Air India Flight: 225 ಪ್ರಯಾಣಿಕರನ್ನು ಹೊತ್ತು ಸ್ಯಾನ್ ಫ್ರಾನ್ಸಿಸ್ಕೋಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ; ರಷ್ಯಾದಲ್ಲಿ ಲ್ಯಾಂಡಿಂಗ್‌ - Vistara News

ದೇಶ

Air India Flight: 225 ಪ್ರಯಾಣಿಕರನ್ನು ಹೊತ್ತು ಸ್ಯಾನ್ ಫ್ರಾನ್ಸಿಸ್ಕೋಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ; ರಷ್ಯಾದಲ್ಲಿ ಲ್ಯಾಂಡಿಂಗ್‌

Air India Flight: ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ 225 ಪ್ರಯಾಣಿಕರನ್ನು ಹೊತ್ತು ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ರಷ್ಯಾದ ಕ್ರಾಸ್ನೋಯರ್ಸ್ಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿದೆ. ಕಳೆದ ವರ್ಷ ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಂಡು ಬಂದ ಹಿನ್ನೆಲೆಯಲ್ಲಿ ಅದನ್ನು ರಷ್ಯಾದ ಮಗದನ್‌ನಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಲಾಗಿತ್ತು.

VISTARANEWS.COM


on

Air India Flight
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ 225 ಪ್ರಯಾಣಿಕರನ್ನು ಹೊತ್ತು ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋ (Delhi-San Francisco)ಗೆ ತೆರಳುತ್ತಿದ್ದ ಏರ್ ಇಂಡಿಯಾ (Air India Flight) ವಿಮಾನವನ್ನು ರಷ್ಯಾದ ಕ್ರಾಸ್ನೋಯರ್ಸ್ಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Krasnoyarsk international airport)ಕ್ಕೆ ಕಳುಹಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

ಕಾಕ್ ಪಿಟ್ ಸಿಬ್ಬಂದಿ ತಾಂತ್ರಿಕ ದೋಷವನ್ನು ಪತ್ತೆ ಹಚ್ಚಿದ ಹಿನ್ನಲೆಯಲ್ಲಿ ಎಐ 183 (AI 183) ವಿಮಾನವನ್ನು ರಷ್ಯಾದ ಕ್ರಾಸ್ನೋಯರ್ಸ್ಕ್ ಅಂತಾರಾಷ್ಟ್ರೀಯ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು. ಈ ವಿಮಾನದಲ್ಲಿ 225 ಪ್ರಯಾಣಿಕರು ಮತ್ತು 19 ಸಿಬ್ಬಂದಿ ಸೇರಿ ಒಟ್ಟು 244 ಮಂದಿ ಇದ್ದರು. ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡಿಂಗ್‌ ಮಾಡಿದ ಬಳಿಕ ಅವರೆಲ್ಲರನ್ನೂ ಹೆಚ್ಚಿನ ಟರ್ಮಿನಲ್ ಕಟ್ಟಡಕ್ಕೆ ಕರೆದೊಯ್ಯಲಾಯಿತು ಎಂದು ಅಧಿಕೃತರು ಮಾಹಿತಿ ನೀಡಿದ್ದಾರೆ.

“ಕ್ರಾಸ್ನೋಯರ್ಸ್ಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ತನ್ನದೇ ಆದ ಸಿಬ್ಬಂದಿಯನ್ನು ಹೊಂದಿಲ್ಲದ ಕಾರಣ, ಪ್ರಯಾಣಿಕರಿಗೆ ಅಗತ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ನಾವು ಬೇರೆ ವ್ಯವಸ್ಥೆ ಮಾಡುತ್ತಿದ್ದೇವೆ” ಎಂದು ಏರ್‌ ಇಂಡಿಯಾ ಹೇಳಿಕೆಯಲ್ಲಿ ತಿಳಿಸಿದೆ. “ಏರ್ ಇಂಡಿಯಾ ಸರ್ಕಾರಿ ಸಂಸ್ಥೆಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ. ಪ್ರಯಾಣಿಕರನ್ನು ಸ್ಯಾನ್ ಫ್ರಾನ್ಸಿಸ್ಕೋಗೆ ತಲುಪಿಸಲು ಶೀಘ್ರ ಪರ್ಯಾಯ ವ್ಯವಸ್ಥೆ ಮಡುತ್ತೇವೆʼʼ ಎಂದು ಭರವಸೆ ನೀಡಿದೆ.

“ಏರ್ ಇಂಡಿಯಾ ವಿಮಾನದಲ್ಲಿರುವ ಪ್ರಯಾಣಿಕರು ಮತ್ತು ಸಿಬ್ಬಂದಿಯ ಬಗ್ಗೆ ಕಾಳಜಿ ವಹಿಸುತ್ತೇವೆ. ಆದಷ್ಟು ಶೀಘ್ರ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಮತ್ತು ಅಲ್ಲಿಯವರೆಗೆ ಎಲ್ಲರ ಆರೋಗ್ಯ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ” ಎಂದು ಅಧಿಕಾರಿಗಳು ಹೇಳಿದ್ದಾರೆ.

ಹಿಂದೆಯೂ ಆಗಿತ್ತು

ಇದೇ ರೀತಿಯ ಘಟನೆ ಈ ಹಿಂದೆಯೂ ನಡೆದಿತ್ತು. ಕಳೆದ ವರ್ಷ ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಂಡು ಬಂದ ಹಿನ್ನೆಲೆಯಲ್ಲಿ ಅದನ್ನು ರಷ್ಯಾದ ಮಗದನ್‌ನಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಲಾಗಿತ್ತು.

