Dhruva Sarja: 3 ವರ್ಷವಾದರೂ ʻಮಾರ್ಟಿನ್‌ʼ ಸಿನಿಮಾ ರಿಲೀಸ್‌ ಆಗಲು ತಡವಾಗಿದ್ದೇಕೆ? ನಿರ್ಮಾಪಕರಿಗೆ ಮೋಸ ಮಾಡಿದ್ಯಾರು? - Vistara News

ಸ್ಯಾಂಡಲ್ ವುಡ್

Dhruva Sarja: 3 ವರ್ಷವಾದರೂ ʻಮಾರ್ಟಿನ್‌ʼ ಸಿನಿಮಾ ರಿಲೀಸ್‌ ಆಗಲು ತಡವಾಗಿದ್ದೇಕೆ? ನಿರ್ಮಾಪಕರಿಗೆ ಮೋಸ ಮಾಡಿದ್ಯಾರು?

Dhruva Sarja: ನಿರ್ಮಾಪಕ ಉದಯ್ ಮೆಹ್ತಾ ನಿರ್ದೇಶಕರ ಸೂಚನೆ ಮೇರೆಗೆ ಈ ಚಿತ್ರದ ವಿಎಫ್ಎಕ್ಸ್​ನ ಜವಾಬ್ಧಾರಿಗಳನ್ನೆಲ್ಲ ಡಿಜಿಟಲ್ ಟೆರೇನ್ ಪ್ರೊಡಕ್ಷನ್ ಪ್ರೈ. ಲಿಮಿಟೆಡ್ ಸಂಸ್ಥೆಗೆ ವಹಿಸಿದ್ದರು. ಆದರೆ ಅಲ್ಲಿ ಆಗಿದ್ದೇ ಬೇರೆ.

VISTARANEWS.COM


on

Martin' movie delayed even after 3 years
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಧ್ರುವ ಸರ್ಜಾ (Dhruva Sarja) ಅಭಿನಯದ ʻಮಾರ್ಟಿನ್‌ʼ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಅಕ್ಟೋಬರ್ 11ರಂದು 5 ಭಾಷೆಗಳಲ್ಲಿ ತೆರೆಗೆ ಬರಲಿರುವ ಈ ಚಿತ್ರಕ್ಕೆ ಧ್ರುವ ಅವರ ಸ್ವಂತ ಸೋದರ ಮಾವ ಅರ್ಜುನ್‌ ಸರ್ಜಾ ಕತೆ ಕೊಟ್ಟು, ʻಮಾರ್ಟಿನ್‌ʼಗೆ ಬೆಂಬಲವಾಗಿ ನಿಂತಿದ್ದಾರೆ. ನಿರ್ಮಾಪಕ ಉದಯ್‌ ಮೆಹ್ತಾ ಸಾಕಷ್ಟು ಹಣ ಸುರಿದಿದ್ದಾರೆ. ಮೂರು ವರ್ಷವಾದರೂ ಸಿನಿಮಾ ನಾನಾ ಕಾರಣಕ್ಕೆ ತಡವಾಗುತ್ತಲೇ ಬಂತು. ಆ ಕಾರಣಗಳಲ್ಲಿ ಚಿತ್ರದ ವಿಎಫ್‌ಎಕ್ಸ್‌ ಕೆಲಸ ಕೂಡ ಒಂದು. ನಿರ್ಮಾಪಕ ಉದಯ್ ಮೆಹ್ತಾ ನಿರ್ದೇಶಕರ ಸೂಚನೆ ಮೇರೆಗೆ ಈ ಚಿತ್ರದ ವಿಎಫ್ಎಕ್ಸ್​ನ ಜವಾಬ್ಧಾರಿಗಳನ್ನೆಲ್ಲ ಡಿಜಿಟಲ್ ಟೆರೇನ್ ಪ್ರೊಡಕ್ಷನ್ ಪ್ರೈ. ಲಿಮಿಟೆಡ್ ಸಂಸ್ಥೆಗೆ ವಹಿಸಿದ್ದರು. ಆದರೆ ಅಲ್ಲಿ ಆಗಿದ್ದೇ ಬೇರೆ.

ಡಿಜಿಟಲ್ ಟೆರೇನ್ ಪ್ರೊಡಕ್ಷನ್ ಪ್ರೈ. ಲಿಮಿಟೆಡ್ ನ ಸತ್ಯ ರೆಡ್ಡಿ ಮತ್ತು ಸುನಿಲ್ ಕೇಳಿದಾಗೆಲ್ಲ ನಿರ್ಮಾಪಕ ಉದಯ್ ಮೆಹ್ತಾ ದುಡ್ಡು ಕೊಡುತ್ತಲೇ ಬಂದರು. ಎರಡೂವರೆ ಕೋಟಿ ಹಣವನ್ನು ಈ ಸತ್ಯ ರೆಡ್ಡಿ ಮತ್ತು ಸುನಿಲ್ ಎಂಬುವರ ಮೇಲೆ ಸುರಿದರೂ ಕೆಲಸ ಮಾತ್ರ ಆಗಲಿಲ್ಲ. ಹಣದ ವ್ಯವಹಾರದ ದಾಖಲೆ ಸಮೇತ ಬೆಂಗಳೂರಿನ ಬಸವೇಶ್ವರ ನಗರ ಠಾಣೆ ಮೆಟ್ಟಿಲೇರಿದ ನಿರ್ಮಾಪಕ ಉದಯ್ ಮೆಹ್ತಾ, ವಂಚಕರಾದ ಸತ್ಯ ರೆಡ್ಡಿ ಮತ್ತು ಸುನಿಲ್ ವಿರುದ್ದ ದೂರು ಸಲ್ಲಿಸಿದ್ದಾರೆ.

ಇದನ್ನೂ ಓದಿ: Ram Pothineni: `ಡಬಲ್ ಇಸ್ಮಾರ್ಟ್’ ಸಿನಿಮಾದ ಎರಡನೇ ಹಾಡು ರಿಲೀಸ್!

ಉದಯ್ ಮೆಹ್ತಾ ನೀಡಿದ್ದ ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಸದ್ಯಕ್ಕೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ತಲೆಮರೆಸಿಕೊಂಡಿದ್ದ ಸತ್ಯ ರೆಡ್ಡಿಯನ್ನು ಬಂಧಿಸಿದ್ದಾರೆ.

ಉದಯ್ ಮೆಹ್ತಾ, 2.5 ಕೋಟಿ ಲಾಸ್ ಆಗಿದ್ದಷ್ಟೇ ಅಲ್ಲದೇ ಸಿನಿಮಾ 6 ತಿಂಗಳಿಗೂ ಹೆಚ್ಚು ಕಾಲ ತಡವಾಗಿದೆ ಎಂದಿದ್ದಾರೆ. ಇಷ್ಟಾದರೂ ಇದೀಗ ಸಿನಿಮಾ ಅಕ್ಟೋಬರ್ ಹನ್ನೊಂದಕ್ಕೆ ಮಿಂಚಲು ರೆಡಿಯಾಗಿದೆ.

