IND vs SL: ಲಂಕಾ ವಿರುದ್ಧದ ಏಕದಿನ ಸರಣಿಗೆ ಶ್ರೇಯಸ್ ಅಯ್ಯರ್ ಆಯ್ಕೆ ಸಾಧ್ಯತೆ - Vistara News

ಕ್ರೀಡೆ

IND vs SL: ಲಂಕಾ ವಿರುದ್ಧದ ಏಕದಿನ ಸರಣಿಗೆ ಶ್ರೇಯಸ್ ಅಯ್ಯರ್ ಆಯ್ಕೆ ಸಾಧ್ಯತೆ

IND vs SL: ಅಯ್ಯರ್​ ಸಾರಥ್ಯದಲ್ಲಿ ಈ ಬಾರಿಯ ಐಪಿಎಲ್​ನಲ್ಲಿ ಕೆಕೆಆರ್​ ಪ್ರಶಸ್ತಿ ಗೆದ್ದು ಬೀಗಿತ್ತು. ಈ ಯಶಸ್ಸು ಕೂಡ ಅವರನ್ನು ಮತ್ತೆ ತಂಡ ಸೇರುವಂತೆ ಮಾಡಲಿದೆ.

VISTARANEWS.COM


on

IND vs SL
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ರಣಜಿ ಆಡಲು ನಿರಾಕರಿಸಿ ಅಶಿಸ್ತು ತೋರಿದ ಕಾರಣದಿಂದ ಬಿಸಿಸಿಐ(BCCI) ವಾರ್ಷಿಕ ಗುತ್ತಿಗೆಯಿಂದ ಹೊರಬಿದ್ದಿರುವ ಶ್ರೇಯಸ್ ಅಯ್ಯರ್(Shreyas Iyer) ಅವರು ಶ್ರೀಲಂಕಾ(IND vs SL) ವಿರುದ್ದದ ಏಕದಿನ ಸರಣಿಗೆ ಆಯ್ಕೆಯಾಗಲಿದ್ದಾರೆ ಎಂದು ವರದಿಯಾಗಿದೆ. ಲಂಕಾ ಸರಣಿಗೆ ಇಂದು ಭಾರತ ತಂಡ ಪ್ರಕಟಗೊಳ್ಳುವ ಸಾಧ್ಯತೆ ಇದೆ.

ಶ್ರೇಯಸ್ ಅಯ್ಯರ್ ಇದೇ ವರ್ಷ ನಡೆದಿದ್ದ ಇಂಗ್ಲೆಂಡ್ ವಿರುದ್ಧದ ಟೆಸ್ಟ್​ ಸರಣಿಯ ವೇಳೆ ಬೆನ್ನು ನೋವಿನ ಗಾಯದಿಂದಾಗಿ ಕೊನೆಯ ಮೂರು ಟೆಸ್ಟ್​​ ಪಂದ್ಯಗಳಿಂದ ಹೊರಗುಳಿದಿದ್ದರು. ಇದಾದ ಬಳಿಕ ಫಿಟ್​ನೆಸ್​ ಕಂಡು ಕೊಳ್ಳುವ ಸಲುವಾಗಿ ಬಿಸಿಸಿಐ ಅಯ್ಯರ್​ಗೆ ದೇಶೀಯ ಕ್ರಿಕೆಟ್​ ಟೂರ್ನಿಯಾದ ರಣಜಿ ಆಡುವಂತೆ ಸಲಹೆ ನೀಡಿತ್ತು. ಆದರೆ, ಅಯ್ಯರ್​ ಇದನ್ನು ಕಡೆಗಣಿಸಿದ್ದರು. ಇದೇ ಕಾರಣಕ್ಕೆ ಬಿಸಿಸಿಐ ಅವರನ್ನು ವಾರ್ಷಿಕ ಗುತ್ತಿಗೆಯಿಂದ ಕೈಬಿಟ್ಟಿತ್ತು. ಅಲ್ಲದೆ ಯಾವುದೇ ಸರಣಿಗೂ ಅವರನ್ನು ಆಯ್ಕೆ ಮಾಡಿರಲಿಲ್ಲ. ಇದೀಗ ಗಂಭೀರ್​ ಅವರ ಮನವಿಯಂತೆ ಅಯ್ಯರ್​ ಮತ್ತೆ ತಂಡ ಸೇರಲಿದ್ದಾರೆ ಎನ್ನಾಗಿದೆ. ಗಂಭೀರ್ ಅವರು ಮೆಂಟರ್ ಆಗಿದ್ದ ಕೆಕೆಆರ್ ತಂಡದಲ್ಲಿ ಶ್ರೇಯಸ್ ಅವರು ನಾಯಕರಾಗಿದ್ದರು ಎನ್ನುವುದು ಗಮನಾರ್ಹ. ಅಯ್ಯರ್​ ಸಾರಥ್ಯದಲ್ಲಿ ಈ ಬಾರಿಯ ಐಪಿಎಲ್​ನಲ್ಲಿ ಕೆಕೆಆರ್​ ಪ್ರಶಸ್ತಿ ಗೆದ್ದು ಬೀಗಿತ್ತು. ಈ ಯಶಸ್ಸು ಕೂಡ ಅವರನ್ನು ಮತ್ತೆ ತಂಡ ಸೇರುವಂತೆ ಮಾಡಲಿದೆ.

