Mahanati Show: ಈ` ಮಹಾನಟಿ' ಸ್ಪರ್ಧಿಗೆ ಶುಭ ಹಾರೈಸಿದ್ರಂತೆ ದರ್ಶನ್‌; ಅವರ ತಂದೆ ಕೂಡ ದಚ್ಚುಗೆ ಕ್ಲೋಸ್‌ ಫ್ರೆಂಡ್‌! - Vistara News

ಕಿರುತೆರೆ

Mahanati Show: ಈ` ಮಹಾನಟಿ’ ಸ್ಪರ್ಧಿಗೆ ಶುಭ ಹಾರೈಸಿದ್ರಂತೆ ದರ್ಶನ್‌; ಅವರ ತಂದೆ ಕೂಡ ದಚ್ಚುಗೆ ಕ್ಲೋಸ್‌ ಫ್ರೆಂಡ್‌!

Mahanati Show: ಅಷ್ಟಕ್ಕೂ ಸ್ಪರ್ಧಿ‌ ಹಲವಾರು ರೌಂಡ್ಸ್​ಗಳಲ್ಲಿ ಉತ್ತಮ ರೀತಿಯಲ್ಲಿಯೇ ಅಭಿನಯದ ಮೂಲಕ ತೀರ್ಪುಗಾರರ ಗಮನ ಸೆಳೆದಿದ್ದರು. ತನ್ನ ಕನಸುಗಳನ್ನು ಮನಸ್ಸಿನಲ್ಲಿಯೇ ಇಟ್ಟುಕೊಂಡು ಮನೆಯವರ ಬಲವಂತಕ್ಕೆ ಮದುವೆಯಾದ ಯುವತಿಯ ಕಥೆ ಸಾರುವ ‘ಅನುರಾಗ’ ಎನ್ನುವ ಶಾರ್ಟ್ ಫಿಲಂನಲ್ಲಿ ನಟಿಸಿ ಎಲ್ಲರ ಹೃದಯ ಗೆದ್ದಿದ್ದರು.

VISTARANEWS.COM


on

Mahanati Show Darshan wished Priyanka the contestant
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ‘ಮಹಾನಟಿ’ ರಿಯಾಲಿಟಿ ಶೋ (Mahanati Show) ಗ್ರ್ಯಾಂಡ್ ಫಿನಾಲೆಯ ದಿನ ಐದು ಫೈನಲಿಸ್ಟ್‌ಗಳು (Mahanati Grand Finale) ವೇದಿಕೆಗೆ ತಲುಪಿದ್ದರು‌. ಮೂರುವರೆ ತಿಂಗಳಿಂದ ಎಲ್ಲರನ್ನು ರಂಜಿಸಿದ ಈ ಶೋ ಕೊನೆಗೊಂಡಿತ್ತು. ಅದ್ಧೂರಿ ಗ್ರ್ಯಾಂಡ್‌ ಫಿನಾಲೆಯಲ್ಲಿ ಮೈಸೂರಿನಲ್ಲಿ ಪ್ರಿಯಾಂಕಾ ಮಹಾನಟಿ ಸೀಸನ್‌ 1ರ ವಿಜೇತೆಯಾಗಿ ಹೊರಹೊಮ್ಮಿದ್ದರು. ಇದೀಗ ಎಲ್ಲೋ ಜೋಗಪ್ಪ ನಿನ್​ ಅರಮನೆ…ಹಾಡಿಗೆ ಪ್ರಿಯಾಂಕಾ ರೀಲ್ಸ್​ ಮಾಡಿದ್ದು, ಅದನ್ನು ಜೀ ಕನ್ನಡ ವಾಹಿನಿ ಶೇರ್​ ಮಾಡಿಕೊಂಡಿದೆ. ಅಂದಹಾಗೆ, ಪ್ರಿಯಾಂಕಾ ಅವರು ಮೈಸೂರಿನವರು. ಈ ಶೋನಲ್ಲಿ ಇವರು ಜೈಲಿನಲ್ಲಿರುವ ದರ್ಶನ್​ ಕುರಿತು ಹೇಳಿಕೊಂಡಿದ್ದರು.

ʻʻತಮ್ಮ ತಂದೆ ಹಾಗೂ ದರ್ಶನ್ ಕ್ಲೋಸ್​ ಫ್ರೆಂಡ್ಸ್​. ನಾನು ಈ ಶೋಗೆ ಆಯ್ಕೆ ಆಗಿದ್ದ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದ್ದರು. ಚೆನ್ನಾಗಿ ಹೇಳುವುದನ್ನು ಕೇಳು ಎಂದು ವಿಶ್​ ಮಾಡಿದ್ದರುʼʼ ಎಂಬುದಾಗಿ ಹೇಳಿದ್ದರು. ಮಹಾನಟಿಯಲ್ಲಿ ಸೆಲೆಕ್ಟ್​ ಆದ ಬಳಿಕ ತಾವು ದರ್ಶನ್ ಅವರನ್ನ ಖುದ್ದು ಭೇಟಿಯಾಗಿ ಆಶೀರ್ವಾದ ಪಡೆದಿರುವುದಾಗಿಯೂ ಹೇಳಿಕೊಂಡಿದ್ದರು.

ಅಷ್ಟಕ್ಕೂ ಪ್ರಿಯಾಂಕಾ ಅವರು ಹಲವಾರು ರೌಂಡ್ಸ್​ಗಳಲ್ಲಿ ಉತ್ತಮ ರೀತಿಯಲ್ಲಿಯೇ ಅಭಿನಯದ ಮೂಲಕ ತೀರ್ಪುಗಾರರ ಗಮನ ಸೆಳೆದಿದ್ದರು. ತನ್ನ ಕನಸುಗಳನ್ನು ಮನಸ್ಸಿನಲ್ಲಿಯೇ ಇಟ್ಟುಕೊಂಡು ಮನೆಯವರ ಬಲವಂತಕ್ಕೆ ಮದುವೆಯಾದ ಯುವತಿಯ ಕಥೆ ಸಾರುವ ‘ಅನುರಾಗ’ ಎನ್ನುವ ಶಾರ್ಟ್ ಫಿಲಂನಲ್ಲಿ ನಟಿಸಿ ಎಲ್ಲರ ಹೃದಯ ಗೆದ್ದಿದ್ದರು.

