UP CM v/s DCM: ಉತ್ತರಪ್ರದೇಶ ಬಿಜೆಪಿಯಲ್ಲಿ ಭಿನ್ನಮತ; ಯೋಗಿ ತಲೆದಂಡ ಪಕ್ಕಾನಾ? - Vistara News

ದೇಶ

UP CM v/s DCM: ಉತ್ತರಪ್ರದೇಶ ಬಿಜೆಪಿಯಲ್ಲಿ ಭಿನ್ನಮತ; ಯೋಗಿ ತಲೆದಂಡ ಪಕ್ಕಾನಾ?

UP CM v/s DCM: ಜೆ ಪಿ ನಡ್ಡಾರ ಜೊತೆ ಕೇಶವ್‌ ಪ್ರಸಾದ್‌ ಭೇಟಿ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಭೂಪೇಂದ್ರ ಸಿಂಗ್‌ ಚೌಧರಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಆಗಿ ಮಾತುಕತೆ ನಡೆಸಿರುವುದು ಎಲ್ಲರ ಗಮನ ಸೆಳೆದಿದೆ. ಇನ್ನು ಭೂಪೇಂದ್ರ ಸಿಂಗ್ ಚೌಧರಿ, ಜೆಪಿ ನಡ್ಡಾ ಅವರನ್ನೂ ಸಹ ಭೇಟಿ ಮಾಡಿ ಪ್ರತ್ಯೇಕ ಸಭೆ ನಡೆಸಿದ್ದಾರೆ.

VISTARANEWS.COM


on

UP CM DCM
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಖನೌ: ಉತ್ತರಪ್ರದೇಶ ಬಿಜೆಪಿಯಲ್ಲಿ ಭಿನ್ನಮತ(UP CM v/s DCM) ಸ್ಫೋಟವಾಗಿದೆ. ಸಿಎಂ ಯೋಗಿ ಆದಿತ್ಯಾನಾಥ್‌(Yogi Adityanath) ಮತ್ತು ಡಿಸಿಎಂ ಕೇಶವ್‌ ಪ್ರಸಾದ್‌ ಮೌರ್ಯ(Keshav Prasad Mourya) ನಡುವಿನ ಮುಸುಕಿನ ಗುದ್ದಾಟ ಬಹಿರಂಗವಾಗಿದೆ. ಇಬ್ಬರ ನಡುವಿನ ಭಾರೀ ಭಿನ್ನಮತದ ಬೆನ್ನಲ್ಲೇ ಕೇಶವ್ ಪ್ರಸಾದ್ ಮೌರ್ಯ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ(JP Nadda) ಅವರನ್ನು ಭೇಟಿ ಮಾಡಿರುವುದು ಮತ್ತಷ್ಟು ಕುತೂಹಲ ಮೂಡಿಸಿದೆ. ಅದೂ ಅಲ್ಲದೇ ಚುನಾವಣಾ ಹಿನ್ನಡೆ ಬಳಿಕ ಸಿಎಂ ಯೋಗಿ ಆದಿತ್ಯನಾಥ್ ತಲೆದಂಡವಾಗಲಿದೆ ಎಂಬ ವದಂತಿಗೆ ಮತ್ತಷ್ಟು ಪುಷ್ಠಿ ಸಿಕ್ಕಂತಾಗಿದೆ.

ಇನ್ನು ಜೆ ಪಿ ನಡ್ಡಾರ ಜೊತೆ ಕೇಶವ್‌ ಪ್ರಸಾದ್‌ ಭೇಟಿ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಭೂಪೇಂದ್ರ ಸಿಂಗ್‌ ಚೌಧರಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಆಗಿ ಮಾತುಕತೆ ನಡೆಸಿರುವುದು ಎಲ್ಲರ ಗಮನ ಸೆಳೆದಿದೆ. ಇನ್ನು ಭೂಪೇಂದ್ರ ಸಿಂಗ್ ಚೌಧರಿ, ಜೆಪಿ ನಡ್ಡಾ ಅವರನ್ನೂ ಸಹ ಭೇಟಿ ಮಾಡಿ ಪ್ರತ್ಯೇಕ ಸಭೆ ನಡೆಸಿದ್ದಾರೆ.

