Tauba Tauba : ಲಂಡನ್‌ ಬೀದಿಯಲ್ಲಿ 'ತೌಬಾ ತೌಬಾ' ಹಾಡಿಗೆ ಸಖತ್‌ ಆಗಿ ಸ್ಟೆಪ್ಸ್‌ ಹಾಕಿದ ಬೆಡಗಿಯರು; ವಿಡಿಯೊ ವೈರಲ್ - Vistara News

Latest

Tauba Tauba : ಲಂಡನ್‌ ಬೀದಿಯಲ್ಲಿ ‘ತೌಬಾ ತೌಬಾ’ ಹಾಡಿಗೆ ಸಖತ್‌ ಆಗಿ ಸ್ಟೆಪ್ಸ್‌ ಹಾಕಿದ ಬೆಡಗಿಯರು; ವಿಡಿಯೊ ವೈರಲ್

Tauba Tauba: ನಟ ವಿಕ್ಕಿ ಕೌಶಲ್ ‘ಬ್ಯಾಡ್ ನ್ಯೂಸ್‌’ ಚಿತ್ರದ ‘ತೌಬಾ ತೌಬಾ’ ಹಾಡಿನ ವಿಡಿಯೊ ಬಿಡುಗಡೆಯಾಗಿದೆ. ಇದು ಈಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ಇನ್ನು ರೀಲ್ಸ್ ಪ್ರಿಯರಂತೂ ಈ ಹಾಡಿಗೆ ಈಗಾಗಲೇ ಹೆಜ್ಜೆ ಹಾಕಲು ತಯಾರಾಗಿದ್ದಾರೆ. ಲಂಡನ್ನ ಬೀದಿಯಲ್ಲಿ ಹುಡುಗಿಯರಿಬ್ಬರೂ ವಿಕ್ಕಿ ಕೌಶಲ್ ಅಭಿನಯದ ಬ್ಯಾಡ್ ನ್ಯೂಜ್ ಚಿತ್ರದ ‘ತೌಬಾ ತೌಬಾ’ ಹಾಡಿಗೆ ಡ್ಯಾನ್ಸ್ ಮಾಡುವ ಮೂಲಕ ಎಲ್ಲರ ಮೆಚ್ಚುಗೆ ಗಳಿಸಿದಂತೂ ಸತ್ಯ.

VISTARANEWS.COM


on

Tauba Tauba
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ಲಂಡನ್ : ವಿಕ್ಕಿ ಕೌಶಲ್ (Vicky Kaushal) ಮತ್ತು ತೃಪ್ತಿ ಡಿಮ್ರಿ ನಟನೆಯ ‘ಬ್ಯಾಡ್ ನ್ಯೂಸ್​​​ ‘ ಬಾಲಿವುಡ್​ ಚಿತ್ರ ಜುಲೈ 19ಕ್ಕೆ ಬೆಳ್ಳಿ ತೆರೆಗೆ ಅಪ್ಪಳಿಸಲಿದೆ. ಈ ಎಲ್ಲದಕ್ಕಿಂತ ಮೊದಲೇ ಅದರ ಹಾಡೊಂದು ವೈರಲ್ ಆಗಿದೆ. ‘ತೌಬಾ ತೌಬಾ’ (Tauba Tauba) ಹಾಡಿನ ವಿಡಿಯೊ ಬಿಡುಗಡೆಯಾದ ಕ್ಷಣದಿಂದ ರೀಲ್ಸ್ ಹಾಗೂ ಇನ್ನಿತರ ಕಾರಣಕ್ಕೆ ಜನಪ್ರಿಯವಾಗುತ್ತಿದೆ. ಪಂಜಾಬಿ ಸ್ಟ್ರೈಲ್​ನಲ್ಲಿರುವ ಇದರ ಡ್ಯಾನ್ಸ್ ಆನ್‍ಲೈನ್‍ನಲ್ಲಿ ಬಿರುಗಾಳಿ ಎಬ್ಬಿಸಿದೆ . ಹಾಗಾಗಿ ರೀಲ್ಸ್‌ ಪ್ರಿಯರು ಈ ಡ್ಯಾನ್ಸ್ ಅನ್ನು ಮರುಸೃಷ್ಟಿಸಲು ಪ್ರಯತ್ನಿಸಿದ್ದಾರೆ. ಈ ನಡುವೆ ಲಂಡನ್‍ನ ಬೀದಿಯಲ್ಲೂ ಈ ಹಾಡಿಗೆ ಯುವ ತಂಡವೊಂದು ಕುಣಿದು ಕುಪ್ಪಳಿಸಿದೆ. ಅದರ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Vicky Kaushal

ಈ ವಿಡಿಯೊದಲ್ಲಿ ಕಪ್ಪು ಕುರ್ತಾ ಧರಿಸಿದ ಇಬ್ಬರು ಹುಡುಗಿಯರು ಕಲರ್​ಫುಲ್​​ ದುಪಟ್ಟಾಗಳೊಂದಿಗೆ ಬೀದಿಗಳಲ್ಲಿ ಡ್ಯಾನ್ಸ್ ಮಾಡುತ್ತಿರುವುದು ಕಂಡುಬಂದಿದೆ. ತೌಬಾ ತೌಬಾ ಹಾಡು ಪ್ಲೇ ಮಾಡಿ ಹಾಡಿನ ಬೀಟ್‍ಗಳಿಗೆ ಸಲೀಸಾಗಿ ಸ್ಟೆಪ್ ಹಾಕಿದ್ದಾರೆ. ಅಲ್ಲಿ ತಮ್ಮ ಗಿದ್ಧಾ ಸ್ಟೆಪ್‍ಗಳನ್ನು (ಪಂಜಾಬಿ ಸ್ಟೆಪ್​) ಸೇರಿದ್ದಾರೆ ಹಾಡಿನಲ್ಲಿ ವಿಕ್ಕಿ ಕೌಶಲ್ ಮಾಡುವ ಅದೇ ಹೆಜ್ಜೆಗಳನ್ನು ಅವರು ಮಾಡಲು ಪ್ರಯತ್ನಿಸಿದ್ದಾರೆ. ಈ ವಿಡಿಯೊವನ್ನು @annaikaahuja ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವಿಡಿಯೊವನ್ನು ಹಂಚಿಕೊಂಡ ಬಳಕೆದಾರರು ನಟ ವಿಕ್ಕಿ ಕೌಶಲ್ ಮತ್ತು ಗಾಯಕ ಕರಣ್ ಔಜ್ಲಾ ಅವರಿಗೆ ಟ್ಯಾಗ್ ಮಾಡಿ, “@karanaujla @vickykaushal09 ನಮ್ಮ ಪಂಜಾಬಿ ರಾಜರಿಗೆ, ಗಿದ್ಧಾ ಟಚ್ ಕಡ್ಡಾಯ ಎಂದು ಬರೆದಿದ್ದಾರೆ.

