Passenger Arrest: ವಿಮಾನದಲ್ಲಿ ಗಗನಸಖಿ ನೀಡಿದ ನೀರು, ಆಹಾರ ಸೇವಿಸದ ಪ್ರಯಾಣಿಕನ ಬಂಧನ! ಕಾರಣ ಕುತೂಹಲಕರ! - Vistara News

Latest

Passenger Arrest: ವಿಮಾನದಲ್ಲಿ ಗಗನಸಖಿ ನೀಡಿದ ನೀರು, ಆಹಾರ ಸೇವಿಸದ ಪ್ರಯಾಣಿಕನ ಬಂಧನ! ಕಾರಣ ಕುತೂಹಲಕರ!

Passenger Arrest: ಜೆಡ್ಡಾದಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದ ಪ್ರಯಾಣಿಕನೊಬ್ಬನನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಏರ್ ಹೋಸ್ಟೆಸ್ ಪ್ರಯಾಣಿಕರಿಗೆ ನೀರು, ಚಹಾ ಮತ್ತು ಆಹಾರ ಸೇರಿದಂತೆ ಉಪಾಹಾರವನ್ನು ನೀಡುತ್ತಿದ್ದಾಗ ಆರೋಪಿ ಐದೂವರೆ ಗಂಟೆಗಳ ಪ್ರಯಾಣದ ಅವಧಿಯಲ್ಲಿ ಅವೆಲ್ಲವನ್ನೂ ನಿರಾಕರಿಸಿದ್ದಾನೆ. ಆತ ಆಹಾರವನ್ನು ನಿರಂತರವಾಗಿ ನಿರಾಕರಿಸಿದ್ದರಿಂದ ಶಂಕೆಗೊಂಡ ಏರ್ ಹೋಸ್ಟೆಸ್ ಕ್ಯಾಪ್ಟನ್‌ಗೆ ಮಾಹಿತಿ ನೀಡಿದಳು. ವಿಮಾನ ಇಳಿದಾದ ಬಳಿಕ ಅಧಿಕಾರಿಗಳು ಆತನನ್ನು ವಿಚಾರಿಸಿದಾಗ ಅಕ್ರಮ ಚಿನ್ನ ಕಳ್ಳ ಸಾಗಾಣಿಗೆ ಬೆಳಕಿಗೆ ಬಂತು.

VISTARANEWS.COM


on

Passenger Arrest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಚಿನ್ನದ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಚಿನ್ನದ ಕಳ್ಳಸಾಗಾಣಿಕೆ ಪ್ರಕರಣ ಕೂಡ ಹೆಚ್ಚಾಗುತ್ತಿದೆ. ಜನರು ಅನೇಕ ರೀತಿಯಲ್ಲಿ ನಾನಾ ರೀತಿಯಲ್ಲಿ ಚಿನ್ನವನ್ನು ಕಳ್ಳಸಾಗಾಣಿಕೆ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ. ಇದೀಗ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ಅಂತಹದೊಂದು ಪ್ರಕರಣ ಬೆಳಕಿಗೆ ಬಂದಿದೆ. ಜೆಡ್ಡಾದಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಎಐ 992ರಲ್ಲಿ ಗುದದ್ವಾರದಲ್ಲಿ ಚಿನ್ನವಿಟ್ಟುಕೊಂಡು ಕಳ್ಳಸಾಗಾಣಿಕೆ ಮಾಡುತ್ತಿದ್ದ ಪ್ರಯಾಣಿಕನೊಬ್ಬನನ್ನು (Passenger Arrest) ಅಧಿಕಾರಿಗಳು ಬಂಧಿಸಿದ್ದಾರೆ.

ಏರ್ ಹೋಸ್ಟೆಸ್ ಪ್ರಯಾಣಿಕರಿಗೆ ನೀರು, ಚಹಾ ಮತ್ತು ಆಹಾರ ಸೇರಿದಂತೆ ಉಪಾಹಾರವನ್ನು ನೀಡುತ್ತಿದ್ದಾಗ ಆರೋಪಿ ಐದೂವರೆ ಗಂಟೆಗಳ ಪ್ರಯಾಣದ ಅವಧಿಯಲ್ಲಿ ಅವೆಲ್ಲವನ್ನು ನಿರಾಕರಿಸಿದ್ದಾನೆ. ಆತ ಆಹಾರವನ್ನು ನಿರಂತರವಾಗಿ ನಿರಾಕರಿಸಿದ್ದರಿಂದ ಅನುಮಾನಗೊಂಡ ಏರ್ ಹೋಸ್ಟೆಸ್ ಕ್ಯಾಪ್ಟನ್‍ಗೆ ಮಾಹಿತಿ ನೀಡಿದಳು. ಅವರು ಏರ್ ಟ್ರಾಫಿಕ್ ಕಂಟ್ರೋಲ್ ಮೂಲಕ ಭದ್ರತಾ ಸಂಸ್ಥೆಗಳಿಗೆ ಮಾಹಿತಿ ನೀಡಿದರು. ವಿಮಾನದಿಂದ ಇಳಿದ ನಂತರ ಆರೋಪಿಯ ಮೇಲೆ ಕಣ್ಗಾವಲು ಇಡಲಾಗಿತ್ತು.

ಕಸ್ಟಮ್ಸ್ ಕ್ಲಿಯರೆನ್ಸ್ ಮೂಲಕ ಹೊರಗೆ ಹೋಗಲು ಪ್ರಯತ್ನಿಸುತ್ತಿದ್ದಂತೆ ಅಧಿಕಾರಿಗಳು ಅವನನ್ನು ತಡೆದರು. ನಂತರ ಆತನನ್ನು ವಿಚಾರಿಸಿದಾಗ ಪ್ರಯಾಣಿಕನು ತನ್ನ ಗುದದ್ವಾರದಲ್ಲಿ ಚಿನ್ನದ ಪೇಸ್ಟ್ ಅನ್ನು ಅಡಗಿಸಿಟ್ಟಿದ್ದಾನೆ ಎಂಬುದು ಅಧಿಕಾರಿಗಳಿಗೆ ತಿಳಿದುಬಂದಿದೆ, ಅದನ್ನು ಅವನು ನಾಲ್ಕು ಅಂಡಾಕಾರದ ಕ್ಯಾಫ್ಸುಲ್‍ಗಳ ರೂಪದಲ್ಲಿ ಹೊರಗೆ ತೆಗೆದಿದ್ದಾನೆ ಎನ್ನಲಾಗಿದೆ. ಆ ಮೂಲಕ ಸುಮಾರು 69,16,169 ರೂ ಮೌಲ್ಯದ ಸುಮಾರು 1096.76 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಜೆಡ್ಡಾದಿಂದ ಚಿನ್ನವನ್ನು ಕಳ್ಳಸಾಗಣೆ ಮಾಡಿರುವುದಾಗಿ ಪ್ರಯಾಣಿಕ ಒಪ್ಪಿಕೊಂಡಿದ್ದು, ಕಸ್ಟಮ್ಸ್ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಆತನನ್ನು ಬಂಧಿಸಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಧಿಕಾರಿಗಳು ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: ತನ್ನ ಫಾಲೋವರ್ಸ್‌ಗಳನ್ನೇ ವೇಶ್ಯಾವಾಟಿಕೆಯಲ್ಲಿ ತೊಡಗಿಸುತ್ತಿದ್ದ ಖ್ಯಾತ ಮಾಡೆಲ್‌ಗೆ ಜೈಲು ಶಿಕ್ಷೆ!

ವಿಮಾನ ಪ್ರಯಾಣದ ವೇಳೆ ಪ್ರಯಾಣಿಕರಿಗೆ ಏರ್ ಹೋಸ್ಟೆಸ್ ಆಹಾರ ಅಥವಾ ಪಾನೀಯಗಳನ್ನು ನೀಡುತ್ತಾರೆ. ಒಂದು ವೇಳೆ ಪ್ರಯಾಣಿಕರು ಪದೇ ಪದೇ ಅದನ್ನು ನಿರಾಕರಿಸಿದರೆ ಅವರನ್ನು ಮೇಲ್ವಿಚಾರಣೆ ಮಾಡಲಾಗುತ್ತದೆ. ಯಾಕೆಂದರೆ ವಿಮಾನದಲ್ಲಿ ಪ್ರಯಾಣಿಸುವ ಪ್ರಯಾಣಿಕರು ಕೆಲವು ವೇಳೆ ಹೊರದೇಶಗಳಿಗೆ ಕಳ್ಳಸಾಗಾಣಿಕೆಗಳು ಮಾಡುತ್ತಿರುತ್ತಾರೆ. ಇಂತಹ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಗಟ್ಟಲು ವಿಮಾನಯಾನ ಸಂಸ್ಥೆಗಳು ಮತ್ತು ಅಧಿಕಾರಿಗಳು ಪ್ರಯಾಣಿಕರ ಮೇಲೆ ಕಣ್ಗಾವಲು ಇಟ್ಟಿರುತ್ತಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Mosquitoes Bite: ಎಣ್ಣೆ ಹೊಡೆಯುವವರನ್ನು ಸೊಳ್ಳೆಗಳು ಕಚ್ಚುವುದು ಹೆಚ್ಚು! ಇದಕ್ಕಿದೆ ವೈಜ್ಞಾನಿಕ ಕಾರಣ!

