Karnataka Assembly Live: ಡಿಸಿಎಂ ಡಿಕೆ ಶಿವಕುಮಾರ್-‌ ಅಶ್ವಥ್‌ ನಾರಾಯಣ್‌ ವಾಗ್ಯುದ್ಧ; ಗದ್ದಲ - Vistara News

ಪ್ರಮುಖ ಸುದ್ದಿ

Karnataka Assembly Live: ಡಿಸಿಎಂ ಡಿಕೆ ಶಿವಕುಮಾರ್-‌ ಅಶ್ವಥ್‌ ನಾರಾಯಣ್‌ ವಾಗ್ಯುದ್ಧ; ಗದ್ದಲ

Karnataka Assembly Live: ವಾಲ್ಮೀಕಿ ನಿಗಮದ ಹಗರಣದ ಕುರಿತು ವಿಪಕ್ಷ ನಾಯಕ ಆರ್.‌ ಅಶೋಕ್‌ ಇಂದು ಚರ್ಚೆಯನ್ನು ಮುಂದುವರಿಸಿದರು. ಆದರೆ ಈ ಚರ್ಚೆಯ ವೇಳೆ ಸಿಎಂ ಸಿದ್ದರಾಮಯ್ಯ ಸದನದಲ್ಲಿ ಗೈರುಹಾಜರಾಗಿದ್ದರು. ಇದಕ್ಕೆ ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಆಕ್ಷೇಪ ವ್ಯಕ್ತಪಡಿಸಿದರು.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ (Valmiki Corporation Scam) ಕುರಿತು ನಡೆಯುತ್ತಿರುವ ಚರ್ಚೆಯ ವೇಳೆ ವಿಧಾನಸಭೆ ಕಲಾಪ (Karnataka Assembly Live) ಗದ್ದಲದ ಗೂಡಾಯಿತು. ಸಿಎಂ ಸಿದ್ದರಾಮಯ್ಯ (CM Siddaramaiah) ಗೈರುಹಾಜರಿಯನ್ನು ಬಿಜೆಪಿ ಶಾಸಕ ಅಶ್ವಥ್‌ ನಾರಾಯಣ್‌ (Ashwath narayan) ಆಕ್ಷೇಪಿಸಿದರು. ಈ ಸಂದರ್ಭದಲ್ಲಿ ಅವರು ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ನಡುವೆ ಮಾತಿನ ಚಕಮಕಿ ನಡೆದು ಗೊಂದಲ ಸೃಷ್ಟಿಯಾಯಿತು. ಸ್ಪೀಕರ್‌ ಯು.ಟಿ ಖಾದರ್‌ (Speaker UT Khader) ಸದನವನ್ನು ಮುಂದೂಡಿದರು.

ವಾಲ್ಮೀಕಿ ನಿಗಮದ ಹಗರಣದ ಕುರಿತು ವಿಪಕ್ಷ ನಾಯಕ ಆರ್.‌ ಅಶೋಕ್‌ ಇಂದು ಚರ್ಚೆಯನ್ನು ಮುಂದುವರಿಸಿದರು. ಆದರೆ ಈ ಚರ್ಚೆಯ ವೇಳೆ ಸಿಎಂ ಸಿದ್ದರಾಮಯ್ಯ ಸದನದಲ್ಲಿ ಗೈರುಹಾಜರಾಗಿದ್ದರು. ಇದಕ್ಕೆ ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಆಕ್ಷೇಪ ವ್ಯಕ್ತಪಡಿಸಿದರು. ʼನೇರವಾಗಿ ಇದು ಮುಖ್ಯಮಂತ್ರಿಗಳಿಗೆ ಸಂಬಂಧಿಸಿದ ವಿಚಾರʼ ಎಂದ ಅಶ್ವಥ್ ನಾರಾಯಣ್, ಕೂಡಲೇ ಅವರನ್ನು ಕರೆಸಿ ಎಂದು ಆಗ್ರಹಿಸಿದರು.

ಈ ವೇಳೆ ಸದನದಲ್ಲಿ ಎದ್ದು ನಿಂತ ಡಿಸಿಎಂ ಡಿಕೆ ಶಿವಕುಮಾರ್‌, ಸಿಎಂ ಪರವಾಗಿ ಬ್ಯಾಟಿಂಗ್ ಮಾಡಿದರು. ಸಚಿವ ಜಮೀರ್ ಅಹ್ಮದ್ ಖಾನ್, ಕೆಜೆ ಜಾರ್ಜ್ ಕೂಡ ಅವರಿಗೆ ಸಾಥ್‌ ನೀಡಿದರು. ʼಸಿಎಂಗೆ ಗೌರವ ಕೊಡೋದನ್ನು ಕಲಿಯಿರಿʼ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್‌ ಹಾಗೂ ಅಶ್ವಥ್‌ ನಾರಾಯಣ್‌ ನಡುವೆ ಮಾತಿಕ ಚಕಮಕಿ ನಡೆಯಿತು. ರೊಚ್ಚಿಗೆದ್ದ ಬಿಜೆಪಿ ಶಾಸಕರು ಡಿಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಆಡಳಿತ, ವಿಪಕ್ಷ ಶಾಸಕರ ನಡುವೆ ವಾಗ್ವಾದ ಹೆಚ್ಚಿ ಗೊಂದಲ ಮೂಡಿದ ಕಾರಣ ವಿಧಾ‌ನಸಭೆ ಕಲಾಪವನ್ನು ಸ್ಪೀಕರ್ ಹತ್ತು ನಿಮಿಷ ಮುಂದೂಡಿದರು.

ದದ್ದಲ್‌ ಜೊತೆಗೆ ಸ್ಪೀಕರ್‌ ಸಭೆ

ವಿಧಾನಸಭೆಯ ಸ್ಪೀಕರ್ ಕಚೇರಿಯಲ್ಲಿ ಇಂದು ಶಾಸಕ, ವಾಲ್ಮೀಕಿ ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್‌ ಅವರು ಸಿಎಂ ಸಿದ್ದರಾಮಯ್ಯ, ಸಭಾಧ್ಯಕ್ಷ ಯುಟಿ ಖಾದರ್‌‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಸಿಎಂ‌ ಕಾನೂನು ಸಲಹೆಗಾರ ಪೊನ್ನಣ್ಣ ಕೂಡ ಜೊತೆಗಿದ್ದರು. ಇದಕ್ಕೂ ಮುನ್ನ ದದ್ದಲ್‌, ಗೃಹ ಸಚಿವ ಪರಮೇಶ್ವರ್‌ ಜೊತೆಗೆ ಮಾತುಕತೆ ನಡೆಸಿದರು. ಇಂದು ಮುಂಜಾನೆ ದದ್ದಲ್‌ ಅವರಿಗೆ ಇಡಿ ವಿಚಾರಣೆಗೆ ಹಾಜರಾಗಲು ನೋಟೀಸ್‌ ನೀಡಿದೆ ಎನ್ನಲಾಗಿದ್ದು, ತನಗೆ ಯಾವುದೇ ನೋಟೀಸ್‌ ಬಂದಿಲ್ಲ ಎಂದು ದದ್ದಲ್‌ ಹೇಳಿದ್ದಾರೆ. ಇದೀಗ ಸ್ಪೀಕರ್, ಸಿಎಂ ಜೊತೆಗಿನ ಅವರ ಮಾತುಕತೆ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: Karnataka Assembly Live: ವಿಧಾನಸಭೆ ಕಲಾಪಕ್ಕೆ ಹಾಜರಾಗಿ ಸೇಫ್‌ ಆದ ಬಸವನಗೌಡ ದದ್ದಲ್‌! ವಿಧಾನ ಮಂಡಲ ಕಲಾಪ ಲೈವ್‌ ಇಲ್ಲಿದೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Paris Olympics 2024 : ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಕಡಿಮೆ ಪದಕಗಳು ಸಿಗುವುದು ಯಾಕೆ? ಈ ಪ್ರಶ್ನೆಗೆ ಇಲ್ಲಿದೆ ಉತ್ತರ

Paris Olympics 2024 : ಭಾರತದಲ್ಲಿ ಕೆಲವೇ ಕೆಲವು ಕೆಲವರು ಪದಕ ಗೆಲ್ಲುವಷ್ಟು ಸ್ಪರ್ಧಾತ್ಮಕರಾಗಿದ್ದಾರೆ. ಭಾರತೀಯರು ಸ್ವಾಭಾವಿಕವಾಗಿ ಉತ್ತಮ ಪ್ರದರ್ಶನ ನೀಡಬಲ್ಲ ಕ್ರಿಕೆಟ್, ಕಬಡ್ಡಿಯಂತಹ ಕ್ರೀಡೆಗಳು ಒಲಿಂಪಿಕ್ಸ್​​ನ ಭಾಗವಲ್ಲ. ಭಾರತೀಯರು ಅಥ್ಲೆಟಿಕ್ಸ್, ಈಜು, ಜಿಮ್ನಾಸ್ಟಿಕ್ಸ್, ಜೂಡೋ, ರೋಯಿಂಗ್​ನಲ್ಲಿ ಇನ್ನೂ ಗರಿಷ್ಠ ಸಾಧನೆ ಮಾಡಿಲ್ಲ. ಇವು ಸ್ಪರ್ಧೆಗಳು ಮತ್ತು ಪದಕಗಳಲ್ಲಿ ಹೆಚ್ಚಿನ ಭಾಗವನ್ನು ಹೊಂದಿವೆ.

