Usha Chilukuri Vance: ಟ್ರಂಪ್ ಅವರ ಉಪಾಧ್ಯಕ್ಷ ಅಭ್ಯರ್ಥಿಯ ಪತ್ನಿ ಭಾರತೀಯ ಸಂಸ್ಕೃತಿಯ ಪ್ರತಿಪಾದಕಿ! - Vistara News

ವಿದೇಶ

Usha Chilukuri Vance: ಟ್ರಂಪ್ ಅವರ ಉಪಾಧ್ಯಕ್ಷ ಅಭ್ಯರ್ಥಿಯ ಪತ್ನಿ ಭಾರತೀಯ ಸಂಸ್ಕೃತಿಯ ಪ್ರತಿಪಾದಕಿ!

ಈ ಬಾರಿ ಅಮೆರಿಕದ ಚುನಾವಣೆ ಕಣದಲ್ಲಿರುವ ಡೊನಾಲ್ಡ್ ಟ್ರಂಪ್ ಅವರ ಉಪಾಧ್ಯಕ್ಷ ಅಭ್ಯರ್ಥಿಯಾಗಿ ಆಯ್ಕೆಯಾದ ಓಹಿಯೋ ಸೆನೆಟರ್ ಜೆಡಿ ವ್ಯಾನ್ಸ್ ಅವರ ಪತ್ನಿ ಉಷಾ ಚಿಲುಕುರಿ ವ್ಯಾನ್ಸ್ (Usha Chilukuri Vance) ಭಾರತೀಯ ಮೂಲದವರಾಗಿದ್ದಾರೆ. ಇವರ ಪೋಷಕರು ಅಮೆರಿಕಕ್ಕೆ ವಲಸೆ ಬಂದವರು. ಕ್ಯಾಲಿಫೋರ್ನಿಯಾದಲ್ಲೇ ಬೆಳೆದಿರುವ ಉಷಾ ಅವರು ಭಾರತ ಮತ್ತು ಭಾರತೀಯ ಸಂಸ್ಕೃತಿಯ ಬಗ್ಗೆ ಅಪಾರವಾದ ಗೌರವ ಹೊಂದಿದ್ದಾರೆ. ಒಂದು ವೇಳೆ ಟ್ರಂಪ್ ಮುಂದೆ ಅಮೆರಿಕದ ಅಧ್ಯಕ್ಷರಾದರೆ ಅವರ ಆಡಳಿತದ ಮೇಲೆ ಉಷಾ ಅವರ ಆಲೋಚನೆಗಳು ಪರಿಣಾಮ ಬೀರಬಹುದೇ ಎಂಬ ಬಗ್ಗೆ ಈಗ ಕುತೂಹಲ ಮೂಡಿದೆ.

VISTARANEWS.COM


on

Usha Chilukuri Vance
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಮೆರಿಕದ (US) ಮಾಜಿ ಅಧ್ಯಕ್ಷ (former President) ಡೊನಾಲ್ಡ್ ಟ್ರಂಪ್ (Donald Trump) ಅವರ ಪಕ್ಷದ ಉಪಾಧ್ಯಕ್ಷ ಅಭ್ಯರ್ಥಿಯಾಗಿ (vice presidential) ಓಹಿಯೋ ಸೆನೆಟರ್ (Ohio Senator) ಜೆಡಿ ವ್ಯಾನ್ಸ್ (JD Vance) ಅವರನ್ನು ಆಯ್ಕೆ ಮಾಡಲಾಗಿದೆ. ವಿಶೇಷ ಅಂದರೆ ಅವರ ಪತ್ನಿ ಉಷಾ ಚಿಲುಕುರಿ ವ್ಯಾನ್ಸ್ (Usha Chilukuri Vance) ಭಾರತೀಯ ಮೂಲದವರಾಗಿದ್ದಾರೆ. 38 ವರ್ಷದ ಉಷಾ ಚಿಲುಕುರಿ ವ್ಯಾನ್ಸ್ ಕ್ಯಾಲಿಫೋರ್ನಿಯಾ ಉಪನಗರದಲ್ಲಿ ಬೆಳೆದವರು.

ಉಷಾ ಅವರು ಯೇಲ್ ಮತ್ತು ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ಅಧ್ಯಯನ ಮಾಡಿದ್ದು, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಜಾನ್ ರಾಬರ್ಟ್ಸ್ ಮತ್ತು ಬ್ರೆಟ್ ಕವನಾಗ್ ಅವರಿಗೆ ಕ್ಲರ್ಕ್‌ ಆಗಿದ್ದರು. ಓಹಿಯೋ ಸೆನೆಟರ್ ಜೆಡಿ ವ್ಯಾನ್ಸ್ ಅವರನ್ನು ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಜುಲೈ 15ರಂದು ವೈಟ್ ಹೌಸ್ ಅನ್ನು ಮರಳಿ ಗೆಲ್ಲುವ ಪ್ರಯತ್ನದಲ್ಲಿ ಉಪಾಧ್ಯಕ್ಷ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದಾರೆ.

ಉಪಾಧ್ಯಕ್ಷ ಅಭ್ಯರ್ಥಿಯಾಗುವ ಮೊದಲು 39 ವರ್ಷದ ವ್ಯಾನ್ಸ್ ಅವರು ಓಹಿಯೋದಿಂದ ಹೊಸ ರಿಪಬ್ಲಿಕನ್ ಸೆನೆಟರ್ ಆಗಿ ಆಯ್ಕೆಯಾಗಿರುವ ಕಾರಣ ಅವರು ಈಗಾಗಲೇ ಅಮೆರಿಕನ್ನರಿಗೆ ಚಿರಪರಿಚಿತರಾಗಿದ್ದಾರೆ. ಅವರ ಆತ್ಮಚರಿತ್ರೆಯು ಬಿಳಿಯ ಕಾರ್ಮಿಕ ವರ್ಗದ ಸಮಸ್ಯೆಗಳನ್ನು ವಿವರಿಸುತ್ತದೆ.