ಇದನ್ನೂ ಓದಿ: Mahanati Show: ಫಿನಾಲೆಗೆ ಆಯ್ಕೆಯಾಗಿಲ್ಲ ದಾವಣಗೆರೆ ಟೀಚರ್; ಕೋಪಗೊಂಡ ನೆಟ್ಟಿಗರು!

.ಪ್ರಿಯಾಂಕಗೆ ಸಿಕ್ಕಿದ್ದು 15 ಲಕ್ಷದ ಪ್ಯೂರ್ ಚಿನ್ನದ ಕಿರೀಟ. ತಮ್ಮ ಅಭಿನಯದಿಂದ ಧನ್ಯಶ್ರೀ ಗಮನ ಸೆಳೆದರೆ ಅವರ ತಂದೆ ಹಾಸ್ಯದಿಂದ ಗಮನ ಸೆಳೆದರು. ಇದೀಗ ಎರಡನೇ ರನ್ನರ್ ಅಪ್ ಆಗಿ ಹತ್ತು ಲಕ್ಷ ಬಹುಮಾನವನ್ನು ಧನ್ಯಶ್ರೀ ಪಡೆದಿದ್ದಾರೆ.  ಮೂರನೇ ಸ್ಥಾನ ಪಡೆದ ಚಿತ್ರದುರ್ಗದ ಗಗನ, ನಾಲ್ಕನೇ ಸ್ಥಾನ ಪಡೆದ ಆರಾಧನಾ ಭಟ್‌, ಐದನೇ ಸ್ಥಾನ ಶ್ವೇತಾ ಭಟ್‌ಗೆ ತಲಾ ಒಂದು ಲಕ್ಷ ಬಹುಮಾನ ನೀಡಲಾಯಿತು. ಮೂರನೇ ಸ್ಥಾನ ಪಡೆದ ಚಿತ್ರದುರ್ಗದ ಗಗನ, ನಾಲ್ಕನೇ ಸ್ಥಾನ ಪಡೆದ ಆರಾಧನಾ ಭಟ್‌, ಐದನೇ ಸ್ಥಾನ ಶ್ವೇತಾ ಭಟ್‌ಗೆ ತಲಾ ಒಂದು ಲಕ್ಷ ಬಹುಮಾನ ನೀಡಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Neenade Naa Serial: ರಿಯಲ್‌ ಲೈಫಲ್ಲೂ ಒಂದಾಗ್ತಿದ್ದಾರಾ ವಿಕ್ರಂ-ವೇದಾ? ಮದುವೆ ಯಾವಾಗ?

Neenade Naa Serial: ಅಭಿಮಾನಿಗಳು ಕೂಡ ಇಬ್ಬರ ಹೆಸರಿನಲ್ಲಿ ಸೋಶಿಯಲ್ ಮೀಡಿಯಾ ಪೇಜ್‌ಗಳನ್ನು ಕ್ರಿಯೇಟ್ ಮಾಡಿದ್ದಾರೆ. ಇದೀಗ  “ನೀನಾದೆ ನಾ” (Neenade Naa Serial) ಧಾರಾವಾಹಿ ನಟ ನಟಿ ವಿಕ್ರಂ-ವೇದಾ ಇಬ್ಬರ ನಡುವೆ ಲವ್ವಾಗಿದೆ, ಮುಂದೆ ಇಬ್ಬರೂ ಮುದುವೆಯಾಗಲಿದ್ದಾರೆ ಎನ್ನುವ ಊಹಾಪೋಹ ಶುರುವಾಗಿದೆ.

VISTARANEWS.COM


on

Neenade Naa Serial Dileep R Shetty khushi will be marry in real life
Koo

ಬೆಂಗಳೂರು: ಕೆಲ ಸಿನಿಮಾ ನಟನ ನಟಿಯರು ತೆರೆ ಮೇಲೆ ಒಂದಾಗಿರುವುದಲ್ಲದೇ ರಿಯಲ್‌ ಲೈಫ್‌ನಲ್ಲಿಯೂ ಒಂದಾಗಿರುವ ಅದೆಷ್ಟೋ ಉದಾಹರಣೆಗಳಿವೆ. ಜತೆಗೆ ವೀಕ್ಷಕರಿಗೂ ನಟ ನಟಿಯ ಜೋಡಿ ಇಷ್ಟವಾದರೆ ರಿಯಲ್‌ ಲೈಫ್‌ನಲ್ಲಿಯೂ ಒಂದಾಗಿ ಎಂದು ಆಶಿಸುತ್ತಾರೆ. ಇದೀಗ  “ನೀನಾದೆ ನಾ” (Neenade Naa Serial) ಧಾರಾವಾಹಿ ನಟ ನಟಿ ವಿಕ್ರಂ-ವೇದಾ ಇಬ್ಬರ ನಡುವೆ ಲವ್ವಾಗಿದೆ, ಮುಂದೆ ಇಬ್ಬರೂ ಮುದುವೆಯಾಗಲಿದ್ದಾರೆ ಎನ್ನುವ ಊಹಾಪೋಹ ಶುರುವಾಗಿದೆ.

ಈ ಜೋಡಿಯ ಮತ್ತೊಂದು ಸ್ಪೆಷಾಲಿಟಿ ಅಂದರೆ ಇದರಲ್ಲಿ ವಿಕ್ರಂ ಪಾತ್ರ ಮಾಡೋ ದಿಲೀಪ್ ಆರಡಿ ಕಟೌಟ್‌ . ಆದರೆ ವೇದಾ ಮಾತ್ರ ಕುಳ್ಳಿ. ವೇದಾ ಪಾತ್ರಧಾರಿ ಖುಷಿ, ವಿಕ್ರಂ ಪಾತ್ರ ಮಾಡುತ್ತಿರುವುದು ದಿಲೀಪ್‌. ಇದೀಗ ಇವರಿಬ್ಬರ ನಟನೆಗೆ ಹಾಗೇ ಜೋಡಿಗೆ ಫ್ಯಾನ್ಸ್‌ ಫಿದಾ ಆಗಿದ್ದಾರೆ. ಕೆಲ ದಿನಗಳ ಹಿಂದೆ ತೆಲುಗು ಕಾರ್ಯಕ್ರಮಕ್ಕೆ ದಿಲೀಪ್ ಅವರ ವಿಶೇಷ ಸ್ನೇಹಿತೆ ಎಂದು ಸಪ್ರೈಸ್‌ ಆಗಿ ಖುಷಿ ಅವರನ್ನು ಆಹ್ವಾನಿಸಲಾಗಿತ್ತು. ಇಬ್ಬರ ಪ್ರೀತಿಗೆ ಬಿದ್ದಿದ್ದಾರೆ ಎನ್ನುವ ಚರ್ಚೆ ಕೂಡ ಶುರುವಾಗಿತ್ತು.

