Mohammed Shami: ಎನ್​ಸಿಎಯಲ್ಲಿ ಬೌಲಿಂಗ್​ ಅಭ್ಯಾಸ ಆರಂಭಿಸಿದ ಶಮಿ - Vistara News

ಕ್ರೀಡೆ

Mohammed Shami: ಎನ್​ಸಿಎಯಲ್ಲಿ ಬೌಲಿಂಗ್​ ಅಭ್ಯಾಸ ಆರಂಭಿಸಿದ ಶಮಿ

Mohammed Shami: ವಿಶ್ವಕಪ್​ ಬಳಿಕ ಶಮಿ ಇದುವರೆಗೂ ಯಾವುದೇ ಕ್ರಿಕೆಟ್​ ಪಂದ್ಯ ಆಡಿಲ್ಲ. ಗಾಯದಿಂದ ಸಂಪೂರ್ಣ ಚೇತರಿಕೆ ಕಂಡಿರುವ ಶಮಿ ಈಗಾಗಲೇ ಬೌಲಿಂಗ್​ ಅಭ್ಯಾಸ ಕೂಡ ಆರಂಭಿಸಿದ್ದಾರೆ. ಶೀಘ್ರದಲ್ಲೇ ಅವರು ಭಾರತ ತಂಡ ಸೇರುವಂತಾಗಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.

VISTARANEWS.COM


on

Mohammed Shami
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಕ್ನೋ: ಪಾದದ ಶಸ್ತ್ರಚಿಕಿತ್ಸೆಗೆ(mohammed shami injury update) ಒಳಗಾಗಿ ಚೇತರಿಕೆ ಕಾಣುತ್ತಿರುವ ಭಾರತ ಕ್ರಿಕೆಟ್​ ತಂಡದ ಪ್ರಧಾನ​ ವೇಗಿ ಮೊಹಮ್ಮದ್ ಶಮಿ(Mohammed Shami) ಕ್ರಿಕೆಟ್​ಗೆ ಮರಳುವು ಸಿದ್ಧತೆಯಲ್ಲಿದ್ದಾರೆ. ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್​ಸಿಎ)ಯಲ್ಲಿ ಬೌಲಿಂಗ್​ ಅಭ್ಯಾಸ ಆರಂಭಿಸಿದ್ದು, ಈ ವಿಡಿಯೊವನ್ನು ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಎನ್​ಸಿಎಯಲ್ಲಿ(NCA) ಕಠಿಣ ಬ್ಯಾಟಿಂಗ್​ ಅಭ್ಯಾಸ ನಡೆಸುತ್ತಿರುವ ವಿಡಿಯೊವನ್ನು ಶಮಿ ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೊದಲ್ಲಿ ಶಮಿ ಬೌಲಿಂಗ್​ ನಡೆಸುತ್ತಿರುವ ಮತ್ತು ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ವಿಕೆಟ್​ ಉರುಳಿಸಿದ ವಿಡಿಯೊವನ್ನು ಕೂಡ ಎಡಿಟ್​ ಮಾಡಿ ಹಾಕಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಶಮಿ ಇದೇ ತಿಂಗಳು ಲಂಕಾ ವಿರುದ್ಧ ಆಡಲಿರುವ ಏಕದಿನ ಮತ್ತು ಟಿ20 ಸರಣಿಗೆ ಆಯ್ಕೆಯಾಗುತ್ತಾರೆ ಎನ್ನಲಾಗಿತ್ತು. ಆದರೆ ಶಮಿ ಇನ್ನೂ ಫಿಟ್​ನೆಸ್​ ಕ್ಲೀಯರೆನ್ಸ್​ ಪಡೆದಿಲ್ಲ. ಹೀಗಾಗಿ ಅವರು ಲಂಕಾ ಸರಣಿಗೆ ಆಯ್ಕೆಯಾಗುವುದು ಅನುಮಾನ.

ಬಾಂಗ್ಲಾ ಸರಣಿಯಲ್ಲಿ ಕಣಕ್ಕೆ?

ಚೇತರಿಕೆಯ ಹಾದಿಯಲ್ಲಿರುವ ಶಮಿ  ಈ ವರ್ಷದ ಕೊನೆಯಲ್ಲಿ ಬಾಂಗ್ಲಾದೇಶದ ವಿರುದ್ಧ ತವರಿನಲ್ಲಿ ನಡೆಯುವ ಟೆಸ್ಟ್ ಸರಣಿಗೆ ಪುನರಾಗಮನ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಗಾಯದಿಂದಾಗಿ ಶಮಿಗೆ ಈ ಬಾರಿ ಐಪಿಎಲ್​ ಸೇರಿ ಮಹತ್ವದ ಟಿ20 ವಿಶ್ವಕಪ್​ ಟೂರ್ನಿ ಕೈತಪ್ಪಿತ್ತು. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ವೇಳೆ ಗಾಯಗೊಂಡಿದ್ದ ಶಮಿ, ಈ ಗಾಯವನ್ನು ಮರೆಮಾಚಿ ವಿಶ್ವಕಪ್​ನಲ್ಲಿ ಅಮೋಘ ಬೌಲಿಂಗ್​ ಪ್ರದರ್ಶನ ತೋರಿದ್ದರು.

ವಿಶ್ವಕಪ್​ ಬಳಿಕ ಶಮಿ ಇದುವರೆಗೂ ಯಾವುದೇ ಕ್ರಿಕೆಟ್​ ಪಂದ್ಯ ಆಡಿಲ್ಲ. ಗಾಯದಿಂದ ಸಂಪೂರ್ಣ ಚೇತರಿಕೆ ಕಂಡಿರುವ ಶಮಿ ಈಗಾಗಲೇ ಬೌಲಿಂಗ್​ ಅಭ್ಯಾಸ ಕೂಡ ಆರಂಭಿಸಿದ್ದಾರೆ. ಶೀಘ್ರದಲ್ಲೇ ಅವರು ಭಾರತ ತಂಡ ಸೇರುವಂತಾಗಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.

