Children Mobile Addiction: ನಮ್ಮ ಮಕ್ಕಳು ಎಷ್ಟು ಹೊತ್ತು ಮೊಬೈಲ್‌ ನೋಡಬಹುದು? - Vistara News

ಆರೋಗ್ಯ

Children Mobile Addiction: ನಮ್ಮ ಮಕ್ಕಳು ಎಷ್ಟು ಹೊತ್ತು ಮೊಬೈಲ್‌ ನೋಡಬಹುದು?

Children Mobile Addiction: ಮಕ್ಕಳಿಗೆ ದಿನದ ಸ್ಕ್ರೀನ್‌ ಸಮಯ ಎಷ್ಟಿರಬೇಕು? ಚಿಣ್ಣರು ಕೇಳುವಷ್ಟು ಹೊತ್ತೇ? ಹೆತ್ತವರಿಗೆ ಅನುಕೂಲ ಅಥವಾ ಪುರುಸೊತ್ತು ಆಗುವಲ್ಲಿಯವರೆಗೇ? ದಿನಕ್ಕಿಷ್ಟು ಹೊತ್ತು ಎಂದು ನಿಗದಿ ಮಾಡುವುದು ಸೂಕ್ತವೇ? ಹೆಚ್ಚು ಸಮಯ ಪರದೆಗೆ ಅಂಟಿಕೊಂಡಿದ್ದರೆ ಸಮಸ್ಯೆಯೇನು? ಇಂಥ ಹಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ. ಮಕ್ಕಳ ಕೈಯಲ್ಲಿ ಸದಾ ಗೆಜೆಟ್‌ ಇದ್ದರೆ ಏನಾಗುತ್ತದೆ ಎಂಬುದನ್ನು ಅರ್ಥ ಮಾಡಿಸುವ ಮಾಹಿತಿ ಇಲ್ಲಿದೆ.

VISTARANEWS.COM


on

Children Mobile Addiction
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಕ್ಕಳೆಂದರೆ ಹಾರಾಡುವ (Children Mobile Addiction) ಬಣ್ಣದ ಚಿಟ್ಟೆಗಳೆಂಬ (butterfly) ಭಾವ ಇತ್ತೀಚೆಗೆ ಕಡಿಮೆಯಾಗುತ್ತಿದೆ. ಕೂತಲ್ಲೇ ಅಂಟಿಕೊಂಡು, ಕರೆದರೂ ಕೇಳದ ಸ್ಥಿತಿಯಲ್ಲಿ, ಮಾತು ಬಾರದವರಂತೆ, ಎದುರಿನವರ ಪರಿಚಯವೂ ಇಲ್ಲದಂತೆ, ಹಸಿವೆ-ನೀರಡಿಕೆಗಳ ಪರಿವೆಯಿಲ್ಲದಂತೆ ಕೂತಿರುತ್ತಾರೆ… ಕೈಯಲ್ಲೊಂದು ಮೊಬೈಲು (mobile) ಹಿಡಿದು.

ಅದನ್ನು ಅವರ ಕೈಯಿಂದ ಕಿತ್ತರೆ ಟ್ಯಾಬ್‌ ಹಿಡಿಯುತ್ತಾರೆ, ಅದನ್ನೂ ಕಸಿದುಕೊಂಡರೆ ಎಲ್ಲಿ ಲ್ಯಾಪ್‌ಟಾಪ್‌ ಸಿಗುವಂತಿದೆ ನೋಡುತ್ತಾರೆ, ಕಡೆಗೆ ಟಿವಿಯಾದರೂ ಬೇಕು. ಅಂತೂ ಕೈಯಲ್ಲೊಂದು ಸ್ಕ್ರೀನ್‌ ಇಲ್ಲದಿದ್ದರೆ ಮಕ್ಕಳು ತಾವಾಗಿರುವುದಿಲ್ಲ ಎಂಬಂತೆ ಭಾಸವಾಗುತ್ತದೆ. ಅವರನ್ನೇ ಬಿಟ್ಟರೆ ಎಚ್ಚರ ಇದ್ದಷ್ಟೂ ಹೊತ್ತು ಕೈಯಲ್ಲಿ ಗೆಜೆಟ್‌ ಹಿಡಿದೇ ಇರುತ್ತಾರೆ. ಆದರೆ ಚಿಕ್ಕ ಮಕ್ಕಳು, ಅಂದರೆ ನಾಲ್ಕು-ಐದು ವರ್ಷದ ಒಳಗಿನ ಮಕ್ಕಳು ದಿನಕ್ಕೆ ಎಷ್ಟು ಹೊತ್ತು ಸ್ಕ್ರೀನ್‌ ನೋಡಬಹುದು?

ಜಾರಿಕೊಳ್ಳುತ್ತಿದ್ದಾರೆ ಹೆತ್ತವರು

ಹೆತ್ತವರ ವಿಷಯಕ್ಕೆ ಬಂದರೆ, ಬಹಳ ಮಂದಿಗೆ ಮಕ್ಕಳು ತಮ್ಮಷ್ಟಕ್ಕೆ ತಾವಿರುವುದು ಅನುಕೂಲವೇ. ಅವರು ಏನಾದರೂ ಮಾಡಿಕೊಳ್ಳಲಿ, ತಮ್ಮ ತಂಟೆಗೆ ಬಾರದಿದ್ದರೆ ಸಾಕು ಎಂಬ ಮನಸ್ಥಿತಿ ಹೆಚ್ಚಿವರದ್ದು. ಇದಕ್ಕೆ ಕಾರಣಗಳೂ ಇಲ್ಲದಿಲ್ಲ.

ದಿನವಿಡೀ ದುಡಿದು ಹೈರಾಣಾಗಿ ಬಂದ ದೊಡ್ಡವರಿಗೂ ತಮ್ಮದೇ ಆದ ಸಮಯ ಬೇಕು. ಮನೆಯದ್ದೇ ಆದ ನಿತ್ಯದ ಕೆಲಸಗಳನ್ನು ನಿಭಾಯಿಸಬೇಕು. ಮಾರನೇ ದಿನಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಇದಿಷ್ಟರ ನಡುವೆ ಮಕ್ಕಳನ್ನೂ ಸುಧಾರಿಸಬೇಕೆಂದರೆ…? ಹಾಗಾಗಿ ಸುಲಭದ ಉಪಾಯವೆಂಬಂತೆ ಅವರ ಕೈಗೊಂದು ಗೆಜೆಟ್‌ ಕೊಟ್ಟರೆ ಮುಗಿಯಿತು ಸಮಸ್ಯೆ. ಆದರಿದು ಸಾಧುವೇ? ಮಕ್ಕಳ ದೈಹಿಕ, ಮಾನಸಿಕ ಬೆಳವಣಿಗೆಗಳ ಗತಿಯೇನು?ಮನೆಯಲ್ಲಿ ದೊಡ್ಡವರೂ ಕೈಯಲ್ಲಿರುವ ಮೊಬೈಲ್‌ ಗೀರುವುದನ್ನೇ ಮಕ್ಕಳು ಸದಾ ಕಾಣುವಾಗ ಅದನ್ನು ತಪ್ಪು ಎಂದು ಹೇಳುವುದು ಹೇಗೆ? ಅದು ಒಳ್ಳೆಯದಲ್ಲ ಎಂದು ಅರ್ಥ ಮಾಡಿಸುವುದು ಹೇಗೆ?

Children Mobile Addiction


ಏನಾಗುತ್ತದೆ?

ಮಕ್ಕಳ ಕೈಯಲ್ಲಿ ಸದಾ ಗೆಜೆಟ್‌ ಇದ್ದರೆ ಏನಾಗುತ್ತದೆ ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳೋಣ. ದಿನಕ್ಕೆ ಮಿತಿಮೀರಿದ ಸ್ಕ್ರೀನ್‌ ಸಮಯದಿಂದಾಗಿ ಮಕ್ಕಳಲ್ಲಿ ಏಕಾಗ್ರತೆಯ ತೀವ್ರ ಸಮಸ್ಯೆ ಉಂಟಾಗುತ್ತದೆ. ಸಾಮಾಜಿಕ ಸಂಬಂಧಗಳು ಕಳಚಿ ಒಂಟಿತನದ ಭಾವನೆ ಎಳವೆಯಿಂದಲೇ ಬರುತ್ತದೆ. ಗಮನ ಸೆಳೆಯುವುದಕ್ಕಾಗಿ ರಚ್ಚೆ ಹಿಡಿಯುವ, ಅತಿಯಾದ ಚಂಚಲತೆಯನ್ನು ತೋರಿಸುತ್ತಾರೆ.

