England vs West Indies: ವೇಗದ ಅರ್ಧಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಇಂಗ್ಲೆಂಡ್ - Vistara News

ಕ್ರೀಡೆ

England vs West Indies: ವೇಗದ ಅರ್ಧಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಇಂಗ್ಲೆಂಡ್

England vs West Indies: ಆರಂಭಿಕರಾದ ಬೆನ್ ಡಕೆಟ್ ಹಾಗೂ ಓಲಿ ಪೋಪ್‌ ಆಕ್ರಮಣಕಾರಿ ಆಟದ ನೆರವಿನಿಂದ ಇಂಗ್ಲೆಂಡ್​ ಬೃಹತ್​ ಮೊತ್ತ ದಾಖಲಿಸಿತು. ಪೋಪ್ 167 ಎಸೆತಗಳಲ್ಲಿ 15 ಬೌಂಡರಿ, 1 ಸಿಕರ್‌ನೊಂದಿಗೆ 121 ರನ್ ಸಿಡಿಸಿದರು.

VISTARANEWS.COM


on

England vs West Indies
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನಾಟಿಂಗ್‌ಹ್ಯಾಮ್: ಪ್ರವಾಸಿ ವೆಸ್ಟ್​ ಇಂಡೀಸ್(England vs West Indies)​ ವಿರುದ್ಧದ ಮೊದಲ ಟೆಸ್ಟ್​ ಪಂದ್ಯದಲ್ಲಿ ಇನಿಂಗ್ಸ್​ ಗೆಲುವು ಸಾಧಿಸಿದ್ದ ಇಂಗ್ಲೆಂಡ್​ ತಂಡ ಇದೀಗ ದ್ವಿತೀಯ ಟೆಸ್ಟ್​ನಲ್ಲಿಯೂ ಹಿಡಿತ ಸಾಧಿಸಿದೆ. ಮೊದಲ ದಿನವೇ 416 ರನ್‌ ಗಳಿಸಿದೆ. ಜತೆಗೆ ಇದೇ ಪಂದ್ಯದಲ್ಲಿ ಇಂಗ್ಲೆಂಡ್ ವಿಶ್ವ​ ದಾಖಲೆಯೊಂದನ್ನು ನಿರ್ಮಿಸಿದೆ.

ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಇಂಗ್ಲೆಂಡ್​ ಮೊದಲ ಓವರ್‌ನಲ್ಲೇ ಜ್ಯಾಕ್ ಕ್ರಾಲಿ(0) ವಿಕೆಟ್ ಕಳೆದುಕೊಂಡರೂ ಕೂಡ ಕೇವಲ 4.2 ಓವರ್ ಗಳಲ್ಲೇ 50 ರನ್ ಪೂರ್ಣಗೊಳಿಸಿದ ಇಂಗ್ಲೆಂಡ್, ಟೆಸ್ಟ್‌ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ತನ್ನದೇ ದಾಖಲೆಯನ್ನು 30 ವರ್ಷಗಳ ಬಳಿಕ ಉತ್ತಮಗೊಳಿಸಿದೆ. 1994ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಇಂಗ್ಲೆಂಡ್ 4.3 ಓವರ್‌ಗಳಲ್ಲಿ 50 ರನ್ ಪೂರ್ಣಗೊಳಿಸಿತ್ತು. ವೇಗದ ಅರ್ಧಶತಕ ದಾಖಲೆಯ ಪಟ್ಟಿಯಲ್ಲಿ ಅಗ್ರ-3 ಸ್ಥಾನದಲ್ಲಿ ಇಂಗ್ಲೆಂಡ್ ತಂಡವೇ ಕಾಣಿಸಿಕೊಂಡಿದೆ. ಇಂಗ್ಲೆಂಡ್ ತಂಡವು 1994ರಲ್ಲಿ ದಕ್ಷಿಣ ಆಫ್ರಿಕಾ ಎದುರು 4.3 ಓವರ್‌ನಲ್ಲಿ ಅರ್ಧಶತಕ ಪೂರೈಸಿತ್ತು. ಇದಾದ ಬಳಿಕ ಇಂಗ್ಲೆಂಡ್ ತಂಡವು 2002ರಲ್ಲಿ ಶ್ರೀಲಂಕಾ ಎದುರು 5 ಓವರ್‌ನಲ್ಲಿ ಅರ್ಧಶತಕ ಪೂರೈಸಿತ್ತು. ಭಾರತ 2008ರಲ್ಲಿ ಇಂಗ್ಲೆಂಡ್ ಎದುರು 5.3 ಓವರ್‌ಗಳಲ್ಲಿ ಅರ್ಧಶತಕ ಬಾರಿಸಿ 5ನೇ ಸ್ಥಾನ ಪಡೆದಿದೆ.

ಆರಂಭಿಕರಾದ ಬೆನ್ ಡಕೆಟ್ ಹಾಗೂ ಓಲಿ ಪೋಪ್‌ ಆಕ್ರಮಣಕಾರಿ ಆಟದ ನೆರವಿನಿಂದ ಇಂಗ್ಲೆಂಡ್​ ಬೃಹತ್​ ಮೊತ್ತ ದಾಖಲಿಸಿತು. ಪೋಪ್ 167 ಎಸೆತಗಳಲ್ಲಿ 15 ಬೌಂಡರಿ, 1 ಸಿಕರ್‌ನೊಂದಿಗೆ 121 ರನ್ ಸಿಡಿಸಿದರು. ಬೆನ್ ಡಕೆಟ್ 59 ಎಸೆತಗಳಲ್ಲಿ 14 ಬೌಂಡರಿಗಳೊಂದಿಗೆ 71 ರನ್ ಬಾರಿಸಿದರು. ನಾಯಕ ಬೆನ್ ಸ್ಟೋಕ್ಸ್ 69 ರನ್ ಗಳಿಸಿ ನಿರ್ಗಮಿಸಿದರು. ಅಲ್ಟಾರಿ ಜೋಸೆಫ್ 3 ವಿಕೆಟ್ ಕಿತ್ತರು. ವಿಂಡೀಸ್​ ಮೊದಲ ಇನಿಂಗ್ಸ್​ ಬ್ಯಾಟಿಂಗ್​ ಆರಂಭಿಸಬೇಕಿದೆ.

ಇದನ್ನೂ ಓದಿ James Anderson: 22 ವರ್ಷಗಳ ಕ್ರಿಕೆಟ್‌ ವೃತ್ತಿ ಬದುಕಿಗೆ ವಿದಾಯ ಹೇಳಿದ ಜೇಮ್ಸ್​ ಆ್ಯಂಡರ್ಸನ್; ಭಾವನಾತ್ಮಕವಾಗಿ ಹಾರೈಸಿದ ಸಚಿನ್