ಇದನ್ನೂ ಓದಿ IND vs SL: ಲಂಕಾ ವಿರುದ್ಧದ ಏಕದಿನ ಸರಣಿಗೆ ಶ್ರೇಯಸ್ ಅಯ್ಯರ್ ಆಯ್ಕೆ ಸಾಧ್ಯತೆ

ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಶಮಿ ಅವರು ತಮ್ಮ ಮೊನಚಾದ ಬೌಲಿಂಗ್​ ದಾಳಿಯ ಮೂಲಕ ಟೂರ್ನಿಯಲ್ಲಿಯೇ ಅತ್ಯಧಿಕ ವಿಕೆಟ್​ ಪಡೆದ ಬೌಲರ್​ ಎನಿಸಿಕೊಂಡಿದ್ದರು. ಆಡಿದ 7 ಪಂದ್ಯಗಳಲ್ಲಿ 24 ವಿಕೆಟ್‌ ಉರುಳಿಸಿದ್ದರು. ಅವರ ಈ ಸಾಧನೆಯನ್ನು ಪರಿಗಣಿಸಿ ಅವರಿಗೆ ದೇಶದ ಎರಡನೇ ಅತ್ಯುನ್ನತ ಕ್ರೀಡಾ ಗೌರವವಾದ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಮೊಹಮ್ಮದ್ ಶಮಿ ಅರ್ಜುನ ಪ್ರಶಸ್ತಿ ಸ್ವೀಕರಿಸಿದ್ದರು. ಮೊಹಮ್ಮದ್ ಶಮಿ ಭಾರತ ಪರ 64 ಟೆಸ್ಟ್ ಪಂದ್ಯಗಳಲ್ಲಿ 229 ವಿಕೆಟ್ ಪಡೆದಿದ್ದಾರೆ. 101 ಏಕದಿನ ಪಂದ್ಯಗಳಲ್ಲಿ 195 ವಿಕೆಟ್ ಪಡೆದಿದ್ದಾರೆ. 23 ಟಿ20 ಪಂದ್ಯಗಳಲ್ಲಿ 24 ವಿಕೆಟ್ ಪಡೆದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ICC T20 Ranking: ಟಿ20 ರ್ಯಾಂಕಿಂಗ್​ನಲ್ಲಿ ಭರ್ಜರಿ ಬಡ್ತಿ ಪಡೆದ ಯಶಸ್ವಿ ಜೈಸ್ವಾಲ್​, ಶುಭ್​ಮನ್​ ಗಿಲ್​

ICC T20 Ranking:ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ನಂತರ ಯಶಸ್ವಿ ಜೈಸ್ವಾಲ್ ಐಸಿಸಿ ಶ್ರೇಯಾಂಕದಲ್ಲಿ ಮೇಲಕ್ಕೇರಿದ್ದಾರೆ. ಮೊದಲ ಎರಡು ಪಂದ್ಯಗಳನ್ನ ತಪ್ಪಿಸಿಕೊಂಡಿದ್ದರು. ಆದರೆ ಬ್ಯಾಟ್​ನೊಂದಿಗೆ ಉತ್ತಮ ಫಾರ್ಮ್ ಕಂಡ ಅವರು ಮೂರನೇ ಪಂದ್ಯದಲ್ಲಿ 36 ರನ್ ಗಳಿಸಿದರು. ನಾಲ್ಕನೇ ಪಂದ್ಯದಲ್ಲಿ ಅಜೇಯ 93 ರನ್ ಗಳಿಸಿದರು. ಇದು ಭಾರತಕ್ಕೆ ಸರಣಿ ಗೆಲ್ಲಲು ಸಹಾಯ ಮಾಡಿತು.

VISTARANEWS.COM


on

ICC T20 Ranking
Koo

ಬೆಂಗಳೂರು: ಜಿಂಬಾಬ್ವೆ ವಿರುದ್ಧದ ಟಿ 20 ಐ ಸರಣಿಯಲ್ಲಿ ಪ್ರಭಾವ ಬೀರಿದ ಟೀಮ್ ಇಂಡಿಯಾ ಆಟಗಾರರು ಬುಧವಾರ (ಜುಲೈ 17) ಐಸಿಸಿ ಮಂಡಳಿ ಬಿಡುಗಡೆ ಮಾಡಿದ ಇತ್ತೀಚಿನ ಐಸಿಸಿ ಶ್ರೇಯಾಂಕದಲ್ಲಿ ಗಮನಾರ್ಹ ಪ್ರಗತಿ ಕಂಡಿದ್ದಾರೆ. ಟಿ 20 ವಿಶ್ವಕಪ್ ಮುಗಿದ ಕೂಡಲೇ ಎರಡನೇ ಶ್ರೇಣಿಯ ಭಾರತ ತಂಡವು ಐದು ಪಂದ್ಯಗಳ ಟಿ 20 ಐ ಸರಣಿಗಾಗಿ ಜಿಂಬಾಬ್ವೆ ಪ್ರವಾಸ ಕೈಗೊಂಡಿತ್ತು. ಸರಣಿಯಲ್ಲಿ ಶುಬ್ಮನ್ ಗಿಲ್ ನಾಯಕತ್ವದ ಭಾರತ 4-1 ಅಂತರದ ಸರಣಿ ಗೆಲುವು ದಾಖಲಿಸಿತ್ತು. ವಿಶ್ವ ಟಿ 20 ಚಾಂಪಿಯನ್ಸ್ ಮೊಲದ ಪಂದ್ಯದ 13 ರನ್ ಗಳ ಆಘಾತಕಾರಿ ಸೋಲಿನೊಂದಿಗೆ ಪ್ರವಾಸವು ಆರಂಭಿಸಿದ್ದರೂ ಬಳಿಕ ಮುಂದಿನ ನಾಲ್ಕು ಪಂದ್ಯಗಳನ್ನು ಗೆದ್ದು ಪುಟಿದೆದ್ದಿತು.

ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ನಂತರ ಯಶಸ್ವಿ ಜೈಸ್ವಾಲ್ ಐಸಿಸಿ ಶ್ರೇಯಾಂಕದಲ್ಲಿ ಮೇಲಕ್ಕೇರಿದ್ದಾರೆ. ಮೊದಲ ಎರಡು ಪಂದ್ಯಗಳನ್ನ ತಪ್ಪಿಸಿಕೊಂಡಿದ್ದರು. ಆದರೆ ಬ್ಯಾಟ್​ನೊಂದಿಗೆ ಉತ್ತಮ ಫಾರ್ಮ್ ಕಂಡ ಅವರು ಮೂರನೇ ಪಂದ್ಯದಲ್ಲಿ 36 ರನ್ ಗಳಿಸಿದರು. ನಾಲ್ಕನೇ ಪಂದ್ಯದಲ್ಲಿ ಅಜೇಯ 93 ರನ್ ಗಳಿಸಿದರು. ಇದು ಭಾರತಕ್ಕೆ ಸರಣಿ ಗೆಲ್ಲಲು ಸಹಾಯ ಮಾಡಿತು.

