Bangladesh Violence: ಬಾಂಗ್ಲಾ ಧಗ ಧಗ; ಭುಗಿಲೆದ್ದ ಹಿಂಸಾಚಾರಕ್ಕೆ 35 ಮಂದಿ ಬಲಿ - Vistara News

ವಿದೇಶ

Bangladesh Violence: ಬಾಂಗ್ಲಾ ಧಗ ಧಗ; ಭುಗಿಲೆದ್ದ ಹಿಂಸಾಚಾರಕ್ಕೆ 35 ಮಂದಿ ಬಲಿ

Bangladesh Violence: ಅನೇಕ ದಿನಗಳಿಂದ ಪ್ರತಿಭಟನಾಕಾರರು ರಾಷ್ಟ್ರವ್ಯಾಪಿ ಬಂದ್ ಗೆ ಕರೆ ನೀಡಿದರು. ಪ್ರತಿಭಟನೆಯ ಹಿನ್ನೆಲೆಯಲ್ಲಿ ದೇಶದಲ್ಲಿ ಮೊಬೈಲ್ ಇಂಟರ್ನೆಟ್ ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರ ಆಡಳಿತ ಪಕ್ಷವಾದ ಅವಾಮಿ ಲೀಗ್ನ ವಿದ್ಯಾರ್ಥಿ ಘಟಕದ ಸದಸ್ಯರೊಂದಿಗೆ ವಿದ್ಯಾರ್ಥಿಗಳು ಘರ್ಷಣೆ ನಡೆಸಿದ್ದರಿಂದ 35ಮಂದಿ ಸಾವನ್ನಪ್ಪಿದ್ದಾರೆ.

VISTARANEWS.COM


on

Bangladesh Violence
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಢಾಕಾ: ಉದ್ಯೋಗ ಮೀಸಲಾತಿ(Job Reservation) ವಿಚಾರವಾಗಿ ಬಾಂಗ್ಲಾದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರ(Bangladesh Violence) ಬರೋಬ್ಬರಿ 35 ಮಂದಿಯನ್ನು ಬಲಿ ತೆಗೆದುಕೊಂಡಿದೆ. ಮೀಸಲಾತಿ ವಿಚಾರವಾಗಿ ವಿದ್ಯಾರ್ಥಿಗಳು ರಾಷ್ಟ್ರವ್ಯಾಪಿ ಕರೆ ನೀಡಿದ್ದ ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡಿತ್ತು. ಇನ್ನು ಉದ್ರಿಕ್ತ ಪ್ರತಿಭಟನಾಕಾರರು ಢಾಕಾದಲ್ಲಿರುವ ಟಿವಿ ಪ್ರಧಾನ ಕಚೇರಿಗಳಿಗೆ ಬೆಂಕಿ ಹಚ್ಚಿದ್ದಾರೆ. ನೂರಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಪ್ರತಿಭಟನಾ ನಿರತ ವಿದ್ಯಾರ್ಥಿಗಳೊಂದಿಗೆ ಸರ್ಕಾರ ಮಾತುಕತೆ ನಡೆಸಲಿದೆ ಎಂದು ಕಾನೂನು ಸಚಿವ ಅನಿಸುಲ್ ಹಕ್ ಹೇಳಿದ್ದಾರೆ

ಅನೇಕ ದಿನಗಳಿಂದ ಪ್ರತಿಭಟನಾಕಾರರು ರಾಷ್ಟ್ರವ್ಯಾಪಿ ಬಂದ್ ಗೆ ಕರೆ ನೀಡಿದರು. ಪ್ರತಿಭಟನೆಯ ಹಿನ್ನೆಲೆಯಲ್ಲಿ ದೇಶದಲ್ಲಿ ಮೊಬೈಲ್ ಇಂಟರ್ನೆಟ್ ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರ ಆಡಳಿತ ಪಕ್ಷವಾದ ಅವಾಮಿ ಲೀಗ್ನ ವಿದ್ಯಾರ್ಥಿ ಘಟಕದ ಸದಸ್ಯರೊಂದಿಗೆ ವಿದ್ಯಾರ್ಥಿಗಳು ಘರ್ಷಣೆ ನಡೆಸಿದ್ದರಿಂದ 35ಮಂದಿ ಸಾವನ್ನಪ್ಪಿದ್ದಾರೆ. ಬ್ರಾಕ್ ವಿಶ್ವವಿದ್ಯಾನಿಲಯದ ಬಳಿಯ ಮೆರುಲ್ ಬಡ್ಡಾದಲ್ಲಿ ವಿದ್ಯಾರ್ಥಿಗಳ ನಡುವೆ ಘರ್ಷಣೆಗಳು ನಡೆದಿವೆ ಎಂದು ಢಾಕಾ ಟ್ರಿಬ್ಯೂನ್ ವರದಿ ಮಾಡಿದೆ. ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದರು.

ಪ್ರತಿಭಟನೆ ಏಕೆ?

ಜೂನ್ 5 ರಂದು, ಬಾಂಗ್ಲಾದೇಶ ಹೈಕೋರ್ಟ್ 1971 ರ ಪಾಕಿಸ್ತಾನದಿಂದ ಸ್ವಾತಂತ್ರ್ಯದ ಯುದ್ಧದಲ್ಲಿ ಹೋರಾಡಿದವರ ಕುಟುಂಬಗಳಿಗೆ ಶೇ. 30 ಮೀಸಲಾತಿಯನ್ನು ಘೋಷಿಸಿತ್ತು. ಇದನ್ನು ವಿದ್ಯಾರ್ಥಿಗಳು ಮತ್ತು ಶಿಕ್ಷಕರ ನೇತೃತ್ವದ ಬೃಹತ್ ಆಂದೋಲನದ ನಂತರ 2018 ರಲ್ಲಿ ರದ್ದುಗೊಳಿಸಲಾಗಿತ್ತು. ತಾರತಮ್ಯದ ಮೀಸಲಾತಿಯನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿದ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸುತ್ತಿದ್ದಾರೆ. ಖಾಸಗಿ ವಲಯದ ಉದ್ಯೋಗಗಳ ಕೊರತೆಯು ಬಾಂಗ್ಲಾದೇಶದಲ್ಲಿ ಸರ್ಕಾರಿ ಉದ್ಯೋಗಗಳನ್ನು ಹೆಚ್ಚು ಲಾಭದಾಯಕವಾಗಿಸುತ್ತದೆ ಎಂದು ತಜ್ಞರು ಹೇಳಿದ್ದಾರೆ.

