GT World Mall: ಅನ್ನದಾತರಿಗೆ ಅವಮಾನ; ತೆರಿಗೆ ಪಾವತಿಸದ್ದಕ್ಕಾಗಿ ಜಿಟಿ ಮಾಲ್‌ ಸೀಲ್ ಮಾಡಿದ ಬಿಬಿಎಂಪಿ - Vistara News

ಪ್ರಮುಖ ಸುದ್ದಿ

GT World Mall: ಅನ್ನದಾತರಿಗೆ ಅವಮಾನ; ತೆರಿಗೆ ಪಾವತಿಸದ್ದಕ್ಕಾಗಿ ಜಿಟಿ ಮಾಲ್‌ ಸೀಲ್ ಮಾಡಿದ ಬಿಬಿಎಂಪಿ

GT World Mall: ಮಾಲ್‌ ಬಾಗಿಲಿಗೆ ಬೀಗ ಜಡಿಯಲಾಗಿದ್ದು, ʼಆಸ್ತಿ ತೆರಿಗೆ (Property Tax) ಪಾವತಿಸದ ಕಾರಣಕ್ಕಾಗಿ ಮಾಲ್ ಅನ್ನು ಸೀಲ್ ಮಾಡಲಾಗಿದೆʼ ಎಂದು ಬಾಗಿಲಿಗೆ ಅಂಟಿಸಲಾದ ನೋಟೀಸ್‌ನಲ್ಲಿ ತಿಳಿಸಲಾಗಿದೆ. ಬಿಬಿಎಂಪಿ ನೋಟಿಸ್‌ಗೆ ಲಿಖಿತ ಉತ್ತರ‌ ನೀಡಿರುವ ಜಿಟಿ ಮಾಲ್ ಮಾಲಿಕರು, ತಪ್ಪೆಸಗಿದ ಸಿಬ್ಬಂದಿ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

VISTARANEWS.COM


on

gt world mall bandh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪಂಚೆ ಧರಿಸಿ ಬಂದ ರೈತರಿಗೆ ಪ್ರವೇಶ ನಿರಾಕರಿಸಿ (Farmer humiliation) ಅವಮಾನ ಮಾಡಿದ ಹಿನ್ನೆಲೆಯಲ್ಲಿ ಜನತೆಯ, ಮಾಧ್ಯಮಗಳ ಹಾಗೂ ಸರಕಾರದ ಆಕ್ರೋಶ ಎದುರಿಸಿದ್ದ ಬೆಂಗಳೂರಿನ ಜಿಟಿ ವರ್ಲ್ಡ್‌ ಮಾಲ್‌ (GT World Mall), ಸ್ವಯಂಪ್ರೇರಿತವಾಗಿ ಬಂದ್‌ (GT World Mall Bandh) ಮಾಡಿದ ಕೆಲವೇ ಗಂಟೆಗಳಲ್ಲಿ ಬಿಬಿಎಂಪಿ ಅಧಿಕಾರಿಗಳು (BBMP Officers) ಮಾಲ್‌ ಅನ್ನು ಸೀಜ್‌ ಮಾಡಿದ್ದಾರೆ.

ಮಾಲ್‌ ಬಾಗಿಲಿಗೆ ಬೀಗ ಜಡಿಯಲಾಗಿದ್ದು, ʼಆಸ್ತಿ ತೆರಿಗೆ (Property Tax) ಪಾವತಿಸದ ಕಾರಣಕ್ಕಾಗಿ ಮಾಲ್ ಅನ್ನು ಸೀಲ್ ಮಾಡಲಾಗಿದೆʼ ಎಂದು ಬಾಗಿಲಿಗೆ ಅಂಟಿಸಲಾದ ನೋಟೀಸ್‌ನಲ್ಲಿ ತಿಳಿಸಲಾಗಿದೆ. 2023-24ನೇ ಸಾಲಿನ 1,78,23,560 ಕೋಟಿ ರೂ. ಆಸ್ತಿ ತೆರಿಗೆ ಬಾಕಿಯಿದ್ದು, ಪ್ರಸಕ್ತ ಸಾಲಿನಲ್ಲಿ 1,78,23,460 ಆಸ್ತಿ ತೆರಿಗೆ ಪಾವತಿಸಬೇಕಿದೆ. ತೆರಿಗೆ ಪಾವತಿಸಿಲ್ಲ ಅಂತ ಬಿಬಿಎಂಪಿ ಜಿಟಿ ಮಾಲ್ ಅನ್ನು ಬಂದ್ ಮಾಡಿದೆ. ಬಿಬಿಎಂಪಿಯ ಕಂದಾಯ ಇಲಾಖೆ ಅಧಿಕಾರಿಗಳು ಮಾಲ್‌ಗೆ ಬೀಗ ಹಾಕಿದ್ದು, ತೆರಿಗೆ ಕಟ್ಟುವಂತೆ ನೋಟೀಸ್ ಜಾರಿ ಮಾಡಿದ್ದಾರೆ. ತೆರಿಗೆ ಪಾವತಿಸಿದ ಮೇಲೆ ಮಾಲ್ ತೆರೆಯಲು ಒಪ್ಪಿಗೆ ನೀಡಲಿದ್ದಾರೆ.

ಉತ್ತರ ನೀಡಿದ ಜಿಟಿ ಮಾಲ್‌

ಬಿಬಿಎಂಪಿ ನೋಟಿಸ್‌ಗೆ ಲಿಖಿತ ಉತ್ತರ‌ ನೀಡಿರುವ ಜಿಟಿ ಮಾಲ್ ಮಾಲಿಕರು, ತಪ್ಪೆಸಗಿದ ಸಿಬ್ಬಂದಿ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ. ಪಂಚೆ ಉಟ್ಟು ಬಂದ ರೈತ ಮಾಲ್ ಎಂಟ್ರಿ ನಿರಾಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ನೋಟೀಸ್‌ ನೀಡಿದ್ದು, ಅದಕ್ಕೆ ಉತ್ತರ ನೀಡಿ ಪತ್ರ ಬರೆದಿದ್ದಾರೆ.

ʼಪಂಚೆ ಧರಿಸಿದವರಿಗೆ ಮಾಲ್ ಒಳಗೆ ಪ್ರವೇಶ ಇಲ್ಲ ಎಂಬ ನಿಯಮ ನಮ್ಮಲ್ಲಿಲ್ಲ. ಜಿಟಿ ಮಾಲ್ 2017ರಲ್ಲಿ ಆರಂಭವಾಗಿದ್ದು, ಮಾಲ್‌ನಲ್ಲಿ ಅನೇಕ ಮಳಿಗೆಗಳಲ್ಲಿ ಪಂಚೆ ಮಾರಾಟವೂ ನಡೆದಿದೆ. ಪಂಚೆ ನಮ್ಮ ಸಂಸ್ಕೃತಿಯ ಸಂಕೇತ. ಪಂಚೆಯು‌ ನಮ್ಮ ನಾಡಿನ ಸಾಂಸ್ಕೃತಿಕ ಉಡುಗೆಯಾಗಿದೆ, ಇದಕ್ಕೆ ಹೆಮ್ಮೆಯೂ ಇದೆ. ಘಟನೆಯು ಸೆಕ್ಯುರಿಟಿಯ ಅಜಾಗರೂಕತೆಯಿಂದ ನಡೆದಿದೆ. ಪಂಚೆ ಉಟ್ಟು ಬಂದ ರೈತರನ್ನು ಮಾಲ್ ಒಳಗೆ ಬಿಡದೆ ಇದದ್ದು ಸರಿಯಾದ ಕ್ರಮವಲ್ಲ. ಈ ರೀತಿ ಮಾಡಿದ ನಮ್ಮ ಸಿಬ್ಬಂದಿಯನ್ನು ಕೆಲಸದಿಂದ ವಜಾ ಮಾಡಲಾಗಿದೆʼ ಎಂದು ಜಿಟಿ ಮಾಲ್ ಸಿಇಓ ಪ್ರಶಾಂತ್ ಆನಂದ್ ತಿಳಿಸಿದ್ದಾರೆ.

