Kaivara Tatayya: ಕೈವಾರ ಶ್ರೀ ಯೋಗಿನಾರೇಯಣ ಮಠದಲ್ಲಿ ಜು.19ರಿಂದ ಗುರುಪೂಜಾ ಮಹೋತ್ಸವ, ಸಂಗೀತೋತ್ಸವ - Vistara News

ಚಿಕ್ಕಬಳ್ಳಾಪುರ

Kaivara Tatayya: ಕೈವಾರ ಶ್ರೀ ಯೋಗಿನಾರೇಯಣ ಮಠದಲ್ಲಿ ಜು.19ರಿಂದ ಗುರುಪೂಜಾ ಮಹೋತ್ಸವ, ಸಂಗೀತೋತ್ಸವ

Kaivara Tatayya: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೈವಾರದ ಶ್ರೀಕ್ಷೇತ್ರ ಸದ್ಗುರು ಶ್ರೀ ಯೋಗಿನಾರೇಯಣ ಮಠದಲ್ಲಿ ಗುರುಪೂರ್ಣಿಮಾ ಪ್ರಯುಕ್ತ ಜು.19ರಿಂದ ಮೂರು ದಿನಗಳ ಕಾಲ ಗುರುಪೂಜಾ ಮಹೋತ್ಸವ ಹಾಗೂ ಸಂಗೀತೋತ್ಸವ ನಡೆಯಲಿದೆ.

VISTARANEWS.COM


on

Guru Puja Mahotsav and Sangeethotsava from July 19th at Kaiwara Srikshethra Sadguru Sri Yoginareyan Mutt
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೈವಾರದ ಶ್ರೀಕ್ಷೇತ್ರ ಸದ್ಗುರು ಶ್ರೀ ಯೋಗಿನಾರೇಯಣ ಮಠದಲ್ಲಿ (Kaivara Tatayya) ಗುರುಪೂರ್ಣಿಮಾ ಪ್ರಯುಕ್ತ ಜು.19ರಿಂದ ಮೂರು ದಿನಗಳ ಕಾಲ ಗುರುಪೂಜಾ ಮಹೋತ್ಸವ ಹಾಗೂ ಸಂಗೀತೋತ್ಸವ ಏರ್ಪಡಿಸಲಾಗಿದೆ.

ಜು.19ರಂದು ಶುಕ್ರವಾರ ಸಂಜೆ ವಿಶೇಷ ಕಾರ್ಯಕ್ರಮಗಳು ನಡೆಯಲಿದ್ದು, ಪಿ.ಜೆ.ಬ್ರಹ್ಮಾಚಾರಿ ಮತ್ತು ತಂಡದವರಿಂದ ಪಿಟೀಲು ಸೋಲೋ, ಅಧಿತಿ ಪ್ರಹ್ಲಾದ್‌, ವಿನಯ್‌ ಶರ್ವ, ಲಕ್ಷ್ಮೀ ಹೊಸೂರು, ಡಿ.ಆರ್‌. ರಾಜಪ್ಪ ಅವರ ತಂಡದವರಿಂದ ಗಾಯನ ಕಾರ್ಯಕ್ರಮ ನಡೆಯಲಿದೆ.

ಜು.20 ರಂದು ಶನಿವಾರ ಸಂಜೆ 5.30ಕ್ಕೆ ಸಿ.ಕೆ. ಪತಂಜಲಿ ಮತ್ತು ವಿಶ್ವೇಶ್ವರನ್‌ ತಂಡದವರಿಂದ ಕೊಳಲು, ಕೇರಳದ ಸೂರ್ಯಗಾಯತ್ರಿ, ಚೆನ್ನೈನ ಸಿಕ್ಕಿಲ್‌ ಸಿ. ಗುರುಚರಣ್‌ ಮತ್ತು ತಂಡದವರಿಂದ ಗಾಯನ, ಚೆನ್ನೈನ ಪದ್ಮಶ್ರೀ ಎ. ಕನ್ಯಾಕುಮಾರಿ ಮತ್ತು ತಂಡದವರಿಂದ ಪಿಟೀಲು ಸೋಲೋ ಮತ್ತು ಬೆಂಗಳೂರಿನ ಶ್ರೀ ರುದ್ರಾಕ್ಷಾ ನಾಟ್ಯಾಲಯ ಕಲಾವಿದರಿಂದ ಭರತನಾಟ್ಯ ಮತ್ತು ಡಾ.ಎ. ವಿಜಯ್‌ ಕಾರ್ತೀಕೇಯನ್‌, ಮಲೈ ಎಂ. ಕಾರ್ತಿಕೇಯನ್‌ ಅವರ ತಂಡದವರಿಂದ ನಾದಸ್ವರ ಏರ್ಪಡಿಸಲಾಗಿದೆ.

ಇದನ್ನೂ ಓದಿ: Ratna Bhandar: ಒಂದೇ ವಾರದಲ್ಲಿ ಎರಡನೇ ಬಾರಿ ತೆರೆದ ಪುರಿ ಜಗನ್ನಾಥನ ʼರತ್ನ ಭಂಡಾರʼ

ಜು.21 ರಂದು ಭಾನುವಾರ ಗುರುಪೂಜಾ ಮಹೋತ್ಸವ ಜರುಗಲಿದ್ದು, ಬೆಳಿಗ್ಗೆ 5 ಗಂಟೆಗೆ ಸುಪ್ರಸಿದ್ಧ ವಿದ್ವಾಂಸರುಗಳಿಂದ ನಾದಸ್ವರ, ತವಿಲ್‌ ವಾದನ ಹಾಗೂ ಸಂಗೀತ ಸಮರ್ಪಣೆ, ಬೆಳಿಗ್ಗೆ 9.30ಕ್ಕೆ ವಿದ್ವಾಂಸರುಗಳಿಂದ ಸದ್ಗುರು ಶ್ರೀ ಯೋಗಿ ನಾರೇಯಣ ತಾತಯ್ಯನವರ ವಿರಚಿತ ಬೋಧನಾ ಕೃತಿಗಳ ಗೋಷ್ಠಿ ಗಾಯನ ಕಾರ್ಯಕ್ರಮ ನಡೆಯಲಿದೆ.

ಬಳಿಕ ಬೆಳಿಗ್ಗೆ 10.30 ರಿಂದ 12.30ರವರೆಗೆ ಸದ್ಗುರು ಶ್ರೀ ಯೋಗಿ ನಾರೇಯಣ ತಾತಯ್ಯನವರಿಗೆ ಗುರುಪೂಜೆ ನಡೆಯಲಿದೆ. ಧರ್ಮಾಧಿಕಾರಿ ಡಾ.ಎಂ.ಆರ್‌. ಜಯರಾಮ್‌ ಅವರು ಗುರುಸಂದೇಶ ನೀಡಲಿದ್ದಾರೆ. ಕರ್ನಾಟಕದ ಪ್ರಸಿದ್ಧ ಮೃದಂಗ ವಿದ್ವಾಂಸ ವಿ. ಪ್ರವೀಣ್‌ ಮತ್ತು ಸದ್ಗುರು ನಾರೇಯಣ ತಾತಯ್ಯನವರ ಭಜನಾ ಭಕ್ತ ಭೀಮಗಾನಪಲ್ಲಿ ಕೆ.ರಾಜಪ್ಪ ಅವರಿಗೆ ವಿಶೇಷ ಸನ್ಮಾನ ಏರ್ಪಡಿಸಲಾಗಿದೆ.