ಬಿಸಿಸಿಐ ಕೇಂದ್ರ ಗುತ್ತಿಗೆಯಿಂದ ಕೈಬಿಟ್ಟಾಗದ ಪ್ರತಿಕ್ರಿಯೆ ನೀಡಿದ್ದ ಅಯ್ಯರ್​, ಏಕ ದಿನ ವಿಶ್ವಕಪ್​ನಲ್ಲಿ ಅದ್ಭುತವಾಗಿ ಆಡಿದ್ದೆ. ಅದರ ನಂತರ ವಿರಾಮ ತೆಗೆದುಕೊಳ್ಳಲು ಬಯಸಿದ್ದೆ. ನನ್ನ ಫಿಟ್ನೆಸ್​ಗಾಗಿ ಕೆಲಸ ಮಾಡಲು ಮತ್ತು ಕೆಲವು ವಿಚಾರಗಳ ಬಗ್ಗೆ ಚೈತನ್ಯ ಪಡೆಯಲು ಬಯಸಿದ್ದೆ. ಸಂವಹನದ ಕೊರತೆಯಿಂದಾಗಿ, ಕೆಲವು ನಿರ್ಧಾರಗಳು ನನ್ನ ಪರವಾಗಿ ಆಗಲಿಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ IND vs SL: ಶ್ರೀಲಂಕಾ ಪ್ರವಾಸಕ್ಕೆ ಇಂದು ಭಾರತ ತಂಡ ಪ್ರಕಟ ಸಾಧ್ಯತೆ: ಯಾರಿಗೆಲ್ಲ ಸಿಗಲಿದೆ ಅವಕಾಶ?

“ಕ್ರಿಕೆಟ್​ ಬ್ಯಾಟ್ ನನಗೆ ಸೇರಿದ್ದು. ಉತ್ತಮ ಪ್ರದರ್ಶನ ನೀಡುವುದು ಮತ್ತು ಟ್ರೋಫಿಗಳನ್ನು ಗೆಲ್ಲುವುದು ನನ್ನ ಮೇಲಿನ ಜವಾಬ್ದಾರಿ ಎಂದು ನಾನು ಅರಿತುಕೊಂಡೆ. ಐಪಿಎಲ್ ಗೆದ್ದ ನಂತರ ಹಿಂದೆ ನಡೆದಿರುವ ಘಟನೆಗಳಿಗೆ ಸೂಕ್ತ ಉತ್ತರ ಎಂದು ನಾನು ನಿರ್ಧರಿಸಿದೆ. ಅದೃಷ್ಟವಶಾತ್ ಎಲ್ಲವೂ ಪೂರಕವಾಗಿ ನಡೆಯಿತು. ನಡೆದಿರುವ ಎಲ್ಲ ಘಟನೆಗಳಿಗೆ ನಾನು ಅಭಾರಿಯಾಗಿದ್ದೇನೆ” ಎಂದು ಶ್ರೇಯಸ್​ ಹೇಳಿದ್ದರು.

ಏಕದಿನಕ್ಕೆ ರಾಹುಲ್​ ನಾಯಕ

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ರೋಹಿತ್‌ ಶರ್ಮ ಅಲಭ್ಯರಾಗಲಿರುವ ಕಾರಣ, ಕೆ.ಎಲ್​ ರಾಹುಲ್ ಅವರನ್ನು ಹಂಗಾಮಿ ನಾಯಕರನ್ನಾಗಿ ನೇಮಿಸಲು ಬಿಸಿಸಿಐ ನಿರ್ಧರಿಸಿದೆ. 027ರ ಏಕದಿನ ವಿಶ್ವಕಪ್‌ ಗಮನದಲ್ಲಿಟ್ಟುಕೊಂಡು ಹೊಸ ನಾಯಕನನ್ನು ಬೆಳೆಸಲು ಪ್ರಧಾನ ಕೋಚ್‌ ಗೌತಮ್‌ ಗಂಭೀರ್‌ ಉದ್ದೇಶಿಸಿದ್ದು, ಈ ನಿಟ್ಟಿನಲ್ಲಿ ರಾಹುಲ್​ಗೆ ಅವಕಾಶ ಸಿಗಬಹುದು ಎಂದು ಹೇಳಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Olympic Games History: ಒಲಿಂಪಿಕ್ಸ್​ನಲ್ಲಿ ಗ್ರೀಸ್​ ದೇಶಕ್ಕೆ ವಿಶೇಷ ಮಾನ್ಯತೆ ನೀಡುವುದೇಕೆ?

Olympic Games History: ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಯಾವುದೇ ದೇಶ ಆತಿಥ್ಯ ವಹಿಸಿದರೂ ಕೂಡ ಒಲಿಂಪಿಕ್ಸ್ ಕ್ರೀಡಾಜ್ಯೋತಿಯನ್ನು ಪುರಾತನ ಗೇಮ್ಸ್ ಆಯೋಜಿಸಿದ್ದ ಗ್ರೀಸ್‌ನಿಂದ ತರಲಾಗುತ್ತದೆ. ಅಲ್ಲಿ ಬೆಳಗಲ್ಪಟ್ಟ ಜ್ಯೋತಿ ಮೊದಲು ಗ್ರೀಸ್‌ ನಗರದಲ್ಲಿ ಸಂಚರಿಸಿದ ನಂತರ ಕೂಟ ನಡೆಯುವ ದೇಶಕ್ಕೆ ಬರುತ್ತದೆ.

VISTARANEWS.COM


on

Olympic Games History
Koo

ಬೆಂಗಳೂರು: ಇಂದು ಜಗತ್ತಿನ ಪ್ರಮುಖ ಅಂತಾರಾಷ್ಟ್ರೀಯ ಕ್ರೀಡಾಕೂಟ ಎನಿಸಿಕೊಂಡಿರುವ ಒಲಿಂಪಿಕ್ಸ್​ಗೆ ಸಾವಿರಾರು(Olympic Games History) ವರ್ಷಗಳ ಇತಿಹಾಸವಿದೆ. ಈ ಒಲಿಂಪಿಕ್‌ ಕ್ರೀಡಾಕೂಟದ ಹಿನ್ನೆಲೆ, ಇತಿಹಾಸ ಮತ್ತು ಗ್ರೀಸ್​ ದೇಶಕ್ಕೆ ನೀಡುವ ವಿಶೇಷ ಮಾನ್ಯತೆಯ ಕುರಿತ ಮಾಹಿತಿ ಇಲ್ಲಿದೆ.