ಈ ಹಿಂದೆ ಬೇರೆ ಬೇರೆ ದಿನ ಪಂಚೆ ಧರಿಸಿದವರು ಓಡಾಡುವ ಸಿಸಿಟಿವಿ ದೃಶ್ಯದೊಂದಿಗೆ ಸಿಇಒ ಉತ್ತರ ಸಲ್ಲಿಸಿದ್ದಾರೆ. ʼ2017ರಿಂದ ಇಲ್ಲಿಯವರೆಗೆ ಯಾವುದೇ ಅಹಿತಕರ ಘಟನೆ ನಡೆದಿರಲಿಲ್ಲ. ಮುಂದೆ ಇಂತಹ ಪ್ರಮಾದ ನಡೆಯಲು ಬಿಡುವುದಿಲ್ಲ. ಈ ಘಟನೆಯಿಂದ ನಮಗೆ ಬಹಳ ಬೇಸರವಾಗಿದ್ದು ನಾವು ವಿಷಾದ ವ್ಯಕ್ತಪಡಿಸುತ್ತೇವೆ. ನಮ್ಮ ಮಾಲ್‌ನಲ್ಲಿನ ಮಳಿಗೆಗಳಲ್ಲಿ ಪಂಚೆಯನ್ನು ಮುಕ್ತವಾಗಿ ಮಾರಾಟ ಮಾಡುತ್ತೇವೆ. ಈ ಹಿಂದೆ ನಮ್ಮ ಮಾಲ್ ಅನೇಕರು ಪಂಚೆ ತೊಟ್ಟು ಬಂದಿದ್ದು ಅವರ ಸಿಸಿ ಟಿವಿ ಚಿತ್ರಣಗಳನ್ನು ನಾವು ನೀಡಿದ್ದೇವೆ. ಈ ವರೆಗೆ ಸಾಮಾಜಿಕವಾಗಿ ಇನ್ಯಾವುದೇ ಅಹಿತಕರ ಘಟನೆ ನಡೆದಿರುವುದಿಲ್ಲ‌, ಮುಂದೆಯೂ ನಡೆಯದಂತೆ ಜಾಗೃತಿ ವಹಿಸುವುದಾಗಿ ಜಿಟಿ ಮಾಲ್ ನೋಟಿಸ್‌ಗೆ ಉತ್ತರ ನೀಡಿದೆ.

ಕಲಾಪದಲ್ಲಿ ಬಂದ್​ಗೆ ಸೂಚನೆ

ಗುರುವಾರ ಆರಂಭವಾದ ಮೂರನೇ ದಿನದ ವಿಧಾನಸಭೆ ಕಲಾಪ ಆರಂಭದಲ್ಲೇ ಈ ವಿಷಯ ಪ್ರಸ್ತಾಪವಾಯಿತು. ಹಲವರು ಸದಸ್ಯರು ರೈತರಿಗೆ ಅವಮಾನ ಆದ ವಿಷಯವನ್ನು ಪ್ರಸ್ತಾಪಿಸಿದರು. ವಿಸ್ತಾರ ನ್ಯೂಸ್‌ ನಿನ್ನೆ ಇಡೀ ದಿನ ಈ ಘಟನೆಯನ್ನು ಪ್ರಸಾರ ಮಾಡಿದ್ದಲ್ಲದೆ, ರೈತರನ್ನು ಮರಳಿ ಜಿಟಿ ಮಾಲ್‌ಗೆ ಕರೆದೊಯ್ದು ಪ್ರವೇಶ ಕೊಡಿಸಿತ್ತು. ಈ ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿತ್ತು. ಕನ್ನಡ ಹಾಗೂ ರೈತಪರ ಸಂಘಟನೆಗಳು ಈ ವಿಚಾರದಲ್ಲಿ ವಿಸ್ತಾರ ನ್ಯೂಸ್‌ನೊಂದಿಗೆ ಕೈಜೋಡಿಸಿದ್ದವು. ನಂತರ ಸಚಿವ ಸಂತೋಷ್‌ ಲಾಡ್‌ (Santosh Lad) ಕೂಡ ಕೂಡ ಈ ವಿಚಾರದಲ್ಲಿ ಮಾಲ್‌ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು.

ವಿಧಾನಸಭೆ ಕಲಾಪದ ಆರಂಭದ ಹೊತ್ತಿಗೆ ಸ್ವತಃ ಸ್ಪೀಕರ್‌ ಯು.ಟಿ ಖಾದರ್‌ (Speaker UT Khader) ಅವರು ಈ ವಿಚಾರ ಎತ್ತಿದರು. ಈ ಬಗ್ಗೆ ಸರ್ಕಾರದ ನಿಲುವನ್ನು ತಿಳಿಸುವಂತೆ ಸೂಚಿಸಿದರು. ಸದಸ್ಯರು ಪಕ್ಷಾತೀತವಾಗಿ ಮಾಲ್‌ ನಡೆಯನ್ನು ತೀವ್ರವಾಗಿ ಖಂಡಿಸಿದರು. ಇದಕ್ಕೆ ಉತ್ತರಿಸಿದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಅವಕಾಶ ಇದೆ. 7 ದಿನಗಳ ವರೆಗೆ ಬಂದ್‌ ಮಾಡಿಸಬಹುದು. ಆದರೆ ಎಚ್ಚರಿಕೆ ನೀಡಿ ಮೂರು ದಿನಗಳ ಕಾಲ ಮಾಲ್ ಬಂದ್ ಮಾಡಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: GT World Mall : ಜಿಟಿ ಮಾಲ್​ ಏಳು ದಿನಗಳ ಕಾಲ ಬಂದ್​, ಮಾಲೀಕರಿಂದಲೇ ಸ್ವಯಂಪ್ರೇರಿತ ಕ್ರಮ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Assembly Session: ಸದನದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅಬ್ಬರ; ತಲೆ ನಿಯಂತ್ರಣದಲ್ಲಿ ಇಲ್ವಾ ಎಂದ ಸ್ಪೀಕರ್‌!