VISTARANEWS.COM


on

Paris Olympics 2024
Koo

ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್​ ಜುಲೈ 26ರಂದು ಆರಂಭಗೊಂಡು ಆಗಸ್ಟ್​ 11ರವರೆಗೆ ನಡೆಯಲಿದ್ದು ಅದಕ್ಕಾಗಿನ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಎಲ್ಲ ದೇಶಗಳು ಕ್ರೀಡಾಪಟುಗಳು ಫ್ರಾನ್ಸ್​ನಲ್ಲಿ ಜಮಾಯಿಸಿದ್ದು ಅಲ್ಲಿನ ಪರಿಸರಕ್ಕೆ ಹೊಂದಿಕೊಂಡಂತೆ ಅಭ್ಯಾಸ ಆರಂಭಿಸಿದ್ದಾರೆ. ಜುಲೈ 26ರಂದು ಐಫೆಲ್ ಟವರ್ ಬಳಿಯ ಸೀನ್ ನದಿಯಲ್ಲಿ ಉದ್ಘಾಟನಾ ಮೆರವಣಿಗೆ ನಡೆಯಲಿದ್ದು ಒಲಿಂಪಿಕ್ಸ್ ಇತಿಹಾಸದಲ್ಲಿಯೇ ವಿಶೇಷ ಎನಿಸಲಿದೆ. ಭಾರತದ ಕ್ರೀಡಾಳುಗಳು ನಿಯೋಗವೂ ಫ್ರಾನ್ಸ್ ತಲುಪಿದ್ದು ಪದಕ ಗೆಲ್ಲುವುದಕ್ಕಾಗಿ ಅಲ್ಲಿ ಅಭ್ಯಾಸ ಶುರು ಮಾಡಿಕೊಂಡಿದ್ದಾರೆ.

ಒಲಿಂಪಿಕ್ಸ್ ಶುರುವಾಗುತ್ತಿರುವ ಹಿನ್ನೆಲೆಯಲ್ಲಿ ಭಾರತದ ಪದಕಗಳ ಬಗ್ಗೆ ಚರ್ಚೆ ಜೋರಾಗಿ ನಡೆಯುತ್ತಿದೆ. ಪ್ರಮುಖವಾಗಿ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಯಾಕೆ ಕಡಿಮೆ ಪದಕಗಳು ಬರುತ್ತಿವೆ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ. ಅದಕ್ಕೆ ಈ ಕೆಳಗೆ ಉತ್ತರ ನೀಡಲಾಗಿದೆ. ಹಿಂದಿಯಲ್ಲಿ ಒಲಿಂಪಿಕ್ಸ್​​ “ಖೇಲೋ ಕಾ ಮಹಾಕುಂಭ” ಎಂದು ಕರೆಯಲಾಗುತ್ತದೆ. ಯಾಕೆಂದರೆ ಇದು ಜಾಗತಿಕವಾಗಿ ನಡೆಯುವ ಅತಿ ದೊಡ್ಡ ಕ್ರೀಡಾ ಉತ್ಸವ. ಹೀಗಾಗಿ ಸ್ಪರ್ಧೆಗಳ ಮಟ್ಟವು ಗರಿಷ್ಠ ಪ್ರಮಾಣದಲ್ಲಿರುತ್ತವೆ. ಹೀಗಾಗಿ ಇಲ್ಲಿ ಪದಕ ಗೆಲ್ಲುವುದು ಸುಲಭವಲ್ಲ. ಅದಕ್ಕಾಗಿ ಜೀವನಪೂರ್ತಿ ಕಾಯಬೇಕಾಗುತ್ತದೆ. ಅನೇಕ ಕ್ರೀಡಾಪಟುಗಳು ಒಲಿಂಪಿಕ್ಸ್ ನಲ್ಲಿ ಪದಕ ಗೆಲ್ಲಲು ತಮ್ಮ ಇಡೀ ಜೀವನ ಸವೆಸುತ್ತಾರೆ. ಹೀಗಾಗಿ ಇಲ್ಲಿ ಕ್ರೀಡೆಗೆ ಹೆಚ್ಚು ಪ್ರಾಧಾನ್ಯತೆ ಇಲ್ಲದ ಭಾರತಕ್ಕೆ ಹೆಚ್ಚು ಪದಕಗಳನ್ನು ಗೆಲ್ಲಲು ಸಾಧ್ಯವಾಗುವುದಿಲ್ಲ.

ಒಲಿಂಪಿಕ್ಸ್ ಅರ್ಹತೆ

ಒಲಿಂಪಿಕ್ಸ್​ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಅರ್ಹತೆ ಪಡೆಯುವುದೇ ದೊಡ್ಡ ಸಾಹಸ. ಅರ್ಹತಾ ಕೂಟಗಳ ಸ್ಪರ್ಧೆಯ ಮಟ್ಟವು ಉತ್ತಮವಾಗಿರುತ್ತದೆ. ಹೀಗಾಗಿ ಅನೇಕ ಭಾರತೀಯ ಕ್ರೀಡಾಪಟುಗಳು ಅರ್ಹತೆ ಪಡೆಯಲು ವಿಫಲರಾಗುತ್ತಾರೆ. ಭಾರತೀಯರು ಜಮೈಕಾದ ಸ್ಪರ್ಧಿಗಳಂತೆ ಉತ್ತಮ ಓಟಗಾರರು ಅಥವಾ ಆಸ್ಟ್ರೇಲಿಯಾ ಅಥವಾ ಅಮೆರಿಕದ ಜನರಂತೆ ಉತ್ತಮ ಈಜುಗಾರರಲ್ಲ. ಅಥ್ಲೆಟಿಕ್ಸ್​ನಲ್ಲಿ ಹೆಚ್ಚು ಬಹುಮಾನ ಗೆಲ್ಲುವ ದೇಶಗಳು ಒಲಿಂಪಿಕ್ಸ್​ನಲ್ಲಿ ಪಾರಮ್ಯ ಮೆರೆಯುತ್ತವೆ. ಇದಕ್ಕೆ ಒಬ್ಬೊಬ್ಬರು ಉತ್ತಮವಾಗಿದ್ದರೆ ಸಾಲದು. ಇಡೀ ತಂಡವೇ ಉತ್ತಮವಾಗಿರಬೇಕು. ಭಾರತದಲ್ಲಿ ಇಂಥ ಸ್ಪರ್ಧಿಗಳ ಸಂಖ್ಯೆ ಕಡಿಮೆ.

ಇದನ್ನೂ ಓದಿ: Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನ ಸ್ಪರ್ಧಾ ಪಟ್ಟಿಯಲ್ಲಿರುವ ಕ್ರೀಡೆಗಳು ಯಾವುವು? ಇವುಗಳಲ್ಲಿ ಅತ್ಯಂತ ಪ್ರಾಚೀನ ಕ್ರೀಡೆಗಳು ಯಾವುದೆಲ್ಲ?

ಭಾರತದಲ್ಲಿ ಕೆಲವೇ ಕೆಲವು ಕೆಲವರು ಪದಕ ಗೆಲ್ಲುವಷ್ಟು ಸ್ಪರ್ಧಾತ್ಮಕರಾಗಿದ್ದಾರೆ. ಭಾರತೀಯರು ಸ್ವಾಭಾವಿಕವಾಗಿ ಉತ್ತಮ ಪ್ರದರ್ಶನ ನೀಡಬಲ್ಲ ಕ್ರಿಕೆಟ್, ಕಬಡ್ಡಿಯಂತಹ ಕ್ರೀಡೆಗಳು ಒಲಿಂಪಿಕ್ಸ್​​ನ ಭಾಗವಲ್ಲ. ಭಾರತೀಯರು ಅಥ್ಲೆಟಿಕ್ಸ್, ಈಜು, ಜಿಮ್ನಾಸ್ಟಿಕ್ಸ್, ಜೂಡೋ, ರೋಯಿಂಗ್​ನಲ್ಲಿ ಇನ್ನೂ ಗರಿಷ್ಠ ಸಾಧನೆ ಮಾಡಿಲ್ಲ. ಇವು ಸ್ಪರ್ಧೆಗಳು ಮತ್ತು ಪದಕಗಳಲ್ಲಿ ಹೆಚ್ಚಿನ ಭಾಗವನ್ನು ಹೊಂದಿವೆ.

