Urvashi Rautela: ಊರ್ವಶಿ ರೌಟೇಲಾ ಸ್ನಾನ ಮಾಡುವ ವಿಡಿಯೊ ಲೀಕ್‌ ಆದ ಬೆನ್ನಲ್ಲೇ ಮ್ಯಾನೇಜರ್‌ ಜತೆಗಿನ ಆಡಿಯೋನೂ ಬಹಿರಂಗ! - Vistara News

ಬಾಲಿವುಡ್

Urvashi Rautela: ಊರ್ವಶಿ ರೌಟೇಲಾ ಸ್ನಾನ ಮಾಡುವ ವಿಡಿಯೊ ಲೀಕ್‌ ಆದ ಬೆನ್ನಲ್ಲೇ ಮ್ಯಾನೇಜರ್‌ ಜತೆಗಿನ ಆಡಿಯೋನೂ ಬಹಿರಂಗ!

Urvashi Rautela: ಇದಕ್ಕೂ ಮುಂಚೆ  ಊರ್ವಶಿ ಅವರ ಸ್ನಾನ ಮಾಡುತ್ತಿರುವ ವಿಡಿಯೊ ವೈರಲ್‌ ಆಗಿತ್ತು. ಅನೇಕರು ವೀಡಿಯೊ ಕಂಡು PR ಸ್ಟಂಟ್ ಎಂದು ಹೇಳುತ್ತಿದ್ದರು. ಊರ್ವಶಿ ವೀಡಿಯೋದಲ್ಲಿ ಮಂಗಳಸೂತ್ರ ಬೇರೆ ಧರಿಸಿದ್ದರು. ಹೀಗಾಗಿ ಇದು ಫೇಕ್‌ ಎಂದು ಹೇಳಲಾಗಿತ್ತು. ಮಾಡೆಲ್ ಆಗಿ ವೃತ್ತಿ ಜೀವನ ಆರಂಭಿಸಿದ ಊರ್ವಶಿ, ‘ಸಿಂಗ್ ಸಾಬ್ ದಿ ಗ್ರೇಟ್’ ಸಿನಿಮಾದ ಮೂಲಕ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟಿದ್ದರು.

VISTARANEWS.COM


on

Urvashi Rautela Conversation With Manager 'Leaked',
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟಿ ಊರ್ವಶಿ ರೌಟೇಲಾ (Urvashi Rautela) ಅವರ ಖಾಸಗಿ ವಿಡಿಯೊವೊಂದು ವೈರಲ್‌ ಆಗಿರುವುದು ಗೊತ್ತೇ ಇದೆ. ನಟಿ ಬಾತ್‌ರೂಮ್‌ನಲ್ಲಿ ಬಟ್ಟೆ ಬದಲಾಯಿಸುತ್ತಿರುವುದನ್ನು ಕಂಡು ಫ್ಯಾನ್ಸ್‌ ಕೂಡ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ಹೊಸ ಆಡಿಯೊವೊಂದು ಲೀಕ್‌ ಆಗಿದೆ. ಈಗ ಲೀಕ್‌ ಆಗಿರುವ ವಿಡಿಯೊದಲ್ಲಿ ಊರ್ವಶಿ ಮತ್ತು ಆಕೆಯ ಮ್ಯಾನೇಜರ್ ನಡುವಿನ ಮಾತುಕತೆ ಇದೆ. ಇದರಲ್ಲಿ ಘಟನೆಯನ್ನು ಊರ್ವಶಿ ಖಂಡಿಸಿದ್ದಾರೆ.

ಸಂಭಾಷಣೆಯಲ್ಲಿ, ಊರ್ವಶಿ ತನ್ನ ಮ್ಯಾನೇಜರ್ ಹತ್ತಿರ ನೀವು ವೀಡಿಯೊವನ್ನು ನೋಡಿದ್ದೀರಾ ಎಂದು ಕೇಳುತ್ತಾರೆ. ಅವರು ಪ್ರತಿಕ್ರಿಯಿಸುತ್ತಾರೆ, “ಹೌದು, ನಾನು ನೋಡಿದೆ ಮತ್ತು ತಂಡ ವೈರಲ್‌ ಆದ ವಿಡಿಯೊವನ್ನು ಡಿಲಿಟ್‌ ಮಾಡಲು ಪ್ರಯತ್ನಿಸುತ್ತಿದೆ.” ಎನ್ನುತ್ತಾರೆ,ಆಗ ಊರ್ವಶಿ ಹೇಳುತ್ತಾರೆ, “ಈ ವಿಷಯಗಳು ಹೇಗೆ ವೈರಲ್‌ ಆಗುತ್ತಿವೆ ಎಂದು ನನಗೆ ಅರ್ಥವಾಗುತ್ತಿಲ್ಲ. ನಾನು ತಕ್ಷಣ ಅವರೊಂದಿಗೆ ಕರೆ ಮಾಡಬೇಕಾಗಿದೆʼʼಎನ್ನುತ್ತಾರೆ. ಆಗ ಮ್ಯಾನೇಜರ್‌ ʻʻಹೌದು, ಊರ್ವಶಿ ನನಗೆ ಗೊತ್ತು, ಇದು ತುಂಬಾ ದುಃಖದ ಪರಿಸ್ಥಿತಿ, ಆದರೆ ನಾವು ಈ ವಿಚಾರಗಳನ್ನು ಫೋನ್‌ನಲ್ಲಿ ಮಾತನಾಡಬಾರದು. ಜುಲೈ 19 ರಂದು ನೀವು ಹಿಂತಿರುಗಿದಾಗ ಈ ಬಗ್ಗೆ ಚರ್ಚಿಸೋಣʼʼಎನ್ನುತ್ತಾರೆ. ಆಗ ಊರ್ವಶಿ “ಯಾಕೆ?” ಎಂದು ಪ್ರಶ್ನಿಸಿದಾಗ, ಮ್ಯಾನೇಜರ್ “ಏನಾಗುತ್ತಿದೆ ಎಂಬುದರ ಬಗ್ಗೆ ಯಾರಿಗೂ ಸ್ಪಷ್ಟವಾಗಿಲ್ಲ, ನೀವು ಬಂದ ಬಳಿಕ ನಿಮ್ಮೊಂದಿಗೆ ವೈಯಕ್ತಿಕವಾಗಿ ಮಾತನಾಡುತ್ತೇನೆ.” ಎಂಬ ಸಂಭಾಷಣೆ ಇದೀಗ ಲೀಕ್‌ ಆಗಿದೆ.
ಸೋಶಿಯಲ್ ಮೀಡಿಯಾ ಲೀಕ್ ಆದ ಆಡಿಯೋವನ್ನು ವಿಡಿಯೋ ರೀತಿಯಲ್ಲಿ ವೈರಲ್‌ ಮಾಡಲಾಗುತ್ತಿದೆ.

