Uttara Kannada Landslide: ಭೂಕುಸಿತದ ಜಾಗದ ಬಳಿಯೇ ʼಸುನಾಮಿʼ ಎಫೆಕ್ಟ್‌; ನೀರಿನ ರಭಸಕ್ಕೆ ಕೊಚ್ಚಿಹೋದ ಮಹಿಳೆ - Vistara News

ಉತ್ತರ ಕನ್ನಡ

Uttara Kannada Landslide: ಭೂಕುಸಿತದ ಜಾಗದ ಬಳಿಯೇ ʼಸುನಾಮಿʼ ಎಫೆಕ್ಟ್‌; ನೀರಿನ ರಭಸಕ್ಕೆ ಕೊಚ್ಚಿಹೋದ ಮಹಿಳೆ

Uttara Kannada Landslide: ನೀರು ನುಗ್ಗಿದ ರಭಸದಿಂದ ಮೂರು ಮನೆಗಳು ನೆಲಸಮವಾಗಿವೆ. ಮನೆಯಲ್ಲಿದ್ದ ಸೀಥಿಗೌಡ (65) ಎನ್ನುವ ವೃದ್ಧೆ ನಾಪತ್ತೆಯಾಗಿದ್ದಾರೆ. 14 ಜನರಿಗೆ ಗಾಯವಾಗಿದ್ದು, ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದೆ. ಎನ್‌ಡಿಆರ್‌ಎಫ್ ಹಾಗೂ ತಾಲೂಕು ಆಡಳಿತದಿಂದ ಮಹಿಳೆಗಾಗಿ ಶೋಧಕಾರ್ಯ ಆರಂಭವಾಗಿದೆ.

VISTARANEWS.COM


on

uttara kannada landslide shirur
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ: ಅಂಕೋಲಾ- ಶಿರೂರು ಹೆದ್ದಾರಿಯಲ್ಲಿ (Ankola Shiruru Lanslide) ಗುಡ್ಡ ಕುಸಿದ (Uttara Kannada Landslide) ಪ್ರಕರಣದಲ್ಲಿ ಇನ್ನೊಂದು ಅವಾಂತರ ಉಂಟಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಗುಡ್ಡ ಕುಸಿತದಿಂದ ಭಾರಿ ಪ್ರಮಾಣದ ಮಣ್ಣು ಗಂಗಾವಳಿ ನದಿಗೆ (Gangavali River) ಬಿದ್ದ ಪರಿಣಾಮ ನದಿ ಬದಿಯ ಉಳುವರೆ ಗ್ರಾಮಕ್ಕೂ ಡ್ಯಾಮೇಜ್ ಆಗಿದೆ. ಸುನಾಮಿ ಅಲೆಯ ರೀತಿ ಗ್ರಾಮಕ್ಕೆ ನೀರು ನುಗ್ಗಿದ್ದು, ನೀರಿನ ರಭಸಕ್ಕೆ ಮೂರು ಮನೆಗಳು ನಾಶವಾಗಿ (homes collapse) ಮಹಿಳೆಯೊಬ್ಬರು (Woman swept) ಕೊಚ್ಚಿಹೋಗಿದ್ದಾರೆ.

ನೀರು ನುಗ್ಗಿದ ರಭಸದಿಂದ ಮೂರು ಮನೆಗಳು ನೆಲಸಮವಾಗಿವೆ. ಮನೆಯಲ್ಲಿದ್ದ ಸೀಥಿಗೌಡ (65) ಎನ್ನುವ ವೃದ್ಧೆ ನಾಪತ್ತೆಯಾಗಿದ್ದಾರೆ. 14 ಜನರಿಗೆ ಗಾಯವಾಗಿದ್ದು, ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದೆ. ಎನ್‌ಡಿಆರ್‌ಎಫ್ ಹಾಗೂ ತಾಲೂಕು ಆಡಳಿತದಿಂದ ಮಹಿಳೆಗಾಗಿ ಶೋಧಕಾರ್ಯ ಆರಂಭವಾಗಿದೆ.

ಕುಮಟ ತಾಲ್ಲೂಕು ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದೆ. ಉಳುವರೆ ಗ್ರಾಮದ ಗಣಪತಿ ಬೊಮ್ಮಾ ಗೌಡ, ಸಾವಿತ್ರಿ ನೀಲಾ ಗೌಡ, ದಿವ್ಯಾ ನೀಲಾ ಗೌಡ, ಆಶಾ ಮಂಗೇಶ ಗೌಡ, ಹರ್ಶಿತಾ ಗಣಪತಿ ಗೌಡ, ದಿಕ್ಷಾ ವಿನಾಯಕ ಗೌಡ, ದೀಪಾ ಹೂವಾ ಗೌಡ, ಧನ್ಯ ಹೂವಾ ಗೌಡ, ಹೂವಾ ಸೋಮಾ ಗೌಡ, ಸೋಮಾ ಅನಂತ ಗೌಡ, ಮಂಗೇಶ ಮಾಣಿ ಗೌಡ, ನೀಲಾ ಮುದ್ದು ಗೌಡ, ನಾಗೀ ಬೊಮ್ಮಾ ಗೌಡ, ತಮ್ಮಣ್ಣಿ ಅನಂತ ಗೌಡ ಗಾಯಗೊಂಡವರು.