Usha Chilukuri Vance


ವಾನ್ಸ್ ಅವರಿಗೆ ಪತ್ನಿ ಉಷಾ ವ್ಯಾನ್ಸ್ ಎಲ್ಲದರಲ್ಲೂ ಬೆಂಬಲವಾಗಿ ನಿಂತಿದ್ದಾರೆ. ಮಿಲ್ವಾಕೀಯ ರಿಪಬ್ಲಿಕನ್ ನ್ಯಾಷನಲ್ ಕನ್ವೆನ್ಶನ್ ಮಹಡಿಯಲ್ಲಿ ಡೊನಾಲ್ಡ್ ಟ್ರಂಪ್ ಅವರ ಉಪಾಧ್ಯಕ್ಷ ಅಭ್ಯರ್ಥಿಯಾಗಿ ಧ್ವನಿ ಮತದ ಮೂಲಕ ವ್ಯಾನ್ಸ್ ಆಯ್ಕೆಯಾದಾಗ ಉಷಾ ಅವರ ಪಕ್ಕದಲ್ಲಿ ನಿಂತು ಹುರಿದುಂಬಿಸಿದ್ದರು. ಜೆಡಿ ವ್ಯಾನ್ಸ್ ಅವರ ಪತ್ನಿ ಉಷಾ ಚಿಲುಕುರಿ ವ್ಯಾನ್ಸ್ ಅವರು ಭಾರತೀಯ ಮೌಲ್ಯಗಳು ಮತ್ತು ಸಂಸ್ಕೃತಿ ಬಗ್ಗೆ ಅಪಾರವಾದ ಗೌರವವನ್ನು ಹೊಂದಿದ್ದಾರೆ. ಭಾರತೀಯ ವಲಸಿಗರ ಮಗಳಾಗಿರುವ ಉಷಾ ಚಿಲುಕುರಿ ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋದಲ್ಲಿ ಬೆಳೆದರು.

ಯೇಲ್ ವಿಶ್ವವಿದ್ಯಾನಿಲಯದಿಂದ ಇತಿಹಾಸದಲ್ಲಿ ಬ್ಯಾಚುಲರ್ ಪದವಿ ಪಡೆದಿರುವ ಅವರು ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಿಂದ ಮಾಸ್ಟರ್ ಆಫ್ ಫಿಲಾಸಫಿ ಪದವಿಯನ್ನು ಪಡೆದಿದ್ದಾರೆ. ವಾಷಿಂಗ್ಟನ್‌ನಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬ್ರೆಟ್ ಕವನಾಗ್‌ ಅವರ ಗುಮಾಸ್ತರಾಗಿ ಒಂದು ವರ್ಷ ಕಾರ್ಯ ನಿರ್ವಹಿಸಿದ್ದಾರೆ. ಬಳಿಕ ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್‌ಗೆ ಕಾನೂನು ಗುಮಾಸ್ತರಾಗಿ ಒಂದು ವರ್ಷ ಕಳೆದರು.

ಮುಂಗರ್, ಟೋಲ್ಲೆಸ್ ಮತ್ತು ಓಲ್ಸನ್ ಕಾನೂನು ಸಂಸ್ಥೆಯಲ್ಲಿ ವಕೀಲರಾಗಿದ್ದ ಅವರು ಈಗ ಸಂಸ್ಥೆಯನ್ನು ತೊರೆದಿರುವುದಾಗಿ ಆ ಸಂಸ್ಥೆ ಪ್ರಕಟಿಸಿದೆ. ಉನ್ನತ ಶಿಕ್ಷಣ, ಸ್ಥಳೀಯ ಸರ್ಕಾರ, ಮನರಂಜನೆ ಮತ್ತು ತಂತ್ರಜ್ಞಾನ, ಸೆಮಿಕಂಡಕ್ಟರ್‌ಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಂಕೀರ್ಣ ನಾಗರಿಕ ದಾವೆ ಮತ್ತು ಮೇಲ್ಮನವಿಗಳನ್ನು ಅವರು ನಿರ್ವಹಿಸಿದ್ದಾರೆ.

ಯೇಲ್‌ನಲ್ಲಿ ನಾಲ್ಕು ವರ್ಷಗಳ ಪಠ್ಯೇತರ ಚಟುವಟಿಕೆಯ ಅನಂತರ ಅವರು ಕೇಂಬ್ರಿಡ್ಜ್‌ನಲ್ಲಿ ಗೇಟ್ಸ್ ಫೆಲೋ ಆಗಿ ತಮ್ಮ ಅಧ್ಯಯನವನ್ನು ಮುಂದುವರಿಸಿದರು. ಅಲ್ಲಿ ಅವರು ಎಡಪಂಥೀಯ ಮತ್ತು ಉದಾರವಾದಿ ಗುಂಪುಗಳೊಂದಿಗೆ ತೊಡಗಿಸಿಕೊಂಡರು. 2014ರಲ್ಲಿ ನೋಂದಾಯಿತ ಡೆಮೋಕ್ರಾಟ್ ಆಗಿದ್ದರು.

Usha Chilukuri Vance:


ಉಷಾ ಮತ್ತು ಜೆಡಿ ವಾನ್ಸ್ ಮೊದಲ ಬಾರಿಗೆ ಯೇಲ್ ಲಾ ಸ್ಕೂಲ್‌ನಲ್ಲಿ ಭೇಟಿಯಾದರು. 2014ರಲ್ಲಿ ಕೆಂಟುಕಿಯಲ್ಲಿ ಹಿಂದೂ ಅರ್ಚಕರೊಬ್ಬರ ಸಮ್ಮುಖದಲ್ಲಿ ವಿವಾಹವಾಗಿದ್ದರು. ವ್ಯಾನ್ಸ್ ದಂಪತಿಗೆ ಮೂವರು ಮಕ್ಕಳಿದ್ದಾರೆ.

ಜೆಡಿ ಯಶಸ್ಸಿನಲ್ಲಿ ಉಷಾ ಅವರ ಪಾತ್ರ ಮುಖ್ಯ

ಪತಿಯ ಸಾಧನೆಯಲ್ಲಿ ಉಷಾ ವ್ಯಾನ್ಸ್ ಗಣನೀಯ ಕೊಡುಗೆ ನೀಡಿದ್ದಾರೆ. 2020ರಲ್ಲಿ ರಾನ್ ಹೊವಾರ್ಡ್ ನಿರ್ದೇಶಿಸಿದ ಚಲನಚಿತ್ರದಲ್ಲಿ ಅಳವಡಿಸಲಾದ ಹಿಲ್‌ಬಿಲ್ಲಿ ಎಲಿಜಿ ಎಂಬ ಕತೆ ವ್ಯಾನ್ಸ್ ಅವರ ಆತ್ಮಚರಿತ್ರೆಯ ಭಾಗವಾಗಿದೆ. ಇದರಲ್ಲಿ ಉಷಾ ಅವರನ್ನು ಜೆಡಿ ತನ್ನ “ಯೇಲ್ ಸ್ಪಿರಿಟ್ ಗೈಡ್” ಎಂದು ಹೇಳಿದ್ದಾರೆ. ಅವಕಾಶಗಳನ್ನು ಹುಡುಕಲು ಅವಳು ಯಾವಾಗಲೂ ನನ್ನನ್ನು ಪ್ರೋತ್ಸಾಹಿಸುತ್ತಿದ್ದಳು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Donald Trump: ಬೆದರಿಕೆಗೆ ಬಗ್ಗದ ಡೊನಾಲ್ಡ್‌ ಟ್ರಂಪ್;‌ ಕಿವಿಗೆ ಬ್ಯಾಂಡೇಜ್‌ ಕಟ್ಟಿಕೊಂಡು ಜನರೆದುರು ಪ್ರತ್ಯಕ್ಷ!