ಆ ಬೋಯಿಂಗ್ 777-200 ಎಲ್ಆರ್ (Boeing 777-200 LR) ವಿಮಾನದಲ್ಲಿ 216 ಪ್ರಯಾಣಿಕರು ಮತ್ತು 16 ಸಿಬ್ಬಂದಿ ಇದ್ದರು. ತುರ್ತು ಭೂ ಸ್ಪರ್ಶದ ಬಳಿಕ ಅವರಿಗೆಲ್ಲ ಸಮೀಪದ ಶಾಲೆಯಲ್ಲಿ ತಾತ್ಕಾಲಿಕ ವಸತಿ ಸೌಲಭ್ಯ ಕಲ್ಪಿಸಲಾಗಿತ್ತು. ಅಲ್ಲಿ ಅವರು ಎರಡು ದಿನಗಳ ಕಾಲ ತಂಗಿದ್ದರು. ನಂತರ ಆಹಾರ ಮತ್ತು ಇತರ ಅಗತ್ಯ ವಸ್ತುಗಳನ್ನು ಹೊತ್ತ ಬದಲಿ ವಿಮಾನವನ್ನು ಮುಂಬೈನಿಂದ ಕಳುಹಿಸಲಾಯಿತು. ಎರಡು ದಿನಗಳ ಬಳಿಕ ಪರ್ಯಾಯ ವಿಮಾನ ಮೂಲಕ ಪ್ರಯಾಣಿಕರನ್ನು ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳಿದ್ದರು.

ಇದನ್ನೂ ಓದಿ: Bomb threat: ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ; ಟಿಶ್ಯೂ ಪೇಪರ್‌ನಲ್ಲಿ ಬಂದಿತ್ತು ಸಂದೇಶ

ತುರ್ತು ಭೂ ಸ್ಪರ್ಶ

ಈ ವರ್ಷದ ಮೇಯಲ್ಲಿ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿತ್ತು. ಬೆಂಗಳೂರಿನಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿತ್ತು. ಹೀಗಾಗಿ ತುರ್ತು ಭೂ ಸ್ಪರ್ಶ ಮಾಡಲಾಗಿತ್ತು. ಆ ಮೂಲಕ ಭಾರೀ ಅವಘಡವೊಂದು ತಪ್ಪಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Microsoft Global Outage: ವಿಶ್ವಾದ್ಯಂತ ನೆಲಕಚ್ಚಿದ ಮೈಕ್ರೋಸಾಫ್ಟ್‌; ವಿಂಡೋಸ್‌ನಲ್ಲಿ ತಾಂತ್ರಿಕ ದೋಷ

Microsoft Global Outage: ಮೈಕ್ರೋಸಾಫ್ಟ್‌ನ ವಿಂಡೋಸ್‌ನಲ್ಲಿ ಇಂದು ತಾಂತ್ರಿಕ ಸಮಸ್ಯೆಯಿಂದ ಕಂಡು ಬಂದಿದ್ದು, ವಿಶ್ವಾದ್ಯಂತದ ಬಳಕೆದಾರರು ಪರದಾಡಿದರು. ಇದ್ದಕ್ಕಿದ್ದಂತೆ ಕಂಪ್ಯೂಟರ್‌, ಲ್ಯಾಪ್‌ಟಾಪ್‌ ರಿಸ್ಟಾರ್ಟ್‌ ಆಗಿ ಹೈರಾಣಾದರು. ಓಪರೇಟಿಂಗ್‌ ಸಿಸ್ಟಮ್‌ (OS) ಸಮಸ್ಯೆಯಲ್ಲಿ ಸಿಲುಕಿದೆ ಎಂಬ ಸಂದೇಶ ನೀಲಿ ಬಣ್ಣದ ಸಂದೇಶ ಡಿಸ್‌ಪ್ಲೇಯಲ್ಲಿ ಮೂಡಿರುವುದಾಗಿ ಅನೇಕ ಬಳಕೆದಾರರು ತಿಳಿಸಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಮೈಕ್ರೊಸಾಫ್ಟ್‌ ಕಂಪನಿ, “ಕ್ರೌಡ್‌ಸ್ಟ್ರೈಕ್‌ ಅಪ್‌ಡೇಟ್‌ ಪರಿಣಾಮವಾಗಿ ಈ ಸಮಸ್ಯೆ ಕಂಡು ಬಂದಿದೆ. ಆತಂಕಗೊಳ್ಳಬೇಡಿ, ಇದು ಸರಿಯಾಗಲಿದೆʼʼ ಎಂದಿದೆ.

VISTARANEWS.COM


on

Microsoft Global Outage
Koo

ನವದೆಹಲಿ: ಮೈಕ್ರೋಸಾಫ್ಟ್‌ನ ವಿಂಡೋಸ್‌ನಲ್ಲಿ ಇಂದು ತಾಂತ್ರಿಕ ಸಮಸ್ಯೆ ಕಂಡು ಬಂದಿದ್ದು, ವಿಶ್ವಾದ್ಯಂತದ ಬಳಕೆದಾರರು ಪರದಾಡಿದರು (Microsoft Global Outage). ಇದ್ದಕ್ಕಿದ್ದಂತೆ ಕಂಪ್ಯೂಟರ್‌, ಲ್ಯಾಪ್‌ಟಾಪ್‌ ರಿಸ್ಟಾರ್ಟ್‌ ಆಗಿ ಹೈರಾಣಾದರು. ಓಪರೇಟಿಂಗ್‌ ಸಿಸ್ಟಮ್‌ (OS) ಸಮಸ್ಯೆಯಲ್ಲಿ ಸಿಲುಕಿದೆ ಎಂಬ ಸಂದೇಶ ನೀಲಿ ಬಣ್ಣದ ಸಂದೇಶ ಡಿಸ್‌ಪ್ಲೇಯಲ್ಲಿ ಮೂಡಿರುವುದಾಗಿ ಅನೇಕ ಬಳಕೆದಾರರು ತಿಳಿಸಿದ್ದಾರೆ. ಈ ಚಿತ್ರಗಳನ್ನು ಸೋಷಿಯಲ್‌ ಮೀಡಿಯಾಗಳಲ್ಲಿ ಪೋಸ್ಟ್‌ ಮಾಡಿ ಮೈಕ್ರೋಸಾಫ್ಟ್ ಮತ್ತು ಸಿಇಒ ಸತ್ಯ ನಾದೆಲ್ಲಾ ಅವರನ್ನು ಟ್ಯಾಗ್ ಮಾಡಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಮೈಕ್ರೊಸಾಫ್ಟ್‌ ಕಂಪನಿ, “ಕ್ರೌಡ್‌ಸ್ಟ್ರೈಕ್‌ ಅಪ್‌ಡೇಟ್‌ ಪರಿಣಾಮವಾಗಿ ಈ ಸಮಸ್ಯೆ ಕಂಡು ಬಂದಿದೆ. ಆತಂಕಗೊಳ್ಳಬೇಡಿ, ಇದು ಸರಿಯಾಗಲಿದೆʼʼ ಎಂದಿದೆ.

