GT World Mall: ರೈತರಿಗೆ ಅವಮಾನ ಮಾಡಿದ ಜಿಟಿ ಮಾಲ್‌ಗೆ ಬೀಗ ಹಾಕಲು ಸಾಧ್ಯವಿಲ್ಲ! ಸಚಿವರ ಮಾತಿಗೆ ಬೆಲೆ ಇಲ್ವಾ? - Vistara News

ಪ್ರಮುಖ ಸುದ್ದಿ

GT World Mall: ರೈತರಿಗೆ ಅವಮಾನ ಮಾಡಿದ ಜಿಟಿ ಮಾಲ್‌ಗೆ ಬೀಗ ಹಾಕಲು ಸಾಧ್ಯವಿಲ್ಲ! ಸಚಿವರ ಮಾತಿಗೆ ಬೆಲೆ ಇಲ್ವಾ?

GT World Mall: ಜಿಟಿ ಮಾಲ್‌ಗೆ ಬೀಗ ಹಾಕುವುದಾದರೆ ಯಾವ ಅಂಶದ ಆಧಾರದಲ್ಲಿ ಬೀಗ ಹಾಕಬೇಕೆನ್ನುವ ಗೊಂದಲಕ್ಕೆ ಬಿಬಿಎಂಪಿ ಅಧಿಕಾರಿಗಳು ಸಿಲುಕಿದ್ದಾರೆ. ನೋಟೀಸ್ ನೀಡದೆ ಏಕಾಏಕಿ ಮಾಲ್‌ಗೆ ಬೀಗ ಹಾಕುವಂತಿಲ್ಲ. ಕೆಎಂಸಿ ಆಕ್ಟ್‌ನಲ್ಲಿ ಈ ಬಗ್ಗೆ ಸ್ಪಷ್ಟ ಉಲ್ಲೇಖವಿದೆ.

VISTARANEWS.COM


on

gt world mall assembly live
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪಂಚೆ ಧರಿಸಿ ಬಂದ ರೈತರಿಗೆ ಒಳಗೆ ಬಿಡದೆ ಅವಮಾನ ಮಾಡಿದ ಜಿಟಿ ವರ್ಲ್ಡ್‌ ಮಾಲ್‌ (GT World Mall) ಅನ್ನು ಒಂದು ವಾರ ಕಾಲ ಮುಚ್ಚಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ (Byrathi Suresh) ಅವರು ಸದನದಲ್ಲಿ ಗುಡುಗಿದ್ದರು. ಆದರೆ ಮಾಲ್‌ ಅನ್ನು ಮುಚ್ಚಿಸಲು ಯಾವುದೇ ಕಾರಣ ಸಿಗದೆ ಬಿಬಿಎಂಪಿ ಅಧಿಕಾರಿಗಳು (BBMP Officers) ಕಂಗಾಲಾಗಿದ್ದಾರೆ. ಹೀಗಾಗಿ, ಸುಮ್ಮನೇ ಬಾಯಿಮಾತಿಗಾಗಿ ಸಚಿವರು ಹೀಗೆ ಹೇಳಿದ್ರಾ ಎಂಬ ಪ್ರಶ್ನೆ ಉದ್ಭವವಾಗಿದೆ.

ಇಂದು ಸ್ಥಳಕ್ಕೆ ಭೇಟಿ ನೀಡಿದ ಬಿಬಿಎಂಪಿ ಅಧಿಕಾರಿಗಳು ಮಾಲ್‌ ಅನ್ನು ಸಮಗ್ರವಾಗಿ ಪರಿಶೀಲಿಸಿದರು. ಆದರೆ ಯಾವುದೇ ಅವ್ಯವಸ್ಥೆ ಅವರಿಗೆ ಕಂಡುಬಂದಿಲ್ಲ. ಆದರೆ, ಮಾಲೀಕರು ಒಂದೂವರೆ ಕೋಟಿ ರೂ ತೆರಿಗೆ ಕಟ್ಟದೆ ಬಾಕಿ ಉಳಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ವಿಚಾರವಾಗಿ ಮಾಲ್‌ಗೆ ನೋಟೀಸ್‌ ನೀಡಬಹುದು ಅಷ್ಟೆ. ಆದರೆ ಮುಚ್ಚುವಂತಿಲ್ಲ.

ಜಿಟಿ ಮಾಲ್‌ಗೆ ಬೀಗ ಹಾಕುವುದಾದರೆ ಯಾವ ಅಂಶದ ಆಧಾರದಲ್ಲಿ ಬೀಗ ಹಾಕಬೇಕೆನ್ನುವ ಗೊಂದಲಕ್ಕೆ ಬಿಬಿಎಂಪಿ ಅಧಿಕಾರಿಗಳು ಸಿಲುಕಿದ್ದಾರೆ. ನೋಟೀಸ್ ನೀಡದೆ ಏಕಾಏಕಿ ಮಾಲ್‌ಗೆ ಬೀಗ ಹಾಕುವಂತಿಲ್ಲ. ಕೆಎಂಸಿ ಆಕ್ಟ್‌ನಲ್ಲಿ ಈ ಬಗ್ಗೆ ಸ್ಪಷ್ಟ ಉಲ್ಲೇಖವಿದೆ. ಮೂರು ಬಾರಿ ನೋಟೀಸ್ ನೀಡಿದ ಮೇಲೆಯೇ ಬೀಗ ಹಾಕುವ ಅವಕಾಶ ಬಿಬಿಎಂಪಿಗೆ ಇದೆ. ಮೂರು ನೋಟೀಸ್‌ಗಳಿಗೆ ವಿವರಣೆ ನೀಡಲು ಅವಕಾಶ ಕೂಡ ನೀಡಬೇಕು‌.
.
ಈ ಪ್ರಕರಣದಲ್ಲಿ ನೊಟೀಸ್ ನೀಡುವ ಪ್ರಕ್ರಿಯೆಯೇ ನಡೆದಿಲ್ಲ. ಹೀಗಿರುವಾಗ ಏಕಾಏಕಿ ಮಾಲ್ ಮುಚ್ಚಲು ಸಾಧ್ಯವಿಲ್ಲ. ನಿಯಮ ಮೀರಿ ನೋಟೀಸ್ ನೀಡಿದರೆ ಮಾಲ್ ಆಡಳಿತದಿಂದ ಮಾನನಷ್ಟ ಮೊಕದ್ದಮೆ ಹೂಡುವ ಸಾಧ್ಯತೆಯೂ ಇದೆ. ಇದರಿಂದ ಬಿಬಿಎಂಪಿ ಅಧಿಕಾರಿಗಳೇ ನಾಳೆ ಕೋರ್ಟ್ ಕಟಕಟೆಯಲ್ಲಿ ನಿಲ್ಲುವ ಆತಂಕ‌ ಇದೆ. ಹೀಗಾಗಿ ರಿಸ್ಕ್ ತೆಗೆದುಕೊಳ್ಳಲು ಬಿಬಿಎಂಪಿ ಅಧಿಕಾರಿಗಳು‌ ಮುಂದಾಗಿಲ್ಲ.