ಈ ಪೋಸ್ಟ್ ಅನ್ನು ಹಂಚಿಕೊಂಡಾಗಿನಿಂದ, ಇದಕ್ಕೆ ಸಾವಿರಾರು ವೀಕ್ಷಣೆಗಳು ಮತ್ತು ಲೈಕ್‍ಗಳು ಬಂದಿದೆ. ಅಲ್ಲದೇ ಇದರ ವೀಕ್ಷಕರ ಸಂಖ್ಯೆಗಳು ಇನ್ನೂ ವೇಗವಾಗಿ ಹೆಚ್ಚುತ್ತಿವೆ. ಈ ವೈರಲ್ ವಿಡಿಯೊಗೆ ಹಲವರು ಕಾಮೆಂಟ್ ಕೂಡ ಮಾಡಿದ್ದಾರೆ. ಪೋಸ್ಟ್‌ನ ಕಾಮೆಂಟ್‍ಗಳ ವಿಭಾಗದಲ್ಲಿ ಅನೇಕ ಬಳಕೆದಾರರು ಹಾರ್ಟ್ ಮತ್ತು ಫಯರ್ ಎಮೋಜಿಗಳೊಂದಿಗೆ ಪ್ರತಿಕ್ರಿಯಿಸಿದ್ದಾರೆ. “ನಮ್ಮ ಫೀಡ್‌ಗಳಿಗೆ ತೌಬಾ ತೌಬಾದ ಆವೃತ್ತಿ ಬೇಕು” ಎಂದು ಬಳಕೆದಾರರೊಬ್ಬರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತೊಬ್ಬರು ತುಂಬಾ ಚೆನ್ನಾಗಿ ಮಾಡಿರುವುದಾಗಿ ತಿಳಿಸಿದ್ದಾರೆ. ಇನ್ನೊಬ್ಬರು “ತುಂಬಾ ಒಳ್ಳೆಯದಾಗಿದೆ” ಎಂದು ಬರೆದಿದ್ದಾರೆ. ಮತ್ತೊಬ್ಬರು “ಜಸ್ಟ್ ವಾವ್” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಸ್ಟ್ರೆಚರ್‌ ಇಲ್ಲದ ಸರ್ಕಾರಿ ಆಸ್ಪತ್ರೆ; ಪತಿಯನ್ನು ಬೆನ್ನ ಮೇಲೆ ಹೊತ್ತು ನಡೆದ ಪತ್ನಿ! ಮನಮಿಡಿಯುವ ವಿಡಿಯೊ

ಆನಂದ್ ತಿವಾರಿ ಅವರ ನಿರ್ದೇಶನದ ‘ಬ್ಯಾಡ್ ನ್ಯೂಸ್​’ ಹಾಸ್ಯ ಚಿತ್ರದಲ್ಲಿ ತೃಪ್ತಿ ಡಿಮ್ರಿ, ವಿಕ್ಕಿ ಕೌಶಲ್ ಮತ್ತು ಎಮಿ ವಿರ್ಕ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಜುಲೈ 19 ರಂದು ಸಿನಿಮಾ ಬಿಡುಗಡೆಯಾಗುತ್ತಿದೆ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Usha Chilukuri Vance: ಟ್ರಂಪ್ ಅವರ ಉಪಾಧ್ಯಕ್ಷ ಅಭ್ಯರ್ಥಿಯ ಪತ್ನಿ ಭಾರತೀಯ ಸಂಸ್ಕೃತಿಯ ಪ್ರತಿಪಾದಕಿ!

ಈ ಬಾರಿ ಅಮೆರಿಕದ ಚುನಾವಣೆ ಕಣದಲ್ಲಿರುವ ಡೊನಾಲ್ಡ್ ಟ್ರಂಪ್ ಅವರ ಉಪಾಧ್ಯಕ್ಷ ಅಭ್ಯರ್ಥಿಯಾಗಿ ಆಯ್ಕೆಯಾದ ಓಹಿಯೋ ಸೆನೆಟರ್ ಜೆಡಿ ವ್ಯಾನ್ಸ್ ಅವರ ಪತ್ನಿ ಉಷಾ ಚಿಲುಕುರಿ ವ್ಯಾನ್ಸ್ (Usha Chilukuri Vance) ಭಾರತೀಯ ಮೂಲದವರಾಗಿದ್ದಾರೆ. ಇವರ ಪೋಷಕರು ಅಮೆರಿಕಕ್ಕೆ ವಲಸೆ ಬಂದವರು. ಕ್ಯಾಲಿಫೋರ್ನಿಯಾದಲ್ಲೇ ಬೆಳೆದಿರುವ ಉಷಾ ಅವರು ಭಾರತ ಮತ್ತು ಭಾರತೀಯ ಸಂಸ್ಕೃತಿಯ ಬಗ್ಗೆ ಅಪಾರವಾದ ಗೌರವ ಹೊಂದಿದ್ದಾರೆ. ಒಂದು ವೇಳೆ ಟ್ರಂಪ್ ಮುಂದೆ ಅಮೆರಿಕದ ಅಧ್ಯಕ್ಷರಾದರೆ ಅವರ ಆಡಳಿತದ ಮೇಲೆ ಉಷಾ ಅವರ ಆಲೋಚನೆಗಳು ಪರಿಣಾಮ ಬೀರಬಹುದೇ ಎಂಬ ಬಗ್ಗೆ ಈಗ ಕುತೂಹಲ ಮೂಡಿದೆ.

VISTARANEWS.COM


on

By

Usha Chilukuri Vance
Koo

ಅಮೆರಿಕದ (US) ಮಾಜಿ ಅಧ್ಯಕ್ಷ (former President) ಡೊನಾಲ್ಡ್ ಟ್ರಂಪ್ (Donald Trump) ಅವರ ಪಕ್ಷದ ಉಪಾಧ್ಯಕ್ಷ ಅಭ್ಯರ್ಥಿಯಾಗಿ (vice presidential) ಓಹಿಯೋ ಸೆನೆಟರ್ (Ohio Senator) ಜೆಡಿ ವ್ಯಾನ್ಸ್ (JD Vance) ಅವರನ್ನು ಆಯ್ಕೆ ಮಾಡಲಾಗಿದೆ. ವಿಶೇಷ ಅಂದರೆ ಅವರ ಪತ್ನಿ ಉಷಾ ಚಿಲುಕುರಿ ವ್ಯಾನ್ಸ್ (Usha Chilukuri Vance) ಭಾರತೀಯ ಮೂಲದವರಾಗಿದ್ದಾರೆ. 38 ವರ್ಷದ ಉಷಾ ಚಿಲುಕುರಿ ವ್ಯಾನ್ಸ್ ಕ್ಯಾಲಿಫೋರ್ನಿಯಾ ಉಪನಗರದಲ್ಲಿ ಬೆಳೆದವರು.

ಉಷಾ ಅವರು ಯೇಲ್ ಮತ್ತು ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ಅಧ್ಯಯನ ಮಾಡಿದ್ದು, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಜಾನ್ ರಾಬರ್ಟ್ಸ್ ಮತ್ತು ಬ್ರೆಟ್ ಕವನಾಗ್ ಅವರಿಗೆ ಕ್ಲರ್ಕ್‌ ಆಗಿದ್ದರು. ಓಹಿಯೋ ಸೆನೆಟರ್ ಜೆಡಿ ವ್ಯಾನ್ಸ್ ಅವರನ್ನು ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಜುಲೈ 15ರಂದು ವೈಟ್ ಹೌಸ್ ಅನ್ನು ಮರಳಿ ಗೆಲ್ಲುವ ಪ್ರಯತ್ನದಲ್ಲಿ ಉಪಾಧ್ಯಕ್ಷ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದಾರೆ.

