Dog Attacks: ಬಡಪಾಯಿ ಡೆಲಿವರಿ ಮ್ಯಾನ್‌ನನ್ನು ಭೀಕರವಾಗಿ ಕಚ್ಚಿದ ಶ್ರೀಮಂತರ ಮನೆಯ ನಾಯಿಗಳು; ವಿಡಿಯೊ ಇದೆ - Vistara News

Latest

Dog Attacks: ಬಡಪಾಯಿ ಡೆಲಿವರಿ ಮ್ಯಾನ್‌ನನ್ನು ಭೀಕರವಾಗಿ ಕಚ್ಚಿದ ಶ್ರೀಮಂತರ ಮನೆಯ ನಾಯಿಗಳು; ವಿಡಿಯೊ ಇದೆ

Dog Attacks: ವೈದ್ಯರೊಬ್ಬರ ಮನೆಗೆ ಡೆಲಿವರಿ ಮಾಡಲು ಬಂದ ವ್ಯಕ್ತಿಯ ಮೇಲೆ ಅವರ ಮನೆಯಲ್ಲಿ ಸಾಕಿದ ಎರಡು ಪಿಟ್‌ಬುಲ್‌ ನಾಯಿಗಳು ಭೀಕರವಾಗಿ ದಾಳಿ ಮಾಡಿವೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಂಧ್ಯಾ ರಾವ್ ಎಂಬ ವೈದ್ಯರ ಮನೆಗೆ ಡೆಲಿವರಿ ನೀಡಲು ಡೆಲಿವರಿ ಮ್ಯಾನ್‌ ಆಟೋದಲ್ಲಿ ಬಂದಿದ್ದಾಗ ಈ ಘಟನೆ ನಡೆದಿದೆ.

VISTARANEWS.COM


on

Dog Attacks
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ವೈದ್ಯರೊಬ್ಬರ ಮನೆಗೆ ಫುಡ್ ಡೆಲಿವರಿ ಮಾಡಲು ಬಂದ ಡೆಲಿವರಿ ಮ್ಯಾನ್ ಮೇಲೆ ಅವರ ಮನೆಯಲ್ಲಿ ಸಾಕಿದ ಎರಡು ಪಿಟ್‌ ಬುಲ್‌ ನಾಯಿಗಳು ದಾಳಿ ಮಾಡಿದ ಘಟನೆ ಛತ್ತೀಸ್‌ಗಢದ ರಾಯ್ಪುರದ ಖಮರ್ದಿಹ್ ಪೊಲೀಸ್ ಠಾಣೆ ವ್ಯಾಪ್ತಿಯ ಅನುಪಮ್ ನಗರದಲ್ಲಿ ನಡೆದಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Dog Attacks) ಆಗಿದೆ. ಇಷ್ಟಾಗಿಯೂ ಆ ನಾಯಿಗಳ ಮಾಲಕಿ, ಡೆಲಿವರ್‌ ಮ್ಯಾನ್‌ನದ್ದೇ ತಪ್ಪು ಎಂದು ಆರೋಪಿಸಿದ್ದಾಳೆ. ಇದು ಜನಾಕ್ರೋಶಕ್ಕೆ ಕಾರಣವಾಗಿದೆ.