ಸಂಜೆ 5 ಗಂಟೆಯಿಂದ ದೆಹಲಿಯ ಸರಸ್ವತಿ ರಾಜಗೋಪಾಲನ್‌ ತಂಡದವರಿಂದ ವೀಣಾವಾದನ, ಭೈರತಿ ಅಂಜಿನಪ್ಪ, ತೇಜಸ್ವಿನಿ ಮನೋಜ್‌ ಕುಮಾರ್‌, ಕೆ.ಸುಧಾಮಣಿ ವೆಂಕಟರಾಘವನ್‌ ಅವರ ತಂಡಗಳಿಂದ ಗಾಯನ ಕಾರ್ಯಕ್ರಮ, ಸುಬ್ಬಲಕ್ಷ್ಮೀ ಮತ್ತು ತಂಡದವರಿಂದ ಸ್ಯಾಕ್ಸೋಪೋನ್‌, ಮಹಾಲಿಂಗಯ್ಯ ಮಠದ್‌ ಮತ್ತು ತಂಡದಿಂದ ಹಿಂದೂಸ್ಥಾನಿ ಗಾಯನ ಏರ್ಪಡಿಸಲಾಗಿದೆ.

ಇದನ್ನೂ ಓದಿ: Sensex Jump: ಷೇರುಪೇಟೆಯಲ್ಲಿ ಸಾರ್ವಕಾಲಿಕ ದಾಖಲೆ ಬರೆದ ಸೆನ್ಸೆಕ್ಸ್, 24,000 ಮೀರಿದ ನಿಫ್ಟಿ

ಜು.22 ರಂದು ಸೋಮವಾರ ಬೆಳಗ್ಗೆ 6 ಗಂಟೆಗೆ 72 ಗಂಟೆಗಳ ನಿರಂತರ ಸಂಗೀತ ಕಾರ್ಯಕ್ರಮಗಳ ಮುಕ್ತಾಯ ಮತ್ತು ಮಹಾಮಂಗಳಾರತಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Karnataka Rain : ಭಾರಿ ಮಳೆಗೆ (Heavy Rain Alert) ಉಕ್ಕಿ ಹರಿಯುತ್ತಿದ್ದ ಸೇತುವೆ ಮೇಲೆ ಹೋದ ರಾಸುವೊಂದು ನೀರಿನಲ್ಲಿ ಕೊಚ್ಚಿ ಹೋಗಿದೆ. ಮತ್ತೊಂದು ಕಡೆ ಮನೆಯೊಂದು ನೆಲಸಮವಾಗಿದೆ. ಮನೆಗಳಿಗೆ ನೀರು ನುಗ್ಗಿದ್ದರೆ, ಮರಗಳು ಧರೆಗುರುಳಿವೆ.

VISTARANEWS.COM


on

By

Karnataka Rain
Koo

ಚಿಕ್ಕಮಗಳೂರು: ಭಾರಿ ಮಳೆಯು (Karnataka Rain) ಸಾವು-ನೋವಿಗೆ ಕಾರಣವಾಗುತ್ತಿದೆ. ಅಬ್ಬರಿಸುತ್ತಿರುವ ಮಳೆಗೆ ಸೇತುವೆಗಳು ಮುಳುಗಡೆಯಾಗಿವೆ. ಚಿಕ್ಕಮಗಳೂರಿನ ಹೆಬ್ಬಾಳೆ ಸೇತುವೆ ಮೇಲೆ ಒಂದು ದಡದಿಂದ ಮತ್ತೊಂದು ದಡಕ್ಕೆ ಹೋಗುವಾಗ ರಾಸುವೊಂದು ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಹೆಬ್ಬಾಳೆ ಸೇತುವೆ ಮೇಲೆ 2-3 ಅಡಿ ಎತ್ತರದಲ್ಲಿ ನೀರು ಹರಿಯುತ್ತಿದ್ದು, ದಡ ತುಸು ದೂರದಲ್ಲೇ ಇದ್ದಾಗ ನದಿಗೆ ದನವೊಂದು ಬಿದ್ದಿದೆ. ಚಿಕ್ಕಮಗಳೂರಿನ ಕಳಸ ತಾಲೂಕಿನಿಂದ ಹೊರನಾಡು ಸಂಪರ್ಕದ ಹೆಬ್ಬಾಳೆ ಸೇತುವೆಯಲ್ಲಿ, ಜನರ ಕಣ್ಣೇದುರೇ ಭದ್ರೆಯ ಒಡಲಲ್ಲಿ ರಾಸು ಕೊಚ್ಚಿ ಹೋಗಿದೆ.

ರಸ್ತೆಗೆ ಬಿದ್ದ ಬೃಹತ್‌ ಮರ

ಪ್ರವಾಸಿಗರ ನಿಷೇಧದಿಂದ ಭಾರೀ ಅನಾಹುತವೊಂದು ತಪ್ಪಿದೆ. ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ರಸ್ತೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದೆ. ಮುಳ್ಳಯ್ಯನಗಿರಿ ರಸ್ತೆಯ ಮೂರನೇ ತಿರುವಿನಲ್ಲಿ ಘಟನೆ ನಡೆದಿದೆ. ವಾಹನಗಳು ಇಲ್ಲದಿದ್ದರಿಂದ ಅನಾಹುತ ತಪ್ಪಿದೆ. ಗುಡ್ಡದ ಮಣ್ಣಿನ ಸಮೇತ ಮರ ಬಿದ್ದು, ಸ್ಥಳೀಯ ಗ್ರಾಮಸ್ಥರು ಓಡಾಡಲು ಪರದಾಟ ಅನುಭವಿಸಿದರು. ಸ್ಥಳಕ್ಕೆ ಅರಣ್ಯ ಸಿಬ್ಬಂದಿ ಮರ ತೆರವು ಮಾಡಲಾಯಿತು.

ಇನ್ನೂ ಕೊಡಗು ಜಿಲ್ಲೆಯಾದ್ಯಂತ ಮಳೆಯು ಆರ್ಭಟಿಸುತ್ತಿದ್ದು ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕಾವೇರಿಯ ಉಪ ನದಿಗಳ ನೀರಿನ ಮಟ್ಟ ಏರಿಕೆಯಿಂದಾಗಿ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಭರ್ತಿ‌ಯಾಗಿದೆ. ಭಗಂಡೇಶ್ವರ ಸನ್ನಿದಿಯ ಮೆಟ್ಟಿಲವರೆಗೂ ನೀರು ನಿಂತಿದೆ. ಅಲ್ಲಲ್ಲಿ ಸಣ್ಣ ಪ್ರಮಾಣದ ಗುಡ್ಡ ಕುಸಿತ ಉಂಟಾಗುತ್ತಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಗಣನೀಯ ಏರಿಕೆಯಾಗುತ್ತಿದ್ದು, ಭಾಗಮಂಡಲ-ನಾಪೋಕ್ಲು ರಸ್ತೆಯು 3ನೇ ಬಾರಿಗೆ ಬಂದ್ ಆಗುತ್ತಿದೆ.

