ರಾಜಮಾರ್ಗ ಅಂಕಣ: ಈ ಚಿತ್ರಾಕ್ಷರಗಳಿಗೆ ಇಂದು 25 ವರ್ಷ ತುಂಬಿತು! - Vistara News

ಪ್ರಮುಖ ಸುದ್ದಿ

ರಾಜಮಾರ್ಗ ಅಂಕಣ: ಈ ಚಿತ್ರಾಕ್ಷರಗಳಿಗೆ ಇಂದು 25 ವರ್ಷ ತುಂಬಿತು!

ರಾಜಮಾರ್ಗ ಅಂಕಣ: 11 ವರ್ಷಗಳ ಹಿಂದೆ ಇದೇ ದಿನ ಒಂದು ಕಂಪೆನಿಯು ಎಮೋಜಿಗಳನ್ನು ಒಳಗೊಂಡ ಒಂದು ಕ್ಯಾಲೆಂಡರ್ ಪಬ್ಲಿಷ್ ಮಾಡಿತ್ತು. ಅಂದಿನಿಂದ ಈ ದಿನವನ್ನು ವಿಶ್ವ ಎಮೋಜಿ ದಿನವಾಗಿ ( World Emoji Day) ಆಚರಣೆ ಮಾಡಲಾಗುತ್ತಿದೆ. ಇಂದು ಜಗತ್ತಿನ ಎಲ್ಲ ಭಾಷೆಗಳನ್ನೂ ಮೀರಿ ಬೆಳೆಯುತ್ತಿರುವ ಈ ಚಿತ್ರಾಕ್ಷರಗಳಿಗೆ ನಮ್ಮ ಒಂದು ಮೆಚ್ಚುಗೆಯ ಎಮೋಜಿ ಇರಲಿ.

VISTARANEWS.COM


on

world emoji day ರಾಜಮಾರ್ಗ ಅಂಕಣ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜುಲೈ 17 ವಿಶ್ವ ಇಮೋಜಿ ದಿನ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ʻಒಂದು ಚಿತ್ರವು ಸಾವಿರ ಶಬ್ದಗಳಿಗೆ ಸಮ’ ಎನ್ನುತ್ತದೆ ಚೈನೀಸ್ (Chinese) ಭಾಷೆ. ನಾವು, ನೀವೆಲ್ಲ ವಾಟ್ಸ್ಯಾಪ್ (WhatsApp), ಫೇಸ್ ಬುಕ್ (Facebook), ಟ್ವಿಟರ್ (Twitter) ಎಲ್ಲ ಕಡೆಗಳಲ್ಲಿ ಮೆಸೇಜ್ (Message) ರವಾನೆ ಮಾಡುವಾಗ, ಸ್ವೀಕಾರ ಮಾಡುವಾಗ ಈ ಚಂದ ಚಂದವಾದ ಎಮೋಜಿಗಳನ್ನು (Emojis) ಬಳಕೆ ಮಾಡಿಯೇ ಮಾಡಿರುತ್ತೇವೆ. ಉದ್ದುದ್ದ ಮೆಸೇಜ್ ಟೈಪಿಸಲು ಆಸಕ್ತಿ ಇಲ್ಲದೆ ಹೋದಾಗ, ಸಮಯದ ಕೊರತೆ ಇದ್ದಾಗ ಒಂದು ಎಮೋಜಿ ಹಾಕಿ ಭಾವನೆಗಳನ್ನು ವ್ಯಕ್ತಪಡಿಸಿದ್ದು ಇದೆ. ಈ ಎಮೋಜಿಗಳು ಉಂಟುಮಾಡುತ್ತಿರುವ ಮೂಡ್ ಇದೆಯಲ್ಲ ಅದು ವರ್ಣನಾತೀತ ಮತ್ತು ಭಾವನಾತೀತ.

ಈ ಎಮೋಜಿಗಳು ಇಂದು ಜಾಗತಿಕ ಭಾಷೆಯೇ ಆಗಿಬಿಟ್ಟಿವೆ!

ಈ ಎಮೋಜಿಗಳಿಗೂ ಒಂದು ಇತಿಹಾಸ ಇದೆ ಎಂದರೆ ನಮಗೆ ನಂಬುವುದು ಕಷ್ಟ ಆಗಬಹುದು. ಜಪಾನ್ ಭಾಷೆಯಲ್ಲಿ ಎ ಅಂದರೆ ಚಿತ್ರ. ಮೋಜಿ ಅಂದರೆ ಅಕ್ಷರ. ಒಟ್ಟಿನಲ್ಲಿ ಎಮೋಜಿ ಅಂದರೆ ಚಿತ್ರಾಕ್ಷರ ಎಂದರ್ಥ.

ಈ ಎಮೋಜಿಗಳು ಜನಿಸಿದ್ದು ಜಪಾನನಲ್ಲಿ. 1999ರಲ್ಲಿ ಜಪಾನ್ ದೇಶದ ಒಬ್ಬ ಸಾಮಾನ್ಯ ತಂತ್ರಜ್ಞ, ಆತನ ಹೆಸರು ಶಿಗೆತರ ಕುರಿತ, ಡೊಕೊಮೊ ಮೊಬೈಲ್ ಕಂಪೆನಿಗಾಗಿ ಈ ರೀತಿಯ 176 ಎಮೋಜಿಗಳನ್ನು ಡಿಸೈನ್ ಮಾಡಿ ಕೊಟ್ಟರು. ಅದರಲ್ಲಿ ನಗುವ, ಅಳುವ, ಸಿಟ್ಟು ತೋರುವ, ಕೊಂಕು ನುಡಿಯುವ, ಬೇಸರ ವ್ಯಕ್ತಪಡಿಸುವ, ಆನಂದ ಬಾಷ್ಪ ಸುರಿಸುವ, ಕೆಣಕುವ, ಸಿಡಿಯುವ….ಹೀಗೆ ನವರಸಗಳನ್ನು ಸ್ಫುರಿಸುವ ಎಮೋಜಿಗಳೂ ಇದ್ದವು. ಅವುಗಳು ಬಹುಬೇಗ ಜನಪ್ರಿಯ ಆದವು.

ಮುಂದೆ ಎಲ್ಲ ಮೊಬೈಲ್ ಕಂಪೆನಿಗಳು ಮುಗಿಬಿದ್ದು ಸಾವಿರಾರು ಎಮೋಜಿಗಳನ್ನು ತಮ್ಮ ಸಾಫ್ಟ್ ವೇರಗಳಲ್ಲಿ ಸಂಗ್ರಹ ಮಾಡಿ ಮಾರ್ಕೆಟ್ ಮಾಡಿದವು.

