CM Siddaramaiah: ಕನ್ನಡಿಗರಿಗೆ ಶೇ.100 ಉದ್ಯೋಗʼ ಟ್ವೀಟ್‌ ಡಿಲೀಟ್‌ ಮಾಡಿದ ಸಿಎಂ ಸಿದ್ದರಾಮಯ್ಯ; ಕಂಪನಿಗಳ ಜೊತೆ ಚರ್ಚೆ ಎಂದ ಎಂಬಿ ಪಾಟೀಲ್;‌ ಏನಿದು ಗೊಂದಲ? - Vistara News

ಪ್ರಮುಖ ಸುದ್ದಿ

CM Siddaramaiah: ಕನ್ನಡಿಗರಿಗೆ ಶೇ.100 ಉದ್ಯೋಗʼ ಟ್ವೀಟ್‌ ಡಿಲೀಟ್‌ ಮಾಡಿದ ಸಿಎಂ ಸಿದ್ದರಾಮಯ್ಯ; ಕಂಪನಿಗಳ ಜೊತೆ ಚರ್ಚೆ ಎಂದ ಎಂಬಿ ಪಾಟೀಲ್;‌ ಏನಿದು ಗೊಂದಲ?

CM Siddaramaiah: ‘ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ” ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದರು. ನಂತರ ಸ್ವಲ್ಪ ಹೊತ್ತಿನಲ್ಲಿ ಅದನ್ನು ಡಿಲೀಟ್‌ ಮಾಡಿದ್ದರು.

VISTARANEWS.COM


on

cm siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ (Private industry) ʼಸಿʼ ಮತ್ತು ʼಡಿʼ ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು (Kannadiga employees) ಕಡ್ಡಾಯಗೊಳಿಸುವ ವಿಧೇಯಕಕ್ಕೆ ನಿನ್ನೆ ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿತ್ತು. ಇಂದು ಈ ವಿಚಾರವನ್ನು ಸಿಎಂ ಟ್ವೀಟ್‌ ಮಾಡಿದ್ದು, ನಂತರ ಅದನ್ನು ಡಿಲೀಟ್‌ ಮಾಡಿದ್ದಾರೆ. ಇದು ಕುತೂಹಲ ಮೂಡಿಸಿದೆ.

“ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ (Private industry) ʼಸಿʼ ಮತ್ತು ʼಡಿʼ ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು (Kannadiga employees) ಕಡ್ಡಾಯಗೊಳಿಸುವ ವಿಧೇಯಕಕ್ಕೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ. ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ” ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದರು. ನಂತರ ಸ್ವಲ್ಪ ಹೊತ್ತಿನಲ್ಲಿ ಅದನ್ನು ಡಿಲೀಟ್‌ ಮಾಡಿದ್ದರು.

ಉದ್ಯಮಿಗಳ ಜತೆ ಚರ್ಚಿಸಿ ಗೊಂದಲಗಳಿಗೆ ತೆರೆ: ಎಂ ಬಿ ಪಾಟೀಲ

ಖಾಸಗಿ ಉದ್ಯಮಗಳಲ್ಲಿ ಕೂಡ ಕನ್ನಡಿಗರಿಗೆ ಕೆಲವು ಶ್ರೇಣಿಯ ಹುದ್ದೆಗಳನ್ನು ನೂರಕ್ಕೆ ನೂರರಷ್ಟು ಮೀಸಲಿಡುವುದು ಖಚಿತ. ಇದೇ ಸಂದರ್ಭದಲ್ಲಿ ಉದ್ಯಮಗಳ ಹಿತಾಸಕ್ತಿಗಳನ್ನು ಸಹ ಕಾಪಾಡಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಬುಧವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಈ ಸಂಬಂಧ ಸರಕಾರ ವಿಧೇಯಕಕ್ಕೆ ಅನುಮೋದನೆ ನೀಡಿದೆ. ಈ ವಿಚಾರವಾಗಿ ಸದ್ಯದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಐಟಿ-ಬಿಟಿ, ಕಾನೂನು ಮತ್ತು ಕಾರ್ಮಿಕ ಸಚಿವರುಗಳ ಜೊತೆ ಚರ್ಚಿಸಿ, ಗೊಂದಲಗಳಿಗೆ ತೆರೆ ಎಳೆಯಲಾಗುವುದು ಎಂದರು.

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಲೇಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ. ತಯಾರಿಕಾ ವಲಯ ಮತ್ತು ಕೈಗಾರಿಕಾ ಕ್ರಾಂತಿಯ ಉಜ್ವಲ ಅವಕಾಶಗಳನ್ನು ನಾವು ಕಳೆದುಕೊಳ್ಳುವಂತಿಲ್ಲ. ಸ್ಥಳೀಯರ ಹಿತಾಸಕ್ತಿಗಳನ್ನು ಕಾಪಾಡಲು ಸರಕಾರ ಬದ್ಧವಾಗಿದೆ. ಹಾಗೆಯೇ ಉದ್ಯಮ ವಲಯದವರ ಹಿತಾಸಕ್ತಿಗೂ ಧಕ್ಕೆಯಾಗದಂತೆ ನಿಗಾ ವಹಿಸಲಾಗುವುದು. ಈ ಕುರಿತು ಸಂಬಂಧಪಟ್ಟ ಎಲ್ಲರ ಜೊತೆಗೂ ಮಾತುಕತೆ ನಡೆಸಲಾಗುವುದು. ಈ ವಿಷಯದಲ್ಲಿ ಯಾವುದೇ ಆತಂಕ ಬೇಕಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕವು ಪುರೋಗಾಮಿ ರಾಜ್ಯವಾಗಿದೆ. ‘ಗ್ಲೋಬಲ್ ಚೈನಾ ಒನ್’ ನೀತಿಯಿಂದ ಒದಗಿ ಬಂದಿರುವ ಸದವಕಾಶವನ್ನು ನಾವು ಕಳೆದುಕೊಳ್ಳುವಂತಿಲ್ಲ. ಇದು ಶತಮಾನಕ್ಕೊಮ್ಮೆ ಒದಗಿ ಬರುವ ಅವಕಾಶ. ಕೌಶಲ ಇಲ್ಲದ ಕನ್ನಡಿಗ ಉದ್ಯೋಗಿಗಳನ್ನು ತರಬೇತಿ ಮೂಲಕ ಸಜ್ಜುಗೊಳಿಸುವ ಕೆಲಸವನ್ನೂ ಸರ್ಕಾರ ಮಾಡಲಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇದೇ ಅಧಿವೇಶನದಲ್ಲಿ ಮಂಡನೆ: ಲಾಡ್

ಈ ಕುರಿತು ಸುದ್ದಿಗೋಷ್ಠಿ ನಡೆಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್, ಇದೇ ಅಧಿವೇಶನದಲ್ಲಿ ಈ ವಿಧೇಯಕ ಮಂಡಿಸಿ ಕಾನೂನು ತರುತ್ತೇವೆ ಎಂದು ತಿಳಿಸಿದ್ದಾರೆ. ಕೈಗಾರಿಕೆಗಳ ಮ್ಯಾನೇಜ್ಮೆಂಟ್ ಒಳಗೆ ಶೇಕಡಾ 50ರಷ್ಟು ಕನ್ನಡಿಗರು ಇರಬೇಕು. 70% ನಾನ್ ಮ್ಯಾನೇಜ್ಮೆಂಟ್ ಲೆವಲ್‌ನಲ್ಲಿ ಇರಬೇಕು. ನಮ್ಮಲ್ಲಿ ಎಲ್ಲ ರೀತಿಯ ಸ್ಕೀಲ್ ಇರುವವರು ಇದ್ದಾರೆ. ನಾವು ಹೊರ ರಾಜ್ಯಗಳು ಮತ್ತು ಹೊರ ದೇಶಕ್ಕೆ ಹೋಗಿ ಅಲ್ಲಿ ಕಂಪನಿ ಮಾಡಿದರೆ ಸ್ಥಳೀಯರಿಗೆ ನಾವು ಅವಕಾಶ ಕೊಡುತ್ತೇವೆ. ಅವರು ಸಹ ಇಲ್ಲಿ ಸ್ಥಳೀಯರಿಗೆ ಅವಕಾಶ ಕೊಡಲಿ ಎಂದು ಲಾಡ್‌ ಹೇಳಿದ್ದಾರೆ.