ಆದರೆ ಸಚಿವರ ಆದೇಶ ಪಾಲಿಸಬೇಕಿದ್ದು, ಕಾನೂನಾತ್ಮಕ ಕುಣಿಕೆಯಿಂದ ಹೇಗೆ ಪಾರಾಗಬೇಕು ಎಂಬ ಗೊಂದಲದಲ್ಲಿ ಅಧಿಕಾರಿಗಳಿದ್ದಾರೆ. ಇದುವರೆಗೆ ಸರ್ಕಾರದಿಂದ ಮಾಲ್‌ ಮುಚ್ಚಲು ಯಾವುದೇ ಲಿಖಿತ ಆದೇಶ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಬಿಬಿಎಂಪಿಯ ಅಧಿಕಾರಿಗಳು ಕೇವಲ ಅಂಗಡಿಗಳಿಗೆ ನೋಟೀಸ್ ನೀಡಲು ಪ್ಲಾನ್ ಮಾಡಿಕೊಂಡಿದ್ದಾರೆ. ಸ್ವಚ್ಛತೆ, ಬೆಂಕಿ ಸುರಕ್ಷತೆ ಮೊದಲಾದ ಕೆಲವು ಅನುಬಂಧಗಳ ಅಡಿಯಲ್ಲಿ ನೋಟೀಸ್‌ ನೀಡಬಹುದು.

7 ದಿನ ಮುಚ್ಚಲು ಸೂಚನೆ

ಇಂದು ಆರಂಭವಾದ ಮೂರನೇ ದಿನದ ವಿಧಾನಸಭೆ ಕಲಾಪ ಆರಂಭದಲ್ಲೇ ಈ ವಿಷಯ ಪ್ರಸ್ತಾಪವಾಯಿತು. ಹಲವರು ಸದಸ್ಯರು ರೈತರಿಗೆ ಅವಮಾನ ಆದ ವಿಷಯವನ್ನು ಪ್ರಸ್ತಾಪಿಸಿದರು. ವಿಸ್ತಾರ ನ್ಯೂಸ್‌ ನಿನ್ನೆ ಇಡೀ ದಿನ ಈ ಘಟನೆಯನ್ನು ಪ್ರಸಾರ ಮಾಡಿದ್ದಲ್ಲದೆ, ರೈತರನ್ನು ಮರಳಿ ಜಿಟಿ ಮಾಲ್‌ಗೆ ಕರೆದೊಯ್ದು ಪ್ರವೇಶ ಕೊಡಿಸಿತ್ತು. ಈ ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿತ್ತು. ಕನ್ನಡ ಹಾಗೂ ರೈತಪರ ಸಂಘಟನೆಗಳು ಈ ವಿಚಾರದಲ್ಲಿ ವಿಸ್ತಾರ ನ್ಯೂಸ್‌ನೊಂದಿಗೆ ಕೈಜೋಡಿಸಿದ್ದವು. ನಂತರ ಸಚಿವ ಸಂತೋಷ್‌ ಲಾಡ್‌ (Santosh Lad) ಕೂಡ ಕೂಡ ಈ ವಿಚಾರದಲ್ಲಿ ಮಾಲ್‌ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು.

ವಿಧಾನಸಭೆ ಕಲಾಪದ ಆರಂಭದ ಹೊತ್ತಿಗೆ ಸ್ವತಃ ಸ್ಪೀಕರ್‌ ಯು.ಟಿ ಖಾದರ್‌ (Speaker UT Khader) ಅವರು ಈ ವಿಚಾರ ಎತ್ತಿದರು. ಈ ಬಗ್ಗೆ ಸರ್ಕಾರದ ನಿಲುವನ್ನು ತಿಳಿಸುವಂತೆ ಸೂಚಿಸಿದರು. ಸದಸ್ಯರು ಪಕ್ಷಾತೀತವಾಗಿ ಮಾಲ್‌ ನಡೆಯನ್ನು ತೀವ್ರವಾಗಿ ಖಂಡಿಸಿದರು. ಇದಕ್ಕೆ ಉತ್ತರಿಸಿದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಅವಕಾಶ ಇದೆ. 7 ದಿನಗಳ ವರೆಗೆ ಬಂದ್‌ ಮಾಡಿಸಬಹುದು. ಆದರೆ ಎಚ್ಚರಿಕೆ ನೀಡಿ ಮೂರು ದಿನಗಳ ಕಾಲ ಮಾಲ್ ಬಂದ್ ಮಾಡಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: GT World Mall: ರೈತರಿಗೆ ಅವಮಾನ ಮಾಡಿದ ಜಿಟಿ ಮಾಲ್‌ ವಿರುದ್ಧ ಸಚಿವರು ಗರಂ; ʼಪಂಚೆ ಧರಿಸಿಯೇ ಸಿದ್ದರಾಮಯ್ಯ 7 ವರ್ಷ ರಾಜ್ಯ ಆಳ್ಲಿಲ್ವಾ?ʼ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

GT World Mall : ಜಿಟಿ ಮಾಲ್​ ಏಳು ದಿನಗಳ ಕಾಲ ಬಂದ್​, ಮಾಲೀಕರಿಂದಲೇ ಸ್ವಯಂಪ್ರೇರಿತ ಕ್ರಮ

GT World Mall :ಪಂಚೆ ಧರಿಸಿ ಬಂದ ರೈತರೊಬ್ಬರಿಗೆ ಮಾಲ್​ ಒಳಗೆ ಬಿಡದೆ ಅವಮಾನ ಮಾಡಿದ ಹಿನ್ನೆಲೆಯಲ್ಲಿ ಜಿಟಿ ವರ್ಲ್ಡ್‌ ಮಾಲ್‌ ವಿವಾದದ ಕೇಂದ್ರ ಬಿಂದುವಾಗಿತ್ತು. ಮಾಲ್​ ಒಂದು ವಾರ ಕಾಲ ಮುಚ್ಚಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಅವರು ಸದನದಲ್ಲಿ ಗುಡುಗಿದ್ದರು. ಅಂತೆಯೇ ಸಂಜೆ ವೇಳೆಗೆ ಮಾಲೀಕರೇ ಅದಕ್ಕೆ ಸಮ್ಮತಿಸಿದ್ದಾರೆ.

