Viral Video: ತಿಂಗಳಲ್ಲಿ 35 ಲಕ್ಷ ರೂ. ಗಳಿಸಿದ ಬೆಂಗಳೂರಿನ 22 ವರ್ಷದ ಯುವಕ; ಹೇಗೆ? - Vistara News

ವೈರಲ್ ನ್ಯೂಸ್

Viral Video: ತಿಂಗಳಲ್ಲಿ 35 ಲಕ್ಷ ರೂ. ಗಳಿಸಿದ ಬೆಂಗಳೂರಿನ 22 ವರ್ಷದ ಯುವಕ; ಹೇಗೆ?

ಗೋವಾದ ಪಿಲಾನಿಯ ಬಿರ್ಲಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಸೈನ್ಸ್ ನಿಂದ ಹೊರಬಂದ ಬೆಂಗಳೂರಿನ 22 ವರ್ಷದ ಯುವಕ ಇಶಾನ್ ಶರ್ಮಾ ಸಣ್ಣ ವಯಸ್ಸಿನಲ್ಲಿ ದೊಡ್ಡ ಮೊತ್ತದ ಆದಾಯ ಪಡೆಯಲು ಹೇಗೆ ಸಾಧ್ಯವಾಯಿತು ಎಂಬುದನ್ನು ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (Viral Video) ಆಗಿದೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿಕ್ಷಣವನ್ನು ಅರ್ಧದಲ್ಲಿ ಕೈಬಿಟ್ಟು ಕಳೆದ ತಿಂಗಳು ಯೂಟ್ಯೂಬ್ ವಿಡಿಯೊ ಮೂಲಕ 35 ಲಕ್ಷ ರೂ. ಗಳಿಸಿರುವುದಾಗಿ ಬೆಂಗಳೂರಿನ (bengaluru) 22 ವರ್ಷದ ಯುವಕ ಇಶಾನ್ ಶರ್ಮಾ (Ishan Sharma) ಇತ್ತೀಚೆಗೆ ಉದ್ಯಮಿಗಳಾದ ಅಶ್ನೀರ್ ಗ್ರೋವರ್ (Ashneer Grover), ಆಶಿಶ್ ಮೊಹಾಪಾತ್ರ (Asish Mohapatra), ಸಾರ್ಥಕ್ ಅಹುಜಾ (Sarthak Ahuja) ಮತ್ತು ಸಂಜೀವ್ ಬಿಖ್‌ಚಂದಾನಿ (Sanjeev Bikhchandani) ಅವರೊಂದಿಗೆ ಪಾಡ್‌ಕಾಸ್ಟ್ ನಲ್ಲಿ ತಿಳಿಸಿದ್ದಾರೆ. ಇದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ (Viral Video) ಆಗಿದೆ.

ಗೋವಾ ಪಿಲಾನಿಯ ಬಿರ್ಲಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಸೈನ್ಸ್ ನಿಂದ ಹೊರಬಂದು ಸಣ್ಣ ವಯಸ್ಸಿನಲ್ಲಿ ಇಷ್ಟು ದೊಡ್ಡ ಮೊತ್ತದ ಆದಾಯ ಪಡೆಯಲು ಹೇಗೆ ಸಾಧ್ಯವಾಯಿತು ಎಂಬುದನ್ನು ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

ಇಶಾನ್ ಅವರು ಕಳೆದ ತಿಂಗಳು 35 ಲಕ್ಷ ರೂ. ಗಳಿಸಿದ್ದಾರೆ. ಆದರೆ ಅವರು, ಇದು ಸಣ್ಣ ಮೊತ್ತ. ಹೊರಗೆ ಹೋಗಿ ಅಷ್ಟು ಸಣ್ಣ ಮೊತ್ತದಿಂದ ಬಿಸಿನೆಸ್ ಪ್ರಾರಂಭಿಸಲು ಸಾಧ್ಯವಿಲ್ಲ ಎಂದೂ ಹೇಳಿದ್ದಾರೆ.

ಆದರೆ ಅವರ ಈ ಹೇಳಿಕೆಗೆ ಅಶ್ನೀರ್ ಗ್ರೋವರ್, ಆಸಿಶ್ ಮೊಹಾಪಾತ್ರ, ಸಾರ್ಥಕ್ ಅಹುಜಾ ಮತ್ತು ಸಂಜೀವ್ ಬಿಖ್‌ಚಂದಾನಿ ಆಶ್ಚರ್ಯಕರ ಪ್ರತಿಕ್ರಿಯೆ ನೀಡಿದ್ದಾರೆ.

ಅವರು ಇಶಾನ್ ಶರ್ಮಾ ಅವರು ಇಷ್ಟೊಂದು ದೊಡ್ಡ ಮೊತ್ತವನ್ನು ಗಳಿಸಲು ಸಾಧ್ಯವೇ ಇಲ್ಲ ಎಂದು ಹೇಳಿದ್ದರು. ಆಗ ಅಶ್ನೀರ್ ಗ್ರೋವರ್, ನಾವು ನಿಮ್ಮ ಕಥೆಯನ್ನು ಕೇಳಬೇಕು ಎಂದು ಆಸಕ್ತಿ ತೋರುತ್ತಾರೆ. ಅಲ್ಲದೇ ತಾವು 22 ವರ್ಷದವರಾಗಿದ್ದಾಗ ಏನನ್ನೂ ಗಳಿಸುತ್ತಿರಲಿಲ್ಲ ಎಂದು ಬಹಿರಂಗಪಡಿಸಿದರು.

Viral Video


ಮತ್ತೊಂದೆಡೆ ಆಶಿಶ್ ಮೊಹಾಪಾತ್ರ ಅವರು ತಿಂಗಳಿಗೆ 35,000 ರೂ. ಪಡೆದಿದ್ದರು ಎಂದು ಹೇಳಿದರೆ ಸಾರ್ಥಕ್ ಅಹುಜಾ ಮತ್ತು ಸಂಜೀವ್ ಬಿಖ್‌ಚಂದಾನಿ ಅವರು ತಿಂಗಳಿಗೆ ಕ್ರಮವಾಗಿ 5,000 ರೂ. ಮತ್ತು 1,500 ರೂ. ಗಳಿಸುತ್ತಿರುವುದಾಗಿ ತಿಳಿಸಿದರು.