ಕಾಮನ್ವೆಲ್ತ್​ನಲ್ಲಿ ಯಾಕೆ ಗೆಲ್ಲುತ್ತದೆ?

ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತದಲ್ಲಿ ಹೆಚ್ಚು ಪದಕಗಳನ್ನು ಯಾಕೆ ಗೆಲ್ಲುತ್ತದೆ ಎಂಬ ಪ್ರಶ್ನೆಯೂ ಇದೆ. ಯಾಕೆಂದೆರ ಈ ಕೂಟವು ಕಡಿಮೆ ಸ್ಪರ್ಧಾತ್ಮಕವಾಗಿದೆ. ಕೇವಲ ವಸಾಹತುಶಾಹಿ ದೇಶಗಳು ಮಾತ್ರ ಇದರಲ್ಲಿ ಭಾಗವಹಿಸುತ್ತವೆ. ಇನ್ನು ಕ್ರೀಡೆಯಲ್ಲಿ ಸೂಪರ್ ಪವರ್ ಆಗಿರುವ ಚೀನಾ, ಅಮೆರಿಕ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸುವುದಿಲ್ಲ. ಆದ್ದರಿಂದ ಭಾರತಕ್ಕೆ ಹೆಚ್ಚು ಪದಕ ಸಿಗುತ್ತದೆ.

ಕ್ರೀಡಾ ಸಂಸ್ಕೃತಿಯ ಕೊರತೆ

ಭಾರತದಲ್ಲಿ ಕ್ರೀಡಾ ಸಂಸ್ಕೃತಿ ಉತ್ತಮವಾಗಿಲ್ಲ. ಭ್ರಷ್ಟಾಚಾರ ಮತ್ತು ರಾಜಕೀಯ ಪ್ರಮುಖ ಪಾತ್ರ ವಹಿಸುತ್ತವೆ. ಕ್ರೀಡೆಯನ್ನು ವೃತ್ತಿಯಾಗಿ ತೆಗೆದುಕೊಳ್ಳಲು ಮಕ್ಕಳನ್ನು ಹೆಚ್ಚು ಪ್ರೋತ್ಸಾಹಿಸಲಾಗುವುದಿಲ್ಲ. ಅಲ್ಲದೆ ಮೂಲಸೌಕರ್ಯಗಳು ವಿಶ್ವ ದರ್ಜೆಯದ್ದಲ್ಲದೆ. ಕ್ರೀಡಾ ಸೌಕರ್ಯ ಎಲ್ಲರಿಗೂ ಲಭ್ಯವಿಲ್ಲ. ಸಂತಸದ ಸಂಗತಿ ಎಂದರೆ ಇತ್ತೀಚಿನ ದಿನಗಳಲ್ಲಿ ಇದರ ಪ್ರಮಾಣ ಹೆಚ್ಚುತ್ತಿದೆ. ಭಾರತೀಯರು ಹೆಚ್ಚಿನ ಸಂಖ್ಯೆಯಲ್ಲಿ ಅರ್ಹತೆ ಪಡೆಯುತ್ತಾರೆ ಮತ್ತು ಒಲಿಂಪಿಕ್ಸ್ ನಲ್ಲಿ ಸಾಧನೆ ಮಾಡುವ ಹಾದಿಯಲ್ಲಿ ಸಾಗುತ್ತಿದ್ದಾರೆ.

ಕ್ರೀಡಾಪಟುಗಳ ಸಂಖ್ಯೆ ಕಡಿಮೆಯೇನಿಲ್ಲ

ವಾಸ್ತವವಾಗಿ ಭಾರತವು ಒಲಿಂಪಿಕ್ಸ್ ಗೆ ಹೆಚ್ಚಿನ ಸಂಖ್ಯೆಯ ಕ್ರೀಡಾಪಟುಗಳನ್ನು ಕಳುಹಿಸುವ ದೇಶಗಳಲ್ಲಿ ಒಂದಾಗಿದೆ. 2016ರಲ್ಲಿ ಭಾರತವು 117 ಅಥ್ಲೀಟ್​ಗಳನ್ನು (63 ಪುರುಷರು ಮತ್ತು 54 ಮಹಿಳೆಯರು) ಒಲಿಂಪಿಕ್ಸ್​ಗೆ ಕಳುಹಿಸಿತ್ತು. ಆದರೂ ಕೇವಲ 2 ಪದಕಗಳನ್ನು ಪಡೆಯಿತು. 2012ರಲ್ಲಿ ಭಾರತ 83 ಅಥ್ಲೀಟ್ಸ್​ಗಳನ್ನು ಕಳುಹಿಸಿತ್ತು. ಆದರೆ 6 ಪದಕಗಳನ್ನು ಭಾರತ ತನ್ನದಾಗಿಸಿಕೊಂಡಿತು. ಇಲ್ಲಿ ಚಿನ್ನ ಇರಲಿಲ್ಲ. 2 ಬೆಳ್ಳಿ ಹಾಗೂ 4 ಕಂಚಿನ ಪದಕವಿತ್ತು.

202ರ ಟೋಕಿಯೊ ಒಲಿಂಪಿಕ್ಸ್​ಗೆ ಇದುವರೆಗಿನ ಗರಿಷ್ಠ 124 ಅಥ್ಲೀಟ್​ಗಳು ಹೋಗಿದ್ದರು. ಅಲ್ಲದೆ ಭಾರತೀಯ ಕ್ರೀಡಾ ಇತಿಹಾಸದಲ್ಲಿ ಗರಿಷ್ಠ (1 ಚಿನ್ನ, 2 ಬೆಳ್ಳಿ ಹಾಗೂ 4 ಕಂಚಿನ ಪದಕಗಳು) ಸಾಧನೆ ಮಾಡಿದ್ದರು. ಭಾರತದಲ್ಲಿ ಹೆಚ್ಚಿನ ಜನರು ಕ್ರೀಡೆಯನ್ನು ವೃತ್ತಿಯಾಗಿ ಪರಿಗಣಿಸಲು ಆರಂಭಿಸಿದ ಬಳಿಕ ಸಂಖ್ಯೆ ಜಾಸ್ತಿಯಾಗುತ್ತಿದೆ. ಆದರೆ ಜಾಗತಿಕ ಮಟ್ಟದಲ್ಲಿ ಹೆಚ್ಚು ಪ್ರಚಲಿತದಲ್ಲಿರುವ ಕ್ರೀಡೆಯಲ್ಲಿ ಭಾರತಕ್ಕೆ ಇನ್ನೂ ಹಿಡಿತ ಸಿಕ್ಕಿಲ್ಲ. ಹೀಗಾಗಿ ಪದಕಗಳನ್ನು ಗೆಲ್ಲುವುದು ಸುಲಭವಲ್ಲ.

ಈ ವರ್ಷದ ಪ್ಯಾರಿಸ್ ಒಲಿಂಪಿಕ್ಸ್​​ಗೆ 16 ಕ್ರೀಡಾ ವಿಭಾಗಗಳಲ್ಲಿ 48 ಮಹಿಳಾ ಕ್ರೀಡಾಪಟುಗಳು ಸೇರಿದಂತೆ ಒಟ್ಟು 118 ಭಾರತದ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಪ್ಯಾರಿಸ್​​ಗೆ ತೆರಳುವ ಒಟ್ಟು 118 ಕ್ರೀಡಾಪಟುಗಳಲ್ಲಿ 26 ಖೇಲೋ ಇಂಡಿಯಾ ಕ್ರೀಡಾಪಟುಗಳು ಮತ್ತು 72 ಕ್ರೀಡಾಪಟುಗಳು ಮೊದಲ ಬಾರಿಗೆ ಒಲಿಂಪಿಕ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆದವರಾಗಿದ್ದಾರೆ.