“ವಿಂಡೋಸ್ ಕಂಪ್ಯೂಟರ್‌ನ ಸ್ಕ್ರೀನ್‌ ಸಡನ್‌ ಆಫ್‌ ಆಯ್ತು”, “ಕಂಪ್ಯೂಟರ್‌ ಆಗಾಗ ರಿಸ್ಟ್ರಾರ್ಟ್‌ ಆಗುತ್ತಿದೆ” ಎಂದೆಲ್ಲ ಕೆಲವರು ಪೋಸ್ಟ್‌ ಮಾಡಿದ್ದಾರೆ. ʼʼನಿಮ್ಮ ಡಿವೈಸ್‌ನಲ್ಲಿ ಸಮಸ್ಯೆ ಇದೆ. ರಿಸ್ಟಾರ್ಟ್‌ ಮಾಡಬೇಕು. ಎರರ್‌ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದೇವೆʼʼ ಮುಂತಾದ ಸಂದೇಶ ಪರದೆ ಮೇಲೆ ಮೂಡಿದೆ ಎಂದು ಹಲವರು ತಿಳಿಸಿದ್ದಾರೆ.

ಮೈಕ್ರೋಸಾಫ್ಟ್‌ ಸೇವೆಗಳಲ್ಲಿನ ಈ ಎರರ್‌ ವಿಮಾನಯಾನ, ಬ್ಯಾಂಕುಗಳು ಸೇರಿ ವಿಶ್ವದಾದ್ಯಂತದ ಹಲವು ಉದ್ಯಮಗಳ ಮೇಲೆ ಪರಿಣಾಮ ಬೀರಿದೆ. ಭಾರತದಲ್ಲಿ ಸ್ಪೈಸ್ ಜೆಟ್, ಅಕಾಸಾ ಏರ್‌ಲೈನ್ಸ್‌ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಸೇರಿದಂತೆ ಭಾರತೀಯ ವಿಮಾನಯಾನ ಸಂಸ್ಥೆಗಳೂ ತೊಂದರೆಗೆ ಒಳಗಾಗಿವೆ. ಇದು ವಿಮಾನ ರದ್ದತಿ ಮತ್ತು ವಿಳಂಬಕ್ಕೆ ಕಾರಣವಾಗಿದೆ. “ನಾವು ಪ್ರಸ್ತುತ ತಾಂತ್ರಿಕ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಈ ಸಮಸ್ಯೆಯನ್ನು ಪರಿಹರಿಸಲು ನಮ್ಮ ತಂಡವು ಸಕ್ರಿಯವಾಗಿ ಕೆಲಸ ಮಾಡುತ್ತಿದೆ. ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ ಮತ್ತು ಸಮಸ್ಯೆಯನ್ನು ಪರಿಹರಿಸಿದ ನಂತರ ನಿಮಗೆ ಮಾಹಿತಿ ನೀಡುತ್ತೇವೆ. ನಿಮ್ಮ ಸಹಕಾರಕ್ಕೆ ಧನ್ಯವಾದಗಳು” ಎಂದು ಸ್ಪೈಸ್ ಜೆಟ್ ಹೇಳಿದೆ.

2023ರಲ್ಲಿಯೂ ಇದೇ ರೀತಿಯ ಸಮಸ್ಯೆ ಕಾಣಿಸಿಕೊಂಡಿತ್ತು. ಇದೀಗ ಶೀಘ್ರ ಸರಿಪಡಿಸುವುದಾಗಿ ಕಂಪನಿ ಬಳಕೆದಾರರಿಗೆ ಭರವಸೆ ನೀಡಿದೆ.

ಇದನ್ನೂ ಓದಿ: Facebook Server: ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಸರ್ವರ್‌ ಡೌನ್;‌ ನಿಮ್ಮ ಖಾತೆ ಚೆಕ್‌ ಮಾಡಿಕೊಳ್ಳಿ

Continue Reading

ದೇಶ

Kanwar Yatra: ಕನ್ವರ್‌ ಯಾತ್ರೆಯ ಮಾರ್ಗದಲ್ಲಿರುವ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ: ಯೋಗಿ ಆದಿತ್ಯನಾಥ್

Kanwar Yatra: ಕನ್ವರ್ ಯಾತ್ರೆ ಸಾಗುವ ಮಾರ್ಗದಲ್ಲಿನ ಹೋಟೆಲ್‌, ರೆಸ್ಟೋರೆಂಟ್‌ ಮತ್ತು ತಿನಿಸು ಮಾರಾಟಗಾರರು ತಮ್ಮ ಮಾಲೀಕರ ಹೆಸರನ್ನು ಪ್ರದರ್ಶಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಕನ್ವರ್ ಯಾತ್ರೆ ಸಾಗುವ ಮಾರ್ಗದಲ್ಲಿರುವ ಹೋಟೆಲ್, ಢಾಬಾಗಳು ಮತ್ತು ಇತರ ವ್ಯಾಪಾರಿಗಳು ಮಾಲೀಕರು ಮತ್ತು ಸಿಬ್ಬಂದಿಯ ಹೆಸರನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಪೊಲೀಸರು ಹೊರಡಿಸಿದ್ದ ಆದೇಶಕ್ಕೆ ಪ್ರತಿಪಕ್ಷಗಳಿಂದ ವ್ಯಾಪಕ ಟೀಕೆ ವ್ಯಕ್ತವಾದ ಒಂದು ದಿನದ ಬಳಿಕ ಈ ಬೆಳವಣಿಗೆ ನಡೆದಿದೆ.

