Electric shock : ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿನಿ, ವೃದ್ಧ ಸೇರಿ ಶ್ವಾನಗಳು ಸಾವು - Vistara News

ದಕ್ಷಿಣ ಕನ್ನಡ

Electric shock : ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿನಿ, ವೃದ್ಧ ಸೇರಿ ಶ್ವಾನಗಳು ಸಾವು

Electric shock : ಜಾನುವಾರು ಮೇಯಿಸಲು ಹೋದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ಪ್ರತ್ಯೇಕ ಕಡೆ ಇಬ್ಬರು ಮೃತಪಟ್ಟಿದ್ದಾರೆ. ಜತೆಗೆ ಎರಡು ಶ್ವಾನಗಳು ಪ್ರಾಣ ಕಳೆದುಕೊಂಡಿವೆ.

VISTARANEWS.COM


on

Electric Shock
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು/ಚಿತ್ರದುರ್ಗ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ (Electric shock) ತಗುಲಿ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಗಳೂರು ಹೊರವಲಯದ ಗುರುಪುರ ಕಲ್ಲಕಲೆಂಬಿ ಎಂಬಲ್ಲಿ ಘಟನೆ ನಡೆದಿದೆ. ಆಶ್ಮಿ ಶೆಟ್ಟಿ (19)ಮೃತ ವಿದ್ಯಾರ್ಥಿನಿ.

ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಸಿಎ ಕಲಿಯುತ್ತಿದ್ದ ಆಶ್ಮಿ ಶೆಟ್ಟಿ, ದನಗಳನ್ನು ಮೇಯಿಸಿಲು ಗೆದ್ದೆಗೆ ತೆರಳಿದ್ದಳು. ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಗಂಭೀರ ಗಾಯಗೊಂಡಿದ್ದ ಆಶ್ಮಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆಶ್ಮಿ ಮೃತಪಟ್ಟಿದ್ದಾಳೆ.

ಆಶ್ಮಿ ಜತೆ ಬಂದಿದ್ದ ಎರಡು ನಾಯಿಗಳೂ ವಿದ್ಯುತ್ ಶಾಕ್‌ನಿಂದ ಸಾವನ್ನಪ್ಪಿವೆ. ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರು ಕಿಡಿಕಾರಿದ್ದಾರೆ. ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿದ್ಯುತ್‌ ತಂತಿ ತುಳಿದು ವ್ಯಕ್ತಿ ಸಾವು

ಎಮ್ಮೆ ಮೇಯಿಸಲು ಹೋಗಿದ್ದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿಯೊಬ್ಬ ದಾರುಣವಾಗಿ ಮೃತಪಟ್ಟಿದ್ದಾರೆ. ಶಿವಲಿಂಗಯ್ಯ(60) ಮೃತ ದುರ್ದೈವಿ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಮೆಂಗಸಂದ್ರದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಶ್ರೀರಾಂಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

6 ಜನರ ಶವ ಪತ್ತೆ, ಇನ್ನೂ ನಾಲ್ವರಿಗಾಗಿ ಶೋಧ; ಭಾರಿ ಮಳೆ ನಡುವೆ ಮಣ್ಣು ತೆರವು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ (Uttara Kannada Landslide) ಅಂಕೋಲಾ- ಶಿರೂರು ಗುಡ್ಡಕುಸಿತ (Ankola Shiruru landslide) ಪ್ರಕರಣದಲ್ಲಿ ಹೆದ್ದಾರಿಯ ಮೇಲೆ ಬಿದ್ದಿರುವ ಮಣ್ಣು ತೆಗೆಯುವ ಕಾರ್ಯಾಚರಣೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ದುರಂತದಲ್ಲಿ ನಾಪತ್ತೆಯಾದ 10 ಜನರಲ್ಲಿ ನಿನ್ನೆಯವರೆಗೆ 6 ಮಂದಿಯ ಶವ ಪತ್ತೆಯಾಗಿದೆ. ಇನ್ನೂ ನಾಲ್ವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಈ ನಡುವೆ ನಿನ್ನೆ ಸಂಜೆ ವೇಳೆಗೆ ಅಂಕೋಲಾ ತಾಲೂಕಿನ ಬೆಳಂಬಾರ ಕಡಲತೀರದಲ್ಲಿ ಛಿದ್ರಗೊಂಡಿದ್ದ ದೇಹವೊಂದು ಪತ್ತೆಯಾಗಿದ್ದು, ಅದು ಇಲ್ಲಿಂದ ಕೊಚ್ಚಿಕೊಂಡು ಹೋದ ವ್ಯಕ್ತಿಯ ಶವವಿರಬಹುದು ಎಂದು ಶಂಕಿಸಲಾಗಿದೆ. ಇನ್ನೂ ಗುರುತು ಪತ್ತೆ ಮಾಡಲು ಸಾಧ್ಯವಾಗಿಲ್ಲ. ಜಿಲ್ಲಾಡಳಿತದ ಮಾಹಿತಿಯಂತೆ ಇಲ್ಲಿ 10 ಮಂದಿ ಕಣ್ಮರೆಯಾಗಿದ್ದಾರೆ; ಇವರಲ್ಲಿ 6 ಮಂದಿಯ ಶವಗಳು ಸಿಕ್ಕಿವೆ ಹಾಗೂ ಇನ್ನೂ ನಾಲ್ವರಿಗಾಗಿ ಶೋಧ ನಡೆಯುತ್ತಿದೆ.