ಉಪಾಧ್ಯಕ್ಷ ಅಭ್ಯರ್ಥಿಯಾಗುವ ಮೊದಲು 39 ವರ್ಷದ ವ್ಯಾನ್ಸ್ ಅವರು ಓಹಿಯೋದಿಂದ ಹೊಸ ರಿಪಬ್ಲಿಕನ್ ಸೆನೆಟರ್ ಆಗಿ ಆಯ್ಕೆಯಾಗಿರುವ ಕಾರಣ ಅವರು ಈಗಾಗಲೇ ಅಮೆರಿಕನ್ನರಿಗೆ ಚಿರಪರಿಚಿತರಾಗಿದ್ದಾರೆ. ಅವರ ಆತ್ಮಚರಿತ್ರೆಯು ಬಿಳಿಯ ಕಾರ್ಮಿಕ ವರ್ಗದ ಸಮಸ್ಯೆಗಳನ್ನು ವಿವರಿಸುತ್ತದೆ.

Usha Chilukuri Vance


ವಾನ್ಸ್ ಅವರಿಗೆ ಪತ್ನಿ ಉಷಾ ವ್ಯಾನ್ಸ್ ಎಲ್ಲದರಲ್ಲೂ ಬೆಂಬಲವಾಗಿ ನಿಂತಿದ್ದಾರೆ. ಮಿಲ್ವಾಕೀಯ ರಿಪಬ್ಲಿಕನ್ ನ್ಯಾಷನಲ್ ಕನ್ವೆನ್ಶನ್ ಮಹಡಿಯಲ್ಲಿ ಡೊನಾಲ್ಡ್ ಟ್ರಂಪ್ ಅವರ ಉಪಾಧ್ಯಕ್ಷ ಅಭ್ಯರ್ಥಿಯಾಗಿ ಧ್ವನಿ ಮತದ ಮೂಲಕ ವ್ಯಾನ್ಸ್ ಆಯ್ಕೆಯಾದಾಗ ಉಷಾ ಅವರ ಪಕ್ಕದಲ್ಲಿ ನಿಂತು ಹುರಿದುಂಬಿಸಿದ್ದರು. ಜೆಡಿ ವ್ಯಾನ್ಸ್ ಅವರ ಪತ್ನಿ ಉಷಾ ಚಿಲುಕುರಿ ವ್ಯಾನ್ಸ್ ಅವರು ಭಾರತೀಯ ಮೌಲ್ಯಗಳು ಮತ್ತು ಸಂಸ್ಕೃತಿ ಬಗ್ಗೆ ಅಪಾರವಾದ ಗೌರವವನ್ನು ಹೊಂದಿದ್ದಾರೆ. ಭಾರತೀಯ ವಲಸಿಗರ ಮಗಳಾಗಿರುವ ಉಷಾ ಚಿಲುಕುರಿ ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋದಲ್ಲಿ ಬೆಳೆದರು.

ಯೇಲ್ ವಿಶ್ವವಿದ್ಯಾನಿಲಯದಿಂದ ಇತಿಹಾಸದಲ್ಲಿ ಬ್ಯಾಚುಲರ್ ಪದವಿ ಪಡೆದಿರುವ ಅವರು ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಿಂದ ಮಾಸ್ಟರ್ ಆಫ್ ಫಿಲಾಸಫಿ ಪದವಿಯನ್ನು ಪಡೆದಿದ್ದಾರೆ. ವಾಷಿಂಗ್ಟನ್‌ನಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬ್ರೆಟ್ ಕವನಾಗ್‌ ಅವರ ಗುಮಾಸ್ತರಾಗಿ ಒಂದು ವರ್ಷ ಕಾರ್ಯ ನಿರ್ವಹಿಸಿದ್ದಾರೆ. ಬಳಿಕ ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್‌ಗೆ ಕಾನೂನು ಗುಮಾಸ್ತರಾಗಿ ಒಂದು ವರ್ಷ ಕಳೆದರು.

ಮುಂಗರ್, ಟೋಲ್ಲೆಸ್ ಮತ್ತು ಓಲ್ಸನ್ ಕಾನೂನು ಸಂಸ್ಥೆಯಲ್ಲಿ ವಕೀಲರಾಗಿದ್ದ ಅವರು ಈಗ ಸಂಸ್ಥೆಯನ್ನು ತೊರೆದಿರುವುದಾಗಿ ಆ ಸಂಸ್ಥೆ ಪ್ರಕಟಿಸಿದೆ. ಉನ್ನತ ಶಿಕ್ಷಣ, ಸ್ಥಳೀಯ ಸರ್ಕಾರ, ಮನರಂಜನೆ ಮತ್ತು ತಂತ್ರಜ್ಞಾನ, ಸೆಮಿಕಂಡಕ್ಟರ್‌ಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಂಕೀರ್ಣ ನಾಗರಿಕ ದಾವೆ ಮತ್ತು ಮೇಲ್ಮನವಿಗಳನ್ನು ಅವರು ನಿರ್ವಹಿಸಿದ್ದಾರೆ.

ಯೇಲ್‌ನಲ್ಲಿ ನಾಲ್ಕು ವರ್ಷಗಳ ಪಠ್ಯೇತರ ಚಟುವಟಿಕೆಯ ಅನಂತರ ಅವರು ಕೇಂಬ್ರಿಡ್ಜ್‌ನಲ್ಲಿ ಗೇಟ್ಸ್ ಫೆಲೋ ಆಗಿ ತಮ್ಮ ಅಧ್ಯಯನವನ್ನು ಮುಂದುವರಿಸಿದರು. ಅಲ್ಲಿ ಅವರು ಎಡಪಂಥೀಯ ಮತ್ತು ಉದಾರವಾದಿ ಗುಂಪುಗಳೊಂದಿಗೆ ತೊಡಗಿಸಿಕೊಂಡರು. 2014ರಲ್ಲಿ ನೋಂದಾಯಿತ ಡೆಮೋಕ್ರಾಟ್ ಆಗಿದ್ದರು.

Usha Chilukuri Vance:


ಉಷಾ ಮತ್ತು ಜೆಡಿ ವಾನ್ಸ್ ಮೊದಲ ಬಾರಿಗೆ ಯೇಲ್ ಲಾ ಸ್ಕೂಲ್‌ನಲ್ಲಿ ಭೇಟಿಯಾದರು. 2014ರಲ್ಲಿ ಕೆಂಟುಕಿಯಲ್ಲಿ ಹಿಂದೂ ಅರ್ಚಕರೊಬ್ಬರ ಸಮ್ಮುಖದಲ್ಲಿ ವಿವಾಹವಾಗಿದ್ದರು. ವ್ಯಾನ್ಸ್ ದಂಪತಿಗೆ ಮೂವರು ಮಕ್ಕಳಿದ್ದಾರೆ.

