Sudha Murty: ಅಂಬಾನಿ ಮದುವೆಗೆ ಮಂಗಳ ಸೂತ್ರ ಮಾತ್ರವೇ ಧರಿಸಿ ಬಂದ ಸುಧಾ ಮೂರ್ತಿ; ಶೋ-ಆಫ್ ಇಲ್ಲ ಅಂದ್ರು ನೆಟ್ಟಿಗರು! - Vistara News

ಟಾಲಿವುಡ್

Sudha Murty: ಅಂಬಾನಿ ಮದುವೆಗೆ ಮಂಗಳ ಸೂತ್ರ ಮಾತ್ರವೇ ಧರಿಸಿ ಬಂದ ಸುಧಾ ಮೂರ್ತಿ; ಶೋ-ಆಫ್ ಇಲ್ಲ ಅಂದ್ರು ನೆಟ್ಟಿಗರು!

Sudha Murty: ಸುಧಾ ಮೂರ್ತಿ ಅವರು ವಿವಾಹ ಸಮಾರಂಭದಲ್ಲಿ ನೇರಳೆ ಬಣ್ಣದ ಸೀರೆಯನ್ನು ಧರಿಸಿ, ಕೇವಲ ಮಂಗಳಸೂತ್ರ ಮತ್ತು ಸ್ಮಾರ್ಟ್ ವಾಚ್‌ನೊಂದಿಗೆ ಸಿಂಪಲ್‌ ಆಗಿ ಬಂದಿದ್ದರು. ಅವರ ಸರಳತೆಗೆ ಹೆಚ್ಚು ಪ್ರಶಂಸೆಯನ್ನು ಗಳಿಸಿದರು. ನಮ್ರತಾ ಶಿರೋಡ್ಕರ್ ಅವರು ಸುಧಾ ಮೂರ್ತಿ ಅವರೊಂದಿಗಿನ ಚಿತ್ರವನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ.

VISTARANEWS.COM


on

Sudha Murty praised for simplicity at Ambani wedding
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಮುಂಬೈನಲ್ಲಿ ನಡೆದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ ಅವರ ಅದ್ದೂರಿ ವಿವಾಹದಲ್ಲಿ ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಅಧ್ಯಕ್ಷೆ ಮತ್ತು ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಪಾಲ್ಗೊಂಡಿದ್ದರು.   (Sudha Murty) ಅವರ ಜತೆ ಮಹೇಶ್‌ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಫೋಟೊ ಕ್ಲಿಕ್ಕಿಸಿಕೊಂಡಿದ್ದಾರೆ. ಸುಧಾ ಮೂರ್ತಿ ಜೊತೆಗಿನ ಫೋಟೊ ಶೇರ್ ಮಾಡಿ, ಈ ಕ್ಷಣವನ್ನು ಎಂದಿಗೂ ಮರೆಯುವುದಿಲ್ಲ ಎಂದು ನಮ್ರತಾ ಶಿರೋಡ್ಕರ್ ಬರೆದುಕೊಂಡಿದ್ದಾರೆ. ಜತೆಗೆ ಸುಧಾ ಮೂರ್ತಿ ಅವರ ಸರಳತೆಗೆ ನೆಟ್ಟಿಗರು ಹಾಡಿ ಹೊಗಳಿದ್ದಾರೆ. ಮಾತ್ರವಲ್ಲ ಕೊರಳಲ್ಲಿ ಮಂಗಳ ಸೂತ್ರ ಮಾತ್ರ ಧರಿಸಿ ಸಿಂಪಲ್‌ ಆಗಿ ಕಂಡಿದ್ದಾರೆ ಎಂದು ನೆಟ್ಟಿಗರು ಕಮೆಂಟ್‌ ಮಾಡಿದ್ದಾರೆ.

ಸುಧಾ ಮೂರ್ತಿ ಅವರು ವಿವಾಹ ಸಮಾರಂಭದಲ್ಲಿ ನೇರಳೆ ಬಣ್ಣದ ಸೀರೆಯನ್ನು ಧರಿಸಿ, ಕೇವಲ ಮಂಗಳಸೂತ್ರ ಮತ್ತು ಸ್ಮಾರ್ಟ್ ವಾಚ್‌ನೊಂದಿಗೆ ಸಿಂಪಲ್‌ ಆಗಿ ಬಂದಿದ್ದರು. ಅವರ ಸರಳತೆಗೆ ಹೆಚ್ಚು ಪ್ರಶಂಸೆಯನ್ನು ಗಳಿಸಿದರು. ನಮ್ರತಾ ಶಿರೋಡ್ಕರ್ ಅವರು ಸುಧಾ ಮೂರ್ತಿ ಅವರೊಂದಿಗಿನ ಚಿತ್ರವನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ಈ ಬುದ್ಧಿವಂತ ಮಹಿಳೆಯ ಬಗ್ಗೆ ತುಂಬಾ ಕೇಳಿದ್ದೆ, ಅವರನ್ನು ಭೇಟಿಯಾದ ನಂತರ ನನ್ನ ನಂಬಿಕೆಯು ನಿಜವಾಯಿತು. ರೋಮಾಂಚಕ, ಜೀವನದಲ್ಲಿ ನೀಡಲು ತುಂಬಾ ಪ್ರೀತಿಯಿದೆ ಎನಿಸಿತು ಎಂದು ಮಹೇಶ್ ಬಾಬು ಪತ್ನಿ ನಮ್ರತಾ ಬಣ್ಣಿಸಿದ್ದಾರೆ.

ಇದನ್ನೂ ಓದಿ: Sudha Murty: ಸುಧಾ ಮೂರ್ತಿ 30 ವರ್ಷಗಳಿಂದ ಒಂದೇ ಒಂದು ಸೀರೆ ಖರೀದಿಸಿಲ್ಲ; ಇದಕ್ಕೆ ಕಾರಣ ಕಾಶಿಯಂತೆ!

