Karnataka Jobs Reservation: ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ಉದ್ಯೋಗ ಮೀಸಲು ಸಾಧ್ಯವೆ? ತೊಡಕುಗಳು ಏನೇನು? - Vistara News

ರಾಜಕೀಯ

Karnataka Jobs Reservation: ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ಉದ್ಯೋಗ ಮೀಸಲು ಸಾಧ್ಯವೆ? ತೊಡಕುಗಳು ಏನೇನು?

ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ.75 ಮೀಸಲಾತಿ (Karnataka Jobs Reservation) ನಿಗದಿಪಡಿಸುವ ಕರಡು ಮಸೂದೆಗೆ ಕರ್ನಾಟಕದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ. ಇದಕ್ಕೆ ಖಾಸಗಿ ಕಂಪನಿಗಳ ಪ್ರಮುಖರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಸ್ಥಳೀಯರಿಂದ ಸಂತಸ ವ್ಯಕ್ತವಾಗಿದೆ. ಈ ಕಾಯಿದೆಯ ಹಿನ್ನೆಲೆ ಮುನ್ನೆಲೆ ಏನೇನು ಎಂಬ ವಿಸ್ತೃತ ಮಾಹಿತಿ ಇಲ್ಲಿದೆ.

VISTARANEWS.COM


on

Karnataka Jobs Reservation
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ರಾಜ್ಯದ ಖಾಸಗಿ ಕೈಗಾರಿಕೆಗಳು (Private industry) ಹಾಗೂ ಇತರೆ ಸಂಸ್ಥೆಗಳಲ್ಲಿ ಸ್ಥಳೀಯರಿಗೆ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ. 50 ಮತ್ತು ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ. 75ರಷ್ಟು ಮೀಸಲಾತಿ (Karnataka Jobs Reservation) ಕಡ್ಡಾಯಗೊಳಿಸಿರುವ ಕರಡು ಮಸೂದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramiah) ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ (karnataka Cabinet meeting) ಅನುಮೋದನೆ ನೀಡಿಲಾಗಿದ್ದು, ಇದಕ್ಕೆ ಉದ್ಯಮ ರಂಗದ ಪ್ರಮುಖರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಆದರೆ, ಈ ಕಾಯಿದೆ ಜಾರಿಯಾದರೆ ಕನ್ನಡಿಗರಿಗೆ ಉದ್ಯೋಗದಲ್ಲಿ ನ್ಯಾಯ ಸಿಗಲಿದೆ ಎಂಬ ಸಂತಸ ಸ್ಥಳೀಯ ಯುವ ಜನತೆಯಿಂದ ವ್ಯಕ್ತವಾಗುತ್ತಿದೆ.

ಈ ಮಸೂದೆಯಲ್ಲಿ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ. 50ರಷ್ಟು ಮತ್ತು ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ. 75ರಷ್ಟು ಸ್ಥಳೀಯರಿಗೆ ಮೀಸಲಾತಿಯನ್ನು ಕಡ್ಡಾಯಗೊಳಿಸುತ್ತದೆ. ಸಾಕಷ್ಟು ಅರ್ಹ ಅಭ್ಯರ್ಥಿಗಳು ಇಲ್ಲದೇ ಇದ್ದರೆ ಸರ್ಕಾರದ ಸಹಯೋಗದೊಂದಿಗೆ ಉದ್ಯಮವು ಮೂರು ವರ್ಷಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ತರಬೇತಿ ನೀಡಿ ಅವರನ್ನು ತೊಡಗಿಸಿಕೊಳ್ಳಬೇಕು. ಪ್ರಸ್ತಾವಿತ ಕಾನೂನಿನ ನಿಬಂಧನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಉದ್ಯಮಕ್ಕೆ ಮೂರು ವರ್ಷಗಳ ಕಾಲಾವಕಾಶ ನೀಡಲು ಸರ್ಕಾರ ಯೋಜನೆ ರೂಪಿಸುತ್ತಿದೆ.

ಮೂರು ವರ್ಷಗಳ ಆನಂತರವೂ ಉದ್ಯಮಕ್ಕೆ ಈ ಸಮಸ್ಯೆ ಎದುರಾದರೆ ತರಬೇತಿಯ ಅನಂತರವೂ ಸಾಕಷ್ಟು ಸೂಕ್ತ ಸ್ಥಳೀಯರು ಲಭ್ಯವಾಗದೇ ಇದ್ದರೆ ವಿಚಾರಣೆಯ ಅನಂತರ ಉದ್ಯಮವನ್ನು ಮೀಸಲಾತಿ ನಿಬಂಧನೆಗಳಿಂದ ವಿನಾಯಿತಿ ನೀಡುವ ಸರ್ಕಾರದ ಅಧಿಕಾರವನ್ನು ಮಸೂದೆ ಒದಗಿಸುತ್ತದೆ. ವೃತ್ತಿಪರರನ್ನು ನೇಮಿಸಿಕೊಳ್ಳಲು ಕಂಪೆನಿಗಳಿಗೆ ಅವಕಾಶವನ್ನು ಒದಗಿಸುತ್ತದೆ. ಆದರೆ ಈ ಅವಕಾಶ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ. 25ರಷ್ಟು ಮತ್ತು ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ. 50ರಷ್ಟು ಸ್ಥಳೀಯರನ್ನು ಭರ್ತಿ ಮಾಡಿದರೆ ಮಾತ್ರ ಸಿಗುತ್ತದೆ ಎಂಬುದು ಗಮನಾರ್ಹ ಸಂಗತಿಯಾಗಿದೆ.

Karnataka Jobs Reservation


ಸ್ಥಳೀಯರು ಅಂದರೆ ಯಾರು?