ಟೆಸ್ಟ್​ನಲ್ಲಿ ವೇಗದ ಅರ್ಧಶತಕ


ಇಂಗ್ಲೆಂಡ್​- 4.2 ಓವರ್, ಎದುರಾಳಿ; ವೆಸ್ಟ್​ ಇಂಡೀಸ್​​

ಇಂಗ್ಲೆಂಡ್- 4.3 ಓವರ್​, ಎದುರಾಳಿ; ದಕ್ಷಿಣ ಆಫ್ರಿಕಾ

ಇಂಗ್ಲೆಂಡ್​, 5.0​​​ ಓವರ್​, ಎದುರಾಳಿ; ಶ್ರೀಲಂಕಾ

ಶ್ರೀಲಂಕಾ-5.2 ಓವರ್​, ಎದುರಾಳಿ; ಪಾಕಿಸ್ತಾನ

ಭಾರತ-5.3 ಓವರ್​, ಎದುರಾಳಿ; ಇಂಗ್ಲೆಂಡ್​

ಮೊದಲ ಟೆಸ್ಟ್​ ಆಡುವ ಮೂಲಕ ಇಂಗ್ಲೆಂಡ್​ ತಂಡದ ಹಿರಿಯ ವೇಗಿ ಜೇಮ್ಸ್​ ಆ್ಯಂಡರ್ಸನ್(James Anderson)​ ಅವರು ತಮ್ಮ 22 ವರ್ಷಗಳ ಸುದೀರ್ಘ ಅಂತಾರಾಷ್ಟೀಯ ಕ್ರಿಕೆಟ್‌ ವೃತ್ತಿ ಬದುಕಿಗೆ ತೆರೆ ಎಳೆದಿದ್ದರು. ಈ ಪಂದ್ಯವನ್ನು ಇಂಗ್ಲೆಂಡ್​ ಇನಿಂಗ್ಸ್​ ಹಾಗೂ 114 ರನ್​ಗಳಿಂದ ಗೆದ್ದು ಬೀಗಿತು. ಆ್ಯಂಡರ್ಸನ್​ಗೂ ಗೆಲುವಿನ ವಿದಾಯ ಲಭಿಸಿತ್ತು. ಸಾರ್ವಕಾಲಿಕ ಶ್ರೇಷ್ಠ ಬೌಲರ್‌ಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರುವ 41 ವರ್ಷದ ಆ್ಯಂಡರ್ಸನ್, ವಿದಾಯಕ್ಕೆ ಸಚಿನ್​ ತೆಂಡೂಲ್ಕರ್(Sachin Tendulkar) ಭಾವನಾತ್ಮಕ​ ಟ್ವೀಟ್​ ಮೂಲಕ ಶುಭ ಹಾರೈಸಿದ್ದರು.

ಆ್ಯಂಡರ್ಸನ್​ ಇಂಗ್ಲೆಂಡ್‌ ಪರ ಅತಿ ಹೆಚ್ಚು ವಿಕೆಟ್‌ ಪಡೆದ, ಟೆಸ್ಟ್ ಕ್ರಿಕೆಟ್‌ನಲ್ಲಿ 700ಕ್ಕೂ ಅಧಿಕ ವಿಕೆಟ್‌ ಪಡೆದ ವಿಶ್ವದ ಮೊದಲ ವೇಗಿ ಹಾಗೂ ಒಟ್ಟಾರೆ ಮೂರನೇ ಬೌಲರ್‌ ಎನಿಸಿಕೊಂಡಿದ್ದಾರೆ. ವಿದಾಯ ಪಂದ್ಯದಲ್ಲೇ ಆ್ಯಂಡರ್ಸನ್​ ವಿಶ್ವ ದಾಖಲೆಯೊಂದನ್ನು ನಿರ್ಮಿಸಿದ್ದು ಕೂಡ ವಿಶೇಷ. ದ್ವಿತೀಯ ಇನಿಂಗ್ಸ್​ನಲ್ಲಿ 10 ಓವರ್​ ಪೂರ್ತಿಗೊಳಿಸುವ ಮೂಲಕ ಜೇಮ್ಸ್​ ಆ್ಯಂಡರ್ಸನ್ 40 ಸಾವಿರ ಚೆಂಡೆಸೆದ ದಾಖಲೆ ನಿರ್ಮಿಸಿದರು. ಈ ದಾಖಲೆ ಮಾಡಿದ ವಿಶ್ವದ ಮೊದಲ ವೇಗಿ ಎನಿಸಿಕೊಂಡರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Ishan Kishan: ಟೀಮ್​ ಇಂಡಿಯಾದಲ್ಲಿ ಇಶಾನ್ ಕಿಶನ್​ಗೆ ಬಾಗಿಲು ಬಂದ್​?

Ishan Kishan: ಕಳೆದ ವರ್ಷ ನವೆಂಬರ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಸರಣಿಯ ಮೂರನೇ ಟಿ20 ಸಂದರ್ಭದಲ್ಲಿ ಕಿಶನ್ ಕೊನೆಯದಾಗಿ ಭಾರತಕ್ಕಾಗಿ ಆಡಿದ್ದರು.

VISTARANEWS.COM


on

Ishan Kishan
Koo

ರಣಜಿ ಆಡಲು ಅಸಡ್ಡೆ ತೋರಿ ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿದ್ದ ಇಶಾನ್​ ಕಿಶನ್​(Ishan Kishan) ಅವರು ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಅವಕಾಶ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ, ಅವರಿಗೆ ಮತ್ತೆ ನಿರಾಸೆಯಾಗಿದೆ. ಅವರನ್ನು ಆಯ್ಕೆಗೆ ಪರಿಗಣಿಸಿಲ್ಲ. ಇದೀಗ ಇಶಾನ್​ಗೆ ಸಂಪೂರ್ಣವಾಗಿ ಟೀಮ್​ ಇಂಡಿಯಾದ(Team India) ಬಾಗಿಲು ಬಂದ್​ ಆದಂತಿದೆ.

ಕಳೆದ ವರ್ಷ ನವೆಂಬರ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಸರಣಿಯ ಮೂರನೇ ಟಿ20 ಸಂದರ್ಭದಲ್ಲಿ ಕಿಶನ್ ಕೊನೆಯದಾಗಿ ಭಾರತಕ್ಕಾಗಿ ಆಡಿದ್ದರು. ನಂತರದ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಆಯ್ಕೆಯಾಗಿದ್ದರೂ ಕೂಡ ಅಂತಿಮ ಹಂತದಲ್ಲಿ ವೈಯಕ್ತಿಕ ಕಾರಣಗಳಿಂದಾಗಿ ಟೆಸ್ಟ್ ಸರಣಿಯಿಂದ ಹೊರಗುಳಿದರು. ಸ್ವಲ್ಪ ವಿರಾಮವನ್ನು ತೆಗೆದುಕೊಂಡ ಇಶಾನ್​ಗೆ ಅಂದಿನ ಕೋಚ್​ ದ್ರಾವಿಡ್​ ಮತ್ತು ಆಯ್ಕೆ ಸಮಿತಿ ರಣಜಿ ಟ್ರೋಫಿ ಪಂದ್ಯಗಳಲ್ಲಿ ಆಡುವಂತೆ ಸೂಚನೆ ನೀಡಿತ್ತು. ಆದರೆ ಇದನ್ನು ಇಶಾನ್​ ಕಡೆಗಣಿಸಿದ್ದರು. ಈ ಕಾರಣದಿಂದ ಬಿಸಿಸಿಐ ಅವರನ್ನು ಕೇಂದ್ರೀಯ ಗುತ್ತಿಗೆಯಿಂದಲೂ ಕೈಬಿಟ್ಟಿತ್ತು.

ತಂಡಕ್ಕೆ ಆಯ್ಕೆ ಮಾಡದಿರುವುದ ಕುರಿತು ಕೆಲ ದಿನಗಳ ಹಿಂದೆ ಪ್ರತಿಕ್ರಿಯೆ ನೀಡಿದ್ದ ಇಶಾನ್​, “ನಾನು ಬ್ರೇಕ್ ಪಡೆದಿದ್ದೆ, ನನ್ನ ಪ್ರಕಾರ ಇದು ಸಾಮಾನ್ಯ. ತಂಡಕ್ಕೆ ಕಮ್ ಬ್ಯಾಕ್ ಮಾಡಬೇಕಾದರೆ ದೇಶೀಯ ಕ್ರಿಕೆಟ್​ನಲ್ಲಿ ಪ್ರದರ್ಶನ ನೀಡಬೇಕು ಎಂಬ ನಿಯಮವಿದೆ ಎನ್ನುವುದು ನನಗೆ ತಿಳಿದಿದೆ. ಆದರೆ, ಅಂದು ನಾನು ಆಡುವ ಮನಸ್ಥಿತಿಯಲ್ಲಿ ಇರಲಿಲ್ಲ. ಹಿಗಾಗಿಯೇ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ಬ್ರೇಕ್ ಪಡೆದಿದ್ದೆ. ಉತ್ತಮ ಫಾರ್ಮ್​ನಲ್ಲಿರುವಾಗ ಅಂತಾರಾಷ್ಟ್ರೀಯ ಕ್ರಿಕೆಟ್​ ಬಿಟ್ಟು ದೇಶೀಯ ಕ್ರಿಕೆಟ್​ನಲ್ಲಿ ಆಡಬೇಕು ಎನ್ನುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದು ಇಂಡಿಯನ್ ಎಕ್ಸ್ ಪ್ರೆಸ್​ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು.