ಮಾರ್ಟಿನ್ ಚಿತ್ರಕ್ಕೆ ಮಣಿ ಶರ್ಮಾ ಅವರ ಸಂಗೀತ ಮತ್ತು ಸತ್ಯ ಹೆಗಡೆ ಅವರ ಛಾಯಾಗ್ರಹಣವಿದೆ. ಮಾರ್ಟಿನ್‌ ಸಿನಿಮಾದಲ್ಲಿ ಕನ್ನಡದ ಕಲಾವಿದರ ಜತೆಗೆ ಹಿಂದಿ, ತೆಲುಗು, ತಮಿಳು ಚಿತ್ರರಂಗದ ಕಲಾವಿದರು ನಟಿಸಿದ್ದಾರೆ. ಅಚ್ಯುತ್‌ ಕುಮಾರ್‌, ನಿಕಿತನ್‌ ಧೀರ್‌, ನವಾಬ್‌ ಶಾ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿದ್ದಾರೆ. ‘ಧೀರನ್‌ ಅಧಿಕಾರಂ ಒಂಡ್ರು’ತಮಿಳು ಚಿತ್ರದ ಮೂಲಕ ಗಮನ ಸೆಳೆದಿದ್ದ ನಟ ರೋಹಿತ್‌ ಪಾಠಕ್‌ ಸಹ ‘ಮಾರ್ಟಿನ್‌’ನಲ್ಲಿ ಬಹು ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Tharun Sudhir: ಮದುವೆ ಡೇಟ್‌ ಚೇಂಜ್‌ ಮಾಡಬೇಡ, ನಾನು ಬರ್ತೀನಿ ಅಂದ್ರು ದರ್ಶನ್‌ ಎಂದ ತರುಣ್​ ಸುಧೀರ್

Tharun Sudhir: ಕೆಲವೇ ದಿನಗಳಲ್ಲಿ ತರುಣ್​ ಸುಧೀರ್​ ಅವರು ನಟಿ ಸೋನಲ್​ ಮಾಂಥೆರೋ ಜೊತೆ ಮದುವೆ ಆಗಲಿದ್ದಾರೆ. ಆ ಮದುವೆಗೆ ತಾವು ಕೂಡ ಬರುವುದಾಗಿ ದರ್ಶನ್​ ಭರವಸೆ ನೀಡಿದ್ದಾರೆ ಎಂದು ತರುಣ್​ ಹೇಳಿದ್ದಾರೆ.

VISTARANEWS.COM


on

Tharun Sudhir says Darshan Will Attend My Marriage
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ಪರಪ್ಪನ (Actor Darshan) ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ (Tharun Sudhir) ಹಾಗೂ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ. ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ನೀಡಿದೆ. ಕೊಲೆ ಪ್ರಕರಣದಲ್ಲಿ ಜೈಲನಲ್ಲಿರುವ ದರ್ಶನ್ ಅವರನ್ನು ʻಕಾಟೇರʼ ನಿರ್ದೇಶಕ ತರುಣ್ ಸುಧೀರ್ (Tharun Sudhir) ಭೇಟಿ ಮಾಡಿದ್ದಾರೆ. ಕೆಲವೇ ದಿನಗಳಲ್ಲಿ ತರುಣ್​ ಸುಧೀರ್​ ಅವರು ನಟಿ ಸೋನಲ್​ ಮಾಂಥೆರೋ ಜೊತೆ ಮದುವೆ ಆಗಲಿದ್ದಾರೆ. ಆ ಮದುವೆಗೆ ತಾವು ಕೂಡ ಬರುವುದಾಗಿ ದರ್ಶನ್​ ಭರವಸೆ ನೀಡಿದ್ದಾರೆ ಎಂದು ತರುಣ್​ ಹೇಳಿದ್ದಾರೆ.

ʻʻದರ್ಶನ್‌ ಅವರಿಗೆ ಸ್ವಲ್ಪ ಹುಷಾರಿಲ್ಲ. ರಿಕವರ್‌ ಆಗುತ್ತ ಇದ್ದಾರೆ. ನನ್ನ ನೋಡಿದಾಗ ಯಾವ ಸ್ಮೈಲ್‌ ಅಲ್ಲಿ ನೋಡುತ್ತಿದ್ದು ಅದೇ ನಗುವಿನಲ್ಲಿ ಇಂದು ನೋಡಿದರು. ಅವರಗಿಂತ ನಾವೇ ವೀಕ್‌ ಆಗಿದ್ದೇವೆ. ನನ್ನ ಮದುವೆ ಬಗ್ಗೆ ದರ್ಶನ್​ ಅವರಿಗೆ ಮೊದಲೇ ಗೊತ್ತಿತ್ತು. ಈ ವಿಚಾರದಲ್ಲಿ ನನಗೆ ಮೊದಲಿನಿಂದಲೂ ತೊಳಲಾಟ ಇತ್ತು. ಯಾವುದೇ ಕಾರಣಕ್ಕೂ ಮದುವೆ ದಿನಾಂಕ ಬದಲಾಯಿಸಬೇಡ ಅಂತ ಅವರು ಹೇಳಿದ್ದಾರೆ. ನಾನು ಬಂದೇ ಬರ್ತೀನಿ ಎನ್ನುವ ನಂಬಿಕೆ ಅವರಲ್ಲಿ ಇದೆ. ಅವರು ಏನು ತಪ್ಪು ಮಾಡಿಲ್ಲ ಎನ್ನುವ ನಂಬಿಕೆ ನಮಗೂ ಇದೆ ಎಂದರು.

ದರ್ಶನ್ ಜೈಲು ಪಾಲಾದ ನಂತರ ಮೊದಲ ಬಾರಿಗೆ ತರುಣ್ ಸುಧೀರ್ ಭೇಟಿ ಮಾಡಿದ್ದಾರೆ. ತರುಣ್ ಸುಧೀರ್ ಲವ್ ಸ್ಟೋರಿ ಟ್ರ್ಯಾಕ್‌ಗೆ ತಂದಿದ್ದೆ ದರ್ಶನ್. ತರುಣ್ ಹಾಗೂ ನಟಿ ಸೋನಲ್ ಮದುವೆಗೆ ದರ್ಶನ್ ಮುದ್ರೆ ಒತ್ತಿದ್ದರು. ದರ್ಶನ್ ಇಲ್ಲದೆ ಮದುವೆಯನ್ನು ಮುಂದಕ್ಕೆ ಹಾಕಲು ತರುಣ್ ಸಜ್ಜಾಗಿದ್ದರು ಎನ್ನಲಾಗಿತ್ತು. ಹಿರಿಯರ ಸಲಹೆ ನಂತರ ತರುಣ್‌ ಮುದುವೆಗೆ ಮುಂದಾಗಿದ್ದಾರೆ. ಅಗಸ್ಟ್ 10,11ಕ್ಕೆ ತರುಣ್ ,ಸೋನಾಲ್ ಮದುವೆಗೆ ಮುಹೂರ್ತ ಫಿಕ್ಸ್ ಆಗಿದೆ.

