Bigg Boss Kannada: ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಯಾವಾಗಿನಿಂದ ಶುರು? ಸ್ಪರ್ಧಿಗಳು ಇವರೇನಾ? - Vistara News

ಬಿಗ್ ಬಾಸ್

Bigg Boss Kannada: ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಯಾವಾಗಿನಿಂದ ಶುರು? ಸ್ಪರ್ಧಿಗಳು ಇವರೇನಾ?

Bigg Boss Kannada: ಕಳೆದ ಬಾರಿ ಕನ್ನಡ ಬಿಗ್‌ಬಾಸ್ ಶೋ ಒಟಿಟಿಯಲ್ಲಿ 24 ಗಂಟೆ ಪ್ರಸಾರವಾಗಿತ್ತು. ಈ ಬಾರಿ ಕೂಡ ಅದೇ ರೀತಿಯಲ್ಲಿ ಪ್ಲ್ಯಾನ್ ಮಾಡಲಾಗುತ್ತಿದೆ. ಸೆಪ್ಟೆಂಬರ್‌ನಲ್ಲೇ ಈ ಬಾರಿ ಸೀಸನ್ 11 ಶುರುವಾಗುವ ನಿರೀಕ್ಷೆಯಿದೆ. ಸಿನಿಮಾ ಹಾಗೂ ಕಿರುತೆರೆ ಕಲಾವಿದರ ಜತೆಗೆ ಬೇರೆ ಬೇರೆ ಕ್ಷೇತ್ರಗಳ ಹಲವರು ದೊಡ್ಮನೆ ಪ್ರವೇಶಿಸಲಿದ್ದಾರೆ.

VISTARANEWS.COM


on

Bigg Boss Kannada 11 Starting Date And Contestants List
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಈಗಾಗಲೇ ಬಿಗ್‌ ಬಾಸ್‌ (Bigg Boss Kannada) ಹಿಂದಿ ಒಟಿಟಿ ಸೀಸನ್‌ ಶುರುವಾಗಿದೆ. ಕನ್ನಡದಲ್ಲಿ ಯಾವಾಗ ಸೀಸನ್‌ ಶುರು ಎಂಬ ಚರ್ಚೆ ಜೋರಾಗಿದೆ. ಇದೀಗ ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಶೀಘ್ರದಲ್ಲಿಯೇ ಶುರು ಎಂಬ ಮಾತುಗಳು ಕೇಳಿ ಬರುತ್ತಿವೆ. ಪ್ರತಿ ಬಾರಿ ಅಕ್ಟೋಬರ್‌ ತಿಂಗಳಲ್ಲಿ ಶೋ ಆರಂಭವಾಗುತ್ತದೆ. ಈ ಬಾರಿ ಅದೇ ರೀತಿ ಪ್ಲ್ಯಾನ್ ಮಾಡಲಾಗುತ್ತಿದೆ. ತೆರೆಮರೆಯಲ್ಲಿ ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ ಕೂಡ ನಡೀತಿದೆ ಎನ್ನಲಾಗುತ್ತಿದೆ.

ಕಳೆದ ಬಾರಿ ಕನ್ನಡ ಬಿಗ್‌ಬಾಸ್ ಶೋ ಒಟಿಟಿಯಲ್ಲಿ 24 ಗಂಟೆ ಪ್ರಸಾರವಾಗಿತ್ತು. ಈ ಬಾರಿ ಕೂಡ ಅದೇ ರೀತಿಯಲ್ಲಿ ಪ್ಲ್ಯಾನ್ ಮಾಡಲಾಗುತ್ತಿದೆ. ಸೆಪ್ಟೆಂಬರ್‌ನಲ್ಲೇ ಈ ಬಾರಿ ಸೀಸನ್ 11 ಶುರುವಾಗುವ ನಿರೀಕ್ಷೆಯಿದೆ. ಸಿನಿಮಾ ಹಾಗೂ ಕಿರುತೆರೆ ಕಲಾವಿದರ ಜತೆಗೆ ಬೇರೆ ಬೇರೆ ಕ್ಷೇತ್ರಗಳ ಹಲವರು ದೊಡ್ಮನೆ ಪ್ರವೇಶಿಸಲಿದ್ದಾರೆ. ವಿವಾದಾತ್ಮಕ ವ್ಯಕ್ತಿಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ದೊಡ್ಮನೆ ಒಳಗೆ ಸೇರಿಸುವ ಪ್ರಯತ್ನ ನಡೆಯುತ್ತಿದೆ.

ಕಳೆದ ಸೀಸನ್‌ನಲ್ಲಿ ಹಾಸ್ಯನಟ ತುಕಾಲಿ ಸಂತು ಬಿಗ್‌ಬಾಸ್ ಮನೆಗೆ ಹೋಗಿದ್ದರು. ಈ ಬಾರಿ ಅವರ ಪತ್ನಿ ಮಾನಸ ಹೋಗಬಹುದು ಎನ್ನುವುದು ಕೆಲವರ ಲೆಕ್ಕಾಚಾರ. ಕಿರುತೆರೆ ನಡ ವರುಣ್ ಆರಾಧ್ಯ ಕೂಡ ಈ ಲಿಸ್ಟ್‌ನಲ್ಲಿರುವ ಸಾಧ್ಯತೆಯಿದೆ. ಇನ್ನು ‘ಮಜಾಭಾರತ’ ಖ್ಯಾತಿಯ ರಾಘವೇಂದ್ರ, ನಟಿಯರಾದ ಭವ್ಯಾ ಗೌಡ, ಮೋಕ್ಷಿತಾ ಪೈ ಹೀಗೆ ಹಲವರ ಹೆಸರುಗಳು ಹರಿದಾಡುತ್ತಿದೆ.

ಇದನ್ನೂ ಓದಿ: Bigg Boss Kannada OTT : ಬರ್ತಾ ಇದೆ ‘ಬಿಗ್ ಬಾಸ್ ಕನ್ನಡ’ ಒಟಿಟಿ ಸೀಸನ್? ಯಾವಾಗಿಂದ ಶುರು?