ಅದರಲ್ಲೂ ಆನಂದ ಭಾಷ್ಪ ಸುರಿಸುವ ಒಂದು ಎಮೋಜಿಯನ್ನು ನಾವು ಹೆಚ್ಚು ಬಳಕೆ ಮಾಡುತ್ತೇವೆ. ಅದನ್ನು 2015ರಲ್ಲಿ ಆಕ್ಸ್ಫರ್ಡ್ ವಿವಿಯು ‘ ವರ್ಷದ ಪದ’ ( ವರ್ಡ್ ಆಫ್ ದ ಇಯರ್) ಎಂದು ಪ್ರಶಸ್ತಿ ಕೊಟ್ಟು ಗೌರವಿಸಿತು. ಹಲವು ಮೊಬೈಲ್ ಕಂಪೆನಿಗಳು ಎಮೋಜಿಗಳನ್ನು ಜನಪ್ರಿಯ ಮಾಡಲು ಕೇವಲ ಅವುಗಳನ್ನು ಬಳಸಿ ಪ್ರೇಮಪತ್ರಗಳನ್ನು ಬರೆಯುವ ಸ್ಪರ್ಧೆಗಳನ್ನು ಏರ್ಪಡಿಸಿದವು! ಚಿತ್ರಕಲಾ ಸ್ಪರ್ಧೆಗಳೂ ಹಲವೆಡೆ ನಡೆದವು.

emoji1

ಆಪಲ್ ಮೊಬೈಲ್ ಕಂಪೆನಿ ಇನ್ನಷ್ಟು ಮುಂದೆ ಹೋಗಿ ಜೆನ್ ಮೋಜಿ ಎಂಬ ಹೆಸರಿನ ಅಪಡೆಟೆಡ್ ವರ್ಷನನ್ನು ಡೆವಲಪ್ ಮಾಡಿತು. ಈ ಚಿತ್ರಾಕ್ಷರದ ಸಂಕೇತಗಳು ಬಹುಬೇಗ ಜನಪ್ರಿಯ ಆದವು ಮತ್ತು ಜಗತ್ತಿನಾದ್ಯಂತ ತಲುಪಿದವು. ಒಂದರ್ಥದಲ್ಲಿ ಈ ಎಮೋಜಿಗಳು ಭಾಷೆಗಳ ಹಂಗನ್ನು ಮೀರಿ ಬೆಳೆದವು. ಇನ್ನೂ ಕೆಲವು ಮೊಬೈಲ್ ಕಂಪೆನಿಗಳು ತಮ್ಮ ಆಯ್ಕೆಯ ಎಮೋಜಿಗಳನ್ನು ಡಿಸೈನ್ ಮಾಡುವ ಸ್ವಾತಂತ್ರ್ಯವನ್ನು ಗ್ರಾಹಕರಿಗೆ ನೀಡಿ ಉದಾರತೆ ಮೆರೆದವು.

ಜುಲೈ 17 ಎಮೋಜಿ ದಿನ ಯಾಕೆ?

11 ವರ್ಷಗಳ ಹಿಂದೆ ಇದೇ ದಿನ ಒಂದು ಕಂಪೆನಿಯು ಎಮೋಜಿಗಳನ್ನು ಒಳಗೊಂಡ ಒಂದು ಕ್ಯಾಲೆಂಡರ್ ಪಬ್ಲಿಷ್ ಮಾಡಿತ್ತು. ಅಂದಿನಿಂದ ಈ ದಿನವನ್ನು ವಿಶ್ವ ಎಮೋಜಿ ದಿನವಾಗಿ ( World Emoji Day) ಆಚರಣೆ ಮಾಡಲಾಗುತ್ತಿದೆ. ಈಗ ಜನಪ್ರಿಯವಾಗುತ್ತಿರುವ ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್)ನ ಭಾಗವಾಗಿ ಕೂಡ ಈ ಎಮೋಜಿಗಳು ಉಂಟುಮಾಡುತ್ತಿರುವ ಪ್ರಭಾವವನ್ನು ಮತ್ತು ಸಂತೋಷವನ್ನು ನಾನು ಮತ್ತೆ ಬರೆಯುವ ಅಗತ್ಯವೇ ಇಲ್ಲ.

ಇಂದು ಜಗತ್ತಿನ ಎಲ್ಲ ಭಾಷೆಗಳನ್ನೂ ಮೀರಿ ಬೆಳೆಯುತ್ತಿರುವ ಈ ಚಿತ್ರಾಕ್ಷರಗಳಿಗೆ ನಮ್ಮ ಒಂದು ಮೆಚ್ಚುಗೆಯ ಎಮೋಜಿ ಇರಲಿ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಅಪರ್ಣಾ ಅಕ್ಕ, ಹೋಗಿ ಬನ್ನಿ…

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral Video: ಚಾಕೋಲೇಟ್ ತಿನ್ನುವ ಆಸೆಯಾಗಿ ಅಂಗಡಿಗೆ ಹೋಗಿದ್ದ ಬಾಲಕ ಶವವಾಗಿ ಮನೆಗೆ ಬಂದ; ಆಗಿದ್ದೇನು? ವಿಡಿಯೊ ನೋಡಿ

Viral Video: 5 ವರ್ಷದ ಬಾಲಕ ತನ್ನ 8 ವರ್ಷದ ಸಹೋದರಿಯ ಜೊತೆಗೆ ಅಂಗಡಿಯಲ್ಲಿ ಚಾಕೋಲೆಟ್ ಖರೀದಿಸುತ್ತಿದ್ದು, ಅಲ್ಲಿ ರಸ್ತೆಯ ದುರಸ್ತಿ ಕೆಲಸ ನಡೆಯುತ್ತಿದ್ದು, ಆ ವೇಳೆ ರಸ್ತೆಯಲ್ಲಿ ಕೆಲಸ ಮಾಡುತ್ತಿದ್ದ ಜೆಸಿಬಿ ಆ ಬಾಲಕನಿಗೆ ತಗುಲಿ ಆತ ಅಲ್ಲೆ ನೆಲಕ್ಕೆ ಬಿದ್ದಿದ್ದಾನೆ. ನಂತರ ಅಲ್ಲಿದ್ದವರು ಬಾಲಕನನ್ನು ಸುತ್ತುವರಿದಿರುವುದು ಕಂಡುಬರುತ್ತದೆ. ಈ ಘಟನೆ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮೃತನನ್ನು ಲಾಹಿಯಾ ಕಾಲೋನಿ ನಿವಾಸಿ ರಾಕೇಶ್ ಕಬ್ರೆ ಅವರ ಪುತ್ರ ಶಿವಾಂಶ್ ಎಂದು ಗುರುತಿಸಲಾಗಿದೆ.

VISTARANEWS.COM


on

Viral Video
Koo

ಇಂದೋರ್ : ಮಳೆಗಾಲದಲ್ಲಿ ರಸ್ತೆಗಳು ಹಾಳಾಗಿರುವ ಕಾರಣ ಅಲ್ಲಲ್ಲಿ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುತ್ತದೆ. ಹಾಗಾಗಿ ನಿಮ್ಮ ಚಿಕ್ಕ ಮಕ್ಕಳನ್ನು ಅಂತಹ ರಸ್ತೆಯಲ್ಲಿ ಕಳುಹಿಸುವ ಮುನ್ನ ಪೋಷಕರು ಎಚ್ಚರಿಕೆಯಿಂದಿರಿ. ಇಲ್ಲವಾದರೆ ಅದರಿಂದ ಅವರಿಗೆ ಅಪಾಯವಾಗಬಹುದು. ಅಂತಹದೊಂದು ಘಟನೆ ಇದೀಗ ಇಂದೋರ್ ನಲ್ಲಿ ನಡೆದಿರುವುದಾಗಿ ಬೆಳಕಿಗೆ ಬಂದಿದೆ. ಚಾಕೋಲೇಟ್ ಖರೀದಿಸಲು ತನ್ನ ಸಹೋದರಿಯ ಜೊತೆಗೆ ಅಂಗಡಿಗೆ ಹೋದ ಬಾಲಕನಿಗೆ ರಸ್ತೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಜೆಸಿಬಿ ಹೊಡೆದು ಗಾಯಗೊಂಡು ಸಾವನಪ್ಪಿದ ಘಟನೆ ಇಂದೋರ್‌ನಲ್ಲಿ ನಡೆದಿದ್ದು, ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video )ಆಗಿದೆ.