VISTARANEWS.COM


on

Kanwar Yatra
Koo

ಲಖನೌ: ಕನ್ವರ್ ಯಾತ್ರೆ (Kanwar Yatra) ಸಾಗುವ ಮಾರ್ಗದಲ್ಲಿನ ಹೋಟೆಲ್‌, ರೆಸ್ಟೋರೆಂಟ್‌ ಮತ್ತು ತಿನಿಸು ಮಾರಾಟಗಾರರು ತಮ್ಮ ಮಾಲೀಕರ ಹೆಸರನ್ನು ಪ್ರದರ್ಶಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಶ್ರಾವಣ ಮಾಸದಲ್ಲಿ ಈ ಯಾತ್ರೆ ನಡೆಯುತ್ತದೆ. ಈ ಯಾತ್ರೆಯ ಮೂಲಕ ಶಿವಭಕ್ತರು ಹರಿದ್ವಾರದಿಂದ ಪುಣ್ಯ ತೀರ್ಥ ತಂದು ಉತ್ತರ ಪ್ರದೇಶದ ಮುಜಾಫರ್‌ನಗರದ ಮಾರ್ಗವಾಗಿ ತೆರಳುತ್ತಾರೆ. ಈ ವರ್ಷದ ಕನ್ವರ್ ಯಾತ್ರೆಯು ಜುಲೈ 22ರಂದು ಪ್ರಾರಂಭವಾಗಿ ಆಗಸ್ಟ್ 2ರವರೆಗೆ ನಡೆಯಲಿದೆ.

ಕನ್ವರ್ ಯಾತ್ರೆ ಸಾಗುವ ಮಾರ್ಗದಲ್ಲಿರುವ ಹೋಟೆಲ್, ಢಾಬಾಗಳು ಮತ್ತು ಇತರ ವ್ಯಾಪಾರಿಗಳು ಮಾಲೀಕರು ಮತ್ತು ಸಿಬ್ಬಂದಿಯ ಹೆಸರನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಪೊಲೀಸರು ಹೊರಡಿಸಿದ್ದ ಆದೇಶಕ್ಕೆ ಪ್ರತಿಪಕ್ಷಗಳಿಂದ ವ್ಯಾಪಕ ಟೀಕೆ ವ್ಯಕ್ತವಾದ ಒಂದು ದಿನದ ಬಳಿಕ ಈ ಬೆಳವಣಿಗೆ ನಡೆದಿದೆ.

ಕನ್ವರ್ ಯಾತ್ರೆಯಲ್ಲಿ ಪಾಲ್ಗೊಳ್ಳುವ ಭಕ್ತರ ಗೊಂದಲವನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಜಾಫರ್‌ನಗರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಸಿಂಗ್ ಗುರುವಾರ ತಿಳಿಸಿದ್ದರು. ಅದಾಗ್ಯೂ ಪ್ರತಿಪಕ್ಷಗಳು ಈ ನಡೆಯನ್ನು ಖಂಡಿಸಿದ್ದವು. ಇದೀಗ ಸ್ವತಃ ಮುಖ್ಯಮಂತ್ರಿಯೇ ಈ ಆದೇಶ ಹೊರಡಿಸಿರುವುದು ಕುತೂಹಲ ಮೂಡಿಸಿದೆ.

ʼʼಧಾರ್ಮಿಕ ಯಾತ್ರಾರ್ಥಿಗಳ ಪಾವಿತ್ರ್ಯವನ್ನು ಕಾಪಾಡುವ ಉದ್ದೇಶದ ಹಿನ್ನೆಲೆಯಲ್ಲಿ ಮುಜಾಫರ್‌ನಗರ ಪೊಲೀಸರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನುವುದನ್ನು ಸಿಎಂ ಯೋಗಿ ಆದಿತ್ಯನಾಥ್‌ ಗಮನಿಸಿದರು. ಹೀಗಾಗಿ ಅವರು ರೆಸ್ಟೋರೆಂಟ್, ಹೋಟೆಲ್‌, ರಸ್ತೆಬದಿಯ ಢಾಬಾ ಅಥವಾ ಆಹಾರದ ಗಾಡಿ ಸೇರಿದಂತೆ ಪ್ರತಿಯೊಂದು ಕಡೆ ಮಾಲೀಕರ ಹೆಸರು ಮತ್ತು ವಿವರಗಳನ್ನು ಪ್ರದರ್ಶಿಸುವಂತೆ ಸೂಚಿಸಿದ್ದಾರೆʼʼ ಎಂದು ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ ಉತ್ತರ ಪ್ರದೇಶದ ಸಚಿವ ಕಪಿಲ್ ದೇವ್ ಅಗರ್ವಾಲ್ ಅವರು ಮಾತನಾಡಿ, ಮುಸ್ಲಿಂ ಮಾರಾಟಗಾರರು ಹಿಂದುಗಳಂತೆ ನಟಿಸಿ ಯಾತ್ರಾರ್ಥಿಗಳಿಗೆ ಮಾಂಸಾಹಾರವನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. “ಅವರು ವೈಷ್ಣೋ ಡಾಬಾ ಭಂಡಾರ್, ಶಕುಂಭರಿ ದೇವಿ ಹೋಟೆಲ್‌ ಮತ್ತು ಶುದ್ಧ ಸಸ್ಯಾಹಾರಿ ಎಂದು ಬೋರ್ಡ್‌ ಸ್ಥಾಪಿಸಿ ಮಾಂಸಾಹಾರ ಮಾರಾಟ ಮಾಡುತ್ತಾರೆ” ಎಂದು ಅವರು ತಿಳಿಸಿದ್ದರು.