ಇದನ್ನೂ ಓದಿ Ishan Kishan : ನನ್ನನ್ನು ಹೊರಗಿಟ್ಟಿರುವ ತೀರ್ಮಾನ ಮೂರ್ಖತನದ್ದು; ಜಯ್​ ಶಾಗೆ ಟಾಂಗ್​ ಕೊಟ್ಟ ಇಶಾನ್​ ಕಿಶನ್​

ಇಶಾನ್​ ಅವರಂತೆಯೇ ದೇಶೀಯ ಕ್ರಿಕೆಟ್​ ಆಡದೆ ಬಿಸಿಸಿಐ ಕೇಂದ್ರೀಯ ಗುತ್ತಿಗೆಯಿಂದ ಹೊರಬಿದ್ದ ಶ್ರೇಯಸ್​ ಅಯ್ಯರ್​ ಮತ್ತೆ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಆದರೆ ಇಶಾನ್​ಗೆ ಅವಕಾಶ ಲಭಿಸಿಲ್ಲ. ಭಾರತ ಪರ ದ್ವಿಶತಕ ಬಾರಿಸಿರುವ ಇಶಾನ್​ಗೆ ಮುಂದಿನ ಸರಣಿಯಲ್ಲಾದರೂ ಅವಕಾಶ ನೀಡಬೇಕು ಎನ್ನುವುದು ಕ್ರಿಕೆಟ್​ ಅಭಿಮಾನಿಗಳ ಒತ್ತಾಯವಾಗಿದೆ. ಒಂದೊಮ್ಮೆ ಅವರಿಗೆ ಮುಂದಿನ ಕೆಲವು ಸರಣಿಯಲ್ಲಿಯೂ ಅವಕಾಶ ನೀಡದೇ ಹೋದರೆ ಅವರು ಮಾನಸಿಕವಾಗಿ ಕುಗ್ಗಿ ತಮ್ಮ ಕ್ರಿಕೆಟ್​ ಭವಿಷ್ಯವನ್ನೇ ಕಳೆದುಕೊಳ್ಳಬಹುದು ಎಂದು ಕೆಲ ಕ್ರಿಕೆಟ್​ ಪಂಡಿತರು ಅಭಿಪ್ರಾಯಪಟ್ಟಿದ್ದಾರೆ.

ಲಂಕಾ ಸರಣಿಗೆ ಭಾರತ ತಂಡ

ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್ (ವಿ.ಕೀ ), ಸಂಜು ಸ್ಯಾಮ್ಸನ್ (ವಿ.ಕೀ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ , ಅರ್ಶದೀಪ್​ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್​ ಸಿರಾಜ್.

ಇದನ್ನೂ ಓದಿ Team India Srilanka Tour : ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಸೂರ್ಯಕುಮಾರ್​ಗೆ ಟಿ20 ನಾಯಕತ್ವ

ಏಕದಿನ ತಂಡ: ರೋಹಿತ್ ಶರ್ಮ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್ (ವಿ.ಕೀ), ರಿಷಬ್ ಪಂತ್ (ವಿ.ಕೀ), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.

Continue Reading

ಕ್ರೀಡೆ

Indian Olympics History: ಭಾರತಕ್ಕೆ ಒಲಿಂಪಿಕ್ಸ್​ನಲ್ಲಿ ವೈಯಕ್ತಿಕ ಚಿನ್ನ ಗೆದ್ದ ಮೊದಲ ಸಾಧಕ ಅಭಿನವ್‌ ಬಿಂದ್ರಾ

Indian Olympics History: ಶೂಟಿಂಗ್​ ವಿಭಾಗದಲ್ಲಿ ನೀಡುವ ಪ್ರತಿಷ್ಠಿತ ‘ಬ್ಲೂ ಕ್ರಾಸ್‌’ ಪ್ರಶಸ್ತಿಯೂ ಬಿಂದ್ರಾಗೆ ಲಭಿಸಿದೆ. ‘ಬ್ಲೂ ಕ್ರಾಸ್‌’ ಎಂಬುದು ಇಂಟರ್‌ನ್ಯಾಶನಲ್‌ ಶೂಟಿಂಗ್‌ ಸ್ಪೋರ್ಟ್ಸ್ ಫೆಡರೇಶನ್‌ ನೀಡುವ ಅತ್ಯುನ್ನತ ಗೌರವವಾಗಿದೆ. ಈ ಪ್ರಶಸ್ತಿಗೆ ಭಾಜನರಾದ ಭಾರತದ ಮೊದಲ ಶೂಟರ್‌ ಎಂಬುದು ಅಭಿನವ್‌ ಬಿಂದ್ರಾ ಪಾಲಿನ ಹೆಗ್ಗಳಿಕೆ.

VISTARANEWS.COM


on

Indian Olympics History
Koo

ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಆರಂಭಗೊಳ್ಳಲಿರುವ ಪ್ಯಾರಿಸ್(Paris 2024 Olympics)​ ಒಲಿಂಪಿಕ್ಸ್(Paris Olympics 2024)​ ಕ್ರೀಡಾಕೂಟದಲ್ಲಿ ಭಾರತದ 117 ಕ್ರೀಡಾಪಟುಗಳು ಪದಕ ನಿರೀಕ್ಷೆಯೊಂದಿಗೆ ಸ್ಪರ್ಧಿಸಲಿದ್ದಾರೆ. ಇದುವರೆಗಿನ ಒಲಿಂಪಿಕ್ಸ್​ ಇತಿಹಾಸದಲ್ಲಿ ಭಾರತ(Indian Olympics History) ಗೆದ್ದಿರುವುದು ಒಟ್ಟು 35 ಪದಕಗಳನ್ನು ಮಾತ್ರ. ಇದರಲ್ಲಿ 10 ಚಿನ್ನ, 9 ಬೆಳ್ಳಿ ಮತ್ತು 16 ಕಂಚು ಒಳಗೊಂಡಿದೆ. ವೈಯಕ್ತಿಕ ವಿಭಾಗದಲ್ಲಿ ದೇಶಕ್ಕೆ ಮೊದಲ ಚಿನ್ನ ಗೆದ್ದ ಸಾಧಕ ಯಾರು? ಯಾವ ಒಲಿಂಪಿಕ್ಸ್​ನಲ್ಲಿ ಈ ಸಾದನೆ ಮಾಡಿದರು? ಎನ್ನುವ ಕುತೂಹಲಕಾರಿ ಮಾಹಿತಿ ಇಲ್ಲಿದೆ.