Assembly Session: ಸದನದಲ್ಲಿ ವಿಪಕ್ಷ ನಾಯಕರ ವಿರುದ್ಧ ಮುಗಿಬಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌ರನ್ನು ನಿಯಂತ್ರಿಸಲು ಸ್ಪೀಕರ್‌ ಯು.ಟಿ.ಖಾದರ್‌ ಹೈರಾಣಾದರು. ಕುಳಿತುಕೊಳ್ಳಿ ಎಂದು ಹೇಳುತ್ತಿದ್ದರೂ ಮಾತು ಕೇಳದ ಹಿನ್ನೆಲೆಯಲ್ಲಿ ಸ್ಪೀಕರ್‌ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

VISTARANEWS.COM


on

Assembly Session
Koo

ಬೆಂಗಳೂರು: ಬಿಜೆಪಿ ವಿರುದ್ಧ ಸದನದಲ್ಲೂ (Assembly Session) ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ವಾಗ್ದಾಳಿ ಮುಂದುವರಿಸಿದ್ದಾರೆ. ಮಳೆ ಹಾನಿ, ಜನರ ಸಮಸ್ಯೆಗಳ ಬಗ್ಗೆ ಮಾತನಾಡಿ ಎಂಬ ಸೂಚನೆ ನಡುವೆಯೂ, ಬಿಜೆಪಿ ಅವಧಿಯ ಹಗರಣಗಳ ಪಟ್ಟಿ ಓದುತ್ತಾ ಪ್ರದೀಪ್ ಈಶ್ವರ್ ಸದ್ದು ಮಾಡಿದ್ದರಿಂದ ಅವರನ್ನು ಮನವೊಲಿಸಲು ಸ್ಪೀಕರ್‌ ಹೈರಾಣಾದರು. ಕುಳಿತುಕೊಳ್ಳಿ ಎಂದು ಹೇಳುತ್ತಿದ್ದರೂ ಮಾತು ಕೇಳದ ಹಿನ್ನೆಲೆಯಲ್ಲಿ “ಏನಾಗಿದೆ ಇವರಿಗೆ, ಕೈಗೆ ಕಬ್ಬಿಣ ಏನಾದರೂ ಕೊಡ್ರಿ, ತಲೆ ನಿಯಂತ್ರಣದಲ್ಲಿ ಇಲ್ವಾ?” ಎಂದು ಸ್ಪೀಕರ್‌ ಯು.ಟಿ.ಖಾದರ್ ಅಸಮಾಧಾನ ಹೊರಹಾಕಿದ್ದಾರೆ.

ಸ್ಪೀಕರ್‌ ಯು.ಟಿ.ಖಾದರ್ ಒತ್ತಾಯ ಮಾಡುತ್ತಿದ್ದರೂ ಮಾತು ನಿಲ್ಲಿಸದಿದ್ದರಿಂದ ಕೊನೆಗೆ ಪ್ರದೀಪ್ ಈಶ್ವರ್ ಬಳಿ ಸರ್ಕಾರಿ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಹೋಗಿ ಕುಳಿತುಕೊಳ್ಳುವಂತೆ ಕೈ ಮುಗಿದು ಮನವಿ ಮಾಡಿದರು. ನಂತರ ಪ್ರದೀಪ್ ಬಳಿ ಹೋಗಿ ಕುಳಿತುಕೊಳ್ಳುವಂತೆ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದರು. ಆಗ ಪ್ರದೀಪ್ ಈಶ್ವರ್‌ಗೆ ಬಿಜೆಪಿ ಸದಸ್ಯರು ಛೇಡಿಸಿದರು.

ಪ್ರದೀಪ್ ಈಶ್ವರ್ ಹೇಡಿ ಅಲ್ಲಾ, ಪ್ರದೀಪ್ ಈಶ್ವರ್ ಯು ಕೆನ್ ಡು ಇಟ್ ಎಂದು ಬಿಜೆಪಿ ಶಾಸಕರು ಕೂಗುತ್ತಾ ಛೇಡಿಸಿದರು. ಈ ವೇಳೆ ಬಿಜೆಪಿ ಶಾಸಕರು ಹಾಗೂ ಪ್ರದೀಪ್ ಈಶ್ವರ್ ನಡುವೆ ಮಾತಿನ ಚಕಮಕಿ ಉಂಟಾಯಿತು. ಆಗ ಪ್ರದೀಪ್ ಈಶ್ವರ್‌ನ ಸಮಾಧಾನ ಮಾಡಲು ಶಾಸಕ ನಾರಾಯಣ ಸ್ವಾಮಿ ಧಾವಿಸಿ ಹೋದರು.

ಈ ವೇಳೆ ವಿಪಕ್ಷನಾಯಕ ಆರ್‌.ಅಶೋಕ್‌ ಗರಂ ಆಗಿ, ಏನು ಬೆದರಿಕೆ ಹಾಕುತ್ತೀರಾ? ಪ್ರದೀಪ್ ಈಶ್ವರ್‌ನ ಕಂಟ್ರೋಲ್ ಮಾಡಕ್ಕೆ ಆಗಲ್ಲವೇ? ಕಾಂಗ್ರೆಸ್‌ನ ಮಾನ ಮರ್ಯಾದೆ ಎಲ್ಲ ಹೊರಟೇ ಹೋಯಿತು. ಪ್ರದೀಪ್ ಈಶ್ವರ್ ಯು ಕೆನ್ ಡು ಇಟ್ ಎಂದು ಕೂಗಿದರು.

ಗದ್ದಲದ ನಡುವೆಯೇ ಬಿಜೆಪಿ ವಿರುದ್ಧ ತರೀಕೆರೆ ಶಾಸಕ ಜಿ.ಎಚ್. ಶ್ರೀನಿವಾಸ್ ಮತ್ತು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದರು. ಬಿಜೆಪಿಯವರನ್ನು ಸದನದಿಂದ ಹೊರಗೆ ಹಾಕಿ ಎಂದು ಶ್ರೀನಿವಾಸ ಆಗ್ರಹಿಸಿದರು. ಈ ವೇಳೆ ಬಿಜೆಪಿ ಅವಧಿಯ ಹಗರಣಗಳ ಪಟ್ಟಿಯನ್ನು ಪ್ರದೀಪ್ ಈಶ್ವರ್ ಓದಿದರು. ಈ ವೇಳೆ ಬಿಜೆಪಿ ಸದಸ್ಯರು ಬಂಡಲ್ ಬಂಡಲ್ ಎಂದು ಕೂಗುತ್ತಾ ಸದನದ ಬಾವಿಯಿಂದಲೇ ಸನ್ನೆ ಮಾಡಿ ಕಿಚಾಯಿಸಿದರು.

ಈ ವೇಳೆ ಬಿಜೆಪಿ ಶಾಸಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರದೀಪ್ ಈಶ್ವರ್, ಸ್ಪೀಕರ್ ಮನವಿಗೂ ಜಗ್ಗದೇ ಬಿಜೆಪಿ ವಿರುದ್ಧ ಹರಿಹಾಯ್ದರು. ಕೊನೆಗೆ ಬಲವಂತವಾಗಿ ಪ್ರದೀಪ್ ಈಶ್ವರ್‌ರನ್ನು ಕಾಂಗ್ರೆಸ್ ಶಾಸಕರಾದ ಎಸ್.‌ಎನ್. ನಾರಾಯಣಸ್ವಾಮಿ ಮತ್ತು ಜಿ.ಎಚ್. ಶ್ರೀನಿವಾಸ್ ಸುಮ್ಮನಿರಿಸಿದರು. ಕುಳಿತುಕೊಂಡರೂ ಮತ್ತೆ ಬಿಜೆಪಿ ವಿರುದ್ಧ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸುತ್ತಿದ್ದರು. ಆಗ ಪ್ರದೀಪ್ ನಡೆಗೆ ಸ್ಪೀಕರ್‌ ಕೂಡ ತೀವ್ರ ಅಸಮಾಧಾನ ಹೊರಹಾಕಿದರು.

ಇದನ್ನೂ ಓದಿ | Karnataka Job Reservation: ಕನ್ನಡಿಗರಿಗೆ ಮೀಸಲಾತಿ ನೀಡಲು ಕರವೇ ಆಗ್ರಹ; ʼಫೋನ್ ಪೇʼ ಬಾಯ್ಕಾಟ್ ಅಭಿಯಾನ ಶುರು!