ಪ್ರಸ್ತುತ, ಬಾಂಗ್ಲಾದೇಶದಲ್ಲಿ 170 ಮಿಲಿಯನ್ ಜನಸಂಖ್ಯೆಯಲ್ಲಿ ಸುಮಾರು 32 ಮಿಲಿಯನ್ ಯುವಜನರು ಉದ್ಯೋಗದಲ್ಲಿ ಇಲ್ಲ. ಆರ್ಥಿಕ ಸವಾಲುಗಳು ನಿಶ್ಚಲತೆ, ಸುಮಾರು 10% ಹಣದುಬ್ಬರ ಮತ್ತು ಕುಗ್ಗುತ್ತಿರುವ ಹಣದ ಮೌಲ್ಯ ಯುವಜನತೆಯನ್ನು ನಿರಾಶರನ್ನಾಗಿಸಿದೆ. ಕಳೆದ ತಿಂಗಳು ಆರಂಭವಾದ ಪ್ರತಿಭಟನೆಗಳು, ಪ್ರತಿಭಟನಾಕಾರರ ಬೇಡಿಕೆಗಳನ್ನು ಈಡೇರಿಸಲು ಪ್ರಧಾನಿ ಶೇಖ್ ಹಸೀನಾ ನಿರಾಕರಿಸಿದ ನಂತರ ತೀವ್ರಗೊಂಡವು.

ಭಾರತೀಯ ಪ್ರಜೆಗಳಿಗೆ ಸೂಚನೆ

ಬಾಂಗ್ಲಾದೇಶದಲ್ಲಿ ಉದ್ಯೋಗ ಮೀಸಲಾತಿಗಾಗಿ ಹಿಂಸಾಚಾರ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಬಾಂಗ್ಲಾದೇಶದಲ್ಲಿರುವ ಭಾರತೀಯ ಪ್ರಜೆಗಳು ಹಾಗೂ ವಿದ್ಯಾರ್ಥಿಗಳಿಗೆ ಭಾರತೀಯ ರಾಜಭಾರ ಕಚೇರಿ ಸಲಹಾ ಸೂಚಿ ಬಿಡುಗಡೆ ಮಾಡಿದೆ. ಮನೆಯಿಂದ ಹೊರಬಾರದಂತೆ ಮತ್ತು ದೂರ ಪ್ರಯಾಣವನ್ನು ತಪ್ಪಿಸುವಂತೆ ಸಲಹೆ ನೀಡಿದೆ.

ಇದನ್ನೂ ಓದಿ: Trump Assassination Bid: ಟ್ರಂಪ್‌ ಮೇಲೆ ಗುಂಡಿನ ದಾಳಿ; ಶೂಟರ್‌ ಫೋಟೋ ರಿಲೀಸ್‌- ಆತನ ಸ್ನೇಹಿತರು ಹೇಳಿದ್ದೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Israel Palestine War: 50 ಕಿ.ಮೀ ದೂರದಿಂದಲೇ ಪ್ಯಾಲೆಸ್ತಿನ್‌ ಕಮಾಂಡರ್‌ನನ್ನು ಕೊಂದ ಇಸ್ರೇಲ್‌! ವಿಡಿಯೊ ನೋಡಿ

Israel Palestine War: ಜುಲೈ 18ರಂದು ಐಡಿಎಫ್ (ಇಸ್ರೇಲ್‌ ಡಿಫೇನ್ಸ್‌ ಪೋರ್ಸ್‌) ಪ್ಯಾಲೆಸ್ತಿನ್‌ ಉಗ್ರ ಸಂಘಟನೆಯ ಕಮಾಂಡರ್‌ನನ್ನು ಗುರಿಯಾಗಿಸಿಕೊಂಡು ಲೆಬನಾನ್‌ ಮೇಲೆ 50 ಕಿ.ಮೀ ದೂರದಿಂದಲೇ ದಾಳಿ ನಡೆಸಿದೆ. ಈತ ಗಾಜಾ ನಗರದಲ್ಲಿರುವ ಇಸ್ರೇಲ್ ವಿರೋಧಿ ಪಡೆಗಳ ಮುಖ್ಯಸ್ಥನಾಗಿದ್ದ. ವೈರಲ್ ಆಗಿರುವ ವಿಡಿಯೋದಲ್ಲಿ ಇಸ್ರೇಲ್ ಸೇನೆಯು ಅನಾಸ್ ಕಾರಿನ ಮೇಲೆ ದಾಳಿ ನಡೆಸಿದ ದೃಶ್ಯವನ್ನು ತೋರಿಸಿದೆ.

VISTARANEWS.COM


on

By

Israel Palestine War
Koo

ಲೆಬನಾನ್‌ನಲ್ಲಿ ಇಸ್ಲಾಮಿಕ್ ಜಿಹಾದ್‌ನ ನೌಕಾ ಪಡೆಗಳ ಕಮಾಂಡರ್‌ನ ( Islamic Jihad’s Naval Forces commander) ಕಾರಿನ ಮೇಲೆ ಇಸ್ರೇಲ್ ಸೇನೆ ದಾಳಿ (Israel Palestine War) ನಡೆಸಿದ್ದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಯಲ್ಲಿ ಪ್ಯಾಲೇಸ್ಟಿನಿಯನ್ ಇಸ್ಲಾಮಿಕ್ ಜಿಹಾದ್ ನೌಕಾ ಪಡೆಗಳ ಕಮಾಂಡರ್ ಅನಾಸ್ ಮುರಾದ್ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಜುಲೈ 18ರಂದು ಐಡಿಎಫ್ (ಇಸ್ರೇಲ್‌ ಡಿಫೇನ್ಸ್‌ ಪೋರ್ಸ್‌) ಉಗ್ರ ಸಂಘಟನೆಯ ಕಮಾಂಡರ್‌ನನ್ನು ಗುರಿಯಾಗಿಸಿಕೊಂಡು ಲೆಬನಾನ್‌ ಮೇಲೆ 50 ಕಿ.ಮೀ ದೂರದಿಂದಲೇ ದಾಳಿ ನಡೆಸಿತ್ತು.

Israel Palestine War


ಅನಾಸ್ ಮುರಾದ್ ಗಾಜಾ ನಗರದಲ್ಲಿ ಇಸ್ರೇಲ್ ವಿರೋಧಿ ಉಗ್ರ ಸಂಘಟನೆಯ ಮುಖ್ಯಸ್ಥನಾಗಿದ್ದ. ವೈರಲ್ ಆಗಿರುವ ವಿಡಿಯೋದಲ್ಲಿ ಇಸ್ರೇಲ್ ಸೇನೆಯು ಅನಾಸ್ ಕಾರಿನ ಮೇಲೆ ದಾಳಿ ನಡೆಸಿದ ದೃಶ್ಯವನ್ನು ತೋರಿಸಿದೆ.