ಗಮನ ಕೊರತೆಯ ಅಸ್ವಸ್ಥತೆ (hyperactivity and attention deficit disorder) ಎಂದು ಕರೆಯಲಾಗುವ ಈ ಸಮಸ್ಯೆಯು ಮೆದುಳಿನ ಸಾಮರ್ಥ್ಯವನ್ನು ಕುಗ್ಗಿಸುತ್ತದೆ. ಈ ಎಲ್ಲವುಗಳ ಫಲವಾಗಿ, ಈ ಮಕ್ಕಳಲ್ಲಿ ಋಣಾತ್ಮಕ ವರ್ತನೆಗಳು ಕಂಡುಬರುತ್ತವೆ. ಶಿಸ್ತಿಲ್ಲದ, ಯಾವ ನಿಬಂಧನೆಗಳಿಗೂ ಒಳಪಡದ, ನಂಟುಗಳನ್ನೂ ಹಚ್ಚಿಕೊಳ್ಳದ ಬೀಡುಬೀಸಾದ ವರ್ತನೆ ಚಿಕ್ಕಂದಿನಲ್ಲೇ ಕಾಣಿಸಿಕೊಳ್ಳುತ್ತದೆ.

ದೃಷ್ಟಿದೋಷ

ಕೈಯಲ್ಲಿ ಹಿಡಿದು ನೋಡುವಂಥ ಗೆಜೆಟ್‌ಗಳನ್ನು ಸಾಮಾನ್ಯವಾಗಿ 2 ಅಡಿಗಿಂತ ಕಡಿಮೆ ಅಂತರಲ್ಲಿ ಇರಿಸಿಕೊಂಡು ವಾಚಿಸುತ್ತಾರೆ ಮಕ್ಕಳು. ಇದರಿಂದ ದೃಷ್ಟಿದೋಷವೂ ಹೆಚ್ಚುತ್ತದೆ. ಮೊದಲಿಗಿಂತ ಅತಿ ಹೆಚ್ಚಿನ ಪ್ರಮಾಣದಲ್ಲಿ ಬಾಲವಾಡಿಯ ಮಕ್ಕಳ ಕಣ್ಣಿಗೆ ಕನ್ನಡಕಗಳು ಬಂದಿರುವುದನ್ನು ಕಾಣಬಹುದು.

ದೈಹಿಕ ಆರೋಗ್ಯ

ಕೂತಲ್ಲೇ ಕೂತು ಕಳೆಯುವುದಾದರೆ ದೇಹ ಸ್ವಾಸ್ಥ್ಯ ಹಾಳಾಗುವುದೇ ತಾನೇ? ಮಕ್ಕಳೆಂದರೆ ಚಟುವಟಿಕೆಯ ಚಿಲುಮೆಗಳಂತೆ ಇರಬೇಕಾದವರು. ಓಡುವವರನ್ನು ಹಿಡಿದು ಕೂರಿಸುವುದು ಹೇಗೆ ಎಂದು ಹೆತ್ತವರು ಚಿಂತಿಸಬೇಕು. ಆದರೆ ಈಗಿನ ದಿನಗಳಲ್ಲಿ ಕೂತವರನ್ನು ಎಬ್ಬಿಸಿ ಆಡುವುದಕ್ಕೆ ಹೊರಗೆ ಕಳಿಸುವುದು ಹೇಗೆ ಎಂಬ ಚಿಂತೆಯಲ್ಲಿದ್ದರೆ ಸಹ.

Children Mobile Addiction


ಮಿತಿ ಎಷ್ಟು?

ದೊಡ್ಡ ಮಕ್ಕಳಿಗೆ ಶಾಲೆಯಿಂದ ಬರುವ ಹೋಮ್ ವರ್ಕ್‌ ಸಲುವಾಗಿ ಒಂದಿಷ್ಟು ಹೊತ್ತು ಪರದೆಯ ಮುಂದೆ ಕೂರುವುದು ಅನಿವಾರ್ಯವಾಗಬಹುದು. ಅದರ ಹೊರತಾಗಿ ಎಷ್ಟು ಹೊತ್ತು ಪರದೆಗೆ ಅಂಟಿಕೊಂಡಿರುತ್ತಾರೆ ಎಂಬುದನ್ನು ಗಮನಿಸಿ.

ಇದನ್ನೂ ಓದಿ: Smartphone Charging Tips: ನಿಮ್ಮ ಸ್ಮಾರ್ಟ್ ಪೋನ್ ಬ್ಯಾಟರಿ ಹೆಚ್ಚು ಬಾಳಿಕೆ ಬರಲು ಹೀಗೆ ಮಾಡಿ

ಶಾಲೆಯ ದಿನಗಳಲ್ಲಿ ಅನಗತ್ಯ ಸ್ಕ್ರೀನ್‌ ಸಮಯ ಇಲ್ಲದಿದ್ದರೇ ಒಳಿತು. ರಜೆಯ ದಿನಗಳಲ್ಲಿ ಪರದೆಯ ಪರಿಮಿತಿಯನ್ನು ಒಂದು ತಾಸಿಗೆ ನಿಗದಿಗೊಳಿಸಿ. ಬಾಲವಾಡಿ ಅಥವಾ ಅದಕ್ಕಿಂತ ಚಿಕ್ಕ ಮಕ್ಕಳಿಗೆ ದಿನಕ್ಕೆ ಒಂದು ತಾಸಿನ ಸ್ಕ್ರೀನ್‌ ಸಮಯ ಸಾಕಾಗುತ್ತದೆ. ಉಳಿದ ಸಮಯವನ್ನು ಅರ್ಥಪೂರ್ಣವಾಗಿ ಕಳೆಯುವುದು ಹೇಗೆ ಎಂಬುದನ್ನು ಹೆತ್ತವರೇ ನಿರ್ಧರಿಸಬೇಕಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Fortis Hospital: 111 ಕೆಜಿ ತೂಕವಿದ್ದ ಬಾಲಕನಿಗೆ ಪಾರ್ಶ್ವವಾಯು ತಪ್ಪಿಸಿದ ʼಬೆನ್ನೆಲುಬಿನ ಡಿಸ್ಕ್ʼ ಶಸ್ತ್ರಚಿಕಿತ್ಸೆ

Fortis Hospital: ಬೆನ್ನುಮೂಳೆಯ ಡಿಸ್ಕ್‌ಲೊಕೇಟ್ ಆಗಿದ್ದ ಪರಿಣಾಮ, ಪಾರ್ಶ್ವವಾಯುಗೆ ಒಳಗಾಗುವ ಸಾಧ್ಯತೆ ಇದ್ದ 111 ಕೆ.ಜಿ. ತೂಕದ 15 ವರ್ಷದ ಬಾಲಕನಿಗೆ, ‘ಮೈಕ್ರೋ-ಲುಂಬಾರ್ ಡಿಸ್ಸೆಕ್ಟಮಿ’ ಎಂಬ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಯನ್ನು ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಮಾಡಿದೆ.

VISTARANEWS.COM


on

A 15 year old boy weighing 111 kg underwent successful spinal disc surgery that avoided potential paralysis
Koo

ಬೆಂಗಳೂರು: ಬೆನ್ನುಮೂಳೆಯ ಡಿಸ್‌ಲೋಕೇಟ್ ಆಗಿದ್ದ ಪರಿಣಾಮ ಪಾರ್ಶ್ವವಾಯುವಿಗೆ ಒಳಗಾಗುವ ಸಾಧ್ಯತೆ ಇದ್ದ 111 ಕೆ.ಜಿ. ತೂಕದ 15 ವರ್ಷದ ಬಾಲಕನಿಗೆ, ‘ಮೈಕ್ರೋ-ಲುಂಬಾರ್ ಡಿಸ್ಸೆಕ್ಟಮಿ’ ಎಂಬ ಬೆನ್ನು ಮೂಳೆಯ ಶಸ್ತ್ರಚಿಕಿತ್ಸೆಯನ್ನು ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆ (Fortis Hospital) ವೈದ್ಯರ ತಂಡ ಯಶಸ್ವಿಯಾಗಿ ಮಾಡಿದೆ.

ಫೋರ್ಟಿಸ್‌ ಆಸ್ಪತ್ರೆಯ ನರಶಸ್ತ್ರಚಿಕಿತ್ಸಕ ಸಲಹೆಗಾರ ಡಾ. ಗಣೇಶ್ ವಿ. ನೇತೃತ್ವದ ತಂಡ ಒಂದು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದೆ. ಈ ಕುರಿತು ಮಾತನಾಡಿದ ಅವರು, 111 ಕೆ.ಜಿ. ತೂಕದ ಹೊಂದಿದ್ದ 15 ವರ್ಷದ ಸೈಯದ್ ಸಲಾಹುದೀನ್ ಕ್ವಾದ್ರಿ ಎಂಬ ಬಾಲಕನಿಗೆ ಕಾರಣಾಂತರಗಳಿಂದ ಬೆನ್ನಿನ ಮೂಳೆಯ ಡಿಸ್‌ಲೊಕೇಟ್‌ ನಿಂದ ಅಸಾಧ್ಯ ನೋವು ಕಾಣಿಸಿಕೊಂಡಿತ್ತು. ಈ ನೋವು ಕ್ರಮೇಣ ಬೆನ್ನಿನಿಂದ ಕಣಕಾಲುವರೆಗೂ ಹಬ್ಬಿತ್ತು.

ಇದನ್ನೂ ಓದಿ: Assembly Session: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ; ಏನೆಲ್ಲ ಅರ್ಹತೆ ಇರಬೇಕು?

