Koppala News: ಕನಕಗಿರಿಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ - Vistara News

ಕೊಪ್ಪಳ

Koppala News: ಕನಕಗಿರಿಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ

Koppala News: ಕನಕಗಿರಿ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವ-ಸಹಾಯ ಗುಂಪಿನ ಸದಸ್ಯರಿಗೆ ಹಮ್ಮಿಕೊಳ್ಳಲಾಗಿದ್ದ ಆರು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭ ನಡೆಯಿತು.

VISTARANEWS.COM


on

Entrepreneurship Development Training Concluding Ceremony at Kanakagiri
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕನಕಗಿರಿ: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವ-ಸಹಾಯ ಗುಂಪಿನ ಸದಸ್ಯರಿಗೆ ಹಮ್ಮಿಕೊಳ್ಳಲಾಗಿದ್ದ ಆರು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭ (Koppala News) ನಡೆಯಿತು.

ಇದನ್ನೂ ಓದಿ: KSRTC Package Tour: ಸೋಮನಾಥಪುರ, ತಲಕಾಡು, ಮಧ್ಯರಂಗ, ಭರಚುಕ್ಕಿ, ಗಗನಚುಕ್ಕಿಗೆ ಕೆಎಸ್‌ಆರ್‌ಟಿಸಿ ಪ್ಯಾಕೇಜ್‌ ಟೂರ್‌; ದರವೆಷ್ಟು?

ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಬೆಂಗಳೂರು, ಸಂಜೀವಿನಿ-ಕೆ.ಎಸ್.ಆರ್.ಎಲ್.ಪಿ.ಎಸ್ ಬೆಂಗಳೂರು, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಕೊಪ್ಪಳ ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಜಶೇಖರ್‌ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.

ಇದನ್ನೂ ಓದಿ: Karnataka Rain : ಭಾರಿ ಮಳೆ ಎಫೆಕ್ಟ್‌-ಮಲಗಿದ್ದ‌ ವ್ಯಕ್ತಿ ಮೇಲೆ ಬಿದ್ದ ಗೋಡೆ; ಮರ ಬಿದ್ದು ಕಾರು ಜಖಂ, ಚಾಲಕ ಜಸ್ಟ್‌ ಮಿಸ್‌

ಈ ಸಂಧರ್ಭದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಭಾರಿ ಪ್ರಾಂಶುಪಾಲ ಮಾರೆಪ್ಪ ಎನ್‌., ತಾಲೂಕಿನ ವಲಯ ಮೇಲ್ವೀಚಾರಕಿ ರೇಣುಕಾ ಕೆ ದೇವರಮನಿ, ಸಿಡಾಕ್‌ ಸಂಸ್ಥೆಯ ತರಬೇತಿ ಸಂಯೋಜಕರಾದ ಅಕ್ಷತಾ ಮತ್ತು ಶೋಭಾ, ಸಂಜೀವಿನಿ ಯೋಜನೆಯ ಬಿಆರ್‌ಪಿ ಇಪಿ ಮತ್ತು ಉದ್ಯಮಶೀಲತಾ ತರಬೇತಿಗೆ ಹಾಜರಾದ ಸ್ವ ಸಹಾಯ ಗುಂಪಿನ ಮಹಿಳಾ ಸದಸ್ಯರು ಪಾಲ್ಗೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ನಾಳೆಗೂ ಮಳೆ ಮುನ್ನೆಚ್ಚರಿಕೆ; ಸೆ.30ರವರೆಗೆ ಈ ಪ್ರವಾಸಿ ತಾಣಗಳಲ್ಲಿ ಟ್ರಕ್ಕಿಂಗ್‌ ನಿಷೇಧ

Karnataka Weather Forecast : ಬುಧವಾರವೂ ಗುಡುಗು ಸಹಿತ ಭಾರಿ ಮಳೆಯಾಗುವ (Heavy rain alert) ಸಾಧ್ಯತೆ ಇದೆ. ಚಿಕ್ಕಮಗಳೂರಿನಲ್ಲಿ ಅಬ್ಬರಿಸುತ್ತಿರುವ ಮಳೆ ಕಾರಣಕ್ಕೆ ಎರಡೂವರೆ ತಿಂಗಳು ಕೆಲವು ಪ್ರವಾಸಿತಾಣಗಳಿಗೆ ಟ್ರಕ್ಕಿಂಗ್‌ ನಿಷೇಧಿಸಲಾಗಿದೆ.

VISTARANEWS.COM


on

By

karnataka weather Forecast
Koo

ಚಿಕ್ಕಮಗಳೂರು/ಬೆಂಗಳೂರು: ರಾಜ್ಯಾದ್ಯಂತ ನೈರುತ್ಯ ಮುಂಗಾರು (karnataka Weather Forecast) ಸಕ್ರಿಯವಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯು (Heavy Rain Alert) ಅಬ್ಬರಿಸುತ್ತಿದ್ದು, ಆಗುಂಬೆ 33, ಅಂಕೋಲಾ 26, ಕಾರವಾರ 23, ಹಾಗೂ ಗೇರ್ಸೊಪ್ಪ 21 ಸೆಂ.ಮೀ ಮಳೆಯಾಗಿದೆ. ಇನ್ನೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೆಪ್ಟೆಂಬರ್ 30ರವರೆಗೆ ಚಾರಣಕ್ಕೆ ನಿಷೇಧಿಸಲಾಗಿದೆ.

ಚಿಕ್ಕಮಗಳೂರಿನ ಬಲ್ಲಾಳ ರಾಯನ ದುರ್ಗ, ರಾಣಿಝರಿ, ಬಂಡಾಜೆ ಫಾಲ್ಸ್ ಟ್ರಕ್ಕಿಂಗ್‌ಗೆ ನಿರ್ಬಂಧ ಹಾಕಲಾಗಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಭಾರಿ ಮಳೆಯಿಂದಾಗಿ ನೀರಿನ ಹರಿವು ಹೆಚ್ಚಳಗೊಂಡಿದೆ. ಪ್ರವಾಸಿಗರು ಚಾರಣದ ವೇಳೆ ಅಪಾಯಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಿದೆ. ಪ್ರವಾಸಿಗರ ಹಿತದೃಷ್ಟಿಯಿಂದ ಮೂಡಿಗೆರೆ ತಾಲೂಕಿನ ಬಲ್ಲಾಳ ರಾಯನ ದುರ್ಗ ಪ್ರವಾಸಿ ತಾಣ, ಕಳಸ ತಾಲೂಕಿನ ಬಂಡಾಜೆ ಫಾಲ್ಸ್‌ಗೆ ಕೊಪ್ಪ ವಿಭಾಗದ ಅರಣ್ಯ ಇಲಾಖೆ ಈ ಕ್ರಮಕೈಗೊಂಡಿದೆ.