ಸ್ಥಳಕ್ಕೆ ಅಂಕೋಲ ತಹಶೀಲ್ದಾರ್ ಅನಂತ ಶಂಕರ ಭೇಟಿ ನೀಡಿದ್ದಾರೆ. ಈಗಾಗಲೇ ನಾಲ್ಕು ಮೃತದೇಹ ಪತ್ತೆಯಾಗಿದೆ. ಇನ್ನಿಬ್ಬರಿಗಾಗಿ ಶೋಧ ನಡೆಯುತ್ತಿದೆ ಎಂದಿದ್ದಾರೆ. ಖಚಿತವಾಗಿ ಎಷ್ಟು ಜನ ಮಣ್ಣಿನಲ್ಲಿ ಸಿಲುಕಿದ್ದಾರೆ ಎಂಬ ಮಾಹಿತಿ ಇಲ್ಲ. ಎನ್‌ಡಿಆರ್‌ಎಫ್ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಮೃತದೇಹ ಹುಡುಕಾಟ ನಡೆಯುತ್ತಿದೆ‌. ನೀರಿನಲ್ಲಿ ಒಬ್ಬರ ಮೃತದೇಹ ಹೋಗಿರುವ ಶಂಕೆ ಇದೆ. ಮಣ್ಣಿನಲ್ಲಿ ಒಬ್ಬರು ಸಿಲುಕಿಕೊಂಡಿದ್ದಾರೆ ಎಂದಿದ್ದಾರೆ.

ತೆರವಾಗದ ಗುಡ್ಡದ ಮಣ್ಣು

ಶಿರಸಿ ತಾಲ್ಲೂಕಿನ ರಾಗಿಹೊಸಳ್ಳಿ ಬಳಿ ನಿನ್ನೆ ಗುಡ್ಡ ಜರಿದು ಅಪಾರ ಪ್ರಮಾಣದ ಮಣ್ಣು ಹೆದ್ದಾರಿಯ ಮೇಲೆ ಕೂತಿದ್ದು, ನಿನ್ನೆಯಿಂದ ಕಾರ್ಯಾಚರಣೆ ನಡೆಯುತ್ತಿದ್ದರೂ ತೆರವಾಗಿಲ್ಲ. ಇದರಿಂದ ಕುಮಟಾ- ಶಿರಸಿ ರಾಷ್ಟ್ರೀಯ ಹೆದ್ದಾರಿ 766EEಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ತೆರವು ಕಾರ್ಯಾಚರಣೆಗೆ ಹಿನ್ನಡೆಯಾಗಿದೆ. ಹೆದ್ದಾರಿಯ ಸುಮಾರು 100 ಮೀಟರ್ ವ್ಯಾಪ್ತಿಯಲ್ಲಿ ಮರ ಸಹಿತ ಗುಡ್ಡ ಕುಸಿದಿದ್ದು, ಶಿರಸಿ-ಕುಮಟಾ ಹೆದ್ದಾರಿ ನಿನ್ನೆಯಿಂದ ಬಂದ್ ಆಗಿದೆ. ರಸ್ತೆ ಅಗಲೀಕರಣ ಹಿನ್ನೆಲೆಯಲ್ಲಿ ಗುಡ್ಡ ಕೊರೆಯಲಾಗಿತ್ತು. ಜೆಸಿಬಿ ಮೂಲಕ ನಿನ್ನೆಯಿಂದ ಮಣ್ಣು ತೆರವು ನಡೆಯುತ್ತಿದ್ದು, ಇನ್ನೂ 50 ಮೀಟರ್‌ನಷ್ಟು ಮಣ್ಣು ತೆರವು ಬಾಕಿಯಿದೆ.

ಶೃಂಗೇರಿಯಲ್ಲಿ ನೆರೆ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಕೆರೆಕಟ್ಟೆ, ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶೃಂಗೇರಿಯಲ್ಲಿ ತುಂಗಾ ನದಿ ಆರ್ಭಟದಿಂದ ಹರಿಯುತ್ತಿದೆ. ತುಂಗಾ ನದಿ ಅಬ್ಬರಕ್ಕೆ ಭಾರತಿ ತೀರ್ಥ ರಸ್ತೆ ಜಲಾವೃತವಾಗಿದ್ದು, ಪಟ್ಟಣದ ಗಾಂಧಿ ಮೈದಾನ ಸಂಪೂರ್ಣ ಮುಳುಗಡೆಯಾಗಿದೆ. ನದಿ ಪಾತ್ರದ ಅಂಗಡಿ ಮುಂಗಟ್ಟು, ಮನೆಗಳು ಜಲಾವೃತವಾಗಿವೆ. ಶೃಂಗೇರಿಯಲ್ಲಿ ನಿನ್ನೆಯಿಂದಲೂ ನೆರೆ ಪರಿಸ್ಥಿತಿ ತಗ್ಗಿಲ್ಲ. ಭಾರತಿ ತೀರ್ಥ ರಸ್ತೆ ಮುಳುಗಡೆ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ವಾಹನ ಸಂಚಾರ ನಿಷೇಧಿಸಲಾಗಿದೆ.

