Pooja Khedkar: ಅಂಗವೈಕಲ್ಯ ಪ್ರಮಾಣಪತ್ರಕ್ಕಾಗಿ ನಕಲಿ ವಿಳಾಸ ನೀಡಿದ್ದ ಪೂಜಾ ಖೇಡ್ಕರ್‌; ಮತ್ತೊಂದು ಕಳ್ಳಾಟ ಬಯಲು - Vistara News

ದೇಶ

Pooja Khedkar: ಅಂಗವೈಕಲ್ಯ ಪ್ರಮಾಣಪತ್ರಕ್ಕಾಗಿ ನಕಲಿ ವಿಳಾಸ ನೀಡಿದ್ದ ಪೂಜಾ ಖೇಡ್ಕರ್‌; ಮತ್ತೊಂದು ಕಳ್ಳಾಟ ಬಯಲು

Pooja Khedkar: ಮಹಾರಾಷ್ಟ್ರ ಕೇಡರ್‌ನ ಐಎಎಸ್‌ ಅಧಿಕಾರಿ, ಅತಿಯಾದ ದರ್ಪ, ನಕಲಿ ದಾಖಲೆ ಸೃಷ್ಟಿಯಿಂದಲೇ ದೇಶಾದ್ಯಂತ ಗಮನ ಸೆಳೆದಿರುವ ಟ್ರೈನಿ ಅಧಿಕಾರಿ ಪೂಜಾ ಖೇಡ್ಕರ್‌ ಅವರ ಕಳ್ಳಾಟಗಳು ಬಗೆದಷ್ಟೂ ಹೊರ ಬರುತ್ತಿದೆ. ಇದೀಗ ಅವರು ಅಂಗವೈಕಲ್ಯ ಪ್ರಮಾಣಪತ್ರ ವನ್ನು ಪಡೆಯಲು ಸುಳ್ಳು ವಿಳಾಸ ಮತ್ತು ನಕಲಿ ಪಡಿತರ ಚೀಟಿಯನ್ನು ಬಳಸಿದ್ದಾರೆ ಎನ್ನುವ ಮಾಹಿತಿ ಬಹಿರಂಗಗೊಂಡಿದೆ.

VISTARANEWS.COM


on

Pooja Khedkar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಮಹಾರಾಷ್ಟ್ರ ಕೇಡರ್‌ನ ಐಎಎಸ್‌ ಅಧಿಕಾರಿ, ಅತಿಯಾದ ದರ್ಪ, ನಕಲಿ ದಾಖಲೆ ಸೃಷ್ಟಿಯಿಂದಲೇ ದೇಶಾದ್ಯಂತ ಗಮನ ಸೆಳೆದಿರುವ ಟ್ರೈನಿ ಅಧಿಕಾರಿ (Trainee IAS Officer) ಪೂಜಾ ಖೇಡ್ಕರ್‌ (Pooja Khedkar) ಅವರ ಕಳ್ಳಾಟಗಳು ಬಗೆದಷ್ಟೂ ಹೊರ ಬರುತ್ತಿದೆ. ಇದೀಗ ಅವರು ಅಂಗವೈಕಲ್ಯ ಪ್ರಮಾಣಪತ್ರ (Disability certificate)ವನ್ನು ಪಡೆಯಲು ಸುಳ್ಳು ವಿಳಾಸ ಮತ್ತು ನಕಲಿ ಪಡಿತರ ಚೀಟಿಯನ್ನು ಬಳಸಿದ್ದಾರೆ ಎನ್ನುವ ಮಾಹಿತಿ ಬಹಿರಂಗಗೊಂಡಿದೆ.

ಪುಣೆಯ ಯಶವಂತರಾವ್ ಚವಾಣ್ ಸ್ಮಾರಕ ಆಸ್ಪತ್ರೆ 2022ರ ಆಗಸ್ಟ್ 24ರಂದು ಪೂಜಾಗೆ ಅಂಗವೈಕಲ್ಯ ಪ್ರಮಾಣಪತ್ರವನ್ನು ನೀಡಿದೆ. ಅದರಲ್ಲಿ ಪೂಜಾ ಖೇಡ್ಕರ್ ಅವರ ವಿಳಾಸವನ್ನು ʼʼಪುಣೆ ಜಿಲ್ಲೆಯ ಪ್ಲಾಟ್ ಸಂಖ್ಯೆ 53, ದೇಹು ಅಲಂಡಿ ರಸ್ತೆ, ತಲವಾಡೆ, ಪಿಂಪ್ರಿ ಚಿಂಚ್ವಾಡ್” ಎಂದು ಉಲ್ಲೇಖಿಸಲಾಗಿದೆ. ಆದರೆ ಈ ಸ್ಥಳದಲ್ಲಿ ಯಾವುದೇ ಮನೆ ಇಲ್ಲ. ಬದಲಾಗಿ ಥರ್ಮೋವರ್ಟಾ ಎಂಜಿನಿಯರಿಂಗ್ ಕಂಪನಿ ಎಂಬ ಕಾರ್ಖಾನೆ ಇದೆ. ಕುತೂಹಲಕಾರಿ ಸಂಗತಿಯೆಂದರೆ, ಕೆಂಪು-ನೀಲಿ ದೀಪವನ್ನು ಅಕ್ರಮವಾಗಿ ಬಳಸಿದ ನಂತರ ವಶಪಡಿಸಿಕೊಳ್ಳಲಾದ ಖೇಡ್ಕರ್ ಅವರ ಆಡಿ ಕಾರು ಈ ಕಂಪನಿಯ ಹೆಸರಿನಲ್ಲಿ ನೋಂದಾಯಿಸಲ್ಪಟ್ಟಿದೆ.

ಅಲ್ಲದೆ ಅಂಗವೈಕಲ್ಯ ಪ್ರಮಾಣಪತ್ರಗಳನ್ನು ಪಡೆಯಲು ಸರ್ಕಾರವು ಆಧಾರ್ ಕಾರ್ಡ್‌ ಅನ್ನು ಕಡ್ಡಾಯಗೊಳಿಸಿದ್ದರೂ ಪೂಜಾ ಅದರ ಬದಲು ಪಡಿತರ ಚೀಟಿ ಹಾಜರುಪಡಿಸಿದ್ದರು ಎಂದು ದಾಖಲೆಯಲ್ಲಿ ಉಲ್ಲೇಖಿಸಲಾಗಿದೆ. ನಕಲಿ ಪಡಿತರ ಚೀಟಿಯನ್ನು ತಯಾರಿಸಲು ಪೂಜಾ ನಕಲಿ ವಿಳಾಸವನ್ನು ಬಳಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಪೂಜಾ ಖೇಡ್ಕರ್ ಮೊಣಕಾಲಿನಲ್ಲಿ ಶೇ. 7ರಷ್ಟು ಅಂಗವೈಕಲ್ಯವನ್ನು ಹೊಂದಿದ್ದಾರೆ ಎಂದು ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ.