ಮತ್ತೆ ಗುಡ್ಡ ಕುಸಿತದ ಆತಂಕ

ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಣ್ಣು ತೆರವು ಕಾರ್ಯಕ್ಕೆ ಅಡ್ಡಿಯಾಗಿದೆ. ಧಾರಾಕಾರ ಮಳೆಯ ನಡುವೆಯೂ ಮಣ್ಣು ತೆರವು ಭರದಿಂದ ಸಾಗಿದ್ದು, ಐಆರ್‌ಬಿ ಸಿಬ್ಬಂದಿ ತೆರವು ಮಾಡುತ್ತಿದ್ದಾರೆ. ಎನ್‌ಡಿಆರ್‌ಎಫ್‌, ಪೊಲೀಸ್ ತಂಡಗಳು ಶೋಧ ಕಾರ್ಯ ಮುನ್ನಡೆಸಿವೆ. ಮಳೆಯಿಂದಾಗಿ ಗುಡ್ಡದಿಂದ ಝರಿಯಂತೆ ನೀರು ಹರಿದುಬರುತ್ತಿದ್ದು, ಮತ್ತೆ ಗುಡ್ಡ ಕುಸಿತ ಭೀತಿ ತಲೆದೋರಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕಾರ್ಯಾಚರಣೆ ಪ್ರದೇಶದಲ್ಲಿ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ.

ವಿಸ್ತಾರ ನ್ಯೂಸ್‌ಗೆ ಕಾರವಾರ-ಅಂಕೋಲಾ ಶಾಸಕ ಸತೀಶ್ ಸೈಲ್ ಪ್ರತಿಕ್ರಿಯೆ ನೀಡಿದ್ದು, ಇನ್ನೂ 40 ಮೀಟರ್ ಕೆಲಸ ಬಾಕಿ ಇದೆ, ಇಂದು ಪೂರ್ಣಗೊಳ್ಳಬಹುದು ಎಂದಿದ್ದಾರೆ. ಆದರೆ ಇಲ್ಲಿನ ಇನ್ನೊಂದು ಬದಿ ಕುಸಿಯುವ ಆತಂಕ ಎದುರಾಗಿದೆ. ನಿನ್ನೆ ಅಲ್ಪ ಪ್ರಮಾಣದಲ್ಲಿದ್ದ ಬಿರುಕು ಇಂದು ಹೆಚ್ಚಾಗಿದೆ. ಅದೂ ಕುಸಿದರೆ ಮತ್ತೆ ಕಾರ್ಯಾಚರಣೆಗೆ ಹಿನ್ನಡೆಯಾಗಬಹುದು ಎಂದಿದ್ದಾರೆ.

ಗಂಗಾವಳಿ ನದಿಯಲ್ಲಿ ಮಣ್ಣಿನ ದಿಬ್ಬಗಳು ನಿರ್ಮಾಣವಾಗಿವೆ. ಇದರಿಂದ ನದಿಯ ಹರಿವು ರಸ್ತೆಗೆ ಕೊರೆತ ಉಂಟುಮಾಡುವ ಸಾಧ್ಯತೆಯಿದೆ. ಈ ಬಗ್ಗೆ ತಜ್ಞರ ಅಭಿಪ್ರಾಯ ಪಡೆದು ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಗುಡ್ಡ ಕುಸಿತದಿಂದ ಉಳುವರೆ ಗ್ರಾಮದ ಮನೆಗಳಿಗೆ ಹಾನಿಯಾದ ವಿಚಾರದಲ್ಲಿ, ಆಸ್ಪತ್ರೆಗೆ ದಾಖಲಾಗಿದ್ದ 15 ಮಂದಿಗೆ ಬಾಡಿಗೆ ಮನೆ ಮಾಡಿ ಇರಿಸಲು ಚಿಂತನೆ ನಡೆಸಲಾಗಿದೆ. ಗುಡ್ಡ ಕುಸಿತದಿಂದ ಮನೆ ಕಳೆದುಕೊಂಡಿರುವ ಉಳುವರೆ ಗ್ರಾಮದ ನಿವಾಸಿಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಕಾಳಜಿ ಕೇಂದ್ರದ ಬದಲು ಬಾಡಿಗೆ ಮನೆ ವ್ಯವಸ್ಥೆ ಮಾಡಲಾಗುತ್ತಿದೆ. ಮನೆ ನಿರ್ಮಾಣವಾಗುವವರೆಗೆ ಬಾಡಿಗೆ ಮನೆ ವ್ಯವಸ್ಥೆ ಮಾಡುತ್ತೇವೆ ಎಂದಿದ್ದಾರೆ.

ಗ್ಯಾಸ್‌ ಟ್ಯಾಂಕರ್‌ನ ಅನಿಲ

ಮಣ್ಣು ಕುಸಿತದ ವೇಳೆ ನದಿಯಲ್ಲಿ ತೇಲಿಹೋಗಿದ್ದ ಗ್ಯಾಸ್ ಟ್ಯಾಂಕರ್‌ನಿಂದ ತಜ್ಞರ ತಂಡ ಅನಿಲ ಟ್ಯಾಂಕರ್ ಖಾಲಿ ಮಾಡುವ ಕಾರ್ಯ ಮಾಡುತ್ತಿದೆ. ಉಳಿದ ಅನಿಲ ಇಂದು ಖಾಲಿ ಮಾಡುತ್ತೇವೆ. ಭಾರೀ ಮಳೆ ಹಾಗೂ ಗಾಳಿ‌ ಇರುವುದರಿಂದ ಅನಿಲ ಖಾಲಿ ಮಾಡಲು ಯಾವುದೇ ತೊಂದರೆ ಇಲ್ಲ ಎಂದು ಸತೀಶ್‌ ಸೈಲ್‌ ತಿಳಿಸಿದ್ದಾರೆ.