ಇದನ್ನೂ ಓದಿ: The Birthday Boy: ಹೆಸರು ಬದಲಾಯಿಸಿ ಕದ್ದು ಮುಚ್ಚಿ ಸಿನಿಮಾ ಮಾಡಿ, ಮಾಸ್ಕ್‌ ಧರಿಸಿ ಬಂದ ನಿರ್ದೇಶಕ! ಏನು ಕಥೆ?

ಇದಕ್ಕೂ ಮುಂಚೆ  ಊರ್ವಶಿ ಅವರ ಸ್ನಾನ ಮಾಡುತ್ತಿರುವ ವಿಡಿಯೊ ವೈರಲ್‌ ಆಗಿತ್ತು. ಅನೇಕರು ವೀಡಿಯೊ ಕಂಡು PR ಸ್ಟಂಟ್ ಎಂದು ಹೇಳುತ್ತಿದ್ದರು. ಊರ್ವಶಿ ವೀಡಿಯೋದಲ್ಲಿ ಮಂಗಳಸೂತ್ರ ಬೇರೆ ಧರಿಸಿದ್ದರು. ಹೀಗಾಗಿ ಇದು ಫೇಕ್‌ ಎಂದು ಹೇಳಲಾಗಿತ್ತು. ಮಾಡೆಲ್ ಆಗಿ ವೃತ್ತಿ ಜೀವನ ಆರಂಭಿಸಿದ ಊರ್ವಶಿ, ‘ಸಿಂಗ್ ಸಾಬ್ ದಿ ಗ್ರೇಟ್’ ಸಿನಿಮಾದ ಮೂಲಕ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟಿದ್ದರು. ಸನ್ನಿ ಡಿಯೋಲ್ ಅಭಿನಯದ ಈ ಚಿತ್ರ ಕಮರ್ಷಿಯಲ್ ಫ್ಲಾಪ್ ಆಗಿತ್ತು. ಇದರ ನಂತರ ಯೋ ಯೋ ಹನಿಸಿಂಗ್ ಅವರೊಂದಿಗೆ ‘ಲವ್ ಡೋಸ್’ ಎಂಬ ಆಲ್ಬಂನಲ್ಲಿ ಕಾಣಿಸಿಕೊಂಡು ಜನಪ್ರಿಯತೆ ಪಡೆದರು. ಮೆಗಾ ಸ್ಟಾರ್‌ ಚಿರಂಜೀವಿ ನಟನೆಯ, ‘ವಾಲ್ತೇರು ವೀರಯ್ಯ’ದಲ್ಲಿ ಐಟಂ ಸಾಂಗ್‌ವೊಂದರಲ್ಲಿ ಹೆಜ್ಜೆ ಹಾಕಿದ್ದರು. ಪವನ್ ಕಲ್ಯಾಣ್ ಅಭಿನಯದ ‘ಬ್ರೋ’ ಸಿನಿಮಾದಲ್ಲಿಯೂ ಮೈ ಡಿಯರ್ ಮಾರ್ಕಂಡೇಯ ಎಂದು ಸೊಂಟ ಬಳುಕಿಸಿ ಸೌತ್‌ ಸಿನಿರಸಿಕರ ಮನಗೆದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Janhvi Kapoor: ಅಂಬಾನಿ ಮದುವೆ ಬಳಿಕ ಆಸ್ಪತ್ರೆಗೆ ದಾಖಲಾದ ಜಾಹ್ನವಿ ಕಪೂರ್!

Janhvi Kapoor: ಜಾಹ್ನವಿ ಕಪೂರ್ ‘ಉಲಾಜ್’ ​​ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಉಲಾಜ್‌ನಲ್ಲಿ ಗುಲ್ಶನ್ ದೇವಯ್ಯ, ರೋಷನ್ ಮ್ಯಾಥ್ಯೂ, ರಾಜೇಶ್ ತೈಲಂಗ್ ಮತ್ತು ಆದಿಲ್ ಹುಸೇನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರವು ಆಗಸ್ಟ್ 2 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಉಲಾಜ್ ಜೊತೆಗೆ, ಜಾನ್ವಿ ಅವರ ದೇವರಾ ಸಿನಿಮಾ ಭಾಗವಾಗಿದ್ದಾರೆ.