ಜೆಪಿ ನಡ್ಡಾ ಭೇಟಿಗೂ ಮುನ್ನ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬಹಿರಂಗವಾಗಿ ಯೋಗಿ ಆದಿತ್ಯಾನಾಥ್‌ ವಿರುದ್ಧ ಕಿಡಿಕಾರಿದ್ದ ಮೌರ್ಯ “ಸರ್ಕಾರಕ್ಕಿಂತ ಸಂಘಟನೆ ದೊಡ್ಡದು. ನನ್ನ ಕಾರ್ಯಕರ್ತರ ನೋವು, ನನ್ನ ನೋವು ಕೂಡ. ಸಂಘಟನೆಗಿಂತ ಯಾರೂ ದೊಡ್ಡವರಲ್ಲ. ಕಾರ್ಯಕರ್ತರೇ ಹೆಮ್ಮೆ” ಎಂದು ಟ್ವೀಟ್ ಮಾಡಿತ್ತು. ಇದರ ಬೆನ್ನಲ್ಲೇ ಮೌರ್ಯ ಅವರ ದಿಲ್ಲಿ ಪ್ರವಾಸ ಸಂಚಲನ ಮೂಡಿಸಿತ್ತು.

ಕಳೆದ ಜೂನ್ 14ರಂದು ಲಖನೌದಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಲೋಕಸಭೆ ಚುನಾವಣೆಯ ಹಿನ್ನಡೆಗೆ ‘ಅತಿಯಾದ ಆತ್ಮವಿಶ್ವಾಸ’ ಕಾರಣ ಎಂದು ಸಿಎಂ ಯೋಗಿ ಆದಿತ್ಯನಾಥ್ ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ ಲೋಕಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು ಸೇರಿದಂತೆ ರಾಜ್ಯ ಬಿಜೆಪಿಯ ಹಲವು ನಾಯಕರು, ಯೋಗಿ ಆದಿತ್ಯನಾಥ್ ಅವರ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ತಮ್ಮ ಸೋಲಿಗೆ ಯೋಗಿ ಅವರ ಆಡಳಿತ ಶೈಲಿಯೇ ಕಾರಣ ಎಂದು ಆರೋಪಿಸುತ್ತಿದ್ದರು.

ಅಖಿಲೇಶ್‌ ಯಾದವ್‌ ಗೆ ತಿರುಗೇಟು

ಏತನ್ಮಧ್ಯೆ, ಮೌರ್ಯ ಅವರ ಪೋಸ್ಟ್ ಅನ್ನೇ ಅಸ್ತ್ರವನ್ನಾಗಿಸಿಕೊಂಡು ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ವ್ಯಂಗ್ಯವಾಡಿದೆ. ಈ ಬಗ್ಗೆ ಎಸ್ಪಿ ನಾಯಕ ಅಖಲೇಶ್‌ ಯಾದವ್‌ ಬಿಜೆಪಿಯನ್ನು ಟೀಕಿಸಿದ್ದರು. ಇದಕ್ಕೆ ಟಾಂಗ್‌ ಕೊಟ್ಟ, ಕೇಶವ್ ಪ್ರಸಾದ್ ಮೌರ್ಯ, ಇಂದು ಬಿಜೆಪಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪ್ರಬಲವಾಗಿದೆ ಮತ್ತು 2027 ರಲ್ಲಿ ಯುಪಿ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂದು ಹೇಳಿದರು.

ಇದನ್ನೂ ಓದಿ:Director Arrest: ಕೊಲೆ ಕೇಸ್​​ನಲ್ಲಿ 20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಸ್ಯಾಂಡಲ್​ವುಡ್ ನಿರ್ದೇಶಕ ಅರೆಸ್ಟ್​!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

PM Narendra Modi: ಚುನಾವಣೆಯಲ್ಲಿ ಕಳಪೆ ಪ್ರದರ್ಶನದಿಂದ ಕಂಗೆಟ್ರಾ ಮೋದಿ? ನಾಳೆ ಕಾರ್ಯಕರ್ತರ ದಿಢೀರ್ ಸಭೆ?

PM Narendra Modi: ಮೂಲಗಳ ಪ್ರಕಾರ, ಪ್ರಧಾನಿ ಮೋದಿ ಸಂಜೆ 6 ಗಂಟೆಗೆ ಪಕ್ಷದ ಪ್ರಧಾನ ಕಚೇರಿಗೆ ತಲುಪುತ್ತಾರೆ, ಅಲ್ಲಿ ಅವರು ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ಹಲವು ಮಹತ್ವದ ವಿಚಾರಗಳ ಕುರಿತು ಅವರು ಚರ್ಚೆ ನಡೆಸಲಿದ್ದಾರೆ.