ಜೈಸ್ವಾಲ್ ಒಟ್ಟಾರೆ 141 ರನ್​ಗಳೊಂದಿಗೆ ಸರಣಿ ಮುಗಿಸಿ ರ್ಯಾಂಕಿಂಗ್​ನಲ್ಲಿ ಆರನೇ ಸ್ಥಾನಕ್ಕೆ ಜಿಗಿದಿದ್ದಾರೆ. ಟಿ 20 ಐನಲ್ಲಿ ಅವರು ಎರಡನೇ ಅತ್ಯುನ್ನತ ಶ್ರೇಯಾಂಕದ ಭಾರತೀಯ ಬ್ಯಾಟರ್ ಆಗಿದ್ದಾರೆ. ಸೂರ್ಯಕುಮಾರ್ ಯಾದವ್ ಎರಡನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್ ಪ್ರಸ್ತುತ ವಿಶ್ವದ ಅಗ್ರ ಶ್ರೇಯಾಂಕ ಹೊಂದಿದ್ದಾರೆ.

ಇದನ್ನೂ ಓದಿ: Paris Olympics 2024 : 8 ಚಿನ್ನ, 1 ಬೆಳ್ಳಿ, 3 ಕಂಚು: ಒಲಿಂಪಿಕ್ಸ್ ಹಾಕಿ ಸ್ಪರ್ಧೆಯಲ್ಲಿ ಭಾರತ ತಂಡದ ಸಾಧನೆಗಳ ವಿವರ ಇಲ್ಲಿದೆ

ಜಿಂಬಾಬ್ವೆ ವಿರುದ್ಧ ಉತ್ತಮ ಪ್ರದರ್ಶನ ನೀಡಿದ ನಂತರ ಶುಬ್ಮನ್ ಗಿಲ್ ಕೂಡ ಶ್ರೇಯಾಂಕದಲ್ಲಿ ದೊಡ್ಡ ಏರಿಕೆ ಮಾಡಿದ್ದಾರೆ. ಬಲಗೈ ಬ್ಯಾಟರ್​ ತಮ್ಮ ತಂಡವನ್ನು ಮುನ್ನಡೆಸಿದ್ದಾರೆ. ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದವರಾಗಿ ಮುಗಿಸಿದ್ದಾರೆ. 2 ಅರ್ಧಶತಕಗಳ ಸಹಾಯದಿಂದ 170 ರನ್ ಗಳಿಸಿದ್ದಾರೆ. ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡಿದ ಅವರು 36 ಸ್ಥಾನ ಮೇಲಕ್ಕೇರಿ 37ನೇ ಸ್ಥಾನ ಪಡೆದುಕೊಂಡಿದ್ದಾರೆ.

ಐಸಿಸಿ ಟಿ20 ರ್ಯಾಂಕಿಂಗ್:

ಬೌಲರ್​ಗಳ ಪೈಕಿ ಜಿಂಬಾಬ್ವೆ ವೇಗಿ ಬ್ಲೆಸ್ಸಿಂಗ್ ಮುಜರಬಾನಿ 11 ಸ್ಥಾನ ಮೇಲಕ್ಕೇರಿ 44ನೇ ಸ್ಥಾನಕ್ಕೇರಿದ್ದಾರೆ. ಭಾರತದ ವಿರುದ್ಧ ಮುಜರಬಾನಿ ಆರು ವಿಕೆಟ್ ಪಡೆದಿದ್ದಾರೆ. ವಾಷಿಂಗ್ಟನ್ ಸುಂದರ್ 36 ಸ್ಥಾನ ಮೇಲಕ್ಕೇರಿ 46ನೇ ಸ್ಥಾನದಲ್ಲಿದ್ದರೆ, ಮುಖೇಶ್ ಕುಮಾರ್ 21 ಸ್ಥಾನ ಮೇಲೇರಿ 73ನೇ ಸ್ಥಾನಕ್ಕೇರಿದ್ದಾರೆ. ಸರಣಿಯಲ್ಲಿ ಸುಂದರ್ ಮತ್ತು ಮುಖೇಶ್ ತಲಾ 8 ವಿಕೆಟ್ ಪಡೆದು ಜಂಟಿಯಾಗಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು.

ಇಂಗ್ಲೆಂಡ್ ಸ್ಪಿನ್ನರ್ ಆದಿಲ್ ರಶೀದ್ ಪ್ರಸ್ತುತ ವಿಶ್ವದ ನಂಬರ್ ಒನ್ ಟಿ 20 ಬೌಲರ್ ಆಗಿದ್ದಾರೆ. ಅಕ್ಷರ್ ಪಟೇಲ್ ಟಿ20ಐನಲ್ಲಿ 13ನೇ ಸ್ಥಾನದಲ್ಲಿದ್ದಾರೆ. ಆಲ್​ರೌಂಡರ್​ಗಳ ಪೈಕಿ ವನಿಂದು ಹಸರಂಗ ಅಗ್ರಸ್ಥಾನದಲ್ಲಿದ್ದರೆ, ಹಾರ್ದಿಕ್ ಪಾಂಡ್ಯ (6ನೇ ಸ್ಥಾನ) 10ರೊಳಗೆ ಸ್ಥಾನ ಪಡೆದಿದ್ದಾರೆ.

Continue Reading

ಪ್ರಮುಖ ಸುದ್ದಿ

Paris Olympics 2024 : 8 ಚಿನ್ನ, 1 ಬೆಳ್ಳಿ, 3 ಕಂಚು: ಒಲಿಂಪಿಕ್ಸ್ ಹಾಕಿ ಸ್ಪರ್ಧೆಯಲ್ಲಿ ಭಾರತ ತಂಡದ ಸಾಧನೆಗಳ ವಿವರ ಇಲ್ಲಿದೆ

Paris Olympics 2024 : ಭಾರತ ಹಾಕಿ ತಂಡ ಒಲಿಂಪಿಕ್ಸ್​ನಲ್ಲಿ ಅತ್ಯುತ್ತಮ ಸಾಧನೆ ಮಾಡಿದೆ. 8 ಚಿನ್ನ, 1 ಬೆಳ್ಳಿ ಹಾಗೂ 3 ಕಂಚಿನ ಪದಕಗಳನ್ನು ತನ್ನದಾಗಿಸಿಕೊಂಡಿದೆ. ಭಾರತದ ಹಾಕಿ ತಂಡವು ಒಲಿಂಪಿಕ್ಸ್ ನಲ್ಲಿ ಅತ್ಯಂತ ಯಶಸ್ವಿ ತಂಡವಾಗಿದೆ. ಹೀಗೆ ಭಾರತವು ಇಲ್ಲಿಯವರೆಗೆ ಸಾಧಿಸಿದ ಹಾಕಿಯಲ್ಲಿ ಎಲ್ಲಾ ಪೋಡಿಯಂ ಫಿನಿಶ್ ಗಳ ಪಟ್ಟಿ ಇಲ್ಲಿದೆ. ದೇಶವು