ಇದನ್ನೂ ಓದಿ: Dhruva Sarja: 3 ವರ್ಷವಾದರೂ ʻಮಾರ್ಟಿನ್‌ʼ ಸಿನಿಮಾ ರಿಲೀಸ್‌ ಆಗಲು ತಡವಾಗಿದ್ದೇಕೆ? ನಿರ್ಮಾಪಕರಿಗೆ ಮೋಸ ಮಾಡಿದ್ಯಾರು?

ನಟಿ ಸೋನಾಲ್ ಮಂಥೆರೊ (sonal monteiro) ಹಾಗೂ ನಿರ್ದೇಶಕ ತರುಣ್ ಸುಧೀರ್ (Tharun Sudhir) ಮದುವೆಯಾಗಲಿದ್ದಾರೆ ಎಂದು ಬಹಳ ದಿನಗಳಿಂದ ಸುದ್ದಿ ಆಗುತ್ತಲೇ ಇದೆ. ಈ ಮುಂಚೆ ತರುಣ್‌ ಸುಧೀರ್‌ ಅವರ ತಾಯಿ ಮದುವೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದಿದ್ದಾರೆ. ಈಗ ಆಷಾಢ ಬಂತು. ಮಾತಾಡಲು ಆಗಲ್ಲ. ಆಷಾಢ ಮುಗಿದ್ಮೇಲೆ ಮಾತುಕತೆ ಮಾಡಬೇಕು ಅಂದಿದ್ದರು.

ರಾಬರ್ಟ್’ ಚಿತ್ರದಲ್ಲಿ ಸೋನಲ್ ಕಾಣಿಸಿಕೊಂಡಿದ್ದರು. ಈ ಸಿನಿಮಾ ಶೂಟಿಂಗ್ ಸಮಯದಲ್ಲೇ ತರುಣ್- ಸೋನಲ್ ನಡುವೆ ಪ್ರೀತಿ ಹುಟ್ಟಿತ್ತು ಎಂದು ಹೇಳಲಾಗುತ್ತಿದೆ. ಇನ್ನು ದರ್ಶನ್‌ ಕೂಡ ಆಗಾಗ ತರುಣ್‌ಗೆ ಮದುವೆ ಮಾಡಿಸಬೇಕು ಎನ್ನುತ್ತಿದ್ದರಂತೆ. ಹಾಗಾಗಿ ಶೂಟಿಂಗ್‌ ಸೆಟ್‌ನಲ್ಲಿ ತರುಣ್- ಸೋನಲ್ ಇಬ್ಬರನ್ನು ತಮಾಷೆಯಾಗಿ ರೇಗಿಸುತ್ತಿದ್ದರು, ಇದೇ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಮೂಡಿರಬಹುದು ಎನ್ನಲಾಗಿದೆ.

ಚೌಕ’ ಚಿತ್ರದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದ ತರುಣ್ ಮುಂದೆ ಒಂದರ ಹಿಂದೆಯಂತೆ ಎರಡು ಹಿಟ್ ಸಿನಿಮಾಗಳನ್ನು ಕೊಟ್ಟರು. ಇದೀಗ ತರುಣ್ 4ನೇ ಸಿನಿಮಾ ತಯಾರಿಯಲ್ಲಿದ್ದಾರೆ.

Continue Reading

ಸ್ಯಾಂಡಲ್ ವುಡ್

Vaibhavi Jagdish: ಬೋಲ್ಡ್‌ ಫೋಟೊ ಹಂಚಿಕೊಂಡು ಕಮೆಂಟ್‌ ಸೆಕ್ಷನ್‌ ಆಫ್‌ ಮಾಡಿದ ಜೈ ಜಗದೀಶ್ ಪುತ್ರಿ!

Vaibhavi Jagdish: ಈ ಪೋಸ್ಟ್‌ಗೆ ವೈಭವಿ ಜಗದೀಶ್ ಕಮೆಂಟ್ಸ್ ಆಫ್‌ ಮಾಡಿಟ್ಟಿದ್ದಾರೆ. ತಂದೆ ಭಯದಿಂದ ಆಫ್ ಮಾಡಿರಬೇಕು ಎಂದು ಕೆಲವರು ಹೇಳಿದ್ದರೆ.ಕೊರೋನಾ ಲಾಕ್‌ಡೌನ್‌ ಸಮಯದ ನಂತರ ಫಿಟ್ನೆಸ್‌ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದ ಈ ಸುಂದರಿ ಸಿಕ್ಕಾಪಟ್ಟೆ ಸಣ್ಣಗಾಗಿದ್ದಾರೆ.

VISTARANEWS.COM


on

Vaibhavi Jagdish Bold Photo shoot
Koo

ಕನ್ನಡದ ಹಿರಿಯ ನಟ ಜೈ ಜಗದೀಶ್ ಪುತ್ರಿ ವೈಭವಿ ಜಗದೀಶ್ (Vaibhavi Jagdish) ಆಗಾಗ ಬೋಲ್ಡ್‌ ಫೋಟೊಶೂಟ್‌ ಮಾಡಿಸಿಕೊಳ್ಳುತ್ತಿರುತ್ತಾರೆ.

ಕೊರೋನಾ ಲಾಕ್‌ಡೌನ್‌ ಸಮಯದ ನಂತರ ಫಿಟ್ನೆಸ್‌ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದ ಈ ಸುಂದರಿ ಸಿಕ್ಕಾಪಟ್ಟೆ ಸಣ್ಣಗಾಗಿದ್ದಾರೆ. ಇದೀಗ ಬಟ್ಟೆಯ ಜಿಪ್‌ ತೆಗೆದು ಫೋಟೋ ಕೊಟ್ಟಿರುವುದು ಸೆನ್ಸೇಷನ್ ಕ್ರಿಯೇಟ್ ಮಾಡುತ್ತಿದೆ.

ಇದನ್ನೂ ಓದಿ: The Birthday Boy: ಹೆಸರು ಬದಲಾಯಿಸಿ ಕದ್ದು ಮುಚ್ಚಿ ಸಿನಿಮಾ ಮಾಡಿ, ಮಾಸ್ಕ್‌ ಧರಿಸಿ ಬಂದ ನಿರ್ದೇಶಕ! ಏನು ಕಥೆ?