VISTARANEWS.COM


on

Janhvi Kapoor hospitalised due to food poisoning
Koo

ಬೆಂಗಳೂರು: ನಟಿ ಜಾನ್ವಿ ಕಪೂರ್ (Janhvi Kapoor) ಅವರು ಜುಲೈ 18 ರಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸುಧಾಂಶು ಸರಿಯಾ ಅವರ ‘ಉಲಾಜ್’ ​​ಚಿತ್ರದಲ್ಲಿ ಕಾಣಿಸಿಕೊಳ್ಳಲಿರುವ ನಟಿ, ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಇದೀಗ ವರದಿಯ ಪ್ರಕಾರ ನಟಿಯ ಆರೋಗ್ಯ ಸ್ಥಿರವಾಗಿದ್ದು, ಶೀಘ್ರದಲ್ಲೇ ಡಿಸ್ಚಾರ್ಜ್ ಆಗಲಿದ್ದಾರೆ. ಮೊನ್ನೆ ಮೊನ್ನೆಯಷ್ಟೇ ಅನಂತ್​ ಅಂಬಾನಿ-ರಾಧಿಕಾ ಮರ್ಚೆಂಟ್​ಮದುವೆಯಲ್ಲಿ ಜಾಹ್ನವಿ ಕಪೂರ್ ಕಣ್ಮನ ಸೆಳೆದಿದ್ದರು. ಗೋಲ್ಡನ್ ಡ್ರೆಸ್‌ನಲ್ಲಿ ಮಿಂಚಿದ್ದರು. ಆ ನಂತರ ಅದ್ಧೂರಿ ಮದುವೆಯನ್ನು ಮುಗಿಸಿಕೊಂಡು ಜಾಹ್ನವಿ ಕಪೂರ್ ಚೆನ್ನೈಗೆ ತೆರಳಿದ್ದರು.

ಚೆನ್ನೈನಲ್ಲಿ ಜಾಹ್ನವಿ ಕಪೂರ್ ಸೀ ಫುಡ್​ಸೇವಿಸಿದ್ದಾರೆ ಎನ್ನಲಾಗಿದೆ. ಅದರಿಂದಲೇ ಜಾನ್ವಿ ಕಪೂರ್​ಅವರಿಗೆ ಫುಡ್​ಪಾಯ್ಸನ್​ಆಗಿದೆ. ಇನ್ನೂ ಅನಾರೋಗ್ಯದಿಂದ ಚೆನ್ನೈ ನಿವಾಸದಲ್ಲಿ ಇರುವಾಗಲೇ ಅವರು ಕುಸಿದು ಬಿದ್ದರು ಎನ್ನುವ ಸುದ್ದಿಯೂ ಇದೆ. ಬೋನಿ ಕಪೂರ್ ಇನ್ನೊಂದೆರಡು ದಿನದಲ್ಲಿ ಆಸ್ಪತ್ರೆಯಿಂದ ಜಾಹ್ನವಿ ಕಪೂರ್ ಅವರನ್ನು ಬಿಡುಗಡೆ ಮಾಡಲಾಗುತ್ತೆ ಎಂದು ಹೇಳಿದ್ದಾರೆ.

ಜಾಹ್ನವಿ ಕಪೂರ್ ‘ಉಲಾಜ್’ ​​ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಉಲಾಜ್‌ನಲ್ಲಿ ಗುಲ್ಶನ್ ದೇವಯ್ಯ, ರೋಷನ್ ಮ್ಯಾಥ್ಯೂ, ರಾಜೇಶ್ ತೈಲಂಗ್ ಮತ್ತು ಆದಿಲ್ ಹುಸೇನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರವು ಆಗಸ್ಟ್ 2 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಉಲಾಜ್ ಜೊತೆಗೆ, ಜಾನ್ವಿ ಅವರ ದೇವರಾ ಸಿನಿಮಾ ಭಾಗವಾಗಿದ್ದಾರೆ. ಉಲಾಜ್ ಚಿತ್ರದಲ್ಲಿ ನಟಿ ಜಾನ್ವಿ ಕಪೂರ್ ಅವರು ರಾಜತಾಂತ್ರಿಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ಟೀಸರ್ ನಲ್ಲಿ ಜಾನ್ವಿ ಕಪೂರ್ ಅವರು ದೇಶಭಕ್ತರ ಕುಟುಂಬದಿಂದ ಬಂದ ಯುವ ರಾಜತಾಂತ್ರಿಕ ಸುಹಾನಾ ಪಾತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Janhvi Kapoor: ಉರ್ಫಿ ಸ್ಟೈಲ್ ಕಾಪಿ ಮಾಡಿದ್ರಾ ಜಾಹ್ನವಿ ಕಪೂರ್‌? ಟ್ರೋಲ್‌ ಆದ್ರು ನಟಿ!

ದೇವರ’ ನಂತರ ಮತ್ತೊಂದು ತೆಲುಗು ಚಿತ್ರದಲ್ಲಿ ನಟಿ ಜಾನ್ವಿ ಕಪೂರ್ ನಟಿಸಲು ಸಿದ್ಧರಾಗಿದ್ದಾರೆ. ಬುಚ್ಚಿ ಬಾಬು ಸನಾ ನಿರ್ದೇಶಿಸುತ್ತಿರುವ 16ನೇ ಚಿತ್ರದಲ್ಲಿ ರಾಮ್ ಚರಣ್ ಜತೆ ತೆರೆ ಹಂಚಿಕೊಳ್ಳಲಿದ್ದಾರೆ. ಜಾನ್ವಿ ಕಪೂರ್ ಕೊನೆಯದಾಗಿ ವರುಣ್ ಧವನ್ ಜತೆ ‘ಬವಾಲ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ‘ಆರ್‌ಸಿ 16’ ಮತ್ತು ‘ದೇವರ’ ಜತೆಗೆ , ಸುಧಾಂಶು ಸರಿಯಾ ಅವರ ‘ಉಲಾಜ್’ ಮತ್ತು ವರುಣ್ ಧವನ್ ಎದುರು ‘ಸನ್ನಿ ಸಂಸ್ಕರಿ ಕಿ ತುಳಸಿ ಕುಮಾರಿ’ ಸಿನಿಮಾಗಳನ್ನು ಹೊಂದಿದ್ದಾರೆ.