ಸಿವಿಲ್‌ ಸರ್ವಿಸ್‌ ಆಯ್ಕೆಯ ಸಮಯದಲ್ಲಿ ಈ ಅಂಗವೈಕಲ್ಯ ಪ್ರಮಾಣಪತ್ರದಿಂದ ಪೂಜಾ ಅವರಿಗೆ ಅದು ಹೇಗೆ ರಿಯಾಯಿತಿ ಸಿಕ್ಕಿತು ಎನ್ನುವ ಪ್ರಶ್ನೆಯೂ ಎದ್ದಿದೆ. ಯಾಕೆಂದರೆ ಪೂಜಾ ʼಬೆಂಚ್‌ಮಾರ್ಕ್‌ ಅಂಗವೈಕಲ್ಯ ಹೊಂದಿರುವ ವ್ಯಕ್ತಿʼ ವಿಭಾಗದಲ್ಲಿ ವಿನಾಯಿತಿ ಕೋರಿದ್ದರು. ಆದರೆ ಯುಪಿಎಸ್‌ಸಿ ನಿಯಮದ ಪ್ರಕಾರ ಈ ರಿಯಾಯಿತಿ ಶೇ. 40ಕ್ಕಿಂತ ಕಡಿಮೆ ಇಲ್ಲದ ವ್ಯಕ್ತಿಗೆ ದೊರೆಯಬೇಕು. ಆದರೆ ಪೂಜಾ ಅವರ ಪ್ರಮಾಣಪತ್ರದಲ್ಲಿ ಅವರ ಅಂಗವೈಕಲ್ಯದ ಪ್ರಮಾಣವನ್ನು ಶೇ. 7 ಎಂದು ಉಲ್ಲೇಖಿಸಲಾಗಿದ್ದು, ಇದು ಯುಪಿಎಸ್‌ಸಿ ಮಿತಿಗಿಂತ ತುಂಬಾ ಕಡಿಮೆ ಇದೆ.

ಈ ಹಿಂದೆ ಅವರು ತಮ್ಮ ಅಂಗವೈಕಲ್ಯ ಪ್ರಮಾಣಪತ್ರವನ್ನು ಪರಿಶೀಲಿಸುವ ವೈದ್ಯಕೀಯ ತಪಾಸಣೆಯನ್ನು ತಪ್ಪಿಸಿಕೊಂಡಿದ್ದರು. ನಂತರ ಖಾಸಗಿ ವರದಿಯನ್ನು ಸಲ್ಲಿಸಿದ್ದರು. ಸದ್ಯ ಪೂಜಾ ಸಲ್ಲಿಸಿದ ಪ್ರಮಾಣಪತ್ರಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವಂತೆ ಪುಣೆಯ ಅಂಗವಿಕಲರ ಆಯುಕ್ತರ ಕಚೇರಿ ಪೊಲೀಸರಿಗೆ ಸೂಚಿಸಿದೆ.

ತರಬೇತಿಗೆ ತಡೆ, ಅಕಾಡೆಮಿಗೆ ವಾಪಸ್‌

ಈ ಮಧ್ಯೆ ಪೂಜಾ ಅವರ ತರಬೇತಿಯನ್ನ ತಡೆ ಹಿಡಿಯಲಾಗಿದೆ. ಮಸೂರಿಯಲ್ಲಿರುವ ಲಾಲ್‌ ಬಹದ್ದೂರ್‌ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಸೇವಾ ಅಕಾಡೆಮಿ ಖೇಡ್ಕರ್‌ ಅವರನ್ನು ತರಬೇತಿ ಶಿಬಿರಕ್ಕೆ ಕರೆದು ಅವರ ತರಬೇತಿಯನ್ನು ತಡೆ ಹಿಡಿದಿರುವ ಬಗ್ಗೆ ಆದೇಶ ಹೊರಡಿಸಿದೆ. ಮಹಾರಾಷ್ಟ್ರದ ರಾಜ್ಯ ಸರ್ಕಾರದ ಜಿಲ್ಲಾ ತರಬೇತಿ ಕಾರ್ಯಕ್ರಮದಿಂದ “ನಿಮ್ಮನ್ನು ತರಬೇತಿಯಿಂದ ರಿಲೀವ್‌ ಮಾಡಲಾಗಿದೆ. ಆದಷ್ಟು ಬೇಗ ಅಕಾಡೆಮಿಗೆ ಬಂದು ಸೇರಿಕೊಳ್ಳಿ” ಎಂದು ಸೂಚಿಸಲಾಗಿದೆ.

ಇದನ್ನೂ ಓದಿ: Manorama Khedkar: ಪಿಸ್ತೂಲ್‌ ತೋರಿಸಿ ರೈತರಿಗೆ ಬೆದರಿಕೆ ಹಾಕಿದ ಐಎಎಸ್‌ ಅಧಿಕಾರಿ ತಾಯಿಯ ವಿರುದ್ಧ ಎಫ್‌ಐಆರ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ಡಿಸಿ ಆಫೀಸ್‌ನಲ್ಲಿ ಗೋಳಾಡುತ್ತಾ ನೆಲದಲ್ಲಿ ಹೊರಳಾಡಿದ ರೈತ; ವೈರಲಾಗ್ತಿದೆ ಈ ವಿಡಿಯೋ

Viral Video: ತಮ್ಮ ಹತಾಶೆಯನ್ನು ವ್ಯಕ್ತಪಡಿಸಿದ ಶಂಕರಲಾಲ್, ”ಭೂಮಾಫಿಯಾದಿಂದ ನನಗೆ ತೊಂದರೆಯಾಗಿದೆ, ತಹಸೀಲ್ದಾರ್ ತಪ್ಪು ಮಾಡುತ್ತಾರೆ, ರೈತರು ಅನುಭವಿಸುತ್ತಾರೆ, ಅವರು ತಪ್ಪು ಮಾಡುತ್ತಾರೆ, ಅದರ ಪರಿಣಾಮವನ್ನು ನಾನು ಅನುಭವಿಸುತ್ತೇನೆ, ನನಗೆ ಸರ್ಕಾರ ಮತ್ತು ಆಡಳಿತದ ಬಗ್ಗೆ ಅಸಮಾಧಾನವಿದೆ. ಇಲ್ಲಿ ನಾವು ಭ್ರಷ್ಟರಾಗಿದ್ದೇವೆ… ರೈತರಿಗೆ ವಂಚನೆಯಾಗುತ್ತಿದೆ ಎಂದು ಕೈ ಮುಗಿದು ನೆಲದಲ್ಲಿ ಹೊರಳಾಡಿದ್ದಾನೆ.

VISTARANEWS.COM


on

Viral Video
Koo

ಭೋಪಾಲ್‌: ಹರಿದ ಧೋತಿ ತೊಟ್ಟು, ದಯಮಾಡಿ ಪರಿಹಾರ ನೀಡಿ ಎಂದು ಬೇಡುತ್ತಾ ವೃದ್ಧನೋರ್ವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉರುಳಾಡುತ್ತಾ ಗೋಳಾಡುತ್ತಿರುವ ದೃಶ್ಯ ಎಂಥವರ ಮನಸ್ಸು ಕರಗುವಂತೆ ಮಾಡಿತ್ತು. ಈ ದೃಶ್ಯ ಕಂಡು ಬಂದಿದ್ದು ಮಧ್ಯಪ್ರದೇಶ(Madhya Pradesh)ದ ಮಂಡ್‌ಸೌರ್‌ನಲ್ಲಿ. ಸ್ಥಳೀಯ ಭೂ ಮಾಫಿಯಾಗೆ ಬಳಿಯಾಗಿ ಭೂಮಿ ಕಳೆದುಕೊಂಡು ರೈತ ಗೋಳಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ(Viral Video).