ಇದನ್ನೂ ಓದಿ: Landslide: ಶಿರೂರಿನಲ್ಲಿ ಕುಸಿದ ಗುಡ್ಡದಡಿ 5 ಶವ ಪತ್ತೆ, ಇನ್ನುಳಿದವರಿಗೆ ಹುಡುಕಾಟ; ಗೋಕರ್ಣದಲ್ಲೂ ಭೂಕುಸಿತ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Landslide: ಶಿರೂರಿನಲ್ಲಿ ಕುಸಿದ ಗುಡ್ಡದಡಿ 5 ಶವ ಪತ್ತೆ, ಇನ್ನುಳಿದವರಿಗೆ ಹುಡುಕಾಟ; ಗೋಕರ್ಣದಲ್ಲೂ ಭೂಕುಸಿತ

Landslide: ಭೂಕುಸಿತ ಪ್ರದೇಶದಲ್ಲೇ ಸಡಿಲಗೊಂಡಿರುವ ಗುಡ್ಡ ಮತ್ತೆ ಬಿರುಕು ಬಿಟ್ಟಿದ್ದು, ಯಾವುದೇ ಕ್ಷಣದಲ್ಲೂ ಮತ್ತೆ ಕುಸಿಯುವ ಸಾಧ್ಯತೆ ಕಂಡುಬಂದಿದೆ. ಗುಡ್ಡದ ಮದ್ಯ ಭಾಗದಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ರಸ್ತೆಯ ಪಕ್ಕದಲ್ಲಿರುವ ಹೊಳೆಗೆ ಮಣ್ಣನ್ನು ಒಯ್ಯುತ್ತಿದೆ.

VISTARANEWS.COM


on

landslide Karnataka Rain
Koo

ಕಾರವಾರ: ಅಂಕೋಲಾ ಶಿರೂರು ಬಳಿ ಹೆದ್ದಾರಿಯಲ್ಲಿ (Highway landslide) ಭಾರಿ ಗುಡ್ಡ ಕುಸಿದು (Uttarakannada landslide) ಹತ್ತು ಮಂದಿ ನಾಪತ್ತೆಯಾದ ಘೋರ ದುರಂತದ ಸ್ಥಳದಲ್ಲಿ ಐದು ಶವಗಳು ಪತ್ತೆಯಾಗಿವೆ. ಇಂದು ಮುಂಜಾನೆಯಿಂದ ಮತ್ತೆ ಶವ ಪತ್ತೆ ಕಾರ್ಯಾಚರಣೆ ಆರಂಭಿಸಲಾಗಿದೆ.

ಎರಡು ಹಿಟಾಚಿ, ಎರಡು ಜೆಸಿಬಿ ಯಂತ್ರಗಳ ಮೂಲಕ ಗುಡ್ಡದ ಮಣ್ಣು ತೆರವು ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ. ಕಾರ್ಯಾಚರಣೆಯಲ್ಲಿ ಎನ್‌ಡಿಆರ್‌ಎಫ್ ತಂಡ ಪಾಲ್ಗೊಂಡಿದೆ. ಈಗಾಗಲೇ ಐದು ಮೃತದೇಹಗಳು ಪತ್ತೆಯಾಗಿವೆ. ಮತ್ತಷ್ಟು ಜನ ಮಣ್ಣಿನಲ್ಲಿ ಸಿಲುಕಿಕೊಂಡಿರುವ ಸಾಧ್ಯತೆ ಇದೆ. ಹತ್ತು ಮಂದಿ ಮಣ್ಣಿನೊಳಗೆ ಸಿಲುಕಿದ್ದಾರೆ ಎಂದು ಶಂಕಿಸಲಾಗಿತ್ತು. ನಿನ್ನೆ ಮಹಿಳೆಯೊಬ್ಬರ ಶವ ದೊರೆತಿತ್ತು. ನಿನ್ನೆ ಕತ್ತಲಾದ್ದರಿಂದ ಹಾಗೂ ಮಳೆಯ ಕಾರಣ ಕಾರ್ಯಾಚರಣೆ ನಿಲ್ಲಿಸಲಾಗಿತ್ತು.

ಗುಡ್ಡದ ಮಣ್ಣು ಹೆದ್ದಾರಿಗೆ ಭಾರಿ ಪ್ರಮಾಣದಲ್ಲಿ ಕುಸಿದಿದೆ. ತೆರವು ಕಾರ್ಯಾಚರಣೆಗೆ ಹತ್ತಾರು ಲಾರಿ ಬಳಸಲಾಗುತ್ತಿದೆ. ರಕ್ಷಣಾ ಕಾರ್ಯದಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸ್, ಎನ್‌ಡಿಆರ್‌ಎಫ್ ಸಿಬ್ಬಂದಿ ಭಾಗಿಯಾಗಿದ್ದಾರೆ.

ಭೂಕುಸಿತ ಪ್ರದೇಶದಲ್ಲೇ ಸಡಿಲಗೊಂಡಿರುವ ಗುಡ್ಡ ಮತ್ತೆ ಬಿರುಕು ಬಿಟ್ಟಿದ್ದು, ಯಾವುದೇ ಕ್ಷಣದಲ್ಲೂ ಮತ್ತೆ ಕುಸಿಯುವ ಸಾಧ್ಯತೆ ಕಂಡುಬಂದಿದೆ. ಗುಡ್ಡದ ಮದ್ಯ ಭಾಗದಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ರಸ್ತೆಯ ಪಕ್ಕದಲ್ಲಿರುವ ಹೊಳೆಗೆ ಮಣ್ಣನ್ನು ಒಯ್ಯುತ್ತಿದೆ. ರಕ್ಷಣಾ ಕಾರ್ಯಕ್ಕೆ ಅಡ್ಡಿಯೂ ಆಗುತ್ತಿದೆ. ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯಿಂದಾಗಿ ಗುಡ್ಡಕ್ಕೆ ಸರಿಪಡಿಸಲಾಗದ ಧಕ್ಕೆಯಾಗಿದ್ದು, ಇನ್ನಷ್ಟು ಬಲಿ ಪಡೆಯುವ ಭೀತಿಯಿದೆ ಎನ್ನಲಾಗಿದೆ.