ವೈರಲ್ ಆದ ವಿಡಿಯೊದಲ್ಲಿ 5 ವರ್ಷದ ಬಾಲಕ ತನ್ನ 8 ವರ್ಷದ ಸಹೋದರಿಯ ಜೊತೆಗೆ ಅಂಗಡಿಯಲ್ಲಿ ಚಾಕೋಲೆಟ್ ಖರೀದಿಸುತ್ತಿದ್ದು, ಅಲ್ಲಿ ರಸ್ತೆಯ ದುರಸ್ತಿ ಕೆಲಸ ನಡೆಯುತ್ತಿದ್ದು, ಆ ವೇಳೆ ರಸ್ತೆಯಲ್ಲಿ ಕೆಲಸ ಮಾಡುತ್ತಿದ್ದ ಜೆಸಿಬಿ ಆ ಬಾಲಕನಿಗೆ ತಗುಲಿ ಆತ ಅಲ್ಲೆ ನೆಲಕ್ಕೆ ಬಿದ್ದಿದ್ದಾನೆ. ನಂತರ ಅಲ್ಲಿದ್ದವರು ಬಾಲಕನನ್ನು ಸುತ್ತುವರಿದಿರುವುದು ಕಂಡುಬರುತ್ತದೆ. ಈ ಘಟನೆ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಮೃತನನ್ನು ಲಾಹಿಯಾ ಕಾಲೋನಿ ನಿವಾಸಿ ರಾಕೇಶ್ ಕಬ್ರೆ ಅವರ ಪುತ್ರ ಶಿವಾಂಶ್ ಎಂದು ಗುರುತಿಸಲಾಗಿದೆ.

ಆತನ ಸಹೋದರಿಗೆ ಯಾವುದೇ ಗಾಯಗಳಾಗಿರಲಿಲ್ಲ ಎಂಬುದಾಗಿ ತಿಳಿದುಬಂದಿದೆ. ವರದಿ ಪ್ರಕಾರ, ಜುಲೈ 15ರಂದು ಲಾಹಿಯಾ ಕಾಲೋನಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ರಸ್ತೆಯಲ್ಲಿ ಕೆಲಸ ಮಾಡುವಾಗ ಜೆಸಿಬಿ ಯಂತ್ರದ ಚಾಲಕ ಅದನ್ನು ಇನ್ನೊಬ್ಬನ ಚಾಲಕನಿಗೆ ಹಸ್ತಾಂತರಿಸಿದ. ಇದರ ಪರಿಣಾಮವಾಗಿ ಕೆಲಸ ಮಾಡುವಾಗ ಜೆಸಿಬಿ ಚಾಲಕನ ನಿಯಂತ್ರಣ ತಪ್ಪಿ ಅಲ್ಲಿ ಅಂಗಡಿಯಲ್ಲಿ ಚಾಕೋಲೇಟ್ ತೆಗೆದುಕೊಂಡು ನಿಂತಿದ್ದ ಬಾಲಕನ ಮುಖಕ್ಕೆ ಹೊಡೆದಿದೆ. ಕೆಲಗೆ ಬಿದ್ದ ಅವನನ್ನು ತಕ್ಷಣ ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಅಲ್ಲಿ ಆತ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಆದರೆ ಪೊಲೀಸರು ಜೆಸಿಬಿಯನ್ನು ವಶಪಡಿಸಿಕೊಂಡು ಗುತ್ತಿಗೆದಾರ ಮತ್ತು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಈ ಹಿನ್ನಲೆಯಲ್ಲಿ ಬ್ರಿಲಿಯಂಟ್ ಕನ್ವೆನ್ಷನ್ ಸೆಂಟರ್ ಬಳಿಯ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಬಾಲಕನ ಕುಟುಂಬ ಮತ್ತು ಇತರ ನಿವಾಸಿಗಳು ಚಾಲಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಹಲವಾರು ಗಂಟೆಗಳ ಕಾಲ ಪ್ರತಿಭಟನೆ ನಡೆಸಿದರು. ಇದರಿಂದ ಟ್ರಕ್‌ಗಳು ಸೇರಿದಂತೆ ಹಲವಾರು ವಾಹನಗಳು ಸೇರಿ ಅಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಹಿರಾ ನಗರ ಎಸಿಪಿ ಡಿ.ಎಸ್.ಯೆವಾಲೆ ಮತ್ತು ವಿಜಯ್ ನಗರ ಎಸಿಪಿ ಕೃಷ್ಣ ಲಾಲ್ಚಂದಾನಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಪೊಲೀಸ್ ಪಡೆಗಳೊಂದಿಗೆ ಸ್ಥಳಕ್ಕೆ ತಲುಪಿ ಮಾರ್ಗವನ್ನು ತೆರವುಗೊಳಿಸಿದರು.

ಇದನ್ನೂ ಓದಿ: 3 ವರ್ಷದ ಅಂಬಾನಿ ಮೊಮ್ಮಗ ವೇದಿಕೆ ಮೇಲೆ ಜಾರಿ ಬಿದ್ದ, ಆದರೆ ಜನರ ಹೃದಯ ಗೆದ್ದ!

ನಂತರ ಅವರು ಪ್ರತಿಭಟನೆ ನಡೆಸುತ್ತಿದ್ದ ಜನಸಮೂಹವನ್ನು ಸಮಾಧಾನಪಡಿಸಿ ತನಿಖೆಯ ನಂತರ ಜವಾಬ್ದಾರಿಯುತರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಅಲ್ಲದೇ ಮೇಯರ್ ಪುಷ್ಯಮಿತ್ರ ಭಾರ್ಗವ್ ಅವರು ಮೃತ ಶಿವಾಂಶ್ ಕಾಬ್ರೆ ಅವರ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಧನ ನೀಡುವುದಾಗಿ ಘೋಷಿಸಿದ್ದಾರೆ ಎನ್ನಲಾಗಿದೆ.

Continue Reading

ಪ್ರಮುಖ ಸುದ್ದಿ

Anant Radhika Wedding: ಪ್ರತಿ ಭಾನುವಾರ ನಮ್ಮನೇಲಿ ನಿಮ್ಮದೇ ತಿಂಡಿ; ಮೈಸೂರು ಕೆಫೆ ಮಾಲಕಿಯ ಕಾಲು ಮುಟ್ಟಿ ನಮಸ್ಕರಿಸಿದ ಅನಂತ್ ಅಂಬಾನಿ! ವಿಡಿಯೊ ನೋಡಿ

Anant Radhika Wedding: ಮೂರು ದಿನಗಳ ಸಮಾರಂಭದಲ್ಲಿ ಜಾಗತಿಕ ನಾಯಕರು, ರಾಜಕಾರಣಿಗಳು, ಸೆಲೆಬ್ರಿಟಿಗಳು ಮತ್ತು ಸಾಮಾಜಿಕ ಮಾಧ್ಯಮದ ಪ್ರಭಾವಿಗಳು ಭಾಗವಹಿಸಿದ್ದರು. ಮುಂಬಯಿಯ ಖ್ಯಾತ ಮೈಸೂರು ಕೆಫೆಯ ಮಾಲೀಕರಾದ ನರೇಶ್ ನಾಯಕ್ ಅವರ ತಾಯಿ ಶಾಂತೇರಿ ನಾಯಕ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.