ಜೆಡಿ ಯಶಸ್ಸಿನಲ್ಲಿ ಉಷಾ ಅವರ ಪಾತ್ರ ಮುಖ್ಯ

ಪತಿಯ ಸಾಧನೆಯಲ್ಲಿ ಉಷಾ ವ್ಯಾನ್ಸ್ ಗಣನೀಯ ಕೊಡುಗೆ ನೀಡಿದ್ದಾರೆ. 2020ರಲ್ಲಿ ರಾನ್ ಹೊವಾರ್ಡ್ ನಿರ್ದೇಶಿಸಿದ ಚಲನಚಿತ್ರದಲ್ಲಿ ಅಳವಡಿಸಲಾದ ಹಿಲ್‌ಬಿಲ್ಲಿ ಎಲಿಜಿ ಎಂಬ ಕತೆ ವ್ಯಾನ್ಸ್ ಅವರ ಆತ್ಮಚರಿತ್ರೆಯ ಭಾಗವಾಗಿದೆ. ಇದರಲ್ಲಿ ಉಷಾ ಅವರನ್ನು ಜೆಡಿ ತನ್ನ “ಯೇಲ್ ಸ್ಪಿರಿಟ್ ಗೈಡ್” ಎಂದು ಹೇಳಿದ್ದಾರೆ. ಅವಕಾಶಗಳನ್ನು ಹುಡುಕಲು ಅವಳು ಯಾವಾಗಲೂ ನನ್ನನ್ನು ಪ್ರೋತ್ಸಾಹಿಸುತ್ತಿದ್ದಳು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Donald Trump: ಬೆದರಿಕೆಗೆ ಬಗ್ಗದ ಡೊನಾಲ್ಡ್‌ ಟ್ರಂಪ್;‌ ಕಿವಿಗೆ ಬ್ಯಾಂಡೇಜ್‌ ಕಟ್ಟಿಕೊಂಡು ಜನರೆದುರು ಪ್ರತ್ಯಕ್ಷ!

ಉಷಾ ಅವರ ಕುರಿತು ಮಾತನಾಡಿರುವ ಯುಎಸ್ ಮೂಲದ ಜಾಗತಿಕ ರಿಯಲ್ ಎಸ್ಟೇಟ್ ಹೂಡಿಕೆ ಸಲಹೆಗಾರ ಮತ್ತು ಪ್ರಸಿದ್ಧ ಉದ್ಯಮಿ ಎಐ ಮೇಸನ್, ಉಷಾ ವ್ಯಾನ್ಸ್ ಹೆಚ್ಚು ನಿಪುಣ ವಕೀಲರು ಮತ್ತು ಭಾರತೀಯ ವಲಸಿಗರ ಮಗಳು. ಆಕೆಗೆ ಭಾರತೀಯ ಸಂಸ್ಕೃತಿ ಮತ್ತು ಭಾರತದ ಬಗ್ಗೆ ತಿಳಿದಿದೆ. ಯುಎಸ್ಎ ಮತ್ತು ಭಾರತದ ನಡುವೆ ಉತ್ತಮ ಸಂಬಂಧಗಳನ್ನು ಹೊಂದಲು ಅವರು ತಮ್ಮ ಪತಿಗೆ ದೊಡ್ಡ ಸಹಾಯ ಮಾಡಬಹುದು ಎಂದು ಹೇಳಿದ್ದಾರೆ.

ಪತಿಯ ಬಗ್ಗೆ ಮಾತನಾಡಿರುವ ಉಷಾ, ಅವರು ಎಷ್ಟು ಕಷ್ಟಪಟ್ಟು ಕೆಲಸ ಮಾಡುತ್ತಾರೆ, ಅವರು ಎಷ್ಟು ಸೃಜನಶೀಲರು ಎಂಬುದನ್ನು ಜನರು ಅರ್ಥಮಾಡಿಕೊಳ್ಳುತ್ತಾರೆ ಎಂದು ನಾನು ಭಾವಿಸುವುದಿಲ್ಲ. ಅವರು ಹೇಳುವ ಮತ್ತು ಮಾಡುವ ಎಲ್ಲ ಕಾರ್ಯಗಳು ತುಂಬಾ ಆಲೋಚನೆಯ ಅಡಿಪಾಯದ ಮೇಲೆ ನಿರ್ಮಿಸಲ್ಪಟ್ಟಿದೆ. ಅವರು ಯಾವಾಗಲೂ ಉತ್ತಮವಾಗಿ ಮಾಡಲು ಪ್ರಯತ್ನಿಸುತ್ತಾರೆ ಎಂದು ತಿಳಿಸಿದ್ದಾರೆ.

Continue Reading

Latest

Sexual Harassment Case: ಜನಜಂಗುಳಿಯ ಮಧ್ಯೆ ಮಹಿಳೆಯ ಖಾಸಗಿ ಭಾಗಕ್ಕೆ ಕೈ ಹಾಕಿದ ಬಸ್‍ ಕಂಡಕ್ಟರ್‌!

Sexual Harassment Case: ಹೈದರಾಬಾದ್‌ನ ಮಹಿಳೆಯೊಬ್ಬರು ಬಸ್‌ನಲ್ಲಿ ತನಗಾದ ಕೆಟ್ಟ ಅನುಭವವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾಳೆ. ಮಹಿಳೆಯೊಬ್ಬಳು ಮಣಿಕೊಂಡದಿಂದ ಹಿಮಾಯತ್ ನಗರಕ್ಕೆ ಹಿಂದಿರುಗಲು ಟಿಎಸ್ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಳು. ಆ ವೇಳೆ ಬಸ್‌ನಲ್ಲಿ ಪ್ರಯಾಣಿಕರು ತುಂಬಿದ್ದರು. ಆಗ ಬಸ್ಸಿನ ಕಂಡಕ್ಟರ್ ಕಿಕ್ಕಿರಿದ ಬಸ್ಸಿನ ಅವಕಾಶವನ್ನು ತೆಗೆದುಕೊಂಡು ಆಕೆಯ ಎದೆ ಭಾಗ ಹಾಗೂ ಸೊಂಟದ ಕೆಳಗಿನ ಖಾಸಗಿ ಭಾಗವನ್ನು ಸ್ಪರ್ಶಿಸಿ ಕಿರುಕುಳ ನೀಡಿದ್ದಾನೆ.

VISTARANEWS.COM


on

Sexual Harassment Case
Koo


ಹೈದರಾಬಾದ್: ಕೆಟ್ಟ ಕಾಮುಕರೇ ತುಂಬಿರುವಂತಹ ಈ ಪ್ರಪಂಚದಲ್ಲಿ ಮಹಿಳೆಯರು ಪ್ರತಿದಿನ ಒಂದಲ್ಲ ಒಂದು ರೀತಿಯಲ್ಲಿ ಲೈಂಗಿಕ ಕಿರುಕುಳ(Sexual Harassment Case )ವನ್ನು ಅನುಭವಿಸುತ್ತಿದ್ದಾರೆ. ಕೆಲವು ಮಹಿಳೆಯರು ಮರ್ಯಾದೆಗೆ ಅಂಜಿ ಅದನ್ನು ಮುಚ್ಚಿದ್ದರೆ ಕೆಲವರು ಅದನ್ನು ಎದುರಿಸಿ ನಿಲ್ಲುತ್ತಾರೆ. ಅಂತಹದೊಂದು ಘಟನೆ ಹೈದರಾಬಾದ್‍ನ ಟಿಎಸ್ಆರ್‌ಟಿಸಿ ಬಸ್‍ನಲ್ಲಿ ನಡೆದಿದ್ದು, ಇದಕ್ಕೆ ಮಹಿಳೆ ತನ್ನ ಆಕ್ರೋಶ ವ್ಯಕ್ತಪಡಿಸಿದ್ದಾಳೆ.