Continue Reading

ಬಾಲಿವುಡ್

Akshay Kumar: ಹಗ್ಗದಲ್ಲಿ ನೇತಾಡುವಾಗ ಮೂರ್ಛೆ ಹೋದ ನಟ; ರಕ್ಷಿಸಿದ ʻಕಿಲಾಡಿʼ ಅಕ್ಷಯ್​​ ಕುಮಾರ್ !

Akshay Kumar: ಪ್ರಸ್ತುತ ʻಸರ್ಫಿರಾʼ ಸಿನಿಮಾದ ಯಶಸ್ಸನ್ನು ಆನಂದಿಸುತ್ತಿರುವ ನಟನ ಹಳೆಯ ವಿಡಿಯೊವೊಂದು ವೈರಲ್‌ ಆಗುತ್ತಿದೆ. ಅಭಿಮಾನಿಗಳು ನಟನ ನಡೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಹಗ್ಗದಲ್ಲಿ ನೇತಾಡುವಾಗ ಮೂರ್ಛೆ ಹೋದ ನಟನನ್ನು ಅಕ್ಷಯ್‌ ಕುಮಾರ್‌ ರಕ್ಷಿಸಿದ್ದಾರೆ.

VISTARANEWS.COM


on

Akshay Kumar Rushes To Save Actor Who Faints Mid-Air During A Stunt
Koo

ಬೆಂಗಳೂರು: ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar) ತಮ್ಮ ಬಹುಮುಖ ಅಭಿನಯದಿಂದ ಹಿಂದಿ ಮನರಂಜನಾ ಉದ್ಯಮದಲ್ಲಿ ಹೆಸರು ಮಾಡಿದ್ದಾರೆ. `ಕಿಲಾಡಿ ಕುಮಾರ್’ ಎಂದು ಕರೆಯಲ್ಪಡುವ ಅವರು ಆಗಾಗ ತಮ್ಮ ಆಕ್ಷನ್ ಸೀಕ್ವೆನ್ಸ್‌ಗಳ ಮೂಲಕ ಮನ್ನೆಲೆಗೆ ಬರುತ್ತಾರೆ. ಮಾತ್ರವಲ್ಲ ದೇಹ ದಂಡಿಸಿ ವರ್ಕೌಟ್‌ ಮಾಡುತ್ತಾರೆ. ಅನೇಕ ಸಂದರ್ಶನಗಳಲ್ಲಿ ಈ ಬಗ್ಗೆ ಹೇಳಿಕೊಂಡಿದ್ದು ಇದೆ. ಪ್ರಸ್ತುತ ʻಸರ್ಫಿರಾʼ ಸಿನಿಮಾದ ಯಶಸ್ಸನ್ನು ಆನಂದಿಸುತ್ತಿರುವ ನಟನ ಹಳೆಯ ವಿಡಿಯೊವೊಂದು ವೈರಲ್‌ ಆಗುತ್ತಿದೆ. ಅಭಿಮಾನಿಗಳು ನಟನ ನಡೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಹಗ್ಗದಲ್ಲಿ ನೇತಾಡುವಾಗ ಮೂರ್ಛೆ ಹೋದ ನಟನನ್ನು ಅಕ್ಷಯ್‌ ಕುಮಾರ್‌ ರಕ್ಷಿಸಿದ್ದಾರೆ.

ಈಗ ಎಕ್ಸ್‌ನಲ್ಲಿ ವೈರಲ್ ಆಗುತ್ತಿರುವ ವೀಡಿಯೊದಲ್ಲಿ ಕಪಿಲ್ ಶರ್ಮಾ ಅವರ ಹಳೆಯ ಕಾಮಿಡಿ ಚಾಟ್ ಶೋನ ಚಿತ್ರೀಕರಣದ ಸಮಯದಲ್ಲಿ ಮೂರ್ಛೆ ಹೋದ ನಟನ ಕಡೆಗೆ ಅಕ್ಷಯ್ ಧಾವಿಸುತ್ತಿರುವುದನ್ನು ಕಾಣಬಹುದು. ಕಪಿಲ್ ಶರ್ಮಾ ಅವರ ಹಳೆಯ ಕಾಮಿಡಿ ಚಾಟ್ ಶೋ ವೇಳೆ ಹಾಸ್ಯನಟ ಪರಿತೋಷ್ ತ್ರಿಪಾಠಿ ಅವರು ಏಕಾಏಕಿ ಮೂರ್ಛೆ ಹೋದರು. ಅಲಿ ಅಸ್ಗರ್ ಮತ್ತು ಪ್ಯಾರಿತೋಷ್ ಹಗ್ಗಕ್ಕೆ ನೇತಾಡುವ ದೃಶ್ಯ ನಿಭಾಯಿಸುತ್ತಿದ್ದರು. ಆ ಕ್ಷಣಕ್ಕೆ ಪರಿತೋಷ್ ತ್ರಿಪಾಠಿ ಮೂರ್ಛೆ ಹೋಗುತ್ತಿರುವಾಗ ಪಕ್ಕದಲ್ಲಿ ಇದ್ದ ಅಲಿ ಅಸ್ಗರ್ ತನ್ನ ಕಾಲುಗಳಿಂದ ಪಾರಿತೋಷ್‌ರನ್ನು ಹಿಡಿದಿಟ್ಟುಕೊಳ್ಳಲು ಪ್ರಯತ್ನಿಸಿದ್ದರು. ಆದರೆ ಪಾರಿತೋಷ್‌ರನ್ನು ನಿಭಾಯಿಸಲು ಆಗಲೇ ಇಲ್ಲ. ಅದೇ ಕ್ಷಣಕ್ಕೆ ಚಿತ್ರೀಕರಣ ಮಾಡುತ್ತಿದ್ದ ಬಾಲಿವುಡ್ ನಟ ಅಕ್ಷಯ್ ಕುಮಾರ್, ಪರಿತೋಷ್‌ಗೆ ಸಹಾಯ ಮಾಡಲು ಓಡಿ ಬಂದು ಮೂರ್ಛೆ ಹೋದ ನಟನನ್ನು ಹಿಡಿದುಕೊಂಡಿದ್ದಾರೆ. ಅಕ್ಷಯ್ ಮತ್ತು ಉಳಿದ ಸಿಬ್ಬಂದಿ ಕೂಡ ನಟ ಬೀಳದಂತೆ ರಕ್ಷಿಸಲು ಧಾವಿಸಿದ್ದಾರೆ. ಇದೀಗ ಅಕ್ಷಯ್‌ ಕುಮಾರ್‌ ಅವರ ಸಮಯಪ್ರಜ್ಞೆಗೆ ನೆಟ್ಟಿಗರು ಕೊಂಡಾಡುತ್ತಿದ್ದಾರೆ.