ಮಲೇರಿಯಾ, ಡೆಂಗ್ಯೂನಂತಹ ಸಾಂಕ್ರಾಮಿಕ ರೋಗಗಳಿಗೆ ಕಾರಣವಾಗುವ ಹೆಣ್ಣು ಸೊಳ್ಳೆಗಳು (Mosquitoes Bite) ಸಂತಾನೋತ್ಪತ್ತಿಗಾಗಿ ಮಾನವರನ್ನು ಕಚ್ಚುತ್ತವೆ. ಅದರಲ್ಲೂ ಕೆಲವರನ್ನು ಹೆಚ್ಚಾಗಿ ಕಚ್ಚುತ್ತವೆ. ಇದಕ್ಕೆ ಹಲವು ಪ್ರಮುಖ ಕಾರಣಗಳಿವೆ. ಇದರಲ್ಲಿ ರಕ್ತದ ಪ್ರಕಾರವೂ ಒಂದು ಪ್ರಮುಖ ಕಾರಣ ಎಂಬುದು ಗೊತ್ತಿದೆಯೇ? ಅದು ಹೇಗೆ, ಬೇರೆ ಯಾರಿಗೆಲ್ಲ ಹೆಚ್ಚಾಗಿ ಸೊಳ್ಳೆಗಳು ಕಚ್ಚುತ್ತವೆ ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

By

Mosquitoes Bite
Koo

ಒಂದೇ ಸಮಯದಲ್ಲಿ ಒಂದೇ ಸ್ಥಳದಲ್ಲಿ ಇದ್ದರೂ ಸಾಮಾನ್ಯವಾಗಿ ಕೆಲವರಿಗೆ ಮಾತ್ರ ಸೊಳ್ಳೆಗಳು (Mosquitoes Bite) ಹೆಚ್ಚಾಗಿ ಕಡಿಯುವುದನ್ನು ಕಾಣುತ್ತೇವೆ. ಆದರೆ ಯಾಕೆ ಎನ್ನುವ ಕುತೂಹಲವಂತೂ ಇದ್ದೇ ಇರುತ್ತದೆ. ಹೆಣ್ಣು ಸೊಳ್ಳೆಗಳು (female Mosquitoes) ಮಾತ್ರ ರಕ್ತದಿಂದ (blood) ಪ್ರೊಟೀನ್ ಗಳನ್ನು (proteins) ಪಡೆಯಲು ಮನುಷ್ಯರನ್ನು ಕಚ್ಚುತ್ತವೆ ಮತ್ತು ಬಳಿಕ ಮೊಟ್ಟೆಗಳನ್ನು ಇಡುತ್ತದೆ. ಅದರಲ್ಲೂ ಕೆಲವರಿಗೆ ಮಾತ್ರ ಹೆಚ್ಚಾಗಿ ಸೊಳ್ಳೆಗಳು ಕಚ್ಚುತ್ತವೆ.

ಕೆಲವರು ಸೊಳ್ಳೆಗಳಿಗೆ ಹೆಚ್ಚು ಆಕರ್ಷಕವಾಗಿರಲು ಹಲವು ಕಾರಣಗಳೂ ಇವೆ. ಬೆವರು, ಲ್ಯಾಕ್ಟಿಕ್ ಆಮ್ಲ, ಅಮೋನಿಯಾ ಮತ್ತು ಇತರ ಸಂಯುಕ್ತಗಳಿಂದ ಸೊಳ್ಳೆಗಳು ಕೆಲವರಿಗೆ ಹೆಚ್ಚಾಗಿ ಕಚ್ಚುತ್ತದೆ.

ಸೊಳ್ಳೆಗಳು ಮಲೇರಿಯಾ, ಝಿಕಾ ಮತ್ತು ಡೆಂಗ್ಯೂ ಜ್ವರದಂತಹ ಹಲವು ಸಾಂಕ್ರಾಮಿಕ ರೋಗಗಳನ್ನು ಹರಡುವ ಕಾರಣ ಸೊಳ್ಳೆ ಕಡಿತ ಹೆಚ್ಚು ಅಪಾಯಕಾರಿಯಾಗಿ ಪರಿಣಮಿಸುತ್ತದೆ.

ಸೂಳ್ಳೆಗಳು ಕೆಲವು ಜನರನ್ನು ಮಾತ್ರ ಹೆಚ್ಚಾಗಿ ಕಡಿಯಲು ಕಾರಣಗಳಿವೆ ಎನ್ನುತ್ತಾರೆ ವಿಜ್ಞಾನಿಗಳು. ಇದಕ್ಕಾಗಿ ವಿವಿಧ ಅಂಶಗಳ ಬಗ್ಗೆ ಸಂಶೋಧನೆ ನಡೆಸಲಾಗಿದ್ದು ಅದರಲ್ಲಿ ರಕ್ತದ ಪ್ರಕಾರವೂ ಒಂದು ಕಾರಣವಾಗಿದೆ.

Mosquitoes Bite


ರಕ್ತದ ಪ್ರಕಾರ ಹೇಗೆ ಕಾರಣ?

ಒಂದು ರಕ್ತದ ಪ್ರಕಾರವನ್ನು ಹೊಂದಿರುವ ಜನರು ಇತರರಿಗಿಂತ ಹೆಚ್ಚು ಸೊಳ್ಳೆ ಕಡಿತಕ್ಕೆ ಒಳಗಾಗುತ್ತಾರೆ. ಪೋಷಕರಿಂದ ಪಡೆದಿರುವ ವಿಭಿನ್ನ ರಕ್ತ ಪ್ರಕಾರಗಳನ್ನು ಹೊಂದಿರುವ ಜನರು ತಮ್ಮ ಕೆಂಪು ರಕ್ತ ಕಣಗಳ ಮೇಲ್ಮೈಯಲ್ಲಿ ನಿರ್ದಿಷ್ಟ ಪ್ರೋಟೀನ್‌ಗಳ (ಪ್ರತಿಜನಕ) ವಿಭಿನ್ನ ಸೆಟ್‌ಗಳನ್ನು ಹೊಂದಿರುತ್ತಾರೆ.

ಎ ಕೆಂಪು ರಕ್ತ ಕಣಗಳ ಮೇಲ್ಮೈಯಲ್ಲಿ ಎ ಪ್ರತಿಜನಕ ಮಾತ್ರ ಇರುತ್ತದೆ. ಬಿ ಕೆಂಪು ರಕ್ತ ಕಣಗಳ ಮೇಲ್ಮೈಯಲ್ಲಿ ಬಿ ಪ್ರತಿಜನಕ ಮಾತ್ರ, ಎಬಿ ಕೆಂಪು ರಕ್ತ ಕಣಗಳ ಮೇಲ್ಮೈಯಲ್ಲಿ ಎ ಮತ್ತು ಬಿ ಪ್ರತಿಜನಕ, ಒ ಕೆಂಪು ರಕ್ತ ಕಣಗಳ ಮೇಲ್ಮೈಯಲ್ಲಿ ಎ ಅಥವಾ ಬಿ ಪ್ರತಿಜನಕವಿರುವುದಿಲ್ಲ.

ಕೆಲವು ಜನರು ಲಾಲಾರಸ ಅಥವಾ ಕಣ್ಣೀರಿನಂತಹ ದೇಹದ ದ್ರವಗಳಲ್ಲಿ ಈ ಪ್ರತಿಜನಕಗಳನ್ನು ಹೊಂದಿರುತ್ತಾರೆ. ಎ ರಕ್ತದ ಪ್ರಕಾರವನ್ನು ಹೊಂದಿರುವವರು ಎ ಪ್ರಕಾರದ ಪ್ರತಿಜನಕವನ್ನು ಸ್ರವಿಸುತ್ತಾರೆ. ಒ ರಕ್ತದ ಗುಂಪು ಹೊಂದಿರುವವರು ಹೆಚ್ ಪ್ರತಿಜನಕವನ್ನು ಸ್ರವಿಸುತ್ತಾರೆ. ಅಧ್ಯಯನಗಳ ಪ್ರಕಾರ ಸೊಳ್ಳೆಗಳು ಇತರ ರಕ್ತ ಪ್ರಕಾರಗಳಿಗಿಂತ ಒ ರಕ್ತದ ಗುಂಪಿನ ಜನರಿಗೆ ಹೆಚ್ಚು ಆಕರ್ಷಿತವಾಗುತ್ತವೆ. ಇದಕ್ಕೆ ರಕ್ತದ ಪ್ರಕಾರ ಮತ್ತು ಸ್ರವಿಸುವ ಸ್ಥಿತಿ ಮುಖ್ಯ ಕಾರಣವಾಗಿದೆ.

ಸೊಳ್ಳೆಗಳು ಎ, ಬಿ ಪ್ರತಿಜನಕಕ್ಕಿಂತ ಹೆಚ್ ಪ್ರತಿಜನಕವನ್ನು ಹೊಂದಿರುವ ಜನರತ್ತ ಹೆಚ್ಚು ಆಕರ್ಷಿತವಾಗುತ್ತವೆ. ಯಾಕೆಂದರೆ ಇದು ಲಾಲಾರಸ ಮತ್ತು ಕಣ್ಣೀರಿನಲ್ಲಿ ಕಂಡುಬರುವುದರಿಂದ ಸೊಳ್ಳೆಗಳು ಒಬ್ಬ ವ್ಯಕ್ತಿಯನ್ನು ಸಮೀಪಿಸಿದಾಗ ಈ ಪ್ರತಿಜನಕಗಳನ್ನು ಬಹುಬೇಗನೆ ಗ್ರಹಿಸುತ್ತದೆ ಎನ್ನಲಾಗುತ್ತದೆ.