ಬಿಗ್‌ಬಾಸ್‌ ಕನ್ನಡ ಸೀಸನ್‌ʼ 10 (Bigg Boss Kannada OTT)ರ ಚಾಂಪಿಯನ್‌ ಆಗಿ ಕಾರ್ತಿಕ್‌ ಮಹೇಶ್‌ ಹೊರ ಹೊಮ್ಮಿದರೆ, ಡ್ರೋನ್‌ ಪ್ರತಾಪ್‌ ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡು ರನ್ನರ್‌ ಅಪ್‌ ಆಗಿದ್ದಾರೆ. ಬಿಗ್‌ ಬಾಸ್‌ ಸೀಸನ್‌ 10 ಭರ್ಜರಿ ಟಿಆರ್‌ಪಿಯನ್ನು ಪಡೆದು ವೀಕ್ಷಕರ ಮನ ಸೆಳೆದಿತ್ತು. ಕಿಚ್ಚ ಸುದೀಪ್ ಅವರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಸುದೀಪ್ ಆ್ಯಂಕರಿಂಗ್ ನೋಡಲು ಅನೇಕರು ಕಾದಿದ್ದಾರೆ.. ‘ಡ್ರೋನ್’ ಪ್ರತಾಪ್, ಸೋನು ಶ್ರೀನಿವಾಸ್ ಗೌಡ ಅವರಿಗೆ ಅವಕಾಶ ಕೊಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಈ ಬಾರಿ ಯಾರು ಯಾರು ಬರಲಿದ್ದಾರೆ ಎಂದು ಕಾದು ನೋಡಬೇಕಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 10’ ಶೋನಲ್ಲಿ ಸಾಕಷ್ಟು ವಿವಾದಗಳು ಸೃಷ್ಟಿ ಆಗಿತ್ತು. ಹುಲಿ ಉಗುರು ಧರಿಸಿದ್ದಾರೆ ಎನ್ನುವ ಕಾರಣಕ್ಕೆ ವರ್ತೂರು ಸಂತೋಷ್ ಅವರು ಒಂದಷ್ಟು ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದರು. ತನಿಷಾ ಕುಪ್ಪಂಡ ಅವರು ಒಂದು ಸಮುದಾಯಕ್ಕೆ ಬೇಸರ ತರಿಸುವ ಮಾತಾಡಿದರು ಎಂಬ ದೂರು ಕೇಳಿ ಬಂತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Bigg Boss OTT 3: ‘ಅತ್ತಿಗೆ, ನೋಡಲು ಬ್ಯೂಟಿಫುಲ್‌’ ಅಂದಿದ್ದೇ ತಡ ಕೆನ್ನೆಗೆ ಬಾರಿಸಿಯೇ ಬಿಟ್ಟ ಇಬ್ಬರು ಹೆಂಡತಿಯರ ಮುದ್ದಿನ ಗಂಡ!

Bigg Boss OTT 3: ಅರ್ಮಾನ್ ಮಲ್ಲಿಕ್ ಅವರ ಇಬ್ಬರು ಪತ್ನಿಯರಲ್ಲಿ, ಮೊದಲ ಪತ್ನಿ ಪಾಯಲ್ ಈಗಾಗಲೇ ಮನೆಯಾಚೆ ಬಂದಿದ್ದಾರೆ. ಆದರೆ, ಎರಡನೇ ಪತ್ನಿ ಕೃತಿಕಾ ಇನ್ನೂ ಮನೆಯಲ್ಲಿದ್ದಾರೆ. ವಿಶಾಲ್ ಪಾಂಡೆ ಸಹ ಸ್ಪರ್ಧಿ ಲವಕೇಶ್ ಕಟಾರಿಯಾ ಜೊತೆ ಮಾತನಾಡಿದ ಮಾತುಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ತನ್ನ ಪತ್ನಿಯ ಸೌಂದರ್ಯದ ಬಗ್ಗೆ ಮಾತನಾಡಿದ್ದಕ್ಕೆ ಅರ್ಮಾನ್ ಅವರಿಗೆ ಸಿಟ್ಟು ಬಂದಿದೆ. ಹಾಗಾಗಿ ಅವರು ವಿಶಾಲ್ ಪಾಂಡೆ ಜತೆ ಜಗಳ ಮಾಡಿದ್ದಲ್ಲದೆ ಹೊಡೆದಿದ್ದಾರೆ. ಈ ವಿಚಾರವಾಗಿ ಬಾಲಿವುಡ್‌ನಲ್ಲಿ ಚರ್ಚೆ ನಡೆದಿದೆ. 

VISTARANEWS.COM


on

Bigg Boss OTT 3 Armaan Malik slaps Vishal Pandey in
Koo

ಬೆಂಗಳೂರು: ಬಿಗ್ ಬಾಸ್ OTT ಸೀಸನ್‌ನಲ್ಲಿ (Bigg Boss OTT 3) ಅರ್ಮಾನ್ ಮಲಿಕ್ (Arman Malik) ಮತ್ತು ಅವರ ಇಬ್ಬರು ಪತ್ನಿಯರಾದ ಪಾಯಲ್ ಮತ್ತು ಕೃತಿಕಾ ಭಾಗವಹಿಸಿರುವುದು ಗೊತ್ತೇ ಇದೆ. ಇದೀಗ ಬಿಗ್‌ ಬಾಸ್‌ ಮನೆಯೊಳಗಿನ ಸ್ಪರ್ಧಿಗಳ ಡ್ರಾಮ ಮತ್ತೊಂದು ಹಂತವನ್ನು ತಲುಪಿದೆ. ಅರ್ಮಾನ್ ಮಲಿಕ್ ಪತ್ನಿ ಕೃತಿಕಾ ಮಲಿಕ್ ಬಗ್ಗೆ ವಿಶಾಲ್ ಪಾಂಡೆ ಮಾಡಿದ ಕಮೆಂಟ್‌ಗಾಗಿ ಕಪಾಳಮೋಕ್ಷ ಮಾಡಿದ್ದಾರೆ. ಇದು ಅನೇಕರ ಆಕ್ರೋಶಕ್ಕೆ ಗುರಿಯಾಗಿದೆ. ತನ್ನ ಪತ್ನಿಯ ಸೌಂದರ್ಯದ ಬಗ್ಗೆ ಮಾತನಾಡಿದ್ದಕ್ಕೆ ಅರ್ಮಾನ್ ಅವರಿಗೆ ಸಿಟ್ಟು ಬಂದಿದೆ. ಹಾಗಾಗಿ ಅವರು ವಿಶಾಲ್ ಪಾಂಡೆ ಜತೆ ಜಗಳ ಮಾಡಿದ್ದಲ್ಲದೆ ಹೊಡೆದಿದ್ದಾರೆ. ಈ ವಿಚಾರವಾಗಿ ಬಾಲಿವುಡ್‌ನಲ್ಲಿ ಚರ್ಚೆ ನಡೆದಿದೆ. 

ಅರ್ಮಾನ್ ಮಲ್ಲಿಕ್ ಅವರ ಇಬ್ಬರು ಪತ್ನಿಯರಲ್ಲಿ, ಮೊದಲ ಪತ್ನಿ ಪಾಯಲ್ ಈಗಾಗಲೇ ಮನೆಯಾಚೆ ಬಂದಿದ್ದಾರೆ. ಆದರೆ, ಎರಡನೇ ಪತ್ನಿ ಕೃತಿಕಾ ಇನ್ನೂ ಮನೆಯಲ್ಲಿದ್ದಾರೆ. ವಿಶಾಲ್ ಪಾಂಡೆ ಸಹ ಸ್ಪರ್ಧಿ ಲವಕೇಶ್ ಕಟಾರಿಯಾ ಜೊತೆ ಮಾತನಾಡಿದ ಮಾತುಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅನೇಕರು ಶೋನಲ್ಲಿ ಹಿಂಸಾತ್ಮಕವಾಗಿ ವರ್ತಿಸಿದ್ದಕ್ಕಾಗಿ ಅರ್ಮಾನ್ ವಿರುದ್ಧ ಏಕೆ ಕ್ರಮ ತೆಗೆದುಕೊಳ್ಳಲಿಲ್ಲ ಎಂದು ಅವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಬಿಗ್ ಬಾಸ್ ನಿಯಮದ ಪ್ರಕಾರ ಕೈ ಮಾಡುವವರು, ದೈಹಿಕವಾಗಿ ಹಲ್ಲೆ ಮಾಡುವವರು ದೊಡ್ಮನೆಯಿಂದ ಹೊರಗಡೆ ಹೋಗಬೇಕು. ಆದರೆ ಅರ್ಮಾನ್ ಇನ್ನೂ ಅಲ್ಲಿಯೇ ಇದ್ದಾರೆ.