ಉಷಾ ಅವರ ಕುರಿತು ಮಾತನಾಡಿರುವ ಯುಎಸ್ ಮೂಲದ ಜಾಗತಿಕ ರಿಯಲ್ ಎಸ್ಟೇಟ್ ಹೂಡಿಕೆ ಸಲಹೆಗಾರ ಮತ್ತು ಪ್ರಸಿದ್ಧ ಉದ್ಯಮಿ ಎಐ ಮೇಸನ್, ಉಷಾ ವ್ಯಾನ್ಸ್ ಹೆಚ್ಚು ನಿಪುಣ ವಕೀಲರು ಮತ್ತು ಭಾರತೀಯ ವಲಸಿಗರ ಮಗಳು. ಆಕೆಗೆ ಭಾರತೀಯ ಸಂಸ್ಕೃತಿ ಮತ್ತು ಭಾರತದ ಬಗ್ಗೆ ತಿಳಿದಿದೆ. ಯುಎಸ್ಎ ಮತ್ತು ಭಾರತದ ನಡುವೆ ಉತ್ತಮ ಸಂಬಂಧಗಳನ್ನು ಹೊಂದಲು ಅವರು ತಮ್ಮ ಪತಿಗೆ ದೊಡ್ಡ ಸಹಾಯ ಮಾಡಬಹುದು ಎಂದು ಹೇಳಿದ್ದಾರೆ.

ಪತಿಯ ಬಗ್ಗೆ ಮಾತನಾಡಿರುವ ಉಷಾ, ಅವರು ಎಷ್ಟು ಕಷ್ಟಪಟ್ಟು ಕೆಲಸ ಮಾಡುತ್ತಾರೆ, ಅವರು ಎಷ್ಟು ಸೃಜನಶೀಲರು ಎಂಬುದನ್ನು ಜನರು ಅರ್ಥಮಾಡಿಕೊಳ್ಳುತ್ತಾರೆ ಎಂದು ನಾನು ಭಾವಿಸುವುದಿಲ್ಲ. ಅವರು ಹೇಳುವ ಮತ್ತು ಮಾಡುವ ಎಲ್ಲ ಕಾರ್ಯಗಳು ತುಂಬಾ ಆಲೋಚನೆಯ ಅಡಿಪಾಯದ ಮೇಲೆ ನಿರ್ಮಿಸಲ್ಪಟ್ಟಿದೆ. ಅವರು ಯಾವಾಗಲೂ ಉತ್ತಮವಾಗಿ ಮಾಡಲು ಪ್ರಯತ್ನಿಸುತ್ತಾರೆ ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Viral News : ಕುವೈಟ್​ನಲ್ಲಿ ಈ ಚಪ್ಪಲಿಗೆ 1 ಲಕ್ಷ ರೂಪಾಯಿಯಂತೆ; ನಮ್ಮಲ್ಲಿ ಇದು ಬಾತ್​ರೂಮ್​ಗೆ ಹೋಗುವ ಚಪ್ಪಲಿ ಎಂದ ನೆಟ್ಟಿಗರು!

Viral News ಕೆಲವರು ಉಡುಪಿಗೆ ತಕ್ಕ ಹಾಗೇ ಚಪ್ಪಲಿ ಹಾಕುತ್ತಾರೆ. ಇನ್ನು ಕೆಲವರು ತಮ್ಮ ಇಡೀ ಜೀವಮಾನವನ್ನು ಹರಿದ ಚಪ್ಪಲಿಯಲ್ಲಿಯೇ ಕಳೆಯುತ್ತಾರೆ.ಆದರೆ ಕುವೈಟ್‌ನ ಸ್ಟೋರ್‌ ಒಂದರಲ್ಲಿ ಸುಮಾರು 4,500 ರಿಯಾಲ್ (1 ಲಕ್ಷ ರೂ.) ಗೆ ಚಪ್ಪಲಿಗಳನ್ನು ಮಾರಾಟ ಮಾಡುತ್ತಿರುವ ಸುದ್ದಿಯೊಂದು ವೈರಲ್ ಆಗಿದೆ.”4500 ರಿಯಾಲ್ ಬೆಲೆಗೆ ಇತ್ತೀಚಿನ ಫ್ಯಾಷನ್ ಜನೌಬಾ” ಎಂದು ಶೀರ್ಷಿಕೆ ನೀಡಲಾಗಿದೆ. ಜನರು ಸೋಶಿಯಲ್ ಮೀಡಿಯಾದಲ್ಲಿ ಇದರ ಬೆಲೆಯ ಬಗ್ಗೆ ಟೀಕಿಸಿದ್ದಾರೆ.