ಹೌದು, ಭಾರತದ ಒಲಿಂಪಿಕ್ಸ್‌ ಇತಿಹಾಸದಲ್ಲಿ ವೈಯಕ್ತಿಕ ಚಿನ್ನದ ಪದಕ ಗೆದ್ದ ಮೊದಲ ಸಾಧಕನೆಂಬ ಹೆಗ್ಗಳಿಕೆ ಲೆಜೆಂಡ್ರಿ ಶೂಟರ್‌ ಅಭಿನವ್‌ ಬಿಂದ್ರಾ(Abhinav Bindra) ಅವರಿಗೆ ಸಲ್ಲುತ್ತದೆ. 2008ರ(2008 Summer Olympics) ಬೀಜಿಂಗ್ ಒಲಿಂಪಿಕ್ಸ್​ನಲ್ಲಿ ಅವರು 10 ಮೀ ಏರ್ ರೈಫಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಜಯಿಸಿದ್ದರು. ಇದು ಭಾರತಕ್ಕೆ ವೈಯಕ್ತಿಕ ವಿಭಾಗದಲ್ಲಿ ದೊರೆತ ಮೊದಲ ಚಿನ್ನದ ಪದಕ. ಇದಾದ ಬಳಿಕ ಕಳೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ನೀರಜ್​ ಚೋಪ್ರಾ ಜಾವೆಲಿನ್​ನಲ್ಲಿ ಚಿನ್ನ ಗೆದ್ದಿದ್ದರು. ಒಟ್ಟಾರೆಯಾಗಿ ಭಾರತಕ್ಕೆ ಒಲಿಂಪಿಕ್ಸ್​ನಲ್ಲಿ ಕೇವಲ 2 ವೈಯಕ್ತಿಕ ಚಿನ್ನ ಮಾತ್ರ ಲಭಿಸಿದೆ. ಈ ಬಾರಿ ಕನಿಷ್ಠ ಮೂರು ವೈಯಕ್ತಿಕ ಚಿನ್ನ ನಿರೀಕ್ಷೆ ಮಾಡಲಾಗಿದೆ.

ಇದನ್ನೂ ಓದಿ India at the Olympics: ಒಲಿಂಪಿಕ್ಸ್​ನಲ್ಲಿ ಭಾರತದ ಪದಕ ಸಾಧನೆಯ ಇಣುಕು ನೋಟ

ಒಂದು ಒಲಿಂಪಿಕ್ಸ್​ ಪದಕ, ಏಳು ಕಾಮನ್‌ವೆಲ್ತ್ ಗೇಮ್ಸ್ ಪದಕ, ಮೂರು ಏಷ್ಯನ್ ಗೇಮ್ಸ್ ಪದಕ ಹಾಗೂ 2006ರಲ್ಲಿ ವಿಶ್ವ ಚಾಂಪಿಯನ್‌ಶಿಪ್ ಚಿನ್ನದ ಪದಕವನ್ನೂ ಗಳಿಸಿರುವ ಬಿಂದ್ರಾ ಭಾರತೀಯ ಶೂಟಿಂಗ್ ದ್ರುವತಾರೆ ಎಂದರೂ ತಪ್ಪಾಗಲಾರದು. ಅಭಿನವ್ ಬಿಂದ್ರಾ ಅವರ ಸಾಧನೆಗೆ ಖೇಲ್‌ ರತ್ನ (2001), ಅರ್ಜುನ (2000), ಪದ್ಮ ಭೂಷಣ (2009) ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಬ್ಲೂ ಕ್ರಾಸ್‌’ ಪ್ರಶಸ್ತಿ

ಶೂಟಿಂಗ್​ ವಿಭಾಗದಲ್ಲಿ ನೀಡುವ ಪ್ರತಿಷ್ಠಿತ ‘ಬ್ಲೂ ಕ್ರಾಸ್‌’ ಪ್ರಶಸ್ತಿಯೂ ಬಿಂದ್ರಾಗೆ ಲಭಿಸಿದೆ. ‘ಬ್ಲೂ ಕ್ರಾಸ್‌’ ಎಂಬುದು ಇಂಟರ್‌ನ್ಯಾಶನಲ್‌ ಶೂಟಿಂಗ್‌ ಸ್ಪೋರ್ಟ್ಸ್ ಫೆಡರೇಶನ್‌ ನೀಡುವ ಅತ್ಯುನ್ನತ ಗೌರವವಾಗಿದೆ. ಈ ಪ್ರಶಸ್ತಿಗೆ ಭಾಜನರಾದ ಭಾರತದ ಮೊದಲ ಶೂಟರ್‌ ಎಂಬುದು ಅಭಿನವ್‌ ಬಿಂದ್ರಾ ಪಾಲಿನ ಹೆಗ್ಗಳಿಕೆ.

ಇದನ್ನೂ ಓದಿ Paris Olympics: ಅತಿ ಹೆಚ್ಚು ಒಲಿಂಪಿಕ್ಸ್ ಆತಿಥ್ಯ ವಹಿಸಿದ ದೇಶ ಯಾವುದು?

ನೀರಜ್​ ಮೇಲೆ ಮತ್ತೊಂದು ಚಿನ್ನ ನಿರೀಕ್ಷೆ


ಒಲಿಂಪಿಕ್ಸ್‌ನ ಟ್ರ್ಯಾಕ್‌ ಇವೆಂಟ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆ ಹೊಂದಿರುವ ಸ್ಟಾರ್​ ಜಾವೆಲಿನ್​ ಎಸೆತಗಾರ ನೀರಜ್​ ಚೋಪ್ರಾ ಮೇಲೆ ಈ ಬಾರಿಯ ಒಲಿಂಪಿಕ್ಸ್​ನಲ್ಲಿಯೂ ಚಿನ್ನದ ಪದಕ ನಿರೀಕ್ಷೆ ಮಾಡಲಾಗಿದೆ. ಟೋಕಿಯೊದಲ್ಲಿ 87.58ಮೀ ದೂರಕ್ಕೆ ಜಾವೆಲಿನ್​ ಎಸೆದು ಐತಿಹಾಸಿಕ ಚಿನ್ನ ಗೆದ್ದಿದ್ದರು. ಈ ಬಾರಿ 29 ಸದಸ್ಯರನ್ನು ಒಳಗೊಂಡ ಟ್ರ್ಯಾಕ್ ಆ್ಯಂಡ್ ಫೀಲ್ಡ್ ತಂಡಕ್ಕೆ ಚೋಪ್ರಾ ಅವರು ನಾಯಕನಾಗಿದ್ದಾರೆ.

ಇದನ್ನೂ ಓದಿ Olympic Games: ಒಲಿಂಪಿಕ್ಸ್​ನಲ್ಲಿ ಮಹಿಳೆಯರು ಮೊದಲ ಬಾರಿಗೆ ಸ್ಪರ್ಧಿಸಿದ್ದು ಯಾವಾಗ?

ನೀರಜ್​ ಚೋಪ್ರಾ ಕಳೆದ ವರ್ಷ ನಡೆದಿದ್ದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದರು. ಅಲ್ಲದೆ ಡೈಮಂಡ್ ಲೀಗ್​ನಲ್ಲಿ ಬೆಳ್ಳಿ ಗೆದ್ದಿದ್ದರು. ನೀರಜ್​ರ ಇದುವರೆಗಿನ ಶ್ರೇಷ್ಠ ನಿರ್ವಹಣೆ 89.94 ಮೀ. ದೂರ ಎಸೆದಿರುವುದು. ಈ ಎಸೆತವನ್ನು 2022ರ ಸ್ಟಾಕ್​ಹೋಮ್​ ಡೈಮಂಡ್​ ಲೀಗ್​ನಲ್ಲಿ ಎಸೆದಿದ್ದರು.

Continue Reading

ಪ್ರಮುಖ ಸುದ್ದಿ

Paris Olympics 2024 : ಪ್ಯಾರಿಸ್ ಒಲಿಂಪಿಕ್ಸ್ ಭದ್ರತೆಗಾಗಿ ಭಾರತೀಯ ಸೇನೆಯ ಶ್ವಾನದಳ!