ಗ್ರೀಸ್​ಗೆ ವಿಶೇಷ ಸ್ಥಾನಮಾನ


ಚೊಚ್ಚಲ ಒಲಿಂಪಿಕ್​ ಸಂಘಟಿಸಿದ ಹೆಗ್ಗಳಿಕೆ ಗ್ರೀಸ್​ ದೇಶಕ್ಕೆ ಸಲ್ಲುತ್ತದೆ. ಸುಮಾರು ಕ್ರಿ.ಪೂ. 776ರಲ್ಲಿ ಗ್ರೀಸ್‌ನ ಒಲಿಂಪಿಯಾದಲ್ಲಿ ಮೊದಲ ಬಾರಿಗೆ ಒಲಿಂಪಿಕ್‌ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಮೂರ್ನಾಲ್ಕು ಶತಮಾನದವರೆಗೆ ಈ ಕೂಟವನ್ನು ಆಯೋಜಿಸಲಾಗುತ್ತಿತ್ತು. ಬಳಿಕ ಕ್ರಮೇಣ ನಿಂತುಹೋದ ಒಲಿಂಪಿಕ್‌ಗೆ ಚಾಲನೆ ಸಿಕ್ಕಿದ್ದು 1859ರಲ್ಲಿ. ಇವಾಂಜೆಲಾಸ್‌ ಝಪ್ಪಾಸ್‌ ಎಂಬಾತ ಪ್ರಪ್ರಥಮ ಅಂತಾರಾಷ್ಟ್ರೀಯ ಒಲಿಂಪಿಕ್‌ ಕ್ರೀಡಾಕೂಟವನ್ನು ಪ್ರಾಯೋಜಿಸಿದನು. ಬಳಿಕ 1894ರಲ್ಲಿ ಫ್ರಾನ್ಸ್‌ನ ಪಿಯರೆ ಡಿ ಕ್ಯುಬರ್ತಿನ್‌ ಎಂಬುವವನು ಅಂತಾರಾಷ್ಟ್ರೀಯ ಒಲಿಂಪಿಕ್‌ ಸಮಿತಿಯನ್ನು ಹುಟ್ಟುಹಾಕಿ, 1896ರಲ್ಲಿ ಪ್ರಥಮ ಬಾರಿಗೆ ಗ್ರೀಸ್‌ನ ಈಗಿನ ರಾಜಧಾನಿ ಅಥೆನ್ಸ್‌ ನಗರದಲ್ಲಿ ಬೇಸಿಗೆ ಒಲಿಂಪಿಕ್‌ ಕ್ರೀಡಾಕೂಟ ಆಯೋಜಿಸಲಾಯಿತು. ಇದು ಮೊದಲ ಆಧುನಿಕ ಒಲಿಂಪಿಕ್‌ ಕ್ರೀಡಾಕೂಟ.


ಮೊದಲ ಒಲಿಂಪಿಕ್​ ಸಂಘಟಿಸಿದ ಕಾರಣ ಪ್ರತಿ ಬಾರಿಯ ಉದ್ಘಾಟನ ಸಮಾರಂಭದಲ್ಲಿ ಕ್ರೀಡಾಪಟುಗಳ ಪಥಸಂಚಲನ ನಡೆಯುವಾಗ ಗ್ರೀಸ್​ ತಂಡವೇ ಮುಂಚೂಣಿಯಲ್ಲಿರುತ್ತದೆ. ಬಳಿಕ ಆತಿಥೇಯ ದೇಶದ ಭಾಷೆಯ ಅಲ್ಪಾಬೆಟಿಕ್‌ ಅಕ್ಷರಮಾಲೆಯನ್ನು ಅನುಸರಿಸಿ ತಂಡಗಳು ಪಥಸಂಚಲನದಲ್ಲಿ ಪಾಲ್ಗೊಳ್ಳುತ್ತವೆ. ಆತಿಥೇಯ ತಂಡ ಯಾವಾಗಲೂ ಕೊನೆಯ ಸ್ಥಾನದಲ್ಲಿರುತ್ತದೆ.

ಇದನ್ನೂ ಓದಿ The Olympic Games: 72ರ ಇಳಿ ವಯಸ್ಸಿನಲ್ಲೂ ಒಲಿಂಪಿಕ್ಸ್​ ಪದಕ ಗೆದ್ದಿದ್ದ ಶೂಟರ್‌; ಯಾರಿವರು?

ಟಾರ್ಚ್​ ರಿಲೇ


ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಯಾವುದೇ ದೇಶ ಆತಿಥ್ಯ ವಹಿಸಿದರೂ ಕೂಡ ಒಲಿಂಪಿಕ್ಸ್ ಕ್ರೀಡಾಜ್ಯೋತಿಯನ್ನು ಪುರಾತನ ಗೇಮ್ಸ್ ಆಯೋಜಿಸಿದ್ದ ಗ್ರೀಸ್‌ನಿಂದ ತರಲಾಗುತ್ತದೆ. ಅಲ್ಲಿ ಬೆಳಗಲ್ಪಟ್ಟ ಜ್ಯೋತಿ ಮೊದಲು ಗ್ರೀಸ್‌ ನಗರದಲ್ಲಿ ಸಂಚರಿಸಿದ ನಂತರ ಕೂಟ ನಡೆಯುವ ದೇಶಕ್ಕೆ ಬರುತ್ತದೆ. ಗ್ರೀಸ್​ನ​ ಜಿಮ್ನಾಸ್ಟ್ ಎಲೆಟ್‌ಥಿಯೋರಿಸ್ ಪೆಟ್ರೌನಿಯಾಸ್, ರಿಯೋ ಒಲಿಂಪಿಕ್ಸ್ ಕ್ರೀಡಾಜ್ಯೋತಿ ಹಿಡಿದ ಮೊದಲ ಅಥ್ಲೀಟ್.