ಮಂಗಳೂರಲ್ಲಿ 12 ಮನೆಗಳಿಗೆ ನುಗ್ಗಿದ ನೇತ್ರಾವತಿ

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಮಳೆ ಸುರಿಯುತ್ತಿದ್ದು, ಬಂಟ್ವಾಳದಲ್ಲಿ ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಬಂಟ್ವಾಳದ ಪಾಣೆಮಂಗಳೂರು ಆಲಡ್ಕದಲ್ಲಿ ಸುಮಾರು 12 ಮನೆಗಳಿಗೆ ನೀರು ನುಗ್ಗಿದೆ. ಅಪಾಯದಲ್ಲಿದ್ದ 12 ಮನೆಗಳ ಜನರನ್ನು ಜಿಲ್ಲಾಡಳಿತ ಸ್ಥಳಾಂತರ ಮಾಡಿದೆ. ಮಂಗಳೂರಲ್ಲಿ ನೇತ್ರಾವತಿ ಅಬ್ಬರ

ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಳದಿಂದಾಗಿ ಬೋಳಿಯಾರ್ ಗ್ರಾಮದ ಅಮ್ಮೆಂಬಳದಲ್ಲಿ ಸಂಪರ್ಕ ಕಡಿತಗೊಂಡಿದೆ. ಅಮ್ಮೆಂಬಳ-ಜಾರದಗುಡ್ಡೆ ಸಂಪರ್ಕ ಕಡಿತವಾಗಿದೆ. ನೇತ್ರಾವತಿ ನದಿ ನೀರು ಗದ್ದೆ ಪೂರ್ತಿ ಆವರಿಸಿದೆ. ಸುಮಾರು ನೂರ ಎಪ್ಪತ್ತೈದುಕ್ಕೂ ಹೆಚ್ಚು ಮನೆಗಳಿರುವ ಪ್ರದೇಶದಲ್ಲಿ ನೆರೆ ನೀರು ಆವರಿಸಿದೆ. ಈ ಹಿನ್ನೆಲೆಯಲ್ಲಿ 7 ಕಿ.ಮೀ ಸುತ್ತುಬಳಸಿ ಹೋಗಬೇಕಿದೆ. ರಸ್ತೆ ನಿರ್ಮಾಣ ಮಾಡುವಂತೆ ಹಲವು ವರ್ಷಗಳಿಂದ ಬೇಡಿಕೆ ಸಲ್ಲಿಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

ಇದನ್ನೂ ಓದಿ: Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

ಉಡುಪಿಯಲ್ಲಿ ಮನೆ ನೆಲಸಮ, ಸೋಮೇಶ್ವರದಲ್ಲಿ ಗುಡ್ಡ ಕುಸಿತ

ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಕಟ್ಟೆಗುಡ್ಡೆ ಎಂಬಲ್ಲಿ ಮನೆಯೊಂದು ಕುಸಿದು ಬಿದ್ದಿದೆ. ಕಡೆಕಾರು ಪಂಚಾಯತ್‌ನ ಶಾರದ ಪೂಜಾರ್ತಿ ಎಂಬುವವರ ಮನೆ ನೆಲಸಮವಾಗಿದೆ. ಸುಮಾರು 30 ವರ್ಷ ಹಳೆಯದಾದ ಮನೆಯಲ್ಲಿ ಒಟ್ಟು 10 ಮಂದಿ ವಾಸಿಸುತ್ತಿದ್ದರು. ಮಣ್ಣಿನ ಗಾರೆ ಮಾಡಿ ಮನೆ ನಿರ್ಮಾಣ ಮಾಡಿದ್ದು, ಮನೆ ಕುಸಿಯುವ ಮೊದಲೇ ಓಡಿ ಹೋಗಿದ್ದರಿಂದ ಅಪಾಯ ತಪ್ಪಿದೆ. ಮನೆ ಬೀಳುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಉಡುಪಿಯ ಬೈಂದೂರು ತಾಲೂಕಿನ ಪ್ರಸಿದ್ಧ ಪ್ರವಾಸಿತಾಣಕ್ಕೆ ಗುಡ್ಡ ಕುಸಿತದ ಭೀತಿ ಎದುರಾಗಿದೆ. ಭಾರಿ ಮಳೆಯಿಂದಾಗಿ ಬೈಂದೂರು ತಾಲೂಕಿನ ಪಡುವರಿ ಗ್ರಾಮ ಪಂಚಾಯತ್ ಸೋಮೇಶ್ವರ ಗುಡ್ಡ ಕುಸಿಯುತ್ತಿದೆ. ಗುಡ್ಡದ ಮೇಲೆ ಖಾಸಗಿಯವರ ಅನಧೀಕೃತ ಕಟ್ಟಡ ನಿರ್ಮಾಣವಾಗಿದೆ. ಕಟ್ಟಡಕ್ಕೆ ಸಂಪರ್ಕ ಕಲ್ಪಿಸಲು ಗುಡ್ಡ ಕೊರೆದು ರಸ್ತೆ ನಿರ್ಮಿಸಿದ್ದಾರೆ. ಯಾವುದೇ ಸ್ಥಳೀಯ ಪರವಾನಿಗೆ ಇಲ್ಲದೆ ಕಟ್ಟಡ ನಿರ್ಮಾಣ ಮಾಡಿರುವ ಆರೋಪವಿದೆ. ನಿರಂತರ ಮಳೆಯಿಂದಾಗಿ ನಿರ್ಮಾಣ ಹಂತದಲ್ಲಿರುವ ಕಟ್ಟಡ ಬಳಿ ಗುಡ್ಡ ಕುಸಿತ ಉಂಟಾಗಿದೆ. ಹೀಗಾಗಿ ಸೋಮೇಶ್ವರ ಬೀಚ್ ರಸ್ತೆ ಬಂದ್ ಮಾಡಿದ್ದಾರೆ. ಸುಮಾರು 30 ಮನೆಗಳಿಗೆ ಸಂಪರ್ಕವೇ ಇಲ್ಲದಂತಾಗಿದೆ. ಗುಡ್ಡ ಸಂಪೂರ್ಣ ಕುಸಿದರೆ ಬೈಂದೂರು ಪ್ರಸಿದ್ಧ ಪ್ರವಾಸಿ ತಾಣ ಕಣ್ಮರೆಯಾಗಲಿದೆ.

ಪಶ್ಚಿಮ ಘಟ್ಟದಲ್ಲೂ ಮಳೆ ಅಬ್ಬರ

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಬೆಳಗಾವಿ ಜಿಲ್ಲೆಯ ನದಿ, ಹಳ್ಳಗಳು ತುಂಬಿ ಹರಿಯುತ್ತಿದೆ. ಖಾನಾಪುರ ತಾಲೂಕಿನ ಹೆಮ್ಮಡಗಾ ಬಳಿ ಅಪಾಯದ ಮಟ್ಟ ಮೀರಿ ಹಾಲತ್ರಿ ಹಳ್ಳ ಹರಿಯುತ್ತಿದೆ. ಸೇತುವೆ ಬಂದ್‌ ಆಗಿದ್ದರಿಂದ ಇಪ್ಪತ್ತೈದು ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿದೆ. ಸೇತುವೆಗೆ ತಡೆಗೋಡೆ ಇಲ್ಲದೇ ಜೀವ ಕೈಯಲ್ಲಿ ಹಿಡಿದು ಸಾಗುವಂತಾಗಿದೆ. ರಾತ್ರಿ ವೇಳೆ ಸ್ವಲ್ಪ ನೀರು ಸೇತುವೆ ಮೇಲಿದ್ದರೂ ಹಳ್ಳಕ್ಕೆ ಬೀಳುವ ಸಾಧ್ಯತೆ ಇದೆ.