ಇನ್ನು ಈ ಫೋಟೊ ವೈರಲ್‌ ಆಗುತ್ತಿದ್ದಂತೆ ಸುಧಾ ಮೂರ್ತಿ ಅವರನ್ನು ನೆಟ್ಟಿಗರು ಹೊಗಳಿದ್ದಾರೆ. ʻʻಬಿಲಿಯನೇರ್ ಮಹಿಳೆ ಕೇವಲ ಮಂಗಳಸೂತ್ರದೊಂದಿಗೆ ಹಾಜರಾಗುವುದನ್ನು ನೋಡಲು ಖುಷಿ ಆಗುತ್ತೆʼʼಎಂದು ಒಬ್ಬರು ಕಮೆಂಟ್‌ ಮಾಡಿದರೆ, ʻಸರಳ ಮತ್ತು ವಿನಮ್ರʼ ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ. ʻಸ್ಫೂರ್ತಿದಾಯಕ ಮಹಿಳೆ. ಶೋ-ಆಫ್ ಇಲ್ಲʼʼಎಂದು ಇನ್ನೊಬ್ಬರು ಕಮೆಂಟ್‌ ಮಾಡಿದ್ದಾರೆ.

ತಮ್ಮ ಸರಳತೆಯಿಂದಲೇ ಸುದ್ದಿಯಲ್ಲಿರುವ ರಾಜ್ಯಸಭೆಯ ನೂತನ (Rajya Sabha) ಸದಸ್ಯೆ (MP), ಲೇಖಕಿ, ಇನ್ಫೋಸಿಸ್‌ನ ಸಂಸ್ಥಾಪಕ (Infosys chairman) ನಾರಾಯಣ ಮೂರ್ತಿ (Narayana Murthy) ಅವರ ಪತ್ನಿ ಸುಧಾ ಮೂರ್ತಿ (Sudha Murty) ಅವರು ಕಳೆದ 30 ವರ್ಷಗಳಿಂದ ಒಂದೇ ಒಂದು ಸೀರೆಯನ್ನೂ ಖರೀದಿ ಮಾಡಿಲ್ಲವಂತೆ! ಇತ್ತೀಚಿಗೆ ಅವರು ನೀಡಿರುವ ಸಂದರ್ಶನವೊಂದರಲ್ಲಿ ಈ ವಿಚಾರ ಬಹಿರಂಗಪಡಿಸಿದ್ದರು.

ಇದಕ್ಕೆ ಮುಖ್ಯ ಕಾರಣ ಕಾಶಿಗೆ ಪ್ರವಾಸ ಮಾಡಿರುವುದು ಎಂಬುದಾಗಿ ಅವರು ತಿಳಿಸಿದ್ದರು. ಅಪಾರ ಸಂಪತ್ತು ಇದ್ದರೂ ಇನ್ಫೋಸಿಸ್ ಅಧ್ಯಕ್ಷ ನಾರಾಯಣ ಮೂರ್ತಿ ಅವರ ಪತ್ನಿ ಸುಧಾ ಮೂರ್ತಿ ಅವರು ತಮ್ಮ ಸರಳವಾದ ಉಡುಗೆ ತೊಡುಗೆಗಳಿಂದ, ಸಾಮಾನ್ಯ ಜೀವನ ಶೈಲಿಯಿಂದ ಎಲ್ಲರಿಗೂ ಸ್ಫೂರ್ತಿಯಾಗಿದ್ದರು ದಿ ವಾಯ್ಸ್ ಆಫ್ ಫ್ಯಾಶನ್‌ಗೆ ನೀಡಿದ ಸಂದರ್ಶನದಲ್ಲಿ ಸುಧಾ ಮೂರ್ತಿ ಅವರು ಈ ವಿಚಾರವನ್ನು ಹೀಗೆ ಹಂಚಿಕೊಂಡಿದ್ದರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Rashmika Mandanna: ಅಂಬಾನಿ ಮದುವೆಯಲ್ಲಿ ರಶ್ಮಿಕಾ ಮಂದಣ್ಣ ಸ್ಟನ್ನಿಂಗ್ ಲುಕ್‌; ಸೀರೆ ಬೆಲೆ ಕೇಳಿ ಫ್ಯಾನ್ಸ್‌ ಶಾಕ್‌!

Rashmika Mandanna: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna) ಕೂಡ ಸೀರೆಯಲ್ಲಿ ಮಿಂಚಿದರು. ನೀಲಿ ಸೀರೆಯಲ್ಲಿ ಅದ್ಧೂರಿಯಾಗಿ ಮಿಂಚಿದ್ದಾರೆ. ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಅವರ ಬಹುನಿರೀಕ್ಷೆಯ ಪುಷ್ಪಾ – 2 ಸಿನಿಮಾ ಮುಂದಿನ ತಿಂಗಳು ಆಗಸ್ಟ್‌ಗೆ ಬಿಡುಗಡೆ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ ರಿಲೀಸ್ ಡೇಟ್ ಡಿಸೆಂಬರ್‌ಗೆ ಫಿಕ್ಸ್ ಆಗಿದೆ. ಅಭಿಮಾನಿಗಳು ರಶ್ಮಿಕಾರನ್ನು ಶ್ರೀವಲ್ಲಿ ಪಾತ್ರದಲ್ಲಿ ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.

VISTARANEWS.COM


on

Rashmika Mandanna Chose A Beautiful Ajrakh Saree For Anant Ambani
Koo

ಬೆಂಗಳೂರು: ಜುಲೈ 13ರಂದು ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ಅದ್ಧೂರಿ ಶುಭ ಆಶೀರ್ವಾದ ಸಮಾರಂಭ ನಡೆಯಿತು. ಅನೇಕ ಬಾಲಿವುಡ್‌, ಸೌತ್‌ ಸೆಲೆಬ್ರಿಟಿಗಳು ಸೇರಿದ್ದರು. ಈ ವೇಳೆ ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna) ಕೂಡ ಸೀರೆಯಲ್ಲಿ ಮಿಂಚಿದರು. ನೀಲಿ ಸೀರೆಯಲ್ಲಿ ಅದ್ಧೂರಿಯಾಗಿ ಮಿಂಚಿದ್ದಾರೆ. ವರದಿಗಳ ಪ್ರಕಾರ ರಶ್ಮಿಕಾ ಸೀರೆ ಬೆಲೆ 1,28,000 ರೂ. ಎನ್ನಲಾಗಿದೆ.