ಕರ್ನಾಟಕದಲ್ಲಿ ಹುಟ್ಟಿರುವ, 15 ವರ್ಷಗಳಿಂದ ರಾಜ್ಯದಲ್ಲಿ ನೆಲೆಸಿರುವ, ಕನ್ನಡ ಭಾಷೆಯನ್ನು ಓದುವುದು ಮತ್ತು ಬರೆಯುವುದನ್ನು ಚೆನ್ನಾಗಿ ತಿಳಿದಿರುವವರನ್ನು ಸ್ಥಳೀಯರು ಎಂದು ಮಸೂದೆಯಲ್ಲಿ ವ್ಯಾಖ್ಯಾನಿಸಲಾಗಿದೆ.
ಈ ಕಾನೂನಿನ ಅಡಿಯಲ್ಲಿ ಪ್ರಯೋಜನವನ್ನು ಬಯಸುವವರು ಕನ್ನಡ ಮಾಧ್ಯಮದಲ್ಲಿ ಹಿರಿಯ, ಮಾಧ್ಯಮಿಕ ಹಂತದಲ್ಲಿ ಓದಿರುವವರು ರಾಜ್ಯ ಸರ್ಕಾರದ ಭಾಷಾ ಪ್ರಾವೀಣ್ಯತೆಯ ಪರೀಕ್ಷೆಯನ್ನು ತೇರ್ಗಡೆಗೊಳಿಸಬೇಕು.

ಆಡಳಿತಾತ್ಮಕ, ಆಡಳಿತಾತ್ಮಕವಲ್ಲದ ಹುದ್ದೆಗಳು ಯಾವುದು?

ಆಡಳಿತಾತ್ಮಕ ಹುದ್ದೆಗಳೆಂದರೆ ನಿರ್ದೇಶಕರನ್ನು ಹೊರತುಪಡಿಸಿ ಮೇಲ್ವಿಚಾರಣೆ, ತಾಂತ್ರಿಕ, ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಪಾತ್ರಗಳಲ್ಲಿನ ಸ್ಥಾನಗಳನ್ನು ಒಳಗೊಂಡಿದೆ. ಆಡಳಿತಾತ್ಮಕವಲ್ಲದ ಹೊರಗುತ್ತಿಗೆ ಉದ್ಯೋಗಗಳು ಸೇರಿದಂತೆ ಕ್ಲೆರಿಕಲ್ ಹುದ್ದೆಗಳು, ಅರೆ ಮತ್ತು ನುರಿತ ಕೆಲಸಗಾರರಂತಹ ಎಲ್ಲಾ ಇತರ ಹುದ್ದೆಗಳನ್ನು ಸೇರಿಸಲಾಗಿದೆ.

ಇದನ್ನು ಯಾರು ಜಾರಿಗೆ ತರುತ್ತಾರೆ?

ಈ ಕಾನೂನನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಸರ್ಕಾರವು ಏಜೆನ್ಸಿಯನ್ನು ನೇಮಿಸುತ್ತದೆ. ಬಹುತೇಕ ಕಾರ್ಮಿಕ ಇಲಾಖೆಯೇ ಇದನ್ನು ನಿರ್ವಹಿಸಲಿದೆ. ವ್ಯವಸ್ಥಾಪಕ ಮತ್ತು ನಿರ್ವಾಹಕೇತರ ಹುದ್ದೆಗಳ ನೇಮಕಾತಿಗಳ ಕುರಿತು ವರದಿ ಪಡೆಯಲು, ಅನುಸರಣೆ ಇಲ್ಲದಿದ್ದಲ್ಲಿ ವಿಚಾರಣೆ ನಡೆಸಲು ಏಜೆನ್ಸಿಗೆ ಅಧಿಕಾರವಿದೆ. ಕ್ಲೈಮ್‌ಗಳನ್ನು ಪರಿಶೀಲಿಸಲು ಏಜೆನ್ಸಿಯು ಉದ್ಯೋಗದಾತರಿಂದ ಯಾವುದೇ ದಾಖಲೆಗಳನ್ನು ಪಡೆಯಬಹುದು. ಅಗತ್ಯಬಿದ್ದರೆ ಉದ್ಯಮದೊಳಗೆ ಪ್ರವೇಶಿಸಿ ಪರಿಶೀಲಿಸುವ ಅಧಿಕಾರವೂ ಸಂಸ್ಥೆಯ ಅಧಿಕಾರಿಗಳಿಗೆ ಇರುತ್ತದೆ. ಪ್ರಸ್ತಾವಿತ ಕಾನೂನಿನ ಅನುಷ್ಠಾನಕ್ಕಾಗಿ ಪ್ರಾಧಿಕಾರವು ಸಹಾಯಕ ಕಾರ್ಮಿಕ ಆಯುಕ್ತರ ಶ್ರೇಣಿಗಿಂತ ಕಡಿಮೆಯಿಲ್ಲದ ಅಧಿಕಾರಿಯನ್ನು ನೇಮಿಸಲಿದೆ.

Karnataka Jobs Reservation


ಕಾನೂನು ಪಾಲನೆಯಾಗದೇ ಇದ್ದರೆ?

ಪ್ರಸ್ತಾವಿತ ಕಾನೂನು ಸರಿಯಾಗಿ ಪಾಲನೆ ಆಗದೇ ಇದ್ದರೆ ಅಥವಾ ಕಾನೂನನ್ನು ಉಲ್ಲಂಘಿಸಿದರೆ ಕನಿಷ್ಠ 10,000 ರೂ.ನಿಂದ ಗರಿಷ್ಠ 25,000 ರೂ.ವರೆಗೆ ದಂಡವನ್ನು ನಿಗದಿಪಡಿಸಲಾಗಿದೆ. ಕಾನೂನಿನ ಉಲ್ಲಂಘನೆ ಮುಂದುವರಿದರೆ ದಂಡದ ಮೊತ್ತವನ್ನು 1 ಲಕ್ಷ ರೂ.ವರೆಗೆ ಹೆಚ್ಚಿಸಲಾಗುತ್ತದೆ. ಜೈಲು ಶಿಕ್ಷೆಯ ಬಗ್ಗೆ ಉಲ್ಲೇಖವಿಲ್ಲ. ಮಸೂದೆಯು ಆರು ತಿಂಗಳವರೆಗೆ ಕಾಲಾವಕಾಶ ನೀಡಲಿದೆ.

ಏನು ಇದರ ಪರಿಣಾಮ?

