾಗಿ ಕಣ್ಣೀರು ತುಂಬಿಕೊಂಡು ಕೇಳಿಕೊಳ್ಳುವುದು

  1. ಯಸ್ಯ ಪ್ರಸಾದೇ ಸತತಂ ಪ್ರಸೀದೇಯುರಿಮಾಃ ಪ್ರಜಾಃ.

ಸ ರಾಮೋ ವಾನರೇನ್ದ್ರಸ್ಯ ಪ್ರಸಾದಮಭಿಕಾಙ್ಕ್ಷತೇ

ಯಾವನ ಪ್ರಸನ್ನತೆಯಿಂದ ಎಲ್ಲ ಪ್ರಜೆಗಳೂ ಸರ್ವದಾ ಪ್ರಸನ್ನಚಿತ್ತರಾಗಿರುತ್ತಿದ್ದರೋ ಅಂತಹ ಶ್ರೀರಾಮನೀಗ ವಾನರೇಂದ್ರನಾದ ಸುಗ್ರೀವನ ಅನುಗ್ರಹವನ್ನು ಬಯಸಿ ಬಂದಿದ್ದಾನೆ.

ಒಂದು ಕಡೆ ಮಹಾತೇಜಸ್ವಿಯಾದ, ಸರ್ವಗುಣ ಸಂಪನ್ನನಾದ, ವಶಿಷ್ಠ, ವಿಶ್ವಾಮಿತ್ರ, ಅತ್ರಿ, ಅಗಸ್ತ್ಯರಿಂದ ಅನುಗ್ರಹಿಸಲ್ಪಟ್ಟ, ನಾಲ್ಕು ಸಮುದ್ರಪರ್ಯಂತರವೂ ಧರ್ಮಸ್ಥಾಪನೆಗಾಗಿ ಇರುವ ಚಕ್ರವರ್ತಿಗಳ ಪೀಠ ಎಂದು ಕೀರ್ತಿಸಲ್ಪಟ್ಟ ರಾಮ ಲಕ್ಷ್ಮಣನ ಮಾತನ್ನು ಮೌನವಾಗಿ ಕೇಳುತ್ತಾ ನಿಂತಿದ್ದಾನೆ. ಅವರು ಆಶ್ರಯವನ್ನು ಕೇಳುವುದು ಯಾರಲ್ಲಿ ಅಂದರೆ, ಹೆಂಡತಿಯನ್ನೂ ಸೇರಿ, ತನ್ನದೆಲ್ಲವನ್ನೂ, ಕಳೆದುಕೊಂಡು ವಾಲಿಯ ಭಯದಿಂದ ಜೀವ ಉಳಿಸಿಕೊಳ್ಳಲು ಋಷ್ಯಮೂಕ ಪ್ರರ್ವತಶ್ರೇಣಿಯಲ್ಲಿ ನಾಲ್ವರೊಂದಿಗೆ ಇರುವ ಸುಗ್ರೀವನಲ್ಲಿ. ಲಕ್ಷ್ಮಣನಿಗೆ ಈ ಮಾತುಗಳನ್ನು ಹೇಳುವಾಗ ಹೊಟ್ಟೆಯಲ್ಲಿ ಸಂಕಟವಾಗಿರಬೇಕು. ಹೇಳಲೇ ಬೇಕಾದ ಅನಿವಾರ್ಯತೆಯಿಂದ ಹೇಳುವಾಗ ಆತ ದೀನನಾಗಿ ಕಣ್ಣೀರಧಾರೆಯನ್ನು ಹರಿಸುತ್ತಾ – “ಏವಂ ಬ್ರುವಾಣಂ ಸೌಮಿತ್ರಿಂ ಕರುಣಂ ಸಾಶ್ರುಲೋಚನಮ್” ಹನುಮಂತನಲ್ಲಿ ಯಾಚಿಸುತ್ತಿದ್ದ. ಈ ಘಟನೆಯನ್ನು ನೆನಪಿನಲ್ಲಿಟ್ಟುಕೊಂಡು ತಾಳಮದ್ದಳೆಯಲ್ಲಿ ವಾಲಿ ರಾಮನಿಗೆ ಸುಗ್ರೀವನ ಸಹಾಯವನ್ನು ಕೇಳಿರುವುದರ ಕುರಿತು “ಇವನು ನಿನಗೆ ಸಹಾಯಿಯೇ ನೀ I ನೀನವನ ಬಲದಲಿ ನಿನ್ನ ವೈರಿಯIʼ ಎಂದು ಛೇಡಿಸುವ ಪದ್ಯಗಳಿವೆ. (ಪಾರ್ತಿಸುಬ್ಬನ ಪದ್ಯಗಳ ರಚನೆಯ ಕುರಿತು ಕನ್ನಡಸಾಹಿತ್ಯ ಲೋಕ ಚರ್ಚೆ ಮಾಡಬೇಕು. ಯಕ್ಷಗಾನ ಕವಿಗಳೆನ್ನುವ ಅಸಡ್ಡೆಯಿಂದ ಹೊರಬರಬೇಕಾಗಿದೆ). ವಾಲಿಯ ಪ್ರಮುಖವಾದ ಪ್ರಶ್ನೆಯೇ ರಾಮ ಸುಗ್ರೀವನಲ್ಲಿ ಶರಣು ಬಂದಿರುವುದು ಯಾಕೆ ಎನ್ನುವುದು. ಅದಕ್ಕೆ ಆಧಾರವಾಗಿ ಈ ಮೇಲಿನ ಶ್ಲೋಕವನ್ನು ಗಮನಿಸಬಹುದು.