ನಾಯಿಗಳ ದಾಳಿಗೆ ಒಳಗಾದ ಡೆಲಿವರಿ ಮ್ಯಾನ್ ಸಲ್ಮಾನ್ ಎಂಬುದಾಗಿ ತಿಳಿದು ಬಂದಿದೆ. ವಿಡಿಯೊದಲ್ಲಿ ಸಲ್ಮಾನ್‌ ಅನ್ನು ನಾಯಿಗಳು ಕಚ್ಚುತ್ತಿರುವುದು ಕಂಡುಬಂದಿದೆ. ಈ ವೇಳೆ ಅವನು ನೋವಿನಿಂದ ನರಳುತ್ತಿದ್ದು, ಹಾಗೂ ನಾಯಿಗಳಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ. ದುರದೃಷ್ಟವಶಾತ್, ಅಲ್ಲಿ ಯಾರೂ ಕೂಡ ಸಲ್ಮಾನ್‌ ಸಹಾಯಕ್ಕೆ ಬರಲಿಲ್ಲ. ಕೊನೆಗೆ ಬೇರೆ ದಾರಿ ಕಾಣದೇ ಹೊರಗೆ ಓಡಿ ನಾಯಿಗಳಿಂದ ತನ್ನನ್ನು ರಕ್ಷಿಸಿಕೊಳ್ಳಲು ಅಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಹತ್ತಿ ಕುಳಿತು ಜೀವ ಉಳಿಸಿಕೊಂಡಿದ್ದಾನೆ. ನಾಯಿಗಳು ಹೊರಟುಹೋದ ನಂತರ, ಯಾರೋ ಒಬ್ಬ ವ್ಯಕ್ತಿ ಸಲ್ಮಾನ್‌ಗೆ ಕುಡಿಯಲು ನೀರಿನ ಬಾಟಲಿಯನ್ನು ನೀಡಿದ್ದಾರೆ. ಹಾಗೂ ನಂತರ ಸಲ್ಮಾನ್ ಅವರ ಕೈ ಮತ್ತು ಕಾಲುಗಳು ರಕ್ತಸಿಕ್ತವಾಗಿದ್ದು, ಅವರಿಗೆ ರಕ್ತವನ್ನು ಒರೆಸಿಕೊಳ್ಳುವಂತೆ ಮಹಿಳೆಯೊಬ್ಬರು ಬಟ್ಟೆ ತಂದು ಕೊಟ್ಟಿದ್ದಾರೆ.

ಈ ವಿಡಿಯೊ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇದಕ್ಕೆ ಹಲವರು ಕಾಮೆಂಟ್ ಮಾಡಿದ್ದಾರೆ. ನಾಯಿಯ ಮಾಲೀಕನನ್ನು ಜೈಲಿಗೆ ಕಳುಹಿಸಿಬೇಕೆಂದು ಒಬ್ಬರು ಹೇಳಿದ್ದಾರೆ. ಹಾಗೇ ಮತ್ತೊಬ್ಬರು ಅವರು ವೈದ್ಯಕೀಯ ಶುಲ್ಕಗಳನ್ನು ಡೆಲಿವರಿ ಮ್ಯಾನ್‌ಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ವರದಿ ಪ್ರಕಾರ, ಸಂಧ್ಯಾ ರಾವ್ ಎಂಬ ಮಹಿಳೆ ವೃತ್ತಿಯಲ್ಲಿ ವೈದ್ಯರಾಗಿದ್ದಾರೆ. ಡಾ. ಸಂಧ್ಯಾ ರಾವ್ ಅವರು ತಮ್ಮ ಮನೆಯಲ್ಲಿ 3 ನಾಯಿಗಳನ್ನು ಸಾಕಿದ್ದಾರೆ. ಮೂರು ನಾಯಿಗಳಲ್ಲಿ ಎರಡು ಅಪಾಯಕಾರಿ ಪಿಟ್‌ ಬುಲ್‌ ತಳಿಯಾಗಿವೆ. ಶುಕ್ರವಾರ ಡೆಲಿವರಿ ಮ್ಯಾನ್ ಸಂಧ್ಯಾ ರಾವ್ ಅವರ ಮನೆಗೆ ಆಟೋದಲ್ಲಿ ಬಂದಿದ್ದಾಗ ಅವರು ಮನೆಯೊಳಗೆ ಹೋಗಲು ಬಾಗಿಲನ್ನು ತಲುಪಿದ ಕೂಡಲೇ 2 ಪಿಟ್ಬುಲ್ ನಾಯಿಗಳು ಸಲ್ಮಾನ್‌ ಮೇಲೆ ದಾಳಿ ಮಾಡಿದವು. ನಾಯಿಗಳು ಆತನ ಕೈ ಮತ್ತು ಕಾಲುಗಳನ್ನು ತೀವ್ರವಾಗಿ ಕಚ್ಚಿವೆ.