VISTARANEWS.COM


on

PM Narendra Modi
Koo

ಹೊಸದಿಲ್ಲಿ: ಈ ಬಾರಿ ಲೋಕಸಭಾ ಚುನಾವಣೆ(Lok Sabha Election)ಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಗೆಲುವು ಸಿಗದೇ ಅಧಿಕಾರದಲ್ಲಿದ್ದರೂ ಅದರ ಕಂಗೆಟ್ಟಿರುವ ಬಿಜೆಪಿ(BJP) ಇದೀಗ ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ ಮತ್ತೆ ಮುಂದಾಗಿದೆ. ಇದರ ಮುನ್ನುಡಿ ಎಂಬಂತೆ ಪ್ರಧಾನಿ ನರೇಂದ್ರ ಮೋದಿ(PM Narendra Modi) ನಾಳೆ ಪಕ್ಷದ ಕಾರ್ಯಕರ್ತರ ಸಭೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ಪ್ರಧಾನಿ ಮೋದಿ ಸಂಜೆ 6 ಗಂಟೆಗೆ ಪಕ್ಷದ ಪ್ರಧಾನ ಕಚೇರಿಗೆ ತಲುಪುತ್ತಾರೆ, ಅಲ್ಲಿ ಅವರು ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ಹಲವು ಮಹತ್ವದ ವಿಚಾರಗಳ ಕುರಿತು ಅವರು ಚರ್ಚೆ ನಡೆಸಲಿದ್ದಾರೆ. ನಾಳೆ ಸಂಜೆ ಬಿಜೆಪಿ ಕಚೇರಿಯಲ್ಲಿ ಪ್ರಧಾನಿ ಮೋದಿ ದೀರ್ಘಕಾಲದ ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ. ಅವರಲ್ಲಿ ಗುಮಾಸ್ತರು, ಪ್ಯೂನ್‌ಗಳು ಮತ್ತು ಇತರ ಕೆಲಸಗಾರರು ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿಶೇಷವೆಂದರೆ ಜುಲೈ ಅಂತ್ಯದಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಯುವ ಸಾಧ್ಯತೆ ಇದೆ. ಸಭೆಯಲ್ಲಿ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಉಪಸ್ಥಿತರಿರಲಿದ್ದಾರೆ. ಮೂಲಗಳ ಪ್ರಕಾರ ಲೋಕಸಭೆ ಚುನಾವಣೆ ಫಲಿತಾಂಶ ಹಾಗೂ ಸರ್ಕಾರ ಮತ್ತು ಸಂಘಟನೆಯ ನಡುವಿನ ಸಮನ್ವಯತೆ ಕುರಿತು ಚರ್ಚೆ ನಡೆಯಲಿದೆ.

ಜುಲೈ 14 ರಂದು, ಉತ್ತರ ಪ್ರದೇಶ ಭಾರತೀಯ ಜನತಾ ಪಕ್ಷವು ತನ್ನ ರಾಜ್ಯ ಕಾರ್ಯಕಾರಿ ಸಮಿತಿಯ ಸಭೆಯನ್ನು ಲಕ್ನೋದ ಡಾ ರಾಮ್ ಮನೋಹರ್ ಲೋಹಿಯಾ ಕಾನೂನು ವಿಶ್ವವಿದ್ಯಾಲಯದ ಅಂಬೇಡ್ಕರ್ ಸಭಾಂಗಣದಲ್ಲಿ ನಡೆಸಿತ್ತು. ಈ ಸಭೆಯಲ್ಲಿ 2024 ರ ಲೋಕಸಭೆಯಲ್ಲಿ ಪಕ್ಷದ ಕಳಪೆ ಪ್ರದರ್ಶನದ ಬಗ್ಗೆ ಚರ್ಚಿಸಲಾಗಿತ್ತು. ಆ ಸಭೆಯಲ್ಲಿ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉಪ ಮುಖ್ಯಮಂತ್ರಿಗಳಾದ ಬ್ರಜೇಶ್ ಪಾಠಕ್ ಮತ್ತು ಕೆಪಿ ಮೌರ್ಯ ಮತ್ತು ಇತರ ಸಚಿವರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಪಕ್ಷಕ್ಕಾಗಿ ದುಡಿದು ಅಗಲಿದ ಪಕ್ಷದ ಕಾರ್ಯಕರ್ತರು ಹಾಗೂ ಅಧಿಕಾರಿಗಳಿಗೆ ಶ್ರದ್ಧಾಂಜಲಿ ಸಲ್ಲಿಸುವ ಜತೆಗೆ ರಾಜಕೀಯ ಪ್ರಸ್ತಾವನೆಗಳನ್ನು ಅಂಗೀಕರಿಸುವುದು ಸಭೆಯ ಪ್ರಮುಖ ಅಜೆಂಡಾವಾಗಿತ್ತು.
ರಾಜಕೀಯ ಪ್ರಸ್ತಾಪವು ಮುಂಬರುವ 10 ಸ್ಥಾನಗಳಿಗೆ ಉಪಚುನಾವಣೆ, ಲೋಕಸಭೆ ಚುನಾವಣೆಯ ಪರಾಮರ್ಶೆ ಮತ್ತು ಭವಿಷ್ಯದ ಮಾರ್ಗಸೂಚಿಗಳ ಕುರಿತು ಚರ್ಚೆಗಳನ್ನು ಒಳಗೊಂಡಿದೆ.

