Bhole Baba: ʼʼಏನಾಗಬೇಕೋ ಅದೇ ಆಗುತ್ತೆʼʼ- 121 ಜನರ ಸಾವಿಗೆ ಕಾರಣನಾದ ಭೋಲೆ ಬಾಬಾ ಉವಾಚ - Vistara News

ದೇಶ

Bhole Baba: ʼʼಏನಾಗಬೇಕೋ ಅದೇ ಆಗುತ್ತೆʼʼ- 121 ಜನರ ಸಾವಿಗೆ ಕಾರಣನಾದ ಭೋಲೆ ಬಾಬಾ ಉವಾಚ

Bhole Baba: “ಏನಾಗಬೇಕೋ ಅದು ನಡೆದೇ ನಡೆಯುತ್ತದೆ. ಅದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಈ ಜಗತ್ತಿಗೆ ಬಂದವನು ಅಂತಿಮವಾಗಿ ಹೊರಟು ಹೋಗಲೇಬೇಕು”- ಇದು ಸ್ವಯಂಫೋಷಿತ ದೇವ ಮಾನವ ಭೋಲೆ ಬಾಬಾ ಉವಾಚ. ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಜುಲೈ 2ರಂದು ಭೋಲೆ ಬಾಬಾ ಅವರ ಸತ್ಸಂಗದ ವೇಳೆ ನಡೆದ ಕಾಲ್ತುಳಿತದಲ್ಲಿ 121 ಜನರು ಮೃತಪಟ್ಟ ಸುಮಾರು ಎರಡು ವಾರಗಳ ನಂತರ ಅವರು ಈ ಹೇಳಿಕೆ ನೀಡಿದ್ದಾರೆ.

VISTARANEWS.COM


on

Bhole Baba
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಖನೌ: “ಏನಾಗಬೇಕೋ ಅದು ನಡೆದೇ ನಡೆಯುತ್ತದೆ. ಅದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಈ ಜಗತ್ತಿಗೆ ಬಂದವನು ಅಂತಿಮವಾಗಿ ಹೊರಟು ಹೋಗಲೇಬೇಕು”- ಇದು ಸ್ವಯಂಫೋಷಿತ ದೇವ ಮಾನವ ಭೋಲೆ ಬಾಬಾ (Bhole Baba) ಎಂದೂ ಕರೆಯಲ್ಪಡುವ ಸೂರಜ್ ಪಾಲ್ ಅವರ ಉವಾಚ. ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಜುಲೈ 2ರಂದು ಭೋಲೆ ಬಾಬಾ ಅವರ ಸತ್ಸಂಗದ ವೇಳೆ ನಡೆದ ಕಾಲ್ತುಳಿತದಲ್ಲಿ 121 ಜನರು ಮೃತಪಟ್ಟ ಸುಮಾರು ಎರಡು ವಾರಗಳ ನಂತರ ಅವರು ಈ ಹೇಳಿಕೆ ನೀಡಿದ್ದಾರೆ (Hathras Stampede).

ಈ ಘಟನೆಯ ಹಿಂದೆ ಷಡ್ಯಂತ್ರವಿದೆ ಎಂದು ಪುನರುಚ್ಚರಿಸದ್ದಾರೆ. ಉತ್ತರ ಪ್ರದೇಶದ ಕಾಸ್ಗಂಜ್‌ನಲ್ಲಿರುವ ತಮ್ಮ ಆಶ್ರಮದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ʼʼಜುಲೈ 2ರ ಘಟನೆಯ ನಂತರ ತುಂಬಾ ಆಘಾತವಾಗಿತ್ತು. ಅದಾಗ್ಯೂ ಸತ್ಯ ಹೊರಬರುತ್ತದೆ ಎನ್ನುವ ವಿಶ್ವಾಸವಿದೆʼʼ ಎಂದಿದ್ದಾರೆ.

ʼʼನಮ್ಮ ವಕೀಲ ಡಾ.ಎ.ಪಿ.ಸಿಂಗ್ ಮತ್ತು ಪ್ರತ್ಯಕ್ಷದರ್ಶಿಗಳು ಸ್ಥಳದಲ್ಲಿ ವಿಷಕಾರಿ ಸಿಂಪಡಣೆ ಆಗಿರುವ ಬಗ್ಗೆ ತಿಳಿಸಿದ್ದಾರೆ. ಏನೋ ಪಿತೂರಿ ಇದೆ ಎಂಬುದು ನಿಜ. ಎಸ್ಐಟಿ (Special Investigation Team) ಮತ್ತು ನ್ಯಾಯಾಂಗ ಆಯೋಗದ ಮೇಲೆ ನಂಬಿಕೆ ಇದೆ ಮತ್ತು ಸತ್ಯ ಹೊರಬರುತ್ತದೆ” ಎಂದು ಹೇಳಿದ್ದಾರೆ. ಈ ಹಿಂದೆಯೂ ಭೋಲೆ ಬಾಬಾ ಘಟನೆಯ ಹಿಂದೆ ಪಿತೂರಿ ಇದೆ ಎಂದು ಆರೋಪಿಸಿದ್ದರು.

ಈಗಾಗಲೇ ಕಾರ್ಯಕ್ರಮದ ಮುಖ್ಯ ಸಂಘಟಕ ದೇವಪ್ರಕಾಶ್ ಮಧುಕರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ರಾಜ್ಯ ಸರ್ಕಾರವು ರಚಿಸಿದ ನ್ಯಾಯಾಂಗ ಸಮಿತಿಯು ಅಪಘಾತದ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದೆ. ಜುಲೈ 9ರಂದು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ ಪ್ರಾಥಮಿಕ ವರದಿಯಲ್ಲಿ ಎಸ್ಐಟಿ ಕಾಲ್ತುಳಿತಕ್ಕೆ ಸಂಘಟಕರನ್ನು ಹೊಣೆಗಾರರನ್ನಾಗಿ ಮಾಡಿದ್ದು, ಜನಸಂದಣಿಯನ್ನು ನಿರ್ವಹಿಸಲು ಅವರು ಸೂಕ್ತ ವ್ಯವಸ್ಥೆ ಮಾಡಿಲ್ಲ ಎಂದು ಉಲ್ಲೇಖಿಸಿದೆ.

ಇದನ್ನೂ ಓದಿ: Hathras Stampede: ಕಾಲ್ತುಳಿತದ ಬಳಿಕ ಕಾಲ್ಕಿತ್ತಿದ್ದ ಡೋಂಗಿ ಬಾಬಾ- ವೈರಲ್‌ ಆಯ್ತು ವಿಡಿಯೋ

ದುರಂತದ ಹಿನ್ನೆಲೆ

ಉತ್ತರ ಪ್ರದೇಶದ ಹತ್ರಾಸ್‌ ಜಿಲ್ಲೆ ಮೊಘಲ್‌ಘರಾಹಿ ಗ್ರಾಮದಲ್ಲಿ ಜುಲೈ 2ರಂದು ಸ್ವಯಂ ಘೋಷಿತ ʼದೇವ ಮಾನವʼ ಭೋಲೆ ಬಾಬಾ (Bhole Baba) ಅವರ ಸತ್ಸಂಗ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇಕ್ಕಟ್ಟಾದ ಸ್ಥಳದಲ್ಲಿ ಲಕ್ಷಾಂತರ ಮಂದಿ ಸೇರಿದ್ದರಿಂದ ಕಾಲ್ತುಳಿತ ಸಂಭವಿಸಿತ್ತು.