ಮುಜಾಫರ್‌ನಗರ ಪೊಲೀಸರ ಆದೇಶಕ್ಕೆ ಕಿಡಿ ಕಾರಿದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, “ಕನ್ವರ್ ಯಾತ್ರೆಯ ಉದ್ದಕ್ಕೂ ಇರುವ ಹೊಟೇಲ್‌ಗಳಲ್ಲಿ ಮಾಲೀಕರು ಮತ್ತು ಸಿಬ್ಬಂದಿಯ ಹೆಸರನ್ನು ಪ್ರದರ್ಶಿಸಬೇಕೆಂಬ ಉತ್ತರ ಪ್ರದೇಶ ಪೊಲೀಸರು ನೀಡಿರುವ ಆದೇಶವು ‘ಸಾಮಾಜಿಕ ಅಪರಾಧ’. ಜನರ ನಡುವಿನ ಸಾಮರಸ್ಯವನ್ನು ಕೆಡಿಸಲು ಇಂತಹ ಆದೇಶಗಳನ್ನು ತಹೊರಡಿಲಾಗುತ್ತಿದೆʼʼ ಎಂದು ಅವರು ಕಿಡಿಕಾರಿದ್ದಾರೆ.

“ಉತ್ತರ ಪ್ರದೇಶ ಪೊಲೀಸರ ಈ ಆದೇಶವು ವರ್ಣಭೇದ ಹಾಗೂ ಹಿಟ್ಲರ್‌ ನೀತಿಗೆ ಸಮವಾಗಿದೆ. ಕನ್ವರ್‌ ಯಾತ್ರಿಗಳು ಮುಸ್ಲಿಮರ ಬಳಿ ವ್ಯಾಪಾರ ಮಾಡಬಾರದು ಎನ್ನುವುದು ಇದರ ಉದ್ದೇಶ” ಎಂದು ಎಐಎಂಐಎಂ ಪಕ್ಷದ ಅಧ್ಯಕ್ಷ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅಭಿಪ್ರಾಯಪಟ್ಟಿದ್ದಾರೆ. ಒಟ್ಟಿನಲ್ಲಿ ಈ ಆದೇಶ ಇನ್ನೊಂದು ಸುತ್ತಿನ ಧರ್ಮ ದಂಗಲ್‌ಗೆ ಕಾರಣವಾಗುವ ಲಕ್ಷಣಗಳಿವೆ.

ಇದನ್ನೂ ಓದಿ: Doda Attack: ಯೋಧನ ಶಿರಚ್ಛೇದಕ್ಕೆ ಯತ್ನಿಸಿದ ವಿಡಿಯೊ ಬಿಡುಗಡೆ ಮಾಡಿದ ಭಯೋತ್ಪಾದಕರು

Continue Reading

ಕ್ರೀಡೆ

Sri Lanka Tour: ಸಂಜು, ಅಭಿಷೇಕ್​ಗೆ ಅವಕಾಶ ನೀಡದಕ್ಕೆ ಬಿಸಿಸಿಐ ವಿರುದ್ಧ ಕಿಡಿಕಾರಿದ ಸಂಸದ ​ತರೂರ್

Sri Lanka Tour: ಕೋಚ್​ ಗೌತಮ್ ಗಂಭೀರ್‌ ಖಡಕ್​ ಎಚ್ಚರಿಕೆ ನೀಡಿದ ಕಾರಣ ವಿಶ್ರಾಂತಿಯಲ್ಲಿದ್ದ ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ, ಜಸ್​ಪ್ರೀತ್​ ಬುಮ್ರಾ ಮತ್ತು ರವೀಂದ್ರ ಜಡೇಜಾ ತಮ್ಮ ವಿಶ್ರಾಂತಿ ಮೊಟಕುಗೊಳಿಸಿ ತಂಡಕ್ಕೆ ಮರಳಿದ್ದಾರೆ.

VISTARANEWS.COM


on

Sri Lanka Tour
Koo

ನವದೆಹಲಿ: ಮುಂಬರುವ ಶ್ರೀಲಂಕಾ ಪ್ರವಾಸಕ್ಕಾಗಿ(Sri Lanka Tour) ಗುರುವಾರ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿತ್ತು. ಆದರೆ, ಏಕದಿನ ತಂಡದಿಂದ ಸಂಜು ಸ್ಯಾಮ್ಸನ್​(Sanju Samson) ಮತ್ತು ಅಭಿಷೇಕ್​ ಶರ್ಮ(Abhishek Sharma) ಅವರನ್ನು ಸರಣಿಗೆ ಆಯ್ಕೆ ಮಾಡದ್ದಕ್ಕೆ ಸಂಸದ ಶಶಿ ತರೂರ್(Member of Parliament Shashi Tharoor) ಆಯ್ಕೆ ಸಮಿತಿ ಮತ್ತು ಬಿಸಿಸಿಐ ವಿರುದ್ಧ ಕಿಡಿಕಾರಿದ್ದಾರೆ. ಕಳೆದ ವರ್ಷ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಸ್ಯಾಮ್ಸನ್ ಏಕದಿನ ಪಂದ್ಯದಲ್ಲಿ ಶತಕ ಬಾರಿಸಿದ್ದರು. ಅಭಿಷೇಕ್ ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ತಮ್ಮ ನಿರ್ಭೀತ ಬ್ಯಾಟಿಂಗ್‌ನಿಂದ ಎಲ್ಲರನ್ನೂ ಆಕರ್ಷಿಸಿದ್ದರು. ಆದರೂ ಕೂಡ ಈ ಪ್ರತಿಭಾನ್ವಿತ ಆಟಗಾರರನ್ನು ಕೈಬಿಟ್ಟಿರುವುದು ನಿಜ್ಜಕ್ಕೂ ಬೇಸರದ ಸಂಗತಿ ಎಂದು ತರೂರ್(Shashi Tharoor)​ ಹೇಳಿದ್ದಾರೆ.