ಅಭಿಮಾನಿಗಳು ಕೂಡ ಇಬ್ಬರ ಹೆಸರಿನಲ್ಲಿ ಸೋಶಿಯಲ್ ಮೀಡಿಯಾ ಪೇಜ್‌ಗಳನ್ನು ಕ್ರಿಯೇಟ್ ಮಾಡಿದ್ದಾರೆ. ನೀವಿಬ್ಬರು ನಿಜಜೀವನದಲ್ಲಿ ಒಂದಾದರೆ ಚೆನ್ನಾಗಿರುತ್ತದೆ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ.ಸ್ವತಃ ದಿಲೀಪ್ ಶೆಟ್ಟಿ ಈ ಚರ್ಚೆ ಬಗ್ಗೆ ಮಾತನಾಡಿದ್ದಾರೆ. ಯಾಕೆ ರಿಯಲ್‌ ಲೈಫ್‌ನಲ್ಲೂ ಜೋಡಿ ಆಗಬಾರದು? ಎನ್ನುವ ಪ್ರಶ್ನೆಗೆ “ಅದೆಲ್ಲಾ ವಿಧಿ. ಡೆಸ್ಟಿನಿಯಲ್ಲಿ ಏನು ಬರೆದಿರುತ್ತಾರೆ? ಅದೇ ಆಗುವುದು. ನೋಡೋಣ, ಡೆಸ್ಟಿನಿ ಏನು ಹೇಳುತ್ತದೆ” ಎಂದು ಹೇಳಿ ದಿಲೀಪ್‌ ನಕ್ಕಿದ್ದಾರೆ.

ಇದನ್ನೂ ಓದಿ: Neenade Naa Serial: ಅಪರಿಚಿತ ಹೃದಯಗಳ ಅನಿರೀಕ್ಷಿತ ಪ್ರೇಮಯಾನ ಹೊಚ್ಚ ಹೊಸ ಧಾರಾವಾಹಿ ‘ನೀನಾದೆ ನಾ’

 ‘ನೀನಾದೆ ನಾ’ ಧಾರಾವಾಹಿ

ವಿದ್ಯಾಭ್ಯಾಸ ಮುಗಿಸಿದರು ಕೂಡ ಸಂಸ್ಕಾರ-ಸಂಸ್ಕೃತಿ, ಆಚಾರ-ವಿಚಾರಗಳನ್ನು ಪರಿಪಾಲಿಸುವಲ್ಲಿ ಸದಾ ಮುಂದೆ ಈ ಕಥಾ ನಾಯಕಿ ‘ವೇದಾ’. ಅಜ್ಜಿಯ ಪ್ರೀತಿಯ ಮೊಮ್ಮಗಳು ‘ವೇದಾ’ ನೇರ ನಡೆಯನ್ನು ಹೊಂದಿರುತ್ತಾಳೆ. ಈಕೆಗೆ ಮನೆಯವರ ಸಮ್ಮುಖದಲ್ಲಿ, ಹುಟ್ಟಿ ಬೆಳೆದ ಊರಲ್ಲಿ, ಮನೆಯವರು ನೋಡಿದ ಹುಡುಗನೊಂದಿಗೆ ಮದುವೆಯಾಗಬೇಕು ಎಂಬ ಆಸೆ ಇರುತ್ತದೆ. ಆದರೆ ಮುಂದೆ ನಡೆಯುವುದು ಮಾತ್ರ ವಿಧಿಲಿಖಿತ.

ಕಥಾ ನಾಯಕ ವಿಕ್ರಮ್. ಗೂಂಡಾಗಿರಿ ಮಾಡಿಕೊಂಡು, ತನ್ನ ಬಾಸ್ ಹೇಳಿದನ್ನು ಚಾಚು ತಪ್ಪದೆ ಮಾರುವ ಈತನಿಗೆ , ಆಚಾರ-ವಿಚಾರ ಸಂಸ್ಕಾರವಂತೂ ಇಲ್ಲವೇ ಇಲ್ಲ. ಪದವಿ ಪಡೆದಿದ್ದರೂ ಕೂಡ ಈತ ಹೀಗಿರುವುದರಿಂದ ಅಪ್ಪನಿಗೂ ಇವನ ಮೇಲೆ ಸಿಕ್ಕಾಪಟ್ಟೆ ಕೋಪವಿರುತ್ತದೆ. ಅಚಾನಕ್ ಆಗಿ ಒಂದು ದಿನ ದೇವರ ಸನ್ನಿಧಾನದಲ್ಲಿ ವಿಧಿಯಾಟದಂತೆ ವಿಕ್ರಮ್- ವೇದಾಳಿಗೆ ತಾಳಿ ಕಟ್ಟುತ್ತಾನೆ.

ನೀನಾದೆ ನಾ’ ಧಾರಾವಾಹಿಯು ಅದ್ಭುತ ತಾರಾಬಳಗವನ್ನು ಹೊಂದಿದ್ದು, ನಾಯಕನ ಪಾತ್ರದಲ್ಲಿ ದಿಲೀಪ್ ಶೆಟ್ಟಿ, ನಾಯಕಿಯಾಗಿ ಖುಷಿ ಅಭಿನಯಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಸ್ಟಾರ್ ಸುವರ್ಣ ವಾಹಿನಿಗೆ ಖ್ಯಾತ ನಟ ರಮೇಶ್ ಅರವಿಂರ್‌ ಅವರು ‘ವಂದನ ಮೀಡಿಯಾ’ ಸಂಸ್ಥೆಯಡಿ ಈ ಧಾರಾವಾಹಿಯನ್ನು ನಿರ್ಮಿಸುತ್ತಿದ್ದಾರೆ.

Continue Reading

ಕಿರುತೆರೆ

Mahanati Grand Finale: ʻಮಹಾನಟಿʼ ಚಿನ್ನದ ಕಿರೀಟ ಮುಡಿಗೇರಿಸಿಕೊಂಡ ಪ್ರಿಯಾಂಕಾ; ಧನ್ಯಶ್ರೀಗೆ ಎರಡನೇ ಸ್ಥಾನ, ಬಹುಮಾನ ಏನು?