ಸುತ್ತೂರು ಸೇತುವೆ ಮುಳುಗಡೆ

ಮೈಸೂರು – ಸುತ್ತೂರು ಗ್ರಾಮಕ್ಕೆ ಸಂಪರ್ಕ ಕೇಂದ್ರವಾಗಿದ್ದ ಸೇತುವೆ ಮುಳುಗಡೆ ಆಗಿದೆ. ಬೀಚನಹಳ್ಳಿಯ ಕಬಿನಿ ಡ್ಯಾಂ ಭರ್ತಿಯಾದ ಹಿನ್ನೆಲೆಯಲ್ಲಿ 70 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿತ್ತು. ಹೀಗಾಗಿ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದ ಸೇತುವೆ ಮುಳುಗಡೆಯಾಗಿ, ಸುತ್ತೂರು ಮಾರ್ಗವಾಗಿ ಮೈಸೂರಿಗೆ ಸಂಪರ್ಕ ಸ್ಥಗಿತಗೊಂಡಿದೆ. ಸೇತುವೆ ಮೇಲೆ ಕಪಿಲಾ ನದಿ ಉಕ್ಕಿ ಹರಿಯುತ್ತಿದೆ.

ಮರ ಬಿದ್ದು ರೈಲು ಸಂಚಾರದಲ್ಲಿ ವ್ಯತ್ಯಯ

ಶಿವಮೊಗ್ಗದ ಹೊಸನಗರ ತಾಲೂಕಿನ ಅರಸಾಳು ಬಟಾಣಿಜೆಡ್ಡು ಬಳಿ ಮರ ಬಿದ್ದು ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಭಾರಿ ಮಳೆಗೆ ಬೃಹತ್ ಮರವೊಂದು ರೈಲ್ವೆ ಹಳಿಗಳ ಮೇಲೆ ಬಿದ್ದಿದೆ. ಜತೆಗೆ ವಿದ್ಯುತ್ ತಂತಿಗಳಿಗೂ ಸಹ ಹಾನಿಯಾಗಿದೆ. ಇದರಿಂದಾಗಿ ತಾಳಗುಪ್ಪದಿಂದ ಬೆಂಗಳೂರಿಗೆ ಹೊರಟಿದ್ದ ರೈಲು ಮರಬಿದ್ದ ಕಾರಣ ಅರಸಾಳು ಬಳಿಯ ಬಟಾಣಿಜೆಡ್ಡು ಬಳಿ ನಿಲ್ಲುವಂತಾಯಿತು. 7.15ಕ್ಕೆ ಶಿವಮೊಗ್ಗ ತಲುಪಬೇಕಿದ್ದ ರೈಲು 9 ಗಂಟೆಗೆ ಆಗಮಿಸಿತು. ಸುಮಾರು ಎರಡು ತಾಸು ಕಾದ ಪ್ರಯಾಣಿಕರು ಹೈರಾಣಾದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ; ಕುಸಿದು ಬಿದ್ದ ಮನೆಗಳು, ರಸ್ತೆ ಕಾಣದೆ ಕಂದಕ್ಕೆ ನುಗ್ಗಿದ ಕಾರು

Karnataka Rain : ಚಿಕ್ಕಮಗಳೂರಿನಲ್ಲಿ ಅಬ್ಬರಿಸುತ್ತಿರುವ ಮಳೆಗೆ ನಾನಾ ಅನಾಹುತಗಳೇ ನಡೆದಿದೆ. ಅಡುಗೆ ಮಾಡುವಾಗ ಗೋಡೆ ಕುಸಿದು ಬಿದ್ದರೆ, ಮಳೆಗೆ ರಸ್ತೆ ಕಾಣದೆ ಕಾರೊಂದು ಕಂದಕ್ಕೆ ನುಗ್ಗಿದೆ. ಮತ್ತೊಂದು ಕಡೆ ನೋಡನೋಡುತ್ತಿದ್ದಂತೆ ಮನೆಯೊಂದು ಕುಸಿದು ಬಿದ್ದಿದೆ. ಶೃಂಗೇರಿಯಲ್ಲಿ ನೆರೆ ಸೃಷ್ಟಿಯಾಗಿದ್ದು, ಹೆದ್ದಾರಿ ಬಿರುಕು ಬಿಟ್ಟು ಆತಂಕ ಹೆಚ್ಚಿಸಿದೆ.

VISTARANEWS.COM


on

By

karnataka Rain
Koo

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ (Karnataka Rain) ಮುಂದುವರಿದಿದ್ದು, ಅಡುಗೆ ಮಾಡುತ್ತಿದ್ದಾಗಲೇ ಮನೆಯ ಗೋಡೆ ಕುಸಿದು ಬಿದ್ದಿದೆ. ಮಹಿಳೆಯೊಬ್ಬರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಗುತ್ತಿ ಗ್ರಾಮದಲ್ಲಿ ಘಟನೆ ನಡೆದಿದೆ. ಭಾರಿ ಮಳೆಯಿಂದಾಗಿ ಮನೆಯೊಂದು ‌ಇದ್ದಕ್ಕಿದ್ದಂತೆ ಕುಸಿದು ಬಿದ್ದಿದೆ. ಗಿರಿಜಮ್ಮ ಎಂಬುವವರು ಸೂರು ಕಳೆದುಕೊಂಡು ಕಂಗಾಲಾಗಿದ್ದಾರೆ. ಗೋಡೆ ಜತೆಗೆ ‌ ಮನೆಯ ಚಾವಣಿಯು ಸಂಪೂರ್ಣ ನಾಶವಾಗಿದೆ.

Karnataka rain

ಕಂದಕಕ್ಕೆ ನುಗ್ಗಿದ ಕಾರು

ಭಾರಿ ಮಳೆಯಿಂದ ರಸ್ತೆ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಂದಕಕ್ಕೆ ನುಗ್ಗಿದೆ. ಚಿಕ್ಕಮಗಳೂರಿನ ಕಳಸ-ಬಾಳೆಹೊನ್ನೂರು ಮಾರ್ಗದಲ್ಲಿ ಘಟನೆ ನಡೆದಿದೆ. ಕಳಸ ಸಮೀಪದ ನೆಲ್ಲಿಕಾರು ಸಮೀಪ ಬಂದಾಗ ಭಾರಿ ಮಳೆಗೆ ರಸ್ತೆ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಕಳಸ ಸರ್ಕಾರಿ ಅಸ್ಪತ್ರೆಗೆ ದಾಖಲು ಮಾಡಲಾಗಿದೆ.

ನೋಡನೋಡುತ್ತಲೇ ಕುಸಿದು ಬಿದ್ದ ಮನೆ

ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನೋಡ ನೋಡುತ್ತಲೇ ಮನೆಯೊಂದು ಕುಸಿದು ಬಿದ್ದಿದೆ. ಮನೆ ಕುಸಿತದ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಗುಡ್ಡೆತೋಟ ಸಮೀಪದ ಶಾಂತಿಗ್ರಾಮದಲ್ಲಿ ಘಟನೆ ನಡೆದಿದೆ. ಮನೆಯಲ್ಲಿ ಯಾರೂ ಇರದ ಕಾರಣ ಭಾರೀ ಅನಾಹುತವೊಂದು ತಪ್ಪಿದೆ.