ಸಂಚಾರ ನಿಷೇಧ

ಭೂಕುಸಿತ ಕಾರ್ಯಾಚರಣೆ ಹಿನ್ನಲೆ ಶಿರೂರು ವ್ಯಾಪ್ತಿಯಲ್ಲಿ ಸಾರ್ವಜನಿಕರ ಓಡಾಟಕ್ಕೆ ನಿಷೇಧ ವಿಧಿಸಲಾಗಿದೆ. ಅಂಕೋಲಾ ತಾಲ್ಲೂಕಿನ ವಾಸರಕುದ್ರಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಶಿರೂರು ಗ್ರಾಮದಲ್ಲಿ ಕಾರ್ಯಾಚರಣೆ ನಡೆಯುತ್ತಿರುವ ಪ್ರದೇಶದ ಸುತ್ತ ಸಾರ್ವಜನಿಕರು, ವಾಹನ ಸವಾರರು ಓಡಾಡದಂತೆ ನಿಷೇಧಾಜ್ಞೆ ಹೊರಡಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ. ಆದೇಶಿಸಿದ್ದಾರೆ. ಕಾರ್ಯಾಚರಣೆಗೆ ಅಡ್ಡಿಯಾಗದಂತೆ ಮುನ್ನೆಚ್ಚರಿಕೆಯಾಗಿ ನಿಷೇಧ ವಿಧಿಸಲಾಗಿದೆ.

ಉಸ್ತುವಾರಿ ಸಚಿವ ಭೇಟಿ

ಸ್ಥಳಕ್ಕೆ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಭೇಟಿ ನೀಡಿ ಪರಿಶೀಲಿಸಿದರು. ಈಗಾಗಲೇ ಐದು ಮೃತ ದೇಹ ಪತ್ತೆಯಾಗಿದೆ. ಕಾರ್ಯಾಚರಣೆ ನಡೆಯುತ್ತಿದೆ. ಇದು ದೊಡ್ಡ ದುರಂತ, ಹೀಗೆ ಆಗಬಾರದಿತ್ತು. ಇದರ ಹೊಣೆಗಾರಿಕೆ ಐಆರ್ ಬಿಯವರದು. ಹತ್ತು ವರ್ಷದಿಂದ ಒಂದು ರಸ್ತೆ ಕ್ಲೀಯರ್ ಮಾಡೋಕೆ ಆಗಿಲ್ಲ. ಒಂದು ವರ್ಷದಿಂದ ಐಆರ್ ಬಿಯವರಿಗೆ ಹೇಳಿದ್ದೆ. ಅವರು ವ್ಯತ್ಯಾಸ ಮಾಡಿದ್ದರಿಂದ ಹೀಗೆ ಆಗಿದೆ. ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ಕೋಡೋಕೆ ತಯಾರಿ ಮಾಡಿಕೊಂಡಿದ್ದೇವೆ ಎಂದಿದ್ದಾರೆ.

ಗೋಕರ್ಣದಲ್ಲೂ ಭೂಕುಸಿತ

ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಸ್ವಲ್ಪ ತಗ್ಗಿದೆಯಾದರೂ, ಗುಡ್ಡ ಕುಸಿತ ಪ್ರಕರಣಗಳು ನಿಂತಿಲ್ಲ. ಕುಮಟಾ ತಾಲೂಕಿನ ಗೋಕರ್ಣದಲ್ಲಿ (Gokarna landslide) ಇಂದು ಬೆಳ್ಳಂಬೆಳಿಗ್ಗೆ ಗುಡ್ಡ ಕುಸಿದಿದೆ. ಗೋಕರ್ಣ ಮುಖ್ಯ ಕಡಲತೀರದ ಹತ್ತಿರದ ರಾಮಮಂದಿರ ಬಳಿ ಗುಡ್ಡ ಕುಸಿತವಾಗಿದೆ. ಅದೃಷ್ಟವಶಾತ್ ದೇವಸ್ಥಾನದಲ್ಲಿ ಯಾರೂ ಇಲ್ಲದ ಹಿನ್ನೆಲೆಯಲ್ಲಿ ಅನಾಹುತ ತಪ್ಪಿದೆ.

ಉರುಳಿಕೊಂಡು ಬಂದ ಗುಡ್ಡದ ಬೃಹತ್‌ ಕಲ್ಲು ದೇವಸ್ಥಾನದ ಗೋಡೆಗೆ ತಾಗಿ ನಿಂತಿದೆ. ರಾಮಮಂದಿರ ದೇವಸ್ಥಾನಕ್ಕೆ ಯಾವುದೇ ಹಾನಿ ಆಗಿಲ್ಲ. ಅವ್ಯಾಹತವಾಗಿ ನಡೆಯುತ್ತಿರುವ ಕಲ್ಲುಗಣಿಗಾರಿಕೆಯ ಪರಿಣಾಮ ಗುಡ್ಡದ ಮಣ್ಣು ಸಡಿಲವಾಗಿದ್ದು, ಮಳೆಗೆ ಕುಸಿದಿದೆ ಎಂದು ಆರೋಪಿಸಲಾಗಿದೆ.