VISTARANEWS.COM


on

anant radhika wedding
Koo

ಮುಂಬಯಿ: ತಮ್ಮ ಮದುವೆ (Anant Radhika Wedding) ಕಾರ್ಯಕ್ರಮದಲ್ಲಿ ಭಾಗವಹಿಸಿದ ಮೈಸೂರು ಕೆಪೆಯ (Mysore Cafe) ಮಾಲಕಿಯ ಕಾಲು ಮುಟ್ಟಿ ಅನಂತ್‌ ಅಂಬಾನಿ (Anant Ambani) ಹಾಗೂ ರಾಧಿಕಾ (Radhika Merchant) ನಮಸ್ಕರಿಸಿದ ವಿಡಿಯೋ ಇದೀಗ ವೈರಲ್‌ (Viral Video) ಆಗುತ್ತಿದೆ. “ಪ್ರತಿ ಭಾನುವಾರ ನಮ್ಮ ಮನೆಯಲ್ಲಿ ನಿಮ್ಮದೇ ತಿಂಡಿ” ಎಂದು ಅನಂತ್‌ ಆಡುವ ಮಾತುಗಳು ಕೂಡ ವಿಡಿಯೋದಲ್ಲಿ ದಾಖಲಾಗಿವೆ.

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಅದ್ಧೂರಿ ವಿವಾಹ ಮಹೋತ್ಸವದಲ್ಲಿ ವಿಐಪಿ ತಾರಾ ಬಳಗ ಭಾಗವಹಿಸಿದ್ದು, ಜೊತೆಗೆ ಉದ್ಯಮ ಕ್ಷೇತ್ರದ ಗಣ್ಯರೂ ಆಗಮಿಸಿದರು. ಮೂರು ದಿನಗಳ ಸಮಾರಂಭದಲ್ಲಿ ಜಾಗತಿಕ ನಾಯಕರು, ರಾಜಕಾರಣಿಗಳು, ಸೆಲೆಬ್ರಿಟಿಗಳು ಮತ್ತು ಸಾಮಾಜಿಕ ಮಾಧ್ಯಮದ ಪ್ರಭಾವಿಗಳು ಭಾಗವಹಿಸಿದ್ದರು. ಮುಂಬಯಿಯ ಖ್ಯಾತ ಮೈಸೂರು ಕೆಫೆಯ ಮಾಲೀಕರಾದ ನರೇಶ್ ನಾಯಕ್ ಅವರ ತಾಯಿ ಶಾಂತೇರಿ ನಾಯಕ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಅನಂತ್‌ ಅಂಬಾನಿ ಶಾಂತೇರಿ ನಾಯಕ್‌ ಅವರನ್ನು ಗುರುತಿಸಿ ರಾಧಿಕಾರನ್ನು ಕರೆದಿದ್ದಾರೆ. ನಂತರ ರಾಧಿಕಾ ಹಾಗೂ ಅನಂತ್‌ ಬಾಗಿ ಶಾಂತೇರಿಯವರ ಕಾಲು ಮುಟ್ಟಿ ನಮಸ್ಕರಿಸಿದರು. “ಪ್ರತಿ ಭಾನುವಾರ ನಮ್ಮ ಮನೆಯಲ್ಲಿ ನಿಮ್ಮದೇ ತಿಂಡಿ” ಎಂದು ಅನಂತ್‌ ಹೇಳಿದರು. ಶಾಂತೇರಿ ನಗುತ್ತಾ ಇಬ್ಬರನ್ನೂ ಆಶೀರ್ದಿಸಿದರು. ಮೈಸೂರು ಕೆಫೆಯ ಮಾಲಕಿ ಶಾಂತೇರಿಯವರು ಕೆಫೆಯನ್ನು ಮಗ ನರೇಶ್‌ಗೆ ಇತ್ತಿಚೆಗೆ ಹಸ್ತಾಂತರಿಸಿದ್ದಾರೆ.

ಜುಲೈ 12ರಂದು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ತಾರಾಗಣದ ಮುಂದೆ ಮದುವೆಯಾದರು. ಅದ್ಧೂರಿ ಮದುವೆಯಲ್ಲಿ ಗುಜರಾತಿ ಸಂಪ್ರದಾಯ ಹಾಗೂ ಪಾಶ್ಚಾತ್ಯ ಪದ್ಧತಿಗಳನ್ನು ಬೆರೆಸಲಾಗಿತ್ತು. ಅವರು ಹಾರಗಳನ್ನು ತೊಡಿಸಿದ್ದಲ್ಲದೆ, ಅಗ್ನಿಕುಂಡದ ಸುತ್ತ ಹೆಜ್ಜೆ ಹಾಕಿದರು. ಮದುವೆಯ ಪ್ರತಿಜ್ಞೆಗಳನ್ನು ಪರಸ್ಪರ ಪಠಿಸಿದರು.

ವಿವಾಹ ಮಹೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬ್ರಿಟನ್‌ನ ಮಾಜಿ ಪ್ರಧಾನಿಗಳಾದ ಬೋರಿಸ್ ಜಾನ್ಸನ್, ಟೋನಿ ಬ್ಲೇರ್, ಫ್ಯೂಚರಿಸ್ಟ್ ಪೀಟರ್ ಡೈಮಂಡಿಸ್, ಕಲಾವಿದ ಜೆಫ್ ಕೂನ್ಸ್, ಅಮೆರಿಕದ ಮಾಜಿ ವಿದೇಶಾಂಗ ಕಾರ್ಯದರ್ಶಿ ಜಾನ್ ಕೆರ್ರಿ, ಕೆನಡಾದ ಮಾಜಿ ಪ್ರಧಾನಿ ಸ್ಟೀಫನ್ ಹಾರ್ಪರ್ ಉಪಸ್ಥಿತರಿದ್ದರು. ಅಂಬಾನಿ ಕುಟುಂಬವು ಮಾಡೆಲ್‌ಗಳಾದ ಕಿಮ್ ಕಾರ್ಡಶಿಯಾನ್, ಖ್ಲೋ ಕಾರ್ಡಶಿಯಾನ್, ಜಾನ್ ಸೆನಾ, ನಟ ನಟಿಯರಾದ ಪ್ರಿಯಾಂಕಾ ಚೋಪ್ರಾ, ನಿಕ್ ಜೋನಾಸ್ ಮತ್ತಿತರ ಬಾಲಿವುಡ್ ಸೆಲೆಬ್ರಿಟಿಗಳಿಗೆ ಆತಿಥ್ಯ ನೀಡಿದೆ.

ಅನಂತ್ ಪೇಟಾದಲ್ಲಿ ಧರಿಸಿದ್ದ ಕಲ್ಗಿ ಬೆಲೆ ಎಷ್ಟು?

ಭಾರತದ ಶ್ರೀಮಂತ ಕುಟುಂಬವಾದ ಅಂಬಾನಿ ಮನೆತನದ (ambani family) ವಿವಾಹ (Anant Radhika Wedding) ಸಮಾರಂಭ ವಿಶ್ವದ ಗಮನ ಸೆಳೆದಿದೆ. ಉಡುಗೆ ತೊಡುಗೆಯಿಂದ ಹಿಡಿದು ಖಾದ್ಯ ವೈಶಿಷ್ಟ್ಯಗಳು ಸೇರಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹದ ಪ್ರತಿಯೊಂದು ಕ್ಷಣ, ಪ್ರತಿಯೊಂದು ವಿಷಯಗಳು ಎಲ್ಲರ ಗಮನ ಸೆಳೆದಿತ್ತು. ಇದರಲ್ಲಿ ಈಗ ಅನಂತ್ ಪೇಟಾದಲ್ಲಿ ಧರಿಸಿದ್ದ ಕಲ್ಗಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿದೆ.