VISTARANEWS.COM


on

Paris Olympics 2024
Koo

ಬೆಂಗಳೂರು: ಹಾಕಿ ಭಾರತದ ರಾಷ್ಟ್ರೀಯ ಕ್ರೀಡೆ. ಶತಮಾನಗಳಷ್ಟು ಕಾಲ ಹಾಕಿಯಲ್ಲಿ ಭಾರತವೇ ಪಾರಮ್ಯ ವಹಿಸಿತ್ತು. ಆದರೆ ಕಳೆದೆರಡು ದಶಕಗಳಿಂದ ಜರ್ಮನಿ, ನೆದರ್ಲೆಂಡ್ಸ್​, ಬೆಲ್ಜಿಯಂನಂಥ ದೇಶಗಳು ಈ ಕ್ರೀಡೆಯಲ್ಲಿ ಪ್ರಾಬಲ್ಯ ಸಾಧಿಸಿತು. ಆದಾಗ್ಯೂ ಭಾರತದಲ್ಲಿ ಉತ್ತಮ ಹಾಕಿ ತಂಡವಿದೆ. ಜಾಗತಿಕ ಸ್ಪರ್ಧೆಗಳಲ್ಲಿ ಕಪ್​ ಗೆಲ್ಲು ಸಾಮರ್ಥ್ಯವೂ ಇದೆ. ಅಂತೆಯೇ ಪ್ಯಾರಿಸ್​ ಒಲಿಂಪಿಕ್ಸ್​ 2024ಕ್ಕೆ (Paris Olympics 2024) ಭಾರತದ ಪುರುಷರ ಹಾಕಿ ತಂಡ ಅರ್ಹತೆ ಪಡೆದಿದೆ ಅಲ್ಲಿಯೂ ಪ್ರಶಸ್ತಿ ಗೆಲ್ಲುವ ಭರವಸೆ ಮೂಡಿಸಿದೆ.

ಭಾರತ ಹಾಕಿ ತಂಡ ಒಲಿಂಪಿಕ್ಸ್​ನಲ್ಲಿ ಅತ್ಯುತ್ತಮ ಸಾಧನೆ ಮಾಡಿದೆ. 8 ಚಿನ್ನ, 1 ಬೆಳ್ಳಿ ಹಾಗೂ 3 ಕಂಚಿನ ಪದಕಗಳನ್ನು ತನ್ನದಾಗಿಸಿಕೊಂಡಿದೆ. ಭಾರತದ ಹಾಕಿ ತಂಡವು ಒಲಿಂಪಿಕ್ಸ್ ನಲ್ಲಿ ಅತ್ಯಂತ ಯಶಸ್ವಿ ತಂಡವಾಗಿದೆ. ಹೀಗೆ ಭಾರತವು ಇಲ್ಲಿಯವರೆಗೆ ಸಾಧಿಸಿದ ಹಾಕಿಯಲ್ಲಿ ಎಲ್ಲಾ ಪೋಡಿಯಂ ಫಿನಿಶ್ ಗಳ ಪಟ್ಟಿ ಇಲ್ಲಿದೆ. ದೇಶವು

ಈ ಹಿಂದಿನ ಟೋಕಿಯೊ ಒಲಿಂಪಿಕ್ಸ್​​ನಲ್ಲಿ ಪುರುಷರ ಹಾಕಿ ತಂಡವು ಜರ್ಮನಿಯನ್ನು 5-4 ಅಂತರದಿಂದ ಸೋಲಿಸಿ ಕಂಚಿನ ಪದಕ ಗೆಲ್ಲುವ ಮೂಲಕ ಹಾಕಿಯಲ್ಲಿ ಒಲಿಂಪಿಕ್ ಪದಕಕ್ಕಾಗಿ ಭಾರತದ 41 ವರ್ಷಗಳ ಕಾಯುವಿಕೆಯನ್ನು ಕೊನೆಗೊಳಿಸಿತ್ತು. 1980ರ ಮಾಸ್ಕೋ ಒಲಿಂಪಿಕ್ಸ್​​ನಲ್ಲಿ ಚಿನ್ನದ ಪದಕ ಗೆದ್ದ ಬಳಿಕ ಅದೇ ಮೊದಲ ಬಾರಿಗೆ ಭಾರತ ಒಲಿಂಪಿಕ್ಸ್​ನಲ್ಲಿ ಪೋಡಿಯಂ ಫಿನಿಶ್ ಮಾಡಿತ್ತು.

1928 ಆ್ಯಮ್​ಸ್ಟರ್​ಡ್ಯಾಮ್​ ಒಲಿಂಪಿಕ್ಸ್​​ನಲ್ಲಿ ಚಿನ್ನ

1928 ರ ಆ್ಯಮ್​ಸ್ಟರ್​ಡ್ಯಾಮ್​ ಒಲಿಂಪಿಕ್ಸ್​​ನ ಫೈನಲ್​ನಲ್ಲಿ ನೆದರ್ಲ್ಯಾಂಡ್ಸ್ ಅನ್ನು 3-0 ಅಂತರದಿಂದ ಸೋಲಿಸುವ ಮೂಲಕ ಭಾರತವು ಒಲಿಂಪಿಕ್ ಹಾಕಿಯಲ್ಲಿ ಮೊದಲ ಪದಕ ಗೆದ್ದಿತ್ತು. ಇದು ಒಲಿಂಪಿಕ್ಸ್​​ ಕ್ರೀಡಾಕೂಟದಲ್ಲಿ ಭಾರತದ ಮೊದಲ ಚಿನ್ನದ ಪದಕವೂ ಹೌದು.

1932, ಲಾಸ್ ಏಂಜಲೀಸ್​ನಲ್ಲಿ ಚಿನ್ನದ ಪದಕ

ನಾಲ್ಕು ವರ್ಷಗಳ ನಂತರ ಲಾಸ್ ಏಂಜಲೀಸ್​​ನಲ್ಲಿ ಭಾರತ ಹಾಕಿ ತಂಡ ಪ್ರಶಸ್ತಿಯನ್ನು ಉಳಿಸಿಕೊಂಡಿತು ಮತ್ತು ಒಲಿಂಪಿಕ್ಸ್​ನಲ್ಲಿ ಸತತ ಎರಡು ಚಿನ್ನದ ಪದಕಗಳನ್ನು ಗೆದ್ದಿತು. 1932ರ ಲಾಸ್ ಏಂಜಲೀಸ್ ಒಲಿಂಪಿಕ್ಸ್​ನಲ್ಲಿ ಭಾರತ 24-1 ಗೋಲುಗಳಿಂದ ಅಮೆರಿಕ ತಂಡವನ್ನು ಮಣಿಸಿತ್ತು.