ಮಾರಾ ಮಾರಿಯಾಗಿದ್ದೇಕೆ?

ಸ್ಪರ್ಧಿಗಳಾದ ಅರ್ಮಾನ್ ಮತ್ತು ವಿಶಾಲ್ ಇತ್ತೀಚೆಗೆ ಜಗಳವಾಡಿದರು. ವಿಶಾಲ್ “ಅರ್ಮಾನ್ ಅವರ ಪತ್ನಿ ಕೃತಿಕಾ ಮಲಿಕ್ ಅವರನ್ನು ಸುಂದರವಾಗಿ ಕಾಣುತ್ತಾರೆ” ಎಂದು ಹೇಳಿದಾಗ ಅಲ್ಲಿಂದ ಜಗಳ ಆರಂಭವಾಗಿದೆ.

ಲವಕೇಶ್ ಕಟಾರಿಯಾ ಜೊತೆ ಮಾತನಾಡುತ್ತಿರುವ ಸಮಯದಲ್ಲಿ ಅರ್ಮಾನ್‌ ಮಲಿಕ್‌ ಪತ್ನಿ ಕೃತಿಕಾ ಅವರ ಬಗ್ಗೆ ವಿಶಾಲ್ ಪಾಂಡೆ ಮಾತನಾಡಿದ್ದಾರೆ. ಅತ್ತಿಗೆ ಕೃತಿಕಾ ನೋಡಲು ತುಂಬಾ ಸುಂದರವಾಗಿ ಕಾಣುತ್ತಾರೆ ಎಂದು ಹೇಳಿದ್ದಾರೆ. ಈ ಕಾರಣಕ್ಕೆ ಈ ವಿಚಾರವನ್ನು ಪಾಯಲ್ ಪ್ರಸ್ತಾಪಿಸಿದ್ದಾರೆ. ಈ ವಿಷ್ಯ ಕಿವಿಗೆ ಬೀಳುತ್ತಿದ್ದಂತೆ ರೊಚ್ಚಿಗೆದ್ದ ಅರ್ಮಾನ್ ಮಲ್ಲಿಕ್, ಆರಂಭದಲ್ಲಿ ವಿಶಾಲ್ ಪಾಂಡೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನೀನು ಮೊದಲಿಂದ ಹೀಗೆ ನಾ? ಎಂಬ ಪ್ರಶ್ನೆಯನ್ನೂ ಕೇಳಿದ್ದಾರೆ. ಇದಕ್ಕೆ ವಿಶಾಲ್‌ “ನಾನು ಆ ಅರ್ಥದಲ್ಲಿ ಹೇಳಿಲ್ಲ” ಎಂದಿದ್ದಾರೆ. ಇದರಿಂದ ಇನ್ನೂ ಕೆರಳಿದ ಅರ್ಮಾನ್ ಮಲ್ಲಿಕ್, ʻನೀನೇನು ಹೇಳಲೇ ಇಲ್ಲ, ನೀನು ಏನು ಅರಿಯದ ಮುಗ್ಧʼ ಎಂದಿದ್ದಾರೆ. ಆ ನಂತರ ಮಾತಿಗೆ ಮಾತು ಬೆಳೆದು ವಿಶಾಲ್ ಪಾಂಡೆ ಅವರ ಕಪಾಳಕ್ಕೆ ಅರ್ಮಾನ್ ಮಲ್ಲಿಕ್ ಬಾರಿಸಿದ್ದಾರೆ.

ಸದ್ಯಕ್ಕೆ ಬಿಗ್ ಬಾಸ್ ಮನೆಯಲ್ಲಿ ನಡೆದ ಈ ಹೊಡೆದಾಟದ ಬಗ್ಗೆ ಬಾಲಿವುಡ್‌ನಲ್ಲಿ ವ್ಯಾಪಕವಾದ ಆಕ್ರೋಶ ವ್ಯಕ್ತವಾಗುತ್ತಿದೆ. ಮಾಜಿ ಬಿಗ್ ಬಾಸ್ ಸ್ಫರ್ಧಿಗಳು ಕೂಡ ಈ ಘಟನೆಯನ್ನೂ ಖಂಡಿಸಿದ್ದಾರೆ.

ʻಮದುವೆಯಾದವರನ್ನು ಸುಂದರವಾಗಿದ್ದಾಳೆ ಅಂತ ಹೇಳೋ ಹಾಗಿಲ್ಲವೇ? ದೈಹಿಕವಾಗಿ ಕೈ ಮಾಡಿದವರು ಹೊರಗಡೆ ಹೋಗಬೇಕು ಅಥವಾ ಎಲ್ಲರೂ ಎಲ್ಲರಿಗೂ ಹೊಡೆಯಬೇಕು” ಎಂದು ನಟ ಕುಶಾಲ್ ಟಂಡನ್ ಅವರು ಸೋಶಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Bigg Boss OTT 3: ಬಿಗ್‌ ಬಾಸ್‌ ಒಟಿಟಿಯಲ್ಲಿ ಇಬ್ಬರ ಹೆಂಡಿರ ಮುದ್ದಿನ ಗಂಡ; ಗೋಳೋ ಎಂದು ಅತ್ತ ಮೊದಲ ಪತ್ನಿ!

ಇದೀಗ ವಿಶಾಲ್ ಸಹೋದರಿ ನೇಹಾ ಇನ್ಸ್ಟಾಗ್ರಾಮ್ ನಲ್ಲಿ ಈ ರೀತಿ ಬರೆದುಕೊಂಡಿದ್ದಾರೆ “ನನ್ನ ಸಹೋದರ ಯಾವುದೇ ತಪ್ಪು ಮಾಡಿಲ್ಲ ಎಂದು ನಾನು ದೃಢವಾಗಿ ನಂಬುತ್ತೇನೆ. ಅವರು ಯಾರನ್ನೂ ಅವಮಾನಿಸಿಲ್ಲ, ಅಥವಾ ಅವರು ಅನುಚಿತವಾಗಿ ಏನನ್ನೂ ಹೇಳಿಲ್ಲ. ಯಾವುದೇ ಕೆಟ್ಟ ಉದ್ದೇಶಗಳನ್ನು ಹೊಂದಿಲ್ಲ. ಅರ್ಮಾನ್ ತಪ್ಪಾಗಿ ಅರ್ಥೈಸಿಕೊಂಡರು. ನಾವು ವಿಶಾಲ್ ಅವರ ಬೆಂಬಲಕ್ಕೆ ನಿಲ್ಲುತ್ತೇವೆ. ನಾವು ಅವನನ್ನು ನಂಬುತ್ತೇವೆʼʼಎಂದು ಬರೆದುಕೊಂಡಿದ್ದಾರೆ.