ನದಿಯಲ್ಲಿ ತೇಲಿಹೋಗಿದ್ದ ಟ್ಯಾಂಕರ್‌ ಅನ್ನು ಸದ್ಯ ಸಗಡಗೇರಿ‌ ಬಳಿ ನೌಕಾನೆಲೆ, NDRF ತಂಡಗಳು ತಡೆದು ನಿಲ್ಲಿಸಿದ್ದವು. ನಿನ್ನೆ ಶೇ.60ರಷ್ಟು ಗ್ಯಾಸ್ ಅನ್ನು ಗಂಗಾವಳಿ ನದಿಗೆ ಬಿಟ್ಟಿದ್ದ ಹೆಚ್‌ಪಿಎಲ್ ಕಂಪೆನಿ ತಜ್ಞರು, ಇಂದು ಮತ್ತೆ ಶೇ.40ರಷ್ಟು ಗ್ಯಾಸ್ ನೀರಿಗೆ ಬಿಡಲಿದ್ದಾರೆ. ಸ್ಥಳದಲ್ಲಿ ಅಗ್ನಿಶಾಮಕದಳ, SDRF, NDRF, ಪೊಲೀಸರು, ವೈದ್ಯಾಧಿಕಾರಿಗಳ ತಂಡ ಮೊಕ್ಕಾಂ ಹೂಡಿದೆ. ಎರಡು ಆ್ಯಂಬುಲೆನ್ಸ್ ಸ್ಥಳದಲ್ಲಿ ನಿಯೋಜನೆಯಾಗಿದೆ. ಗ್ರಾಮದ 34 ಮನೆಗಳ ಜನರನ್ನು ಜಿಲ್ಲಾಡಳಿತ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಿದೆ. ಟ್ಯಾಂಕರ್ ಒಟ್ಟು 18 ಕ್ವಿಂಟಾಲ್ ಗ್ಯಾಸ್ ಹೊಂದಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain : ಬೆಳಗಾವಿಯಲ್ಲೂ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಮಳೆಗೆ ಮನೆ ಬಿದ್ದು ತುಂಬು ಗರ್ಭಿಣಿ ಹೈರಣಾದ ದುರಂತ ನಡೆದಿದೆ. ಬೆಳಗಾವಿಯಲ್ಲಿ ಸೇತುವೆಗಳು ಮುಳುಗಡೆಯಾಗಿ, ಕೊಡಗಿನಲ್ಲಿ ಕೆರೆ ಕೋಡಿ ಬಿದ್ದು ರಸ್ತೆಗಳೆಲ್ಲವೂ ಜಲಾವೃತಗೊಂಡಿದೆ.

VISTARANEWS.COM


on

By

karnataka Rain
Koo

ಬೆಳಗಾವಿ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯು (Karnataka Rain) ಜನರ ಬದುಕನ್ನೇ ಬೀದಿಗೆ ತರುತ್ತಿದೆ. ರಾತೋರಾತ್ರಿ ಸುರಿದ ಮಳೆಗೆ, ಮನೆ ಕುಸಿದು ಬಿದ್ದು, 9 ತಿಂಗಳ ತುಂಬು ಗರ್ಭಿಣಿ ಹೈರಾಣಾದರು. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಸಮಳಗಿ ಗ್ರಾಮದಲ್ಲಿ ಘಟನೆ ನಡೆದಿದೆ.

ನಿರಂತರ ಮಳೆಗೆ ಸಾವಂತ್ ತೇಗೂರು ಎಂಬುವವರ ಮನೆ ಕುಸಿದು ಬಿದ್ದಿದೆ. ಸಾವಂತ್‌ ಅವರು ಮಗಳನ್ನು ಹೆರಿಗೆಗೆ ಎಂದು ಮನೆಗೆ ಕರೆತಂದಿದ್ದರು. ಹೆರಿಗೆಗೆ 4 ದಿನ ಇರುವಾಗಲೇ ಮಳೆಗೆ ಮನೆಯು ಕುಸಿದಿದೆ. ಮಗಳ ಹೆರಿಗೆಯ ನಿರೀಕ್ಷೆಯಲ್ಲಿದ್ದ ಅಪ್ಪ- ಅಮ್ಮನಿಗೆ ಬರಸಿಡಿಲು ಬಡಿದಂತಾಗಿದೆ. ತುರ್ತಾಗಿ ಬೇರೆಲ್ಲೂ ಮನೆ ಸಿಗದೇ ಇರುವುದರಿಂದ ತುಂಬು ಗರ್ಭಿಣಿ ಜತೆಗೆ ಕುಸಿದು ಬಿದ್ದಿರುವ ಮನೆಯಲ್ಲಿಯೇ ವಾಸಿಸುವ ದುಸ್ಥಿತಿ ನಿರ್ಮಾಣವಾಗಿದೆ.