ಪೊಲೀಸ್‌ ತನಿಖೆಯ ಪ್ರಾಥಮಿಕ ವರದಿಯು, ʼʼ80 ಸಾವಿರ ಜನರಿಗಾಗಿ ಅನುಮತಿ ಪಡೆದ ಸತ್ಸಂಗ ಕಾರ್ಯಕ್ರಮದಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಭಕ್ತರು ಪಾಲ್ಗೊಂಡಿದ್ದರು. ಭೋಲೆ ಬಾಬಾ ಮಧ್ಯಾಹ್ನ 12.30ರ ಸುಮಾರಿಗೆ ಸತ್ಸಂಗ ಪೆಂಡಾಲ್‌ಗೆ ಆಗಮಿಸಿದ್ದರು. ಕಾರ್ಯಕ್ರಮವು 1 ಗಂಟೆ ನಡೆಯಿತು. ನಂತರ ಮಧ್ಯಾಹ್ನ 1.40ರ ಸುಮಾರಿಗೆ ಭೋಲೆ ಬಾಬಾ ಪೆಂಡಾಲ್‌ನಿಂದ ಹೊರಬಂದರು. ಭೋಲೆ ಬಾಬಾ ಹೊರಡುವ ವೇಳೆ ವೇಳೆ ಲಕ್ಷಾಂತರ ಮಂದಿ ಅವರ ಪಾದ ಮುಟ್ಟಿ, ಅವರು ಮೆಟ್ಟಿದ ನೆಲದ ಮಣ್ಣನ್ನು ತೆಗೆದುಕೊಳ್ಳಲು ಓಡಿ ಹೋಗಿದ್ದಾರೆ. ಹಾಗೆ ಓಡಿ ಹೋಗುವ ಭರದಲ್ಲಿ ಕಾಲ್ತುಳಿತ ಉಂಟಾಗಿದೆ. ಒಬ್ಬರನ್ನೊಬ್ಬರು ತುಳಿದುಕೊಂಡು ಮುಂದೆ ಸಾಗಿದ್ದು ಹಾಗೂ ಚರಂಡಿಯಲ್ಲಿ ಬಿದ್ದಿದ್ದು ಸಾವಿನ ಸಂಖ್ಯೆ ಜಾಸ್ತಿಯಾಗಲು ಕಾರಣ” ಎಂದು ತಿಳಿಸಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Maoists Attack: ಛತ್ತೀಸ್‌ಗಢದಲ್ಲಿ ಮತ್ತೆ ಮಾವೋವಾದಿಗಳ ಅಟ್ಟಹಾಸ; ಇಬ್ಬರು ಪೊಲೀಸರು ಹುತಾತ್ಮ

Maoists Attack: ಛತ್ತೀಸ್‌ಗಢದ ಬಿಜಾಪುರದ ತಾರೆಮ್‌ನಲ್ಲಿ ಶಂಕಿತ ಮಾವೋವಾದಿಗಳು ಐಇಡಿ (ಸುಧಾರಿತ ಸ್ಫೋಟಕ ಸಾಧನ) ಸ್ಫೋಟಿಸಿದ್ದು, ಇಬ್ಬರು ಪೊಲೀಸ್ ಕಾನ್ಸ್‌ಟೇಬಲ್‌ ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ. ರಾಜ್ಯ ಕಾರ್ಯಪಡೆಯ ಮುಖ್ಯ ಕಾನ್ಸ್‌ಟೇಬಲ್‌ ಭರತ್ ಲಾಲ್ ಸಾಹು ಮತ್ತು ಕಾನ್ಸ್‌ಟೇಬಲ್‌ ಸತೇರ್ ಸಿಂಗ್ ಮೃತರು. ತಾರೆಮ್ ಪೊಲೀಸ್ ಠಾಣೆ ವ್ಯಾಪ್ತಿಯ ಮಂಡಿಮಾರ್ಕಾ ಅರಣ್ಯದಲ್ಲಿ ಬುಧವಾರ ರಾತ್ರಿ ಐಇಡಿ ಸ್ಫೋಟ ಸಂಭವಿಸಿದೆ.

VISTARANEWS.COM


on

Maoists Attack
Koo

ರಾಯ್‌ಪುರ: ಛತ್ತೀಸ್‌ಗಢ (Chhattisgarh)ದಲ್ಲಿ ಮತ್ತೆ ಮಾವೋವಾದಿಗಳ ಅಟ್ಟಹಾಸ (Maoists Attack) ಮುಂದುವರಿದಿದೆ. ಬಿಜಾಪುರದ ತಾರೆಮ್‌ನಲ್ಲಿ ಶಂಕಿತ ಮಾವೋವಾದಿಗಳು ಐಇಡಿ (ಸುಧಾರಿತ ಸ್ಫೋಟಕ ಸಾಧನ) ಸ್ಫೋಟಿಸಿದ್ದು, ಇಬ್ಬರು ಪೊಲೀಸ್ ಕಾನ್ಸ್‌ಟೇಬಲ್‌ ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ. ರಾಜ್ಯ ಕಾರ್ಯಪಡೆಯ ಮುಖ್ಯ ಕಾನ್ಸ್‌ಟೇಬಲ್‌ ಭರತ್ ಲಾಲ್ ಸಾಹು ಮತ್ತು ಕಾನ್ಸ್‌ಟೇಬಲ್‌ ಸತೇರ್ ಸಿಂಗ್ ಮೃತರು.

ತಾರೆಮ್ ಪೊಲೀಸ್ ಠಾಣೆ ವ್ಯಾಪ್ತಿಯ ಮಂಡಿಮಾರ್ಕಾ ಅರಣ್ಯದಲ್ಲಿ ಬುಧವಾರ ರಾತ್ರಿ ಐಇಡಿ ಸ್ಫೋಟ ಸಂಭವಿಸಿದೆ. ಭದ್ರತಾ ಪಡೆ ಸಿಬ್ಬಂದಿ ನಕ್ಸಲ್ ವಿರೋಧಿ ಕಾರ್ಯಾಚರಣೆ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಬಾಂಬ್ ಸ್ಫೋಟಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ಬಿಜಾಪುರ, ದಾಂತೇವಾಡ ಮತ್ತು ಸುಕ್ಮಾ ನಡುವಿನ ಪ್ರದೇಶದಲ್ಲಿ ಮಾವೋವಾದಿಗಳು ಇರುವ ಬಗ್ಗೆ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ತಂಡ ಶೋಧ ಕಾರ್ಯ ನಡೆಸಿತ್ತು. ಹಿಂದಿರುಗುವ ವೇಳೆ ಐಇಡಿ ಸ್ಫೋಟಗೊಂಡು ಇಬ್ಬರು ಪೊಲೀಸ್ ಕಾನ್ಸ್‌ಟೇಬಲ್‌ ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ವಿವರಿಸಿದ್ದಾರೆ.