Dog Attacks

ಇದನ್ನೂ ಓದಿ: 8 ವರ್ಷದ ಮಗನ ತಲೆ ನೆಲಕ್ಕೆ ಅಪ್ಪಳಿಸಿ, ಮೈಕೈಯೆಲ್ಲ ಕಚ್ಚಿದ ತಾಯಿ; ವಿಡಿಯೊ ನೋಡಿ ಜನಾಕ್ರೋಶ

ದಾಳಿಯ ನಂತರ ನೆರೆಹೊರೆಯವರು ಸಲ್ಮಾನ್ ಅನ್ನು ಆಸ್ಪತ್ರೆಗೆ ಕರೆದೊಯ್ದರು ಎಂದು ವರದಿಗಳು ತಿಳಿಸಿವೆ. ಅಲ್ಲದೇ ನಾಯಿ ಮಾಲೀಕರು ತಮ್ಮನ್ನು ಕರೆಯದೇ ಒಳಗೆ ಬಂದಿದ್ದಕ್ಕೆ ಹೀಗೆ ಆಗಿರುವುದಾಗಿ ಸಲ್ಮಾನ್‌ ಅನ್ನೇ ದೂಷಿಸಿದ್ದಾರೆ! ಸಲ್ಮಾನ್ ಅವರ ದೂರಿನ ನಂತರ ಸೋಮವಾರ ಬೆಳಗ್ಗೆ ಮುನ್ಸಿಪಲ್ ಕಾರ್ಪೊರೇಷನ್ ತಂಡವು ವೈದ್ಯರ ಮನೆಗೆ ನಾಯಿಗಳನ್ನು ಹಿಡಿಯಲು ಬಂದಿದ್ದರು. ಆದರೆ ಬರಿಗೈಯಲ್ಲಿ ವಾಪಸ್‌ ಹೋಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

VISTARANEWS.COM


on

ಅಬುಧಾಬಿ: ಆರು ದಿನಗಳ ವಿದೇಶ ಪ್ರವಾಸದಲ್ಲಿ ಪ್ರಧಾನಿ ಮೊದಲು ಯುಎಇಗೆ ಭೇಟಿ ನೀಡಿದ್ದಾರೆ. ಯುರೋಪ್ ಭೇಟಿಗೂ ಮುನ್ನ ಅಬುಧಾಬಿಗೆ ಭೇಟಿ ನೀಡಿದ್ದು, ಭಾರತ-ಯುಎಇ ನಡುವಿನ ನಿಕಟ ಸಂಬಂಧಕ್ಕೆ ಸಾಕ್ಷಿ ಎನ್ನಲಾಗುತ್ತಿದೆ.
ಅಬುಧಾಬಿಯಲ್ಲಿ ಪ್ರಧಾನಿ ಮೋದಿ ಮತ್ತು ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ರಕ್ಷಣೆ, ವ್ಯಾಪಾರ, ಹೂಡಿಕೆ, ಇಂಧನ ಭದ್ರತೆ ಕುರಿತು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಮೋದಿ ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸಲು ಎಲ್ಲಾ ಅಗತ್ಯ ನೆರವು ನೀಡುವ ಭರವಸೆ ನೀಡಿದರು. ಇದೇ ವೇಳೆ ಅವರು, ಯುಎಇ ಮೇಲಿನ ಇರಾನ್ ದಾಳಿಯನ್ನು ಖಂಡಿಸಿದರು.
ಪ್ರಧಾನಿ ಮೋದಿಯವರ ಭೇಟಿಯನ್ನು ಯುಎಇ ಮುಕ್ತಕಂಠದಿಂದ ಹೊಗಳಿದೆ. ‘ಭಾರತದ ಪ್ರಧಾನಿ ನಮ್ಮ ನಿಜವಾದ ಆಸ್ತಿ’ ಎಂದು ಯುಎಇ ಅಂತಾರಾಷ್ಟ್ರೀಯ ಸಹಕಾರ ಸಚಿವೆ ರೀಮ್ ಅಲ್ ಹಶಿಮಿ ಬಣ್ಣಿಸಿದ್ದಾರೆ.
ಪ್ರಧಾನಿ ಮೋದಿ ಯುಎಇಗೆ ಆಗಮಿಸುತ್ತಿದ್ದಂತೆಯೇ ಭವ್ಯ ಸ್ವಾಗತ ನೀಡಲಾಯಿತು. ಮೋದಿ ಅವರಿದ್ದ ವಿಶೇಷ ವಿಮಾನಕ್ಕೆ ಗಗನಮಾರ್ಗದಲ್ಲೇ ಯುಎಇಯ ಎಫ್‌-16 ಯುದ್ಧ ವಿಮಾನಗಳು ಗೌರವ ರಕ್ಷೆ ನೀಡಿದ್ದವು.
ಯುಎಇ ಬಳಿಕ ಮೋದಿ ನೆದರ್‌ಲ್ಯಾಂಡ್‌, ಸ್ವೀಡನ್, ನಾರ್ವೆ ಮತ್ತು ಇಟಲಿ ದೇಶಗಳಿಗೆ ತೆರಳಲಿದ್ದಾರೆ.