ಪ್ರಸ್ತಾವಿತ ಈ ಕಾನೂನು ಜಾರಿಯಾದರೆ 1.5 ಮಿಲಿಯನ್ ಉದ್ಯೋಗಿಗಳನ್ನು ಹೊಂದಿರುವ 245 ಬಿಲಿಯನ್ ಡಾಲರ್ ಮೌಲ್ಯದ ಬೆಂಗಳೂರು ತಂತ್ರಜ್ಞಾನ ಉದ್ಯಮದಲ್ಲಿ ಕನ್ನಡಿಗರಿಗೆ ಹೆಚ್ಚು ಉದ್ಯೋಗ ಸಿಗಲಿದೆ. ಯಾಕೆಂದರೆ ಇಲ್ಲಿ ಕೆಲಸ ಮಾಡುವ ಹೆಚ್ಚಿನ ಜನರು ಕನ್ನಡೇತರರು. ಕನ್ನಡಿಗರಿಗೆ ಅನ್ಯಾಯ ಆಗುತ್ತಿದೆ ಎಂಬ ಕೂಗು ಮೊದಲಿನಿಂದಲೂ ಕೇಳಿ ಬರುತ್ತಿದೆ.

ಮಾಹಿತಿ ತಂತ್ರಜ್ಞಾನ ಕ್ಷೇತ್ರವು ರಾಜ್ಯದ ಜಿಡಿಪಿಗೆ ಶೇ. 25ರಷ್ಟು ಕೊಡುಗೆ ನೀಡುತ್ತದೆ. ಸ್ಥಳೀಯರಿಗೆ ಮೀಸಲಾತಿ ಜಾರಿಗೆ ತಂದರೆ ಉನ್ನತ ಪ್ರತಿಭೆಗಳು, ಕುಶಲತೆ ಹೊಂದಿರುವವರು ಸಾಕಷ್ಟು ಸಂಖ್ಯೆಯಲ್ಲಿ ಸಿಗುತ್ತಿಲ್ಲ ಎಂದು ಖಾಸಗಿ ಕಂಪನಿಗಳು ಈ ಕಾಯಿದೆ ವಿರೋಧಿಸಿ ಬೇರೆ ರಾಜ್ಯಗಳಿಗೆ ವಲಸೆ ಹೋಗಬಹುದು. ಇದರಿಂದ ರಾಜ್ಯಕ್ಕೆ ಹಿನ್ನಡೆ ಆಗಬಹುದು.

ರಾಜ್ಯ ಸರ್ಕಾರದ ಪ್ರಕಾರ ಬೆಂಗಳೂರು ಕರ್ನಾಟಕದ ಆರ್ಥಿಕತೆಗೆ ಶೇ. 43.86ರಷ್ಟು ಕೊಡುಗೆ ನೀಡುತ್ತಿದೆ. ಕಳೆದ ವರ್ಷ ಮಂಡಿಸಲಾದ 2022-23ರ ಬಜೆಟ್‌ನಲ್ಲಿ ರಾಜ್ಯ ಹಣಕಾಸು ಇಲಾಖೆಯ ಅಂದಾಜಿನ ಪ್ರಕಾರ ರಾಷ್ಟ್ರೀಯ ಜಿಡಿಪಿಗೆ ಕರ್ನಾಟಕ ಶೇ. 7ರಷ್ಟು ಕೊಡುಗೆ ನೀಡುತ್ತಿದೆ. ಮಸೂದೆಯಲ್ಲಿನ ನಿರ್ಬಂಧಗಳು ಮುಂದಿನ ಐದು ವರ್ಷಗಳಲ್ಲಿ ಒಂದು ಟ್ರಿಲಿಯನ್ ಡಾಲರ್ ಮೌಲ್ಯದ ರಾಜ್ಯ ಸರ್ಕಾರದ ಯೋಜನೆಗಳ ಮೇಲೆ ಪರಿಣಾಮ ಬೀರಬಹುದು ಎನ್ನುತ್ತಾರೆ ಉದ್ಯಮ ತಜ್ಞರು.

Karnataka Jobs Reservation


ಬೇರೆ ರಾಜ್ಯಗಳಲ್ಲಿ ಈ ನಿರ್ಬಂಧ ಇದೆಯೇ?

ಭಾರತದ ಖಾಸಗಿ ವಲಯದಲ್ಲಿ ಉದ್ಯೋಗಗಳಲ್ಲಿ ಮೀಸಲಾತಿ ಕಾಯ್ದಿರಿಸಿದ ಮೊದಲ ರಾಜ್ಯಗಳಲ್ಲಿ ಆಂಧ್ರ ಪ್ರದೇಶ ಮತ್ತು ಹರಿಯಾಣ ಸೇರಿವೆ. ಎರಡೂ ರಾಜ್ಯಗಳು ಸಂಬಳದ ಮಿತಿಯೊಂದಿಗೆ ಉದ್ಯೋಗಗಳಿಗೆ ಮೀಸಲಾತಿಯನ್ನು ಒದಗಿಸಿವೆ. ಹರಿಯಾಣದಲ್ಲಿ 30,000 ರೂ. ಮಾಸಿಕ ವೇತನದ ಉದ್ಯೋಗಗಳಿಗೆ ಶೇ.75ರಷ್ಟು ಮೀಸಲಾತಿ ಅನ್ವಯಿಸುತ್ತದೆ. ಆಂಧ್ರದಲ್ಲಿ ಶೇ. 75ರಷ್ಟು ಮೀಸಲಾತಿಗೆ ಮಾಸಿಕ ವೇತನದ ಮಿತಿ 50,000 ರೂ. ಆಗಿದೆ.

ಕರ್ನಾಟಕ ಮಸೂದೆಯು ಸಂಬಳದ ಮಿತಿಯನ್ನು ವಿಧಿಸಿಲ್ಲ. ನಿರ್ದೇಶಕರನ್ನು ಹೊರತುಪಡಿಸಿ ಎಲ್ಲಾ ಖಾಸಗಿ ವಲಯದ ಉದ್ಯೋಗಗಳ ಮೇಲೆ ಕೋಟಾವನ್ನು ವಿಧಿಸುತ್ತದೆ. ಆದರೆ ಆಂಧ್ರಪ್ರದೇಶದಂತೆ ಕರ್ನಾಟಕವೂ ಸಹ ರಾಜ್ಯ ಶಾಸಕಾಂಗವು ಒಮ್ಮೆ ಅಂಗೀಕರಿಸಿದ ಕಾನೂನನ್ನು ಜಾರಿಗೆ ತರಲು ಉದ್ಯಮಕ್ಕೆ ಮೂರು ವರ್ಷಗಳನ್ನು ಒದಗಿಸಿದೆ.