Continue Reading

ಟಾಲಿವುಡ್

Bigg Boss Telugu 8: ಬಿಗ್‌ ಬಾಸ್‌ ಮನೆಗೆ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಎಂಟ್ರಿ?

Bigg Boss Telugu 8: ರಶ್ಮಿಕಾ, ಸಮಂತಾ, ನಯನತಾರಾ ಹೀಗೆ ಹಲವು ಟಾಪ್‌ ನಟಿಯರ ಭವಿಷ್ಯ ನುಡಿದು ಫೇಮಸ್‌ ಆದವರು ವೇಣುಸ್ವಾಮಿ. ಕೆಲವು ದಿನಗಳ ಹಿಂದೆ ನಟಿ ಶ್ರೀಲೀಲಾ ಬಗ್ಗೆ ಭವಿಷ್ಯ ನುಡಿದಿದ್ದರು. ಟಾಲಿವುಡ್ ಟಾಪ್ ನಟಿಯರಾಗಿ ಗುರುತಿಸಿಕೊಂಡಿರುವ ಸಮಂತಾ, ರಶ್ಮಿಕಾ ಮಂದಣ್ಣ, ಪೂಜಾ ಹೆಗ್ಡೆ ಅವರಂತೆ ಶ್ರೀಲೀಲಾ ಅವರಿಗೂ ಒಳ್ಳೆಯ ಹೆಸರು ಬರಲಿದೆ. ಆದರೆ ಸೌತ್ ಸಿನಿಮಾಗಳಲ್ಲಿ ಶ್ರೀಲೀಲಾ ನಂಬರ್ 1 ನಟಿಯಾಗುತ್ತಾರೆ ಎಂದು ವೇಣುಸ್ವಾಮಿ ಜ್ಯೋತಿಷ್ಯ ಹೇಳಿದ್ದರು. ವೇಣುಸ್ವಾಮಿ, ಟಾಲಿವುಡ್​ನ ಹಲವು ಸ್ಟಾರ್ ನಟ-ನಟಿಯರ ಭವಿಷ್ಯ ಹೇಳಿದ್ದರು. ಸಮಂತಾ-ನಾಗಚೈತನ್ಯ ಬೇರೆಯಾಗುತ್ತಾರೆ ಎಂದು ಸಹ ಭವಿಷ್ಯ ನುಡಿದಿದ್ದರು.

VISTARANEWS.COM


on

Bigg Boss Telugu 8 Astrologer Venu Swamy A Contestant
Koo

ಬೆಂಗಳೂರು: ಬಿಗ್​ಬಾಸ್ ತೆಲುಗು (Bigg Boss Telugu 8) ಮತ್ತೆ ಪ್ರಾರಂಭವಾಗುತ್ತಿದೆ.ಆಗಸ್ಟ್ 4 ರಂದು ಬಿಗ್​ಬಾಸ್ ತೆಲುಗು ಸೀಸನ್ 8 ಪ್ರಾರಂಭ ಆಗಲಿದೆ ಎಂದು ವರದಿಯಾಗಿದೆ. ಈ ಬಾರಿ ಬಿಗ್​ಬಾಸ್​ನಲ್ಲಿ ಭಾಗಿಯಾಗಲಿರುವ ಸ್ಪರ್ಧಿಗಳ ಬಗ್ಗೆ ವದಂತಿಗಳು ಹಬ್ಬಿವೆ. ತೆಲುಗಿನಲ್ಲಿ, ಬಿಗ್ ಬಾಸ್ ಶೋ (Bigg Boss Telugu Season 8 Starting Date) ದೊಡ್ಡ ಕ್ರೇಜ್‌ ಗಳಿಸಿದೆ. ಹಿಂದಿನ ಸೀಸನ್‌ಗಳಲ್ಲಿ ಭಾಗವಹಿಸಿದ ಅನೇಕ ಸ್ಪರ್ಧಿಗಳು ಆರ್ಥಿಕವಾಗಿ ಸಾಕಷ್ಟು ಯಶಸ್ವಿಯಾಗಿದ್ದಾರೆ. ಮತ್ತು ಮನರಂಜನಾ ಉದ್ಯಮದಲ್ಲಿ ಹೊಸ ಇಮೇಜ್ ಗಳಿಸಿದ್ದಾರೆ (bigg boss telugu contestants). ಈ ರಿಯಾಲಿಟಿ ಶೋನಲ್ಲಿ ಪಾಲ್ಗೊಳ್ಳುವ ಅವಕಾಶಕ್ಕಾಗಿ ಸಣ್ಣ-ಪರದೆಯ ಸೆಲೆಬ್ರಿಟಿಗಳು ಕಾಯುತ್ತಾರೆ ಎಂದರೆ ಅತಿಶಯೋಕ್ತಿಯಲ್ಲ. ಇದೀಗ ಬಿಗ್‌ ಬಾಸ್‌ ಮನೆಗೆ (Venu swamy) ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ವೇಣು ಸ್ವಾಮಿ ಜನಪ್ರಿಯ ಜ್ಯೋತಿಷಿಯಾಗಿದ್ದು, ಅವರು ಟಾಲಿವುಡ್ ಉದ್ಯಮದೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ. ಬಹುತೇಕ ಸರಿಯಾದ ಭವಿಷ್ಯವಾಣಿಯೊಂದಿಗೆ ಸಂಚಲನ ಮೂಡಿಸಿದ್ದಾರೆ. ಟಾಲಿವುಡ್ ಸೆಲೆಬ್ರಿಟಿಗಳ ಪ್ರೀತಿ, ಮದುವೆ ಮತ್ತು ವಿಚ್ಛೇದನದ ಬಗ್ಗೆ ಭವಿಷ್ಯ ನುಡಿದ ನಂತರ ಅವರು ವ್ಯಾಪಕವಾದ ಮೆಚ್ಚುಗೆಯನ್ನು ಗಳಿಸಿದರು. ಅನೇಕ ಬಾರಿ, ಅವರ ಭವಿಷ್ಯವಾಣಿಗಳು ನಿಜವಾಗಿದ್ದವು.

ಇದನ್ನೂ ಓದಿ: Bigg Boss Telugu 8: ಶುರುವಾಗ್ತಿದೆ ಬಿಗ್​ಬಾಸ್ ತೆಲುಗು ಸೀಸನ್ 8; ಸ್ಪರ್ಧಿಗಳು ಯಾರೆಲ್ಲ?