VISTARANEWS.COM


on

GT World Mall
Koo

ಬೆಂಗಳೂರು: ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿಟಿ ವರ್ಲ್ಡ್​ ಮಾಲ್​ (GT World Mall) ಏಳು ದಿನಗಳ ಕಾಲ ಬಂದ್​ ಆಗಲಿದೆ. ಮಾಲ್​ನ ಮಾಲೀಕರ ಪುತ್ರ ಪ್ರಶಾಂತ್ ಅವರು ಸುದ್ದಿಗೋಷ್ಠಿ ನಡೆಸಿ ಆಗಿರುವ ಘಟನೆಗೆ ಕ್ಷಮೆ ಕೋರಿದರಲ್ಲದೆ, ನಗರಾಭಿವೃದ್ಧಿ ಸಚಿವರ ಸೂಚನೆ ಪ್ರಕಾರ ಏಳು ದಿನಗಳ ಕಾಲ ಬಂದ್ ಮಾಡುವುದಾಗಿ ಹೇಳಿದ್ದಾರೆ.

ಪಂಚೆ ಧರಿಸಿ ಬಂದ ರೈತರೊಬ್ಬರಿಗೆ ಮಾಲ್​ ಒಳಗೆ ಬಿಡದೆ ಅವಮಾನ ಮಾಡಿದ ಹಿನ್ನೆಲೆಯಲ್ಲಿ ಜಿಟಿ ವರ್ಲ್ಡ್‌ ಮಾಲ್‌ ವಿವಾದದ ಕೇಂದ್ರ ಬಿಂದುವಾಗಿತ್ತು. ಮಾಲ್​ ಒಂದು ವಾರ ಕಾಲ ಮುಚ್ಚಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಅವರು ಸದನದಲ್ಲಿ ಗುಡುಗಿದ್ದರು. ಅಂತೆಯೇ ಸಂಜೆ ವೇಳೆಗೆ ಮಾಲೀಕರೆ ಅದಕ್ಕೆ ಸಮ್ಮತಿಸಿದ್ದಾರೆ.

ನಮ್ಮ ಮಾಲ್ ನಡೆಯಬಾರದಂಥ ಘಟನೆ ನಡೆದಿದೆ. ಹೊಸ ಸಿಬ್ಬಂದಿಯಿಂದ ಪ್ರಮಾದವಾಗಿದೆ. ಮಾಲ್​ನ ಮಾಲೀಕನಾಗಿ ನಾನು ಈ ಘಟನೆಗೆ ಕ್ಷಮೆ ಕೇಳುತ್ತಿದ್ದೇನೆ. ತಪ್ಪು ಮಾಡಿದ ಸಿಬ್ಬಂದಿಯನ್ನ ಕೆಲಸದಿಂದ ತೆಗೆದಿದ್ದೇವೆ. ಈ ರೀತಿಯ ಅಪಮಾನ ನಡೆಯಬಾರದಿತ್ತು. ನಮ್ಮ ತಂದೆಯವರೂ ಮಾತಾಡಿ ಕ್ಷಮೆ ಕೇಳಿದ್ದಾರೆ ಎಂದು ಪ್ರಶಾಂತ್ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ನಮಗೆ ಬಿಬಿಎಂಪಿ ಕಡೆಯಿಂದ ನೋಟಿಸ್ ಜಾರಿಯಾಗಿದೆ. ನಡೆದಿರುವ ಘಟನೆ ಬಗ್ಗೆ ಮಾಹಿತಿ ಕೊಡಿ ಅಂತಾ ನೋಟಿಸ್ ಕೊಟ್ಟಿದ್ದಾರೆ. ಒಂದು ವರ್ಷದ 1. 70 ಕೋಟಿ ತೆರಿಗೆ ಬಾಕಿ ಇದೆ. ಆದರೆ, ಪಾಲಿಕೆ ಘಟನೆ ಬಗ್ಗೆ ಮಾಹಿತಿ ಕೊಡಿ ಅಂತಾ ನೋಟಿಸ್ ಕೊಟ್ಟಿದೆ. ಇದೀಗ ನಾವು ಸ್ವಯಂಪ್ರೇರಿತವಾಗಿ ಕ್ಲೋಸ್ ಮಾಡುತ್ತಿದ್ದೇವೆ ಎಂದು ಪ್ರಶಾಂತ್ ಹೇಳಿದ್ದಾರೆ.

ಮುಂದಿನ ಸೂಚನೆ ಬರೋ ತನಕ ಮಾಲ್ ಬಂದ್ ಮಾಡ್ತೀವೆ. ಬಿಬಿಎಂಪಿಗೆ ಘಟನೆ ಬಗ್ಗೆ ಮಾಹಿತಿ ಕೊಟ್ಟಿದ್ದೇವೆ. ಫಕೀರಪ್ಪ ಅವರನ್ನು ವೈಯಕ್ತಿಕವಾಗಿ ಕರೆದು ಕ್ಷಮೆ ಕೇಳಿದ್ದೇವೆ. ಈ ಬಗ್ಗೆ ವಿಮರ್ಶೆ ನಡೆಸಲು ನಮಗೆ 2-3 ದಿನ ಕಾಲಾವಕಾಶ ಬೇಕಾಗಿದೆ. ಇನ್ನಷ್ಟು ವಿವರಣೆ ನೀಡಲು 2ರಿಂದ 3 ದಿನ ಸಮಯ ಬೇಕಾಗುತ್ತದೆ ಎಂದು ಪ್ರಶಾಂತ್ ಹೇಳಿದರು.

ಗೇಟ್ ಬಾಗಿಲು ಬಂದ್​

ಜಿಟಿ ಮಾಲ್ ಅನ್ನು ಅಧಿಕಾರಿಗಳು ಬಂದ್ ಮಾಡುವ ಮೊದಲೇ ಅಲ್ಲಿನ ಸಿಬ್ಬಂದಿಗಳೇ ಬಂದ್ ಮಾಡಿಸಿದ್ದಾರೆ. ಮಳಿಗೆಗಳ ಬಳಿಗೆ ತೆರಳಿದ ಮಾಲ್​ ಸಿಬ್ಬಂದಿ ಅಂಗಡಿ ಬಂದ್ ಮಾಡುವಂತೆ ಕೋರಿದ್ದಾರೆ. ಅದೇ ರೀತಿ ಒಳಗಿರುವ ಪಿವಿಆರ್​ ಸಿನಿಮಾ ಮಂದಿಗಳನ್ನು ಒಂದೊಂದಾಗಿ ಬಂದ್ ಮಾಡಿಸಲಾಗಿದೆ. ಸಿನಿಮಾ ಚಾಲನೆಯಲ್ಲಿರುವ ಸ್ಕ್ರಿನ್ ಬಿಟ್ಟು ಉಳಿದೆಲ್ಲ ಸ್ಕ್ರೀನ್​ಗಳನ್ನು ಬಂದ್ ಮಾಡಿಸಲಾಗಿದೆ. ಜತೆಗೆ ಒಳಗಿರುವ ಎಲ್ಲ ಗ್ರಾಹಕರನ್ನು ಹೊರಕ್ಕೆ ಕಳುಹಿಸಲಾಗಿದೆ.