ರಾಮಾಯಣದಲ್ಲಿ ಸುಗ್ರೀವನ ಕುರಿತು ತಿಳಿದಿರುವ ಅಂಶಗಳೆಂದರೆ ಆತುರಗೆಟ್ಟವ, ಸ್ತ್ರೀವ್ಯಾಮೋಹಿ, ಅಂಜುಕುಳಿ, ಪ್ರಾಣ ಉಳಿಸಿಕೊಳ್ಳಲು ಒದ್ದಾಡುತ್ತಿದ್ದವ. ತನಗೇ ಒಂದು ನೆಲೆಯಿಲ್ಲದ ವಾನರನೋರ್ವನಲ್ಲಿ ರಾಮ ಅದು ಹೇಗೆ ಶರಣು ಬರಲು ಸಾಧ್ಯ, ವಾಲ್ಮೀಕಿ ಈ ಭಾಗವನ್ನು ಯಾಕೆ ಹೇಳಿರಬಹುದು ಎನ್ನುವುದನ್ನು ವಿವೇಚಿಸಲು ಅರಣ್ಯಕಾಂಡದೊಳಗೆ ಪ್ರವೇಶಿಸಬೇಕು.

ರಾಮಾಯಣದಲ್ಲಿ ಅರಣ್ಯಕಾಂಡ ಮತ್ತು ಕಿಷ್ಕಿಂಧಾ ಕಾಂಡಗಳಿಲ್ಲದಿದ್ದರೆ ಈ ಮಹಾಕಾವ್ಯವೇ ಹುಟ್ಟುತ್ತಿರಲಿಲ್ಲವೇನೋ. ರಾಮಾವತಾರದ ಉದ್ದೇಶವೇ ಅರಣ್ಯಕಾಂಡದಲ್ಲಿ ಅದೂ ಆತ ಚಿತ್ರಕೂಟಕ್ಕೆ ಬರುವಾಗಿನಿಂದ ಪ್ರಾರಂಭವಾಗುತ್ತದೆ. ರಾವಣವಧೆಗೆ ಯೋಜನೆಯನ್ನು ನಿರೂಪಿಸಿರುವುದು ಅಗಸ್ತ್ಯರ ಆಶ್ರಮದಲ್ಲಿ. ಇದಕ್ಕಿಂತಲೂ ರೋಚಕವಾದ ವಿಷಯವೆಂದರೆ ಕೈಕೇಯಿ ದಶರಥನ ಹತ್ತಿರ ಕೇಳುವ ವರ “ರಾಮ ವನವಾಸಕ್ಕೆ ಹೋಗಲಿ” ಎಂದು, ಆದರೆ ರಾಮನ ಹತ್ತಿರ “ದಶರಥ ನನಗೆ ವರವನ್ನು ಕೊಟ್ಟ ಪ್ರಕಾರ ನೀನು ದಂಡಕಾರಣ್ಯಕ್ಕೆ ಹೋಗಬೇಕು” ಎನ್ನುತ್ತಾಳೆ. ಬುದ್ಧಿವಂತೆಯಾದ ಕೈಕೇಯಿಗೆ ದಂಡಕಾರಣ್ಯದ ರಾಕ್ಷಸರ ವಿಷಯ ತಿಳಿದಿದೆ. ಹಿಂದೆ ದಶರಥ ಶಂಬರನ ಹತ್ತಿರ ಕಾಳಗ ಮಾಡಿದ್ದು ಇದೇ ದಂಡಕಾರಣ್ಯದಲ್ಲಿ. ಹಾಗಾಗಿ ರಾಕ್ಷಸರ ಕೈಯಲ್ಲಿ ರಾಮನಿಗೆ ಅಪಾಯವಾದರೆ ಆಗಲಿ ಎನ್ನುವ ಕುತ್ಸಿತ ಬುದ್ಧಿ ಅವಳದಾಗಿತ್ತು.