“ಈ ತಿಂಗಳಾಂತ್ಯದಲ್ಲಿ ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡದ ಆಯ್ಕೆ ಕುತೂಹಲಕಾರಿಯಾಗಿದೆ. ತಮ್ಮ ಕೊನೆಯ ಏಕದಿನದಲ್ಲಿ ಶತಕ ಬಾರಿಸಿದ್ದ ಸಂಜು ಸ್ಯಾಮ್ಸನ್​ ಅವರನ್ನು ಏಕದಿನಕ್ಕೆ ಆಯ್ಕೆ ಮಾಡಲಾಗಿಲ್ಲ. ಜಿಂಬಾಬ್ವೆ ಟಿ20 ಸರಣಿಯಲ್ಲಿ ವೇಗದ ಶತಕ ಬಾರಿಸಿದ್ದ ಅಭಿಷೇಕ್​ ಶರ್ಮ ಕೂಡ ಆಯ್ಕೆಯಾಗಿಲ್ಲ. ಅಪರೂಪಕ್ಕೊಮ್ಮೆ ಆಯ್ಕೆಯಾದರು, ತಂಡಕ್ಕೆ ಶುಭವಾಗಲಿ,” ಎಂದು ತರೂರ್ ತಂಡದ ಆಟಗಾರರ ಪಟ್ಟಿಯನ್ನು ಹಂಚಿಕೊಂಡು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.

ಟಿ20 ತಂಡ

ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್ (ವಿ.ಕೀ ), ಸಂಜು ಸ್ಯಾಮ್ಸನ್ (ವಿ.ಕೀ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ , ಅರ್ಶದೀಪ್​ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್​ ಸಿರಾಜ್.

ಇದನ್ನೂ ಓದಿ Team India Srilanka Tour : ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಸೂರ್ಯಕುಮಾರ್​ಗೆ ಟಿ20 ನಾಯಕತ್ವ

ಏಕದಿನ ತಂಡ


ರೋಹಿತ್ ಶರ್ಮ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್ (ವಿ.ಕೀ), ರಿಷಬ್ ಪಂತ್ (ವಿ.ಕೀ), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.

ಮುಂದಿನ ವರ್ಷ ಪಾಕಿಸ್ತಾನ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಗೂ ಮೊದಲು ಭಾರತ ತಂಡ ಕೆಲವೇ ಏಕದಿನ ಪಂದ್ಯಗಳನ್ನು ಮಾತ್ರ ಆಡುತ್ತಿದೆ. ಹೆಚ್ಚಾಗಿ ಟಿ20 ಸರಣಿ ಮಾತ್ರ ಆಡಲಿದೆ. ಕಡಿಮೆ ಏಕದಿನ ಪಂದ್ಯ ಇರುವ ಕಾರಣ ಅನುಭವಿ ಆಟಗಾರರು ಈ ಪ್ರವಾಸದಲ್ಲಿ ಪಾಲ್ಗೊಳ್ಳಬೇಕು ಎಂದು ನೂತನ ಕೋಚ್​ ಗೌತಮ್ ಗಂಭೀರ್‌ ಖಡಕ್​ ಎಚ್ಚರಿಕೆ ನೀಡಿದ ಕಾರಣ ವಿಶ್ರಾಂತಿಯಲ್ಲಿದ್ದ ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ, ಜಸ್​ಪ್ರೀತ್​ ಬುಮ್ರಾ ಮತ್ತು ರವೀಂದ್ರ ಜಡೇಜಾ ತಮ್ಮ ವಿಶ್ರಾಂತಿ ಮೊಟಕುಗೊಳಿಸಿ ತಂಡಕ್ಕೆ ಮರಳಿದ್ದಾರೆ.

ಪ್ರವಾಸದ ಮೊದಲ 3 ಟಿ20 ಪಂದ್ಯಗಳು ಜುಲೈ 27, 28 ಮತ್ತು 30ರಂದು ಪಲ್ಲೆಕಿಲೆಯಲ್ಲಿ ನಡೆಯಲಿವೆ. ಮೊದಲು ಪ್ರಕಟಗೊಂಡಿದ್ದ ವೇಳಾಪಟ್ಟಿಯಲ್ಲಿ 26ರಿಂದ ಟಿ20 ಪಂದ್ಯ ಆರಂಭವಾಗಬೇಕಿತ್ತು. ಏಕದಿನ ಸರಣಿ ಕೂಡ ಒಂದು ದಿನ ತಡವಾಗಿ ಶುರುವಾಗಬೇಕಿತ್ತು. ಏಕದಿನ ಆಗಸ್ಟ್​ 1ರದ ಬದಲಾಗಿ ಆಗಸ್ಟ್​ 2ರಿಂದ ಆರಂಭಗೊಳ್ಳಲಿದೆ. ಉಳಿದ ಪಂದ್ಯಗಳ ದಿನಾಂಕ ಬದಲಾಗಲಿಲ್ಲ. ಈ ಹಿಂದಿನಂತೆ ಆಗಸ್ಟ್​ 4 ಮತ್ತು 7ರಂದೇ ನಡೆಯಲಿದೆ.