ಇದನ್ನೂ ಓದಿ: Karnataka Job Reservation : ಹಗರಣಗಳನ್ನು ಮುಚ್ಚಿಡಲು ಕನ್ನಡಿಗರಿಗೆ ಮೀಸಲು ವಿಚಾರ ಮುನ್ನೆಲೆಗೆ ತಂದ ಸರ್ಕಾರ; ಸಿಟಿ ರವಿ ಆರೋಪ

ಕಂದಾಯ ವಿಭಾಗ ಆಸ್ತಿತೆರಿಗೆ ಬಾಕಿ ಉಳಿಸಿಕೊಂಡ ಬಗ್ಗೆ ನೋಟಿಸ್ ಕೊಟ್ಟಿದೆ. ಆರೋಗ್ಯ ಇಲಾಖೆ ಕಡೆಯಿಂದಲೂ ನೋಟಿಸ್ ಜಾರಿಯಾಗಿದೆ ಎಂಬುದಾಗಿ ಪ್ರಶಾಂತ್ ಮಾಹಿತಿ ನೀಡಿರು.

ಕಲಾಪದಲ್ಲಿ ಬಂದ್​ಗೆ ಸೂಚನೆ

ಗುರುವಾರ ಆರಂಭವಾದ ಮೂರನೇ ದಿನದ ವಿಧಾನಸಭೆ ಕಲಾಪ ಆರಂಭದಲ್ಲೇ ಈ ವಿಷಯ ಪ್ರಸ್ತಾಪವಾಯಿತು. ಹಲವರು ಸದಸ್ಯರು ರೈತರಿಗೆ ಅವಮಾನ ಆದ ವಿಷಯವನ್ನು ಪ್ರಸ್ತಾಪಿಸಿದರು. ವಿಸ್ತಾರ ನ್ಯೂಸ್‌ ನಿನ್ನೆ ಇಡೀ ದಿನ ಈ ಘಟನೆಯನ್ನು ಪ್ರಸಾರ ಮಾಡಿದ್ದಲ್ಲದೆ, ರೈತರನ್ನು ಮರಳಿ ಜಿಟಿ ಮಾಲ್‌ಗೆ ಕರೆದೊಯ್ದು ಪ್ರವೇಶ ಕೊಡಿಸಿತ್ತು. ಈ ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿತ್ತು. ಕನ್ನಡ ಹಾಗೂ ರೈತಪರ ಸಂಘಟನೆಗಳು ಈ ವಿಚಾರದಲ್ಲಿ ವಿಸ್ತಾರ ನ್ಯೂಸ್‌ನೊಂದಿಗೆ ಕೈಜೋಡಿಸಿದ್ದವು. ನಂತರ ಸಚಿವ ಸಂತೋಷ್‌ ಲಾಡ್‌ (Santosh Lad) ಕೂಡ ಕೂಡ ಈ ವಿಚಾರದಲ್ಲಿ ಮಾಲ್‌ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು.

ವಿಧಾನಸಭೆ ಕಲಾಪದ ಆರಂಭದ ಹೊತ್ತಿಗೆ ಸ್ವತಃ ಸ್ಪೀಕರ್‌ ಯು.ಟಿ ಖಾದರ್‌ (Speaker UT Khader) ಅವರು ಈ ವಿಚಾರ ಎತ್ತಿದರು. ಈ ಬಗ್ಗೆ ಸರ್ಕಾರದ ನಿಲುವನ್ನು ತಿಳಿಸುವಂತೆ ಸೂಚಿಸಿದರು. ಸದಸ್ಯರು ಪಕ್ಷಾತೀತವಾಗಿ ಮಾಲ್‌ ನಡೆಯನ್ನು ತೀವ್ರವಾಗಿ ಖಂಡಿಸಿದರು. ಇದಕ್ಕೆ ಉತ್ತರಿಸಿದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಅವಕಾಶ ಇದೆ. 7 ದಿನಗಳ ವರೆಗೆ ಬಂದ್‌ ಮಾಡಿಸಬಹುದು. ಆದರೆ ಎಚ್ಚರಿಕೆ ನೀಡಿ ಮೂರು ದಿನಗಳ ಕಾಲ ಮಾಲ್ ಬಂದ್ ಮಾಡಿಸಲಾಗುವುದು ಎಂದು ತಿಳಿಸಿದರು.

Continue Reading

Latest

Viral Video: ಗರ್ಭಗುಡಿಗೆ ನುಗ್ಗಿ ದೇವರ ಕಿರೀಟಕ್ಕೇ ಕನ್ನ ಹಾಕಿದ ಕಳ್ಳ! ಪರಾರಿಯಾಗುವಾಗ ಮಾಡಿದ್ದೇನು? ವಿಡಿಯೊ ನೋಡಿ!

Viral Video: ವ್ಯಕ್ತಿಯೊಬ್ಬ ಭಕ್ತನಂತೆ ಸೋಗು ಹಾಕಿಕೊಂಡು ದೇವಾಲಯಕ್ಕೆ ಪ್ರವೇಶಿಸಿ ದೇವರ ತಲೆಯಲ್ಲಿರುವ ಬೆಳ್ಳಿಯ ಕಿರೀಟಕ್ಕೆ ಕನ್ನ ಹಾಕಿದ್ದಾನೆ. ಕದ್ದು ಓಡಿಹೋಗುವ ಮೊದಲು ಅದನ್ನು ಚೀಲದಲ್ಲಿ ಇರಿಸಿ, ದೇವರ ವಿಗ್ರಹಕ್ಕೆ ಕೈಮುಗಿದು ಪ್ರಾರ್ಥಿಸುತ್ತಾ ಕ್ಷಮೆಯಾಚಿಸುವ ವಿಡಿಯೊವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಶಂಕಿತನನ್ನು ಪತ್ತೆಹಚ್ಚಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