ತರಬೇತಿ ಪಡೆದ ಕೇಂದ್ರ ಮೀಸಲು ಪೊಲೀಸ್ ಪಡೆ (CRPF)ಯ ವಿಶೇಷ ಕಾರ್ಯಾಚರಣೆ ಘಟಕವಾದ ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆ್ಯಕ್ಷನ್‌ (CoBRA) ಜತೆಗೂಡಿ ಜಂಟಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. “ಹೆಚ್ಚುವರಿ ಭದ್ರತಾ ಪಡೆಗಳನ್ನು ಈ ಪ್ರದೇಶಕ್ಕೆ ಕಳುಹಿಸಲಾಗಿದೆ ಮತ್ತು ಗಾಯಗೊಂಡ ಎಸ್‌ಟಿಎಫ್‌ (ವಿಶೇಷ ಕಾರ್ಯಪಡೆ) ಸಿಬ್ಬಂದಿಗೆ ಸೂಕ್ತ ಚಿಕಿತ್ಸೆ ನೀಡಲು ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯ ಗಡಿಯಲ್ಲಿರುವ ಜರಬಂಡಿ ಬಳಿ ಮಹಾರಾಷ್ಟ್ರ ಪೊಲೀಸರು 12 ಮಾವೋವಾದಿಗಳನ್ನು ಕೊಂದ ದಿನವೇ ಈ ಘಟನೆ ನಡೆದಿದೆ. ಛತ್ತೀಸ್‌ಗಡ ಗಡಿ ಪ್ರದೇಶದಲ್ಲಿರುವ ವಾಂದೊಳಿ ಗ್ರಾಮದಲ್ಲಿರುವ ಅರಣ್ಯ ಪ್ರದೇಶದಲ್ಲಿ 15 ನಕ್ಸಲರು ಬೀಡು ಬಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಪೊಲೀಸರು ಡೆಪ್ಯುಟಿ ಎಸ್‌ಪಿ ನೇತೃತ್ವದಲ್ಲಿ ಏಳು ವಿಶೇಷ ತಂಡಗಳನ್ನು ರಚಿಸಿ ಕಾರ್ಯಾಚರಣೆ ಕೈಗೊಂಡಿತ್ತು. ಈ ವೇಳೆ ಭಾರೀ ಗುಂಡಿನ ಚಕಮಕಿ ನಡೆದಿತ್ತು. ಮಧ್ಯಾಹ್ನ ಶುರುವಾದ ಗುಂಡಿನ ಚಕಮಕಿ ಸಾಯಂಕಾಲದವರೆಗೂ ಮುಂದುವರಿದಿತ್ತು. ದಾಳಿಯಲ್ಲಿ ಸಬ್‌ ಇನ್‌ಸ್ಪೆಕ್ಟರ್‌ ಮತ್ತು ಪೊಲೀಸ್‌ ಒಬ್ಬ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ನಾಗ್ಪುರ ಆಸ್ಪತ್ರೆಗೆ ದಾಖಲಿಸಲಾಯಿತು. ಬರೋಬ್ಬರು ಆರು ಗಂಟೆಗಳ ಕಾರ್ಯಾಚರಣೆ ಬಳಿಕ 12 ಮಾವೋವಾದಿಗಳನ್ನು ಹತ್ಯೆ ಮಾಡುವಲ್ಲಿ ಪೊಲೀಸರು ಯಶಸ್ವಿ ಆಗಿದ್ದಾರೆ. ಇಲ್ಲಿಯವರೆಗೆ 3 AK47, 2 INSAS, 1 ಕಾರ್ಬೈನ್ ಮತ್ತು ಒಂದು SLR ಸೇರಿದಂತೆ ಏಳು ಅಟೋಮ್ಯಾಟಿವ್‌ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕೆಲವು ವಾರಗಳ ಹಿಂದೆ ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಮಾವೋವಾದಿಗಳು ಸುಧಾರಿತ ಸ್ಫೋಟಕ ಸಾಧನ ಸ್ಫೋಟಿಸಿದ ಕಾರಣ ಇಬ್ಬರು ಯೋಧರು ಹುತಾತ್ಮರಾಗಿದ್ದರು. ಸುಕ್ಮಾ ಜಿಲ್ಲೆಯ (Sukma District) ಸಿಲ್ಗರ್‌ ಹಾಗೂ ತೆಕುಲಗುಡೆಮ್‌ ಪ್ರದೇಶದ ಮಧ್ಯೆ ಮಾವೋವಾದಿಗಳು ಐಇಡಿ ಇರಿಸಿದ್ದರು. ಸಿಆರ್‌ಪಿಎಫ್‌ ವಾಹನವು ಪ್ರದೇಶದಲ್ಲಿ ಗಸ್ತು ತಿರುಗುವಾಗ ಅದನ್ನು ಸ್ಫೋಟಿಸಲಾಗಿದೆ. ಇದರಿಂದಾಗಿ ಇಬ್ಬರು ಯೋಧರು ಹುತಾತ್ಮರಾಗಿದ್ದರು.

ಇದನ್ನೂ ಓದಿ: Naxalites Killed: 6 ಗಂಟೆ ಭರ್ಜರಿ ಕಾರ್ಯಾಚರಣೆ; ಬರೋಬ್ಬರಿ 12 ನಕ್ಸಲರ ಎನ್‌ಕೌಂಟರ್

6 ತಿಂಗಳಲ್ಲಿ 126 ನಕ್ಸಲರ ಹತ್ಯೆ

ಪ್ರಸಕ್ತ ವರ್ಷದಲ್ಲಿ ಭದ್ರತಾ ಸಿಬ್ಬಂದಿಯು ನಕ್ಸಲರ ವಿರುದ್ಧ ಭಾರಿ ಸಮರ ಸಾರಿದ್ದಾರೆ. ಪ್ರಸಕ್ತ ವರ್ಷದ ಆರು ತಿಂಗಳಲ್ಲಿ 126 ಮಾವೋವಾದಿಗಳನ್ನು ಭದ್ರತಾ ಸಿಬ್ಬಂದಿಯು ಹತ್ಯೆ ಮಾಡಿದ್ದಾರೆ. 2023ರಲ್ಲಿ ಭದ್ರತಾ ಸಿಬ್ಬಂದಿಯು 22 ಮಾವೋವಾದಿಗಳನ್ನು ಎನ್‌ಕೌಂಟರ್‌ ಮಾಡಿದ್ದರು. ಲೋಕಸಭೆ ಚುನಾವಣೆಗೆ ವೇಳೆಯೇ ತೆಲಂಗಾಣ ಗಡಿ ಹಾಗೂ ಛತ್ತೀಸ್‌ಗಢದ ಸುಕ್ಮಾ, ಬಿಜಾಪುರ ಸೇರಿ ಹಲವೆಡೆ ಮಾವೋವಾದಿಗಳ ಉಪಟಳ ಜಾಸ್ತಿ ಇರುತ್ತದೆ. ಹಾಗಾಗಿ, ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದರು ಎಂದು ತಿಳಿದುಬಂದಿದೆ.