ಇದನ್ನೂ ಓದಿ: Muharram 2024: ರಾಯಚೂರಿನಲ್ಲಿ ಮೊಹರಂನಲ್ಲಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ವ್ಯಕ್ತಿ ಸುಟ್ಟು ಭಸ್ಮ

ಶಿವಮೊಗ್ಗದಲ್ಲಿ ಕುಸಿದು ಬಿದ್ದ ಮನೆ

ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಮನೆಯೊಂದು ಕುಸಿದು ಬಿದ್ದಿದೆ. ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಕುಸ್ಕೂರು ಗ್ರಾಮದಲ್ಲಿ ಘಟನೆ ನಡೆದಿದೆ. ಮಂಜಾನಾಯ್ಕ ಎಂಬುವವರಿಗೆ ಸೇರಿದ ಮನೆ ಕುಸಿದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಮನೆಯಲ್ಲಿದ್ದ ಗೃಹ ಬಳಕೆ ವಸ್ತುಗಳು ನೀರುಪಾಲಾಗಿವೆ.

ಉಡುಪಿಯಲ್ಲಿ ಮಳೆಗೆ ಉಕ್ಕಿ ಹರಿದ ಬ್ರಹ್ಮಾವರ ಮಡಿಸಾಲು ಹೊಳೆ

ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಳೆಗೆ ಬ್ರಹ್ಮಾವರ ಮಡಿಸಾಲು ಹೊಳೆ ಉಕ್ಕಿ ಹರಿದಿದೆ. ಇದರಿಂದಾಗಿ ಆರೂರು ಬೆಳ್ಮಾರು ನೆರೆ ಹಾವಳಿ ಸೃಷ್ಟಿಯಾಗಿದೆ. ನೂರಾರು ಎಕರೆ ಕೃಷಿ ಭೂಮಿ ನೆರೆ ನೀರಿನಲ್ಲಿ ಮುಳುಗಿ ನಷ್ಟವಾಗಿದೆ. ಮಂಗಳವಾರ ಮಧ್ಯಾಹ್ನದ ನಂತರ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆ ಆಗಿದೆ. ಆದರೂ ಘಟ್ಟ ಪ್ರದೇಶದಿಂದ ಹರಿದು ಬರುತ್ತಿರುವ ನೀರಿನಿಂದಾಗಿ ನೆರೆ ಸೃಷ್ಟಿಯಾಗುತ್ತಿದೆ.

ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ

ಮುಂದಿನ 24 ಗಂಟೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಗಾಳಿಯ ವೇಗವು 30-40 ಕಿಮೀ ತಲುಪುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಜತೆಗೆ ನಿರಂತರ ಗಾಳಿಯ ವೇಗವು 40-50 ಕಿಮೀ ಇರಲಿದೆ. ಒಳನಾಡಿನ ಬೆಳಗಾವಿ ಮತ್ತು ಹಾಸನ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯು ಅಬ್ಬರಿಸಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆ ಎಫೆಕ್ಟ್‌-ಮಲಗಿದ್ದ‌ ವ್ಯಕ್ತಿ ಮೇಲೆ ಬಿದ್ದ ಗೋಡೆ; ಮರ ಬಿದ್ದು ಕಾರು ಜಖಂ, ಚಾಲಕ ಜಸ್ಟ್‌ ಮಿಸ್‌

Karnataka Rain : ಹಾಸನದಲ್ಲಿ ಭಾರಿ ಮಳೆಗೆ (Rain Effect) ತೆಂಗಿನ ಮರ ಧರೆಗುರುಳಿ ಕಾರು ಜಖಂಗೊಂಡರೆ, ಹಾವೇರಿಯಲ್ಲಿ ಮಲಗಿದ್ದ ವ್ಯಕ್ತಿ ಮೇಲೆ ಗೋಡೆ ಕುಸಿದಿದೆ. ನಾವುಂದ ಬಡಾಕೆರೆಯಲ್ಲಿ ನೆರೆ ಸೃಷ್ಟಿಯಾಗಿದ್ದು, ಜನರನ್ನು ಬೋಟ್‌ ಮೂಲಕ ರಕ್ಷಣೆ ಮಾಡಲಾಗಿದೆ.

VISTARANEWS.COM


on

By

Karnataka Rain
Koo

ಹಾಸನ/ಹಾವೇರಿ : ಹಾಸನದಲ್ಲಿ ಭಾರಿ ವರ್ಷಧಾರೆಗೆ (Karnataka Rain) ತೆಂಗಿನ ಮರ ಧರೆಗುರುಳಿದೆ. ಏಕಾಏಕಿ ಮಾರುತಿ ಓಮ್ನಿ ಕಾರಿನ ಮೇಲೆ‌ ಮರವು ಮುರಿದು ಬಿದ್ದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಗ್ರಾಮದಲ್ಲಿ ಘಟನೆ ನಡೆದಿದೆ. ಯಸಳೂರು ಪೊಲೀಸ್ ಠಾಣೆ ಎದುರು ಚಾಲಕ ಕಾರು ಪಾರ್ಕಿಂಗ್ ಮಾಡಿ ತೆರಳಿದ್ದರು. ಈ ವೇಳೆ ಏಕಾಏಕಿ ಯಸಳೂರು ಪೊಲೀಸ್ ಠಾಣೆ ಆವರಣದಲ್ಲಿದ್ದ ತೆಂಗಿನಮರ ಕಾರಿನ ಮೇಲೆ ಬಿದ್ದು ಜಖಂಗೊಂಡಿದೆ. ಅದೃಷ್ಟವಶಾತ್ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಾವೇರಿಯಲ್ಲಿ ಮನೆಗಳ ಗೋಡೆ ಕುಸಿತ

ಹಾವೇರಿ: ಜಿಟಿ ಜಿಟಿ ಮಳೆಗೆ ಎರಡು ಮನೆಗಳ ಗೋಡೆ ಕುಸಿದಿದೆ. ಹಾವೇರಿಯ ರಟ್ಟಿಹಳ್ಳಿ ತಾಲೂಕಿನ ‌ಮೇದೂರು ಗ್ರಾಮದ ರೇಷ್ಮಾ ನ್ಯಾಮತಿ ಎಂಬುವರ ಮನೆಗೆ ಹಾನಿಯಾಗಿದೆ. ಶಿಗ್ಗಾವಿ ತಾಲೂಕಿನ ಕುನ್ನೂರು ಗ್ರಾಮದ ಮಹಾದೇವಿ ತಳವಾರ ಎಂಬುವರ ಮನೆ ಗೋಡೆ ಕುಸಿದು ಬಿದ್ದಿದೆ. ಮನೆಯಲ್ಲಿ ‌ಮಲಗಿದ್ದ ವೇಳೆ ಈ ಅವಘಡ ನಡೆದಿದೆ. ರಾಮಪ್ಪ ತಳವಾರ ಎಂಬುವರ ಮೇಲೆ ಗೋಡೆ ಕುಸಿದು ಗಾಯಗೊಂಡಿದ್ದಾದೆ. ರಾಮಪ್ಪ ಗಣೇಶನ ಮೂರ್ತಿಗಳನ್ನು ತಯಾರಿಸಿ ಜೀವನ ನಡೆಸುತ್ತಿದ್ದರು. ಮನೆ ಗೋಡೆ ಕುಸಿದ ಹಿನ್ನೆಲೆಯಲ್ಲಿ 300 ಗಣೇಶನ ಮೂರ್ತಿಗಳಿಗೆ ಹಾನಿಯಾಗಿದೆ.