ಒಬ್ಬರು ಹೀಗೆ ಬರೆದಿದ್ದಾರೆ, “ತರಬೇತಿ ಪಡೆಯದ ಜನರು ಸರಿಯಾದ ಸುರಕ್ಷತಾ ಸಿಬ್ಬಂದಿ ಇಲ್ಲದೆ ಪ್ರದರ್ಶನವನ್ನು ಮಾಡಬಾರದುʼʼಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೊಬ್ಬರು ʻʻಕಿಲಾಡಿ ಕುಮಾರನ ಮೇಲೆ ಗೌರವ ಹೆಚ್ಚಾಯಿತುʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Akshay Kumar:  ಅಕ್ಷಯ್ ಕುಮಾರ್‌ಗೆ ಕೋವಿಡ್‌ ಪಾಸಿಟಿವ್; ಅನಂತ್ ಅಂಬಾನಿ ಮದುವೆಗೆ ಗೈರು!

ಸಿನಿಮಾ ವಿಚಾರಕ್ಕೆ ಬಂದರೆ ಸರ್ಫಿರಾದಲ್ಲಿ ಕೊನೆಯದಾಗಿ ಕಾಣಿಸಿಕೊಂಡ ಅಕ್ಷಯ್ ಕುಮಾರ್ ಅವರು ಸಿಂಘಮ್ ಅಗೇನ್, ಖೇಲ್ ಖೇಲ್ ಮೇ, ಜಾಲಿ LLB 3, ಸ್ಕೈ ಫೋರ್ಸ್, ಹೇರಾ ಫೆರಿ 3, ಕಣ್ಣಪ್ಪ , ವೆಲ್‌ಕಮ್ ಟು ದಿ ಜಂಗಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮಹೇಶ್ ಮಂಜ್ರೇಕರ್ ನಿರ್ದೇಶನದ ʻವೇದತ್ ಮರಾಠೆ ವೀರ್ ದೌಡ್ಲೆ ಸಾತ್ʼ ಮೂಲಕ ಮರಾಠಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ. ಇಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪಾತ್ರವನ್ನು ನಿಭಾಯಿಸಲಿದ್ದಾರೆ.

Continue Reading

ಸಿನಿಮಾ

Urvashi Rautela: ನಟಿ ಊರ್ವಶಿ ರೌಟೇಲಾ ಬಟ್ಟೆ ಬಿಚ್ಚಿ, ಸ್ನಾನ ಮಾಡುವ ವಿಡಿಯೊ ಲೀಕ್‌!

Urvashi Rautela: ಇದೀಗ ಊರ್ವಶಿ ಅವರ ಈ ವಿಡಿಯೊ ಅವರ ಅಭಿಮಾನಿಗಳನ್ನು ಕೆರಳಿಸಿದೆ. ಅನೇಕರು ಈ ವೀಡಿಯೊ PR ಸ್ಟಂಟ್ ಎಂದು ಹೇಳುತ್ತಿದ್ದಾರೆ. ಊರ್ವಶಿ ವೀಡಿಯೋದಲ್ಲಿಮಂಗಳಸೂತ್ರ ಬೇರೆ ಧರಿಸಿದ್ದಾರೆ ಹೀಗಾಗಿ ಇದು ಫೇಕ್‌ ಎಂದು ಹೇಳಲಾಗುತ್ತಿದೆ. ಮಾಡೆಲ್ ಆಗಿ ವೃತ್ತಿ ಜೀವನ ಆರಂಭಿಸಿದ ಊರ್ವಶಿ, ‘ಸಿಂಗ್ ಸಾಬ್ ದಿ ಗ್ರೇಟ್’ ಸಿನಿಮಾದ ಮೂಲಕ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟರು.