ಹೈದರಾಬಾದ್‍ನ ಮಹಿಳೆಯೊಬ್ಬಳು ಹಿಮಾಯತ್ ನಗರಕ್ಕೆ ಹಿಂದಿರುಗುವಾಗ ಟಿಎಸ್ಆರ್‌ಟಿಸಿ ಬಸ್‍ನಲ್ಲಿ ತನಗಾದ ಕೆಟ್ಟ ಅನುಭವವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾಳೆ. ಸರ್ಕಾರಿ ಬಸ್ ಕಂಡಕ್ಟರ್ ತನ್ನನ್ನು ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ಬರೆದು ಆರೋಪ ಮಾಡಿದ್ದಾಳೆ. ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಹೈದರಾಬಾದ್‌ನ 21 ವರ್ಷದ ಮಹಿಳೆಯೊಬ್ಬಳು ಮಣಿಕೊಂಡದಿಂದ ಹಿಮಾಯತ್ ನಗರಕ್ಕೆ ಹಿಂದಿರುಗಲು 65 ಮೀ / 123 ಟಿಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಳು. ಆ ವೇಳೆ ಬಸ್‍ನಲ್ಲಿ ಪ್ರಯಾಣಿಕರು ತುಂಬಿದ್ದರು. ಆಗ ಬಸ್ಸಿನ ಕಂಡಕ್ಟರ್ ಕಿಕ್ಕಿರಿದ ಬಸ್ಸಿನ ಅವಕಾಶವನ್ನು ತೆಗೆದುಕೊಂಡು ಆತ ಆಕೆಯ ಎದೆ ಭಾಗವನ್ನು ಸ್ಪರ್ಶಿಸಲು ಪ್ರಾರಂಭಿಸಿದ. ನಂತರ ಅವನು ಆಕೆಯ ಸೊಂಟದ ಕೆಳಗಿನ ಖಾಸಗಿ ಭಾಗವನ್ನು ಸ್ಪರ್ಶಿಸಿದನಂತೆ. ಹಾಗಾಗಿ ತಾನು ಜೋರಾಗಿ ಕೂಗಿ ಕೊಂಡಿರುವುದಾಗಿ ಪೋಸ್ಟ್‌ನಲ್ಲಿ ತಿಳಿಸಿದ್ದಾಳೆ. ಅಲ್ಲದೇ ಎಷ್ಟು ಜನ ಹದಿಹರೆಯದ ಹುಡುಗಿಯರು ಮೌನವಾಗಿ ಇದನ್ನು ಸಹಿಸಿಕೊಳ್ಳುತ್ತಾರೆ ಎಂಬುದು ತನಗೆ ತಿಳಿದಿಲ್ಲ. ಆದರೆ ಸರ್ಕಾರ ಇದಕ್ಕೆ ಪ್ರತಿಕ್ರಿಯಿಸಬೇಕೆಂದು ತಾನು ಬಯಸುವುದಾಗಿ ತಿಳಿಸಿದ್ದಾಳೆ. ಅದನ್ನು ಆಕೆ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ, ಬಿಆರ್ ಎಸ್ ನಾಯಕ ಕೆ.ಟಿ.ರಾಮರಾವ್, ಹೈದರಾಬಾದ್ ಪೊಲೀಸರು ಮತ್ತು ಮಹಿಳಾ ಸಂಘಗಳಿಗೆ ಟ್ಯಾಗ್ ಮಾಡಿದ್ದಾಳೆ.

ಇದನ್ನೂ ಓದಿ: ಬಾಸ್‌ ಜತೆ ಚಕ್ಕಂದವಾಡುತ್ತಿದ್ದ ಕಿಲಾಡಿ ಪತ್ನಿ; ಡ್ರೋನ್‌ ಬಳಸಿ ಪತ್ತೆ ಹಚ್ಚಿದ ಚಾಲಾಕಿ ಗಂಡ!

ಇದಕ್ಕೆ ಪ್ರತಿಕ್ರಿಯಿಸಿದ ಟಿಎಸ್ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಮತ್ತು ಉಪಾಧ್ಯಕ್ಷ ವಿ.ಸಿ.ಸಜ್ಜನರ್, ಬಸ್ಸಿನ ಕಂಡಕ್ಟರ್ ವಿರುದ್ಧ ರಾಯದುರ್ಗಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ತಿಳಿಸಿದ್ದಾರೆ. ಇಂತಹ ಘಟನೆಗಳನ್ನು ಮತ್ತೆ ನಡೆಯದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಹಾಗೇ ಸಂತ್ರಸ್ತೆ ಸೈಬರಾಬಾದ್ ಕಮಿಷನರೇಟ್‍ನ ರಾಯದುರ್ಗಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಟಿಎಸ್ಆರ್‌ಟಿಸಿ ಎಂಡಿ ಟ್ವೀಟ್ ಮಾಡಿದ್ದಾರೆ. ಅಲ್ಲದೇ ಮಹಿಳಾ ಸಂಘಗಳು ಈ ಘಟನೆಯನ್ನು ತಮ್ಮ ಗಮನಕ್ಕೆ ತಂದಿದ್ದಕ್ಕಾಗಿ ಧನ್ಯವಾದ ತಿಳಿಸಿ, ಸಂತ್ರಸ್ತೆಯ ಸಹಾಯಕ್ಕೆ ನಿಲ್ಲುವುದಾಗಿ, ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂಬುದಾಗಿ ತಿಳಿದುಬಂದಿದೆ.

Continue Reading

Latest

Viral Video: 600 ಲೋಡರ್‌ ಹುದ್ದೆಗಳಿಗೆ 25,000ಕ್ಕೂ ಹೆಚ್ಚು ಅಭ್ಯರ್ಥಿಗಳು! ಕಾಲ್ತುಳಿತದ ಸನ್ನಿವೇಶ

Viral Video: ಏರ್ ಇಂಡಿಯಾ ಏರ್‌ಪೋರ್ಟ್‌ ಸರ್ವೀಸಸ್ ಲಿಮಿಟೆಡ್ ಕಂಪನಿಯು 600 ಲೋಡರ್‌ ಹುದ್ದೆಗಳಿಗೆ ಜಾಹೀರಾತು ನೀಡಿತ್ತು. ಆದರೆ 25,000ಕ್ಕೂ ಹೆಚ್ಚು ಅಭ್ಯರ್ಥಿಗಳು ಸಂದರ್ಶನಕ್ಕೆ ಆಗಮಿಸಿದ್ದರು. ನೇಮಕಾತಿ ಕಚೇರಿಯ ಹೊರಗೆ ಅನಿಯಂತ್ರಿತ ಪರಿಸ್ಥಿತಿ ಉಂಟಾಗಿತ್ತು.

VISTARANEWS.COM


on

Viral Video
Koo

ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಎಷ್ಟರಮಟ್ಟಿಗೆ ಇದೆ ಎಂದರೆ ಅದಕ್ಕೆ ನಿದರ್ಶನ ಎಂಬಂತೆ ಮುಂಬಯಿಯಲ್ಲಿ ನಡೆದ ಈ ಘಟನೆಯೇ ಪ್ರಮುಖ ಸಾಕ್ಷಿಯಾಗಿದೆ. ಏರ್ ಇಂಡಿಯಾ ಏರ್‌ಪೋರ್ಟ್‌ ಸರ್ವೀಸಸ್ ಲಿಮಿಟೆಡ್ ಆಯೋಜಿಸಿದ್ದ ವಾಕ್-ಇನ್ ಸಂದರ್ಶನಕ್ಕಾಗಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಮಂಗಳವಾರ ಮುಂಬೈನ ಕಲಿನಾ ಪ್ರದೇಶದಲ್ಲಿ ಜಮಾಯಿಸಿದಾಗ ಗೊಂದಲದ ಪರಿಸ್ಥಿತಿ ಉಂಟಾಗಿತ್ತು. ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ.