ಈ ಕುರಿತು ಹಲವು ಬಾರಿ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ರೈತ ಶಂಕರಲಾಲ್‌ ಜಿಲ್ಲಾಧಿಕಾರಿ ಕಚೇರಿ ಸಭಾಂಗಣಕ್ಕೆ ತೆರಳಿ ಗಮನ ಸೆಳೆದರು. ತಮ್ಮ ಹತಾಶೆಯನ್ನು ವ್ಯಕ್ತಪಡಿಸಿದ ಶಂಕರಲಾಲ್, ”ಭೂಮಾಫಿಯಾದಿಂದ ನನಗೆ ತೊಂದರೆಯಾಗಿದೆ, ತಹಸೀಲ್ದಾರ್ ತಪ್ಪು ಮಾಡುತ್ತಾರೆ, ರೈತರು ಅನುಭವಿಸುತ್ತಾರೆ, ಅವರು ತಪ್ಪು ಮಾಡುತ್ತಾರೆ, ಅದರ ಪರಿಣಾಮವನ್ನು ನಾನು ಅನುಭವಿಸುತ್ತೇನೆ, ನನಗೆ ಸರ್ಕಾರ ಮತ್ತು ಆಡಳಿತದ ಬಗ್ಗೆ ಅಸಮಾಧಾನವಿದೆ. ಇಲ್ಲಿ ನಾವು ಭ್ರಷ್ಟರಾಗಿದ್ದೇವೆ… ರೈತರಿಗೆ ವಂಚನೆಯಾಗುತ್ತಿದೆ ಎಂದು ಕೈ ಮುಗಿದು ನೆಲದಲ್ಲಿ ಹೊರಳಾಡಿದ್ದಾನೆ.

ಘಟನೆ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ದಿಲೀಪ್ ಯಾದವ್, ‘ಸಾರ್ವಜನಿಕ ವಿಚಾರಣೆಯಲ್ಲಿ ಬರುವ ಎಲ್ಲಾ ಪ್ರಕರಣಗಳನ್ನು ತಕ್ಷಣವೇ ಪರಿಹರಿಸಲಾಗುತ್ತದೆ. ಮಂಗಳವಾರ ನಡೆದ ವಿಚಾರಣೆಗೆ ಹಲವು ಮಂದಿ ಹಾಜರಾಗಿದ್ದು, ಅವರ ಸಮಸ್ಯೆಗಳನ್ನು ಆಲಿಸಿ ಸಾಧ್ಯವಾದಷ್ಟು ಪರಿಹರಿಸಲಾಗಿದೆ ಎಂದ ಅವರು, ಹಿಂದಿನ ಸಾರ್ವಜನಿಕ ವಿಚಾರಣೆಗಳ ಪ್ರಕರಣಗಳನ್ನೂ ಪರಿಶೀಲಿಸಲಾಗಿದೆ ಎಂದರು.

ದೂರುದಾರರು ವಿವಾದಿತ ಭೂಮಿಯನ್ನು ತಮ್ಮ ವಶಕ್ಕೆ ಪಡೆದಿದ್ದಾರೆ ಎಂದು ಸ್ಥಳೀಯ ಆಡಳಿತ ಸ್ಪಷ್ಟಪಡಿಸಿದೆ. ಸದ್ಯ ಶಂಕರ್ ಮತ್ತು ಅವರ ಕುಟುಂಬದವರು ಜಮೀನು ಹೊಂದಿದ್ದಾರೆ. ಈ ಹಿಂದೆ ಷೇರುದಾರರು ಮಾರಾಟ ಮಾಡಿದ ಅರ್ಧದಷ್ಟು ಭೂಮಿಯನ್ನು ಖರೀದಿದಾರರು ಸ್ವಾಧೀನಪಡಿಸಿಕೊಂಡಿಲ್ಲ. ಸ್ಥಳೀಯ ಆಡಳಿತ ನೀಡಿದ ದಾಖಲೆಗಳ ಆಧಾರದ ಮೇಲೆ ತಹಸೀಲ್ದಾರ್ ಸಲ್ಲಿಸಿದ ತನಿಖಾ ವರದಿ ಪ್ರಕಾರ, ಸುಖದ್ ಗ್ರಾಮದಲ್ಲಿ ವಿಸ್ತೀರ್ಣ ಸಂಖ್ಯೆ 604 ರಲ್ಲಿ 2.5 ಹೆಕ್ಟೇರ್ ಜಮೀನು ಇದ್ದು, ಸರ್ವೆ ಸಂಖ್ಯೆ 625 ರಲ್ಲಿ 1.01 ಹೆಕ್ಟೇರ್ ಇದೆ.

2010 ರ ಡಿಸೆಂಬರ್ 31 ರಂದು ಮಾರಾಟ ಪತ್ರದ ಪ್ರಕಾರ ಈ ಭೂಮಿಯನ್ನು ಮಂದಸೌರ್ ನಿವಾಸಿ ನಾರಾಯಣ ರಾವ್ ಅವರ ಮಗ ಅಶ್ವಿನ್ ಎಂಬುವವರಿಗೆ ಮಾರಾಟ ಮಾಡಲಾಗಿದೆ. ಈ ಭೂಮಿಯನ್ನು ಹಸ್ತಾಂತರಿಸಲು ಅಂದಿನ ತಹಸೀಲ್ದಾರ್ ಸೀತಾಮೌ ಅವರು 2010 ರಲ್ಲಿ ಅನುಮೋದನೆ ನೀಡಿದರು. ಆದಾಗ್ಯೂ, ಮಾರಾಟವಾದ ಭೂಮಿ ಕರು ಲಾಲ್, ರಾಮಲಾಲ್, ಪ್ರಭು ಲಾಲ್, ಮಂಗಿ ಬಾಯಿ ಮತ್ತು ಪಾರ್ವತಿ ಬಾಯಿ ಅವರ ಸ್ವಾಧೀನದಲ್ಲಿ ಉಳಿದಿದೆ, ಅವರು ಅದನ್ನು ಅಶ್ವಿನ್‌ಗೆ ಹಸ್ತಾಂತರಿಸಲು ಸಿದ್ಧರಿಲ್ಲ.

ಇದನ್ನೂ ಓದಿ: Muharram 2024: ಏಕತೆಯ ಸಂದೇಶ ಸಾರುವ ಮುಹರ್ರಮ್ ಆಚರಣೆ

Continue Reading

ವೈರಲ್ ನ್ಯೂಸ್

Viral Video: 300 ಮೊಸಳೆಗಳಿರುವ ಕೆರೆಯಲ್ಲಿ ಬೈಕ್‌, ಕಾರು ಸ್ಟಂಟ್‌; ಹುಚ್ಚಾಟ ಮೆರೆದ ಯುವಕರಿಗೆ ಆಗಿದ್ದೇನು ಗೊತ್ತಾ?