ಬೆಳಗಾವಿಯಲ್ಲಿ ಸೇತುವೆಗಳು ಮುಳುಗಡೆ

ಮಹಾರಾಷ್ಟ್ರ ಘಟ್ಟ ಪ್ರದೇಶದಲ್ಲಿ ಮುಂದುವರೆದ ಮಳೆ ಅಬ್ಬರಕ್ಕೆ ಅಪಾಯದ ಮಟ್ಟ ಮೀರಿ ವೇದಗಂಗಾ ನದಿ ಹರಿಯುತ್ತಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಜತ್ರಾಟ-ಭೀವಶಿ ಸೇತುವೆ ಜಲಾವೃತಗೊಂಡಿದೆ. ಸೇತುವೆ ಎರಡು ಬದಿಯಲ್ಲಿ ಬ್ಯಾರಿಕೇಡ್ ಹಾಕಿ ಸಂಚಾರ ನಿಷೇಧಿಸಲಾಗಿದೆ. ಅಕ್ಕಪಕ್ಕದ ಜಮೀನುಗಳಿಗೂ ನೀರು ನುಗ್ಗಿದೆ.

ಇತ್ತ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಮತ್ತೆರಡು ಸೇತುವೆ ಮುಳುಗಡೆಯಾಗಿದೆ. ವೇದಗಂಗಾ ನದಿಗೆ ಅಡ್ಡಲಾಗಿ ಕಟ್ಟಿದ ಅಕ್ಕೋಳ-ಸಿದ್ನಾಳ ಮತ್ತು ಜತ್ರಾಟ-ಭೀವಶಿ ನಡುವಿನ ಸೇತುವೆ ಜಲಾವೃತಗೊಂಡಿದೆ. ಈವರೆಗೂ ಐದು ಸಂಪರ್ಕ ಸೇತುವೆಗಳು ಜಲಾವೃತಗೊಂಡಿವೆ. ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಬೆಳಗಾವಿಯ ಖಾನಾಪುರ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ಅಪಾಯದ ಮಟ್ಟ ಮೀರಿ ಸಾತ್ನಳ್ಳಿ ಹಳ್ಳ ಹರಿಯುತ್ತಿದೆ. ಸಂಜೆ ಏಕಾಏಕಿ ಹಳ್ಳ ಬಂದು ಶಾಲಾ ಮಕ್ಕಳ ಪರದಾಡಬೇಕಾಯಿತು. ಈ ವೇಳೆ ಮಕ್ಕಳನ್ನು ಹೊತ್ತುಕೊಂಡು ಹಳ್ಳ ದಾಟಿಸಬೇಕಾಯಿತು.

ನಿರಂತರ ಮಳೆಗೆ ಬೆಳಗಾವಿಯಲ್ಲಿ ಮನೆ ಕುಸಿತ ಪ್ರಕರಣಗಳು ಮುಂದುವರಿದಿದೆ. ಭೂರಣಕಿ ಗ್ರಾಮದಲ್ಲಿ ಮತ್ತೊಂದು ಮನೆ ಕುಸಿದಿದ್ದು, ಅದೃಷ್ಟವಷಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಭೂರಣಕಿ ಗ್ರಾಮದ ಪರಶುರಾಮ್ ನಾರಾಯಣ ರಾಮಗಾನ್ ಎಂಬುವವರ ಮನೆ ಕುಸಿದು ಬಿದ್ದಿದೆ. ಕಳೆದ ರಾತ್ರಿ ಮನೆಯ ಸದಸ್ಯರು ಮನೆಯಲ್ಲಿರುವಾಗಲೇ ಗೋಡೆ ಕುಸಿದಿದೆ. ಈ ವೇಳೆ ಎಲ್ಲರೂ ಹೊರಗಡೆ ಓಡಿ ಬಂದು ಜೀವ ಉಳಿಸಿಕೊಂಡಿದ್ದಾರೆ.

ಇದನ್ನೂ ಓದಿ: Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

ಕೊಡಗಿನಲ್ಲಿ ಕೆರೆ ಕೋಡಿ ಬಿದ್ದು ಅವಾಂತರ

ಕೊಡಗು ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುತ್ತಿದ್ದು, ಕೊಡಗಿನ ಕುಶಾಲನಗರದ ರೊಂಡೆ ಕೆರೆ ಕೋಡಿ ಬಿದ್ದಿದೆ. ಪರಿಣಾಮ ಕೆರೆಯ ನೀರು ನುಗ್ಗಿ ಬಡಾವಣೆಯ ಕೆಲ ಮನೆಗಳು ಜಲಾವೃತಗೊಂಡಿದೆ. ಕುಶಾಲನಗರ ಬಳಿಯ ಗೊಂದಿಬಸವನಹಳ್ಳಿಯಲ್ಲಿ ಘಟನೆ ನಡೆದಿದೆ. ಜನವಸತಿ ಪ್ರದೇಶ ಅಲ್ಲದೆ ಕೃಷಿ ಪ್ರದೇಶಕ್ಕೂ ನೀರು ಹರಿದು ಅವಾಂತರವೇ ಸೃಷ್ಟಿಯಾಗಿದೆ. ಕೊಡಗು ಜಿಲ್ಲೆಯ ಮಡಿಕೇರಿ – ಚೆಟ್ಟಳ್ಳಿ ರಸ್ತೆಯಲ್ಲಿ ಗುಡ್ಡ ಕುಸಿದಿದೆ. ಇದರಿಂದಾಗಿ ಮಡಿಕೇರಿ – ಚೆಟ್ಟಳ್ಳಿ ಗ್ರಾಮೀಣ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಸಣ್ಣ ಪ್ರಮಾಣದ ಗುಡ್ಡ ಕುಸಿತ ಹಿನ್ನಲೆ ಅನಾಹುತ ತಪ್ಪಿದೆ. ಮಣ್ಣು ತೆರವು ಬಳಿಕವಷ್ಟೇ ವಾಹನ ಸಂಚಾರ ಸಾಧ್ಯ. ಹೀಗಾಗಿ ಮಣ್ಣು ತೆರವು ಕಾರ್ಯ ಮುಂದುವರಿದಿದೆ.