ನಾವುಂದ ಬಡಾಕೆರೆಯಲ್ಲಿ ನೆರೆ; ಬೋಟ್‌ ಮೂಲಕ ರಕ್ಷಣೆ

ಉಡುಪಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ನಾವುಂದ ಬಡಾಕೆರೆಯಲ್ಲಿ ಮತ್ತೆ ನೆರೆ ಸೃಷ್ಟಿಯಾಗಿದೆ. ಬೈಂದೂರು ತಾಲೂಕಿನ ನಾವುಂದದಲ್ಲಿ ಮಳೆಗಾಲದಲ್ಲಿ 4 ಬಾರಿ ನೆರೆ ಕಟ್ಟಿಟ್ಟ ಬುತ್ತಿಯಾಗಿದೆ. ನೆರೆಯಿಂದಾಗಿ ನೂರಾರು ಎಕರೆ ಕೃಷಿ ಭೂಮಿ ಜಲಾವೃತಗೊಂಡಿದೆ. ನಾವುಂದ ಬಡಾಕೆರೆಯಲ್ಲಿ ಹಲವಾರು ಮನೆಗಳು ಜಲಾವೃತಗೊಂಡಿದ್ದು, ದೋಣಿ ಮೂಲಕ ರಕ್ಷಣೆ ಮಾಡಲಾಗಿದೆ.

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನಾದ್ಯಂತ ನೆರೆ ಹಾವಳಿ ಸೃಷ್ಟಿಯಾಗಿದೆ. ಸೀತಾ ನದಿ ತುಂಬಿ ಹರಿಯುತ್ತಿದ್ದು, ಕೋಟ ಬನ್ನಾಡಿ ಭಾಗದಲ್ಲಿ ನೆರೆಯಾಗಿದೆ. ಹೀಗಾಗಿ ಬನ್ನಾಡಿ, ಬೇಳೂರು, ಕೋಟ ವ್ಯಾಪ್ತಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿದರು. ಜತೆಗೆ ಡಿಸಿ ವಿದ್ಯಾಕುಮಾರಿ ,ಸಿಇಒ ಪ್ರತೀಕ್ ಬಾಯಲ್ ಸಾಥ್ ನೀಡಿದರು. ಶಿರಿಯಾರದಲ್ಲಿ ನೆರೆಪೀಡಿತರನ್ನು ಎತ್ತರದ ಪ್ರದೇಶಕ್ಕೆ ಶಿಫ್ಟ್ ಮಾಡಲಾಯಿತು.

ಭಾರಿ ಮಳೆಗೆ ಬಾಯ್ಬಿಟ್ಟ ಭೂಮಿ!

ಭಾರಿ ಮಳೆಗೆ ಏಕಾಏಕಿ ಮನೆಯೊಂದರ ಪಕ್ಕ ಅಪಾಯಕಾರಿ ಗುಂಡಿ ನಿರ್ಮಾಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ರಾಜಾರಾಂಪುರ ಕಾಲನಿಯಲ್ಲಿ ಘಟನೆ ನಡೆದಿದೆ. ರಾಜಾರಾಂಪರ ಕಾಲನಿ ನಿವಾಸಿ ವಿಶೇಷ ಚೇತನ ಬಾಳಪ್ಪ ಎಂಬುವವರ ಮನೆ ಪಕ್ಕ ಸುಮಾರು ಒಂದು ಫೀಟ್ ಅಂತರದಲ್ಲೇ ಭೂಮಿ ಬಾಯ್ಬಿಟ್ಟಿದೆ. ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಸುಮಾರು 15-20ಫೀಟ್ ಆಳವಾಗದ ಸುರಂಗದ ರೀತಿಯ ಗುಂಡಿ ನಿರ್ಮಾಣವಾಗಿದೆ. ಜತೆಗೆ ಗುಂಡಿ ಒಳಗಿನ ಸುರಂಗದಿಂದ ನೀರು ಉಕ್ಕಿ ಬರುತ್ತಿದೆ. ಅಪಾಯದಂಚಿನಲ್ಲಿರುವ ಸಂಪಾಜೆ ಗ್ರಾಮದ ನಿವಾಸಿ ಬಾಳಪ್ಪ ಮನೆಯವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ.

ಕೆರೆಯಂತಾದ ರೈಲ್ವೆ ಅಂಡರ್‌ ಪಾಸ್‌

ರಾಯಚೂರಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ಅವಾಂತರ ಸೃಷ್ಟಿಯಾಗಿದೆ. ನೀರು ನಿಂತು ರೈಲ್ವೆ ಅಂಡರ್ ಪಾಸ್ ಕೆರೆಯಂತಾಗಿತ್ತು. ಕರೇಕಲ್ ಗ್ರಾಮದ ರೈಲ್ವೆ ಅಂಡರ್ ಪಾಸ್‌ನಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡಿದರು. ಇತ್ತ ವರದಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗುತ್ತಿದ್ದು, ಜೀವದ ಹಂಗು ತೊರೆದು ಜನರು ಬ್ರಿಜ್ಡ್ ಕಂ ಬ್ಯಾರೇಜ್ ಮೇಲೆ ವಾಹನ ಚಲಾಯಿಸುತ್ತಿದ್ದಾರೆ. ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಕಳಸೂರು ಗ್ರಾಮದ ಬ್ರಿಜ್ಡ್ ಕಂ ಬ್ಯಾರೇಜ್ ಮೇಲೆ ನೀರು ಹರಿಯುತ್ತಿದೆ. ಕಳಸೂರು ಮತ್ತು ಕೊಳೂರ ನಡುವೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದೆ.