4 ವರ್ಷಗಳಿಗೊಮ್ಮೆ ನಡೆಯುವ ಟೂರ್ನಿ


ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಒಲಿಂಪಿಕ್‌ ಕ್ರೀಡಾಕೂಟ ನಡೆಯುತ್ತದೆ. ಇದೊಂದು ಅಂತಾರಾಷ್ಟ್ರೀಯ ಕ್ರೀಡಾಕೂಟವಾಗಿದೆ. ಈ ಕ್ರೀಡಾಕೂಟವನ್ನು ಬೇಸಿಗೆ ಮತ್ತು ಚಳಿಗಾಲದ ಒಲಿಂಪಿಕ್‌ ಕ್ರೀಡಾಕೂಟವೆಂದು ವಿಂಗಡಿಸಲಾಗಿದೆ. 1992ರ ತನಕ ಈ ಎರಡೂ ಕ್ರೀಡಾಕೂಟಗಳು ಒಂದೇ ವರ್ಷದಲ್ಲಿ ನಡೆಯುತ್ತಿದ್ದವು. ಈಗ ಈ ಎರಡು ಕ್ರೀಡಾಕೂಟಗಳ ನಡುವೆ 2 ವರ್ಷಗಳ ಅಂತರ ಇರುತ್ತದೆ.

ಇದನ್ನೂ ಓದಿ Olympics On Television: ಒಲಿಂಪಿಕ್ಸ್​ ಕ್ರೀಡಾಕೂಟ ಮೊದಲ ಬಾರಿಗೆ ಟಿವಿಯಲ್ಲಿ ಪ್ರಸಾರ ಕಂಡಿದ್ದು ಯಾವಾಗ?

ಈ ಬಾರಿಯ ವಿಶೇಷತೆ

ಈ ಬಾರಿಯ ಒಲಿಂಪಿಕ್ಸ್​ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಒಲಿಂಪಿಕ್ಸ್​ ಇತಿಹಾಸದಲ್ಲೇ ವಿಶೇಷ ಮಹತ್ವ ಪಡೆದಿದೆ. ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

Continue Reading

ಕ್ರೀಡೆ

Mohammed Shami: ಎನ್​ಸಿಎಯಲ್ಲಿ ಬೌಲಿಂಗ್​ ಅಭ್ಯಾಸ ಆರಂಭಿಸಿದ ಶಮಿ

Mohammed Shami: ವಿಶ್ವಕಪ್​ ಬಳಿಕ ಶಮಿ ಇದುವರೆಗೂ ಯಾವುದೇ ಕ್ರಿಕೆಟ್​ ಪಂದ್ಯ ಆಡಿಲ್ಲ. ಗಾಯದಿಂದ ಸಂಪೂರ್ಣ ಚೇತರಿಕೆ ಕಂಡಿರುವ ಶಮಿ ಈಗಾಗಲೇ ಬೌಲಿಂಗ್​ ಅಭ್ಯಾಸ ಕೂಡ ಆರಂಭಿಸಿದ್ದಾರೆ. ಶೀಘ್ರದಲ್ಲೇ ಅವರು ಭಾರತ ತಂಡ ಸೇರುವಂತಾಗಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.

VISTARANEWS.COM


on

Mohammed Shami
Koo

ಲಕ್ನೋ: ಪಾದದ ಶಸ್ತ್ರಚಿಕಿತ್ಸೆಗೆ(mohammed shami injury update) ಒಳಗಾಗಿ ಚೇತರಿಕೆ ಕಾಣುತ್ತಿರುವ ಭಾರತ ಕ್ರಿಕೆಟ್​ ತಂಡದ ಪ್ರಧಾನ​ ವೇಗಿ ಮೊಹಮ್ಮದ್ ಶಮಿ(Mohammed Shami) ಕ್ರಿಕೆಟ್​ಗೆ ಮರಳುವು ಸಿದ್ಧತೆಯಲ್ಲಿದ್ದಾರೆ. ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್​ಸಿಎ)ಯಲ್ಲಿ ಬೌಲಿಂಗ್​ ಅಭ್ಯಾಸ ಆರಂಭಿಸಿದ್ದು, ಈ ವಿಡಿಯೊವನ್ನು ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಎನ್​ಸಿಎಯಲ್ಲಿ(NCA) ಕಠಿಣ ಬ್ಯಾಟಿಂಗ್​ ಅಭ್ಯಾಸ ನಡೆಸುತ್ತಿರುವ ವಿಡಿಯೊವನ್ನು ಶಮಿ ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೊದಲ್ಲಿ ಶಮಿ ಬೌಲಿಂಗ್​ ನಡೆಸುತ್ತಿರುವ ಮತ್ತು ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ವಿಕೆಟ್​ ಉರುಳಿಸಿದ ವಿಡಿಯೊವನ್ನು ಕೂಡ ಎಡಿಟ್​ ಮಾಡಿ ಹಾಕಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಶಮಿ ಇದೇ ತಿಂಗಳು ಲಂಕಾ ವಿರುದ್ಧ ಆಡಲಿರುವ ಏಕದಿನ ಮತ್ತು ಟಿ20 ಸರಣಿಗೆ ಆಯ್ಕೆಯಾಗುತ್ತಾರೆ ಎನ್ನಲಾಗಿತ್ತು. ಆದರೆ ಶಮಿ ಇನ್ನೂ ಫಿಟ್​ನೆಸ್​ ಕ್ಲೀಯರೆನ್ಸ್​ ಪಡೆದಿಲ್ಲ. ಹೀಗಾಗಿ ಅವರು ಲಂಕಾ ಸರಣಿಗೆ ಆಯ್ಕೆಯಾಗುವುದು ಅನುಮಾನ.