VISTARANEWS.COM


on

Urvashi Rautela bathroom video leak on social media
Koo

ಬೆಂಗಳೂರು: ಬಾಲಿವುಡ್‌ ನಟಿ ಊರ್ವಶಿ ರೌಟೇಲಾ (Urvashi Rautela) ಅವರ ಖಾಸಗಿ ವಿಡಿಯೊವೊಂದು ಭಾರಿ ವೈರಲ್‌ ಆಗುತ್ತಿದೆ. ಸ್ನಾನ ಮಾಡುತ್ತಿರುವ ವಿಡಿಯೊವೊಂದು ಲೀಕ್‌ ಆಗಿದೆ. ಇಡಿಯೋದಲ್ಲಿ ಊರ್ವಶಿ ಬಟ್ಟೆ ಬಿಚ್ಚಿಕೊಳ್ಳುತ್ತಿರುವುದು ಕಂಡುಬಂದಿದೆ. ರೂಮಿನಲ್ಲಿ ಹಾಕಲಾಗಿದ್ದ ಕ್ಯಾಮೆರಾದ ಬಗ್ಗೆ ಆಕೆಗೆ ತಿಳಿದಿಲ್ಲ ಎಂಬಂತೆ ತೋರಿದೆ. ಅಲ್ಲದೇ ಇದು pR ಸ್ಟಂಟ್‌ ಎಂದು ಹೇಳಲಾಗುತ್ತಿದೆ. ರೌಟೇಲಾ ಅವರು ʻಸಿಂಗ್ ಸಾಬ್ ದಿ ಗ್ರೇಟ್ʼ, ʻಗ್ರೇಟ್ ಗ್ರ್ಯಾಂಡ್ ಮಸ್ತಿʼ, ಮತ್ತು ʻಹೇಟ್ ಸ್ಟೋರಿʼಯಂತಹ 4 ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.

ಇದೀಗ ಊರ್ವಶಿ ಅವರ ಈ ವಿಡಿಯೊ ಅವರ ಅಭಿಮಾನಿಗಳನ್ನು ಕೆರಳಿಸಿದೆ. ಅನೇಕರು ಈ ವೀಡಿಯೊ PR ಸ್ಟಂಟ್ ಎಂದು ಹೇಳುತ್ತಿದ್ದಾರೆ. ಊರ್ವಶಿ ವೀಡಿಯೋದಲ್ಲಿಮಂಗಳಸೂತ್ರ ಬೇರೆ ಧರಿಸಿದ್ದಾರೆ ಹೀಗಾಗಿ ಇದು ಫೇಕ್‌ ಎಂದು ಹೇಳಲಾಗುತ್ತಿದೆ. ಮಾಡೆಲ್ ಆಗಿ ವೃತ್ತಿ ಜೀವನ ಆರಂಭಿಸಿದ ಊರ್ವಶಿ, ‘ಸಿಂಗ್ ಸಾಬ್ ದಿ ಗ್ರೇಟ್’ ಸಿನಿಮಾದ ಮೂಲಕ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟರು. ಸನ್ನಿ ಡಿಯೋಲ್ ಅಭಿನಯದ ಈ ಚಿತ್ರ ಕಮರ್ಷಿಯಲ್ ಫ್ಲಾಪ್ ಆಗಿತ್ತು. ಇದರ ನಂತರ ಯೋ ಯೋ ಹನಿಸಿಂಗ್ ಅವರೊಂದಿಗೆ ‘ಲವ್ ಡೋಸ್’ ಎಂಬ ಆಲ್ಬಂನಲ್ಲಿ ಕಾಣಿಸಿಕೊಂಡು ಜನಪ್ರಿಯತೆ ಪಡೆದರು., ಮೆಗಾ ಸ್ಟಾರ್‌ ಚಿರಂಜೀವಿ ನಟನೆಯ, ‘ವಾಲ್ತೇರು ವೀರಯ್ಯ’ದಲ್ಲಿ ಐಟಂ ಸಾಂಗ್‌ವೊಂದರಲ್ಲಿ ಹೆಜ್ಜೆ ಹಾಕಿದ್ದರು. ಪವನ್ ಕಲ್ಯಾಣ್ ಅಭಿನಯದ ‘ಬ್ರೋ’ ಸಿನಿಮಾದಲ್ಲಿಯೂ ಮೈ ಡಿಯರ್ ಮಾರ್ಕಂಡೇಯ ಎಂದು ಸೊಂಟ ಬಳುಕಿಸಿ ಸೌತ್‌ ಸಿನಿರಸಿಕರ ಮನಗೆದ್ದರು.

ಇದನ್ನೂ ಓದಿ: Urvashi Rautela : ಶೂಟಿಂಗ್ ವೇಳೆ ನಟಿ ಊರ್ವಶಿ ರೌಟೆಲಾಗೆ ಗಂಭೀರ ಗಾಯ; ಹೈದರಾಬಾದ್ ಆಸ್ಪತ್ರೆಗೆ ದಾಖಲು

ರಿಷಭ್​ ಪಂತ್ ಮತ್ತು ಊರ್ವಶಿ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಕೆಲ ವರ್ಷಗಳ ಹಿಂದೆ ಬಾರೀ ಸದ್ದು ಮಾಡಿತ್ತು. ಇದೇ ವೇಳೆ ಊರ್ವಶಿ ಮಾಧ್ಯಮವೊಂದಕ್ಕೆ ಹೇಳಿಕೆ ನೀಡುವಾಗ ರಿಷಭ್‌ ಪಂತ್ ನನ್ನ ಭೇಟಿ ಮಾಡಲು ಹಲವು ಗಂಟೆ ಕಾದಿದ್ದರು ಎಂದಿದ್ದರು. ಈ ಬಗ್ಗೆ ರಿಷಭ್‌ ನಟಿಗೆ ಖಡಕ್ ತಿರುಗೇಟು ನೀಡಿದ್ದರು. ಇದೇ ವಿಚಾರವಾಗಿ ಇವರಿಬ್ಬರ ಮಧ್ಯೆ ಟ್ವೀಟ್​ ವಾರ್​ ಕೂಡ ನಡೆದಿತ್ತು