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದ ನಂತರ ಜುಲೈ 2 ರಂದು ಎನ್‌ಡಿಎ ಸಂಸದೀಯ ಪಕ್ಷದ ಸಭೆಯನ್ನು ರಾಷ್ಟ್ರ ರಾಜಧಾನಿಯಲ್ಲಿ ನಡೆಸಲಾಯಿತು.

ಇದನ್ನೂ ಓದಿ: UP CM v/s DCM: ಉತ್ತರಪ್ರದೇಶ ಬಿಜೆಪಿಯಲ್ಲಿ ಭಿನ್ನಮತ; ಯೋಗಿ ತಲೆದಂಡ ಪಕ್ಕಾನಾ?

Continue Reading

ವಿದೇಶ

Oil Tanker Capsizes:ತೈಲ ತುಂಬಿದ್ದ ಹಡಗು ಮುಳುಗಡೆ; ಕಣ್ಮರೆಯಾಗಿದ್ದ 8 ಭಾರತೀಯರು ಸೇರಿ ಒಟ್ಟು 9 ನಾವಿಕರ ರಕ್ಷಣೆ

Oil Tanker Capsizes:ಕೊಮೊರೊಸ್-ಧ್ವಜದ ತೈಲ ಟ್ಯಾಂಕರ್ ರಾಸ್ ಮದ್ರಕಾದಿಂದ ಆಗ್ನೇಯಕ್ಕೆ 25 ನಾಟಿಕಲ್ ಮೈಲುಗಳಷ್ಟು ದೂರದಲ್ಲಿರುವ ಡುಕ್ಮ್ ಬಂದರು ಪಟ್ಟಣಕ್ಕೆ ಸಮೀಪದಲ್ಲಿ ಮುಳುಗಡೆಯಾಗಿತ್ತು. ಈ ಬಗ್ಗೆ ಎಂದು ಸಾಗರ ಭದ್ರತಾ ಕೇಂದ್ರ(MSC) X ನಲ್ಲಿನ ಪೋಸ್ಟ್‌ ಮಾಡಿ ತಿಳಿಸಿತ್ತು

VISTARANEWS.COM


on

Oil Tanker Capsizes
Koo

ಒಮನ್‌: ಒಮನ್‌(Oman) ಸಮುದ್ರದಲ್ಲಿ ತೈಲ ತುಂಬಿದ್ದ ಹಡಗು ಮುಳುಗಿದ(Oil Tanker Capsizes) ಕಾರಣ ಕಣ್ಮರೆಯಾಗಿದ್ದ ನಾವಿಕರಲ್ಲಿ ಒಂಬತ್ತು ಮಂದಿಯನ್ನು ರಕ್ಷಿಸಲಾಗಿದೆ. ಕಣ್ಮರೆಯಾಗಿದ್ದ 13 ಜನರಲ್ಲಿ ಎಂಟು ಮಂದಿ ಭಾರತೀಯರು ಸೇರಿದಂತೆ ಒಟ್ಟು ಒಂಬತ್ತು ಮಂದಿ ನಾವಿಕರು ರಕ್ಷಿಸಲ್ಪಟ್ಟಿದ್ದಾರೆ.

ಕೊಮೊರೊಸ್-ಧ್ವಜದ ತೈಲ ಟ್ಯಾಂಕರ್ ರಾಸ್ ಮದ್ರಕಾದಿಂದ ಆಗ್ನೇಯಕ್ಕೆ 25 ನಾಟಿಕಲ್ ಮೈಲುಗಳಷ್ಟು ದೂರದಲ್ಲಿರುವ ಡುಕ್ಮ್ ಬಂದರು ಪಟ್ಟಣಕ್ಕೆ ಸಮೀಪದಲ್ಲಿ ಮುಳುಗಡೆಯಾಗಿತ್ತು. ಈ ಬಗ್ಗೆ ಎಂದು ಸಾಗರ ಭದ್ರತಾ ಕೇಂದ್ರ(MSC) X ನಲ್ಲಿನ ಪೋಸ್ಟ್‌ ಮಾಡಿ ತಿಳಿಸಿತ್ತು. ಇನ್ನು ದುಕ್ಮ್‌ ಪಟ್ಟಣ ಒಮನ್‌ ಆಗ್ನೇಯ ಭಾಗದಲ್ಲಿದೆ. ಇನ್ನು ಮುಳುಗಡೆಯಾಗಿರುವ ಹಡಗನ್ನು ಪ್ರೆಸ್ಟೀಜ್ ಫಾಲ್ಕನ್ ಎಂದು ಗುರುತಿಸಲಾಗಿದ್ದು, ಅದರಲ್ಲಿದ್ದ 16ಜನ ನಾವಿಕರನ್ನು 13 ನಾವಿಕರು ಕಣ್ಮರೆಯಾಗಿದ್ದರು. ಅವರಿಗಾಗಿ ಹುಡುಕಾಟ ನಡೆದಿತ್ತು. ನೌಕೆಯಲ್ಲಿ ಒಟ್ಟು 13 ಭಾರತೀಯರು ಹಾಗೂ 3 ಶ್ರೀಲಂಕಾ ಮೂಲದ ನಾವಿಕರಿದ್ದರು ಎನ್ನಲಾಗಿದೆ.