ಮಾರ್ಕೆಟಿಂಗ್ ಏಜೆನ್ಸಿ ಮಾರ್ಕಿಟ್‌ಅಪ್ ಅನ್ನು ತನ್ನ ಕಾಲೇಜ್ ಮೇಟ್ ಸರನ್ಶ್ ಆನಂದ್ ಅವರೊಂದಿಗೆ ಸ್ಥಾಪಿಸಿರುವ ಇಶಾನ್ ಶರ್ಮಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಸುಮಾರು 2 ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದಾರೆ. ಈ ಮೂಲಕ ಅವರು ಭಾರೀ ಹಣ ಗಳಿಸಿದ್ದಾರೆ.

ಇವರ ಈ ವಿಡಿಯೋ ವೈರಲ್ ಆದ ಬಳಿಕ 80,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ಇದು ಸಾಕಷ್ಟು ಲೈಕ್ ಗಳನ್ನು ಗಳಿಸಿದೆ.


ಇದಕ್ಕೆ ಹಲವು ಮಂದಿ ಪ್ರತಿಕ್ರಿಯಿಸಿದ್ದು, ನಾನು 23 ವರ್ಷ ವಯಸ್ಸಿನವನಾಗಿದ್ದರೂ ಒಂದು ಪೈಸೆಯನ್ನೂ ಗಳಿಸುತ್ತಿಲ್ಲ. ತಂದೆಯ ಮೇಲೆ ಅವಲಂಬಿತನಾಗಿದ್ದೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Bike Stunt Video: ಪುಟ್ಟ ಮಗುವನ್ನು ಮುಂದೆ ಕೂರಿಸಿಕೊಂಡು ಬೈಕ್‌ ಸ್ಟಂಟ್‌! ಒದ್ದು ಒಳಗೆ ಹಾಕಿ ಅಂತಿದ್ದಾರೆ ನೆಟ್ಟಿಗರು

ಮತ್ತೊಬ್ಬರು ಕಾಮೆಂಟ್ ನಲ್ಲಿ ತಿಂಗಳಿಗೆ 35 ಲಕ್ಷ ರೂ. ಅನ್ನು ಒಂದು ಸಣ್ಣ ಮೊತ್ತ ಎಂದು ಹೇಳುತ್ತಿದ್ದಾರಲ್ಲ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ನನಗೆ ತಿಳಿದಿರುವ ಅತ್ಯಂತ ಶ್ರಮಜೀವಿಗಳಲ್ಲಿ ಅವರು ಒಬ್ಬರು ಎಂದು ಇನ್ನೊಬ್ಬರು ಕಾಮೆಂಟ್ ನಲ್ಲಿ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Kannadiga quota: ಆರ್​ಸಿಬಿ ತಂಡದಲ್ಲೂ ಕನ್ನಡಿಗರಿಗೆ ಮೀಸಲಾತಿ ನೀಡಿ; ಅಭಿಮಾನಿಗಳಿಂದ ಆಗ್ರಹ

Kannadiga quota: ಆರ್​ಸಿಬಿ(RCB Reservation) ತಂಡದಲ್ಲಿಯೂ ಕೂಡ ಮೀಸಲಾತಿ ನೀಡಬೇಕು ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸಿದ್ದಾರೆ.

VISTARANEWS.COM


on

Kannadiga quota
Koo

ಬೆಂಗಳೂರು: ಕರ್ನಾಟಕದಲ್ಲಿರುವ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳ ಆಡಳಿತಾತ್ಮಕ ಹುದ್ದೆಗಳಲ್ಲಿ ಕನ್ನಡಿಗರಿಗೆ(Kannadiga quota) ಶೇ.50 ಹಾಗೂ ಆಡಳಿತಾತ್ಮಕವಲ್ಲದ(Karnataka Jobs Reservation) ಹುದ್ದೆಗಳಲ್ಲಿ ಶೇ.75 ಮೀಸಲಾತಿ (Karnataka Jobs Reservation) ನಿಗದಿಪಡಿಸುವ ಕರಡು ಮಸೂದೆಗೆ ಸರ್ಕಾರ ತಾತ್ಕಾಲಿಕ ತಡೆ ನೀಡಿದೆ. ಈ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಇದೀಗ ಆರ್​ಸಿಬಿ(RCB Reservation) ತಂಡದಲ್ಲಿಯೂ ಕೂಡ ಮೀಸಲಾತಿ ನೀಡಬೇಕು ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸಿದ್ದಾರೆ.

ಹೌದು, ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದಲ್ಲಿ ಪ್ರತಿ ಬಾರಿಯೂ ಕನ್ನಡಿಗ ಆಟಗಾರರಿಗೆ ಅವಕಾಶ ನೀಡುವುದಿಲ್ಲ. ಒಂದೆಡರು ಮಂದಿಯನ್ನು ಹರಾಜಿನಲ್ಲಿ ಖರೀದಿ ಮಾಡಿದರೂ ಕೂಡ ಇವರಿಗೆ ಆಡುವ ಅವಕಾಶ ನೀಡದೆ ಕೇವಲ ಬೆಂಚ್​ ಕೂರಿಸಿಯೇ ಬಿಡುತ್ತಾರೆ. ಪ್ರತಿ ಬಾರಿ ಹರಾಜು ನಡೆದಾಗಲೂ ಆರ್​ಸಿಬಿ ಅಭಿಮಾನಿಗಳು ಕನ್ನಡಿಗ ಆಟಗಾರರ ಕಡೆಗಣನೆಯ ಬಗ್ಗೆ ಫ್ರಾಂಚೈಸಿ ವಿರುದ್ಧ ಆಕ್ರೋಶ ಹೊರಹಾಕುತ್ತಲೇ ಇರುತ್ತಾರೆ. ಇದೀಗ ಕರ್ನಾಟಕದಲ್ಲಿ ಖಾಸಗಿ ಕೈಗಾರಿಕೆಗಳಲ್ಲಿ ಸರ್ಕಾರ ಮೀಸಲಾತಿ ಜಾರಿಗೆ ತರುವ ಚಿಂತನೆ ನಡೆಸಿದ ಬೆನ್ನಲ್ಲೇ ಐಪಿಎಲ್​ನಲ್ಲಿ ಆರ್​ಸಿಬಿ ತಂಡದಲ್ಲಿಯೂ ಶೇ 50ರಷ್ಟು ಮೀಸಲಾತಿ ನೀಡುವಂತೆ ಒತ್ತಾಯಿಸಿದ್ದಾರೆ.