ಇನ್ನು ಹಲವು ಕಾರಣಗಳು

ಸೊಳ್ಳೆಗಳು ನಮ್ಮತ್ತ ಹೆಚ್ಚು ಆಕರ್ಷಿತವಾಗಲು ಇನ್ನು ಹಲವು ಕಾರಣಗಳಿವೆ.

ಇಂಗಾಲದ ಡೈಆಕ್ಸೈಡ್

ಉಸಿರಾಡುವಾಗ ಇಂಗಾಲದ ಡೈಆಕ್ಸೈಡ್ ಹೆಚ್ಚಿನ ಪ್ರಮಾಣದಲ್ಲಿ ಬಿಡುಗಡೆಯಾದರೆ ಸೊಳ್ಳೆಯು ಇವರತ್ತ ಬಹುಬೇಗನೆ ಆಕರ್ಷಿತಗೊಳ್ಳುತ್ತದೆ. ಗಾಳಿಯಲ್ಲಿ ಇಂಗಾಲದ ಡೈಆಕ್ಸೈಡ್‌ನ ಹೆಚ್ಚಳವು ಹತ್ತಿರದಲ್ಲಿರುವ ಸೊಳ್ಳೆಯನ್ನು ಎಚ್ಚರಿಸುತ್ತದೆ.

ದೇಹದ ವಾಸನೆ

ದೇಹದ ವಾಸನೆಯು ಇತರ ಜನರಿಗಿಂತ ಸೊಳ್ಳೆಗಳು ನಿಮ್ಮತ್ತ ಆಕರ್ಷಿತರಾಗಲು ಇನ್ನೊಂದು ಪ್ರಮುಖ ಕಾರಣ. ಯಾಕೆಂದರೆ ವಾಸನೆಯನ್ನು ಬಹುಬೇಗನೆ ಸೊಳ್ಳೆಗಳು ಗ್ರಹಿಸುತ್ತವೆ.
ಚರ್ಮದ ಮೇಲಿನ ಸಂಯುಕ್ತಗಳಲ್ಲಿ ಅಮೋನಿಯಾ ಮತ್ತು ಲ್ಯಾಕ್ಟಿಕ್ ಆಮ್ಲ ಸೊಳ್ಳೆಗಳನ್ನು ಬಹುಬೇಗನೆ ಆಕರ್ಷಿಸುತ್ತವೆ. ಚರ್ಮದ ಮೇಲೀನಾ ಬ್ಯಾಕ್ಟೀರಿಯಾಗಳು ಕೂಡ ದೇಹದ ವಾಸನೆಗೆ ಕಾರಣವಾಗಿರುತ್ತದೆ.

Mosquitoes Bite


ದೇಹದ ತಾಪಮಾನ

ದೇಹದ ತಾಪಮಾನವು ಸೊಳ್ಳೆಗಳನ್ನು ಆಕರ್ಷಿಸಲು ಕಾರಣವಾಗಿರುತ್ತದೆ. ದೇಹದ ತಾಪವು ಹೆಚ್ಚು ಇಂಗಾಲದ ಡೈಆಕ್ಸೈಡ್ ಉತ್ಪತ್ತಿಯಾಗಲು, ಕಾರಣವಾಗಿರುತ್ತದೆ.

ಬಣ್ಣ

ಈ ಬಗ್ಗೆ ಸ್ಪಷ್ಟತೆ ಇಲ್ಲ. ಆದರೂ ಸೊಳ್ಳೆಗಳು ಕಪ್ಪು ವಸ್ತುಗಳಿಗೆ ಹೆಚ್ಚು ಆಕರ್ಷಿತವಾಗುತ್ತವೆ ಎಂಬುದನ್ನು ಅಧ್ಯಯನವೊಂದು ಹೇಳಿದೆ. ನೀವು ಗಾಢ ಬಣ್ಣಗಳನ್ನು ಧರಿಸಿದರೆ ನೀವು ಹೆಚ್ಚು ಸೊಳ್ಳೆ ಕಡಿತವನ್ನು ಪಡೆಯುತ್ತೀರಿ ಎನ್ನಬಹುದು.

ಮದ್ಯಪಾನ

ಸೊಳ್ಳೆಗಳು ಮದ್ಯಪಾನ ಮಾಡುವ ಜನರತ್ತ ಹೆಚ್ಚು ಆಕರ್ಷಿತವಾಗಬಹುದು. ಇದರಲ್ಲಿ ವಾಸನೆ ಪ್ರಮುಖ ಅಂಶವಾಗಿದೆ ಎನ್ನಲಾಗುತ್ತದೆ. ಅಂದರೆ ಮದ್ಯಪಾನ ಮಾಡುವವರಿಗೆ ಸೊಳ್ಳೆಗಳು ಹೆಚ್ಚು ಕಚ್ಚುತ್ತವೆ ಎಂದಾಯಿತು!

ಇದನ್ನೂ ಓದಿ: Chandipura Virus: ಡೆಂಗ್ಯೂ ಹಾವಳಿ ನಡುವೆ ಕಾಡುತ್ತಿದೆ ಚಾಂದಿಪುರ ವೈರಸ್; ಇದುವರೆಗೆ 6 ಮಕ್ಕಳು ಬಲಿ: ಏನಿದರ ಲಕ್ಷಣ?

ಗರ್ಭಿಣಿಯರು

ಗರ್ಭಿಣಿಯರಲ್ಲದ ಮಹಿಳೆಯರಿಗೆ ಹೋಲಿಸಿದರೆ ಹೆಚ್ಚಿನ ಸಂಖ್ಯೆಯ ಸೊಳ್ಳೆಗಳು ಗರ್ಭಿಣಿಯರತ್ತ ಆಕರ್ಷಿತವಾಗುತ್ತದೆ. ಗರ್ಭಿಣಿಯರು ಹೆಚ್ಚು ಇಂಗಾಲದ ಡೈಆಕ್ಸೈಡ್ ಅನ್ನು ಬಿಡುಗಡೆ ಮಾಡುವುದರಿಂದ ಮತ್ತು ಹೆಚ್ಚಿನ ದೇಹದ ಉಷ್ಣತೆಯನ್ನು ಹೊಂದಿರುವುದರಿಂದ ಇವರತ್ತ ಸೊಳ್ಳೆಗಳು ಹೆಚ್ಚು ಆಕರ್ಷಿತರಾಗುತ್ತಾರೆ.

Continue Reading

Latest

Actress Hina Khan: ಕಿಮೋಥೆರಪಿ ಅನುಭವ ಹಂಚಿಕೊಂಡಿದ್ದಾರೆ ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿರುವ ಖ್ಯಾತ ಬಾಲಿವುಡ್‌ ನಟಿ

Actress Hina Khan: ಬಾಲಿವುಡ್‌ನ ಬೇಡಿಕೆಯ ನಟಿಯರಲ್ಲಿ ಒಬ್ಬರಾದ ಹೀನಾ ಖಾನ್ ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ತಮ್ಮ ಕ್ಯಾನ್ಸರ್ ಜರ್ನಿಯ ಕುರಿತ ಪ್ರತಿಯೊಂದು ವಿಷಯದ ಬಗ್ಗೆ ನಟಿ ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಹಂಚಿಕೊಳುತ್ತಿದ್ದಾರೆ. ಕೀಮೋಥೆರಪಿಗಾಗಿ ತಮ್ಮ ಉದ್ದನೆಯ ಕೂದಲನ್ನು ಇತ್ತೀಚೆಗೆ ಕತ್ತರಿಸಿದ್ದಾರೆ. ಈ ಫೋಟೊದ ಜೊತೆಗೆ ಈಗ ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೊಗಳನ್ನು ತಮ್ಮ ಇನ್ಸ್ಟಾಗ್ರಾಂ ಸ್ಟೋರಿಗಳಲ್ಲಿ ಹಂಚಿಕೊಂಡಿದ್ದಾರೆ.

VISTARANEWS.COM


on

Actress Hina Khan
Koo

ಮುಂಬೈ : ಬಾಲಿವುಡ್‍ನ ಬಹುಬೇಡಿಕೆಯ ನಟಿಯರಲ್ಲಿ ಒಬ್ಬರಾದ ಹೀನಾ ಖಾನ್ (Actress Hina Khan) ಅವರು ತಮ್ಮ ನಟನೆಯ ಮೂಲಕ ಸಾಕಷ್ಟು ಹೆಸರು ಮಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ಅವರು ಇತ್ತೀಚೆಗೆ ತಮ್ಮ ಅಧಿಕೃತ ಹ್ಯಾಂಡಲ್‍ನಲ್ಲಿ ತಾನು ಮೂರನೇ ಹಂತದ ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿದ್ದೇನೆ ಎಂದು ಅಭಿಮಾನಿಗಳಿಗೆ ತಿಳಿಸಿದ್ದರು.