ವೈಭವಿ ಜಗದೀಶ್‌ ಸಹ ಸಿನಿಮಾಗಳಲ್ಲಿ ನಟಿಸಿದ್ದಾರೆ. ಈಗಾಗಲೇ ಸಿನಿರಂಗಕ್ಕೆ ಪರಿಚಯವಿರುವ ವೈಭವಿಗೆ ಬಾಲಿವುಡ್‌ನಿಂದ ಆಫರ್‌ ಬರಬಹುದು ಎನ್ನುತ್ತಿದ್ದಾರೆ ಅಭಿಮಾನಿಗಳು. ಕುರಿಗಳು ಸಾರ್ ಕುರಿಗಳು ಮತ್ತು ಕತ್ತೆಗಳು ಸಾರ್ ಕತ್ತೆಗಳು ಸಿನಿಮಾದಲ್ಲಿ ವೈಭವಿ ಜಗದೀಶ್ ಬಾಲ ನಟಿಯಾಗಿ ನಟಿಸಿದ್ದಾರೆ.

ಈ ಪೋಸ್ಟ್‌ಗೆ ವೈಭವಿ ಜಗದೀಶ್ ಕಮೆಂಟ್ಸ್ ಆಫ್‌ ಮಾಡಿಟ್ಟಿದ್ದಾರೆ. ತಂದೆ ಭಯದಿಂದ ಆಫ್ ಮಾಡಿರಬೇಕು ಎಂದು ಕೆಲವರು ಹೇಳಿದ್ದರೆ.

Continue Reading

ಸ್ಯಾಂಡಲ್ ವುಡ್

Kannada Actress: `ಬ್ಯಾಕ್‍ ಬೆಂಚರ್ಸ್’ ಬಿಡುಗಡೆಗೂ ಮುನ್ನವೇ ಹಲವು ಅವಕಾಶಗಳು ಈ ನಟಿಗೆ!

Kannada Actress: ಇಂಜಿನಿಯರಿಂಗ್‍ ಮುಗಿಸಿರುವ ಮಾನ್ಯ, ‘ಬ್ಯಾಕ್‍ ಬೆಂಚರ್ಸ್’ ಚಿತ್ರದ ನಾಯಕಿಯರಲ್ಲೊಬ್ಬರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಮಾಯ ಎಂಬ ಪಾತ್ರವನ್ನು ನಿರ್ವಹಿಸಿರುವ ಅವರು, ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ.

VISTARANEWS.COM


on

Kannada Actress Many opportunities for this actress before the release Back Benchers'!
Koo

ಬೆಂಗಳೂರು: ರಾಜಶೇಖರ್ ನಿರ್ಮಿಸಿ-ನಿರ್ದೇಶಿಸಿರುವ ‘ಬ್ಯಾಕ್‍ ಬೆಂಚರ್ಸ್’ಚಿತ್ರವು ಇದೇ ಜುಲೈ 19 ರಾಜ್ಯಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಚಿತ್ರದ ಮೂಲಕ ರಂಜನ್, ಜತಿನ್ ಆರ್ಯನ್, ಆಕಾಶ್ ಎಂ.ಪಿ, ಶಶಾಂಕ್ ಸಿಂಹ, ಕುಂಕುಮ್‍, ಅನುಷಾ ಸುರೇಶ್, ವಿಯೋಮಿ ವನಿತಾ ಸೇರಿದಂತೆ ಹಲವು ಯುವ ಪ್ರತಿಭೆಗಳು ಕನ್ನಡ ಚಿತ್ರರಂಗಕ್ಕೆ ಹೊಸದಾಗಿ ಪರಿಚಯವಾಗುತ್ತಿದ್ದಾರೆ. ಈ ಪೈಕಿ ಮಾನ್ಯ ಗೌಡ ಸಹ ಒಬ್ಬರು.

ಇಂಜಿನಿಯರಿಂಗ್‍ ಮುಗಿಸಿರುವ ಮಾನ್ಯ, ‘ಬ್ಯಾಕ್‍ ಬೆಂಚರ್ಸ್’ ಚಿತ್ರದ ನಾಯಕಿಯರಲ್ಲೊಬ್ಬರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಮಾಯ ಎಂಬ ಪಾತ್ರವನ್ನು ನಿರ್ವಹಿಸಿರುವ ಅವರು, ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ.

‘ಬ್ಯಾಂಕ್‍ ಬೆಂಚರ್ಸ್’ ಚಿತ್ರದ ಕುರಿತು ಮಾತನಾಡುವ ಅವರು, ‘ಮೂರು ವರ್ಷಗಳ ಹಿಂದೆ ನಾನು ಇಂಜಿನಿಯರಿಂಗ್‍ ಮುಗಿಸಿದೆ. ನನಗೆ ಬಾಲ್ಯದಿಂದಲೂ ನಟನೆಯ ಬಗ್ಗೆ ಆಸಕ್ತಿ ಇತ್ತು. ಶಾಸ್ತ್ರೀಯ ನೃತ್ಯ ಕಲಿತಿದ್ದೇನೆ. ರಂಗಭೂಮಿಯಲ್ಲಿ ಸಕ್ರಿಯವಾಗಿದ್ದೆ. ಹೀಗಿರುವಾಗಲೇ ‘ಬ್ಯಾಕ್‍ ಬೆಂಚರ್ಸ್’ ಚಿತ್ರಕ್ಕೆ ಆಡಿಷನ್‍ ಆಗುತ್ತಿರುವ ವಿಷಯ ಗೊತ್ತಾಯಿತು. ಆ ಆಡಿಷನ್‍ನಲ್ಲಿ ಭಾಗವಹಿಸಿದ್ದೆ. ಇದರಲ್ಲಿ ಸುಮಾರು 700 ಯುವಕ-ಯುವತಿಯರು ಭಾಗವಹಿಸಿದ್ದರು. ನಿರ್ದೇಶಕರು ಕೊಟ್ಟ ಕೆಲವು ದೃಶ್ಯಗಳನ್ನು ನಾನು ನನ್ನದೇ ರೀತಿಯಲ್ಲಿ ಅಭಿನಯಿಸಿ ತೋರಿಸಿದೆ. ಅಷ್ಟೊಂದು ಜನರ ಮಧ್ಯೆ ನಾನು ಆಯ್ಕೆಯಾಗುತ್ತೀನೋ ಇಲ್ಲವೋ ಎಂಬ ಅನುಮಾನ ಇತ್ತು. ಆದರೆ, ಅಂತಿಮವಾಗಿ ಚಿತ್ರತಂಡಕ್ಕ ಆಯ್ಕೆಯಾದ 30 ಜನರಲ್ಲಿ ನಾನು ಒಬ್ಬಳಾಗಿದ್ದೆ’ ಎನ್ನುತ್ತಾರೆ ಮಾನ್ಯ.