ಇದೀಗ ರಕ್ಷಣಾ ಕಾರ್ಯಾಚರಣೆಯಲ್ಲಿ 9 ನಾವಿಕರನ್ನು ರಕ್ಷಿಸಲಾಗಿದೆ. ಈ ಬಗ್ಗೆ ಒಮನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಟ್ವೀಟ್‌ ಮಾಡಿದೆ. ಜುಲೈ 15 ರಂದು ಒಮಾನ್ ಕರಾವಳಿಯಲ್ಲಿ ಮುಳುಗಿದ ಕೊಮೊರೊಸ್ ಫ್ಲ್ಯಾಗ್ಡ್ ಹಡಗಿನ ಎಂಟಿ ಪ್ರೆಸ್ಟೀಜ್ ಫಾಲ್ಕನ್‌ನಲ್ಲಿದ್ದ ನಾವಿಕರಿಗಾಗಿ ರಾಯಭಾರ ಕಚೇರಿಯು ಒಮಾನಿ ಅಧಿಕಾರಿಗಳ ಜೊತೆಗೆ ನಿರಂತರ ಸಂಪರ್ಕದಲ್ಲಿದೆ ಮತ್ತು ಭಾರತೀಯ ನೌಕಾಪಡೆ ಮತ್ತು ಒಮನ್‌ SAR ಜಂಟೀ ರಕ್ಷಣಾ ಕಾರ್ಯಚರಣೆಯಲ್ಲಿ ತೊಡಗಿದೆ. ಐಎನ್‌ಎಸ್ ಟೆಗ್ ಮೂಲಕ 8 ಭಾರತೀಯರು ಸೇರಿದಂತೆ 9 ಸಿಬ್ಬಂದಿಯನ್ನು ಇಂದು ರಕ್ಷಿಸಲಾಗಿದೆ. ಉಳಿದಿರುವವರಿಗಾಗಿ ಶೋಧ ಮುಂದುವರಿದಿದೆ” ಎಂದು ಒಮಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ಇದನ್ನೂ ಓದಿ: Oil Tanker Capsizes: ತೈಲ ತುಂಬಿದ್ದ ಹಡಗು ಮುಳುಗಡೆ; 13 ಭಾರತೀಯರು ಜಲಸಮಾಧಿ

Continue Reading

ಪ್ರಮುಖ ಸುದ್ದಿ

Travel Influencer : ರೀಲ್ಸ್​ ಮಾಡುತ್ತಲೇ ಜಲಪಾತದ ಕಮರಿಗೆ ಬಿದ್ದು ಪ್ರಾಣಬಿಟ್ಟ 26 ವರ್ಷದ ಯುವತಿ

Travel Influencer

VISTARANEWS.COM


on

Koo

ರಾಯಗಢ: ಮಹಾರಾಷ್ಟ್ರದ ರಾಯಗಢ ಬಳಿಯ ಕುಂಭೆ ಜಲಪಾತದಲ್ಲಿ ವಿಡಿಯೊ ಮಾಡುತ್ತಿದ್ದ 26 ವರ್ಷದ ಇನ್ಸ್ಟಾಗ್ರಾಮ್ ಇನ್​ಫ್ಲ್ಯುಯೆನ್ಸರ್ (Travel Influencer)​ ಕಮರಿಗೆ ಬಿದ್ದು ಮೃತಪಟ್ಟಿದ್ದಾರೆ. ಮುಂಬೈ ನಿವಾಸಿ ಅನ್ವಿ ಕಾಮ್ದಾರ್ ರೀಲ್ ಮಾಡುತ್ತಾ 300 ಅಡಿ ಆಳದ ಕಮರಿಗೆ ಬಿದ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅನ್ವಿ ಜುಲೈ 16 ರಂದು ಏಳು ಸ್ನೇಹಿತರೊಂದಿಗೆ ಜಲಪಾತಕ್ಕೆ ಪ್ರವಾಸಕ್ಕೆ ತೆರಳಿದ್ದರು. ಇಂದು ಬೆಳಿಗ್ಗೆ 10.30ಕ್ಕೆ ವಿಡಿಯೊ ಮಾಡುವಾಗ ಅನ್ವಿ ಆಳವಾದ ಕಮರಿಗೆ ಬಿದ್ದಿದ್ದಾರೆ ಎಂದು ಪೊಲೀಸರಿಗೆ ಹೇಳಿದ್ದಾರೆ.