ವಿವಿಧ ದುರಸ್ತಿ ಮತ್ತು ನಿರ್ವಹಣಾ ಕಾರ್ಯಗಳನ್ನು ಒಳಗೊಂಡ ‘ಹ್ಯಾಂಡಿಮ್ಯಾನ್’ ಉದ್ಯೋಗಕ್ಕಾಗಿ ಏರ್ ಇಂಡಿಯಾ ಏರ್‌ಪೋರ್ಟ್‌ ಸರ್ವೀಸಸ್ ಲಿಮಿಟೆಡ್ ಕಂಪನಿಯು ಲೋಡರ್‌ ಮತ್ತು ರಿಪೇರಿ ಕೆಲಸ ಮಾಡುವ ಹುದ್ದೆಗಳಿಗೆ ಜಾಹೀರಾತು ನೀಡಿತ್ತು. ಅವರು ತಿಳಿಸಿದ ಖಾಲಿ ಹುದ್ದೆಗಳ ಹೊರತಾಗಿಯೂ, ಹೆಚ್ಚಿನ ಸಂಖ್ಯೆಯ ಅರ್ಜಿದಾರರು ಈ ಸಂದರ್ಶನದಲ್ಲಿ ಭಾಗವಹಿಸಿದ್ದರು. ಕೇವಲ 600 ಲೋಡರ್ ಹುದ್ದೆಗಳಿಗೆ ಸ್ಪರ್ಧಿಸಲು 25,000ಕ್ಕೂ ಹೆಚ್ಚು ಅಭ್ಯರ್ಥಿಗಳು ಬಂದಿದ್ದರಿಂದ ನೇಮಕಾತಿ ಕಚೇರಿಯ ಹೊರಗೆ ಅನಿಯಂತ್ರಿತ ಪರಿಸ್ಥಿತಿ ಉಂಟಾಗಿತ್ತು. ಈ ಜನಸಮೂಹವನ್ನು ನಿರ್ವಹಿಸಲು ಸಾಧ್ಯವಾಗದಿದ್ದಾಗ ಸಂಘಟಕರು ಅರ್ಜಿದಾರರಿಗೆ ತಮ್ಮ ಸ್ವವಿವರಗಳನ್ನು ಸಲ್ಲಿಸಿ ಇಲ್ಲಿಂದ ಕೂಡಲೇ ಹೊರಗೆ ಹೋಗುವಂತೆ ವಿನಂತಿಸಿಕೊಳ್ಳಬೇಕಾಯಿತು.

ಈ ಘಟನೆಗೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಯನ್ನು ರಾಷ್ಟ್ರದ ನಿರುದ್ಯೋಗ ಸಮಸ್ಯೆಗಳ ಸ್ಪಷ್ಟ ಚಿತ್ರಣವೆಂದು ಅನೇಕರು ಟೀಕಿಸಿದ್ದಾರೆ. ಕಾಂಗ್ರೆಸ್ ಸೇರಿದಂತೆ ರಾಜಕೀಯ ಪಕ್ಷಗಳು ದೇಶದಲ್ಲಿ ಉದ್ಯೋಗ ಮತ್ತು ಆರ್ಥಿಕ ನೀತಿಗಳನ್ನು ಪ್ರಸ್ತುತ ಆಡಳಿತದಲ್ಲಿರುವ ಸರ್ಕಾರ ಹೇಗೆ ನಿರ್ವಹಿಸುತ್ತಿದೆ ಎಂಬುದನ್ನು ಟೀಕಿಸಲು ಈ ಘಟನೆಯನ್ನು ಬಳಸಿಕೊಂಡಿವೆ ಎನ್ನಲಾಗಿದೆ.

ಏರ್ ಇಂಡಿಯಾದ ಅಧಿಕೃತ ಅಧಿಸೂಚನೆಯಲ್ಲಿ ಜುಲೈ 12ರಿಂದ ಜುಲೈ 16ರವರೆಗೆ ವಿವಿಧ ಹುದ್ದೆಗಳಿಗೆ ವಾಕ್-ಇನ್ ಸಂದರ್ಶನಗಳನ್ನು ಘೋಷಿಸಿತ್ತು. ಹಾಗೇ ಅವರು ಮತ್ತೊಂದು ಅಧಿಸೂಚನೆ ಹೊರಡಿಸಿದ್ದು, ಕೆಲವು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಗಡುವನ್ನು ಜುಲೈ 14ರವರೆಗೆ ವಿಸ್ತರಿಸಿತ್ತು. ನೇಮಕಾತಿಯಲ್ಲಿ ಹಿರಿಯ ಗ್ರಾಹಕ ಸೇವಾ ಕಾರ್ಯನಿರ್ವಾಹಕ ಸ್ಥಾನ ಮತ್ತು ಗ್ರಾಹಕ ಸೇವಾ ಕಾರ್ಯನಿರ್ವಾಹಕ ಸ್ಥಾನಗಳನ್ನು ಒಳಗೊಂಡಿದ್ದು, ಕ್ರಮವಾಗಿ 343 ಮತ್ತು 706 ಹುದ್ದೆಗಳು ಖಾಲಿ ಇವೆ. ಒಬಿಸಿ, ಎಸ್‍ಸಿ ಮತ್ತು ಎಸ್‍ಟಿ ಅಭ್ಯರ್ಥಿಗಳಿಗೆ ನಿರ್ದಿಷ್ಟ ಮೀಸಲಾತಿಗಳೊಂದಿಗೆ ಹಿರಿಯ ಹುದ್ದೆಗಳಿಗೆ ಗರಿಷ್ಠ 33 ಮತ್ತು ಸಾಮಾನ್ಯ ಹುದ್ದೆಗಳಿಗೆ 28 ವರ್ಷ ವಯೋಮಿತಿ ಇರುತ್ತದೆ ಎಂಬುದಾಗಿ ತಿಳಿಸಿತ್ತು.

ಇದನ್ನೂ ಓದಿ: ಚಾಕೋಲೇಟ್ ತಿನ್ನುವ ಆಸೆಯಾಗಿ ಅಂಗಡಿಗೆ ಹೋಗಿದ್ದ ಬಾಲಕ ಶವವಾಗಿ ಮನೆಗೆ ಬಂದ; ಆಗಿದ್ದೇನು? ವಿಡಿಯೊ ನೋಡಿ

ಈ ಘಟನೆಯೊಂದೇ ಅಲ್ಲ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ಎಷ್ಟು ಕಾಡುತ್ತಿದೆ ಎಂಬುದಕ್ಕೆ ಇತ್ತೀಚೆಗೆ, ಗುಜರಾತ್‍ನ ಭರೂಚ್‍ನಲ್ಲಿ ನಡೆದ ಘಟನೆಯು ಸಾಕ್ಷಿಯಾಗಿದೆ. ಇಲ್ಲಿ ಕೇವಲ 10 ಹೋಟೆಲ್ ಉದ್ಯೋಗ ಸ್ಥಾನಗಳಿಗೆ 1,800 ಅರ್ಜಿದಾರರು ಆಗಮಿಸುತ್ತಿರುವುದನ್ನು ವೀಡಿಯೊಯೊಂದರಲ್ಲಿ ತೋರಿಸಲಾಗಿದೆ. ಒಟ್ಟಾರೆ ಈ ಘಟನೆಗಳನ್ನು ಕಮಡಾಗ ನಿರುದ್ಯೋಗ ಸಮಸ್ಯೆ ದೇಶದಲ್ಲಿ ಜನರನ್ನು ತುಂಬಾ ಕಾಡುತ್ತಿದೆ ಎನ್ನಬಹುದು.