VISTARANEWS.COM


on

Viral Video
Koo

ಮುಂಬೈ: ಸಾಮಾನ್ಯವಾಗಿ ಕಳ್ಳರು ಕಳ್ಳತನ ಮಾಡಲು ಮನೆ, ಅಂಗಡಿಗಳನ್ನು ಆರಿಸಿಕೊಳ್ಳುತ್ತಾರೆ. ಆದರೆ ದೇವಸ್ಥಾನದಲ್ಲಿ ಕಳ್ಳತನ ಮಾಡಲು ಕೆಲವು ಕಳ್ಳರು ಹೆದರುತ್ತಾರೆ. ಯಾಕೆಂದರೆ ಇದರಿಂದ ದೇವರ ಶಾಪಕ್ಕೆ ಗುರಿಯಾಗಿ ಆಪತ್ತಾಗಬಹುದೆಂಬ ಭಯವಿರುತ್ತದೆ. ಆದರೆ ಇಲ್ಲೊಬ್ಬ ಕಳ್ಳ ಕಳ್ಳತನ ಮಾಡಲು ದೇವಸ್ಥಾನಕ್ಕೆ ನುಗ್ಗಿದಲ್ಲದೇ ಸೀದಾ ದೇವರ ಬೆಳ್ಳಿ ಕಿರೀಟಕ್ಕೆ ಕೈ ಹಾಕಿದ್ದಾನೆ. ಆತನ ಕಳ್ಳತನದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಮುಂಬೈನ ಬೋರಿವಲಿಯ ದತ್ತಪ್ಡಾ ಪ್ರದೇಶದ ವಿಠ್ಠಲ ದೇವಸ್ಥಾನದಲ್ಲಿ ಈ ಕಳ್ಳತನದ ಘಟನೆ ನಡೆದಿದ್ದು, ದೇವಸ್ಥಾನದ ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ವಿಡಿಯೊದಲ್ಲಿ ವ್ಯಕ್ತಿಯೊಬ್ಬ ಭಕ್ತನಾಗಿ ದೇವಾಲಯಕ್ಕೆ ಪ್ರವೇಶಿಸಿ ದೇವರ ತಲೆಯಲ್ಲಿರುವ ಬೆಳ್ಳಿಯ ಕಿರೀಟಕ್ಕೆ ಕನ್ನ ಹಾಕಿದ್ದಾನೆ. ಕದ್ದು ಓಡಿಹೋಗುವ ಮೊದಲು ಅದನ್ನು ಚೀಲದಲ್ಲಿ ಇರಿಸಿ, ದೇವರ ವಿಗ್ರಹಕ್ಕೆ ಕೈಮುಗಿದು ಪ್ರಾರ್ಥಿಸುತ್ತಾ ಕ್ಷಮೆಯಾಚಿಸುವುದು ಕಂಡು ಬಂದಿದೆ. ವೈರಲ್ ಆಗಿರುವ ಸಿಸಿಟಿವಿ ವಿಡಿಯೊದಲ್ಲಿ, ಜುಲೈ 17ರ ಬುಧವಾರ ಬೆಳಗ್ಗೆ 10:07ರ ಸುಮಾರಿಗೆ ವ್ಯಕ್ತಿ ದೇವಾಲಯವನ್ನು ಪ್ರವೇಶಿಸುವುದನ್ನು ಕಾಣಬಹುದು. ಈ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಶಂಕಿತನನ್ನು ಪತ್ತೆಹಚ್ಚಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

ದೇವಸ್ಥಾನದಲ್ಲಿ ಕಳ್ಳತನ ಪ್ರಕರಣ ಇದೇ ಮೊದಲಲ್ಲ. ಇದಕ್ಕೂ ಮೊದಲು ಹಲವು ಕಡೆ ದೇವಸ್ಥಾನದಲ್ಲಿ ಕಳ್ಳರು ದರೋಡೆ ಮಾಡಿದ್ದಾರೆ. ನವಿ ಮುಂಬೈನ ಐರೋಲಿ ಪ್ರದೇಶದ ದತ್ ಮಂದಿರದಲ್ಲಿ ಫೆಬ್ರವರಿ 21 ಮತ್ತು ಫೆಬ್ರವರಿ 22 ರ ಮಧ್ಯರಾತ್ರಿ ಕಳ್ಳರು ದೇವಾಲಯಕ್ಕೆ ನುಗ್ಗಿ ಆವರಣದಲ್ಲಿರುವ ದೇಣಿಗೆ ಪೆಟ್ಟಿಗೆಯಿಂದ 20,000 ರೂ.ಗಳನ್ನು ಕದ್ದ ನಂತರ ನವೀ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: 8 ವರ್ಷದ ಮಗನ ತಲೆ ನೆಲಕ್ಕೆ ಅಪ್ಪಳಿಸಿ, ಮೈಕೈಯೆಲ್ಲ ಕಚ್ಚಿದ ತಾಯಿ; ವಿಡಿಯೊ ನೋಡಿ ಜನಾಕ್ರೋಶ

ಅಲ್ಲದೇ ಜೂನ್ 20ರಂದು ಗರ್ಲದಿನ್ನೆ ಮಂಡಲದ ಕೋಟಂಕ ಗ್ರಾಮದ ಬಳಿಯ ಗುಂಟಿ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಳ್ಳರು ದೇವಾಲಯದ ಬೀಗಗಳನ್ನು ಮುರಿದು 16 ಕೆಜಿ ಬೆಳ್ಳಿ ಆಭರಣಗಳು, 8 ತೊಲ ಚಿನ್ನದ ಆಭರಣಗಳು ಮತ್ತು 13 ಲಕ್ಷ ರೂ.ಮೌಲ್ಯದ ಎರಡು ಹುಂಡಿಗಳನ್ನು ಮುರಿದು 15,000 ರೂ. ನಗದು ದೋಚಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಅಂತರರಾಜ್ಯ ಕಳ್ಳರ ಗುಂಪನ್ನು ಪೊಲೀಸರು ಬಂಧಿಸಿದ್ದರು.

Continue Reading

Latest

Dog Attacks: ಬಡಪಾಯಿ ಡೆಲಿವರಿ ಮ್ಯಾನ್‌ನನ್ನು ಭೀಕರವಾಗಿ ಕಚ್ಚಿದ ಶ್ರೀಮಂತರ ಮನೆಯ ನಾಯಿಗಳು; ವಿಡಿಯೊ ಇದೆ

Dog Attacks: ವೈದ್ಯರೊಬ್ಬರ ಮನೆಗೆ ಡೆಲಿವರಿ ಮಾಡಲು ಬಂದ ವ್ಯಕ್ತಿಯ ಮೇಲೆ ಅವರ ಮನೆಯಲ್ಲಿ ಸಾಕಿದ ಎರಡು ಪಿಟ್‌ಬುಲ್‌ ನಾಯಿಗಳು ಭೀಕರವಾಗಿ ದಾಳಿ ಮಾಡಿವೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಂಧ್ಯಾ ರಾವ್ ಎಂಬ ವೈದ್ಯರ ಮನೆಗೆ ಡೆಲಿವರಿ ನೀಡಲು ಡೆಲಿವರಿ ಮ್ಯಾನ್‌ ಆಟೋದಲ್ಲಿ ಬಂದಿದ್ದಾಗ ಈ ಘಟನೆ ನಡೆದಿದೆ.

VISTARANEWS.COM


on

Dog Attacks
Koo

ವೈದ್ಯರೊಬ್ಬರ ಮನೆಗೆ ಫುಡ್ ಡೆಲಿವರಿ ಮಾಡಲು ಬಂದ ಡೆಲಿವರಿ ಮ್ಯಾನ್ ಮೇಲೆ ಅವರ ಮನೆಯಲ್ಲಿ ಸಾಕಿದ ಎರಡು ಪಿಟ್‌ ಬುಲ್‌ ನಾಯಿಗಳು ದಾಳಿ ಮಾಡಿದ ಘಟನೆ ಛತ್ತೀಸ್‌ಗಢದ ರಾಯ್ಪುರದ ಖಮರ್ದಿಹ್ ಪೊಲೀಸ್ ಠಾಣೆ ವ್ಯಾಪ್ತಿಯ ಅನುಪಮ್ ನಗರದಲ್ಲಿ ನಡೆದಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Dog Attacks) ಆಗಿದೆ. ಇಷ್ಟಾಗಿಯೂ ಆ ನಾಯಿಗಳ ಮಾಲಕಿ, ಡೆಲಿವರ್‌ ಮ್ಯಾನ್‌ನದ್ದೇ ತಪ್ಪು ಎಂದು ಆರೋಪಿಸಿದ್ದಾಳೆ. ಇದು ಜನಾಕ್ರೋಶಕ್ಕೆ ಕಾರಣವಾಗಿದೆ.