ಮಕ್ಕಳ ಹಂತದಲ್ಲಿಯೇ ತರಬೇತಿ ಅಗತ್ಯ

ಭಾರತವು ಕ್ರೀಡೆಯನ್ನು ಬಾಲ್ಯದಲ್ಲಿಯೇ ಕಲಿಸಲು ವಿಫಲವಾಗಿದೆ. ಏಕೆಂದರೆ ಯುಎಸ್ಎ, ಚೀನಾ ಮತ್ತು ರಷ್ಯಾಗಳಂತೆ ಮಕ್ಕಳಿಗೆ ಬಾಲ್ಯದಿಂದಲೂ ಕ್ರೀಡೆಯನ್ನು ಕಲಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಒಲಿಂಪಿಕ್ಸ್​ನಲ್ಲಿ ಫಲಿತಾಂಶ ಸಿಗುವುದಿಲ್ಲ.

ಭಾರತವು ಪ್ರಸ್ತುತ ಕ್ರಿಕೆಟ್​ನಲ್ಲಿ ಅತ್ಯುತ್ತಮ ದೇಶ. (ಬಹುಶಃ ಅಗತ್ಯಕ್ಕಿಂತ ಹೆಚ್ಚಿನ ಪ್ರಾಮುಖ್ಯತೆ ಪಡೆಯುವ ಏಕೈಕ ಕ್ರೀಡೆ) ಇದು ದೀರ್ಘ ಆಟವಾಗಿರುವುದರಿಂದ ಮತ್ತು ಜಾಗತಿಕ ಕ್ರೀಡಾ ನಿಯಮಗಳಡಿ ಸೇರಲು ಬಿಸಿಸಿಐ ಹಿಂಜರಿಯುತ್ತಿರುವುದರಿಂದ ಜಾಗತಿಕ ಮಾನ್ಯತೆ ಸಿಗುತ್ತಿಲ್ಲ.

Continue Reading

ಪ್ರಮುಖ ಸುದ್ದಿ

Uttara Kannada Rain: ಭಾರಿ ಮಳೆಗೆ ತತ್ತರಿಸಿದ ಉತ್ತರ ಕನ್ನಡ; ಭೂಕುಸಿತಕ್ಕೆ 11 ಸಾವು, ರಸ್ತೆಗಳೇ ಮಾಯ, ತೋಟ ಗದ್ದೆ ಮುಳುಗಡೆ

Uttara Kannada Rain: ಉತ್ತರ ಕನ್ನಡ ಜಿಲ್ಲೆ ಕಳೆದ ಒಂದು ವಾರದ ಮಳೆಗೆ ತಲ್ಲಣಿಸಿದೆ. ಭೂಕುಸಿತದಿಂದ ಹತ್ತಾರು ಸಾವುಗಳು, ನದಿಗಳು ಉಕ್ಕೇರಿ ಸೇತುವೆ- ರಸ್ತೆ ಮುಳುಗಡೆ, ಆಸ್ತಿಪಾಸ್ತಿ ಹಾನಿ, ಶಾಲೆಗಳಿಗೆ ರಜೆ, ಮನೆಗಳಿಗೆ ಹಾನಿಯಾಗಿ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದ ಜನ- ಇದು ಜಿಲ್ಲೆಯ ಚಿತ್ರಣ.

VISTARANEWS.COM


on

Koo

ಕಾರವಾರ: ಸದ್ಯದ ವರ್ಷಗಳಲ್ಲಿ ಕಂಡು ಕೇಳರಿಯದ ಮಳೆ (Rain news) ಹಾಗೂ ಭೂಕುಸಿತಕ್ಕೆ ಉತ್ತರ ಕನ್ನಡ (Uttara Kannada Rain) ಜಿಲ್ಲೆ ತತ್ತರಿಸಿದೆ. ಹಲವು ಕಡೆ ಭೂಕುಸಿತ (Land slide) ಮುಖ್ಯವಾಗಿ ಹಾನಿಯೆಸಗಿದೆ. ಇಂದು ಒಂದೇ ಕಡೆ ಭೂಕುಸಿತ ಉಂಟಾಗಿ 10 ಮಂದಿ ಸತ್ತಿದ್ದಾರೆ. ಇದುವರೆಗೂ ನಾನಾ ಕಡೆ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 11 ದಾಟಿದೆ. ಜಿಲ್ಲೆಯ ನಾನಾ ಕಡೆ ನದಿಗಳು ಉಕ್ಕೇರಿ ಹರಿದು ಆಸ್ತಿಪಾಸ್ತಿ ಹಾನಿಯಾಗಿದೆ; ರಸ್ತೆಗಳು ಮುಳುಗಿವೆ. ಜನ ತತ್ತರಿಸಿಹೋಗಿದ್ದು, ಪರಿಹಾರ ಶಿಬಿರಗಳಲ್ಲೂ ನೂರಾರು ಮಂದಿ ಆಶ್ರಯ ಪಡೆದಿದ್ದಾರೆ.

ಭಾರಿ ಮಳೆಗೆ (Karnataka Rain Effect) ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಬಳಿ ಭಾರೀ ಗುಡ್ಡಕುಸಿತ (Karnataka Rain) ಉಂಟಾಗಿದೆ. ಗುಡ್ಡದ ಮಣ್ಣಿನಡಿ 10ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ ಇದ್ದು, ಒಂದೇ ಕುಟುಂಬದ ಐವರು ಸೇರಿ ಹತ್ತಕ್ಕೂ ಅಧಿಕ ಮಂದಿ ಕಣ್ಮರೆಯಾಗಿದ್ದಾರೆ. ಗುಡ್ಡ ಕುಸಿದ ರಭಸಕ್ಕೆ ನದಿಗೆ 2 ಗ್ಯಾಸ್ ಟ್ಯಾಂಕರ್‌ಗಳು ಕೊಚ್ಚಿ ಹೋಗಿದೆ. ಗುಡ್ಡದ ಕೆಳಗಿದ್ದ ಲಾರಿ, ಮತ್ತೊಂದು ಟ್ಯಾಂಕರ್‌ ಹಾಗೂ ಚಾಲಕರು ಪಾರಾಗಿದ್ದಾರೆ. ತುರ್ತು ಕಾರ್ಯಾಚರಣೆಗೆ ಪೊಲೀಸರು ಧಾವಿಸಿದ್ದಾರೆ. ಸ್ಥಳದ ಪರಿಸ್ಥಿತಿ ಭೀಕರವಾಗಿದ್ದು, ಹೆದ್ದಾರಿ ಸಂಪೂರ್ಣ ಕತ್ತರಿಸಿಹೋಗಿ ಈ ರಸ್ತೆಯಲ್ಲಿ ವಾಹನ ಸಂಚಾರ ನಿಂತೇ ಹೋಗಿದೆ, ಇದನ್ನು ಸರಿಪಡಿಸಲು ವಾರವಾದರೂ ಬೇಕು ಎಂದು ಕಾರ್ಯಾಚರಣೆ ನಿರತರ ಅಭಿಪ್ರಾಯ. ಎಡೆಬಿಡದೆ ಸುರಿಯುತ್ತಿರುವ ಮಳೆ, ಕಾರ್ಯಾಚರಣೆಯನ್ನು ಇನ್ನಷ್ಟು ಕಷ್ಟಗೊಳಿಸಿದೆ.

ಕಾರವಾರ ತಾಲೂಕಿನ ಕಿನ್ನರ ಗ್ರಾಮದಲ್ಲಿ ಭಾರಿ ಮಳೆಗೆ ಮನೆ ಮೇಲೆ ಗುಡ್ಡ ಬಿದ್ದ ಪರಿಣಾಮ ಗೋಡೆ ಕುಸಿದಿದೆ. ಮಣ್ಣಿನಡಿ ಸಿಲುಕಿದ್ದ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಕಾರವಾರ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 66 ಜಲಾವೃತವಾದ ಪರಿಣಾಮ ಚಿಕಿತ್ಸೆಗೆ ಹೊರಟಿದ್ದ ಪಾಶ್ವವಾಯು ಪೀಡಿತರೊಬ್ಬರು ರಸ್ತೆಯಲ್ಲೇ ಲಾಕ್ ಆದರು. ಕಾರವಾರ-ಕೈಗಾ ರಸ್ತೆಯ ಮಂದ್ರಾಳಿ ಬಳಿ ರಸ್ತೆಗೆ ಗುಡ್ಡ ಕುಸಿದಿದ್ದು, ಮನೆಗಳಿಗೂ ಹಾನಿಯಾಗಿತ್ತು. ಸದ್ಯ 2 ದಿನ ಕಾರವಾರ-ಕೈಗಾ ರಸ್ತೆ ಸಂಚಾರ ಬಂದ್ ಆಗಿದೆ. ಅನೇಕ ಕಡೆ ಭೂಕುಸಿತದ ಪರಿಣಾಮ ರಸ್ತೆಗಳು ಅಂಚು ಕುಸಿದು ವಾಹನ ಓಡಾಟಕ್ಕೆ ದುಸ್ತರವಾಗಿವೆ. ಹಲವು ಕಡೆ ಸೇತುವೆಗಳ ಮೇಲೆ ನೀರು ಹರಿಯುತ್ತಿದೆ. ಇನ್ನೂ ಹಲವು ಕಡೆ ತೋಟಗಳು ಮುಳುಗಡೆಯಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