ರಶ್ಮಿಕಾ, ಸಮಂತಾ, ನಯನತಾರಾ ಹೀಗೆ ಹಲವು ಟಾಪ್‌ ನಟಿಯರ ಭವಿಷ್ಯ ನುಡಿದು ಫೇಮಸ್‌ ಆದವರು ವೇಣುಸ್ವಾಮಿ. ಕೆಲವು ದಿನಗಳ ಹಿಂದೆ ನಟಿ ಶ್ರೀಲೀಲಾ ಬಗ್ಗೆ ಭವಿಷ್ಯ ನುಡಿದಿದ್ದರು. ಟಾಲಿವುಡ್ ಟಾಪ್ ನಟಿಯರಾಗಿ ಗುರುತಿಸಿಕೊಂಡಿರುವ ಸಮಂತಾ, ರಶ್ಮಿಕಾ ಮಂದಣ್ಣ, ಪೂಜಾ ಹೆಗ್ಡೆ ಅವರಂತೆ ಶ್ರೀಲೀಲಾ ಅವರಿಗೂ ಒಳ್ಳೆಯ ಹೆಸರು ಬರಲಿದೆ. ಆದರೆ ಸೌತ್ ಸಿನಿಮಾಗಳಲ್ಲಿ ಶ್ರೀಲೀಲಾ ನಂಬರ್ 1 ನಟಿಯಾಗುತ್ತಾರೆ ಎಂದು ವೇಣುಸ್ವಾಮಿ ಜ್ಯೋತಿಷ್ಯ ಹೇಳಿದ್ದರು. ವೇಣುಸ್ವಾಮಿ, ಟಾಲಿವುಡ್​ನ ಹಲವು ಸ್ಟಾರ್ ನಟ-ನಟಿಯರ ಭವಿಷ್ಯ ಹೇಳಿದ್ದರು. ಸಮಂತಾ-ನಾಗಚೈತನ್ಯ ಬೇರೆಯಾಗುತ್ತಾರೆ ಎಂದು ಸಹ ಭವಿಷ್ಯ ನುಡಿದಿದ್ದರು.

ಜ್ಯೋತಿಷಿ ವೇಣುಸ್ವಾಮಿ (Venu Swamy) ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೆ ಮುನ್ನ, ಜಗನ್​ ಪಕ್ಷ ಮತ್ತೆ ಗೆಲ್ಲುತ್ತದೆ, ಮತ್ತೆ ಜಗನ್ ಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು. ಅವರ ಭವಿಷ್ಯ ಸುಳ್ಳಾಗಿತ್ತು. ಆ ಬಳಿಕ ಜ್ಯೋತಿಷಿ ವೇಣುಸ್ವಾಮಿ ವಿಡಿಯೊ ಮೂಲಕ ಕ್ಷಮೆ ಕೇಳಿದ್ದರು. ರಾಜಕೀಯ ಮತ್ತು ಚಿತ್ರರಂಗದ ಗಣ್ಯರ ವೈಯಕ್ತಿಕ ಜೀವನದ ಬಗ್ಗೆ ಇನ್ನು ಮುಂದೆ ಭವಿಷ್ಯ ಹೇಳುವುದಿಲ್ಲ ಎಂದು ಜ್ಯೋತಿಷಿ ವೇಣು ಸ್ವಾಮಿ ವಿಡಿಯೊ ಮೂಲಕ ಹೇಳಿಕೊಂಡಿದ್ದರು.

ತೆಲುಗು ವರದಿಯ ಪ್ರಕಾರ ವೇಣು ಸ್ವಾಮಿ ಬಿಗ್‌ ಬಾಸ್‌ಗೆ ಎಂಟ್ರಿ ಕೊಡಲಿದ್ದಾರೆ ಎಂದು ವರದಿಯಾಗಿದೆ.ಈ ಸುದ್ದಿ ನಿಜವೇ ಆಗಿದ್ದರೆ ವೇಣು ಸ್ವಾಮಿ ಅವರ ಸಂಭಾವನೆ ಬಿಗ್ ಬಾಸ್ ತೆಲುಗು ಇತಿಹಾಸದಲ್ಲಿ ಇದುವರೆಗಿನ ಅತಿ ಹೆಚ್ಚು ಸಂಭಾವನೆಯಾಗಲಿದೆ.

ಸೀಸನ್‌ 7ರ ವರೆಗೆ ನಾಗಾರ್ಜುನ ಅವರೇ ನಿಭಾಯಿಸುತ್ತಿದ್ದಾರೆ. ನಾಗುರ್ಜನ ಅವರ ವಿಶಿಷ್ಟ ವರ್ಚಸ್ಸು ಮತ್ತು ಮಾತನಾಡುವ ಶೈಲಿಗೆ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಇದೀಗ ಮಾಹಿತಿ ಪ್ರಕಾರ ಈ ಸೀಸನ್‌ನಲ್ಲಿ ನಟರು, ಯೂಟ್ಯೂಬರ್‌ಗಳು ಮತ್ತು ಇತರ ಸಾರ್ವಜನಿಕ ವ್ಯಕ್ತಿಗಳ ಸಮ್ಮಿಶ್ರಣ ಇರಲಿದೆ ಎಂದು ವರದಿಯಾಗಿದೆ. . ಪ್ರತಿಬಾರಿಯಂತೆ ನಟ ನಾಗಾರ್ಜುನ ಅವರೇ ಈ ಬಾರಿಯೂ ಶೋ ನಡೆಸಿಕೊಡಲಿದ್ದಾರೆ.

ಸಂಭಾವ್ಯ ಪಟ್ಟಿ ಹೀಗಿದೆ!

ಬಾಂಚಿಕ್ ಬಬ್ಲು: ಜನಪ್ರಿಯ ಯೂಟ್ಯೂಬರ್. ರಾಜ್ ತರುಣ್: ಟಾಲಿವುಡ್‌ನ ಪ್ರಸಿದ್ಧ ನಟ. ಸೋನಿಯಾ ಸಿಂಗ್: ಸಾಮಾಜಿಕ ಮಾಧ್ಯಮದಲ್ಲಿ ಅಪಾರ ಬಳಗ ಹೊಂದಿರುವ ನಟಿ, ಡ್ರಗ್ಸ್ ಪ್ರಕರಣದ ಆರೋಪಿ ಹೇಮಾ ಸಹ ಈ ಬಾರಿ ಬಿಗ್​ಬಾಸ್​ಗೆ ಬರಲಿದ್ದಾರೆ ಎನ್ನಲಾಗುತ್ತಿದೆ. ಮರ್ಯಾದಾ ಹತ್ಯೆಯ ಸಂತ್ರಸ್ತೆ ಅಮೃತಾ ಪ್ರಣಯ್ಈ ಬಾರಿ ಬಿಗ್​ಬಾಸ್​ಗೆ ಹೋಗಲಿದ್ದಾರೆ. ಭಾರಿ ದುಬಾರಿ ಬೆಲೆಗೆ ಆಹಾರ ಮಾರಾಟ ಮಾಡುತ್ತಾ ಜನಪ್ರಿಯವಾಗಿರುವ ಕುಮಾರಿ ಆಂಟಿ ಈ ಬಾರಿ ಬಿಗ್​ಬಾಸ್ ಮನೆಗೆ ಹೋಗಲಿದ್ದಾರೆ ಎನ್ನಲಾಗುತ್ತಿದೆ. ಜನಪ್ರಿಯ ಯೂಟ್ಯೂಬ್ ಕಪಲ್ ಆಗಿರುವ ನೇತ್ರಾ ಮತ್ತು ವಂಶಿ ಸಹ ಈ ಬಾರಿ ಬಿಗ್​ಬಾಸ್​ಗೆ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ.

Continue Reading

ಬಿಗ್ ಬಾಸ್

Bigg Boss Telugu 8: ಶುರುವಾಗ್ತಿದೆ ಬಿಗ್​ಬಾಸ್ ತೆಲುಗು ಸೀಸನ್ 8; ಸ್ಪರ್ಧಿಗಳು ಯಾರೆಲ್ಲ?