Paris Olympics 2024 : ಸಿಆರ್​​ಪಿಎಫ್​ಗೆ ಸೇರಿತ ಭಾರತೀಯ ಕೆ 9 (ಶ್ವಾನ) ತಂಡಗಳು ಪ್ಯಾರಿಸ್ ಒಲಿಂಪಿಕ್ಸ್​​ನ ಉದ್ಘಾಟನಾ ಕಾರ್ಯಕ್ರಮಗಳನ್ನು ನಡೆಸುವ ವಿವಿಧ ಸ್ಥಳಗಳಲ್ಲಿ ಸ್ನಿಫಿಂಗ್ ಮತ್ತು ಗಸ್ತು ಕರ್ತವ್ಯಗಳನ್ನು ಕೈಗೊಳ್ಳಲಿವೆ. 196 ರಾಷ್ಟ್ರಗಳ ಕ್ರೀಡಾಪಟುಗಳು ಭಾಗವಹಿಸುವ 2024 ರ ಬೇಸಿಗೆ ಒಲಿಂಪಿಕ್ ಕ್ರೀಡಾಕೂಟ ಪೂರ್ಣಗೊಳ್ಳುವವರೆಗೆ ಈ ತಂಡ ಅಲ್ಲಿ ಇರಲಿದೆ.

VISTARANEWS.COM


on

Paris Olympics 2024
Koo

ಬೆಂಗಳೂರು: 2024ರ ಪ್ಯಾರಿಸ್ ಒಲಿಂಪಿಕ್ಸ್​ ವೇಳೆ ಕೋಟ್ಯಂತರ ಮಂದಿ ಸುಂದರ ನಗರ ಸೇರಿದಂತೆ ದೇಶದ ಏಳು ತಾಣಗಳಲ್ಲಿ ಜಮಾವಣೆಯಾಗಲಿದ್ದಾರೆ. ಇದೇ ವೇಳೆ ಜಾಗತಿಕವಾಗಿ ನಡೆಯುತ್ತಿರುವ ಕೆಲವೊಂದು ಅಹಿತಕರ ಘಟನೆಗಳು ಹಾಗೂ ದೇಶಗಳ ನಡುವಿನ ಸಂಘರ್ಷಗಳು ಕೂಟಕ್ಕೆ ಭದ್ರತೆಯ ಬೆದರಿಕೆಯನ್ನೊಡಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಭದ್ರತೆಗಾಗಿ ವಿದೇಶಗಳ ನೆರವು ಕೂಡ ಪಡೆಯಲಾಗುತ್ತಿದೆ. ಅಂತೆಯ ಭಾರತದ ಗಣ್ಯ ಶ್ವಾನದಳ ಮತ್ತು ಪ್ರಸಿದ್ಧ ‘ಕೆ -9’ ತಂಡವನ್ನು ಪ್ಯಾರಿಸ್​ನಲ್ಲಿ ನಿಯೋಜಿಸಲಾಗಿದೆ.

ಮುಂಬರುವ ಒಲಿಂಪಿಕ್ಸ್​ ಕ್ರೀಡಾಕೂಟದ ಭದ್ರತೆ ಒದಗಿಸಲು ಸಹಾಯ ಮಾಡಲು 10 ಸದಸ್ಯರ ಕೆ -9 ತಂಡವನ್ನು ಪ್ಯಾರಿಸ್​​ಗೆ ಒಂದು ತಿಂಗಳ ಅವಧಿಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ. ಸಿಆರ್​​ಪಿಎಫ್​ಗೆ ಸೇರಿತ ಭಾರತೀಯ ಕೆ 9 (ಶ್ವಾನ) ತಂಡಗಳು ಪ್ಯಾರಿಸ್ ಒಲಿಂಪಿಕ್ಸ್​​ನ ಉದ್ಘಾಟನಾ ಕಾರ್ಯಕ್ರಮಗಳನ್ನು ನಡೆಸುವ ವಿವಿಧ ಸ್ಥಳಗಳಲ್ಲಿ ಸ್ನಿಫಿಂಗ್ ಮತ್ತು ಗಸ್ತು ಕರ್ತವ್ಯಗಳನ್ನು ಕೈಗೊಳ್ಳಲಿವೆ. 196 ರಾಷ್ಟ್ರಗಳ ಕ್ರೀಡಾಪಟುಗಳು ಭಾಗವಹಿಸುವ 2024 ರ ಬೇಸಿಗೆ ಒಲಿಂಪಿಕ್ ಕ್ರೀಡಾಕೂಟ ಪೂರ್ಣಗೊಳ್ಳುವವರೆಗೆ ಈ ತಂಡ ಅಲ್ಲಿ ಇರಲಿದೆ.

ಒಲಿಂಪಿಕ್ಸ್ ಜುಲೈ 26 ರಿಂದ ಆಗಸ್ಟ್ 11 ರವರೆಗೆ ನಡೆಯಲಿದ್ದು, ವಿದೇಶಗಳ ಬೆದರಿಕೆಗಳನ್ನು ತಡೆಯಲು ಮತ್ತು ಸಾರ್ವಜನಿಕ ಸುವ್ಯವಸ್ಥೆ ಕಾಪಾಡಿಕೊಳ್ಳಲು ವ್ಯಾಪಕ ಭದ್ರತಾ ಕ್ರಮಗಳನ್ನು ಜಾರಿಗೆ ತರಲಾಗಿದೆ. ಫ್ರಾನ್ಸ್ ನೊಂದಿಗಿನ ಭಾರತದ ‘ಭದ್ರತಾ ಸಹಕಾರ’ ಯೋಜನೆಯಡಿ ಕೆ -9 ತಂಡವನ್ನು ನಿರ್ದಿಷ್ಟವಾಗಿ ಆಹ್ವಾನಿಸಲಾಗಿದೆ. ಪ್ಯಾರಿಸ್ ಒಲಿಂಪಿಕ್ಸ್​ಗೆ ಅರ್ಹತೆ ಪಡೆಯಲು ಭಾರತದ ಎಲೈಟ್ ಕೆ -9 ತಂಡವು ಸಹಾಯ ಮಾಡುತ್ತದೆ. ಇದು ಅವರ ಮೊದಲ ಅಂತಾರಾಷ್ಟ್ರೀಯ ಭದ್ರತಾ ಕರ್ತವ್ಯವಾಗಿದೆ. ಅಸಾಧಾರಣ ಕೌಶಲ್ಯಗಳಿಗೆ ಹೆಸರುವಾಸಿಯಾದ ತರಬೇತಿ ಪಡೆದ ಶ್ವಾನಗಳು ಕ್ರೀಡಾಕೂಟದ ಸುರಕ್ಷತೆ ಖಚಿತಪಡಿಸಿಕೊಳ್ಳುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿವೆ.