Karnataka Rain

ಶಾಲೆ ಕಾಲೇಜುಗಳಿಗೆ ರಜೆ

ಕಳೆದೆರಡು ದಿನಗಳಿಂದ ಜಿಲ್ಲೆಯ 10 ತಾಲೂಕುಗಳ ಎಲ್ಲ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ. ರಜೆ ಘೋಷಿಸಿದ್ದಾರೆ. ಮಳೆಯ ಭೀಕರತೆ ಇನ್ನೂ ಮುಂದುವರಿಯುತ್ತಿದ್ದು, ಗುಡ್ಡಗಾಡು ಪ್ರದೇಶಗಳ ಜನತೆ ಮಕ್ಕಳನ್ನು ಶಾಲೆಗೆ ಕಳಿಸಲು ತಾವೇ ಅಂಜುತ್ತಿದ್ದಾರೆ. ಹೆಚ್ಚಿನ ಕಡೆ ಹೊಳೆ ಹಳ್ಳಗಳನ್ನು ದಾಟಿಕೊಂಡು ಮಕ್ಕಳು ಬರಬೇಕಿದ್ದು, ಸೇತುವೆಗಳು ಇಲ್ಲದ ಕಡೆಯಲ್ಲಿ ರಿಸ್ಕ್‌ ತೆಗೆದುಕೊಳ್ಳಲು ಮಕ್ಕಳ ಪೋಷಕರು ಮುಂದಾಗುತ್ತಿಲ್ಲ.

ರೆಡ್‌ ಅಲರ್ಟ್‌

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಜುಲೈ 18ರ ವರೆಗೆ ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಅವಧಿಯಲ್ಲಿ ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಸಮಸ್ಯೆಯಾಗದಂತೆ ಜಿಲ್ಲೆಯ ಸಾರ್ವಜನಿಕರ ರಕ್ಷಣೆಗಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ 24×7 ಕಾರ್ಯ ನಿರ್ವಹಿಸುವ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಮಳೆಯಿಂದಾಗಿ 2 ಮನೆಗಳು ಸಂಪೂರ್ಣ ನಾಶ, 2 ಮನೆಗಳಿಗೆ ತೀವ್ರ ಹಾನಿ ಮತ್ತು 18 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಕಾರವಾರದಲ್ಲಿ 2, ಕುಮಟಾದಲ್ಲಿ 1 ಹಾಗೂ ಹೊನ್ನಾವರದಲ್ಲಿ 2 ಸೇರಿದಂತೆ ಒಟ್ಟು 5 ಕಾಳಜಿ ಕೇಂದ್ರಗಳನ್ನು ತೆರೆದಿದ್ದು ಒಟ್ಟು 93 ಜನರಿಗೆ ಆಶ್ರಯ ಒದಗಿಸಿ ಅಗತ್ಯ ಉಟೋಪಚಾರ ಮತ್ತು ವೈದ್ಯಕೀಯ ನೆರವು ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಅಗತ್ಯ ಮಾಹಿತಿ

ವಿಪತ್ತು ನಿರ್ವಹಣೆ, ಪೊಲೀಸ್, ಅರಣ್ಯ, ಅಗ್ನಿಶಾಮಕ, ಹೆಸ್ಕಾಂ ಇಲಾಖೆಯಿಂದ ಒಬ್ಬೊಬ್ಬ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ತುರ್ತು ಸಂದರ್ಭದಲ್ಲಿ ಎಲ್ಲಾ ಇಲಾಖೆಯೊಂದಿಗೆ ಸಂಪರ್ಕ ಸಾಧಿಸಲು ಎಮರ್ಜೆನ್ಸಿ ಆಪರೇಷನ್ ಸೆಂಟರ್ ಮಾಡಲಾಗಿದೆ. ಎಲ್ಲೇ ಸಹಾಯ ಅಗತ್ಯವಿದ್ದರೂ ತುರ್ತು ಸ್ಪಂದನೆಗೆ ಕ್ರಮವಹಿಸಲಾಗುತ್ತದೆ. ಎಲ್ಲಾ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗೂ ಕೇಂದ್ರಸ್ಥಾನ ಬಿಡದಂತೆ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಮಳೆಯಿಂದಾಗಿ ಯಾವುದೇ ಅಪಾಯವಾದಲ್ಲಿ ಕೂಡಲೇ ಉಚಿತ ಸಹಾಯವಾಣಿ ಸಂಖ್ಯೆ 1077 ಗೆ ಅಥವಾ ಮೊ.ಸಂ. ಸಂಖ್ಯೆ. 9483511015 ಕರೆ, ವಾಟ್ಸಾಪ್ ಮೂಲಕ ಮಾಹಿತಿ ನೀಡಿದಲ್ಲಿ ತಕ್ಷಣ ನೆರವಿಗೆ ಧಾವಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಕದ್ರಾ ಜಲಾಶಯದಿಂದ ನೀರು ಬಿಡುಗಡೆ

ಕಾರವಾರದ‌ ಕದ್ರಾ ಜಲಾಶಯದಿಂದ ವಿದ್ಯುತ್ ಉತ್ಪಾದನೆ ಹಾಗೂ ಕ್ರಸ್ಟ್ ಗೇಟ್ ಸೇರಿ 31,000 ಕ್ಯೂಸೆಕ್ಸ್‌ಗೂ ಅಧಿಕ ನೀರು ಬಿಡುಗಡೆ ಮಾಡಲಾಗಿದೆ. ಜಲಾಶಯದ 4 ಗೇಟ್‌ಗಳಿಂದ 10,600 ಕ್ಯೂಸೆಕ್ಸ್ ನೀರು ಬಿಡುಗಡೆಯಾಗಿದ್ದು, 34.50 ಮೀ ಗರಿಷ್ಠ ಸಾಮರ್ಥ್ಯದ ಕದ್ರಾ ಜಲಾಶಯದಲ್ಲಿ 31 ಮೀ ತಲುಪಿದೆ ನೀರಿನ ಸಂಗ್ರಹ. ಧಾರಾಕಾರ ಮಳೆಯಿಂದ ಜಲಾಶಯದ ಒಳಹರಿವು ಹೆಚ್ಚಿದೆ. ಮುಂಜಾಗ್ರತಾ ಕ್ರಮವಾಗಿ ನದಿ ಪಾತ್ರದ ನಿವಾಸಿಗಳಿಗೆ ಎಚ್ಚರಿಕೆ ನೀಡಲಾಗಿದೆ.

ಕೊಂಕಣ ರೈಲ್ವೇ ಸ್ಥಗಿತ

ಇತ್ತೀಚೆಗಷ್ಟೇ ಗೋವಾದ ಕೊಂಕಣ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದು ಜುಲೈ 10ರಂದು ಹಲವು ರೈಲುಗಳ ಸಂಚಾರ ವ್ಯತ್ಯಯವಾಗಿತ್ತು. ಇದೀಗ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆ ಸೇರಿದಂತೆ ಕೊಂಕಣದ ಹಲವು ಭಾಗಗಳಲ್ಲಿ ಭಾರಿ ಮಳೆಯಿಂದ ಸಮಸ್ಯೆಗಳು ಎದುರಾಗಿದ್ದು 14 ಗಂಟೆಗಳ ಕಾಲ ಹಲವು ರೈಲುಗಳನ್ನು ರದ್ದುಗೊಳಿಸಲಾಗಿದೆ. ಇದರಿಂದ ಕರ್ನಾಟಕ ರಾಜ್ಯದ ರೈಲು ಪ್ರಯಾಣಿಕರಿಗೂ ಸಮಸ್ಯೆ ಎದುರಾಗಿದೆ.

ಇದನ್ನೂ ಓದಿ: Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

Continue Reading

ಪ್ರಮುಖ ಸುದ್ದಿ

Pooja Khedkar: ಐಎಎಸ್‌ಗಾಗಿ ನಕಲಿ ಜಾತಿ, ಕಡಿಮೆ ವಯಸ್ಸು, ದರ್ಪ; ಪೂಜಾ ಖೇಡ್ಕರ್‌ ಕಳ್ಳಾಟ ಒಂದೆರಡಲ್ಲ!