ಮಳೆಗೆ ಸೋರುತ್ತಿದೆ ಐತಿಹಾಸಿಕ ಮಧುಕೇಶ್ವರ ದೇವಸ್ಥಾ‌ನ

ಭಾರಿ ಮಳೆ ಐತಿಹಾಸಿಕ ಮಧುಕೇಶ್ವರ ದೇವಸ್ಥಾ‌ನದ ಚಾವಣಿ ಸೋರುತ್ತಿದೆ. ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕದಂಬರ ರಾಜಧಾನಿ ಬನವಾಸಿಯ ಶ್ರೀ ಮಧುಕೇಶ್ವರ ದೇವಸ್ಥಾನವು ಭಾರೀ ಮಳೆಗೆ ಸೋರುತ್ತಿದೆ. ಹೀಗಾಗಿ ದೇವಸ್ಥಾನದ ಮೇಲ್ಭಾಗಕ್ಕೆ ಟಾರ್ಪಲ್ ಅಳವಡಿಕೆ ಮಾಡಲಾಗಿದೆ. ಪುರಾತತ್ವ ಇಲಾಖೆಯ ವ್ಯಾಪ್ತಿಯಲ್ಲಿರುವ ಮಧುಕೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರು, ಪ್ರವಾಸಿಗರಿಗೆ ತೊಂದರೆ ಆಗುತ್ತಿದೆ.

ಧಾರಾಕಾರ ಮಳೆಗೆ ಶಿರಸಿಯ ಗುಡ್ನಾಪುರ ಬಂಗಾರೇಶ್ವರ ದೇವಸ್ಥಾನ ಜಲಾವೃತಗೊಂಡಿತ್ತು. ನಿರಂತರ ಮಳೆಯಿಂದಾಗಿ ಮೈದುಂಬಿಕೊಂಡ ಗುಡ್ನಾಪುರ ಕೆರೆಗೆ ಹೊಂದಿಕೊಂಡೇ ಇರುವ ಬಂಗಾರೇಶ್ವರ ದೇವಸ್ಥಾನದ ಸುತ್ತ ನೀರು ಆವರಿಸಿಕೊಂಡಿತ್ತು. ನೀರಲ್ಲಿ ತೆರಳಿ ಬಂಗಾರೇಶ್ವರನಿಗೆ ಜನರು ಪೂಜೆ ಸಲ್ಲಿಸಿದರು.

ಹೆದ್ದಾರಿ ಬಂದ್‌

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಶಿರೂರು ಬಳಿ ಗುಡ್ಡ ಕುಸಿತ ಹಿನ್ನೆಲೆಯಲ್ಲಿ ಹೆದ್ದಾರಿ ಬಂದ್ ಮಾಡಲಾಗಿದೆ. ಹೀಗಾಗಿ ಮಂಗಳೂರಿನಿಂದ ಧಾರವಾಡಕ್ಕೆ ತೆರಳಬೇಕಾದ ಟ್ಯಾಂಕರ್ ಟ್ರಕ್‌ಗಳು ಟೋಲ್ ಗೇಟ್‌ನಲ್ಲೇ ಉಳಿಯುವಂತಾಗಿದೆ. ರಾಷ್ಟ್ರೀಯ ಹೆದ್ದಾರಿ 66 ಬೈಂದೂರು ತಾಲೂಕಿನ ಶಿರೂರು ಐಆರ್‌ಬಿ ಟೋಲ್ ಗೇಟ್ ಬಳಿ ಮೊಕ್ಕಾಂ ಹೂಡಿದ್ದಾರೆ.

ಕಳೆದ ಮೂರು ದಿನಗಳಿಂದ ಟ್ರಕ್ ಚಾಲಕರು ಇಲ್ಲಿಯೇ ಕಾಯುತ್ತಿದ್ದು, ಟ್ರಕ್‌ನಲ್ಲಿರುವ ರೇಷನ್ ಬಳಸಿ ಅಡುಗೆ ತಯಾರಿಸುತ್ತಿದ್ದಾರೆ. ಶೌಚ ಮತ್ತು ಸ್ನಾನಕ್ಕೆ ವ್ಯವಸ್ಥೆ ಸರಿಯಾಗಿಲ್ಲದೆ ದಿನದೂಡುತ್ತಿದ್ದಾರೆ. ಕೇವಲ ಎರಡು ದಿನಗಳಿಗೆ ಆಗುವಷ್ಟು ರೇಷನ್ ತಂದಿದ್ದರು. ಮಂಗಳೂರಿನಿಂದ ಎಲ್‌ಪಿಜಿ ಗ್ಯಾಸ್ ತುಂಬಿಸಿಕೊಂಡು ಅಂಕೋಲ ಮಾರ್ಗವಾಗಿ ಧಾರವಾಡ ತಲುಪ ಬೇಕಾಗಿರುವ ಟ್ಯಾಂಕರ್‌ಗಳು ನಿಂತಲ್ಲೇ ನಿಲ್ಲುವಂತಾಗಿದೆ. ಅಂಕೋಲಾ ಗುಡ್ಡ ಕುಸಿತ ಹಿನ್ನೆಲೆಯಲ್ಲಿ ಮುಖ್ಯ ಹೆದ್ದಾರಿ ಸಂಪೂರ್ಣ ಬಂದ್‌ ಆಗಿದೆ.