Viral Video: ರೀಲ್ಸ್‌ಗಾಗಿ ಅನೇಕ ಯುವಕರು ನೀರಿನಲ್ಲಿ ಬೈಕ್‌ ಮತ್ತು ಕಾರು ಚಲಾಯಿಸಿದ್ದಾರೆ. ಅಲ್ಲದದೇ ಕೆರೆಯ ಬದಿಯಲ್ಲಿ ಮೊಸಳೆಗಳು ಓಡಾಡುತ್ತಿರುವುದನ್ನೂ ವಿಡಿಯೋದಲ್ಲೀ ಕಾಣಬಹುದಾಗಿದೆ. ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಕಾರು ಮತ್ತು ಏಳು ಬೈಕ್‌ ಸೇರಿ ಯುವಕರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

Viral Video
Koo

ಜೈಪುರ: ಇತ್ತೀಚೆಗೆ ಯುವಕರ ರೀಲ್ಸ್‌(Reels) ಹುಚ್ಚು ಎಂತೆಂಥಾ ಅಪಾಯವನ್ನು ತಂದೊಡ್ಡುತ್ತದೆ ಎಂದರೆ ಅದನ್ನು ಊಹಿಸಲೂ ಸಾಧ್ಯವಿಲ್ಲ. ಪ್ರಾಣವನ್ನೂ ಲೆಕ್ಕಿಸದೇ ರೀಲ್ಸ್‌ಗಾಗಿ ಸಾರ್ವಜನಿಕ ಸ್ಥಳದಲ್ಲಿ ಹುಚ್ಚಾಟ ಮೆರೆಯುತ್ತಿರುತ್ತಾರೆ. ಅಂತಹದ್ದೇ ಒಂದು ಘಟನೆ ರಾಜಸ್ಥಾನದಲ್ಲಿ ವರದಿಯಾಗಿದೆ. ಬರೋಬ್ಬರಿ 300 ಮೊಸಳೆಗಳ ಅಭಯಾರಣ್ಯದ(Crocodile Lake) ಕೆರೆಯಲ್ಲಿ ಅಪಾಯಕಾರಿ ಬೈಕ್‌, ಕಾರು ಸ್ಟಂಟ್‌ ಮಾಡುವ ಮೂಲಕ ಯುವಕರು ಹುಚ್ಚಾಟ ಮೆರೆದಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್‌ (Viral Video) ಆಗಿದ್ದು, ಪೊಲೀಸರು 20 ಮಂದಿ ಯುವಕರನ್ನು ಅರೆಸ್ಟ್‌ ಮಾಡಿದ್ದಾರೆ. ರಾಜಸ್ಥಾನದ ಆಲ್ವಾರ್‌ ಜಿಲ್ಲೆಯಲ್ಲಿರುವ ಸಿಲಿಸೆಹ್ರ್‌ ಮೊಸಳೆ ಪಾರ್ಕ್‌ನಲ್ಲಿ ಯುವಕರು ಹುಚ್ಚಾಟ ಮೆರೆದಿದ್ದಾರೆ.

ರೀಲ್ಸ್‌ಗಾಗಿ ಅನೇಕ ಯುವಕರು ನೀರಿನಲ್ಲಿ ಬೈಕ್‌ ಮತ್ತು ಕಾರು ಚಲಾಯಿಸಿದ್ದಾರೆ. ಅಲ್ಲದದೇ ಕೆರೆಯ ಬದಿಯಲ್ಲಿ ಮೊಸಳೆಗಳು ಓಡಾಡುತ್ತಿರುವುದನ್ನೂ ವಿಡಿಯೋದಲ್ಲೀ ಕಾಣಬಹುದಾಗಿದೆ. ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಕಾರು ಮತ್ತು ಏಳು ಬೈಕ್‌ ಸೇರಿ ಯುವಕರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಗುರುಮೇಲ್ ಸಿಂಗ್ (28), ಯೋಗೇಶ್ (23), ಕೃಷ್ಣ (23), ಪುನೀತ್ (19), ಸಚಿನ್ (27), ಶಿವಚರಣ್ (29), ಎಲ್ಲರೂ ಸೊರ್ಖಾ ಕಾಲಾ ಗ್ರಾಮದ ನಿವಾಸಿಗಳು ಮತ್ತು ಉದಯ್ (18) ಬರೋಡಾದಿಂದ ಏಳು ವ್ಯಕ್ತಿಗಳನ್ನು ಅರೆಸ್ಟ್‌ ಮಾಡಲಾಗಿತ್ತು. ಮರುದಿನ 13 ಇತರರನ್ನು ಬಂಧಿಸಲಾಯಿತು.

ಅಲ್ವಾರ್ ಪೊಲೀಸ್ ಅಧೀಕ್ಷಕ ಆನಂದ್ ಶರ್ಮಾ ಅವರು, ಸಿಲಿಸೆರ್ಹ್ ಸರೋವರ ಮತ್ತು ನಟ್ನಿ ಕಾ ಬಾರಾದಂತಹ ಪ್ರವಾಸಿ ಸ್ಥಳಗಳ ಬಳಿ ಇಂತಹ ಸಾಹಸಗಳನ್ನು ಮಾಡುವ ಮೂಲಕ ಯಾರಾದರೂ ತಮ್ಮನ್ನು ಅಥವಾ ವನ್ಯಜೀವಿಗಳಿಗೆ ಅಪಾಯವನ್ನುಂಟುಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಈ ಅಜಾಗರೂಕ ಕೃತ್ಯಗಳು ಭಾಗಿಯಾಗಿರುವವರ ಜೀವಕ್ಕೆ ಅಪಾಯವನ್ನುಂಟುಮಾಡುವುದು ಮಾತ್ರವಲ್ಲದೆ ಪ್ರದೇಶಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ತೊಂದರೆಯಾಗುತ್ತದೆ ಎಂದು ಅವರು ಒತ್ತಿ ಹೇಳಿದರು.

ಅಲ್ವಾರ್ ಪೊಲೀಸರು ಈ ಪ್ರದೇಶಗಳಲ್ಲಿ ಗಸ್ತು ತೀವ್ರಗೊಳಿಸಿದ್ದಾರೆ ಮತ್ತು ಪ್ರವಾಸಿಗರು ಮತ್ತು ವನ್ಯಜೀವಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸಿಬ್ಬಂದಿಯನ್ನು ನಿಯೋಜಿಸುತ್ತಿದ್ದಾರೆ. ಕೆರೆಗೆ ಹೋಗುವ ಅನಧಿಕೃತ ರಸ್ತೆಗಳನ್ನೂ ಅಧಿಕಾರಿಗಳು ಮುಚ್ಚಿದ್ದಾರೆ. ಸಾಮಾಜಿಕ ಮಾಧ್ಯಮದ ಜನಪ್ರಿಯತೆಗಾಗಿ ಯುವಕರು ಇಂತಹ ಅಪಾಯಕಾರಿ ನಡವಳಿಕೆಯಿಂದ ದೂರವಿರಬೇಕು ಎಂದು ಪೊಲೀಸರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Viral Video: ಸಫಾರಿಯಲ್ಲಿ ಪ್ರವಾಸಿಗರ ಎದುರೇ ಸಿಂಹಗಳ ಕಾಮಕೇಳಿ!