Continue Reading

Latest

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

VISTARANEWS.COM


on

ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರಿ ಏರಿಕೆ ಮಾಡಲಾಗಿದೆ. ತೈಲ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತಲಾ ₹3 ರೂಪಾಯಿಗಳನ್ನು ಹೆಚ್ಚಿಸಿವೆ. ಇಂದಿನಿಂದಲೇ ಹೊಸ ದರ ಜಾರಿಗೆ ಬಂದಿದ್ದು, ವಾಹನ ಸವಾರರು ಅಕ್ಷರಶಃ ಕಂಗಾಲಾಗಿದ್ದಾರೆ. ಅಮೆರಿಕ-ಇರಾನ್​ ಯುದ್ಧದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಡೀಸೆಲ್, ಪೆಟ್ರೋಲ್ ದುಬಾರಿಯಾಗಿದೆ. ಕಳೆದ ಒಂದು ವರ್ಷದಲ್ಲಿ ಮೊದಲ ಸಲ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ರೂ. 94.77 ರಿಂದ ರೂ. 97.77ಕ್ಕೆ ಏರಿಕೆಯಾದರೆ, ಡೀಸೆಲ್ ದರ ರೂ.89.67 ರಿಂದ ರೂ.90.67ಕ್ಕೆ ಹೆಚ್ಚಳವಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಸುಮಾರು 102.84 ರೂಪಾಯಿ ಇತ್ತು. ದರ ಏರಿಕೆ ಬೆನ್ನಲ್ಲೇ ಪೆಟ್ರೋಲ್ 106.17 ರೂಪಾಯಿಗೆ ತಲುಪಿದೆ. ನಿನ್ನೆ 90.99 ರೂಪಾಯಿ ಇದ್ದ ಡೀಸೆಲ್ ಬೆಲೆ ಇಂದಿನಿಂದ 94.10 ರೂಪಾಯಿಗೆ ಏರಿಕೆಯಾಗಿದೆ. ಪ್ರತಿ ಲೀಟರ್‌ಗೆ 3.14 ರೂಪಾಯಿ ಹೆಚ್ಚಳ ಆಗಿದೆ.