Continue Reading

Latest

Viral Video: ಚಾಕೋಲೇಟ್ ತಿನ್ನುವ ಆಸೆಯಾಗಿ ಅಂಗಡಿಗೆ ಹೋಗಿದ್ದ ಬಾಲಕ ಶವವಾಗಿ ಮನೆಗೆ ಬಂದ; ಆಗಿದ್ದೇನು? ವಿಡಿಯೊ ನೋಡಿ

Viral Video: 5 ವರ್ಷದ ಬಾಲಕ ತನ್ನ 8 ವರ್ಷದ ಸಹೋದರಿಯ ಜೊತೆಗೆ ಅಂಗಡಿಯಲ್ಲಿ ಚಾಕೋಲೆಟ್ ಖರೀದಿಸುತ್ತಿದ್ದು, ಅಲ್ಲಿ ರಸ್ತೆಯ ದುರಸ್ತಿ ಕೆಲಸ ನಡೆಯುತ್ತಿದ್ದು, ಆ ವೇಳೆ ರಸ್ತೆಯಲ್ಲಿ ಕೆಲಸ ಮಾಡುತ್ತಿದ್ದ ಜೆಸಿಬಿ ಆ ಬಾಲಕನಿಗೆ ತಗುಲಿ ಆತ ಅಲ್ಲೆ ನೆಲಕ್ಕೆ ಬಿದ್ದಿದ್ದಾನೆ. ನಂತರ ಅಲ್ಲಿದ್ದವರು ಬಾಲಕನನ್ನು ಸುತ್ತುವರಿದಿರುವುದು ಕಂಡುಬರುತ್ತದೆ. ಈ ಘಟನೆ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮೃತನನ್ನು ಲಾಹಿಯಾ ಕಾಲೋನಿ ನಿವಾಸಿ ರಾಕೇಶ್ ಕಬ್ರೆ ಅವರ ಪುತ್ರ ಶಿವಾಂಶ್ ಎಂದು ಗುರುತಿಸಲಾಗಿದೆ.

VISTARANEWS.COM


on

Viral Video
Koo

ಇಂದೋರ್ : ಮಳೆಗಾಲದಲ್ಲಿ ರಸ್ತೆಗಳು ಹಾಳಾಗಿರುವ ಕಾರಣ ಅಲ್ಲಲ್ಲಿ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುತ್ತದೆ. ಹಾಗಾಗಿ ನಿಮ್ಮ ಚಿಕ್ಕ ಮಕ್ಕಳನ್ನು ಅಂತಹ ರಸ್ತೆಯಲ್ಲಿ ಕಳುಹಿಸುವ ಮುನ್ನ ಪೋಷಕರು ಎಚ್ಚರಿಕೆಯಿಂದಿರಿ. ಇಲ್ಲವಾದರೆ ಅದರಿಂದ ಅವರಿಗೆ ಅಪಾಯವಾಗಬಹುದು. ಅಂತಹದೊಂದು ಘಟನೆ ಇದೀಗ ಇಂದೋರ್ ನಲ್ಲಿ ನಡೆದಿರುವುದಾಗಿ ಬೆಳಕಿಗೆ ಬಂದಿದೆ. ಚಾಕೋಲೇಟ್ ಖರೀದಿಸಲು ತನ್ನ ಸಹೋದರಿಯ ಜೊತೆಗೆ ಅಂಗಡಿಗೆ ಹೋದ ಬಾಲಕನಿಗೆ ರಸ್ತೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಜೆಸಿಬಿ ಹೊಡೆದು ಗಾಯಗೊಂಡು ಸಾವನಪ್ಪಿದ ಘಟನೆ ಇಂದೋರ್‌ನಲ್ಲಿ ನಡೆದಿದ್ದು, ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video )ಆಗಿದೆ.

ವೈರಲ್ ಆದ ವಿಡಿಯೊದಲ್ಲಿ 5 ವರ್ಷದ ಬಾಲಕ ತನ್ನ 8 ವರ್ಷದ ಸಹೋದರಿಯ ಜೊತೆಗೆ ಅಂಗಡಿಯಲ್ಲಿ ಚಾಕೋಲೆಟ್ ಖರೀದಿಸುತ್ತಿದ್ದು, ಅಲ್ಲಿ ರಸ್ತೆಯ ದುರಸ್ತಿ ಕೆಲಸ ನಡೆಯುತ್ತಿದ್ದು, ಆ ವೇಳೆ ರಸ್ತೆಯಲ್ಲಿ ಕೆಲಸ ಮಾಡುತ್ತಿದ್ದ ಜೆಸಿಬಿ ಆ ಬಾಲಕನಿಗೆ ತಗುಲಿ ಆತ ಅಲ್ಲೆ ನೆಲಕ್ಕೆ ಬಿದ್ದಿದ್ದಾನೆ. ನಂತರ ಅಲ್ಲಿದ್ದವರು ಬಾಲಕನನ್ನು ಸುತ್ತುವರಿದಿರುವುದು ಕಂಡುಬರುತ್ತದೆ. ಈ ಘಟನೆ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಮೃತನನ್ನು ಲಾಹಿಯಾ ಕಾಲೋನಿ ನಿವಾಸಿ ರಾಕೇಶ್ ಕಬ್ರೆ ಅವರ ಪುತ್ರ ಶಿವಾಂಶ್ ಎಂದು ಗುರುತಿಸಲಾಗಿದೆ.