VISTARANEWS.COM


on

Viral News
Koo

ಕುವೈಟ್ : ದಿನ ಬಳಕೆಯ ವಸ್ತುಗಳ ಬೆಲೆ ಸಿಕ್ಕಾಪಟ್ಟೆ ಏರಿಕೆಯಾಗಿದೆ. ಇದರಿಂದ ಇಂದಿನ ಕಾಲದಲ್ಲಿ ಬಡವರು ಮತ್ತು ಮಧ್ಯಮ ವರ್ಗದವರಿಗೆ ಜೀವನ ನಡೆಸುವುದೇ ಒಂದು ಸವಾಲಿನ ಕೆಲಸವಾಗಿದೆ. ಕೆಲವರು ವರ್ಷಗಳ ಹಿಂದೆ 100 ರೂಪಾಯಿ ಇದ್ದ ಸಾಮಾನ್ಯವಾಗಿ ಚಪ್ಪಲೆಯ ಬೆಲೆಯೂ 300ರಿಂದ400 ಇರುತ್ತದೆ. ಇನ್ನು ಫಂಕ್ಷನ್‌ಗಳಿಗೆ ಬಳಸುವಂತಹ ಚಪ್ಪಲಿಗಳ ಬೆಲೆ ಕೇಳುವ ಹಾಗಿಲ್ಲ. ಅದೇನೇ ಇದ್ದರೂ ಒಂದು ಚಪ್ಪಲಿಯ ಬೆಲೆ ಒಂದು ಲಕ್ಷ ರೂಪಾಯಿ ಇರಲು ಸಾಧ್ಯವೇ. ಅದೂ ದಶಕಗಳ ಹಿಂದೆ ಜನರು ಧರಿಸುತ್ತಿದ್ದ ಹವಾಯಿ ರೀತಿಯ ಚಪ್ಪಲಿಗೆ ಒಂದು ಲಕ್ಷ ರೂಪಾಯಿ ಇರಬಹುದೇ? ಖಂಡಿತಾ ಇದೆ. ಆದರೆ ಅದು ನಮ್ಮ ದೇಶದಲ್ಲಿ ಅಲ್ಲ. ಕುವೈಟ್‌ನಲ್ಲಿ. ಆದರೆ, ಚಪ್ಪಲಿಯ ಬೆಲೆ ವೈರಲ್ (Viral News) ಆಗುತ್ತಿದ್ದಂತೆ ಅದರ ಕುರಿತು ಬಗೆಬಗೆಯ ಕಾಮೆಂಟ್​ಗಳೂ ಶೇರ್ ಆಗುತ್ತಿವೆ. ಬಾತ್​ರೂಮ್​ಗೆ ಹಾಕುವಂಥ ಚಪ್ಪಲಿಗೆ ಇಷ್ಟೊಂದು ರೇಟಾ ಎಂಬುದೇ ಜನರ ಮೊದಲ ಪ್ರಶ್ನೆ.

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಪೋಸ್ಟ್‌ನಲ್ಲಿ ಕುವೈಟ್‌ನ ಸ್ಟೋರ್ ಒಂದರಲ್ಲಿ ಸುಮಾರು 4,500 ರಿಯಾಲ್ (1 ಲಕ್ಷ ರೂ.) ಗೆ ಚಪ್ಪಲಿಗಳನ್ನು ಮಾರಾಟಕ್ಕೆ ಇಡಲಾಗಿದೆ. ಹಾಗೇ ಇದಕ್ಕೆ “4500 ರಿಯಾಲ್ ಬೆಲೆಗೆ ಇತ್ತೀಚಿನ ಫ್ಯಾಷನ್ ಜನೌಬಾ” ಎಂದು ಶೀರ್ಷಿಕೆ ನೀಡಲಾಗಿದೆ. ಇದು ಎಲ್ಲರಿಗೂ ಆಶ್ಚರ್ಯವನ್ನುಂಟುಮಾಡಿದೆ. ಹಾಗಾಗಿ ಜನರು ಸೋಶಿಯಲ್‌ ಮೀಡಿಯಾದಲ್ಲಿ ಇದರ ಬೆಲೆಯ ಬಗ್ಗೆ ಬಗೆಬಗೆಯ ಕಾಮೆಂಟ್​ಗಳನ್ನು ಹಾಕಿದ್ದಾರೆ.

ಒಬ್ಬರು ಇದು ಶ್ರೀಮಂತರಿಗಾಗಿ ಮಾತ್ರ ಮಾರಾಟ ಮಾಡಲಾಗುತ್ತಿದೆ ಎಂದು ಹೇಳಿದರೆ, ಇನ್ನೊಬ್ಬರು “4500 ರಿಯಾಲ್ ಚಪ್ಪಲಿಗಳನ್ನು ಒಮ್ಮೆ ಖರೀದಿಸಿದರೆ ಇಡೀ ಜೀವನದುದ್ದಕ್ಕೂ ಶೌಚಾಲಯಕ್ಕೆ ಹೋಗಲು ಅದನ್ನೇ ಬಳಸಬೇಕಾಗುತ್ತದೆ ಎಂದು ಬರೆದಿದ್ದಾರೆ. ಹಾಗೇ ಮತ್ತೊಬ್ಬರು “ಇದು ನಮ್ಮ ಕುಟುಂಬದಲ್ಲಿ ಬಾತ್‍ರೂಮ್‍ಗೆ ಹೋಗಲು ಬಳಸುವ ಚಪ್ಪಲಿಗಳು” ಎಂದು ಬರೆದಿದ್ದಾರೆ. ಭಾರತದಲ್ಲಿ ನಿಮಗೆ ಈ ಚಪ್ಪಲಿಗಳು 60 ರೂಪಾಯಿಗೆ ಸಿಗುತ್ತದೆ ” ಎಂದು ನಾಲ್ಕನೇ ಬಳಕೆದಾರರು ತಿಳಿಸಿದ್ದಾರೆ.

ಇದನ್ನೂ ಓದಿ: ಚಾಕೋಲೇಟ್ ತಿನ್ನುವ ಆಸೆಯಾಗಿ ಅಂಗಡಿಗೆ ಹೋಗಿದ್ದ ಬಾಲಕ ಶವವಾಗಿ ಮನೆಗೆ ಬಂದ; ಆಗಿದ್ದೇನು? ವಿಡಿಯೊ ನೋಡಿ

ಇನ್ನೊಬ್ಬರು “ಭಾರತದಲ್ಲಿ ನಾವು ಇದನ್ನು ಹೆಚ್ಚಾಗಿ ಶೌಚಾಲಯಕ್ಕೆ ಹೋಗಲು ಬಳಸುತ್ತೇವೆ” ಎಂದು ಬರೆದಿದ್ದಾರೆ. ಮತ್ತೊಬ್ಬ ವ್ಯಕ್ತಿ “ಇದು ನಿಜವಾಗಿಯೂ ತಾಯಂದಿರ ದಿನದ ಅತ್ಯುತ್ತಮ ಉಡುಗೊರೆಯಾಗಿದೆ. ಯಾಕೆಂದರೆ ಎಲ್ಲಾ ತಾಯಂದಿರಿಗೆ ಚಪ್ಪಲಿ ಅತ್ಯುತ್ತಮ ಆಯುಧ” ಎಂದ ಬರೆದುಕೊಂಡಿದ್ದಾರೆ “ಭಾರತದ ಕೆಲವು ಸ್ಥಳಗಳಲ್ಲಿ ಈ ಚಪ್ಪಲಿಗಳು ಕೇವಲ ₹ 30 ಕ್ಕೆ ಪಡೆಯಬಹುದು” ಎಂದು ಒಬ್ಬರು ಹೇಳಿದರೆ, ಈ ಚಪ್ಪಲಿಗಳಿಗೆ ಹವಾಯಿ ಚಪ್ಪಲಿಗಳೆಂದು ಕರೆಯುತ್ತಾರೆ ಎಂದು ಮತ್ತೊಬ್ಬ ಬಳಕೆದಾರರು ಕಾಮೆಂಟ್ ಮಾಡಿದ್ದಾರೆ.