ಇದಕ್ಕೆ ಕೆಲ ಕಂಪನಿಯವರು ವಿರೋಧ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಗಳು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಬಳಿಕ ಕಿರಣ್‌ ಮಜುಂದಾರ್ ನನಗೆ ವಾಟ್ಸ್ಯಾಪ್ ಮೇಸೆಜ್ ಮಾಡಿದ್ದಾರೆ. ನಾನು ಸಹ ವ್ಯವಹಾರದ ಕುಟುಂಬದಿಂದ ಬಂದವನು. ನನಗೂ ಅದರ ಬಗ್ಗೆ ಮಾಹಿತಿ ಇದೆ. ಕಂಪನಿಗಳಿಗೆ ಇದರಿಂದ ನಷ್ಟ ಆಗುತ್ತೆ ಅನ್ನೋದಾದ್ರೆ ನಮ್ಮ ಬಳಿ ಬಂದು ಅದನ್ನು ಹೇಳಲಿ. ಯಾವ ಈ ರೀತಿಯ ಸಮಸ್ಯೆ ಆಗುತ್ತೆ ಅಂತ ಹೇಳಲಿ. ಅದನ್ನು ಪರಿಶೀಲನೆ ಮಾಡೋಣ. ಇದನ್ನು ರಾತ್ರೋರಾತ್ರಿ ಮಾಡುವುದಿಲ್ಲ. ಕಂಪನಿಗಳ ಹಿತದೃಷ್ಟಿಯಿಂದಲೇ ಮಾಡುತ್ತೇವೆʼ ಎಂದು ಲಾಡ್‌ ಹೇಳಿದ್ದಾರೆ.

ನಾವು ಸರೋಜಿನಿ ಮಹಿಷಿ ವರದಿಯ ಆಧಾರದ ಮೇಲೆ ಇದನ್ನು ಮಾಡುತ್ತಿದ್ದೇವೆ. ಇಲ್ಲಿಯೇ ಹುಟ್ಟಿರಬೇಕು, ಇಲ್ಲವೇ ಹದಿನೈದು ವರ್ಷಗಳ ಕಾಲ ಇಲ್ಲೇ ಇದ್ದು ಕೆಲಸ ಮಾಡುತ್ತಿದ್ದರೆ ಆತ ಕರ್ನಾಟಕದ ವ್ಯಕ್ತಿ ಆಗ್ತಾನೆ. ಆತನನ್ನು ಸ್ಥಳೀಯ ಎಂದು ಕರೆಯುತ್ತೇವೆ. ಅಂಥಹವರು ಕನ್ನಡಿಗರ ಹೆಸರಿನಲ್ಲಿ ಉದ್ಯೋಗಕ್ಕೆ ಅರ್ಹರು ಎಂದು ಲಾಡ್‌ ಹೇಳಿದ್ದಾರೆ.

ಇದನ್ನೂ ಓದಿ: CM Siddaramaiah: ಖಾಸಗಿ ಕೈಗಾರಿಕೆಗಳ ಶೇ.100 ಉದ್ಯೋಗ ಕನ್ನಡಿಗರಿಗೆ: ಸಿದ್ದರಾಮಯ್ಯ ಕ್ಯಾಬಿನೆಟ್‌ ನಿರ್ಣಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ICC T20 Ranking: ಟಿ20 ರ್ಯಾಂಕಿಂಗ್​ನಲ್ಲಿ ಭರ್ಜರಿ ಬಡ್ತಿ ಪಡೆದ ಯಶಸ್ವಿ ಜೈಸ್ವಾಲ್​, ಶುಭ್​ಮನ್​ ಗಿಲ್​

ICC T20 Ranking:ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ನಂತರ ಯಶಸ್ವಿ ಜೈಸ್ವಾಲ್ ಐಸಿಸಿ ಶ್ರೇಯಾಂಕದಲ್ಲಿ ಮೇಲಕ್ಕೇರಿದ್ದಾರೆ. ಮೊದಲ ಎರಡು ಪಂದ್ಯಗಳನ್ನ ತಪ್ಪಿಸಿಕೊಂಡಿದ್ದರು. ಆದರೆ ಬ್ಯಾಟ್​ನೊಂದಿಗೆ ಉತ್ತಮ ಫಾರ್ಮ್ ಕಂಡ ಅವರು ಮೂರನೇ ಪಂದ್ಯದಲ್ಲಿ 36 ರನ್ ಗಳಿಸಿದರು. ನಾಲ್ಕನೇ ಪಂದ್ಯದಲ್ಲಿ ಅಜೇಯ 93 ರನ್ ಗಳಿಸಿದರು. ಇದು ಭಾರತಕ್ಕೆ ಸರಣಿ ಗೆಲ್ಲಲು ಸಹಾಯ ಮಾಡಿತು.

VISTARANEWS.COM


on

ICC T20 Ranking
Koo

ಬೆಂಗಳೂರು: ಜಿಂಬಾಬ್ವೆ ವಿರುದ್ಧದ ಟಿ 20 ಐ ಸರಣಿಯಲ್ಲಿ ಪ್ರಭಾವ ಬೀರಿದ ಟೀಮ್ ಇಂಡಿಯಾ ಆಟಗಾರರು ಬುಧವಾರ (ಜುಲೈ 17) ಐಸಿಸಿ ಮಂಡಳಿ ಬಿಡುಗಡೆ ಮಾಡಿದ ಇತ್ತೀಚಿನ ಐಸಿಸಿ ಶ್ರೇಯಾಂಕದಲ್ಲಿ ಗಮನಾರ್ಹ ಪ್ರಗತಿ ಕಂಡಿದ್ದಾರೆ. ಟಿ 20 ವಿಶ್ವಕಪ್ ಮುಗಿದ ಕೂಡಲೇ ಎರಡನೇ ಶ್ರೇಣಿಯ ಭಾರತ ತಂಡವು ಐದು ಪಂದ್ಯಗಳ ಟಿ 20 ಐ ಸರಣಿಗಾಗಿ ಜಿಂಬಾಬ್ವೆ ಪ್ರವಾಸ ಕೈಗೊಂಡಿತ್ತು. ಸರಣಿಯಲ್ಲಿ ಶುಬ್ಮನ್ ಗಿಲ್ ನಾಯಕತ್ವದ ಭಾರತ 4-1 ಅಂತರದ ಸರಣಿ ಗೆಲುವು ದಾಖಲಿಸಿತ್ತು. ವಿಶ್ವ ಟಿ 20 ಚಾಂಪಿಯನ್ಸ್ ಮೊಲದ ಪಂದ್ಯದ 13 ರನ್ ಗಳ ಆಘಾತಕಾರಿ ಸೋಲಿನೊಂದಿಗೆ ಪ್ರವಾಸವು ಆರಂಭಿಸಿದ್ದರೂ ಬಳಿಕ ಮುಂದಿನ ನಾಲ್ಕು ಪಂದ್ಯಗಳನ್ನು ಗೆದ್ದು ಪುಟಿದೆದ್ದಿತು.

ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ನಂತರ ಯಶಸ್ವಿ ಜೈಸ್ವಾಲ್ ಐಸಿಸಿ ಶ್ರೇಯಾಂಕದಲ್ಲಿ ಮೇಲಕ್ಕೇರಿದ್ದಾರೆ. ಮೊದಲ ಎರಡು ಪಂದ್ಯಗಳನ್ನ ತಪ್ಪಿಸಿಕೊಂಡಿದ್ದರು. ಆದರೆ ಬ್ಯಾಟ್​ನೊಂದಿಗೆ ಉತ್ತಮ ಫಾರ್ಮ್ ಕಂಡ ಅವರು ಮೂರನೇ ಪಂದ್ಯದಲ್ಲಿ 36 ರನ್ ಗಳಿಸಿದರು. ನಾಲ್ಕನೇ ಪಂದ್ಯದಲ್ಲಿ ಅಜೇಯ 93 ರನ್ ಗಳಿಸಿದರು. ಇದು ಭಾರತಕ್ಕೆ ಸರಣಿ ಗೆಲ್ಲಲು ಸಹಾಯ ಮಾಡಿತು.

ಜೈಸ್ವಾಲ್ ಒಟ್ಟಾರೆ 141 ರನ್​ಗಳೊಂದಿಗೆ ಸರಣಿ ಮುಗಿಸಿ ರ್ಯಾಂಕಿಂಗ್​ನಲ್ಲಿ ಆರನೇ ಸ್ಥಾನಕ್ಕೆ ಜಿಗಿದಿದ್ದಾರೆ. ಟಿ 20 ಐನಲ್ಲಿ ಅವರು ಎರಡನೇ ಅತ್ಯುನ್ನತ ಶ್ರೇಯಾಂಕದ ಭಾರತೀಯ ಬ್ಯಾಟರ್ ಆಗಿದ್ದಾರೆ. ಸೂರ್ಯಕುಮಾರ್ ಯಾದವ್ ಎರಡನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್ ಪ್ರಸ್ತುತ ವಿಶ್ವದ ಅಗ್ರ ಶ್ರೇಯಾಂಕ ಹೊಂದಿದ್ದಾರೆ.