2024ರ ಪ್ಯಾರಿಸ್ ಒಲಿಂಪಿಕ್ಸ್​​ ಬಿಗಿ ಭದ್ರತೆ

ವಾಸ್ಟ್ ಮತ್ತು ಡೆನ್ಬಿ ಎಂಬ ಎರಡು ಶ್ವಾನಗಳು ಮತ್ತು ಅವುಗಳ ಹ್ಯಾಂಡ್ಲರ್​ಗಳು ಜುಲೈ 10, 2024 ರಂದು ಪ್ಯಾರಿಸ್​ಗೆ ತೆರಳಿದ್ದಾರೆ. ಒಲಿಂಪಿಕ್ಸ್​​ನ ನಾನಾ ಸ್ಥಳಗಳಲ್ಲಿ ಭದ್ರತೆ ಒದಗಿಸಲು ಆಯ್ಕೆಯಾದ 10 ಮಂದಿ ಕೆ 9 ತಂಡದ ಭಾಗವಾಗಿದ್ದಾರೆ. ಬ್ರಾಡ್ ಮತ್ತು ಡೆನ್ಬಿ ಕ್ರಮವಾಗಿ 5 ಮತ್ತು 3 ವರ್ಷ ವಯಸ್ಸಿನ ಬೆಲ್ಜಿಯಂನ ಶೆಫರ್ಡ್ ಮಾಲಿನೋಯಿಸ್ ಶ್ವಾನಗಳ . ನಿಯೋಜನೆಗೆ ಮೊದಲು ಅವರು 10 ವಾರಗಳ ಕಾಲ ಕಠಿಣ ಪರೀಕ್ಷೆ ಮತ್ತು ವಿಶೇಷ ತರಬೇತಿಗೆ ಒಳಗಾಗಿದ್ದರು. ಹ್ಯಾಂಡ್ಲರ್ ಗಳು ದೈಹಿಕ ತರಬೇತಿ ಮತ್ತು ಫ್ರೆಂಚ್ ಭಾಷಾ ತರಗತಿಗಳನ್ನು ಸಹ ಪಡೆದಿದ್ದಾರೆ. ಬೆಲ್ಜಿಯಂ ಶೆಫರ್ಡ್ ಮಾಲಿನೋಯಿಸ್ ತಳಿಯನ್ನು ವಿಶ್ವಾದ್ಯಂತ ಭದ್ರತಾ ಪಡೆಗಳು ಬಳಸಿಕೊಳ್ಳುತ್ತವೆ.

2024ರ ಪ್ಯಾರಿಸ್ ಒಲಿಂಪಿಕ್ಸ್​​ ಭಾರತದ ನಿಯೋಗ

2024ರ ಪ್ಯಾರಿಸ್ ಒಲಿಂಪಿಕ್ಸ್​ನಲ್ಲೂ ಭಾರತೀಯರು ಪದಕ ಗೆಲ್ಲಲಿದ್ದಾರೆ. ಕ್ರೀಡಾಕೂಟದಲ್ಲಿ ​​ ಭಾರತವನ್ನು 117 ಸದಸ್ಯರ ಬಲವಾದ ಅಥ್ಲೀಟ್ ತಂಡ ಪ್ರತಿನಿಧಿಸಲಿದ್ದು, ಟೋಕಿಯೊ ಒಲಿಂಪಿಕ್ಸ್ 2020ರಲ್ಲಿ ಏಳು ಪದಕಗಳ ಹಿಂದಿನ ದಾಖಲೆಯನ್ನು ಉತ್ತಮಪಡಿಸುವ ಭರವಸೆ ಹೊಂದಿದೆ.

2021 ರಲ್ಲಿ 121 ಕ್ರೀಡಾಪಟುಗಳು ಟೋಕಿಯೊಗೆ ಹೋದ ನಂತರ ಇದು ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತದ ಎರಡನೇ ಅತಿದೊಡ್ಡ ತಂಡವಾಗಿದೆ. ಒಟ್ಟು 47 ಮಹಿಳಾ ಮತ್ತು 70 ಪುರುಷ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾರತೀಯ ತಂಡದ ಭಾಗವಾಗಲಿದ್ದಾರೆ. ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ಗಳು 29 ಕ್ರೀಡಾಪಟುಗಳೊಂದಿಗೆ ಅತಿದೊಡ್ಡ ಪ್ರಾತಿನಿಧ್ಯ ಹೊಂದಿದ್ದರೆ, ಶೂಟರ್​ಗಳು 21 ಕ್ರೀಡಾಪಟುಗಳೊಂದಿಗೆ ಎರಡನೇ ಸ್ಥಾನ ಪಡೆದಿದ್ದಾರೆ.

Continue Reading

ಪ್ರಮುಖ ಸುದ್ದಿ

Paris Olympics 2024 : ಸಿಗರೇಟ್​ ಸೇದಿದ ಕಾರಣಕ್ಕೆ ಒಲಿಂಪಿಕ್ಸ್​ ಸರ್ಧೆಯ ಅವಕಾಶ ಕಳೆದುಕೊಂಡ ಜಪಾನ್​ ಮಹಿಳಾ ಜಿಮ್ನಾಸ್ಟಿಕ್ ಪಟು

Paris Olympics 2024 : ಮೊನಾಕೊದಲ್ಲಿನ ತಂಡದ ತರಬೇತಿ ಶಿಬಿರದಿಂದ ಮಿಯಾಟಾ ಅವರನ್ನು ಹೊರಕ್ಕೆ ಕಳುಹಿಸಲಾಗಿದೆ. ಅವರು ಗುರುವಾರ ಜಪಾನ್ ಗೆ ಆಗಮಿಸಿದ್ದು ತನಿಖೆ ಎದುರಿಸಲಿದ್ದಾರೆ ಎಂದು ಜೆಜಿಎ ಅಧಿಕಾರಿಗಳು ತಿಳಿಸಿದ್ದಾರೆ. ಅವರ ಮದ್ಯಪಾನ ನಿಯಂತ್ರಣ ನಿಯಮವನ್ನೂ ಉಲ್ಲಂಘನೆಯನ್ನೂ ಮಾಡಿದ್ದಾರೆ.

VISTARANEWS.COM


on

Paris Olympics 2024:
Koo

ಪ್ಯಾರಿಸ್​ : ಮುಂಬರುವ ಪ್ಯಾರಿಸ್​ ಒಲಿಂಪಿಕ್ಸ್​ಗಾಗಿ (Paris Olympics 2024) ಅಥ್ಲೀಟ್​ಗಳು ಸಜ್ಜಾಗುತ್ತಿವೆ. ಕ್ರೀಡಾಪಟುಗಳು ಸತತವಾಗಿ ಅಭ್ಯಾಸ ನಡೆಸುತ್ತಿದ್ದಾರೆ. ಅಂದ ಹಾಗೆ ಒಲಿಂಪಿಕ್ಸ್​ನಲ್ಲಿ ಪಾಲ್ಗೊಳ್ಳುವುದು ಕ್ರೀಡಾಪಟುವೊಬ್ಬರ ಉನ್ನತ ಆಸೆಯಾಗಿರುತ್ತದೆ. ಹೀಗಾಗಿ ತಮ್ಮ ಜೀವಮಾನದಲ್ಲಿ ಕಲಿತಿರುವ ಎಲ್ಲ ವಿದ್ಯೆಗಳನ್ನು ಈ ವೇದಿಕೆಯಲ್ಲಿ ಪ್ರಯೋಗಿಸುತ್ತಾರೆ. ಅಥ್ಲೀಟ್​ಗಳೀಗೆ ಸ್ಪರ್ಧೆಯಲ್ಲಿ ಭಾಗವಹಿಸಬೇಕಾದರೆ ನಿಯಮಗಳನ್ನು ಹೇಳಲಾಗುತ್ತದೆ. ಅದನ್ನು ಉಲ್ಲಂಘಿಸಿದರೆ ಅವರು ಸ್ಪರ್ಧಿಸುವ ಅವಕಾಶ ಕಳೆದುಕೊಳ್ಳುತ್ತಾರೆ. ಅಂತೆಯೇ ಜಪಾನ್ ಮಹಿಳಾ ಆರ್ಟಿಸ್ಟಿಕ್ ಜಿಮ್ನಾಸ್ಟಿಕ್ಸ್ ತಂಡದ ನಾಯಕಿ ಶೋಕೊ ಮಿಯಾಟಾ ಅವರು ಪ್ಯಾರಿಸ್ ಗೇಮ್ಸ್ ಗಾಗಿ ತಂಡದಿಂದ ಕ್ಷುಲ್ಲಕ ಕಾರಣಕ್ಕೆ ಹಿಂದೆ ಸರಿದಿದ್ದಾರೆ. ಅವರು ಕೂಟದ ನಿಯಮವನ್ನು ಉಲ್ಲಂಗಿಸಿ ಸಿಗರೇಟ್ ಸೇದಿದ್ದರು. ಹೀಗಾಗಿ ಅವರನ್ನು ವಾಪಸ್​ ಕಳುಹಿಸಲಾಗಿದೆ ಎಂದು ಜಪಾನಿನ ಜಿಮ್ನಾಸ್ಟಿಕ್ಸ್ ಅಸೋಸಿಯೇಷನ್ ಶುಕ್ರವಾರ ತಿಳಿಸಿದೆ.