ನಾಲ್ಕು ತಿಂಗಳುಗಳ ಕಾಲ ಈ ನೋವನ್ನು ಹಾಗೇ ನಿರ್ಲಕ್ಷಿಸಿದ್ದಾರೆ. ಪರಿಣಾಮ ಈ ಬಾಲಕ ನಡೆಯಲು, ಕೂರಲು ಸಹ ಆಗದಷ್ಟು ಅಗಾಧ ನೋವಿಗೆ ಒಳಗಾಗಿದ್ದ. ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದ ಬಳಿಕ ಅವರಿಗೆ ಎಂಆರ್‌ಐ ಸ್ಕ್ಯಾನ್‌ ಮಾಡುವ ಮೂಲಕ ಅವರ ಬೆನ್ನುಮೂಳೆಯ L3-L4 ಮಟ್ಟದಲ್ಲಿ ತೀವ್ರವಾದ ಪೋಸ್ಟರೊಸೆಂಟ್ರಲ್ ಡಿಸ್ಕ್ ಎಕ್ಸ್‌ಟ್ರಶನ್ ಆಗಿರುವುದು ಬಹಿರಂಗವಾಯಿತು. ಹೀಗಾಗಿ ಬಾಲಕನ ಕಣಕಾಲಿನವರೆಗೂ ಡಿಸ್‌ಲೊಕೇಟ್‌ನ ಪರಿಣಾಮ ಸಂಭವಿಸಿತ್ತು.

ಈ ನೋವನ್ನು ಹೀಗೆ ನಿರ್ಲಕ್ಷ್ಯ ಮಾಡಿದ್ದರೆ ಮುಂದೊಂದು ದಿನ ಆ ಕಾಲು ಪಾರ್ಶ್ವವಾಯು ಆಗುವ ಸಾಧ್ಯತೆ ತುಂಬಾ ಇತ್ತು. ಬಾಲಕನ ಆರೋಗ್ಯದ ಗಂಭೀರತೆಯನ್ನು ಪರಿಗಣಿಸಿ ಆತನಿಗೆ ಮೈಕ್ರೊ-ಲುಂಬರ್ ಡಿಸೆಕ್ಟಮಿ ಶಸ್ತ್ರಚಿಕಿತ್ಸೆಯನ್ನು ಶಿಫಾರಸು ಮಾಡಿದೆವು, ಇದು ನರಗಳ ಮೇಲಿನ ಒತ್ತಡವನ್ನು ನಿವಾರಿಸಲು ಡಿಸ್‌ಲೊಕೇಟ್‌ ಆಗಿರುವ ಡಿಸ್ಕ್ ಅನ್ನು ತೆಗೆದುಹಾಕುವ ಶಸ್ತ್ರಚಿಕಿತ್ಸಾ ವಿಧಾನವಾಗಿದೆ.

ಇದನ್ನೂ ಓದಿ: Assembly Session: ಕಾರ್ಮಿಕ ಇಲಾಖೆಯಿಂದ ಸಿನಿ ಕಾರ್ಮಿಕರಿಗೆ ಭರ್ಜರಿ ಗಿಫ್ಟ್!

ಬಾಲಕನ ತೂಕ ಅಧಿಕವಾಗಿದ್ದರಿಂದ ಈ ಶಸ್ತ್ರಚಕಿತ್ಸೆ ಸಾಕಷ್ಟು ಸವಾಲಾಗಿತ್ತು, ಆದರೂ ನಮ್ಮ ತಂಡ ಕಾರ್ಯಕ್ಷಮತೆಯಿಂದ ಸುರಕ್ಷತೆಯಾಗಿ ಈ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದ್ದೇವೆ. ಈ ಶಸ್ತ್ರಚಿಕಿತ್ಸೆಯ ನಂತರ ಬಾಲಕನ ನೋವು ಸಂಪೂರ್ಣ ನಿವಾರಣೆಯಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.

Continue Reading

ಆರೋಗ್ಯ

Mosquito Repellent Plants: ನಿಮಗೆ ಗೊತ್ತೆ? ಈ 5 ಬಗೆಯ ಗಿಡಗಳು ಸೊಳ್ಳೆಗಳನ್ನು ಓಡಿಸುತ್ತವೆ!

Mosquito Repellent Plants: ಸೊಳ್ಳೆಗಳನ್ನು ದೂರ ಮಾಡಲು ಎಂಥಾ ಸರ್ಕಸ್‌ ಮಾಡಿದರೂ ನಷ್ಟವಿಲ್ಲ ಎಂಬಂತಾಗಿದೆ ಈ ಮಳೆಗಾಲದಲ್ಲಿ. ನೈಸರ್ಗಿಕ ಪರಿಮಳದ ತೈಲಗಳು ಅಥವಾ ರಿಪೆಲ್ಲೆಂಟ್‌ಗಳನ್ನು ಹಚ್ಚಿಕೊಂಡರೆ, ಸೊಳ್ಳೆಗಳನ್ನು ಓಡಿಸಬಹುದು. ಜೊತೆಗೆ, ಮನೆಯ ಒಳ-ಹೊರಗೆ ಕೆಲವು ಬಗೆಯ ಗಿಡಗಳನ್ನು ಬೆಳೆಸುವುದು ಸಹ ಈ ಕೆಲಸದಲ್ಲಿ ಉಪಯೋಗಕ್ಕೆ ಬರುತ್ತದೆ.

VISTARANEWS.COM


on

Mosquito Repellent Plants
Koo

ಮಳೆಗಾಲವೆಂದರೆ ಸೊಳ್ಳೆಗಳ (Mosquito Repellent Plants) ಕಾಲವೆಂಬ ಭಾವನೆ ಬಂದರೆ ಅಚ್ಚರಿಯಿಲ್ಲ. ಬರೀ ಸೊಳ್ಳೆ ಕಚ್ಚುವುದು ಸಮಸ್ಯೆಯಲ್ಲ, ಅದರೊಂದಿಗೆ ಬರುವ ಮಲೇರಿಯ, ಡೆಂಗ್ಯೂ, ಜೀಕಾ ಮುಂತಾದ ವೈರಸ್‌ಗಳು ಭೀತಿ ಮೂಡಿಸುತ್ತಿವೆ. ಮನೆಯ ಸುತ್ತ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಿದರೂ, ಮನೆಯೆದುರಿನ ರಸ್ತೆಯಲ್ಲೋ ಚರಂಡಿಯಲ್ಲೋ ನೀರು ನಿಲ್ಲುತ್ತಿದ್ದರೆ ಎಷ್ಟೆಂದು ಒದ್ದಾಡುವುದಕ್ಕೆ ಸಾಧ್ಯ? ಕಿಟಕಿಗಳಿಗೆಲ್ಲ ಸೊಳ್ಳೆ ಪರದೆ ಹಾಕಿದ್ದಾಗಿದೆ, ಆದರೂ ಬಾಗಿಲು ತೆರೆದಾಗ ನಮಗಿಂತ ಮೊದಲು ಸೊಳ್ಳೆಗಳು ನುಗ್ಗುತ್ತವೆ. ರಾತ್ರಿ ಮಲಗುವಾಗಲೂ ಪರದೆಯೊಳಗೇ ಮಲಗುತ್ತೇವೆ, ಹಗಲೆಲ್ಲ ಸೊಳ್ಳೆ ಪರದೆ ಸುತ್ತಿಕೊಂಡು ಓಡಾಡಲು ಸಾಧ್ಯವೇ?
ಈ ಕ್ರಮಗಳೆಲ್ಲ ಒಳ್ಳೆಯದೇ. ಅಗತ್ಯವಾಗಿ ಬೇಕಾಗಿದ್ದು ಸಹ ಹೌದು. ಜೊತೆಗೆ ಕೆಲವು ನೈಸರ್ಗಿಕ ಪರಿಮಳದ ತೈಲಗಳು ಅಥವಾ ರಿಪೆಲ್ಲೆಂಟ್‌ಗಳನ್ನು ಹಚ್ಚಿಕೊಂಡರೆ, ಸೊಳ್ಳೆಗಳು ಹತ್ತಿರ ಬಾರದಂತೆ ಕಾಪಾಡಿಕೊಳ್ಳಬಹುದು. ಜೊತೆಗೆ, ಮನೆಯ ಸುತ್ತಮುತ್ತ ಕೆಲವು ಒಳಾಂಗಣ/ಹೊರಾಂಗಣದ ಗಿಡಗಳನ್ನು ಬೆಳೆಸುವುದು ಸಹ ಈ ಕೆಲಸದಲ್ಲಿ ಉಪಯೋಗಕ್ಕೆ ಬರುತ್ತದೆ. ಸೊಳ್ಳೆಗಳನ್ನು ದೂರ ಓಡಿಸುವಂಥ ಗುಣವನ್ನುಳ್ಳ ಐದು ಗಿಡಗಳ ಬಗ್ಗೆ ಇಲ್ಲಿ ವಿವರಿಸಲಾಗಿದೆ.