Pooja Khedkar: ಟ್ರೈನಿ ಐಎಎಸ್‌ ಅಧಿಕಾರಿಯಾಗಿದ್ದಾಗಲೇ ಖಾಸಗಿ ವಾಹನಕ್ಕೆ ಕೆಂಪು ಗೂಟ ಅಳವಡಿಸಿಕೊಂಡು, ಅಧಿಕಾರ ದುರುಪಯೋಗದ ಆರೋಪ ಹೊತ್ತಿರುವ ಪೂಜಾ ಖೇಡ್ಕರ್‌ ಅವರ ಕಳ್ಳಾಟಗಳು ಬಯಲಾಗುತ್ತಿವೆ. ಅವರ ವಿರುದ್ಧ ನಕಲಿ ಜಾತಿ ಪ್ರಮಾಣಪತ್ರ, ವಿಶೇಷ ಚೇತನ ಎಂದು ಸುಳ್ಳು ದಾಖಲೆ ಸೃಷ್ಟಿ, ವಯಸ್ಸಿನ ಕುರಿತು ಕೂಡ ಫೇಕ್‌ ಡಾಕ್ಯುಮೆಂಟ್‌ ಮಾಡಿಸಿರುವುದು ಸೇರಿ ಅವರ ವಿರುದ್ಧ ಹತ್ತಾರು ಆರೋಪಗಳು ಕೇಳಿಬರುತ್ತಿವೆ.

VISTARANEWS.COM


on

Pooja Khedkar
Koo

ಮುಂಬೈ: ಮಹಾರಾಷ್ಟ್ರ ಕೇಡರ್‌ನ ಐಎಎಸ್‌ ಅಧಿಕಾರಿ, ಅತಿಯಾದ ದರ್ಪ, ನಕಲಿ ದಾಖಲೆ ಸೃಷ್ಟಿಯಿಂದಲೇ ದೇಶಾದ್ಯಂತ ಗಮನ ಸೆಳೆದಿರುವ ಟ್ರೈನಿ ಅಧಿಕಾರಿ (Trainee IAS Officer) ಪೂಜಾ ಖೇಡ್ಕರ್‌ (Pooja Khedkar) ಅವರ ಒಂದೊಂದೇ ಕಳ್ಳಾಟಗಳು ಬಯಲಾಗುತ್ತಿವೆ. ತಮ್ಮ ಖಾಸಗಿ ಕಾರಿಗೆ ‘ಕೆಂಪು ಗೂಟ’ ಅಳವಡಿಸಿದ್ದು ಸೇರಿ ಹಲವು ರೀತಿಯಲ್ಲಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು, ವರ್ಗಾವಣೆಯ ಶಿಕ್ಷೆ ಅನುಭವಿಸುತ್ತಿರುವ ಪೂಜಾ ಖೇಡ್ಕರ್‌ ಅವರು ನಕಲಿ ಜಾತಿ ಪ್ರಮಾಣಪತ್ರ, ವಿಶೇಷ ಚೇತನ ಎಂದು ಸುಳ್ಳು ದಾಖಲೆ ಸೃಷ್ಟಿ, ವಯಸ್ಸಿನ ಕುರಿತು ಕೂಡ ಫೇಕ್‌ ಡಾಕ್ಯುಮೆಂಟ್‌ ತಯಾರಿಸಿದ ಆರೋಪಗಳನ್ನೂ ಎದುರಿಸುತ್ತಿದ್ದಾರೆ.

ನಿಯಮಿತ ಅಧಿಕಾರವನ್ನು ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಪುಣೆಯಿಂದ (ಅಸಿಸ್ಟಂಟ್‌ ಕಲೆಕ್ಟರ್)‌ ವಾಶಿಂಗೆ ವರ್ಗಾವಣೆಗೊಂಡಿರುವ 34 ವರ್ಷದ ಅಧಿಕಾರಿಯು, ಒಬಿಸಿ ಜಾತಿ ಪ್ರಮಾಣಪತ್ರ ಲಗತ್ತಿಸಿ ಯುಪಿಎಸ್‌ಸಿ ಪರೀಕ್ಷೆ ಬರೆದು ತೇರ್ಗಡೆ ಹೊಂದಿದ್ದಾರೆ. ಆದರೆ, ಅವರು ಒಬಿಸಿ ಜಾತಿ ಪ್ರಮಾಣಪತ್ರದ ನಕಲಿ ದಾಖಲೆ ಸೃಷ್ಟಿಸಿದ್ದಾರೆ. ಇನ್ನು ವಿಶೇಷ ಚೇತನ ಎಂಬುದಾಗಿಯೂ ಫೇಕ್‌ ಡಾಕ್ಯುಮೆಂಟ್‌ ಮಾಡಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಮೆಡಿಕಲ್‌ ಟೆಸ್ಟ್‌ ಪ್ರಕಾರ ಪೂಜಾ ಖೇಡ್ಕರ್‌ ಅವರು ಫಿಟ್‌ ಇದ್ದಾರೆ ಎಂದು ಹೇಳಲಾಗುತ್ತಿದೆ.‌ 2007ರಲ್ಲಿ ಅವರು ಎಂಬಿಬಿಎಸ್‌ಗೆ ಅರ್ಜಿ ಸಲ್ಲಿಸಿದಾಗ ದೈಹಿಕವಾಗಿ ಫಿಟ್‌ ಇರುವುದಾಗಿ ದಾಖಲೆ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ವಯಸ್ಸಿನ ಕುರಿತೂ ಸುಳ್ಳು ದಾಖಲೆ

ಜಾತಿ, ವಿಶೇಷ ಚೇತನ ಪ್ರಮಾಣಪತ್ರದ ಜತೆಗೆ ಪೂಜಾ ಖೇಡ್ಕರ್‌ ಅವರು ವಯಸ್ಸಿನ ಕುರಿತು ಕೂಡ ಸುಳ್ಳು ದಾಖಲೆ ಸಲ್ಲಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 2020ರಿಂದ 2023ರ ಅವಧಿಯಲ್ಲಿ ಅವರು ಸಲ್ಲಿಸಿದ ದಾಖಲೆಗಳ ಪ್ರಕಾರ, ಮೂರು ವರ್ಷದಲ್ಲಿ ಅವರ ವಯಸ್ಸು ದಾಖಲೆಯಲ್ಲಿ ಒಂದೇ ವರ್ಷ ಹೆಚ್ಚಾಗಿದೆ. ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಲು ವಯಸ್ಸಿನ ಮಿತಿ ಇರುವ ಕಾರಣ ಅವರು ವಯಸ್ಸಿನ ಕುರಿತು ಕೂಡ ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂದು ತಿಳಿದುಬಂದಿದೆ. ಇದು ಈಗ ಭಾರಿ ಚರ್ಚೆಗೂ ಗ್ರಾಸವಾಗಿದೆ.

27 ಸಾವಿರ ರೂ. ದಂಡ ಬಿದ್ದಿದ್ದೇಕೆ?

ಅಧಿಕಾರದ ದುರುಪಯೋಗ, ನಕಲಿ ದಾಖಲೆ ಸೃಷ್ಟಿ ಜತೆಗೆ ಸಂಚಾರ ದಟ್ಟಣೆ ನಿಯಮಗಳ ಉಲ್ಲಂಘನೆಯಲ್ಲೂ ಮುಂದಿದ್ದಾರೆ. ವಾಶಿಂ ಮಹಿಳಾ ಪೊಲೀಸರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡ ಪೂಜಾ ಖೇಡ್ಕರ್‌ ಅವರು ಎರಡು ತಾಸು ಚರ್ಚಿಸಿದ್ದಾರೆ. ಯಾವ ವಿಷಯದ ಕುರಿತು ಚರ್ಚಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗದಿದ್ದರೂ, ಸಂಚಾರ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ 27 ಸಾವಿರ ರೂ. ದಂಡ ವಿಧಿಸಲಾಗಿದ್ದು, ಅದರ ನೋಟಿಸ್‌ ನೀಡಲು ಪೊಲೀಸರು ಅವರ ಮನೆಗೆ ತೆರಳಿದ್ದರು ಎಂದು ಮೂಲಗಳು ತಿಳಿಸಿವೆ.

ಪೂಜಾ ಖೇಡ್ಕರ್‌ ಪ್ರತಿಕ್ರಿಯೆ ಏನು?