ಸ್ಥಳೀಯ ಅಧಿಕಾರಿಗಳು ತುರ್ತು ಪರಿಸ್ಥಿತಿಗೆ ತ್ವರಿತವಾಗಿ ಸ್ಪಂದಿಸಿದರು ಮತ್ತು ರಕ್ಷಣಾ ತಂಡವು ಘಟನಾ ಸ್ಥಳಕ್ಕೆ ನೀಡಿ ಯುವತಿಯ ಪತ್ತೆಗಾಗಿ ಶ್ರಮವಹಿಸುತ್ತಿದೆ. ನಾವು ಸ್ಥಳಕ್ಕೆ ತಲುಪಿದ ಕೂಡಲೇ, ಯುವತಿ ಸುಮಾರು 300ರಿಂದ 350 ಅಡಿ ಕೆಳಗೆ ಬಿದ್ದಿದ್ದಾಳೆ ಎಂಬದು ಗೊತ್ತಾಯಿತು. ಅವರು ಗಂಭೀರ ಗಾಯಗೊಂಡಿದ್ದರಿಂದ ಮತ್ತು ಭಾರಿ ಮಳೆಯಾಗುತ್ತಿದ್ದ ಕಾರಣ ಅವಳನ್ನು ಮೇಲಕ್ಕೆತ್ತುವುದು ಕಷ್ಟಕರವಾಗಿತ್ತು. ಬಳಿಕ ಸರಪಳಿಯ ಮೂಲಕ ಅವರನ್ನು ಹೊರತೆಗೆದೆವು ಎಂದು ಅಧಿಕಾರಿಗಳು ಹೊರಟ್ಟಿದ್ದಾರೆ.

ಆರು ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ನಂತರ, ಅನ್ವಿಯನ್ನು ಕಮರಿಯಿಂದ ಹೊರತೆಗೆಯಲಾಯಿತು. ತೀವ್ರ ಗಾಯಗಳಿಂದಾಗಿ ಮನಗಾಂವ್ ಉಪ-ಜಿಲ್ಲಾ ಆಸ್ಪತ್ರೆಯಲ್ಲಿ ನಿಧನಹೊಂದಿದ್ದಾರೆ. ತಹಶೀಲ್ದಾರ್ ಮತ್ತು ಮನಗಾಂವ್ ಪೊಲೀಸ್ ಇನ್​ಸ್ಪೆಕ್ಟರ್​ ಸೇರಿದಂತೆ ಸ್ಥಳೀಯ ಅಧಿಕಾರಿಗಳು ಪ್ರವಾಸಿಗರು ಮತ್ತು ನಾಗರಿಕರಿಗೆ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ. ಪ್ರತಿಯೊಬ್ಬರೂ ಪ್ರವಾಸೋದ್ಯಮವನ್ನು ಜವಾಬ್ದಾರಿಯುತವಾಗಿ ಆನಂದಿಸಬೇಕು ಮತ್ತು ಸಹ್ಯಾದ್ರಿ ಶ್ರೇಣಿಗಳ ರಮಣೀಯ ಸೌಂದರ್ಯವನ್ನು ಅನ್ವೇಷಿಸುವಾಗ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Mosquitoes Bite: ಎಣ್ಣೆ ಹೊಡೆಯುವವರನ್ನು ಸೊಳ್ಳೆಗಳು ಕಚ್ಚುವುದು ಹೆಚ್ಚು! ಇದಕ್ಕಿದೆ ವೈಜ್ಞಾನಿಕ ಕಾರಣ!