ಮೊನಾಕೊದಲ್ಲಿನ ತಂಡದ ತರಬೇತಿ ಶಿಬಿರದಿಂದ ಮಿಯಾಟಾ ಅವರನ್ನು ಹೊರಕ್ಕೆ ಕಳುಹಿಸಲಾಗಿದೆ. ಅವರು ಗುರುವಾರ ಜಪಾನ್ ಗೆ ಆಗಮಿಸಿದ್ದು ತನಿಖೆ ಎದುರಿಸಲಿದ್ದಾರೆ ಎಂದು ಜೆಜಿಎ ಅಧಿಕಾರಿಗಳು ತಿಳಿಸಿದ್ದಾರೆ. ಅವರ ಮದ್ಯಪಾನ ನಿಯಂತ್ರಣ ನಿಯಮವನ್ನೂ ಉಲ್ಲಂಘನೆಯನ್ನೂ ಮಾಡಿದ್ದಾರೆ.

ಮಹಿಳಾ ತಂಡವು ಐದು ಕ್ರೀಡಾಪಟುಗಳ ಬದಲು ನಾಲ್ಕು ಕ್ರೀಡಾಪಟುಗಳೊಂದಿಗೆ ಸ್ಪರ್ಧಿಸಲಿದೆ ಎಂದು ಜೆಜಿಎ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದೆ. “ಘಟನೆಯ ಬಗ್ಗೆ ನಾವು ನಮ್ಮ ಹೃದಯದಾಳದಿಂದ ಕ್ಷಮೆಯಾಚಿಸುತ್ತೇವೆ” ಎಂದು ಜೆಜಿಎ ಅಧ್ಯಕ್ಷ ತಡಾಶಿ ಫ್ಯುಜಿಟಾ ಮಿಯಾಟಾ ಅವರ ವೈಯಕ್ತಿಕ ತರಬೇತುದಾರ ಮುತ್ಸುಮಿ ಹರಾಡಾ ಸೇರಿದಂತೆ ಇತರ ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: Trinity Golf Champions League : ಕಪಿಲ್ ದೇವ್​ ನೇತೃತ್ವದ ಟ್ರಿನಿಟಿ ಗಾಲ್ಫ್ ಚಾಂಪಿಯನ್ಸ್ ಲೀಗ್​​ನ 2ನೇ ಆವೃತ್ತಿಗೆ ಬೆಂಗಳೂರು ಆತಿಥ್ಯ

1964ರ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಗೆದ್ದ ಬಳಿಕ ಮೊದಲ ಬಾರಿಗೆ ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಪದಕ ಗೆಲ್ಲುವ ತವಕದಲ್ಲಿದ್ದ ಜಪಾನ್ ಮಹಿಳಾ ಜಿಮ್ನಾಸ್ಟಿಕ್ಸ್ ತಂಡದ ಮೇಲೆ ನಿರೀಕ್ಷೆ ಹೆಚ್ಚಿತ್ತು. ಆದರೆ ನಾಯಕಿಯೇ ನಿಯಮ ಉಲ್ಲಂಘನೆ ಮಾಡಿರುವ ಕಾರಣ ಅವರ ಪದಕದ ಸವಾಲು ಹೆಚ್ಚಾಗಿದೆ.

ಅಥ್ಲೀಟ್​​ ​ಗಳ ಕ್ರೀಡಾಗ್ರಾಮಕ್ಕೆ ಲಭಿಸಿತು ಅಧಿಕೃತ ಚಾಲನೆ

ಪ್ಯಾರಿಸ್: ವಿಶ್ವ ಮಟ್ಟದಲ್ಲಿ ಪ್ರಮುಖ ಕ್ರೀಡಾಕೂಟವಾದ ಒಲಿಂಪಿಕ್ಸ್ (Paris Olympics 2024) ಆರಂಭಕ್ಕೆ ಇನ್ನು ಕೇವಲ ಒಂದು ವಾರ ಮಾತ್ರ ಬಾಕಿ ಉಳಿದಿವೆ. ಕ್ರೀಡಾಕೂಟದ ಆತಿಥ್ಯ ವಹಿಸಿಕೊಂಡಿರುವ ಫ್ರಾನ್ಸ್​ ಸರ್ವ ಸನ್ನದ್ಧವಾಗಿದೆ. ಎಲ್ಲ ದೇಶದ ಕ್ರೀಡಾಪಟುಗಳು ಇದೀಗ ಫ್ರಾನ್ಸ್​ಗೆ ಆಗಮಿಸುತ್ತಿದ್ದಾರೆ. ಕ್ರೀಡಾಪಟುಗಳಿಗೆ ವಸತಿ ವ್ಯವಸ್ಥೆ ಹೊಂದಿರುವ ಕ್ರೀಡಾಗ್ರಾಮ ಅಧಿಕೃತವಾಗಿ(Paris Olympic Village) ತೆರೆದುಕೊಂಡಿದೆ. ಈ ಕ್ರೀಡಾಗ್ರಾಮವನ್ನು ಪ್ಯಾರಿಸ್​ನ ಉತ್ತರ ಭಾಗದಲ್ಲಿ ನಿರ್ಮಿಸಲಾಗಿದ್ದು, ಇದು ಗರಿಷ್ಠ 14,500 ಮಂದಿಗೆ ಅತಿಥ್ಯವಹಿಸಲು ಸಿದ್ಧವಾಗಿದೆ. ಆಸ್ಟ್ರೇಲಿಯ ಹಾಗೂ ಬ್ರೆಝಿಲ್ ತಮ್ಮ ತಂಡದ ಸದಸ್ಯರನ್ನು ಕ್ರೀಡಾಗ್ರಾಮಕ್ಕೆ ಕಳುಹಿಸಿಕೊಟ್ಟ ಮೊದಲ ದೇಶಗಳಾಗಿವೆ.

ಕ್ರೀಡಾಗ್ರಾಮವು ಕ್ರೀಡಾಪಟುಗಳಿಗೆ ವಿಶ್ರಾಂತಿ ಹಾಗೂ ಅವರ ಸ್ಪರ್ಧೆಗಳಿಗೆ ತಯಾರಿ ಮಾಡಲು ಆರಾಮದಾಯಕ ಹಾಗೂ ಸುರಕ್ಷಿತ ವಾತಾವರಣ ಒದಗಿಸುತ್ತದೆ. ಒಲಿಂಪಿಕ್ಸ್ ವಿಲೇಜ್, ಕ್ರೀಡಾಕೂಟ ಸಂಘಟಕರಿಗೆ ಹೆಮ್ಮೆಗೆ ಕಾರಣವಾಗಿದ್ದು, ಇದು ಒಂದು ವಿಶಿಷ್ಟ ವೈಶಿಷ್ಟವನ್ನು ಹೊಂದಿದೆ. ಗ್ರಾಮದ ನಿವಾಸಿಗಳಿಗೆ ಅರಾಮದಾಯಕವಾದ ತಾಪಮಾನ ನಿರ್ವಹಿಸಲು ಹವಾನಿಯಂತ್ರಣವನ್ನು ಅವಲಂಬಿಸಿಲ್ಲ. ಬೇಸಿಗೆಯ ಸಮಯದಲ್ಲಿ ಹೊರಭಾಗಕ್ಕಿಂತ ಕನಿಷ್ಠ 6 ಡಿಗ್ರಿ ಸೆಲ್ಸಿಯಸ್ ತಂಪಾಗಿರುವಂತೆ ಗ್ರಾಮದ ಒಳಭಾಗವನ್ನು ವಿನ್ಯಾಸಗೊಳಿಸಲಾಗಿದೆ.
ಎಲ್ಲ ಕ್ರೀಡಾಕೂಡ ಮುಕ್ತಾಯದ ಬಳಿಕ ಈ ಕ್ರೀಡಾಗ್ರಾಮದ ಒಳಗಿನ ಅಪಾರ್ಟ್ಮೆಂಟ್​ಗಳನ್ನು ವಸತಿಗಳಾಗಿ ಪರಿವರ್ತಿಸಲಾಗುತ್ತದೆ. ಕನಿಷ್ಠ ಮೂರನೇ ಒಂದು ಭಾಗವನ್ನು ಸಾರ್ವಜನಿಕ ವಸತಿ ಉದ್ದೇಶಗಳಿಗಾಗಿ ಮೀಸಲಿಡಲಾಗುತ್ತದೆ.