1936, ಬರ್ಲಿನ್​ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ

ಧ್ಯಾನ್ ಚಂದ್ ನೇತೃತ್ವದ ಭಾರತ ತಂಡವು 1936 ರಲ್ಲಿ ಬರ್ಲಿನ್ ನಡೆದ ಒಲಿಂಪಿಕ್ಸ್​​ನಲ್ಲಿ ತವರಿನ ಪ್ರೇಕ್ಷಕರ ಮುಂದೆ ಜರ್ಮನಿಯನ್ನು 8-1 ಅಂತರದಿಂದ ಸೋಲಿಸಿತು. ಈ ಮೂಲಕ ಒಲಿಂಪಿಕ್ಸ್ ನಲ್ಲಿ ಹ್ಯಾಟ್ರಿಕ್ ಚಿನ್ನದ ಪದಕವನ್ನು ಪೂರ್ಣಗೊಳಿಸಿತು.

1948, ಲಂಡನ್​ನಲ್ಲಿ ಚಿನ್ನದ ಪದಕ

ಎರಡನೇ ಮಹಾಯುದ್ಧದಿಂದಾಗಿ 1940 ಮತ್ತು 1944ರ ಒಲಿಂಪಿಕ್ಸ್​​ ರದ್ದಾದ ಹೊರತಾಗಿಯೂ ಭಾರತವು ಕ್ರೀಡಾಕೂಟದಲ್ಲಿ ತಮ್ಮ ಪ್ರಾಬಲ್ಯವನ್ನು ಮುಂದುವರಿಸಿತ್ತು. ಇದು ಸ್ವಾತಂತ್ರ್ಯದ ನಂತರ ಒಲಿಂಪಿಕ್ಸ್​ನಲ್ಲಿ ಭಾರತದ ಮೊದಲ ಪದಕ. ಮತ್ತು ಫೈನಲ್​ನಲ್ಲಿ ಗ್ರೇಟ್ ಬ್ರಿಟನ್ ತಂಡವನ್ನು 4-0 ಅಂತರದಿಂದ ಸೋಲಿಸಿತ್ತು.

1952, ಹೆಲ್ಸಿಂಕಿಯಲ್ಲಿ ಚಿನ್ನದ ಪದಕ

ನೆದರ್ಲ್ಯಾಂಡ್ಸ್ ವಿರುದ್ಧದ ಒಲಿಂಪಿಕ್ಸ್ ಫೈನಲ್​ನಲ್ಲಿ ಬಲ್ಬೀರ್ ಸಿಂಗ್ ಸೀನಿಯರ್ ಐದು ಗೋಲುಗಳನ್ನು ಗಳಿಸಿ ಭಾರತಕ್ಕೆ ಗೆಲುವು ತಂದುಕೊಟ್ಟರು. ಈ ಮೂಲಕ ಭಾರತವು ಮೆಗಾ ಈವೆಂಟ್​ನಲ್ಲಿ ಸತತ ಐದನೇ ಚಿನ್ನದ ಪದಕ ಗೆದ್ದುಕೊಂಡಿತು.

ಇದನ್ನೂ ಓದಿ: Team India : ಶ್ರೀಲಂಕಾ ಪ್ರವಾಸದ ಟಿ20 ಸರಣಿಗೆ ಹಾರ್ದಿಕ್ ಬದಲಿಗೆ ಸೂರ್ಯಕುಮಾರ್ ನಾಯಕ

1956, ಮೆಲ್ಬೋರ್ನ್​ನಲ್ಲಿ ಚಿನ್ನದ ಪದಕ

ಮೆಲ್ಬೋರ್ನ್​​ನಲ್ಲಿ ನಡೆದ ಫೈನಲ್​​ನಲ್ಲಿ ಭಾರತ ನೆರೆಯ ಪಾಕಿಸ್ತಾನವನ್ನು 1-0 ಅಂತರದಿಂದ ಸೋಲಿಸಿ ಮತ್ತೊಂದು ಚಿನ್ನ ಗೆದ್ದಿತು.

1960, ರೋಮ್​ನಲ್ಲಿ ಬೆಳ್ಳಿ ಪದಕ

1960ರ ರೋಮ್ ಒಲಿಂಪಿಕ್ಸ್​ನಲ್ಲಿ ಪಾಕಿಸ್ತಾನ ವಿರುದ್ಧ 0-1 ಅಂತರದ ಸೋಲನುಭವಿಸಿದ ಭಾರತ ಸತತ ಆರು ಬಾರಿ ಚಿನ್ನದ ಪದಕದ ಬಳಿಕ ಬೆಳ್ಳಿಗೆ ತೃಪ್ತಿಪಡಬೇಕಾಯಿತು. ಈ ಮೂಲಕ ಭಾರತದ ಗೋಲ್ಡನ್ ಜಮಾನಕ್ಕೆ ಬಿಡುವು ಸಿಕ್ಕಿತು.

1964ರ ಟೋಕಿಯೊ ಒಲೀಂಪಿಕ್ಸ್​ನಲ್ಲಿ ಚಿನ್ನ

ಟೋಕಿಯೊದಲ್ಲಿ ನಡೆದ ಆ ನಂತರದ ಒಲಿಂಪಿಕ್ಸ್​ನಲ್ಲಿ ಭಾರತವು ಬಲವಾಗಿ ಮರಳಿತು. ಫೈನಲ್​ನಲ್ಲಿ ಪಾಕಿಸ್ತಾನವನ್ನು ಸೋಲಿಸಿ ಸೇಡು ತೀರಿಸಿಕೊಂಡಿತು. ಅಲ್ಲದೇ ಒಲಿಂಪಿಕ್ಸ್​ನಲ್ಲಿ ಏಳನೇ ಚಿನ್ನದ ಪದಕ ಗೆದ್ದಿತು.

1968, ಮೆಕ್ಸಿಕೊದಲ್ಲಿ ಕಂಚು

ಈ ಕೂಟದೊಂದಿಗೆ ಭಾರತ ಮೊದಲಬಾರಿಗೆ ಒಲಿಂಪಿಕ್ಸ್ ನಲ್ಲಿ ಫೈನಲ್ ಪ್ರವೇಶಿಸಲು ವಿಫಲವಾಯಿತು. ಸೆಮಿಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲನುಭವಿಸಿದರು. ಪಶ್ಚಿಮ ಜರ್ಮನಿಯನ್ನು ಸೋಲಿಸಿದ ನಂತರ ಕಂಚಿನ ಪದಕಕ್ಕೆ ತೃಪ್ತಿಪಡಬೇಕಾಯಿತು.

1972, ಮ್ಯೂನಿಚ್​ನಲ್ಲಿ ಕಂಚು

ಸೆಮಿಫೈನಲ್​​ನಲ್ಲಿ ಪಾಕಿಸ್ತಾನ ವಿರುದ್ಧ ಸೋತ ನಂತರ ಭಾರತ ಮತ್ತೊಮ್ಮೆ ಒಲಿಂಪಿಕ್ಸ್​​ ಫೈನಲ್​ಗೆ ಪ್ರವೇಶಿಸಲು ವಿಫಲವಾಯಿತು. ನೆದರ್ಲೆಂಡ್ಸ್ ತಂಡವನ್ನು ಮಣಿಸಿದ ಭಾರತ ಎರಡನೇ ಕಂಚಿನ ಪದಕ ತನ್ನದಾಗಿಸಿಕೊಂಡಿತು.