ರಾಮನಿಗೆ ಸೀತೆಯ ಮೇಲೆ ಅಪಾರವಾದ ಪ್ರೀತಿ ಇತ್ತು. ಸೀತಾಪಹರಣವೆನ್ನುವುದು ಆತ ನಿರೀಕ್ಷಿಸದ ಘಟನೆ. ಆಕೆಗೆ ರಾಕ್ಷಸರಿಂದ ತೊಂದರೆ ಆಗಬಹುದೆನ್ನುವ ಅನುಮಾನ ಇದ್ದೇ ಇತ್ತು. ಲಕ್ಷ್ಮಣ ಆಕೆಯನ್ನು ಬಿಟ್ಟು ತನ್ನನ್ನು ಹುಡುಕಲು ಬಂದಾಗಲೇ ಆತನಿಗೆ ಅನುಮಾನ ಕಾಡಿತ್ತು. “ಅವಳು ಏನೇ ಅಂದರೂ ಆಕೆಯನ್ನು ಒಂಟಿಯಾಗಿ ಬಿಟ್ಟು ನೀನು ಬರಬಾರದಿತ್ತು” ಎಂದು ಲಕ್ಷ್ಮಣನ ಮೇಲೆ ಅಸಮಾಧಾನವನ್ನು ವ್ಯಕ್ತಪಡಿಸುತ್ತಾನೆ. ಸೀತೆ ಬದುಕಿದ್ದಾಳೋ ಅಥವಾ ಅಪಹರಣಕ್ಕೊಳಗಾದಳೋ ಎನ್ನುವುದನ್ನು ತಿಳಿಯದೇ ದಿಗ್ಮೂಢನಾಗಿದ್ದ. ಅಡವಿಯಲ್ಲಿ ಇರುವ ಎಲ್ಲಾ ಗಿಡಗಳನ್ನೂ, ಮರಗಳನ್ನೂ ಆತ ಹುಚ್ಚನಂತೆ ಕೂಗಿ ಕೂಗಿ ತನ್ನ ಸೀತೆ ಎಲ್ಲಿ ಇದ್ದಾಳೆ ವಿಲಾಪಿಸುತ್ತಿದ್ದ. ವಿರಹದ ದುಃಖ ಎಲ್ಲಿಯವರೆಗೆ ತಿರುಗಿತು ಎಂದರೆ ಗೋದಾವರೀ ನದಿಯ ಹತ್ತಿರ ಸೀತೆಯ ವಿಷಯವನ್ನು ಕೇಳುತ್ತಾನೆ. ಪರ್ವತವನ್ನು ಪುಡಿಮಾಡಿಬಿಡುತ್ತೇನೆ ಎಂದು ಕೂಗಾಡುತ್ತಾನೆ.

ಸಕಲ ಪ್ರಪಂಚವನ್ನೇ ಸುಟ್ಟು ಪುಡಿಮಾಡುವೆ ಎಂದು ಬಿಲ್ಲಿನ ನಾಣನ್ನು ಬಿಗಿದು “ಕ್ಷುರವೆನ್ನುವ ಬಾಣವನ್ನು” ಹೂಡಿದಾಗ ಆತನ ಕ್ರೋಧವನ್ನು ಗಮನಿಸಿದ ಲಕ್ಷ್ಮಣ ಆತನನ್ನು ಸಮಾಧಾನ ಪಡಿಸುತ್ತಾನೆ. ಲಕ್ಷ್ಮಣ ರಾಮನಿಗೆ ಧರ್ಮದ ವಿವೇಕವನ್ನು ಹೇಳುವುದು ರಾಮಾಯಣದಲ್ಲಿ ಸೊಗಸಾಗಿ ವರ್ಣಿತವಾಗಿದೆ. ವಿಪತ್ತು ಎನ್ನುವುದು ಎಂತಹ ದೊಡ್ದ ಮನುಷ್ಯರಿಗೂ ಬರುತ್ತದೆ. ಆಗ ವಿವೇಕವನ್ನು ಕಳೆದುಕೊಳ್ಳಬಾರದು. ತಮ್ಮ ಕುಲಪುರೋಹಿತರಾದ ವಶಿಷ್ಠರ ನೂರುಮಂದಿ ಮಕ್ಕಳು ವಿಶ್ವಾಮಿತ್ರರಿಂದ ಹತರಾದರೂ ಅವರು ತಾಳ್ಮೆಯನ್ನು ತಂದು ಪ್ರತಿ ಶಾಪವನ್ನು ಕೊಡದಿರುವ ವಿಷಯವನ್ನು ತಿಳಿಸಿ ಸಮಾಧಾನ ಮಾಡುತ್ತಾನೆ. ಸಂಕಟ ಬಂದಾಗ ಧೃತಿಗೆಡದೇ ಅದನ್ನು ಪರಿಹರಿಸುವ ಉಪಾಯವನ್ನು ಹುಡಕಬೇಕೆಂದು ಹೇಳಿದಾಗ ರಾಮ ಸ್ವಲ್ಪಮಟ್ಟಿಗೆ ಸಮಾಧಾನಗೊಳ್ಳುತ್ತಾನೆ. ಅರಣ್ಯದಲ್ಲಿದ್ದ ಮೃಗಗಳ ಹತ್ತಿರ ವೈದೇಹಿಯ ಎಲ್ಲಿದ್ದಾಳೆ ಎಂದು ಕೇಳಿದಾಗ ಅವುಗಳು ದಕ್ಷಿಣ ದಿಕ್ಕಿಗೆ ಮುಖಮಾಡಿ ಆಕಾಶದ ಕಡೆಗೆ ನೋಡುತ್ತಿದ್ದವು. ಈ ಶಕುನದ ಲಕ್ಷಣದಂತೆ ಅವರು ಆಕಾಶಮಾರ್ಗದಲ್ಲಿ ದಕ್ಷಿಣದ ಕಡೆ ಹುಡುಕಲು ಪ್ರಾರಂಭಿಸುತ್ತಾರೆ.