ಬಾಂಗ್ಲಾ ಸರಣಿಯಲ್ಲಿ ಕಣಕ್ಕೆ?

ಚೇತರಿಕೆಯ ಹಾದಿಯಲ್ಲಿರುವ ಶಮಿ  ಈ ವರ್ಷದ ಕೊನೆಯಲ್ಲಿ ಬಾಂಗ್ಲಾದೇಶದ ವಿರುದ್ಧ ತವರಿನಲ್ಲಿ ನಡೆಯುವ ಟೆಸ್ಟ್ ಸರಣಿಗೆ ಪುನರಾಗಮನ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಗಾಯದಿಂದಾಗಿ ಶಮಿಗೆ ಈ ಬಾರಿ ಐಪಿಎಲ್​ ಸೇರಿ ಮಹತ್ವದ ಟಿ20 ವಿಶ್ವಕಪ್​ ಟೂರ್ನಿ ಕೈತಪ್ಪಿತ್ತು. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ವೇಳೆ ಗಾಯಗೊಂಡಿದ್ದ ಶಮಿ, ಈ ಗಾಯವನ್ನು ಮರೆಮಾಚಿ ವಿಶ್ವಕಪ್​ನಲ್ಲಿ ಅಮೋಘ ಬೌಲಿಂಗ್​ ಪ್ರದರ್ಶನ ತೋರಿದ್ದರು.

ವಿಶ್ವಕಪ್​ ಬಳಿಕ ಶಮಿ ಇದುವರೆಗೂ ಯಾವುದೇ ಕ್ರಿಕೆಟ್​ ಪಂದ್ಯ ಆಡಿಲ್ಲ. ಗಾಯದಿಂದ ಸಂಪೂರ್ಣ ಚೇತರಿಕೆ ಕಂಡಿರುವ ಶಮಿ ಈಗಾಗಲೇ ಬೌಲಿಂಗ್​ ಅಭ್ಯಾಸ ಕೂಡ ಆರಂಭಿಸಿದ್ದಾರೆ. ಶೀಘ್ರದಲ್ಲೇ ಅವರು ಭಾರತ ತಂಡ ಸೇರುವಂತಾಗಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.

ಇದನ್ನೂ ಓದಿ IND vs SL: ಲಂಕಾ ವಿರುದ್ಧದ ಏಕದಿನ ಸರಣಿಗೆ ಶ್ರೇಯಸ್ ಅಯ್ಯರ್ ಆಯ್ಕೆ ಸಾಧ್ಯತೆ

ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಶಮಿ ಅವರು ತಮ್ಮ ಮೊನಚಾದ ಬೌಲಿಂಗ್​ ದಾಳಿಯ ಮೂಲಕ ಟೂರ್ನಿಯಲ್ಲಿಯೇ ಅತ್ಯಧಿಕ ವಿಕೆಟ್​ ಪಡೆದ ಬೌಲರ್​ ಎನಿಸಿಕೊಂಡಿದ್ದರು. ಆಡಿದ 7 ಪಂದ್ಯಗಳಲ್ಲಿ 24 ವಿಕೆಟ್‌ ಉರುಳಿಸಿದ್ದರು. ಅವರ ಈ ಸಾಧನೆಯನ್ನು ಪರಿಗಣಿಸಿ ಅವರಿಗೆ ದೇಶದ ಎರಡನೇ ಅತ್ಯುನ್ನತ ಕ್ರೀಡಾ ಗೌರವವಾದ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಮೊಹಮ್ಮದ್ ಶಮಿ ಅರ್ಜುನ ಪ್ರಶಸ್ತಿ ಸ್ವೀಕರಿಸಿದ್ದರು. ಮೊಹಮ್ಮದ್ ಶಮಿ ಭಾರತ ಪರ 64 ಟೆಸ್ಟ್ ಪಂದ್ಯಗಳಲ್ಲಿ 229 ವಿಕೆಟ್ ಪಡೆದಿದ್ದಾರೆ. 101 ಏಕದಿನ ಪಂದ್ಯಗಳಲ್ಲಿ 195 ವಿಕೆಟ್ ಪಡೆದಿದ್ದಾರೆ. 23 ಟಿ20 ಪಂದ್ಯಗಳಲ್ಲಿ 24 ವಿಕೆಟ್ ಪಡೆದಿದ್ದಾರೆ.

Continue Reading

ಕ್ರೀಡೆ

Dhammika Niroshana: ಶ್ರೀಲಂಕಾದ ಮಾಜಿ ಕ್ರಿಕೆಟಿಗನನ್ನು ಗುಂಡಿಕ್ಕಿ ಕೊಲೆಗೈದ ಅಪರಿಚಿತ ವ್ಯಕ್ತಿ

Dhammika Niroshana: ಸ್ಥಳೀಯ ಪೊಲೀಸರ ಮಾಹಿತಿ ಪ್ರಕಾರ, ನಿರೋಶನಾ ತಮ್ಮ ನಿವಾಸದಲ್ಲಿ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಇದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