ಇದನ್ನೂ ಓದಿ: Karnataka Jobs Reservation: ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಶೇ.75 ಮೀಸಲಾತಿ ಮಾತ್ರ; ಆಡಳಿತ ಹುದ್ದೆಗಳಲ್ಲಿ ಶೇ.50; ಉದ್ಯಮಿಗಳಿಗೆ ಬೆಚ್ಚಿತೇ ಸರ್ಕಾರ?

ಯಾವ ರೀತಿ ಎದುರಾಗಲಿದೆ ಕಾನೂನು ತೊಡಕುಗಳು?

ಕರ್ನಾಟಕ ಸರ್ಕಾರ ಪ್ರಸ್ತಾಪಿಸಿರುವ ಈ ಕಾನೂನಿಗೆ ಕಾನೂನು ತೊಡಕುಗಳು ಎದುರಾಗಬಹುದು. ಹರಿಯಾಣವು ಸ್ಥಳೀಯ ಅಭ್ಯರ್ಥಿಗಳಿಗೆ ರಾಜ್ಯ ಉದ್ಯೋಗ ಕಾಯಿದೆಯನ್ನು 2020ರಲ್ಲಿ ಜಾರಿಗೊಳಿಸಿತು. ಖಾಸಗಿ ವಲಯದ ಉದ್ಯೋಗಗಳಲ್ಲಿ ಸ್ಥಳೀಯರಿಗೆ 30,000 ರೂ. ವರೆಗಿನ ವೇತನಕ್ಕಾಗಿ ಶೇ. 75ರಷ್ಟು ಮೀಸಲಾತಿಯನ್ನು ಒದಗಿಸಿತು. ಬಳಿಕ ಅದನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ಆದರೆ ಇದು ಕಾನೂನನ್ನು ಸಂವಿಧಾನದ ಭಾಗ IIIರಲ್ಲಿ ಭಾರತದಾದ್ಯಂತ ಉದ್ಯೋಗ ಸ್ವಾತಂತ್ರ್ಯವನ್ನು ಒದಗಿಸುವ ಸಂವಿಧಾನದ 14 ಮತ್ತು 19ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು 2022ರಲ್ಲಿ ಹೈಕೋರ್ಟ್ ಈ ಕಾಯಿದೆಯನ್ನು ವಜಾಗೊಳಿಸಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

VISTARANEWS.COM


on

ಪಂಚರಾಜ್ಯ ಚುನಾವಣೆಯ ಫಲಿತಾಂಶದ ಕುರಿತ ಎಕ್ಸಿಟ್ ಪೋಲ್‌ಗಳಿಗಿಂತ ಉತ್ತಮ ಫಲಿತಾಂಶ ನಿರೀಕ್ಷೆಯಿದೆ ತಮಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಕೆಲವು ಪ್ರದೇಶಗಳಲ್ಲಿ ಗೊಂದಲದ ವರದಿಗಳು ಬಂದಿವೆ ಎಂದಿದ್ದಾರೆ, ತಮಿಳುನಾಡು ಮತ್ತು ಕೇರಳದಲ್ಲಿ ನಮ್ಮ ಮೈತ್ರಿಕೂಟ ಗೆಲುವು ಸಾಧಿಸುತ್ತದೆ ಎಂದ ಅವರು ಅಸ್ಸಾಂ ನಲ್ಲಿ ಎಕ್ಸಿಟ್ ಪೋಲ್‌ ರಿಸಲ್ಟ್‌ಗಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪಶ್ಚಿಮ ಬಂಗಾಳದ ರಾಜಕೀಯ ಪರಿಸ್ಥಿತಿಯ ಬಗ್ಗೆ ಅವರು, ತೃಣಮೂಲ ಕಾಂಗ್ರೆಸ್ ಮುನ್ನಡೆ ಸಾಧಿಸುವ ಸಾಧ್ಯತೆ ಇದೆ ಎಂದು ಹೇಳಿದರು. ಪೂರ್ಣ ಫಲಿತಾಂಶ ಬಂದ ಬಳಿಕ ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಬೆಂಬಲ ನೀಡುವ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

Continue Reading

bigbreaking

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಾ ಮೇ ಕ್ಲೈಮ್ಯಾಕ್ಸ್‌?

VISTARANEWS.COM


on

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಾ ಮೇ ಕ್ಲೈಮ್ಯಾಕ್ಸ್‌?

ಪಂಚರಾಜ್ಯಗಳ ಚುನಾವಣಾ ಪರ್ವ ಮುಗಿದಿದೆ. ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರಕ್ಕಾಗಿ ಪೈಪೋಟಿ ತೀವ್ರಗೊಂಡಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಬಣಗಳ ನಡುವೆ ನೀನಾ..ನಾನಾ ಸಮರ ಜೋರಾಗಿದೆ. ಮೇ ಕ್ಲೈಮ್ಯಾಕ್ಸ್‌ಗೆ ವೇದಿಕೆ ಸಜ್ಜಾಗಿದೆ. ಮತ್ತೊಂದು ಪ್ರಬಲ ರಾಜಕೀಯ ಸಂಘರ್ಷದ ಮುನ್ಸೂಚನೆ ಸಿಕ್ಕಿದೆ.

ಸಿದ್ದರಾಮಯ್ಯ ಮಹಾಮೌನ:
ರಾಜಕೀಯ ಬೆಳವಣಿಗೆಗಳು ತಾರಕಕ್ಕೆ ಏರುತ್ತಿರುವಂತೆಯೇ ಸಿಎಂ ಸಿದ್ದರಾಮಯ್ಯ ಮಹಾಮೌನಕ್ಕೆ ಜಾರಿದ್ದಾರೆ. ಈ ಮೌನ ಸಿದ್ದರಾಮಯ್ಯ ಬಣದ ಆತಂಕಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ಅಧಿಕಾರ ತ್ಯಾಗಕ್ಕೂ ಸಿದ್ದರಾಗಿದ್ದಾರೆ ಎಂಬಂತ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರತೊಡಗಿದೆ. ಇಷ್ಟೇ ಅಲ್ಲ, ಇನ್ನೊಂದು ಕಡೆ ಡಿಕೆ ಶಿವಕುಮಾರ್‌ ಬಣ ಮೇ ತಿಂಗಳ ಶುಭಸುದ್ದಿಯ ನಿರೀಕ್ಷೆಯಲ್ಲಿದೆ.