ಆರ್​ಸಿಬಿಯ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಮೀಸಲಾತಿ ಜಾರಿ ಮಾಡುವಂತೆ ಹಲವು ಟ್ವೀಟ್​ ಮಾಡಲಾರಂಭಿಸಿದ್ದಾರೆ. ಐಪಿಎಲ್​ ಆರಂಭವಾಗಿ 17 ಆವೃತ್ತಿ ಕಳೆದರೂ ಕೂಡ ಆರ್​ಸಿಬಿ ಕಪ್​ ಗೆದ್ದಿಲ್ಲ. ನಮ್ಮ ರಾಜ್ಯದ ಅದೆಷ್ಟೋ ಸ್ಟಾರ್​ ಆಟಗಾರರಿದ್ದರೂ ಕೂಡ ಅವರನ್ನು ಆರ್​ಸಿಬಿ ಖರೀದಿ ಮಾಡದೆ ಸರಿಯಾಗಿ ಆಡಲು ಬಾರದ ಆಟಗಾರರಿಗೆ ಅತ್ಯಧಿಕ ಮೊತ್ತದ ಬಿಡ್​ ಮಾಡಿ ತಂಡ ಸೇರಿಸಿಕೊಳ್ಳುತ್ತಿದೆ. ಈ ಬಾರಿಯ ಮೆಗಾ ಹರಾಜಿನಲ್ಲಾದರು ಕನ್ನಡಿಗ ಆಟಗಾರರಿಗೆ ಅವಕಾಶ ನೀಡಲಿದೆಯಾ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ RCB: ಆರ್​ಸಿಬಿ ಕಪ್​ ಗೆಲ್ಲದಿರಲು ನೈಜ ಕಾರಣ ತಿಳಿಸಿದ ತಂಡದ ಮಾಜಿ ಆಟಗಾರ

ಕನ್ನಡಿಗರಿಗೆ ಉದ್ಯೋಗ ಮೀಸಲಾತಿಯ ಕರಡು ಮಸೂದೆ ಜಾರಿಗೆ ತರುವುದಾಗಿ ಘೋಷಿಸಿದ ತಕ್ಷಣವೇ ದೊಡ್ಡ ಪ್ರಮಾಣದಲ್ಲಿ ವಿರೋಧ ವ್ಯಕ್ತಗೊಂಡಿತ್ತು. ಪ್ರಮುಖ ಉದ್ಯಮಿಗಳಾದ ಮೋಹನ್ ದಾಸ್ ಪೈ,ಕಿರಣ್ ಮಜುಂದಾರ್ ಅವರು ಈ ಬಗ್ಗೆ ಆಕ್ಷೇಪ ಎತ್ತಿದ್ದರು. ನೆರೆ ರಾಜ್ಯದ ಸರ್ಕಾರಗಳೂ ಇದರ ಬಗ್ಗೆ ತಕರಾರು ಎತ್ತಿದ್ದವು. ಈ ಒತ್ತಡಕ್ಕೆ ಬಗ್ಗಿರುವ ಸರ್ಕಾರ ಮಸೂದಗೆ ತಾತ್ಕಾಲಿಕ ತಡೆಯನ್ನು ನೀಡಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಮಸೂದೆಯಲ್ಲೇನಿದೆ?

ಈ ಮಸೂದೆಯಲ್ಲಿ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ. 50ರಷ್ಟು ಮತ್ತು ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ. 75ರಷ್ಟು ಸ್ಥಳೀಯರಿಗೆ ಮೀಸಲಾತಿಯನ್ನು ಕಡ್ಡಾಯಗೊಳಿಸುತ್ತದೆ. ಸಾಕಷ್ಟು ಅರ್ಹ ಅಭ್ಯರ್ಥಿಗಳು ಇಲ್ಲದೇ ಇದ್ದರೆ ಸರ್ಕಾರದ ಸಹಯೋಗದೊಂದಿಗೆ ಉದ್ಯಮವು ಮೂರು ವರ್ಷಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ತರಬೇತಿ ನೀಡಿ ಅವರನ್ನು ತೊಡಗಿಸಿಕೊಳ್ಳಬೇಕು. ಪ್ರಸ್ತಾವಿತ ಕಾನೂನಿನ ನಿಬಂಧನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಉದ್ಯಮಕ್ಕೆ ಮೂರು ವರ್ಷಗಳ ಕಾಲಾವಕಾಶ ನೀಡಲು ಸರ್ಕಾರ ಯೋಜನೆ ರೂಪಿಸುತ್ತಿದೆ.

Continue Reading

ವೈರಲ್ ನ್ಯೂಸ್

Viral Video: ಮೂರು ಅಡಿಯ ಕುಳ್ಳನಿಗೆ ಏಳಡಿ ಎತ್ತರದ ಗರ್ಲ್ ಫ್ರೆಂಡ್! ಇವರ ಪ್ರಣಯದ ವಿಡಿಯೊ ನೋಡಿ!