Mahanati Grand Finale: ಐದು ಕಂಟೆಸ್ಟೆಂಟ್‌ಗಳು ಕಿರು ಚಿತ್ರ ಮಾಡಿದ್ದರು. ಅದರಲ್ಲಿ ಪ್ರಿಯಾಂಕ, ಅನುರಾಗ ಎಂಬ ಶಾರ್ಟ್ ಫಿಲ್ಮ್‌ನಲ್ಲಿ ಅದ್ಬುತವಾಗಿ ನಟಿಸಿದ್ದರು.ಐವರಲ್ಲಿ ವೇದಿಕೆ ಮೇಲೆ ಉಳಿದಿದ್ದೇ ಇಬ್ಬರು.ಪ್ರಿಯಾಂಕಗೆ ಸಿಕ್ಕಿದ್ದು 15 ಲಕ್ಷದ ಪ್ಯೂರ್ ಚಿನ್ನದ ಕಿರೀಟ. ತಮ್ಮ ಅಭಿನಯದಿಂದ ಧನ್ಯಶ್ರೀ ಗಮನ ಸೆಳೆದರೆ ಅವರ ತಂದೆ ಹಾಸ್ಯದಿಂದ ಗಮನ ಸೆಳೆದರು.

VISTARANEWS.COM


on

Mahanati Grand Finale priyanka from mysore is the winner season 1 dhanyashree runner up
Koo

ಬೆಂಗಳೂರು: : ಜೀ ಕನ್ನಡ ವಾಹಿನಿಯಲ್ಲಿ ‘ಮಹಾನಟಿ’ ರಿಯಾಲಿಟಿ ಶೋ (Mahanati Show) ಗ್ರ್ಯಾಂಡ್ ಫಿನಾಲೆಯ ದಿನ ಐದು ಫೈನಲಿಸ್ಟ್‌ಗಳು (Mahanati Grand Finale) ವೇದಿಕೆಗೆ ತಲುಪಿದ್ದರು‌. ಇದೀಗ ಮೂರುವರೆ ತಿಂಗಳಿಂದ ಎಲ್ಲರನ್ನು ರಂಜಿಸಿದ ಈ ಶೋ ಕೊನೆಗೊಂಡಿದೆ. ಅದ್ಧೂರಿ ಗ್ರ್ಯಾಂಡ್‌ ಫಿನಾಲೆಯಲ್ಲಿ ಮೈಸೂರಿನಲ್ಲಿ ಪ್ರಿಯಾಂಕಾ ಮಹಾನಟಿ ಸೀಸನ್‌ 1ರ ವಿಜೇತೆಯಾಗಿ ಹೊರಹೊಮ್ಮಿದ್ದಾರೆ. ತರೀಕೆರೆಯ ಧನ್ಯಶ್ರೀ ರನ್ನರ್‌ ಅಪ್‌ ಆಗಿದ್ದಾರೆ. ಗಗನ, ಪ್ರಿಯಾಂಕಾ, ಶ್ವೇತಾ ಭಟ್, ಆರಾಧನಾ ಭಟ್ ಹಾಗೂ ಧನ್ಯಶ್ರೀ ಫಿನಾಲೆಗೆ ಆಯ್ಕೆಯಾಗಿದ್ದರು.

 ಈ ಮಹಾನಟಿ ಶೋನಲ್ಲಿ ರಮೇಶ್‌ ಅರವಿಂದ್‌ ಅವರು ಒಂದೊಂದು ಟಾಪಿಕ್‌ ಕೊಡುತ್ತಾರೆ. ಅದರ ಬಗ್ಗೆ ಸ್ಪರ್ಧಿಗಳು ನಟಿಸಬೇಕು. ಮಹಾನಟಿಯರು ತಕ್ಷಣೆಕ್ಕೆ ಡೈಲಾಗ್‌ ರೆಡಿ ಮಾಡಿಕೊಂಡು ನಟಿಸುತ್ತಾರೆ. ಕೊನೆ ಕೊನೆಗೆ ಕಿರು ಚಿತ್ರ ಕೂಡ ಮೂಡಿ ಬಂದಿತ್ತು. ಈ ಶೋ ರಂಜಿಸುವುದಲ್ಲದೇ ವಿವಾದಕ್ಕೂ ಕಾರಣವಾಗಿತ್ತು.

ಐದು ಕಂಟೆಸ್ಟೆಂಟ್‌ಗಳು ಕಿರು ಚಿತ್ರ ಮಾಡಿದ್ದರು. ಅದರಲ್ಲಿ ಪ್ರಿಯಾಂಕ, ಅನುರಾಗ ಎಂಬ ಶಾರ್ಟ್ ಫಿಲ್ಮ್‌ನಲ್ಲಿ ಅದ್ಬುತವಾಗಿ ನಟಿಸಿದ್ದರು.ಐವರಲ್ಲಿ ವೇದಿಕೆ ಮೇಲೆ ಉಳಿದಿದ್ದೇ ಇಬ್ಬರು.ಪ್ರಿಯಾಂಕಗೆ ಸಿಕ್ಕಿದ್ದು 15 ಲಕ್ಷದ ಪ್ಯೂರ್ ಚಿನ್ನದ ಕಿರೀಟ. ತಮ್ಮ ಅಭಿನಯದಿಂದ ಧನ್ಯಶ್ರೀ ಗಮನ ಸೆಳೆದರೆ ಅವರ ತಂದೆ ಹಾಸ್ಯದಿಂದ ಗಮನ ಸೆಳೆದರು. ಇದೀಗ ಎರಡನೇ ರನ್ನರ್ ಅಪ್ ಆಗಿ ಹತ್ತು ಲಕ್ಷ ಬಹುಮಾನವನ್ನು ಧನ್ಯಶ್ರೀ ಪಡೆದಿದ್ದಾರೆ.  ಮೂರನೇ ಸ್ಥಾನ ಪಡೆದ ಚಿತ್ರದುರ್ಗದ ಗಗನ, ನಾಲ್ಕನೇ ಸ್ಥಾನ ಪಡೆದ ಆರಾಧನಾ ಭಟ್‌, ಐದನೇ ಸ್ಥಾನ ಶ್ವೇತಾ ಭಟ್‌ಗೆ ತಲಾ ಒಂದು ಲಕ್ಷ ಬಹುಮಾನ ನೀಡಲಾಯಿತು.