ಅಹಿಂದ-ದಲಿತ ಸಿಎಂ?
ಒಂದು ವೇಳೆ ಸಿದ್ದರಾಮಯ್ಯ ಪದತ್ಯಾಗ ಮಾಡಿದರೆ, ಮುಂದಿನ ಸಿಎಂ ಯಾರು ಎಂಬ ಪ್ರಶ್ನೆ, ಗೊಂದಲ ತೀವ್ರಗೊಂಡಿದೆ. ಈ ಮಧ್ಯೆ, ಡಿಕೆಶಿ ಸಿಎಂ ಆಗುವುದನ್ನು ತಪ್ಪಿಸಲು ರಣತಂತ್ರ ರಚಿಸಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ದೆಹಲಿಗೆ ತೆರಳಿದ್ದ ಸಿದ್ದರಾಮಯ್ಯ ಬಣದ ಸಚಿವರಾದ ಸತೀಶ್‌ ಜಾರಕಿಹೊಳಿ ಮತ್ತು ಹೆಚ್‌ ಸಿ ಮಹದೇವಪ್ಪ, ಅಹಿಂದ ಕಾರ್ಡ್‌ ಅಸ್ತ್ರ ಪ್ರಯೋಗ ಮಾಡಿದ್ದಾರೆ. ದಲಿತ ಸಿಎಂ ಬೇಡಿಕೆಯನ್ನೂ ಅವರು ಮುಂದಿಟ್ಟಿದ್ದಾರೆ. ದಲಿತ ಸಿಎಂ ಅಸ್ತ್ರದ ಪ್ರಯೋಗ ಅಂದರೆ, ಇನ್ನೊಂದು ರೀತಿಯಲ್ಲಿ ಡಿಕೆಶಿ ಸಿಎಂ ಆಗಬಾರದು ಎಂಬ ಪರೋಕ್ಷ ಸಂದೇಶದ ರವಾನೆ. ದಲಿತ ಸಿಎಂ ಚರ್ಚೆ ಬಂದಾಗ ರೇಸ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ಪರಮೇಶ್ವರ್‌, ಹೆಚ್‌ ಸಿ ಮಹದೇವಪ್ಪ, ಸತೀಶ್‌ ಜಾರಕಿಹೊಳಿ, ಕೆ. ಹೆಚ್‌ ಮುನಿಯಪ್ಪ ಹೆಸರುಗಳು ಮುಂಚೂಣಿಯಲ್ಲಿರುತ್ತದೆ. ಈ ಎಲ್ಲಾ ಹೆಸರುಗಳು ಕಳೆದ ಒಂದು ವರ್ಷಗಳಿಂದ ಕಾಂಗ್ರೆಸ್‌ನಲ್ಲಿ ಚಾಲ್ತಿಯಲ್ಲಿವೆ.

ನಡೆಯುತ್ತಾ ಮೇ ಕ್ರಾಂತಿ?:
ಮೇ ನಾಲ್ಕರಂದು ಐದು ರಾಜ್ಯಗಳ ಫಲಿತಾಂಶ ಹೊರಬರಲಿದೆ. ಅಂದೇ ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣಾ ರಿಸಲ್ಟ್‌ ಕೂಡಾ ಬರಲಿದೆ. ಡಿಕೆಶಿ ಬಣ ಅಧಿಕಾರ ಬದಲಾವಣೆ ನಿರೀಕ್ಷೆಯಲ್ಲಿದೆ. ಅದನ್ನು ತಪ್ಪಿಸಲು ಸಿದ್ದರಾಮಯ್ಯ ಬಣ ನಾನಾ ತಂತ್ರಗಾರಿಕೆ ನಡೆಸುತ್ತಿದೆ. ರಾಜಣ್ಣ ದಲಿತಾಸ್ತ್ರ ಪ್ರಯೋಗ ಮಾಡಿದ್ದಾರೆ. ಸತೀಶ್‌ ಜಾರಕಿಹೊಳಿ, ಹೆಚ್‌.ಸಿ. ಮಹದೇವಪ್ಪ ಮೊದಲಾದ ಸಿಎಂ ಬಣದ ಸಚಿವರು ಪ್ರಯೋಗ ಮಾಡಿದ್ದು ದಲಿತಾಸ್ತ್ರವೇ. ಅಧಿಕಾರ ಬದಲಾವಣೆಯಾದರೂ, ದಲಿತರೇ ಮುಖ್ಯಮಂತ್ರಿಯಾಗಬೇಕು ಎಂಬ ಹಠ ಈ ನಾಯಕರದ್ದು. ಈ ಮೂಲಕ ಡಿಕೆಶಿ ಸಿಎಂ ಆಗುವುದನ್ನು ತಪ್ಪಿಸಬೇಕು ಎಂಬ ರಣತಂತ್ರ ಹೆಣೆಯಲಾಗಿದೆ. ಡಿಕೆಶಿ ಬಣ ಕೂಡಾ ಪ್ರತಿತಂತ್ರ ಹೆಣೆಯುತ್ತಿದೆ. ಸಿದ್ದರಾಮಯ್ಯನವರ ಒಪ್ಪಿಗೆ ಇಲ್ಲದೇ ಯಾವುದೇ ನಿರ್ಧಾರ ಕೈಗೊಳ್ಳಬಾರದು ಎಂಬುದನ್ನೂ ಹಲವು ಸಚಿವರು ಹೈಕಮಾಂಡ್‌ಗೆ ಮನವರಿಕೆ ಮಾಡಿದ್ದಾರೆ ಎನ್ನಲಾಗಿದೆ.

Continue Reading

ರಾಜಕೀಯ

ಮೋದಿ ಅಥವಾ ದೀದಿ? ಪ.ಬಂಗಾಳದ ಭವಿಷ್ಯ ನಿರ್ಧರಿಸಲಿದೆ 142 ಸೀಟು

VISTARANEWS.COM


on

ಪಶ್ಚಿಮ ಬಂಗಾಳವನ್ನು ಈ ಸಲ ಗೆದ್ದೇ ಗೆಲ್ಲಬೇಕು ಎಂಬ ಬಿಜೆಪಿ ಹಠ-ನಾಲ್ಕನೇ ಬಾರಿಯೂ ಸಿಎಂ ಪಟ್ಟ ಉಳಿಸಿಕೊಳ್ಳಬೇಕು ಎಂಬ ಮಮತಾ ಬ್ಯಾನರ್ಜಿ ಛಲ – ಈ ಸಲ ಪಶ್ಚಿಮ ಬಂಗಾಲದಲ್ಲಿ ಮೋದಿಯಾ..ದೀದಿಯಾ ಅನ್ನೋ ಪ್ರಶ್ನೆಗೆ ಬುಧವಾರದ ವೋಟಿಂಗ್‌ ನಿರ್ಧರಿಸಲಿದೆ. ಬುಧವಾರ 142 ಸೀಟುಗಳೇ ಬಂಗಾಳದ ರಾಜಕೀಯ ಭವಿಷ್ಯ ಬರೆಯಲಿವೆ.