ಈ ವೇಳೆ ಸರ್ಕಾರ ಗೂಂಡಾಗಿರಿ ಮಾಡುತ್ತಿದೆ, ಆಡಳಿತ ಪಕ್ಷದವರಿಗೇ ಮಾತನಾಡಲು ಬಿಡುತ್ತಿಲ್ಲ. ಪ್ರದೀಪ್ ಈಶ್ವರ್ ಟ್ಯಾಲೆಂಟ್ ಏನು? ಆದರೆ, ಅವರಿಗೆ ಮಾತನಾಡಲೂ ಸರ್ಕಾರ ಬಿಡುತ್ತಿಲ್ಲ ಎಂದ ವಿಪಕ್ಷ ನಾಯಕ ಅಶೋಕ್ ಸದನದಲ್ಲಿ ಲೇವಡಿ ಮಾಡಿದರು.

Continue Reading

ಪ್ರಮುಖ ಸುದ್ದಿ

Lokayukta Raid: ಲೋಕಾಯುಕ್ತ ದಾಳಿಯ ವೇಳೆ ಚಿನ್ನಾಭರಣ ಪಕ್ಕದ ಮನೆಗೆಸೆದ ಅಖ್ತರ್‌ ಅಲಿ!

Lokayukta Raid: ಪಕ್ಕದ ಮನೆಯ ಕಿಟಕಿಗೆ ಅಖ್ತರ್ ಆಲಿ ಮನೆ ಗೋಡೆ ಕನೆಕ್ಟ್‌ ಆಗಿದ್ದು, ಅಧಿಕಾರಿಗಳು ಮನೆಗೆ ಎಂಟ್ರಿ ನೀಡುತ್ತಿದ್ದಂತೆ ಪಕ್ಕದ ಮನೆಯ ಕಿಟಕಿಯೊಳಗೆ ಚಿನ್ನ ಇದ್ದ ಬ್ಯಾಗ್ ಎಸೆದಿದ್ದ ಅಖ್ತರ್ ಆಲಿ. ಪಕ್ಕದ ಮನೆಯ ಕಿಟಕಿಗೆ ಹತ್ತಿರದಲ್ಲೇ ಅಖ್ತರ್ ಆಲಿ ಮನೆಯ ಮೊದಲ ಅಂತಸ್ತು ಇದೆ. ಅಲ್ಲಿಂದ ಪಕ್ಕದ ಮನೆ ಕಿಟಕಿ ಒಳಗೆ ಬ್ಯಾಗ್‌ಗೆ ಚಿನ್ನ ತುಂಬಿ ಅಖ್ತರ್ ಆಲಿ ಎಸೆದಿದ್ದ.

VISTARANEWS.COM


on

lokayukta raid akhtar ali
ಅಖ್ತರ್‌ ಅಲಿ ಮನೆಯಿಂದ ವಶಪಡಿಸಿಕೊಂಡ ಚಿನ್ನಾಭರಣ ಮತ್ತು ನಗದು
Koo

ಬೆಂಗಳೂರು: ಇಂದು ಬೆಳಗ್ಗೆ ರಾಜ್ಯದ 54 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayukta Raid) ನಡೆಸಿದ್ದು, ಈ ಸಂದರ್ಭ ಬೆಂಗಳೂರಿನಲ್ಲಿ ಅಖ್ತರ್‌ ಅಲಿ ಎಂಬ ಅಧಿಕಾರಿಯ ಮನೆಗೆ ಅಧಿಕಾರಿಗಳು ದಾಳಿ ನಡೆಸಿದಾಗ ಆತ ಚಿನ್ನಾಭರಣಗಳನ್ನು (Gold Jewelry) ಪಕ್ಕದ ಮನೆಗೆ (neighbour house) ಎಸೆದು ಪಾರಾಗಲು ನೋಡಿದ್ದಾರೆ! ಇದನ್ನೂ ಲೋಕಾಯುಕ್ತ ಅಧಿಕಾರಿಗಳು (Lokayukta Officers) ವಶಪಡಿಸಿಕೊಂಡಿದ್ದಾರೆ.

ಭೂಮಾಪನ ಇಲಾಖೆ ಡೆಪ್ಯೂಟಿ ಕಂಟ್ರೋಲರ್ ಅಖ್ತರ್ ಅಲಿ ಮನೆಗೆ ದಾಳಿ ನಡೆಸಿದಾಗ ಈ ಘಟನೆ ನಡೆಯಿತು. ಪಕ್ಕದ ಮನೆಯ ಕಿಟಕಿಗೆ ಅಖ್ತರ್ ಆಲಿ ಮನೆ ಗೋಡೆ ಕನೆಕ್ಟ್‌ ಆಗಿದ್ದು, ಅಧಿಕಾರಿಗಳು ಮನೆಗೆ ಎಂಟ್ರಿ ನೀಡುತ್ತಿದ್ದಂತೆ ಪಕ್ಕದ ಮನೆಯ ಕಿಟಕಿಯೊಳಗೆ ಚಿನ್ನ ಇದ್ದ ಬ್ಯಾಗ್ ಎಸೆದಿದ್ದ ಅಖ್ತರ್ ಆಲಿ. ಪಕ್ಕದ ಮನೆಯ ಕಿಟಕಿಗೆ ಹತ್ತಿರದಲ್ಲೇ ಅಖ್ತರ್ ಆಲಿ ಮನೆಯ ಮೊದಲ ಅಂತಸ್ತು ಇದೆ. ಅಲ್ಲಿಂದ ಪಕ್ಕದ ಮನೆ ಕಿಟಕಿ ಒಳಗೆ ಬ್ಯಾಗ್‌ಗೆ ಚಿನ್ನ ತುಂಬಿ ಅಖ್ತರ್ ಆಲಿ ಎಸೆದಿದ್ದ.

ಬ್ಯಾಗ್ ಎಸೆದದ್ದನ್ನು ನೋಡಿ ನೆರೆ ಮನೆ ನಿವಾಸಿ ಖುದ್ದು ಅಧಿಕಾರಿಗಳನ್ನು ಕರೆದು ತೋರಿಸಿದ್ದಾರೆ. ಕೂಡಲೇ ಹೋಗಿ ಪರಿಶೀಲನೆ ಮಾಡಿದಾಗ ಬ್ಯಾಗ್‌ನಲ್ಲಿ ಚಿನ್ನ ಇರುವುದು ಪತ್ತೆಯಾಗಿದೆ. ಕೂಡಲೇ ಬ್ಯಾಗನ್ನು ಲೋಕಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಬ್ಯಾಗನ್ನು ಅಖ್ತರ್ ಆಲಿ ಮನೆಗೆ ತಂದು ಪರಿಶೀಲನೆ ಮಾಡಿದಾಗ, ಒಂದು ಬ್ಯಾಗ್ ತುಂಬಾ ಚಿನ್ನದ ಒಡವೆಗಳು ಇರುವುದು ಪತ್ತೆಯಾಗಿದೆ. ಸದ್ಯ ಸಿಕ್ಕಿರುವ ಚಿನ್ನ ತೂಕ ಹಾಕಲು ಸಿಬ್ಬಂದಿಯನ್ನು ಕರೆಸಲಾಗಿದೆ. ಅಖ್ತರ್‌ ಅಲಿ ಅಕ್ಕಪಕ್ಕದ ಮನೆಯಲ್ಲೂ ಅಧಿಕಾರಿಗಳ ತಂಡ ತಲಾಶ್ ಮಾಡಿದೆ.