ಇದನ್ನೂ ಓದಿ: Ram Pothineni: `ಡಬಲ್ ಇಸ್ಮಾರ್ಟ್’ ಸಿನಿಮಾದ ಎರಡನೇ ಹಾಡು ರಿಲೀಸ್!

ಇದನ್ನೂ ಓದಿ: Ram Pothineni: `ಡಬಲ್ ಇಸ್ಮಾರ್ಟ್’ ಸಿನಿಮಾದ ಎರಡನೇ ಹಾಡು ರಿಲೀಸ್!

ಆಡಿಷನ್‍ ಮುಗಿದ ಮೇಲೆ ನಟ-ನಿರ್ದೇಶಕ ಸುಚೇಂದ್ರ ಪ್ರಸಾದ್‍, ಆಯ್ಕೆಯಾದ 30 ಜನರಿಗಾಗಿ ಒಂದು ಕಾರ್ಯಾಗಾರ ಮಾಡಿದ್ದಾರೆ. ಅದರಲ್ಲಿ ಚಿತ್ರ ನಟನೆ ಕುರಿತು ಹಲವು ವಿಷಯಗಳನ್ನು ಹೇಳಿಕೊಟ್ಟಿದ್ದಾರೆ. ಆ ನಂತರ ಆರು ತಿಂಗಳ ಕಾಲ ಸಾಕಷ್ಟು ರಿಹರ್ಸಲ್‍ ಮಾಡಿ, ನಂತರ ಚಿತ್ರತಂಡವು ಚಿತ್ರೀಕರಣಕ್ಕೆ ಹೊರಟಿದೆ.

ಚಿತ್ರೀಕರಣದ ಅನುಭವ ಮರೆಯಲಾಗದ್ದು ಎನ್ನುವ ಮಾನ್ಯ, ‘ನಾನು ಹೊಸಬಳು. ಹಾಗಾಗಿ ಸಹಜವಾಗಿಯೇ ನರ್ವಸ್‍ ಆಗಿದ್ದೆ. ಆದರೆ, ನಮ್ಮ ನಿರ್ದೇಶಕರಾದ ರಾಜಶೇಖರ್ ಮತ್ತು ಛಾಯಾಗ್ರಾಹಕ ಮನೋಹರ್ ಜೋಷಿ ನನಗೂ ಸೇರಿದಂತೆ ಎಲ್ಲರಿಗೂ ಬಹಳ ಚೆನ್ನಾಗಿ ಗೈಡ್‍ ಮಾಡಿದ್ದಾರೆ. ನನಗೆ ತುಂಬಾ ಚೆನ್ನಾಗಿ ಹೇಳಿಕೊಟ್ಟಿರುವುದಷ್ಟೇ ಅಲ್ಲ, ನನ್ನನ್ನು ಬಹಳ ಚೆನ್ನಾಗಿ ತೆರೆಯ ಮೇಲೆ ತೋರಿಸಿದ್ದಾರೆ. ಬರೀ ನಟನೆ ಅಷ್ಟೇ ಅಲ್ಲ, ಚಿತ್ರದ ಪೋಸ್ಟ್ ಪ್ರೊಡಕ್ಷನ್‍ ಮತ್ತು ಮಾರ್ಕೆಟಿಂಗ್‍ ವಿಭಾಗಗಳಲ್ಲೂ ತೊಡಗಿಸಿಕೊಂಡಿದ್ದೇನೆ. ಒಟ್ಟಾರೆ ಈ ಚಿತ್ರದ ಮೂಲಕ ಸಾಕಷ್ಟು ವಿಷಯಗಳನ್ನು ಕಲಿತಿದ್ದೇನೆ. ಅವರಿಗೆ ನಾನು ಸದಾ ಋಣಿ’ ಎನ್ನುತ್ತಾರೆ.

ತಮ್ಮ ಪಾತ್ರದ ಬಗ್ಗೆ ಮಾತನಾಡುವ ಮಾನ್ಯ. ‘ಚಿತ್ರದಲ್ಲಿ ನಾಲ್ಕು ಪ್ರಮುಖ ನಾಯಕಿಯರ ಪಾತ್ರ ಇದೆ. ರಿಹರ್ಸಲ್‍ ಸಮಯದಲ್ಲಿ ಈ ನಾಲ್ಕೂ ಪಾತ್ರಗಳನ್ನು ಮಾಡಿದ್ದೆ. ಅದರಲ್ಲಿ ನನಗೆ ಮಾಯ ಪಾತ್ರ ಬಹಳ ಇಷ್ಟವಾದ ಪಾತ್ರ. ಈ ಪಾತ್ರ ನನಗೆ ಸೂಟ್‍ ಆಗುತ್ತದೆ, ನಾನಿದನ್ನು ನಿಭಾಯಿಸಬಲ್ಲೆ ಎಂಬ ನಂಬಿಕೆಯಿಂದ ಈ ಪಾತ್ರ ಕೊಟ್ಟಿದ್ದಾರೆ. ನಾನಿಲ್ಲಿ ಬಜಾರಿಯಾಗಿ ಕಾಣಿಸಿಕೊಂಡಿದ್ದೇನೆ. ಬಹಳ ಬೋಲ್ಡ್ ಆದ ಪಾತ್ರ ಇದು. ನನಗಿಷ್ಟವಾದ ಪಾತ್ರ ಸಿಕ್ಕ ಖುಷಿ ಇದೆ. ಅದು ಎಲ್ಲರಿಗೂ ಇಷ್ಟವಾಗುತ್ತದೆ ಎಂಬ ನಂಬಿಕೆ ಇದೆ’ ಎನ್ನುತ್ತಾರೆ ಮಾನ್ಯ.

‘ಬ್ಯಾಕ್‍ ಬೆಂಚರ್ಸ್’ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿರುವ ಮಾನ್ಯ, ಅದರ ಬಿಡುಗಡೆಗೆ ಕಾದಿದ್ದಾರೆ. ಈ ಮಧ್ಯೆ, ‘ಮಾನ್ಸೂನ್ ರಾಗ’ ಮತ್ತು ‘ವೀರಂ’ ಚಿತ್ರಗಳಲ್ಲೂ ನಟಿಸಿದ್ದಾರೆ. ಜೊತೆಗೆ ತೆಲುಗಿನಲ್ಲಿ ‘ಮಿಸಸ್ ಕರ್ನಲ್‍’ ಎಂಬ ಚಿತ್ರದಲ್ಲಿ ನಟಿಸಿದ್ದಾರಂತೆ. ಈ ಮಧ್ಯೆ, ಒಂದಿಷ್ಟು ಪಾತ್ರಗಳು ಹುಡುಕಿಕೊಂಡು ಬರುತ್ತಿದ್ದು, ‘ಬ್ಯಾಕ್‍ ಬೆಂಚರ್ಸ್‍’ ಬಿಡುಗಡೆಯಾದ ಮೇಲೆ ನೋಡಿಕೊಂಡು ತೀರ್ಮಾನಿಸುವುದಾಗಿ ಮಾನ್ಯ ಹೇಳುತ್ತಾರೆ.