ವಜ್ರಗಳಿಂದ ಅಲಂಕರಿಸಲ್ಪಟ್ಟ ಸುಂದರವಾದ ನೆಕ್ಲೇಸ್ ಅನ್ನು ಧರಿಸಿದ್ದರು, ಅಂದವಾದ ಕಿವಿಯೋಲೆಗಳು, ಬಳೆಗಳ ಸ್ಟಾಕ್ ಮತ್ತು ಸ್ಟೇಟ್‌ಮೆಂಟ್ ರಿಂಗ್‌ನೊಂದಿಗೆ ಮತ್ತಷ್ಟು ಚೆಂದವಾಗಿ ಕಂಡಿದ್ದಾರೆ. ಹಿಂದಿ, ತೆಲುಗು ಸಿನಿಮಾಗಳಲ್ಲಿ ಬ್ಯೂಸಿ ಇರುವ ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಅವರ ಬಹುನಿರೀಕ್ಷೆಯ ಪುಷ್ಪಾ – 2 ಸಿನಿಮಾ ಮುಂದಿನ ತಿಂಗಳು ಆಗಸ್ಟ್‌ಗೆ ಬಿಡುಗಡೆ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ ರಿಲೀಸ್ ಡೇಟ್ ಡಿಸೆಂಬರ್‌ಗೆ ಫಿಕ್ಸ್ ಆಗಿದೆ. ಅಭಿಮಾನಿಗಳು ರಶ್ಮಿಕಾರನ್ನು ಶ್ರೀವಲ್ಲಿ ಪಾತ್ರದಲ್ಲಿ ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.ಇನ್ನು ರಶ್ಮಿಕಾ ಮಂದಣ್ಣ ನಟ ವಿಜಯ್ ದೇವರಕೊಂಡ ಮತ್ತು ಗೌತಮ್ ತಿನ್ನನೂರಿ ಸಿನಿಮಾಗಳಲ್ಲಿ ಬಣ್ಣ ಹಚ್ಚಲಿದ್ದಾರೆ ಎಂಬ ಮಾತು ಕೇಳಿ ಬಂದಿವೆ. ನಟ ಧನುಷ್ ಅಭಿನಯದ ‘ಕುಬೇರ’ ಸಿನಿಮಾದಲ್ಲಿ ನಟಿ ಬ್ಯೂಸಿ ಇದ್ದಾರೆ. ರವಿತೇಜ – ಗೋಪಿಚಂದ್ ಮಲಿನೇನಿ ಚಿತ್ರ ಜೊತೆಗೆ ‘ರೈನ್ಬೋ’ ಲೇಡಿ ಓರಿಯೆಂಟೆಡ್ ಸಿನಿಮಾಗಳ ಮೂಲಕ ರಶ್ಮಿಕಾ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಅಲ್ಲದೇ ಬಾಲಿವುಡ್ ಸಲ್ಮಾನ್ ಖಾನ್ ಚಿತ್ರ ‘ಸಿಕಂದರ್’ ಸಿನಿಮಾದಲ್ಲಿ ರಶ್ಮಿಕಾ ನಟಿಸಬೇಕಿದೆ.

ಇದನ್ನೂ ಓದಿ: Rashmika Mandanna: ಧನುಷ್‌ ನಟನೆಯ ʻಕುಬೇರʼ ಸಿನಿಮಾದ ರಶ್ಮಿಕಾ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌!

ರಶ್ಮಿಕಾ ಫಸ್ಟ್‌ ಲುಕ್‌ ಜತೆಗೆ ಕ್ಯಾರಕ್ಟರ್‌ ಗ್ಲಿಂಪ್ಸ್‌ ಕೂಡ ಕುಬೇರ ಚಿತ್ರತಂಡ ರಿವೀಲ್‌ ಮಾಡಿದೆ. ಒಂದು ನಿಮಿಷದಲ್ಲಿರುವ ಈ ವಿಡಿಯೊದಲ್ಲಿ ರಶ್ಮಿಕಾ ಪಾತ್ರದ ಝಲಕ್‌ ಇದೆ. ದೇವಿ ಶ್ರೀ ಪ್ರಸಾದ್ ಅವರ ಸಂಗೀತ ಇನ್ನಷ್ಟು ಕಿಕ್‌ ಕೊಡುವಂತಿದೆ. ಶೇಖರ್ ಕುಮ್ಮಲ ಅವರ ಕುಬೇರ ಬಹು ನಿರೀಕ್ಷಿತ ಪ್ಯಾನ್-ಇಂಡಿಯನ್ ಚಲನಚಿತ್ರಗಳಲ್ಲಿ ಒಂದಾಗಿದೆ. ಸದ್ಯ ಈ ಹೈ-ಬಜೆಟ್ ಸಿನಿಮಾದ ಪೋಸ್ಟ್-ಪ್ರೊಡಕ್ಷನ್ ಕೆಲಸಗಳು ಆಗುತ್ತಿವೆ. ಇತ್ತೀಚೆಗಷ್ಟೇ ಧನುಷ್ ಅವರ ಫಸ್ಟ್ ಲುಕ್ ಪೋಸ್ಟರ್‌ ಅನಾವರಣಗೊಂಡಿತ್ತು. ಮಾತ್ರವಲ್ಲ ಪ್ರೇಕ್ಷರಿಂದ ಮೆಚ್ಚುಗೆ ವ್ಯಕ್ತವಾಗಿತ್ತು.

ಕೆಲವು ದಿನಗಳ ಹಿಂದೆ ಧನುಷ್ (Actor Dhanush) ಅವರ ಎರಡನೇ ನಿರ್ದೇಶನದ ಸಿನಿಮಾ ‘ಡಿ 50’ಪೋಸ್ಟರ್‌ ಲುಕ್‌ ಅನಾವರಣಗೊಂಡಿತ್ತು. ಧನುಷ್ ಕಳೆದ ವರ್ಷ ಜುಲೈನಲ್ಲಿ ಈ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದರು. ಈ ಸಿನಿಮಾಗಾಗಿ ನಟ ತಲೆಯನ್ನು ಬೋಳಿಸಿಕೊಂಡಿದ್ದಾರೆ. ಇನ್ನು ಸಿನಿಮಾದ ನಾಯಕಿ ಹಾಗೂ ಇನ್ನುಳಿದ ಪಾತ್ರವರ್ಗದ ಬಗ್ಗೆ ಮುಂದಿನ ದಿನಗಳಲ್ಲಿ ಅಪ್‌ಡೇಟ್‌ ನೀಡುವುದಾಗಿ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. 2017 ರಲ್ಲಿ ತೆರೆಕಂಡ ‘ಪಾ ಪಾಂಡಿ’ ಚಿತ್ರದ ಮೂಲಕ ಧನುಷ್ ನಿರ್ದೇಶಕರಾಗಿ ಪದಾರ್ಪಣೆ ಮಾಡಿದರು. ಈ ಚಿತ್ರಕ್ಕಾಗಿ ಫಿಲ್ಮ್‌ಫೇರ್‌ನಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಇದೀಗ ʻರಾಯನ್‌ʼ ಅವರ ಎರಡನೇ ನಿರ್ದೇಶನದ ಸಿನಿಮಾ.