ಆತನ ಸಹೋದರಿಗೆ ಯಾವುದೇ ಗಾಯಗಳಾಗಿರಲಿಲ್ಲ ಎಂಬುದಾಗಿ ತಿಳಿದುಬಂದಿದೆ. ವರದಿ ಪ್ರಕಾರ, ಜುಲೈ 15ರಂದು ಲಾಹಿಯಾ ಕಾಲೋನಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ರಸ್ತೆಯಲ್ಲಿ ಕೆಲಸ ಮಾಡುವಾಗ ಜೆಸಿಬಿ ಯಂತ್ರದ ಚಾಲಕ ಅದನ್ನು ಇನ್ನೊಬ್ಬನ ಚಾಲಕನಿಗೆ ಹಸ್ತಾಂತರಿಸಿದ. ಇದರ ಪರಿಣಾಮವಾಗಿ ಕೆಲಸ ಮಾಡುವಾಗ ಜೆಸಿಬಿ ಚಾಲಕನ ನಿಯಂತ್ರಣ ತಪ್ಪಿ ಅಲ್ಲಿ ಅಂಗಡಿಯಲ್ಲಿ ಚಾಕೋಲೇಟ್ ತೆಗೆದುಕೊಂಡು ನಿಂತಿದ್ದ ಬಾಲಕನ ಮುಖಕ್ಕೆ ಹೊಡೆದಿದೆ. ಕೆಲಗೆ ಬಿದ್ದ ಅವನನ್ನು ತಕ್ಷಣ ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಅಲ್ಲಿ ಆತ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಆದರೆ ಪೊಲೀಸರು ಜೆಸಿಬಿಯನ್ನು ವಶಪಡಿಸಿಕೊಂಡು ಗುತ್ತಿಗೆದಾರ ಮತ್ತು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಈ ಹಿನ್ನಲೆಯಲ್ಲಿ ಬ್ರಿಲಿಯಂಟ್ ಕನ್ವೆನ್ಷನ್ ಸೆಂಟರ್ ಬಳಿಯ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಬಾಲಕನ ಕುಟುಂಬ ಮತ್ತು ಇತರ ನಿವಾಸಿಗಳು ಚಾಲಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಹಲವಾರು ಗಂಟೆಗಳ ಕಾಲ ಪ್ರತಿಭಟನೆ ನಡೆಸಿದರು. ಇದರಿಂದ ಟ್ರಕ್‌ಗಳು ಸೇರಿದಂತೆ ಹಲವಾರು ವಾಹನಗಳು ಸೇರಿ ಅಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಹಿರಾ ನಗರ ಎಸಿಪಿ ಡಿ.ಎಸ್.ಯೆವಾಲೆ ಮತ್ತು ವಿಜಯ್ ನಗರ ಎಸಿಪಿ ಕೃಷ್ಣ ಲಾಲ್ಚಂದಾನಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಪೊಲೀಸ್ ಪಡೆಗಳೊಂದಿಗೆ ಸ್ಥಳಕ್ಕೆ ತಲುಪಿ ಮಾರ್ಗವನ್ನು ತೆರವುಗೊಳಿಸಿದರು.

ಇದನ್ನೂ ಓದಿ: 3 ವರ್ಷದ ಅಂಬಾನಿ ಮೊಮ್ಮಗ ವೇದಿಕೆ ಮೇಲೆ ಜಾರಿ ಬಿದ್ದ, ಆದರೆ ಜನರ ಹೃದಯ ಗೆದ್ದ!

ನಂತರ ಅವರು ಪ್ರತಿಭಟನೆ ನಡೆಸುತ್ತಿದ್ದ ಜನಸಮೂಹವನ್ನು ಸಮಾಧಾನಪಡಿಸಿ ತನಿಖೆಯ ನಂತರ ಜವಾಬ್ದಾರಿಯುತರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಅಲ್ಲದೇ ಮೇಯರ್ ಪುಷ್ಯಮಿತ್ರ ಭಾರ್ಗವ್ ಅವರು ಮೃತ ಶಿವಾಂಶ್ ಕಾಬ್ರೆ ಅವರ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಧನ ನೀಡುವುದಾಗಿ ಘೋಷಿಸಿದ್ದಾರೆ ಎನ್ನಲಾಗಿದೆ.

Continue Reading
Advertisement
Viral Video
ವೈರಲ್ ನ್ಯೂಸ್34 mins ago

Viral Video: ಡಿಸಿ ಆಫೀಸ್‌ನಲ್ಲಿ ಗೋಳಾಡುತ್ತಾ ನೆಲದಲ್ಲಿ ಹೊರಳಾಡಿದ ರೈತ; ವೈರಲಾಗ್ತಿದೆ ಈ ವಿಡಿಯೋ

Yezdi Roadster
ಆಟೋಮೊಬೈಲ್1 hour ago

Yezdi Roadster : ಯೆಜ್ಡಿ ರೋಡ್‌ಸ್ಟರ್ ಜತೆಗೆ ಈ ಹಲವು ಆ್ಯಕ್ಸೆಸರಿಗಳಿರುವ ಟ್ರಯಲ್ ಪ್ಯಾಕ್ ಉಚಿತ

Viral Video
ವೈರಲ್ ನ್ಯೂಸ್2 hours ago

Viral Video: 300 ಮೊಸಳೆಗಳಿರುವ ಕೆರೆಯಲ್ಲಿ ಬೈಕ್‌, ಕಾರು ಸ್ಟಂಟ್‌; ಹುಚ್ಚಾಟ ಮೆರೆದ ಯುವಕರಿಗೆ ಆಗಿದ್ದೇನು ಗೊತ್ತಾ?

ಪ್ರಮುಖ ಸುದ್ದಿ2 hours ago

Karnataka Rain: ವರುಣಾರ್ಭಟಕ್ಕೆ ರಾಜ್ಯದ ಹಲವೆಡೆ ನದಿಗಳು ಉಕ್ಕಿ ಹರಿದು ನೆರೆ ಸೃಷ್ಟಿ; ಕುಸಿದ ಸೇತುವೆಗಳು!

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : 8 ಚಿನ್ನ, 1 ಬೆಳ್ಳಿ, 3 ಕಂಚು: ಒಲಿಂಪಿಕ್ಸ್ ಹಾಕಿ ಸ್ಪರ್ಧೆಯಲ್ಲಿ ಭಾರತ ತಂಡದ ಸಾಧನೆಗಳ ವಿವರ ಇಲ್ಲಿದೆ

Viral Video
ವೈರಲ್ ನ್ಯೂಸ್2 hours ago

Viral Video: ಸಫಾರಿಯಲ್ಲಿ ಪ್ರವಾಸಿಗರ ಎದುರೇ ಸಿಂಹಗಳ ಕಾಮಕೇಳಿ!

Olympic Games History
ಕ್ರೀಡೆ2 hours ago

Olympic Games History: ಒಲಿಂಪಿಕ್ಸ್​ನಲ್ಲಿ ಗ್ರೀಸ್​ ದೇಶಕ್ಕೆ ವಿಶೇಷ ಮಾನ್ಯತೆ ನೀಡುವುದೇಕೆ?

Amitabh Bachchan holds umbrella for Jaya Bachchan
ಬಾಲಿವುಡ್2 hours ago

Amitabh Bachchan: ಅಮಿತಾಭ್ ರೊಮ್ಯಾಂಟಿಕ್ ಮೂಡ್‌ನಲ್ಲಿದ್ದರೂ ಮುಖ ಊದಿಸಿಕೊಂಡೇ ಇದ್ದ ಜಯಾ ಬಚ್ಚನ್!

Viral Video
ವೈರಲ್ ನ್ಯೂಸ್3 hours ago

Viral Video: ನೋಡ ನೋಡ್ತಿದ್ದಂತೆ ಮೂರನೇ ಮಹಡಿಯಿಂದ ಬಿದ್ದ ಮಹಿಳೆ; ಶಾಕಿಂಗ್‌ ವಿಡಿಯೋ ವೈರಲ್‌

Tauba Tauba
Latest3 hours ago

Tauba Tauba : ಲಂಡನ್‌ ಬೀದಿಯಲ್ಲಿ ‘ತೌಬಾ ತೌಬಾ’ ಹಾಡಿಗೆ ಸಖತ್‌ ಆಗಿ ಸ್ಟೆಪ್ಸ್‌ ಹಾಕಿದ ಬೆಡಗಿಯರು; ವಿಡಿಯೊ ವೈರಲ್

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ3 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ4 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