ಶೃಂಗೇರಿಯಲ್ಲಿ ನೆರೆ ಪರಿಸ್ಥಿತಿ

ಚಿಕ್ಕಮಗಳೂರಿನಲ್ಲಿ ಮುಂದುವರಿದ ಮಳೆಯಾರ್ಭಟಕ್ಕೆ ತುಂಗಾ ನದಿ ಅಬ್ಬರಿಸುತ್ತಿದ್ದು, ಶೃಂಗೇರಿಯಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ನದಿಯಂಚಿನ ಗ್ರಾಮಗಳಲ್ಲಿ ತೋಟಗಳು ಜಲಾವೃತಗೊಂಡಿದೆ. ಶೃಂಗೇರಿ ತಾಲೂಕಿನ ಕೂತಗೋಡು ವ್ಯಾಪ್ತಿಯ ಬೆಟ್ಟಗೇರೆ, ಕೆರೆಮನೆ ಗ್ರಾಮಗಳಲ್ಲಿ ತುಂಗಾ ನದಿ ಉಕ್ಕಿದ ಪರಿಣಾಮ ತೋಟಗಳು ಮುಳುಗಡೆಯಾಗಿದೆ. ಜತೆಗೆ ಹಲವು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇನ್ನೂ ಕಳೆದ ಮೂರು ದಿನಗಳಿಂದ ತುಂಗಾ ಪ್ರವಾಹ ಕಡಿಮೆಯಾಗದ ಹಿನ್ನೆಲೆಯಲ್ಲಿ ನೆರೆ ತಗ್ಗುವಂತೆ ತುಂಗಾ ನದಿಗೆ ಗ್ರಾಮಸ್ಥರು ಪೂಜೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: Illicit relationship : ಪರ ಪುರುಷನೊಂದಿಗೆ ಓಡಿ ಹೋದ ಪತ್ನಿ; ಮರ್ಯಾದೆಗೆ ಅಂಜಿ ಪತಿ ಆತ್ಮಹತ್ಯೆ

ಮತ್ತೆ ಹೆಬ್ಬಾಳೆ ಸೇತುವೆ ಮುಳುಗಡೆ

ಚಿಕ್ಕಮಗಳೂರಿನಲ್ಲಿ ಗಾಳಿ-ಮಳೆ ಅಬ್ಬರಕ್ಕೆ ಸತತ ಮೂರನೇ ಬಾರಿ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಕುದುರೆಮುಖ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಿಂದಾಗಿ ಕಳಸ-ಹೊರನಾಡು ಸಂಪರ್ಕದ ಹೆಬ್ಬಾಳೆ ಸೇತುವೆ ಮತ್ತೆ ಮುಳುಗಡೆಯಾಗಿದೆ. ಇದರಿಂದಾಗಿ ಕಳಸ-ಹೊರನಾಡು ಸೇರಿ ಹತ್ತಾರು ಹಳ್ಳಿಯ ಸಂಪರ್ಕ ಕಡಿತಗೊಂಡಿದೆ.

ಹೆದ್ದಾರಿ ಬಿರುಕು

ಚಿಕ್ಕಮಗಳೂರಿನಲ್ಲಿ ಮಳೆಗೆ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಸುಮಾರು 50 ಅಡಿಗೂ ಹೆಚ್ಚು ದೂರ ಬಿರುಕು ಬಿಟ್ಟಿದೆ. ಶೃಂಗೇರಿ ತಾಲೂಕಿನ ನೆಮ್ಮಾರು ಎಸ್ಟೇಟ್ ಬಳಿ ಘಟನೆ ನಡೆದಿದೆ. ತುಂಗಾ ನದಿ ಪಕ್ಕದಲ್ಲೇ ಬಿರುಕು ಬಿಟ್ಟಿದ್ದು, ರಾಷ್ಟ್ರೀಯ ಹೆದ್ದಾರಿ 169 ಶೃಂಗೇರಿ-ಕಾರ್ಕಳ ಮಾರ್ಗದಲ್ಲಿ ನಿತ್ಯ ಹತ್ತಾರು ಬಸ್, ನೂರಾರು ವಾಹನಗಳು ಓಡಾಡುವವರು ಭೀತಿಗೊಂಡಿದ್ದಾರೆ. ಕಳಪೆ ಕಾಮಗಾರಿಯಿಂದ ಈ ಸ್ಥಿತಿ ಎಂದು ಸ್ಥಳೀಯರು ಆರೋಪಿಸಿದ್ದಾರೆ. ವರ್ಷದ ಹಿಂದೆ ಇದೇ ಜಾಗದಲ್ಲಿ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ್ದರು.

ಉಕ್ಕಿ ಹರಿಯುತ್ತಿರುವ ಭದ್ರಾ ನದಿಯಲ್ಲಿ ಮೀನುಗಾರಿಕೆ

ಮಲೆನಾಡ ಮಳೆಗೆ ತುಂಗಾ-ಭದ್ರಾ-ಹೇಮಾವತಿ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಜಿಲ್ಲಾ ಆಡಳಿತದ ಎಚ್ಚರಿಕೆಯ ನಡುವೆಯೂ ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪ ಮೀನುಗಾರಿಕೆಗೆ ಇಳಿದಿದ್ದಾರೆ. ರುದ್ರನರ್ತನ ತಾಳಿರುವ ಭದ್ರ ನದಿಯಲ್ಲಿ ಜನರು ಮೀನು ಹಿಡಿಯುತ್ತಿರುವ ದೃಶ್ಯಗಳು ಕಂಡು ಬಂದಿದೆ. ಭದ್ರೆಯ ಒಡಲಲ್ಲಿ ತೆಪ್ಪದಲ್ಲಿ ಮೀನುಗಾರಿಕೆಗೆ ಮುಂದಾಗಿದ್ದು, ಸ್ವಲ್ಪ ಯಾಮಾರಿದರು ಅಪಾಯ ಕಟ್ಟಿಟ್ಟಬುತ್ತಿ.

ಇತ್ತ ಭದ್ರಾ ನದಿ ಅಬ್ಬರಕ್ಕೆ ಸ್ಥಳೀಯರು ಕಂಗಾಲಾಗಿದ್ದಾರೆ. ಭದ್ರಾ ನದಿ ತಟದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಬಾಳೆಹೊನ್ನೂರಿನ ನದಿ ತಟದ ಜಮೀನುಗಳು, ತೋಟಗಳು ಮುಳುಗಡೆಯಾಗಿದೆ. ಅಡಿಕೆ, ಕಾಫಿ ತೋಟಗಳು ಸಂಪೂರ್ಣ ಜಲಾವೃತಗೊಂಡಿದೆ.

ಪ್ರವಾಸಿಗರ ನಿಷೇಧ

ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಚಿಕ್ಕಮಗಳೂರಿನ ಹೊನ್ನಮ್ಮನ ಹಳ್ಳ ಜಲಪಾತ ರೌದ್ರಾವತಾರ ತಾಳಿದೆ. ಚಿಕ್ಕಮಗಳೂರು ತಾಲೂಕಿನ ದತ್ತಪೀಠ ರಸ್ತೆಯಲ್ಲಿರುವ ಹೊನ್ನಮ್ಮನ ಹಳ್ಳ ಫಾಲ್ಸ್‌ನ ಮೆಟ್ಟಿಲುಗಳನ್ನು ಆವರಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಫಾಲ್ಸ್ ಬಳಿ ಪ್ರವಾಸಿಗರ ನಿಷೇಧ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಹಾಸನದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿತ; ಬೆಳಗಾವಿಯಲ್ಲಿ ರಸ್ತೆಗೆ ಉರುಳಿದ ಬೃಹತ್‌ ಬಂಡೆಗಲ್ಲು

Karnataka Rain : ಧಾರಾಕಾರವಾಗಿ ಸುರಿಯುತ್ತಿರುವ ಮಳೆಯು ನಾನಾ ಅವಾಂತರಗಳನ್ನೇ (Rain Effect) ಸೃಷ್ಟಿಸಿದೆ. ಹಾಸನದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿದಿದೆ. ಬೆಳಗಾವಿಯಲ್ಲಿ ರಸ್ತೆಗೆ ಬೃಹತ್‌ ಗಾತ್ರದ ಬಂಡೆಗಲ್ಲು ಉರುಳಿತ್ತು. ನಂಜನಗೂಡಿನಲ್ಲಿ ಪ್ರವಾಹ ಭೀತಿ ಶುರುವಾಗಿದೆ.