ಇದನ್ನೂ ಓದಿ: Mahanati Show: ಫಿನಾಲೆಗೆ ಆಯ್ಕೆಯಾಗಿಲ್ಲ ದಾವಣಗೆರೆ ಟೀಚರ್; ಕೋಪಗೊಂಡ ನೆಟ್ಟಿಗರು!

ಮೂರನೇ ಸ್ಥಾನ ಪಡೆದ ಚಿತ್ರದುರ್ಗದ ಗಗನ, ನಾಲ್ಕನೇ ಸ್ಥಾನ ಪಡೆದ ಆರಾಧನಾ ಭಟ್‌, ಐದನೇ ಸ್ಥಾನ ಶ್ವೇತಾ ಭಟ್‌ಗೆ ತಲಾ ಒಂದು ಲಕ್ಷ ಬಹುಮಾನ ನೀಡಲಾಯಿತು.

ಮೆಕ್ಯಾನಿಕಲ್‌ ಲೈಫ್‌ ಬಗ್ಗೆ ಕೆಟ್ಟ ಡೈಲಾಗ್‌ ಹೊಡೆದಿದ್ದ ಗಗನಾ

ಗಗನಾ ಕಳೆದ ಬಾರಿ ಟ್ರೋಲ್‌ಗೆ ಗುರಿಯಾಗಿದ್ದರು. ಮೆಕ್ಯಾನಿಕಲ್‌ ಲೈಫ್‌ ಬಗ್ಗೆ ಕಾನ್ಸೆಪ್ಟ್‌ ಕೊಟ್ಟಿದ್ದರು. ನಿಮ್ಮ ತಂಗಿ ಮೆಕ್ಯಾನಿಕಲ್‌ ಅವರನ್ನು ಮದುವೆ ಆಗಿದ್ದರೆ ಏನು ಮಾಡುತ್ತೀಯಾ? ಎಂದು ಸ್ಕಿಟ್‌ ಮಾಡಬೇಕಿತ್ತು. ಡೈಲಾಗ್‌ ಹೇಳುವ ಭರದಲ್ಲಿ ಮೆಕ್ಯಾನಿಕ್‌ ಮದುವೆಯಾದರೆ ಗ್ರೀಸ್‌ ತಿಂದು ಬದುಕಬೇಕಾಗುತ್ತದೆ ಎಂದಿದ್ದರು. ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು. ರಮೇಶ್‌ ಅರವಿಂದ್‌, ಗಗನಾ ಸೇರಿದಂತೆ ಈ ಬಗ್ಗೆ ದೂರು ದಾಖಲಾಗಿತ್ತು.

ಮಹಾನಟಿ’ ರಿಯಾಲಿಟಿ ಶೋಗೆ ಈ ಬಾರಿ ಮೂರು ಹೊಸ ತೀರ್ಪುಗಾರರು ವೇದಿಕೆಯನ್ನ ಅಲಂಕರಿಸಿದ್ದರು. ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ, ನಟ ರಮೇಶ್‌ ಅರವಿಂದ್‌, ಖ್ಯಾತ ನಾಯಕ ನಟಿ ಪ್ರೇಮಾ, ‘ಕಾಟೇರ’ದಂತಹ ಯಶಸ್ವಿ ಚಿತ್ರಕೊಟ್ಟ ನಿರ್ದೇಶಕ ತರುಣ್‌ ಸುಧೀರ್‌ ಮತ್ತು ಯುವ ನಾಯಕ ನಟಿ ನಿಶ್ವಿಕಾ ನಾಯ್ಡು ಈ ರಿಯಾಲಿಟಿ ಶೋನ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದ್ದರು.

Continue Reading

ಕಿರುತೆರೆ

Ninagagi Kannada Serial: ಕಿರುತೆರೆಗೆ ಎಂಟ್ರಿ ಕೊಟ್ಟ ಮಳೆ ಹುಡುಗಿ ಪೂಜಾ ಗಾಂಧಿ!

Ninagagi Kannada Serial: ಸಿನಿಮಾ ನಟಿಯ ಕಥೆ ಹೊಂದಿರುವ ‘ನಿನಗಾಗಿ’ ಸೀರಿಯಲ್‌ನಲ್ಲಿ ಸೂಪರ್ ಸ್ಟಾರ್ ರಚನಾ ಎಂಬ ಪಾತ್ರದಲ್ಲಿ ‘ಬಿಗ್ ಬಾಸ್’ ಖ್ಯಾತಿಯ ದಿವ್ಯಾ ಉರುಡುಗ (Divya Uruduga) ನಟಿಸುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ಕಿಶನ್‌ ಬಿಳಗಲಿ ಕೂಡ ನಟಿಸುತ್ತಿದ್ದಾರೆ. ನಿನಗಾಗಿ’ ಧಾರಾವಾಹಿಯಲ್ಲಿ ಕಥಾನಾಯಕನಾಗಿ ರಿತ್ವಿಕ್ ಮಠದ್ ಅಭಿನಯಿಸುತ್ತಿದ್ದಾರೆ. ತಾರಾಗಣದಲ್ಲಿ ಪ್ರಿಯಾಂಕ ಕಾಮತ್, ಕಿಶನ್ ಬೆಳಗಲಿ, ವಿಜಯ್ ಕೌಂಡಿನ್ಯ, ಸಿರಿ ಸಿಂಚನ ಮುಂತಾದವರಿದ್ದಾರೆ.

VISTARANEWS.COM


on

Ninagagi Kannada Serial entry by Pooja Gandhi
Koo

ಬೆಂಗಳೂರು:  ಬೇರೆ ಬೇರೆ ವ್ಯಕ್ತಿತ್ವದ ಇಬ್ಬರು ವ್ಯಕ್ತಿಗಳು ಒಟ್ಟಿಗೆ ಸಾಗುವ ಮನ ಮಿಡಿಯ ಧಾರಾವಾಹಿ ʻನಿನನಾಗಿʼ ಕಲರ್ಸ್‌ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ. ʻನಿನಗಾಗಿ’ ಧಾರಾವಾಹಿಯಲ್ಲಿ ಕಥಾನಾಯಕನಾಗಿ ರಿತ್ವಿಕ್ ಮಠದ್ ಅಭಿನಯಿಸುತ್ತಿದ್ದಾರೆ. ಇದೀಗ ಮುಂಗಾರು ಮಳೆ’ (Mungaru Male) ನಟಿ ಪೂಜಾ ಗಾಂಧಿ (Pooja Gandhi) ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ‘ನಿನಗಾಗಿ’ ಎನ್ನುತ್ತಾ ಪೂಜಾ ಗಾಂಧಿ (Ninagagi Kannada Serial) ಟಿವಿ ಪರದೆಗೆ ಎಂಟ್ರಿ ಕೊಟ್ಟಿದ್ದಾರೆ.