1980; ಮಾಸ್ಕೋ ಒಲಿಂಪಿಕ್ಸ್​ನಲ್ಲಿ ಗೋಲ್ಡ್

ರೌಂಡ್​ ರಾಬಿಲ್ ಲೀಗ್​ ಮಾದರಿಯಲ್ಲಿ ಆಡಿದ ಒಲಿಂಪಿಕ್ ಕ್ರೀಡಾಕೂಟದಲ್ಲಿ, ಭಾರತವು ಫೈನಲ್​ನ್ಲಲಿ ಸ್ಪೇನ್ ಅನ್ನು ಸೋಲಿಸಿ ಒಲಿಂಪಿಕ್ಸ್​​ನಲ್ಲಿ 8 ನೇ ಚಿನ್ನದ ಪದಕವನ್ನು ಗೆದ್ದುಕೊಂಡಿತು. ಆದರೆ ಇಲ್ಲಿಂದ 41 ವರ್ಷಗಳ ಕಾಲ ಭಾರತಕ್ಕೆ ಒಲಿಂಪಿಕ್ಸ್​ನಲ್ಲಿ ಪದಕವೇ ಸಿಗಲಿಲ್ಲ.

2021ರ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಕಂಚಿನ ಪದಕ

ಜರ್ಮನಿಯನ್ನು 5-4 ಅಂತರದಿಂದ ಮಣಿಸಿದ ಭಾರತ 41 ವರ್ಷಗಳ ಬಳಿಕ ಒಲಿಂಪಿಕ್ಸ್​ನಲ್ಲಿ 12ನೇ ಪದಕ ಗೆದ್ದುಕೊಂಡಿತು.

Continue Reading

ಕ್ರೀಡೆ

Olympic Games History: ಒಲಿಂಪಿಕ್ಸ್​ನಲ್ಲಿ ಗ್ರೀಸ್​ ದೇಶಕ್ಕೆ ವಿಶೇಷ ಮಾನ್ಯತೆ ನೀಡುವುದೇಕೆ?

Olympic Games History: ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಯಾವುದೇ ದೇಶ ಆತಿಥ್ಯ ವಹಿಸಿದರೂ ಕೂಡ ಒಲಿಂಪಿಕ್ಸ್ ಕ್ರೀಡಾಜ್ಯೋತಿಯನ್ನು ಪುರಾತನ ಗೇಮ್ಸ್ ಆಯೋಜಿಸಿದ್ದ ಗ್ರೀಸ್‌ನಿಂದ ತರಲಾಗುತ್ತದೆ. ಅಲ್ಲಿ ಬೆಳಗಲ್ಪಟ್ಟ ಜ್ಯೋತಿ ಮೊದಲು ಗ್ರೀಸ್‌ ನಗರದಲ್ಲಿ ಸಂಚರಿಸಿದ ನಂತರ ಕೂಟ ನಡೆಯುವ ದೇಶಕ್ಕೆ ಬರುತ್ತದೆ.

VISTARANEWS.COM


on

Olympic Games History
Koo

ಬೆಂಗಳೂರು: ಇಂದು ಜಗತ್ತಿನ ಪ್ರಮುಖ ಅಂತಾರಾಷ್ಟ್ರೀಯ ಕ್ರೀಡಾಕೂಟ ಎನಿಸಿಕೊಂಡಿರುವ ಒಲಿಂಪಿಕ್ಸ್​ಗೆ ಸಾವಿರಾರು(Olympic Games History) ವರ್ಷಗಳ ಇತಿಹಾಸವಿದೆ. ಈ ಒಲಿಂಪಿಕ್‌ ಕ್ರೀಡಾಕೂಟದ ಹಿನ್ನೆಲೆ, ಇತಿಹಾಸ ಮತ್ತು ಗ್ರೀಸ್​ ದೇಶಕ್ಕೆ ನೀಡುವ ವಿಶೇಷ ಮಾನ್ಯತೆಯ ಕುರಿತ ಮಾಹಿತಿ ಇಲ್ಲಿದೆ.

ಗ್ರೀಸ್​ಗೆ ವಿಶೇಷ ಸ್ಥಾನಮಾನ


ಚೊಚ್ಚಲ ಒಲಿಂಪಿಕ್​ ಸಂಘಟಿಸಿದ ಹೆಗ್ಗಳಿಕೆ ಗ್ರೀಸ್​ ದೇಶಕ್ಕೆ ಸಲ್ಲುತ್ತದೆ. ಸುಮಾರು ಕ್ರಿ.ಪೂ. 776ರಲ್ಲಿ ಗ್ರೀಸ್‌ನ ಒಲಿಂಪಿಯಾದಲ್ಲಿ ಮೊದಲ ಬಾರಿಗೆ ಒಲಿಂಪಿಕ್‌ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಮೂರ್ನಾಲ್ಕು ಶತಮಾನದವರೆಗೆ ಈ ಕೂಟವನ್ನು ಆಯೋಜಿಸಲಾಗುತ್ತಿತ್ತು. ಬಳಿಕ ಕ್ರಮೇಣ ನಿಂತುಹೋದ ಒಲಿಂಪಿಕ್‌ಗೆ ಚಾಲನೆ ಸಿಕ್ಕಿದ್ದು 1859ರಲ್ಲಿ. ಇವಾಂಜೆಲಾಸ್‌ ಝಪ್ಪಾಸ್‌ ಎಂಬಾತ ಪ್ರಪ್ರಥಮ ಅಂತಾರಾಷ್ಟ್ರೀಯ ಒಲಿಂಪಿಕ್‌ ಕ್ರೀಡಾಕೂಟವನ್ನು ಪ್ರಾಯೋಜಿಸಿದನು. ಬಳಿಕ 1894ರಲ್ಲಿ ಫ್ರಾನ್ಸ್‌ನ ಪಿಯರೆ ಡಿ ಕ್ಯುಬರ್ತಿನ್‌ ಎಂಬುವವನು ಅಂತಾರಾಷ್ಟ್ರೀಯ ಒಲಿಂಪಿಕ್‌ ಸಮಿತಿಯನ್ನು ಹುಟ್ಟುಹಾಕಿ, 1896ರಲ್ಲಿ ಪ್ರಥಮ ಬಾರಿಗೆ ಗ್ರೀಸ್‌ನ ಈಗಿನ ರಾಜಧಾನಿ ಅಥೆನ್ಸ್‌ ನಗರದಲ್ಲಿ ಬೇಸಿಗೆ ಒಲಿಂಪಿಕ್‌ ಕ್ರೀಡಾಕೂಟ ಆಯೋಜಿಸಲಾಯಿತು. ಇದು ಮೊದಲ ಆಧುನಿಕ ಒಲಿಂಪಿಕ್‌ ಕ್ರೀಡಾಕೂಟ.