Continue Reading

ದೇಶ

Naxalites Killed: 6 ಗಂಟೆ ಭರ್ಜರಿ ಕಾರ್ಯಾಚರಣೆ; ಬರೋಬ್ಬರಿ 12 ನಕ್ಸಲರ ಎನ್‌ಕೌಂಟರ್

Naxalites Killed: ಛತ್ತೀಸ್‌ಗಡ ಗಡಿ ಪ್ರದೇಶದಲ್ಲಿರುವ ವಾಂದೊಳಿ ಗ್ರಾಮದಲ್ಲಿರುವ ಅರಣ್ಯ ಪ್ರದೇಶದಲ್ಲಿ 15 ನಕ್ಸಲರು ಬೀಡು ಬಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಪೊಲೀಸರು ಡೆಪ್ಯುಟಿ ಎಸ್‌ಪಿ ನೇತೃತ್ವದಲ್ಲಿ ಏಳು ವಿಶೇಷ ತಂಡಗಳನ್ನು ರಚಿಸಿ ಕಾರ್ಯಾಚರಣೆ ಕೈಗೊಂಡಿತ್ತು. ಈ ವೇಳೆ ಭಾರೀ ಗುಂಡಿನ ಚಕಮಕಿ ನಡೆದಿತ್ತು. ಮಧ್ಯಾಹ್ನ ಶುರುವಾದ ಗುಂಡಿನ ಚಕಮಕಿ ಸಾಯಂಕಾಲದವರೆಗೂ ಮುಂದುವರೆದಿತ್ತು. ದಾಳಿಯಲ್ಲಿ ಸಬ್‌ ಇನ್‌ಸ್ಪೆಕ್ಟರ್‌ ಮತ್ತು ಪೊಲೀಸ್‌ ಒಬ್ಬ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ನಾಗ್ಪುರ ಆಸ್ಪತ್ರೆಗೆ ದಾಖಲಿಸಲಾಯಿತು

VISTARANEWS.COM


on

Naxalites Killed
Koo

ಮುಂಬೈ: ಮಹಾರಾಷ್ಟ್ರ(Maharashtra) ದಲ್ಲಿ ಭರ್ಜರಿ ಪೊಲೀಸರು ಕಾರ್ಯಾಚರಣೆ(Police Operation) ನಡೆದಿದ್ದು, ಬರೋಬ್ಬರಿ 12 ನಕ್ಸಲರನ್ನು(Naxalites Killed) ಹೊಡೆದುರುಳಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗದ್ಚಿರೋಳಿ(Gadchiroli Encounter) ಜಿಲ್ಲೆಯಲ್ಲಿ ಆರು ಗಂಟೆಗಳ ಸುದೀರ್ಘ ನಕ್ಸಲರ ಬೇಟೆ ನಡೆದಿದ್ದು, ಹತ್ಯೆಯಾದ ಮಾವೋವಾದಿಗಳಿಂದ ಅನೇಕ ಅಟೋಮ್ಯಾಟಿಕ್‌ ಬಂದೂಕುಗಳನ್ನು, ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ಛತ್ತೀಸ್‌ಗಡ ಗಡಿ ಪ್ರದೇಶದಲ್ಲಿರುವ ವಾಂದೊಳಿ ಗ್ರಾಮದಲ್ಲಿರುವ ಅರಣ್ಯ ಪ್ರದೇಶದಲ್ಲಿ 15 ನಕ್ಸಲರು ಬೀಡು ಬಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಪೊಲೀಸರು ಡೆಪ್ಯುಟಿ ಎಸ್‌ಪಿ ನೇತೃತ್ವದಲ್ಲಿ ಏಳು ವಿಶೇಷ ತಂಡಗಳನ್ನು ರಚಿಸಿ ಕಾರ್ಯಾಚರಣೆ ಕೈಗೊಂಡಿತ್ತು. ಈ ವೇಳೆ ಭಾರೀ ಗುಂಡಿನ ಚಕಮಕಿ ನಡೆದಿತ್ತು. ಮಧ್ಯಾಹ್ನ ಶುರುವಾದ ಗುಂಡಿನ ಚಕಮಕಿ ಸಾಯಂಕಾಲದವರೆಗೂ ಮುಂದುವರೆದಿತ್ತು. ದಾಳಿಯಲ್ಲಿ ಸಬ್‌ ಇನ್‌ಸ್ಪೆಕ್ಟರ್‌ ಮತ್ತು ಪೊಲೀಸ್‌ ಒಬ್ಬ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ನಾಗ್ಪುರ ಆಸ್ಪತ್ರೆಗೆ ದಾಖಲಿಸಲಾಯಿತು.