Continue Reading

ಟಾಲಿವುಡ್

Kalki 2898 AD: ನೀವಿಲ್ಲದೆ ನಾನು ಶೂನ್ಯ ಎಂದು ಅಭಿಮಾನಿಗಳಿಗೆ ಧನ್ಯವಾದ ಹೇಳಿದ ನಟ ಪ್ರಭಾಸ್‌!

Kalki 2898 AD: ನಾಗ್ ಅಶ್ವಿನ್ ನಿರ್ದೇಶನದ ಈ ಸಿನಿಮಾ ವಿಶ್ವಾದ್ಯಂತ 1000 ಕೋಟಿ ರೂ. ಗಳಿಕೆ ಕಂಡಿದೆ. ಚಿತ್ರದ ಯಶಸ್ಸನ್ನು ಸಂಭ್ರಮಿಸುತ್ತಿರುವ ಪ್ರಭಾಸ್, ತಮ್ಮ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಚಿತ್ರವನ್ನು ‘ದೊಡ್ಡ ಹಿಟ್’ ಮಾಡಿದಕ್ಕಾಗಿ ಧನ್ಯವಾದ ಎಂದು ವಿಡಿಯೊ ಮೂಲಕ ಹೇಳಿಕೊಂಡಿದ್ದಾರೆ.

VISTARANEWS.COM


on

Kalki 2898 AD Prabhas thanks fans
Koo

ಬೆಂಗಳೂರು: ಪ್ರಭಾಸ್ ಅಭಿನಯದ ‘ಕಲ್ಕಿ 2898 ಎಡಿ’ ಸಿನಿಮಾ (Kalki 2898 AD) ಚಿತ್ರಮಂದಿರಗಳಲ್ಲಿ ತನ್ನ ಓಟವನ್ನು ಮುಂದುವರಿಸುತ್ತಿದೆ. ನಾಗ್ ಅಶ್ವಿನ್ ನಿರ್ದೇಶನದ ಈ ಸಿನಿಮಾ ವಿಶ್ವಾದ್ಯಂತ 1000 ಕೋಟಿ ರೂ. ಗಳಿಕೆ ಕಂಡಿದೆ. ಚಿತ್ರದ ಯಶಸ್ಸನ್ನು ಸಂಭ್ರಮಿಸುತ್ತಿರುವ ಪ್ರಭಾಸ್, ತಮ್ಮ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಚಿತ್ರವನ್ನು ‘ದೊಡ್ಡ ಹಿಟ್’ ಮಾಡಿದಕ್ಕಾಗಿ ಧನ್ಯವಾದ ಎಂದು ವಿಡಿಯೊ ಮೂಲಕ ಹೇಳಿಕೊಂಡಿದ್ದಾರೆ.

ವೈಜಯಂತಿ ನೆಟ್‌ವರ್ಕ್ ಒಂದು ವೀಡಿಯೊವನ್ನು ಹಂಚಿಕೊಂಡಿದೆ. ಅದರಲ್ಲಿ ಪ್ರಭಾಸ್ ಅಭಿಮಾನಿಗಳಿಗೆ ಧನ್ಯವಾದ ಹೇಳುತ್ತಾ, “ನನಗೆ ಇಷ್ಟು ದೊಡ್ಡ ಹಿಂಟ್‌ ನೀಡಿದ್ದಕ್ಕಾಗಿ ತುಂಬಾ ಧನ್ಯವಾದಗಳು. ತುಂಬಾ ಧನ್ಯವಾದಗಳು. ನೀವಿಲ್ಲದೆ (ಅಭಿಮಾನಿಗಳು) ನಾನು ಶೂನ್ಯ. ನಾಗ್ ಅಶ್ವಿನ್ ಅವರಿಗೆ ಧನ್ಯವಾದಗಳ. ಇಂತಹ ದೊಡ್ಡ ಸಿನಿಮಾ ಮಾಡಲ ಐದು ವರ್ಷಗಳ ಕಾಲ ಶ್ರಮಿಸಿದ್ದಾರೆ.ನಾವು ನಿರ್ಮಾಪಕರಿಗೆ ಧನ್ಯವಾದ ಹೇಳಬೇಕು. ಅತ್ಯಂತ ಧೈರ್ಯಶಾಲಿ ನಿರ್ಮಾಪಕರು. ಅವರು ಖರ್ಚು ಮಾಡಿದ ರೀತಿ, ನಮಗೆಲ್ಲ ಆತಂಕವಾಯಿತು. ಭಾರತೀಯ ಚಿತ್ರರಂಗದ ಶ್ರೇಷ್ಠ ದಂತಕಥೆಗಳೊಂದಿಗೆ ಕೆಲಸ ಮಾಡುವ ಅವಕಾಶವನ್ನು ನೀಡಿದ ಈ ನಿರ್ಮಾಪಕರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ.

“ನಮ್ಮಲ್ಲಿ ಅಮಿತಾಬ್ ಸರ್ ಮತ್ತು ಕಮಲ್ ಸರ್ ಇದ್ದಾರೆ .ನಾವೆಲ್ಲರೂ ನಿಮ್ಮನ್ನು ನೋಡುತ್ತಾ ಬೆಳೆದಿದ್ದೇವೆ ಮತ್ತು ನಿಮ್ಮಿಂದ ನಾವು ಬಹಳಷ್ಟು ಕಲಿತಿದ್ದೇವೆ. ದೀಪಿಕಾ ಅವರಿಗೆ ಕೂಡ ತುಂಬಾ ಧನ್ಯವಾದಗಳು. ಮತ್ತೊಮ್ಮೆ, ನನ್ನ ಅಭಿಮಾನಿಗಳಿಗೆ ಧನ್ಯವಾದಗಳುʼʼಎಂದು ಹೇಳಿಕೊಂಡಿದ್ದಾರೆ.