Israel Palestine War


ಇನ್ನೊಂದು ದಾಳಿಯಲ್ಲಿ ಭಯೋತ್ಪಾದಕ ಅಹ್ಮದ್ ಅಲ್-ಮಸ್ರಿಯನ್ನು ಇಸ್ರೇಲ್‌ ಸೇನೆ ಹೊಡೆದು ಉರುಳಿಸಿದೆ. ಅಕ್ಟೋಬರ್ 7ರಂದು ಇಸ್ರೇಲ್‌ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಇಸ್ಲಾಮಿಕ್ ಜಿಹಾದ್ ಭಯೋತ್ಪಾದಕ ಸಂಘಟನೆಯ ಮುಖಂಡನಾಗಿದ್ದ ಅಲ್‌-ಮಸ್ರಿ ಪ್ರಮುಖ ಪಾತ್ರ ವಹಿಸಿದ್ದ.

ಭಯೋತ್ಪಾದಕರು ಇಸ್ರೇಲ್‌ನೊಳಗೆ ನುಗ್ಗಿ ಹಲವಾರು ರಾಕೆಟ್‌ ದಾಳಿಗಳನ್ನು ನಡೆಸಿದ್ದರು. ಆ ಬಳಿಕ ಪ್ಯಾಲೆಸ್ತೀನ್‌ ಉಗ್ರ ಸಂಘಟನೆ ಹಮಾಸ್ ಮೇಲೆ ಪ್ರತಿ ದಾಳಿಯನ್ನು ಹೆಚ್ಚಿಸಲಾಗಿದೆ. ಕೇಂದ್ರ ಗಾಜಾದ ಮೇಲೆ ಗುರುವಾರ ನಡೆದ ಇಸ್ರೇಲ್ ದಾಳಿಯಲ್ಲಿ 12ಕ್ಕೂ ಹೆಚ್ಚು ಪ್ಯಾಲೆಸ್ತಿನಿಯನ್ನರನ್ನು ಕೊಲ್ಲಲಾಗಿದೆ. ಅನೇಕರು ಗಾಯಗೊಂಡಿದ್ದು, ಚಿಕಿತ್ಸೆಯ ಕೊರತೆಯಿಂದ ಸಾವುನೋವುಗಳು ಹೆಚ್ಚಾಗಲಿದೆ ಎನ್ನಲಾಗಿದೆ.

ಇದನ್ನೂ ಓದಿ: Oil Tanker Capsizes: ತೈಲ ತುಂಬಿದ್ದ ಹಡಗು ಮುಳುಗಡೆ; 13 ಭಾರತೀಯರು ಜಲಸಮಾಧಿ

Continue Reading

ವಿದೇಶ

Mashco Piro Tribe: ಮೊದಲ ಬಾರಿ ಹೊರ ಜಗತ್ತಿಗೆ ಕಾಣಿಸಿಕೊಂಡ ಮಾಶ್ಕೊ ಪಿರೋ ಬುಡಕಟ್ಟು ಸಮುದಾಯ!

ಪ್ರಪಂಚದ ಅತೀ ದೊಡ್ಡ ಬುಡಕಟ್ಟು ಸಮುದಾಯವೊಂದು (World’s Largest Tribe) ಪೆರುವಿಯನ್ ಅಮೆಜಾನ್‌ನ ನದಿ ದಡದಲ್ಲಿ ಕಾಣಿಸಿಕೊಂಡಿದೆ. ಹೊರ ಜಗತ್ತಿನ ಸಮರ್ಕವಿಲ್ಲದ ಇವರ ಅಪರೂಪದ ಫೋಟೋ, ವಿಡಿಯೋಗಳನ್ನು ʼಸರ್ವೈವಲ್ ಇಂಟರ್‌ನ್ಯಾಷನಲ್ʼ ಬಿಡುಗಡೆ ಮಾಡಿದೆ. ಮಾಶ್ಕೊ ಪಿರೋ ಬುಡಕಟ್ಟು ಸಮುದಾಯ ಎದುರಿಸುತ್ತಿರುವ ಅಪಾಯದ ಬಗ್ಗೆ ಕಳವಳ ವ್ಯಕ್ತವಾಗುತ್ತಿರುವುದರ ಬೆನ್ನಲ್ಲೇ ಈ ವಿಡಿಯೊ ಹೊರ ಬಂದಿದೆ.

VISTARANEWS.COM


on

By

World's Largest Tribe
Koo

ಪ್ರಪಂಚದ ಅತೀ ದೊಡ್ಡ ಬುಡಕಟ್ಟು ಸಮುದಾಯವೊಂದು (World’s Largest Tribe) ಪೆರುವಿಯನ್ ಅಮೆಜಾನ್ ನಲ್ಲಿ (Peruvian Amazon) ಇದೆ. ಆದರೆ ಇವರದು ಹೊರ ಜಗತ್ತಿನ ಸಂಪರ್ಕವಿಲ್ಲದ ಬುಡಕಟ್ಟು ಸಮುದಾಯ. ಇದೇ ಮೊದಲ ಬಾರಿಗೆ ಮಾಶ್ಕೊ ಪಿರೋ (Mashco Piro) ಸಮುದಾಯದ ಜನರ ಚಲನವಲನದ ಅಪರೂಪದ ದೃಶ್ಯಗಳನ್ನು ʼಸರ್ವೈವಲ್ ಇಂಟರ್ನ್ಯಾಷನಲ್ʼ ಬಿಡುಗಡೆ ಮಾಡಿದೆ.

ಮಾಶ್ಕೊ ಪಿರೋ ಬುಡಕಟ್ಟು ಸಮುದಾಯದ ಯೋಗಕ್ಷೇಮದ ಕಾಳಜಿ ಹೆಚ್ಚಾಗುತ್ತಿರುವ ಮಧ್ಯೆಯೇ ಈ ವಿಡಿಯೋ ತುಣುಕು ಬಿಡುಗಡೆಯಾಗಿದೆ. ಇದರಲ್ಲಿ ಮಾಶ್ಕೊ ಪಿರೋ ಬುಡಕಟ್ಟು ಸಮುದಾಯದ ಹಲವಾರು ಸದಸ್ಯರು ನದಿಯ ದಡದಲ್ಲಿ ವಿಶ್ರಾಂತಿ ಪಡೆಯುತ್ತಿರುವುದನ್ನು ಈ ದೃಶ್ಯದಲ್ಲಿ ತೋರಿಸಲಾಗಿದೆ.