citronella

ಸಿಟ್ರೋನೆಲ್ಲ

ಲೆಮೆನ್‌ಗ್ರಾಸ್‌, ನಿಂಬೆ ಹುಲ್ಲು ಎಂದೆಲ್ಲಾ ಈ ಗಿಡವನ್ನು/ಹುಲ್ಲನ್ನು ಕರೆಯಲಾಗುತ್ತದೆ. ಸೊಳ್ಳೆಯನ್ನು ದೂರ ಅಟ್ಟುವ ವಿಷಯದಲ್ಲಿ ವಿಶೇಷ ಪರಿಣತಿ ಹೊಂದಿರುವ ಈ ಗಿಡದ ಸಾರವನ್ನು ಸ್ಪ್ರೇ, ಕ್ರೀಮ್‌, ಲೋಶನ್‌, ತೈಲ, ಮೋಂಬತ್ತಿಗಳು ಮುಂತಾದ ಹಲವು ರೀತಿಯ ಉತ್ಪನ್ನಗಳಲ್ಲಿ ಉಪಯೋಗಿಸಲಾಗುತ್ತದೆ. ಇದಕ್ಕಿರುವ ನಿಂಬೆಯ ಗಾಢವಾದ ಸುಗಂಧವೇ ಸೊಳ್ಳೆಯನ್ನು ದೂರ ಇರಿಸುತ್ತದೆ. ಮನೆಯ ಸುತ್ತಮುತ್ತಲಿನ ಭಾಗದಲ್ಲಿ ಅಥವಾ ಬಾಲ್ಕನಿಯ ಕುಂಡಗಳಲ್ಲಾದರೂ ಸರಿ, ಬೆಳೆಸಿ. ಇದು ಹಲವು ಔಷಧೀಯ ಉಪಯೋಗಗಳನ್ನೂ ಹೊಂದಿದ್ದು, ಸೊಳ್ಳೆ ಬಾರದಂತೆ ತಡೆಯಲೂ ನೆರವಾಗುತ್ತದೆ. ಆದರೆ ಈ ಹುಲ್ಲಿನ ಅಂಚು ಹರಿತವಾಗಿರುವುದರಿಂದ, ನೇರವಾಗಿ ಕೈ-ಕಾಲುಗಳ ಮೇಲೆ ಉಜ್ಜಿಕೊಳ್ಳಲು ಯತ್ನಿಸಬೇಡಿ, ಗಾಯವಾದೀತು.

Lavender Fragrant Flowers

ಲಾವೆಂಡರ್

ಇದರ ಹೂವುಗಳು ನಿಮ್ಮ ಬಾಲ್ಕನಿ ಮತ್ತು ಮನೆಯೊಳಗಿನ ಜಾಗವನ್ನು ಸುಂದರಗೊಳಿಸುವುದು ಮಾತ್ರವಲ್ಲ, ಆಹ್ಲಾದಕರ ಪರಿಮಳವು ಸೊಳ್ಳೆಗಳನ್ನು ದೂರ ಓಡಿಸುತ್ತದೆ. ಇದರ ಘಮ ಮನುಷ್ಯರಿಗೆ ಆಪ್ಯಾಯಮಾನವೇ ಹೊರತು ಸೊಳ್ಳೆ ಅಥವಾ ಇತರ ಕೀಟಗಳಿಗಲ್ಲ. ಬಿಸಿಲು ಬರುವಂಥ ಜಾಗದಲ್ಲಿ ಇದನ್ನು ಕುಂಡಗಳಲ್ಲಿ ಬೆಳೆಯಬಹುದು. ಈ ಹೂವನ್ನು ಒಣಗಿಸಿ ಅದನ್ನು ಪುಟ್ಟ ಸ್ಯಾಶೆಗಳಲ್ಲಿ ತುಂಬಿ ಮನೆಯಲ್ಲೆಲ್ಲಾ ಇರಿಸಿಕೊಳ್ಳಬಹುದು. ಲ್ಯಾವೆಂಡರ್‌ ತೈಲವನ್ನೂ ಇತರ ಎಣ್ಣೆಯೊಂದಿಗೆ ಸೇರಿಸಿ ಚರ್ಮಕ್ಕೆ ಲೇಪಿಸಿಕೊಳ್ಳಬಹುದು. ಇದನ್ನು ಹಚ್ಚಿಕೊಳ್ಳುವುದರಿಂದ ಚರ್ಮಕ್ಕೆ ಹಲವು ರೀತಿಯಲ್ಲಿ ಅನುಕೂಲಗಳಿವೆ.

Marigold

ಮಾರಿಗೋಲ್ಡ್‌

ಚೆಂಡು ಹೂವು ಎಂದೇ ಇವು ಪ್ರಸಿದ್ಧ. ಮಳೆಗಾಲದ ಈ ಹೊತ್ತಿನಲ್ಲಿ ಮೇಲೇಳುವ ಚೆಂಡು ಹೂವಿನ ಗಿಡಗಳು, ನವರಾತ್ರಿ-ದೀಪಾವಳಿಯ ಆಸುಪಾಸಿನಲ್ಲಿ ಇಡೀ ಗಿಡ ತುಂಬುವಷ್ಟು ಹೂ ಬಿಡುತ್ತವೆ. ಇವೂ ಸಹ ಸೊಳ್ಳೆ ಓಡಿಸುವಲ್ಲಿ ಸಹಕಾರ ನೀಡುವಂಥವು. ಬಾಲ್ಕನಿಯಲ್ಲಿ, ಬಾಗಿಲು-ಕಿಟಕಿಗಳ ಬಳಿ, ಅಂದರೆ ಸೊಳ್ಳೆ ಒಳ ಪ್ರದೇಶ ಮಾಡುವ ಜಾಗಗಳಲ್ಲಿ ಇದನ್ನು ಕುಂಡದಲ್ಲಿ ಇರಿಸಿಕೊಳ್ಳುವುದು ಒಳ್ಳೆಯ ಉಪಾಯ. ಇದರ ಹೂವುಗಳನ್ನು ಗೊಂಚಲು ಮಾಡಿ, ಹೂದಾನಿಗಳಲ್ಲಿ ಮನೆಯೊಳಗೆ ಇರಿಸಿಕೊಳ್ಳಬಹುದು. ಹೂವನ್ನು ಒಣಗಿಸಿಟ್ಟುಕೊಂಡರೆ ಸೊಳ್ಳೆ ಓಡಿಸುವಲ್ಲಿ ಇನ್ನಷ್ಟು ನೆರವು ದೊರೆಯುತ್ತದೆ.

Basil

ಬೆಸಿಲ್

ಇದು ಕೇವಲ ಸೊಳ್ಳೆ ಓಡಿಸುವುದಕ್ಕೆ ಮಾತ್ರವಲ್ಲ, ರುಚಿಕಟ್ಟಾದ ಅಡುಗೆಗೂ ಉಪಯೋಗವಾಗುತ್ತದೆ. ಇದರ ತೀಕ್ಷ್ಣವಾದ ಪರಿಮಳವು ಸೊಳ್ಳೆಗಳನ್ನು ಹತ್ತಿರ ಸುಳಿಯಗೊಡುವುದಿಲ್ಲ. ಹಾಗಾಗಿ ಸೊಳ್ಳೆ ಓಡಿಸುವ ಉಪಾಯಗಳಲ್ಲಿ ಇದನ್ನು ಸಹ ಅಳವಡಿಸಿಕೊಳ್ಳಬಹುದು. ಸಾಕಷ್ಟು ಗಾಳಿ-ಬೆಳಕು ಇರುವಂಥ ಜಾಗದಲ್ಲಿ ಇದನ್ನು ಕುಂಡಗಳಲ್ಲಿ ಬೆಳೆಸಬಹುದು. ಇದರ ಎಲೆಗಳನ್ನು ಕಿವುಚಿ ಮೈ-ಕೈಗೆಲ್ಲ ರಸ ಲೇಪಿಸಿಕೊಂಡರೂ ಸೊಳ್ಳೆ ಹತ್ತಿರ ಸುಳಿಯುವುದಿಲ್ಲ. ಇದರ ಕುಂಡಗಳನ್ನು ಸೊಳ್ಳೆಯ ಪ್ರವೇಶ ದ್ವಾರಗಳಲ್ಲಿ ಇರಿಸಿಕೊಂಡರೆ, ಸೊಳ್ಳೆಯ ಉಪಟಳಕ್ಕೆ ಬಾಗಿಲು ತೆರೆಯಲೂ ಅಳುಕುವ ಸ್ಥಿತಿ ತೊಲಗುತ್ತದೆ.