ತಮ್ಮ ಸ್ತನ ಕ್ಯಾನ್ಸರ್‌ ಜರ್ನಿಯ ಕುರಿತ ಪ್ರತಿಯೊಂದು ವಿಷಯದ ಬಗ್ಗೆ ನಟಿ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಹಂಚಿಕೊಳುತ್ತಿದ್ದಾರೆ. ಕೀಮೋಥೆರಪಿಗಾಗಿ ತಮ್ಮ ಉದ್ದನೆಯ ಕೂದಲನ್ನು ಇತ್ತೀಚೆಗೆ ಕತ್ತರಿಸಿದ್ದಾರೆ. ಈ ಫೋಟೊದ ಜೊತೆಗೆ ಈಗ ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೊಗಳನ್ನು ತಮ್ಮ ಇನ್‍ಸ್ಟಾಗ್ರಾಂ ಸ್ಟೋರಿಗಳಲ್ಲಿ ಹಂಚಿಕೊಂಡಿದ್ದಾರೆ.

ಹಾಗೇ ಬುಧವಾರ, ಅವರು ಮತ್ತೊಮ್ಮೆ ತಮ್ಮ ಇನ್‍ಸ್ಟಾಗ್ರಾಂ ಸ್ಟೋರಿಯಲ್ಲಿ ಒಂದು ಟಿಪ್ಪಣಿಯನ್ನು ಬರೆದಿದ್ದಾರೆ ಮತ್ತು ಅದರಲ್ಲಿ ಅವರು ನಿರಂತರವಾಗಿ ನೋವಿನಿಂದ ಬಳಲುತ್ತಿದ್ದೇನೆ ಎಂದು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಅಲ್ಲದೇ ಆಸ್ಪತ್ರೆಯ ಹೌಸ್ ಕೀಪಿಂಗ್ ಸಿಬ್ಬಂದಿ ತನಗೆ ಬರೆದ ವಿಶೇಷ ಕೈಬರಹದ ಪತ್ರದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ.

ಈ ಪತ್ರದಲ್ಲಿ ಹೌಸ್‌ ಕೀಪಿಂಗ್‌ ಸಿಬ್ಬಂದಿಗಳು ನಟಿಗೆ ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ ಹಾಗೇ ಶಸ್ತ್ರಚಿಕಿತ್ಸೆಗೆ ಒಳಪಟ್ಟ ನಟಿ ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಹಾರೈಸಿದ್ದಾರಂತೆ. ತನ್ನ ಇನ್‍ಸ್ಟಾಗ್ರಾಂ ಸ್ಟೋರಿಗಳಲ್ಲಿ ಈ ಪತ್ರದ ಫೋಟೋವನ್ನು ಹಂಚಿಕೊಂಡ ನಟಿ ಇವರ ಪ್ರೀತಿ, ಹಾರೈಕೆ ತಾನು ಬೇಗನೆ ಚೇತರಿಸಿಕೊಳ್ಳುವಂತೆ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕುವೈಟ್​ನಲ್ಲಿ ಈ ಚಪ್ಪಲಿಗೆ 1 ಲಕ್ಷ ರೂಪಾಯಿಯಂತೆ; ನಮ್ಮಲ್ಲಿ ಇದು ಬಾತ್​ರೂಮ್​ಗೆ ಹೋಗುವ ಚಪ್ಪಲಿ ಎಂದ ನೆಟ್ಟಿಗರು!

ಹೀನಾ ಖಾನ್ ಒಬ್ಬ ಖ್ಯಾತ ನಟಿ. ಇವರು ಸೋಶಿಯಲ್ ಮೀಡಿಯಾದಲ್ಲಿ ಭಾರಿ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹಾಗೇ ಅವರು ತಮ್ಮ ಜೀವನ ಆಯ್ಕೆಗಳಿಂದಾಗಿ ಸೋಶಿಯಲ್ ಮೀಡಿಯಾದಲ್ಲಿ ಹಲವು ಬಾರಿ ಟೀಕೆಗೆ ಒಳಗಾಗಿದ್ದಾರೆ. ಆದರೆ ನಟಿ ಈ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ.

ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನಟಿ ಚಿಕಿತ್ಸೆ ಪಡೆಯಲು ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ದಾಖಲಾಗಿದ್ದು, ನಟಿ ತನ್ನ ಚಿಕಿತ್ಸೆ ಮತ್ತು ಕೀಮೋಥೆರಪಿಯ ಬಗ್ಗೆ ತನ್ನ ಫಾಲೋವರ್ಸ್‌ಗಳಿಗೆ ಅಪ್‍ಡೇಟ್ ನೀಡುತ್ತಿರುತ್ತಾರೆ. ‘ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ’ ಚಿತ್ರದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಿದ ನಂತರ ನಟಿ ಹೀನಾ ಖಾನ್ ಅವರು ಟಿವಿ ಆ್ಯಕ್ಟರ್ ಆಗಿ ಜನಪ್ರಿಯರಾದರು. ಮುಂದೆ ಅವರು ಶಿಂಡಾ ಶಿಂಡಾ ನೋ ಪಾಪಾ ಚಿತ್ರದಲ್ಲಿ ಜಿಪ್ಪಿ ಗ್ರೆವಾಲ್ ಅವರೊಂದಿಗೆ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

Continue Reading

ಆರೋಗ್ಯ

Walking Benefits: ಊಟದ ಬಳಿಕ ಕಿರು ನಡಿಗೆಯಿಂದ ಸಿಗುವ ಆರೋಗ್ಯ ಲಾಭಗಳು ಏನೇನು?

ಉತ್ತಮ ಆರೋಗ್ಯಕ್ಕಾಗಿ ದೈಹಿಕ ಚಟುವಟಿಕೆ ಬಹುಮುಖ್ಯವಾಗಿದೆ. ಅದರಲ್ಲೂ ನಡಿಗೆ (Walking Benefits) ದೇಹಕ್ಕೆ ಸಂಪೂರ್ಣ ವ್ಯಯಮವನ್ನು ಒದಗಿಸುತ್ತದೆ. ದೈನಂದಿನ ದಿನಚರಿಯಲ್ಲಿ ಊಟದ ಅನಂತರ ನಡಿಗೆಯನ್ನು ಸೇರಿಸುವುದು ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಆರೋಗ್ಯವನ್ನು ಗಮನಾರ್ಹವಾಗಿ ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ಹೆಚ್ಚು ಸಮತೋಲಿತ ಮತ್ತು ಆರೋಗ್ಯಕರ ಜೀವನಶೈಲಿಗೆ ವಿಶೇಷವಾದ ಕೊಡುಗೆಯನ್ನು ನೀಡುತ್ತದೆ. ಸಾಕಷ್ಟು ಆರೋಗ್ಯ ಪ್ರಯೋಜನವನ್ನು ಒದಗಿಸುತ್ತದೆ.

VISTARANEWS.COM


on

By

Walking Benefits
Koo

ನಿತ್ಯದ ಒತ್ತಡದ ಜಂಜಾಟದಲ್ಲಿ ಈಗಿನ ಜನರಿಗೆ ನೆಮ್ಮದಿಯಾಗಿ ಕುಳಿತು ಊಟ (lunch) ಮಾಡಲು ಪುರುಸೊತ್ತಿಲ್ಲ. ಇದ್ದರೂ ಮೊಬೈಲ್ (mobile), ಟಿವಿಯಲ್ಲಿ (TV) ಮಗ್ನರಾಗಿ ಬಿಡುತ್ತಾರೆ. ಇನ್ನು ಊಟವಾದ ಬಳಿಕ ಮೊಬೈಲ್ ಕೈಯಲ್ಲಿ ಹಿಡಿದು ಕುಳಿತು ಬಿಡುತ್ತಾರೆ. ಹೀಗಾಗಿ ಊಟವಾದ ಬಳಿಕ ನಡೆಯುವ ಅಭ್ಯಾಸ (Walking Benefits) ಬಹುತೇಕ ಮಂದಿಯಲ್ಲಿ ಕಡಿಮೆಯಾಗಿದೆ.

ಊಟದ ಅನಂತರ ಕೊಂಚ ನಡೆದರೆ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ. ಉತ್ತಮ ಆರೋಗ್ಯಕ್ಕಾಗಿ ದೈಹಿಕ ಚಟುವಟಿಕೆ ಬಹುಮುಖ್ಯವಾಗಿದೆ. ಅದರಲ್ಲೂ ನಡಿಗೆ ದೇಹಕ್ಕೆ ಸಂಪೂರ್ಣ ವ್ಯಯಮವನ್ನು ಒದಗಿಸುತ್ತದೆ.
ನಡಿಗೆಯು ಹೃದಯರಕ್ತನಾಳದ ಆರೋಗ್ಯವನ್ನು ಸುಧಾರಿಸುವ ವ್ಯಾಯಾಮವಾಗಿದೆ. ಇದು ಸ್ನಾಯುಗಳನ್ನು ಬಲಪಡಿಸುತ್ತದೆ, ಮಾನಸಿಕ ಯೋಗಕ್ಷೇಮವನ್ನು ಹೆಚ್ಚಿಸುತ್ತದೆ ಮತ್ತು ತೂಕ ನಿರ್ವಹಣೆಯಲ್ಲಿ ಸಹಾಯ ಮಾಡುತ್ತದೆ.

