Karnataka Assembly Live: ವಾಲ್ಮೀಕಿ ಹಗರಣದ ಆರೋಪಗಳಿಗೆ ಇಂದು ಸಿಎಂ ಉತ್ತರ; ವಿಧಾನಮಂಡಲ ಕಲಾಪ ಲೈವ್‌ ಇಲ್ಲಿದೆ - Vistara News

ಪ್ರಮುಖ ಸುದ್ದಿ

Karnataka Assembly Live: ವಾಲ್ಮೀಕಿ ಹಗರಣದ ಆರೋಪಗಳಿಗೆ ಇಂದು ಸಿಎಂ ಉತ್ತರ; ವಿಧಾನಮಂಡಲ ಕಲಾಪ ಲೈವ್‌ ಇಲ್ಲಿದೆ

Karnataka Assembly Live: ವಾಲ್ಮೀಕಿ ನಿಗಮ ಹಗರಣ (Valmiki Corporation Live) ಕುರಿತು ಪ್ರತಿಪಕ್ಷದ ಆರೋಪಗಳಿಗೆ ಇಂದು ಸಿಎಂ ಸಿದ್ದರಾಮಯ್ಯ (CM Siddaramaiah) ಉತ್ತರ ನೀಡಲಿದ್ದಾರೆ. ಇದರ ಜೊತೆಗೆ, ಕನ್ನಡಿಗರಿಗೆ ಖಾಸಗಿ ಉದ್ಯಮದಲ್ಲಿ ಮೀಸಲು ವಿಧೇಯಕದ (Karnataka jobs reservation) ಕುರಿತು ಸರ್ಕಾರ ನಿಲುವು ಹಾಗೂ ನಡೆ ಚರ್ಚೆಗೆ ಗ್ರಾಸವಾಗಲಿದೆ.

VISTARANEWS.COM


on

vidhana sabha karnataka assembly live
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸೋಮವಾರ ಆರಂಭವಾಗಿದ್ದ ವಿಧಾನಮಂಡಲ ಅಧಿವೇಶನ (Karnataka Assembly Live) ಇಂದು ಮತ್ತೆ ಮುಂದುವರಿಯಲಿದೆ. ಬುಧವಾರ ಮೊಹರಂ ಹಬ್ಬದ ಹಿನ್ನೆಲೆಯಲ್ಲಿ ವಿಧಾನಸಭೆ ಹಾಗೂ ವಿಧಾನ ಪರಿಷತ್‌ ಕಲಾಪಗಳಿಗೆ (Assembly Session) ವಿರಾಮ ನೀಡಲಾಗಿತ್ತು. ಇಂದು ಬೆಳಗ್ಗೆ ಅಧಿವೇಶನ ಮತ್ತೆ ಆರಂಭವಾಗಲಿದ್ದು, ವಾಲ್ಮೀಕಿ ನಿಗಮ ಹಗರಣ (Valmiki Corporation Live) ಕುರಿತು ಪ್ರತಿಪಕ್ಷದ ಆರೋಪಗಳಿಗೆ ಇಂದು ಸಿಎಂ ಸಿದ್ದರಾಮಯ್ಯ (CM Siddaramaiah) ಉತ್ತರ ನೀಡಲಿದ್ದಾರೆ. ಇದರ ಜೊತೆಗೆ, ಕನ್ನಡಿಗರಿಗೆ ಖಾಸಗಿ ಉದ್ಯಮದಲ್ಲಿ ಮೀಸಲು ವಿಧೇಯಕದ (Karnataka jobs reservation) ಕುರಿತು ಸರ್ಕಾರ ನಿಲುವು ಹಾಗೂ ನಡೆ ಚರ್ಚೆಗೆ ಗ್ರಾಸವಾಗಲಿದೆ.

ಸೋಮವಾರ ಸಂವಿಧಾನದ ಪೀಠಿಕೆ ಓದು ಹಾಗೂ ಈ ನಡುವೆ ಅಗಲಿದ ಗಣ್ಯರಿಗೆ ಸಂತಾಪ ಸೂಚನೆಯೊಂದಿಗೆ ಕಲಾಪ ಆರಂಭವಾಗಿತ್ತು. ನಂತರ ಪ್ರತಿಪಕ್ಷಗಳ ಬೇಡಿಕೆಯಂತೆ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದ ಕುರಿತು ಚರ್ಚೆಗೆ ಸ್ಪೀಕರ್‌ ಅವಕಾಶ ನೀಡಿದ್ದರು. ಇದರ ನಂತರ ಸೋಮವಾರ ಹಾಗೂ ಮಂಗಳವಾರ ವಿಧಾನಸಭೆ ಕಲಾಪ ಗದ್ದಲದ ಗೂಡಾಗಿತ್ತು. ವಿಪಕ್ಷ ನಾಯಕ ಆರ್.‌ ಅಶೋಕ್‌ ಅವರು ಈ ಬಗ್ಗೆ ಸುದೀರ್ಘವಾಗಿ ಮಾತನಾಡಿ ಮುಖ್ಯಮಂತ್ರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು.

ಈ ಸಂದರ್ಭದಲ್ಲಿ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ಸದಸ್ಯರ ನಡುವೆ ಜೋರಾದ ಮಾತಿನ ಚಕಮಕಿ ನಡೆದಿತ್ತು. ಸ್ಪೀಕರ್‌ ಹಲವು ಬಾರಿ ಕಲಾಪವನ್ನು ಮುಂದೂಡಿದ್ದರು. ʼಮುಖ್ಯಮಂತ್ರಿಗಳು ನೈತಿಕ ಹೊನೆ ಹೊತ್ತು ರಾಜೀನಾಮೆ ನೀಡಬೇಕುʼ ಎಂದು ಅಶೋಕ್‌ ಆಗ್ರಹಿಸಿದ್ದರು. ಡಿಸಿಎಂ ಡಿಕೆ ಶಿವಕುಮಾರ್‌, ಎಂಬಿ ಪಾಟೀಲ್‌ ಮುಂತಾದವರು ಸಿಎಂ ಸಿದ್ದರಾಮಯ್ಯ ಪರ ಬ್ಯಾಟಿಂಗ್‌ ಮಾಡಿದ್ದರು. ಅಶೋಕ್‌ ಅವರ ಮಾತು ಹಾಗೂ ಚಕಮಕಿಯ ಬಳಿಕ ಕಲಾಪದ ಅವಧಿ ಮುಗಿದದ್ದರಿಂದ ಸಿಎಂ ಇಂದು ಸದನದಲ್ಲಿ ಉತ್ತರ ನೀಡಬೇಕಾಗಿದೆ.