ಈ ಪ್ರದೇಶದಲ್ಲಿ ಮರಗಳನ್ನು ಕಡಿಯುವುದು ಹೆಚ್ಚಾಗಿರುವುದರಿಂದ ಇಲ್ಲಿರುವ ಮಾಶ್ಕೊ ಪಿರೋ ಬುಡಕಟ್ಟು ಜನಾಂಗಕ್ಕೆ ಅಪಾಯ ಎದುರಾಗಿದೆ. ಅವರ ಸಾಂಪ್ರದಾಯಿಕ ಭೂಮಿಯಿಂದ ಅವರು ಹೊರಗೆ ತಳ್ಳಲ್ಪಡುತ್ತಿದ್ದಾರೆ. ಮಾಶ್ಕೊ ಪಿರೋ ಜನಾಂಗದವರು ಆಹಾರ ಮತ್ತು ಸುರಕ್ಷಿತ ಆಶ್ರಯಕ್ಕಾಗಿ ಹುಡುಕಾಡುತ್ತ ವಲಸೆ ಹೋಗುತ್ತಿರಬಹುದು ಎನ್ನಲಾಗಿದೆ.

ಬ್ರೆಜಿಲ್‌ನ ಗಡಿಯಲ್ಲಿರುವ ಆಗ್ನೇಯ ಪೆರುವಿಯನ್ ಪ್ರಾಂತ್ಯದ ಮ್ಯಾಡ್ರೆ ಡಿ ಡಿಯೋಸ್‌ನ ನದಿಯ ದಡದ ಬಳಿ ಜೂನ್ ಅಂತ್ಯದಲ್ಲಿ ಈ ವಿಡಿಯೋಗಳನ್ನು ತಗೆದಿರುವುದಾಗಿ ʼಸರ್ವೈವಲ್ ಇಂಟರ್‌ನ್ಯಾಷನಲ್ʼ ವರದಿ ಮಾಡಿದೆ.

ಮರಗಳನ್ನು ಕಡಿಯುವ ಕಾರ್ಯಾಚರಣೆ ಪ್ರಾರಂಭಿಸಿರುವ ಸ್ಥಳದಿಂದ ಕೆಲವು ಕಿಲೋಮೀಟರ್ ದೂರದಲ್ಲಿ ಹೆಚ್ಚಿನ ಸಂಖ್ಯೆಯ ಮ್ಯಾಶ್ಕೊ ಪಿರೋಗಳು ವಾಸಿಸುತ್ತಿದ್ದಾರೆ ಎಂದು ಸರ್ವೈವಲ್ ಇಂಟರ್ನ್ಯಾಷನಲ್ ನಿರ್ದೇಶಕಿ ಕ್ಯಾರೋಲಿನ್ ಪಿಯರ್ಸ್ ಹೇಳಿದ್ದಾರೆ.

ಮಾಂಟೆ ಸಾಲ್ವಾಡೊ ಎಂಬ ಯಿನ್ ಜನರ ಹಳ್ಳಿಯ ಬಳಿ ಇತ್ತೀಚಿಗೆ 50ಕ್ಕೂ ಹೆಚ್ಚು ಮ್ಯಾಶ್ಕೊ ಪಿರೋ ಜನರು ಕಾಣಿಸಿಕೊಂಡರು. 17 ಜನರ ಮತ್ತೊಂದು ಗುಂಪು ಪೋರ್ಟೊ ನ್ಯೂವೊ ಎಂಬ ಹಳ್ಳಿಯಲ್ಲಿ ಕಾಣಿಸಿಕೊಂಡಿದೆ ಎಂದು ಸ್ಥಳೀಯ ಹಕ್ಕುಗಳನ್ನು ರಕ್ಷಿಸುವ ಎನ್‌ಜಿಒ ಒಂದು ಹೇಳಿದೆ.

World's Largest Tribe


ಮಡ್ರೆ ಡಿ ಡಿಯೋಸ್‌ನ ಕಾಡಿನಲ್ಲಿ ಎರಡು ಪ್ರದೇಶದಲ್ಲಿ ವಾಸಿಸುವ ಮಾಶ್ಕೊ ಪಿರೋ ನಿಯಮದಂತೆ ವಿರಳವಾಗಿ ಕಾಣಿಸಿಕೊಂಡಿದ್ದಾರೆ. ಅವರು ಯಾರೊಂದಿಗೂ ಹೆಚ್ಚು ಸಂವಹನ ನಡೆಸುವುದಿಲ್ಲ. ಹಲವಾರು ಕಂಪೆನಿಗಳು ಮ್ಯಾಶ್ಕೊ ಪಿರೋ ವಾಸಿಸುವ ಪ್ರದೇಶದೊಳಗೆ ಮರವನ್ನು ಕಡಿಯಲು ಅನುಮತಿ ಹೊಂದಿವೆ. ಒಂದು ಕಂಪನಿ ಮರಗಳನ್ನು ಸಾಗಿಸಲು ಟ್ರಕ್‌ಗಳಿಗಾಗಿ 200 ಕಿಲೋಮೀಟರ್‌ಗಳಿಗಿಂತ ಹೆಚ್ಚು ದೂರ ರಸ್ತೆಗಳನ್ನು ನಿರ್ಮಿಸಿದೆ ಎಂದು ಸರ್ವೈವಲ್ ಇಂಟರ್ನ್ಯಾಷನಲ್ ತಿಳಿಸಿದೆ.

ಈ ಬಗ್ಗೆ ಲಿಮಾದಲ್ಲಿನ ಕ್ಯಾನಲ್ಸ್ ತಹುಮಾನು ಪ್ರತಿನಿಧಿಯು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕಂಪೆನಿಯು ಫಾರೆಸ್ಟ್ ಸ್ಟೀವರ್ಡ್‌ಶಿಪ್ ಕೌನ್ಸಿಲ್‌ನಿಂದ ಪ್ರಮಾಣೀಕರಿಸಲ್ಪಟ್ಟಿದೆ. ಅದರ ಪ್ರಕಾರ ಇದು ಕಾಡಿನ ನಿರ್ದಿಷ್ಟ ಸಂಪನ್ಮೂಲಗಳನ್ನು ಹೊರತೆಗೆಯಲು ಮ್ಯಾಡ್ರೆ ಡಿ ಡಿಯೋಸ್‌ನಲ್ಲಿ 53,000 ಹೆಕ್ಟೇರ್ ಕಾಡುಗಳನ್ನು ಹೊಂದಿದೆ ಎನ್ನಲಾಗಿದೆ.