ಊಟದ ಅನಂತರ ನಡೆಯುವುದು ವಿಶೇಷವಾಗಿ ಅನುಕೂಲಕರವಾಗಿದೆ. ಯಾಕೆಂದರೆ ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಮತ್ತು ವಿಶ್ರಾಂತಿಗೆ ದೇಹ ಮತ್ತು ಮನಸ್ಸನ್ನು ಉತ್ತೇಜಿಸುತ್ತದೆ. ಊಟದ ಅನಂತರದ ಚಟುವಟಿಕೆಯು ಉಬ್ಬುವುದು ಮತ್ತು ಅಜೀರ್ಣದಂತಹ ಸಮಸ್ಯೆಗಳನ್ನು ದೂರ ಮಾಡುತ್ತದೆ. ಮಧುಮೇಹದಂತಹ ಚಯಾಪಚಯ ಅಸ್ವಸ್ಥತೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ತಿಂದ ಅನಂತರ ಸಣ್ಣ ನಡಿಗೆಯನ್ನು ಅಳವಡಿಸಿಕೊಳ್ಳುವುದರಿಂದ ಆರೋಗ್ಯವನ್ನು ಸ್ವಸ್ಥವಾಗಿ ಕಾಪಾಡಿಕೊಳ್ಳಬಹುದು.

Walking Benefits


ಊಟದ ಬಳಿಕ ನಡಿಗೆಯಿಂದ ಏನು ಪ್ರಯೋಜನ?

ಮಧ್ಯಾಹ್ನ ಮತ್ತು ರಾತ್ರಿ ಊಟದ ಬಳಿಕ ಕನಿಷ್ಠ ನೂರು ಹೆಜ್ಜೆ ನಡೆದರೆ ಸಾಕಷ್ಟು ಪ್ರಯೋಜನಗಳಿವೆ. ಅವುಗಳಲ್ಲಿ ಮುಖ್ಯವಾಗಿ:

ಹೃದಯ ರಕ್ತನಾಳದ ಆರೋಗ್ಯವನ್ನು ಹೆಚ್ಚಿಸುತ್ತದೆ

ಊಟದ ಅನಂತರ ಲಘು ನಡಿಗೆಯಲ್ಲಿ ತೊಡಗುವುದರಿಂದ ರಕ್ತದೊತ್ತಡ, ಎಲ್‌ಡಿಎಲ್ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವ ಮೂಲಕ ಹೃದಯರಕ್ತನಾಳದ ಆರೋಗ್ಯವನ್ನು ಸುಧಾರಿಸಬಹುದು. ಇದು ಉತ್ತಮ ರಕ್ತಪರಿಚಲನೆ ಮತ್ತು ಹೃದಯದ ಕಾರ್ಯವನ್ನು ಉತ್ತೇಜಿಸುತ್ತದೆ. ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ. ಹೃದಯರಕ್ತನಾಳದ ದಕ್ಷತೆಯನ್ನು ಹೆಚ್ಚಿಸುತ್ತದೆ.

ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ

ದೇಹದ ಸ್ವಾಭಾವಿಕ ಮೂಡ್ ಎಲಿವೇಟರ್‌ಗಳಾದ ಎಂಡಾರ್ಫಿನ್‌ಗಳನ್ನು ಬಿಡುಗಡೆ ಮಾಡುವ ಮೂಲಕ ವಾಕಿಂಗ್ ಒತ್ತಡ ಮತ್ತು ಆತಂಕವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಊಟದ ಅನಂತರದ ನಡಿಗೆಯು ದೇಹಕ್ಕೆ ವಿಶ್ರಾಂತಿಯನ್ನು ಕೊಡುತ್ತದೆ. ಮಾನಸಿಕ ಆಯಾಸವನ್ನು ಕಡಿಮೆ ಮಾಡುತ್ತದೆ ಮತ್ತು ಯೋಗಕ್ಷೇಮದ ಪ್ರಜ್ಞೆಯನ್ನು ಉತ್ತೇಜಿಸುತ್ತದೆ. ಮಾನಸಿಕ ಆರೋಗ್ಯ ಮತ್ತು ಒಟ್ಟಾರೆ ಜೀವನದ ಗುಣಮಟ್ಟಕ್ಕೆ ಉತ್ತಮ ಕೊಡುಗೆ ನೀಡುತ್ತವೆ.

ನಿದ್ರೆಯ ಗುಣಮಟ್ಟವನ್ನು ಸುಧಾರಿಸುತ್ತದೆ

ವಾಕಿಂಗ್‌ನಂತಹ ದೈಹಿಕ ಚಟುವಟಿಕೆಯು ಸಿರ್ಕಾಡಿಯನ್ ಲಯ ಮತ್ತು ವಿಶ್ರಾಂತಿಯನ್ನು ಉತ್ತೇಜಿಸುವ ಮೂಲಕ ನಿದ್ರೆಯ ಗುಣಮಟ್ಟವನ್ನು ಹೆಚ್ಚಿಸುತ್ತದೆ. ರಾತ್ರಿಯ ಊಟದ ಅನಂತರ ನಡೆಯುವುದು ನಿರ್ದಿಷ್ಟವಾಗಿ ವಿಶ್ರಾಂತಿ ಪಡೆಯಲು ಮತ್ತು ರಾತ್ರಿಯ ನಿದ್ರೆಗಾಗಿ ತಯಾರಾಗಲು ಸಹಾಯ ಮಾಡುತ್ತದೆ.

ಶಕ್ತಿಯ ಮಟ್ಟವನ್ನು ಹೆಚ್ಚಿಸುತ್ತದೆ

ಊಟದ ಅನಂತರ ನಡೆಯುವುದರಿಂದ ದೇಹದಾದ್ಯಂತ ರಕ್ತಪರಿಚಲನೆ ಮತ್ತು ಆಮ್ಲಜನಕದ ಹರಿವನ್ನು ಹೆಚ್ಚಿಸುವ ಮೂಲಕ ಶಕ್ತಿಯ ಮಟ್ಟವನ್ನು ಹೆಚ್ಚಿಸಬಹುದು. ಇದರಿಂದಾಗಿ ಹೆಚ್ಚು ಉತ್ಸಾಹದ ಅನುಭವ ಸಿಗುತ್ತದೆ. ದೈನಂದಿನ ಕೆಲಸಗಳಲ್ಲಿ ನಿರಂತರ ಶಕ್ತಿಯ ಮಟ್ಟ ಹೆಚ್ಚಿಸಲು ಇದು ಸಹಾಯ ಮಾಡುತ್ತದೆ.

ಆರೋಗ್ಯಕರ ಕರುಳಿನ ಸೂಕ್ಷ್ಮಜೀವಿಯನ್ನು ಉತ್ತೇಜಿಸುತ್ತದೆ

ವಾಕಿಂಗ್‌ನಂತಹ ನಿಯಮಿತ ದೈಹಿಕ ಚಟುವಟಿಕೆಯು ಕರುಳಿನ ಸೂಕ್ಷ್ಮಜೀವಿಯ ಮೇಲೆ ಧನಾತ್ಮಕವಾಗಿ ಪ್ರಭಾವ ಬೀರುತ್ತದೆ. ಸರಿಯಾದ ಜೀರ್ಣಕ್ರಿಯೆ, ಪ್ರತಿರಕ್ಷಣಾ ಕಾರ್ಯ, ಮತ್ತು ಮಾನಸಿಕ ಆರೋಗ್ಯಕ್ಕೂ ಆರೋಗ್ಯಕರ ಕರುಳಿನ ಸೂಕ್ಷ್ಮಾಣುಜೀವಿ ಅತ್ಯಗತ್ಯ. ವಾಕಿಂಗ್ ಕರುಳಿನ ಬ್ಯಾಕ್ಟೀರಿಯಾಗಳ ನಡುವೆ ವೈವಿಧ್ಯತೆ ಮತ್ತು ಸಮತೋಲನವನ್ನು ಉತ್ತೇಜಿಸುವ ಮೂಲಕ ಕರುಳಿನ ಆರೋಗ್ಯವನ್ನು ಕಾಪಾಡುತ್ತದೆ.

Walking Benefits


ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ

ನಡಿಗೆಯು ಗ್ಯಾಸ್ಟ್ರಿಕ್ ಜ್ಯೂಸ್ ಮತ್ತು ಆಹಾರವನ್ನು ಒಡೆಯಲು ಅಗತ್ಯವಾದ ಕಿಣ್ವಗಳ ಉತ್ಪಾದನೆಯನ್ನು ಉತ್ತೇಜಿಸುವ ಮೂಲಕ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಇದು ಉಬ್ಬುವುದು, ಮಲಬದ್ಧತೆ ಮತ್ತು ಅಜೀರ್ಣದಂತಹ ಸಮಸ್ಯೆಗಳನ್ನು ತಡೆಯಲು ಸಹಾಯ ಮಾಡುತ್ತದೆ.

ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ

ಊಟದ ಅನಂತರದ ನಡಿಗೆಯು ಇನ್ಸುಲಿನ್‌ಗೆ ದೇಹದ ಸೂಕ್ಷ್ಮತೆಯನ್ನು ಹೆಚ್ಚಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮಧುಮೇಹ ಹೊಂದಿರುವ ವ್ಯಕ್ತಿಗಳಿಗೆ ಇದು ವಿಶೇಷವಾಗಿ ಪ್ರಯೋಜನಕಾರಿಯಾಗಿದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸುವುದರಿಂದ ಶಕ್ತಿಯ ಕುಸಿತವನ್ನು ತಡೆಯಬಹುದು ಮತ್ತು ಮಧುಮೇಹಕ್ಕೆ ಸಂಬಂಧಿಸಿದ ದೀರ್ಘಕಾಲೀನ ತೊಡಕುಗಳ ಅಪಾಯವನ್ನು ಕಡಿಮೆ ಮಾಡಬಹುದು.