Continue Reading

ರಾಜಕೀಯ

Narendra Modi: ಬಿಜೆಪಿ ಕಾರ್ಯಕರ್ತರೊಂದಿಗೆ ಮೋದಿ ಸ್ನೇಹ ಮಿಲನ; ನಾವೆಲ್ಲರೂ ಒಂದೇ ಕುಟುಂಬ ಎಂದು ಬಣ್ಣಿಸಿದ ಪ್ರಧಾನಿ

Narendra Modi: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು. ಮೂರನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲು ನೆರವಾದ ಪ್ರತಿಯೊಬ್ಬರಿಗೂ ಮೋದಿ ಧನ್ಯವಾದ ಅರ್ಪಿಸಿದರು. ‘ಸ್ನೇಹ ಮಿಲನ್‌’ ಹೆಸರಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನಾವೆಲ್ಲರೂ ಒಂದೇ ಕುಟುಂಬದ ಸದಸ್ಯರು ಎಂದು ಮೋದಿ ಬಣ್ಣಿಸಿದರು. ತವರು ರಾಜ್ಯ ಗುಜರಾತ್ ಮತ್ತು ರಾಷ್ಟ್ರ ಮಟ್ಟದಲ್ಲಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡ ದಿನಗಳನ್ನು ನೆನಪಿಸಿಕೊಂಡ ಅವರು, ತಮ್ಮ ಅನುಭವಗಳನ್ನು ಹಂಚಿಕೊಂಡರು ಮತ್ತು ಸೀಮಿತ ಸಂಪನ್ಮೂಲಗಳೊಂದಿಗೆ ಪಕ್ಷವು ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂಬುದನ್ನು ಹಂಚಿಕೊಂಡರು.

VISTARANEWS.COM


on

Narendra Modi
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಗುರುವಾರ ದೆಹಲಿಯ ಬಿಜೆಪಿ (BJP) ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು. ಮೂರನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲು ನೆರವಾದ ಪ್ರತಿಯೊಬ್ಬರಿಗೂ ಮೋದಿ ಧನ್ಯವಾದ ಅರ್ಪಿಸಿದರು. ‘ಸ್ನೇಹ ಮಿಲನ್‌’ ಹೆಸರಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿಶೇಷ ಎಂದರೆ ಮೂರನೇ ಬಾರಿ ಪ್ರದಾನಿ ಪಟ್ಟಕ್ಕಲೇರಿದ ಬಳಿಕ ಕಾರ್ಯಕರ್ತರೊಂದಿಗೆ ಮೋದಿ ನಡೆಸಿದ ಮೊದಲ ಸಮಾಲೋಚನೆ ಇದಾಗಿದೆ.

ಬಿಜೆಪಿ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರು ಮೋದಿ ಅವರನ್ನು ಪಕ್ಷದ ಕಚೇರಿಗೆ ಸ್ವಾಗತಿಸಿದರು. ಎರಡೂವರೆ ಗಂಟೆಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್, ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತಿತರರು ಉಪಸ್ಥಿತರಿದ್ದರು.

ನಾವೆಲ್ಲರೂ ಒಂದೇ ಕುಟುಂಬದ ಸದಸ್ಯರು ಎಂದು ಮೋದಿ ಬಣ್ಣಿಸಿದರು. ತವರು ರಾಜ್ಯ ಗುಜರಾತ್ ಮತ್ತು ರಾಷ್ಟ್ರ ಮಟ್ಟದಲ್ಲಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡ ದಿನಗಳನ್ನು ನೆನಪಿಸಿಕೊಂಡ ಅವರು, ತಮ್ಮ ಅನುಭವಗಳನ್ನು ಹಂಚಿಕೊಂಡರು ಮತ್ತು ಸೀಮಿತ ಸಂಪನ್ಮೂಲಗಳೊಂದಿಗೆ ಪಕ್ಷವು ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂಬುದನ್ನು ಬಹಿರಂಗಪಡಿಸಿದರು.

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಯಾವುದೇ ರಜಾಗಳಿಲ್ಲದೆ ಮೂರು ತಿಂಗಳ ಕಾಲ ಕೆಲಸ ಮಾಡಲು ಎಲ್ಲವನ್ನೂ ತ್ಯಾಗ ಮಾಡಿದ್ದಕ್ಕಾಗಿ ಪಕ್ಷದ ಸಿಬ್ಬಂದಿಗೆ ಧನ್ಯವಾದ ಅರ್ಪಿಸಿದ ಅವರು, ಪಕ್ಷದ ಸಂಘಟನೆಗಿಂತ ದೊಡ್ಡದು ಯಾವುದೂ ಇಲ್ಲ ಮತ್ತು ಎಲ್ಲ ಸಿಬ್ಬಂದಿ ಅದರ ಕೇಂದ್ರ ಬಿಂದು ಎಂದು ಒತ್ತಿ ಹೇಳಿದರು. ತಮ್ಮೊಂದಿಗೆ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡ ಹಿರಿಯ ಕಾರ್ಯಕರ್ತರನ್ನು ಮುಂದೊಂದು ದಿನ ಭೇಟಿಯಾಗುವುದಾಗಿ ಅವರು ತಿಳಿಸಿದರು.

ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. “ಪ್ರಧಾನಿ ಮೋದಿ ಅವರು ಬಿಜೆಪಿ ಪ್ರಧಾನ ಕಚೇರಿಯಲ್ಲಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು. ಈ ಪೈಕಿ ಅನೇಕರು ದಶಕಗಳಿಂದ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಪಕ್ಷವು 2 ಸ್ಥಾನಗಳಿಂದ 303ಕ್ಕೆ ಏರಿರುವುದನ್ನು ಅವರು ನೋಡಿದ್ದಾರೆʼʼ ಎಂದು ತಿಳಿಸಿದ್ದಾರೆ. ಅವರನ್ನು ಪಕ್ಷ ಗುರುತಿಸಿದ್ದಕ್ಕೆ ಭಾವುಕರಾಗಿದ್ದರು ಎಂದು ಹೇಳಿದ್ದಾರೆ.