Continue Reading

Latest

Anant Radhika Wedding: ಅಂಬಾನಿ ಮದುವೆಯಲ್ಲಿ ಅತೀ ಹೆಚ್ಚು ಸಂಭಾವನೆ ಪಡೆದ ಸ್ಟಾರ್ ಯಾರು?

ಏಷ್ಯಾದ ಶ್ರೀಮಂತ ವ್ಯಕ್ತಿ ಮುಕೇಶ್ ಅಂಬಾನಿ ಅವರು ಪುತ್ರನ ಮದುವೆಯನ್ನು (Anant Radhika Wedding) ಹತ್ತು ದಿನಗಳ ಅದ್ದೂರಿ ಆಚರಣೆಗಳ ಮೂಲಕ ಸೋಮವಾರ ಮುಂಬಯಿನಲ್ಲಿ ಮುಕ್ತಾಯಗೊಳಿಸಿದರು. ಆದರೆ ಮದುವೆಯ ಪೂರ್ವದ ಹಬ್ಬಗಳು ನಾಲ್ಕು ತಿಂಗಳುಗಳ ಕಾಲ ನಡೆದಿತ್ತು. ಇದರಲ್ಲಿ ಹಲವಾರು ಅಂತಾರಾಷ್ಟ್ರೀಯ ಸೂಪರ್‌ಸ್ಟಾರ್‌ಗಳು ಪ್ರದರ್ಶನ ನೀಡಿದ್ದರು. ಹಲವು ತಾರೆಗಳಿಗೆ ಕೋಟ್ಯಂತರ ರೂ. ಪಾವತಿಸಿ ಕರೆದುಕೊಂಡು ಬರಲಾಗಿತ್ತು.

VISTARANEWS.COM


on

By

Anant Radhika Wedding
Koo

ವಿಶ್ವದಲ್ಲೇ ಅತ್ಯಂತ ದುಬಾರಿ ಮದುವೆಗಳಲ್ಲಿ ಒಂದಾಗಿ ಗುರುತಿಸಿಕೊಂಡ ರಿಲಯನ್ಸ್ ಉದ್ಯಮಿ ಮುಕೇಶ್ ಅಂಬಾನಿ (mukesh ambani) ಮತ್ತು ನೀತಾ ಅಂಬಾನಿ (nita ambani) ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ (Anant Radhika Wedding) ಸಮಾರಂಭಗಳನ್ನು ಜಗತ್ತೇ ಕಣ್ತುಂಬಿಕೊಂಡಿದೆ. ಸಾಕಷ್ಟು ಸೆಲೆಬ್ರಿಟಿಗಳು ಇದರಲ್ಲಿ ಪಾಲ್ಗೊಂಡಿದ್ದು ಮಾತ್ರವಲ್ಲ ಭಾರಿ ಆದಾಯವನ್ನು ಗಳಿಸಿದ್ದಾರೆ. ಇವರಲ್ಲಿ ಅತೀ ಹೆಚ್ಚು ಸಂಭಾವನೆ ಪಡೆದಿರುವವರು ಯಾರಾಗಿರಬಹುದು ಎನ್ನುವ ಕುತೂಹಲ ಎಲ್ಲರಿಗೂ ಇದೆ.

ಏಷ್ಯಾದ ಶ್ರೀಮಂತ ವ್ಯಕ್ತಿ ಮುಕೇಶ್ ಅಂಬಾನಿ ಅವರು ಪುತ್ರನ ಮದುವೆಯನ್ನು ಹತ್ತು ದಿನಗಳ ಅದ್ದೂರಿ ಆಚರಣೆಗಳ ಮೂಲಕ ಸೋಮವಾರ ಮುಂಬಯಿನಲ್ಲಿ ಮುಕ್ತಾಯಗೊಳಿಸಿದರು. ಆದರೆ ಮದುವೆಯ ಪೂರ್ವದ ಹಬ್ಬಗಳು ನಾಲ್ಕು ತಿಂಗಳುಗಳ ಕಾಲ ನಡೆದಿತ್ತು. ಇದರಲ್ಲಿ ಹಲವಾರು ಅಂತಾರಾಷ್ಟ್ರೀಯ ಸೂಪರ್‌ಸ್ಟಾರ್‌ಗಳು ಪ್ರದರ್ಶನ ನೀಡಿದ್ದರು. ಹಲವು ತಾರೆಗಳಿಗೆ ಕೋಟ್ಯಾಂತರ ರೂಪಾಯಿ ಪಾವತಿಸಿ ಕರೆದುಕೊಂಡು ಬರಲಾಗಿತ್ತು. ಅದರಲ್ಲಿ ಒಬ್ಬರು 83 ಕೋಟಿ ರೂ. ಸಂಭಾವನೆ ಪಡೆದಿದ್ದರೆ ಎನ್ನಲಾಗಿದೆ.

Anant Radhika Wedding


ಅತಿ ಹೆಚ್ಚು ಸಂಭಾವನೆ ಪಡೆದ ಸೆಲೆಬ್ರಿಟಿ

ಜುಲೈ 10ರಂದು ಮುಂಬಯಿನಲ್ಲಿ ನಡೆದ ಅನಂತ್ ಮತ್ತು ರಾಧಿಕಾ ಅವರ ಸಂಗೀತ ಸಮಾರಂಭದಲ್ಲಿ ಭಾಗವಹಿಸಲು ಪಾಪ್ ಸೆನ್ಸೇಷನ್ ಜಸ್ಟಿನ್ ಬೈಬರ್ ಆಗಮಿಸಿದ್ದರು. ಕೆನಡಾದ ತಾರೆ ಸಂಗೀತ ಸಮಾರಂಭದಲ್ಲಿ ಪ್ರದರ್ಶನ ನೀಡಲು 10 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 83 ಕೋಟಿ ರೂ. ಶುಲ್ಕ ವಿಧಿಸಿದ್ದಾರೆ ಎನ್ನಲಾಗಿದೆ.