ಮೊದಲ ಒಲಿಂಪಿಕ್​ ಸಂಘಟಿಸಿದ ಕಾರಣ ಪ್ರತಿ ಬಾರಿಯ ಉದ್ಘಾಟನ ಸಮಾರಂಭದಲ್ಲಿ ಕ್ರೀಡಾಪಟುಗಳ ಪಥಸಂಚಲನ ನಡೆಯುವಾಗ ಗ್ರೀಸ್​ ತಂಡವೇ ಮುಂಚೂಣಿಯಲ್ಲಿರುತ್ತದೆ. ಬಳಿಕ ಆತಿಥೇಯ ದೇಶದ ಭಾಷೆಯ ಅಲ್ಪಾಬೆಟಿಕ್‌ ಅಕ್ಷರಮಾಲೆಯನ್ನು ಅನುಸರಿಸಿ ತಂಡಗಳು ಪಥಸಂಚಲನದಲ್ಲಿ ಪಾಲ್ಗೊಳ್ಳುತ್ತವೆ. ಆತಿಥೇಯ ತಂಡ ಯಾವಾಗಲೂ ಕೊನೆಯ ಸ್ಥಾನದಲ್ಲಿರುತ್ತದೆ.

ಇದನ್ನೂ ಓದಿ The Olympic Games: 72ರ ಇಳಿ ವಯಸ್ಸಿನಲ್ಲೂ ಒಲಿಂಪಿಕ್ಸ್​ ಪದಕ ಗೆದ್ದಿದ್ದ ಶೂಟರ್‌; ಯಾರಿವರು?

ಒಲಿಂಪಿಕ್​ ಟಾರ್ಚ್​ ರಿಲೇ


ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಯಾವುದೇ ದೇಶ ಆತಿಥ್ಯ ವಹಿಸಿದರೂ ಕೂಡ ಒಲಿಂಪಿಕ್ಸ್ ಕ್ರೀಡಾಜ್ಯೋತಿಯನ್ನು ಪುರಾತನ ಗೇಮ್ಸ್ ಆಯೋಜಿಸಿದ್ದ ಗ್ರೀಸ್‌ನಿಂದ ತರಲಾಗುತ್ತದೆ. ಅಲ್ಲಿ ಬೆಳಗಲ್ಪಟ್ಟ ಜ್ಯೋತಿ ಮೊದಲು ಗ್ರೀಸ್‌ ನಗರದಲ್ಲಿ ಸಂಚರಿಸಿದ ನಂತರ ಕೂಟ ನಡೆಯುವ ದೇಶಕ್ಕೆ ಬರುತ್ತದೆ. ಗ್ರೀಸ್​ನ​ ಜಿಮ್ನಾಸ್ಟ್ ಎಲೆಟ್‌ಥಿಯೋರಿಸ್ ಪೆಟ್ರೌನಿಯಾಸ್, ರಿಯೋ ಒಲಿಂಪಿಕ್ಸ್ ಕ್ರೀಡಾಜ್ಯೋತಿ ಹಿಡಿದ ಮೊದಲ ಅಥ್ಲೀಟ್.


4 ವರ್ಷಗಳಿಗೊಮ್ಮೆ ನಡೆಯುವ ಟೂರ್ನಿ


ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಒಲಿಂಪಿಕ್‌ ಕ್ರೀಡಾಕೂಟ ನಡೆಯುತ್ತದೆ. ಇದೊಂದು ಅಂತಾರಾಷ್ಟ್ರೀಯ ಕ್ರೀಡಾಕೂಟವಾಗಿದೆ. ಈ ಕ್ರೀಡಾಕೂಟವನ್ನು ಬೇಸಿಗೆ ಮತ್ತು ಚಳಿಗಾಲದ ಒಲಿಂಪಿಕ್‌ ಕ್ರೀಡಾಕೂಟವೆಂದು ವಿಂಗಡಿಸಲಾಗಿದೆ. 1992ರ ತನಕ ಈ ಎರಡೂ ಕ್ರೀಡಾಕೂಟಗಳು ಒಂದೇ ವರ್ಷದಲ್ಲಿ ನಡೆಯುತ್ತಿದ್ದವು. ಈಗ ಈ ಎರಡು ಕ್ರೀಡಾಕೂಟಗಳ ನಡುವೆ 2 ವರ್ಷಗಳ ಅಂತರ ಇರುತ್ತದೆ.

ಇದನ್ನೂ ಓದಿ Olympics On Television: ಒಲಿಂಪಿಕ್ಸ್​ ಕ್ರೀಡಾಕೂಟ ಮೊದಲ ಬಾರಿಗೆ ಟಿವಿಯಲ್ಲಿ ಪ್ರಸಾರ ಕಂಡಿದ್ದು ಯಾವಾಗ?

ಈ ಬಾರಿಯ ವಿಶೇಷತೆ

ಈ ಬಾರಿಯ ಒಲಿಂಪಿಕ್ಸ್​ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಒಲಿಂಪಿಕ್ಸ್​ ಇತಿಹಾಸದಲ್ಲೇ ವಿಶೇಷ ಮಹತ್ವ ಪಡೆದಿದೆ. ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

Continue Reading

ಕ್ರೀಡೆ

Dhammika Niroshana: ಶ್ರೀಲಂಕಾದ ಮಾಜಿ ಕ್ರಿಕೆಟಿಗನನ್ನು ಗುಂಡಿಕ್ಕಿ ಕೊಲೆಗೈದ ಅಪರಿಚಿತ ವ್ಯಕ್ತಿ

Dhammika Niroshana: ಸ್ಥಳೀಯ ಪೊಲೀಸರ ಮಾಹಿತಿ ಪ್ರಕಾರ, ನಿರೋಶನಾ ತಮ್ಮ ನಿವಾಸದಲ್ಲಿ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಇದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