ವಿರೋಧ ಪಕ್ಷದವರ ಎಂಟತ್ತು ಗಂಟೆಗಳ ಆರೋಪ, ದಾಳಿ, ಆಕ್ರೋಶದ ನುಡಿಗಳನ್ನು ಬಹುತೇಕ ಎಲ್ಲವನ್ನೂ ಅಡ್ಡಿ ಪಡಿಸದೆ ಮುಖ್ಯಮಂತ್ರಿಗಳು ಮತ್ತು ಆಡಳಿತ ಪಕ್ಷದ ಸದಸ್ಯರು ಆಲಿಸಿದರು. ವಾಲ್ಮೀಕಿ ನಿಗಮ ಪ್ರಕರಣದ ವಿರೋಧ ಪಕ್ಷದವರ ಎಲ್ಲಾ ಆರೋಪ ಮತ್ತು ಮಾತುಗಳಿಗೆ ಮುಖ್ಯಮಂತ್ರಿಗಳು ಗುರುವಾರ ಉತ್ತರ ನೀಡಲಿದ್ದಾರೆ.

ಈ ನಡುವೆ, ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಮೀಸಲು ಒಸಗಿಸುವ ಬಗ್ಗೆ ವಿಧೇಯಕ ರೂಪಿಸಲು ಸರ್ಕಾರ ಮುಂದಾಗಿತ್ತು. ಶೇ. 100 ಉದ್ಯೋಗ ಮೀಸಲು ಇಡಬೇಕು ಎಂದು ಕ್ಯಾಬಿನೆಟ್‌ನಲ್ಲಿ ನಿರ್ಣಯವಾಗಿದೆ ಎಂದು ಸಿಎಂ ಟ್ವೀಟ್‌ ಮಾಡಿದ್ದರು. ಇದಕ್ಕೆ ಖಾಸಗಿ ಉದ್ಯಮಿಗಳಿಂದ ಭಾರಿ ಪ್ರತಿರೋಧ ವ್ಯಕ್ತವಾಗಿತ್ತು. ನಂತರ ಟ್ವೀಟ್‌ ಡಿಲೀಟ್‌ ಮಾಡಿದ್ದ ಸಿಎಂ, ಬಳಿಕ ʼಶೇ.75 ಉದ್ಯೋಗ ಮೀಸಲುʼ ಎಂದಿದ್ದರು. ಇದಕ್ಕೂ ವಿರೋಧ ಬಂದಿತ್ತು. ಇದಾದ ಬಳಿಕ ʼಸದ್ಯ ಈ ವಿಧೇಯಕವನ್ನು ತಡೆಹಿಡಿಯಲಾಗಿದೆʼ ಎಂದು ಸರಕಾರ ಹೇಳಿದೆ.

ಸರಕಾರದ ಈ ಯುಟರ್ನ್‌ ಅನ್ನು ವಿಪಕ್ಷ ತನ್ನ ಅನುಕೂಲಕ್ಕೆ ಬಳಸಿಕೊಳ್ಳಲಿದೆ. ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಈ ಬಗ್ಗೆ ಟ್ವೀಟ್‌ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ʼವಾಲ್ಮೀಕಿ ಹಗರಣ ವಿಚಾರದಲ್ಲಿ ಸರಕಾರಕ್ಕೆ ಆಗುತ್ತಿರುವ ಮುಖಭಂಗ ತಪ್ಪಿಸಲು, ಗಮನವನ್ನು ಬೇರೆಡೆಗೆ ಸೆಳೆಯಲು ಇದನ್ನು ಮಾಡಲಾಗಿದೆ. ಆದರೆ ಸಿಎಂ ಇದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲʼ ಎಂದು ವಿಪಕ್ಷ ನಾಯಕ ಅಶೋಕ್‌ ಗುಡುಗಿದ್ದಾರೆ. ಹೀಗಾಗಿ, ಕಲಾಪದಲ್ಲಿ ಈ ವಿಚಾರವನ್ನು ಬಿಜೆಪಿ ಎತ್ತಿ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲಿದೆಯಾ ಎಂಬ ಪ್ರಶ್ನೆಯೂ ಮೂಡಿದೆ.

ಇದನ್ನೂ ಓದಿ: Karnataka Assembly Live: ವಾಲ್ಮೀಕಿ ಹಗರಣ ಚರ್ಚೆಯ ನಡುವೆ ಗದ್ದಲ ಸೃಷ್ಟಿಸಿದ ರೇವಣ್ಣ ಪ್ರಕರಣ; ರೊಚ್ಚಿಗೆದ್ದ ರೇವಣ್ಣ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral Video: 8 ವರ್ಷದ ಮಗನ ತಲೆ ನೆಲಕ್ಕೆ ಅಪ್ಪಳಿಸಿ, ಮೈಕೈಯೆಲ್ಲ ಕಚ್ಚಿದ ತಾಯಿ; ವಿಡಿಯೊ ನೋಡಿ ಜನಾಕ್ರೋಶ

Viral Video: ತಾಯಿಯನ್ನು ಕರುಣಾಮೂರ್ತಿ, ಸಹನಾಮೂರ್ತಿ ಎಂದು ಕರೆಯುತ್ತಾರೆ. ತನ್ನ ಕರುಳು ಕುಡಿಗಾಗಿ ಎಂತಹ ತ್ಯಾಗ ಬೇಕಾದರೂ ಮಾಡುತ್ತಾಳೆ. ಆದರೆ ಇಲ್ಲೊಬ್ಬಳು ದುಷ್ಟ ತಾಯಿ ತನ್ನ ಮಗನನ್ನು ಹಿಂಸಿಸಿದ ಪರಿ ನೋಡಿದರೆ ತಾಯಿಯಾದವಳ ಕರುಳು ಕಿತ್ತು ಬರುತ್ತದೆ. ಉತ್ತರಾಖಂಡದ ಹರಿದ್ವಾರ ಜಿಲ್ಲೆಯ ರೂರ್ಕಿ ಪ್ರದೇಶದ ಜಬ್ರೆಡಾ ಗ್ರಾಮದಲ್ಲಿ, ಮಹಿಳೆಯೊಬ್ಬಳು ತನ್ನ 8 ವರ್ಷದ ಮಗನ ಮೇಲೆ ಕುಳಿತು, ನಿರ್ದಯವಾಗಿ ಥಳಿಸಿ, ಕಚ್ಚಿದ ಆಘಾತಕಾರಿ ಘಟನೆ ನಡೆದಿದೆ. ಆಕೆ ತನ್ನ ಮಗನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಹಿಳೆಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