Bigg Boss Telugu 8: ಸೀಸನ್‌ 7ರ ವರೆಗೆ ನಾಗಾರ್ಜುನ ಅವರೇ ನಿಭಾಯಿಸುತ್ತಿದ್ದಾರೆ. ನಾಗುರ್ಜನ ಅವರ ವಿಶಿಷ್ಟ ವರ್ಚಸ್ಸು ಮತ್ತು ಮಾತನಾಡುವ ಶೈಲಿಗೆ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಇದೀಗ ಮಾಹಿತಿ ಪ್ರಕಾರ ಈ ಸೀಸನ್‌ನಲ್ಲಿ ನಟರು, ಯೂಟ್ಯೂಬರ್‌ಗಳು ಮತ್ತು ಇತರ ಸಾರ್ವಜನಿಕ ವ್ಯಕ್ತಿಗಳ ಸಮ್ಮಿಶ್ರಣ ಇರಲಿದೆ ಎಂದು ವರದಿಯಾಗಿದೆ.

VISTARANEWS.COM


on

Bigg Boss Telugu 8 Contestants List Leaked
Koo

ಬೆಂಗಳೂರು:ಬಿಗ್ ಬಾಸ್ ತೆಲುಗು ಸೀಸನ್-7 ಮುಗಿದ ಬಳಿಕ ಸೀಸನ್‌ 8 (Bigg Boss Telugu 8) ಶುರು ಯಾವಾಗ ಎಂದು ಪ್ರೇಕ್ಷಕರು ಕಾಯುತ್ತಿದ್ದರು. TRP ರೇಟಿಂಗ್‌ಗಳಿಗೆ ಸಂಬಂಧಿಸಿದಂತೆ ಕಳೆದ ಸೀಸನ್ ಭರ್ಜರಿ ಹಿಟ್ ಆಗಿತ್ತು. ಮಾತ್ರವಲ್ಲ ಬಿಗ್ ಬಾಸ್ ತೆಲುಗು ಸೀಸನ್-7 (Bigg Boss Telugu 7) ವಿಜೇತ ಪಲ್ಲವಿ ಪ್ರಶಾಂತ್ ಅರೆಸ್ಟ್‌ ಆಗಿ ಸಖತ್‌ ಸುದ್ದಿಯಲ್ಲಿದ್ದರು. ಇದೀಗ ಬಿಗ್​ಬಾಸ್ ತೆಲುಗು ಮತ್ತೆ ಪ್ರಾರಂಭವಾಗುತ್ತಿದೆ.ಆಗಸ್ಟ್ 4 ರಂದು ಬಿಗ್​ಬಾಸ್ ತೆಲುಗು ಸೀಸನ್ 8 ಪ್ರಾರಂಭ ಆಗಲಿದೆ. ಈ ಬಾರಿ ಬಿಗ್​ಬಾಸ್​ನಲ್ಲಿ ಭಾಗಿಯಾಗಲಿರುವ ಸ್ಪರ್ಧಿಗಳು ಈಗಾಗಲೇ ಖಾತ್ರಿ ಆಗಿದ್ದಾರೆ ಎನ್ನಲಾಗುತ್ತಿದೆ.

ಜೂನಿಯರ್ ಎನ್‌ಟಿಆರ್ ಮೊದಲ ಆವೃತ್ತಿಯನ್ನು ಹೋಸ್ಟ್ ಮಾಡಿದ್ದರೆ, ನಾನಿ ಎರಡನೇ ಆವೃತ್ತಿಯನ್ನು ಹೋಸ್ಟ್ ಮಾಡಿದ್ದರು. ಆ ಬಳಿಕ ನಾಗಾರ್ಜುನ ಅವರು ಹೋಸ್ಟ್‌ ಮಾಡುತ್ತ ಬಂದಿದ್ದಾರೆ. ಸೀಸನ್‌ 7ರ ವರೆಗೆ ನಾಗಾರ್ಜುನ ಅವರೇ ನಿಭಾಯಿಸುತ್ತಿದ್ದಾರೆ. ನಾಗುರ್ಜನ ಅವರ ವಿಶಿಷ್ಟ ವರ್ಚಸ್ಸು ಮತ್ತು ಮಾತನಾಡುವ ಶೈಲಿಗೆ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಇದೀಗ ಮಾಹಿತಿ ಪ್ರಕಾರ ಈ ಸೀಸನ್‌ನಲ್ಲಿ ನಟರು, ಯೂಟ್ಯೂಬರ್‌ಗಳು ಮತ್ತು ಇತರ ಸಾರ್ವಜನಿಕ ವ್ಯಕ್ತಿಗಳ ಸಮ್ಮಿಶ್ರಣ ಇರಲಿದೆ ಎಂದು ವರದಿಯಾಗಿದೆ. . ಪ್ರತಿಬಾರಿಯಂತೆ ನಟ ನಾಗಾರ್ಜುನ ಅವರೇ ಈ ಬಾರಿಯೂ ಶೋ ನಡೆಸಿಕೊಡಲಿದ್ದಾರೆ.

ಇದನ್ನೂ ಓದಿ: Bigg Boss Telugu 7: ಬಿಗ್ ಬಾಸ್ ತೆಲುಗು ಸೀಸನ್-7 ವಿಜೇತ ಪಲ್ಲವಿ ಪ್ರಶಾಂತ್ ಅರೆಸ್ಟ್‌!

ಸಂಭಾವ್ಯ ಪಟ್ಟಿ ಹೀಗಿದೆ!

ಬಾಂಚಿಕ್ ಬಬ್ಲು: ಜನಪ್ರಿಯ ಯೂಟ್ಯೂಬರ್. ರಾಜ್ ತರುಣ್: ಟಾಲಿವುಡ್‌ನ ಪ್ರಸಿದ್ಧ ನಟ. ಸೋನಿಯಾ ಸಿಂಗ್: ಸಾಮಾಜಿಕ ಮಾಧ್ಯಮದಲ್ಲಿ ಅಪಾರ ಬಳಗ ಹೊಂದಿರುವ ನಟಿ, ಡ್ರಗ್ಸ್ ಪ್ರಕರಣದ ಆರೋಪಿ ಹೇಮಾ ಸಹ ಈ ಬಾರಿ ಬಿಗ್​ಬಾಸ್​ಗೆ ಬರಲಿದ್ದಾರೆ ಎನ್ನಲಾಗುತ್ತಿದೆ. ಮರ್ಯಾದಾ ಹತ್ಯೆಯ ಸಂತ್ರಸ್ತೆ ಅಮೃತಾ ಪ್ರಣಯ್ಈ ಬಾರಿ ಬಿಗ್​ಬಾಸ್​ಗೆ ಹೋಗಲಿದ್ದಾರೆ. ಭಾರಿ ದುಬಾರಿ ಬೆಲೆಗೆ ಆಹಾರ ಮಾರಾಟ ಮಾಡುತ್ತಾ ಜನಪ್ರಿಯವಾಗಿರುವ ಕುಮಾರಿ ಆಂಟಿ ಈ ಬಾರಿ ಬಿಗ್​ಬಾಸ್ ಮನೆಗೆ ಹೋಗಲಿದ್ದಾರೆ ಎನ್ನಲಾಗುತ್ತಿದೆ. ಜನಪ್ರಿಯ ಯೂಟ್ಯೂಬ್ ಕಪಲ್ ಆಗಿರುವ ನೇತ್ರಾ ಮತ್ತು ವಂಶಿ ಸಹ ಈ ಬಾರಿ ಬಿಗ್​ಬಾಸ್​ಗೆ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ.