ದಾಳಿ ವೇಳೆ ಮನೆಯಲ್ಲೇ ಇದ್ದ ಅಖ್ತರ್ ಆಲಿಯ ಬಳಿಯಿಂದ ಸದ್ಯ ಕೆಲವು ಪ್ರಮುಖ ದಾಖಲೆಗಳನ್ನು ವಶಕ್ಕೆ ಪಡೆದು ತಂಡ ಪರಿಶೀಲನೆ ಮಾಡುತ್ತಿದೆ. ಕೆಲವು ದಾಖಲೆಗಳನ್ನೂ ಪಕ್ಕದ ಮನೆಯ ಕಿಟಕಿಯ ಮೂಲಕ ಅಲಿ ತಳ್ಳಿರುವ ಶಂಕೆ ಇದೆ. ಹೀಗಾಗಿ ಪಕ್ಕದ ಮನೆಯನ್ನೂ ಶೋಧ ನಡೆಸಲಾಗಿದೆ. ಇದುವರೆಗೆ ಅಖ್ತರ್ ಅಲಿ ಮನೆಯಲ್ಲಿ 25 ಲಕ್ಷ ರೂ. ನಗದು, 2.20 ಕೆಜಿ ಚಿನ್ನಾಭರಣ, 2 ಕೆಜಿ ಬೆಳ್ಳಿ ವಸ್ತುಗಳು, ಐವತ್ತಕ್ಕೂ ಹೆಚ್ಚು ದುಬಾರಿ ವಾಚ್‌ಗಳು, ಲಕ್ಷಾಂತರ ಮೌಲ್ಯದ ಡೈಮಂಡ್ ಆಭರಣಗಳು ಪತ್ತೆಯಾಗಿವೆ.

ಲೋಕಾಯುಕ್ತ ಎಸ್‌ಪಿ ವಂಶಿಕೃಷ್ಣ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ʼಇವತ್ತು ಬೆಂಗಳೂರು ಸಿಟಿ ಘಟಕದಿಂದ ಮೂರು ಆಫೀಸರ್ಸ್ ಮನೆ ದಾಳಿ ಮಾಡಲಾಗಿದೆ. ಅಖ್ತರ್ ಅವರ ಮನೆಯಲ್ಲೂ ಚಿನ್ನಾಭರಣ ಸಿಕ್ಕಿದೆ. ಈಗಾಗಲೇ 2.2 ಕೆಜಿ ಚಿನ್ನಾಭರಣ, 25 ಲಕ್ಷ ಹಣ ಸಿಕ್ಕಿದೆ. ಅವರು ಚಿನ್ನದ ಬ್ಯಾಗನ್ನು ಪಕ್ಕದ ಮನೆಗೆ ಎಸೆದಿದ್ದಾರೆ. ಅದನ್ನು ಕೂಡ ನಮ್ಮ ಟೀಂ ರಿಕವರಿ ಮಾಡಿದೆ. ಸದ್ಯ ಇನ್ನೂ ಪರಿಶೀಲನೆ ಮುಂದುವರೆದಿದೆ. ಬಿ.ಕೆ ರಾಜ ಹಾಗೂ ರಮೇಶ್ ಕುಮಾರ್ ಅವರ ಮನೆಯಲ್ಲಿ ಪರಿಶೀಲನೆ ಮುಂದುವರೆದಿದೆʼ ಎಂದಿದ್ದಾರೆ.

ಯಾವ ಅಧಿಕಾರಿಗಳ ಮೇಲೆ ದಾಳಿ?

ತುಮಕೂರು – ಮುದ್ದುಕುಮಾರ್ ಅಡಿಷನಲ್ ಡೈರೆಕ್ಟರ್ ಇಂಡಸ್ಟ್ರಿ ಆ್ಯಂಡ್ ಕಾಮರ್ಸ್ ಡಿಪಾರ್ಟ್ಮೆಂಟ್
ಯಾದಗಿರಿ – ಬಲವಂತ್ ಯೋಜನ ನಿರ್ದೇಶಕ , ಯಾದಗಿರಿ ಜಿಲ್ಲಾ ಪಂಚಾಯತ್
ಬೆಂಗಳೂರು ಗ್ರಾಮಾಂತರ – ಸಿದ್ದಪ್ಪ ಹಿರಿಯ ಪಶು ವೈದ್ಯ ದೊಡ್ಡಬಳ್ಳಾಪುರ
ಬೆಂಗಳೂರು ಗ್ರಾಮಾಂತರ ನರಸಿಂಹ ಮೂರ್ತಿ ಕೆ – ಮುನ್ಸಿಪಲ್ ಅಡ್ಮಿನಿಸ್ಟ್ರೇಷನ್ ಸರ್ವಿಸ್ ಕಮೀಷನರ್ ಹೆಬ್ಬಗೋಡಿ
ಬೆಂಗಳೂರು ಸಿಟಿ – ಬಿವಿ ರಾಜ ಎಫ್‌ಡಿಎ ಕೆಐಎಡಿಬಿ
ಬೆಂಗಳೂರು ಸಿಟಿ – ರಮೇಶ್ ಕುಮಾರ್ ಜಂಟಿ ಆಯುಕ್ತ ವಾಣಿಜ್ಯ ತೆರಿಗೆ ಇಲಾಖೆ
ಬೆಂಗಳೂರು ಸಿಟಿ- ಅಕ್ತರ್ ಅಲಿ – ಡೆಪ್ಯೂಟಿ ಕಂಟ್ರೋಲರ್ ಮಾಪನಾ ಇಲಾಖೆ
ಶಿವಮೊಗ್ಗ – ಸಿ ನಾಗೇಶ್ – ಅಂತರಗಂಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಭದ್ರಾವತಿ
ಶಿವಮೊಗ್ಗ ಪ್ರಕಾಶ್ – ಡೆಪ್ಯೂಟಿ ಡೈರೆಕ್ಟರ್ – ತೋಟಗಾರಿಕಾ ಇಲಾಖೆ
ಬೆಂಗಳೂರು ಸಿಟಿ – ಚೇತನ್ ಕುಮಾರ್ – ಕಾರ್ಮಿಕ‌ ಇಲಾಖೆ ಅಧಿಕಾರಿ ಮಂಡ್ಯ ವಿಭಾಗ
ಬೆಂಗಳೂರು ಸಿಟಿ – ಆನಂದ್ ಸಿ ಎಲ್ – ಕಮೀಷನರ್ ಮಂಗಳೂರು ಮಹಾನಗರ ಪಾಲಿಕೆ
ಬೆಂಗಳೂರು ಸಿಟಿ – ಮಂಜುನಾಥ್ ಟಿ ಆರ್ – ಎಫ್ ಡಿಎ ಬೆಂಗಳೂರು‌ ನಾರ್ತ್ ಸಬ್ ಡಿವಿಷನ್ ಆಫೀಸರ್

ಇದನ್ನೂ ಓದಿ: Lokayukta Raid: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಶಾಕ್‌, ರಾಜ್ಯಾದ್ಯಂತ ಲೋಕಾಯುಕ್ತ ದಾಳಿ