ಅವರಿಗೆ ಮೊದಲು ಎದುರಾದ ಸವಾಲು ಸೀತೆಯನ್ನು ಯಾರು ಕದ್ದೊಯ್ದಿರಬಹುದೆನ್ನುವುದು. ಆಗ ಆತನಿಗೆ ಈ ವಿಷಯವನ್ನು ಹೇಳುವುದು ಜಟಾಯು. “ಪುತ್ರೋ ವಿಶ್ರವಸಃ ಸಾಕ್ಷಾದ್ಭಾತ್ರಾ ವಶ್ರವಣಸ್ಯ ಚ” ರಾವಣ ವಿಶ್ರವಸನ ಮಗ, ಕುಬೇರನ ಸಾಕ್ಷಾತ ಸಹೋದರ, ಎನ್ನುವ ಮೂಲಕ ಮೊತ್ತಮೊದಲ ಬಾರಿಗೆ ರಾವಣನೆನ್ನುವವನ ವಿಷಯವನ್ನು ರಾಮನಿಗೆ ತಿಳಿಸುತ್ತಾ ಮುಂದೆ ಹೇಳಲು ಸಾಧ್ಯವಾಗದೇ ಜೀವಬಿಡುತ್ತಾನೆ. ಅಲ್ಲಿಂದ ಮುಂದೆ ಆತನಿಗೆ ರಾವಣನ ಇರುವ ತಾಣವೆಲ್ಲಿ ಎನ್ನುವ ಸಂಶಯ ಉಂಟಾಗುತ್ತದೆ. ರಾಮಾಯಣದ ಪ್ರಕಾರ ಲಂಕೆಯೆನ್ನುವುದು ಒಂದು ಅಭೇದ್ಯವಾದ ಪ್ರದೇಶವಾಗಿತ್ತು. ರಾವಣ ಅಲ್ಲಿಂದ ಜಗತ್ತಿನ ಬೇರೆಕಡೆ ಹೋಗಿ ಆಕ್ರಮಣ ಮಾಡುತ್ತಿದ್ದ. ಸಮುದ್ರದ ಮದ್ಯದಲ್ಲಿರುವ ಈ ದ್ವೀಪ ಪುರಾಣದ ಕಾಲದಿಂದಲೂ ಹೊರಗಿನ ಪ್ರಪಂಚಕ್ಕೆ ತಿಳಿದಿರಲಿಲ್ಲ. ಮೊದಲು ಅದು ಗಂಧರ್ವರ, ಯಕ್ಷರ ವಾಸ ಸ್ಥಳವಾಗಿತ್ತು. ದೇವತೆಗಳು ವಿಹಾರಕ್ಕಾಗಿ ಅಲ್ಲಿಗೆ ಬರುತ್ತಿದ್ದರು. ಕುಬೇರನಿಂದ ಲಂಕೆಯನ್ನು ರಾವಣ ವಶಪಡಿಸಿಕೊಂಡ ಮೇಲೆ ದೇವತೆಗಳಿಗೂ ಅದು ಅಪರಿಚಿತ ಪ್ರದೇಶವಾಯಿತು. ಲಂಕೆ ಇರುವ ಪ್ರದೇಶ ಯಾರಿಗೂ ಗೊತ್ತಿರಲಿಲ್ಲ.

ಅದನ್ನು ಮೊದಲು ತಿಳಿದುಕೊಳ್ಳಲು ದಕ್ಷಿಣದೆಡೆಗೆ ಹುಡುಕಲು ಹೊರಡುತ್ತಾರೆ. ಸತಿವಿಯೋಗದ ದುಃಖದಿಂದ ಭ್ರಮಿತನಾದ ರಾಮನಿಗೆ ಲಕ್ಷ್ಮಣನೇ ಮಾರ್ಗದರ್ಶನ ಮಾಡುತ್ತಾನೆ. ಇಲ್ಲಿ ಲಕ್ಷ್ಮಣನ ವಿವೇಕ ಮತ್ತು ಪ್ರಕೃತಿಯೊಡನೆ ಆತನಿಗಿರುವ ತಾದಾತ್ಯ್ಮ ಚನ್ನಾಗಿ ವ್ಯಕ್ತವಾಗುತ್ತದೆ. ತನ್ನ ವೈಪಲ್ಯದಿಂದ ಅಣ್ಣ ಹೆಂಡತಿಯನ್ನು ಕಳೆದುಕೊಳ್ಳಬೇಕಾಯಿತು ಎನ್ನುವ ಯಾವ ನೋವನ್ನು ಹೊರಗಡೆ ತೋರಿಸಿಕೊಳ್ಳುವುದಿಲ್ಲ. ವಾಸ್ತವದಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸಲು ಆತ ವಿವೇಚನೆಯನ್ನು ಮಾಡುತ್ತಿರುತ್ತಾನೆ. ಶೂರ್ಪನಖಿ, ಅಯೋಮುಖಿಯರಿಗೆ ಶಿಕ್ಷಿಸಿದ್ದು, ಇಂದ್ರಜಿತುವಿನ ವಧಾ ಪ್ರಕರಣ ಇಲ್ಲೆಲ್ಲ ಅದನ್ನು ಗಮನಿಸಬಹುದು. ಸುಮಿತ್ರೆ ಹೇಳಿದ ʼಇನ್ನು ಮುಂದೆ ಅರಣ್ಯವೇ ನಿನಗೆ ಅಯೋಧ್ಯೆ, ರಾಮನೇ ನಿನಗೆ ದಶರಥನಂತೆ, ಸೀತೆಯಲ್ಲಿ ತನ್ನನ್ನು ಕಾಣುʼ ಎನ್ನುವ ಮಾತುಗಳು ಅವನಲ್ಲಿ ಮನಮಾಡಿದ್ದವು. ಆತನಿಗೆ ಶಕುನಗಳ ಕುರಿತು ಅರಿವಿತ್ತು. ರಾಮನಿಗೆ ಸಮಾಧಾನ ಮಾಡುತ್ತಾ ಮುಂದೆ ಸೀತಾನ್ವೇಷಣೆಯ ಕರ್ತವ್ಯವನ್ನು ಸೂಚಿಸಿ ಅಡವಿಯಲ್ಲಿ ದಕ್ಷಿಣಕ್ಕೆ ನಡೆಯುವಂತೆ ಪ್ರೇರೇಪಿಸುತ್ತಾನೆ. ಆಗ ಇದ್ದಕ್ಕಿದ್ದಂತೆ ಅವನ ಎಡತೋಳು ಅದುರಿತು, ಅದು ಅನಿಷ್ಟಸೂಚಕವಾದ ಶಕುನ, ಆದರೆ ಅದರ ಬೆನ್ನಲ್ಲೇ ಮಂಜುಲಕವೆನ್ನುವ ಹೆಸರಿನ ಮಹಾಭಯಂಕರ ಪಕ್ಷಿಯ ಧ್ವನಿ ಕೇಳಿಸಿತು. ಆತ ರಾಮನಿಗೆ “ಸದ್ಯದಲ್ಲಿಯೇ ಭಯಂಕರವಾದ ಯುದ್ಧದ ಸನ್ನಿವೇಶ ತಮಗೆ ಎದುರಾಗುತ್ತದೆ. ಪಕ್ಷಿಯ ಧ್ವನಿ ಕೇಳಿಸಿರುವದರಿಂದ ಅದರಲ್ಲಿ ನಮ್ಮಿಬ್ಬರಿಗೂ ವಿಜಯವಾಗುತ್ತದೆ” ಎಂದು ಹೇಳುತ್ತಾನೆ.