ಅವೈಜ್ಞಾನಿಕ ಕಾಮಗಾರಿಯಿಂದ ರಸ್ತೆ ಕುಸಿತ

ಅವೈಜ್ಞಾನಿಕ ಕಾಮಗಾರಿಯಿಂದ ಭಾರಿ ಮಳೆಗೆ ರಸ್ತೆ ಕುಸಿದಿದೆ. ನಿಂತ ಜಾಗದಲ್ಲಿಯೇ ಲಾರಿಯೊಂದು ಒಂದು ಬದಿಗೆ ಜಾರಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಸರಕು ತುಂಬಿದ್ದ ಲಾರಿ ರಸ್ತೆ ಪಕ್ಕಕ್ಕೆ ಜಾರಿದ್ದು, ತಡೆಗೋಡೆ ಇಲ್ಲದಿದ್ದರೆ ಪ್ರಪಾತಕ್ಕೆ ಉರುಳಿ ಬೀಳುವ ಸಾಧ್ಯತೆ ಇದೆ. ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ. ಹಾಸನ ರಾಷ್ಟ್ರೀಯ ಹೆದ್ದಾರಿ 75 ರ ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆ ಬಳಿ ಘಟನೆ ನಡೆದಿದೆ. ಸ್ಥಳಕ್ಕೆ ಸಕಲೇಶಪುರ ಎಸಿ ಶೃತಿ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಭಾರಿ ಮಳೆಗೆ ಗ್ರಾಮದ ಮುಖ್ಯ ರಸ್ತೆ ನದಿಯಂತಾಗಿತ್ತು. ಚಿಕ್ಕಮಗಳೂರು ತಾಲೂಕಿನ ಬಾಸಪುರ ಗ್ರಾಮದಲ್ಲಿ ಗುಡ್ಡದಿಂದ ರಸ್ತೆಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಬಾಸಾಪುರ ಸೇರಿ ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ತೋಟಕ್ಕೆ ನೀರು ನುಗ್ಗಿ ಕಾಫಿ ಬೆಳೆ ನಾಶವಾಗಿದೆ.

Rain Effect.. karnataka Rain Effect

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Rain Effect : ಭಾರಿ ಮಳೆಗೆ ಶಿರೂರು ಗುಡ್ಡ ಕುಸಿತ; ಮಣ್ಣಿನಡಿ ಸಿಲುಕಿದ್ದ ಮಹಿಳೆ ಮೃತದೇಹ ಪತ್ತೆ, ಉಳಿದವರಿಗಾಗಿ ಹುಡುಕಾಟ

Rain Effect : ಉತ್ತರಕನ್ನಡದಲ್ಲಿ ಭಾರಿ ಮಳೆಗೆ (Karnataka Rain Effect) ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಬಳಿ ಭಾರೀ ಗುಡ್ಡಕುಸಿತ (Karnataka Rain) ಉಂಟಾಗಿದ್ದು, ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ.

VISTARANEWS.COM


on

By

Rain Effect
Koo

ಉತ್ತರಕನ್ನಡ: ಉತ್ತರಕನ್ನಡದಲ್ಲಿ ಭಾರಿ ಮಳೆಗೆ (Karnataka Rain Effect) ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಬಳಿ ಭಾರೀ ಗುಡ್ಡಕುಸಿತ (Karnataka Rain) ಉಂಟಾಗಿತ್ತು. ಧಾರಾಕಾರ ಮಳೆಯಿಂದಾಗಿ ಹೆದ್ದಾರಿ ಪಕ್ಕದ ಗುಡ್ಡ ಸಡಿಲಗೊಂಡು, ಅಂಕೋಲಾ ತಾಲೂಕಿನ ಶಿರೂರು ಬಳಿ ಅಂಗಡಿಯೊಂದರ ಮೇಲೆ ಬಿದ್ದಿತ್ತು. ಇದೀಗ ಮಣ್ಣಿನಡಿ ಸಿಲುಕಿ ಮೃತಪಟ್ಟ ಮಹಿಳೆಯೊಬ್ಬರ ಮೃತದೇಹ (Rain Effect) ಪತ್ತೆಯಾಗಿದೆ.

ಉತ್ತರ ಕನ್ನಡದ ಅಂಕೋಲಾ ಗುಡ್ಡ ಕುಸಿತ ಪ್ರದೇಶಕ್ಕೆ ಕುಮಟಾ ಎಸಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಬಳಿ ಗುಡ್ಡ ಕುಸಿದಿದೆ. ಗುಡ್ಡದ ಮಣ್ಣಿನಡಿ 10ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ ಇದ್ದು, ಒಂದೇ ಕುಟುಂಬದ ಐವರು ಸೇರಿ ಹತ್ತಕ್ಕೂ ಅಧಿಕ ಮಂದಿ ಕಣ್ಮರೆಯಾಗಿದ್ದಾರೆ ಎನ್ನಲಾಗಿದೆ. ಗುಡ್ಡ ಕುಸಿದ ರಭಸಕ್ಕೆ ನದಿಗೆ 2 ಗ್ಯಾಸ್ ಟ್ಯಾಂಕರ್‌ಗಳು ಕೊಚ್ಚಿ ಹೋಗಿದೆ. ಗುಡ್ಡದ ಕೆಳಗಿದ್ದ ಲಾರಿ, ಮತ್ತೊಂದು ಟ್ಯಾಂಕರ್‌ ಹಾಗೂ ಚಾಲಕರು ಪಾರಾಗಿದ್ದಾರೆ.

ಅಂಕೋಲಾ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಹಿತಿ ನೀಡಿದ್ದಾರೆ. ಅವಘಡದಲ್ಲಿ 7 ಮಂದಿ ಸಾವನ್ನಪ್ಪಿರಬಹುದು, ಆದರೆ ಇನ್ನೂ ಕೂಡಾ ಖಚಿತ ಮಾಹಿತಿ ಬರಬೇಕಿದೆ ಎಂದಿದ್ದಾರೆ. ಸದ್ಯ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಎಷ್ಟು ಸಾವಾಗಿದೆ ಹೇಳುವುದು ಸಾಧ್ಯವಿಲ್ಲ. ಕಾರ್ಯಾಚರಣೆಗೆ ಅಗತ್ಯ ಸಲಕರಣೆಗಳು ಸಾಕಾಗುತ್ತಿಲ್ಲ. ಹೀಗಾಗಿ ಕುಮಟಾ ಹಾಗೂ ಅಂಕೋಲಾ ಎರಡೂ ಕಡೆಯಿಂದ ಕಾರ್ಯಾಚರಣೆಗೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲು ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ. ಜೆಸಿಬಿ, ಹಿಟಾಚಿ ಮತ್ತಿತರ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗುವುದು ಎಂದರು.