ಇದೇ ಮೊದಲ ಬಾರಿಗೆ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ “ಇಂಡಿಯಾ ಹೌಸ್” ಕಾಣಬಹುದಾಗಿದೆ. ಭಾರತೀಯ ಒಲಿಂಪಿಕ್ಸ್ ಒಕ್ಕೂಟದ (ಐಒಎ) ಸಹಭಾಗಿತ್ವ ವಹಿಸಿರುವಂಥ ರಿಲಯನ್ಸ್ ಫೌಂಡೇಷನ್ ನಿಂದ ಈ “ಇಂಡಿಯಾ ಹೌಸ್” ಪರಿಕಲ್ಪನೆ ಮೂಡಿದೆ. ಈ ಇಂಡಿಯಾ ಹೌಸ್ ನಲ್ಲಿ ಭಾರತದ ಕ್ರೀಡಾ ಸಂಸ್ಕೃತಿ- ಪರಂಪರೆಯನ್ನು ಪ್ರದರ್ಶಿಸಲಾಗುತ್ತದೆ. ಅದರಲ್ಲಿ ಕ್ರೀಡೆಗೆ ಸಂಬಂಧಿಸಿ ಭಾರತದ ಭೂತ- ಭವಿಷ್ಯತ್ ಹಾಗೂ ವರ್ತಮಾನದ ಸಾಧನೆ, ಕನಸುಗಳನ್ನು ಸಹ ತೋರಿಸಲಾಗುತ್ತದೆ. ತಂತ್ರಜ್ಞಾನ ಮತ್ತು ಡಿಜಿಟಲೈಸೇಷನ್ ನಲ್ಲಿ ಭಾರತದ ಸಾಧನೆಯನ್ನು ಜಗತ್ತಿನೆದುರು ತೆರೆದಿಡಲಾಗುತ್ತದೆ. ವಿಶ್ವದ ವಿವಿಧ ಅಥ್ಲೀಟ್ ಗಳು, ಗಣ್ಯರು, ಕ್ರೀಡಾ ಉತ್ಸಾಹಿಗಳು ಈ ಇಂಡಿಯಾ ಹೌಸ್ ಗೆ ಭೇಟಿ ನೀಡುವ ನಿರೀಕ್ಷೆ ಇದೆ. ಇನ್ನು ಭಾರತದ ನೀತಿಯನ್ನು ವ್ಯಾಖ್ಯಾನಿಸುವ ಏಕತೆ, ವೈವಿಧ್ಯತೆ ಮತ್ತು ಶ್ರೇಷ್ಠತೆಯನ್ನು ಸಾರುವುದಕ್ಕೂ ಇದು ಸಹಕಾರಿ ಆಗುತ್ತದೆ.

Continue Reading
Advertisement
Ishan Kishan
ಕ್ರಿಕೆಟ್21 seconds ago

Ishan Kishan: ಟೀಮ್​ ಇಂಡಿಯಾದಲ್ಲಿ ಇಶಾನ್ ಕಿಶನ್​ಗೆ ಬಾಗಿಲು ಬಂದ್​?

Krishan Kumar Daughter Tishaa Dies Of Cancer At 21
ಬಾಲಿವುಡ್9 mins ago

Krishan Kumar: ಕೇವಲ 21ನೇ ವಯಸ್ಸಿಗೆ ನಿಧನ ಹೊಂದಿದ ‘ಅನಿಮಲ್’ ಸಿನಿಮಾ ನಿರ್ಮಾಪಕನ ಮಗಳು

Indian Navy Recruitment
ಉದ್ಯೋಗ23 mins ago

Indian Navy Recruitment: ಭಾರತೀಯ ನೌಕಾ ಪಡೆಯಲ್ಲಿದೆ 741 ಹುದ್ದೆ; 10ನೇ ತರಗತಿ ಪಾಸಾದವರಿಗೂ ಇದೆ ಅವಕಾಶ

Microsoft Windows Outage
ಪ್ರಮುಖ ಸುದ್ದಿ29 mins ago

Microsoft Windows Outage: ಮೈಕ್ರೊಸಾಫ್ಟ್​​ ಸಮಸ್ಯೆ ; ಬೆಂಗಳೂರು ಸೇರಿದಂತೆ ದೇಶದ ವಿಮಾನ ನಿಲ್ದಾಣಗಳಲ್ಲಿ ಅಲ್ಲೋಲಕಲ್ಲೋಲ

Dengue Fever
ಬೆಂಗಳೂರು37 mins ago

Dengue Fever : ಡೆಂಗ್ಯೂ ಭೀತಿ- ಸೊಳ್ಳೆಗಳ ನಾಶಕ್ಕೆ ಫೀಲ್ಡಿಗಿಳಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

Hit and Run Case
Latest40 mins ago

Accident Video: ಸ್ಕೂಟರ್‌ಗೆ ಅಪ್ಪಳಿಸಿದ ಕಾರು; 30 ಅಡಿ ದೂರ ಎಗರಿ ಬಿದ್ದ ಮಹಿಳಾ ಕಾನ್‌ಸ್ಟೇಬಲ್‌

Indian Olympics History
ಕ್ರೀಡೆ48 mins ago

Indian Olympics History: ಭಾರತಕ್ಕೆ ಒಲಿಂಪಿಕ್ಸ್​ನಲ್ಲಿ ವೈಯಕ್ತಿಕ ಚಿನ್ನ ಗೆದ್ದ ಮೊದಲ ಸಾಧಕ ಅಭಿನವ್‌ ಬಿಂದ್ರಾ

Sexual Abuse
Latest52 mins ago

Sexual Abuse : ಬಿಸ್ಕೆಟ್‌ಗೆ ಆಸೆ ಪಟ್ಟು ಹೋಗಿದ್ದ ಪುಟ್ಟ ಬಾಲಕಿ ಕಾಮುಕನ ಕೈಗೆ ಸಿಕ್ಕಿ ಕೊಲೆಯಾದಳು

KPSC Recruitment 2024
ಕರ್ನಾಟಕ1 hour ago

KPSC Recruitment 2024: ಕೆಪಿಎಸ್‌ಸಿ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Dengue Fever
ಹಾಸನ1 hour ago

Dengue Fever: ಹಾಸನದಲ್ಲಿ ಡೆಂಗ್ಯೂಗೆ ಎಂಬಿಬಿಎಸ್‌ ವಿದ್ಯಾರ್ಥಿ ಬಲಿ; ಧಾರವಾಡದಲ್ಲಿ 5 ತಿಂಗಳ ಮಗು ಸಾವು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ4 hours ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ4 hours ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ1 day ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ1 day ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಟ್ರೆಂಡಿಂಗ್‌