ವಿಶೇಷವೆಂದರೆ ಜುಲೈ ಅಂತ್ಯದಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಯುವ ಸಾಧ್ಯತೆ ಇದೆ. ಸಭೆಯಲ್ಲಿ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಉಪಸ್ಥಿತರಿರಲಿದ್ದಾರೆ. ಮೂಲಗಳ ಪ್ರಕಾರ ಲೋಕಸಭೆ ಚುನಾವಣೆ ಫಲಿತಾಂಶ ಹಾಗೂ ಸರ್ಕಾರ ಮತ್ತು ಸಂಘಟನೆಯ ನಡುವಿನ ಸಮನ್ವಯತೆ ಕುರಿತು ಚರ್ಚೆ ನಡೆಯಲಿದೆ.

ಇದನ್ನೂ ಓದಿ: UP CM v/s DCM: ಉತ್ತರಪ್ರದೇಶ ಬಿಜೆಪಿಯಲ್ಲಿ ಭಿನ್ನಮತ; ಯೋಗಿ ತಲೆದಂಡ ಪಕ್ಕಾನಾ?

ಜುಲೈ 14ರಂದು, ಉತ್ತರ ಪ್ರದೇಶ ಬಿಜೆಪಿ ಘಟಕವು ತನ್ನ ರಾಜ್ಯ ಕಾರ್ಯಕಾರಿ ಸಮಿತಿಯ ಸಭೆಯನ್ನು ಲಖನೌ ಡಾ.ರಾಮ್ ಮನೋಹರ್ ಲೋಹಿಯಾ ಕಾನೂನು ವಿಶ್ವವಿದ್ಯಾಲಯದ ಅಂಬೇಡ್ಕರ್ ಸಭಾಂಗಣದಲ್ಲಿ ನಡೆಸಿತ್ತು. ಈ ಸಭೆಯಲ್ಲಿ 2024ರ ಲೋಕಸಭೆಯಲ್ಲಿ ಪಕ್ಷದ ಕಳಪೆ ಪ್ರದರ್ಶನದ ಬಗ್ಗೆ ಚರ್ಚಿಸಲಾಗಿತ್ತು. 

Continue Reading
Advertisement
Martin' movie delayed even after 3 years
ಸ್ಯಾಂಡಲ್ ವುಡ್11 mins ago

Dhruva Sarja: 3 ವರ್ಷವಾದರೂ ʻಮಾರ್ಟಿನ್‌ʼ ಸಿನಿಮಾ ರಿಲೀಸ್‌ ಆಗಲು ತಡವಾಗಿದ್ದೇಕೆ? ನಿರ್ಮಾಪಕರಿಗೆ ಮೋಸ ಮಾಡಿದ್ಯಾರು?

lokayukta raid akhtar ali
ಪ್ರಮುಖ ಸುದ್ದಿ36 mins ago

Lokayukta Raid: ಲೋಕಾಯುಕ್ತ ದಾಳಿಯ ವೇಳೆ ಚಿನ್ನಾಭರಣ ಪಕ್ಕದ ಮನೆಗೆಸೆದ ಅಖ್ತರ್‌ ಅಲಿ!

Microsoft Global Outage
ದೇಶ57 mins ago

Microsoft Global Outage: ವಿಶ್ವಾದ್ಯಂತ ನೆಲಕಚ್ಚಿದ ಮೈಕ್ರೋಸಾಫ್ಟ್‌; ವಿಂಡೋಸ್‌ನಲ್ಲಿ ತಾಂತ್ರಿಕ ದೋಷ

Electric Shock
ದಕ್ಷಿಣ ಕನ್ನಡ1 hour ago

Electric shock : ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿನಿ, ವೃದ್ಧ ಸೇರಿ ಶ್ವಾನಗಳು ಸಾವು

DK Shivakumar
ಕರ್ನಾಟಕ1 hour ago

DK Shivakumar: ಬಿಎಸ್‌ವೈ, ಬೊಮ್ಮಾಯಿ ಕಾಲದಲ್ಲಿ 300 ಕೋಟಿಗೂ ಹೆಚ್ಚು ಅಕ್ರಮ: ಡಿಕೆಶಿ ಆರೋಪ

Virat Kohli
ಕ್ರೀಡೆ1 hour ago

Virat Kohli: ಬಿಸಿಸಿಐ ಅಧಿಕಾರಿಗಳನ್ನು ಸಂಪರ್ಕಿಸಿ ಕೋಚ್​ ಗಂಭೀರ್​ ವಿಚಾರದಲ್ಲಿ ಕೊಹ್ಲಿ ಕೊಟ್ಟ ಆಶ್ವಾಸನೆ ಏನು?

karnataka Rain
ಮಳೆ1 hour ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

ಪ್ರಮುಖ ಸುದ್ದಿ2 hours ago

Karnataka Job Reservation: ಕನ್ನಡಿಗರಿಗೆ ಮೀಸಲಾತಿ ನೀಡಲು ಕರವೇ ಆಗ್ರಹ; ʼಫೋನ್ ಪೇʼ ಬಾಯ್ಕಾಟ್ ಅಭಿಯಾನ ಶುರು!

Kanwar Yatra
ದೇಶ2 hours ago

Kanwar Yatra: ಕನ್ವರ್‌ ಯಾತ್ರೆಯ ಮಾರ್ಗದಲ್ಲಿರುವ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ: ಯೋಗಿ ಆದಿತ್ಯನಾಥ್

Uttara kannada landslide 3
ಉತ್ತರ ಕನ್ನಡ2 hours ago

Uttara Kannada Landslide: 6 ಜನರ ಶವ ಪತ್ತೆ, ಇನ್ನೂ ನಾಲ್ವರಿಗಾಗಿ ಶೋಧ; ಭಾರಿ ಮಳೆ ನಡುವೆ ಮಣ್ಣು ತೆರವು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 hour ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ2 hours ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ22 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ24 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಟ್ರೆಂಡಿಂಗ್‌