ಮಳೆ ನಡುವೆಯೂ ಶೋಧ ಕಾರ್ಯ

ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ಐವರು ಸೇರಿ 7 ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ ಶಾಂತಿ ನಾಯ್ಕ ಎಂಬ ಮಹಿಳೆಯ ಶವ ಪತ್ತೆಯಾಗಿದ್ದು, ಮಣ್ಣಿನ ಅಡಿ ಸಿಲುಕಿರುವ ಇನ್ನೂ ಆರು ಮಂದಿಗಾಗಿ ಶೋಧ ನಡೆಯುತ್ತಿದೆ.

ಮಳೆ ನಡುವೆಯೂ ಬೆಳಗ್ಗೆಯಿಂದಲೂ ಜೆಸಿಬಿ ಮೂಲಕ ಮಣ್ಣು ತೆಗೆಯುವ ಕೆಲಸ ನಡೆಯುತ್ತಿದೆ. ರಕ್ಷಣಾ ಕಾರ್ಯಾಚರಣೆಗಾಗಿ ಸ್ಥಳಕ್ಕೆ ಎನ್‌ಡಿಆರ್‌ಎಫ್‌ ತಂಡ ಭೇಟಿ ನೀಡಿದೆ. ಹೆದ್ದಾರಿ ಬಂದ್ ಆಗಿದ್ದರಿಂದ ಯಲ್ಲಾಪುರ ಮಾರ್ಗವಾಗಿ ಶಿರೂರಿಗೆ ಆಗಮಿಸಿದ್ದಾರೆ. ಕಾರ್ಯಾಚರಣೆಗೆ ಧಾರಾಕಾರ ಮಳೆಯು ಅಡ್ಡಿಯಾಗುತ್ತಿದೆ. ಸ್ಥಳದಲ್ಲಿ ಪೊಲೀಸ್, ತಾಲ್ಲೂಕಾಡಳಿತದ ಅಧಿಕಾರಿಗಳು ಬೀಡುಬಿಟ್ಟಿದ್ದಾರೆ.

ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಲಾರಿಯಲ್ಲಿ ಹೊರಟ ಅಧಿಕಾರಿಗಳು

ಕಾರವಾರ ತಾಲೂಕಿನ ಅರಗಾ ಬಳಿ ನೀರು ನಿಂತು ಹೆದ್ದಾರಿ ಬಂದ್ ಆಗಿದೆ. ಅಪಾರ ಪ್ರಮಾಣದಲ್ಲಿ ನೀರು ನಿಂತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ, ಜಿಲ್ಲಾ ಪಂಚಾಯತ್ ಸಿಇಒ ಈಶ್ವರ್ ಕಾಂದೂ ಹಾಗೂ ಎಸ್‌ಪಿ ಎಂ ನಾರಾಯಣ್ ಲಾರಿ ಮೂಲಕ ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ.

ಮಾಲೀಕರಿಗಾಗಿ ಹುಡುಕಾಟ ನಡೆಸಿದ ಶ್ವಾನ

ಇತ್ತ ಶ್ವಾನವೊಂದು ಮಣ್ಣು ಕುಸಿದ ಪ್ರದೇಶದಲ್ಲಿ ಮಾಲೀಕನನ್ನು ಹುಡುಕಾಡುತ್ತಿದೆ. ರಸ್ತೆಯಲ್ಲಿ ಅತ್ತಿಂದಿತ್ತ ಓಡಾಡುತ್ತಾ ಜನರ ಮುಖ ನೋಡಿ ಶ್ವಾನ ಮರುಗುತ್ತಿದೆ. ಟೀ ಸ್ಟಾಲ್ ಮಾಲೀಕ ಲಕ್ಷ್ಮಣ ನಾಯ್ಕಗೆ ಸೇರಿದ ಶ್ವಾನವು ಗೋಳಾಡುತ್ತಿದೆ. ಈಗಾಗಲೇ ಮಣ್ಣಿನಡಿ ಸಿಲುಕಿದ್ದ ಲಕ್ಷ್ಮಣ ಅವರ ಪತ್ನಿ ಶಾಂತಿ ನಾಯ್ಕ ಶವ ಪತ್ತೆಯಾಗಿದೆ. ಇನ್ನುಳಿದವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಅಂಕೋಲಾ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.ಕೆ ಮಾಹಿತಿ ನೀಡಿದ್ದಾರೆ. ಒಂದು ಕುಟುಂಬದ ಐವರು, ಎದುರು ಮನೆಯ ಓರ್ವರು ಕಣ್ಮರೆಯಾಗಿದ್ದಾಗಿ ನಮಗೆ ಮಾಹಿತಿ ಇದೆ. ಈಗಾಗಲೇ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಉಳಿದವರಿಗಾಗಿ ಈಗಾಗಲೇ ಶೋಧ ಕಾರ್ಯ ನಡೆಯುತ್ತಿದೆ. ಗುಡ್ಡದ ಕೆಳಗಿದ್ದ 3 ಗ್ಯಾಸ್ ಟ್ಯಾಂಕರ್ ಪೈಕಿ ಎರಡು ನದಿಗೆ ಬಿದ್ದಿವೆ. ಎರಡು ಟ್ಯಾಂಕರ್‌ಗಳನ್ನು ಮೇಲೆತ್ತಲು ನೌಕಾನೆಲೆ ಹಾಗೂ ತಜ್ಞರ ತಂಡದೊಂದಿಗೆ ಪ್ರಯತ್ನ ನಡೆಯುತ್ತಿದೆ. ಕಾರ್ಯಾಚರಣೆಗೆ ಅಗತ್ಯ ಜೆಸಿಬಿ, ಹಿಟಾಚಿ ಸೇರಿ ಎಲ್ಲ ವ್ಯವಸ್ಥೆ ಮಾಡಲಾಗಿದೆ. ಕಾರ್ಯಾಚರಣೆ ನಡೆಯುತ್ತಿರುವ ಸ್ಥಳದಿಂದ ಸಾರ್ವಜನಿಕರನ್ನು ಹೊರಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

ಭಾರಿ ಮಳೆಗೆ ವರ್ಷದ ಹಿಂದೆ ನಿರ್ಮಿಸಿದ ಸೇತುವೆ ಕುಸಿತ

ಉಡುಪಿಯ ಕುಂದಾಪುರ ತಾಲೂಕು ಹಾಲಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭರಣಕೊಳ್ಕಿಯಲ್ಲಿ ವರ್ಷದ ಹಿಂದೆ ನಿರ್ಮಿಸಿದ ಸೇತುವೆ ಭಾರಿ ಮಳೆಗೆ ಕುಸಿದಿದೆ. ಹಾಲಾಡಿಯಿಂದ ಜೋರಾಡಿ ಮುದ್ದೂರು ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದೆ. ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಇದೆ ಸೇತುವೆಯನ್ನೇ ಬಳಸಬೇಕಿತ್ತು. ಕಳಪೆ ಕಾಮಗಾರಿ ಹಿನ್ನೆಲೆಯಲ್ಲಿ ಸೇತುವೆ ಕುಸಿದಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಸೇತುವೆ ವರ್ಷದ ಒಳಗೆ ನೀರುಪಾಲಾಗಿದೆ.