Kalki 2898 AD: 1,000 ಕೋಟಿ ರೂ. ಕಲೆಕ್ಷನ್‌ ಮಾಡಿದ `ಕಲ್ಕಿ 2898 ಎಡಿ’: ಪ್ರಭಾಸ್ ಹೊಸ ದಾಖಲೆ!ಇದನ್ನೂ ಓದಿ:

ನಾಗ್ ಅಶ್ವಿನ್ ಅವರು ‘ಕಲ್ಕಿ 2898 ಎಡಿ’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. 2ಡಿ ಜೊತೆಗೆ 3ಡಿಯಲ್ಲೂ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. ಈ ಚಿತ್ರದ ಬಜೆಟ್ 600 ಕೋಟಿ ರೂಪಾಯಿ ಎನ್ನಲಾಗಿದೆ. ಈ ಕಾರಣದಿಂದಲೇ ಸಿನಿಮಾ ದೊಡ್ಡ ಮೊತ್ತದ ಗಳಿಕೆ ಮಾಡೋ ಅವಶ್ಯಕತೆ ಇತ್ತು. ಸದ್ಯ ಆಗಿರೋ ಗಳಿಕೆಯಿಂದ ನಿರ್ಮಾಪಕರಿಗೆ ಇನ್ನೂ ದೊಡ್ಡ ಲಾಭವೇನು ಆಗಿಲ್ಲ. ‘ಕಲ್ಕಿ 2898 ಎಡಿ’ ಚಿತ್ರ ತೆಲುಗು, ತಮಿಳು, ಮಲಯಾಳಂ, ಕನ್ನಡ, ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ರಿಲೀಸ್ ಆಗಿದೆ. ವೈಜಯಂತಿ ಮೂವಿಸ್ ಮೂಲಕ ಅಶ್ವಿನಿ ದತ್ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಸಲಾರ್’ ನಂತರ ಬಿಡುಗಡೆಯಾದ ಕಲ್ಕಿ ಸಿನಿಮಾ ಮೂಲಕ, ಪ್ರಭಾಸ್ ಚಿತ್ರೋದ್ಯಮದಲ್ಲಿ ಮತ್ತೊಂದು ಹೊಸ ಮೈಲಿಗಲ್ಲು ತಲುಪಿದ್ದಾರೆ. ಗಲ್ಲಾಪೆಟ್ಟಿಗೆಯಲ್ಲಿ ದೊಡ್ಡ ಮಟ್ಟದ ಓಪನಿಂಗ್ ಪ್ರಭಾಸ್‌ ಸಿನಿಮಾಗಳಿಗೆ ಸಿಗುತ್ತಿವೆ. ಇದೀಗ ‘ಕಲ್ಕಿ 2898 AD’ ಸಿನಿಮಾ ಸಹ ಇದಕ್ಕೆ ಹೊರತಾಗಿಲ್ಲ, ಇದು ಭಾರತೀಯ ಚಿತ್ರರಂಗದಲ್ಲಿ ಅವರ ಮೂರನೇ ಅತಿದೊಡ್ಡ ಕಲೆಕ್ಷನ್‌ ಮಾಡಿದ ಸಿನಿಮಾವಾಗಿದೆ.

Continue Reading

ಟಾಲಿವುಡ್

Raj Tarun: ಆತ್ಮಹತ್ಯೆಗೆ ಯತ್ನಿಸಿದ ನಟ ರಾಜ್ ತರುಣ್ ಪ್ರೇಯಸಿ; ಪೊಲೀಸರ ಮಧ್ಯ ಪ್ರವೇಶ!

Raj Tarun: ಯಾವಾಗ ಲಾವಣ್ಯ ಅವರು ರಾಜ್‌ ತರುಣ್‌ ಹಾಗೂ ಅವರ ಜತೆ ಸಂಬಂಧ ಇತ್ತು ಎನ್ನಲಾಗುತ್ತಿದ್ದ ನಟಿ ಮಾಳವಿ ಮಲ್ಹೋತ್ರಾ ವಿರುದ್ಧ ದೂರು ನೀಡಿದ್ದರೋ. ಅದರ ಪ್ರತಿಯಾಗಿ  ರಾಜ್ ತರುಣ್​ರ ಹೊಸ ಸಿನಿಮಾದ ನಾಯಕ ನಟಿ ಮಾಳವಿ ಮಲ್ಹೋತ್ರಾ, ರಾಜ್​ರ ಪ್ರೇಯಸಿ ಲಾವಣ್ಯ ವಿರುದ್ಧ ದೂರು ನೀಡಿದ್ದರು.

VISTARANEWS.COM


on

Raj Tarun Girl Friend Lawanya Attempted To Suicide
Koo

ಬೆಂಗಳೂರು:  ಉಯ್ಯಾಲ ಜಂಪಾಲ’, ‘ಕುಮಾರಿ 21 ಎಫ್’, ‘ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಟಾಲಿವುಡ್​ನ ಜನಪ್ರಿಯ ಯುವ ನಟ ರಾಜ್ ತರುಣ್ (Raj Tarun) ವಿರುದ್ಧ ಅವರ ಪ್ರೇಯಸಿ ಲಾವಣ್ಯ ವಂಚನೆ ಪ್ರಕರಣ ದಾಖಲಿಸಿದ್ದರು. ರಾಜ್​ ಅನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.  ಇದೀಗ ಲಾವಣ್ಯ ಆತ್ಮಹತ್ಯೆಗೆ ಯತ್ನಿಸಿದ್ದು ಪೊಲೀಸರು ಆತ್ಮಹತ್ಯೆಯನ್ನು ತಡೆದಿದ್ದಾರೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ. ಲಾವಣ್ಯ ಶನಿವಾರ ತಡರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದು ಸೂಕ್ತ ಸಮಯಕ್ಕೆ ಪೊಲೀಸರು ಮಧ್ಯ ಪ್ರವೇಶಿಸಿ ಆತ್ಮಹತ್ಯೆ ತಡೆದಿದ್ದಾರೆ ಎನ್ನಲಾಗುತ್ತಿದೆ. 