VISTARANEWS.COM


on

Viral Video
Koo

ಹರಿದ್ವಾರ: ತಾಯಿಯನ್ನು ದೇವರು ಎಂದು ಕರೆಯುತ್ತಾರೆ. ಯಾಕೆಂದರೆ ಆಕೆಯಿಂದ ಸಿಗುವ ಪ್ರೀತಿ, ವಾತ್ಸಲ್ಯ ಮತ್ತೆ ಜಗತ್ತಿನಲ್ಲಿ ಬೇರೆ ಯಾರಿಂದಲೂ ಸಿಗಲು ಸಾಧ್ಯವಿಲ್ಲ. ಹಾಗಾಗಿ ಮಕ್ಕಳು ತಾಯಿ ಎಷ್ಟೇ ಹೊಡೆದರೂ, ಬೈದರೂ ಅವಳ ಹಿಂದೆಯೇ ಓಡುತ್ತಾರೆ. ಆದರೆ ಇಲ್ಲೊಬ್ಬ ತಾಯಿ ದೇವರಲ್ಲ ದೆವ್ವದಂತೆ ವರ್ತಿಸಿದ್ದಾಳೆ. ತನ್ನ ಮಗನನ್ನು ಹೊಡಿದು ಬಡಿದು ಚಿತ್ರಹಿಂಸೆ ನೀಡುತ್ತಿದ್ದಾಳೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ. ತಾಯಿಗೆ ತನ್ನ ಮಕ್ಕಳು ತಪ್ಪು ಮಾಡಿದರೆ ದಂಡಿಸುವ ಹಕ್ಕಿದೆ ನಿಜ. ಅಂದಮಾತ್ರಕ್ಕೆ ಅವರಿಗೆ ದಂಡಿಸುವ ನೆಪದಲ್ಲಿ ಚಿತ್ರಹಿಂಸೆ ನೀಡಬಾರದು. ಈ ವಿಡಿಯೊ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಉತ್ತರಾಖಂಡದ ಹರಿದ್ವಾರ ಜಿಲ್ಲೆಯ ರೂರ್ಕಿ ಪ್ರದೇಶದ ಜಬ್ರೆಡಾ ಗ್ರಾಮದಲ್ಲಿ, ಮಹಿಳೆಯೊಬ್ಬಳು ತನ್ನ 8 ವರ್ಷದ ಮಗನ ಮೇಲೆ ಕುಳಿತು, ನಿರ್ದಯವಾಗಿ ಥಳಿಸಿ, ಕಚ್ಚಿದ ಆಘಾತಕಾರಿ ಘಟನೆ ನಡೆದಿದೆ. ಆಕೆ ತನ್ನ ಮಗನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯ ಈ ದುಷ್ಕೃತ್ಯವನ್ನು ವಿಡಿಯೊ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ.

ಈ ಆತಂಕಕಾರಿ ವೀಡಿಯೊ ತುಣುಕಿನಲ್ಲಿ ಮಹಿಳೆ ತನ್ನ ಮಗನ ಮೇಲೆ ಕುಳಿತು, ಪದೇ ಪದೇ ಆತನ ಬಾಯಿಗೆ, ಕೆನ್ನೆಗೆ ಹೊಡೆಯುವುದು, ಕಚ್ಚುವುದು ಮತ್ತು ಉಸಿರುಗಟ್ಟಿಸುವುದನ್ನು ತೋರಿಸುತ್ತದೆ. ಈ ಸಮಯದಲ್ಲಿ ಆಕೆ ಕೋಪದಿಂದ ತನ್ನ ಮಗನ ತಲೆಯನ್ನು ನೆಲಕ್ಕೆ ಅಪ್ಪಳಿಸುತ್ತಿರುವುದು ಕಂಡುಬಂದಿದೆ. ಈ ವಿಡಿಯೊ ನೋಡಿದವರಿಗೆ ಕರುಳು ಚುರುಕ್ ಅನ್ನುವುದಂತು ಸಹಜ. ಮಹಿಳೆಯ ಈ ಕೃತ್ಯ ವೈರಲ್ ಆದ ಹಿನ್ನಲೆಯಲ್ಲಿ ಮಾಹಿತಿ ಪಡೆದ ಅಧಿಕಾರಿಗಳು ಮಧ್ಯಪ್ರವೇಶಿಸಿ ಮಹಿಳೆಯ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಮತ್ತು ತನಿಖೆ ಮುಂದುವರೆದಿರುವುದರಿಂದ ಮಹಿಳೆ ಈಗ ಪೊಲೀಸ್ ವಶದಲ್ಲಿದ್ದಾಳೆ ಎನ್ನಲಾಗಿದೆ.

ತಾಯಿ ತನ್ನ ಮಕ್ಕಳ ಮೇಲೆ ಹಲ್ಲೆ ಮಾಡುವಂತಹ ಘಟನೆ ಇದೆ ಮೊದಲಲ್ಲಾ. ಇದಕ್ಕೂ ಮೊದಲು ಈ ವರ್ಷದ ಮಾರ್ಚ್ ತಿಂಗಳಿನಲ್ಲಿ ಬೆಂಗಳೂರಿನ ಗಿರಿನಗರದ ವೀರಭದ್ರೇಶ್ವರ ನಗರದಲ್ಲಿ ಪತಿಯಿಂದ ದೂರವಿದ್ದು ತನ್ನ ಗೆಳೆಯನ ಜೊತೆ ಜೀವನ ನಡೆಸುತ್ತಿದ್ದ ಮಹಿಳೆಯೊಬ್ಬಳು ತನ್ನ 3 ವರ್ಷ ವಯಸ್ಸಿನ ಗಂಡು ಮಗುವಿಗೆ ನಿತ್ಯ ದೈಹಿಕ ಕಿರುಕುಳ ನೀಡುತ್ತಿದ್ದಳು. ಆಕೆಯ ಕುರಿತು ಅನುಮಾನಗೊಂಡ ಸ್ಥಳೀಯರು ಮನೆ ಬಳಿ ಹೋಗಿ ನೋಡಿದಾಗ ಮಗುವಿನ ಅಸಹಾಯಕ ಸ್ಥಿತಿ ಕಂಡುಬಂದಿದೆ.

ಇದನ್ನೂ ಓದಿ: ಇನ್‌ಸ್ಟಾಗ್ರಾಂನಲ್ಲಿಯೇ ಗಂಡನಿಗೆ ಡಿವೋರ್ಸ್‌‌ ನೀಡಿದ ದುಬೈ ರಾಜಕುಮಾರಿ! ಏನು ಬರೆದಿದ್ದಾಳೆ ನೋಡಿ!

ತಾಯಿ ಹಾಗೂ ಆಕೆಯ ಸ್ನೇಹಿತ ನೀಡುವ ಕಿರುಕುಳವನ್ನು ಅಕ್ಕಪಕ್ಕದವರ ಬಳಿ ಆ ಮಗು ಹೇಳಿಕೊಂಡಿದೆ. ಆಗ ಸಿಟ್ಟಿಗೆದ್ದ ಜನರು ಮಹಿಳೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರೋಪಿ ಮಹಿಳೆಯನ್ನು ಠಾಣೆಗೆ ಕರೆಸಿ ಪೊಲೀಸರು ಬುದ್ಧಿವಾದ ಹೇಳಿದ್ದರು. ಮಗುವನ್ನು ತನ್ನ ಸುಪರ್ದಿಗೆ ಪಡೆದುಕೊಂಡಿರುವ ಮಕ್ಕಳ ಆಯೋಗ ತನಿಖೆ ನಡೆಸುತ್ತಿದೆ ಎನ್ನಲಾಗಿದೆ.