ಯಾಕೆ ಬುಧವಾರ ನಿರ್ಣಾಯಕ?:
ಬುಧವಾರ ಎರಡನೇ ಹಂತದಲ್ಲಿ ಬಂಗಾಳದ 8 ಜಿಲ್ಲೆಗಳಲ್ಲಿ ಮತದಾನ ನಡೆಯಲಿವೆ. ಕೋಲ್ಕತ್ತಾ ಉತ್ತರ, ಕೋಲ್ಕತ್ತಾ ದಕ್ಷಿಣ, ಹೌರಾ, ನಾಡಿಯಾ, ಉತ್ತರ 24 ಪರಗಣ, ದಕ್ಷಿಣ 24 ಪರಗಣ, ಹೂಗ್ಲಿ ಮತ್ತು ಪೂರ್ವ ಬರ್ಧಮನ್‌ ಜಿಲ್ಲೆಗಳಲ್ಲಿ ಮತಯುದ್ಧ ನಡೆಯಲಿವೆ. ಹಾಗೆ ನೋಡಿದರೆ ಈ ಎಂಟೂ ಜಿಲ್ಲೆಗಳು ಟಿಎಂಸಿಯ ಭದ್ರಕೋಟೆ. 2021ರ ಫಲಿತಾಂಶ ಒಮ್ಮೆ ನೋಡಿದರೆ, 142 ಸೀಟುಗಳಲ್ಲಿ ಟಿಎಂಸಿ 123ನ್ನು ಗೆದ್ದಿದೆ. ಬಿಜೆಪಿ ಗೆಲುವಿನ ನಗೆ ಬೀರಿದ್ದು ಕೇವಲ 18 ಸೀಟುಗಳಲ್ಲಿ. ಮತ್ತೊಂದು ಸೀಟು ಐಎಸ್‌ಎಫ್‌ ಪಾಲಾಗಿದೆ. ಹಾಗಾಗಿ, ಅಧಿಕಾರ ಉಳಿಸಿಕೊಳ್ಳಲು ಟಿಎಂಸಿಗೆ, ಅಧಿಕಾರ ಕಿತ್ತುಕೊಳ್ಳಲು ಬಿಜೆಪಿಗೆ ಈ 142 ಸೀಟುಗಳೇ ನಿರ್ಣಾಯಕ.
ವೋಟಿನ ಲೆಕ್ಕಾಚಾರ ಗಮನಿಸಿದರೆ ಎರಡನೇ ಹಂತದ ಮತದಾನದಲ್ಲಿ ಟಿಎಂಸಿ ಮುಂದೆ ಬಿಜೆಪಿ ಲೆಕ್ಕಕ್ಕೇ ಇಲ್ಲ. 2021ರಲ್ಲಿ ಎರಡನೇ ಹಂತದ ಕ್ಷೇತ್ರಗಳಲ್ಲಿ ಟಿಎಂಸಿಯದ್ದು ಅಭೂತಪೂರ್ವ ಶೇ. 82ರ ಸ್ಟ್ರೈಕ್‌ ರೇಟ್‌ (142ರಲ್ಲಿ 123 ಸೀಟು). ಬಿಜೆಪಿಯದ್ದು ಏನಿದ್ದರೂ ಶೇ. 17 ( 142ರಲ್ಲಿ 18 ಸೀಟು). ಆದರೆ, ಲೋಕಸಭಾ ಚುನಾವಣೆಯ ಹೊತ್ತಿಗೆ ಈ ಎಂಟು ಜಿಲ್ಲೆಗಳಲ್ಲಿ ಬಿಜೆಪಿಯ ವೋಟ್‌ ಶೇರಿಂಗ್‌ ಗಣನೀಯವಾಗಿ ಸುಧಾರಿಸಿದೆ. ಹಾಗಾಗಿ ಎರಡನೇ ಹಂತ ಮಮತಾ ಬ್ಯಾನರ್ಜಿಗೆ ಸುಲಭದ ತುತ್ತಲ್ಲ.

ಎರಡನೇ ಹಂತದ ಮೇಲೆ ಬಿಜೆಪಿ ಕಣ್ಣೇಕೆ?
ಪಶ್ಚಿಮ ಬಂಗಾಳದಲಿ ಬಿಜೆಪಿ ಧ್ವಜ ಹಾರಿಸಬೇಕಾದರೆ ಬುಧವಾರ ಮತದಾನವನ್ನು ಗೆಲ್ಲಲೇಬೇಕು ಎಂಬ ಸತ್ಯ ಬಿಜೆಪಿಗೆ ಅರಿವಿದೆ. ದೀದಿಯಿಂದ ಅಧಿಕಾರ ಕಿತ್ತುಕೊಳ್ಳಬೇಕಾದರೆ ಬಂಗಾಳದ ದಕ್ಷಿಣದ 8 ಜಿಲ್ಲೆಗಳಲ್ಲಿ ಬಿಜೆಪಿ ಪರಾಕ್ರಮ ತೋರಲೇ ಬೇಕಿದೆ. ಯಾಕಂದರೆ, ಉತ್ತರ ಬಂಗಾಳದಲ್ಲಿ ಬಿಜೆಪಿ ತನ್ನ ಸಾಮರ್ಥ್ಯವನ್ನು ಈಗಾಗಲೇ ಸಾಬೀತುಪಡಿಸಿದೆ. ಅಲ್ಲಿ 59 ಸೀಟುಗಳನ್ನು ಬಿಜೆಪಿ ಗೆದ್ದುಕೊಂಡಿದೆ. ಆದರೆ, ದಕ್ಷಿಣ ಬಂಗಾಳದಲ್ಲಿ ಆ ಪಾರಮ್ಯವನ್ನು ಸಾಬೀತುಪಡಿಸಬೇಕಿದೆ. ಹಾಗಿದ್ದರೆ ಮಾತ್ರ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಧ್ವಜ ರಾರಾಜಿಸಬಹುದು.