ಜಸ್ಟಿನ್ ಬೈಬರ್ ಅವರ ಹಲವಾರು ಚಾರ್ಟ್‌ಬಸ್ಟರ್‌ಗಳು ಅಂಬಾನಿ ಕುಟುಂಬ, ಸ್ನೇಹಿತರು ಮತ್ತು ಬಾಲಿವುಡ್ ಸ್ಟಾರ್ ಗಳನ್ನು ಆಕರ್ಷಿಸಿತು. ಬೈಬರ್ ಅವರು ಖಾಸಗಿ ಜೆಟ್‌ನಲ್ಲಿ ಭಾರತಕ್ಕೆ ಬಂದು ತೆರಳಿದರು. ಮುಕೇಶ್ ಅಂಬಾನಿ ಅವರ ಪ್ರಯಾಣಕ್ಕಾಗಿ ವಿಶೇಷ ಕಾರು ಮತ್ತು ಮೋಟಾರು ವಾಹನವನ್ನು ನೀಡಿದರು. ಬಿಲಿಯನೇರ್ ಬೈಬರ್‌ಗೆ ಅವರ ಖಾಸಗಿ ಭದ್ರತೆ ಮತ್ತು ಪೊಲೀಸ್ ಸಿಬ್ಬಂದಿಯನ್ನು ಸಹ ಒದಗಿಸಲಾಗಿತ್ತು. ಹಾಗಾಗಿ ಬೈಬರ್‌ ಪಡೆದ ಸಂಭಾವನೆಗಿಂತ ಅವರ ಕಾರುಬಾರಿಗೆ ಮಾಡಿರುವ ಖರ್ಚು ಇನ್ನೂ ಹೆಚ್ಚು ಎನ್ನಲಾಗುತ್ತಿದೆ.

Anant Radhika Wedding


ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು

ಅನಂತ್ ಮತ್ತು ರಾಧಿಕಾ ಅವರ ವಿವಾಹ ಪೂರ್ವ ಕಾರ್ಯಕ್ರಮ ಮಾರ್ಚ್ ನಲ್ಲಿ ಜಾಮ್‌ನಗರದಲ್ಲಿ ಆಯೋಜಿಸಲಾಗಿತ್ತು. ಇದರಲ್ಲಿ ಪಾಪ್ ಸಿಂಗರ್ ರಿಹಾನ್ನಾ ಪ್ರದರ್ಶನ ನೀಡಿದ್ದರು. ಇದಕ್ಕಾಗಿ ಅವರು 6 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 50 ಕೋಟಿ ರೂ. ಶುಲ್ಕ ವಿಧಿಸಿದ್ದಾರೆ ಎನ್ನಲಾಗಿದೆ.

Anant Radhika Wedding


ಯುರೋಪ್‌ನ ದಕ್ಷಿಣ ಕರಾವಳಿಯಲ್ಲಿ ಕ್ರೂಸ್ ಹಡಗಿನಲ್ಲಿ ನಡೆದ ಮತ್ತೊಂದು ವಿವಾಹಪೂರ್ವ ಆಚರಣೆಯಲ್ಲಿ ಷಕೀರಾ ಸ್ಟಾರ್ ಆಕರ್ಷಣೆಯಾಗಿದ್ದರು. ಕೊಲಂಬಿಯಾದ ತಾರೆ ಹಲವಾರು ಮಿಲಿಯನ್ ಡಾಲರ್‌ ಶುಲ್ಕವನ್ನು ವಿಧಿಸಿದ್ದರು.

Anant Radhika Wedding


ಮದುವೆಯ ಸಂಭ್ರಮದಲ್ಲಿ ಇತರ ಅಂತಾರಾಷ್ಟ್ರೀಯ ಗಾಯಕರಾದ ರೆಮಾ ಮತ್ತು ಲೂಯಿಸ್ ಫೊಂಜಿ ಅವರಿಬ್ಬರೂ 3 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 25 ಕೋಟಿ ರೂ. ಶುಲ್ಕವನ್ನು ಪಡೆದರು.

ಇದನ್ನೂ ಓದಿ: Anant Ambani Marriage: ಅಂಬಾನಿ ಮದುವೆ ಸಮಾರಂಭದೊಳಗೆ ನುಸುಳಿದ್ದ ಇಬ್ಬರು ʼನಕಲಿ ಅತಿಥಿʼಗಳ ಬಂಧನ!

ಇವರಿಷ್ಟೇ ಅಲ್ಲದೇ ಸಮಾಜವಾದಿ ಸಹೋದರಿಯರಾದ ಕಿಮ್ ಮತ್ತು ಖ್ಲೋ ಕಾರ್ಡಶಿಯಾನ್ ಮತ್ತು ಕುಸ್ತಿಪಟು-ಹಾಲಿವುಡ್ ತಾರೆ ಜಾನ್ ಸೆನಾ ಕೂಡ ಪಾಲ್ಗೊಂಡಿದ್ದರು.

Continue Reading

ವಿದೇಶ

Oil Tanker Capsizes: ತೈಲ ತುಂಬಿದ್ದ ಹಡಗು ಮುಳುಗಡೆ; 13 ಭಾರತೀಯರು ಜಲಸಮಾಧಿ

Oil Tanker Capsizes:ಕೊಮೊರೊಸ್-ಧ್ವಜದ ತೈಲ ಟ್ಯಾಂಕರ್ ರಾಸ್ ಮದ್ರಕಾದಿಂದ ಆಗ್ನೇಯಕ್ಕೆ 25 ನಾಟಿಕಲ್ ಮೈಲುಗಳಷ್ಟು ದೂರದಲ್ಲಿರುವ ಡುಕ್ಮ್ ಬಂದರು ಪಟ್ಟಣಕ್ಕೆ ಸಮೀಪದಲ್ಲಿ ಮುಳುಗಡೆಯಾಗಿದೆ ಎಂದು MSC X ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದೆ. ಇನ್ನು ದುಕ್ಮ್‌ ಪಟ್ಟಣ ಒಮನ್‌ ಆಗ್ನೇ ಭಾಗದಲ್ಲಿದೆ. ಇನ್ನು ಮುಳುಗಡೆಯಾಗಿರುವ ಹಡಗನ್ನು ಪ್ರೆಸ್ಟೀಜ್ ಫಾಲ್ಕನ್ ಎಂದು ಗುರುತಿಸಲಾಗಿದ್ದು, ಅದರಲ್ಲಿ ಸಿಬ್ಬಂದಿ ಕಣ್ಮರೆಯಾಗಿದ್ದು, ಅವರಿಗಾಗಿ ಹುಡುಕಾಟ ಮುಂದುವರೆದಿದೆ.