VISTARANEWS.COM


on

Dhammika Niroshana
Koo

ಕೊಲಂಬೊ: ಶ್ರೀಲಂಕಾ ತಂಡದ ಮಾಜಿ ಆಟಗಾರ, ಅಂಡರ್​-19 ತಂಡದ ನಾಯಕನಾಗಿದ್ದ ಧಮ್ಮಿಕಾ ನಿರೋಶನಾ(Dhammika Niroshana) (41) ಅವರನ್ನು ಮಂಗಳವಾರ ತಡರಾತ್ರಿ (ಜುಲೈ 16) ಅವರ ನಿವಾಸದಲ್ಲಿಯೇ ಗುಂಡಿಕ್ಕಿ ಕೊಲೆಗೈದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸ್ಥಳೀಯ ಪೊಲೀಸರ ಮಾಹಿತಿ ಪ್ರಕಾರ, ನಿರೋಶನಾ ತಮ್ಮ ನಿವಾಸದಲ್ಲಿ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಇದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ತಲೆಮರೆಸಿಕೊಂಡಿರುವ ಶಂಕಿತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಕೊಲೆಗೆ ನಿಖರ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಗಾಲೆ ಜಿಲ್ಲೆಯ ಸಣ್ಣ ಪಟ್ಟಣವಾದ ಅಂಬಲಂಗೋಡದಲ್ಲಿರುವ ನಿವಾಸದಲ್ಲಿ ಅವರ ಹತ್ಯೆ ಮಾಡಲಾಗಿದೆ.

ಬಲಗೈ ಮಧ್ಯಮ ವೇಗದ ಬೌಲರ್ ಆಗಿದ್ದ ನಿರೋಶನಾ 2001 ಮತ್ತು 2004 ರ ನಡುವೆ ಗಾಲೆ ಕ್ರಿಕೆಟ್ ಕ್ಲಬ್​ಗಾಗಿ 12 ಪ್ರಥಮ ದರ್ಜೆ ಪಂದ್ಯಗಳು ಮತ್ತು 8 ಲಿಸ್ಟ್ ‘ಎ’ ಪಂದ್ಯಗಳನ್ನು ಆಡಿದ್ದಾರೆ. ಪ್ರಥಮ ದರ್ಜೆಯಲ್ಲಿ 19, ಲಿಸ್ಟ್ ‘ಎ’ ಪಂದ್ಯಗಳಲ್ಲಿ 5 ವಿಕೆಟ್​ ಕಿತ್ತ ಸಾಧನೆ ಮಾಡಿದ್ದಾರೆ. ಶ್ರೀಲಂಕಾ ಅಂಡರ್-19 ತಂಡದ ನಾಯಕನಾಗಿ ಎರಡು ವರ್ಷಗಳ ಕಾಲ ಟೆಸ್ಟ್ ಮತ್ತು ಏಕದಿನ ತಂಡವನ್ನು ಮುನ್ನಡೆಸಿದ್ದರು.

Continue Reading
Advertisement
ICC T20 Ranking
ಪ್ರಮುಖ ಸುದ್ದಿ2 mins ago

ICC T20 Ranking: ಟಿ20 ರ್ಯಾಂಕಿಂಗ್​ನಲ್ಲಿ ಭರ್ಜರಿ ಬಡ್ತಿ ಪಡೆದ ಯಶಸ್ವಿ ಜೈಸ್ವಾಲ್​, ಶುಭ್​ಮನ್​ ಗಿಲ್​

Viral Video
ವೈರಲ್ ನ್ಯೂಸ್37 mins ago

Viral Video: ಡಿಸಿ ಆಫೀಸ್‌ನಲ್ಲಿ ಗೋಳಾಡುತ್ತಾ ನೆಲದಲ್ಲಿ ಹೊರಳಾಡಿದ ರೈತ; ವೈರಲಾಗ್ತಿದೆ ಈ ವಿಡಿಯೋ

Yezdi Roadster
ಆಟೋಮೊಬೈಲ್1 hour ago

Yezdi Roadster : ಯೆಜ್ಡಿ ರೋಡ್‌ಸ್ಟರ್ ಜತೆಗೆ ಈ ಹಲವು ಆ್ಯಕ್ಸೆಸರಿಗಳಿರುವ ಟ್ರಯಲ್ ಪ್ಯಾಕ್ ಉಚಿತ

Viral Video
ವೈರಲ್ ನ್ಯೂಸ್2 hours ago

Viral Video: 300 ಮೊಸಳೆಗಳಿರುವ ಕೆರೆಯಲ್ಲಿ ಬೈಕ್‌, ಕಾರು ಸ್ಟಂಟ್‌; ಹುಚ್ಚಾಟ ಮೆರೆದ ಯುವಕರಿಗೆ ಆಗಿದ್ದೇನು ಗೊತ್ತಾ?

ಪ್ರಮುಖ ಸುದ್ದಿ2 hours ago

Karnataka Rain: ವರುಣಾರ್ಭಟಕ್ಕೆ ರಾಜ್ಯದ ಹಲವೆಡೆ ನದಿಗಳು ಉಕ್ಕಿ ಹರಿದು ನೆರೆ ಸೃಷ್ಟಿ; ಕುಸಿದ ಸೇತುವೆಗಳು!

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : 8 ಚಿನ್ನ, 1 ಬೆಳ್ಳಿ, 3 ಕಂಚು: ಒಲಿಂಪಿಕ್ಸ್ ಹಾಕಿ ಸ್ಪರ್ಧೆಯಲ್ಲಿ ಭಾರತ ತಂಡದ ಸಾಧನೆಗಳ ವಿವರ ಇಲ್ಲಿದೆ

Viral Video
ವೈರಲ್ ನ್ಯೂಸ್2 hours ago

Viral Video: ಸಫಾರಿಯಲ್ಲಿ ಪ್ರವಾಸಿಗರ ಎದುರೇ ಸಿಂಹಗಳ ಕಾಮಕೇಳಿ!

Olympic Games History
ಕ್ರೀಡೆ2 hours ago

Olympic Games History: ಒಲಿಂಪಿಕ್ಸ್​ನಲ್ಲಿ ಗ್ರೀಸ್​ ದೇಶಕ್ಕೆ ವಿಶೇಷ ಮಾನ್ಯತೆ ನೀಡುವುದೇಕೆ?

Amitabh Bachchan holds umbrella for Jaya Bachchan
ಬಾಲಿವುಡ್2 hours ago

Amitabh Bachchan: ಅಮಿತಾಭ್ ರೊಮ್ಯಾಂಟಿಕ್ ಮೂಡ್‌ನಲ್ಲಿದ್ದರೂ ಮುಖ ಊದಿಸಿಕೊಂಡೇ ಇದ್ದ ಜಯಾ ಬಚ್ಚನ್!

Viral Video
ವೈರಲ್ ನ್ಯೂಸ್3 hours ago

Viral Video: ನೋಡ ನೋಡ್ತಿದ್ದಂತೆ ಮೂರನೇ ಮಹಡಿಯಿಂದ ಬಿದ್ದ ಮಹಿಳೆ; ಶಾಕಿಂಗ್‌ ವಿಡಿಯೋ ವೈರಲ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ3 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ4 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