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಧಾರಾಕಾರ ಗಾಳಿ ಮಳೆ ಮುಂದುವರಿದಿದ್ದು, ಸುವರ್ಣಾ, ಸೀತಾ ನದಿಗಳು ತುಂಬಿ ಹರಿಯುತ್ತಿವೆ. ಆಗುಂಬೆ, ಚಿಕ್ಕಮಗಳೂರಿನಲ್ಲಿ ಮಳೆಯಾದ ಪರಿಣಾಮ ಕರಾವಳಿಯ ನದಿಗಳು ಭರ್ತಿಯಾಗಿವೆ. ನದಿ, ಹೊಳೆ ಪಾತ್ರದ ಗದ್ದೆಗಳಲ್ಲಿ ನೆರೆಯ ವಾತಾವರಣ ಕಂಡುಬಂದಿದೆ. ನದಿ, ಸಮುದ್ರ ತೀರದ ಜನಕ್ಕೆ ಉಡುಪಿ ಜಿಲ್ಲಾಡಳಿತ ಕಟ್ಟೆಚ್ಚರ ನೀಡಿದ್ದು, ಎರಡು ದಿನ ಸಮುದ್ರ ಮೀನುಗಾರಿಕೆ ನಿಷೇಧಿಸಿದೆ.

ಇದನ್ನೂ ಓದಿ: Uttara Kannada Rain: ಭಾರಿ ಮಳೆಗೆ ತತ್ತರಿಸಿದ ಉತ್ತರ ಕನ್ನಡ; ಭೂಕುಸಿತಕ್ಕೆ 11 ಸಾವು, ರಸ್ತೆಗಳೇ ಮಾಯ, ತೋಟ ಗದ್ದೆ ಮುಳುಗಡೆ

Continue Reading

ಮಳೆ

Karnataka Weather : ಬಿರುಗಾಳಿ ಜತೆಗೆ ಅಬ್ಬರಿಸಲಿದ್ದಾನೆ ವರುಣ; ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka Weather Forecast: ಕರಾವಳಿ-ಮಲೆನಾಡು ಭಾಗದಲ್ಲಿ ವರುಣನ ರೌದ್ರಾವತಾರಕ್ಕೆ ಜನರು ನಲುಗಿ ಹೋಗಿದ್ದಾರೆ. ಮುಂದಿನ ನಾಲ್ಕೈದು ದಿನಗಳು ಗಾಳಿ ಜತೆಗೆ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ (Heavy Rain Alert) ನೀಡಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಜು.17ರಂದು ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ (Heavy rain) ಎಚ್ಚರಿಕೆ ಇದ್ದು, ಮಲೆನಾಡಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಸೇರಿದಂತೆ ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೋಲಾರದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್‌, ಧಾರವಾಡ, ಗದಗ, ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರಿನಲ್ಲಿ ಮಳೆಯು ಅಬ್ಬರಿಸಲಿದೆ. ಕರಾವಳಿಯಲ್ಲಿ ವ್ಯಾಪಕ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಅಲರ್ಟ್‌ ನೀಡಲಾಗಿದೆ.

ಇದನ್ನೂ ಓದಿ: Rain Effect : ಭಾರಿ ಮಳೆಗೆ ಶಿರೂರು ಗುಡ್ಡ ಕುಸಿತ; ಮಣ್ಣಿನಡಿ ಸಿಲುಕಿದ್ದ ಮಹಿಳೆ ಮೃತದೇಹ ಪತ್ತೆ, ಉಳಿದವರಿಗಾಗಿ ಹುಡುಕಾಟ

ಬೆಂಗಳೂರಿನಲ್ಲಿ ಮರೆಯಾಗುವ ಸೂರ್ಯ

ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಅನುಕ್ರಮವಾಗಿ 24 ಮತ್ತು 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ರೆಡ್‌ ಅಲರ್ಟ್‌ ಘೋಷಣೆ

ಗುಡುಗು ಸಹಿತ ವ್ಯಾಪಕ ಮಳೆಯಾಗಲಿದ್ದು, ಗಾಳಿ ವೇಗವು 40-50 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮಳೆ ಅನಾಹುತದ ಚಿತ್ರಣ ಹೀಗಿದೆ ನೋಡಿ

Karnataka Rain
Rain Effect
karnataka Rain
Karnataka Rain
Karnataka Rain
karnataka Rain
karnataka rain
karnataka Rain
karnataka Rain

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Uttara Kannada News: ರಾಷ್ಟ್ರೀಯ ಹೆದ್ದಾರಿಯಲ್ಲಿ ಕೃತಕ ನೆರೆ ತಡೆಗೆ ಶಾಶ್ವತ ಪರಿಹಾರ; ಕಾಗೇರಿ

Uttara Kannada News: ಕಾರವಾರ ಸೀಬರ್ಡ್ ನೌಕಾನೆಲೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಡುಬರುವ ಕೃತಕ ನೆರೆಯನ್ನು ತಡೆಯಲು ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

VISTARANEWS.COM


on

A permanent solution to artificial flood on national highways says MP Vishweshwar Hegde Kageri
Koo