ಈ ಕುರಿತು ಪ್ರತಿಕ್ರಿಯಿಸಿರುವ ಪೆರುವಿಯನ್ ಸರ್ಕಾರವು ಜೂನ್ 28ರಂದು ಮಡ್ರೆ ಡಿ ಡಿಯೋಸ್‌ನ ರಾಜಧಾನಿ ಪೋರ್ಟೊ ಮಾಲ್ಡೊನಾಡೊ ನಗರದಿಂದ 150 ಕಿಲೋಮೀಟರ್ ದೂರದಲ್ಲಿರುವ ಲಾಸ್ ಪೀಡ್ರಾಸ್ ನದಿಯ ದಡದಲ್ಲಿ ಮಾಶ್ಕೊ ಪಿರೊವನ್ನು ನೋಡಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ವರದಿ ಮಾಡಿದ್ದಾರೆ ಎಂದು ತಿಳಿಸಿದೆ. ಬ್ರೆಜಿಲ್‌ನ ಗಡಿಯುದ್ದಕ್ಕೂ ಮ್ಯಾಶ್ಕೊ ಪಿರೋ ಕಾಣಿಸಿಕೊಂಡಿದೆ ಎಂದು ಬ್ರೆಜಿಲಿಯನ್ ಕ್ಯಾಥೊಲಿಕ್ ಬಿಷಪ್‌ಗಳ ಸ್ಥಳೀಯ ಮಿಷನರಿ ಕೌನ್ಸಿಲ್‌ನಲ್ಲಿ ರೋಸಾ ಪಡಿಲ್ಹಾ ಹೇಳಿದ್ದಾರೆ.

ಇದನ್ನೂ ಓದಿ: United Nations: ಗಾಜಾದಲ್ಲಿ ಸಂಪೂರ್ಣ ಕದನ ವಿರಾಮ ಘೋಷಿಸಿ; ವಿಶ್ವಸಂಸ್ಥೆಯಲ್ಲಿ ಪುನರುಚ್ಚರಿಸಿದ ಭಾರತ

ಅವರು ಪೆರುವಿಯನ್ ಭಾಗದಲ್ಲಿ ಲಾಗರ್ಸ್‌ನಿಂದ ವಲಸೆ ಹೋಗುತ್ತಿದ್ದಾರೆ. ಈ ಸಮಯದಲ್ಲಿ ಅವರು ಟ್ರಾಕಾಜಾ ಅಂದರೆ ಅಮೆಜಾನ್ ಆಮೆಗಳ ಮೊಟ್ಟೆಗಳನ್ನು ತೆಗೆದುಕೊಳ್ಳಲು ಕಡಲತೀರಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಅವರು ಯಾವ ಕ್ಷಣ ಏನು ಮಾಡುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ಶಾಂತಿಯ ವರ್ತನೆ ತೋರುವುದಿಲ್ಲ. ದಾಳಿಗೆ ಮುಂದಾಗುತ್ತಾರೆ. ಜನರನ್ನು ಕಂಡಾಕ್ಷಣ ಓಡಿ ಹೋಗುತ್ತಾರೆ ಎಂದು ಪಡಿಲ್ಹಾ ತಿಳಿಸಿದ್ದಾರೆ.

Continue Reading

ವಿದೇಶ

Jaahnavi Kandula: ಅಮೆರಿಕದಲ್ಲಿ ಭಾರತದ ವಿದ್ಯಾರ್ಥಿನಿಗೆ ಕಾರು ಗುದ್ದಿಸಿ ನಕ್ಕ ಪೊಲೀಸ್ ವಜಾ

Jaahnavi Kandula: ಅಮೆರಿಕದ ಸಿಯಾಟಲ್‌ನಲ್ಲಿ ಕಳೆದ ವರ್ಷ ನಡೆದ ಅಪಘಾತದಲ್ಲಿ ಮೃತಪಟ್ಟ ಭಾರತದ ಜಾಹ್ನವಿ ಕಂಡುಲಾ ಎಂಬ 23 ವರ್ಷದ ವಿದ್ಯಾರ್ಥಿನಿಯನ್ನು ಅಪಹಾಸ್ಯ ಮಾಡಿದ ಪೊಲೀಸ್ ಅಧಿಕಾರಿ ಡ್ಯಾನಿಯಲ್‌ ಆಡೆರರ್‌ನನ್ನು ವಜಾಗೊಳಿಸಲಾಗಿದೆ. ಸಿಯಾಟಲ್ ಪೊಲೀಸ್ ಇಲಾಖೆಯಿಂದ ಆಡೆರರ್ ಅವರನ್ನು ವಜಾಗೊಳಿಸಲಾಗಿದೆ ಎಂದು ಬುಧವಾರ ಸಂಜೆ ಇಲಾಖೆಗೆ ಕಳುಹಿಸಲಾದ ಆಂತರಿಕ ಇಮಲ್‌ನಲ್ಲಿ ತಿಳಿಸಲಾಗಿದೆ ಎಂದು ಮೂಲಗಳು ವರದಿ ಮಾಡಿವೆ.

VISTARANEWS.COM


on

Jaahnavi Kandula
Koo

ವಾಷಿಂಗ್ಟನ್‌: ಅಮೆರಿಕದ ಸಿಯಾಟಲ್‌ (Seattle)ನಲ್ಲಿ ಕಳೆದ ವರ್ಷ ನಡೆದ ಅಪಘಾತದಲ್ಲಿ ಮೃತಪಟ್ಟ ಭಾರತದ ಜಾಹ್ನವಿ ಕಂಡುಲಾ (Jaahnavi Kandula) ಎಂಬ 23 ವರ್ಷದ ವಿದ್ಯಾರ್ಥಿನಿಯನ್ನು ಅಪಹಾಸ್ಯ ಮಾಡಿದ ಪೊಲೀಸ್ ಅಧಿಕಾರಿ ಡ್ಯಾನಿಯಲ್‌ ಆಡೆರರ್‌ (Daniel Auderer)ನನ್ನು ವಜಾಗೊಳಿಸಲಾಗಿದೆ.

2023ರ ಜನವರಿ 26ರಂದು ಸಿಯಾಟಲ್‌ನಲ್ಲಿ ಜಾಹ್ನವಿ ಕಂಡುಲಾ ಅವರಿಗೆ ಸಿಯಾಟಲ್‌ನ ಪೊಲೀಸ್‌ ಅಧಿಕಾರಿ ಕೆವಿನ್‌ ಡೇವ್‌ ಚಲಾಯಿಸುತ್ತಿದ್ದ ಪೊಲೀಸ್‌ ವಾಹನ ಡಿಕ್ಕಿಯಾಗಿತ್ತು. ಈ ವೇಳೆ ವಾಹನ ಗಂಟೆಗೆ ಸುಮಾರು 119 ಕಿಲೋಮೀಟರ್‌ ವೇಗದಲ್ಲಿತ್ತು. ಡಿಕ್ಕಿ ಹೊಡೆದ ರಭಸಕ್ಕೆ ಕಂಡುಲಾ ಅವರ ದೇಹವು ದೂರಕ್ಕೆ ಎಸೆಯಲ್ಪಟ್ಟಿತ್ತು. ಕೂಡಲೇ ಅವರನ್ನು ಹಾರ್ಬರ್ವ್ಯೂ ಮೆಡಿಕಲ್ ಸೆಂಟರ್‌ಗೆ ಕರೆದೊಯ್ಯಲಾಗಿದ್ದರೂ, ತೀವ್ರ ಗಾಯಗಳಿಂದ ಆಕೆ ಮೃತಪಟ್ಟಿದ್ದರು. ಆಂಧ್ರಪ್ರದೇಶದ ಕಡಪ ಮೂಲದವರಾದ ಜಾಹ್ನವಿ ಕಂಡುಲಾ ಅವರು ಸಿಯಾಟಲ್‌ನಲ್ಲಿರುವ ನಾರ್ತ್‌ ಈಸ್ಟ್‌ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಓದುತ್ತಿದ್ದರು. 