Viral Video: ಸೋಶಿಯಲ್‌ ಮೀಡಿಯಾದ ಸೆನ್ಸೇಶನಲ್‌ ಜೋಡಿಯಾಗಿರುವ ಗ್ಯಾಬ್ರಿಯಲ್‌ ಪಿಮೆಂಟಲ್‌ ಮತ್ತು ಮ್ಯಾರಿ ತೋಮರ್‌ ಅವರ ಡಾನ್ಸಿಂಗ್‌ ವಿಡಿಯೋ ಇದೀಗ ಎಲ್ಲೆಡೆ ಬಹಳ ಸದ್ದು ಮಾಡುತ್ತಿದೆ. ಇನ್‌ಸ್ಟಾಗ್ರಾಂನಲ್ಲಿ ಕಿಂಗ್‌ ಮತ್ತು ಕ್ವೀನ್‌ ಎಂದೇ ಖ್ಯಾತಿ ಪಡೆದಿರುವ ಗ್ಯಾಬ್ರಿಯಲ್‌ ಮತ್ತು ಮ್ಯಾರಿ ತಮ್ಮ ನಡುವಿನ ಎತ್ತರದ ಅಂತರವಿದ್ದರೂ ಪರಸ್ಪರ ರಿಲೇಶನ್‌ಶಿಪ್‌ನಲ್ಲಿದ್ದಾರೆ.

VISTARANEWS.COM


on

Viral Video
Koo

ಹೊಸದಿಲ್ಲಿ: ನಿಷ್ಕಲ್ಮಶ ಪ್ರೀತಿಗೆ ವಯಸ್ಸು, ಅಂದ ಚಂದ, ಬಡವ-ಶ್ರೀಮಂತ ಎಂಬ ಬೇಧ ಇರೋದಿಲ್ಲ ಅನ್ನೋದನ್ನು ನಾವು ಕೇಳಿರ್ತೀವಿ..ಬಹಳ ಅಪರೂಪ ಅನ್ನುವಂತೆ ಅದನ್ನು ನಾವು ನೋಡಿರ್ತೇವೆ. ಇದೊಂದು ಅಂತಹದ್ದೇ ಅಪರೂಪವಾದ ಜೋಡಿ. ಇವರನ್ನು ನೋಡಿದರೆ ಪ್ರೀತಿ ಹೀಗೂ ಆಗುತ್ತೋ ಅಂತಾ ಅಚ್ಚರಿ ಆಗೋದಂತೂ ಗ್ಯಾರಂಟಿ. ಯಾಕಂದ್ರೆ ಈ ಜೋಡಿಯ ಹೈಟ್‌ ಅಜಗಜಾಂತರ ಅನ್ನುವಂತಿದೆ. ಹೌದು ಮೂರು ಅಡಿಯ ಕುಳ್ಳನಿಗೆ ಏಳು ಅಡಿಯ ಗರ್ಲ್‌ಫ್ರೆಂಡ್‌! ಈ ಕ್ಯೂಟ್‌ ಜೋಡಿ ರೊಮ್ಯಾನ್ಸ್‌ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್‌(Viral Video) ಆಗುತ್ತಿದೆ.

ಸೋಶಿಯಲ್‌ ಮೀಡಿಯಾದ ಸೆನ್ಸೇಶನಲ್‌ ಜೋಡಿಯಾಗಿರುವ ಗ್ಯಾಬ್ರಿಯಲ್‌ ಪಿಮೆಂಟಲ್‌ ಮತ್ತು ಮ್ಯಾರಿ ತೋಮರ್‌ ಅವರ ಡಾನ್ಸಿಂಗ್‌ ವಿಡಿಯೋ ಇದೀಗ ಎಲ್ಲೆಡೆ ಬಹಳ ಸದ್ದು ಮಾಡುತ್ತಿದೆ. ಇನ್‌ಸ್ಟಾಗ್ರಾಂನಲ್ಲಿ ಕಿಂಗ್‌ ಮತ್ತು ಕ್ವೀನ್‌ ಎಂದೇ ಖ್ಯಾತಿ ಪಡೆದಿರುವ ಗ್ಯಾಬ್ರಿಯಲ್‌ ಮತ್ತು ಮ್ಯಾರಿ ತಮ್ಮ ನಡುವಿನ ಎತ್ತರದ ಅಂತರವಿದ್ದರೂ ಪರಸ್ಪರ ರಿಲೇಶನ್‌ಶಿಪ್‌ನಲ್ಲಿದ್ದಾರೆ. ಅಷ್ಟೇ ಅಲ್ಲದೇ ಪರಸ್ಪರ ಫುಲ್‌ ಎಂಜಾಯ್‌ ಮಾಡುತ್ತಿದ್ದಾರೆ. ಇದೀಗ ಈ ಜೋಡಿಯ ಕ್ಯೂಟ್‌ ಡಾನ್ಸ್‌ ವಿಡಿಯೋ ವೈರಲ್‌ ಆಗುತ್ತಿದೆ. ಈ ವಿಡಿಯೋದಲ್ಲಿ ಇವರಿಬ್ಬರು ಪರಸ್ಪರ ತಬ್ಬಿಕೊಂಡು ಡಾನ್ಸ್‌ ಮಾಡುತ್ತಿರುವುದು ಇವರಿಬ್ಬರ ನಡುವಿನ ಬಾಂಧವ್ಯವನ್ನು ತೋರಿಸುತ್ತಿದೆ.

Instagram ನಲ್ಲಿ 23,000 ಕ್ಕೂ ಹೆಚ್ಚು ಅನುಯಾಯಿಗಳನ್ನು ಗಳಿಸಿರುವ ಗೇಬ್ರಿಯಲ್ ಮತ್ತು 2 ಮಿಲಿಯನ್‌ಗಿಂತಲೂ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ಮೇರಿ, ಅಭಿಮಾನಿಗಳಿಂದ ಅಗಾಧ ಬೆಂಬಲವನ್ನು ಪಡೆದಿದ್ದಾರೆ. ಅವರು ಹಂಚಿಕೊಂಡ ಇತ್ತೀಚಿನ ವೀಡಿಯೊ ಕೇವಲ ಎರಡು ದಿನಗಳಲ್ಲಿ 2.5 ಮಿಲಿಯನ್ ವೀಕ್ಷಣೆಗಳನ್ನು ಗಳಿಸಿದೆ. ಇನ್ನು ಸಾವಿರಾರು ಸಂಖ್ಯೆಯಲ್ಲಿ ಲೈಕ್ಸ್‌ ಮತ್ತು ಶೇರ್‌ ಆಗಿದೆ.