ಯಾವಾಗ ಲಾವಣ್ಯ ಅವರು ರಾಜ್‌ ತರುಣ್‌ ಹಾಗೂ ಅವರ ಜತೆ ಸಂಬಂಧ ಇತ್ತು ಎನ್ನಲಾಗುತ್ತಿದ್ದ ನಟಿ ಮಾಳವಿ ಮಲ್ಹೋತ್ರಾ ವಿರುದ್ಧ ದೂರು ನೀಡಿದ್ದರೋ. ಅದರ ಪ್ರತಿಯಾಗಿ  ರಾಜ್ ತರುಣ್​ರ ಹೊಸ ಸಿನಿಮಾದ ನಾಯಕ ನಟಿ ಮಾಳವಿ ಮಲ್ಹೋತ್ರಾ, ರಾಜ್​ರ ಪ್ರೇಯಸಿ ಲಾವಣ್ಯ ವಿರುದ್ಧ ದೂರು ನೀಡಿದ್ದರು. ಲಾವಣ್ಯ ನನ್ನ ವಿರುದ್ಧ ಮಾಡಿರುವ ಆರೋಪಗಳು ಸುಳ್ಳು. ನಾನು ರಾಜ್ ತರುಣ್‌ ಜತೆ ಸಂಬಂಧ ಹೊಂದಿಲ್ಲ ಮತ್ತು ನಮ್ಮಿಬ್ಬರ ಮಧ್ಯೆ ಇರುವುದು ಕೇವಲ ಫ್ರೆಂಡ್‌ಶಿಪ್‌. ನಮ್ಮ ನಡುವೆ ಯಾವುದೇ ರೀತಿಯ ಸಂಬಂಧವಿಲ್ಲ” ಎಂದು ಹೇಳಿಕೊಂಡಿದ್ದರು.

ಇದೀ ಲಾವಣ್ಯ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಶನಿವಾರ ತಮ್ಮ ವಕೀಲರನ್ನು ಭೇಟಿ ಆಗಿದ್ದ ಲಾವಣ್ಯ, ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ನಡೆಯುತ್ತಿರುವ ಟ್ರೋಲಿಂಗ್, ನಟ ರಾಜ್ ತರುಣ್, ತಮ್ಮ ವಿರುದ್ಧ ಮಾಡುತ್ತಿರುವ ಷಡ್ಯಂತ್ರ ಇನ್ನಿತರೆಗಳಿಂದ ಬೇಸತ್ತಿರುವುದಾಗಿ ಹೇಳಿಕೊಂಡಿದ್ದರು. ಲಾವಣ್ಯ ವಕೀಲರಿಗೆ ಸಂದೇಶ ಕಳಿಸಿ, ಈ ಪ್ರಪಂಚದಲ್ಲಿ ನನ್ನ ದಿನಗಳು ಅಂತ್ಯವಾದವು’, ‘ಈ ಮೈಂಡ್ ಗೇಮ್, ಗಾಸಿಪ್​ಗಳಿಂದ ನನಗೆ ಸಾಕಾಗಿ ಹೋಗಿದೆ’ ಎಂದೆಲ್ಲ ಮೆಸೆಜ್‌ ಕಳುಹಿಸಿದ್ದರಂತೆ. ಲಾವಣ್ಯರ ಮನೆಗೆ ಧಾವಿಸಿದ ಪೊಲೀಸರು ಆಕೆಯ ಆತ್ಮಹತ್ಯೆ ಪ್ರಯತ್ನವನ್ನು ತಡೆದಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: Raj Tarun: ಯುವ ನಟ ರಾಜ್ ತರುಣ್ ಮಾಜಿ ಪ್ರೇಯಸಿ ವಿರುದ್ಧ ದೂರು ದಾಖಲಿಸಿದ ನಟಿ!

ಲಾವಣ್ಯ ಈ ಹಿಂದೆ ದೂರು ನೀಡಿದ್ದೇನು?

ನಟ ರಾಜ್ ತರುಣ್ ವಂಚನೆ ಮಾಡಿದ್ದಾನೆಂದು ಆರೋಪಿಸಿದ್ದರು. . “ರಾಜ್ ತರುಣ್ ನನ್ನನ್ನು ನಂಬಿ, ಪ್ರೀತಿಸಿ, ದೈಹಿಕವಾಗಿಯೂ ಬಳಸಿಕೊಂಡಿದ್ದಾರೆ. ಇದಕ್ಕೆ ಕಾರಣ ಒಬ್ಬ ಯುವತಿ . ಹಾಗಾಗಿಯೇ ಆಕೆಯ ಹಾಗೂ ಆಕೆಯ ಸಹೋದರನ ವಿರುದ್ಧ ನರಸಿಂಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇನೆ. ನಾನು ರಾಜ್‌ತರುಣ್ ಜತೆ 11 ವರ್ಷಗಳಿಂದ ಸಂಬಂಧ ಹೊಂದಿದ್ದೆ. ದೇವಸ್ಥಾನದಲ್ಲಿ ಮದುವೆ ಕೂಡ ಮಾಡಿಕೊಂಡಿದ್ದೇವು. ಆದರೆ ಆಕೆಯೊಂದಿಗೆ ಸಂಬಂಧ ಹೊಂದಿದ್ದ ಕಾರಣ 3 ತಿಂಗಳ ಹಿಂದೆ ರಾಜ್ ಮನೆ ಬಿಟ್ಟು ನನ್ನಿಂದ ದೂರ ಉಳಿದಿದ್ದರು’’ ಎಂದು ಲಾವಣ್ಯ ಹೇಳಿಕೆ ನೀಡಿರುವುದಾಗಿ ವರದಿಯಾಗಿತ್ತು.

Continue Reading

ಟಾಲಿವುಡ್

Shiva Rajkumar: ಟಾಲಿವುಡ್‌ ಸ್ಟಾರ್‌ ರಾಮ್‌ಚರಣ್‌ ʻRC 16ʼ ಸಿನಿಮಾದಲ್ಲಿ ಶಿವಣ್ಣ; ಫಸ್ಟ್‌ ಲುಕ್‌ ಔಟ್‌!