ಬಂಟ್ವಾಳ-ಉಪ್ಪಿನಂಗಡಿ ಸಂಪರ್ಕ ಕಲ್ಪಿಸುವ ರಸ್ತೆ ಸ್ಥಗಿತ

ದಕ್ಷಿಣ ಕನ್ನಡದ ಬಂಟ್ವಾಳದ ಅಜಿಲಮೊಗರು ಬಳಿ ನೇತ್ರಾವತಿ ನದಿ ಉಕ್ಕಿ ಹರಿದು ಮುಖ್ಯ ರಸ್ತೆಗೆ ಹರಿದು ಬಂದಿದೆ. ಅಜಿಲಮೊಗರು ಬಳಿ ರಸ್ತೆ ಜಲಾವೃತಗೊಂಡಿದ್ದು, ವಾಹನ ಸಂಚಾರ ಬಂದ್ ಆಗಿದೆ. ಹೀಗಾಗಿ ಬಂಟ್ವಾಳ-ಉಪ್ಪಿನಂಗಡಿ ಸಂಪರ್ಕ ಕಲ್ಪಿಸುವ ರಸ್ತೆ ಸಂಚಾರ ಸ್ಥಗಿತಗೊಂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain News: ಮಳೆ ಅನಾಹುತ; ಮನೆಗೋಡೆ ಕುಸಿದು ಇಬ್ಬರು ಕಂದಮ್ಮಗಳು ಸೇರಿ 3 ಸಾವು

Karnataka Rain News: ಅಮೂಲ್ಯ ಹಾಗೂ ಅನನ್ಯ ಮೃತಪಟ್ಟ ಎರಡು 2 ವರ್ಷದ ಅವಳಿಜವಳಿ ಕಂದಮ್ಮಗಳಾಗಿವೆ. ಇನ್ನೊಬ್ಬ ಮಹಿಳೆ ಚೆನ್ನಮ್ಮ (30) ಕೂಡ ಮೃತಪಟ್ಟಿದ್ದಾರೆ. ಮನೆಯೊಳಗಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

VISTARANEWS.COM


on

haveri karnataka rain news
Koo

ಹಾವೇರಿ: ರಾಜ್ಯದಲ್ಲಿ ಮಳೆ ಅನಾಹುತ (Karnataka Rain News) ಸೃಷ್ಟಿಸುತ್ತಿದೆ. ಹಾವೇರಿಯಲ್ಲಿ (Haveri news) ಮಳೆಗೆ ಒದ್ದೆಯಾದ ಮನೆಗೋಡೆ ಕುಸಿದು (Home collapse) ಎರಡು ಕಂದಮ್ಮಗಳು ಹಾಗೂ ಒಬ್ಬ ಮಹಿಳೆ (Rain deaths) ಸಾವಿಗೀಡಾಗಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ದುರಂತ ಸಂಭವಿಸಿದೆ.

ಅಮೂಲ್ಯ ಹಾಗೂ ಅನನ್ಯ ಮೃತಪಟ್ಟ ಎರಡು 2 ವರ್ಷದ ಅವಳಿಜವಳಿ ಕಂದಮ್ಮಗಳಾಗಿವೆ. ಇನ್ನೊಬ್ಬ ಮಹಿಳೆ ಚೆನ್ನಮ್ಮ (30) ಕೂಡ ಮೃತಪಟ್ಟಿದ್ದಾರೆ. ಮನೆಯೊಳಗಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮನೆ ಬೀಳುತ್ತಿದ್ದಂತೆ ಅಕ್ಕಪಕ್ಕದ ಮನೆಯವರು ರಕ್ಷಣೆಗೆ ಧಾವಿಸಿದ್ದು, ಮೃತ ದೇಹಗಳನ್ನ ಹೊರ ತೆಗೆದು ಗಾಯಾಳುಗಳನ್ನು ರಕ್ಷಿಸಿದ್ದಾರೆ. ಗಾಯಾಳುಗಳು ಸವಣೂರು ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸವಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಭೂಕುಸಿತ; ಶಿರಾಡಿ ಘಾಟ್​ನಲ್ಲಿ ಸಂಚಾರ ನಿಷೇಧ ​; ಬೆಂಗಳೂರು- ಮಂಗಳೂರು ಸಂಪರ್ಕ ಬಹುತೇಕ ಕಟ್​