ತೂಕ ನಿರ್ವಹಣೆಗೆ ಸಹಾಯ

ಊಟದ ಅನಂತರ ನಡೆಯುವುದು ಕ್ಯಾಲೊರಿಗಳನ್ನು ಸುಡುಲು ಸಹಾಯ ಮಾಡುತ್ತದೆ. ಇದು ದೇಹದ ತೂಕ ನಿರ್ವಹಣೆಗೆ ಸಹಾಯ ಮಾಡುತ್ತದೆ. ಈ ಚಟುವಟಿಕೆಯು ಚಯಾಪಚಯವನ್ನು ಹೆಚ್ಚಿಸುತ್ತದೆ ಮತ್ತು ಹೆಚ್ಚುವರಿ ಕ್ಯಾಲೊರಿಗಳನ್ನು ಕೊಬ್ಬಿನಂತೆ ಸಂಗ್ರಹಿಸುವ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ. ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳುವುದು ಬೊಜ್ಜು ಸಂಬಂಧಿತ ಕಾಯಿಲೆಗಳಾದ ಹೃದ್ರೋಗ, ಪಾರ್ಶ್ವವಾಯು ಮತ್ತು ಕೆಲವು ಕ್ಯಾನ್ಸರ್‌ಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ: Tulsi Tea Benefits: ನಿತ್ಯವೂ ತುಳಸಿ ಚಹಾ ಕುಡಿಯುವುದರಿಂದ ಏನೆಲ್ಲ ಲಾಭಗಳಿವೆ ಗೊತ್ತೇ?

ಮಾನಸಿಕ ಆರೋಗ್ಯಕ್ಕೆ ಒಳ್ಳೆಯದು

ನಡಿಗೆಯು ಮೆದುಳಿಗೆ ರಕ್ತದ ಹರಿವನ್ನು ಉತ್ತೇಜಿಸುತ್ತದೆ. ಇದು ಅರಿವಿನ ಕಾರ್ಯ, ಸ್ಮರಣೆ ಮತ್ತು ಏಕಾಗ್ರತೆಯನ್ನು ಸುಧಾರಿಸುತ್ತದೆ. ಊಟದ ಅನಂತರ ಒಂದು ಸಣ್ಣ ನಡಿಗೆಯು ಮನಸ್ಸನ್ನು ಉಲ್ಲಾಸಗೊಳಿಸಲು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸಮಸ್ಯೆ-ಪರಿಹರಿಸುವ ಸಾಮರ್ಥ್ಯವನ್ನು ಸುಧಾರಿಸುತ್ತದೆ ಮತ್ತು ಸೃಜನಶೀಲತೆಯನ್ನು ಹೆಚ್ಚಿಸುತ್ತದೆ. ಒಟ್ಟಾರೆ ಮಾನಸಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ.

Continue Reading

ರಾಜಕೀಯ

Karnataka Jobs Reservation: ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ಉದ್ಯೋಗ ಮೀಸಲು ಸಾಧ್ಯವೆ? ತೊಡಕುಗಳು ಏನೇನು?

ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ.75 ಮೀಸಲಾತಿ (Karnataka Jobs Reservation) ನಿಗದಿಪಡಿಸುವ ಕರಡು ಮಸೂದೆಗೆ ಕರ್ನಾಟಕದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ. ಇದಕ್ಕೆ ಖಾಸಗಿ ಕಂಪನಿಗಳ ಪ್ರಮುಖರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಸ್ಥಳೀಯರಿಂದ ಸಂತಸ ವ್ಯಕ್ತವಾಗಿದೆ. ಈ ಕಾಯಿದೆಯ ಹಿನ್ನೆಲೆ ಮುನ್ನೆಲೆ ಏನೇನು ಎಂಬ ವಿಸ್ತೃತ ಮಾಹಿತಿ ಇಲ್ಲಿದೆ.

VISTARANEWS.COM


on

By

Karnataka Jobs Reservation
Koo

ರಾಜ್ಯದ ಖಾಸಗಿ ಕೈಗಾರಿಕೆಗಳು (Private industry) ಹಾಗೂ ಇತರೆ ಸಂಸ್ಥೆಗಳಲ್ಲಿ ಸ್ಥಳೀಯರಿಗೆ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ. 50 ಮತ್ತು ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ. 75ರಷ್ಟು ಮೀಸಲಾತಿ (Karnataka Jobs Reservation) ಕಡ್ಡಾಯಗೊಳಿಸಿರುವ ಕರಡು ಮಸೂದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramiah) ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ (karnataka Cabinet meeting) ಅನುಮೋದನೆ ನೀಡಿಲಾಗಿದ್ದು, ಇದಕ್ಕೆ ಉದ್ಯಮ ರಂಗದ ಪ್ರಮುಖರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಆದರೆ, ಈ ಕಾಯಿದೆ ಜಾರಿಯಾದರೆ ಕನ್ನಡಿಗರಿಗೆ ಉದ್ಯೋಗದಲ್ಲಿ ನ್ಯಾಯ ಸಿಗಲಿದೆ ಎಂಬ ಸಂತಸ ಸ್ಥಳೀಯ ಯುವ ಜನತೆಯಿಂದ ವ್ಯಕ್ತವಾಗುತ್ತಿದೆ.

ಈ ಮಸೂದೆಯಲ್ಲಿ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ. 50ರಷ್ಟು ಮತ್ತು ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ. 75ರಷ್ಟು ಸ್ಥಳೀಯರಿಗೆ ಮೀಸಲಾತಿಯನ್ನು ಕಡ್ಡಾಯಗೊಳಿಸುತ್ತದೆ. ಸಾಕಷ್ಟು ಅರ್ಹ ಅಭ್ಯರ್ಥಿಗಳು ಇಲ್ಲದೇ ಇದ್ದರೆ ಸರ್ಕಾರದ ಸಹಯೋಗದೊಂದಿಗೆ ಉದ್ಯಮವು ಮೂರು ವರ್ಷಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ತರಬೇತಿ ನೀಡಿ ಅವರನ್ನು ತೊಡಗಿಸಿಕೊಳ್ಳಬೇಕು. ಪ್ರಸ್ತಾವಿತ ಕಾನೂನಿನ ನಿಬಂಧನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಉದ್ಯಮಕ್ಕೆ ಮೂರು ವರ್ಷಗಳ ಕಾಲಾವಕಾಶ ನೀಡಲು ಸರ್ಕಾರ ಯೋಜನೆ ರೂಪಿಸುತ್ತಿದೆ.

ಮೂರು ವರ್ಷಗಳ ಆನಂತರವೂ ಉದ್ಯಮಕ್ಕೆ ಈ ಸಮಸ್ಯೆ ಎದುರಾದರೆ ತರಬೇತಿಯ ಅನಂತರವೂ ಸಾಕಷ್ಟು ಸೂಕ್ತ ಸ್ಥಳೀಯರು ಲಭ್ಯವಾಗದೇ ಇದ್ದರೆ ವಿಚಾರಣೆಯ ಅನಂತರ ಉದ್ಯಮವನ್ನು ಮೀಸಲಾತಿ ನಿಬಂಧನೆಗಳಿಂದ ವಿನಾಯಿತಿ ನೀಡುವ ಸರ್ಕಾರದ ಅಧಿಕಾರವನ್ನು ಮಸೂದೆ ಒದಗಿಸುತ್ತದೆ. ವೃತ್ತಿಪರರನ್ನು ನೇಮಿಸಿಕೊಳ್ಳಲು ಕಂಪೆನಿಗಳಿಗೆ ಅವಕಾಶವನ್ನು ಒದಗಿಸುತ್ತದೆ. ಆದರೆ ಈ ಅವಕಾಶ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ. 25ರಷ್ಟು ಮತ್ತು ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ. 50ರಷ್ಟು ಸ್ಥಳೀಯರನ್ನು ಭರ್ತಿ ಮಾಡಿದರೆ ಮಾತ್ರ ಸಿಗುತ್ತದೆ ಎಂಬುದು ಗಮನಾರ್ಹ ಸಂಗತಿಯಾಗಿದೆ.

Karnataka Jobs Reservation


ಸ್ಥಳೀಯರು ಅಂದರೆ ಯಾರು?

ಕರ್ನಾಟಕದಲ್ಲಿ ಹುಟ್ಟಿರುವ, 15 ವರ್ಷಗಳಿಂದ ರಾಜ್ಯದಲ್ಲಿ ನೆಲೆಸಿರುವ, ಕನ್ನಡ ಭಾಷೆಯನ್ನು ಓದುವುದು ಮತ್ತು ಬರೆಯುವುದನ್ನು ಚೆನ್ನಾಗಿ ತಿಳಿದಿರುವವರನ್ನು ಸ್ಥಳೀಯರು ಎಂದು ಮಸೂದೆಯಲ್ಲಿ ವ್ಯಾಖ್ಯಾನಿಸಲಾಗಿದೆ.
ಈ ಕಾನೂನಿನ ಅಡಿಯಲ್ಲಿ ಪ್ರಯೋಜನವನ್ನು ಬಯಸುವವರು ಕನ್ನಡ ಮಾಧ್ಯಮದಲ್ಲಿ ಹಿರಿಯ, ಮಾಧ್ಯಮಿಕ ಹಂತದಲ್ಲಿ ಓದಿರುವವರು ರಾಜ್ಯ ಸರ್ಕಾರದ ಭಾಷಾ ಪ್ರಾವೀಣ್ಯತೆಯ ಪರೀಕ್ಷೆಯನ್ನು ತೇರ್ಗಡೆಗೊಳಿಸಬೇಕು.