Lemon balm

ಲೆಮೆನ್‌ ಬಾಮ್‌

ಪುದೀನಾ ಜಾತಿಗೆ ಸೇರಿದ ಸಸ್ಯವಿದು. ಇದರ ಕಟುವಾದ ಘಮ ಸೊಳ್ಳೆ ಓಡಿಸುವಲ್ಲಿ ನೆರವಾಗುತ್ತದೆ. ಯಾವುದೇ ಕೈತೋಟ ಅಥವಾ ಬಾಲ್ಕನಿಗಳಲ್ಲಿ ಇವುಗಳನ್ನು ಸುಲಭವಾಗಿ ಬೆಳೆಯಬಹುದು. ಇದರ ಗಾಢವಾದ ನಿಂಬೆಯಂಥ ಪರಿಮಳ ನಮಗೆ ಹಿತವೆನಿಸಿದರೂ ಸೊಳ್ಳೆಗಳಿಗೆ ಆಗದು. ಮನಸ್ಸನ್ನು ಶಾಂತಗೊಳಿಸುವ ಗುಣಗಳು ಇದಕ್ಕಿರುವುದರಿಂದ, ಈ ಮೂಲಿಕೆಯ ಎಲೆಗಳನ್ನು ಚಹಾ ಮಾಡಿ ಕುಡಿಯುವವರಿದ್ದಾರೆ.

ಇದನ್ನೂ ಓದಿ: Head Massage Tips: ತಲೆಯ ಮಸಾಜ್‌ನಿಂದ ಮಾನಸಿಕ ಒತ್ತಡ ನಿವಾರಿಸಲು ಸಾಧ್ಯ! ಹಾಗಂತ ಬೇಕಾಬಿಟ್ಟಿ ಮಸಾಜ್‌ ಮಾಡಬೇಡಿ

Continue Reading

ಆರೋಗ್ಯ

Head Massage Tips: ತಲೆಯ ಮಸಾಜ್‌ನಿಂದ ಮಾನಸಿಕ ಒತ್ತಡ ನಿವಾರಿಸಲು ಸಾಧ್ಯ! ಹಾಗಂತ ಬೇಕಾಬಿಟ್ಟಿ ಮಸಾಜ್‌ ಮಾಡಬೇಡಿ

Head Massage Tips: ತಲೆಗೆ ಎಣ್ಣೆ ಮಸಾಜ್‌ ಮಾಡುತ್ತೀರಾ? ಮನಸ್ಸಿನ ಒತ್ತಡ ನಿರ್ವಹಣೆಗೆ ಇದು ಅತ್ಯಂತ ಒಳ್ಳೆಯ ಮಾರ್ಗ ಎಂಬುದನ್ನು ಹೆಚ್ಚಿನ ತಕರಾರಿಲ್ಲದೇ ಒಪ್ಪಿಕೊಳ್ಳಬಹುದು. ಇದರಿಂದ ಲಾಭವೇನು, ಹೇಗೆ ಮಾಡಿದರೆ ಸೂಕ್ತ ಎಂಬಿತ್ಯಾದಿ ವಿವರಗಳು ಇಲ್ಲಿವೆ. ತಲೆಯ ಭಾಗಕ್ಕೆ ರಕ್ತಸಂಚಾರವನ್ನು ಹೆಚ್ಚಿಸಿ, ಆಮ್ಲಜನಕದ ಪೂರೈಕೆಯನ್ನು ವೃದ್ಧಿಸಿ, ಮನಸ್ಸನ್ನು ಶಾಂತಗೊಳಿಸುವ ಈ ಅಭ್ಯಾಸದಿಂದ ಇನ್ನೂ ಏನೇನು ಲಾಭಗಳಿವೆ ಎಂಬುದನ್ನು ನೋಡೋಣ.

VISTARANEWS.COM


on

Head Massage Tips
Koo

ಬದುಕಿನಲ್ಲಿ ಕಡೆಯವರೆಗೆ ನಮ್ಮ ಜೊತೆಗಿರುವುದು ನಮ್ಮ ಆತಂಕ, ಒತ್ತಡಗಳು ಮಾತ್ರ ಎಂಬುದು ಆಧುನಿಕ ಕಾಲದ ಗಾದೆ. ಇವುಗಳಿಂದ ಬಿಡಿಸಿಕೊಳ್ಳಲು ಮಾಡದ ಸರ್ಕಸ್‌ ಯಾವುದಿದೆ? ಕಾಲಿಗೆ ಚಕ್ರ ಕಟ್ಟಿಕೊಂಡು ತಿರುಗುವುದರಿಂದ ಹಿಡಿದು, ಲೋಕದ ಸಹವಾಸವೇ ಸಾಕೆಂದು ಆಶ್ರಮ ಸೇರಿ ಸನ್ಯಾಸ ತೆಗೆದುಕೊಂಡವರೂ ಇದ್ದಾರೆ. ಇದೆಲ್ಲ ಬಿಡಿ, ನಮ್ಮ-ನಿಮ್ಮ ಮಟ್ಟವನ್ನು ಮೀರಿದ್ದು. ಈಗ ಸಾಮಾನ್ಯರಿಗೆ ಆಗುವಂಥ ಸರಳವಾದ ವಿಷಯಕ್ಕೆ ಬರೋಣ. ಸರಳವಾದ ತಲೆಯ ಮಸಾಜ್‌ (Head Massage Tips) ಒತ್ತಡ ಕಡಿಮೆ ಮಾಡುವಲ್ಲಿ ಎಷ್ಟೊಂದು ಪರಿಣಾಮಕಾರಿ ಎನ್ನುವುದು ಗೊತ್ತೇ? ಆಯುರ್ವೇದವನ್ನು ಶತಶತಮಾನಗಳಿಂದ ಬದುಕಿನ ರೀತಿಯಂತೆ ಆಚರಿಸುತ್ತಾ ಬಂದಿರುವ ಭಾರತದಲ್ಲಿ ತಲೆಗೆ ಎಣ್ಣೆ ಮಸಾಜ್‌ ಮಾಡುವ ಬಗ್ಗೆ ಹೆಚ್ಚು ಹೇಳುವುದು ಬೇಕಿಲ್ಲ- ಎಂದು ತಿಳಿದಿದ್ದರೆ, ತಪ್ಪು! ತಲೆ ಕೂದಲಿಗೆ ಎಣ್ಣೆ ಹಚ್ಚುವುದಕ್ಕೂ ಜಾಹೀರಾತುಗಳನ್ನು ಕೊಡಬೇಕಾಗಿರುವ ಈ ಕಾಲದಲ್ಲಿ ಎಲ್ಲರೂ ಹಳೆಯ ಕಾಲದವರಂತೆ ಎಣ್ಣೆ ಮಸಾಜ್‌ ಮಾಡಿಕೊಳ್ಳುತ್ತಾರೆ ಎಂಬ ಭಾವಿಸುವುದಾದರೂ ಹೇಗೆ? ಹೀಗೆನ್ನುತ್ತಿದ್ದಂತೆ ತಲೆಯ ಕೂದಲೆಲ್ಲ ಕಿತ್ತು ಬರುವಂತೆ ಉಗ್ರವಾಗಿ ಮಸಾಜ್‌ ಮಾಡುವ ಚಿತ್ರವನ್ನು ಕಣ್ಣಿಗೆ ತಂದುಕೊಳ್ಳಬೇಡಿ. ಲಘುವಾದ ಆದರೆ ಸ್ಥಿರವಾದ ಲಯದಲ್ಲಿನ ಮಸಾಜ್‌ ಇದು. ತಲೆಯ ಭಾಗಕ್ಕೆ ರಕ್ತಸಂಚಾರವನ್ನು ಹೆಚ್ಚಿಸಿ, ಆಮ್ಲಜನಕದ ಪೂರೈಕೆಯನ್ನು ವೃದ್ಧಿಸಿ, ಮನಸ್ಸನ್ನು ಶಾಂತಗೊಳಿಸುವ ಈ ಅಭ್ಯಾಸದಿಂದ ಇನ್ನೂ ಏನೇನು ಲಾಭಗಳಿವೆ (Head Massage Tips) ಎಂಬುದನ್ನು ನೋಡೋಣ.

Lady Sitting on the Couch Gives Herself a Scalp Massage Gooseberry Benefits

ಸೆರೋಟೋನಿನ್‌ ಹೆಚ್ಚಳ

ಒತ್ತಡ ನಿವಾರಿಸುವಲ್ಲಿ ನಮ್ಮ ದೇಹದ ಹ್ಯಾಪಿ ಹಾರ್ಮೋನುಗಳ ಭೂಮಿಕೆ ಮಹತ್ವದ್ದು. ತಲೆಗೆ ಲಘುವಾದ ಎಣ್ಣೆ ಅಥವಾ ಜೆಲ್‌ ಮಸಾಜ್‌ ಮಾಡುವುದು ಸೆರೋಟೋನಿನ್‌ ಚೋದಕದ ಸ್ರವಿಸುವಿಕೆಯನ್ನು ಹೆಚ್ಚಿಸುತ್ತದೆ. ಇದರಿಂದ ಆತಂಕ ನಿವಾರಣೆ ಮತ್ತು ಒತ್ತಡ ಪರಿಹಾರ ಸಾಧ್ಯವಿದೆ. ಇದು ನಮ್ಮ ಮೂಡ್‌ ಸರಿಪಡಿಸಿ, ಆಹ್ಲಾದದ ಭಾವವನ್ನು ಹೆಚ್ಚಿಸುತ್ತದೆ. ಹಣೆಯ ನರಗಳನ್ನು ಸಡಿಲಿಸಿ, ಕಣ್ಣಿನ ಒತ್ತಡ ಕಡಿಮೆ ಮಾಡಿ, ಮನಸ್ಸಿನ ಸಮಾಧಾನ ಹೆಚ್ಚಿಸುತ್ತದೆ.