ಹಾಸನ: ಹಾಸನ ಜಿಲ್ಲೆ ಸೇರಿದಂತೆ ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಘಾಟ್​ ಪ್ರದೇಶದ ಹಲವಡೆ ಗುಡ್ಡ ಕುಸಿತದ ಪ್ರಕಣಗಳು ಉಂಟಾಗುತ್ತಿವೆ. ಅಂತೆಯೇ ಶಿರಾಡಿ ಘಾಟ್​ನಲ್ಲಿ (Shiradi Ghat) ಗುಡ್ಡ ಕುಸಿತ ಸಂಭವಿಸಲಿದೆ ಎಂಬ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ಮೂಲಕ ಪ್ರಯಾಣವನ್ನು ನಿಷೇಧ ಮಾಡ ಹಾಸನ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇದನ್ನು ಹೊರತುಪಡಿಸಿದರೆ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 278ರಲ್ಲಿ ರಾತ್ರಿ ವೇಳೆ ವಾಹನಗಳು ಸಾಗದಂತೆ ಕೊಡಗು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮಡಿಕೇರಿ ಮೂಲಕ ಸಾಗುವ ಈ ರಸ್ತೆಯೂ ಬಂದ್ ಆಗಿರುವ ಕಾರಣ ಮಂಗಳೂರು ಮತ್ತು ಬೆಂಗಳೂರು (Bangalore To Mangalore) ನಡುವಿನ ಸಂಪರ್ಕ ಬಹುತೇಕ ಕಡಿತಗೊಂಡಿದೆ. ಇನ್ನು ಚಾರ್ಮಾಡಿ ಘಾಟ್ ಒಂದೇ ಉಳಿದಿದ್ದು ಅದರ ಮೇಲೆ ವಾಹನ ದಟ್ಟಣೆ ಜಾಸ್ತಿಯಾಗಲಿದೆ. ಆ ರಸ್ತೆಯಲ್ಲೂ ಅಲ್ಲಲ್ಲಿ ಗುಡ್ಡ ಕುಸಿತದ ಪ್ರಕಣಗಳು ಸಂಭವಿಸುತ್ತಿರುವುದರಿಂದ ಸಂಚಾರ ಸುರಕ್ಷಿತವಲ್ಲ.

ಶಿರಾಡಿಘಾಟ್ ನ ದೊಡ್ಡತಪ್ಪು ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿತ್ತು. ಅಲ್ಲಿ ಇನ್ನಷ್ಟು ಭೂಕುಸಿತ ಸಂಭವಿಸುವ ಸಾಧ್ಯತೆಗಳಿವೆ. ಜುಲೈ 18ರಿಂದ ಅನ್ವಯವಾಗುವಂತೆ ಈ ರಸ್ತೆಯ ಮೂಲಕ ಪ್ರಯಾಣ ಮಾಡದಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ರಸ್ತೆ ದುರಸ್ತಿ ಆಗುವ ತನಕ ಎಲ್ಲ ರೀತಿಯ ವಾಹನ ಸಂಚಾರ ನಿಷೇಧ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ನಿರಂತರ ಮಳೆ ಸುರಿಯುತ್ತಿರುವ ಕಾರಣ ಮತ್ತಷ್ಟು ಭೂ ಕುಸಿತದ ಉಂಟಾಗುವ ಸಾಧ್ಯತೆಗಳಿವೆ. ಮುಂಜಾಗ್ರತಾ ಕ್ರಮವಾಗಿ ಸಂಚಾರ ನಿಷೇಧಿಸಿ ಡಿಸಿ ಸಿ ಸತ್ಯಭಾಮ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನಿಂದ -ಮಂಗಳೂರಿಗೆ ತೆರಳುವ ವಾಹನಗಳು ಚಾರ್ಮಾಡಿ ಘಾಟ್ ಮೂಲಕ ಅವರ ಸೂಚನೆ ನೀಡಿದ್ದಾರೆ.

ಸಂಪಾಜೆ ಘಾಟಿಯೂ ಬಂದ್‌

ಮಡಿಕೇರಿ: ಕೊಡಗು ಸೇರಿದಂತೆ ರಾಜ್ಯದ ಎಲ್ಲೆಡೆ ಸತತ ನಾಲ್ಕು ದಿನಗಳಿಂದ ಮಳೆ ಸುರಿಯುತ್ತಿದೆ (Rain News). ಹೀಗಾಗಿ ಘಟ್ಟ ಪ್ರದೇಶಗಳಲ್ಲಿ ಗುಡ್ಡ ಕುಸಿತ ಪ್ರಕರಣಗಳು ಸಂಭವಿಸುತ್ತಿವೆ. ಗುಡ್ಡದ ಸುತ್ತಮುತ್ತಲಿನ ಪ್ರದೇಶದ ನಿವಾಸಿಗಳ ಆತಂಕ ಇದರಿಂದಾಗಿ ಹೆಚ್ಚಾಗಿದೆ. ಇದೇ ವೇಳೆ ಕರ್ನಾಟಕದ ಪ್ರಮುಖ ಘಾಟಿಗಳಲ್ಲಿ ಹಾದು ಹೋಗಿರುವ ರಸ್ತೆ ಇಕ್ಕೆಲಗಳಲ್ಲಿ ಮಣ್ಣು ಕುಸಿತ ಉಂಟಾಗುತ್ತಿರುವ ಕಾರಣ ಮಡಿಕೇರಿ ಮೂಲಕ ಮಂಗಳೂರಿಗೆ ಸಂಪರ್ಕ ಕಲ್ಪಿಸುವ 275 ಬಂದ್ ಮಾಡಲಾಗಿದೆ.