ಚಿಕ್ಕಮಗಳೂರಲ್ಲಿ ಮರ ಬಿದ್ದು ಮನೆಗಳು ಜಖಂ

ಪುನರ್ವಸು ಮಳೆ ಅಬ್ಬರಕ್ಕೆ ಚಿಕ್ಕಮಗಳೂರು ತತ್ತರಿಸಿ ಹೋಗಿದೆ. ಭಾರೀ ಗಾಳಿ-ಮಳೆಗೆ ಮರಗಳು ಧರೆಗುರುಳುತ್ತಿವೆ. ಮೂಡಿಗೆರೆ ತಾಲೂಕಿನ ಬಾಳೂರು ಗುಡ್ಡಟ್ಟಿ ಗ್ರಾಮದಲ್ಲಿ ಮನೆ ಮೇಲೆ ಮರ ಬಿದ್ದಿದೆ. ನವೀನ್, ಶೇಷಪ್ಪ ಎಂಬುವರಿಗೆ ಸೇರಿದ ಮನೆಗಳು ಜಖಂಗೊಂಡಿವೆ. ಮನೆಯಲ್ಲಿದ್ದ ಗೃಹ ಉಪಯೋಗಿ ವಸ್ತುಗಳು ನಾಶವಾಗಿವೆ. ಮೂಡಿಗೆರೆ ತಾಲೂಕಿನ ಕೆಳಗೂರು ಗ್ರಾಮದ ಮೂಲೆಮನೆ ಎಸ್ಟೇಟ್‌ನಲ್ಲಿ ಭಾರಿ ಗಾಳಿ, ಮಳೆಗೆ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದಿತ್ತು. ಪರಿಣಾಮ ಮನೆಯಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದೆ. ಮನೆಯಲ್ಲಿದ್ದ ಪೂರ್ಣಿಮಾ, ಪ್ರಣಬ್ ಎಂಬುವವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇತ್ತ ಭಾರೀ ಮಳೆಯಿಂದ ಹೇಮಾವತಿ ನದಿ ಮೈದುಂಬಿ ಹರಿಯುತ್ತಿದೆ. ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮದಲ್ಲಿ ಹುಟ್ಟುವ ಹೇಮಾವತಿ ನದಿ ಗೊರೂರು ಡ್ಯಾಂ ಮೂಲಕ ಕೆ.ಆರ್.ಎಸ್. ಡ್ಯಾಂ ಸೇರಲಿದೆ.

ತುಂಗಾ ನದಿಯಲ್ಲಿ ಮುಳುಗಿದ ಮಂಟಪ

ಮಲೆನಾಡು ಭಾಗದಲ್ಲಿ ನಿರಂತರ ವರ್ಷಧಾರೆ ಹಿನ್ನೆಲೆಯಲ್ಲಿ ತುಂಗಾ ನದಿ ಉಕ್ಕಿ ಹರಿಯುತ್ತಿದ್ದು, ಮಂಟಪ ಮುಳುಗಿದೆ. ಶಿವಮೊಗ್ಗ ನಗರ ಮಧ್ಯೆ ಸಾಗುವ ತುಂಗಾ ನದಿಗೆ ತಾಗಿಕೊಂಡಿರುವ ಮಂಟಪ ಮುಳುಗಿದೆ. ಶಿವಮೊಗ್ಗ ನಗರದ ಕೋರ್ಪಲಯ್ಯನ ಛತ್ರದ ಬಳಿಯಿರುವ ಮಂಟಪ ಸಂಪೂರ್ಣವಾಗಿ ಮುಳುಗಿದೆ. ನದಿ ಪಾತ್ರದಲ್ಲಿ ಹೆಚ್ಚು ಜನರು ಓಡಾಡದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಎಸ್‌ಪಿ ಮಿಥುನ್ ಕುಮಾರ್ ನದಿ ಪಾತ್ರದಲ್ಲಿ ಪೊಲೀಸರ ಬೀಟ್ ವ್ಯವಸ್ಥೆ ಮಾಡಿದ್ದಾರೆ.

ದತ್ತ ಮಂದಿರಕ್ಕೆ ಸುತ್ತುವರಿದ ಕೃಷ್ಣೆ

ಮಹಾರಾಷ್ಟ್ರದ ಪ್ರಸಿದ್ಧ ದೇವಸ್ಥಾನ ದತ್ತ ಮಂದಿರಕ್ಕೆ ಕೃಷ್ಣೆ ನದಿ ಸುತ್ತುವರಿದಿದೆ. ಕೊಲ್ಹಾಪುರ ಜಿಲ್ಲೆಯ ಶಿಳೋಳ‌ ತಾಲೂಕಿನ‌ ನರಸಿಂಹವಾಡಿಯಲ್ಲಿರುವ ದತ್ತ ಮಂದಿರ ಜಲಾವೃತಗೊಂಡಿದೆ. ನರಸಿಂಹವಾಡಿ ಕೃಷ್ಣಾ ಹಾಗೂ ಪಂಚಗಂಗಾ ನದಿಗಳ ಸಂಗಮಸ್ಥಾನವಾಗಿದೆ. ಜಲಾವೃತವಾಗಿದ್ದರೂ ದೇವಸ್ಥಾನಕ್ಕೆ ಭಕ್ತರ ದಂಡು ಹರಿದು ಬಂಧಿದೆ. ನಡು ಮಟ್ಟದ ನೀರಲ್ಲಿಯೇ ಪ್ರದಕ್ಷಿಣೆ ಹಾಕುತ್ತಿದ್ದಾರೆ.