ಆಡಳಿತಾತ್ಮಕ, ಆಡಳಿತಾತ್ಮಕವಲ್ಲದ ಹುದ್ದೆಗಳು ಯಾವುದು?

ಆಡಳಿತಾತ್ಮಕ ಹುದ್ದೆಗಳೆಂದರೆ ನಿರ್ದೇಶಕರನ್ನು ಹೊರತುಪಡಿಸಿ ಮೇಲ್ವಿಚಾರಣೆ, ತಾಂತ್ರಿಕ, ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಪಾತ್ರಗಳಲ್ಲಿನ ಸ್ಥಾನಗಳನ್ನು ಒಳಗೊಂಡಿದೆ. ಆಡಳಿತಾತ್ಮಕವಲ್ಲದ ಹೊರಗುತ್ತಿಗೆ ಉದ್ಯೋಗಗಳು ಸೇರಿದಂತೆ ಕ್ಲೆರಿಕಲ್ ಹುದ್ದೆಗಳು, ಅರೆ ಮತ್ತು ನುರಿತ ಕೆಲಸಗಾರರಂತಹ ಎಲ್ಲಾ ಇತರ ಹುದ್ದೆಗಳನ್ನು ಸೇರಿಸಲಾಗಿದೆ.

ಇದನ್ನು ಯಾರು ಜಾರಿಗೆ ತರುತ್ತಾರೆ?

ಈ ಕಾನೂನನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಸರ್ಕಾರವು ಏಜೆನ್ಸಿಯನ್ನು ನೇಮಿಸುತ್ತದೆ. ಬಹುತೇಕ ಕಾರ್ಮಿಕ ಇಲಾಖೆಯೇ ಇದನ್ನು ನಿರ್ವಹಿಸಲಿದೆ. ವ್ಯವಸ್ಥಾಪಕ ಮತ್ತು ನಿರ್ವಾಹಕೇತರ ಹುದ್ದೆಗಳ ನೇಮಕಾತಿಗಳ ಕುರಿತು ವರದಿ ಪಡೆಯಲು, ಅನುಸರಣೆ ಇಲ್ಲದಿದ್ದಲ್ಲಿ ವಿಚಾರಣೆ ನಡೆಸಲು ಏಜೆನ್ಸಿಗೆ ಅಧಿಕಾರವಿದೆ. ಕ್ಲೈಮ್‌ಗಳನ್ನು ಪರಿಶೀಲಿಸಲು ಏಜೆನ್ಸಿಯು ಉದ್ಯೋಗದಾತರಿಂದ ಯಾವುದೇ ದಾಖಲೆಗಳನ್ನು ಪಡೆಯಬಹುದು. ಅಗತ್ಯಬಿದ್ದರೆ ಉದ್ಯಮದೊಳಗೆ ಪ್ರವೇಶಿಸಿ ಪರಿಶೀಲಿಸುವ ಅಧಿಕಾರವೂ ಸಂಸ್ಥೆಯ ಅಧಿಕಾರಿಗಳಿಗೆ ಇರುತ್ತದೆ. ಪ್ರಸ್ತಾವಿತ ಕಾನೂನಿನ ಅನುಷ್ಠಾನಕ್ಕಾಗಿ ಪ್ರಾಧಿಕಾರವು ಸಹಾಯಕ ಕಾರ್ಮಿಕ ಆಯುಕ್ತರ ಶ್ರೇಣಿಗಿಂತ ಕಡಿಮೆಯಿಲ್ಲದ ಅಧಿಕಾರಿಯನ್ನು ನೇಮಿಸಲಿದೆ.

Karnataka Jobs Reservation


ಕಾನೂನು ಪಾಲನೆಯಾಗದೇ ಇದ್ದರೆ?

ಪ್ರಸ್ತಾವಿತ ಕಾನೂನು ಸರಿಯಾಗಿ ಪಾಲನೆ ಆಗದೇ ಇದ್ದರೆ ಅಥವಾ ಕಾನೂನನ್ನು ಉಲ್ಲಂಘಿಸಿದರೆ ಕನಿಷ್ಠ 10,000 ರೂ.ನಿಂದ ಗರಿಷ್ಠ 25,000 ರೂ.ವರೆಗೆ ದಂಡವನ್ನು ನಿಗದಿಪಡಿಸಲಾಗಿದೆ. ಕಾನೂನಿನ ಉಲ್ಲಂಘನೆ ಮುಂದುವರಿದರೆ ದಂಡದ ಮೊತ್ತವನ್ನು 1 ಲಕ್ಷ ರೂ.ವರೆಗೆ ಹೆಚ್ಚಿಸಲಾಗುತ್ತದೆ. ಜೈಲು ಶಿಕ್ಷೆಯ ಬಗ್ಗೆ ಉಲ್ಲೇಖವಿಲ್ಲ. ಮಸೂದೆಯು ಆರು ತಿಂಗಳವರೆಗೆ ಕಾಲಾವಕಾಶ ನೀಡಲಿದೆ.

ಏನು ಇದರ ಪರಿಣಾಮ?

ಪ್ರಸ್ತಾವಿತ ಈ ಕಾನೂನು ಜಾರಿಯಾದರೆ 1.5 ಮಿಲಿಯನ್ ಉದ್ಯೋಗಿಗಳನ್ನು ಹೊಂದಿರುವ 245 ಬಿಲಿಯನ್ ಡಾಲರ್ ಮೌಲ್ಯದ ಬೆಂಗಳೂರು ತಂತ್ರಜ್ಞಾನ ಉದ್ಯಮದಲ್ಲಿ ಕನ್ನಡಿಗರಿಗೆ ಹೆಚ್ಚು ಉದ್ಯೋಗ ಸಿಗಲಿದೆ. ಯಾಕೆಂದರೆ ಇಲ್ಲಿ ಕೆಲಸ ಮಾಡುವ ಹೆಚ್ಚಿನ ಜನರು ಕನ್ನಡೇತರರು. ಕನ್ನಡಿಗರಿಗೆ ಅನ್ಯಾಯ ಆಗುತ್ತಿದೆ ಎಂಬ ಕೂಗು ಮೊದಲಿನಿಂದಲೂ ಕೇಳಿ ಬರುತ್ತಿದೆ.

ಮಾಹಿತಿ ತಂತ್ರಜ್ಞಾನ ಕ್ಷೇತ್ರವು ರಾಜ್ಯದ ಜಿಡಿಪಿಗೆ ಶೇ. 25ರಷ್ಟು ಕೊಡುಗೆ ನೀಡುತ್ತದೆ. ಸ್ಥಳೀಯರಿಗೆ ಮೀಸಲಾತಿ ಜಾರಿಗೆ ತಂದರೆ ಉನ್ನತ ಪ್ರತಿಭೆಗಳು, ಕುಶಲತೆ ಹೊಂದಿರುವವರು ಸಾಕಷ್ಟು ಸಂಖ್ಯೆಯಲ್ಲಿ ಸಿಗುತ್ತಿಲ್ಲ ಎಂದು ಖಾಸಗಿ ಕಂಪನಿಗಳು ಈ ಕಾಯಿದೆ ವಿರೋಧಿಸಿ ಬೇರೆ ರಾಜ್ಯಗಳಿಗೆ ವಲಸೆ ಹೋಗಬಹುದು. ಇದರಿಂದ ರಾಜ್ಯಕ್ಕೆ ಹಿನ್ನಡೆ ಆಗಬಹುದು.

ರಾಜ್ಯ ಸರ್ಕಾರದ ಪ್ರಕಾರ ಬೆಂಗಳೂರು ಕರ್ನಾಟಕದ ಆರ್ಥಿಕತೆಗೆ ಶೇ. 43.86ರಷ್ಟು ಕೊಡುಗೆ ನೀಡುತ್ತಿದೆ. ಕಳೆದ ವರ್ಷ ಮಂಡಿಸಲಾದ 2022-23ರ ಬಜೆಟ್‌ನಲ್ಲಿ ರಾಜ್ಯ ಹಣಕಾಸು ಇಲಾಖೆಯ ಅಂದಾಜಿನ ಪ್ರಕಾರ ರಾಷ್ಟ್ರೀಯ ಜಿಡಿಪಿಗೆ ಕರ್ನಾಟಕ ಶೇ. 7ರಷ್ಟು ಕೊಡುಗೆ ನೀಡುತ್ತಿದೆ. ಮಸೂದೆಯಲ್ಲಿನ ನಿರ್ಬಂಧಗಳು ಮುಂದಿನ ಐದು ವರ್ಷಗಳಲ್ಲಿ ಒಂದು ಟ್ರಿಲಿಯನ್ ಡಾಲರ್ ಮೌಲ್ಯದ ರಾಜ್ಯ ಸರ್ಕಾರದ ಯೋಜನೆಗಳ ಮೇಲೆ ಪರಿಣಾಮ ಬೀರಬಹುದು ಎನ್ನುತ್ತಾರೆ ಉದ್ಯಮ ತಜ್ಞರು.