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹವು ಮುಂಬಯಿಯಲ್ಲಿ (mumbai) ಕನಸಿನ ಲೋಕವನ್ನೇ ತೆರೆದಿಟ್ಟಿತ್ತು. ಅನೇಕರ ಕಲ್ಪನೆಗೆ ಬಣ್ಣ ತುಂಬಿದ ಈ ಮದುವೆಯಲ್ಲಿ ಬೆರಗುಗೊಳಿಸುವ ಅಲಂಕಾರ, ಅದ್ದೂರಿ ವಿನ್ಯಾಸಕ ಉಡುಪುಗಳು ಹೀಗೆ ಮದುವೆಯ ಪ್ರತಿಯೊಂದು ಅಂಶವು ಇಲ್ಲಿಯವರೆಗಿನ ಅತ್ಯಂತ ಅತಿರಂಜಿತ ಭಾರತೀಯ ವಿವಾಹಗಳಲ್ಲಿ ಒಂದಾಗಿ ಅಲೆಗಳನ್ನು ಸೃಷ್ಟಿಸಿತು.

ಮುಂಬಯಿನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ಬಿಕೆಸಿ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ಜುಲೈ 12ರಂದು ನಡೆದ ಅದ್ಧೂರಿ ಸಮಾರಂಭದಲ್ಲಿ ಬಾಲ್ಯದ ಸ್ನೇಹಿತೆಯನ್ನು ವಿವಾಹವಾದ ಅನಂತ್ ಅವರ ಮದುವೆ ಕಾರ್ಯಕ್ರಮಗಳು ಐಷಾರಾಮಿ ಮತ್ತು ಸೊಬಗುಗಳ ಅದ್ಭುತ ಪ್ರದರ್ಶನವಾಗಿತ್ತು. ಸಂಕೀರ್ಣವಾದ ಹೂವಿನ ಅಲಂಕಾರ, ಬೆರಗುಗೊಳಿಸುವ ದೀಪಗಳು ಮತ್ತು ಐಷಾರಾಮಿ ಸೆಟ್ಟಿಂಗ್‌ಗಳೊಂದಿಗೆ ಅತಿಥಿಗಳಿಗೆ ವೈಭವಯುತವಾದ ಹಬ್ಬದ ಸತ್ಕಾರ ನೀಡಲಾಯಿತು.

ಅನಂತ್ ಅವರ ಉಡುಪಿನ ಅಸಾಧಾರಣ ಅಂಶವೆಂದರೆ ಅವರ ರಾಯಲ್ ಕಲ್ಗಿ ಬ್ರೋಚ್. ಸಫಾ ಸಮಾರಂಭದಲ್ಲಿ ಅವರು ಚಿನ್ನದ ಸಫಾ (ಟರ್ಬನ್) ಮತ್ತು ಅವರ ಕೆಂಪು ಬಂಧನಿ ಸಫಾ ಎರಡರಲ್ಲೂ ಇದನ್ನು ಧರಿಸಿದ್ದರು. ಬೃಹತ್ ವಜ್ರ ಹೊದಿಕೆಯನ್ನು ಹೊಂದಿದ್ದ ಇದು ಸಾಂಪ್ರದಾಯಿಕವಾಗಿ ರಾಜಮನೆತನದವರು ಧರಿಸುವ ಅತಿರಂಜಿತ ಪರಿಕರವಾಗಿದೆ. ವೈರಲ್ ಭಯಾನಿ ಅವರ ಇನ್‌ಸ್ಟಾಗ್ರಾಮ್ ಪೋಸ್ಟ್ ಪ್ರಕಾರ ಈ ಕಲ್ಗಿಯ ಮೌಲ್ಯವು 160 ಕೋಟಿ ರೂ. ಗಳಾಗಿದ್ದು, ಇದು 150 ಫ್ಲಾಟ್‌ಗಳ ಬೆಲೆಗೆ ಸಮನಾಗಿದೆ.

ಇದನ್ನೂ ಓದಿ: Anant Ambani Wedding: ಅನಂತ್‌ ಅಂಬಾನಿ ಮದುವೆಯಲ್ಲಿ ಬಾಂಬ್‌ ಸ್ಫೋಟಕ್ಕೆ ನಡೆದಿತ್ತಾ ಸಂಚು? ಕಿಡಿಗೇಡಿ ಅರೆಸ್ಟ್‌

Continue Reading

ಪ್ರಮುಖ ಸುದ್ದಿ

GT World Mall: ಪಂಚೆ ಧರಿಸಿ ಬಂದ ರೈತರಿಗೆ ಪ್ರವೇಶ ನಿರಾಕರಿಸಿ ಅವಮಾನಿಸಿದ ಜಿಟಿ ವರ್ಲ್ಡ್‌ ಮಾಲ್‌

GT World Mall: ʼಪಂಚೆ ಧರಿಸಿದವರನ್ನು ಒಳಗೆ ಬಿಡುವುದಿಲ್ಲ, ಈ ಬಗ್ಗೆ ನಮಗೆ ಸೂಚನೆ ಇದೆʼ ಎಂದು ಸೆಕ್ಯುರಿಟಿ ಸಿಬ್ಬಂದಿ ಮುಖ್ಯಸ್ಥರು ಹೇಳಿದ್ದಾರೆ. ಯಾಕೆ ಬಿಡುವುದಿಲ್ಲ ಎಂದು ಮರುಪ್ರಶ್ನಿಸಿದ ರೈತರ ಮಗನಿಗೆ ʼನಿಮ್ಮ ಮೇಲೆ ಕೇಸ್‌ ಹಾಕುತ್ತೇವೆʼ ಎಂದು ಕೂಡ ಬೆದರಿಸಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

gt world mall
Koo

ಬೆಂಗಳೂರು: ಬೆಂಗಳೂರಿನ ಜಿಟಿ ವರ್ಲ್ಡ್‌ ಮಾಲ್‌ನಲ್ಲಿ (GT World Mall) ಪಂಚೆ (Dhoti) ಧರಿಸಿ ಬಂದ ರೈತರೊಬ್ಬರಿಗೆ ಮಾಲ್‌ ಸೆಕ್ಯುರಿಟಿ ಒಳಗೆ ಬಿಡದೆ ಅವಮಾನ (Insult) ಮಾಡಿ ಕಳಿಸಿದ ಘಟನೆ ನಡೆದಿದೆ.