ಕಾರ್ಟಿಸೋಲ್‌ ಕಡಿಮೆ

ನಮ್ಮ ದೇಹದಲ್ಲಿ ಒತ್ತಡ ಹೆಚ್ಚುತ್ತಿದ್ದಂತೆ ಕಾರ್ಟಿಸೋಲ್‌ ಪ್ರಮಾಣವೂ ಹೆಚ್ಚುತ್ತದೆ. ಒತ್ತಡಕ್ಕೆ ಪ್ರತಿಯಾಗಿ ಬಿಡುಗಡೆಯಾಗುವ ಹಾರ್ಮೋನು ಎಂದು ತಿಳಿಯಬಹುದು ಇದನ್ನು. ಈ ಚೋದಕದ ಪ್ರಮಾಣ ದೇಹದಲ್ಲಿ ಹೆಚ್ಚಿದರೆ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಮುತ್ತಿಕೊಳ್ಳುತ್ತವೆ. ಈ ಹಿನ್ನೆಲೆಯಲ್ಲಿ, ಕಾರ್ಟಿಸೋಲ್‌ ಪ್ರಮಾಣ ಹೆಚ್ಚದಂತೆ ನಿಭಾಯಿಸುವುದು ಅತಿ ಮುಖ್ಯ.

ಇದನ್ನೂ ಓದಿ: Early Symptoms Of Menopause: ದೇಹದಲ್ಲಿ ಈ ಲಕ್ಷಣಗಳು ಕಾಣಿಸಿದರೆ ಋತುಚಕ್ರ ಸದ್ಯದಲ್ಲೇ ನಿಲ್ಲುತ್ತದೆ ಎಂದರ್ಥ

ಮಾಡುವುದು ಹೇಗೆ?

ನಮಗೆ ನಾವೇ ಮಸಾಜ್‌ ಮಾಡಿಕೊಳ್ಳುವುದು ಅಸಾಧ್ಯವಲ್ಲ, ಆದರೆ ಪರಿಣಾಮಕಾರಿ ಆಗದೆಯೇ ಹೋಗಬಹುದು. ಹಾಗಾಗಿ ಒಬ್ಬರಿಗೊಬ್ಬರು ತಲೆಗೆ ಎಣ್ಣೆ ಮಸಾಜ್‌ ಮಾಡುವ ಕ್ರಮ ಮೊದಲಿನಿಂದಲೂ ಚಾಲ್ತಿಯಲ್ಲಿದೆ. ತಲೆಯ ಮಸಾಜ್‌ಗೆ ಕೊಬ್ಬರಿ ಎಣ್ಣೆ, ಎಳ್ಳೆಣ್ಣೆಯಂಥ ಯಾವುದನ್ನಾದರೂ ಬಳಸಬಹುದು. ಇವುಗಳ ಜೊತೆಗೆ ಕೆಲವು ಹನಿಗಳಷ್ಟು ಯಾವುದಾದರೂ ಸಾರಭೂತ ತೈಲವನ್ನು ಸೇರಿಸಿಕೊಂಡರೆ ಒತ್ತಡ ನಿವಾರಣೆಗೆ ಹೆಚ್ಚಿನ ಅನುಕೂಲವಾಗುತ್ತದೆ. ಮಸಾಜ್‌ ಮಾಡುವಾಗ ಇಡೀ ಅಂಗೈ ಹಾಕಿ ತಲೆಯನ್ನು ಉಜ್ಜುವ ಬದಲು, ಬೆರಳುಗಳ ತುದಿಯನ್ನು ಹೆಚ್ಚು ಬಳಸಿ. ತಲೆಯನ್ನು ತಿಕ್ಕಿ, ತೀಡಿ, ಲಘುವಾಗಿ ತಟ್ಟಬಹುದು. ಸಣ್ಣ ವೃತ್ತಾಕಾರದಲ್ಲಿ ತಿಕ್ಕುವುದು ಸರಿಯಾದ ಕ್ರಮ. ಹಣೆಯಿಂದ ಪ್ರಾರಂಭಿಸಿ, ತಲೆಯ ಹಿಂಭಾಗದತ್ತ ಮುಂದುವರಿಯಿರಿ. ಯಾವುದಾದರೂ ಭಾಗದಲ್ಲಿ ಹೆಚ್ಚಿನ ಒತ್ತಡವಿದೆ ಎನಿಸಿದರೆ, ಆ ಭಾಗಕ್ಕೆ ಹೆಚ್ಚು ಹೊತ್ತು ಮಸಾಜ್‌ ಮಾಡಿ. ಮುಖ್ಯವಾಗಿ ಹುಬ್ಬಿನ ಪಕ್ಕದ ಭಾಗ, ಮೂರನೇ ಕಣ್ಣಿನ ಭಾಗ, ನೆತ್ತಿ, ಕುತ್ತಿಗೆಯ ಹಿಂಭಾಗ- ಇಲ್ಲೆಲ್ಲ ಮಸಾಜ್‌ ಮಾಡಿದರೆ ಬೇಗ ಆರಾಮ ದೊರೆಯುತ್ತದೆ. ಕಣ್ಣಿನ ಸುತ್ತ ವೃತ್ತಾಕಾರದಲ್ಲೂ ಹಗುರವಾಗಿ ತಿಕ್ಕಬಹುದು. ಆದರೆ ಈ ಭಾಗಕ್ಕೆ ಹೆಚ್ಚಿನ ತೈಲ ಬಳಸುವುದು ಬೇಡ. ಕಣ್ಣಿಗೆ ಎಣ್ಣೆ ತಾಗಿದರೆ ವಿಪರೀತ ಉರಿಯಾಗುತ್ತದೆ. ಇದನ್ನು ವಾರಕ್ಕೊಮ್ಮೆ ನಿಶ್ಚಿತವಾಗಿ ಮಾಡಬಹುದು. ಹೆಚ್ಚು ಬಾರಿ ಮಾಡಿದರೆ, ಅನುಕೂಲ ಹೆಚ್ಚು. ಸಾಧಾರಣವಾಗಿ 10-15 ನಿಮಿಷಗಳ ಲಘುವಾದ ಮಸಾಜ್‌ ಒತ್ತಡ ನಿರ್ವಹಣೆಯಲ್ಲಿ ಹೆಚ್ಚಿನ ಪರಿಣಾಮ ನೀಡುತ್ತದೆ. ರಾತ್ರಿ ಮಲಗುವ ಮುನ್ನ ಇದನ್ನು ಮಾಡಿದರೆ, ಆರಾಮದಾಯಕ ನಿದ್ರೆ ನಿಮ್ಮದಾಗುತ್ತದೆ.

Continue Reading

ಆರೋಗ್ಯ

Healthy Heart Tips: ನಿಮ್ಮ ಹೃದಯ ಆರೋಗ್ಯವಾಗಿರಬೇಕೆ? ಮಳೆಗಾಲದಲ್ಲಿ ಈ ಏಳು ಆಹಾರಗಳಿಂದ ದೂರವಿರಿ!

ಕೊಬ್ಬಿನ ಮತ್ತು ಎಣ್ಣೆಯುಕ್ತ ಆಹಾರಗಳನ್ನು ಅತಿಯಾಗಿ ಸೇವಿಸಿ ಆರೋಗ್ಯಕ್ಕೆ ಹಾನಿಕಾರಕ ಎಂಬುದು ಎಲ್ಲರಿಗೂ ಗೊತ್ತಿದೆ. ಆದರೆ ಮಳೆಗಾಲ ಬಂದಾಗ ಇದೆಲ್ಲ ಸವಿಯುವ ಬಯಕೆ ಹುಟ್ಟುತ್ತದೆ. ಈ ಮಳೆಗಾಲದಲ್ಲಿ ಹೃದಯದ ಆರೋಗ್ಯವನ್ನು (Healthy Heart Tips) ಕಾಪಾಡಿಕೊಳ್ಳಲು ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳುವುದರ ಜೊತೆಗೆ ಸಮತೋಲಿತ ಆಹಾರವನ್ನು ಸೇವಿಸುವುದು ಕೂಡ ಮುಖ್ಯ. ಅಲ್ಲದೆ ಈ ಏಳು ಆಹಾರಗಳಿಂದ ದೂರವಿದ್ದರೆ ಒಳ್ಳೆಯದು.