ಸೆಪ್ಟೆಂಬರ್ 3 ರಂದು ತೆಲುಗು ಬಿಗ್​ಬಾಸ್ ಸೀಸನ್ 7 ಆರಂಭವಾಗಿತ್ತು. 19 ಮಂದಿ ಸ್ಪರ್ಧಿಗಳು ಶೋನಲ್ಲಿ ಭಾಗಿಯಾಗಿದ್ದರು. ಅವರಲ್ಲೇ ಇಬ್ಬರು ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮತ್ತೆ ಮನೆಗೆ ಬಂದಿದ್ದರು. ಅಲ್ಲಿಗೆ ಒಟ್ಟು 21 ಸ್ಪರ್ಧಿಗಳು ಈ ಬಾರಿಯ ಬಿಗ್​ಬಾಸ್ ತೆಲುಗು ಸೀಸನ್ 7ರಲ್ಲಿ ಆಡಿದರುಪಲ್ಲವಿ ಪ್ರಶಾಂತ್ ವಿನ್ನರ್ ಆಗಿದ್ದು, ಹಲವರಿಗೆ ಖುಷಿ ನೀಡಿತ್ತು. ಆದರೆ ಮೊದಲಿನಿಂದಲೂ ಶಿವಾಜಿ ವಿನ್ನರ್ ಎಂದುಕೊಂಡಿದ್ದ ಹಲವರಿಗೆ ಬೇಸರವಾಗಿತ್ತು.

Continue Reading

ಬಿಗ್ ಬಾಸ್

Actress Siri: ಬಿಗ್​ಬಾಸ್​ನಲ್ಲಿ ಚಿಗುರಿತಾ ಪ್ರೇಮ? ‘ರಂಗೋಲಿ’ ಖ್ಯಾತಿಯ ಸಿರಿಯ ವರನ್ಯಾರು?

Actress Siri: ಬಿಗ್ ಬಾಸ್ ಸಿರಿ ಮದುವೆಯಾಗಿರುವ ಹುಡುಗ ಮೂಲತಃ ಮಂಡ್ಯದವರು ಸದ್ಯ ಬೆಂಗಳೂರಿನಲ್ಲಿ ನಲೆಸಿದ್ದಾರೆ. ಅವರ ಹೆಸರು ಪ್ರಭಾಕರ್ ಬೋರೇಗೌಡ. ಪ್ರಭಾಕರ್‌ ಬೋರೇಗೌಡ ಮತ್ತು ಸಿರಿ ಒಟ್ಟಿಗೆ ನಟಿಸಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್‌ ಮನೆಯಿಂದ ಸಿರಿ ಎಲಿಮಿನೇಟ್‌ ಆದ ಬಳಿಕ ಸಿರಿ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ.

VISTARANEWS.COM


on

Actress Siri marriage to actor prabhakar
Koo

ಬೆಂಗಳೂರು: ‘ರಂಗೋಲಿ’, ‘ಮನೆಯೊಂದು ಮೂರು ಬಾಗಿಲು’, ‘ಬದುಕು’ ಮುಂತಾದ ಧಾರಾವಾಹಿಗಳನ್ನು ಪ್ರೇಕ್ಷಕರು ಮನಗೆದ್ದ ಸಿರಿ ಬಿಗ್ ಬಾಸ್ (BBK Season 10) ಈಗ ಮದುವೆಯಾಗಿದ್ದಾರೆ. ಇನ್ನೂ (Actress Siri) ಯಾಕೆ ಮದುವೆ ಆಗಿಲ್ಲ? ಎಂಬ ಪ್ರಶ್ನೆಗಳನ ನಡುವೆ ಅವರು ಸದ್ದಿಲ್ಲದೇ, ಸಿಂಪಲ್‌ ಆಗಿ ಹಸೆ ಮಣೆ ಏರಿದ್ದಾರೆ. ಮೂಲಗಳ ಪ್ರಕಾರ ಸಿರಿ ಮದುವೆಯಾದ ಹುಡುಗನ ಹೆಸರು ಪ್ರಭಾಕರ್. ಮಂಡ್ಯ ಮೂಲದವರಾದ ಇವರು ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಇವರಿಬ್ಬರೂ ಚಿಕ್ಕಬಳ್ಳಾಪುರದ ನಂದಿ ಗ್ರಾಮದಲ್ಲಿ ಮದುವೆ ಮಾಡಿಕೊಂಡಿದ್ದಾರೆ.

ಬಿಗ್ ಬಾಸ್ ಸಿರಿ ಮದುವೆಯಾಗಿರುವ ಹುಡುಗ ಮೂಲತಃ ಮಂಡ್ಯದವರು ಸದ್ಯ ಬೆಂಗಳೂರಿನಲ್ಲಿ ನಲೆಸಿದ್ದಾರೆ. ಅವರ ಹೆಸರು ಪ್ರಭಾಕರ್ ಬೋರೇಗೌಡ. ಪ್ರಭಾಕರ್‌ ಬೋರೇಗೌಡ ಮತ್ತು ಸಿರಿ ಒಟ್ಟಿಗೆ ನಟಿಸಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್‌ ಮನೆಯಿಂದ ಸಿರಿ ಎಲಿಮಿನೇಟ್‌ ಆದ ಬಳಿಕ ಸಿರಿ ಈ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ. ‘ನಿಮ್ಮಲ್ಲರ ಸಪೋರ್ಟ್‌ಗೆ ವಂದನೆಗಳು’ ಎಂದು ಪ್ರಭಾಕರ್ ಬರೆದುಕೊಂಡಿದ್ದರು.

ಇವರಿಬ್ಬರ ಪರಿಚಯ ಆಗಿದ್ದು ಹೇಗೆ? ಲವ್ ಮ್ಯಾರೇಜ್ ಆಗಿರಬಹುದಾ? ಬಿಗ್ ಬಾಸ್‌ ನಂತರ ಅರಳಿದ ಪ್ರೀತಿನಾ ಎಂದು ಜನರು ಕಮೆಂಟ್‌ ಮೂಲಕ ಪ್ರಶ್ನೆ ಇಡುತ್ತಿದ್ದಾರೆ.

ಇದನ್ನೂ ಓದಿ: Actress Siri: ಸಿಂಪಲ್‌ ಆಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ `ಬಿಗ್‌ ಬಾಸ್‌ ಕನ್ನಡ 10′ ಸ್ಪರ್ಧಿ, ನಟಿ ಸಿರಿ!