ಪ. ಬಂಗಾಳದಲ್ಲಿ ಬಿಜೆಪಿ ಗುಪ್ತಗಾಮಿನಿ:
ದೀದಿನಾಡಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವೆ ನೇರಾನೇರ ಹಣಾಹಣಿ ಇದೆ. ಮೂರು ಸಲ ಸತತ ಸಿಎಂ ಆಗಿರುವ ಮಮತಾ ಬ್ಯಾನರ್ಜಿ ವಿರುದ್ಧ ಆಡಳಿತ ವಿರೋಧಿ ಅಲೆಯೂ ಇದೆ. ಕಳೆದ ಸಲ ಈ ಆಡಳಿತ ವಿರೋಧಿ ಅಲೆಯನ್ನು ಬಳಸಿಕೊಳ್ಳುವಲ್ಲಿ ಬಿಜೆಪಿ ವಿಫಲವಾಗಿತ್ತು. ಆದರೂ ಅದರ ಸೀಟು ಮೂರರಿಂದ 77ಕ್ಕೆ ಏರಿತ್ತು. ಇದು ಕೂಡಾ ಗಮನಾರ್ಹ ಸಾಧನೆಯೇ. ಒಮ್ಮೆ ಪಶ್ಚಿಮ ಬಂಗಾಳದ ಅತಿದೊಡ್ಡ ಶಕ್ತಿಯಾಗಿ ಮೆರೆದಿದ್ದ ಎಡಪಕ್ಷಗಳು ಈಗ ಆಟಕ್ಕೆ ಉಂಟು ಲೆಕ್ಕಕ್ಕೆ ಇಲ್ಲ. ಕಾಂಗ್ರೆಸ್‌ ಕೂಡಾ ಕಣದಲ್ಲಿದೆಯಾದರೂ ಆ ಪಕ್ಷಕ್ಕೇ ಗೆಲ್ಲುವ ಯಾವುದೇ ಆತ್ಮವಿಶ್ವಾಸ ಇಲ್ಲ. ಆದರೆ, ಬಿಜೆಪಿ ಈ ಸಲ ತನ್ನ ರಣತಂತ್ರ ಬದಲಾಯಿಸಿದೆ. ಗುಪ್ತಗಾಮಿನಿಯಾಗಿ ಬಿಜೆಪಿಯ ಕಾರ್ಯಕರ್ತರು ಜನರ ನಡುವೆ ಸೇರಿದ್ದು, ಪಕ್ಷದ ಪರ ಸೈಲೆಂಟಾಗಿ ಪ್ರಚಾರ ನಡೆಸುತ್ತಿದ್ದಾರೆ. ಹೈವೋಲ್ಟೇಜ್‌ ಪ್ರಚಾರದಿಂದ ಬಿಜೆಪಿ ದೂರ ಉಳಿದಿದೆ. ಜೊತೆಗೆ ಮಮತಾ ಬ್ಯಾನರ್ಜಿಗೆ ವ್ಯಕ್ತಿಗತ ನಿಂದನೆಯಿಂದ ಹಿಂದೆ ಸರಿದಿದೆ. ಮಮತಾ ಆಡಳಿತ ವಿರೋಧಿ ಅಲೆ, ನುಸುಳುಕೋರರ ಸಮಸ್ಯೆ, ತುಷ್ಟೀಕರಣ ನೀತಿಯನ್ನೇ ಹೈಲೈಟ್‌ ಮಾಡಿ ಪ್ರಚಾರ ನಡೆಸುತ್ತಿದೆ. ಮತದಾರರ ಧ್ರುವೀಕರಣಕ್ಕೂ ಬಿಜೆಪಿ ರಣತಂತ್ರ ರೂಪಿಸಿದೆ. ಇದು ಫಲನೀಡಿದ್ರೆ, ಕಮಲ ಅರಳುವ ಎಲ್ಲಾ ಸಾಧ್ಯತೆಗಳಿವೆ.

ದಾಖಲೆ ವೋಟಿಂಗ್‌ ಯಾರಿಗೆ ವರ?
ಮೊದಲ ಹಂತದಲ್ಲಿ ಪ. ಬಂಗಾಳದಲ್ಲಿ ಶೇ. 93.19ರಷ್ಟು ಮತದಾನವಾಗಿದೆ. ಇದೊಂದು ಮಹಾ ದಾಖಲೆ. ಯಾಕೆ ಇಷ್ಟೊಂದು ಪ್ರಮಾಣದ ವೋಟಿಂಗ್‌ ಆಗಿದೆ ಅನ್ನೋದಕ್ಕೆ ಮೊದಲು ಸಿಗುವ ಉತ್ತರ ಎಸ್‌ಐಆರ್‌. ಮತಪಟ್ಟಿಯ ನವೀಕರಣ ಸಂದರ್ಭದಲ್ಲಿ ಅನರ್ಹ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಸುಮಾರು 90 ಲಕ್ಷ ಮತದಾರರು ಪಟ್ಟಿಯಿಂದ ಡಿಲೀಟ್‌ ಆಗಿದ್ದಾರೆ. ಇದು ಕೂಡಾ ಮತದಾನದ ದಾಖಲೆಗೆ ಕಾರಣ. ಈ ದಾಖಲೆ ವೋಟಿಂಗ್‌ ಲಾಭ ಬಿಜೆಪಿ ಪಡೆಯುತ್ತಾ? ಟಿಎಂಸಿಗೆ ಸಿಗುತ್ತಾ ಎಂಬುದಕ್ಕೆ ಹಲವು ತರ್ಕಗಳಿವೆ. ಇದಕ್ಕೆ ಉತ್ತರ ಮೇ 4ಕ್ಕೆ ಸಿಗಲಿದೆ

Continue Reading

Latest

ಸಿದ್ದರಾಮಯ್ಯನವರು ಹೈಕಮಾಂಡ್ ನಿರ್ಧಾರಕ್ಕೆ ಬದ್ಧ’: ಸಿಎಂ ಬದಲಾವಣೆ ಬಗ್ಗೆ ರಾಜಣ್ಣ ನೀಡಿದ ಹೇಳಿಕೆಯ ಮರ್ಮವೇನು?