Continue Reading

ರಾಜಕೀಯ

Narendra Modi: ಇಂದು ಮೋದಿ ನೇತೃತ್ವದಲ್ಲಿ ಬಿಜೆಪಿ ಸಭೆ: ಮಹತ್ವದ ತೀರ್ಮಾನ ಸಾಧ್ಯತೆ; ಏನೆಲ್ಲ ಚರ್ಚೆಯಾಗಲಿದೆ?

Narendra Modi: ಈ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶದ ಆಘಾತದಿಂದ ಬಿಜೆಪಿ ಇನ್ನೂ ಹೊರ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಬಿಜೆಪಿ ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ ಮತ್ತೆ ಮುಂದಾಗಿದೆ. ಅದರ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಲಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆ (Lok Sabha Election)ಯ ಫಲಿತಾಂಶದ ಆಘಾತದಿಂದ ಬಿಜೆಪಿ (BJP) ಇನ್ನೂ ಹೊರ ಬಂದಿಲ್ಲ. ಕೇಂದ್ರದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದರೂ ಬಿಜೆಪಿಗೆ ಬಹುಮತ ಲಭಿಸದೇ ಇರುವುದು ಪಕ್ಷದ ಒಳಗೆ ತಳಮಳ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ ಮತ್ತೆ ಮುಂದಾಗಿದೆ. ಅದರ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು (ಜುಲೈ 18) ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ ಮೋದಿ ಸಂಜೆ 6 ಗಂಟೆಗೆ ಪಕ್ಷದ ಪ್ರಧಾನ ಕಚೇರಿಗೆ ತಲುಪಲಿದ್ದು, ಅಲ್ಲಿ ಅವರು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ಹಲವು ಮಹತ್ವದ ವಿಚಾರಗಳ ಕುರಿತು ಅವರು ಚರ್ಚೆ ನಡೆಸಲಿದ್ದಾರೆ. 

ಉತ್ತರ ಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು?

2027ರಲ್ಲಿ ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈಗಲೇ ಪಕ್ಷ ಸಂಘಟನೆಗೆ ಬಿಜೆಪಿ ಮುಂದಾಗಿದೆ. ಅದರ ಜತೆಗೆ ಪಕ್ಷಕ್ಕೆ ತಕ್ಷಣದ ಸವಾಲು ಎಂಬಂತೆ ರಾಜ್ಯದ 10 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಎದುರಾಗಿದೆ. ಲೋಕಸಭಾ ಚುನಾವಣೆ ವೇಳೆ ರಾಜ್ಯದಲ್ಲಿ ಬಿಜೆಪಿ ಕಳಪೆ ಪ್ರದರ್ಶನ ತೋರಿದ ಹಿನ್ನೆಲೆಯಲ್ಲಿ ಈ ಉಪಚುನಾವಣೆಯಲ್ಲಿ ಪಕ್ಷ ತನ್ನ ಸಾಮರ್ಥ್ಯ ತೋರಿಸಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಚುನಾವಣಾ ಆಯೋಗ ಇನ್ನೂ ದಿನಾಂಕ ಘೋಷಿಸಿಲ್ಲ. ಅದಾಗ್ಯೂ ಬಿಜೆಪಿ ತಲೆಕೆಡಿಸಿಕೊಂಡಿದೆ. ಈ ಮಧ್ಯೆ ಈ ಉಪಚುನಾವಣೆಯಲ್ಲೂ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಊಹಾಪೋಹಗಳೂ ಹರಡಿದೆ.

ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಎಸ್‌ಪಿ 37 ಸ್ಥಾನಗಳನ್ನು ಗೆದ್ದರೆ, ಬಿಜೆಪಿ ಕೇವಲ 33 ಕ್ಷೇತ್ರಗಳಿಗೆ ತೃಪ್ತಿಪಟ್ಟುಕೊಂಡಿದೆ. ಎಸ್‌ಪಿಯೊಂದಿಗೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ರಾಜ್ಯದಲ್ಲಿ ಆರು ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ.

ಯೋಗಿ ಆದಿತ್ಯನಾಥ್‌ ತಲೆದಂಡ?

ಇದರ ಜತೆಗೆ ಉತ್ತರಪ್ರದೇಶ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಿಎಂ ಯೋಗಿ ಆದಿತ್ಯಾನಾಥ್‌ ಮತ್ತು ಡಿಸಿಎಂ ಕೇಶವ್‌ ಪ್ರಸಾದ್‌ ಮೌರ್ಯ ನಡುವಿನ ಮುಸುಕಿನ ಗುದ್ದಾಟ ಬಹಿರಂಗವಾಗಿದೆ. ಇಬ್ಬರ ನಡುವಿನ ಭಾರಿ ಭಿನ್ನಮತದ ಬೆನ್ನಲ್ಲೇ ಕೇಶವ್ ಪ್ರಸಾದ್ ಮೌರ್ಯ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿರುವುದು ಮತ್ತಷ್ಟು ಕುತೂಹಲ ಮೂಡಿಸಿದೆ. ಅದೂ ಅಲ್ಲದೇ ಚುನಾವಣೆಯಲ್ಲಿನ ಹಿನ್ನಡೆ ಬಳಿಕ ಸಿಎಂ ಯೋಗಿ ಆದಿತ್ಯನಾಥ್ ತಲೆದಂಡವಾಗಲಿದೆ ಎಂಬ ವದಂತಿಗೆ ಮತ್ತಷ್ಟು ಪುಷ್ಠಿ ಸಿಕ್ಕಂತಾಗಿದೆ. ಈ ಎಲ್ಲ ಹಿನ್ನೆಲೆಯಲ್ಲಿ ಇಂದಿನ ಸಭೆ ಕುತೂಹಲ ಮೂಡಿಸಿದೆ.