ಈ ವೇಳೆ ವಾಹನದಲ್ಲಿದ್ದ ಸಿಯಾಟಲ್‌ ಪೊಲೀಸ್‌ ಆಫೀಸರ್ಸ್‌ ಗಿಲ್ಡ್‌ ಉಪಾಧ್ಯಕ್ಷ ಡ್ಯಾನಿಯಲ್‌ ಆಡೆರರ್‌ ಅಪಘಾತದ ಕುರಿತು ಜೋಕ್‌ ಮಾಡಿದ್ದರು. “ಓಹ್‌ ಅವಳು ಸತ್ತೇ ಹೋದಳು. 11 ಸಾವಿರ ಡಾಲರ್‌ ಮೊತ್ತದ ಚೆಕ್‌ ಬರೆದು ಬಿಸಾಡೋಣ. ಓಹ್, ಅವಳಿಗೆ 23 ವರ್ಷ ವಯಸ್ಸಲ್ಲ, ಹಾಗಾದರೆ ಅವಳ ಜೀವಕ್ಕೆ ಹೆಚ್ಚಿನ ಬೆಲೆ ಇಲ್ಲ” ಎಂದು ನಕ್ಕಿರುವ ವಿಡಿಯೊ ವೈರಲ್‌ ಆಗಿತ್ತು. ಜಾಹ್ನವಿ ಕಂಡುಲಾ ಸಾವಿನ ಕುರಿತು ಭಾರತ ಹಾಗೂ ಅಮೆರಿಕದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

ಸಿಯಾಟಲ್ ಪೊಲೀಸ್ ಇಲಾಖೆಯಿಂದ ಆಡೆರರ್ ಅವರನ್ನು ವಜಾಗೊಳಿಸಲಾಗಿದೆ ಎಂದು ಬುಧವಾರ ಸಂಜೆ ಇಲಾಖೆಗೆ ಕಳುಹಿಸಲಾದ ಆಂತರಿಕ ಇಮಲ್‌ನಲ್ಲಿ ತಿಳಿಸಲಾಗಿದೆ ಎಂದು ಮೂಲಗಳು ವರದಿ ಮಾಡಿವೆ. ಆಡರರ್ ಅವರ ಮಾತುಗಳು ಕಂಡುಲಾ ಅವರ ಕುಟುಂಬಕ್ಕೆ ಉಂಟು ಮಾಡಿದ ನೋವನ್ನು ಅಳಿಸಲು ಸಾಧ್ಯವಿಲ್ಲ ಎಂದು ಇಮೇಲ್‌ನಲ್ಲಿ ಉಲ್ಲೇಖಿಸಲಾಗಿದೆ.

“ಈ ವೈಯಕ್ತಿಕ ಪೊಲೀಸ್ ಅಧಿಕಾರಿಯ ನಡೆ ಸಿಯಾಟಲ್ ಪೊಲೀಸ್ ಇಲಾಖೆ ಮತ್ತು ನಮ್ಮ ಇಡೀ ವೃತ್ತಿಗೆ ಅವಮಾನವನ್ನು ತಂದಿವೆ. ಅವರ ವಿರುದ್ದ ಕ್ರಮ ಕೈಗೊಳ್ಳದೇ ಇದ್ದರೆ ಇಡೀ ಇಲಾಖೆಗೆ ಮತ್ತಷ್ಟು ಅವಮಾನ ಎಸಗಿದಂತಾಗುತ್ತದೆ. ಆ ಕಾರಣಕ್ಕಾಗಿ ನಾನು ಅವರನ್ನು ವಜಾಗೊಳಿಸಲಾಗುತ್ತದೆ” ಎಂದು ಅಧಿಕಾರಿಗಳು ಕಾರಣ ನೀಡಿದ್ದಾರೆ.

ಖಂಡನೆ

ಜಾಹ್ನವಿ ಕಂಡುಲಾ ಸಾವಿನ ಕುರಿತು ಅಪಹಾಸ್ಯ ಮಾಡಿ ನಕ್ಕ ವಿಡಿಯೊ ವೈರಲ್‌ ಆಗುತ್ತಲೇ ಸ್ಯಾನ್‌ಫ್ರಾನ್ಸಿಸ್ಕೋದಲ್ಲಿರುವ ಭಾರತದ ಕಾನ್ಸುಲೇಟ್‌ ಖಂಡನೆ ವ್ಯಕ್ತಪಡಿಸಿತ್ತು. “ಇದು ಅತ್ಯಂತ ಅಪಾಯಕಾರಿ ಘಟನೆ. ಇಂತಹ ಪ್ರಕರಣಗಳನ್ನು ನಾವು ಸಹಿಸುವುದಿಲ್ಲ. ಕೂಡಲೇ ಪ್ರಕರಣದ ಕುರಿತು ಸಮಗ್ರ ತನಿಖೆಯಾಗಬೇಕು ಹಾಗೂ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು” ಎಂದು ಆಗ್ರಹಿಸಿತ್ತು. ಭಾರಿ ಆಕ್ರೋಶದ ಬಳಿಕ, ಸಮಗ್ರ ತನಿಖೆ ಮಾಡಲಾಗುವುದು ಎಂದು ಸಿಯಾಟಲ್‌ ಪೊಲೀಸರು ತಿಳಿಸಿದ್ದರು. ಅಮೆರಿಕದಲ್ಲಿ ಭಾರತೀಯರ ಜೀವಕ್ಕೆ ಬೆಲೆಯೇ ಇಲ್ಲವೇ ಎನ್ನುವ ವಿಚಾರ ಬಹಳಷ್ಟು ಚರ್ಚೆಗೆ ಗ್ರಾಸವಾಗಿತ್ತು.