ಬೆಂಗಳೂರಿನ ಮಾಗಡಿ ರಸ್ತೆಯ ಬಳಿ ಇರುವ ಜಿಟಿ ವರ್ಲ್ಡ್‌ ಮಾಲ್‌ಗೆ ಇಂದು ಬಂದ ರೈತರೊಬ್ಬರನ್ನು ಪಂಚೆ ಧರಿಸಿದ್ದಾರೆ ಎಂಬ ಕಾರಣದಿಂದ ಮಾಲ್‌ನ ಸಿಬ್ಬಂದಿ ಒಳಗೆ ಬಿಡಲಿಲ್ಲ. ಈ ಕುರಿತು ಪ್ರಶ್ನಿಸಿದಾಗ, ʼಪಂಚೆ ಧರಿಸಿದವರನ್ನು ಒಳಗೆ ಬಿಡುವುದಿಲ್ಲ, ಈ ಬಗ್ಗೆ ನಮಗೆ ಸೂಚನೆ ಇದೆʼ ಎಂದು ಸೆಕ್ಯುರಿಟಿ ಸಿಬ್ಬಂದಿ ಮುಖ್ಯಸ್ಥರು ಹೇಳಿದ್ದಾರೆ. ಯಾಕೆ ಬಿಡುವುದಿಲ್ಲ ಎಂದು ಮರುಪ್ರಶ್ನಿಸಿದ ರೈತರ ಮಗನಿಗೆ ʼನಿಮ್ಮ ಮೇಲೆ ಕೇಸ್‌ ಹಾಕುತ್ತೇವೆʼ ಎಂದು ಕೂಡ ಬೆದರಿಸಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ವಿಜಯನಗರದ ನಿವಾಸಿಯಾದ ನಾಗರಾಜ್ ಎಂಬವರ ತಂದೆ ಮೂಲತಃ ರೈತರಾಗಿದ್ದು ಅವರು ಹಾವೇರಿಯಿಂದ ಬೆಂಗಳೂರಿನಲ್ಲಿರುವ ಮಗನ ಮನೆಗೆ ಬಂದಿದ್ದರು. ಜು. 16ರಂದು ತಮ್ಮ ವೃದ್ಧ ತಂದೆಯವರಿಗೆ ಸಿನಿಮಾ ತೋರಿಸಿ ಖುಷಿಪಡಿಸಲು ನಿರ್ಧರಿಸಿದ ನಾಗರಾಜ್, ತಂದೆಯನ್ನು ಜಿಟಿ ಮಾಲ್‌ಗೆ ಕರೆದೊಯ್ದಿದ್ದರು. ಸಾಮಾನ್ಯವಾಗಿ ಪಂಚೆ ಉಡುವ ಹವ್ಯಾಸವಿರುವ ಅವರು ಎಂದಿನಂತೆಯೇ ಪಂಚೆ ಉಟ್ಟು ಮಗನ ಜೊತೆಗೆ ಮಾಲ್‌ಗೆ ತೆರಳಿದ್ದರು.

ಇದರಿಂದ ಆಕ್ರೋಶಗೊಂಡಿರುವ ರೈತ ವೇದಿಕೆಯ ಮುಖಂಡರು ಜಿಟಿ ವರ್ಲ್ಡ್‌ ಮಾಲ್‌ಗೆ ಪಂಚೆ ಧರಿಸಿ ಪ್ರವೇಶಿಸುವ ಹೋರಾಟ ಹಮ್ಮಿಕೊಳ್ಳಲು ನಿರ್ಧರಿಸಿದ್ದಾರೆ. ಪಂಚೆ ಧರಿಸಿದವರನ್ನು, ರೈತರನ್ನು ಕೀಳಾಗಿ ಕಾಣುವ ಈ ಮನೋಭಾವ ಕೊನೆಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಚಡ್ಡಿ ಧರಿಸಿ ಬಂದವರನ್ನು ಒಳಗೆ ಬಿಡುತ್ತೀರಿ, ಪಂಚೆ ಧರಿಸಿದ ರೈತರನ್ನು ಯಾಕೆ ಬಿಡುವುದಿಲ್ಲ ಎಂದು ಆಕ್ರೋಶಿತ ಜನತೆ ಸೋಶಿಯಲ್‌ ಮೀಡಿಯಾಗಳಲ್ಲಿ ಪ್ರಶ್ನಿಸಿದ್ದಾರೆ.

ಕೆಲವು ತಿಂಗಳ ಹಿಂದೆ ಪಂಚೆ ಧರಿಸಿ ಬಂದ ರೈತರೊಬ್ಬರನ್ನು ಮೆಟ್ರೋ ಸಿಬ್ಬಂದಿ ಒಳಗೆ ಬಿಟ್ಟಿರಲಿಲ್ಲ. ಇದು ಬಹಳ ದೊಡ್ಡ ಸುದ್ದಿಯಾಗಿತ್ತು. ಬಳಿಕ ಮೆಟ್ರೋ ಎಂಡಿಯೇ ಈ ಬಗ್ಗೆ ಕ್ಷಮೆ ಯಾಚಿಸಿ, ಹೀಗೆ ಮಾಡಿದ ಮೆಟ್ರೋ ಸಿಬ್ಬಂದಿಯ ಮೇಲೆ ಕ್ರಮ ಕೈಗೊಂಡಿದ್ದರು.

ಇಂದು ಬೆಂಗಳೂರಿನ ಡಬಲ್ ಡೆಕ್ಕರ್ ಫ್ಲೈಓವರ್‌ಗೆ ಚಾಲನೆ

ಬೆಂಗಳೂರು: ರಾಜಧಾನಿಯ ಬಹು ನಿರೀಕ್ಷಿತ 3.3 ಕಿಮೀ ಉದ್ದದ ಡಬಲ್ ಡೆಕ್ಕರ್ ಮೇಲ್ಸೇತುವೆ (Double-Decker Flyover), ದಕ್ಷಿಣ ಭಾರತದ (South India) ಮೊದಲ ಮೆಟ್ರೋ ಕಂ ಮೇಲ್ಸೇತುವೆ (Metro Cum Flyover) ಇಂದು (Inauguration) ಉದ್ಘಾಟನೆಗೊಳ್ಳಲಿದೆ. ಮಧ್ಯಾಹ್ನ 3 ಗಂಟೆಗೆ ಇದನ್ನು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DCM DK Shivakumar) ಉದ್ಘಾಟಿಸಲಿದ್ದಾರೆ. ಸಾರಿಗೆ ಸಚಿವ ಮತ್ತು ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾ ರೆಡ್ಡಿ (Ramalinga Reddy) ಮತ್ತು ಶಾಸಕರು ಇರಲಿದ್ದಾರೆ.

ಈ ಫ್ಲೈಓವರ್‌ ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ (ಸಿಎಸ್‌ಬಿ) ಜಂಕ್ಷನ್‌ವರೆಗೆ (Silk Board Junction) ಜೋಡಿಸಲಿದೆ. ಈ ಡಬಲ್ ಡೆಕ್ಕರ್-ಫ್ಲೈಓವರ್ ಮೇಲಿನ ಡೆಕ್‌ನಲ್ಲಿ ಎಲಿವೇಟೆಡ್ ಮೆಟ್ರೋ ಕಾರಿಡಾರ್ ಇದೆ. ಕೆಳಗಿನ ಡೆಕ್‌ನಲ್ಲಿ ವಾಹನ ಸಂಚಾರಕ್ಕಾಗಿ ಎಲಿವೇಟೆಡ್ ರಸ್ತೆಯನ್ನು ಒಳಗೊಂಡಿದೆ. ವಾಹನ ದಟ್ಟಣೆಗಾಗಿ ಕುಖ್ಯಾತವಾಗಿರುವ ಸಿಎಸ್‌ಬಿ ಜಂಕ್ಷನ್‌ನಲ್ಲಿ ಟ್ರಾಫಿಕ್ ಅವ್ಯವಸ್ಥೆಯನ್ನು ಈ ಮೇಲ್ಸೇತುವೆ ಹಗುರಗೊಳಿಸಲಿದೆ.