ನಕಲಿ ದಾಖಲೆ, ಅಧಿಕಾರ ದುರುಪಯೋಗ ಸೇರಿ ಹಲವು ಆರೋಪಗಳ ಕುರಿತು ತನಿಖೆಗೆ ಆದೇಶಿಸಲಾಗಿದ್ದು, ಮೊದಲ ಬಾರಿಗೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. “ಯಾರೇ ಆಗಲಿ, ಆರೋಪ ಸಾಬೀತಾಗುವವರೆಗೆ ಅವರು ಆರೋಪಿಯೇ. ಮಾಧ್ಯಮಗಳ ವರದಿಗಳು, ತೀರ್ಪುಗಳು ನಾನು ಏನೆಂಬುದನ್ನು ತೀರ್ಮಾನಿಸುವುದಿಲ್ಲ. ತನಿಖೆಗೆ ರಚನೆಯಾಗಿರುವ ಸಮಿತಿಯ ತೀರ್ಮಾನದ ಬಳಿಕವೇ ಸತ್ಯ ಏನೆಂಬುದು ಗೊತ್ತಾಗುತ್ತದೆ. ಮಾಧ್ಯಮಗಳು ಅಥವಾ ಜನರು ನನ್ನನ್ನು ತೀರ್ಮಾನಿಸುವುದಿಲ್ಲ” ಎಂದು ಮಾಧ್ಯಮಗಳಿಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Pooja Khedkar: ಎಂಬಿಬಿಎಸ್ ಪ್ರವೇಶಕ್ಕೆ ಒಬಿಸಿ ಕೆನೆಪದರ ರಹಿತ ಪ್ರಮಾಣಪತ್ರ ಸಲ್ಲಿಸಿದ್ದ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್

Continue Reading

Latest

Model Arrest: ತನ್ನ ಫಾಲೋವರ್ಸ್‌ಗಳನ್ನೇ ವೇಶ್ಯಾವಾಟಿಕೆಯಲ್ಲಿ ತೊಡಗಿಸುತ್ತಿದ್ದ ಖ್ಯಾತ ಮಾಡೆಲ್‌ಗೆ ಜೈಲು ಶಿಕ್ಷೆ!

Model Arrest: ಬ್ರೆಜಿಲ್‌ನ ಮಾಜಿ ರೂಪದರ್ಶಿ ಕ್ಯಾಟ್ ಟೊರೆಸ್ ಅನ್ನು ಮಾನವ ಕಳ್ಳಸಾಗಣೆ ಮತ್ತು ಮಹಿಳೆಯರ ಗುಲಾಮಗಿರಿಗಾಗಿ ಎಂಟು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಅವಳೊಂದಿಗೆ ವಾಸವಾಗಿದ್ದ ಇಬ್ಬರು ಮಹಿಳೆಯರು 2022ರಲ್ಲಿ ಕಾಣೆಯಾಗಿದ್ದರು. ಈ ಬಗ್ಗೆ ಎಫ್ಐಆರ್ ದಾಖಲಿಸಿದ ಪೊಲೀಸರು ತನಿಖೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿತ್ತು. ಆಕೆ ತನ್ನ ಫಾಲೋವರ್ಸ್‌ಗಳನ್ನು ಲೈಂಗಿಕ ಕೆಲಸದಲ್ಲಿ ತೊಡಗುವಂತೆ ಒತ್ತಾಯಿಸಿ ಅವರನ್ನು ತನ್ನ ಗುಲಾಮರಂತೆ ಇರಿಸಿಕೊಳ್ಳುತ್ತಿದ್ದಳು ಎಂಬುದಾಗಿ ತಿಳಿದು ಬಂದಿದೆ.

VISTARANEWS.COM


on

Model Arrest
Koo

ಬ್ರೆಜಿಲ್‌ನ ಮಾಜಿ ರೂಪದರ್ಶಿ ಮತ್ತು ಅಮೆರಿಕ ಮೂಲದ ವೆಲ್ನೆಸ್ ಇನ್ಫ್ಲುಯೆನ್ಸರ್ ಕ್ಯಾಟ್ ಟೊರೆಸ್‌ ಎಂಬುವಳನ್ನು ಮಾನವ ಕಳ್ಳಸಾಗಣೆ ಮತ್ತು ಮಹಿಳೆಯರ ಗುಲಾಮಗಿರಿಗಾಗಿ ಎಂಟು ವರ್ಷಗಳ ಜೈಲು ಶಿಕ್ಷೆ (Model Arrest) ವಿಧಿಸಲಾಗಿದೆ. ಅವಳೊಂದಿಗೆ ವಾಸವಾಗಿದ್ದ ಇಬ್ಬರು ಮಹಿಳೆಯರು 2022ರಲ್ಲಿ ಕಾಣೆಯಾಗಿದ್ದರು. ಈ ಬಗ್ಗೆ ಎಫ್‌ಐಆರ್ ದಾಖಲಿಸಿದ ಪೊಲೀಸರು ತನಿಖೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿತ್ತು. ಆಕೆ ತನ್ನ ಫಾಲೋವರ್ಸ್‌ಗಳನ್ನು ಲೈಂಗಿಕ ಕೆಲಸದಲ್ಲಿ ತೊಡಗುವಂತೆ ಒತ್ತಾಯಿಸಿ ಅವರನ್ನು ತನ್ನ ಗುಲಾಮರಂತೆ ಇರಿಸಿಕೊಳ್ಳುತ್ತಿದ್ದಳು ಎಂಬುದಾಗಿ ತಿಳಿದುಬಂದಿದೆ.

ಆಕೆಯಿಂದ ಗುಲಾಮಗಿರಿಗೆ ಒಳಗಾದ ಆ ಮಹಿಳೆಯರು ಆಕೆಯೊಂದಿಗೆ ವಾಸವಿದ್ದಾಗ ಅನುಭವಿಸಿದ ಭಯಾನಕ ಘಟನೆಗಳ ಬಗ್ಗೆ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಂತ್ರಸ್ತ ಮಹಿಳೆಯರು, ಆಕೆ ಮರುಳು ಮಾಡುವಂತೆ ಮಾತನಾಡುತ್ತಿದ್ದಳು. ಅವಳು ಹೇಳುವ ಮಾತನ್ನು ಕೇಳಿ ಆಕರ್ಷಿತರಾದೆವು. ನಟ ಲಿಯೊನಾರ್ಡೊ ಡಿಕಾಪ್ರಿಯೊ ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾಳೆ ಎಂದು ಒಂದು ಕಾಲದಲ್ಲಿ ವದಂತಿಗಳಿದ್ದ ಟೊರೆಸ್, ತನ್ನ ಆಧ್ಯಾತ್ಮಿಕ ಶಕ್ತಿಯನ್ನು ಬಳಸಿಕೊಂಡು ಭವಿಷ್ಯ ನುಡಿಯಬಹುದು ಎಂದು ಪ್ರಸಿದ್ಧ ಬ್ರೆಜಿಲಿಯನ್ ಟಿವಿ ಕಾರ್ಯಕ್ರಮಗಳಲ್ಲಿ ಹೇಳಿದ್ದಳು. ಅಲ್ಲದೇ ಅವಳು ಮ್ಯಾಗಜೀನ್‌ಗಳ ಮುಖಪುಟಗಳಲ್ಲಿ ಕಾಣಿಸಿಕೊಂಡಿದ್ದಳು. ಹಾಲಿವುಡ್‌ ನಟ ಲಿಯೊನಾರ್ಡೊ ಡಿಕಾಪ್ರಿಯೊ ಅವರಂತಹ ಪ್ರಸಿದ್ಧ ವ್ಯಕ್ತಿಗಳೊಂದಿಗೆ ಕಾಣಿಸಿಕೊಂಡಳು. ಹಾಗಾಗಿ ಆಕೆ ಹೇಳುವುದನ್ನು ತಾವು ನಂಬಿರುವುದಾಗಿ ಮಹಿಳೆಯರು ತಿಳಿಸಿದ್ದಾರೆ.

Model Arrest

ಆಕೆ ವೆಲ್‍ನೆಸ್ ವೆಬ್‍ಸೈಟ್‍ ಮತ್ತು ಚಂದಾದಾರಿಕೆ ಸೇವೆಯನ್ನು ಅಭಿವೃದ್ಧಿಪಡಿಸಿ ಅದರಲ್ಲಿ ಸಂಬಂಧಗಳು, ಯೋಗಕ್ಷೇಮ, ಸಂಮೋಹನ, ಧ್ಯಾನ ಮತ್ತು ವ್ಯಾಯಾಮ ಕಾರ್ಯಕ್ರಮಗಳು ಸೇರಿದಂತೆ ವ್ಯವಹಾರ ಯಶಸ್ಸಿನ ಬಗ್ಗೆ ಸಲಹೆ ನೀಡುವ ಸ್ವ-ಸಹಾಯ ವೀಡಿಯೊಗಳನ್ನು ಸಹ ಮಾಡುತ್ತಿದ್ದಳು. ಹಾಗೇ ವಿಡಿಯೋ ಸಮಾಲೋಚನೆಗಳ ಮೂಲಕ ಮುಖಾಮುಖಿ ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಪರಿಹರಿಸುತ್ತಿದ್ದಳು.