ಜುಲೈ 14ರಂದು, ಉತ್ತರ ಪ್ರದೇಶ ಬಿಜೆಪಿ ಘಟಕವು ತನ್ನ ರಾಜ್ಯ ಕಾರ್ಯಕಾರಿ ಸಮಿತಿಯ ಸಭೆಯನ್ನು ಲಖನೌ ಡಾ.ರಾಮ್ ಮನೋಹರ್ ಲೋಹಿಯಾ ಕಾನೂನು ವಿಶ್ವವಿದ್ಯಾಲಯದ ಅಂಬೇಡ್ಕರ್ ಸಭಾಂಗಣದಲ್ಲಿ ನಡೆಸಿತ್ತು. ಈ ಸಭೆಯಲ್ಲಿ 2024ರ ಲೋಕಸಭೆಯಲ್ಲಿ ಪಕ್ಷದ ಕಳಪೆ ಪ್ರದರ್ಶನದ ಬಗ್ಗೆ ಚರ್ಚಿಸಲಾಗಿತ್ತು. ಆ ಸಭೆಯಲ್ಲಿ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉಪ ಮುಖ್ಯಮಂತ್ರಿಗಳಾದ ಬ್ರಜೇಶ್ ಪಾಠಕ್ ಮತ್ತು ಕೆಪಿ ಮೌರ್ಯ ಮತ್ತು ಇತರ ಸಚಿವರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಇದನ್ನೂ ಓದಿ: UP CM v/s DCM: ಉತ್ತರಪ್ರದೇಶ ಬಿಜೆಪಿಯಲ್ಲಿ ಭಿನ್ನಮತ; ಯೋಗಿ ತಲೆದಂಡ ಪಕ್ಕಾನಾ?

ವಿಶೇಷವೆಂದರೆ ಜುಲೈ ಅಂತ್ಯದಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಯುವ ಸಾಧ್ಯತೆ ಇದೆ. ಸಭೆಯಲ್ಲಿ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಉಪಸ್ಥಿತರಿರಲಿದ್ದಾರೆ. ಮೂಲಗಳ ಪ್ರಕಾರ ಲೋಕಸಭೆ ಚುನಾವಣೆ ಫಲಿತಾಂಶ ಹಾಗೂ ಸರ್ಕಾರ ಮತ್ತು ಸಂಘಟನೆಯ ನಡುವಿನ ಸಮನ್ವಯತೆ ಕುರಿತು ಚರ್ಚೆ ನಡೆಯಲಿದೆ.

Continue Reading

ಪ್ರವಾಸ

Varanasi Tour: ವಾರಣಾಸಿಗೆ ಹೋದಾಗ ನೋಡಲೇಬೇಕಾದ ಅದ್ಭುತ ಸ್ಥಳಗಳಿವು

ವಾರಣಾಸಿಯ (Varanasi Tour) ಸಮೀಪದಲ್ಲಿರುವ ಹಲವು ಯಾತ್ರಾ ಸ್ಥಳಗಳು ಆಧ್ಯಾತ್ಮಿಕ ಅನುಭವಗಳ ಸಂಪೂರ್ಣ ಮಿಶ್ರಣವನ್ನು ಒದಗಿಸುತ್ತದೆ. ನಂಬಿಕೆ, ಭಕ್ತಿ ಮತ್ತು ಸಾಂಸ್ಕೃತಿಕ ಪರಂಪರೆಯ ವೈವಿಧ್ಯಮಯ ಚಿತ್ರಗಳನ್ನು ಚಿತ್ರಿಸುತ್ತದೆ. ಸಾರನಾಥದ ಪ್ರಶಾಂತತೆ ಅಥವಾ ಪ್ರಯಾಗರಾಜ್‌ನಲ್ಲಿರುವ ಪವಿತ್ರ ನದಿಗಳ ಸಂಗಮದಂತಹ ಪ್ರತಿಯೊಂದು ಸ್ಥಳಗಳು ವಿವಿಧ ರೀತಿಯ ತೀರ್ಥಯಾತ್ರಾ ಅನ್ವೇಷಕರನ್ನು ಆಕರ್ಷಿಸುತ್ತವೆ. ಇದು ನಮ್ಮ ದೇಶದ ಸಂಸ್ಕೃತಿಯ ಬಗ್ಗೆ ಹೆಮ್ಮೆ ಪಡುವಂತೆ ಮಾಡುತ್ತದೆ.

VISTARANEWS.COM


on

By

Varanasi Tour
Koo

ಭಾರತದ (india) ಅತ್ಯಂತ ಹಳೆಯ (oldest city) ಮತ್ತು ಪವಿತ್ರ ನಗರ ಗಂಗಾ ನದಿಯ (ganga river) ತಟದಲ್ಲಿರುವ ವಾರಣಾಸಿ (Varanasi Tour) ಆಧ್ಯಾತ್ಮಿಕತೆ ಮತ್ತು ಸಂಪ್ರದಾಯದಲ್ಲಿ ಮುಳುಗಿರುವ ನಾಡು. ಪ್ರಪಂಚದಾದ್ಯಂತದ ಯಾತ್ರಿಕರು ಆಧ್ಯಾತ್ಮಿಕತೆಯನ್ನು ಅರಸಿಕೊಂಡು ಇಲ್ಲಿಗೆ ಬರುತ್ತಾರೆ. ಇಲ್ಲಿನ ಸಂಪ್ರದಾಯದ ಸೊಬಗಿನಲ್ಲಿ ಮಿಂದು ಪುನೀತ ಭಾವವನ್ನು ಪಡೆಯುತ್ತಾರೆ.

ವಾರಣಾಸಿಯ ಪವಿತ್ರ ಘಾಟ್‌ಗಳು ಮತ್ತು ದೇವಾಲಯಗಳ ಜೊತೆಗೆತೀರ್ಥಯಾತ್ರೆಗಾಗಿ ಅಸಂಖ್ಯಾತ ಇತರ ಸ್ಥಳಗಳನ್ನು ಹೊಂದಿದೆ. ಇಲ್ಲಿರುವ ಪ್ರತಿಯೊಂದು ದೇವಾಲಯಗಳು ವಿಶಿಷ್ಟ ಮಹತ್ವ ಮತ್ತು ಆಕರ್ಷಣೆಯನ್ನು ಹೊಂದಿವೆ. ಪುರಾತನ ಭೂಮಿ ಎಂದೇ ಗುರುತಿಸಲ್ಪಟ್ಟಿರುವ ವಾರಾಣಸಿ ವೈವಿಧ್ಯಮಯ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಒಳನೋಟಗಳನ್ನು ಒದಗಿಸುತ್ತದೆ.

ವಾರಾಣಸಿಯಲ್ಲಿ ವಾರಣಾಸಿಯ ಪವಿತ್ರ ಘಾಟ್‌ಗಳು ಮತ್ತು ದೇವಾಲಯವನ್ನು ಹೊರತುಪಡಿಸಿ ಅನ್ವೇಷಿಸಬಹುದಾದ ಹಲವು ತಾಣಗಳಿವೆ. ವಾರಣಾಸಿಗೆ ಭೇಟಿ ನೀಡಿದಾಗ ಇಲ್ಲಿಗೆ ಭೇಟಿ ಕೊಡಲು ಮರೆಯದಿರಿ.