VISTARANEWS.COM


on

Dhammika Niroshana
Koo

ಕೊಲಂಬೊ: ಶ್ರೀಲಂಕಾ ತಂಡದ ಮಾಜಿ ಆಟಗಾರ, ಅಂಡರ್​-19 ತಂಡದ ನಾಯಕನಾಗಿದ್ದ ಧಮ್ಮಿಕಾ ನಿರೋಶನಾ(Dhammika Niroshana) (41) ಅವರನ್ನು ಮಂಗಳವಾರ ತಡರಾತ್ರಿ (ಜುಲೈ 16) ಅವರ ನಿವಾಸದಲ್ಲಿಯೇ ಗುಂಡಿಕ್ಕಿ ಕೊಲೆಗೈದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸ್ಥಳೀಯ ಪೊಲೀಸರ ಮಾಹಿತಿ ಪ್ರಕಾರ, ನಿರೋಶನಾ ತಮ್ಮ ನಿವಾಸದಲ್ಲಿ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಇದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ತಲೆಮರೆಸಿಕೊಂಡಿರುವ ಶಂಕಿತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಕೊಲೆಗೆ ನಿಖರ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಗಾಲೆ ಜಿಲ್ಲೆಯ ಸಣ್ಣ ಪಟ್ಟಣವಾದ ಅಂಬಲಂಗೋಡದಲ್ಲಿರುವ ನಿವಾಸದಲ್ಲಿ ಅವರ ಹತ್ಯೆ ಮಾಡಲಾಗಿದೆ.

ಬಲಗೈ ಮಧ್ಯಮ ವೇಗದ ಬೌಲರ್ ಆಗಿದ್ದ ನಿರೋಶನಾ 2001 ಮತ್ತು 2004 ರ ನಡುವೆ ಗಾಲೆ ಕ್ರಿಕೆಟ್ ಕ್ಲಬ್​ಗಾಗಿ 12 ಪ್ರಥಮ ದರ್ಜೆ ಪಂದ್ಯಗಳು ಮತ್ತು 8 ಲಿಸ್ಟ್ ‘ಎ’ ಪಂದ್ಯಗಳನ್ನು ಆಡಿದ್ದಾರೆ. ಪ್ರಥಮ ದರ್ಜೆಯಲ್ಲಿ 19, ಲಿಸ್ಟ್ ‘ಎ’ ಪಂದ್ಯಗಳಲ್ಲಿ 5 ವಿಕೆಟ್​ ಕಿತ್ತ ಸಾಧನೆ ಮಾಡಿದ್ದಾರೆ. ಶ್ರೀಲಂಕಾ ಅಂಡರ್-19 ತಂಡದ ನಾಯಕನಾಗಿ ಎರಡು ವರ್ಷಗಳ ಕಾಲ ಟೆಸ್ಟ್ ಮತ್ತು ಏಕದಿನ ತಂಡವನ್ನು ಮುನ್ನಡೆಸಿದ್ದರು.

Continue Reading

ಕ್ರೀಡೆ

The Olympic Games: 72ರ ಇಳಿ ವಯಸ್ಸಿನಲ್ಲೂ ಒಲಿಂಪಿಕ್ಸ್​ ಪದಕ ಗೆದ್ದಿದ್ದ ಶೂಟರ್‌; ಯಾರಿವರು?

The Olympic Games: ಈ ಬಾರಿಯ ಒಲಿಂಪಿಕ್ಸ್​ನಲ್ಲಿ ಪಾಲ್ಗೊಳ್ಳುವ ಹಿರಿಯ ಅಥ್ಲೀಟ್ ಯಾರೆಂದರೆ, ಕಾರ್ಲ್ ಹೆಸ್ಟರ್. ಇಂಗ್ಲೆಂಡ್​ನ ಈಕ್ವೆಸ್ಟ್ರಿಯನ್‌ ಆಗಿರುವ ಅವರಿಗೆ 57 ವರ್ಷ. ಕಳೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಕಂಚಿನ ಪದಕ ಜಯಿಸಿದ್ದರು.

VISTARANEWS.COM


on

The Olympic Games
Koo

ಬೆಂಗಳೂರು: ಕ್ರೀಡಾಭಿಮಾನಿಗಳು ಕಾದು ಕುಳಿತಿರುವ ಪ್ಯಾರಿಸ್​ ಒಲಿಂಪಿಕ್ಸ್(Paris Olympics 2024)​ ಕ್ರೀಡಾಕೂಟ ಆರಂಭಕ್ಕೆ ಇನ್ನು ಬೆರಳೆಣಿಕೆಯ ದಿನಗಳು ಮಾತ್ರ ಬಾಕಿ ಉಳಿದಿವೆ. ಈಗಾಗಲೇ ಒಲಿಂಪಿಕ್ಸ್(The Olympic Games)​ ಕುರಿತ ಹಲವು ಸಾರಸ್ಯಕರ ಸಂಗತಿಗಳ ಕಿರಿ ಅವಲೋಕನ ಮಾಡಲಾಗಿದೆ. ಇದೀಗ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ ಅತ್ಯಂತ ಹಿರಿಯ ಆ್ಯತ್ಲೀಟ್‌ ಯಾರು?, ಅವರ ಸಾಧನೆ ಏನು? ಎಂಬ ವರದಿ ಇಲ್ಲಿದೆ.

ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ ಅತ್ಯಂತ ಹಿರಿಯ ಆ್ಯತ್ಲೀಟ್‌ ಎಂಬ ಹೆಗ್ಗಳಿಕೆ ಸ್ವೀಡನ್‌ನ ಶೂಟರ್‌ ಆಸ್ಕರ್‌ ಸ್ವಾನ್‌ ಹೆಸರಿನಲ್ಲಿದೆ. 1920ರಲ್ಲಿ(1920 Summer Olympics) ಆಂಟ್ವರ್ಪ್​ನಲ್ಲಿ(Antwerp 1920) ನಡೆದಿದ ಟೂರ್ನಿಯ ಶೂಟಿಂಗ್‌ನಲ್ಲಿ ಸ್ಪರ್ಧಿಸಿದಾಗ ಅವರಿಗೆ 72 ವರ್ಷ 281 ದಿನವಾಗಿತ್ತು. ಅಚ್ಚರಿ ಎಂದರೆ ಇಳಿ ವಯಸ್ಸಿನಲ್ಲೂ ಆಸ್ಕರ್‌ ಸ್ವಾನ್‌(Oscar Swahn) ಇಲ್ಲಿ ಬೆಳ್ಳಿ ಪದಕ ಗೆದ್ದು ಬೀಗಿದ್ದರು. ಜತೆಗೆ ಒಲಿಂಪಿಕ್ಸ್‌ ಇತಿಹಾಸದಲ್ಲಿ ಪದಕ ಗೆದ್ದ ಹಿರಿಯ ಕ್ರೀಡಾಪಟು ಎನ್ನುವ ಐತಿಹಾಸಿಕ ಸಾಧನೆ ಮಾಡಿದ್ದರು. ಒಟ್ಟಾರೆಯಾಗಿ ಇವರು ಒಲಿಂಪಿಕ್ಸ್ ವೃತ್ತಿ ಜೀವನದಲ್ಲಿ 6​ ಪದಕ ಜಯಿಸಿದ್ದಾರೆ. ಇದರಲ್ಲಿ 3 ಚಿನ್ನದ ಪದಕ ಒಳಗೊಂಡಿದೆ.


ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಿದ ಹಿರಿಯ ಮಹಿಳಾ ಆ್ಯತ್ಲೀಟ್‌ ಇಂಗ್ಲೆಂಡ್‌ನ‌ ಹಿಲ್ಡಾ ಲೊರ್ನಾ ಜಾನ್‌ಸ್ಟನ್‌. 1972ರ ಮ್ಯೂನಿಚ್‌ ಗೇಮ್ಸ್​ನಲ್ಲಿ ಜಾನ್‌ಸ್ಟನ್‌ 70ರ ವಯಸ್ಸಿನಲ್ಲಿ ಈಕ್ವೆಸ್ಟ್ರಿಯನ್‌ನಲ್ಲಿ ಪಾಲ್ಗೊಂಡಿದ್ದರು. ಅಮೆರಿಕದ ಲಿಡ ಪೇಟನ್‌ ಎಲಿಜಾ 1904ರಲ್ಲಿ 63ನೇ ವಯಸ್ಸಿನಲ್ಲಿ ಆರ್ಚರಿಯಲ್ಲಿ ಚಿನ್ನ ಗೆಲ್ಲುವ ಮೂಲಕ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಹಿರಿಯ ಮಹಿಳಾ ಕ್ರೀಡಾಪಟು ಎನಿಸಿಕೊಂಡಿದ್ದಾರೆ.

ಇದನ್ನೂ ಓದಿ Olympics On Television: ಒಲಿಂಪಿಕ್ಸ್​ ಕ್ರೀಡಾಕೂಟ ಮೊದಲ ಬಾರಿಗೆ ಟಿವಿಯಲ್ಲಿ ಪ್ರಸಾರ ಕಂಡಿದ್ದು ಯಾವಾಗ?

ಈ ಬಾರಿಯ ಹಿರಿಯ ಆ್ಯತ್ಲೀಟ್‌ ಯಾರು?


ಈ ಬಾರಿಯ ಒಲಿಂಪಿಕ್ಸ್​ನಲ್ಲಿ ಪಾಲ್ಗೊಳ್ಳುವ ಹಿರಿಯ ಆ್ಯತ್ಲೀಟ್‌ ಯಾರೆಂದರೆ, ಕಾರ್ಲ್ ಹೆಸ್ಟರ್. ಇಂಗ್ಲೆಂಡ್​ನ ಈಕ್ವೆಸ್ಟ್ರಿಯನ್‌ ಆಗಿರುವ ಅವರಿಗೆ 57 ವರ್ಷ. ಕಳೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಕಂಚಿನ ಪದಕ ಜಯಿಸಿದ್ದರು. ಈ ಬಾರಿಯೂ ಪದಕ ಗೆಲ್ಲುವು ವಿಶ್ವಾಸದಲ್ಲಿದ್ದಾರೆ.

ಇದನ್ನೂ ಓದಿ Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನ ಸ್ಪರ್ಧಾ ಪಟ್ಟಿಯಲ್ಲಿರುವ ಕ್ರೀಡೆಗಳು ಯಾವುವು? ಇವುಗಳಲ್ಲಿ ಅತ್ಯಂತ ಪ್ರಾಚೀನ ಕ್ರೀಡೆಗಳು ಯಾವುದೆಲ್ಲ?

ಒಲಿಂಪಿಕ್ಸ್‌ 5 ರಿಂಗ್​ಗಳ ಮಹತ್ವವೇನು?

5 ಖಂಡಗಳನ್ನು ಪ್ರತಿನಿಧಿಸುವ 5 ರಿಂಗ್‌ಗಳುಳ್ಳ ಒಲಿಂಪಿಕ್ಸ್‌ ಧ್ವಜವನ್ನು 1913ರಲ್ಲಿ ಆಧುನಿಕ ಒಲಿಂಪಿಕ್ಸ್‌ ಪಿತಾಮಹ ಫ್ರಾನ್ಸ್‌ನ ಪಿಯರ್‌ ಡಿ ಕೌಬರ್ಟಿನ್‌ ವಿನ್ಯಾಸಗೊಳಿಸಿದರು. ಈ ಬಾರಿಯ ಒಲಿಂಪಿಕ್ಸ್​ ಕೂಡ ಫ್ರಾನ್ಸ್​ನಲ್ಲಿಯೇ ನಡೆಯುತ್ತಿರುವುದು ವಿಶೇಷ. ಈ ಒಲಿಂಪಿಕ್ಸ್‌ ಧ್ವಜ 1920ರ ಬೆಲ್ಜಿಯಂನ ಅಂಟ್ವೆರ್ಪ್​ನಲ್ಲಿ ಮೊದಲ ಬಾರಿ ಅಧಿಕೃತವಾಗಿ ಹಾರಾಡಿಸಲಾಯಿತು. ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುವ ಪ್ರತಿ ದೇಶದ ರಾಷ್ಟ್ರಧ್ವಜವೂ ಈ ರಿಂಗ್‌ಗಳ ಒಂದಾದರೂ ಬಣ್ಣವನ್ನು ಒಳಗೊಂಡಿರುವುದು ಈ ರಿಂಗ್​ನ ವಿಶೇಷತೆ.