ಅನೇಕರು ಇವರ ವಿಶೇಷ ಪ್ರೇಮಕ್ಕೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದರೆ, ಇನ್ನು ಕೆಲವು ಸಂದೇಹವಾದಿಗಳು ಸಾಮಾಜಿಕ ಮಾಧ್ಯಮದ ಹಿನ್ನೆಲೆಯಲ್ಲಿ ಅವರ ಸಂಬಂಧದ ಸತ್ಯಾಸತ್ಯತೆಯನ್ನು ಪ್ರಶ್ನಿಸಿದ್ದಾರೆ. ಮೆಚ್ಚುಗೆಯಿಂದ ಹಾಸ್ಯದವರೆಗಿನ ಕಾಮೆಂಟ್‌ಗಳು ಇವರ ಈ ವಿಡಿಯೋಗೆ ಬಂದಿದೆ. ಅನೇಕರು ಇವರದ್ದು ಬಲು ಅಪರೂಪದ ಜೋಡಿ ಎಂದು ಕರೆದಿದ್ದಾರೆ.

ಇನ್ನು ಗುಜರಾತ್‌ನಲ್ಲೂ ಗ್ಯಾಬ್ರಿಯಲ್‌ನಂತಹ ಕುಳ್ಳಗಿನ ವೈದ್ಯರೊಬ್ಬರು ಕೆಲವು ತಿಂಗ ಹಿಂದೆ ಬಹಳ ಸುದ್ದಿಯಾಗಿದ್ದರು.

ಇವರ ಹೆಸರು ಡಾ. ಗಣೇಶ್ ಬರೈಯಾ (Ganesh Baraiya). ಎತ್ತರ ಕೇವಲ 3 ಅಡಿ. ಆದರೆ ಇದು ಅವರ ಕನಸಿಗೆ, ಸಾಧಿಸಬೇಕೆಂಬ ಛಲಕ್ಕೆ ಅಡ್ಡಿಯಾಗಲಿಲ್ಲ. ಅವರು ಇಂದು ವಿಶ್ವದಲ್ಲೇ ಅತ್ಯಂತ ಕುಳ್ಳಗಿನ ವೈದ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವಿಶೇಷ ಎಂದರೆ ಗಣೇಶ್‌ ಅವರ ತೂಕ ಕೇವಲ 18 ಕೆ.ಜಿ. 2018ರಲ್ಲಿ ಗಣೇಶ್‌ 12ನೇ ತರಗತಿಯ ಪರೀಕ್ಷೆ ತೇರ್ಗಡೆಯಾಗಿದ್ದರು. ಇದರಲ್ಲಿ ಅವರಿಗೆ ಶೇ. 87 ಮತ್ತು ನೀಟ್‌ನಲ್ಲಿ 233 ಅಂಕ ಬಂದಿತ್ತು. ಆದರೆ 3 ಅಡಿ 4 ಇಂಚು ಎತ್ತರದ ಅವರಿಗೆ ಗುಜರಾತ್ ಸರ್ಕಾರವು ಎಂಬಿಬಿಎಸ್ ಪ್ರವೇಶಕ್ಕೆ ಅನುಮತಿ ನಿರಾಕರಿಸಿತ್ತು. ಛಲ ಬಿಡದ ಅವರು ತಮ್ಮ ಶಾಲಾ ಪ್ರಾಂಶುಪಾಲರ ಸಹಾಯವನ್ನು ಪಡೆದು ಜಿಲ್ಲಾಧಿಕಾರಿ, ರಾಜ್ಯ ಶಿಕ್ಷಣ ಸಚಿವರನ್ನು ಸಂಪರ್ಕಿಸಿದರು ಜತೆಗೆ ಗುಜರಾತ್ ಹೈಕೋರ್ಟ್‌ನ ಬಾಗಿಲು ತಟ್ಟಿದರು.

ಇದನ್ನೂ ಓದಿ: Virat Kohli: ಮೊದಲ ಬಾರಿಗೆ ಮಗ ಅಕಾಯ್ ಜತೆ ಕಾಣಿಸಿಕೊಂಡ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Continue Reading

Latest

Viral Video: ಬಸ್‌ ಡ್ರೈವರ್‌ನ ರೀಲ್ಸ್‌ ಕ್ರೇಜ್‌ಗೆ 2 ಎತ್ತುಗಳು ಬಲಿ; ರೈತನ ಸ್ಥಿತಿ ಗಂಭೀರ

Viral Video: ಪ್ರಯಾಣಿಕರನ್ನು ಸುರಕ್ಷಿತವಾಗಿ ತಲುಪಿಸುವ ಜವಾಬ್ದಾರಿ ಇರುವ ಬಸ್ ಡ್ರೈವರ್‌ಗಳೂ ರೀಲ್ಸ್ ಕ್ರೇಜ್‌ಗೆ ಒಳಗಾಗಿರುವುದು ಆತಂಕ ಮೂಡಿಸಿದೆ. ಬಸ್ ಡ್ರೈವ್ ಮಾಡುತ್ತಾ ರೀಲ್ಸ್‌ನ ಗುಂಗಿನೊಳಗೆ ಬಿದ್ದ ಡ್ರೈವರ್‌ನೊಬ್ಬ ಮಾಡಿದ ಅವಾಂತರದಿಂದ ಒಂದು ಕುಟುಂಬವೇ ಸಂಕಷ್ಟಕ್ಕೆ ಸಿಲುಕಿದೆ. ಜೀವನ ನಡೆಸುವುದಕ್ಕೆ ಆಧಾರವಾಗಿದ್ದ ಎರಡು ಎತ್ತುಗಳನ್ನು ರೈತ ಕಳೆದುಕೊಂಡಿದ್ದಾನೆ. ಅಪಘಾತದಿಂದ ರೈತನ ಸ್ಥಿತಿ ಕೂಡ ಗಂಭೀರವಾಗಿದೆ.