Shiva Rajkumar :
ಮೈತ್ರಿ ಮೂವಿ ಮೇಕರ್ಸ್ ಬೆಂಬಲದೊಂದಿಗೆ, ವೃದ್ಧಿ ಸಿನಿಮಾಸ್ ಮತ್ತು ಸುಕುಮಾರ್ ರೈಟಿಂಗ್ಸ್ ಬ್ಯಾನರ್‌ಗಳ ಅಡಿಯಲ್ಲಿ ಹೈ ಬಜೆಟ್‌ನಲ್ಲಿ ಈ ಚಿತ್ರ ತಯಾರಾಗುತ್ತಿದೆ. ಸ್ಪೋರ್ಟ್ಸ್ ಡ್ರಾಮಾ ಚಿತ್ರ ಇದಾಗಿದ್ದು, ಪ್ಯಾನ್-ಇಂಡಿಯಾ ಚಲನಚಿತ್ರವಾಗಲಿದೆ ಎಂದು ವರದಿಯಾಗಿದೆ. RC16 ತಂಡ ತೆಲುಗು ಚಿತ್ರರಂಗಕ್ಕೆ ಕರುನಾಡ ಚಕ್ರವರ್ತಿ ಶಿವ ರಾಜ್‌ಕುಮಾರ್ ಅವರನ್ನು ಸ್ವಾಗತಿಸಿದೆ.

VISTARANEWS.COM


on

Shiva Rajkumar Joins Ram Charan-Sukumar's RC16 Cast
Koo

ಬೆಂಗಳೂರು: ಗ್ಲೋಬಲ್ ಸ್ಟಾರ್ ರಾಮ್ ಚರಣ್ ʻಆರ್‌ಆರ್‌ಆರ್‌ʼ ಸಿನಿಮಾ ಮೂಲಕ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿದರು. ನಿರ್ದೇಶಕ ಬುಚ್ಚಿ ಬಾಬು ಸನಾ ಅವರ 16ನೇ ಚಿತ್ರಕ್ಕಾಗಿ ರಾಮ್ ಚರಣ್ ಕೈ ಜೋಡಿಸಿದ್ದಾರೆ. ಶಂಕರ್ ಅವರ ʻಗೇಮ್ ಚೇಂಜರ್ʼ ಸಿನಿಮಾ ನಂತರ, ನಿರ್ದೇಶಕ ಬುಚ್ಚಿ ಬಾಬು ಸನಾ (Director Buchi Babu Sana) ಅವರೊಂದಿಗೆ ನಟ ಕೈ ಜೋಡಿಸುತ್ತಿದ್ದಾರೆ. ಈ ಸಿನಿಮಾಗೆ ತಾತ್ಕಾಲಿಕವಾಗಿ RC 16 ಎಂದು ಹೆಸರಿಡಲಾಗಿದ್ದು, ಇದೀಗ ಈ ಸಿನಿಮಾದಲ್ಲಿ ಶಿವಣ್ಣ ಮಿಂಚುತ್ತಿದ್ದಾರೆ. ಇದೀಗ ಚಿತ್ರತಂಡ ಶಿವರಾಜ್‌ಕುಮಾರ್‌ (Shiva Rajkumar) ಅವರ ಜನುಮದಿನದಂದು ಫಸ್ಟ್‌ ಲುಕ್‌ ಪೋಸ್ಟರ್‌ ಅನಾವರಣಗೊಳಿಸಿದೆ.

ಮೈತ್ರಿ ಮೂವಿ ಮೇಕರ್ಸ್ ಬೆಂಬಲದೊಂದಿಗೆ, ವೃದ್ಧಿ ಸಿನಿಮಾಸ್ ಮತ್ತು ಸುಕುಮಾರ್ ರೈಟಿಂಗ್ಸ್ ಬ್ಯಾನರ್‌ಗಳ ಅಡಿಯಲ್ಲಿ ಹೈ ಬಜೆಟ್‌ನಲ್ಲಿ ಈ ಚಿತ್ರ ತಯಾರಾಗುತ್ತಿದೆ. ಸ್ಪೋರ್ಟ್ಸ್ ಡ್ರಾಮಾ ಚಿತ್ರ ಇದಾಗಿದ್ದು, ಪ್ಯಾನ್-ಇಂಡಿಯಾ ಚಲನಚಿತ್ರವಾಗಲಿದೆ ಎಂದು ವರದಿಯಾಗಿದೆ. RC16 ತಂಡ ತೆಲುಗು ಚಿತ್ರರಂಗಕ್ಕೆ ಕರುನಾಡ ಚಕ್ರವರ್ತಿ ಶಿವ ರಾಜ್‌ಕುಮಾರ್ ಅವರನ್ನು ಸ್ವಾಗತಿಸಿದೆ.

ಕನ್ನಡದ ಸೂಪರ್‌ಸ್ಟಾರ್ ಹೀರೊ ಶಿವಣ್ಣ ಚಿತ್ರದಲ್ಲಿ ಅತ್ಯಂತ ಪ್ರಭಾವಶಾಲಿ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಶಿವ ರಾಜ್‌ಕುಮಾರ್ ಅವರ ಹುಟ್ಟುಹಬ್ಬದ ಇಂದಿನ ವಿಶೇಷ ಸಂದರ್ಭದಲ್ಲಿ ಫಸ್ಟ್‌ ಲುಕ್‌ ಔಟ್‌ ಆಗಿದೆ. ಈ ಸುದ್ದಿಯಿಂದ ಅಭಿಮಾನಿಗಳು ಸಂತಸಗೊಂಡಿದ್ದಾರೆ. ಇಬ್ಬರು ಸೂಪರ್‌ಸ್ಟಾರ್‌ಗಳನ್ನು ಒಟ್ಟಿಗೆ ತೆರೆಯ ಮೇಲೆ ವೀಕ್ಷಿಸಲು ಕುತೂಹಲದಿಂದ ಕಾಯುತ್ತಿದ್ದಾರೆ. ಆರ್ ರತ್ನವೇಲು ಛಾಯಾಗ್ರಹಣ ಮಾಡಲಿದ್ದು, ಅವಿನಾಶ್ ಕೊಲ್ಲ ನಿರ್ಮಾಣ ವಿನ್ಯಾಸ ಮಾಡಿದ್ದಾರೆ. ಚಿತ್ರದ ಇತರ ಪಾತ್ರವರ್ಗ ಮತ್ತು ಸಿಬ್ಬಂದಿಯನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಇದನ್ನೂ ಓದಿ: Shiva Rajkumar: ಶಿವಣ್ಣ ಬರ್ತ್‌ಡೇ ; ʻಭೈರತಿ ರಣಗಲ್ʼ ಟೀಸರ್‌ನಲ್ಲಿ ಮಾಸ್ ಡೈಲಾಗ್ ಮೂಲಕ ಅಬ್ಬರಿಸಿದ ಕರುನಾಡ ಕಿಂಗ್!