ಇದನ್ನೂ ಓದಿ: Jaahnavi Kandula: ಸಾಕ್ಷಿಗಳ ಕೊರತೆ; ಭಾರತೀಯ ವಿದ್ಯಾರ್ಥಿನಿಯನ್ನು ಕೊಂದ ಪೊಲೀಸ್‌ ಅಧಿಕಾರಿ ಶಿಕ್ಷೆಯಿಂದ ಪಾರು

Continue Reading

ವಿದೇಶ

United Nations: ಗಾಜಾದಲ್ಲಿ ಸಂಪೂರ್ಣ ಕದನ ವಿರಾಮ ಘೋಷಿಸಿ; ವಿಶ್ವಸಂಸ್ಥೆಯಲ್ಲಿ ಪುನರುಚ್ಚರಿಸಿದ ಭಾರತ

United Nations: ಗಾಜಾ ಪಟ್ಟಿಯಲ್ಲಿ ತಕ್ಷಣದ ಮತ್ತು ಸಂಪೂರ್ಣ ಕದನ ವಿರಾಮ ಘೋಷಿಸಬೇಕು ಮತ್ತು ಯಾವುದೇ ಷರತ್ತುಗಳಿಲ್ಲದೆ ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕು ಎಂದು ವಿಶ್ವಸಂಸ್ಥೆಯಲ್ಲಿ ಭಾರತ ಪುನರುಚ್ಚರಿಸಿದೆ.

VISTARANEWS.COM


on

United Nations
Koo

ನ್ಯೂಯಾರ್ಕ್:‌ ಗಾಜಾ ಪಟ್ಟಿ (Gaza Strip)ಯಲ್ಲಿ ತಕ್ಷಣದ ಮತ್ತು ಸಂಪೂರ್ಣ ಕದನ ವಿರಾಮ ಘೋಷಿಸಬೇಕು ಮತ್ತು ಯಾವುದೇ ಷರತ್ತುಗಳಿಲ್ಲದೆ ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕು ಎಂದು ವಿಶ್ವಸಂಸ್ಥೆ (United Nations)ಯಲ್ಲಿ ಭಾರತ ಪುನರುಚ್ಚರಿಸಿದೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (UNSC) ಚರ್ಚೆಯಲ್ಲಿ ಬುಧವಾರ ಮಾತನಾಡಿದ ಭಾರತದ ಉಪ ಪ್ರತಿನಿಧಿ ಆರ್.ರವೀಂದ್ರ (R Ravindra) ಅವರು, ಪ್ಯಾಲೆಸ್ತೀನ್‌ಗೆ ಭಾರತದ ವಿವಿಧ ರೂಪಗಳಲ್ಲಿ ಸುಮಾರು 120 ಮಿಲಿಯನ್ ಡಾಲರ್‌ ನೆರವು ನೀಡುತ್ತಿದೆ ಎಂದು ತಿಳಿಸಿದ್ದಾರೆ. “2023ರ ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸಿದ ದೇಶಗಳಲ್ಲಿ ಭಾರತವೂ ಒಂದು. ಇಸ್ರೇಲ್-ಹಮಾಸ್ ಸಂಘರ್ಷ (Israel-Hamas conflict)ದಲ್ಲಿ ನಡೆಯುತ್ತಿರುವ ಪ್ರಾಣ ಹಾನಿಯನ್ನು ನಾವು ಶಕ್ತವಾಗಿ ಖಂಡಿಸಿದ್ದೇವೆ. ಜತೆಗೆ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಭಾರತ ಕರೆ ನೀಡಿದೆ. ಅಲ್ಲದೆ ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಸಂಘರ್ಷವನ್ನು ಶಾಂತಿಯುತವಾಗಿ ಪರಿಹರಿಸಲು ಆಗ್ರಹಿಸಿದೆ” ಎಂದು ಅವರು ಹೇಳಿದ್ದಾರೆ.

ಒತ್ತೆಯಾಳುಗಳನ್ನು ತಕ್ಷಣ ಬಿಡುಗಡೆ ಮಾಡಿ

ಎಲ್ಲರೂ ಎಲ್ಲ ಸಂದರ್ಭಗಳಲ್ಲಿಯೂ ಅಂತಾರಾಷ್ಟ್ರೀಯ ಕಾನೂನು ಮತ್ತು ಅಂತಾರಾಷ್ಟ್ರೀಯ ಮಾನವೀಯ ಕಾನೂನಿಗೆ ಬದ್ಧರಾಗಿರಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. “ತಕ್ಷಣ, ಸಂಪೂರ್ಣ ಕದನ ವಿರಾಮ ಘೋಷಣೆಯನ್ನು ನಾವು ಪುನರುಚ್ಚರಿಸುತ್ತಿದ್ದೇವೆ. ಸುರಕ್ಷಿತ, ಸಮಯೋಚಿತ ಮತ್ತು ಸುಸ್ಥಿರ ಮಾನವೀಯ ನೆರವು ಮತ್ತು ಅಗತ್ಯ ಮಾನವೀಯ ಸೇವೆಗಳಿಗೆ ಗಾಜಾ ಪಟ್ಟಿಗೆ ಅನಿರ್ಬಂಧಿತ ಪ್ರವೇಶಕ್ಕಾಗಿ ನಾವು ಆಗ್ರಹಿಸುತ್ತಿದ್ದೇವೆ. ಇದಲ್ಲದೆ ಎಲ್ಲ ಒತ್ತೆಯಾಳುಗಳನ್ನು ತಕ್ಷಣ ಮತ್ತು ಬೇಷರತ್ತಾಗಿ ಬಿಡುಗಡೆ ಮಾಡಬೇಕು” ಎಂದು ಭಾರತದ ರಾಯಭಾರಿ ಆರ್. ರವೀಂದ್ರ ಧ್ವನಿ ಎತ್ತಿದ್ದಾರೆ.

ಇಸ್ರೇಲ್ ಮತ್ತು ಪ್ಯಾಲಸ್ತೀನ್‌ ನಾಯಕರೊಂದಿಗೆ ನಿರಂತರ ಸಂಬಂಧ ಹೊಂದಿರುವ ಕತಾರ್ ಮತ್ತು ಈಜಿಪ್ಟ್‌ನಂತಹ ರಾಷ್ಟ್ರಗಳ ಪಾತ್ರವನ್ನೂ ಅವರು ಶ್ಲಾಘಿಸಿದ್ದಾರೆ. ʼʼಇಸ್ರೇಲ್‌ನ ಭದ್ರತಾ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಕಳೆದ ತಿಂಗಳು ಜೋರ್ಡಾನ್‌ನಲ್ಲಿ ನಡೆದ ಗಾಜಾಕ್ಕೆ ತುರ್ತು ಮಾನವೀಯ ನೆರವು ನೀಡುವ ಅಂತಾರಾಷ್ಟ್ರೀಯ ಉನ್ನತ ಮಟ್ಟದ ಸಮ್ಮೇಳನದಲ್ಲಿ ಭಾರತವೂ ಪಾಲ್ಗೊಂಡಿತ್ತುʼʼ ಎಂದು ತಿಳಿಸಿದ್ದಾರೆ.