Continue Reading

ಸಿನಿಮಾ

Kiccha Sudeep: ಸೆಲ್ಫಿಗಾಗಿ 2 ಗಂಟೆ ಕಾದ ಅಭಿಮಾನಿಗೆ ಕಿಚ್ಚ ಸುದೀಪ್ ಅವಮಾನ! ವಿಡಿಯೊ ನೋಡಿ

Kiccha Sudeep: ಕಿಚ್ಚ ಸುದೀಪ್‌ ಬಗ್ಗೆ ಅವರ ಅಭಿಮಾನಿಯೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಏರ್‌ಪೋರ್ಟ್‌ನಲ್ಲಿ 2 ಗಂಟೆ ಕಾದು ಸೆಲ್ಫಿ ಕೇಳಿದ್ದರೆ, 5 ಸೆಕೆಂಡ್‌ ನಿಂತು ಅಭಿಮಾನಿಗಳಿಗೆ ಫೋಟೊ ಕೊಡಲು ಆಗುವುದಿಲ್ಲ ಎಂದರೆ ಇವರೆಲ್ಲ ಯಾವ ಸೆಲೆಬ್ರಿಟಿಗಳು ಎಂದು ಬೇಸರವನ್ನು ವ್ಯಕ್ತಪಡಿಸಿದ್ದಾರೆ.

VISTARANEWS.COM


on

By

kiccha sudeep‌ Fans
Koo

ಬೆಂಗಳೂರು: ಪ್ರತಿಯೊಬ್ಬ ಅಭಿಮಾನಿಗೂ ತಮ್ಮ ನೆಚ್ಚಿನ ಹೀರೋ-ಹೀರೋಯಿನ್‌ ಜತೆಗೆ ಫೋಟೊ ಕ್ಲಿಕ್ಕಿಸಿಕೊಳ್ಳಬೇಕು, ಆ ಫೋಟೊವನ್ನು ಸೋಶಿಯಲ್‌ ಮೀಡಿಯಾದಲ್ಲಿ, ಹಾಗೇನೆ ಮೊಬೈಲ್‌ನ ವಾಲ್‌ಪೇಪರ್‌ನಲ್ಲಿ ಹಾಕಿಕೊಳ್ಳಬೇಕು ಎಂಬ ಮಹದಾಸೆ ಇರುತ್ತದೆ. ಇದಕ್ಕಾಗಿ ಮನೆ ಮುಂದೆ ಹೋಗೋದು, ಯಾವುದಾದರೂ ಫಂಕ್ಷನ್‌ನಲ್ಲಿ ಕಂಡರೆ ಸೆಲ್ಫಿಗಾಗಿ ಮುಗಿ ಬೀಳೋದು ಕಾಮನ್‌. ಸದ್ಯ ಸೆಲ್ಫಿಗಾಗಿ 2 ಗಂಟೆ ಕಾದ ಅಭಿಮಾನಿಯೊಬ್ಬರು ಕಿಚ್ಚ ಸುದೀಪ್‌ (Kiccha Sudeep) ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಮಾತ್ರವಲ್ಲ ಸಿನಿಮಾ ಸೆಲೆಬ್ರಿಟಿಗಳನ್ನು ನಂಬಬೇಡಿ, ಅಂಧ ಭಕ್ತರಾಗಬೇಡಿ ಎಂಬ ಧಿಕ್ಕಾರವನ್ನೂ ಕೂಗಿದ್ದಾರೆ.

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕಿಚ್ಚ ಸುದೀಪ್‌ ಅವರ ಕಾರು ಇರುವುದನ್ನು ಅಭಿಮಾನಿಯೊಬ್ಬರು ಗಮನಿಸಿದ್ದರು. ಹೀಗಾಗಿ ನೆಚ್ಚಿನ ನಟನೊಂದಿಗೆ ಒಂದು ಫೋಟೋ ತೆಗೆದುಕೊಳ್ಳಬೇಕೆಂದು ಸುಮಾರು ಎರಡು ಗಂಟೆಗಳಿಂದ ಕಾದು ಕುಳಿತ್ತಿದ್ದರು. ಏರ್‌ಪೋರ್ಟ್‌ ಹೊರಗೆ ಸುದೀಪ್‌ ಬರುವುದು ಕಂಡು ಅಭಿಮಾನಿ ಸೆಲ್ಫಿ ಕೇಳಿದ್ದಾರೆ. ಆದರೆ ಸುದೀಪ್‌ ಫೋಟೋಗೆ ನಿರಾಕರಿಸಿದ್ದಾರೆ. ಮಾತ್ರವಲ್ಲ ಕಾರಿನ ಬಳಿ ಹೋಗಿ ಫೋಟೊ ತೆಗೆಯಲು ಹೋದಾಗ, ಫೋಟೊ ತೆಗೆಯಬೇಡ ಎಂಬಂತೆ ಸನ್ನೆ ಮಾಡಿದ್ದಾರೆ. ತಮ್ಮ ಬಾಡಿಗಾರ್ಡ್‌ಗೆ ಹೇಳಿ ಫೋಟೊ ತೆಗೆಯಲು ಬಿಡಬೇಡಿ ಎಂಬಂತೆ ಸೂಚಿಸಿದ್ದಾರೆ. ಸೆಲ್ಫಿಗಾಗಿ 2 ಗಂಟೆ ಕಾದಿದ್ದಕ್ಕೆ ಕಿಚ್ಚ ಸುದೀಪ್ ಅವಮಾನ ಮಾಡಿದ್ದಾರೆ. ಸೆಲೆಬ್ರಿಟಿಗಳಿಗೆ ಧಿಕ್ಕಾರ ಎಂದು ವಿಡಿಯೊ ಪೋಸ್ಟ್‌ ಮಾಡಿದ್ದಾರೆ.

https://www.instagram.com/reel/C9bo7Huv0w5/?utm_source=ig_web_button_share_sheet

ಎಲ್ಲ ಸೆಲೆಬ್ರಿಟಿಗಳು ಇದೇ ರೀತಿನೇ ತಮ್ಮ ಫ್ಯಾನ್ಸ್‌ಗಳನ್ನ ಟ್ರೀಟ್‌ ಮಾಡುವುದು. ನಾವು ಗಂಟಗಟ್ಟಲೆ ಕ್ಯೂ ನಿಂತು ನೂರಾರು ರೂ. ಖರ್ಚು ಮಾಡಿ ಮೂರು ಗಂಟೆ ಸಿನಿಮಾ ನೋಡಿ ಬರ್ತಿವಿ. ಆದರೆ 5 ಸೆಕೆಂಡ್‌ ನಿಂತು ಅಭಿಮಾನಿಗಳಿಗೆ ಫೋಟೊ ಕೊಡಲು ಆಗುವುದಿಲ್ಲ ಎಂದರೆ ಇವರೆಲ್ಲ ಯಾವ ಸೀಮೆಯ ಸೆಲೆಬ್ರಿಟಿಗಳು ಎಂದು ಬೇಸರವನ್ನು ವ್ಯಕ್ತಪಡಿಸಿದ್ದಾರೆ.