Varanasi Tour


ಸಾರನಾಥ

ಭಗವಾನ್ ಬುದ್ಧನು ಜ್ಞಾನೋದಯವನ್ನು ಪಡೆದ ಅನಂತರ ತನ್ನ ಮೊದಲ ಧರ್ಮೋಪದೇಶವನ್ನು ನೀಡಿದ ಕಾರಣ ಬೌದ್ಧಧರ್ಮದ ಸ್ಥಳಗಳಲ್ಲಿ ಅಗಾಧವಾದ ಮೌಲ್ಯವನ್ನು ಹೊಂದಿದೆ. ಸಾರನಾಥದ ಮಠ, ಸ್ತೂಪ ಮತ್ತು ವಸ್ತುಸಂಗ್ರಹಾಲಯಗಳಲ್ಲಿನ ಪ್ರಶಾಂತ ವಾತಾವರಣವು ಸಂದರ್ಶಕರಿಗೆ ಶಾಂತವಾಗಿ ಧ್ಯಾನಿಸಲು ಅವಕಾಶವನ್ನು ಒದಗಿಸುತ್ತದೆ. ಬೌದ್ಧ ವಾಸ್ತುಶೈಲಿ ಮತ್ತು ಕಲಾತ್ಮಕತೆಯ ವೈಭವವನ್ನು ತೋರಿಸುವ ಇಲ್ಲಿನ ಅತ್ಯಂತ ಗಮನಾರ್ಹ ತಾಣಗಳೆಂದರೆ ಧಮೇಕ್ ಸ್ತೂಪ, ಮುಲಗಂಧ ಕುಟಿ ವಿಹಾರ್ ಮತ್ತು ಅಶೋಕ ಸ್ತಂಭ.

Varanasi Tour


ಕೌಶಾಂಬಿ

ವಾರಣಾಸಿಯಿಂದ ಸುಮಾರು 60 ಕಿಲೋ ಮೀಟರ್ ದೂರದಲ್ಲಿರುವ ಜೈನ ಮತ್ತು ಬೌದ್ಧ ಧರ್ಮಕ್ಕೆ ಸಂಬಂಧಿಸಿದ ಪುರಾತನ ಪೂಜಾ ಸ್ಥಳವಾಗಿದೆ. ಪ್ರಾಚೀನ ಕಾಲದಲ್ಲಿ ಎರಡೂ ಧರ್ಮಗಳಿಗೆ ಇದು ಮಹತ್ವದ್ದಾಗಿದೆ ಎಂದು ಪರಿಗಣಿಸಲಾಗಿದೆ. ಭಗವಾನ್ ಮಹಾವೀರನಿಗೆ ಸಮರ್ಪಿತವಾದ ಜೈನ ದೇವಾಲಯಗಳೊಂದಿಗೆ ಭಗವಾನ್ ಬುದ್ಧನು ಭೇಟಿ ನೀಡಿದ್ದಾನೆ ಎಂದು ನಂಬಲಾದ ಘೋಸಿತಾರಾಮ ಮಠವು ಕೌಶಾಂಬಿಯ ಪ್ರಮುಖ ಕೇಂದ್ರಬಿಂದುವಾಗಿದೆ. ಇದು ಈ ಭಾಗದ ತನ್ನ ಶ್ರೀಮಂತ ಧಾರ್ಮಿಕ ಗತಕಾಲದ ನೋಟವನ್ನು ತೋರುತ್ತದೆ.

Varanasi Tour


ಚುನಾರ್ ಕೋಟೆ

ಗಂಗಾ ನದಿ ಸಮೀಪ ಕಲ್ಲಿನ ಬೆಟ್ಟದ ಮೇಲೆ ಇರುವ ಚುನಾರ್ ಕೋಟೆಯು ಹಿಂದೂ ಪುರಾಣಗಳಲ್ಲಿ ವಿಶೇಷ ಸ್ಥಾನವನ್ನು ಹೊಂದಿದೆ. ಈ ಕೋಟೆಗೆ ಸಂಬಂಧಿಸಿದ ಕೆಲವು ಆಕರ್ಷಕ ಕಥೆಗಳಿವೆ. ಅದರಲ್ಲಿ ಹಿಂದೂ ಪುರಾಣಗಳ ಪ್ರಕಾರ ವಿಷ್ಣುವು ಸಮುದ್ರ ಮಂಥನವನ್ನು ಬೆಂಬಲಿಸಲು ಆಮೆಯ ರೂಪವನ್ನು ಪಡೆದ ಕಥೆಯನ್ನು ಇದು ಸಾರುತ್ತದೆ. ಹೀಗಾಗಿ ಕೋಟೆಯ ಒಳಗಿನ ಹೆಜ್ಜೆಗುರುತುಗಳು ಭೂಮಿಯ ಮೇಲಿನ ದೇವರ ಮುದ್ರೆಗಳನ್ನು ಪ್ರತಿನಿಧಿಸುತ್ತವೆ ಎಂದು ಹೇಳಲಾಗುತ್ತದೆ.

Varanasi Tour


ವಿಂಧ್ಯಾಚಲ

ವಾರಣಾಸಿಯಿಂದ ಸುಮಾರು 70 ಕಿಲೋ ಮೀಟರ್ ದೂರದಲ್ಲಿರುವ ವಿಂಧ್ಯಾಚಲವು ದುರ್ಗಾದೇವಿಯೊಂದಿಗೆ ಸಂಬಂಧ ಹೊಂದಿದೆ ಮತ್ತು ವಿಂಧ್ಯಾಚಲವು ಶಕ್ತಿ ಪೀಠಗಳಲ್ಲಿ ಒಂದಾಗಿದೆ. ವಿಂಧ್ಯ ಶ್ರೇಣಿಗಳ ಮಧ್ಯೆ ಇರುವ ದೇವತೆ ವಿಂಧ್ಯವಾಸಿನಿ ದೇವಿ ದೇವಾಲಯವು ಯಾತ್ರಾರ್ಥಿಗಳಿಗೆ ನೆಚ್ಚಿನ ತಾಣವಾಗಿದೆ.

Varanasi Tour


ಚಿತ್ರಕೂಟ

ಶ್ರೀರಾಮ, ಪತ್ನಿ ಸೀತೆ ಮತ್ತು ಸಹೋದರ ಲಕ್ಷ್ಮಣರು ತಮ್ಮ ವನವಾಸದ ಮಹತ್ವದ ಭಾಗವನ್ನು ಇಲ್ಲಿಯೇ ಕಳೆದ ಕಾರಣ ಇದನ್ನು ಪ್ರಮುಖ ಪವಿತ್ರ ಸ್ಥಳವೆಂದು ಪರಿಗಣಿಸಲಾಗಿದೆ. ಚಿತ್ರಕೂಟದ ಶಾಂತಿಯುತ ಕಾಡುಗಳು ಮತ್ತು ಸುಂದರವಾದ ಪರಿಸರವು ರಾಮಾಯಣದ ಅನೇಕ ಪ್ರಸಂಗಗಳಿಗೆ ಸಾಕ್ಷಿಯಾಗಿದೆ. ಕಾಮದಗಿರಿ ಬೆಟ್ಟ, ಸತಿ ಅನುಸೂಯಾ ಆಶ್ರಮ, ಭಾರತ್ ಮಿಲಾಪ್ ದೇವಾಲಯಗಳು ಸಂತರ ಯಾತ್ರಾ ಸ್ಥಳಗಳಾಗಿವೆ.