ಇದ್ದಕ್ಕಿದ್ದಂತೆ ಯಾವುದೋ ವಿಶಾಲವಾದ ತೋಳುಗಳು ಅವರಿಬ್ಬರನ್ನೂ ಬಂಧಿಸಿಬಿಡುತ್ತವೆ. ಅದು ಕಬಂಧನೆನ್ನುವ ರಾಕ್ಷಸನದು. ಆತನಿಗೆ ತಲೆಯೇ ಇರಲಿಲ್ಲ, ಹೊಟ್ಟೆಯಲ್ಲಿ ಬಾಯಿ ಇತ್ತು. ಅರಣ್ಯದಲ್ಲಿರುವ ಮೃಗ ಪಕ್ಷಿ ಪ್ರಾಣಿಗಳನ್ನು ತನ್ನ ಬಾಹುಗಳಲ್ಲಿ ಹಿಡಿದು ತಿನ್ನುತ್ತಿದ್ದ. ರಾಮ ಲಕ್ಷ್ಮಣರಿಬ್ಬರನ್ನೂ ಒಂದೊಂದು ತೋಳಿನಲ್ಲಿ ಹಿಡಿದು ತಿನ್ನಲು ಬಯಸಿದಾಗ ಆತನಿಂದ ತಪ್ಪಿಸಿಕೊಳ್ಳಲು ಅವರಿಬ್ಬರೂ ಆತನ ತೋಳುಗಳನ್ನು ಕತ್ತರಿಸಿಬಿಡುತ್ತಾರೆ. ಯಾವಾಗ ಆತನ ಕೈ ಕತ್ತರಿಸಲ್ಪಟ್ಟಿತೋ ಆ ರಾಕ್ಷಸ ಆಶ್ವರ್ಯಚಕಿತನಾಗಿ ಅವರಿಬ್ಬರ ಪರಿಚಯವನ್ನು ಕೇಳುತ್ತಾನೆ. ರಾಮ ತಮ್ಮಿಬ್ಬರ ಪರಿಚಯವನ್ನು ಹೇಳಿದೊಡನೆಯೇ ಅತ ತನ್ನ ಪರಿಚಯವನ್ನು ಹೇಳಲುಪಕ್ರಮಿಸುತ್ತಾನೆ. ದನುವಿನ ಪುತ್ರನಾದ ಆತ ಗಂಧರ್ವನಾಗಿದ್ದ. ಸುಂದರನಾದ ರೂಪವನ್ನು ಹೊಂದಿದ್ದ, ಆದರೆ ಘೋರವಾದ ರೂಪವನ್ನು ಧರಿಸಿ ಅಡವಿಯಲ್ಲಿದ್ದ ಋಷಿಮುನಿಗಳಿಗೆ ತೊಂದರೆ ಕೊಡುತ್ತಿದ್ದ. ಒಮ್ಮೆ ಸ್ಥೂಲಶಿರಸನೆನ್ನುವ ಮುನಿಗೆ ಹೀಗೆ ಪೀಡಿಸಲು ಹೋದಾಗ ಮುನಿ, ನಿನಗೆ ಈ ಘೋರರೂಪವೇ ಶಾಶ್ವತವಾಗಿ ಉಳಿಯಲಿ ಎಂದು ಶಾಪವನ್ನು ಕೊಟ್ಟ ಕಾರಣದಿಂದ ಅರಣ್ಯದಲ್ಲಿ ರಾಕ್ಷಸನಾಗಿಬಿಟ್ಟ. ತನ್ನ ತಪ್ಪಿನ ಅರಿವಾಗಿ ಆತ ಋಷಿಯಲ್ಲಿ ಉಶ್ಶ್ಯಾಪವನ್ನು ಬೇಡಿದಾಗ, ಮುನಿ ”ರಾಮಲಕ್ಷ್ಮಣರು ಮುಂದೊಂದು ದಿನ ಅರಣ್ಯಕ್ಕೆ ಬಂದಾಗ ನಿನ್ನ ಎರಡೂ ತೋಳುಗಳನ್ನು ಕಡಿದು ಜೀವಂತವಾಗಿ ಸುಡುವರು. ಆಗ ಪುನಃ ನಿನ್ನ ಕಾಂತಿಯುತವಾದ ಶರೀರ ನಿನಗೆ ದೊರೆಯುವುದು” ಎಂದು ನುಡಿಯುತ್ತಾನೆ.