ಕಾರವಾರ: ಕಾರವಾರ ಸೀಬರ್ಡ್ ನೌಕಾನೆಲೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಡುಬರುವ ಕೃತಕ ನೆರೆಯನ್ನು ತಡೆಯಲು ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ (Uttara Kannada News) ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತೀ ಮಳೆಗಾಲದಲ್ಲಿ ಸೀಬರ್ಡ್ ನೌಕಾನೆಲೆ ಬಳಿಯ ರಾಷ್ಟ್ರೀಯ ಹೆದ್ದಾರಿ ಬಳಿ ಗುಡ್ಡದಿಂದ ಬರುವ ನೀರು ಸರಾಗವಾಗಿ ಹರಿದು ಸಮುದ್ರ ಸೇರಲು ಇರುವ ಅಡೆತಡೆಗಳನ್ನು ಶಾಶ್ವತವಾಗಿ ನಿವಾರಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು, ಸೀಬರ್ಡ್ ಮತ್ತು ನೌಕಾನೆಲೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮಳೆ ಕಡಿಮೆಯಾದ ಕೂಡಲೇ ಆ ಪ್ರದೇಶಕ್ಕೆ ಭೇಟಿ ನೀಡಿ ಅಗತ್ಯ ಮಾರ್ಗೋಪಾಯಗಳನ್ನು ಕಂಡುಕೊಂಡು ಅವುಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದ ಸಂಸದರು, ನೌಕಾನೆಲೆಯ ಅಧಿಕಾರಿಗಳು ಜಿಲ್ಲಾಡಳಿತದ ಈ ಯೋಜನೆಗಳಿಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Assembly Session: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ; ಏನೆಲ್ಲ ಅರ್ಹತೆ ಇರಬೇಕು?

ಜಿಲ್ಲೆಯಲ್ಲಿ ಕಾರವಾರದಿಂದ ಭಟ್ಕಳದವರೆಗಿನ ರೈಲು ಮಾರ್ಗದಲ್ಲಿ ರೈಲ್ವೆ ನಿಲ್ದಾಣಗಳಲ್ಲಿ ಕೈಗೊಳ್ಳಬೇಕಾದ ಅಗತ್ಯ ಕಾಮಗಾರಿಗಳು ಮತ್ತು ಪ್ರಯಾಣಿಕರ ಹಿತದೃಷ್ಠಿಯಿಂದ ಕೈಗೊಳ್ಳಬೇಕಾಗಿರುವ ಸುಧಾರಣಾ ಕ್ರಮಗಳು ಹಾಗೂ ರೂಪಿಸಬಹುದಾದ ಯೋಜನೆಗಳ ಕುರಿತ ವಿವರವಾದ ಸಂಪೂರ್ಣ ಮಾಹಿತಿಯನ್ನು ನೀಡುವಂತೆ ಕೊಂಕಣ ರೈಲ್ವೆಯ ಅಧಿಕಾರಿಗಳಿಗೆ ಸೂಚಿಸಿದ ಸಂಸದರು, ಜಿಲ್ಲೆಯಲ್ಲಿ ರೈಲ್ವೆಗೆ ಸಂಬಂಧಪಟ್ಟ ಯೋಜನೆಗಳನ್ನು ಅಭಿವೃದ್ಧಿಪಡಿಸುವ ಕುರಿತಂತೆ ರೈಲ್ವೆ ಖಾತೆಯ ಸಚಿವರೊಂದಿಗೆ ಚರ್ಚಿಸಿ ಅವುಗಳ ಸಂಪೂರ್ಣ ಅನುಷ್ಠಾನಕ್ಕೆ ಪ್ರಯತ್ನಿಸುವುದಾಗಿ ಹೇಳಿದರು.

ಕೊಂಕಣ ರೈಲ್ವೆಗೆ ಸಂಬಂಧಪಟ್ಟಂತೆ ಬಾಕಿ ಇರುವ ಭೂಸ್ವಾಧೀನ ಪ್ರಕರಣಗಳ ಪರಿಹಾರದ ಮೊತ್ತವನ್ನು ಸಂತ್ರಸ್ತರಿಗೆ ಶೀಘ್ರದಲ್ಲಿ ಪಾವತಿಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆಯುವವರಿಗೆ ವೈದ್ಯಕೀಯ ನೆರವಿನೊಂದಿಗೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸವಂತೆ ತಿಳಿಸಿದ ಅವರು, ವಿಕೋಪ ಸಂದರ್ಭದಲ್ಲಿ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಸೇವಾ ಮನೋಭಾವ ಮತ್ತು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಬೇಕು. ಸಂಬಂಧಪಟ್ಟ ಇಲಾಖೆಗಳು ವಿಪತ್ತು ಎದುರಿಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳೊಂದಿಗೆ ಸದಾ ಜಾಗರೂಕರಾಗಿರಬೇಕು ಎಂದರು.