VISTARANEWS.COM


on

Viral Video
Koo

ಹುಬ್ಬಳ್ಳಿ: ವಾಹನಗಳನ್ನು ವೇಗವಾಗಿ ಚಲಾಯಿಸುವುದರಿಂದ ಎಷ್ಟೊಂದು ಅಪಘಾತದ ಘಟನೆಗಳು ನಡೆದು ಅನೇಕ ಸಾವು ನೋವುಗಳಾದರೂ ಕೂಡ ಚಾಲಕರಿಗೆ ಇನ್ನೂ ಈ ಬಗ್ಗೆ ಅರಿವು ಮೂಡಿಲ್ಲ. ಇದೀಗ ಹುಬ್ಬಳ್ಳಿಯಲ್ಲಿ ಎತ್ತಿನ ಗಾಡಿಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎರಡು ಎತ್ತುಗಳು ಸ್ಥಳದಲ್ಲೇ ಮೃತಪಟ್ಟಿದೆ. ಅಲ್ಲದೇ ಎತ್ತಿನ ಗಾಡಿಯಯಲ್ಲಿದ್ದ ರೈತ ಕೂಡ ಗಂಭೀರವಾಗಿ ಗಾಯಗೊಂಡಿದ್ದಾನೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ವಿಡಿಯೊದಲ್ಲಿ, ಸಹಾಯಕ ರೀಲ್ ತಯಾರಿಸುವಾಗ ಬಸ್ ಚಾಲಕ ತನ್ನ ಸೀಟ್‌ನಲ್ಲಿ ಕುಳಿತು ಡ್ರೈವ್ ಮಾಡುತ್ತಿರುವುದನ್ನು ಕಾಣಬಹುದು. ಕೆಲವು ಕ್ಷಣಗಳ ನಂತರ, ಬಸ್ ಮುಂದೆ ಹೋಗುತ್ತಿದ್ದ ಎತ್ತಿನ ಗಾಡಿಗೆ ಹಿಂದಿನಿಂದ ಡಿಕ್ಕಿ ಹೊಡೆಯುವುದನ್ನು ವಿಡಿಯೊ ತೋರಿಸುತ್ತದೆ. ವರದಿ ಪ್ರಕಾರ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಬಾಗಲಕೋಟೆ ಕಡೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಎತ್ತುಗಳು ಕೆಳಗೆ ಬಿದ್ದು ರಕ್ತ ಸೋರಿ, ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿವೆ. ಎತ್ತಿನ ಗಾಡಿಯಲ್ಲಿದ್ದ ರೈತ ತೀವ್ರವಾಗಿ ಗಾಯಗೊಂಡಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ರೈತನ ಸ್ಥಿತಿ ಗಂಭೀರವಾಗಿದೆ ಎಂಬುದಾಗಿ ತಿಳಿದು ಬಂದಿದೆ. ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಗಾಯಗೊಂಡ ರೈತ ಮಂಜುನಾಥ್ ಆರ್. ವಗ್ಗೇನವರ್ (40) ಎಂಬುದಾಗಿ ತಿಳಿದು ಬಂದಿದೆ. ಮಂಗಳವಾರ ರಾತ್ರಿ ಮಂಜುನಾಥ್ ಕೆರೆಸೂರು ಗ್ರಾಮದ ತನ್ನ ಕೃಷಿ ಭೂಮಿಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಎತ್ತಿನ ಗಾಡಿಗೆ ಡಿಕ್ಕಿ ಹೊಡೆದಾಗ ಬಸ್ ಚಾಲಕ ರೀಲ್ ತಯಾರಿಸುತ್ತಿದ್ದ. ತಂಬಾಕು ತಿನ್ನುತ್ತಿದ್ದ. ಹಾಗಾಗಿ ಚಾಲಕನಿಗೆ ತನ್ನ ಮುಂದೆ ಇದ್ದ ಗಾಡಿಯನ್ನು ನೋಡಲು ಸಾಧ್ಯವಾಗಲಿಲ್ಲ ಎಂದು ಕೆಲವು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ.

ಅಲ್ಲದೇ ಮಂಜುನಾಥ್ ಒಬ್ಬ ಬಡ ರೈತನಾಗಿದ್ದು, ಎರಡು ಎಕರೆ ಭೂಮಿಯಲ್ಲಿ ಯಾವುದೇ ಲಾಭಾಂಶ ಸಿಗುತ್ತಿರಲಿಲ್ಲ ಎಂದು ಸಂತ್ರಸ್ತ ರೈತನ ಸ್ನೇಹಿತರು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಇತ್ತೀಚೆಗೆ, ಮಂಜುನಾಥ್ ಸಾಲ ಪಡೆದು ಎರಡು ಎತ್ತುಗಳನ್ನು ಖರೀದಿಸಿ ಅದನ್ನು ಇತರ ಹೊಲಗಳಲ್ಲಿ ಉಳುಮೆ ಮಾಡಲು ಬಳಸುತ್ತಿದ್ದರು ಎಂಬುದಾಗಿ ತಿಳಿದು ಬಂದಿದೆ.