ಇದನ್ನೂ ಓದಿ: Paris Olympics 2024 : 8 ಚಿನ್ನ, 1 ಬೆಳ್ಳಿ, 3 ಕಂಚು: ಒಲಿಂಪಿಕ್ಸ್ ಹಾಕಿ ಸ್ಪರ್ಧೆಯಲ್ಲಿ ಭಾರತ ತಂಡದ ಸಾಧನೆಗಳ ವಿವರ ಇಲ್ಲಿದೆ

ಜಿಂಬಾಬ್ವೆ ವಿರುದ್ಧ ಉತ್ತಮ ಪ್ರದರ್ಶನ ನೀಡಿದ ನಂತರ ಶುಬ್ಮನ್ ಗಿಲ್ ಕೂಡ ಶ್ರೇಯಾಂಕದಲ್ಲಿ ದೊಡ್ಡ ಏರಿಕೆ ಮಾಡಿದ್ದಾರೆ. ಬಲಗೈ ಬ್ಯಾಟರ್​ ತಮ್ಮ ತಂಡವನ್ನು ಮುನ್ನಡೆಸಿದ್ದಾರೆ. ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದವರಾಗಿ ಮುಗಿಸಿದ್ದಾರೆ. 2 ಅರ್ಧಶತಕಗಳ ಸಹಾಯದಿಂದ 170 ರನ್ ಗಳಿಸಿದ್ದಾರೆ. ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡಿದ ಅವರು 36 ಸ್ಥಾನ ಮೇಲಕ್ಕೇರಿ 37ನೇ ಸ್ಥಾನ ಪಡೆದುಕೊಂಡಿದ್ದಾರೆ.

ಐಸಿಸಿ ಟಿ20 ರ್ಯಾಂಕಿಂಗ್:

ಬೌಲರ್​ಗಳ ಪೈಕಿ ಜಿಂಬಾಬ್ವೆ ವೇಗಿ ಬ್ಲೆಸ್ಸಿಂಗ್ ಮುಜರಬಾನಿ 11 ಸ್ಥಾನ ಮೇಲಕ್ಕೇರಿ 44ನೇ ಸ್ಥಾನಕ್ಕೇರಿದ್ದಾರೆ. ಭಾರತದ ವಿರುದ್ಧ ಮುಜರಬಾನಿ ಆರು ವಿಕೆಟ್ ಪಡೆದಿದ್ದಾರೆ. ವಾಷಿಂಗ್ಟನ್ ಸುಂದರ್ 36 ಸ್ಥಾನ ಮೇಲಕ್ಕೇರಿ 46ನೇ ಸ್ಥಾನದಲ್ಲಿದ್ದರೆ, ಮುಖೇಶ್ ಕುಮಾರ್ 21 ಸ್ಥಾನ ಮೇಲೇರಿ 73ನೇ ಸ್ಥಾನಕ್ಕೇರಿದ್ದಾರೆ. ಸರಣಿಯಲ್ಲಿ ಸುಂದರ್ ಮತ್ತು ಮುಖೇಶ್ ತಲಾ 8 ವಿಕೆಟ್ ಪಡೆದು ಜಂಟಿಯಾಗಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು.

ಇಂಗ್ಲೆಂಡ್ ಸ್ಪಿನ್ನರ್ ಆದಿಲ್ ರಶೀದ್ ಪ್ರಸ್ತುತ ವಿಶ್ವದ ನಂಬರ್ ಒನ್ ಟಿ 20 ಬೌಲರ್ ಆಗಿದ್ದಾರೆ. ಅಕ್ಷರ್ ಪಟೇಲ್ ಟಿ20ಐನಲ್ಲಿ 13ನೇ ಸ್ಥಾನದಲ್ಲಿದ್ದಾರೆ. ಆಲ್​ರೌಂಡರ್​ಗಳ ಪೈಕಿ ವನಿಂದು ಹಸರಂಗ ಅಗ್ರಸ್ಥಾನದಲ್ಲಿದ್ದರೆ, ಹಾರ್ದಿಕ್ ಪಾಂಡ್ಯ (6ನೇ ಸ್ಥಾನ) 10ರೊಳಗೆ ಸ್ಥಾನ ಪಡೆದಿದ್ದಾರೆ.

Continue Reading

ಪ್ರಮುಖ ಸುದ್ದಿ

Karnataka Rain: ವರುಣಾರ್ಭಟಕ್ಕೆ ರಾಜ್ಯದ ಹಲವೆಡೆ ನದಿಗಳು ಉಕ್ಕಿ ಹರಿದು ನೆರೆ ಸೃಷ್ಟಿ; ಕುಸಿದ ಸೇತುವೆಗಳು!

Karnataka Rain: ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಬೆಳಗಾವಿ, ಮೈಸೂರು, ಚಾಮರಾಜನಗರ ಜಿಲ್ಲೆಯ ವಿವಿಧೆಡೆ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನಾಳೆಯೂ ಕರಾವಳಿ ಭಾಗ, ಮಲೆನಾಡು ಭಾಗದಲ್ಲಿ ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.

VISTARANEWS.COM


on

ಉಡುಪಿ ಜಿಲ್ಲೆಯ ಸೀತಾ ನದಿ ಹರಿಯುವ ಭಾಗದಲ್ಲಿ ಗ್ರಾಮ, ತೋಟಗದ್ದೆಗಳು ಜಲಾವೃತವಾದ ದೃಶ್ಯ.
Koo

ಬೆಂಗಳೂರು: ವರುಣಾರ್ಭಟಕ್ಕೆ ರಾಜ್ಯದ ಹಲವೆಡೆ ನದಿಗಳು ಉಕ್ಕಿ ಹರಿದು ನೆರೆ ಸೃಷ್ಟಿಯಾಗಿದೆ. ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆ ಸೇರಿ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಿಂದ (Karnataka Rain) ಜನ ಜೀವನ ಅಸ್ತವ್ಯಸ್ತಗೊಂಡಿದೆ. ಮಳೆ ನೀರಿನ ರಭಸಕ್ಕೆ ಹಲವೆಡೆ ಸೇತುವೆಗಳು ಕುಸಿದಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

ಡ್ರೋನ್ ಕಣ್ಣಲ್ಲಿ ಅಘನಾಶಿನಿ ನದಿ ಪ್ರವಾಹ ಸೆರೆ

ಕಾರವಾರ: ಜಿಲ್ಲೆಯ ಕರಾವಳಿಯಲ್ಲಿ ಕಳೆದೊಂದು ವಾರದಿಂದ ವರುಣ ಅಬ್ಬರಿಸುತ್ತಿದ್ದಾನೆ. ವರುಣಾರ್ಭಟಕ್ಕೆ ನದಿಗಳು ಉಕ್ಕಿ ಹರಿದು ಹಲವೆಡೆ ನೆರೆ ಸೃಷ್ಟಿಯಾಗಿದ್ದು, ಡ್ರೋನ್ ಕಣ್ಣಲ್ಲಿ ಅಘನಾಶಿನಿ ನದಿ ಪ್ರವಾಹ ಸೆರೆಯಾಗಿದೆ. ಕುಮಟಾ ತಾಲೂಕಿನ ಹಲವು ಗ್ರಾಮಗಳಲ್ಲಿ ಅಘನಾಶಿನಿ ನೆರೆ ಸೃಷ್ಟಿಸಿದ್ದು, ಹವ್ಯಾಸಿ ಛಾಯಾಚಿತ್ರಗಾರ ಗೋಪಿ ಜಾಲಿ ಡ್ರೋನ್ ಕ್ಯಾಮೆರಾದಲ್ಲಿ ನೆರೆ ಸ್ಥಿತಿಯನ್ನು ಸೆರೆಹಿಡಿದಿದ್ದಾರೆ.

ಸಕಲೇಶಪುರ ಬಳಿ ಹೆದ್ದಾರಿಯ ತಡೆಗೋಡೆ ಕುಸಿತ

ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರಿ ಮಳೆ ಮುಂದುವರಿದಿದ್ದು, ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಭೂ ಕುಸಿತ ಸಂಭವಿಸಿದೆ. ಸಕಲೇಶಪುರ ತಾಲೂಕಿನ ಕೊಲ್ಲಹಳ್ಳಿ ಬಳಿ ಹೆದ್ದಾರಿಯ ತಡೆಗೋಡೆ ಕುಸಿದಿದೆ. ಸುಮಾರು 500 ಮೀಟರ್ ಉದ್ದಕ್ಕೂ ರಸ್ತೆಗೆ ಹೊಂದಿಕೊಂಡಿದ್ದ ತಡೆ ಗೋಡೆ ಕುಸಿಯುತ್ತಿದೆ. ಮಳೆ ಹೆಚ್ಚಾದರೆ ಚತುಷ್ಪಥ ರಸ್ತೆಯ ಒಂದು ಭಾಗದ ಕಾಂಕ್ರಿಟ್ ರಸ್ತೆಯೇ ಕೊಚ್ಚಿ ಹೋಗೋ ಆತಂಕ ಇದೆ. ಅವೈಜ್ಞಾನಿಕ ಹಾಗೂ ಕಳಪೆ ಕಾಮಗಾರಿಯಿಂದ ರಸ್ತೆ ಕುಸಿತ ಆರೋಪ ಕೇಳಿಬಂದಿದೆ. ನೆನ್ನೆ ಕೂಡ ತಾಲೂಕಿನ ಗುಲಗಳಲೆ ಬಳಿ ಕುಸಿದಿದ್ದ ರಾಷ್ಟ್ರೀಯ ಹೆದ್ದಾರಿ ಕುಸಿದಿತ್ತು.

ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ ಮಳೆ ನೀರು ರಭಸಕ್ಕೆ ಸೇತುವೆ ಕೊಚ್ಚಿ ಹೋಗಿದೆ.