ವೈವಿಧ್ಯಮಯ ಭಾಷೆ, ಸಂಸ್ಕೃತಿ, ಹವಾಮಾನ, ಆರ್ಥಿಕತೆ, ಆಹಾರ ಪದ್ಧತಿ ಮತ್ತು ಮೈಬಣ್ಣದ ಜನರೆಲ್ಲ ಒಂದಾಗಿ ಸೇರುವ ವಿಶ್ವದ ಅತಿದೊಡ್ಡ ವೇದಿಕೆ ಒಲಿಂಪಿಕ್ಸ್ ಕ್ರೀಡಾಕೂಟವಾಗಿದೆ. ಹಲವು ವೈವಿಧ್ಯಗಳ ನಡುವೆಯೂ ಒಲಿಂಪಿಕ್ಸ್ ಏಕತೆಯನ್ನು ಸಾರುವುದು ಈ ಕ್ರೀಡಾಕೂಟದ ವಿಶೇಷತೆ.

Continue Reading
Advertisement
Viral Video
ವೈರಲ್ ನ್ಯೂಸ್2 mins ago

Viral Video: ಸಫಾರಿಯಲ್ಲಿ ಪ್ರವಾಸಿಗರ ಎದುರೇ ಸಿಂಹಗಳ ಕಾಮಕೇಳಿ!

Olympic Games History
ಕ್ರೀಡೆ4 mins ago

Olympic Games History: ಒಲಿಂಪಿಕ್ಸ್​ನಲ್ಲಿ ಗ್ರೀಸ್​ ದೇಶಕ್ಕೆ ವಿಶೇಷ ಮಾನ್ಯತೆ ನೀಡುವುದೇಕೆ?

Amitabh Bachchan holds umbrella for Jaya Bachchan
ಬಾಲಿವುಡ್15 mins ago

Amitabh Bachchan: ಅಮಿತಾಭ್ ರೊಮ್ಯಾಂಟಿಕ್ ಮೂಡ್‌ನಲ್ಲಿದ್ದರೂ ಮುಖ ಊದಿಸಿಕೊಂಡೇ ಇದ್ದ ಜಯಾ ಬಚ್ಚನ್!

Viral Video
ವೈರಲ್ ನ್ಯೂಸ್55 mins ago

Viral Video: ನೋಡ ನೋಡ್ತಿದ್ದಂತೆ ಮೂರನೇ ಮಹಡಿಯಿಂದ ಬಿದ್ದ ಮಹಿಳೆ; ಶಾಕಿಂಗ್‌ ವಿಡಿಯೋ ವೈರಲ್‌

Tauba Tauba
Latest60 mins ago

Tauba Tauba : ಲಂಡನ್‌ ಬೀದಿಯಲ್ಲಿ ‘ತೌಬಾ ತೌಬಾ’ ಹಾಡಿಗೆ ಸಖತ್‌ ಆಗಿ ಸ್ಟೆಪ್ಸ್‌ ಹಾಕಿದ ಬೆಡಗಿಯರು; ವಿಡಿಯೊ ವೈರಲ್

CM Siddaramaiah karnataka jobs reservation
ಪ್ರಮುಖ ಸುದ್ದಿ1 hour ago

Karnataka Jobs Reservation: ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಶೇ.75 ಮೀಸಲಾತಿ ಮಾತ್ರ; ಆಡಳಿತ ಹುದ್ದೆಗಳಲ್ಲಿ ಶೇ.50; ಉದ್ಯಮಿಗಳಿಗೆ ಬೆಚ್ಚಿತೇ ಸರ್ಕಾರ?

Kannada New Movie Baila Baila Video Song Hiranya out
ಸ್ಯಾಂಡಲ್ ವುಡ್1 hour ago

Kannada New Movie: ರಾಜವರ್ಧನ್ ‘ಹಿರಣ್ಯ’ ಸಿನಿಮಾದಲ್ಲಿ ಮೈ ಚಳಿ ಬಿಟ್ಟು ಡ್ಯಾನ್ಸ್‌ ಮಾಡಿದ ದಿವ್ಯಾ ಸುರೇಶ್!

Usha Chilukuri Vance
ವಿದೇಶ1 hour ago

Usha Chilukuri Vance: ಟ್ರಂಪ್ ಅವರ ಉಪಾಧ್ಯಕ್ಷ ಅಭ್ಯರ್ಥಿಯ ಪತ್ನಿ ಭಾರತೀಯ ಸಂಸ್ಕೃತಿಯ ಪ್ರತಿಪಾದಕಿ!

Viral News
ಪ್ರಮುಖ ಸುದ್ದಿ1 hour ago

Viral News : ಕುವೈಟ್​ನಲ್ಲಿ ಈ ಚಪ್ಪಲಿಗೆ 1 ಲಕ್ಷ ರೂಪಾಯಿಯಂತೆ; ನಮ್ಮಲ್ಲಿ ಇದು ಬಾತ್​ರೂಮ್​ಗೆ ಹೋಗುವ ಚಪ್ಪಲಿ ಎಂದ ನೆಟ್ಟಿಗರು!

Food Poisoning
ದೇಶ1 hour ago

Food Poisoning: ಮೊಹರಂ ಮೆರವಣಿಗೆ ವೇಳೆ ಷರಬತ್ತು ಸೇವಿಸಿ 400 ಮಂದಿ ಅಸ್ವಸ್ಥ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ3 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ4 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