ಸಿರಿ ಅವರಿಗೆ ಮೈತುಂಬ ಅರಿಷಿಣ ಹಚ್ಚಿರುವ ವಿಡಿಯೊ ವೈರಲ್ ಆಗಿದೆ. ಇದು ಸಿನಿಮಾ ಅಥವಾ ಧಾರಾವಾಹಿ ಶೂಟಿಂಗ್ ಇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ ಸಿರಿ ಅವರು ರಿಯಲ್ ಲೈಫ್‌ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ಹುಡುಗ ಯಾರು ಎಂಬುದು ಇನ್ನೂ ರಿವೀಲ್‌ ಆಗಿಲ್ಲ. ಹಾಗೇ ಸಿರಿ ಕೂಡ ಎಲ್ಲಿಯೂ ಪೋಸ್ಟ್‌ ಶೇರ್‌ ಮಾಡಿಕೊಂಡಿಲ್ಲ. ಸಿರಿ ಅವರಿಗೆ ಈಗ 40 ವರ್ಷ ವಯಸ್ಸು ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಕಲರ್ಸ್‌ ಕನ್ನಡದ ʻರಾಮಾಚಾರಿʼ ಧಾರಾವಾಹಿಯಲ್ಲಿ ನಟಿ ಬಣ್ಣ ಹಚ್ಚಿದ್ದರು. ಈಗ ಪರಭಾಷೆಯ ಕಿರುತೆರೆಯಲ್ಲಿಯೂ ಮಿಂಚುತ್ತಿದ್ದಾರೆ. ಕೆಲ ಸಿನಿಮಾಗಳಲ್ಲಿ ಕೂಡ ಸಿರಿ ಅವರು ನಟಿಸಿದ್ದಾರೆ. 30 ವರ್ಷಗಳ ಕಾಲ ಕನ್ನಡ ಕಿರುತೆರೆಯಲ್ಲಿ ಸಿರಿವಂತೆಯಾಗಿ ಮೆರೆದ ಸಿರಿ ಯಾಕೆ ಮದುವೆಯಾಗಲಿಲ್ಲ ಎಂದು ನೆಟ್ಟಿಗರು ನಟಿಗೆ ಹಲವು ಬಾರಿ ಪ್ರಶ್ನೆ ಮಾಡಿದ್ದೂ ಇದೆ.

ಬಿಗ್‌ ಬಾಸ್‌ ವೇದಿಕೆಯಲ್ಲಿ ಈ ಬಗ್ಗೆ ಸಿರಿ ಮಾತನಾಡಿದ್ದು ಇದೆ. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು.

ಬಿಗ್‌ಬಾಸ್‌ ಮನೆಗೆ ಇವರ ವ್ಯಕ್ತಿತ್ವ ಹೊಂದುವುದಿಲ್ಲ’, ‘ಯಾವುದರಲ್ಲಿಯೂ ಅಷ್ಟಾಗಿ ತೊಡಗಿಕೊಳ್ಳುವುದಿಲ್ಲ’ ‘ಟಾಸ್ಕ್‌ಗಳಲ್ಲಿ ಪರ್ಫಾರ್ಮ್‌ ಮಾಡಿಲ್ಲ’ ಇಂಥ ಮಾತುಗಳನ್ನೆಲ್ಲ ಮನೆಯ ಸದಸ್ಯರಿಂದ ಕೇಳುತ್ತಲೇ ಬಿಗ್‌ಬಾಸ್‌ ಸೀಸನ್‌ನ ಮುಕ್ಕಾಲು ದಾರಿಯನ್ನು ಕ್ರಮಿಸಿ ಸೈ ಎನಿಸಿಕೊಂಡಿದ್ದರು ಸಿರಿ.

Continue Reading
Advertisement
b nagendra valmiki corporation scam 2
ಕ್ರೈಂ3 mins ago

Valmiki Corporation Scam: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಮತ್ತೆ 5 ದಿನ ಇಡಿ ಕಸ್ಟಡಿಗೆ

INDW vs PAKW
ಕ್ರೀಡೆ10 mins ago

INDW vs PAKW: ನಾಳೆಯಿಂದ ಮಹಿಳಾ ಏಷ್ಯಾ ಕಪ್​; ಭಾರತಕ್ಕೆ ಪಾಕ್​ ಎದುರಾಳಿ

gt world mall assembly live
ಪ್ರಮುಖ ಸುದ್ದಿ10 mins ago

GT World Mall: ರೈತರಿಗೆ ಅವಮಾನ ಮಾಡಿದ ಜಿಟಿ ಮಾಲ್‌ಗೆ ಬೀಗ ಹಾಕಲು ಸಾಧ್ಯವಿಲ್ಲ! ಸಚಿವರ ಮಾತಿಗೆ ಬೆಲೆ ಇಲ್ವಾ?

Actor Darshan Judicial Custody Extended Till Aug 1
ಸ್ಯಾಂಡಲ್ ವುಡ್20 mins ago

Actor Darshan: ದರ್ಶನ್‌ &ಗ್ಯಾಂಗ್‌ಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ; ಕಾರಣಗಳು ಹೀಗಿವೆ!

Raghaveshwarashree Chaturmasya at Ashoke from 21st July
ಉತ್ತರ ಕನ್ನಡ20 mins ago

Uttara Kannada News: ಗೋಕರ್ಣದ ʼಅಶೋಕೆʼಯಲ್ಲಿ ಜು. 21ರಿಂದ ರಾಘವೇಶ್ವರಶ್ರೀ ಚಾತುರ್ಮಾಸ್ಯ

Uttara Kannada Landslide
ಮಳೆ26 mins ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Kannada Serials TRP Lakshmi Nivas in Top 3 Lakshmi Baramma at fifth position
ಕಿರುತೆರೆ37 mins ago

Kannada Serials TRP: ಟಾಪ್‌ 3ಯಲ್ಲಿ ʻಲಕ್ಷ್ಮೀ ನಿವಾಸʼ: ಐದನೇ ಸ್ಥಾನದಲ್ಲಿ ʻಲಕ್ಷ್ಮೀ ಬಾರಮ್ಮʻ ಧಾರಾವಾಹಿ

Sameer Nigam
ಕರ್ನಾಟಕ49 mins ago

Sameer Nigam: 25,000 ಜನರಿಗೆ ಉದ್ಯೋಗ ಕೊಟ್ಟಿದ್ದೇನೆ, ನನ್ನ ಮಕ್ಕಳು ರಾಜ್ಯದಲ್ಲಿ ಕೆಲಸ ಮಾಡಬಾರದಾ?: ಫೋನ್‌ಪೇ ಸಿಇಒ ಆಕ್ರೋಶ

Director R Chandru unveiled the teaser of Hagga movie
ಕರ್ನಾಟಕ51 mins ago

Kannada New Movie: ಹಾರರ್ ಜಾನರ್‌ನ ʼಹಗ್ಗʼ ಚಿತ್ರದ ಟೀಸರ್ ಅನಾವರಣ

Dangerous Bike Stunt
Latest1 hour ago

Bike Stunt Video: ಪುಟ್ಟ ಮಗುವನ್ನು ಮುಂದೆ ಕೂರಿಸಿಕೊಂಡು ಬೈಕ್‌ ಸ್ಟಂಟ್‌! ಒದ್ದು ಒಳಗೆ ಹಾಕಿ ಅಂತಿದ್ದಾರೆ ನೆಟ್ಟಿಗರು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Uttara Kannada Landslide
ಮಳೆ26 mins ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

ಟ್ರೆಂಡಿಂಗ್‌