Continue Reading

ಕರ್ನಾಟಕ

DK Shivakumar: ಬಿಎಸ್‌ವೈ, ಬೊಮ್ಮಾಯಿ ಕಾಲದಲ್ಲಿ 300 ಕೋಟಿಗೂ ಹೆಚ್ಚು ಅಕ್ರಮ: ಡಿಕೆಶಿ ಆರೋಪ

DK Shivakumar: ಬಿಜೆಪಿಯ ಅಕ್ರಮಗಳನ್ನು ತನಿಖೆ ಮಾಡುತ್ತೇವೆ. ಅಕ್ರಮಗಳ ಹಿಂದೆ ಇದ್ದ ಮಂತ್ರಿ, ಅಧ್ಯಕ್ಷರು, ಮುಖ್ಯಮಂತ್ರಿಗಳ ಬಗ್ಗೆ ಜನರಿಗೆ ತಿಳಿಸುತ್ತೇವೆ ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

VISTARANEWS.COM


on

DK Shivakumar
Koo

ಬೆಂಗಳೂರು: “ಬಿಜೆಪಿಗರು ಭ್ರಷ್ಟಾಚಾರದ ಪಿತಾಮಹರು. ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಕಾಲದಲ್ಲಿ ಹಲವಾರು ನಿಗಮಗಳ ಸುಮಾರು 300 ಕೋಟಿ ರೂ.ಗಳಿಗೂ ಹೆಚ್ಚು ಅಕ್ರಮ ನಡೆದಿದೆ. ಇದನ್ನು ನಾವು ಸದನದ ಮೂಲಕ ಜನರಿಗೆ ತಿಳಿಸುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದರು.

ವಿಧಾನಸೌಧದ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು “ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೋವಿ ನಿಗಮದ 87 ಕೋಟಿ ರೂ., ಎಪಿಎಂಸಿಯ 47 ಕೋಟಿ ರೂ., 2019ರಲ್ಲಿ ಅಂಗವಿಕಲ ಕಲ್ಯಾಣ ಇಲಾಖೆಯ 22 ಕೋಟಿ ರೂ., ಅಂಬೇಡ್ಕರ್ ನಿಗಮದ ಕೆನರಾ ಬ್ಯಾಂಕ್ ಅಲ್ಲಿನ ಹಣ ಜೂನ್ 2018 ರಲ್ಲಿ 5 ಕೋಟಿ ರೂ., ದೇವರಾಜ್ ಅರಸು ನಿಗಮದ 47 ಕೋಟಿ ರೂ., ಮಾಲಿನ್ಯ ನಿಯಂತ್ರಣ ಮಂಡಲಿಯ 10 ಕೋಟಿ ರೂ. ಹಾಗೂ ಕೆಐಡಿಬಿಯ ಹಣ ಸೇಲಂಗೆ ಅಕ್ರಮವಾಗಿ ವರ್ಗಾವಣೆಯಾಗಿದೆ” ಎಂದು ಆರೋಪಿಸಿದರು.

ಬಿಜೆಪಿಯ ಅಕ್ರಮಗಳನ್ನು ತನಿಖೆ ನಡೆಸುವಿರಾ ಎಂದು ಪ್ರಶ್ನಿಸಿದಾಗ “ಖಂಡಿತವಾಗಿಯೂ ತನಿಖೆ ನಡೆಸುತ್ತೇವೆ. ಆದರೆ ಎಲ್ಲವೂ ದಾಖಲೆಯಲ್ಲಿ ಇರಬೇಕು ಎನ್ನುವ ಕಾರಣಕ್ಕೆ ಸದನದಲ್ಲಿ ಎಲ್ಲಾ ದಾಖಲೆಗಳನ್ನು ಬಯಲು ಮಾಡುತ್ತೇವೆ. ಅಕ್ರಮಗಳ ಹಿಂದೆ ಇರುವ ಯಾವ ಮಂತ್ರಿ, ಅಧ್ಯಕ್ಷರು, ಮುಖ್ಯಮಂತ್ರಿಗಳು ಇದ್ದರು ಎಂದು ಜನರಿಗೆ ತಿಳಿಸುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ | Karnataka Assembly Live: ವಿಧಾನಸಭೆಯಲ್ಲಿ ಶಾಸಕರಿಗೆ ಮಧ್ಯಾಹ್ನ ಮಲಗಲು ವ್ಯವಸ್ಥೆ ಮಾಡಿಸಿದ ಸ್ಪೀಕರ್!

“ಮುಖ್ಯಮಂತ್ರಿ ಹುದ್ದೆಗೆ 2500 ಕೋಟಿ ರೂ., ಮಂತ್ರಿ ಸ್ಥಾನಕ್ಕೆ 100 ಕೋಟಿ ರೂ. ನೀಡಬೇಕು ಎನ್ನುವ ಬಸನಗೌಡ ಪಾಟೀಲ ಯತ್ನಾಳ ಅವರ ಆರೋಪ ಹಾಗೂ ಭೋವಿ ನಿಗಮದ ಅಕ್ರಮದ ಬಗ್ಗೆ ಗೂಳಿಹಟ್ಟಿ ಶೇಖರ್ ಮಾಡಿದ ಆರೋಪಗಳ ಮೇಲೆ ಏಕೆ ಬಿಜೆಪಿ ತನಿಖೆ ನಡೆಸಲಿಲ್ಲ” ಎಂದು ಮರುಪ್ರಶ್ನಿಸಿದರು.

“ಯಾವುದೇ ಭ್ರಷ್ಟಾಚಾರದ ಮೇಲೆ ತನಿಖೆ ನಡೆಯುತ್ತಿದ್ದರೆ ಆ ವಿಚಾರದಲ್ಲಿ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಅವಕಾಶವಿಲ್ಲ. ಆದರೆ ನಾವು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಬೆಲೆಕೊಟ್ಟು ಸದನದಲ್ಲಿ ಚರ್ಚೆ ಅವಕಾಶ ಮಾಡಿಕೊಟ್ಟಿದ್ದೇವೆ. ಅಕ್ರಮ ಎಸಗಿದ್ದರೆ ಯಾವುದೇ ಅಧಿಕಾರಿ, ಮಂತ್ರಿ, ಶಾಸಕ, ಯಾರೇ ಆಗಿರಲಿ ಅವರನ್ನು ರಕ್ಷಿಸುವ ಉದ್ದೇಶ ನಮಗಿಲ್ಲ” ಎಂದು ಹೇಳಿದರು.

ಇದನ್ನೂ ಓದಿ | Sameer Nigam: 25,000 ಜನರಿಗೆ ಉದ್ಯೋಗ ಕೊಟ್ಟಿದ್ದೇನೆ, ನನ್ನ ಮಕ್ಕಳು ರಾಜ್ಯದಲ್ಲಿ ಕೆಲಸ ಮಾಡಬಾರದಾ?: ಫೋನ್‌ಪೇ ಸಿಇಒ ಆಕ್ರೋಶ

“ವಾಲ್ಮೀಕಿ ನಿಗಮದ 86 ಕೋಟಿ ರೂ. ಹಣ ತೆಲಂಗಾಣಕ್ಕೆ ಅಕ್ರಮವಾಗಿ ವರ್ಗಾವಣೆಯಾದ ತನಿಖೆ ನಡೆಸಲು ಎಸ್‌ಐಟಿ ರಚನೆ ಮಾಡಿದ್ದೇವೆ. ತನಿಖಾ ತಂಡವು ಸುಮಾರು 36 ಕೋಟಿ ರೂ.ಗಳಷ್ಟು ಹಣವನ್ನು ವಶಕ್ಕೆ ಪಡೆದುಕೊಂಡಿದೆ. ಬ್ಯಾಂಕ್ ಅಧಿಕಾರಿ ಒಂದೇ ದಿನದಲ್ಲಿ ಕೋಟ್ಯಂತರ ರೂಪಾಯಿ ಸಾಲ ಮಂಜೂರು ಮಾಡಿದ್ದಾನೆ. ಇದಕ್ಕೆ ಕೇಂದ್ರ ಹಣಕಾಸು ಸಚಿವರನ್ನು ಹೊಣೆಗಾರರನ್ನಾಗಿ ಮಾಡಲು ಆಗುತ್ತದೆಯೇ? ನಾವು ಪ್ರತಿಪಕ್ಷಗಳಿಗೆ ಈ ವಿಚಾರವಾಗಿ ಉತ್ತರ ಕೊಡಬೇಕಾಗಿದೆ” ಎಂದು ಖಾರವಾಗಿ ತಿಳಿಸಿದರು.