ಬರೋಬ್ಬರು ಆರು ಗಂಟೆಗಳ ಕಾರ್ಯಾಚರಣೆ ಬಳಿಕ 12 ಮಾವೋವಾದಿಗಳನ್ನು ಹತ್ಯೆ ಮಾಡುವಲ್ಲಿ ಪೊಲೀಸರು ಯಶಸ್ವಿ ಆಗಿದ್ದಾರೆ. ಇಲ್ಲಿಯವರೆಗೆ 3 AK47, 2 INSAS, 1 ಕಾರ್ಬೈನ್ ಮತ್ತು ಒಂದು SLR ಸೇರಿದಂತೆ ಏಳು ಅಟೋಮ್ಯಾಟಿವ್‌ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: UP CM v/s DCM: ಉತ್ತರಪ್ರದೇಶ ಬಿಜೆಪಿಯಲ್ಲಿ ಭಿನ್ನಮತ; ಯೋಗಿ ತಲೆದಂಡ ಪಕ್ಕಾನಾ?

Continue Reading
Advertisement
Virat kohli
ಪ್ರಮುಖ ಸುದ್ದಿ51 mins ago

Virat Kohli : ವಿರಾಟ್​ ಕೊಹ್ಲಿಯನ್ನು ಅವಮಾನಿಸಿದ ಅಮಿತ್​ ಮಿಶ್ರಾ ಬೆಂಡೆತ್ತಿದ ಯಶ್​ ದಯಾಳ್​

PM Narendra Modi
ದೇಶ52 mins ago

PM Narendra Modi: ಚುನಾವಣೆಯಲ್ಲಿ ಕಳಪೆ ಪ್ರದರ್ಶನದಿಂದ ಕಂಗೆಟ್ರಾ ಮೋದಿ? ನಾಳೆ ಕಾರ್ಯಕರ್ತರ ದಿಢೀರ್ ಸಭೆ?

Jay Shah
ಪ್ರಮುಖ ಸುದ್ದಿ1 hour ago

Jay Shah : ಜಯ್​ ಶಾ ಮುಂದಿನ ಐಸಿಸಿ ಅಧ್ಯಕ್ಷ; ಕೊಲೊಂಬೊ ಸಭೆಯಲ್ಲಿ ತೀರ್ಮಾನ ಸಾಧ್ಯತೆ

Oil Tanker Capsizes
ವಿದೇಶ1 hour ago

Oil Tanker Capsizes:ತೈಲ ತುಂಬಿದ್ದ ಹಡಗು ಮುಳುಗಡೆ; ಕಣ್ಮರೆಯಾಗಿದ್ದ 8 ಭಾರತೀಯರು ಸೇರಿ ಒಟ್ಟು 9 ನಾವಿಕರ ರಕ್ಷಣೆ

ಪ್ರಮುಖ ಸುದ್ದಿ2 hours ago

Travel Influencer : ರೀಲ್ಸ್​ ಮಾಡುತ್ತಲೇ ಜಲಪಾತದ ಕಮರಿಗೆ ಬಿದ್ದು ಪ್ರಾಣಬಿಟ್ಟ 26 ವರ್ಷದ ಯುವತಿ

Viral Video
ವೈರಲ್ ನ್ಯೂಸ್2 hours ago

Viral Video: ಹೃದಯಾಘಾತದಿಂದ ಕೆಳಗ್ಗೆ ಬಿದ್ದು ಒದ್ದಾಡುತ್ತಿದ್ದವನ ಪಾಲಿಗೆ ದೇವರಂತೆ ಬಂದ್ಳು! ಈ ಮಹಿಳೆಯ ವಿಡಿಯೋ ಎಲ್ಲೆಡೆ ವೈರಲ್‌

Mosquitoes Bite
ಆರೋಗ್ಯ2 hours ago

Mosquitoes Bite: ಎಣ್ಣೆ ಹೊಡೆಯುವವರನ್ನು ಸೊಳ್ಳೆಗಳು ಕಚ್ಚುವುದು ಹೆಚ್ಚು! ಇದಕ್ಕಿದೆ ವೈಜ್ಞಾನಿಕ ಕಾರಣ!

Actress Hina Khan
Latest3 hours ago

Actress Hina Khan: ಕಿಮೋಥೆರಪಿ ಅನುಭವ ಹಂಚಿಕೊಂಡಿದ್ದಾರೆ ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿರುವ ಖ್ಯಾತ ಬಾಲಿವುಡ್‌ ನಟಿ

Naxalites Killed
ದೇಶ3 hours ago

Naxalites Killed: 6 ಗಂಟೆ ಭರ್ಜರಿ ಕಾರ್ಯಾಚರಣೆ; ಬರೋಬ್ಬರಿ 12 ನಕ್ಸಲರ ಎನ್‌ಕೌಂಟರ್

Walking Benefits
ಆರೋಗ್ಯ3 hours ago

Walking Benefits: ಊಟದ ಬಳಿಕ ಕಿರು ನಡಿಗೆಯಿಂದ ಸಿಗುವ ಆರೋಗ್ಯ ಲಾಭಗಳು ಏನೇನು?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ3 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ4 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