Continue Reading

ದೇಶ

Food Poisoning: ಮೊಹರಂ ಮೆರವಣಿಗೆ ವೇಳೆ ಷರಬತ್ತು ಸೇವಿಸಿ 400 ಮಂದಿ ಅಸ್ವಸ್ಥ

Food Poisoning: ಮೊಹರಂ ಆಚರಣೆ ಮಧ್ಯೆ ರಾಜಸ್ತಾನದಲ್ಲಿ ಮಂಗಳವಾರ (ಜುಲೈ 16) ದುರಂತವೊಂದು ಸಂಭವಿಸಿದ್ದು, ಮೆರವಣಿಗೆ ವೇಳೆ ಷರಬತ್ತು ಸೇವಿಸಿದ ಸುಮಾರು 400 ಮಂದಿ ಅಸ್ವಸ್ಥರಾಗಿದ್ದಾರೆ. ರಾಜಸ್ತಾನದ ಬನ್ಸ್ವಾರಾದಲ್ಲಿ ಈ ಘಟನೆ ನಡೆದಿದ್ದು, ವಾಂತಿ ಮತ್ತು ಅತಿಸಾರ ಕಾಣಿಕೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Food Poisoning
Koo

ಜೈಪುರ: ಮೊಹರಂ (Muharram 2024) ಆಚರಣೆ ಮಧ್ಯೆ ರಾಜಸ್ತಾನದಲ್ಲಿ ಮಂಗಳವಾರ (ಜುಲೈ 16) ದುರಂತವೊಂದು ಸಂಭವಿಸಿದ್ದು, ಮೆರವಣಿಗೆ ವೇಳೆ ಷರಬತ್ತು ಸೇವಿಸಿದ ಸುಮಾರು 400 ಮಂದಿ ಅಸ್ವಸ್ಥರಾಗಿದ್ದಾರೆ. ರಾಜಸ್ತಾನದ ಬನ್ಸ್ವಾರಾದಲ್ಲಿ ಈ ಘಟನೆ ನಡೆದಿದ್ದು, ವಾಂತಿ ಮತ್ತು ಅತಿಸಾರ ಕಾಣಿಕೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ (Food Poisoning).

ಮಧ್ಯರಾತ್ರಿ ಮುಹರ್ರಮ್‌ ಮೆರವಣಿಗೆಯಲ್ಲಿ ಭಾಗವಹಿಸಿದ ಹಲವು ಮಂದಿ ಅಸ್ವಸ್ಥರಾದ ಕೂಡಲೇ ರಸ್ತೆ ಬದಿಯಲ್ಲಿದ್ದ ಮೆಡಿಕಲ್‌ಗಳಿಗೆ ನುಗ್ಗಿ ಬೀಗ ಒಡೆದು ಔಷಧ ಮತ್ತು ಒಆರ್‌ಎಸ್‌ ತೆಗೆದುಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಬಳಿಕ ಮೂವರು ವೈದ್ಯರು ಧಾವಿಸಿ ಬಂದು ಸುಮಾರು ಅಸ್ವಸ್ಥರಿಗೆ ವೈದ್ಯಕೀಯ ಚಿಕಿತ್ಸೆ ನೀಡಲು ಆರಂಭಿಸಿದರು. ಏಕಕಾಲಕ್ಕೆ 400ಕ್ಕೂ ಹೆಚ್ಚು ಮಂದಿ ಸ್ಥಳೀಯ ಮಹಾತ್ಮ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದು, ಸುಮಾರು 100 ಜನರು ಈಗಲೂ ಚಿಕಿತ್ಸೆ ಪಡೆಯುತ್ತಿದ್ದಾರೆ ವೈದ್ಯ ಹೀರಾಲಾಲ್ ತಬಿಯಾತ್ ತಿಳಿಸಿದ್ದಾರೆ. ಮಾಹಿತಿ ತಿಳಿದ ಕೂಡಲೇ ಹಲವು ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥರ ಆರೋಗ್ಯ ವಿಚಾರಿಸಿದ್ದಾರೆ.

ಘಟನೆಯ ಬಗ್ಗೆ ತನಿಖೆ ನಡೆಸಲು ಈಗಾಗಲೇ ಆದೇಶ ಹೊರಡಿಸಲಾಗಿದೆ. ಅಲ್ಲದೆ ಅಸ್ವಸ್ಥರು ಸೇವಿಸಿರುವ ಷರಬತ್ತಿನ ಮಾದರಿಯನ್ನು ಒದಗಿಸುವಂತೆ ವೈದ್ಯರು ಸೂಚಿಸಿದ್ದಾರೆ. ಪರಿಶೀಲನೆ ಬಳಿಕವಷ್ಟೆ ನಿಖರ ಕಾರಣ ತಿಳಿದು ಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಯೋಜಕರು ಹೇಳಿದ್ದೇನು?

ಘಟನೆ ಬಗ್ಗೆ ಮಾಹಿತಿ ನೀಡಿದ ಅಂಜುಮನ್ ಇಸ್ಲಾಮಿಯಾ ಮುಖ್ಯಸ್ಥ ಶೋಯೆಬ್ ಖಾನ್ ಈ ಘಟನೆ ಮಧ್ಯರಾತ್ರಿ ನಡೆದಿದೆ ಎಂದು ಹೇಳಿದ್ದಾರೆ. ಮೊಹರಂ ಮೆರವಣಿಗೆಯಲ್ಲಿ ಸಮಯದಲ್ಲಿ ಸಮುದಾಯದ ಕೆಲವು ಸದಸ್ಯರು ಸ್ಟಾಲ್ ಸ್ಥಾಪಿಸಿದ್ದರು ಮತ್ತು ಅಲ್ಲಿನ ಷರಬತ್ತು ಕುಡಿದ ನಂತರ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 400 ಜನರು ಅನಾರೋಗ್ಯಕ್ಕೆ ಒಳಗಾದರು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Mid Day Meal: ಕಲಬುರಗಿಯಲ್ಲಿ ಬಿಸಿಯೂಟ ಉಂಡ 33 ವಿದ್ಯಾರ್ಥಿಗಳು ಅಸ್ವಸ್ಥ; 3 ದಿನಗಳಲ್ಲಿ ಎರಡನೇ ಘಟನೆ

ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ರಾಯಚೂರು: ಮಾನ್ವಿ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ದಿಢೀರ್ ಅಸ್ವಸ್ಥಗೊಂಡ ಘಟನೆ ಕೆಲವು ದಿನಗಳ ಹಿಂದೆ ನಡೆದಿತ್ತು. 25ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ವಾಂತಿ-ಭೇದಿ ಸಮಸ್ಯೆ ಉಲ್ಬಣಗೊಂಡಿತ್ತು. ರಾತ್ರಿ ಊಟ ಮಾಡಿದ ಬಳಿಕ ವಿದ್ಯಾರ್ಥಿಗಳು ನಿದ್ದೆಗೆ ಜಾರಿದ್ದರು. ಆದರೆ ಊಟ ಸೇವಿಸಿದ ಅರ್ಧ ಗಂಟೆಯಲ್ಲೇ ಏಕಕಾಲಕ್ಕೆ ವಿದ್ಯಾರ್ಥಿಗಳು ವಾಂತಿ-ಭೇದಿಯಿಂದ ಸುಸ್ತಾಗಿದ್ದರು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಇಬ್ಬರು ವಿದ್ಯಾರ್ಥಿಗಳನ್ನು ರಿಮ್ಸ್‌ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಬಳಿಕ ಅವರು ಚೇತರಿಸಿಕೊಂಡಿದ್ದರು. ಜೂ. 29ರಂದು ಇಂತಹದ್ದೆ ಘಟನೆ ಕಲಬುರಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿತ್ತು. ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣ ಹೊರವಲಯದ ಶಾಲೆಯಲ್ಲಿ ಆಹಾರ ಸೇವಿಸಿದ 17 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದರು. ಉಪಾಹಾರ ಸೇವನೆ ಬಳಿಕ ಏಕಾಏಕಿ ವಾಂತಿ ಮಾಡಿಕೊಂಡು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, ಅವರನ್ನು ಜೇವರ್ಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 

Continue Reading

ದೇಶ

Made In India: ಜಾಗತಿಕವಾಗಿ ಪ್ರಭಾವ ಬೀರಿದ ʼಮೇಡ್‌ ಇನ್‌ ಇಂಡಿಯಾʼ ಉತ್ಪನ್ನಗಳು; ಪ್ರಧಾನಿ ಮೋದಿ ಮೆಚ್ಚುಗೆ

Made In India: ʼಮೇಕ್‌ ಇನ್‌ ಇಂಡಿಯಾʼ ಕೇಂದ್ರ ಸರ್ಕಾರ 2014ರಲ್ಲಿ ಪರಿಚಯಿಸಿದ ಈ ಅಭಿಯಾನ ಭಾರತದ ಉತ್ಪಾದನಾ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಕೂಸಾದ ಈ ಯೋಜನೆ ಮೂಲಕ ಭಾರತವನ್ನು ಉತ್ಪನ್ನಗಳ ತಯಾರಿಕಾ ಕೇಂದ್ರವನ್ನಾಗಿ ರೂಪಿಸುವ ಪ್ರಮುಖ ಉದ್ದೇಶ ಹೊಂದಲಾಗಿದೆ. ಸದ್ಯ ಈ ಯೋಜನೆ ಯಶಸ್ವಿಯಾಗಿದ್ದು, ಭಾರತ ಅನೇಕ ಕ್ಷೇತ್ರಗಳಲ್ಲಿ ಸ್ವಾವಲಂಬಿಯಾಗಿದೆ. ಇದೀಗ ಮೋದಿ ಅವರು ‘ಮೇಕ್ ಇನ್ ಇಂಡಿಯಾ’ ಯೋಜನೆಯ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ.

VISTARANEWS.COM


on

Made In India
Koo

ನವದೆಹಲಿ: ʼಮೇಕ್‌ ಇನ್‌ ಇಂಡಿಯಾʼ (Make In India)-ಕೇಂದ್ರ ಸರ್ಕಾರ 2014ರಲ್ಲಿ ಪರಿಚಯಿಸಿದ ಈ ಅಭಿಯಾನ ಭಾರತದ ಉತ್ಪಾದನಾ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತಂದಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಕನಸಿನ ಕೂಸಾದ ಈ ಯೋಜನೆ ಮೂಲಕ ಭಾರತವನ್ನು ಉತ್ಪನ್ನಗಳ ತಯಾರಿಕಾ ಕೇಂದ್ರವನ್ನಾಗಿ ರೂಪಿಸುವ ಪ್ರಮುಖ ಉದ್ದೇಶ ಹೊಂದಲಾಗಿದೆ. ಭಾರತದಲ್ಲೇ ಸರಕುಗಳನ್ನು ತಯಾರಿಸುವ ಮೂಲಕ ದೇಶದ ಆರ್ಥಿಕತೆಯನ್ನು ಮೇಲಕ್ಕೆತ್ತಲಾಗುತ್ತದೆ (Made In India). ಇದರಿಂದ ರಫ್ತು ಪ್ರಮಾಣ ಹೆಚ್ಚಿ, ಆಮದು ಕಡಿಮೆಯಾಗುತ್ತಿದೆ. ಸದ್ಯ ಈ ಯೋಜನೆ ಯಶಸ್ವಿಯಾಗಿದ್ದು, ಭಾರತ ಅನೇಕ ಕ್ಷೇತ್ರಗಳಲ್ಲಿ ಸ್ವಾವಲಂಬಿಯಾಗಿದೆ. ಇದೀಗ ಮೋದಿ ಅವರು ‘ಮೇಕ್ ಇನ್ ಇಂಡಿಯಾ’ ಯೋಜನೆಯ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ.

MyGovIndia ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಭಾರತದಲ್ಲೇ ತಯಾರಾದ ಉತ್ಪನ್ನಗಳು ಹೇಗೆ ಜಾಗತಿಕವಾಗಿ ಪರಿಣಾಮ ಬೀರಿವೆ ಎನ್ನುವುದನ್ನು ವಿವರಿಸುವ ಪೋಸ್ಟ್‌ ಹಂಚಿಕೊಂಡಿದೆ. ಇದನ್ನು ಶೇರ್‌ ಮಾಡಿಕೊಂಡಿರುವ ಮೋದಿ ಅವರು, ‘ʼಮೇಕ್ ಇನ್ ಇಂಡಿಯಾ’ ಭಾರತದ ಆರ್ಥಿಕತೆಯನ್ನು ಜಾಗತಿಕ ವೇದಿಕೆಗೆ ಹೇಗೆ ಕೊಂಡೊಯ್ಯುತ್ತಿದೆ ಎಂಬುದರ ಒಂದು ನೋಟ ಇಲ್ಲಿದೆʼʼ ಎಂದು ಬರೆದುಕೊಂಡಿದ್ದಾರೆ.

MyGovIndia ಪೋಸ್ಟ್‌ನಲ್ಲಿ ಏನಿದೆ?