Continue Reading

ಪ್ರಮುಖ ಸುದ್ದಿ

Karnataka Assembly Live: ಅನ್ನದಾತನಿಗೆ ಅವಮಾನ ಮಾಡಿದ ಜಿಟಿ ಮಾಲ್‌ 7 ದಿನ ಬಂದ್: ವಿಧಾನಸಭೆಯಲ್ಲಿ ಘೋಷಣೆ, ವಿಸ್ತಾರ್‌ ನ್ಯೂಸ್‌ ಬಿಗ್‌ ಇಂಪ್ಯಾಕ್ಟ್

Karnataka Assembly Live: ವಿಧಾನಸಭೆ ಕಲಾಪದ ಆರಂಭದ ಹೊತ್ತಿಗೆ ಸ್ವತಃ ಸ್ಪೀಕರ್‌ ಯು.ಟಿ ಖಾದರ್‌ ಅವರು ಈ ವಿಚಾರ ಎತ್ತಿದರು. ಈ ಬಗ್ಗೆ ಸರ್ಕಾರದ ನಿಲುವನ್ನು ತಿಳಿಸುವಂತೆ ಸೂಚಿಸಿದರು. ಸದಸ್ಯರು ಪಕ್ಷಾತೀತವಾಗಿ ಮಾಲ್‌ ನಡೆಯನ್ನು ತೀವ್ರವಾಗಿ ಖಂಡಿಸಿದರು.

VISTARANEWS.COM


on

gt world mall karnataka assembly live
Koo

ಬೆಂಗಳೂರು: ಪಂಚೆ ಧರಿಸಿ ಬಂದ ಹಾವೇರಿಯ ರೈತರಿಗೆ ಒಳಬಿಡದ ರಾಜಧಾನಿಯ ಜಿಟಿ ವರ್ಲ್ಡ್‌ ಮಾಲ್‌ (GT World Mall) ಮೇಲೆ ಶಿಸ್ತು ಕ್ರಮವಾಗಿ ಮಾಲ್‌ ಅನ್ನು 7 ದಿನಗಳ ಕಾಲ ಮುಚ್ಚಲು ಸೂಚನೆ ನೀಡುವುದಾಗಿ ವಿಧಾನಸಭೆ‌ ಕಲಾಪದಲ್ಲಿ (Karnataka Assembly Live) ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ (Byrathi Suresh) ಘೋಷಿಸಿದ್ದಾರೆ.

ಇಂದು ಆರಂಭವಾದ ಮೂರನೇ ದಿನದ ವಿಧಾನಸಭೆ ಕಲಾಪ (Karnataka Assembly Live) ಆರಂಭದಲ್ಲೇ ಈ ವಿಷಯ ಪ್ರಸ್ತಾಪವಾಯಿತು. ಹಲವರು ಸದಸ್ಯರು ರೈತರಿಗೆ ಅವಮಾನ ಆದ ವಿಷಯವನ್ನು ಪ್ರಸ್ತಾಪಿಸಿದರು. ವಿಸ್ತಾರ ನ್ಯೂಸ್‌ ನಿನ್ನೆ ಇಡೀ ದಿನ ಈ ಘಟನೆಯನ್ನು ಪ್ರಸಾರ ಮಾಡಿದ್ದಲ್ಲದೆ, ರೈತರನ್ನು ಮರಳಿ ಜಿಟಿ ಮಾಲ್‌ಗೆ ಕರೆದೊಯ್ದು ಪ್ರವೇಶ ಕೊಡಿಸಿತ್ತು. ಈ ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿತ್ತು. ಕನ್ನಡ ಹಾಗೂ ರೈತಪರ ಸಂಘಟನೆಗಳು ಈ ವಿಚಾರದಲ್ಲಿ ವಿಸ್ತಾರ ನ್ಯೂಸ್‌ನೊಂದಿಗೆ ಕೈಜೋಡಿಸಿದ್ದವು. ನಂತರ ಸಚಿವ ಸಂತೋಷ್‌ ಲಾಡ್‌ ಕೂಡ ಈ ವಿಚಾರದಲ್ಲಿ ಮಾಲ್‌ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು.

ವಿಧಾನಸಭೆ ಕಲಾಪದ ಆರಂಭದ ಹೊತ್ತಿಗೆ ಸ್ವತಃ ಸ್ಪೀಕರ್‌ ಯು.ಟಿ ಖಾದರ್‌ ಅವರು ಈ ವಿಚಾರ ಎತ್ತಿದರು. ಈ ಬಗ್ಗೆ ಸರ್ಕಾರದ ನಿಲುವನ್ನು ತಿಳಿಸುವಂತೆ ಸೂಚಿಸಿದರು. ಸದಸ್ಯರು ಪಕ್ಷಾತೀತವಾಗಿ ಮಾಲ್‌ ನಡೆಯನ್ನು ತೀವ್ರವಾಗಿ ಖಂಡಿಸಿದರು. ಇದಕ್ಕೆ ಉತ್ತರಿಸಿದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಅವಕಾಶ ಇದೆ. 7 ದಿನಗಳ ವರೆಗೆ ಬಂದ್‌ ಮಾಡಿಸಬಹುದು. ಎಚ್ಚರಿಕೆ ನೀಡಿ ಏಳು ದಿನಗಳ ಕಾಲ ಮಾಲ್ ಬಂದ್ ಮಾಡಿಸಲಾಗುವುದು ಎಂದು ತಿಳಿಸಿದರು.

ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಹೇಳಿಕೆ ನೀಡಿ, ಬೆಂಗಳೂರಿನ ಕ್ಲಬ್‌ಗಳ ಒಳಗೆ ಕೂಡ ಸಾಕಷ್ಟು ಷರತ್ತುಗಳಿವೆ ಎಂದು ಪ್ರಸ್ತಾವಿಸಿದರು. ಬೌರಿಂಗ್ ಕ್ಲಬ್, ಸೆಂಚುರಿ ಕ್ಲಬ್‌ನಲ್ಲಿ ಚಪ್ಪಲಿ ಹಾಕಿಕೊಂಡು ಹೋಗುವ ಹಾಗಿಲ್ಲ. ಟೀ ಶರ್ಟ್ ಕೂಡ ಹಾಕಿಕೊಂಡು ಹೋಗುವ ಹಾಗಿಲ್ಲ. ಅವರ ಮೇಲೆ ಕ್ರಮ ಆಗಬೇಕು ಎಂದು ಒತ್ತಾಯಿಸಿದರು. ಅಂತಹ ಕ್ಲಬ್‌ಗೆ ನೀವು ಯಾಕೆ ಹೋಗ್ತೀರಾ ಅಂತ ಸುರೇಶ್‌ ಕುಮಾರ್‌ ಅವರು ಅಶೋಕ್ ಪಟ್ಟಣ್‌ ಕಾಲೆಳೆದರು.

ಏನಿದು ಪ್ರಕರಣ?