ದೊಡ್ಡತಪ್ಲು ಬಳಿ‌ ಗುಡ್ಡ ಕುಸಿತ

ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ‌ ಗುಡ್ಡ ಕುಸಿದಿದ್ದರಿಂದ ಸುಮಾರು ಒಂದುಗಂಟೆಗೂ ಅಧಿಕ ಸಮಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ. ರಸ್ತೆಗೆ ಕುಸಿದು ಮಣ್ಣು ತೆರವು ಬಳಿಕ ವಾಹನ ಸಂಚಾರ ಮತ್ತೆ ಆರಂಭವಾಗಿದೆ. ಮುಂಜಾಗ್ರತಾ ಕ್ರಮವಾಗಿ ಸಕಲೇಶಪುರ ಕಡೆಯಿಂದ‌ ಮಂಗಳೂರು ಕಡೆಗೆ ಹೋಗೋ ವಾಹನಗಳ‌ ಮಾರ್ಗ ಬದಲಾವಣೆ ಮಾಡಲಾಗಿದ್ದು, ಹಾನುಬಾಳ್ ಮೂಲಕ ತೆರಳಲು ಸೂಚಿಸಿಲಾಗಿದೆ.

ಶೃಂಗೇರಿಯಲ್ಲಿ ನಿಲ್ಲದ ತುಂಗಾ ನದಿ ಆರ್ಭಟ

ಚಿಕ್ಕಮಗಳೂರು: ಜಿಲ್ಲೆಯ ಕೆರೆಕಟ್ಟೆ, ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶೃಂಗೇರಿಯಲ್ಲಿ ತುಂಗಾ ನದಿ ಆರ್ಭಟಿಸುತ್ತಿದೆ. ನದಿ ಅಬ್ಬರಕ್ಕೆ ಭಾರತಿ ತೀರ್ಥ ರಸ್ತೆ ಜಲಾವೃತವಾಗಿದ್ದು, ಪಟ್ಟಣದ ಗಾಂಧಿ ಮೈದಾನವು ಸಂಪೂರ್ಣ ಮುಳುಗಡೆಯಾಗಿದೆ. ನದಿ ಪಾತ್ರದ ಅಂಗಡಿ ಮುಂಗಟ್ಟು, ಮನೆಗಳು ಜಲಾವೃತವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ವಾಹನ ಸಂಚಾರ ನಿಷೇಧ ಮಾಡಲಾಗಿದೆ.

ಶೃಂಗೇರಿಯ ಗಾಂಧಿ ಮೈದಾನವು ಸಂಪೂರ್ಣ ಮುಳುಗಡೆಯಾಗಿದೆ.

ಭಾರಿ ಮಳೆಗೆ ಮುಳ್ಳಯ್ಯನಗಿರಿ ರಸ್ತೆಯಲ್ಲಿ ಮತ್ತೆ ಗುಡ್ಡ ಕುಸಿದಿದೆ. ದತ್ತಪೀಠಕ್ಕೆ ಹೋಗುವ ಮಾರ್ಗದಲ್ಲೂ ಗುಡ್ಡ ಕುಸಿತಿದ್ದು, ಐದರಿಂದ ಆರು ಕಡೆ ಗುಡ್ಡದ ಮಣ್ಣು ಕುಸಿದಿದೆ. ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ, ದತ್ತಪೀಠ ಪ್ರವಾಸಿ ತಾಣಗಳಾಗಿರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರ ವಾಹನಗಳಿಗೆ ನಿಷೇಧ ವಿಧಿಸಲಾಗಿದೆ.

ಮುರಿದು ಬಿದ್ದ ಕಬ್ಬಿಣದ ಸೇತುವೆ

ಭಾರೀ ಮಳೆ ಹಿನ್ನೆಲೆ ಶೃಂಗೇರಿ ತಾಲೂಕಿನ ಕೆರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನೆಮ್ಮಾರು ಗ್ರಾಮದ ತೂಗು ಸೇತುವೆ ಕುಸಿದಿದೆ. ನೋಡ ನೋಡುತ್ತಿದ್ದಂತೆ ಜನರ ಕಣ್ಣೆದುರೇ ಕಬ್ಬಿಣದ ಸೇತುವೆ ಮುರಿದು ಬಿದ್ದಿದೆ.
ಸುಮಾರು ಐದಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಹೊಳೆಹದ್ದು ಸೇತುವೆ ಇದಾಗಿದ್ದು, ಗ್ರಾಮದಿಂದ ಹೊರ ಬರಲಾಗದೆ ಗ್ರಾಮಸ್ಥರು ಸಂಕಷ್ಟ ಅನುಭವಿಸುತ್ತಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಸೇತುವೆ ಮುಳುಗಡೆಯಿಂದಾಗಿ ಹೊರನಾಡು-ಕಳಸ ಸಂಪರ್ಕ ಕಡಿತವಾಗಿದೆ.

ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ತಾಲೂಕಿನ ಮಲಕಾಪುರ ಕಲ್ಲುಗಣಿಯಲ್ಲಿ‌ ತಡೆಗೋಡೆ ಕುಸಿದಿದೆ.

ಹೊನ್ನಾಳಿ, ಹರಿಹರದಲ್ಲಿ ನದಿ ಪಾತ್ರದ ಪ್ರದೇಶಗಳು ಮುಳುಗಡೆ

ದಾವಣಗೆರೆ: ಮಲೆನಾಡು ಭಾಗದಲ್ಲಿ ಭಾರಿ ಮಳೆಯಿಂದ ದಾವಣಗೆರೆ ಜಿಲ್ಲೆಯ ಸಮೀಪ ತುಂಗಭದ್ರಾ ನದಿ ಮೈತುಂಬಿ ಹರಿಯುತ್ತಿದೆ. ತುಂಗಾ ನದಿಯಿಂದ 75 ಸಾವಿರ ಕ್ಯುಸೆಕ್‌ಗೂ ಹೆಚ್ಚು ನೀರು ಹೊರ ಬಿಟ್ಟ ಹಿನ್ನೆಲೆಯಲ್ಲಿ ಹೊನ್ನಾಳಿ, ಹರಿಹರ ಸೇರಿದಂತೆ ನದಿ ಪಾತ್ರದ ಪ್ರದೇಶಗಳು ಮುಳುಗಡೆಯಾಗಿವೆ.

ಶ್ರೀ ಕ್ಷೇತ್ರ ಉಕ್ಕಡಗಾತ್ರಿ ದೇವಸ್ಥಾನದ ಮುಂಭಾಗಕ್ಕೆ ತುಂಗಭದ್ರಾ ನದಿ ನೀರು ಬಂದಿದ್ದು, ಸ್ನಾನ ಘಟ್ಟ, ಅಂಗಡಿ ಮುಂಗಟ್ಟುಗಳು ಸಂಪೂರ್ಣ ಮುಳುಗಡೆಯಾಗಿವೆ. ಉಕ್ಕಡಗಾತ್ರಿಗೆ ಪ್ರವೇಶ ಮಾಡುವ ಒಂದು ರಸ್ತೆ ಮುಳುಗಡೆಯಾಗಿದೆ. ಸೇತುವೆ ಮಾಡಿಸಿ ಎಂದು ದಶಕಗಳಿಂದ ಹೋರಾಟ ನಡೆಯುತ್ತಿದ್ದರೂ ಜನಪ್ರತಿನಿಧಿಗಳು ಸ್ಪಂದಿಸಿಲ್ಲ. ಪ್ರತಿ ಬಾರಿ ನದಿಯಲ್ಲಿ ನೀರು ಹೆಚ್ಚಾದಾಗ ಎರಡು ರಸ್ತೆಗಳು ಬಂದ್ ಆಗಿ ಸಂಚಾರಕ್ಕೆ ತೊಂದರೆಯಾಗುತ್ತದೆ ಎಂದು ಜನರು ಅಸಮಾಧಾನ ಹೊರಹಾಕಿದ್ದಾರೆ. ಹೊನ್ನಾಳಿ, ಹರಿಹರ ಸೇರಿದಂತೆ ಹಲವು ಕಡೆಗಳಲ್ಲಿ ಕೂಡ ವಸತಿ ಪ್ರದೇಶಕ್ಕೆ ನೀರು ನುಗ್ಗುವ ಆತಂಕ ಎದುರಾಗಿದೆ. ನದಿಯಲ್ಲಿ ಹೊರ ಹರಿವು ಕಡಿಮೆಯಾಗದಿದ್ದರೆ ಜನರನ್ನು ಸ್ಥಳಾಂತರ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದಲ್ಲಿ ಭಾರಿ ಮಳೆಯಿಂದ ಗೋಪಾಲ ಶಾಹೀರ್ ಎಂಬುವವರ ಮನೆಯ ಚಾವಣಿ ಕುಸಿತಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮೂಲೆ ಗದ್ದೆಮಠದ ಹತ್ತಿರ ಬಿದ್ದ ಬೃಹತ್ ಮರ ಬಿದ್ದಿದೆ.