ಸಿನಿಮಾ ನಟಿಯ ಕಥೆ ಹೊಂದಿರುವ ‘ನಿನಗಾಗಿ’ ಸೀರಿಯಲ್‌ನಲ್ಲಿ ಸೂಪರ್ ಸ್ಟಾರ್ ರಚನಾ ಎಂಬ ಪಾತ್ರದಲ್ಲಿ ‘ಬಿಗ್ ಬಾಸ್’ ಖ್ಯಾತಿಯ ದಿವ್ಯಾ ಉರುಡುಗ (Divya Uruduga) ನಟಿಸುತ್ತಿದ್ದಾರೆ. ಸಾಕಷ್ಟು ತಿರುವು ಪಡೆದು ಮುನ್ನುಗ್ಗುತ್ತಿರುವ ಈ ಸೀರಿಯಲ್‌ಗೆ ಪೂಜಾ ಗಾಂಧಿ ವಿಶೇಷ ಪಾತ್ರವೊಂದಕ್ಕೆ ಜೀವ ತುಂಬಿದ್ದಾರೆ.

ಪೂಜಾ ಗಾಂಧಿ ಜೊತೆಗಿನ ಸುಂದರ ಫೋಟೋಗಳನ್ನು ದಿವ್ಯಾ ಉರುಡುಗ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ಮುದ್ದು ಕನ್ನಡತಿ’ ಎಂದು ದಿವ್ಯಾ ಕ್ಯಾಪ್ಷನ್ ನೀಡಿದ್ದಾರೆ. ಈ ಸೀರಿಯಲ್‌ನಲ್ಲಿ ನಟಿಸುತ್ತಿರುವ ಸಹಕಲಾವಿದರು ಕೂಡ ಫೋಟೋಗೆ ಪೋಸ್‌ ಕೊಟ್ಟಿದ್ದಾರೆ.

ದಿವ್ಯಾ ಉರುಡುಗ ಇದೀಗ ಮತ್ತೆ ಕಿರುತೆರೆಗೆ ಕಮ್ ಬ್ಯಾಕ್ ಮಾಡಿದ್ದಾರೆ.‌ ರಚನಾ ಪಾತ್ರದಲ್ಲಿ ದಿವ್ಯಾ ನಟಿಸುತ್ತಿದ್ದಾರೆ. ‘ನಿನಗಾಗಿ’ ಧಾರಾವಾಹಿಯ ಕಥೆ ಸೂಪರ್ ಸ್ಟಾರ್ ರಚನಾ ಸುತ್ತ ಸುತ್ತಲಿದೆ. ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ಆಗಿರುವ ರಚನಾಗೆ ಕೋಟ್ಯಂತರ ಅಭಿಮಾನಿಗಳ ಪ್ರೀತಿ, ಆಶೀರ್ವಾದ ಇದೆ. ಆದರೆ, ಅದ್ಯಾಕೋ ರಚನಾಗೆ ಅಮ್ಮನ ಪ್ರೀತಿ ಇಲ್ಲ. ಸೂಪರ್ ಸ್ಟಾರ್ ಆಗಿದ್ದರೂ, ಅಮ್ಮನ ಪ್ರೀತಿ ಕಾಣದ ನಟಿಯ ಕಥೆ ‘ನಿನಗಾಗಿ’.

ಇದನ್ನೂ ಓದಿ: Ninagagi Kannada Serial: ʻನಿನಗಾಗಿʼ ಸೀರಿಯಲ್‌ನಲ್ಲಿ ದಿವ್ಯಾ ಉರುಡುಗ ಜತೆ ‘ಗಿಣಿರಾಮ’ ಧಾರಾವಾಹಿಯ ನಟ ನಟನೆ

ನಿನಗಾಗಿ’ ಧಾರಾವಾಹಿಯಲ್ಲಿ ಕಥಾನಾಯಕನಾಗಿ ರಿತ್ವಿಕ್ ಮಠದ್ ಅಭಿನಯಿಸುತ್ತಿದ್ದಾರೆ. ತಾರಾಗಣದಲ್ಲಿ ಪ್ರಿಯಾಂಕ ಕಾಮತ್, ಕಿಶನ್ ಬೆಳಗಲಿ, ವಿಜಯ್ ಕೌಂಡಿನ್ಯ, ಸಿರಿ ಸಿಂಚನ ಮುಂತಾದವರಿದ್ದಾರೆ.

ನಮ್ಮನೆ ಯುವರಾಣಿಯನ್ನು ನಿರ್ದೇಶಿಸಿದ್ದ ಸಂಪೃಥ್ವಿ ‘ನಿನಗಾಗಿʼಯ ಸೂತ್ರಧಾರಿ. ಭಾಗ್ಯಲಕ್ಷ್ಮಿ, ನಮ್ಮನೆ ಯುವರಾಣಿ, ಕನ್ನಡತಿಯಂಥ ಸುಪರ್ ಹಿಟ್ ಧಾರಾವಾಹಿಗಳನ್ನು ನಿರ್ಮಿಸಿದ ಜೈ ಮಾತಾ ಕಂಬೈನ್ಸ್ ‘ನಿನಗಾಗಿʼಯ ನಿರ್ಮಾಣದ ಹೊಣೆ ಹೊತ್ತಿದೆ.

Continue Reading

ಕಿರುತೆರೆ

Divyanka Tripathi: ವಿದೇಶದಲ್ಲಿ ದರೋಡೆಗೆ ಒಳಗಾದ ಕಿರುತೆರೆ ದಂಪತಿ; ಕಾರಿನ ಗಾಜುಗಳೆಲ್ಲ ಪೀಸ್‌ ಪೀಸ್‌!