VISTARANEWS.COM


on

By

karnataka Rain
Koo

ಹಾಸನ: ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿದಿದ್ದು, ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯದಿಂದ ಪಾರಾಗಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎತ್ತಿನಹಳ್ಳ ಬಳಿ ಘಟನೆ (Karnataka Rain) ನಡೆದಿದೆ. ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಘಾಟ್ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಏಕಾಏಕಿ ಮಣ್ಣು ಕುಸಿದಿದೆ. ಪರಿಣಾಮ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಕಂದಾಯ ಇಲಾಖೆ ಸಿಬ್ಬಂದಿ ಮಣ್ಣು ತೆರವುಗೊಳಿಸಿದರು.

ಹಾಸನದ ಸಕಲೇಶಪುರ ತಾಲೂಕಿನಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಹಳ್ಳ ಕೊಳ್ಳಗಳು ಉಕ್ಕಿ ಹರಿಯುತ್ತಿದೆ. ಮಠಸಾಗರದ ಬಳಿ ನೀರು ನಿಂತು ಕೃಷ್ಣಾಪುರ ಸಂಪರ್ಕ ಕಡಿತಗೊಂಡಿದೆ. ಹಳ್ಳ ಉಕ್ಕಿ ಹರಿದ ಪರಿಣಾಮ ಕಾಫಿ, ಅಡಿಕೆ ತೋಟಗಳು ಜಲಾವೃತಗೊಂಡಿದೆ. ರಸ್ತೆ ಸಂಪರ್ಕ ಕಡಿತ‌ ಹಿನ್ನೆಲೆಯಲ್ಲಿ‌ ರೋಗಿಗಳನ್ನೂ ಆಸ್ಪತ್ರೆಗೆ ಕರೆದೊಯ್ಯಲಾಗದೆ ಪರದಾಟ ಅನುಭವಿಸಿದರು.

ಶಿರಾಡಿಘಾಟ್‌ನಲ್ಲಿ ಗುಡ್ಡ ಕುಸಿತ

ಭಾರಿ ಮಳೆಗೆ ಶಿರಾಡಿಘಾಟ್‌ನ ಮತ್ತೊಂದು ಕಡೆ ಗುಡ್ಡ ಕುಸಿದಿದೆ. ಹಾಸನದ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪ ಘಟನೆ ನಡೆದಿದೆ. ಒಂದು ನೂರಾರು ಮೀಟರ್ ಎತ್ತರದಿಂದ ಕೆಳಗೆ ಗುಡ್ಡ ಕುಸಿದಿದೆ. ಕೂದಲೆಳೆ ಅಂತರದಲ್ಲಿ ವಾಹನ ಸವಾರರು ಪಾರಾಗಿದ್ದಾರೆ. ಸ್ಥಳಕ್ಕೆ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ದೌಡಾಯಿಸಿದ್ದು, ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿದೆ.

ಗುಡ್ಡ ಕುಸಿತದಿಂದ ಸುಮಾರು 10 ಕಿಮಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಟ್ರಕ್, ಲಾರಿ ಟ್ಯಾಕರ್ ಓಡಾಟಕ್ಕೆ ತಾತ್ಕಾಲಿಕ ತಡೆಹಿಡಿಯಲಾಗಿದೆ. ಅತ್ತ ಚಾರ್ಮಾಡಿ ಘಾಟ್‌ನಲ್ಲೂ ಪ್ರಯಾಣ ದುಸ್ಥರ ಹಿನ್ನೆಲೆಯಲ್ಲಿ ಹಾಸನದಲ್ಲಿಯೇ ವಾಹನ ನಿಲ್ಲಿಸಲು ಸೂಚನೆ ನೀಡಲಾಗಿದೆ. ಸದ್ಯ ಸಕಲೇಶಪುರದವರೆಗೆ ತೆರಳಲು ಸಾರಿಗೆ ಬಸ್‌ಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮಂಗಳೂರು ಕಡೆಗೆ ಹೋಗುವ ಬಸ್‌ಗಳಿಗೂ ಹಾಸನ ತಾಲೂಕಿನ ಕಂದಲಿ ಬಳಿ ತಡೆಹಿಡಯಲಾಗಿದೆ.

karnataka Rain

ರಸ್ತೆಗೆ ಉರುಳಿ ಬಿದ್ದ ಬಂಡೆಗಲ್ಲು

ನಿರಂತರ ಮಳೆ ಬೃಹತ್ ಗಾತ್ರದ ಬಂಡೆಗಲ್ಲು ರಸ್ತೆಗೆ ಉರುಳಿ ಬಿದ್ದಿದೆ. ಬೆಳಗಾವಿ ಅಂಬೋಲಿ‌ ಮಾರ್ಗ ಮಧ್ಯೆ ಹೆದ್ದಾರಿಗೆ ಬಂಡೆಗಲ್ಲು ಉರುಳಿದೆ. ಗೋವಾ, ಕರ್ನಾಟಕ, ಮಹಾರಾಷ್ಟ್ರ ಬೆಸೆಯುವ ಅಂಬೋಲಿ ಸಾವಂತವಾಡಿ ಹೆದ್ದಾರಿ ಇದಾಗಿದ್ದು, ಅದೃಷ್ಟವಷಾತ್ ಘಟನೆಯಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ. ಬೆಳಗ್ಗಿನಿಂದಲೇ ಬಂಡೆಗಲ್ಲು ತೆರವುಗೊಳಿಸುವ ಕೆಲಸದಲ್ಲಿ ಅಧಿಕಾರಿಗಳು ಬ್ಯುಸಿಯಾಗಿದ್ದಾರೆ. ಮಹಾರಾಷ್ಟ್ರ ಲೋಕೋಪಯೋಗಿ ಹಾಗೂ ಪೊಲೀಸರ ನೇತೃತ್ವದಲ್ಲಿ ಬಂಡೆ ತೆರವು ಕಾರ್ಯಾಚರಣೆ ನಡೆಯುತ್ತಿದೆ.

karnataka Rain

ಬೆಳಗಾವಿಯಲ್ಲಿ ಉಕ್ಕಿ ಹರಿಯುತ್ತಿರುವ ಮಲಪ್ರಭಾ ನದಿ

ಬೆಳಗಾವಿಯ ಖಾನಾಪುರದ ಕಣಕುಂಬಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಲಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಹೀಗಾಗಿ ನದಿ ತೀರದ ರೈತರಲ್ಲಿ ಆತಂಕ ಹೆಚ್ಚಿದ್ದು, ಅಕ್ಕ ಪಕ್ಕದ ಜಮೀನುಗಳಿಗೆ ನೀರು ನುಗ್ಗುವ ಆತಂಕವಿದೆ. ಇತ್ತ ಪಾರಿಶ್ವಾಡ ಹಾಗೂ ಹಿರೇಮುನವಳ್ಳಿ ಸಂಪರ್ಕ ಕಲ್ಪಿಸುವ ಸೇತುವೆ ದುರಸ್ಥಿತಿಗೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: Illicit relationship : ಪರ ಪುರುಷನೊಂದಿಗೆ ಓಡಿ ಹೋದ ಪತ್ನಿ; ಮರ್ಯಾದೆಗೆ ಅಂಜಿ ಪತಿ ಆತ್ಮಹತ್ಯೆ