ಮಡಿಕೇರಿ ಸಮೀಪ ಬಿರುಕು ಬಿಟ್ಟ ಗುಡ್ಡ

ಕೊಡಗು: ಮಡಿಕೇರಿ ಸಮೀಪದ ಮದೆನಾಡು ಸಮೀಪ ರಾಷ್ಟ್ರೀಯ 275ರಲ್ಲಿ ಗುಡ್ಡ ಕುಸಿಯುವ ಆತಂಕ ಉಂಟಾಗಿದೆ. ರಸ್ತೆ ಬದಿ ಇರೋ ಗುಡ್ಡದಲ್ಲಿ ಅಲ್ಲಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಯಾವ ಕ್ಷಣದಲ್ಲಾದರೂ ಗುಡ್ಡ ಕುಸಿದು ಬೀಳುವ ಸಾಧ್ಯತೆ ಇದೆ. ಮಂಜು ಮುಸುಕಿದ ವಾತಾವರಣದಿಂದ ವಾಹನ ಸವಾರರಿಗೆ ದಾರಿ ಸರಿಯಾಗಿ ಕಾಣುತ್ತಿಲ್ಲ. ಬಿರುಕು ಬಿಟ್ಟ ಸ್ಥಳಕ್ಕೆ ಮತ್ತಷ್ಟು ನೀರು ನುಗ್ಗಿದಲ್ಲಿ ಗುಡ್ಡ ಕುಸಿಯುವ ಸಾಧ್ಯತೆ ಇದೆ.

ಉಡುಪಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌

ಉಡುಪಿ: ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಪಶ್ಚಿಮ ಘಟ್ಟ, ಹೆಬ್ರಿ, ಕಾರ್ಕಳ, ಆಗುಂಬೆಯಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನು ಸೀತಾ ನದಿಯ ಸುತ್ತಮುತ್ತಲ ಗ್ರಾಮ, ತೋಟಗದ್ದೆಗಳು ಜಲಾವೃತವಾದ ದೃಶ್ಯವನ್ನು ಡ್ರೋನ್ ಕ್ಯಾಮೆರಾದಿಂದ ಛಾಯಾಗ್ರಹಕ ಸಿದ್ಧಾರ್ಥ ನೀಲಾವರ ಸೆರೆಹಿಡಿದಿದ್ದಾರೆ. ಈ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ.

ನಂಜನಗೂಡಿನ ಪರಶುರಾಮ ದೇವಸ್ಥಾನ ಮುಳುಗಡೆ

ಮೈಸೂರು: ಕಬಿನಿ ಜಲಾಶಯದಿಂದ 36 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಹಿನ್ನೆಲೆಯಲ್ಲಿ ನಂಜನಗೂಡಿನ ಪರಶುರಾಮ ದೇವಸ್ಥಾನ ಮುಳುಗಡೆಯಾಗಿದೆ. ಕಬಿನಿ ಡ್ಯಾಂನಿಂದ ಕಪಿಲಾ ನದಿಗೆ ನೀರು ಬಿಡುಗಡೆ ಮಾಡಿದ್ದರಿಂದ
ನಂಜನಗೂಡಿನ ಪರಶುರಾಮ ದೇವಸ್ಥಾನ ಮುಳುಗಡೆಯಾಗಿದೆ. ಇನ್ನು ಮನೆಗಳಿಗೆ ನೀರು ನುಗ್ಗುತ್ತಿರುವ ಹಿನ್ನೆಲೆಯಲ್ಲಿ ನದಿ ಪಕ್ಕದ ನಿವಾಸಿಗಳು ಮನೆ ಖಾಲಿ ಮಾಡುತ್ತಿದ್ದು, ಪ್ರವಾಹದ ಭೀತಿ ಎದುರಿದುತ್ತಿದ್ದಾರೆ.

ಇದನ್ನೂ ಓದಿ | Ankola landslide Case: ಅಂಕೋಲಾ ಗುಡ್ಡ ಕುಸಿತ ಪ್ರಕರಣ; ಮೃತರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈದುಂಬಿ ಧುಮ್ಮಿಕ್ಕುತ್ತಿರುವ ಹೊಗೇನಕಲ್ ಜಲಪಾತ

ಚಾಮರಾಜನಗರ: ಕೆ.ಆರ್.ಎಸ್. ಹಾಗೂ ಕಬಿನಿ ಜಲಾಶಯದಿಂದ ಹೊರಹರಿವು ಹೆಚ್ಚಳ ಹಿನ್ನೆಲೆಯಲ್ಲಿ ಕಾವೇರಿ ರೌದ್ರ ನರ್ತನ ಮಾಡುತ್ತಿದ್ದು, ಇದರಿಂದ ಕರ್ನಾಟಕ- ತಮಿಳುನಾಡು ಗಡಿಯಲ್ಲಿರುವ ಹೊಗೇನಕಲ್ ಜಲಪಾತ ಮೈದುಂಬಿ ಧುಮ್ಮಿಕ್ಕುತ್ತಿದೆ.

Continue Reading

ಪ್ರಮುಖ ಸುದ್ದಿ

Paris Olympics 2024 : 8 ಚಿನ್ನ, 1 ಬೆಳ್ಳಿ, 3 ಕಂಚು: ಒಲಿಂಪಿಕ್ಸ್ ಹಾಕಿ ಸ್ಪರ್ಧೆಯಲ್ಲಿ ಭಾರತ ತಂಡದ ಸಾಧನೆಗಳ ವಿವರ ಇಲ್ಲಿದೆ

Paris Olympics 2024 : ಭಾರತ ಹಾಕಿ ತಂಡ ಒಲಿಂಪಿಕ್ಸ್​ನಲ್ಲಿ ಅತ್ಯುತ್ತಮ ಸಾಧನೆ ಮಾಡಿದೆ. 8 ಚಿನ್ನ, 1 ಬೆಳ್ಳಿ ಹಾಗೂ 3 ಕಂಚಿನ ಪದಕಗಳನ್ನು ತನ್ನದಾಗಿಸಿಕೊಂಡಿದೆ. ಭಾರತದ ಹಾಕಿ ತಂಡವು ಒಲಿಂಪಿಕ್ಸ್ ನಲ್ಲಿ ಅತ್ಯಂತ ಯಶಸ್ವಿ ತಂಡವಾಗಿದೆ. ಹೀಗೆ ಭಾರತವು ಇಲ್ಲಿಯವರೆಗೆ ಸಾಧಿಸಿದ ಹಾಕಿಯಲ್ಲಿ ಎಲ್ಲಾ ಪೋಡಿಯಂ ಫಿನಿಶ್ ಗಳ ಪಟ್ಟಿ ಇಲ್ಲಿದೆ. ದೇಶವು

VISTARANEWS.COM


on

Paris Olympics 2024
Koo

ಬೆಂಗಳೂರು: ಹಾಕಿ ಭಾರತದ ರಾಷ್ಟ್ರೀಯ ಕ್ರೀಡೆ. ಶತಮಾನಗಳಷ್ಟು ಕಾಲ ಹಾಕಿಯಲ್ಲಿ ಭಾರತವೇ ಪಾರಮ್ಯ ವಹಿಸಿತ್ತು. ಆದರೆ ಕಳೆದೆರಡು ದಶಕಗಳಿಂದ ಜರ್ಮನಿ, ನೆದರ್ಲೆಂಡ್ಸ್​, ಬೆಲ್ಜಿಯಂನಂಥ ದೇಶಗಳು ಈ ಕ್ರೀಡೆಯಲ್ಲಿ ಪ್ರಾಬಲ್ಯ ಸಾಧಿಸಿತು. ಆದಾಗ್ಯೂ ಭಾರತದಲ್ಲಿ ಉತ್ತಮ ಹಾಕಿ ತಂಡವಿದೆ. ಜಾಗತಿಕ ಸ್ಪರ್ಧೆಗಳಲ್ಲಿ ಕಪ್​ ಗೆಲ್ಲು ಸಾಮರ್ಥ್ಯವೂ ಇದೆ. ಅಂತೆಯೇ ಪ್ಯಾರಿಸ್​ ಒಲಿಂಪಿಕ್ಸ್​ 2024ಕ್ಕೆ (Paris Olympics 2024) ಭಾರತದ ಪುರುಷರ ಹಾಕಿ ತಂಡ ಅರ್ಹತೆ ಪಡೆದಿದೆ ಅಲ್ಲಿಯೂ ಪ್ರಶಸ್ತಿ ಗೆಲ್ಲುವ ಭರವಸೆ ಮೂಡಿಸಿದೆ.