VISTARANEWS.COM


on

Oil Tanker Capsizes
Koo

ಒಮನ್‌: ತೈಲ ತುಂಬಿದ್ದ ಹಡಗೊಂದು ಸಮುದ್ರದಲ್ಲಿ ಮುಳುಗಿರುವ ಘಟನೆ ಒಮನ್‌ನಲ್ಲಿ(Oil Tanker Capsizes) ನಡೆದಿದೆ. ಈ ಭಾರೀ ದುರ್ಘಟನೆಯಲ್ಲಿ 13 ಭಾರತೀಯರು ಸೇರಿದಂತೆ ಒಟ್ಟು 16 ನೌಕಾ ಸಿಬ್ಬಂದಿ ಕಣ್ಮರೆಯಾಗಿದ್ದಾರೆ. ಈ ಬಗ್ಗೆ ಸಾಗರ ಭದ್ರತಾ ಕೇಂದ್ರ(MSC) ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದು, ನೌಕೆಯಲ್ಲಿದ್ದ ಇತರ ಮೂವರ ಸಿಬ್ಬಂದಿಗಳು ಶ್ರೀಲಂಕಾ ಮೂಲದವರು ಎನ್ನಲಾಗಿದೆ.

ಕೊಮೊರೊಸ್-ಧ್ವಜದ ತೈಲ ಟ್ಯಾಂಕರ್ ರಾಸ್ ಮದ್ರಕಾದಿಂದ ಆಗ್ನೇಯಕ್ಕೆ 25 ನಾಟಿಕಲ್ ಮೈಲುಗಳಷ್ಟು ದೂರದಲ್ಲಿರುವ ಡುಕ್ಮ್ ಬಂದರು ಪಟ್ಟಣಕ್ಕೆ ಸಮೀಪದಲ್ಲಿ ಮುಳುಗಡೆಯಾಗಿದೆ ಎಂದು MSC X ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದೆ. ಇನ್ನು ದುಕ್ಮ್‌ ಪಟ್ಟಣ ಒಮನ್‌ ಆಗ್ನೇ ಭಾಗದಲ್ಲಿದೆ. ಇನ್ನು ಮುಳುಗಡೆಯಾಗಿರುವ ಹಡಗನ್ನು ಪ್ರೆಸ್ಟೀಜ್ ಫಾಲ್ಕನ್ ಎಂದು ಗುರುತಿಸಲಾಗಿದ್ದು, ಅದರಲ್ಲಿ ಸಿಬ್ಬಂದಿ ಕಣ್ಮರೆಯಾಗಿದ್ದು, ಅವರಿಗಾಗಿ ಹುಡುಕಾಟ ಮುಂದುವರೆದಿದೆ.

ಮತ್ತೊಂದೆಡೆ ಒಮಾನ್‌(Oman)ನ ರಾಜಧಾನಿ ಮಸ್ಕತ್‌(Muscat Terrorist Attack)ನಲ್ಲಿರುವ ವಾದಿ ಕಬೀರ್ ಪ್ರದೇಶದ ಮಸೀದಿಯೊಂದರಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ ಭಾರತೀಯ ಪ್ರಜೆ ಸೇರಿದಂತೆ ಒಟ್ಟು ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ನೂರಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಒಮಾನ್’ನ ಶಿಯಾ ಮುಸ್ಲಿಂ ಮಸೀದಿಯ ಮೇಲೆ ಸೋಮವಾರ ತಡರಾತ್ರಿ ನಡೆದ ದಾಳಿಯಲ್ಲಿ ಮೂವರು ದಾಳಿಕೋರರು ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಂಡಿನ ದಾಳಿಯಲ್ಲಿ ಮೃತಪಟ್ಟವರಲ್ಲಿ ನಾಲ್ವರು ಪಾಕಿಸ್ತಾನಿ ಪ್ರಜೆಗಳು ಮತ್ತು ಒಬ್ಬ ಪೊಲೀಸ್ ಸೇರಿದ್ದಾರೆ ಎಂದು ಪಾಕಿಸ್ತಾನ ಮತ್ತು ಒಮಾನ್ ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿ ಸೇರಿದಂತೆ ವಿವಿಧ ರಾಷ್ಟ್ರಗಳ 28 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಮಾನ್‌ನಲ್ಲಿರುವ ಪಾಕಿಸ್ತಾನಿ ರಾಯಭಾರ ಕಚೇರಿಯು ಗುಂಡಿನ ದಾಳಿಯನ್ನು ಖಂಡಿಸಿದೆ ಮತ್ತು ಸತ್ತ ಪಾಕಿಸ್ತಾನಿಗಳ ಪಾರ್ಥಿವ ಶರೀರವನ್ನು ಮರಳಿ ತರಲು ಒಮಾನಿ ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದೆ ಎಂದು ಹೇಳಿದೆ.

ಇದನ್ನೂ ಓದಿ: Model Arrest: ತನ್ನ ಫಾಲೋವರ್ಸ್‌ಗಳನ್ನೇ ವೇಶ್ಯಾವಾಟಿಕೆಯಲ್ಲಿ ತೊಡಗಿಸುತ್ತಿದ್ದ ಖ್ಯಾತ ಮಾಡೆಲ್‌ಗೆ ಜೈಲು ಶಿಕ್ಷೆ!

Continue Reading

ವಿದೇಶ

Muscat Terrorist Attack: ಮಸ್ಕತ್‌ನಲ್ಲಿ ಉಗ್ರರ ಅಟ್ಟಹಾಸ; ಭಾರತೀಯ ಸೇರಿ 9ಮಂದಿ ಸಾವು

Muscat Terrorist Attack: ಒಮಾನ್’ನ ಶಿಯಾ ಮುಸ್ಲಿಂ ಮಸೀದಿಯ ಮೇಲೆ ಸೋಮವಾರ ತಡರಾತ್ರಿ ನಡೆದ ದಾಳಿಯಲ್ಲಿ ಮೂವರು ದಾಳಿಕೋರರು ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಂಡಿನ ದಾಳಿಯಲ್ಲಿ ಮೃತಪಟ್ಟವರಲ್ಲಿ ನಾಲ್ವರು ಪಾಕಿಸ್ತಾನಿ ಪ್ರಜೆಗಳು ಮತ್ತು ಒಬ್ಬ ಪೊಲೀಸ್ ಸೇರಿದ್ದಾರೆ ಎಂದು ಪಾಕಿಸ್ತಾನ ಮತ್ತು ಒಮಾನ್ ಅಧಿಕಾರಿಗಳು ತಿಳಿಸಿದ್ದಾರೆ