Continue Reading

ಪ್ರಮುಖ ಸುದ್ದಿ

Karnataka Job Reservation: ಕನ್ನಡಿಗರಿಗೆ ಮೀಸಲಾತಿ ನೀಡಲು ಕರವೇ ಆಗ್ರಹ; ʼಫೋನ್ ಪೇʼ ಬಾಯ್ಕಾಟ್ ಅಭಿಯಾನ ಶುರು!

Karnataka Job Reservation: ಕನ್ನಡಿಗರಿಗೆ ಮೀಸಲಾತಿ ಕಾಯ್ದೆಗೆ ಫೋನ್‌ ಪೇ ಸಿಇಒ ಸಮೀರ್ ನಿಗಮ್ ಅಸಮಾಧಾನ ಹೊರಹಾಕಿದ ಹಿನ್ನೆಲೆಯಲ್ಲಿ ಫೋನ್ ಪೇ ಕಂಪನಿಗೆ ಬಿಸಿ ತಟ್ಟಿದೆ. ಸಾಮಾಜಿಕ ಜಾಲತಾಣದಲ್ಲಿ ʼಫೋನ್ ಪೇʼ ಬಾಯ್ಕಾಟ್ ಅಭಿಯಾನ ಶುರುವಾಗಿದೆ.

VISTARANEWS.COM


on

Koo

ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಾಯ್ದೆ (Karnataka Job Reservation) ಜಾರಿಗೆ ಆಗ್ರಹಿಸಿ ನಗರದ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಕನ್ನಡ ಪರ ಸಂಘಟನೆಗಳಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಕಾಯ್ದೆ ಜಾರಿ ಮಾಡುವುದಾಗಿ ಹೇಳಿದ ಬೆನ್ನಲ್ಲೇ ನಿರ್ಧಾರ ಹಿಂಪಡೆದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಮತ್ತೊಂದೆಡೆ ಕನ್ನಡಿಗರಿಗೆ ಮೀಸಲಾತಿ ಕಾಯ್ದೆಗೆ ಫೋನ್ ಪೇ ಸಿಇಒ ಸಮೀರ್ ನಿಗಮ್ ಅಸಮಾಧಾನ ಹೊರಹಾಕಿದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ʼಫೋನ್ ಪೇʼ ಬಾಯ್ಕಾಟ್ ಅಭಿಯಾನ (‘PhonePe’ boycott campaign) ಶುರುವಾಗಿದೆ.

ಖಾಸಗಿ ಕಂಪನಿಗಳ ಒತ್ತಡಕ್ಕೆ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಮಣಿಯಬಾರದು. ಶೀಘ್ರವೇ ಮಸೂದೆ ಜಾರಿಗೊಳಿಸಬೇಕೆಂದು ಕನ್ನಡಪರ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣದಿಂದ ಪ್ರತಿಭಟನೆ ನಡೆದಿದೆ. ಉದ್ಯಮಿಗಳಾದ ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್ ಪೈಗೆ ಕನ್ನಡದ ನೆಲ, ಜಲ ಬೇಕು. ಆದರೆ, ಕನ್ನಡಿಗರಿಗೆ ನೌಕರಿ ಕೊಡಿ ಎಂದರೆ ಇವರಿಗೆ ತೊಂದರೆ. ನಾವು ಮುಂದಿನ ದಿನಗಳಲ್ಲಿ ಅವರ ಕಂಪನಿಗಳಿಗೆ ಮುತ್ತಿಗೆ ಹಾಕುತ್ತೇವೆ. ಸಿಎಂ ಮಸೂದೆ ಜಾರಿಗೆ ತರದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ ಎಂದು ಕರವೇ ಪ್ರವೀಣ್ ಶೆಟ್ಟಿ ಹೇಳಿದರು.

ಈ ವೇಳೆ ಕಿರಣ್ ಮಜುಂದಾರ್ ಶಾ, ಮೋಹನ್‌ ದಾಸ್‌ ಪೈ ಭಾವಚಿತ್ರ ಹಿಡಿದು ಕಾರ್ಯಕರ್ತರು ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

ಫೋನ್ ಪೇ ಬಾಯ್ಕಾಟ್ ಮಾಡುವಂತೆ ಅಭಿಯಾನ ಆರಂಭ

ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಚಾರಕ್ಕೆ ಫೋನ್ ಪೇ ಸಿಇಒ ಸಮೀರ್ ನಿಗಮ್ ಅಸಮಾಧಾನ ಹೊರಹಾಕಿದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರು ಆಕ್ರೋಶ ಹೊರಹಾಕುತ್ತಿದ್ದಾರೆ. ಕನ್ನಡಿಗರ ವಿಷಯದಲ್ಲಿ ಫೋನ್ ಪೇ ಸಿಇಒ ಸಮೀರ್ ನಿಗಮ್ ಉದ್ಧಟತನ ತೋರಿದ್ದಾರೆ. ಹೀಗಾಗಿ ಫೋನ್‌ ಪೇ ಆ್ಯಪ್ ಅನ್ನು ಯಾರೂ ಬಳಸಬೇಡಿ. 1 ರೇಟಿಂಗ್ ನೀಡಿದ ಬಳಿಕ ಆ್ಯಪ್ ಡಿಲಿಟ್ ಮಾಡುವಂತೆ ಅಭಿಯಾನ ಶುರು ಮಾಡಲಾಗಿದೆ.

ಇನ್ನು ಕೆಲ ನೆಟ್ಟಿಗರು, ಯಾರಾದರೂ ನನ್ನ ಹೆಸರಲ್ಲಿ ಫೋನ್ ಪೇ ಮಾಡಿ ಎಂದರೆ ಯಾರು ಮಾಡಬೇಡಿ. ಯಾಕೆಂದರೆ ನನ್ನ ಹತ್ತಿರ ಫೋನ್ ಪೇ ಇಲ್ಲ. ಕನ್ನಡಿಗರಿಗೆ ಕೆಲಸದಲ್ಲಿ ಮೀಸಲಾತಿ ಕೊಡುವುದಕ್ಕೆ ಎದುರು ಮಾಡಿರುವ ಫೋನ್‌ಪೇ ಸಿಇಒಗೆ ಬುದ್ಧಿ ಕಲಿಸಲು ಫೋನ್‌ಪೇ ಅನ್‌ಇನ್ಸ್ಟಾಲ್ ಮಾಡಿ. ಕನ್ನಡಿಗರ ಬಲ ತೋರಿಸಿ ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