ಸಹಾಯಹಸ್ತ

“ಯುಎನ್ಆರ್‌ಡಬ್ಲ್ಯುಎ (United Nations Relief and Works Agency)ಗೆ 35 ಮಿಲಿಯನ್ ಡಾಲರ್ ಸೇರಿದಂತೆ ಪ್ಯಾಲೆಸ್ತೀನ್‌ಗೆ ವಿವಿಧ ರೂಪಗಳಲ್ಲಿ ಸುಮಾರು 120 ಮಿಲಿಯನ್ ಡಾಲರ್‌ ನೆರವು ನೀಡಿದ್ದೇವೆ. ಭಾರತವು 2018 ರಿಂದ ಯುಎನ್ಆರ್‌ಡಬ್ಲ್ಯುಎಗೆ ವಾರ್ಷಿಕ 5 ಮಿಲಿಯನ್ ಡಾಲರ್ ಕೊಡುಗೆಯನ್ನು ನೀಡುತ್ತಿದೆ. ನಾವು ಈಗಾಗಲೇ 2.5 ಮಿಲಿಯನ್ ಡಾಲರ್ ನೆರವನ್ನು ಘೋಷಿಸಿದ್ದೇವೆ. ಯುಎನ್ಆರ್‌ಡಬ್ಲ್ಯುಎಗೆ ನಮ್ಮ ವಾರ್ಷಿಕ ಕೊಡುಗೆಯ ಮೊದಲ ಕಂತನ್ನು ಈ ವಾರದ ಆರಂಭದಲ್ಲಿ ವರ್ಗಾಯಿಸಲಾಗಿದೆ” ಎಂದು ಅವರು ವಿವರಿಸಿದ್ದಾರೆ.

ʼʼಪಶ್ಚಿಮ ಏಷ್ಯಾದಲ್ಲಿ ಸುಸ್ಥಿರ ಶಾಂತಿ ಮತ್ತು ಸ್ಥಿರತೆಯನ್ನು ಸಾಕಾರಗೊಳಿಸುವ ದೃಢ ನಂಬಿಕೆಯೊಂದಿಗೆ ಈ ಪ್ರದೇಶದೊಂದಿಗಿನ ಸಂಬಂಧವನ್ನು ಮುಂದುವರಿಸಲು ಭಾರತ ಸಿದ್ಧವಾಗಿದೆʼʼ ಎಂದು ಹೇಳಿ ಅವರು ತಮ್ಮ ಭಾಷಣ ಕೊನೆಗೊಳಿಸಿದ್ದಾರೆ.

ಇದನ್ನೂ ಓದಿ: United Nations: ಪಾಕಿಸ್ತಾನ ದುಷ್ಕೃತ್ಯಗಳ ಟ್ರ್ಯಾಕ್‌ ರೆಕಾರ್ಡ್‌ ಹೊಂದಿದೆ; ವಿಶ್ವಸಂಸ್ಥೆಯಲ್ಲಿ ಗುಡುಗಿದ ಭಾರತ

Continue Reading
Advertisement
Bangladesh Violence
ವಿದೇಶ5 hours ago

Bangladesh Violence: ಬಾಂಗ್ಲಾ ಧಗ ಧಗ; ಭುಗಿಲೆದ್ದ ಹಿಂಸಾಚಾರಕ್ಕೆ 35 ಮಂದಿ ಬಲಿ

Karnataka Assembly
ಪ್ರಮುಖ ಸುದ್ದಿ5 hours ago

Karnataka Assembly : ಗದ್ದಲದಲ್ಲೇ ಮುಕ್ತಾಯಗೊಂಡ ಮೂರನೇ ದಿನದ ವಿಧಾನಮಂಡಲ ಅಧಿವೇಶನ

Udhayanidhi Stalin
ದೇಶ5 hours ago

Udhayanidhi Stalin: ತಮಿಳುನಾಡು ಉಪ ಮುಖ್ಯಮಂತ್ರಿಯಾಗಿ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್?

The Ambani family gave a wedding special reception to the staff and housekeepers
ದೇಶ5 hours ago

Anant Radhika Wedding: ಸಿಬ್ಬಂದಿ, ಮನೆಗೆಲಸದವರಿಗೆ ಮದುವೆಯ ಭರ್ಜರಿ ಔತಣಕೂಟ ನೀಡಿದ ಅಂಬಾನಿ ಫ್ಯಾಮಿಲಿ!

Police Suspended
ಕರ್ನಾಟಕ6 hours ago

Police Suspended : ಠಾಣೆಯಲ್ಲೇ ಕೈಮಿಲಾಯಿಸಿದ ಪೊಲೀಸ್​ ಅಧಿಕಾರಿಗಳಿಬ್ಬರು ಸಸ್ಪೆಂಡ್​​

Train Derail
ದೇಶ6 hours ago

Train Derail: “ಪ್ರಚಾರದ ಗೀಳು ಬಿಟ್ಟು ರೈಲುಗಳ ಸುರಕ್ಷತೆ ಬಗ್ಗೆ ಗಮನ ಹರಿಸಿ”- ಪ್ರಧಾನಿ ಮೋದಿ ವಿರುದ್ಧ ಖರ್ಗೆ ವಾಗ್ದಾಳಿ

Natasa Stankovic
ಪ್ರಮುಖ ಸುದ್ದಿ7 hours ago

Natasa Stankovic : ಹಾರ್ದಿಕ್ ಪಾಂಡ್ಯಗೆ ಡೈವೋರ್ಸ್​ ನೀಡಿದ್ದೇನೆ; ಪತ್ನಿ ನತಾಶಾ ಹೇಳಿಕೆ

Neet UG
ದೇಶ7 hours ago

NEET UG 2024: ನೀಟ್‌ ಅಕ್ರಮ; ನಾಲ್ವರು ಏಮ್ಸ್‌ ವಿದ್ಯಾರ್ಥಿಗಳು ಸಿಬಿಐ ಬಲೆಗೆ

Farmers should get crop insurance immediately says MP BY Raghavendra
ಶಿವಮೊಗ್ಗ7 hours ago

Shivamogga News: ಕೂಡಲೇ ಬೆಳೆ ವಿಮೆ ಮಾಡಿಸಿಕೊಳ್ಳಲು ಸಂಸದ ಬಿ.ವೈ. ರಾಘವೇಂದ್ರ ಮನವಿ

Guru Puja Mahotsav and Sangeethotsava from July 19th at Kaiwara Srikshethra Sadguru Sri Yoginareyan Mutt
ಚಿಕ್ಕಬಳ್ಳಾಪುರ8 hours ago

Kaivara Tatayya: ಕೈವಾರ ಶ್ರೀ ಯೋಗಿನಾರೇಯಣ ಮಠದಲ್ಲಿ ಜು.19ರಿಂದ ಗುರುಪೂಜಾ ಮಹೋತ್ಸವ, ಸಂಗೀತೋತ್ಸವ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ12 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ13 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ5 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ5 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

ಟ್ರೆಂಡಿಂಗ್‌