ಕೋಟ ಸಾಹೇಬ್ರಕಟ್ಟೆ ರಾಜ್ಯ ಹೆದ್ದಾರಿ ಸಂಪರ್ಕ ಬಂದ್

ಉಡುಪಿಯ ಕೋಟ ಸಾಹೇಬ್ರಕಟ್ಟೆ ರಾಜ್ಯ ಹೆದ್ದಾರಿ ಸಂಪರ್ಕ ಬಂದ್ ಆಗಿದೆ. ಕೋಟ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಬನ್ನಾಡಿಹೊಳೆ ತುಂಬಿ ಹರಿದಿದೆ. ರಾಜ್ಯ ಹೆದ್ದಾರಿ ಬನ್ನಾಡಿ ಭಾಗದಲ್ಲಿ ಪ್ರತಿ ವರ್ಷವೂ ಕಾಣಿಸಿಕೊಳ್ಳುವ ನೆರೆಹಾವಳಿಯಿಂದಾಗಿ ಸಂಚಾರ ಅಸಾಧ್ಯವಾಗಿರುವ ಹಿನ್ನೆಲೆಯಲ್ಲಿ ಹೆದ್ದಾರಿ ಬಂದ್ ಮಾಡಲಾಗಿದೆ. ಸ್ಥಳಕ್ಕೆ ಕುಂದಾಪುರ ಎಸಿ ರಶ್ಮಿ ಭೇಟಿ ನೀರಿ ಪರಿಶೀಲನೆ ನಡೆಸಿದ್ದಾರೆ. ಇತ್ತ ಕುಂದಾಪುರ ವಾರಾಹಿ ಸೌಪರ್ಣಿಕ ನದಿ ಭರ್ತಿಯಾಗಿದೆ. ಕುಂದಾಪುರದ ನದಿ ಸಾಲಿನಲ್ಲಿ ನೆರೆಯ ವಾತಾವರಣ ನಿರ್ಮಾಣವಾಗಿದೆ. ಬೇಳೂರು ದೇಲಟ್ಟು ಭಾಗದಿಂದ ಜನರ ಸ್ಥಳಾಂತರ ಮಾಡಲಾಗಿದೆ. ಕುಂದಾಪುರ ಅಗ್ನಿಶಾಮಕ ದಳದ ಕಾರ್ಯಾಚರಣೆ ನಡೆಸುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

Karnataka Rain: ಉತ್ತರ ಕನ್ನಡದಲ್ಲಿ ವಿಪರೀತ ಮಳೆಯಾಗುತ್ತಿದ್ದು, ಸಾವು-ನೋವಿಗೆ ಕಾರಣವಾಗುತ್ತಿದೆ. ಶಿರೂರಿನಲ್ಲಿ ಗುಡ್ಡ ಕುಸಿತ ಉಂಟಾಗಿದ್ದರೆ, ಇತ್ತ ಕಿನ್ನರ ಗ್ರಾಮದಲ್ಲಿ ಮನೆ ಮೇಲೆ ಗುಡ್ಡ ಬಿದ್ದು, ಗೋಡೆ ಕುಸಿದು ವೃದ್ಧರೊಬ್ಬರು ಮೃತಪಟ್ಟಿದ್ದಾರೆ.

VISTARANEWS.COM


on

By

Karnataka Rain
Koo

ಉತ್ತರಕನ್ನಡ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕಿನ್ನರ ಗ್ರಾಮದಲ್ಲಿ ಭಾರಿ ಮಳೆಗೆ (Karnataka Rain) ಮನೆ ಮೇಲೆ ಗುಡ್ಡ ಬಿದ್ದ ಪರಿಣಾಮ ಗೋಡೆ ಕುಸಿದಿದೆ. ಮಣ್ಣಿನಡಿ ಸಿಲುಕಿದ್ದ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ತಿಕರ್ಸ್ ಗುರವ (60) ಮೃತ ದುರ್ದೈವಿ.

ಮನೆಯ ಮೇಲೆ ಏಕಾಏಕಿ ಗುಡ್ಡ ಕುಸಿದ ಪರಿಣಾಮ ಗೋಡೆಯಡಿ ಸಿಲುಕಿದ ತಿಕರ್ಸ್‌ ತಲೆಗೆ ಗಂಭೀರ ಪೆಟ್ಟಾಗಿತ್ತು. ಏಕಾಏಕಿ ಮನೆ ಗೋಡೆ ಕುಸಿದ ಪರಿಣಾಮ ಹೊರ ಬರಲು ಆಗದೆ ಮೃತಪಟ್ಟಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಸುಮಾರು 3 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮೃತದೇಹ ಹೊರತೆಗೆದಿದ್ದಾರೆ. ಸ್ಥಳದಲ್ಲಿ ತಹಶಿಲ್ದಾರ್, ಕಾರವಾರ ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಅಧಿಕಾರಿಗಳು ದೌಡು

ಇನ್ನೂ ಉತ್ತರ ಕನ್ನಡದ ಅಂಕೋಲಾ ಗುಡ್ಡ ಕುಸಿತ ಪ್ರದೇಶಕ್ಕೆ ಕುಮಟಾ ಎಸಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಬಳಿ ಗುಡ್ಡ ಕುಸಿದಿದೆ. ಗುಡ್ಡದ ಮಣ್ಣಿನಡಿ 10ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ ಇದ್ದು, ಒಂದೇ ಕುಟುಂಬದ ಐವರು ಸೇರಿ ಹತ್ತಕ್ಕೂ ಅಧಿಕ ಮಂದಿ ಕಣ್ಮರೆಯಾಗಿದ್ದಾರೆ. ಗುಡ್ಡ ಕುಸಿದ ರಭಸಕ್ಕೆ ನದಿಗೆ 2 ಗ್ಯಾಸ್ ಟ್ಯಾಂಕರ್‌ಗಳು ಕೊಚ್ಚಿ ಹೋಗಿದೆ. ಗುಡ್ಡದ ಕೆಳಗಿದ್ದ ಲಾರಿ, ಮತ್ತೊಂದು ಟ್ಯಾಂಕರ್‌ ಹಾಗೂ ಚಾಲಕರು ಪಾರಾಗಿದ್ದಾರೆ.

ಅಂಕೋಲಾ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಹಿತಿ ನೀಡಿದ್ದಾರೆ. ಅವಘಡದಲ್ಲಿ 7 ಮಂದಿ ಸಾವನ್ನಪ್ಪಿರಬಹುದೆಂದು ಮಾಹಿತಿ ಲಭ್ಯವಾಗಿದೆ. ಇನ್ನೂ ಕೂಡಾ ಖಚಿತ ಮಾಹಿತಿ ಬರಬೇಕಿದೆ. ಸದ್ಯ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಎಷ್ಟು ಸಾವಾಗಿದೆ ಹೇಳುವುದು ಸಾಧ್ಯವಿಲ್ಲ. ಕಾರ್ಯಾಚರಣೆಗೆ ಅಗತ್ಯ ಸಲಕರಣೆಗಳು ಸಾಕಾಗುತ್ತಿಲ್ಲ. ಹೀಗಾಗಿ ಕುಮಟಾ ಹಾಗೂ ಅಂಕೋಲಾ ಎರಡೂ ಕಡೆಯಿಂದ ಕಾರ್ಯಾಚರಣೆಗೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲು ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ. ಜೆಸಿಬಿ, ಹಿಟಾಚಿ ಮತ್ತಿತರ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗುವುದು ಎಂದರು.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