ಹಾಗಾಗಿ ಆ ಮಹಿಳೆಯರು 2019ರಲ್ಲಿ ಟೊರೆಸ್ ಅವರ ಲೈವ್-ಇನ್ ಸಹಾಯಕರಾಗಿ ಕೆಲಸ ಮಾಡಲು ನ್ಯೂಯಾಕ್‌ಗೆ ತೆರಳಿದರು. ಅಲ್ಲಿ ಅವಳ ಮನೆಕೆಲಸ ಹಾಗೂ ಪ್ರಾಣಿಗಳನ್ನು ನೋಡಿಕೊಳ್ಳುವ ಕೆಲಸದಲ್ಲಿ ನಿರತಳಾಗಿದ್ದರು. ಆದರೆ ಆಕೆ ಸಂಬಳ ಸರಿಯಾಗಿ ನೀಡುತ್ತಿರಲಿಲ್ಲ. ನಂತರ ಸ್ಥಳೀಯ ಸ್ಟ್ರಿಪ್ ಕ್ಲಬ್‍ನಲ್ಲಿ ಕೆಲಸ ಮಾಡುವಂತೆ ಅವರ ಮೇಲೆ ಒತ್ತಡ ಹೇರಿದ್ದಳು. ಇದಕ್ಕೆ ಅವರು ಒಪ್ಪದಿದ್ದಾಗ ಅವರನ್ನು ಯಾಮಾರಿಸಿ ವೇಶ್ಯಾವಾಟಿಕೆಯಲ್ಲಿ ತೊಡಗುವಂತೆ ಮಾಡಿದ್ದಳು.

ಇದನ್ನೂ ಓದಿ: ತರಕಾರಿ ಮಾರುವವಳ ಮಗ ಸಿಎ ಪರೀಕ್ಷೆಯಲ್ಲಿ ಪಾಸ್‌; ಹೃದಯಸ್ಪರ್ಶಿ ವಿಡಿಯೊ ಇಲ್ಲಿದೆ

ನಂತರ ಇಬ್ಬರು ಮಹಿಳೆಯರ ಸ್ನೇಹಿತರು ಮತ್ತು ಕುಟುಂಬವು ಅವರನ್ನು ಹುಡುಕಲು ಸಾಮಾಜಿಕ ಮಾಧ್ಯಮ ಅಭಿಯಾನಗಳನ್ನು ಪ್ರಾರಂಭಿಸಿತು. ಮಾಧ್ಯಮಗಳ ಗಮನದಿಂದ ತಪ್ಪಿಸಿಕೊಳ್ಳಲು, ಟೊರೆಸ್ ಆ ಮಹಿಳೆಯರಿಗೆ ತಾವು ಆರಾಮವಾಗಿ ಇದ್ದೀವಿ ಎಂದು ವಿಡಿಯೊ ಪೋಸ್ಟ್ ಮಾಡುವಂತೆ ಒತ್ತಾಯಿಸಿದ್ದಳು. ಈ ರೀತಿ ಆಕೆ ಮಹಿಳೆಯರನ್ನು ಬಳಸಿಕೊಳ್ಳುತ್ತಿದ್ದಳು ಎನ್ನಲಾಗಿದೆ. 20 ಕ್ಕೂ ಹೆಚ್ಚು ಮಹಿಳೆಯರು ಟೊರೆಸ್‌ನಿಂದ ವಂಚನೆಗೊಳಗಾದ ಅಥವಾ ಶೋಷಣೆಗೊಳಗಾದ ಬಗ್ಗೆ ತಿಳಿಸಿದ್ದಾರೆ. ಅವರು ಅನುಭವಿಸಿದ ಮತ್ತು ಅನುಭವದಿಂದ ಚೇತರಿಸಿಕೊಳ್ಳಲು ಅವರು ಇನ್ನೂ ಮನೋವೈದ್ಯಕೀಯ ಚಿಕಿತ್ಸೆಗೆ ಒಳಗಾಗುತ್ತಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.

Continue Reading
Advertisement
Paris Olympics 2024
ಪ್ರಮುಖ ಸುದ್ದಿ5 mins ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಕಡಿಮೆ ಪದಕಗಳು ಸಿಗುವುದು ಯಾಕೆ? ಈ ಪ್ರಶ್ನೆಗೆ ಇಲ್ಲಿದೆ ಉತ್ತರ

BMTC staff commits suicide at headquarters
ಬೆಂಗಳೂರು22 mins ago

BMTC staff : ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಬಿಎಂಟಿಸಿ ಸಿಬ್ಬಂದಿ ಆತ್ಮಹತ್ಯೆ

ಪ್ರಮುಖ ಸುದ್ದಿ27 mins ago

Uttara Kannada Rain: ಭಾರಿ ಮಳೆಗೆ ತತ್ತರಿಸಿದ ಉತ್ತರ ಕನ್ನಡ; ಭೂಕುಸಿತಕ್ಕೆ 11 ಸಾವು, ರಸ್ತೆಗಳೇ ಮಾಯ, ತೋಟ ಗದ್ದೆ ಮುಳುಗಡೆ

Pooja Khedkar
ಪ್ರಮುಖ ಸುದ್ದಿ28 mins ago

Pooja Khedkar: ಐಎಎಸ್‌ಗಾಗಿ ನಕಲಿ ಜಾತಿ, ಕಡಿಮೆ ವಯಸ್ಸು, ದರ್ಪ; ಪೂಜಾ ಖೇಡ್ಕರ್‌ ಕಳ್ಳಾಟ ಒಂದೆರಡಲ್ಲ!

Viral Video
Latest34 mins ago

Viral Video : ಡ್ಯಾನ್ಸ್‌ ಆಯ್ತು, ಹೊಡೆದಾಟವಾಯ್ತು, ಈಗ ಹುಡುಗಿಯರ ಮೇಕಪ್‌ಗೂ ಸಾಕ್ಷಿಯಾಯ್ತು ದೆಹಲಿ ಮೆಟ್ರೊ! ವಿಡಿಯೊ ನೋಡಿ

Rajnath Singh
ದೇಶ38 mins ago

Kashmir Encounter: ಸೇನಾ ಮುಖ್ಯಸ್ಥರ ಜೊತೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಮಾತುಕತೆ; ಸೇನೆಗೆ ಸಂಪೂರ್ಣ ಅಧಿಕಾರ

Model Arrest
Latest44 mins ago

Model Arrest: ತನ್ನ ಫಾಲೋವರ್ಸ್‌ಗಳನ್ನೇ ವೇಶ್ಯಾವಾಟಿಕೆಯಲ್ಲಿ ತೊಡಗಿಸುತ್ತಿದ್ದ ಖ್ಯಾತ ಮಾಡೆಲ್‌ಗೆ ಜೈಲು ಶಿಕ್ಷೆ!

Manorathangal Trailer
ಸಿನಿಮಾ50 mins ago

Manorathangal Trailer: ಗಮನ ಸೆಳೆದ ʼಮನೋರಥಂಗಳ್‌ʼ ಟ್ರೈಲರ್‌; 8 ನಿರ್ದೇಶಕರ 9 ಎಪಿಸೋಡ್‌ನಲ್ಲಿ ಸ್ಟಾರ್‌ಗಳ ಸಮಾಗಮ

CM Siddaramaiah
ಕರ್ನಾಟಕ56 mins ago

CM Siddaramaiah: ಆಸ್ತಿ ಬಗ್ಗೆ ತಪ್ಪು ಮಾಹಿತಿ; ಸಿಎಂ ವಿರುದ್ಧ ಚುನಾವಣಾ ಆಯೋಗಕ್ಕೆ ಮತ್ತೆರಡು ದೂರು

Viral News
Latest1 hour ago

Viral News: ಬಾಸ್‌ ಜತೆ ಚಕ್ಕಂದವಾಡುತ್ತಿದ್ದ ಕಿಲಾಡಿ ಪತ್ನಿ; ಡ್ರೋನ್‌ ಬಳಸಿ ಪತ್ತೆ ಹಚ್ಚಿದ ಚಾಲಾಕಿ ಗಂಡ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ5 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ23 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