ಇದನ್ನೂ ಓದಿ: ಪುಟ್ಟ ಮಗುವನ್ನು ಮುಂದೆ ಕೂರಿಸಿಕೊಂಡು ಬೈಕ್‌ ಸ್ಟಂಟ್‌! ಒದ್ದು ಒಳಗೆ ಹಾಕಿ ಅಂತಿದ್ದಾರೆ ನೆಟ್ಟಿಗರು

Continue Reading

Latest

Lady Police Officer: ಗೂಂಡಾಗಿರಿ ಮಾಡಿದರೆ ಹುಷಾರ್‌! ಪುಂಡರಿಗೆ ಲೇಡಿ ಪೊಲೀಸ್ ವಾರ್ನಿಂಗ್‌; ವಿಡಿಯೊ ವೈರಲ್

Lady Police Officer: ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಮಾಡುವುದೇ ಈಗಿನವರ ಶೋಕಿ. ಎಲ್ಲಿದ್ದೇವೆ, ಇದು ತಪ್ಪಾ, ಸರಿನಾ ಒಂದೂ ಕೂಡ ಯೋಚಿಸದೇ ರೀಲ್ಸ್ ಮಾಡುತ್ತಾ ತಿರುಗುತ್ತಾರೆ. ಹೀಗೆ ಧಾರ್ಮಿಕ ಸ್ಥಳವೊಂದರಲ್ಲಿ ಕಾರಿನ ಸನ್‌ರೂಫ್‌ ತೆರೆದುಕೊಂಡು ರೀಲ್ಸ್ ಮಾಡುತ್ತಿದ್ದ ಗುಂಪೊಂದನ್ನು ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಸಖತ್ ಆಗಿ ಬೆಂಡೆತ್ತಿದ್ದಾರೆ. ಇನ್ನು ಮಹಿಳಾ ಅಧಿಕಾರಿಗೆ ಆಮಿಷವೊಡ್ಡಲು ಬಂದಾಗ ಅದಕ್ಕೆ ಸೊಪ್ಪು ಹಾಕದೇ, ವಾಹನವನ್ನು ವಶಪಡಿಸಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Lady Police Officer
Koo

ಕೆಲವೊಂದು ಧಾರ್ಮಿಕ ಸ್ಥಳಗಳಲ್ಲಿ (Lady Police Officer) ಮೊಬೈಲ್ ಬಳಸಲು, ವಿಡಿಯೊ ಶೂಟ್ ಮಾಡಲು ಅನುಮತಿ ಇರುವುದಿಲ್ಲ. ಹಿಮಾಚಲ ಪ್ರದೇಶದ ಧಾರ್ಮಿಕ ಪ್ರದೇಶದಲ್ಲಿ ಪುರುಷರ ಗುಂಪೊಂದು ಅನುಮತಿಯಿಲ್ಲದೆ ಕಾರು ಚಲಾಯಿಸುತ್ತ, ಕಾರಿನ ಟಾಪ್‌ ಮೇಲಿಂದ ಕೈ ಬೀಸುತ್ತ ರೀಲ್ಸ್‌ (Reels Obesession) ಮಾಡಿದ್ದಾರೆ. ಆಗ ಮಹಿಳಾ ಪೊಲೀಸರೊಬ್ಬರು ಅವರನ್ನು ಸಖತ್ತಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಈ ವಿಡಿಯೊವನ್ನು ‘ಘರ್ ಕೆ ಕಾಲೇಶ್’ ಎಂಬ ಹೆಸರಿನಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಲಾಗಿದ್ದು, ಈ ವಿಡಿಯೊ ಪೊಲೀಸರು ವಾಹನವನ್ನು ನಿಲ್ಲಿಸುವ ಮೂಲಕ ಪ್ರಾರಂಭವಾಗಿದೆ. ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು ತಮ್ಮ ವಾಹನವನ್ನು ನಿಲ್ಲಿಸಿ ಇನ್ನೊಂದು ಕಾರಿನಲ್ಲಿದ್ದ ಇಬ್ಬರು ಪುರುಷರು ಸನ್ ರೂಫ್‌ನಿಂದ ಹೊರಬಂದು ನಿಂತಿರುವುದನ್ನು ತೋರಿಸಿದರು. ಹಾಗೇ ಅವರ ರೀಲ್ಸ್‌ ಮಾಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಸನ್ ರೂಫ್ ಅನ್ನು ಮುಚ್ಚಿ ಕಾರಿನೊಳಗೆ ಕುಳಿತುಕೊಳ್ಳುವಂತೆ ಅವರಿಗೆ ಪಾಠ ಹೇಳಿದ್ದಾರೆ.

ನಂತರ ಧಾರ್ಮಿಕ ಸ್ಥಳದ ಪಕ್ಕದ ಪ್ರದೇಶದಲ್ಲಿ ಶೂಟಿಂಗ್ ಮಾಡಲು ಅನುಮತಿ ನೀಡಲಾಗಿದೆಯೇ ಎಂದು ಅಧಿಕಾರಿ ಪುರುಷರ ಗುಂಪನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ಅವರಲ್ಲಿ ಒಬ್ಬರು ಇದು ಶೂಟಿಂಗ್ ಅಲ್ಲ ಎಂದು ಉತ್ತರಿಸಿದ್ದಾರೆ. ಆದರೆ ಅವರು ಸೋಶಿಯಲ್ ಮೀಡಿಯಾಗಳಿಗಾಗಿ ರೀಲ್ಸ್ ಮಾಡುತ್ತಿರುವುದಾಗಿ ಹೇಳಿದ್ದಾರೆ.

ನಂತರ ಈ ವಿಷಯವನ್ನು ಪರಿಶೀಲಿಸಲು ಮಹಿಳಾ ಪೊಲೀಸ್ ಜೀಪಿನಿಂದ ಕೆಳಗಿಳಿದು ಇಡೀ ಘಟನೆಯನ್ನು ಕ್ಯಾಮೆರಾದಲ್ಲಿ ವಿಡಿಯೊ ಮಾಡಿದ್ದಾರೆ. ಗುಡ್ಡಗಾಡು ಪ್ರದೇಶದಲ್ಲಿ ತೆರೆದ ಸನ್ ರೂಫ್‌ನೊಂದಿಗೆ ಸವಾರಿ ಮಾಡುವುದು ಮಾತ್ರವಲ್ಲದೆ ನಂಬರ್ ಪ್ಲೇಟ್ ಇಲ್ಲದ ವಾಹನವನ್ನು ಓಡಿಸುವ ಮೂಲಕ ದುಷ್ಕರ್ಮಿಗಳು ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳನ್ನು ಹೇಗೆ ಉಲ್ಲಂಘಿಸಿದ್ದಾರೆ ಎಂಬುದನ್ನು ಅವರು ತೋರಿಸಿದರು.