ಇದನ್ನೂ ಓದಿ: Paris Olympics 2024 : ಟೋಕಿಯೊದಲ್ಲಿ ನಡೆದ 2020ರ ಒಲಿಂಪಿಕ್ಸ್​ನಲ್ಲಿ ಭಾರತ ಗೆದ್ದ ಪದಕಗಳ ಸಂಖ್ಯೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ ಕಾಂದೂ, ಎಸ್ಪಿ ನಾರಾಯಣ್, ಕಾರವಾರ ಉಪ ವಿಭಾಗಾಧಿಕಾರಿ ಕನಿಷ್ಕ ಹಾಗೂ ಸೀಬರ್ಡ್, ನೌಕಾನಲೆ, ರೈಲ್ವೆ, ರಾಷ್ಟ್ರೀಯ ಹೆದ್ದಾರಿ ಮತ್ತಿತರ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಮಳೆ

Karnataka Weather : ನಾಳೆಗೂ ಮಳೆ ಮುನ್ನೆಚ್ಚರಿಕೆ; ಸೆ.30ರವರೆಗೆ ಈ ಪ್ರವಾಸಿ ತಾಣಗಳಲ್ಲಿ ಟ್ರಕ್ಕಿಂಗ್‌ ನಿಷೇಧ

Karnataka Weather Forecast : ಬುಧವಾರವೂ ಗುಡುಗು ಸಹಿತ ಭಾರಿ ಮಳೆಯಾಗುವ (Heavy rain alert) ಸಾಧ್ಯತೆ ಇದೆ. ಚಿಕ್ಕಮಗಳೂರಿನಲ್ಲಿ ಅಬ್ಬರಿಸುತ್ತಿರುವ ಮಳೆ ಕಾರಣಕ್ಕೆ ಎರಡೂವರೆ ತಿಂಗಳು ಕೆಲವು ಪ್ರವಾಸಿತಾಣಗಳಿಗೆ ಟ್ರಕ್ಕಿಂಗ್‌ ನಿಷೇಧಿಸಲಾಗಿದೆ.

VISTARANEWS.COM


on

By

karnataka weather Forecast
Koo

ಚಿಕ್ಕಮಗಳೂರು/ಬೆಂಗಳೂರು: ರಾಜ್ಯಾದ್ಯಂತ ನೈರುತ್ಯ ಮುಂಗಾರು (karnataka Weather Forecast) ಸಕ್ರಿಯವಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯು (Heavy Rain Alert) ಅಬ್ಬರಿಸುತ್ತಿದ್ದು, ಆಗುಂಬೆ 33, ಅಂಕೋಲಾ 26, ಕಾರವಾರ 23, ಹಾಗೂ ಗೇರ್ಸೊಪ್ಪ 21 ಸೆಂ.ಮೀ ಮಳೆಯಾಗಿದೆ. ಇನ್ನೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೆಪ್ಟೆಂಬರ್ 30ರವರೆಗೆ ಚಾರಣಕ್ಕೆ ನಿಷೇಧಿಸಲಾಗಿದೆ.

ಚಿಕ್ಕಮಗಳೂರಿನ ಬಲ್ಲಾಳ ರಾಯನ ದುರ್ಗ, ರಾಣಿಝರಿ, ಬಂಡಾಜೆ ಫಾಲ್ಸ್ ಟ್ರಕ್ಕಿಂಗ್‌ಗೆ ನಿರ್ಬಂಧ ಹಾಕಲಾಗಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಭಾರಿ ಮಳೆಯಿಂದಾಗಿ ನೀರಿನ ಹರಿವು ಹೆಚ್ಚಳಗೊಂಡಿದೆ. ಪ್ರವಾಸಿಗರು ಚಾರಣದ ವೇಳೆ ಅಪಾಯಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಿದೆ. ಪ್ರವಾಸಿಗರ ಹಿತದೃಷ್ಟಿಯಿಂದ ಮೂಡಿಗೆರೆ ತಾಲೂಕಿನ ಬಲ್ಲಾಳ ರಾಯನ ದುರ್ಗ ಪ್ರವಾಸಿ ತಾಣ, ಕಳಸ ತಾಲೂಕಿನ ಬಂಡಾಜೆ ಫಾಲ್ಸ್‌ಗೆ ಕೊಪ್ಪ ವಿಭಾಗದ ಅರಣ್ಯ ಇಲಾಖೆ ಈ ಕ್ರಮಕೈಗೊಂಡಿದೆ.

ಇದನ್ನೂ ಓದಿ: Muharram 2024: ರಾಯಚೂರಿನಲ್ಲಿ ಮೊಹರಂನಲ್ಲಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ವ್ಯಕ್ತಿ ಸುಟ್ಟು ಭಸ್ಮ

ಶಿವಮೊಗ್ಗದಲ್ಲಿ ಕುಸಿದು ಬಿದ್ದ ಮನೆ

ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಮನೆಯೊಂದು ಕುಸಿದು ಬಿದ್ದಿದೆ. ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಕುಸ್ಕೂರು ಗ್ರಾಮದಲ್ಲಿ ಘಟನೆ ನಡೆದಿದೆ. ಮಂಜಾನಾಯ್ಕ ಎಂಬುವವರಿಗೆ ಸೇರಿದ ಮನೆ ಕುಸಿದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಮನೆಯಲ್ಲಿದ್ದ ಗೃಹ ಬಳಕೆ ವಸ್ತುಗಳು ನೀರುಪಾಲಾಗಿವೆ.