ಮಂಗಳೂರಿನಲ್ಲಿ ಸುರಿಯುತ್ತಿರುವ ನಿರಂತರ ಮಳೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ನಗರ ಭಾಗದಲ್ಲಿ ಮಳೆ ಅಬ್ಬರ ಕಡಿಯೆಯಾದರೆ, ಗ್ರಾಮಿಣ ಭಾಗದಲ್ಲಿ ಮುಂದುವರಿದಿದೆ. ನಗರ ಭಾಗ ಹೊರತು ಪಡಿಸಿ ಗ್ರಾಮಿಣ ಭಾಗದ ಶಾಲಾ ಕಾಲೇಜುಗಳಿಗೆ ರಜೆ ಷೋಷಣೆ ಮಾಡಲಾಗಿದೆ. ಕಡಬ ತಾಲೂಕಿನ ವಿವಿಧೆಡೆ ಭಾರಿ ಮಳೆಯಾಗುತ್ತಿದ್ದು, ಇಚ್ಲಂಪಾಡಿಯಲ್ಲಿ ಜಲಾವೃತಗೊಂಡು ರಸ್ತೆ ಸಂಪರ್ಕ ಕಡಿತಗೊಂಡಿದೆ. ರಸ್ತೆಗೆ ಗುಂಡ್ಯ ಹೊಳೆ ನೀರು ಹರಿದು ಮಡಿಪು-ಬರೆಮೇಲು ರಸ್ತೆ ಸಂಪರ್ಕ ಕಡಿತಗೊಂಡಿದೆ. ಉಳ್ಳಾಕ್ಲು ದೇವಸ್ಥಾನ, ನದಿಬದಿಯ ಕೃಷಿ ತೋಟಗಳು ಜಲಾವೃತಗೊಂಡಿದೆ. ಅಪಾಯದ ಮಟ್ಟದಲ್ಲಿ ನೇತ್ರಾವತಿ ನದಿ ಹರಿಯುತ್ತಿದ್ದು, ಧರ್ಮಸ್ಥಳದ ಸ್ನಾನಘಟ್ಟದಲ್ಲಿ ನೀರಿನ ಪ್ರಮಾಣ ಹೆಚ್ಚಳಗೊಂಡಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಹೆಚ್ಚಳ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ನೀರಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಶಿವಮೊಗ್ಗದಲ್ಲಿ ಅಪಾಯಕಾರಿ ಪ್ರವಾಸಿ ತಾಣಗಳಿಗೆ ನಿಷೇಧ

ಮಲೆನಾಡು ಶಿವಮೊಗ್ಗದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಅಪಾಯಮಟ್ಟ ಮಟ್ಟ ಮೀರಿ ನದಿಗಳು, ಹಳ್ಳ ಕೊಳ್ಳಗಳು ಹರಿಯುತ್ತಿದೆ. ಹೀಗಾಗಿ ಅಪಾಯಕಾರಿ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶವನ್ನು ನಿಷೇಧ ಮಾಡಲಾಗಿದೆ. ಸಾರ್ವಜನಿಕರ ಹಿತದೃಷ್ಠಿಯಿಂದ ಪೊಲೀಸ್ ಇಲಾಖೆ ಸನ್ನದ್ಧಗೊಂಡಿದೆ.

ಅಣೆಕಟ್ಟುಗಳು, ಜಲಪಾತಗಳು ಮತ್ತು ನದಿ ನೀರಿಗೆ ಇಳಿಯುವುದು. ನದಿಯಲ್ಲಿ ಈಜಾಡುವುದು ಮತ್ತು ಸೆಲ್ಫಿಗಳನ್ನು ತೆಗೆದುಕೊಳ್ಳುವುದಕ್ಕೆ ನಿರ್ಬಂಧ ಹೇರಲಾಗಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಸೂಚನಾ ಫಲಕಗಳನ್ನು ಅಳವಡಿಕೆ ಮಾಡಲಾಗಿದೆ. ಆಯಾಕಟ್ಟಿನಲ್ಲಿ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ತುರ್ತು ಸಂದರ್ಭಗಳಲ್ಲಿ ಸಹಾಯಕ್ಕಾಗಿ 112 ಸಹಾಯವಾಣಿಗೆ ಕರೆ ಮಾಡಲು ಮನವಿ ಮಾಡಲಾಗಿದೆ.

ನಂಜನಗೂಡಿನಲ್ಲಿ ಪ್ರವಾಹ ಭೀತಿ

ಮೈಸೂರಿನ ನಂಜನಗೂಡಿನಲ್ಲಿ ಪ್ರವಾಹ ಭೀತಿ ಎದುರಾಗಿದೆ. ಹೀಗಾಗಿ ತಗ್ಗು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಬಿನಿ ಜಲಾಶಯದಿಂದ ಹೊರ ಹರಿವು ಹೆಚ್ಚಳದಿಂದಾಗಿ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಬಳಿ ಸ್ನಾನಘಟ್ಟ, ಹದಿನಾರು ಕಾಲು ಮಂಟಪ, ಪರಶುರಾಮ ದೇವಾಲಯ ಮುಳುಗಡೆಯಾಗಿದೆ.

ಹೀಗಾಗಿ ನಂಜನಗೂಡು ತಾಲೂಕಿನ ಕಡಜಟ್ಟಿ ಗ್ರಾಮ, ಹುಲ್ಲಹಳ್ಳಿ ಸುತ್ತಮುತ್ತಲಿನ ಪ್ರದೇಶಗಳು, ಹುಲ್ಲಹಳ್ಳಿ ಮೈಸೂರು ಸೇತುವೆ, ಬೊಕ್ಕ ಹಳ್ಳಿ, ಕುಳ್ಳಂಕಯ್ಯನ ಹುಂಡಿ, ಕಪಿಲಾ ನದಿ ಸ್ನಾನಘಟ್ಟಗಳಿಗೆ ತೆರಳಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಹಳ್ಳದಕೇರಿ ಬಡಾವಣೆಯಲ್ಲಿ ಮನೆಗಳು ಜಲಾವೃತಗೊಂಡ ಹಿನ್ನೆಲೆ ಮಹಿಳೆಯೊಬ್ಬರು ಜಿಲ್ಲಾಧಿಕಾರಿಗಳ ಬಳಿ ತಮ್ಮ ಅಳಲನ್ನು ತೋಡಿಕೊಂಡರು. ಹೀಗಾಗಿ ಕೂಡಲೇ ನಿವಾಸಿಗಳನ್ನು ಗಿರಿಜಾ ಕಲ್ಯಾಣ ಮಂಟಪಕ್ಕೆ ಸ್ಥಳಾಂತರ ಮಾಡಿ ಅವರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ತಹಶೀಲ್ದಾರ್ ಅವರಿಗೆ ಸೂಚನೆ ನೀಡಿದರು.