ʼʼಸ್ಥಳೀಯ ಕರಕುಶಲತೆಯಿಂದ ಜಾಗತಿಕ ಪರಿಣಾಮದವರೆಗೆ: ಮೇಡ್‌ ಇನ್‌ ಇಂಡಿಯಾ ಯಶಸ್ಸಿನ ಕಥೆ. ಮೇಡ್ ಇನ್ ಇಂಡಿಯಾ ಉಪಕ್ರಮವು ಜಾಗತಿಕವಾಗಿ ಭಾರತೀಯ ನಿರ್ಮಿತ ಉತ್ಪನ್ನಗಳ ಯಶಸ್ಸನ್ನು ಸಾರುತ್ತಿದೆ. ಸೈಕಲ್‌ನಿಂದ ಹಿಡಿದು ಡಿಜಿಟಲ್ ಪಾವತಿಗಳವರೆಗೆ ಭಾರತವು ತನ್ನ ಉತ್ಪನ್ನಗಳೊಂದಿಗೆ ಜಗತ್ತಿನ ಗಮನ ಸೆಳೆದಿದೆʼʼ ಎಂದು MyGovIndia ಮಾಡಿರುವ ಪೋಸ್ಟ್‌ ಅನ್ನು ಮೋದಿ ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇನ್ನು ಸರಣಿ ಪೋಸ್ಟ್‌ ಹಂಚಿಕೊಂಡಿರುವ MyGovIndia ಭಾರತದಲ್ಲಿ ತಯಾರಾಗಿರುವ ಉತ್ಪನ್ನಗಳು ಹೇಗೆ ಜಾಗತಿಕವಾಗಿ ಪರಿಣಾಮ ಬೀರಿದೆ ಎನ್ನುವುದನ್ನು ವಿವರಿಸಿದೆ.

ಭಾರತದ ಸೈಕಲ್‌ಗೆ ವಿದೇಶಗಳಲ್ಲಿ ಬೇಡಿಕೆ

ಭಾರತದಲ್ಲಿ ತಯಾರಾಗುವ ಸೈಕಲ್‌ ಜಾಗತಿಕವಾಗಿ ಛಾಪು ಮೂಡಿಸಿದೆ. ಇಂಗ್ಲೆಂಡ್‌, ಜರ್ಮನಿ ಮತ್ತು ನೆದರ್‌ಲ್ಯಾಂಡ್‌ಗೆ ಭಾರತೀಯ ಸೈಕಲ್‌ಗಳನ್ನು ರಫ್ತು ಮಾಡಲಾಗುತ್ತಿದೆ. ಈ ಬೆಳವಣಿಗೆಯು ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಹೆಚ್ಚುತ್ತಿರುವ ಭಾರತದ ಪ್ರಭಾವವನ್ನು ಎತ್ತಿ ತೋರಿಸುತ್ತದೆ.

ರಷ್ಯಾ ಸೈನಿಕರಿಗೆ ಬಿಹಾರದಿಂದ ಶೂ ಪೂರೈಕೆ

ರಷ್ಯಾ ಸೈನಿಕರಿಗೆ ಬಿಹಾರದಲ್ಲಿ ತಯಾರಿಸಲಾಗುವ ಸೇಫ್ಟಿ ಶೂಗಳನ್ನು ಪೂರೈಸಲಾಗುತ್ತಿದೆ. ಈ ಮೈಲಿಗಲ್ಲು ಅಂತಾರಾಷ್ಟ್ರೀಯ ರಕ್ಷಣಾ ಮಾರುಕಟ್ಟೆಗಳಲ್ಲಿ ಹೆಚ್ಚುತ್ತಿರುವ ಭಾರತದ ಪ್ರಭಾವ ಮತ್ತು ಉತ್ಪಾದನಾ ಸಾಮರ್ಥ್ಯಗಳನ್ನು ಪ್ರತಿಬಿಂಬಿಸುತ್ತಿದೆ. ಜತೆಗೆ ಕೆಲವು ಯುರೋಪಿಯನ್‌ ದೇಶಗಳಿಗೆ ಡಿಸೈನರ್ ಶೂಗಳನ್ನೂ ರಫ್ತು ಮಾಡಲಾಗುತ್ತಿದೆ.

ಕಾಶ್ಮೀರದ ಬ್ಯಾಟ್‌ಗಳಿಗೆ ಜಾಗತಿಕ ಬೇಡಿಕೆ

ಇತ್ತೀಚೆಗೆ ನಡೆದ ಟಿ-20 ವಿಶ್ವಕಪ್ ವೇಳೆ ಕಾಶ್ಮೀರದ ವಿಲ್ಲೋ ಬ್ಯಾಟ್‌ಗಳಿಗೆ ವಿದೇಶಗಳಲ್ಲಿಯೂ ಹೆಚ್ಚಿನ ಬೇಡಿಕೆ ಕಂಡು ಬಂದಿತ್ತು. ಈ ಬ್ಯಾಟ್‌ಗಳು ಭಾರತದ ಉತ್ಕೃಷ್ಟ ಕರಕುಶಲತೆ ಮತ್ತು ಅಂತಾರಾಷ್ಟ್ರೀಯ ಗುಣಮಟ್ಟದ ಕಾರಣದಿಂದ ಜನಪ್ರಿಯವಾಗುತ್ತಿದೆ.

ಅಮೂಲ್‌ ಬ್ರ್ಯಾಂಡ್‌ಗೆ ಎಲ್ಲೆಡೆ ಮನ್ನಣೆ

ಅಮುಲ್ ಬ್ರ್ಯಾಂಡ್‌ ಭಾರತದ ವಿಶಿಷ್ಟ ರುಚಿಗಳನ್ನು ಜಗತ್ತಿನಾದ್ಯಂತ ಪಸರಿಸುತ್ತಿದೆ. ತನ್ನ ಉತ್ಪನ್ನಗಳನ್ನು ಅಮೆರಿಕದಲ್ಲಿ ಬಿಡುಗಡೆ ಮಾಡಲು ಮುಂದಾಗಿದೆ. ಈ ಅಂತಾರಾಷ್ಟ್ರೀಯ ವಿಸ್ತರಣೆಯು ಭಾರತೀಯ ಹಾಲಿನ ಉತ್ಪನ್ನಗಳನ್ನು ವಿಶ್ವಾದ್ಯಂತ ಹರಡುವ ಅಮುಲ್‌ನ ಬದ್ಧತೆಗೆ ಸಾಕ್ಷಿ.

ವಿದೇಶದಲ್ಲಿಯೂ ಯುಪಿಐ ಕಮಾಲ್‌

ಭಾರತದ ಯುಪಿಐ ವ್ಯವಸ್ಥೆಗೆ ಈಗ ಜಾಗತಿಕ ಮನ್ನಣೆ ಲಭಿಸಿದ್ದು, ಅನೇಕ ದೇಶಗಳು ಈ ತಡೆರಹಿತ ಡಿಜಿಟಲ್ ಪಾವತಿಗಳನ್ನು ಸಕ್ರಿಯಗೊಳಿಸಿವೆ. ಇದು ಡಿಜಿಟಲ್ ವಹಿವಾಟುಗಳಲ್ಲಿ ಕ್ರಾಂತಿಯನ್ನುಂಟು ಮಾಡುವ ಭಾರತದ ಬದ್ಧತೆಯನ್ನು ಒತ್ತಿ ಹೇಳುತ್ತದೆ.