VISTARANEWS.COM


on

By

Healthy Heart Tips
Koo

ಮಳೆಗಾಲವೆಂದರೆ (rainy season) ದೇಹಕ್ಕೆ ಹಿತವಲ್ಲದೇ ಇದ್ದರೂ ನಾಲಗೆಗೆ ರುಚಿಯಾಗುವ ಖಾದ್ಯಗಳನ್ನು ಸವಿಯಬೇಕು ಎಂದೇ ಬಯಸುತ್ತೇವೆ. ಬಿಸಿಬಿಸಿ ಬೋಂಡಾ, ಪಕೋಡಾ, ಕುರುಕಲು ತಿನಿಸಿಗಳು ನೆನದಾಗಲೇ ಬಾಯಲ್ಲಿ ನೀರೂರುವಂತೆ ಮಾಡುತ್ತದೆ. ಆದರೆ ಆರೋಗ್ಯವನ್ನು (health) ಕಾಪಾಡಲು ಬಯಸುವವರು ಮತ್ತು ಹೃದ್ರೋಗದ ಅಪಾಯದಿಂದ (Healthy Heart Tips) ಪಾರಾಗಲು ಮಳೆಗಾಲದಲ್ಲಿ ಇಂತಹ ತಿಂಡಿಗಳಿಂದ ದೂರವಿದ್ದರೆ ಒಳ್ಳೆಯದು. ಅದರಲ್ಲೂ ಮುಖ್ಯವಾಗಿ ಈ 7 ಆಹಾರಗಳನ್ನು ಸೇವಿಸದೇ ಇರುವುದು ಉತ್ತಮ.

ಮಳೆಗಾಲದಲ್ಲಿ ವಿವಿಧ ರೋಗಗಳ ಅಪಾಯ ಹೆಚ್ಚಾಗಿರುತ್ತದೆ. ಇದು ನಮ್ಮ ರೋಗನಿರೋಧಕ ಶಕ್ತಿಯನ್ನು ಪರೀಕ್ಷಿಸುತ್ತದೆ. ಆದ್ದರಿಂದ ಪರಿಹರಿಸಲೇಬಕಾದ ಕೆಲವೊಂದು ಆರೋಗ್ಯ ಸಮಸ್ಯೆಗಳಿರುತ್ತವೆ. ಅದರಲ್ಲಿ ಮುಖ್ಯವಾಗಿ ಅಧಿಕ ಕೊಲೆಸ್ಟ್ರಾಲ್ ಕೂಡ ಒಂದು. ಅಧಿಕ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವಲ್ಲಿ ನಮ್ಮ ಆಹಾರ ಪದ್ಧತಿ ಪ್ರಮುಖ ಪಾತ್ರವಹಿಸುತ್ತದೆ.

ಮಳೆಯನ್ನು ಆನಂದಿಸಲು ನಾವು ಸಾಮಾನ್ಯವಾಗಿ ಮೆಲ್ಲುವ ಕರಿದ ಆಹಾರ ಮತ್ತು ತಿಂಡಿಗಳು ನಮ್ಮ ಹೃದಯದ ಆರೋಗ್ಯವನ್ನು ನಿರ್ಲಕ್ಷಿಸುವಂತೆ ಮಾಡುತ್ತದೆ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ. ಇದು ಹೃದಯದ ತೊಂದರೆಗಳನ್ನು ಹೆಚ್ಚು ಮಾಡುವ ಅಪಾಯವಿದೆ.

ಮಳೆಗಾಲದಲ್ಲಿ ತಿನ್ನಲೇಬಾರದ 7 ಆಹಾರಗಳು

ಅನಾರೋಗ್ಯಕರ ಮತ್ತು ಹೃದಯದ ಸಮಸ್ಯೆಗಳನ್ನು ಉಂಟುಮಾಡುವ 7 ಆಹಾರಗಳ ಬಗ್ಗೆ ತಿಳಿದುಕೊಂಡು ಈ ವರ್ಷದಿಂದಲೇ ಮಳೆಗಾಲದಲ್ಲಿ ಇಂತಹ ಆಹಾರದಿಂದ ದೂರವಿರೋಣ.

Healthy Heart Tips


ಸಂಸ್ಕರಿಸಿದ ಮಾಂಸ

ಕುರಿ ಮರಿ ಮತ್ತು ಕೋಳಿಯಂತಹ ಸಂಸ್ಕರಿಸಿದ ಪ್ರಾಣಿಗಳ ಮಾಂಸವನ್ನು ಸೇವಿಸುವುದನ್ನು ಮಳೆಗಾಲದಲ್ಲಿ ಕಡಿಮೆ ಮಾಡಬೇಕು. ಯಾಕೆಂದರೆ ಅವುಗಳ ಮೇಲೆ ಬ್ಯಾಕ್ಟೀರಿಯಾದ ಬೆಳವಣಿಗೆಯ ಸಾಧ್ಯತೆಗಳು ಹೆಚ್ಚು. ಮಳೆಯ ದಿನಗಳಲ್ಲಿ ತೇವಾಂಶವು ಆಹಾರದ ಮೇಲೆ ಬ್ಯಾಕ್ಟೀರಿಯಾವನ್ನು ನಿರ್ಮಿಸಲು ಕಾರಣವಾಗಬಹುದು ಮತ್ತು ಆಹಾರ ವಿಷವನ್ನಾಗಿ ಪರಿವರ್ತಿಸಬಹುದು.

Healthy Heart Tips


ಡೀಪ್ ಫ್ರೈಡ್ ಫುಡ್

ಆಳವಾದ ಕರಿದ ಆಹಾರವನ್ನು ಸೇವಿಸುವುದನ್ನು ಮಳೆಗಾಲದಲ್ಲಿ ತಪ್ಪಿಸಬೇಕು. ಅವುಗಳನ್ನು ಹೆಚ್ಚಿನ ಕೊಬ್ಬು ಮತ್ತು ಹೆಚ್ಚಿನ ಕ್ಯಾಲೋರಿ ಎಣ್ಣೆಯಲ್ಲಿ ಹುರಿಯಲಾಗುತ್ತದೆ. ಇದು ಅಧಿಕ ರಕ್ತದೊತ್ತಡಕ್ಕೆ ಕಾರಣವಾಗಬಹುದು. ಇದು ನಮ್ಮ ರೋಗನಿರೋಧಕ ಶಕ್ತಿಯ ಮೇಲೆ ಪರಿಣಾಮ ಬೀರಬಹುದು. ಪ್ರತಿ ರಕ್ಷಣಾ ವ್ಯವಸ್ಥೆಯನ್ನು ಮತ್ತಷ್ಟು ಹಾನಿ ಮಾಡುವ ಆಹಾರವನ್ನು ನಾವು ಸೇವಿಸಿದರೆ ದೇಹದ ರಕ್ಷಣಾ ಕಾರ್ಯವಿಧಾನವನ್ನು ದುರ್ಬಲಗೊಳಿಸಬಹುದು.

Healthy Heart Tips


ಉಪ್ಪಿನಾಂಶ ಇರುವ ಬೀಜಗಳು

ಕೇವಲ ಬೀಜಗಳು ಆರೋಗ್ಯಕ್ಕೆ ಅತ್ಯತ್ತಮ ಪೋಷಕಾಂಶದ ಮೂಲವಾಗಿರುತ್ತದೆ. ಚಹಾ, ಕಾಫಿಯೊಂದಿಗೆ ಇದರ ಸೇವನೆ ಒಳ್ಳೆಯದಾಗುತ್ತದೆಯಾದರೂ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಹೆಚ್ಚು ಉಪ್ಪನ್ನು ತಿನ್ನುವುದು ಅಧಿಕ ರಕ್ತದೊತ್ತಡಕ್ಕೆ ಕಾರಣವಾಗಬಹುದು ಮತ್ತು ಹೃದ್ರೋಗದ ಅಪಾಯವನ್ನುಂಟು ಮಾಡುತ್ತದೆ ಎಂಬ ಅಂಶವನ್ನು ತಿಳಿದಿರಬೇಕು. ಉಪ್ಪು ಬೀಜಗಳು ಪೌಷ್ಟಿಕಾಂಶದ ಮೌಲ್ಯವನ್ನು ಹೊಂದಿರುವುದಿಲ್ಲ ಮತ್ತು ಉತ್ತಮ ಆರೋಗ್ಯಕ್ಕೆ ಕೊಡುಗೆ ನೀಡುವುದಿಲ್ಲ. ಆದ್ದರಿಂದ ಉಪ್ಪು ಮತ್ತು ಮಸಾಲೆಯುಕ್ತ ಬೀಜಗಳನ್ನು ತಿನ್ನುವುದನ್ನು ತಪ್ಪಿಸಿ.