Vivek Dahiya: ತಮ್ಮ ವಿವಾಹ ವಾರ್ಷಿಕೋತ್ಸವಕ್ಕಾಗಿ ವಿದೇಶ ಪ್ರವಾಸದಲ್ಲಿರುವ ದಿವ್ಯಾಂಕಾ ತ್ರಿಪಾಠಿ ಮತ್ತು ವಿವೇಕ್ ದಹಿಯಾ ವಿದೇಶದಲ್ಲಿ ಸಂಕಷ್ಟದಲ್ಲಿದ್ದು, ಪೊಲೀಸರೂ ಈ ವಿಚಾರದಲ್ಲಿ ಅಸಹಾಯಕತೆ ತೋರಿದ್ದಾರೆ ಎಂದು ದಿವ್ಯಾಂಕಾ-ವಿವೇಕ್ ಆರೋಪಿಸಿದ್ದರು. ಇಟಲಿಯಲ್ಲಿ ಪ್ರಯಾಣಿಸುತ್ತಿದ್ದ ವಿವೇಕ್-ದಿವ್ಯಾಂಕಾ ಅವರ ಪಾಸ್‌ಪೋರ್ಟ್, ಕ್ರೆಡಿಟ್ ಕಾರ್ಡ್ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕಳ್ಳರು ಕದ್ದೊಯ್ದಿದ್ದರು.

VISTARANEWS.COM


on

Divyanka Tripathi Vivek Dahiya Share Update On Robbery Incident
Koo

ಬೆಂಗಳೂರು: ದಿವ್ಯಾಂಕಾ ತ್ರಿಪಾಠಿ (Divyanka Tripathi) ಮತ್ತು ವಿವೇಕ್ ದಹಿಯಾ (Vivek Dahiya) ಹಿಂದಿ ಕಿರುತೆರೆಯ ಪ್ರಸಿದ್ಧಿ ಪಡೆದಿರುವ ದಂಪತಿ. ತಮ್ಮ ವಿವಾಹ ವಾರ್ಷಿಕೋತ್ಸವಕ್ಕಾಗಿ ವಿದೇಶ ಪ್ರವಾಸದಲ್ಲಿರುವ ದಿವ್ಯಾಂಕಾ ತ್ರಿಪಾಠಿ ಮತ್ತು ವಿವೇಕ್ ದಹಿಯಾ ಜುಲೈ 11 ರಂದು ಇಟಲಿಯಲ್ಲಿ ಕಳ್ಳರಿಂದ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದರು. ಈ ಬಗ್ಗೆ ಪೋಸ್ಟ್‌ ಕೂಡ ಹಂಚಿಕೊಂಡಿದ್ದರು. ಇದೀಗ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ, ದಿವ್ಯಾಂಕಾ ತನ್ನ ಎಲ್ಲಾ ಅಭಿಮಾನಿಗಳು ಮತ್ತು ಫ್ಯಾನ್ಸ್‌ಗಳಿಗೆ ಇಂಥಹ ಕಠಿಣ ಸಮಯದಲ್ಲಿ ಬೆಂಬಲ ಮತ್ತು ಪ್ರೀತಿಗಾಗಿ ಧನ್ಯವಾದ ಹೇಳಿದ್ದಾರೆ. ಇದೀಗ ಸ್ನೇಹಿತರ ಸಹಾಯದಿಂದ ಸಮಸ್ಯೆಗಳು ಬಗೆ ಹರಿದಿವೆ ಎಂದು ಪೋಸ್ಟ್‌ ಮಾಡಿದ್ದಾರೆ.

ತಮ್ಮ ವಿವಾಹ ವಾರ್ಷಿಕೋತ್ಸವಕ್ಕಾಗಿ ವಿದೇಶ ಪ್ರವಾಸದಲ್ಲಿರುವ ದಿವ್ಯಾಂಕಾ ತ್ರಿಪಾಠಿ ಮತ್ತು ವಿವೇಕ್ ದಹಿಯಾ ವಿದೇಶದಲ್ಲಿ ಸಂಕಷ್ಟದಲ್ಲಿದ್ದು, ಪೊಲೀಸರೂ ಈ ವಿಚಾರದಲ್ಲಿ ಅಸಹಾಯಕತೆ ತೋರಿದ್ದಾರೆ ಎಂದು ದಿವ್ಯಾಂಕಾ-ವಿವೇಕ್ ಆರೋಪಿಸಿದ್ದರು. ಇಟಲಿಯಲ್ಲಿ ಪ್ರಯಾಣಿಸುತ್ತಿದ್ದ ವಿವೇಕ್-ದಿವ್ಯಾಂಕಾ ಅವರ ಪಾಸ್‌ಪೋರ್ಟ್, ಕ್ರೆಡಿಟ್ ಕಾರ್ಡ್ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕಳ್ಳರು ಕದ್ದೊಯ್ದಿದ್ದರು. ದಂಪತಿಯ ಶಾಪ್ ಮಾಡಿದ ವಸ್ತುಗಳು, ವ್ಯಾಲೆಟ್‌ಗಳು, ಪಾಸ್‌ಪೋರ್ಟ್‌ಗಳು ಸೇರಿದಂತೆ ಸುಮಾರು 10 ಲಕ್ಷ ಮೌಲ್ಯದ ಸೊತ್ತುಗಳನ್ನು ಕಳವು ಮಾಡಲಾಗಿತ್ತು. ದಂಪತಿಯ ಸಾಮಾನುಗಳನ್ನು ಇಟ್ಟಿದ್ದ ಕಾರಿನ ಗಾಜು ಒಡೆದ ಕಳ್ಳರು ಎಲ್ಲ ವಸ್ತುಗಳನ್ನು ದೋಚಿ ಪರಾರಿಯಾಗಿದ್ದರು. ಇದೀಗ ನಟಿ ಹಣದ ಸಮಸ್ಯೆ ಬಗೆ ಹರಿದಿದೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Shiva Rajkumar: ಶಿವರಾಜ್‌ಕುಮಾರ್‌ ಅಭಿನಯದ ʻ45ʼ ಸಿನಿಮಾದ ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಮಾಡಿದ ರಿಷಬ್ ಶೆಟ್ಟಿ!