ಕ್ರಾಂತಿ ಸೃಷ್ಟಿಸಿದ ಬ್ರಹ್ಮೋಸ್ ಕ್ಷಿಪಣಿ

ಭಾರತ ಮತ್ತು ರಷ್ಯಾ ನಡುವಿನ ಜಂಟಿ ಉದ್ಯಮವಾದ ಬ್ರಹ್ಮೋಸ್ ಕ್ಷಿಪಣಿ ಈಗ ದಕ್ಷಿಣ ಚೀನಾ ಸಮುದ್ರದಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಬೆಳವಣಿಗೆಯು ಭಾರತದ ರಕ್ಷಣಾ ಸಾಮರ್ಥ್ಯವನ್ನು ಜಗತ್ತಿಗೆ ಸಾರಿ ಹೇಳಿದೆ. ಮಾತ್ರವಲ್ಲ ಜಾಗತಿಕ ಭದ್ರತೆಯನ್ನು ಹೆಚ್ಚಿಸುವಲ್ಲಿ ನಮ್ಮ ದೇಶದ ಮಹತ್ವದ ಪಾತ್ರವನ್ನು ಒತ್ತಿ ಹೇಳಿದೆ.

ಇ-ಕಾಮರ್ಸ್ ಮಾರುಕಟ್ಟೆಯಲ್ಲಿಯೂ ಪ್ರಾಬಲ್ಯ

ಅಮೆಜಾನ್‌ನ ʼಬ್ಲ್ಯಾಕ್ ಫ್ರೈಡೆʼ ಮತ್ತು ʼಸೈಬರ್ ಮಂಡೆʼ ಮಾರಾಟದಲ್ಲಿ ಭಾರತೀಯ ಉತ್ಪನ್ನಗಳು ಪ್ರಾಬಲ್ಯ ಸಾಧಿಸಿವೆ. ಈ ಯಶಸ್ಸಿನ ಕಥೆಯು ಮೇಡ್‌ ಇನ್‌ ಇಂಡಿಯಾ ವಸ್ತುಗಳಿಗೆ ಅಂತಾರಾಷ್ಟ್ರೀಯ ಬೇಡಿಕೆ ಮತ್ತು ಜಾಗತಿಕ ಇ-ಕಾಮರ್ಸ್ ಮಾರುಕಟ್ಟೆಗಳಲ್ಲಿ ಭಾರತದ ಹೆಚ್ಚುತ್ತಿರುವ ಪ್ರಭಾವವನ್ನು ತೋರಿಸುತ್ತದೆ.

ಇದನ್ನೂ ಓದಿ: Made In Bihar: ರಷ್ಯಾ ಸೈನ್ಯಕ್ಕೆ ಬಿಹಾರದಿಂದ ಸೇಫ್ಟಿ ಶೂ ಪೂರೈಕೆ; ವಾರ್ಷಿಕ 100 ಕೋಟಿ ರೂ. ವ್ಯವಹಾರ

Continue Reading
Advertisement
ICC T20 Ranking
ಪ್ರಮುಖ ಸುದ್ದಿ18 mins ago

ICC T20 Ranking: ಟಿ20 ರ್ಯಾಂಕಿಂಗ್​ನಲ್ಲಿ ಭರ್ಜರಿ ಬಡ್ತಿ ಪಡೆದ ಯಶಸ್ವಿ ಜೈಸ್ವಾಲ್​, ಶುಭ್​ಮನ್​ ಗಿಲ್​

Viral Video
ವೈರಲ್ ನ್ಯೂಸ್53 mins ago

Viral Video: ಡಿಸಿ ಆಫೀಸ್‌ನಲ್ಲಿ ಗೋಳಾಡುತ್ತಾ ನೆಲದಲ್ಲಿ ಹೊರಳಾಡಿದ ರೈತ; ವೈರಲಾಗ್ತಿದೆ ಈ ವಿಡಿಯೋ

Yezdi Roadster
ಆಟೋಮೊಬೈಲ್1 hour ago

Yezdi Roadster : ಯೆಜ್ಡಿ ರೋಡ್‌ಸ್ಟರ್ ಜತೆಗೆ ಈ ಹಲವು ಆ್ಯಕ್ಸೆಸರಿಗಳಿರುವ ಟ್ರಯಲ್ ಪ್ಯಾಕ್ ಉಚಿತ

Viral Video
ವೈರಲ್ ನ್ಯೂಸ್2 hours ago

Viral Video: 300 ಮೊಸಳೆಗಳಿರುವ ಕೆರೆಯಲ್ಲಿ ಬೈಕ್‌, ಕಾರು ಸ್ಟಂಟ್‌; ಹುಚ್ಚಾಟ ಮೆರೆದ ಯುವಕರಿಗೆ ಆಗಿದ್ದೇನು ಗೊತ್ತಾ?

ಪ್ರಮುಖ ಸುದ್ದಿ2 hours ago

Karnataka Rain: ವರುಣಾರ್ಭಟಕ್ಕೆ ರಾಜ್ಯದ ಹಲವೆಡೆ ನದಿಗಳು ಉಕ್ಕಿ ಹರಿದು ನೆರೆ ಸೃಷ್ಟಿ; ಕುಸಿದ ಸೇತುವೆಗಳು!

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : 8 ಚಿನ್ನ, 1 ಬೆಳ್ಳಿ, 3 ಕಂಚು: ಒಲಿಂಪಿಕ್ಸ್ ಹಾಕಿ ಸ್ಪರ್ಧೆಯಲ್ಲಿ ಭಾರತ ತಂಡದ ಸಾಧನೆಗಳ ವಿವರ ಇಲ್ಲಿದೆ

Viral Video
ವೈರಲ್ ನ್ಯೂಸ್2 hours ago

Viral Video: ಸಫಾರಿಯಲ್ಲಿ ಪ್ರವಾಸಿಗರ ಎದುರೇ ಸಿಂಹಗಳ ಕಾಮಕೇಳಿ!

Olympic Games History
ಕ್ರೀಡೆ2 hours ago

Olympic Games History: ಒಲಿಂಪಿಕ್ಸ್​ನಲ್ಲಿ ಗ್ರೀಸ್​ ದೇಶಕ್ಕೆ ವಿಶೇಷ ಮಾನ್ಯತೆ ನೀಡುವುದೇಕೆ?

Amitabh Bachchan holds umbrella for Jaya Bachchan
ಬಾಲಿವುಡ್2 hours ago

Amitabh Bachchan: ಅಮಿತಾಭ್ ರೊಮ್ಯಾಂಟಿಕ್ ಮೂಡ್‌ನಲ್ಲಿದ್ದರೂ ಮುಖ ಊದಿಸಿಕೊಂಡೇ ಇದ್ದ ಜಯಾ ಬಚ್ಚನ್!

Viral Video
ವೈರಲ್ ನ್ಯೂಸ್3 hours ago

Viral Video: ನೋಡ ನೋಡ್ತಿದ್ದಂತೆ ಮೂರನೇ ಮಹಡಿಯಿಂದ ಬಿದ್ದ ಮಹಿಳೆ; ಶಾಕಿಂಗ್‌ ವಿಡಿಯೋ ವೈರಲ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ3 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ4 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