ನಾಯಿಗಳ ದಾಳಿಗೆ ಒಳಗಾದ ಡೆಲಿವರಿ ಮ್ಯಾನ್ ಸಲ್ಮಾನ್ ಎಂಬುದಾಗಿ ತಿಳಿದು ಬಂದಿದೆ. ವಿಡಿಯೊದಲ್ಲಿ ಸಲ್ಮಾನ್‌ ಅನ್ನು ನಾಯಿಗಳು ಕಚ್ಚುತ್ತಿರುವುದು ಕಂಡುಬಂದಿದೆ. ಈ ವೇಳೆ ಅವನು ನೋವಿನಿಂದ ನರಳುತ್ತಿದ್ದು, ಹಾಗೂ ನಾಯಿಗಳಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ. ದುರದೃಷ್ಟವಶಾತ್, ಅಲ್ಲಿ ಯಾರೂ ಕೂಡ ಸಲ್ಮಾನ್‌ ಸಹಾಯಕ್ಕೆ ಬರಲಿಲ್ಲ. ಕೊನೆಗೆ ಬೇರೆ ದಾರಿ ಕಾಣದೇ ಹೊರಗೆ ಓಡಿ ನಾಯಿಗಳಿಂದ ತನ್ನನ್ನು ರಕ್ಷಿಸಿಕೊಳ್ಳಲು ಅಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಹತ್ತಿ ಕುಳಿತು ಜೀವ ಉಳಿಸಿಕೊಂಡಿದ್ದಾನೆ. ನಾಯಿಗಳು ಹೊರಟುಹೋದ ನಂತರ, ಯಾರೋ ಒಬ್ಬ ವ್ಯಕ್ತಿ ಸಲ್ಮಾನ್‌ಗೆ ಕುಡಿಯಲು ನೀರಿನ ಬಾಟಲಿಯನ್ನು ನೀಡಿದ್ದಾರೆ. ಹಾಗೂ ನಂತರ ಸಲ್ಮಾನ್ ಅವರ ಕೈ ಮತ್ತು ಕಾಲುಗಳು ರಕ್ತಸಿಕ್ತವಾಗಿದ್ದು, ಅವರಿಗೆ ರಕ್ತವನ್ನು ಒರೆಸಿಕೊಳ್ಳುವಂತೆ ಮಹಿಳೆಯೊಬ್ಬರು ಬಟ್ಟೆ ತಂದು ಕೊಟ್ಟಿದ್ದಾರೆ.

ಈ ವಿಡಿಯೊ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇದಕ್ಕೆ ಹಲವರು ಕಾಮೆಂಟ್ ಮಾಡಿದ್ದಾರೆ. ನಾಯಿಯ ಮಾಲೀಕನನ್ನು ಜೈಲಿಗೆ ಕಳುಹಿಸಿಬೇಕೆಂದು ಒಬ್ಬರು ಹೇಳಿದ್ದಾರೆ. ಹಾಗೇ ಮತ್ತೊಬ್ಬರು ಅವರು ವೈದ್ಯಕೀಯ ಶುಲ್ಕಗಳನ್ನು ಡೆಲಿವರಿ ಮ್ಯಾನ್‌ಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ವರದಿ ಪ್ರಕಾರ, ಸಂಧ್ಯಾ ರಾವ್ ಎಂಬ ಮಹಿಳೆ ವೃತ್ತಿಯಲ್ಲಿ ವೈದ್ಯರಾಗಿದ್ದಾರೆ. ಡಾ. ಸಂಧ್ಯಾ ರಾವ್ ಅವರು ತಮ್ಮ ಮನೆಯಲ್ಲಿ 3 ನಾಯಿಗಳನ್ನು ಸಾಕಿದ್ದಾರೆ. ಮೂರು ನಾಯಿಗಳಲ್ಲಿ ಎರಡು ಅಪಾಯಕಾರಿ ಪಿಟ್‌ ಬುಲ್‌ ತಳಿಯಾಗಿವೆ. ಶುಕ್ರವಾರ ಡೆಲಿವರಿ ಮ್ಯಾನ್ ಸಂಧ್ಯಾ ರಾವ್ ಅವರ ಮನೆಗೆ ಆಟೋದಲ್ಲಿ ಬಂದಿದ್ದಾಗ ಅವರು ಮನೆಯೊಳಗೆ ಹೋಗಲು ಬಾಗಿಲನ್ನು ತಲುಪಿದ ಕೂಡಲೇ 2 ಪಿಟ್ಬುಲ್ ನಾಯಿಗಳು ಸಲ್ಮಾನ್‌ ಮೇಲೆ ದಾಳಿ ಮಾಡಿದವು. ನಾಯಿಗಳು ಆತನ ಕೈ ಮತ್ತು ಕಾಲುಗಳನ್ನು ತೀವ್ರವಾಗಿ ಕಚ್ಚಿವೆ.

Dog Attacks

ಇದನ್ನೂ ಓದಿ: 8 ವರ್ಷದ ಮಗನ ತಲೆ ನೆಲಕ್ಕೆ ಅಪ್ಪಳಿಸಿ, ಮೈಕೈಯೆಲ್ಲ ಕಚ್ಚಿದ ತಾಯಿ; ವಿಡಿಯೊ ನೋಡಿ ಜನಾಕ್ರೋಶ

ದಾಳಿಯ ನಂತರ ನೆರೆಹೊರೆಯವರು ಸಲ್ಮಾನ್ ಅನ್ನು ಆಸ್ಪತ್ರೆಗೆ ಕರೆದೊಯ್ದರು ಎಂದು ವರದಿಗಳು ತಿಳಿಸಿವೆ. ಅಲ್ಲದೇ ನಾಯಿ ಮಾಲೀಕರು ತಮ್ಮನ್ನು ಕರೆಯದೇ ಒಳಗೆ ಬಂದಿದ್ದಕ್ಕೆ ಹೀಗೆ ಆಗಿರುವುದಾಗಿ ಸಲ್ಮಾನ್‌ ಅನ್ನೇ ದೂಷಿಸಿದ್ದಾರೆ! ಸಲ್ಮಾನ್ ಅವರ ದೂರಿನ ನಂತರ ಸೋಮವಾರ ಬೆಳಗ್ಗೆ ಮುನ್ಸಿಪಲ್ ಕಾರ್ಪೊರೇಷನ್ ತಂಡವು ವೈದ್ಯರ ಮನೆಗೆ ನಾಯಿಗಳನ್ನು ಹಿಡಿಯಲು ಬಂದಿದ್ದರು. ಆದರೆ ಬರಿಗೈಯಲ್ಲಿ ವಾಪಸ್‌ ಹೋಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