Healthy Heart Tips


ಸಮುದ್ರಾಹಾರಕ್ಕೆ ಮಿತಿ ಇರಲಿ

ಒಮೆಗಾ -3 ಕೊಬ್ಬಿನಾಮ್ಲ ಹೊಂದಿರುವ ಮೀನುಗಳಲ್ಲಿರುವ ಪೋಷಕಾಂಶಗಳ ಕಾರಣದಿಂದಾಗಿ ಹೃದಯಕ್ಕೆ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಆದರೆ ಮಳೆಗಾಲದಲ್ಲಿ ಅವುಗಳ ಹೆಚ್ಚು ಸೇವನೆ ಒಳ್ಳೆಯದಲ್ಲ. ಇದು ಬ್ಯಾಕ್ಟೀರಿಯಾದ ಬೆಳವಣಿಗೆಗೆ ಕಾರಣವಾಗಬಹುದು. ಮಳೆಗಾಲದಲ್ಲಿ ಜಲಮೂಲಗಳನ್ನು ಕಲುಷಿತಗೊಳಿಸುತ್ತದೆ ಮತ್ತು ಮೀನುಗಳಂತಹ ಸಮುದ್ರ ಪ್ರಾಣಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಕಲುಷಿತ ಸಮುದ್ರ ಆಹಾರವನ್ನು ತಿನ್ನುವುದು ಹೃದಯ ಮತ್ತು ಒಟ್ಟಾರೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹಾಗಾಗಿ ಸಾಧ್ಯವಾದಷ್ಟು ಕಡಿಮೆ ಪ್ರಮಾಣದಲ್ಲಿ ಮೀನು ತಿನ್ನಬೇಕು.

Healthy Heart Tips


ಪಿಜ್ಜಾ ಮತ್ತು ಬರ್ಗರ್

ಪಿಜ್ಜಾ ಮತ್ತು ಬರ್ಗರ್‌ಗಳು ಅನಾರೋಗ್ಯಕರ ಎಂದೇ ಪರಿಗಣಿಸಲಾಗಿದೆ. ಹೆಚ್ಚಿನ ಸೋಡಿಯಂ ಮತ್ತು ಕ್ಯಾಲೋರಿ ಆಹಾರಗಳಾಗಿರುವ ಇದರ ತಯಾರಿಕೆಯಲ್ಲಿ ಯಾವ ರೀತಿಯ ಹಿಟ್ಟು ಮತ್ತು ಎಣ್ಣೆಯನ್ನು ಬಳಸುತ್ತಾರೆ ಎಂಬುದು ಗೊತ್ತಿಲ್ಲ. ಹೀಗಾಗಿ ಉತ್ತಮ ಹೃದಯದ ಆರೋಗ್ಯಕ್ಕಾಗಿ ಇವುಗಳನ್ನು ತ್ಯಜಿಸಲೇಬೇಕು.

Healthy Heart Tips


ಪ್ಯಾಕ್ ಮಾಡಲಾದ ಚಿಪ್ಸ್

ಪ್ಯಾಕ್ ಮಾಡಲಾದ ಆಲೂಗೆಡ್ಡೆ ಚಿಪ್ಸ್ ಮತ್ತು ಇತರ ತಿಂಡಿಗಳನ್ನು ಹೆಚ್ಚಿನ ಸೋಡಿಯಂನಲ್ಲಿ ಸಂಸ್ಕರಿಸಲಾಗುತ್ತದೆ ಮತ್ತು ಸಂರಕ್ಷಕಗಳನ್ನು ಸೇರಿಸಲಾಗಿದೆ. ಅದು ಹೃದಯ ಸಮಸ್ಯೆಗಳ ದೊಡ್ಡ ಅಪಾಯವನ್ನು ಉಂಟುಮಾಡುತ್ತದೆ. ಇದು ಜೀರ್ಣಕ್ರಿಯೆ ಮತ್ತು ರೋಗನಿರೋಧಕ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ.

ಇದನ್ನೂ ಓದಿ: Noodles Side Effect: ಇನ್‌ಸ್ಟಂಟ್‌ ನೂಡಲ್‌‌ಗಳನ್ನು ಸೇವಿಸಿದರೆ ನಮ್ಮ ಆರೋಗ್ಯದ ಮೇಲಾಗುವ ಪರಿಣಾಮಗಳೇನು?

Healthy Heart Tips


ಎಣ್ಣೆಯುಕ್ತ ಆಹಾರಗಳು

ಆಲೂ ಟಿಕ್ಕಿ, ಚಾಟ್ ಮತ್ತು ಹೆಚ್ಚಿನ ಎಣ್ಣೆಯುಕ್ತ ಆಹಾರವನ್ನು ಸೇವಿಸುವುದನ್ನು ತಪ್ಪಿಸಬೇಕು. ಅವು ಸ್ಯಾಚುರೇಟೆಡ್ ಕೊಬ್ಬು ಮತ್ತು ಹೆಚ್ಚಿನ ಕ್ಯಾಲೋರಿಗಳನ್ನು ಹೊಂದಿರುತ್ತವೆ. ಸರಾಗವಾದ ರಕ್ತದ ಹರಿವನ್ನು ತಡೆಯುವ ಅಪಧಮನಿಗಳಲ್ಲಿ ಪ್ಲೇಕ್ ಅನ್ನು ನಿರ್ಮಿಸಬಹುದು. ಇದು ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ.

Continue Reading
Advertisement
Ananth Ambani Wedding
ದೇಶ12 mins ago

Anant Ambani Wedding: ಅನಂತ್‌ ಅಂಬಾನಿ ಮದುವೆಯಲ್ಲಿ ಬಾಂಬ್‌ ಸ್ಫೋಟಕ್ಕೆ ನಡೆದಿತ್ತಾ ಸಂಚು? ಕಿಡಿಗೇಡಿ ಅರೆಸ್ಟ್‌

Yuvraj Singh
ಕ್ರೀಡೆ22 mins ago

Yuvraj Singh : ಅಂಗವಿಕಲರಂತೆ ರೀಲ್ಸ್​ ಮಾಡಿದ ಯುವರಾಜ್​, ಹರ್ಭಜನ್​ ಸಿಂಗ್ ವಿರುದ್ಧ ದೂರು ದಾಖಲು

Mosaic of Modernity art exhibition by Gallery G in Bengaluru
ಕರ್ನಾಟಕ54 mins ago

Bengaluru News: ಬೆಂಗಳೂರಿನಲ್ಲಿ ಗ್ಯಾಲರಿ ಜಿ ಯಿಂದ ‘ಮೊಸಾಯಿಕ್ ಆಫ್ ಮಾಡರ್ನಿಟಿ’ ಕಲಾ ಪ್ರದರ್ಶನ

Viral Video
ವೈರಲ್ ನ್ಯೂಸ್56 mins ago

Viral Video: ಪಕ್ಷದ ಕಾರ್ಯಕರ್ತನಿಗೆ ರಪ್‌ ಅಂತಾ ಕೆನ್ನೆಗೆ ಬಾರಿಸಿದ ಟಿಎಂಸಿ ನಾಯಕಿ; ವಿಡಿಯೋ ಇದೆ

T20 World Cup 2024
ಪ್ರಮುಖ ಸುದ್ದಿ2 hours ago

T20 World Cup 2024 : 30 ಎಸೆತಕ್ಕೆ 30 ರನ್​ ಇದ್ದಾಗ ದಿಕ್ಕೇ ತೋಚದಂತಾಗಿದ್ದೆ! ಆ ತಲ್ಲಣ ವಿವರಿಸಿದ ಶರ್ಮಾ

Assembly Session
ಕರ್ನಾಟಕ2 hours ago

Assembly Session: ಅಧಿಕಾರಿಗಳು ಮಾಡಿದ ಅಕ್ರಮಕ್ಕೆ ಸಚಿವರ ವಿರುದ್ಧ ಆರೋಪಿಸುವುದು ಸರಿಯಲ್ಲ ಎಂದ ಡಿಕೆಶಿ!

A 15 year old boy weighing 111 kg underwent successful spinal disc surgery that avoided potential paralysis
ಕರ್ನಾಟಕ2 hours ago

Fortis Hospital: 111 ಕೆಜಿ ತೂಕವಿದ್ದ ಬಾಲಕನಿಗೆ ಪಾರ್ಶ್ವವಾಯು ತಪ್ಪಿಸಿದ ʼಬೆನ್ನೆಲುಬಿನ ಡಿಸ್ಕ್ʼ ಶಸ್ತ್ರಚಿಕಿತ್ಸೆ

Pooja Khedkar
ದೇಶ2 hours ago

Pooja Khedkar: ಪೂಜಾ ಖೇಡ್ಕರ್‌ ಪುಣೆ ಜಿಲ್ಲಾಧಿಕಾರಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ

Larva survey Show the old photo without GPS and get crores of rupees to the government Cheating Alleged by MLC TA Sharavana
ಕರ್ನಾಟಕ2 hours ago

Assembly Session: ಲಾರ್ವಾ ಸರ್ವೇ; ಜಿಪಿಎಸ್ ಇಲ್ಲದ ಹಳೆ ಫೋಟೋ ತೋರಿಸಿ ಕೋಟ್ಯಂತರ ರೂ. ಮೋಸ; ಶರವಣ ಆರೋಪ

A permanent solution to artificial flood on national highways says MP Vishweshwar Hegde Kageri
ಉತ್ತರ ಕನ್ನಡ2 hours ago

Uttara Kannada News: ರಾಷ್ಟ್ರೀಯ ಹೆದ್ದಾರಿಯಲ್ಲಿ ಕೃತಕ ನೆರೆ ತಡೆಗೆ ಶಾಶ್ವತ ಪರಿಹಾರ; ಕಾಗೇರಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ11 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ12 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 day ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