Continue Reading

Latest

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

VISTARANEWS.COM


on

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌, ಇನ್ನು ಒಂದು ವರ್ಷ ಬಿಡುಗಡೆ ಆಗುವ ಸಾಧ್ಯತೆ ಇಲ್ಲ. ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿರುವ ನಟ ದರ್ಶನ್‌ಗೆ, ನ್ಯಾಯಪೀಠ ಬಿಗ್ ಶಾಕ್ ಕೊಟ್ಟಿದೆ. ನಟ ದರ್ಶನ್ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇನ್ನು ಒಂದು ವರ್ಷ ಜಾಮೀನು ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ವಿಚಾರಣೆಯಲ್ಲಿ ಒಂದು ವರ್ಷ ಯಾವುದೇ ಪ್ರಗತಿಯಾಗದೇ ಇದ್ದಲ್ಲಿ ಮತ್ತೊಮ್ಮೆ ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದು ಸರ್ವೋಚ್ಛ ನ್ಯಾಯಾಲಯ ಹೇಳಿದೆ. ಮುಂದಿನ ಒಂದು ವರ್ಷದಲ್ಲಿ ಬಾಕಿ ಇರುವ 60 ಪ್ರಮುಖ ಸಾಕ್ಷಿಗಳ ವಿಚಾರಣೆ ನಡೆಸಬೇಕು ಎಂದು ಜಿ. ಬಿ ಪಾರ್ದಿವಾಲಾ ನೇತೃತ್ವದ ನ್ಯಾಯಪೀಠ ಹೇಳಿದೆ.
ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಸುಪ್ರೀಂಕೋರ್ಟ್​​ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಸಾಕ್ಷ್ಯಗಳ ವಿಚಾರಣೆಯಲ್ಲಿ ವಿಳಂಬ, ಜೈಲಿನಲ್ಲಿ ಸೌಲಭ್ಯಗಳ ಕೊರತೆ, ಕುಟುಂಬವನ್ನು ಭೇಟಿ ಮಾಡಲು ಜೈಲಾಧಿಕಾರಿಗಳಿಂದ ಅವಕಾಶ ನಿರಾಕರಣೆ, ಆರೋಗ್ಯ ಸಮಸ್ಯೆ, ಸಹ ಕೈದಿಗಳಿಂದ ಕಿರುಕುಳ, ಬೆದರಿಕೆ, ಇನ್ನೂ ಕ್ವಾರಂಟೈನ್ ಸೆಲ್​​ನಲ್ಲಿ ಇಟ್ಟಿರುವುದು ಹೀಗೆ ಹಲವು ಕಾರಣಗಳನ್ನು ನೀಡಿ ದರ್ಶನ್ ಅವರು ಜಾಮೀನಿಗಾಗಿ ಸುಪ್ರೀಂಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ದರ್ಶನ್ ಪರ ವಕೀಲರು ಹಾಗೂ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವಾದ ಆಲಿಸಿದ ಸುಪ್ರೀಂ ಕೋರ್ಟ್ ದರ್ಶನ್​​ರ ಜಾಮೀನು ಅರ್ಜಿ ವಿಚಾರಣೆ ಮುಗಿಸಲು ಒಂದು ವರ್ಷ ಕಾಲಾವಕಾಶ ಕೊಟ್ಟಿದೆ. ಅಷ್ಟರಲ್ಲಿ ಸಾಕ್ಷ್ಯಗಳ ವಿಚಾರಣೆ ಮುಗಿಯದಿದ್ದಲ್ಲಿ, ಜಾಮೀನು ಅರ್ಜಿಯನ್ನು ಪರಿಗಣಿಸುವುದಾಗಿ ಸರ್ವೋಚ್ಛ ನ್ಯಾಯಾಲಯ ಹೇಳಿದೆ.