ಶಾಪದ ಕಾರಣ ರೂಪಿನೊಂದಿಗೆ ಸ್ವಭಾವವವೂ ರಾಕ್ಷಸತ್ವವೇ ಆಗಿ ಬದಲಾಗಿಬಿಡುತ್ತದೆ. ಶಾಪಗ್ರಸ್ತನಾದವ ಬ್ರಹ್ಮನನ್ನು ಕುರಿತು ತಪಸ್ಸು ಮಾಡಿ ದೀರ್ಘಾಯುಷ್ಯವನ್ನು ಪಡೆಯುತ್ತಾನೆ. ವರದ ಮದದಿಂದ ಇಂದ್ರನನ್ನು ಎದುರಿಸಿದಾಗ ದೇವೇಂದ್ರ ಈತನ ತಲೆಯ ಮೇಲೆ ವಜ್ರಾಯುಧದಿಂದ ಪ್ರಹಾರ ಮಾಡುತ್ತಾನೆ. ಪ್ರಹಾರಕ್ಕೆ ಕಬಂಧನ ತಲೆ ಕಾಲು ಎಲ್ಲ ಶರೀರದೊಳಗೆ ಸೇರಿ ಹೊಟ್ಟೆಯಲ್ಲಿ ಬಾಯಿ ಮೂಡಿತು. ಸೋತು ಸುಣ್ಣವಾದ ರಾಕ್ಷಸ ಇಂದ್ರನಿಗೆ ತನ್ನನ್ನು ರಕ್ಷಿಸೆಂದು ಕೇಳಲು, ಆತ “ನಿನ್ನ ತೋಳುಗಳು ಯೋಜನದಷ್ಟು ವಿಸ್ತೀರ್ಣವಾಗಲಿ, ಮುಂದೆ “ಯದಾ ರಾಮಃ ಸಲಕ್ಷ್ಮಣಃ I ಛೇತ್ಸತೇ ಸಮರೇ ಬಾಹೂ ತದಾ ಸ್ವರ್ಗಂ ಗಮಿಷ್ಯಸಿ II- ಲಕ್ಷ್ಮಣಸಹಿತನಾದ ರಾಮನು ನಿನ್ನ ಎರಡೂ ತೋಳುಗಳನ್ನು ಯಾವಾಗ ಕಡಿಯುವನೋ ಆಗ ನಿನ್ನ ಶಾಪವಿಮೋಚನೆಯಾಗುತ್ತದೆ” ಎಂದು ಹೇಳುತ್ತಾನೆ. ಇಷ್ಟು ಹೇಳಿ ಆತ ರಾಮನ ಹತ್ತಿರ ತನ್ನನ್ನು ಈಗಲೇ ಜೀವಂತವಾಗಿ ಸುಡು ಎಂದು ಹೇಳಿದಾಗ ರಾಮ ಒಪ್ಪುವುದಿಲ್ಲ. ಕಬಂಧನಿಗೆ ಸೀತೆಯನ್ನು ರಾವಣ ಕದ್ದೊಯ್ದಿರುವ ವಿಷಯ ತಿಳಿದಿದೆ. ಕುಳಿತಲ್ಲಿಯೇ ಆತ ಅದನ್ನು ಗಮನಿಸಿದ್ದಾನೆ. ರಾಮನಿಗೆ ಸೀತೆಯನ್ನು ರಾವಣ ಕದ್ದೊಯ್ದ ವಿಷಯ ತಿಳಿಸಿ ಅವನ ಲಂಕೆಯನ್ನು ಹುಡುಕಲು ಒಬ್ಬ ಒಳ್ಳೆಯ ಮಿತ್ರನನ್ನು ಹುಡುಕಿಕೊಡುವುದಾಗಿ ಹೇಳುತ್ತಾನೆ. ಹಾಗೆ ಹೇಳಬೇಕೆಂದರೆ ತನಗೆ ಮೊದಲಿನ ರೂಪ ಸಿಕ್ಕರೆ ಮಾತ್ರ ಸಾಧ್ಯವೆಂದು ಶರತ್ತು ಹಾಕುತ್ತಾನೆ. ರಾಮನಿಗೆ ರಾವಣ ಸೀತೆಯನ್ನು ಎಲ್ಲಿಟ್ಟರಬಹುದು, ಆತ ಹೇಗಿರಬಹುದು ಎನ್ನುವ ಸಂಗತಿಗಳ ಅರಿವಿಲ್ಲ. ರಾಕ್ಷಸನ ಹೆಸರು ಮಾತ್ರ ಆತನಿಗೆ ತಿಳಿದಿದೆ. ಆತ ಇರುವುದೆಲ್ಲಿ, ಹಾಗಾಗಿ ಕಬಂಧನ ಜೀವ ಇರುವಾಗಲೇ ಸುಡಲು ಒಪ್ಪುತ್ತಾನೆ.