Continue Reading

Latest

Actress Hina Khan: ಕಿಮೋಥೆರಪಿ ಅನುಭವ ಹಂಚಿಕೊಂಡಿದ್ದಾರೆ ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿರುವ ಖ್ಯಾತ ಬಾಲಿವುಡ್‌ ನಟಿ

Actress Hina Khan: ಬಾಲಿವುಡ್‌ನ ಬೇಡಿಕೆಯ ನಟಿಯರಲ್ಲಿ ಒಬ್ಬರಾದ ಹೀನಾ ಖಾನ್ ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ತಮ್ಮ ಕ್ಯಾನ್ಸರ್ ಜರ್ನಿಯ ಕುರಿತ ಪ್ರತಿಯೊಂದು ವಿಷಯದ ಬಗ್ಗೆ ನಟಿ ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಹಂಚಿಕೊಳುತ್ತಿದ್ದಾರೆ. ಕೀಮೋಥೆರಪಿಗಾಗಿ ತಮ್ಮ ಉದ್ದನೆಯ ಕೂದಲನ್ನು ಇತ್ತೀಚೆಗೆ ಕತ್ತರಿಸಿದ್ದಾರೆ. ಈ ಫೋಟೊದ ಜೊತೆಗೆ ಈಗ ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೊಗಳನ್ನು ತಮ್ಮ ಇನ್ಸ್ಟಾಗ್ರಾಂ ಸ್ಟೋರಿಗಳಲ್ಲಿ ಹಂಚಿಕೊಂಡಿದ್ದಾರೆ.

VISTARANEWS.COM


on

Actress Hina Khan
Koo

ಮುಂಬೈ : ಬಾಲಿವುಡ್‍ನ ಬಹುಬೇಡಿಕೆಯ ನಟಿಯರಲ್ಲಿ ಒಬ್ಬರಾದ ಹೀನಾ ಖಾನ್ (Actress Hina Khan) ಅವರು ತಮ್ಮ ನಟನೆಯ ಮೂಲಕ ಸಾಕಷ್ಟು ಹೆಸರು ಮಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ಅವರು ಇತ್ತೀಚೆಗೆ ತಮ್ಮ ಅಧಿಕೃತ ಹ್ಯಾಂಡಲ್‍ನಲ್ಲಿ ತಾನು ಮೂರನೇ ಹಂತದ ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿದ್ದೇನೆ ಎಂದು ಅಭಿಮಾನಿಗಳಿಗೆ ತಿಳಿಸಿದ್ದರು.

ತಮ್ಮ ಸ್ತನ ಕ್ಯಾನ್ಸರ್‌ ಜರ್ನಿಯ ಕುರಿತ ಪ್ರತಿಯೊಂದು ವಿಷಯದ ಬಗ್ಗೆ ನಟಿ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಹಂಚಿಕೊಳುತ್ತಿದ್ದಾರೆ. ಕೀಮೋಥೆರಪಿಗಾಗಿ ತಮ್ಮ ಉದ್ದನೆಯ ಕೂದಲನ್ನು ಇತ್ತೀಚೆಗೆ ಕತ್ತರಿಸಿದ್ದಾರೆ. ಈ ಫೋಟೊದ ಜೊತೆಗೆ ಈಗ ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೊಗಳನ್ನು ತಮ್ಮ ಇನ್‍ಸ್ಟಾಗ್ರಾಂ ಸ್ಟೋರಿಗಳಲ್ಲಿ ಹಂಚಿಕೊಂಡಿದ್ದಾರೆ.

ಹಾಗೇ ಬುಧವಾರ, ಅವರು ಮತ್ತೊಮ್ಮೆ ತಮ್ಮ ಇನ್‍ಸ್ಟಾಗ್ರಾಂ ಸ್ಟೋರಿಯಲ್ಲಿ ಒಂದು ಟಿಪ್ಪಣಿಯನ್ನು ಬರೆದಿದ್ದಾರೆ ಮತ್ತು ಅದರಲ್ಲಿ ಅವರು ನಿರಂತರವಾಗಿ ನೋವಿನಿಂದ ಬಳಲುತ್ತಿದ್ದೇನೆ ಎಂದು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಅಲ್ಲದೇ ಆಸ್ಪತ್ರೆಯ ಹೌಸ್ ಕೀಪಿಂಗ್ ಸಿಬ್ಬಂದಿ ತನಗೆ ಬರೆದ ವಿಶೇಷ ಕೈಬರಹದ ಪತ್ರದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ.

ಈ ಪತ್ರದಲ್ಲಿ ಹೌಸ್‌ ಕೀಪಿಂಗ್‌ ಸಿಬ್ಬಂದಿಗಳು ನಟಿಗೆ ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ ಹಾಗೇ ಶಸ್ತ್ರಚಿಕಿತ್ಸೆಗೆ ಒಳಪಟ್ಟ ನಟಿ ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಹಾರೈಸಿದ್ದಾರಂತೆ. ತನ್ನ ಇನ್‍ಸ್ಟಾಗ್ರಾಂ ಸ್ಟೋರಿಗಳಲ್ಲಿ ಈ ಪತ್ರದ ಫೋಟೋವನ್ನು ಹಂಚಿಕೊಂಡ ನಟಿ ಇವರ ಪ್ರೀತಿ, ಹಾರೈಕೆ ತಾನು ಬೇಗನೆ ಚೇತರಿಸಿಕೊಳ್ಳುವಂತೆ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕುವೈಟ್​ನಲ್ಲಿ ಈ ಚಪ್ಪಲಿಗೆ 1 ಲಕ್ಷ ರೂಪಾಯಿಯಂತೆ; ನಮ್ಮಲ್ಲಿ ಇದು ಬಾತ್​ರೂಮ್​ಗೆ ಹೋಗುವ ಚಪ್ಪಲಿ ಎಂದ ನೆಟ್ಟಿಗರು!