ಭಾರತ ಹಾಕಿ ತಂಡ ಒಲಿಂಪಿಕ್ಸ್​ನಲ್ಲಿ ಅತ್ಯುತ್ತಮ ಸಾಧನೆ ಮಾಡಿದೆ. 8 ಚಿನ್ನ, 1 ಬೆಳ್ಳಿ ಹಾಗೂ 3 ಕಂಚಿನ ಪದಕಗಳನ್ನು ತನ್ನದಾಗಿಸಿಕೊಂಡಿದೆ. ಭಾರತದ ಹಾಕಿ ತಂಡವು ಒಲಿಂಪಿಕ್ಸ್ ನಲ್ಲಿ ಅತ್ಯಂತ ಯಶಸ್ವಿ ತಂಡವಾಗಿದೆ. ಹೀಗೆ ಭಾರತವು ಇಲ್ಲಿಯವರೆಗೆ ಸಾಧಿಸಿದ ಹಾಕಿಯಲ್ಲಿ ಎಲ್ಲಾ ಪೋಡಿಯಂ ಫಿನಿಶ್ ಗಳ ಪಟ್ಟಿ ಇಲ್ಲಿದೆ. ದೇಶವು

ಈ ಹಿಂದಿನ ಟೋಕಿಯೊ ಒಲಿಂಪಿಕ್ಸ್​​ನಲ್ಲಿ ಪುರುಷರ ಹಾಕಿ ತಂಡವು ಜರ್ಮನಿಯನ್ನು 5-4 ಅಂತರದಿಂದ ಸೋಲಿಸಿ ಕಂಚಿನ ಪದಕ ಗೆಲ್ಲುವ ಮೂಲಕ ಹಾಕಿಯಲ್ಲಿ ಒಲಿಂಪಿಕ್ ಪದಕಕ್ಕಾಗಿ ಭಾರತದ 41 ವರ್ಷಗಳ ಕಾಯುವಿಕೆಯನ್ನು ಕೊನೆಗೊಳಿಸಿತ್ತು. 1980ರ ಮಾಸ್ಕೋ ಒಲಿಂಪಿಕ್ಸ್​​ನಲ್ಲಿ ಚಿನ್ನದ ಪದಕ ಗೆದ್ದ ಬಳಿಕ ಅದೇ ಮೊದಲ ಬಾರಿಗೆ ಭಾರತ ಒಲಿಂಪಿಕ್ಸ್​ನಲ್ಲಿ ಪೋಡಿಯಂ ಫಿನಿಶ್ ಮಾಡಿತ್ತು.

1928 ಆ್ಯಮ್​ಸ್ಟರ್​ಡ್ಯಾಮ್​ ಒಲಿಂಪಿಕ್ಸ್​​ನಲ್ಲಿ ಚಿನ್ನ

1928 ರ ಆ್ಯಮ್​ಸ್ಟರ್​ಡ್ಯಾಮ್​ ಒಲಿಂಪಿಕ್ಸ್​​ನ ಫೈನಲ್​ನಲ್ಲಿ ನೆದರ್ಲ್ಯಾಂಡ್ಸ್ ಅನ್ನು 3-0 ಅಂತರದಿಂದ ಸೋಲಿಸುವ ಮೂಲಕ ಭಾರತವು ಒಲಿಂಪಿಕ್ ಹಾಕಿಯಲ್ಲಿ ಮೊದಲ ಪದಕ ಗೆದ್ದಿತ್ತು. ಇದು ಒಲಿಂಪಿಕ್ಸ್​​ ಕ್ರೀಡಾಕೂಟದಲ್ಲಿ ಭಾರತದ ಮೊದಲ ಚಿನ್ನದ ಪದಕವೂ ಹೌದು.

1932, ಲಾಸ್ ಏಂಜಲೀಸ್​ನಲ್ಲಿ ಚಿನ್ನದ ಪದಕ

ನಾಲ್ಕು ವರ್ಷಗಳ ನಂತರ ಲಾಸ್ ಏಂಜಲೀಸ್​​ನಲ್ಲಿ ಭಾರತ ಹಾಕಿ ತಂಡ ಪ್ರಶಸ್ತಿಯನ್ನು ಉಳಿಸಿಕೊಂಡಿತು ಮತ್ತು ಒಲಿಂಪಿಕ್ಸ್​ನಲ್ಲಿ ಸತತ ಎರಡು ಚಿನ್ನದ ಪದಕಗಳನ್ನು ಗೆದ್ದಿತು. 1932ರ ಲಾಸ್ ಏಂಜಲೀಸ್ ಒಲಿಂಪಿಕ್ಸ್​ನಲ್ಲಿ ಭಾರತ 24-1 ಗೋಲುಗಳಿಂದ ಅಮೆರಿಕ ತಂಡವನ್ನು ಮಣಿಸಿತ್ತು.

1936, ಬರ್ಲಿನ್​ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ

ಧ್ಯಾನ್ ಚಂದ್ ನೇತೃತ್ವದ ಭಾರತ ತಂಡವು 1936 ರಲ್ಲಿ ಬರ್ಲಿನ್ ನಡೆದ ಒಲಿಂಪಿಕ್ಸ್​​ನಲ್ಲಿ ತವರಿನ ಪ್ರೇಕ್ಷಕರ ಮುಂದೆ ಜರ್ಮನಿಯನ್ನು 8-1 ಅಂತರದಿಂದ ಸೋಲಿಸಿತು. ಈ ಮೂಲಕ ಒಲಿಂಪಿಕ್ಸ್ ನಲ್ಲಿ ಹ್ಯಾಟ್ರಿಕ್ ಚಿನ್ನದ ಪದಕವನ್ನು ಪೂರ್ಣಗೊಳಿಸಿತು.

1948, ಲಂಡನ್​ನಲ್ಲಿ ಚಿನ್ನದ ಪದಕ

ಎರಡನೇ ಮಹಾಯುದ್ಧದಿಂದಾಗಿ 1940 ಮತ್ತು 1944ರ ಒಲಿಂಪಿಕ್ಸ್​​ ರದ್ದಾದ ಹೊರತಾಗಿಯೂ ಭಾರತವು ಕ್ರೀಡಾಕೂಟದಲ್ಲಿ ತಮ್ಮ ಪ್ರಾಬಲ್ಯವನ್ನು ಮುಂದುವರಿಸಿತ್ತು. ಇದು ಸ್ವಾತಂತ್ರ್ಯದ ನಂತರ ಒಲಿಂಪಿಕ್ಸ್​ನಲ್ಲಿ ಭಾರತದ ಮೊದಲ ಪದಕ. ಮತ್ತು ಫೈನಲ್​ನಲ್ಲಿ ಗ್ರೇಟ್ ಬ್ರಿಟನ್ ತಂಡವನ್ನು 4-0 ಅಂತರದಿಂದ ಸೋಲಿಸಿತ್ತು.

1952, ಹೆಲ್ಸಿಂಕಿಯಲ್ಲಿ ಚಿನ್ನದ ಪದಕ

ನೆದರ್ಲ್ಯಾಂಡ್ಸ್ ವಿರುದ್ಧದ ಒಲಿಂಪಿಕ್ಸ್ ಫೈನಲ್​ನಲ್ಲಿ ಬಲ್ಬೀರ್ ಸಿಂಗ್ ಸೀನಿಯರ್ ಐದು ಗೋಲುಗಳನ್ನು ಗಳಿಸಿ ಭಾರತಕ್ಕೆ ಗೆಲುವು ತಂದುಕೊಟ್ಟರು. ಈ ಮೂಲಕ ಭಾರತವು ಮೆಗಾ ಈವೆಂಟ್​ನಲ್ಲಿ ಸತತ ಐದನೇ ಚಿನ್ನದ ಪದಕ ಗೆದ್ದುಕೊಂಡಿತು.

ಇದನ್ನೂ ಓದಿ: Team India : ಶ್ರೀಲಂಕಾ ಪ್ರವಾಸದ ಟಿ20 ಸರಣಿಗೆ ಹಾರ್ದಿಕ್ ಬದಲಿಗೆ ಸೂರ್ಯಕುಮಾರ್ ನಾಯಕ

1956, ಮೆಲ್ಬೋರ್ನ್​ನಲ್ಲಿ ಚಿನ್ನದ ಪದಕ

ಮೆಲ್ಬೋರ್ನ್​​ನಲ್ಲಿ ನಡೆದ ಫೈನಲ್​​ನಲ್ಲಿ ಭಾರತ ನೆರೆಯ ಪಾಕಿಸ್ತಾನವನ್ನು 1-0 ಅಂತರದಿಂದ ಸೋಲಿಸಿ ಮತ್ತೊಂದು ಚಿನ್ನ ಗೆದ್ದಿತು.

1960, ರೋಮ್​ನಲ್ಲಿ ಬೆಳ್ಳಿ ಪದಕ

1960ರ ರೋಮ್ ಒಲಿಂಪಿಕ್ಸ್​ನಲ್ಲಿ ಪಾಕಿಸ್ತಾನ ವಿರುದ್ಧ 0-1 ಅಂತರದ ಸೋಲನುಭವಿಸಿದ ಭಾರತ ಸತತ ಆರು ಬಾರಿ ಚಿನ್ನದ ಪದಕದ ಬಳಿಕ ಬೆಳ್ಳಿಗೆ ತೃಪ್ತಿಪಡಬೇಕಾಯಿತು. ಈ ಮೂಲಕ ಭಾರತದ ಗೋಲ್ಡನ್ ಜಮಾನಕ್ಕೆ ಬಿಡುವು ಸಿಕ್ಕಿತು.