ಈ ಮೊದಲು ವಿರಾಧನೆನ್ನುವ ರಾಕ್ಷಸ ರಾಮನಲ್ಲಿ ತನ್ನನ್ನು ಜೀವಂತವಾಗಿ ಹುಗಿಯಲು ಹೇಳಿದ್ದ. ಹಾಗೆ ಜೀವಂತ ಹುಗಿದಾಗ ಆತನ ಶಾಪವಿಮೋಚನೆಯಾಗಿತ್ತು. ಇದೀಗ ಕಬಂಧನನ್ನು ಸುಟ್ಟ ತಕ್ಷಣದಲ್ಲಿ ಆತ ಮೊದಲಿನ ಗಂಧರ್ವನಾಗಿ ರಾಮನಿಗೆ ಕಾಣಿಸಿಕೊಂಡು ಕೊಡುವ ಸಲಹೆಯೇ ಸುಗ್ರೀವ ಎನ್ನುವ ವಾನರ ಇಲ್ಲಿಯೇ ಋಷ್ಯಮೂಕ ಪರ್ವತದಲ್ಲಿದ್ದಾನೆ. ಆತ ಇಂದ್ರನ ಮಗ. ಆತನ ಅಣ್ಣನಾದ ವಾಲಿ ಸುಗ್ರೀವನನ್ನು ಕಾರಣಾಂತರದಿಂದ ರಾಜ್ಯಭ್ರಷ್ಟನನ್ನಾಗಿ ಮಾಡಿದ್ದಾನೆ, ಎನ್ನುತ್ತಾ ರಾವಣನಿರುವ ಸ್ಥಳವನ್ನು ತಿಳಿಸಲು ಸುಗ್ರೀವನೊಬ್ಬನಿಗೆ ಸಾಧ್ಯ ಎನ್ನುತ್ತಾನೆ. ಕಾರ್ಯಸಾಧನೆಗೆ ಆರು ಮಾರ್ಗಗಳನ್ನು ಅನುಸರಿಸಬೇಕು. ಅವುಗಳು ಸಂಧಿ, ವಿಗ್ರಹ, ಯಾನ, ಆಸನ, ದ್ವೈಧೀಭಾವ ಮತ್ತು ಸಮಾಶ್ರಯಗಳು. ಇದರಲ್ಲಿ ನಿನ್ನಂತೆ ಪತ್ನಿಯನ್ನು ಕಳೆದುಕೊಂಡ ಸುಗ್ರೀವನಿಗೆ ನಿನ್ನ ಕಷ್ಟ ಅರ್ಥವಾಗುತ್ತದೆ. ಹಾಗಾಗಿ ಆತನಲ್ಲಿ ನೀನು ಸಮಾಶ್ರಯವನ್ನು ಕೋರಬಹುದು ಎನ್ನುತ್ತಾನೆ. ಆ ವಾನರನಲ್ಲಿ ಅಗ್ನಿಸಾಕ್ಷಿಯಾಗಿ ಮಿತ್ರತ್ವವನ್ನು ಮಾಡಿಕೋ ಎನ್ನುವುದನ್ನು ಒತ್ತಿ ಹೇಳುತ್ತಾನೆ. ಸುಗ್ರೀವನ ಸಂಪೂರ್ಣ ಪರಿಚಯವನ್ನು ಮೊದಲು ರಾಮನಿಗೆ ಮಾಡಿಕೊಡುವುದೇ ಕಬಂಧನ್ನುವ ರಾಕ್ಷಸ. ತಾಮಸೀ ವ್ಯಕ್ತಿತ್ವದ ರಾಕ್ಷಸನಿಗೆ ವಾಲಿಯ ಪರಿಚಯ ಇತ್ತು, ಆದರೆ ಆತ ವಾಲಿಗಿಂತ ಸುಗ್ರೀವನನ್ನೇ ಅಶ್ರಯ ಹೊಂದಲು ತಿಳಿಸುವ ಕಾರಣವೇ “ಕಷ್ಟದಲ್ಲಿರುವವರಿಗೆ ಕಷ್ಟದಲ್ಲಿರುವವರೇ ನೆರವಾಗುತ್ತಾರೆ” ಎನ್ನುವುದು.

ಲಕ್ಷ್ಮಣನ ಮೂಲಕ ಸುಗ್ರೀವನ ಹತ್ತಿರ ಸ್ನೇಹವನ್ನು ಯಾಚಿಸುವುದು ತನ್ನ ಪತ್ನಿಯನ್ನು ರಾವಣನಿಂದ ಬಿಡಿಸಿಕೊಂಡು ಬರಲು ಸಹಕಾರಿಯಾಗಲೆಂದು. ಇದು ಕಬಂಧನೇ ಹೇಳಿದಂತೆ ಹೆಂಡತಿಯ ವಿಯೋಗದಲ್ಲಿರುವ ಸುಗ್ರೀವನಿಗೆ ತನ್ನ ಕಷ್ಟ ಅರ್ಥವಾಗುತ್ತದೆ ಎನ್ನುವ ನಿಟ್ಟಿನಲ್ಲಿ. ರಾಜನೀತಿಗೆ ಅನುಗುಣವಾದ ಸಂಗತಿಯನ್ನು ರಾಮ ಇಲ್ಲಿ ಅನುಸರಿಸಿದ್ದಾನೆಯೇ ಹೊರತೂ ಮತ್ತೇನೂ ಅಲ್ಲ. ಸುಗ್ರೀವನ ಕುರಿತು ಪ್ರಚಲಿತದಲ್ಲಿದ್ದಂತೆ ಚಂಚಲ, ಅಂಜುಕುಳಿ ಸ್ವಭಾವ ಎನ್ನುವುದಕ್ಕೆ ವಿರುದ್ಧವಾದ ಸ್ವಭಾವ ಆತನದ್ದಾಗಿತ್ತು. ಅದನ್ನು ಮುಂದಿನ ಭಾಗದಲ್ಲಿ ನೋಡೋಣ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ಸೂರ್ಯವಂಶದ ಮುಂಗಾಣ್ಕೆಯನು ಅರಿತ ಸಾಧಕ- ಸುಮಂತ್ರ