ಮಂಗಳವಾರ ಸಂಜೆ ಘಟನೆ ನಡೆದಿತ್ತು. ಹಾವೇರಿಯ ರೈತ ಫಕೀರಪ್ಪ ಅವರು ಪಂಚೆ ಧರಿಸಿ, ಮಗನ ಸಮೇತ ಸಿನಿಮಾ ನೋಡಲು ಬಂದಿದ್ದರು. ʼಪಂಚೆ ಧರಿಸಿ ಮಾಲ್ ಒಳಗೆ ಬರುವಂತಿಲ್ಲʼ ಎಂದು ಸೆಕ್ಯುರಿಟಿ ತಡೆದಿದ್ದರು. ಇದನ್ನು ರೈತರ ಮಗ ಪ್ರಶ್ನಿಸಿದ್ದರು. ನಂತರ ʼವಿಸ್ತಾರ ನ್ಯೂಸ್‌ʼ ಈ ವಿಚಾರವನ್ನು ಎತ್ತಿಕೊಂಡು ನಿನ್ನೆ ಇಡೀ ದಿನ ಕವರೇಜ್‌ ಮಾಡಿತ್ತು. ಪಂಚೆಯ ಹೆಸರಿನಲ್ಲಿ ರೈತರಿಗೆ ಆಗುತ್ತಿರುವ ಅವಮಾನದ ವಿರುದ್ಧ ಸಿಡಿದೆದ್ದು ಪ್ರಶ್ನೆ ಮಾಡಿತ್ತು.

ಬಳಿಕ ಇದನ್ನು ಕನ್ನಡ ಸಂಘಟನೆಗಳು ಹಾಗೂ ರೈತ ಸಂಘಟನೆಗಳು ಕೈಗೆತ್ತಿಕೊಂಡಿದ್ದವು. ಮಾಲ್‌ ಮುಂದೆ ತೀವ್ರ ಹೋರಾಟ ಹಾಗೂ ಪ್ರತಿಭಟನೆ ನಡೆದಿತ್ತು. ʼವಿಸ್ತಾರ ನ್ಯೂಸ್‌ʼ ಈ ಬಗ್ಗೆ ಕಾರ್ಯಕ್ರಮ ಮಾಡಿದ್ದಲ್ಲದೆ, ಅದೇ ರೈತರನ್ನು ಕರೆದೊಯ್ದು ಮಾಲ್‌ಗೆ ಪ್ರವೇಶ ಕೊಡಿಸಿತ್ತು. ಈ ಸಂದರ್ಭದಲ್ಲಿ ಮಾಲ್‌ನ ಮುಖ್ಯಸ್ಥರು ಸ್ಥಳದಲ್ಲಿ ಹಾಜರಿದ್ದು, ತಮ್ಮ ಸಿಬ್ಬಂದಿಯಿಂದ ಆದ ಅವಮಾನಕ್ಕೆ ಕ್ಷಮೆ ಕೇಳಿದ್ದರು. ರೈತ ಫಕೀರಪ್ಪಗೆ ಹಾರ ಹಾಕಿ ಸನ್ಮಾನ ಮಾಡಿದ್ದರು. ರೈತ- ಕನ್ನಡ ಸಂಘಟನೆಗಳ ಕಾರ್ಯಕರ್ತರು ಪಂಚೆ ಧರಿಸಿ ಮಾಲ್‌ಗೆ ಪ್ರವೇಶಿಸಿದ್ದರು.

ರೈತರಿಗೆ ಪ್ರವೇಶ ನಿರಾಕರಣೆ ಮಾಡಿದ ಜಿ‌ಟಿ ಮಾಲ್ ಕ್ರಮವನ್ನು ಕೃಷಿ ಸಚಿವ ಚೆಲುವರಾಯಸ್ವಾಮಿ ಖಂಡಿಸಿದ್ದು, ಈ ವಿಚಾರದಲ್ಲಿ ಸೂಕ್ತ ನಿಯಮ ರೂಪಿಸಲು ಸರ್ಕಾರ ಪ್ರಯತ್ನಿಸಲಿದೆ ಎಂದು ಹೇಳಿದ್ದಾರೆ. ʼನಾವು ಇದನ್ನ ಖಂಡಿಸುತ್ತೇವೆ. ಕೆಲ ವರ್ಷಗಳ ಹಿಂದೆ ಪಂಚೆ ಕಟ್ಟಿಕೊಂಡು ಹೋದರೆ ಕ್ಲಬ್‌ಗಳಲ್ಲಿ ಬಿಡುತ್ತಿರಲಿಲ್ಲ. ಶೂ ಇಲ್ಲದೇ ಪಂಚೆ ಹಾಕಿಕೊಂಡು ಕ್ಲಬ್‌ಗೆ ಹೋಗಬಹುದು ಅಂತ ನಮ್ಮ ಸರ್ಕಾರ ನಿರ್ಧಾರ ಮಾಡಿತ್ತು. ಇದನ್ನು ನಾವು ಅಂದು ಅಧಿವೇಶನದಲ್ಲಿ ಚರ್ಚೆ ಮಾಡಿದ್ದೆವು. ಈಗಲೂ ಇದಕ್ಕೆ ಸರ್ಕಾರ ನಿಯಮ ತರಬೇಕುʼ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: GT World Mall: ಅನ್ನದಾತನಿಗೆ ಅವಮಾನ ಮಾಡಿದ ಜಿಟಿ ಮಾಲ್‌ ಮುಂದೆ ಪಂಚೆ ಉಟ್ಟು ಪ್ರತಿಭಟನೆ, ಕ್ಷಮೆ ಕೇಳಿದ ಮಾಲೀಕ

Continue Reading

ಕ್ರೀಡೆ

Olympic Medals: ಒಲಿಂಪಿಕ್ಸ್​ ವಿಜೇತರಿಗೆ ನೀಡುವ ಚಿನ್ನದ ಪದಕ ಚಿನ್ನದ್ದಲ್ಲ!

Olympic Medals: ಒಲಿಂಪಿಕ್ ಚಾಂಪಿಯನ್‌ಗಳು ತಮ್ಮ ಬಾಯಿಯಲ್ಲಿ ಚಿನ್ನದ ಪದಕವನ್ನು ಕಚ್ಚುವುದು ಈಗ ಶುದ್ಧತೆಯನ್ನು ಪರಿಶೀಲಿಸುವುದಕ್ಕಾಗಿ ಅಲ್ಲ. ಯಾಕೆಂದರೆ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) 1912 ರಲ್ಲಿ ಶುದ್ಧ ಚಿನ್ನದ ಪದಕಗಳನ್ನು ನೀಡುವುದನ್ನು ನಿಲ್ಲಿಸಿತ್ತು. ಆದರೆ ಅದರ ಅಭ್ಯಾಸ ಕ್ರಮ ಇನ್ನೂ ಮುಂದುವರಿದಿದೆ.

VISTARANEWS.COM


on

Olympic Medals
Koo

ಬೆಂಗಳೂರು: ಇದುವರೆಗಿನ ಒಲಿಂಪಿಕ್ಸ್(Olympic)​ ಇತಿಹಾಸದಲ್ಲೇ(olympic history) ಅಮೆರಿಕದ ಖ್ಯಾತ ಈಜು ದಂತಕಥೆ ಮೈಕೆಲ್ ಫೆಲ್ಪ್ಸ್ ಅತ್ಯಧಿಕ ಪದಕ ಗೆದ್ದ ಸಾಧಕ. ‘ಚಿನ್ನದ ಮೀನು’ ಎಂದೇ ಖ್ಯಾತಿಗಳಿಸಿರುವ ಇವರು ಸರ್ವಾಧಿಕ 23 ಚಿನ್ನದ ಪದಕ ಗೆದ್ದಿದ್ದಾರೆ. ಅಚ್ಚರಿ ಎಂದರೆ ಇವರು ಗೆದ್ದಿರುವ ಪದಕಗಳು ಚಿನ್ನದ್ದಲ್ಲ. ಹಾಗಿದ್ದರೆ ಚಿನ್ನ ಗೆದ್ದ(Olympic Medals) ಸಾಧಕರಿಗೆ ಯಾವ ಪದಕ ನೀಡಲಾಗುತ್ತದೆ ಎನ್ನುವ ಕುತೂಹಲಕ್ಕೆ ಉತ್ತರ ಇಲ್ಲಿದೆ.