ನಾಪೋಕ್ಲು ಮೂರ್ನಾಡು ಸಂಪರ್ಕ ಕಲ್ಪಿಸುವ ರಸ್ತೆ ಬಂದ್

ಕೊಡಗಿನಲ್ಲಿ‌ ಭಾರಿ ಗಾಳಿ ಮಳೆಯಿಂದಾಗಿ ಕಾವೇರಿ ನದಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕಾವೇರಿ ನದಿ ಉಕ್ಕಿ ಹರಿದು ನಾಪೋಕ್ಲು ಮೂರ್ನಾಡು ಸಂಪರ್ಕ ಕಲ್ಪಿಸುವ ರಸ್ತೆ ಬಂದ್ ಆಗಿದೆ. ನಾಪೋಕ್ಲು ಸಮೀಪದ ಬೊಳಿಬಾಣೆಯಲ್ಲಿ ನೀರು ನಿಂತಿರುವುದರಿಂದ ವಾಹನಗಳು ಬದಲಿ ರಸ್ತೆಯಲ್ಲಿ ಸಾಗುತ್ತಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬಿರುಗಾಳಿ ಜತೆಗೆ ಅಬ್ಬರಿಸಲಿದ್ದಾನೆ ವರುಣ; ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka Weather Forecast: ಕರಾವಳಿ-ಮಲೆನಾಡು ಭಾಗದಲ್ಲಿ ವರುಣನ ರೌದ್ರಾವತಾರಕ್ಕೆ ಜನರು ನಲುಗಿ ಹೋಗಿದ್ದಾರೆ. ಮುಂದಿನ ನಾಲ್ಕೈದು ದಿನಗಳು ಗಾಳಿ ಜತೆಗೆ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ (Heavy Rain Alert) ನೀಡಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಜು.17ರಂದು ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ (Heavy rain) ಎಚ್ಚರಿಕೆ ಇದ್ದು, ಮಲೆನಾಡಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಸೇರಿದಂತೆ ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೋಲಾರದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್‌, ಧಾರವಾಡ, ಗದಗ, ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರಿನಲ್ಲಿ ಮಳೆಯು ಅಬ್ಬರಿಸಲಿದೆ. ಕರಾವಳಿಯಲ್ಲಿ ವ್ಯಾಪಕ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಅಲರ್ಟ್‌ ನೀಡಲಾಗಿದೆ.

ಇದನ್ನೂ ಓದಿ: Rain Effect : ಭಾರಿ ಮಳೆಗೆ ಶಿರೂರು ಗುಡ್ಡ ಕುಸಿತ; ಮಣ್ಣಿನಡಿ ಸಿಲುಕಿದ್ದ ಮಹಿಳೆ ಮೃತದೇಹ ಪತ್ತೆ, ಉಳಿದವರಿಗಾಗಿ ಹುಡುಕಾಟ

ಬೆಂಗಳೂರಿನಲ್ಲಿ ಮರೆಯಾಗುವ ಸೂರ್ಯ

ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಅನುಕ್ರಮವಾಗಿ 24 ಮತ್ತು 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ರೆಡ್‌ ಅಲರ್ಟ್‌ ಘೋಷಣೆ

ಗುಡುಗು ಸಹಿತ ವ್ಯಾಪಕ ಮಳೆಯಾಗಲಿದ್ದು, ಗಾಳಿ ವೇಗವು 40-50 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮಳೆ ಅನಾಹುತದ ಚಿತ್ರಣ ಹೀಗಿದೆ ನೋಡಿ

Karnataka Rain
Rain Effect
karnataka Rain
Karnataka Rain
Karnataka Rain
karnataka Rain
karnataka rain
karnataka Rain
karnataka Rain

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Bangladesh Violence
ವಿದೇಶ55 mins ago

Bangladesh Violence: ಬಾಂಗ್ಲಾ ಧಗ ಧಗ; ಭುಗಿಲೆದ್ದ ಹಿಂಸಾಚಾರಕ್ಕೆ 35 ಮಂದಿ ಬಲಿ

Karnataka Assembly
ಪ್ರಮುಖ ಸುದ್ದಿ1 hour ago

Karnataka Assembly : ಗದ್ದಲದಲ್ಲೇ ಮುಕ್ತಾಯಗೊಂಡ ಮೂರನೇ ದಿನದ ವಿಧಾನಮಂಡಲ ಅಧಿವೇಶನ

Udhayanidhi Stalin
ದೇಶ2 hours ago

Udhayanidhi Stalin: ತಮಿಳುನಾಡು ಉಪ ಮುಖ್ಯಮಂತ್ರಿಯಾಗಿ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್?

The Ambani family gave a wedding special reception to the staff and housekeepers
ದೇಶ2 hours ago

Anant Radhika Wedding: ಸಿಬ್ಬಂದಿ, ಮನೆಗೆಲಸದವರಿಗೆ ಮದುವೆಯ ಭರ್ಜರಿ ಔತಣಕೂಟ ನೀಡಿದ ಅಂಬಾನಿ ಫ್ಯಾಮಿಲಿ!

Police Suspended
ಕರ್ನಾಟಕ2 hours ago

Police Suspended : ಠಾಣೆಯಲ್ಲೇ ಕೈಮಿಲಾಯಿಸಿದ ಪೊಲೀಸ್​ ಅಧಿಕಾರಿಗಳಿಬ್ಬರು ಸಸ್ಪೆಂಡ್​​

Train Derail
ದೇಶ3 hours ago

Train Derail: “ಪ್ರಚಾರದ ಗೀಳು ಬಿಟ್ಟು ರೈಲುಗಳ ಸುರಕ್ಷತೆ ಬಗ್ಗೆ ಗಮನ ಹರಿಸಿ”- ಪ್ರಧಾನಿ ಮೋದಿ ವಿರುದ್ಧ ಖರ್ಗೆ ವಾಗ್ದಾಳಿ

Natasa Stankovic
ಪ್ರಮುಖ ಸುದ್ದಿ3 hours ago

Natasa Stankovic : ಹಾರ್ದಿಕ್ ಪಾಂಡ್ಯಗೆ ಡೈವೋರ್ಸ್​ ನೀಡಿದ್ದೇನೆ; ಪತ್ನಿ ನತಾಶಾ ಹೇಳಿಕೆ

Neet UG
ದೇಶ4 hours ago

NEET UG 2024: ನೀಟ್‌ ಅಕ್ರಮ; ನಾಲ್ವರು ಏಮ್ಸ್‌ ವಿದ್ಯಾರ್ಥಿಗಳು ಸಿಬಿಐ ಬಲೆಗೆ

Farmers should get crop insurance immediately says MP BY Raghavendra
ಶಿವಮೊಗ್ಗ4 hours ago

Shivamogga News: ಕೂಡಲೇ ಬೆಳೆ ವಿಮೆ ಮಾಡಿಸಿಕೊಳ್ಳಲು ಸಂಸದ ಬಿ.ವೈ. ರಾಘವೇಂದ್ರ ಮನವಿ

Guru Puja Mahotsav and Sangeethotsava from July 19th at Kaiwara Srikshethra Sadguru Sri Yoginareyan Mutt
ಚಿಕ್ಕಬಳ್ಳಾಪುರ4 hours ago

Kaivara Tatayya: ಕೈವಾರ ಶ್ರೀ ಯೋಗಿನಾರೇಯಣ ಮಠದಲ್ಲಿ ಜು.19ರಿಂದ ಗುರುಪೂಜಾ ಮಹೋತ್ಸವ, ಸಂಗೀತೋತ್ಸವ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ8 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ10 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ5 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

ಟ್ರೆಂಡಿಂಗ್‌