1964ರ ಟೋಕಿಯೊ ಒಲೀಂಪಿಕ್ಸ್​ನಲ್ಲಿ ಚಿನ್ನ

ಟೋಕಿಯೊದಲ್ಲಿ ನಡೆದ ಆ ನಂತರದ ಒಲಿಂಪಿಕ್ಸ್​ನಲ್ಲಿ ಭಾರತವು ಬಲವಾಗಿ ಮರಳಿತು. ಫೈನಲ್​ನಲ್ಲಿ ಪಾಕಿಸ್ತಾನವನ್ನು ಸೋಲಿಸಿ ಸೇಡು ತೀರಿಸಿಕೊಂಡಿತು. ಅಲ್ಲದೇ ಒಲಿಂಪಿಕ್ಸ್​ನಲ್ಲಿ ಏಳನೇ ಚಿನ್ನದ ಪದಕ ಗೆದ್ದಿತು.

1968, ಮೆಕ್ಸಿಕೊದಲ್ಲಿ ಕಂಚು

ಈ ಕೂಟದೊಂದಿಗೆ ಭಾರತ ಮೊದಲಬಾರಿಗೆ ಒಲಿಂಪಿಕ್ಸ್ ನಲ್ಲಿ ಫೈನಲ್ ಪ್ರವೇಶಿಸಲು ವಿಫಲವಾಯಿತು. ಸೆಮಿಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲನುಭವಿಸಿದರು. ಪಶ್ಚಿಮ ಜರ್ಮನಿಯನ್ನು ಸೋಲಿಸಿದ ನಂತರ ಕಂಚಿನ ಪದಕಕ್ಕೆ ತೃಪ್ತಿಪಡಬೇಕಾಯಿತು.

1972, ಮ್ಯೂನಿಚ್​ನಲ್ಲಿ ಕಂಚು

ಸೆಮಿಫೈನಲ್​​ನಲ್ಲಿ ಪಾಕಿಸ್ತಾನ ವಿರುದ್ಧ ಸೋತ ನಂತರ ಭಾರತ ಮತ್ತೊಮ್ಮೆ ಒಲಿಂಪಿಕ್ಸ್​​ ಫೈನಲ್​ಗೆ ಪ್ರವೇಶಿಸಲು ವಿಫಲವಾಯಿತು. ನೆದರ್ಲೆಂಡ್ಸ್ ತಂಡವನ್ನು ಮಣಿಸಿದ ಭಾರತ ಎರಡನೇ ಕಂಚಿನ ಪದಕ ತನ್ನದಾಗಿಸಿಕೊಂಡಿತು.

1980; ಮಾಸ್ಕೋ ಒಲಿಂಪಿಕ್ಸ್​ನಲ್ಲಿ ಗೋಲ್ಡ್

ರೌಂಡ್​ ರಾಬಿಲ್ ಲೀಗ್​ ಮಾದರಿಯಲ್ಲಿ ಆಡಿದ ಒಲಿಂಪಿಕ್ ಕ್ರೀಡಾಕೂಟದಲ್ಲಿ, ಭಾರತವು ಫೈನಲ್​ನ್ಲಲಿ ಸ್ಪೇನ್ ಅನ್ನು ಸೋಲಿಸಿ ಒಲಿಂಪಿಕ್ಸ್​​ನಲ್ಲಿ 8 ನೇ ಚಿನ್ನದ ಪದಕವನ್ನು ಗೆದ್ದುಕೊಂಡಿತು. ಆದರೆ ಇಲ್ಲಿಂದ 41 ವರ್ಷಗಳ ಕಾಲ ಭಾರತಕ್ಕೆ ಒಲಿಂಪಿಕ್ಸ್​ನಲ್ಲಿ ಪದಕವೇ ಸಿಗಲಿಲ್ಲ.

2021ರ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಕಂಚಿನ ಪದಕ

ಜರ್ಮನಿಯನ್ನು 5-4 ಅಂತರದಿಂದ ಮಣಿಸಿದ ಭಾರತ 41 ವರ್ಷಗಳ ಬಳಿಕ ಒಲಿಂಪಿಕ್ಸ್​ನಲ್ಲಿ 12ನೇ ಪದಕ ಗೆದ್ದುಕೊಂಡಿತು.

Continue Reading

ಕ್ರೀಡೆ

Olympic Games History: ಒಲಿಂಪಿಕ್ಸ್​ನಲ್ಲಿ ಗ್ರೀಸ್​ ದೇಶಕ್ಕೆ ವಿಶೇಷ ಮಾನ್ಯತೆ ನೀಡುವುದೇಕೆ?

Olympic Games History: ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಯಾವುದೇ ದೇಶ ಆತಿಥ್ಯ ವಹಿಸಿದರೂ ಕೂಡ ಒಲಿಂಪಿಕ್ಸ್ ಕ್ರೀಡಾಜ್ಯೋತಿಯನ್ನು ಪುರಾತನ ಗೇಮ್ಸ್ ಆಯೋಜಿಸಿದ್ದ ಗ್ರೀಸ್‌ನಿಂದ ತರಲಾಗುತ್ತದೆ. ಅಲ್ಲಿ ಬೆಳಗಲ್ಪಟ್ಟ ಜ್ಯೋತಿ ಮೊದಲು ಗ್ರೀಸ್‌ ನಗರದಲ್ಲಿ ಸಂಚರಿಸಿದ ನಂತರ ಕೂಟ ನಡೆಯುವ ದೇಶಕ್ಕೆ ಬರುತ್ತದೆ.

VISTARANEWS.COM


on

Olympic Games History
Koo

ಬೆಂಗಳೂರು: ಇಂದು ಜಗತ್ತಿನ ಪ್ರಮುಖ ಅಂತಾರಾಷ್ಟ್ರೀಯ ಕ್ರೀಡಾಕೂಟ ಎನಿಸಿಕೊಂಡಿರುವ ಒಲಿಂಪಿಕ್ಸ್​ಗೆ ಸಾವಿರಾರು(Olympic Games History) ವರ್ಷಗಳ ಇತಿಹಾಸವಿದೆ. ಈ ಒಲಿಂಪಿಕ್‌ ಕ್ರೀಡಾಕೂಟದ ಹಿನ್ನೆಲೆ, ಇತಿಹಾಸ ಮತ್ತು ಗ್ರೀಸ್​ ದೇಶಕ್ಕೆ ನೀಡುವ ವಿಶೇಷ ಮಾನ್ಯತೆಯ ಕುರಿತ ಮಾಹಿತಿ ಇಲ್ಲಿದೆ.

ಗ್ರೀಸ್​ಗೆ ವಿಶೇಷ ಸ್ಥಾನಮಾನ


ಚೊಚ್ಚಲ ಒಲಿಂಪಿಕ್​ ಸಂಘಟಿಸಿದ ಹೆಗ್ಗಳಿಕೆ ಗ್ರೀಸ್​ ದೇಶಕ್ಕೆ ಸಲ್ಲುತ್ತದೆ. ಸುಮಾರು ಕ್ರಿ.ಪೂ. 776ರಲ್ಲಿ ಗ್ರೀಸ್‌ನ ಒಲಿಂಪಿಯಾದಲ್ಲಿ ಮೊದಲ ಬಾರಿಗೆ ಒಲಿಂಪಿಕ್‌ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಮೂರ್ನಾಲ್ಕು ಶತಮಾನದವರೆಗೆ ಈ ಕೂಟವನ್ನು ಆಯೋಜಿಸಲಾಗುತ್ತಿತ್ತು. ಬಳಿಕ ಕ್ರಮೇಣ ನಿಂತುಹೋದ ಒಲಿಂಪಿಕ್‌ಗೆ ಚಾಲನೆ ಸಿಕ್ಕಿದ್ದು 1859ರಲ್ಲಿ. ಇವಾಂಜೆಲಾಸ್‌ ಝಪ್ಪಾಸ್‌ ಎಂಬಾತ ಪ್ರಪ್ರಥಮ ಅಂತಾರಾಷ್ಟ್ರೀಯ ಒಲಿಂಪಿಕ್‌ ಕ್ರೀಡಾಕೂಟವನ್ನು ಪ್ರಾಯೋಜಿಸಿದನು. ಬಳಿಕ 1894ರಲ್ಲಿ ಫ್ರಾನ್ಸ್‌ನ ಪಿಯರೆ ಡಿ ಕ್ಯುಬರ್ತಿನ್‌ ಎಂಬುವವನು ಅಂತಾರಾಷ್ಟ್ರೀಯ ಒಲಿಂಪಿಕ್‌ ಸಮಿತಿಯನ್ನು ಹುಟ್ಟುಹಾಕಿ, 1896ರಲ್ಲಿ ಪ್ರಥಮ ಬಾರಿಗೆ ಗ್ರೀಸ್‌ನ ಈಗಿನ ರಾಜಧಾನಿ ಅಥೆನ್ಸ್‌ ನಗರದಲ್ಲಿ ಬೇಸಿಗೆ ಒಲಿಂಪಿಕ್‌ ಕ್ರೀಡಾಕೂಟ ಆಯೋಜಿಸಲಾಯಿತು. ಇದು ಮೊದಲ ಆಧುನಿಕ ಒಲಿಂಪಿಕ್‌ ಕ್ರೀಡಾಕೂಟ.