Continue Reading
Advertisement
Job Alert
ಉದ್ಯೋಗ2 mins ago

Job Alert: ಅಂಚೆ ಇಲಾಖೆಯಿಂದ ಬೃಹತ್‌ ನೇಮಕಾತಿ; ಕರ್ನಾಟಕದಲ್ಲಿಯೂ ಇದೆ 1,940 ಹುದ್ದೆ: ಹೀಗೆ ಅಪ್ಲೈ ಮಾಡಿ

Viral Video
Latest17 mins ago

Viral Video: ಕಾಮುಕರ ಹಾವಳಿ ಮಿತಿ‌ ಮೀರಿದೆ; ಬೀದಿ ನಾಯಿಯನ್ನೂ ಇವರು ಬಿಡುತ್ತಿಲ್ಲ! ಆಘಾತಕಾರಿ ವಿಡಿಯೊ

Jitan Sahani
ದೇಶ25 mins ago

Jitan Sahani: ಬಿಹಾರದಲ್ಲಿ ವಿಕಾಸಶೀಲ ಇನ್ಸಾನ್‌ ಪಕ್ಷದ ಮುಖ್ಯಸ್ಥನ ತಂದೆಯ ಭೀಕರ ಹತ್ಯೆ; ಮನೆ ತುಂಬ ರಕ್ತ!

karnataka assembly live
ಪ್ರಮುಖ ಸುದ್ದಿ44 mins ago

Karnataka Assembly Live: ಸದನದಲ್ಲಿ ಇಂದು ಕಿಡಿಯೆಬ್ಬಿಸಲಿರುವ ವಾಲ್ಮೀಕಿ ಹಗರಣ; ಉತ್ತರ ನೀಡಲು ಸಿಎಂ ಸಜ್ಜು; ಇಲ್ಲಿದೆ ಕ್ಷಣಕ್ಷಣದ ಲೈವ್‌

David Warner
ಕ್ರೀಡೆ46 mins ago

David Warner: ​ಚಾಂಪಿಯನ್ಸ್ ಟ್ರೋಫಿಗೆ ವಾರ್ನರ್​ ಆಯ್ಕೆ ಇಲ್ಲ ಎಂದ ಜಾರ್ಜ್​ ಬೈಲಿ

Kannada New Movie
ಸ್ಯಾಂಡಲ್ ವುಡ್50 mins ago

Kannada New Movie: ಸೆಟ್ಟೇರಿತು ‘ಆಕಾಶ್’, ‘ಅರಸು’ ಚಿತ್ರಗಳ ಡೈರೆಕ್ಟರ್ ಹೊಸ ಸಿನಿಮಾ; ಕಿರುತೆರೆಯ ಈ ಪ್ರತಿಭೆ ನಾಯಕ

Kannada In Madrasa
ಕರ್ನಾಟಕ1 hour ago

Kannada In Madrasa: ರಾಜ್ಯದ ಮದರಸಾಗಳಲ್ಲಿ ಇನ್ನು ಕನ್ನಡ ಕಲಿಕೆ ಕಡ್ಡಾಯ; ಶೀಘ್ರವೇ ಆದೇಶ!

murder case set fire bagalakote
ಕ್ರೈಂ1 hour ago

Horrible Murder Case: ಶೆಡ್‌ ಹೊರಗಿನಿಂದ ಲಾಕ್‌ ಮಾಡಿ ಬೆಂಕಿ ಇಟ್ಟ ದುಷ್ಟರು; ಇಬ್ಬರು ಸಜೀವ ದಹನ

Iti Acharya
ಸಿನಿಮಾ1 hour ago

Iti Acharya: ಬಾಲಿವುಡ್‌ಗೆ ಕಾಲಿಟ್ಟ ಮತ್ತೊಬ್ಬ ಕನ್ನಡತಿ; ದಕ್ಷಿಣ ಭಾರತದ ಚಿತ್ರಗಳ ಬಳಿಕ ಹಿಂದಿಯಲ್ಲೂ ಅಭಿನಯ

Karnataka Assembly
ಕ್ರೀಡೆ1 hour ago

Karnataka Assembly: ಬಿಜೆಪಿಯಿಂದಲೇ ರಾಹುಲ್​ಗೆ ಶ್ಲಾಘನೆ; ಸದನದಲ್ಲಿ ಅಭಿನಂದನೆಗೆ ನಿರ್ಣಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ17 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ24 hours ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ3 days ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

ಟ್ರೆಂಡಿಂಗ್‌