Continue Reading

Latest

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

VISTARANEWS.COM


on

ಅಮೆರಿಕ-ಇರಾನ್‌ ಯುದ್ಧದ ನಡುವೆಯೇ ಅಮೆರಿಕ ಅಧ್ಯಕ್ಷ ಟ್ರಂಪ್ ಚೀನಾ ಪ್ರವಾಸ ಕೈಗೊಂಡಿದ್ದಾರೆ. ಎರಡು ದಿನಗಳ ಪ್ರವಾಸದಲ್ಲಿ ಅವರು ಚೀನಾ ಅಧ್ಯಕ್ಷ ಶಿ ಜಿನ್‌ ಪಿಂಗ್‌ ಜೊತೆ ಹಲವು ಮಹತ್ವದ ಮಾತುಕತೆಗಳನ್ನು ನಡೆಸಲಿದ್ದಾರೆ. ಅತಿದೊಡ್ಡ ನಿಯೋಗದೊಂದಿಗೆ ಟ್ರಂಪ್‌ ರಾಜಧಾನಿ ಬೀಜಿಂಗ್‌ಗೆ ಆಗಮಿಸಿದ್ದಾರೆ.
ಅಧ್ಯಕ್ಷ ಶಿ ಜಿನ್‌ ಪಿಂಗ್‌ ಆಯೋಜಿಸಿದ್ದ ಭೋಜನಕೂಟದಲ್ಲಿ ಪಾಲ್ಗೊಂಡ ಟ್ರಂಪ್‌, ಅಮೆರಿಕ ಮತ್ತು ಚೀನಾ ನಡುವಣ ಬಾಂಧವ್ಯವನ್ನು ಕೊಂಡಾಡಿದ್ದಾರೆ. ಚೀನಾ ಜೊತೆ ಸಕಾರಾತ್ಮಕ ಮಾತುಕತೆ ನಿರೀಕ್ಷೆ ಮಾಡುವುದಾಗಿ ಟ್ರಂಪ್ ಹೇಳಿದ್ದಾರೆ.
ತೈವಾನ್ ವಿಚಾರ ಸೂಕ್ಷ್ಮ ಎಂದ ಚೀನಾ
ಬೀಜಿಂಗ್‌ನಲ್ಲಿ ಗುರುವಾರ ನಡೆದ ಉನ್ನತ ಮಟ್ಟದ ಶೃಂಗಸಭೆಯಲ್ಲಿ ಉಭಯ ನಾಯಕರ ಮಾತುಕತೆಯ ವೇಳೆ ತೈವಾನ್‌ ವಿಷಯ ಮುಂಚೂಣಿಗೆ ಬಂದಿದೆ. ಚೀನಾದ ಸರ್ಕಾರಿ ಸುದ್ದಿ ಸಂಸ್ಥೆ ‘ಕ್ಸಿನ್ಹುವಾ’ ಪ್ರಕಾರ, ಚೀನಾ-ಅಮೆರಿಕ ಸಂಬಂಧಗಳಲ್ಲಿ ತೈವಾನ್ ಅತ್ಯಂತ ಪ್ರಮುಖ ಮತ್ತು ಸೂಕ್ಷ್ಮವಾದ ವಿಷಯವಾಗಿದೆ ಎಂಬುದನ್ನು ಜಿನ್‌ಪಿಂಗ್ ಸ್ಪಷ್ಟಪಡಿಸಿದ್ದಾರೆ.
ಇದಕ್ಕೂ ಮೊದಲು, ಟ್ರಂಪ್‌ಗೆ ಬೀಜಿಂಗ್ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. 9 ವರ್ಷಗಳ ನಂತರ ಅಮೆರಿಕ ಅಧ್ಯಕ್ಷರು ಬೀಜಿಂಗ್‌ಗೆ ಭೇಟಿ ನೀಡಿರುವುದು ವಿಶೇಷ.

Continue Reading
Advertisement
Latest14 hours ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest19 hours ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest19 hours ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest2 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest2 days ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ2 days ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest2 days ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest2 days ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

Latest2 days ago

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

Latest3 days ago

ಮನಸೆಳೆದ ಎಸ್‌ಜೆಬಿಐಟಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