ಹೌದು, ಒಲಿಂಪಿಕ್ಸ್​ನಲ್ಲಿ ಚಿನ್ನ ಗೆದ್ದ ಸಾಧಕರಿಗೆ ನಿಜವಾದ ಚಿನ್ನದ ಪದಕ ನೀಡಲಾಗುವುದಿಲ್ಲ. ಲೇಪನ ಮಾಡಿದ ಪದಕವನ್ನಷ್ಟೇ ನೀಡಲಾಗುತ್ತದೆ. ಪೂರ್ತಿ ಚಿನ್ನದಿಂದಲೇ ತಯಾರಿಸಿದ ಪದಕಗಳನ್ನು 1912ರ ಸ್ವೀಡನ್‌ನ ಸ್ಟಾಕ್‌ಹೊಮ್ಲಿಯಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಕೊನೆಯ ಬಾರಿಗೆ ನೀಡಲಾಗಿತ್ತು. ಆ ಬಳಿಕ ಬಂಗಾರದ ಪದಕಗಳು ಚಿನ್ನದ ಲೇಪನವನ್ನಷ್ಟೆ (ಕನಿಷ್ಠ 6 ಗ್ರಾಂ) ಹೊಂದಿರುತ್ತವೆ ಮತ್ತು ಶೇಕಡ 93 ಬೆಳ್ಳಿಯೇ ತುಂಬಿರುತ್ತದೆ. ಹೀಗಾಗಿ ಒಲಿಂಪಿಕ್ಸ್‌ನ ಚಿನ್ನ ಮತ್ತು ಬೆಳ್ಳಿ ಪದಕಗಳ ನಡುವೆ ಹೆಚ್ಚಿನ ವ್ಯತ್ಯಾಸವಿಲ್ಲ.

ಇದನ್ನೂ ಓದಿ Paris Olympics: ಪ್ಯಾರಿಸ್‌ ಒಲಿಂಪಿಕ್ಸ್​ ಭದ್ರತಾ ಕಾರ್ಯದಲ್ಲಿ ಭಾರತದ ಶ್ವಾನದಳ; ಬೆಂಗಳೂರಿನಲ್ಲಿ ತರಬೇತಿ

ಬೆಳ್ಳಿ ಪದಕ ನೀಡಲಾಗಿತ್ತು


1896ರ ಮೊದಲ ಒಲಿಂಪಿಕ್ಸ್​ನಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ಬೆಳ್ಳಿ ಪದಕವನ್ನೇ ನೀಡಲಾಗಿತ್ತು. 2ನೇ ಸ್ಥಾನ ಪಡೆದವರು ಕಂಚಿನ ಪದಕ ಗಳಿಸಿದ್ದರು. 1900ರ ಒಲಿಂಪಿಕ್ಸ್‌ ವಿಜೇತರಿಗೆ ಪದಕಗಳ ಬದಲಾಗಿ ಟ್ರೋಫಿಗಳನ್ನು ನೀಡಲಾಗಿತ್ತು. 1904ರ ಒಲಿಂಪಿಕ್ಸ್‌ನಿಂದ ಚಿನ್ನ, ಬೆಳ್ಳಿ, ಕಂಚಿನ ಪದಕ ನೀಡುವ ಸಂಪ್ರದಾಯ ಹುಟ್ಟಿಕೊಂಡಿತು. ಪ್ರತಿ ಪದಕ ಕನಿಷ್ಠ 7.7 ಎಂ.ಎಂ. ದಪ್ಪ ಮತ್ತು 85 ಎಂ.ಎಂ. ಸುತ್ತಳತೆ ಹೊಂದಿರಬೇಕೆಂದು ಐಒಸಿ ನಿಯಮ.


ಕ್ರೀಡಾಪಟುಗಳು ಪದಕ ಕಚ್ಚುವುದು ಏಕೆ?


ಒಲಂಪಿಕ್ಸ್‌ನಲ್ಲಿ (Olympic) ಪದಕ ವಿಜೇತ ( winners ) ಕ್ರೀಡಾಪಟುಗಳು ಪದಕವನ್ನು ಕಚ್ಚಿ (Medal Biting) ಫೋಟೋಗೆ ಪೋಸ್ ಕೊಡುವುದನ್ನು ನೋಡಿರುತ್ತೇವೆ. ಇವರು ಯಾಕೆ ಹೀಗೆ ಮಾಡುತ್ತಾರೆ ಎನ್ನುವ ಪ್ರಶ್ನೆಯಂತೂ ಒಂದಲ್ಲಾ ಒಂದು ಬಾರಿ ನಮ್ಮ ಮನದಲ್ಲಿ ಮೂಡಿರುತ್ತದೆ. ಒಲಿಂಪಿಕ್ ಪದಕ ವಿಜೇತರು ಪದಕ ಕಚ್ಚಲು ಕಾರಣವಿದೆ ಮಾತ್ರವಲ್ಲ ಇದಕ್ಕೆ ದೊಡ್ಡ ಇತಿಹಾಸವೇ ಇದೆ.

ಇದನ್ನೂ ಓದಿ The Olympic Games: 72ರ ಇಳಿ ವಯಸ್ಸಿನಲ್ಲೂ ಒಲಿಂಪಿಕ್ಸ್​ ಪದಕ ಗೆದ್ದಿದ್ದ ಶೂಟರ್‌; ಯಾರಿವರು?


ಒಲಿಂಪಿಕ್ಸ್ ನ ಆರಂಭಿಕ ದಿನಗಳು. ಬೆಲೆಬಾಳುವ ಚಿನ್ನವನ್ನು ಕರೆನ್ಸಿಯ ರೂಪದಲ್ಲಿ ಬಳಸಲು ಪ್ರಾರಂಭಿಸಲಾಯಿತು. ಚಿನ್ನದ ಪರಿಶುದ್ಧತೆಯನ್ನು ಪರಿಶೀಲಿಸಲು ವ್ಯಾಪಾರಿಗಳು ಚಿನ್ನದ ನಾಣ್ಯಗಳನ್ನು ಕಚ್ಚಿ ನೋಡುತ್ತಿದ್ದರು ಎಂದು ಇತಿಹಾಸ ಹೇಳುತ್ತದೆ. ಚಿನ್ನವು ಮೃದುವಾದ ಲೋಹವಾಗಿದೆ. ಇದರ ಮೇಲೆ ಸ್ವಲ್ಪ ಒತ್ತಡ ಬಿದ್ದರೂ ಗುರುತು ಬೀಳುತ್ತದೆ. ಹೀಗಾಗಿ ಒಲಿಂಪಿಕ್ಸ್‌ನಲ್ಲಿ ಪದಕ ವಿಜೇತ ಕ್ರೀಡಾಪಟುಗಳು ತಮಗೆ ಸಿಗುವ ಚಿನ್ನದ ಪದಕವನ್ನು ಪರಿಶೀಲಿಸಲು ಹೀಗೆ ಮಾಡುತ್ತಿದ್ದರು. ಕ್ರಮೇಣ ಇದೊಂದು ಅಭ್ಯಾಸದ ಭಾಗವಾಯಿತು.