ಈಗಾಗಲೇ ನಿರ್ದೇಶಕ ಶಂಕರ್ RC 15 ಚಿತ್ರದ ಟೈಟಲ್‌ ಮತ್ತು ಫಸ್ಟ್‌ ಲುಕ್‌ ಹಂಚಿಕೊಂಡಿದ್ದಾರೆ. ಚಿತ್ರಕ್ಕೆ ಗೇಮ್ ಚೇಂಜರ್ ಎಂದು ಹೆಸರಿಡಲಾಗಿದ್ದು, ಫಸ್ಟ್ ಲುಕ್ ನಲ್ಲಿ ನಟ ಸ್ಟೈಲಿಶ್ ಮತ್ತು ರಗಡ್ ಆಗಿ ಕಾಣಿಸಿಕೊಂಡಿದ್ದಾರೆ.

ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ದಿಲ್ ರಾಜು ಮತ್ತು ಸಿರಿಶ್ ಅವರು ನಿರ್ಮಿಸಿರುವ ಈ ಚಿತ್ರದಲ್ಲಿ ನಟ ಎಸ್ ಜೆ ಸೂರ್ಯ ಕೂಡ ಮಹತ್ವದ ಪಾತ್ರವನ್ನು ನಿರ್ವಹಿಸಲಿದ್ದಾರೆ.

Continue Reading
Advertisement
NMMS scholarship
ಕರ್ನಾಟಕ19 mins ago

NMMS Scholarship: ಎನ್‌ಎಂಎಂಎಸ್‌ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ; ಕೊನೆಯ ದಿನಾಂಕ ಯಾವಾಗ, ಅರ್ಜಿ ಸಲ್ಲಿಕೆ ಹೇಗೆ?

The Olympic Games
ಕ್ರೀಡೆ21 mins ago

The Olympic Games: 72ರ ಇಳಿ ವಯಸ್ಸಿನಲ್ಲೂ ಒಲಿಂಪಿಕ್ಸ್​ ಪದಕ ಗೆದ್ದಿದ್ದ ಶೂಟರ್‌; ಯಾರಿವರು?

jobs for kannadigas cm siddaramaiah
ಪ್ರಮುಖ ಸುದ್ದಿ26 mins ago

CM Siddaramaiah: ಖಾಸಗಿ ಕೈಗಾರಿಕೆಗಳ ಶೇ.100 ಉದ್ಯೋಗ ಕನ್ನಡಿಗರಿಗೆ: ಸಿದ್ದರಾಮಯ್ಯ ಕ್ಯಾಬಿನೆಟ್‌ ನಿರ್ಣಯ

Valmiki Corporation Scam
ಕರ್ನಾಟಕ30 mins ago

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಮಾಜಿ ಸಚಿವ ನಾಗೇಂದ್ರ ಪತ್ನಿಯನ್ನು ವಶಕ್ಕೆ ಪಡೆದ ಇಡಿ

Niveditha Gowda new reels with brother
ಸ್ಯಾಂಡಲ್ ವುಡ್55 mins ago

Niveditha Gowda: ನಾನೇನು ಬಾತ್‌ರೂಮ್‌ ಸಿಂಗರ್‌ ಅಲ್ಲ! ಚಂದನ್‌ ಶೆಟ್ಟಿಗೆ ಟಾಂಗ್‌ ಕೊಟ್ರಾ ನಿವೇದಿತಾ ಗೌಡ?

Gold Rate Today
ಚಿನ್ನದ ದರ56 mins ago

Gold Rate Today: ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ; ಇಂದಿನ ದರ ಇಷ್ಟಿದೆ

IND vs SL
ಕ್ರೀಡೆ1 hour ago

IND vs SL: ಲಂಕಾ ವಿರುದ್ಧದ ಏಕದಿನ ಸರಣಿಗೆ ಶ್ರೇಯಸ್ ಅಯ್ಯರ್ ಆಯ್ಕೆ ಸಾಧ್ಯತೆ

gt world mall 2
ಪ್ರಮುಖ ಸುದ್ದಿ1 hour ago

GT World Mall: ಅನ್ನದಾತನಿಗೆ ಅವಮಾನ ಮಾಡಿದ ಜಿಟಿ ಮಾಲ್‌ ಮುಂದೆ ಪಂಚೆ ಉಟ್ಟು ಪ್ರತಿಭಟನೆ, ಕ್ಷಮೆ ಕೇಳಿದ ಮಾಲೀಕ

Made In India
ದೇಶ1 hour ago

Made In India: ಜಾಗತಿಕವಾಗಿ ಪ್ರಭಾವ ಬೀರಿದ ʼಮೇಡ್‌ ಇನ್‌ ಇಂಡಿಯಾʼ ಉತ್ಪನ್ನಗಳು; ಪ್ರಧಾನಿ ಮೋದಿ ಮೆಚ್ಚುಗೆ

Mahanati Show Darshan wished Priyanka the contestant
ಕಿರುತೆರೆ2 hours ago

Mahanati Show: ಈ` ಮಹಾನಟಿ’ ಸ್ಪರ್ಧಿಗೆ ಶುಭ ಹಾರೈಸಿದ್ರಂತೆ ದರ್ಶನ್‌; ಅವರ ತಂದೆ ಕೂಡ ದಚ್ಚುಗೆ ಕ್ಲೋಸ್‌ ಫ್ರೆಂಡ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ3 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ4 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