ಇದನ್ನೂ ಓದಿ: Warangal Tour: ಪ್ರವಾಸಿಗರಿಗೆ ಮೋಡಿ ಮಾಡುವ ವಾರಂಗಲ್; ಅಲ್ಲಿ ನೋಡಲೇಬೇಕಾದ ಸ್ಥಳಗಳ ಚಿತ್ರಣ ಇಲ್ಲಿದೆ

Varanasi Tour


ಅಲಹಾಬಾದ್

ಭೂಮಿಯ ಮೇಲಿನ ಅತಿ ದೊಡ್ಡ ಧಾರ್ಮಿಕ ಸಭೆಯಾದ ಕುಂಭಮೇಳವನ್ನು ಆಯೋಜಿಸಲು ವಿಶ್ವಾದ್ಯಂತ ಖ್ಯಾತಿಯನ್ನು ಹೊಂದಿರುವ ಅಲಹಾಬಾದ್ ಅನ್ನು ಪ್ರಯಾಗ್ ರಾಜ್ ಎಂದು ಮರುನಾಮಕರಣ ಮಾಡುವುದರೊಂದಿಗೆ ಈ ಸ್ಥಳವು ಹಿಂದೂ ಧರ್ಮದಲ್ಲಿ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿದೆ. ಇದು ಗಂಗಾ, ಯಮುನಾ ಮತ್ತು ಸರಸ್ವತಿ ನದಿ ಸೇರುವ ಸ್ಥಳದಲ್ಲಿದೆ. ಈ ನಗರವು ದೇವರು ಮತ್ತು ರಾಕ್ಷಸರ ನಡುವಿನ ಪೌರಾಣಿಕ ಯುದ್ಧದ ಸಮಯದಲ್ಲಿ ಸ್ವರ್ಗದಿಂದ ದೈವಿಕ ಮಕರಂದ ಬಿದ್ದ ಸ್ಥಳವೆಂದು ನಂಬಲಾಗಿದೆ.

Continue Reading

ದೇಶ

PM Narendra Modi: ಚುನಾವಣೆಯಲ್ಲಿ ಕಳಪೆ ಪ್ರದರ್ಶನದಿಂದ ಕಂಗೆಟ್ರಾ ಮೋದಿ? ನಾಳೆ ಕಾರ್ಯಕರ್ತರ ದಿಢೀರ್ ಸಭೆ?

PM Narendra Modi: ಮೂಲಗಳ ಪ್ರಕಾರ, ಪ್ರಧಾನಿ ಮೋದಿ ಸಂಜೆ 6 ಗಂಟೆಗೆ ಪಕ್ಷದ ಪ್ರಧಾನ ಕಚೇರಿಗೆ ತಲುಪುತ್ತಾರೆ, ಅಲ್ಲಿ ಅವರು ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ಹಲವು ಮಹತ್ವದ ವಿಚಾರಗಳ ಕುರಿತು ಅವರು ಚರ್ಚೆ ನಡೆಸಲಿದ್ದಾರೆ.

VISTARANEWS.COM


on

PM Narendra Modi
Koo

ಹೊಸದಿಲ್ಲಿ: ಈ ಬಾರಿ ಲೋಕಸಭಾ ಚುನಾವಣೆ(Lok Sabha Election)ಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಗೆಲುವು ಸಿಗದೇ ಅಧಿಕಾರದಲ್ಲಿದ್ದರೂ ಅದರ ಕಂಗೆಟ್ಟಿರುವ ಬಿಜೆಪಿ(BJP) ಇದೀಗ ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ ಮತ್ತೆ ಮುಂದಾಗಿದೆ. ಇದರ ಮುನ್ನುಡಿ ಎಂಬಂತೆ ಪ್ರಧಾನಿ ನರೇಂದ್ರ ಮೋದಿ(PM Narendra Modi) ನಾಳೆ ಪಕ್ಷದ ಕಾರ್ಯಕರ್ತರ ಸಭೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ಪ್ರಧಾನಿ ಮೋದಿ ಸಂಜೆ 6 ಗಂಟೆಗೆ ಪಕ್ಷದ ಪ್ರಧಾನ ಕಚೇರಿಗೆ ತಲುಪುತ್ತಾರೆ, ಅಲ್ಲಿ ಅವರು ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ಹಲವು ಮಹತ್ವದ ವಿಚಾರಗಳ ಕುರಿತು ಅವರು ಚರ್ಚೆ ನಡೆಸಲಿದ್ದಾರೆ. ನಾಳೆ ಸಂಜೆ ಬಿಜೆಪಿ ಕಚೇರಿಯಲ್ಲಿ ಪ್ರಧಾನಿ ಮೋದಿ ದೀರ್ಘಕಾಲದ ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ. ಅವರಲ್ಲಿ ಗುಮಾಸ್ತರು, ಪ್ಯೂನ್‌ಗಳು ಮತ್ತು ಇತರ ಕೆಲಸಗಾರರು ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿಶೇಷವೆಂದರೆ ಜುಲೈ ಅಂತ್ಯದಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಯುವ ಸಾಧ್ಯತೆ ಇದೆ. ಸಭೆಯಲ್ಲಿ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಉಪಸ್ಥಿತರಿರಲಿದ್ದಾರೆ. ಮೂಲಗಳ ಪ್ರಕಾರ ಲೋಕಸಭೆ ಚುನಾವಣೆ ಫಲಿತಾಂಶ ಹಾಗೂ ಸರ್ಕಾರ ಮತ್ತು ಸಂಘಟನೆಯ ನಡುವಿನ ಸಮನ್ವಯತೆ ಕುರಿತು ಚರ್ಚೆ ನಡೆಯಲಿದೆ.