ಕರ್ತವ್ಯದಲ್ಲಿದ್ದ ಪೋಲೀಸ್ ಅಧಿಕಾರಿ ಪುರುಷರನ್ನು ತಮ್ಮ ವಾಹನದೊಳಗೆ ಕುಳಿತು ಸುರಕ್ಷಿತವಾಗಿ ಪ್ರಯಾಣಿಸುವಂತೆ ಸೂಚಿಸಿದ್ದಾರೆ. “ಗೂಂಡಾಗಿರಿ ಮಾಡಬೇಡಿ. ಇದು ಧಾರ್ಮಿಕ ಸ್ಥಳವಾಗಿದೆ. ಪವಿತ್ರ ಸ್ಥಳಕ್ಕೆ ಸಂಬಂಧಿಸಿದ ಭಾವನೆಗಳನ್ನು ನೋಯಿಸಬೇಡಿ” ಎಂದು ಅವರು ಪುಂಡು ಪುರುಷರಿಗೆ ತಿಳಿ ಹೇಳಿದ್ದಾರೆ.

ಇದನ್ನೂ ಓದಿ:  ನೀತಾ ಅಂಬಾನಿ ಪ್ರಸ್ತುತಪಡಿಸಿದ್ದಾರೆ ವಿಷ್ಣುವಿನ ‘ದಶಾವತಾರ’ದ ಚಿತ್ರಣ; ವಿಡಿಯೊ ನೋಡಿ

ಅಲ್ಲದೇ ವಿಡಿಯೊದಲ್ಲಿ, ಅವರಲ್ಲಿ ಕೆಲವರು ಪೊಲೀಸ್ ಅಧಿಕಾರಿಗೆ ಲಂಚ ನೀಡಲು ಅಥವಾ ಕೆಲವು ಪ್ರಭಾವ ಬೀರುವ ಕಾರ್ಡ್ ಅನ್ನು ಪ್ರದರ್ಶಿಸಲು ಪ್ರಯತ್ನಿಸಿದ್ದು ಕಂಡು ಬಂದಿದೆ. ಆದರೆ ಪೊಲೀಸ್ ಅಧಿಕಾರಿ ಈ ರೀತಿ ಮಾಡಿದರೆ ವಾಹನವನ್ನು ವಶಪಡಿಸಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ವಿಡಿಯೊ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Continue Reading
Advertisement
Virat Kohli
ಕ್ರೀಡೆ10 mins ago

Virat Kohli: ಬಿಸಿಸಿಐ ಅಧಿಕಾರಿಗಳನ್ನು ಸಂಪರ್ಕಿಸಿ ಕೋಚ್​ ಗಂಭೀರ್​ ವಿಚಾರದಲ್ಲಿ ಕೊಹ್ಲಿ ಕೊಟ್ಟ ಆಶ್ವಾಸನೆ ಏನು?

karnataka Rain
ಮಳೆ17 mins ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

ಪ್ರಮುಖ ಸುದ್ದಿ31 mins ago

Karnataka Job Reservation: ಕನ್ನಡಿಗರಿಗೆ ಮೀಸಲಾತಿ ನೀಡಲು ಕರವೇ ಆಗ್ರಹ; ʼಫೋನ್ ಪೇʼ ಬಾಯ್ಕಾಟ್ ಅಭಿಯಾನ ಶುರು!

Kanwar Yatra
ದೇಶ37 mins ago

Kanwar Yatra: ಕನ್ವರ್‌ ಯಾತ್ರೆಯ ಮಾರ್ಗದಲ್ಲಿರುವ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ: ಯೋಗಿ ಆದಿತ್ಯನಾಥ್

Uttara kannada landslide 3
ಉತ್ತರ ಕನ್ನಡ50 mins ago

Uttara Kannada Landslide: 6 ಜನರ ಶವ ಪತ್ತೆ, ಇನ್ನೂ ನಾಲ್ವರಿಗಾಗಿ ಶೋಧ; ಭಾರಿ ಮಳೆ ನಡುವೆ ಮಣ್ಣು ತೆರವು

England vs West Indies
ಕ್ರೀಡೆ58 mins ago

England vs West Indies: ವೇಗದ ಅರ್ಧಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಇಂಗ್ಲೆಂಡ್

Karnataka Rain
ಮಳೆ1 hour ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Vaibhavi Jagdish Bold Photo shoot
ಸ್ಯಾಂಡಲ್ ವುಡ್1 hour ago

Vaibhavi Jagdish: ಬೋಲ್ಡ್‌ ಫೋಟೊ ಹಂಚಿಕೊಂಡು ಕಮೆಂಟ್‌ ಸೆಕ್ಷನ್‌ ಆಫ್‌ ಮಾಡಿದ ಜೈ ಜಗದೀಶ್ ಪುತ್ರಿ!

Kannada Actress Many opportunities for this actress before the release Back Benchers'!
ಸ್ಯಾಂಡಲ್ ವುಡ್1 hour ago

Kannada Actress: `ಬ್ಯಾಕ್‍ ಬೆಂಚರ್ಸ್’ ಬಿಡುಗಡೆಗೂ ಮುನ್ನವೇ ಹಲವು ಅವಕಾಶಗಳು ಈ ನಟಿಗೆ!

Donald Trump
ವಿದೇಶ1 hour ago

Donald Trump: ಅಮೆರಿಕವೂ ಐರನ್ ಡೋಮ್ ಕ್ಷಿಪಣಿ ತಯಾರಿಸಲಿದೆ; ಡೊನಾಲ್ಡ್‌ ಟ್ರಂಪ್‌ ಸೂಚನೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ17 mins ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ1 hour ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ21 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ22 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಟ್ರೆಂಡಿಂಗ್‌