Continue Reading

ಪ್ರಮುಖ ಸುದ್ದಿ

KL Rahul : ಕೊರಗಜ್ಜನ ಆದಿ ಸ್ಥಾನಕ್ಕೆಭೇಟಿ ನೀಡಿದ ಕೆ. ಎಲ್​ ರಾಹುಲ್​, ಅಥಿಯಾ ಶೆಟ್ಟಿ ದಂಪತಿ, ವಿಡಿಯೊ ವೈರಲ್

ಕೊರಗಜ್ಜ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಅಪಾರ ಭಕ್ತರನ್ನು ಹೊಂದಿರುವ ದೈವ. ಇದೀಗ ಆ ದೈವದ ಕಾರಣಿಕ ಜಿಲ್ಲೆಯ ಗಡಿದಾಡಿದೆ. ದೇಶಾದ್ಯಂತ ನಾನಾ ಭಕ್ತರು ಅಭಯ ಕೋರಿಕೊಂಡು ಕೊರಗ್ಗಜನ ದೈವಸ್ಥಾನಕ್ಕೆ ಭೇಟಿ ನೀಡುತ್ತಾರೆ. ಅಂತೆಯೇ KL
KL Rahul:ಕರ್ನಾಟಕದ ನಾನಾ ಕಡೆಗೆ ಪ್ರವಾಸ ಹೊರಟಿರುವ ಕೆ. ಎಲ್​ ರಾಹುಲ್ ಅವರು ಪತ್ನಿ ಹಾಗೂ ಬಾಮೈದ ಅಹಾನ್​ ಶೆಟ್ಟಿ ಅವರೊಂದಿಗೆ ಕೊರಗಜ್ಜನ ಆದಿಸ್ಥಾನಕ್ಕೆ ಭೇಟಿ ನೀಡಿದ್ದಾರೆ.

VISTARANEWS.COM


on

KL Rahul
Koo

ಬೆಂಗಳೂರು: ಭಾರತ ತಂಡದ ಸ್ಟಾರ್ ಬ್ಯಾಟರ್​ ಕೆ. ಎಲ್​ ರಾಹುಲ್ (KL Rahul)​ ರಾಜ್ಯದ ವಿವಿಧ ದೇಗುಲಗಳಿಗೆ ಭೇಟಿ ನೀಡುತ್ತಿದ್ದಾರೆ. ಅಂತೆಯೇ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಕೊರಗಜ್ಜ ದೈವದ ಆದಿ ಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಜಿಲ್ಲೆಯ ಕುತ್ತಾರಿನ ದೆಕ್ಕಾಡು ಎಂಬಲ್ಲಿರುವ ಆದಿಸ್ಥಾನಕ್ಕೆ ಭೇಟಿ ನೀಡಿದ ಅವರು ಅಲ್ಲಿನ ಮುಖ್ಯಸ್ಥರ ಆಶೀರ್ವಾದ ಪಡೆಕೊಂಡಿದ್ದಾರೆ. ಅವರ ಭೇಟಿ ನೀಡಿರುವ ವಿಡಿಯೊ ಇದೀಗ ವೈರಲ್ ಆಗಿದೆ.

ಕೊರಗಜ್ಜ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಅಪಾರ ಭಕ್ತರನ್ನು ಹೊಂದಿರುವ ದೈವ. ಇದೀಗ ಆ ದೈವದ ಕಾರಣಿಕ ಜಿಲ್ಲೆಯ ಗಡಿದಾಡಿದೆ. ದೇಶಾದ್ಯಂತ ನಾನಾ ಭಕ್ತರು ಅಭಯ ಕೋರಿಕೊಂಡು ಕೊರಗ್ಗಜನ ದೈವಸ್ಥಾನಕ್ಕೆ ಭೇಟಿ ನೀಡುತ್ತಾರೆ. ಅಂತೆಯೇ ಕರ್ನಾಟಕದ ನಾನಾ ಕಡೆಗೆ ಪ್ರವಾಸ ಹೊರಟಿರುವ ಕೆ. ಎಲ್​ ರಾಹುಲ್ ಅವರು ಪತ್ನಿ ಹಾಗೂ ಬಾಮೈದ ಅಹಾನ್​ ಶೆಟ್ಟಿ ಅವರೊಂದಿಗೆ ಕೊರಗಜ್ಜನ ಆದಿಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: Virat Kohli : ವಿರಾಟ್​ ಕೊಹ್ಲಿಯನ್ನು ಅವಮಾನಿಸಿದ ಅಮಿತ್​ ಮಿಶ್ರಾ ಬೆಂಡೆತ್ತಿದ ಯಶ್​ ದಯಾಳ್​

ಬಪ್ಪನಾಡು ದುರ್ಗಾಪರಮೇಶ್ವರಿ ದೇಗುಲಕ್ಕೆ ಕ್ರಿಕೆಟಿಗ ಕೆ. ಎಲ್​ ರಾಹುಲ್​ ದಂಪತಿ ಭೇಟಿ

ಮಂಗಳೂರು: ಭಾರತ ತಂಡದ ಬಲಗೈ ಬ್ಯಾಟರ್ ಹಾಗೂ ಸ್ಟಾರ್ ಆಟಗಾರ ಕೆ.ಎಲ್ ರಾಹುಲ್ (KL Rahul) ಇಲ್ಲಿನ ಐತಿಹಾಸಿಕ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಭಾನುವಾರ ಭೇಟಿ ನೀಡಿದ್ದಾರೆ. ಪತ್ನಿ ಅತಿಯಾ ಶೆಟ್ಟಿ ಅವರ ಜತೆ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ನೆರವೇರಿಸಿದರು. ಬಪ್ಪನಾಡು ಕ್ಷೇತ್ರವು ಮಂಗಳೂರು ನಗರದ ಹೊರವಲಯದ ಮುಲ್ಕಿ ಸಮೀಪ ಇದೆ. ದೇಗುಲಕ್ಕೆ ಭೇಟಿ ನೀಡಿದ ದಂಪತಿಗೆ ದೇವಾಲಯದ ವತಿಯಿಂದ ವಿಶೇಷ ಗೌರವ ಸಲ್ಲಿಸಲಾಯಿತು.