ಉಡುಪಿಯಲ್ಲಿ ಮಳೆಗೆ ಉಕ್ಕಿ ಹರಿದ ಬ್ರಹ್ಮಾವರ ಮಡಿಸಾಲು ಹೊಳೆ

ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಳೆಗೆ ಬ್ರಹ್ಮಾವರ ಮಡಿಸಾಲು ಹೊಳೆ ಉಕ್ಕಿ ಹರಿದಿದೆ. ಇದರಿಂದಾಗಿ ಆರೂರು ಬೆಳ್ಮಾರು ನೆರೆ ಹಾವಳಿ ಸೃಷ್ಟಿಯಾಗಿದೆ. ನೂರಾರು ಎಕರೆ ಕೃಷಿ ಭೂಮಿ ನೆರೆ ನೀರಿನಲ್ಲಿ ಮುಳುಗಿ ನಷ್ಟವಾಗಿದೆ. ಮಂಗಳವಾರ ಮಧ್ಯಾಹ್ನದ ನಂತರ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆ ಆಗಿದೆ. ಆದರೂ ಘಟ್ಟ ಪ್ರದೇಶದಿಂದ ಹರಿದು ಬರುತ್ತಿರುವ ನೀರಿನಿಂದಾಗಿ ನೆರೆ ಸೃಷ್ಟಿಯಾಗುತ್ತಿದೆ.

ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ

ಮುಂದಿನ 24 ಗಂಟೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಗಾಳಿಯ ವೇಗವು 30-40 ಕಿಮೀ ತಲುಪುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಜತೆಗೆ ನಿರಂತರ ಗಾಳಿಯ ವೇಗವು 40-50 ಕಿಮೀ ಇರಲಿದೆ. ಒಳನಾಡಿನ ಬೆಳಗಾವಿ ಮತ್ತು ಹಾಸನ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯು ಅಬ್ಬರಿಸಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
NMMS scholarship
ಕರ್ನಾಟಕ24 mins ago

NMMS Scholarship: ಎನ್‌ಎಂಎಂಎಸ್‌ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ; ಕೊನೆಯ ದಿನಾಂಕ ಯಾವಾಗ, ಅರ್ಜಿ ಸಲ್ಲಿಕೆ ಹೇಗೆ?

The Olympic Games
ಕ್ರೀಡೆ26 mins ago

The Olympic Games: 72ರ ಇಳಿ ವಯಸ್ಸಿನಲ್ಲೂ ಒಲಿಂಪಿಕ್ಸ್​ ಪದಕ ಗೆದ್ದಿದ್ದ ಶೂಟರ್‌; ಯಾರಿವರು?

jobs for kannadigas cm siddaramaiah
ಪ್ರಮುಖ ಸುದ್ದಿ30 mins ago

CM Siddaramaiah: ಖಾಸಗಿ ಕೈಗಾರಿಕೆಗಳ ಶೇ.100 ಉದ್ಯೋಗ ಕನ್ನಡಿಗರಿಗೆ: ಸಿದ್ದರಾಮಯ್ಯ ಕ್ಯಾಬಿನೆಟ್‌ ನಿರ್ಣಯ

Valmiki Corporation Scam
ಕರ್ನಾಟಕ34 mins ago

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಮಾಜಿ ಸಚಿವ ನಾಗೇಂದ್ರ ಪತ್ನಿಯನ್ನು ವಶಕ್ಕೆ ಪಡೆದ ಇಡಿ

Niveditha Gowda new reels with brother
ಸ್ಯಾಂಡಲ್ ವುಡ್59 mins ago

Niveditha Gowda: ನಾನೇನು ಬಾತ್‌ರೂಮ್‌ ಸಿಂಗರ್‌ ಅಲ್ಲ! ಚಂದನ್‌ ಶೆಟ್ಟಿಗೆ ಟಾಂಗ್‌ ಕೊಟ್ರಾ ನಿವೇದಿತಾ ಗೌಡ?

Gold Rate Today
ಚಿನ್ನದ ದರ1 hour ago

Gold Rate Today: ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ; ಇಂದಿನ ದರ ಇಷ್ಟಿದೆ

IND vs SL
ಕ್ರೀಡೆ1 hour ago

IND vs SL: ಲಂಕಾ ವಿರುದ್ಧದ ಏಕದಿನ ಸರಣಿಗೆ ಶ್ರೇಯಸ್ ಅಯ್ಯರ್ ಆಯ್ಕೆ ಸಾಧ್ಯತೆ

gt world mall 2
ಪ್ರಮುಖ ಸುದ್ದಿ1 hour ago

GT World Mall: ಅನ್ನದಾತನಿಗೆ ಅವಮಾನ ಮಾಡಿದ ಜಿಟಿ ಮಾಲ್‌ ಮುಂದೆ ಪಂಚೆ ಉಟ್ಟು ಪ್ರತಿಭಟನೆ, ಕ್ಷಮೆ ಕೇಳಿದ ಮಾಲೀಕ

Made In India
ದೇಶ1 hour ago

Made In India: ಜಾಗತಿಕವಾಗಿ ಪ್ರಭಾವ ಬೀರಿದ ʼಮೇಡ್‌ ಇನ್‌ ಇಂಡಿಯಾʼ ಉತ್ಪನ್ನಗಳು; ಪ್ರಧಾನಿ ಮೋದಿ ಮೆಚ್ಚುಗೆ

Mahanati Show Darshan wished Priyanka the contestant
ಕಿರುತೆರೆ2 hours ago

Mahanati Show: ಈ` ಮಹಾನಟಿ’ ಸ್ಪರ್ಧಿಗೆ ಶುಭ ಹಾರೈಸಿದ್ರಂತೆ ದರ್ಶನ್‌; ಅವರ ತಂದೆ ಕೂಡ ದಚ್ಚುಗೆ ಕ್ಲೋಸ್‌ ಫ್ರೆಂಡ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ3 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ4 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