ಕೆಲಸ ಮಾಡಿಕೊಂಡು ಮನೆಯವರನ್ನೆಲ್ಲ ಚೆನ್ನಾಗಿ ನೋಡಿಕೊಳ್ಳಬೇಕು ಅನ್ನೋ ಮೈಂಡ್‌ಸೆಟ್‌ನ ಇಟ್ಕೊಳ್ಳಿ.. ನಿಮ್ಗೆ ಏನಾದರೂ ಬೇಜಾರು ಆದರೆ ಟೈಂ ಪಾಸ್‌ಗಷ್ಟೇ ಸಿನಿಮಾ ನೋಡಿ. ಅದು ಬಿಟ್ಟು ಹೀರೋಗಳಿಗಾಗಿ ನಿಮ್ಮ ಮೈಮೇಲೆ ಅವರ ಹೆಸರಿನ ಟ್ಯಾಟು ಎಲ್ಲ ಹಾಕಿಸಿಕೊಳ್ಳಬೇಡಿ ಎಂದು ಮನವಿ ಮಾಡಿದ್ದಾರೆ.

https://www.instagram.com/reel/C9bo7Huv0w5/?igsh=bXZzbjdydzFzZXA3

ಇದನ್ನೂ ಓದಿ: Actor Darshan: ದರ್ಶನ್‌ &ಗ್ಯಾಂಗ್‌ಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ; ಕಾರಣಗಳು ಹೀಗಿವೆ!

ಇಬ್ಬರಿಗೆ ಮಾತ್ರ ʻಬಾಸ್‌ʼ ಎಂದು ಕರೆಯುವೆ ಎಂದ ಕಿಚ್ಚ; ಯಾರವರು?

‘ವಿಕ್ರಾಂತ್ ರೋಣ’ ಬಳಿಕ ಕಿಚ್ಚ ಸುದೀಪ್ (Kiccha Sudeep) ಒಪ್ಪಿಕೊಂಡಿರುವ ಸಿನಿಮಾ ʻಮ್ಯಾಕ್ಸ್ʼ (MAX). ಹೀಗಾಗಿ ಈ ಸಿನಿಮಾ ಬಗ್ಗೆ ಅವರ ಅಭಿಮಾನಿಗಳಲ್ಲಿ ಬಹಳಷ್ಟು ನಿರೀಕ್ಷೆಯಿದೆ. ಮ್ಯಾಕ್ಸ್ ಸಿನಿಮಾದಲ್ಲಿ ಸುದೀಪ್ ಪೊಲೀಸ್‌ ಪಾತ್ರದಲ್ಲಿ ಮಿಂಚಲಿದ್ದಾರೆ. ಪಾತ್ರದ ಹೆಸರು ವಿಭಿನ್ನವಾಗಿಯೇ ಇದೆ. ಈಗಾಗಲೇ ಸಿನಿಮಾ ಚಿತ್ರೀಕರಣ ಮುಗಿಸಿದ್ದು, ಮುಂದಿನ ಸಿನಿಮಾಗಾಗಿ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಬಿಲ್ಲಾ ರಂಗ ಭಾಷಾ’ಗಾಗಿ ರೆಡಿಯಾಗುತ್ತಿದ್ದಾರೆ. ಈ ಸಿನಿಮಾದಲ್ಲಿ ಮೂರು ಪಾತ್ರಗಳಲ್ಲಿ ಸುದೀಪ್ ನಟಿಸಲಿದ್ದಾರೆ ಎನ್ನಲಾಗುತ್ತಿದ್ದು, ಒಂದೊಂದು ಪಾತ್ರಕ್ಕೆ ಒಂದೊಂದು ರೀತಿ ಮ್ಯಾನರಿಸಂನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದೀಗ ಕಿಚ್ಚ ಅವರು ತಾವು ಬಾಸ್‌ ಎಂದು ಯಾರಿಗೆ ಕರೆಯುತ್ತೇನೆ ಎಂದು ಹೇಳಿಕೊಂಡಿರುವ ವಿಡಿಯೊ ಭಾರಿ ವೈರಲ್‌ ಆಗುತ್ತಿದೆ.

ʻಗೌರಿ’ ಸಿನಿಮಾ ಶೀಘ್ರವೇ ರಿಲೀಸ್ ಆಗಲಿದೆ. ಈ ಚಿತ್ರದ ಮೂಲಕ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಮಗ ಸಮರ್ಜಿತ್ ಲಂಕೇಶ್ ಬಣ್ಣದ ಲೋಕಕ್ಕೆ ಕಾಲಿಡುತ್ತಿದ್ದಾರೆ. ಸಮರ್ಜಿತ್ ಲಂಕೇಶ್ ಅವರು ಕಿಚ್ಚ ಸುದೀಪ್‌ ಅವರಿಗೆ ಸಂದರ್ಶನ ಮಾಡಿದ್ದರು. ಈ ವೇಳೆ ನಿಮ್ಮ ನೆಚ್ಚಿನ ನಾಯಕ ಯಾರೆಂದು ? ಪ್ರಶ್ನೆ ಇಟ್ಟರು. ಆಗ ಸುದೀಪ್‌ ಮಾತನಾಡಿ ʻʻನನಗೆ ವಿಷ್ಣುವರ್ಧನ್‌ ಅವರು ತುಂಬ ಇಷ್ಟ. ಇದನ್ನು ಸಾಕಷ್ಟು ಬಾರಿ ಹೇಳಿದ್ದೇನೆ.  ವಿಷ್ಣು ಅವರ ಪರ್ಸನಾಲಿಟಿ ಸಖತ್ ಇಷ್ಟ. ಅವರ ಗತ್ತು, ಇರೋ ರೀತಿ ಸಖತ್ ಇಷ್ಟ. ಅವರು ಯಾವಾಗಲೂ ನನ್ನ ಫೇವರಿಟ್. ಹಾಗೇ ನನ್ನ ತಂದೆ ಕೂಡ. ಇವರಿಬ್ಬರಿಗೆ ನಾನು ಬಾಸ್‌ ಎಂದು ಕರೆಯುವುದುʼʼ ಎಂದಿದ್ದಾರೆ.