ವಿಶ್ವ ಕಪ್​ ತಂಡದಲ್ಲಿ ಅವಕಾಶ ಪಡೆಯದೇ ಕೆ. ಎಲ್ ರಾಹುಲ್​ ಮುಂಬರುವ ಶ್ರೀಲಂಕಾ ಪ್ರವಾಸದಲ್ಲಿ ಭಾರತ ತಂಡ ಸೇರುವ ನಿರೀಕ್ಷೆಯಿದೆ. ಆದರೆ ಅದಿನ್ನೂ ಸ್ಪಷ್ಟವಾಗಿಲ್ಲ. ತಂಡವೂ ಪ್ರಕಟಗೊಂಡಿಲ್ಲ. ಅವಕಾಶದ ನಿರೀಕ್ಷೆಯಲ್ಲಿರುವ ಅವರೀಗ ಅಮೂಲ್ಯ ಸಮಯವನ್ನು ಕುಟುಂಬದ ಜತೆ ಕಳೆಯುತ್ತಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಅನಂತ್​ ಅಂಬಾನಿ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ದಂಪತಿ ಜತೆಯಾಗಿ ಭಾಗಿಯಾಗಿದ್ದ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿಕಾಣಿಸಿಕೊಂಡಿದ್ದವು.

ಶ್ರೀಲಂಕಾ ಪ್ರವಾಸದ ಏಕ ದಿನ ತಂಡಕ್ಕೆ ಕೆ. ಎಲ್ ರಾಹುಲ್ ನಾಯಕ?
ಜಿಂಬಾಬ್ವೆ ಪ್ರವಾಸದ ಬಳಿಕ ಟೀಮ್ ಇಂಡಿಯಾ ತನ್ನ ಮುಂದಿನ ಕಾರ್ಯಯೋಜನೆಗೆ ಸಜ್ಜಾಗಬೇಕಾಗಿದೆ ವೈಟ್-ಬಾಲ್ ಸರಣಿಗಾಗಿ ಭಾರತ ಬಳಗ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಹೊಸ ಕೋಚ್​ ಗೌತಮ್ ಗಂಭೀರ್ ಅಡಿಯಲ್ಲಿ ಈ ತಂಡ ದ್ವೀಪ ರಾಷ್ಟ್ರಕ್ಕೆ ಹೋಗಲಿದೆ. ಈ ಸರಣಿಯಲ್ಲಿ ಯಾರೆಲ್ಲ ಇರುತ್ತಾರೆ ಎಂಬ ಬಗ್ಗೆ ಇನ್ನೂ ಮಾಹಿತಿ ಇಲ್ಲ. ಆದರೆ, ವರದಿಗಳ ಪ್ರಕಾರ, ಸ್ಟಾರ್ ಬ್ಯಾಟರ್​ ಹಾಗೂ ಕನ್ನಡಿಗ ಕೆಎಲ್ ರಾಹುಲ್ (KL Rahul) ತಂಡಕ್ಕೆ ಮರಳಲಿದ್ದು ತಂಡವನ್ನು ಮುನ್ನಡೆಸುವ ನಿರೀಕ್ಷೆಯಿದೆ.

Continue Reading
Advertisement
Ratna Bhandar
ದೇಶ5 mins ago

Ratna Bhandar: ಒಂದೇ ವಾರದಲ್ಲಿ ಎರಡನೇ ಬಾರಿ ತೆರೆದ ಪುರಿ ಜಗನ್ನಾಥನ ʼರತ್ನ ಭಂಡಾರʼ

GT World Mall
ಪ್ರಮುಖ ಸುದ್ದಿ14 mins ago

GT World Mall : ಜಿಟಿ ಮಾಲ್​ ಏಳು ದಿನಗಳ ಕಾಲ ಬಂದ್​, ಮಾಲೀಕರಿಂದಲೇ ಸ್ವಯಂಪ್ರೇರಿತ ಕ್ರಮ

Viral Video
Latest16 mins ago

Viral Video: ಗರ್ಭಗುಡಿಗೆ ನುಗ್ಗಿ ದೇವರ ಕಿರೀಟಕ್ಕೇ ಕನ್ನ ಹಾಕಿದ ಕಳ್ಳ! ಪರಾರಿಯಾಗುವಾಗ ಮಾಡಿದ್ದೇನು? ವಿಡಿಯೊ ನೋಡಿ!

Dog Attacks
Latest29 mins ago

Dog Attacks: ಬಡಪಾಯಿ ಡೆಲಿವರಿ ಮ್ಯಾನ್‌ನನ್ನು ಭೀಕರವಾಗಿ ಕಚ್ಚಿದ ಶ್ರೀಮಂತರ ಮನೆಯ ನಾಯಿಗಳು; ವಿಡಿಯೊ ಇದೆ

Kashmir Encounter
ದೇಶ36 mins ago

Kashmir Encounter: ಕಾಶ್ಮೀರದಲ್ಲಿ ಮತ್ತೆ ಎನ್‌ಕೌಂಟರ್‌; ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

Monsoon star fashion Actress Mokshita Pai
ಫ್ಯಾಷನ್43 mins ago

Monsoon star fashion: ಮಾನ್ಸೂನ್‌ ಟ್ರಾವೆಲ್‌ ಫ್ಯಾಷನ್‌ಗೆ ಸೈ ಎಂದ ನಟಿ ಮೋಕ್ಷಿತಾ ಪೈ

KL Rahul
ಪ್ರಮುಖ ಸುದ್ದಿ48 mins ago

KL Rahul : ಕೊರಗಜ್ಜನ ಆದಿ ಸ್ಥಾನಕ್ಕೆಭೇಟಿ ನೀಡಿದ ಕೆ. ಎಲ್​ ರಾಹುಲ್​, ಅಥಿಯಾ ಶೆಟ್ಟಿ ದಂಪತಿ, ವಿಡಿಯೊ ವೈರಲ್

CT Ravi
ಪ್ರಮುಖ ಸುದ್ದಿ1 hour ago

Karnataka Job Reservation : ಹಗರಣಗಳನ್ನು ಮುಚ್ಚಿಡಲು ಕನ್ನಡಿಗರಿಗೆ ಮೀಸಲು ವಿಚಾರ ಮುನ್ನೆಲೆಗೆ ತಂದ ಸರ್ಕಾರ; ಸಿಟಿ ರವಿ ಆರೋಪ

World's Largest Tribe
ವಿದೇಶ1 hour ago

Mashco Piro Tribe: ಮೊದಲ ಬಾರಿ ಹೊರ ಜಗತ್ತಿಗೆ ಕಾಣಿಸಿಕೊಂಡ ಮಾಶ್ಕೊ ಪಿರೋ ಬುಡಕಟ್ಟು ಸಮುದಾಯ!

Sensex Jump
ವಾಣಿಜ್ಯ1 hour ago

Sensex Jump: ಷೇರುಪೇಟೆಯಲ್ಲಿ ಸಾರ್ವಕಾಲಿಕ ದಾಖಲೆ ಬರೆದ ಸೆನ್ಸೆಕ್ಸ್, 24,000 ಮೀರಿದ ನಿಫ್ಟಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ3 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

ಟ್ರೆಂಡಿಂಗ್‌