ಜುಲೈ 14 ರಂದು, ಉತ್ತರ ಪ್ರದೇಶ ಭಾರತೀಯ ಜನತಾ ಪಕ್ಷವು ತನ್ನ ರಾಜ್ಯ ಕಾರ್ಯಕಾರಿ ಸಮಿತಿಯ ಸಭೆಯನ್ನು ಲಕ್ನೋದ ಡಾ ರಾಮ್ ಮನೋಹರ್ ಲೋಹಿಯಾ ಕಾನೂನು ವಿಶ್ವವಿದ್ಯಾಲಯದ ಅಂಬೇಡ್ಕರ್ ಸಭಾಂಗಣದಲ್ಲಿ ನಡೆಸಿತ್ತು. ಈ ಸಭೆಯಲ್ಲಿ 2024 ರ ಲೋಕಸಭೆಯಲ್ಲಿ ಪಕ್ಷದ ಕಳಪೆ ಪ್ರದರ್ಶನದ ಬಗ್ಗೆ ಚರ್ಚಿಸಲಾಗಿತ್ತು. ಆ ಸಭೆಯಲ್ಲಿ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉಪ ಮುಖ್ಯಮಂತ್ರಿಗಳಾದ ಬ್ರಜೇಶ್ ಪಾಠಕ್ ಮತ್ತು ಕೆಪಿ ಮೌರ್ಯ ಮತ್ತು ಇತರ ಸಚಿವರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಪಕ್ಷಕ್ಕಾಗಿ ದುಡಿದು ಅಗಲಿದ ಪಕ್ಷದ ಕಾರ್ಯಕರ್ತರು ಹಾಗೂ ಅಧಿಕಾರಿಗಳಿಗೆ ಶ್ರದ್ಧಾಂಜಲಿ ಸಲ್ಲಿಸುವ ಜತೆಗೆ ರಾಜಕೀಯ ಪ್ರಸ್ತಾವನೆಗಳನ್ನು ಅಂಗೀಕರಿಸುವುದು ಸಭೆಯ ಪ್ರಮುಖ ಅಜೆಂಡಾವಾಗಿತ್ತು.
ರಾಜಕೀಯ ಪ್ರಸ್ತಾಪವು ಮುಂಬರುವ 10 ಸ್ಥಾನಗಳಿಗೆ ಉಪಚುನಾವಣೆ, ಲೋಕಸಭೆ ಚುನಾವಣೆಯ ಪರಾಮರ್ಶೆ ಮತ್ತು ಭವಿಷ್ಯದ ಮಾರ್ಗಸೂಚಿಗಳ ಕುರಿತು ಚರ್ಚೆಗಳನ್ನು ಒಳಗೊಂಡಿದೆ.

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದ ನಂತರ ಜುಲೈ 2 ರಂದು ಎನ್‌ಡಿಎ ಸಂಸದೀಯ ಪಕ್ಷದ ಸಭೆಯನ್ನು ರಾಷ್ಟ್ರ ರಾಜಧಾನಿಯಲ್ಲಿ ನಡೆಸಲಾಯಿತು.

ಇದನ್ನೂ ಓದಿ: UP CM v/s DCM: ಉತ್ತರಪ್ರದೇಶ ಬಿಜೆಪಿಯಲ್ಲಿ ಭಿನ್ನಮತ; ಯೋಗಿ ತಲೆದಂಡ ಪಕ್ಕಾನಾ?

Continue Reading
Advertisement
Maoists Attack
ದೇಶ8 mins ago

Maoists Attack: ಛತ್ತೀಸ್‌ಗಢದಲ್ಲಿ ಮತ್ತೆ ಮಾವೋವಾದಿಗಳ ಅಟ್ಟಹಾಸ; ಇಬ್ಬರು ಪೊಲೀಸರು ಹುತಾತ್ಮ

Viral Video
ಪ್ರಮುಖ ಸುದ್ದಿ13 mins ago

Viral Video: ಇನ್‌ಸ್ಟಾಗ್ರಾಂನಲ್ಲಿಯೇ ಗಂಡನಿಗೆ ಡಿವೋರ್ಸ್‌‌ ನೀಡಿದ ದುಬೈ ರಾಜಕುಮಾರಿ! ಏನು ಬರೆದಿದ್ದಾಳೆ ನೋಡಿ!

Hardik Pandya
ಕ್ರೀಡೆ29 mins ago

Hardik Pandya: ಫಿಟ್ನೆಸ್‌ ಬಗ್ಗೆ ಪ್ರಶ್ನೆ ಮಾಡಿದವರಿಗೆ ಸಿಕ್ಸ್​ ಪ್ಯಾಕ್​ ಮೂಲಕ ತಿರುಗೇಟು ಕೊಟ್ಟ ಹಾರ್ದಿಕ್​ ಪಾಂಡ್ಯ

vidhana sabha karnataka assembly live
ಪ್ರಮುಖ ಸುದ್ದಿ55 mins ago

Karnataka Assembly Live: ವಾಲ್ಮೀಕಿ ಹಗರಣದ ಆರೋಪಗಳಿಗೆ ಇಂದು ಸಿಎಂ ಉತ್ತರ; ವಿಧಾನಮಂಡಲ ಕಲಾಪ ಲೈವ್‌ ಇಲ್ಲಿದೆ

Joe Biden
ವಿದೇಶ1 hour ago

Joe Biden: ಅಮೆರಿಕ ಅಧ್ಯಕ್ಷ ಜೋ ಬೈಡನ್​ಗೆ ಕೊರೊನಾ ಸೋಂಕು; ಪ್ರಚಾರಕ್ಕೆ ಬ್ರೇಕ್‌

Actor Darshan Judicial Custody Ends Today May Extend Again
ಸ್ಯಾಂಡಲ್ ವುಡ್1 hour ago

Actor Darshan: ಇಂದು ಜಡ್ಜ್​ ಮುಂದೆ ದರ್ಶನ್ & ಟೀಂ ಹಾಜರು; ಜೈಲುವಾಸ ಮುಕ್ತಾಯವಾಗುತ್ತಾ?

ಕ್ರಿಕೆಟ್1 hour ago

BCCI: ಕೋಚಿಂಗ್​ ಹುದ್ದೆಗೆ ಗಂಭೀರ್ ಸೂಚಿಸಿದ್ದ ಐವರ ಹೆಸರನ್ನು ತಿರಸ್ಕರಿಸಿದ ಬಿಸಿಸಿಐ

SL vs IND
ಕ್ರಿಕೆಟ್2 hours ago

SL vs IND: ಇಂದು ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡ ಪ್ರಕಟ; ಯಾರಿಗೆ ಒಲಿಯಲಿದೆ ನಾಯಕತ್ವ?

Narendra Modi
ರಾಜಕೀಯ2 hours ago

Narendra Modi: ಇಂದು ಮೋದಿ ನೇತೃತ್ವದಲ್ಲಿ ಬಿಜೆಪಿ ಸಭೆ: ಮಹತ್ವದ ತೀರ್ಮಾನ ಸಾಧ್ಯತೆ; ಏನೆಲ್ಲ ಚರ್ಚೆಯಾಗಲಿದೆ?

Vijay Sethupathi 'Viduthalai 2' first look out now
ಕಾಲಿವುಡ್2 hours ago

Vijay Sethupathi: ವಿಜಯ್​ ಸೇತುಪತಿ ನಟನೆಯ’ʻವಿಡುತಲೈ 2ʼ ಫಸ್ಟ್‌ ಲುಕ್‌ ಔಟ್‌!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ5 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