ಮೊದಲ ಒಲಿಂಪಿಕ್​ ಸಂಘಟಿಸಿದ ಕಾರಣ ಪ್ರತಿ ಬಾರಿಯ ಉದ್ಘಾಟನ ಸಮಾರಂಭದಲ್ಲಿ ಕ್ರೀಡಾಪಟುಗಳ ಪಥಸಂಚಲನ ನಡೆಯುವಾಗ ಗ್ರೀಸ್​ ತಂಡವೇ ಮುಂಚೂಣಿಯಲ್ಲಿರುತ್ತದೆ. ಬಳಿಕ ಆತಿಥೇಯ ದೇಶದ ಭಾಷೆಯ ಅಲ್ಪಾಬೆಟಿಕ್‌ ಅಕ್ಷರಮಾಲೆಯನ್ನು ಅನುಸರಿಸಿ ತಂಡಗಳು ಪಥಸಂಚಲನದಲ್ಲಿ ಪಾಲ್ಗೊಳ್ಳುತ್ತವೆ. ಆತಿಥೇಯ ತಂಡ ಯಾವಾಗಲೂ ಕೊನೆಯ ಸ್ಥಾನದಲ್ಲಿರುತ್ತದೆ.

ಇದನ್ನೂ ಓದಿ The Olympic Games: 72ರ ಇಳಿ ವಯಸ್ಸಿನಲ್ಲೂ ಒಲಿಂಪಿಕ್ಸ್​ ಪದಕ ಗೆದ್ದಿದ್ದ ಶೂಟರ್‌; ಯಾರಿವರು?

ಒಲಿಂಪಿಕ್​ ಟಾರ್ಚ್​ ರಿಲೇ


ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಯಾವುದೇ ದೇಶ ಆತಿಥ್ಯ ವಹಿಸಿದರೂ ಕೂಡ ಒಲಿಂಪಿಕ್ಸ್ ಕ್ರೀಡಾಜ್ಯೋತಿಯನ್ನು ಪುರಾತನ ಗೇಮ್ಸ್ ಆಯೋಜಿಸಿದ್ದ ಗ್ರೀಸ್‌ನಿಂದ ತರಲಾಗುತ್ತದೆ. ಅಲ್ಲಿ ಬೆಳಗಲ್ಪಟ್ಟ ಜ್ಯೋತಿ ಮೊದಲು ಗ್ರೀಸ್‌ ನಗರದಲ್ಲಿ ಸಂಚರಿಸಿದ ನಂತರ ಕೂಟ ನಡೆಯುವ ದೇಶಕ್ಕೆ ಬರುತ್ತದೆ. ಗ್ರೀಸ್​ನ​ ಜಿಮ್ನಾಸ್ಟ್ ಎಲೆಟ್‌ಥಿಯೋರಿಸ್ ಪೆಟ್ರೌನಿಯಾಸ್, ರಿಯೋ ಒಲಿಂಪಿಕ್ಸ್ ಕ್ರೀಡಾಜ್ಯೋತಿ ಹಿಡಿದ ಮೊದಲ ಅಥ್ಲೀಟ್.


4 ವರ್ಷಗಳಿಗೊಮ್ಮೆ ನಡೆಯುವ ಟೂರ್ನಿ


ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಒಲಿಂಪಿಕ್‌ ಕ್ರೀಡಾಕೂಟ ನಡೆಯುತ್ತದೆ. ಇದೊಂದು ಅಂತಾರಾಷ್ಟ್ರೀಯ ಕ್ರೀಡಾಕೂಟವಾಗಿದೆ. ಈ ಕ್ರೀಡಾಕೂಟವನ್ನು ಬೇಸಿಗೆ ಮತ್ತು ಚಳಿಗಾಲದ ಒಲಿಂಪಿಕ್‌ ಕ್ರೀಡಾಕೂಟವೆಂದು ವಿಂಗಡಿಸಲಾಗಿದೆ. 1992ರ ತನಕ ಈ ಎರಡೂ ಕ್ರೀಡಾಕೂಟಗಳು ಒಂದೇ ವರ್ಷದಲ್ಲಿ ನಡೆಯುತ್ತಿದ್ದವು. ಈಗ ಈ ಎರಡು ಕ್ರೀಡಾಕೂಟಗಳ ನಡುವೆ 2 ವರ್ಷಗಳ ಅಂತರ ಇರುತ್ತದೆ.

ಇದನ್ನೂ ಓದಿ Olympics On Television: ಒಲಿಂಪಿಕ್ಸ್​ ಕ್ರೀಡಾಕೂಟ ಮೊದಲ ಬಾರಿಗೆ ಟಿವಿಯಲ್ಲಿ ಪ್ರಸಾರ ಕಂಡಿದ್ದು ಯಾವಾಗ?

ಈ ಬಾರಿಯ ವಿಶೇಷತೆ

ಈ ಬಾರಿಯ ಒಲಿಂಪಿಕ್ಸ್​ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಒಲಿಂಪಿಕ್ಸ್​ ಇತಿಹಾಸದಲ್ಲೇ ವಿಶೇಷ ಮಹತ್ವ ಪಡೆದಿದೆ. ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

Continue Reading
Advertisement
ICC T20 Ranking
ಪ್ರಮುಖ ಸುದ್ದಿ3 mins ago

ICC T20 Ranking: ಟಿ20 ರ್ಯಾಂಕಿಂಗ್​ನಲ್ಲಿ ಭರ್ಜರಿ ಬಡ್ತಿ ಪಡೆದ ಯಶಸ್ವಿ ಜೈಸ್ವಾಲ್​, ಶುಭ್​ಮನ್​ ಗಿಲ್​

Viral Video
ವೈರಲ್ ನ್ಯೂಸ್38 mins ago

Viral Video: ಡಿಸಿ ಆಫೀಸ್‌ನಲ್ಲಿ ಗೋಳಾಡುತ್ತಾ ನೆಲದಲ್ಲಿ ಹೊರಳಾಡಿದ ರೈತ; ವೈರಲಾಗ್ತಿದೆ ಈ ವಿಡಿಯೋ

Yezdi Roadster
ಆಟೋಮೊಬೈಲ್1 hour ago

Yezdi Roadster : ಯೆಜ್ಡಿ ರೋಡ್‌ಸ್ಟರ್ ಜತೆಗೆ ಈ ಹಲವು ಆ್ಯಕ್ಸೆಸರಿಗಳಿರುವ ಟ್ರಯಲ್ ಪ್ಯಾಕ್ ಉಚಿತ

Viral Video
ವೈರಲ್ ನ್ಯೂಸ್2 hours ago

Viral Video: 300 ಮೊಸಳೆಗಳಿರುವ ಕೆರೆಯಲ್ಲಿ ಬೈಕ್‌, ಕಾರು ಸ್ಟಂಟ್‌; ಹುಚ್ಚಾಟ ಮೆರೆದ ಯುವಕರಿಗೆ ಆಗಿದ್ದೇನು ಗೊತ್ತಾ?

ಪ್ರಮುಖ ಸುದ್ದಿ2 hours ago

Karnataka Rain: ವರುಣಾರ್ಭಟಕ್ಕೆ ರಾಜ್ಯದ ಹಲವೆಡೆ ನದಿಗಳು ಉಕ್ಕಿ ಹರಿದು ನೆರೆ ಸೃಷ್ಟಿ; ಕುಸಿದ ಸೇತುವೆಗಳು!

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : 8 ಚಿನ್ನ, 1 ಬೆಳ್ಳಿ, 3 ಕಂಚು: ಒಲಿಂಪಿಕ್ಸ್ ಹಾಕಿ ಸ್ಪರ್ಧೆಯಲ್ಲಿ ಭಾರತ ತಂಡದ ಸಾಧನೆಗಳ ವಿವರ ಇಲ್ಲಿದೆ

Viral Video
ವೈರಲ್ ನ್ಯೂಸ್2 hours ago

Viral Video: ಸಫಾರಿಯಲ್ಲಿ ಪ್ರವಾಸಿಗರ ಎದುರೇ ಸಿಂಹಗಳ ಕಾಮಕೇಳಿ!

Olympic Games History
ಕ್ರೀಡೆ2 hours ago

Olympic Games History: ಒಲಿಂಪಿಕ್ಸ್​ನಲ್ಲಿ ಗ್ರೀಸ್​ ದೇಶಕ್ಕೆ ವಿಶೇಷ ಮಾನ್ಯತೆ ನೀಡುವುದೇಕೆ?

Amitabh Bachchan holds umbrella for Jaya Bachchan
ಬಾಲಿವುಡ್2 hours ago

Amitabh Bachchan: ಅಮಿತಾಭ್ ರೊಮ್ಯಾಂಟಿಕ್ ಮೂಡ್‌ನಲ್ಲಿದ್ದರೂ ಮುಖ ಊದಿಸಿಕೊಂಡೇ ಇದ್ದ ಜಯಾ ಬಚ್ಚನ್!

Viral Video
ವೈರಲ್ ನ್ಯೂಸ್3 hours ago

Viral Video: ನೋಡ ನೋಡ್ತಿದ್ದಂತೆ ಮೂರನೇ ಮಹಡಿಯಿಂದ ಬಿದ್ದ ಮಹಿಳೆ; ಶಾಕಿಂಗ್‌ ವಿಡಿಯೋ ವೈರಲ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ3 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ4 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