ಇದನ್ನೂ ಓದಿ Olympic Games History: ಒಲಿಂಪಿಕ್ಸ್​ನಲ್ಲಿ ಗ್ರೀಸ್​ ದೇಶಕ್ಕೆ ವಿಶೇಷ ಮಾನ್ಯತೆ ನೀಡುವುದೇಕೆ?

ಒಲಿಂಪಿಕ್ ಚಾಂಪಿಯನ್‌ಗಳು ತಮ್ಮ ಬಾಯಿಯಲ್ಲಿ ಚಿನ್ನದ ಪದಕವನ್ನು ಕಚ್ಚುವುದು ಈಗ ಶುದ್ಧತೆಯನ್ನು ಪರಿಶೀಲಿಸುವುದಕ್ಕಾಗಿ ಅಲ್ಲ. ಯಾಕೆಂದರೆ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) 1912 ರಲ್ಲಿ ಶುದ್ಧ ಚಿನ್ನದ ಪದಕಗಳನ್ನು ನೀಡುವುದನ್ನು ನಿಲ್ಲಿಸಿತ್ತು. ಆದರೆ ಅದರ ಅಭ್ಯಾಸ ಕ್ರಮ ಇನ್ನೂ ಮುಂದುವರಿದಿದೆ.

Continue Reading

ದೇಶ

Pralhad Joshi: ಉಚಿತ ಅಕ್ಕಿ ವಿತರಣೆಯ ಪಿಎಂ ಗರೀಬ್ ಕಲ್ಯಾಣ್‌ ಅನ್ನ ಯೋಜನೆ 2029ರ ವರೆಗೆ ವಿಸ್ತರಣೆ: ಪ್ರಲ್ಹಾದ ಜೋಶಿ

Pralhad Joshi: ಜನ ಸಾಮಾನ್ಯರಿಗೆ ಕೇಂದ್ರ ಸರ್ಕಾರ ಮತ್ತೊಂಡು ಗುಡ್‌ನ್ಯೂಸ್‌ ನೀಡಿದೆ. ಉಚಿತ ಅಕ್ಕಿ ವಿತರಣೆಯ ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು 2029ರವರೆಗೂ ವಿಸ್ತರಿಸಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ದೇಶದಲ್ಲಿ 80 ಕೋಟಿಗೂ ಅಧಿಕ ಜನರಿಗೆ ಉಚಿತ ಪಡಿತರ ದೊರಕಿದ್ದು, ಈ ಯೋಜನೆಯನ್ನು 2029ರವರೆಗೂ ಮುಂದುವರಿಸಲಾಗಿದೆ ಎಂದು ಹೇಳಿದ್ದಾರೆ.

VISTARANEWS.COM


on

Pralhad Joshi
Koo

ನವದೆಹಲಿ: ಕೇಂದ್ರ ಸರ್ಕಾರ ಉಚಿತ ಅಕ್ಕಿ ವಿತರಣೆಯ ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆ (PM Garib Kalyan Anna Yojana)ಯನ್ನು 2029ರವರೆಗೂ ವಿಸ್ತರಿಸಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ (Pralhad Joshi) ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ದೇಶದಲ್ಲಿ 80 ಕೋಟಿಗೂ ಅಧಿಕ ಜನರಿಗೆ ಉಚಿತ ಪಡಿತರ ದೊರಕಿದ್ದು, ಈ ಯೋಜನೆಯನ್ನು 2029ರವರೆಗೂ ಮುಂದುವರಿಸಲಾಗಿದೆ ಎಂದು ಹೇಳಿದ್ದಾರೆ. ಎನ್ಎಎಫ್ಇಡಿ, ಎನ್ ಸಿಸಿಎಫ್ ಹಾಗೂ ಕೇಂದ್ರೀಯ ಭಂಡಾರಗಳಲ್ಲಿ ಭಾರತ್ ಅಕ್ಕಿ ಕೆಜಿಗೆ 29 ರೂ. ಬೆಲೆಯಲ್ಲಿ 5 ಮತ್ತು 10 ಕೇಜಿ ಚೀಲಗಳಲ್ಲಿ ದೊರೆಯುತ್ತಿದೆ ಎಂದಿದ್ದಾರೆ.

ಅತಿ ಅಗ್ಗದ ಬೆಲೆಗೆ ಗೋಧಿ ಹಿಟ್ಟು

ಇನ್ನು ಭಾರತ್ ಆಟ್ಟಾ ಉಪಕ್ರಮದಲ್ಲಿ ಅತಿ ಅಗ್ಗದ ಬೆಲೆ 27.5 ರೂ. ಕೆಜಿಗೆ ಗೋಧಿ ಹಿಟ್ಟು ಪೂರೈಸಲಾಗುತ್ತಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ. ಭಾರತ್ ದಾಲ್ ಉಪಕ್ರಮದಡಿಯಲ್ಲಿ ಕಡಲೆ ಮತ್ತು ಹೆಸರುಬೇಳೆ ಕಡಿಮೆ ದರದಲ್ಲಿ ದೊರೆಯುವಂತಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಮಯೋಚಿತ ಉಪಕ್ರಮಗಳಿಂದಾಗಿ ದೇಶದ ಹಣದುಬ್ಬರ ಮತ್ತು ಜನಸಾಮಾನ್ಯರಿಗೆ ಹೊರೆಯಾಗದಂತೆ ಆಗಿದೆ ಎಂದು ಅವರು ಹೇಳಿದ್ದಾರೆ.

2019-20ರಲ್ಲಿ ಕೋವಿಡ್‌ ಸೋಂಕು ತೀವ್ರ ಪ್ರಮಾಣದಲ್ಲಿ ಆವರಿಸಿದಾಗ ದೇಶಾದ್ಯಂತ ಗರೀಬ್‌ ಕಲ್ಯಾಣ ಅನ್ನ ಯೋಜನೆಯನ್ನು ಘೋಷಿಸಲಾಗಿತ್ತು. ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದ ಬಡತನ ರೇಖೆಗಿಂದ ಕೆಳಗಿರುವ ಜನರಿಗೆ ಉಚಿತ ಆಹಾರ ಧಾನ್ಯ ನೀಡಲು ಈ ಯೋಜನೆ ರೂಪಿಸಲಾಗಿತ್ತು. ಅಂದಿನಿಂದ ಕುಟುಂಬದ ಪ್ರತಿ ಸದಸ್ಯರಿಗೆ ತಲಾ ಐದು ಕೆಜಿ ಪಡಿತರವನ್ನು ಉಚಿತವಾಗಿ ನೀಡಲಾಗುತ್ತಿದೆ.