ಶಿವಮೊಗ್ಗದಲ್ಲಿ ಮನೆ ಮೇಲೆ ಮರ ಬಿದ್ದು ಹಾನಿ

ಶಿವಮೊಗ್ಗದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹೊಸನಗರ ತಾಲೂಕಿನ ಯಡೂರು ಗ್ರಾಮದಲ್ಲಿ ಮನೆಗೆ ಹಾನಿಯಾಗಿದೆ. ಮನೆ ಮೇಲೆ ಮರ ಬಿದ್ದು, ಚಾವಣಿ ಕುಸಿದು ಬಿದ್ದಿದೆ. ಜತೆಗೆ ನೀರು ನುಗ್ಗಿ, ಮನೆಯಲ್ಲಿರುವ ಗೃಹೋಪಯೋಗಿ ವಸ್ತುಗಳು ನೀರುಪಾಲಾಗಿದೆ. ನಿಂಗಮ್ಮ ಎಂಬುವರಿಗೆ ಸೇರಿದ ಮನೆಯು ಹಾನಿಯಾಗಿದ್ದು, ಸೂಕ್ತ ಪರಿಹಾರಕ್ಕೆ ಒತ್ತಾಯಿಸಿದ್ದಾರೆ.

ಹಾಸನದಲ್ಲಿ ಕರೆಂಟ್‌ ಕಟ್‌

ಹಾಸನ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಅಪಾರ ಪ್ರಮಾಣದ ಹಾನಿಯಾಗಿದೆ. ಸಕಲೇಶಪುರ ತಾಲೂಕಿನ ಮಾವಿನೂರು, ಕಾಗಿನೆರೆ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ವಿದ್ಯುತ್ ಇಲ್ಲದೆ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಮತ್ತೊಂದು ಕಡೆ ಸಕಲೇಶಪುರ ತಾಲೂಕಿನ ಗಡಿ ಗ್ರಾಮ ತಂಬಲಗೇರಿಯಲ್ಲಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದೆ. ಪುಟ್ಟೇಗೌಡ ಎಂಬುವವರ ಸೇರಿದ ಮನೆಯು ಹಾನಿಯಾಗಿದೆ. ಜತೆಗೆ ಗದ್ದೆಗಳಿಗೆ ಮಣ್ಣು ಕುಸಿದು, ಭತ್ತ ಸಸಿಗಳು ಮಣ್ಣಿನಡಿ ಸಿಲುಕಿದೆ. ತಂಬಲಗೇರಿ ಗ್ರಾಮದ ಲೋಕೇಶ್ ಹಾಗೂ ಇತರೆ ಗ್ರಾಮಸ್ಥರಿಗೆ ಸೇರಿದ ಭತ್ತದ ಗದ್ದೆಗಳು ಕೆರೆಯಂತಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Mosaic of Modernity art exhibition by Gallery G in Bengaluru
ಕರ್ನಾಟಕ23 mins ago

Bengaluru News: ಬೆಂಗಳೂರಿನಲ್ಲಿ ಗ್ಯಾಲರಿ ಜಿ ಯಿಂದ ‘ಮೊಸಾಯಿಕ್ ಆಫ್ ಮಾಡರ್ನಿಟಿ’ ಕಲಾ ಪ್ರದರ್ಶನ

Viral Video
ವೈರಲ್ ನ್ಯೂಸ್26 mins ago

Viral Video: ಪಕ್ಷದ ಕಾರ್ಯಕರ್ತನಿಗೆ ರಪ್‌ ಅಂತಾ ಕೆನ್ನೆಗೆ ಬಾರಿಸಿದ ಟಿಎಂಸಿ ನಾಯಕಿ; ವಿಡಿಯೋ ಇದೆ

T20 World Cup 2024
ಪ್ರಮುಖ ಸುದ್ದಿ1 hour ago

T20 World Cup 2024 : 30 ಎಸೆತಕ್ಕೆ 30 ರನ್​ ಇದ್ದಾಗ ದಿಕ್ಕೇ ತೋಚದಂತಾಗಿದ್ದೆ! ಆ ತಲ್ಲಣ ವಿವರಿಸಿದ ಶರ್ಮಾ

Assembly Session
ಕರ್ನಾಟಕ1 hour ago

Assembly Session: ಅಧಿಕಾರಿಗಳು ಮಾಡಿದ ಅಕ್ರಮಕ್ಕೆ ಸಚಿವರ ವಿರುದ್ಧ ಆರೋಪಿಸುವುದು ಸರಿಯಲ್ಲ ಎಂದ ಡಿಕೆಶಿ!

A 15 year old boy weighing 111 kg underwent successful spinal disc surgery that avoided potential paralysis
ಕರ್ನಾಟಕ1 hour ago

Fortis Hospital: 111 ಕೆಜಿ ತೂಕವಿದ್ದ ಬಾಲಕನಿಗೆ ಪಾರ್ಶ್ವವಾಯು ತಪ್ಪಿಸಿದ ʼಬೆನ್ನೆಲುಬಿನ ಡಿಸ್ಕ್ʼ ಶಸ್ತ್ರಚಿಕಿತ್ಸೆ

Pooja Khedkar
ದೇಶ2 hours ago

Pooja Khedkar: ಪೂಜಾ ಖೇಡ್ಕರ್‌ ಪುಣೆ ಜಿಲ್ಲಾಧಿಕಾರಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ

Larva survey Show the old photo without GPS and get crores of rupees to the government Cheating Alleged by MLC TA Sharavana
ಕರ್ನಾಟಕ2 hours ago

Assembly Session: ಲಾರ್ವಾ ಸರ್ವೇ; ಜಿಪಿಎಸ್ ಇಲ್ಲದ ಹಳೆ ಫೋಟೋ ತೋರಿಸಿ ಕೋಟ್ಯಂತರ ರೂ. ಮೋಸ; ಶರವಣ ಆರೋಪ

A permanent solution to artificial flood on national highways says MP Vishweshwar Hegde Kageri
ಉತ್ತರ ಕನ್ನಡ2 hours ago

Uttara Kannada News: ರಾಷ್ಟ್ರೀಯ ಹೆದ್ದಾರಿಯಲ್ಲಿ ಕೃತಕ ನೆರೆ ತಡೆಗೆ ಶಾಶ್ವತ ಪರಿಹಾರ; ಕಾಗೇರಿ

ಕರ್ನಾಟಕ2 hours ago

Dengue Fever: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳಲ್ಲಿ ತೀವ್ರ ಏರಿಕೆ; ಮಂಗಳವಾರ 487 ಕೇಸ್‌ ಪತ್ತೆ!

Chennai Super King
ಕ್ರೀಡೆ2 hours ago

Chennai Super King : ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಕ್ರಿಕೆಟ್ ಅಕಾಡೆಮಿ ಆರಂಭಿಸಿದ ಚೆನ್ನೈ ಸೂಪರ್ ಕಿಂಗ್ಸ್​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ10 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ12 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 day ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