ಹೀನಾ ಖಾನ್ ಒಬ್ಬ ಖ್ಯಾತ ನಟಿ. ಇವರು ಸೋಶಿಯಲ್ ಮೀಡಿಯಾದಲ್ಲಿ ಭಾರಿ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹಾಗೇ ಅವರು ತಮ್ಮ ಜೀವನ ಆಯ್ಕೆಗಳಿಂದಾಗಿ ಸೋಶಿಯಲ್ ಮೀಡಿಯಾದಲ್ಲಿ ಹಲವು ಬಾರಿ ಟೀಕೆಗೆ ಒಳಗಾಗಿದ್ದಾರೆ. ಆದರೆ ನಟಿ ಈ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ.

ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನಟಿ ಚಿಕಿತ್ಸೆ ಪಡೆಯಲು ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ದಾಖಲಾಗಿದ್ದು, ನಟಿ ತನ್ನ ಚಿಕಿತ್ಸೆ ಮತ್ತು ಕೀಮೋಥೆರಪಿಯ ಬಗ್ಗೆ ತನ್ನ ಫಾಲೋವರ್ಸ್‌ಗಳಿಗೆ ಅಪ್‍ಡೇಟ್ ನೀಡುತ್ತಿರುತ್ತಾರೆ. ‘ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ’ ಚಿತ್ರದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಿದ ನಂತರ ನಟಿ ಹೀನಾ ಖಾನ್ ಅವರು ಟಿವಿ ಆ್ಯಕ್ಟರ್ ಆಗಿ ಜನಪ್ರಿಯರಾದರು. ಮುಂದೆ ಅವರು ಶಿಂಡಾ ಶಿಂಡಾ ನೋ ಪಾಪಾ ಚಿತ್ರದಲ್ಲಿ ಜಿಪ್ಪಿ ಗ್ರೆವಾಲ್ ಅವರೊಂದಿಗೆ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

Continue Reading
Advertisement
Virat Kohli
ಕ್ರೀಡೆ9 mins ago

Virat Kohli: ಬಿಸಿಸಿಐ ಅಧಿಕಾರಿಗಳನ್ನು ಸಂಪರ್ಕಿಸಿ ಕೋಚ್​ ಗಂಭೀರ್​ ವಿಚಾರದಲ್ಲಿ ಕೊಹ್ಲಿ ಕೊಟ್ಟ ಆಶ್ವಾಸನೆ ಏನು?

karnataka Rain
ಮಳೆ16 mins ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

ಪ್ರಮುಖ ಸುದ್ದಿ30 mins ago

Karnataka Job Reservation: ಕನ್ನಡಿಗರಿಗೆ ಮೀಸಲಾತಿ ನೀಡಲು ಕರವೇ ಆಗ್ರಹ; ʼಫೋನ್ ಪೇʼ ಬಾಯ್ಕಾಟ್ ಅಭಿಯಾನ ಶುರು!

Kanwar Yatra
ದೇಶ36 mins ago

Kanwar Yatra: ಕನ್ವರ್‌ ಯಾತ್ರೆಯ ಮಾರ್ಗದಲ್ಲಿರುವ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ: ಯೋಗಿ ಆದಿತ್ಯನಾಥ್

Uttara kannada landslide 3
ಉತ್ತರ ಕನ್ನಡ49 mins ago

Uttara Kannada Landslide: 6 ಜನರ ಶವ ಪತ್ತೆ, ಇನ್ನೂ ನಾಲ್ವರಿಗಾಗಿ ಶೋಧ; ಭಾರಿ ಮಳೆ ನಡುವೆ ಮಣ್ಣು ತೆರವು

England vs West Indies
ಕ್ರೀಡೆ57 mins ago

England vs West Indies: ವೇಗದ ಅರ್ಧಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಇಂಗ್ಲೆಂಡ್

Karnataka Rain
ಮಳೆ1 hour ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Vaibhavi Jagdish Bold Photo shoot
ಸ್ಯಾಂಡಲ್ ವುಡ್1 hour ago

Vaibhavi Jagdish: ಬೋಲ್ಡ್‌ ಫೋಟೊ ಹಂಚಿಕೊಂಡು ಕಮೆಂಟ್‌ ಸೆಕ್ಷನ್‌ ಆಫ್‌ ಮಾಡಿದ ಜೈ ಜಗದೀಶ್ ಪುತ್ರಿ!

Kannada Actress Many opportunities for this actress before the release Back Benchers'!
ಸ್ಯಾಂಡಲ್ ವುಡ್1 hour ago

Kannada Actress: `ಬ್ಯಾಕ್‍ ಬೆಂಚರ್ಸ್’ ಬಿಡುಗಡೆಗೂ ಮುನ್ನವೇ ಹಲವು ಅವಕಾಶಗಳು ಈ ನಟಿಗೆ!

Donald Trump
ವಿದೇಶ1 hour ago

Donald Trump: ಅಮೆರಿಕವೂ ಐರನ್ ಡೋಮ್ ಕ್ಷಿಪಣಿ ತಯಾರಿಸಲಿದೆ; ಡೊನಾಲ್ಡ್‌ ಟ್ರಂಪ್‌ ಸೂಚನೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ16 mins ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ1 hour ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ21 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ22 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಟ್ರೆಂಡಿಂಗ್‌