ಇದನ್ನೂ ಓದಿ: Bharat Dal : 60 ರೂ.ಗೆ ಮೋದಿಯ ಭಾರತ್​ ದಾಲ್​; ಖರೀದಿ ಮಾಡುವುದು ಹೇಗೆ?

ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಸ್ತು

ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ನರೇಂದ್ರ ಮೋದಿ ಅವರು ಮೊದಲ ಸಚಿವ ಸಂಪುಟ ಸಭೆಯಲ್ಲೇ ದೇಶದ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬಡವರಿಗೆ 3 ಕೋಟಿ ಮನೆಗಳನ್ನು ನಿರ್ಮಿಸಿಕೊಡುವ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದರು. ಪ್ರಧಾನಮಂತ್ರಿ ಆವಾಸ್‌ ಯೋಜನೆ (Pradhan Mantri Awas Yojana-PMAY) ಅಡಿಯಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ತೀರ್ಮಾನಿಸಲಾಗಿತ್ತು. ಇದೀಗ ಅನ್ನ ಯೋಜನೆ ಮುಂದುವರಿಸುವ ಮೂಲಕ ಕೇಂದ್ರ ಸರ್ಕಾರ ಬಡವರ ನೆರವಿಗೆ ಧಾವಿಸಿದೆ.

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬಡವರು ಸ್ವಂತ ಮನೆ ಕನಸನ್ನು ನನಸು ಮಾಡುವ ದಿಸೆಯಲ್ಲಿ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಆವಾಸ್‌ ಯೋಜನೆ ಜಾರಿಗೆ ತಂದಿದೆ. ಯೋಜನೆ ಅಡಿಯಲ್ಲಿ ಫಲಾನುಭವಿಗಳು ಬಯಲು ಪ್ರದೇಶದಲ್ಲಿ ಮನೆ ನಿರ್ಮಿಸಿಕೊಳ್ಳಲು 1.20 ಲಕ್ಷ ರೂ. ನೀಡಲಾಗುತ್ತದೆ. ಇನ್ನು ಗುಡ್ಡಗಾಡು ಪ್ರದೇಶದಲ್ಲಿ ಮನೆ ನಿರ್ಮಿಸಿಕೊಳ್ಳಲು 1.30 ಲಕ್ಷ ರೂ. ಸಹಾಯಧನ ನೀಡಲಾಗುತ್ತದೆ. ಕಳೆದ 10 ವರ್ಷಗಳಲ್ಲಿ ಕೇಂದ್ರ ಸರ್ಕಾರವು ಸುಮಾರು 4.21 ಕೋಟಿ ಮನೆಗಳನ್ನು ನಿರ್ಮಿಸಿಕೊಟ್ಟಿದೆ.

Continue Reading
Advertisement
Re-NEET
ದೇಶ8 mins ago

Re-NEET: ನೀಟ್-ಯುಜಿ 2024 ವಿವಾದ; ಇಡೀ ಪರೀಕ್ಷೆಯ ಪಾವಿತ್ರ್ಯತೆಯ ಮೇಲೆ ಪರಿಣಾಮ ಬೀರಿದ್ದರೆ ಮಾತ್ರ ರಿಟೆಸ್ಟ್‌ ಎಂದ ಸುಪ್ರೀಂ ಕೋರ್ಟ್‌

Star Suvarna Akhand Deepa at Sigandur Sri Chaudeshwari Temple Shri Devi Mahatme serial team contribution
ಕಿರುತೆರೆ22 mins ago

Star Suvarna: ಸಿಗಂದೂರು ದೇವಸ್ಥಾನದಲ್ಲಿ ‘ಸುವರ್ಣ ಅಖಂಡ ದೀಪ’ಕ್ಕೆ ಚಾಲನೆ; `ಶ್ರೀ ದೇವೀ ಮಹಾತ್ಮೆ’ ಧಾರಾವಾಹಿ ತಂಡದ ಕೊಡುಗೆ

karnataka Rain
ಮಳೆ31 mins ago

Karnataka Rain : ಹಾಸನದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿತ; ಬೆಳಗಾವಿಯಲ್ಲಿ ರಸ್ತೆಗೆ ಉರುಳಿದ ಬೃಹತ್‌ ಬಂಡೆಗಲ್ಲು

The Birthday Boy Director Whisky Real Life Story
ಟಾಲಿವುಡ್39 mins ago

The Birthday Boy: ಹೆಸರು ಬದಲಾಯಿಸಿ ಕದ್ದು ಮುಚ್ಚಿ ಸಿನಿಮಾ ಮಾಡಿ, ಮಾಸ್ಕ್‌ ಧರಿಸಿ ಬಂದ ನಿರ್ದೇಶಕ! ಏನು ಕಥೆ?

Viral Video
Latest49 mins ago

Viral Video: 8 ವರ್ಷದ ಮಗನ ತಲೆ ನೆಲಕ್ಕೆ ಅಪ್ಪಳಿಸಿ, ಮೈಕೈಯೆಲ್ಲ ಕಚ್ಚಿದ ತಾಯಿ; ವಿಡಿಯೊ ನೋಡಿ ಜನಾಕ್ರೋಶ

India Squad Announcement
ಕ್ರೀಡೆ50 mins ago

India Squad Announcement: ಶ್ರೀಲಂಕಾ ಸರಣಿಗೆ ಮರಳಿದ ಹಿಟ್​ಮ್ಯಾನ್​ ರೋಹಿತ್​!

Gold Rate Today
ಚಿನ್ನದ ದರ1 hour ago

Gold Rate Today: ಚಿನ್ನದ ಬೆಲೆಯಲ್ಲಿ ತುಸು ಇಳಿಕೆ; ಇಂದಿನ ದರ ಚೆಕ್‌ ಮಾಡಿ

Kannada New Movie prakarana tanikha hantadalli ide
ಸ್ಯಾಂಡಲ್ ವುಡ್1 hour ago

Kannada New Movie: ‘ಪ್ರಕರಣ ತನಿಖಾ ಹಂತದಲ್ಲಿದೆ’ ಮೋಷನ್ ಪೋಸ್ಟರ್ ಬಿಡುಗಡೆ

gt world mall karnataka assembly live
ಪ್ರಮುಖ ಸುದ್ದಿ2 hours ago

Karnataka Assembly Live: ಅನ್ನದಾತನಿಗೆ ಅವಮಾನ ಮಾಡಿದ ಜಿಟಿ ಮಾಲ್‌ 7 ದಿನ ಬಂದ್: ವಿಧಾನಸಭೆಯಲ್ಲಿ ಘೋಷಣೆ, ವಿಸ್ತಾರ್‌ ನ್ಯೂಸ್‌ ಬಿಗ್‌ ಇಂಪ್ಯಾಕ್ಟ್

Olympic Medals
ಕ್ರೀಡೆ2 hours ago

Olympic Medals: ಒಲಿಂಪಿಕ್ಸ್​ ವಿಜೇತರಿಗೆ ನೀಡುವ ಚಿನ್ನದ ಪದಕ ಚಿನ್ನದ್ದಲ್ಲ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ5 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