VISTARANEWS.COM


on

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಪರ-ವಿರೋಧ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಸಚಿವ ಕೆ.ಎನ್. ರಾಜಣ್ಣ ಸ್ಫೋಟಕ ಸುಳಿವೊಂದನ್ನು ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಅಂಟಿಕೊಳ್ಳುವ ವ್ಯಕ್ತಿಯಲ್ಲ, ಅವರು ಮುಂದುವರಿಯುವುದಕ್ಕೂ ಸಿದ್ಧ ಅಥವಾ ಪದತ್ಯಾಗ ಮಾಡುವುದಕ್ಕೂ ಸೈ ಎಂಬ ಮನಸ್ಥಿತಿಯಲ್ಲಿದ್ದಾರೆ ಎಂದು ತಿಳಿಸಿದ್ದಾರೆ. ಸಿಎಂ ಜೊತೆಗಿನ ಸಭೆಯ ಸಂದರ್ಭದಲ್ಲಿ ಅವರು ಅತ್ಯಂತ ಮುಕ್ತ ಮನಸ್ಸಿನಿಂದ ಮಾತನಾಡಿದ್ದು, “ರಾಹುಲ್ ಗಾಂಧಿ ಅವರು ಏನು ಸೂಚನೆ ನೀಡುತ್ತಾರೋ ಅದನ್ನು ಪಾಲಿಸಲು ನಾನು ಬದ್ಧ” ಎಂದು ಹೇಳಿರುವುದಾಗಿ ರಾಜಣ್ಣ ಬಹಿರಂಗಪಡಿಸಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಸದ್ಯ ಸೃಷ್ಟಿಯಾಗಿರುವ ಗೊಂದಲಗಳನ್ನು ಹೈಕಮಾಂಡ್ ಶೀಘ್ರವಾಗಿ ಬಗೆಹರಿಸಬೇಕು ಎಂದು ರಾಜಣ್ಣ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡುತ್ತಾ ಅವರು, “ಗೊಂದಲಗಳು ಮುಂದುವರಿಯುವುದು ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಇದು ಕೇವಲ ವೈಯಕ್ತಿಕ ನಿರ್ಧಾರವಲ್ಲ, ಪಕ್ಷದ ಭವಿಷ್ಯವೂ ಇದರಲ್ಲಿ ಅಡಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ ‘ದಲಿತ ಮುಖ್ಯಮಂತ್ರಿ’ ಕೂಗಿನ ಬಗ್ಗೆಯೂ ಪ್ರತಿಕ್ರಿಯಿಸಿದ ಅವರು, ದಲಿತ ಸಿಎಂ ಆಗಬೇಕು ಎಂಬ ತಮ್ಮ ಹಳೆಯ ನಿಲುವಿಗೆ ಈಗಲೂ ಬದ್ಧವಾಗಿರುವುದಾಗಿ ನುಡಿದ್ದಾರೆ. ಇದು ಪರೋಕ್ಷವಾಗಿ ನಾಯಕತ್ವ ಬದಲಾವಣೆಯ ಮುನ್ಸೂಚನೆಯೇ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ.

ಸಿದ್ದರಾಮಯ್ಯ ಅವರ ಮೊದಲ ಅವಧಿಗೂ (2013-18) ಮತ್ತು ಈಗಿನ ಅವಧಿಗೂ ಸಾಕಷ್ಟು ವ್ಯತ್ಯಾಸವಿದೆ ಎಂದು ಹೇಳಿದ ರಾಜಣ್ಣ, ರಾಜಕಾರಣದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು ಎಂದು ಹೇಳುವ ಮೂಲಕ ಕುತೂಹಲ ಕಾಯ್ದಿರಿಸಿದ್ದಾರೆ. ಮುಂದಿನ ಚುನಾವಣೆಗೆ ಇನ್ನೂ ಸಮಯವಿರುವುದರಿಂದ ರಾಜಕೀಯ ದಿಕ್ಸೂಚಿಯನ್ನು ಈಗಲೇ ಅಳೆಯಲು ಸಾಧ್ಯವಿಲ್ಲ ಎಂದಿದ್ದಾರೆ. ಒಟ್ಟಾರೆಯಾಗಿ, ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ಸೂಚನೆಗಾಗಿ ಕಾಯುತ್ತಿದ್ದಾರೆ ಮತ್ತು ಅವರು ಯಾವುದೇ ನಿರ್ಧಾರಕ್ಕೂ ಮಾನಸಿಕವಾಗಿ ಸಿದ್ಧರಾಗಿದ್ದಾರೆ ಎಂಬುದು ಬೆಂಗಳೂರಿನಲ್ಲಿ ರಾಜಣ್ಣ ಅವರು ನೀಡಿದ ಈ ಹೇಳಿಕೆಯಿಂದ ಸ್ಪಷ್ಟವಾಗುತ್ತಿದೆ.

Continue Reading
Advertisement
Latest9 minutes ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

Latest16 minutes ago

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

Latest1 hour ago

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

Latest18 hours ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

Latest19 hours ago

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ

Latest19 hours ago

ಜಪಾನ್‌ಗೆ ಲಗ್ಗೆ ಇಡಲು ಸಜ್ಜಾದ ʼಧುರಂಧರ್’

bigbreaking19 hours ago

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಾ ಮೇ ಕ್ಲೈಮ್ಯಾಕ್ಸ್‌?

Latest21 hours ago

ಡಾಲಿ ಧನಂಜಯ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ದಂಪತಿ!

Latest22 hours ago

ಶಿಸ್ತು ಮರೆತರಾ ರಿಯಾನ್ ಪರಾಗ್? ಕಾನೂನು ಸಂಕಷ್ಟಕ್ಕೆ ಸಿಲುಕುತ್ತಾರಾ ರಾಜಸ್ಥಾನ ರಾಯಲ್ಸ್ ಆಟಗಾರ?

Latest23 hours ago

ಮತಯಂತ್ರದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌? ಚುನಾವಣಾ ಅಕ್ರಮ ಆರೋಪಿಸಿ ಕೇಸರಿ ಪಡೆ ಆಕ್ರೋಶ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