ಫ್ಲೈಓವರ್ ನಿರ್ಮಿತವಾಗಿದ್ದರೂ ಅದನ್ನು ವಾಹನ ಸಂಚಾರಕ್ಕೆ ತೆರೆಯಲು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್‌ಸಿಎಲ್) ವಿಳಂಬ ಮಾಡಿತ್ತು. ಬಲವಂತವಾಗಿ ತೆರೆಯುವುದಾಗಿ ಕಳೆದ ವಾರ ಎಎಪಿ ನಾಯಕರು ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: Steel Flyover: ಬೆಂಗಳೂರಿನ ಮೊದಲ ಸ್ಟೀಲ್‌ ಫ್ಲೈಓವರ್‌ ಸೇತುವೆಯಲ್ಲಿ ಬಿರುಕು

Continue Reading

ಪ್ರಮುಖ ಸುದ್ದಿ

Double-Decker Flyover: ಇಂದು ಬೆಂಗಳೂರಿನ ಡಬಲ್ ಡೆಕ್ಕರ್ ಫ್ಲೈಓವರ್‌ಗೆ ಚಾಲನೆ; ದಕ್ಷಿಣ ಭಾರತದ ಪ್ರಥಮ ಮೆಟ್ರೋ ಕಂ ಮೇಲ್ಸೇತುವೆ

Double-Decker Flyover: ಈ ಫ್ಲೈಓವರ್‌ ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ (ಸಿಎಸ್‌ಬಿ) ಜಂಕ್ಷನ್‌ವರೆಗೆ (Silk Board Junction) ಜೋಡಿಸಲಿದೆ. ಈ ಡಬಲ್ ಡೆಕ್ಕರ್-ಫ್ಲೈಓವರ್ ಮೇಲಿನ ಡೆಕ್‌ನಲ್ಲಿ ಎಲಿವೇಟೆಡ್ ಮೆಟ್ರೋ ಕಾರಿಡಾರ್ ಇದೆ. ಕೆಳಗಿನ ಡೆಕ್‌ನಲ್ಲಿ ವಾಹನ ಸಂಚಾರಕ್ಕಾಗಿ ಎಲಿವೇಟೆಡ್ ರಸ್ತೆಯನ್ನು ಒಳಗೊಂಡಿದೆ.

VISTARANEWS.COM


on

Double-Decker Flyover
Koo

ಬೆಂಗಳೂರು: ರಾಜಧಾನಿಯ ಬಹು ನಿರೀಕ್ಷಿತ 3.3 ಕಿಮೀ ಉದ್ದದ ಡಬಲ್ ಡೆಕ್ಕರ್ ಮೇಲ್ಸೇತುವೆ (Double-Decker Flyover), ದಕ್ಷಿಣ ಭಾರತದ (South India) ಮೊದಲ ಮೆಟ್ರೋ ಕಂ ಮೇಲ್ಸೇತುವೆ (Metro Cum Flyover) ಇಂದು (Inauguration) ಉದ್ಘಾಟನೆಗೊಳ್ಳಲಿದೆ. ಮಧ್ಯಾಹ್ನ 3 ಗಂಟೆಗೆ ಇದನ್ನು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DCM DK Shivakumar) ಉದ್ಘಾಟಿಸಲಿದ್ದಾರೆ. ಸಾರಿಗೆ ಸಚಿವ ಮತ್ತು ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾ ರೆಡ್ಡಿ (Ramalinga Reddy) ಮತ್ತು ಶಾಸಕರು ಇರಲಿದ್ದಾರೆ.

ಈ ಫ್ಲೈಓವರ್‌ ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ (ಸಿಎಸ್‌ಬಿ) ಜಂಕ್ಷನ್‌ವರೆಗೆ (Silk Board Junction) ಜೋಡಿಸಲಿದೆ. ಈ ಡಬಲ್ ಡೆಕ್ಕರ್-ಫ್ಲೈಓವರ್ ಮೇಲಿನ ಡೆಕ್‌ನಲ್ಲಿ ಎಲಿವೇಟೆಡ್ ಮೆಟ್ರೋ ಕಾರಿಡಾರ್ ಇದೆ. ಕೆಳಗಿನ ಡೆಕ್‌ನಲ್ಲಿ ವಾಹನ ಸಂಚಾರಕ್ಕಾಗಿ ಎಲಿವೇಟೆಡ್ ರಸ್ತೆಯನ್ನು ಒಳಗೊಂಡಿದೆ. ವಾಹನ ದಟ್ಟಣೆಗಾಗಿ ಕುಖ್ಯಾತವಾಗಿರುವ ಸಿಎಸ್‌ಬಿ ಜಂಕ್ಷನ್‌ನಲ್ಲಿ ಟ್ರಾಫಿಕ್ ಅವ್ಯವಸ್ಥೆಯನ್ನು ಈ ಮೇಲ್ಸೇತುವೆ ಹಗುರಗೊಳಿಸಲಿದೆ.

ಫ್ಲೈಓವರ್ ನಿರ್ಮಿತವಾಗಿದ್ದರೂ ಅದನ್ನು ವಾಹನ ಸಂಚಾರಕ್ಕೆ ತೆರೆಯಲು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್‌ಸಿಎಲ್) ವಿಳಂಬ ಮಾಡಿತ್ತು. ಬಲವಂತವಾಗಿ ತೆರೆಯುವುದಾಗಿ ಕಳೆದ ವಾರ ಎಎಪಿ ನಾಯಕರು ಎಚ್ಚರಿಕೆ ನೀಡಿದ್ದರು.

ಮೇಲ್ಸೇತುವೆಯ ಲೂಪ್‌ಗಳು ಮತ್ತು ಇಳಿಜಾರುಗಳ ನಿರ್ಮಾಣವನ್ನು M/s ಅಫ್ಕಾನ್ಸ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್‌ ಕಾರ್ಯಗತಗೊಳಿಸಿದೆ. ರಾಗಿಗುಡ್ಡದಿಂದ ಡಬ್ಬಲ್ ಡೆಕ್ಕರ್ ಮೇಲ್ಸೇತುವೆ ಮೂಲಕ ಬರುವ ವಾಹನ ಬಳಕೆದಾರರು ಎ ರ‍್ಯಾಂಪ್ ಮೂಲಕ ಹೊಸೂರು ರಸ್ತೆ ಮತ್ತು ಸಿ ರ‍್ಯಾಂಪ್ ಮೂಲಕ ಎಚ್ಎಸ್ಆರ್ ಲೇಔಟ್ ತಲುಪುತ್ತಾರೆ.

ನೆಲಮಟ್ಟದಲ್ಲಿರುವ ರ‍್ಯಾಂಪ್ ಬಿ, ಬಿಟಿಎಂ ಬದಿಯಿಂದ ಹೊರವರ್ತುಲ ರಸ್ತೆ ಮತ್ತು ಹೊಸೂರು ರಸ್ತೆಯನ್ನು ಪ್ರವೇಶಿಸಲು ರ‍್ಯಾಂಪ್ ಎ ಅನ್ನು ಸಂಪರ್ಕಿಸುತ್ತದೆ. ಎಚ್‌ಎಸ್‌ಆರ್ ಲೇಔಟ್‌ನಿಂದ ಬರುವವರು ರ‍್ಯಾಂಪ್ ಎ ಮತ್ತು ಹಳದಿ ಲೈನ್ ಮೆಟ್ರೋ ಲೈನ್‌ನ ಮೇಲೆ ಹಾದು ಹೋಗುವ ರ‍್ಯಾಂಪ್ ಡಿ ಮೂಲಕ ರಾಗಿಗುಡ್ಡ ಕಡೆಗೆ ತಲುಪಲು ಸಾಧ್ಯವಾಗುತ್ತದೆ ಮತ್ತು ಬಿಟಿಎಂ ಲೇಔಟ್‌ಗೆ ಪ್ರವೇಶಿಸಲು ಡೌನ್ ರ‍್ಯಾಂಪ್ ಇಯೊಂದಿಗೆ ಮುಂದುವರಿಯುತ್ತದೆ.