Karnataka Jobs Reservation


ಬೇರೆ ರಾಜ್ಯಗಳಲ್ಲಿ ಈ ನಿರ್ಬಂಧ ಇದೆಯೇ?

ಭಾರತದ ಖಾಸಗಿ ವಲಯದಲ್ಲಿ ಉದ್ಯೋಗಗಳಲ್ಲಿ ಮೀಸಲಾತಿ ಕಾಯ್ದಿರಿಸಿದ ಮೊದಲ ರಾಜ್ಯಗಳಲ್ಲಿ ಆಂಧ್ರ ಪ್ರದೇಶ ಮತ್ತು ಹರಿಯಾಣ ಸೇರಿವೆ. ಎರಡೂ ರಾಜ್ಯಗಳು ಸಂಬಳದ ಮಿತಿಯೊಂದಿಗೆ ಉದ್ಯೋಗಗಳಿಗೆ ಮೀಸಲಾತಿಯನ್ನು ಒದಗಿಸಿವೆ. ಹರಿಯಾಣದಲ್ಲಿ 30,000 ರೂ. ಮಾಸಿಕ ವೇತನದ ಉದ್ಯೋಗಗಳಿಗೆ ಶೇ.75ರಷ್ಟು ಮೀಸಲಾತಿ ಅನ್ವಯಿಸುತ್ತದೆ. ಆಂಧ್ರದಲ್ಲಿ ಶೇ. 75ರಷ್ಟು ಮೀಸಲಾತಿಗೆ ಮಾಸಿಕ ವೇತನದ ಮಿತಿ 50,000 ರೂ. ಆಗಿದೆ.

ಕರ್ನಾಟಕ ಮಸೂದೆಯು ಸಂಬಳದ ಮಿತಿಯನ್ನು ವಿಧಿಸಿಲ್ಲ. ನಿರ್ದೇಶಕರನ್ನು ಹೊರತುಪಡಿಸಿ ಎಲ್ಲಾ ಖಾಸಗಿ ವಲಯದ ಉದ್ಯೋಗಗಳ ಮೇಲೆ ಕೋಟಾವನ್ನು ವಿಧಿಸುತ್ತದೆ. ಆದರೆ ಆಂಧ್ರಪ್ರದೇಶದಂತೆ ಕರ್ನಾಟಕವೂ ಸಹ ರಾಜ್ಯ ಶಾಸಕಾಂಗವು ಒಮ್ಮೆ ಅಂಗೀಕರಿಸಿದ ಕಾನೂನನ್ನು ಜಾರಿಗೆ ತರಲು ಉದ್ಯಮಕ್ಕೆ ಮೂರು ವರ್ಷಗಳನ್ನು ಒದಗಿಸಿದೆ.

ಇದನ್ನೂ ಓದಿ: Karnataka Jobs Reservation: ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಶೇ.75 ಮೀಸಲಾತಿ ಮಾತ್ರ; ಆಡಳಿತ ಹುದ್ದೆಗಳಲ್ಲಿ ಶೇ.50; ಉದ್ಯಮಿಗಳಿಗೆ ಬೆಚ್ಚಿತೇ ಸರ್ಕಾರ?

ಯಾವ ರೀತಿ ಎದುರಾಗಲಿದೆ ಕಾನೂನು ತೊಡಕುಗಳು?

ಕರ್ನಾಟಕ ಸರ್ಕಾರ ಪ್ರಸ್ತಾಪಿಸಿರುವ ಈ ಕಾನೂನಿಗೆ ಕಾನೂನು ತೊಡಕುಗಳು ಎದುರಾಗಬಹುದು. ಹರಿಯಾಣವು ಸ್ಥಳೀಯ ಅಭ್ಯರ್ಥಿಗಳಿಗೆ ರಾಜ್ಯ ಉದ್ಯೋಗ ಕಾಯಿದೆಯನ್ನು 2020ರಲ್ಲಿ ಜಾರಿಗೊಳಿಸಿತು. ಖಾಸಗಿ ವಲಯದ ಉದ್ಯೋಗಗಳಲ್ಲಿ ಸ್ಥಳೀಯರಿಗೆ 30,000 ರೂ. ವರೆಗಿನ ವೇತನಕ್ಕಾಗಿ ಶೇ. 75ರಷ್ಟು ಮೀಸಲಾತಿಯನ್ನು ಒದಗಿಸಿತು. ಬಳಿಕ ಅದನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ಆದರೆ ಇದು ಕಾನೂನನ್ನು ಸಂವಿಧಾನದ ಭಾಗ IIIರಲ್ಲಿ ಭಾರತದಾದ್ಯಂತ ಉದ್ಯೋಗ ಸ್ವಾತಂತ್ರ್ಯವನ್ನು ಒದಗಿಸುವ ಸಂವಿಧಾನದ 14 ಮತ್ತು 19ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು 2022ರಲ್ಲಿ ಹೈಕೋರ್ಟ್ ಈ ಕಾಯಿದೆಯನ್ನು ವಜಾಗೊಳಿಸಿತ್ತು.

Continue Reading
Advertisement
ಪ್ರಮುಖ ಸುದ್ದಿ9 mins ago

Travel Influencer : ರೀಲ್ಸ್​ ಮಾಡುತ್ತಲೇ ಜಲಪಾತದ ಕಮರಿಗೆ ಬಿದ್ದು ಪ್ರಾಣಬಿಟ್ಟ 26 ವರ್ಷದ ಯುವತಿ

Viral Video
ವೈರಲ್ ನ್ಯೂಸ್19 mins ago

Viral Video: ಹೃದಯಾಘಾತದಿಂದ ಕೆಳಗ್ಗೆ ಬಿದ್ದು ಒದ್ದಾಡುತ್ತಿದ್ದವನ ಪಾಲಿಗೆ ದೇವರಂತೆ ಬಂದ್ಳು! ಈ ಮಹಿಳೆಯ ವಿಡಿಯೋ ಎಲ್ಲೆಡೆ ವೈರಲ್‌

Mosquitoes Bite
ಆರೋಗ್ಯ1 hour ago

Mosquitoes Bite: ಎಣ್ಣೆ ಹೊಡೆಯುವವರನ್ನು ಸೊಳ್ಳೆಗಳು ಕಚ್ಚುವುದು ಹೆಚ್ಚು! ಇದಕ್ಕಿದೆ ವೈಜ್ಞಾನಿಕ ಕಾರಣ!

Actress Hina Khan
Latest1 hour ago

Actress Hina Khan: ಕಿಮೋಥೆರಪಿ ಅನುಭವ ಹಂಚಿಕೊಂಡಿದ್ದಾರೆ ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿರುವ ಖ್ಯಾತ ಬಾಲಿವುಡ್‌ ನಟಿ

Naxalites Killed
ದೇಶ1 hour ago

Naxalites Killed: 6 ಗಂಟೆ ಭರ್ಜರಿ ಕಾರ್ಯಾಚರಣೆ; ಬರೋಬ್ಬರಿ 12 ನಕ್ಸಲರ ಎನ್‌ಕೌಂಟರ್

Walking Benefits
ಆರೋಗ್ಯ1 hour ago

Walking Benefits: ಊಟದ ಬಳಿಕ ಕಿರು ನಡಿಗೆಯಿಂದ ಸಿಗುವ ಆರೋಗ್ಯ ಲಾಭಗಳು ಏನೇನು?

Natasa Stankovic
ಕ್ರಿಕೆಟ್2 hours ago

Natasa Stankovic : ಹಾರ್ದಿಕ್​ ಪಾಂಡ್ಯಗೆ ಕೈಕೊಟ್ಟು ಸರ್ಬಿಯಾದಲ್ಲಿ ಜಾಲಿ ಟ್ರಿಪ್ ಹೊರಟ ನತಾಶಾ

Mattress Buying Guide
ಲೈಫ್‌ಸ್ಟೈಲ್2 hours ago

Mattress Buying Guide: ಹಾಸಿಗೆಗಳಲ್ಲಿ ಎಷ್ಟೊಂದು ವಿಧ? ಯಾವುದು ಸೂಕ್ತ ಆಯ್ಕೆ ಮಾಡಿಕೊಳ್ಳಿ

Karnataka Jobs Reservation
ಪ್ರಮುಖ ಸುದ್ದಿ2 hours ago

Karnataka Jobs Reservation : ಕನ್ನಡಿಗರಿಗೆ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮೀಸಲಾತಿ ಮಸೂದೆಗೆ ತಾತ್ಕಾಲಿಕ ತಡೆ; ಉದ್ಯಮಿಗಳ ಒತ್ತಡ?

Kapil Dev
ಕ್ರೀಡೆ3 hours ago

Kapil Dev : ಟಿ20 ವಿಶ್ವ ಕಪ್ ಚಾಂಪಿಯನ್ಸ್​ ಕೊಹ್ಲಿ, ರೋಹಿತ್ ಶ್ಲಾಘಿಸಿದ 1983ರ ವಿಶ್ವ ಕಪ್ ವಿಜೇತ ಕಪಿಲ್​ ದೇವ್​​

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ3 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ4 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