25,000 ಜನರಿಗೆ ಉದ್ಯೋಗ ಕೊಟ್ಟಿದ್ದೇನೆ, ನನ್ನ ಮಕ್ಕಳು ರಾಜ್ಯದಲ್ಲಿ ಕೆಲಸ ಮಾಡಬಾರದಾ?: ಫೋನ್‌ಪೇ ಸಿಇಒ

Sameer Nigam

ಬೆಂಗಳೂರು: ಕರ್ನಾಟಕದಲ್ಲಿರುವ ಖಾಸಗಿ ಕೈಗಾರಿಕೆಗಳು ಹಾಗೂ ಇತರ ಸಂಸ್ಥೆಗಳ ಆಡಳಿತಾತ್ಮಕ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ. 50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ. 75 ಮೀಸಲಾತಿ (Karnataka Jobs Reservation) ನಿಗದಿಪಡಿಸುವ ಕರಡು ಮಸೂದೆಗೆ ಸರ್ಕಾರ ತಾತ್ಕಾಲಿಕ ತಡೆ ನೀಡಿದೆ. ಸದ್ಯ ಈ ಬಗ್ಗೆ ಪರ-ವಿರೋಧ ಅಬಿಪ್ರಾಯ ವ್ಯಕ್ತವಾಗುತ್ತಿದೆ. ಈ ಮಧ್ಯೆ ಫೋನ್‌ಪೇ (PhonePe) ಸಿಇಒ ಮತ್ತು ಸಹ ಸಂಸ್ಥಾಪಕ ಸಮೀರ್ ನಿಗಮ್ (Sameer Nigam) ಅವರು ಕರ್ನಾಟಕ ಸರ್ಕಾರದ ಖಾಸಗಿ ಉದ್ಯೋಗ ಕೋಟಾ ಮಸೂದೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Karnataka Jobs Reservation: ಉರಿವ ಮನೆಯಿಂದ ಗಳ ಹಿರಿದ ಆಂಧ್ರಪ್ರದೇಶ; ʼನಮ್ಮಲ್ಲಿಗೇ ಬನ್ನಿʼ ಎಂದು ಖಾಸಗಿ ಉದ್ಯಮಗಳಿಗೆ ಭಿಕ್ಷಾಪಾತ್ರೆ ಒಡ್ಡಿದ ಸಚಿವ

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, “ನನಗೆ 46 ವರ್ಷ ವಯಸ್ಸು. ನಾನು ಯಾವುದೇ ರಾಜ್ಯದಲ್ಲಿ 15 ವರ್ಷಕ್ಕೂ ಹೆಚ್ಚು ಕಾಲ ವಾಸಿಸಿಲ್ಲ. ನನ್ನ ತಂದೆ ಭಾರತೀಯ ನೌಕಾಪಡೆಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ದೇಶಾದ್ಯಂತ ಕಾರ್ಯ ನಿರ್ವಹಿಸಿದ್ದಾರೆ. ಅವರ ಮಕ್ಕಳು ಕರ್ನಾಟಕದಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ? ನಾನು ಕಂಪನಿಗಳನ್ನು ಸ್ಥಾಪಿಸಿ ಭಾರತದಾದ್ಯಂತ 25,000+ ಉದ್ಯೋಗಗಳನ್ನು ಸೃಷ್ಟಿಸಿದ್ದೇನೆ. ಹಾಗಾದರೆ ನನ್ನ ಮಕ್ಕಳು ತಮ್ಮ ತವರು ನಗರದಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ?ʼʼ ಎಂದು ಪ್ರಶ್ನಿಸಿದ್ದಾರೆ. ಸರ್ಕಾರ ಈ ಮಸೂದೆಯನ್ನು ತಡೆಹಿಡಿಯುವ ಮೊದಲ ಅವರು ಈ ಅಭಿಪ್ರಾಯ ಹಂಚಿಕೊಂಡಿದ್ದರು.

Continue Reading
Advertisement
Self Harming
ಬೆಂಗಳೂರು ಗ್ರಾಮಾಂತರ1 min ago

Self Harming : ಆನೇಕಲ್ ಸರ್ಕಾರಿ ಆಸ್ಪತ್ರೆ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

Assembly Session
ಕರ್ನಾಟಕ4 mins ago

Assembly Session: ಸದನದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅಬ್ಬರ; ತಲೆ ನಿಯಂತ್ರಣದಲ್ಲಿ ಇಲ್ವಾ ಎಂದ ಸ್ಪೀಕರ್‌!

Martin' movie delayed even after 3 years
ಸ್ಯಾಂಡಲ್ ವುಡ್18 mins ago

Dhruva Sarja: 3 ವರ್ಷವಾದರೂ ʻಮಾರ್ಟಿನ್‌ʼ ಸಿನಿಮಾ ರಿಲೀಸ್‌ ಆಗಲು ತಡವಾಗಿದ್ದೇಕೆ? ನಿರ್ಮಾಪಕರಿಗೆ ಮೋಸ ಮಾಡಿದ್ಯಾರು?

lokayukta raid akhtar ali
ಪ್ರಮುಖ ಸುದ್ದಿ42 mins ago

Lokayukta Raid: ಲೋಕಾಯುಕ್ತ ದಾಳಿಯ ವೇಳೆ ಚಿನ್ನಾಭರಣ ಪಕ್ಕದ ಮನೆಗೆಸೆದ ಅಖ್ತರ್‌ ಅಲಿ!

Microsoft Global Outage
ದೇಶ1 hour ago

Microsoft Global Outage: ವಿಶ್ವಾದ್ಯಂತ ನೆಲಕಚ್ಚಿದ ಮೈಕ್ರೋಸಾಫ್ಟ್‌; ವಿಂಡೋಸ್‌ನಲ್ಲಿ ತಾಂತ್ರಿಕ ದೋಷ

Electric Shock
ದಕ್ಷಿಣ ಕನ್ನಡ1 hour ago

Electric shock : ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿನಿ, ವೃದ್ಧ ಸೇರಿ ಶ್ವಾನಗಳು ಸಾವು

DK Shivakumar
ಕರ್ನಾಟಕ1 hour ago

DK Shivakumar: ಬಿಎಸ್‌ವೈ, ಬೊಮ್ಮಾಯಿ ಕಾಲದಲ್ಲಿ 300 ಕೋಟಿಗೂ ಹೆಚ್ಚು ಅಕ್ರಮ: ಡಿಕೆಶಿ ಆರೋಪ

Virat Kohli
ಕ್ರೀಡೆ1 hour ago

Virat Kohli: ಬಿಸಿಸಿಐ ಅಧಿಕಾರಿಗಳನ್ನು ಸಂಪರ್ಕಿಸಿ ಕೋಚ್​ ಗಂಭೀರ್​ ವಿಚಾರದಲ್ಲಿ ಕೊಹ್ಲಿ ಕೊಟ್ಟ ಆಶ್ವಾಸನೆ ಏನು?

karnataka Rain
ಮಳೆ1 hour ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

ಪ್ರಮುಖ ಸುದ್ದಿ2 hours ago

Karnataka Job Reservation: ಕನ್ನಡಿಗರಿಗೆ ಮೀಸಲಾತಿ ನೀಡಲು ಕರವೇ ಆಗ್ರಹ; ʼಫೋನ್ ಪೇʼ ಬಾಯ್ಕಾಟ್ ಅಭಿಯಾನ ಶುರು!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 hour ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ2 hours ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ22 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ24 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಟ್ರೆಂಡಿಂಗ್‌