ರ‍್ಯಾಂಪ್ ಎ ಮತ್ತು ರ‍್ಯಾಂಪ್ ಬಿ ಎರಡೂ ಅಸ್ತಿತ್ವದಲ್ಲಿರುವ ಮಡಿವಾಳ ಮೇಲ್ಸೇತುವೆಯ ಮೇಲೆ ವಿಲೀನಗೊಳ್ಳುತ್ತವೆ. ಇವು ಅತ್ಯಂತ ಜನನಿಬಿಡ ರಾಷ್ಟ್ರೀಯ ಹೆದ್ದಾರಿ (NH-44) ನಲ್ಲಿ ನಿರಂತರವಾಗಿ ಮುಂದುವರಿಯುತ್ತವೆ. ಇವು ನಾಲ್ಕು ನಿರಂತರ ವೇಗಳನ್ನು ಒಳಗೊಂಡಿವೆ.

ರಾಗಿಗುಡ್ಡದಿಂದ ಸಿಎಸ್‌ಬಿ ಜಂಕ್ಷನ್‌ವರೆಗೆ ಹಳದಿ ಮಾರ್ಗದ ಮೆಟ್ರೋಗಾಗಿ ರಸ್ತೆ ಮೇಲ್ಸೇತುವೆಯ ಮೊದಲ ಹಂತವನ್ನು ಈಗಾಗಲೇ ನಿರ್ಮಿಸಲಾಗಿದೆ. BMRCL ಪ್ರಕಾರ, A, B ಮತ್ತು C ರ್ಯಾಂಪ್‌ಗಳು ಮೇ 2024ರೊಳಗೆ ಪೂರ್ಣಗೊಂಡು ಕಾರ್ಯಾರಂಭಿಸಬೇಕಿತ್ತು. D ಮತ್ತು E ರ‍್ಯಾಂಪ್‌ಗಳನ್ನು ಡಿಸೆಂಬರ್ 2024ರೊಳಗೆ ಕಾರ್ಯಾರಂಭ ಮಾಡಲಾಗುತ್ತದೆ.

ಇದನ್ನೂ ಓದಿ: Steel Flyover: ಬೆಂಗಳೂರಿನ ಮೊದಲ ಸ್ಟೀಲ್‌ ಫ್ಲೈಓವರ್‌ ಸೇತುವೆಯಲ್ಲಿ ಬಿರುಕು

Continue Reading
Advertisement
Suryakumar Yadav
ಕ್ರೀಡೆ17 mins ago

Suryakumar Yadav: ಹಾರ್ದಿಕ್​ ಕೈಬಿಟ್ಟು ಸೂರ್ಯಕುಮಾರ್​ಗೆ ಟಿ20 ನಾಯಕತ್ವ ನೀಡಲು ಬಿಸಿಸಿಐ ಮುಂದಾಗಿದ್ದೇಕೆ?

Viral Video
Latest18 mins ago

Viral Video: ಚಾಕೋಲೇಟ್ ತಿನ್ನುವ ಆಸೆಯಾಗಿ ಅಂಗಡಿಗೆ ಹೋಗಿದ್ದ ಬಾಲಕ ಶವವಾಗಿ ಮನೆಗೆ ಬಂದ; ಆಗಿದ್ದೇನು? ವಿಡಿಯೊ ನೋಡಿ

Anant Radhika Wedding
ವಾಣಿಜ್ಯ23 mins ago

Anant Radhika Wedding: ಮನಮುಟ್ಟುವಂತೆ ಕನ್ಯಾದಾನದ ಮಹತ್ವ ತಿಳಿಸಿದ ನೀತಾ ಅಂಬಾನಿ; ಭಾವುಕರಾದ ಅತಿಥಿಗಳು; ವಿಡಿಯೊ ನೋಡಿ

Chandan Shetty vidyarthi vidyarthiniyare kannada movie dubai premere
ಸ್ಯಾಂಡಲ್ ವುಡ್37 mins ago

Chandan Shetty: ಚಂದನ್‌ ಶೆಟ್ಟಿ ಅಭಿನಯದ ಸಿನಿಮಾ ದುಬೈನಲ್ಲಿ ಪ್ರೀಮಿಯರ್‌ ಶೋ; ಪ್ರೇಕ್ಷಕರಿಂದ ಭರಪೂರ ಮೆಚ್ಚುಗೆ!

anant radhika wedding
ಪ್ರಮುಖ ಸುದ್ದಿ41 mins ago

Anant Radhika Wedding: ಪ್ರತಿ ಭಾನುವಾರ ನಮ್ಮನೇಲಿ ನಿಮ್ಮದೇ ತಿಂಡಿ; ಮೈಸೂರು ಕೆಫೆ ಮಾಲಕಿಯ ಕಾಲು ಮುಟ್ಟಿ ನಮಸ್ಕರಿಸಿದ ಅನಂತ್ ಅಂಬಾನಿ! ವಿಡಿಯೊ ನೋಡಿ

Sudha Murty praised for simplicity at Ambani wedding
ಟಾಲಿವುಡ್50 mins ago

Sudha Murty: ಅಂಬಾನಿ ಮದುವೆಗೆ ಮಂಗಳ ಸೂತ್ರ ಮಾತ್ರವೇ ಧರಿಸಿ ಬಂದ ಸುಧಾ ಮೂರ್ತಿ; ಶೋ-ಆಫ್ ಇಲ್ಲ ಅಂದ್ರು ನೆಟ್ಟಿಗರು!

Ravindra Jadeja
ಕ್ರೀಡೆ59 mins ago

Ravindra Jadeja: ವಿಶ್ವಕಪ್​ ಟ್ರೋಫಿಯೊಂದಿಗೆ ತಾಯಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ ಜಡೇಜಾ

Terror Attacks in India
ದೇಶ1 hour ago

Terror Attacks in India: ಭಾರತದೊಳಕ್ಕೆ ನುಸುಳಲು ಉಗ್ರರಿಗೆ ಪಾಕಿಸ್ತಾನ ಧನಸಹಾಯ: ಬೆಚ್ಚಿ ಬೀಳಿಸುವ ಮಾಹಿತಿ ಬಹಿರಂಗ

Director Arrest gajendra in murder case
ಸ್ಯಾಂಡಲ್ ವುಡ್1 hour ago

Director Arrest: ಕೊಲೆ ಕೇಸ್​​ನಲ್ಲಿ 20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಸ್ಯಾಂಡಲ್​ವುಡ್ ನಿರ್ದೇಶಕ ಅರೆಸ್ಟ್​!

Vicky Kaushal Kissing Scenes of 27 Seconds deleated From Bad Newz
ಬಾಲಿವುಡ್2 hours ago

Vicky Kaushal: 27 ಸೆಕೆಂಡುಗಳ ಕಾಲ ಚುಂಬಸಿದ ವಿಕ್ಕಿ ಕೌಶಲ್ -ತೃಪ್ತಿ; ಸೆನ್ಸಾರ್‌ ಬೋರ್ಡ್‌ನಿಂದ ಬಿತ್ತು ಕತ್ತರಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ23 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ3 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ4 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