VISTARANEWS.COM


on

Muscat Terrorist Attack
Koo

ಮಸ್ಕತ್: ಒಮಾನ್‌(Oman)ನ ರಾಜಧಾನಿ ಮಸ್ಕತ್‌(Muscat Terrorist Attack)ನಲ್ಲಿರುವ ವಾದಿ ಕಬೀರ್ ಪ್ರದೇಶದ ಮಸೀದಿಯೊಂದರಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ ಭಾರತೀಯ ಪ್ರಜೆ ಸೇರಿದಂತೆ ಒಟ್ಟು ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ನೂರಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಒಮಾನ್’ನ ಶಿಯಾ ಮುಸ್ಲಿಂ ಮಸೀದಿಯ ಮೇಲೆ ಸೋಮವಾರ ತಡರಾತ್ರಿ ನಡೆದ ದಾಳಿಯಲ್ಲಿ ಮೂವರು ದಾಳಿಕೋರರು ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಂಡಿನ ದಾಳಿಯಲ್ಲಿ ಮೃತಪಟ್ಟವರಲ್ಲಿ ನಾಲ್ವರು ಪಾಕಿಸ್ತಾನಿ ಪ್ರಜೆಗಳು ಮತ್ತು ಒಬ್ಬ ಪೊಲೀಸ್ ಸೇರಿದ್ದಾರೆ ಎಂದು ಪಾಕಿಸ್ತಾನ ಮತ್ತು ಒಮಾನ್ ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿ ಸೇರಿದಂತೆ ವಿವಿಧ ರಾಷ್ಟ್ರಗಳ 28 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಮಾನ್‌ನಲ್ಲಿರುವ ಪಾಕಿಸ್ತಾನಿ ರಾಯಭಾರ ಕಚೇರಿಯು ಗುಂಡಿನ ದಾಳಿಯನ್ನು ಖಂಡಿಸಿದೆ ಮತ್ತು ಸತ್ತ ಪಾಕಿಸ್ತಾನಿಗಳ ಪಾರ್ಥಿವ ಶರೀರವನ್ನು ಮರಳಿ ತರಲು ಒಮಾನಿ ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದೆ ಎಂದು ಹೇಳಿದೆ.

ಇದನ್ನೂ ಓದಿ: Sadananda Suvarna : ʼಗುಡ್ಡದ ಭೂತʼ ಖ್ಯಾತಿಯ ಹಿರಿಯ ರಂಗಕರ್ಮಿ, ನಿರ್ದೇಶಕ ಸದಾನಂದ ಸುವರ್ಣ ಇನ್ನಿಲ್ಲ

Continue Reading
Advertisement
ICC T20 Ranking
ಪ್ರಮುಖ ಸುದ್ದಿ11 mins ago

ICC T20 Ranking: ಟಿ20 ರ್ಯಾಂಕಿಂಗ್​ನಲ್ಲಿ ಭರ್ಜರಿ ಬಡ್ತಿ ಪಡೆದ ಯಶಸ್ವಿ ಜೈಸ್ವಾಲ್​, ಶುಭ್​ಮನ್​ ಗಿಲ್​

Viral Video
ವೈರಲ್ ನ್ಯೂಸ್46 mins ago

Viral Video: ಡಿಸಿ ಆಫೀಸ್‌ನಲ್ಲಿ ಗೋಳಾಡುತ್ತಾ ನೆಲದಲ್ಲಿ ಹೊರಳಾಡಿದ ರೈತ; ವೈರಲಾಗ್ತಿದೆ ಈ ವಿಡಿಯೋ

Yezdi Roadster
ಆಟೋಮೊಬೈಲ್1 hour ago

Yezdi Roadster : ಯೆಜ್ಡಿ ರೋಡ್‌ಸ್ಟರ್ ಜತೆಗೆ ಈ ಹಲವು ಆ್ಯಕ್ಸೆಸರಿಗಳಿರುವ ಟ್ರಯಲ್ ಪ್ಯಾಕ್ ಉಚಿತ

Viral Video
ವೈರಲ್ ನ್ಯೂಸ್2 hours ago

Viral Video: 300 ಮೊಸಳೆಗಳಿರುವ ಕೆರೆಯಲ್ಲಿ ಬೈಕ್‌, ಕಾರು ಸ್ಟಂಟ್‌; ಹುಚ್ಚಾಟ ಮೆರೆದ ಯುವಕರಿಗೆ ಆಗಿದ್ದೇನು ಗೊತ್ತಾ?

ಪ್ರಮುಖ ಸುದ್ದಿ2 hours ago

Karnataka Rain: ವರುಣಾರ್ಭಟಕ್ಕೆ ರಾಜ್ಯದ ಹಲವೆಡೆ ನದಿಗಳು ಉಕ್ಕಿ ಹರಿದು ನೆರೆ ಸೃಷ್ಟಿ; ಕುಸಿದ ಸೇತುವೆಗಳು!

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : 8 ಚಿನ್ನ, 1 ಬೆಳ್ಳಿ, 3 ಕಂಚು: ಒಲಿಂಪಿಕ್ಸ್ ಹಾಕಿ ಸ್ಪರ್ಧೆಯಲ್ಲಿ ಭಾರತ ತಂಡದ ಸಾಧನೆಗಳ ವಿವರ ಇಲ್ಲಿದೆ

Viral Video
ವೈರಲ್ ನ್ಯೂಸ್2 hours ago

Viral Video: ಸಫಾರಿಯಲ್ಲಿ ಪ್ರವಾಸಿಗರ ಎದುರೇ ಸಿಂಹಗಳ ಕಾಮಕೇಳಿ!

Olympic Games History
ಕ್ರೀಡೆ2 hours ago

Olympic Games History: ಒಲಿಂಪಿಕ್ಸ್​ನಲ್ಲಿ ಗ್ರೀಸ್​ ದೇಶಕ್ಕೆ ವಿಶೇಷ ಮಾನ್ಯತೆ ನೀಡುವುದೇಕೆ?

Amitabh Bachchan holds umbrella for Jaya Bachchan
ಬಾಲಿವುಡ್2 hours ago

Amitabh Bachchan: ಅಮಿತಾಭ್ ರೊಮ್ಯಾಂಟಿಕ್ ಮೂಡ್‌ನಲ್ಲಿದ್ದರೂ ಮುಖ ಊದಿಸಿಕೊಂಡೇ ಇದ್ದ ಜಯಾ ಬಚ್ಚನ್!

Viral Video
ವೈರಲ್ ನ್ಯೂಸ್3 hours ago

Viral Video: ನೋಡ ನೋಡ್ತಿದ್ದಂತೆ ಮೂರನೇ ಮಹಡಿಯಿಂದ ಬಿದ್ದ ಮಹಿಳೆ; ಶಾಕಿಂಗ್‌ ವಿಡಿಯೋ ವೈರಲ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ3 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ4 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