ಇನ್ನು ಸುದೀಪ್‌ ಅವರು ಮುಂದಿನ ಸಿನಿಮಾದ ಒಂದು ಪಾತ್ರದಲ್ಲಿ ಭಾರಿ ಕಟ್ಟುಮಸ್ತಾದ ದೇಹವನ್ನು ಹೊಂದಿದ ವ್ಯಕ್ತಿಯಾಗಿ ಕಾಣಿಸಿಕೊಳ್ಳಲಿದ್ದು, ಅದಕ್ಕಾಗಿ ಜಿಮ್​ನಲ್ಲಿ ಬೆವರಿಳಿಸುತ್ತಿದ್ದಾರೆ . ಮ್ಯಾಕ್ಸ್’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗುವ ಮುನ್ನವೇ ‘ಬಿಲ್ಲಾ ರಂಗ ಭಾಷಾ’ ಸಿನಿಮಾಕ್ಕೆ ತಯಾರಾಗುತ್ತಿದ್ದಾರೆ. ಈ ಸಿನಿಮಾವನ್ನು ಅನುಪ್ ಭಂಡಾರಿ ನಿರ್ದೇಶನ ಮಾಡಲಿದ್ದಾರೆ. ‘ದ್ರೋಣಾಚಾರ್ಯ’ ಸಿನಿಮಾವನ್ನು ಅನುಪ್ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗಿತ್ತು, ಆದರೆ ಅದರ ಬದಲಿಗೆ ‘ಬಿಲ್ಲಾ ರಂಗ ಭಾಷಾ’ ಸಿನಿಮಾ ಪ್ರಾರಂಭ ಮಾಡಿದ್ದಾರೆ.

ಮ್ಯಾಕ್ಸ್ʼ ಸಿನಿಮಾಕ್ಕೆ ಕನ್ನಡದ ತಾರೆಯರು ಇದ್ದಾರೆ. ಕನ್ನಡದ ಟೆಕ್ನಿಷನ್‌ಗಳೂ ಇದ್ದಾರೆ. ಹಾಗೆ ಅಜನೀಶ್ ಲೋಕನಾಥ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಶೇಖರ್ ಚಂದ್ರ ಕ್ಯಾಮೆರಾ ವರ್ಕ್ ಮಾಡಿದ್ದಾರೆ. ಸಂಯುಕ್ತಾ ಹೊರನಾಡು, ಸುಕೃತಾ ವಾಗ್ಲೆ ಕೂಡ ಈ ಸಿನಿಮಾದಲ್ಲಿ ಇದ್ದಾರೆ.

ವರಲಕ್ಷ್ಮಿ ಶರತ್ ಕುಮಾರ್ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ವಿಜಯ್ ಕಾರ್ತಿಕೇಯ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ತಮಿಳು ನಿರ್ಮಾಪಕ ಕಲೈಪುಲಿ ಎಸ್. ತನು ಜೊತೆ ಸೇರಿ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Kiran Kumar
ಕರ್ನಾಟಕ6 mins ago

ವಿಸ್ತಾರ ನ್ಯೂಸ್‌ ಕಾರ್ಯನಿರ್ವಾಹಕ ನಿರ್ದೇಶಕ ಹುದ್ದೆಯಿಂದ ಕಿರಣ್‌ ಕುಮಾರ್‌ ಡಿ ಕೆ ಅಮಾನತು

Valmiki Corporation Scam
ಪ್ರಮುಖ ಸುದ್ದಿ8 mins ago

Valmiki Corporation Scam: ಮೃತ ಅಧೀಕ್ಷಕ ಚಂದ್ರಶೇಖರನ್‌ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಿದ ಸಿಎಂ

Pooja Khedkar
ದೇಶ21 mins ago

Pooja Khedkar: IAS ಟ್ರೈನಿ ಅಧಿಕಾರಿ ಪೂಜಾ ಖೇಡ್ಕರ್‌ ವಿರುದ್ಧ FIR ದಾಖಲಿಸಿದ UPSC

CM Siddaramaiah
ಕರ್ನಾಟಕ35 mins ago

CM Siddaramaiah: ವಾಲ್ಮೀಕಿ ನಿಗಮ ಅಕ್ರಮಕ್ಕೆ ಸರ್ಕಾರ ಹೊಣೆಯಲ್ಲ; ಚಂದ್ರಶೇಖರನ್‌ ಆತ್ಮಹತ್ಯೆಗೆ ಅಧಿಕಾರಿಗಳು ಕಾರಣ ಎಂದ ಸಿಎಂ!

Ishan Kishan
ಕ್ರಿಕೆಟ್38 mins ago

Ishan Kishan: ಟೀಮ್​ ಇಂಡಿಯಾದಲ್ಲಿ ಇಶಾನ್ ಕಿಶನ್​ಗೆ ಬಾಗಿಲು ಬಂದ್​?

Krishan Kumar Daughter Tishaa Dies Of Cancer At 21
ಬಾಲಿವುಡ್46 mins ago

Krishan Kumar: ಕೇವಲ 21ನೇ ವಯಸ್ಸಿಗೆ ನಿಧನ ಹೊಂದಿದ ‘ಅನಿಮಲ್’ ಸಿನಿಮಾ ನಿರ್ಮಾಪಕನ ಮಗಳು

Indian Navy Recruitment
ಉದ್ಯೋಗ1 hour ago

Indian Navy Recruitment: ಭಾರತೀಯ ನೌಕಾ ಪಡೆಯಲ್ಲಿದೆ 741 ಹುದ್ದೆ; 10ನೇ ತರಗತಿ ಪಾಸಾದವರಿಗೂ ಇದೆ ಅವಕಾಶ

Microsoft Windows Outage
ಪ್ರಮುಖ ಸುದ್ದಿ1 hour ago

Microsoft Windows Outage: ಮೈಕ್ರೊಸಾಫ್ಟ್​​ ಸಮಸ್ಯೆ ; ಬೆಂಗಳೂರು ಸೇರಿದಂತೆ ದೇಶದ ವಿಮಾನ ನಿಲ್ದಾಣಗಳಲ್ಲಿ ಅಲ್ಲೋಲಕಲ್ಲೋಲ

Dengue Fever
ಬೆಂಗಳೂರು1 hour ago

Dengue Fever : ಡೆಂಗ್ಯೂ ಭೀತಿ- ಸೊಳ್ಳೆಗಳ ನಾಶಕ್ಕೆ ಫೀಲ್ಡಿಗಿಳಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

Accident Video
Latest1 hour ago

Accident Video: ಸ್ಕೂಟರ್‌ಗೆ ಅಪ್ಪಳಿಸಿದ ಕಾರು; 30 ಅಡಿ ದೂರ ಎಗರಿ ಬಿದ್ದ ಮಹಿಳಾ ಕಾನ್‌ಸ್ಟೇಬಲ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ4 hours ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ5 hours ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ1 day ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ1 day ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಟ್ರೆಂಡಿಂಗ್‌