ತನ್ನ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ದಿವ್ಯಾಂಕಾ ಹೀಗೆ ಬರೆದಿದ್ದಾರೆ, “ಪ್ರಿಯರೇ, ನಿಮ್ಮ ಅಪಾರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ತುಂಬಾ ಕಳೆದುಕೊಂಡ ನಂತರ, ಅದೃಷ್ಟವಶಾತ್, ಪ್ರೀತಿ ಕಳೆದುಹೋಗಿಲ್ಲ! ಪ್ರತಿಯೊಬ್ಬರಿಗೂ ವೈಯಕ್ತಿಕವಾಗಿ ಉತ್ತರಿಸಲು ನಮಗೆ ಸಾಧ್ಯವಾಗದ ಕಾರಣ ನಮ್ಮ ಪ್ರೀತಿಪಾತ್ರರಿಗೆ ಮತ್ತು ಸಂಬಂಧಪಟ್ಟ ಜನರಿಗೆ ಅಪ್‌ಡೇಟ್‌ ನೀಡುತ್ತಿದ್ದೇನೆ. ಪ್ರಸ್ತುತ ನಾವು ಸ್ನೇಹಿತನಿಂದ ಸಹಾಯವನ್ನು ಪಡೆದಿರುವುದರಿಂದ ಹಣದ ಸಮಸ್ಯೆ ಬಗೆ ಹರಿಯಿತು. ನಾವು ವರದಿ ಮಾಡಿದಂತೆ ಎಲ್ಲವನ್ನೂ ಕಳೆದುಕೊಂಡಿಲ್ಲ. ಕಾರಿನ ಬೂಟ್‌ನಲ್ಲಿದ್ದ ಕೆಲವು ವಸ್ತುಗಳು ನಮ್ಮ ಬಳಿ ಉಳಿದಿವೆʼʼಎಂದು ಹೇಳಿಕೊಂಡಿದ್ದಾರೆ.

ಜುಲೈ 11 ರಂದು ಇಟಲಿಯ ಫ್ಲಾರೆನ್ಸ್‌ನಲ್ಲಿ ದಿವ್ಯಾಂಕಾ ತ್ರಿಪಾಠಿ ಮತ್ತು ವಿವೇಕ್ ದಹಿಯಾ ಅವರ ಸಾಮಾನುಗಳನ್ನು ಇಟ್ಟಿದ್ದ ಕಾರಿನ ಗಾಜು ಒಡೆದ ಕಳ್ಳರು ಎಲ್ಲ ವಸ್ತುಗಳನ್ನು ದೋಚಿ ಪರಾರಿಯಾಗಿದ್ದರು. ದರೋಡೆಯಲ್ಲಿ ತಮ್ಮ ಪಾಸ್‌ಪೋರ್ಟ್, ನಗದು, ಕಾರ್ಡ್‌ಗಳು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕಳೆದುಕೊಡಿದ್ದರು.

Continue Reading
Advertisement
Ankola landslide Case
ಕರ್ನಾಟಕ12 seconds ago

Ankola landslide Case: ಅಂಕೋಲಾ ಗುಡ್ಡ ಕುಸಿತ ಪ್ರಕರಣ; ಮೃತರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Neenade Naa Serial Dileep R Shetty khushi will be marry in real life
ಕಿರುತೆರೆ5 mins ago

Neenade Naa Serial: ರಿಯಲ್‌ ಲೈಫಲ್ಲೂ ಒಂದಾಗ್ತಿದ್ದಾರಾ ವಿಕ್ರಂ-ವೇದಾ? ಮದುವೆ ಯಾವಾಗ?

cm siddaramaiah
ಪ್ರಮುಖ ಸುದ್ದಿ5 mins ago

CM Siddaramaiah: ಕನ್ನಡಿಗರಿಗೆ ಶೇ.100 ಉದ್ಯೋಗʼ ಟ್ವೀಟ್‌ ಡಿಲೀಟ್‌ ಮಾಡಿದ ಸಿಎಂ ಸಿದ್ದರಾಮಯ್ಯ; ಕಂಪನಿಗಳ ಜೊತೆ ಚರ್ಚೆ ಎಂದ ಎಂಬಿ ಪಾಟೀಲ್;‌ ಏನಿದು ಗೊಂದಲ?

Pooja Khedkar
ದೇಶ19 mins ago

Pooja Khedkar: ಅಂಗವೈಕಲ್ಯ ಪ್ರಮಾಣಪತ್ರಕ್ಕಾಗಿ ನಕಲಿ ವಿಳಾಸ ನೀಡಿದ್ದ ಪೂಜಾ ಖೇಡ್ಕರ್‌; ಮತ್ತೊಂದು ಕಳ್ಳಾಟ ಬಯಲು

Dhammika Niroshana
ಕ್ರೀಡೆ25 mins ago

Dhammika Niroshana: ಶ್ರೀಲಂಕಾದ ಮಾಜಿ ಕ್ರಿಕೆಟಿಗನನ್ನು ಗುಂಡಿಕ್ಕಿ ಕೊಲೆಗೈದ ಅಪರಿಚಿತ ವ್ಯಕ್ತಿ

Urfi Javed Steps Out Drunk For Third Time In A Month
ವೈರಲ್ ನ್ಯೂಸ್1 hour ago

Urfi Javed: ಮತ್ತೆ ಕುಡಿದು ತೇಲಾಡಿದ ಉರ್ಫಿ ಜಾವೇದ್; ವಿಡಿಯೊ ವೈರಲ್‌!

NMMS scholarship
ಕರ್ನಾಟಕ1 hour ago

NMMS Scholarship: ಎನ್‌ಎಂಎಂಎಸ್‌ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ; ಕೊನೆಯ ದಿನಾಂಕ ಯಾವಾಗ, ಅರ್ಜಿ ಸಲ್ಲಿಕೆ ಹೇಗೆ?

The Olympic Games
ಕ್ರೀಡೆ1 hour ago

The Olympic Games: 72ರ ಇಳಿ ವಯಸ್ಸಿನಲ್ಲೂ ಒಲಿಂಪಿಕ್ಸ್​ ಪದಕ ಗೆದ್ದಿದ್ದ ಶೂಟರ್‌; ಯಾರಿವರು?

jobs for kannadigas cm siddaramaiah
ಪ್ರಮುಖ ಸುದ್ದಿ2 hours ago

CM Siddaramaiah: ಖಾಸಗಿ ಕೈಗಾರಿಕೆಗಳ ಶೇ.100 ಉದ್ಯೋಗ ಕನ್ನಡಿಗರಿಗೆ: ಸಿದ್ದರಾಮಯ್ಯ ಕ್ಯಾಬಿನೆಟ್‌ ನಿರ್ಣಯ

Valmiki Corporation Scam
ಕರ್ನಾಟಕ2 hours ago

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಮಾಜಿ ಸಚಿವ ನಾಗೇಂದ್ರ ಪತ್ನಿಯನ್ನು ವಶಕ್ಕೆ ಪಡೆದ ಇಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ3 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ4 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