ಮಡಿಕೇರಿ ಮಂಗಳೂರು ರಸ್ತೆಯ ಕರ್ತೋಜಿ ಬಳಿ ಗುಡ್ಡ ಕುಸಿಯುವ ಭೀತಿ ಉಂಟಾಗಿದ್ದು, ಯಾವುದೇ ಕ್ಷಣದಲ್ಲಿ ಗುಡ್ಡ ಜಾರಿ ರಸ್ತೆಗೆ ಬರುವ ಸಾಧ್ಯತೆಗಳಿವೆ. ಹೀಗಾಗಿ ಜುಲೈ 18ರಿಂದ 22ರವರೆಗೆ ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿ 275 ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಗುರುವಾರದಿಂದ 5 ದಿನಗಳ ಕಾಲ ರಾತ್ರಿ 8ರಿಂದ ಬೆಳಗ್ಗೆ 6 ಗಂಟೆವರೆಗೆ ಅಧಿಕಾರಿಗಳು ರಸ್ತೆ ಪ್ರಯಾಣಕ್ಕೆ ನಿರ್ಬಂಧ ಹೇರಿದ್ದಾರೆ ಕರ್ತವ್ಯ ನಿರತ ಅಧಿಕಾರಿಗಳ ವಾಹನ ಹೊರತುಪಡಿಸಿ ಉಳಿದ ವಾಹನ ಸಂಚಾರ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Continue Reading

ಮಳೆ

Karnataka Weather : ಕರಾವಳಿ, ಮಲೆನಾಡು ಸೇರಿ ಒಳನಾಡಲ್ಲಿ ಭಾರಿ ಮಳೆ; ಗಾಳಿಯ ಶರವೇಗ 50 ಕಿ.ಮೀ!

Karnataka Weather Forecast : ರಾಜ್ಯದಲ್ಲಿ ಈ ವಾರ ಪೂರ್ತಿ ಮಳೆಯು (Karnataka Rain) ಅಬ್ಬರಿಸಲಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದ್ದು, ಗಾಳಿ ವೇಗವು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

VISTARANEWS.COM


on

By

karnataka Weather Forecast
ಭಾರಿ ಮಳೆಗೆ ಶಿರಸಿಯ ಚೌಡೇಶ್ವರಿ ಕಾಲೋನಿಯಲ್ಲಿ ನೀರು ನಿಂತ ಪರಿಣಾಮ ಮನೆಯಲ್ಲೇ ಲಾಕ್‌ ಆದ ಮಂದಿ
Koo

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಜನ-ಜೀವನ (Karnataka Weather Forecast) ಅಸ್ತವ್ಯಸ್ತಗೊಂಡಿದೆ. ಶುಕ್ರವಾರವೂ ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ (Karnataka Rain) ಸಾಧ್ಯತೆಯಿದೆ. ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಮಲೆನಾಡು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭರ್ಜರಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಕಡೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಸೇರಿದಂತೆ ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೋಲಾರದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ

ಇದನ್ನೂ ಓದಿ: Kiccha Sudeep: ಸೆಲ್ಫಿಗಾಗಿ 2 ಗಂಟೆ ಕಾದ ಅಭಿಮಾನಿಗೆ ಕಿಚ್ಚ ಸುದೀಪ್ ಅವಮಾನ! ವಿಡಿಯೊ ನೋಡಿ

karnataka weather Forecast
ಭಾರಿ ಮಳೆಗೆ ಶಿರಸಿಯ ಬಡಾವಣೆಯೊಂದರಲ್ಲಿ ನೀರು ನಿಂತ ದೃಶ್ಯ

ಬೆಳಗಾವಿಯಲ್ಲಿ ಭಾರಿ ಮಳೆ ಎಚ್ಚರಿಕೆ

ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಬೆಳಗಾವಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್‌, ಧಾರವಾಡ, ಗದಗ, ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಸುತ್ತಮುತ್ತ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಜಿಲ್ಲೆಗಳಿಗೆ ಮುನ್ನೆಚ್ಚರಿಕೆ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿಗೆ 40-50 ಕಿ.ಮೀ ತಲುಪಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೊಡಗು ಜಿಲ್ಲೆಗೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಯಾದಗಿರಿ, ಹಾಸನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Shiradi Ghat: ಭೂಕುಸಿತ; ಶಿರಾಡಿ ಘಾಟ್​ನಲ್ಲಿ ಸಂಚಾರ ನಿಷೇಧ ​; ಬೆಂಗಳೂರು- ಮಂಗಳೂರು ಸಂಪರ್ಕ ಬಹುತೇಕ ಕಟ್​

Shiradi Ghat :

VISTARANEWS.COM


on

Shiradi Ghat
Koo

ಹಾಸನ: ಹಾಸನ ಜಿಲ್ಲೆ ಸೇರಿದಂತೆ ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಘಾಟ್​ ಪ್ರದೇಶದ ಹಲವಡೆ ಗುಡ್ಡ ಕುಸಿತದ ಪ್ರಕಣಗಳು ಉಂಟಾಗುತ್ತಿವೆ. ಅಂತೆಯೇ ಶಿರಾಡಿ ಘಾಟ್​ನಲ್ಲಿ (Shiradi Ghat) ಗುಡ್ಡ ಕುಸಿತ ಸಂಭವಿಸಲಿದೆ ಎಂಬ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ಮೂಲಕ ಪ್ರಯಾಣವನ್ನು ನಿಷೇಧ ಮಾಡ ಹಾಸನ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇದನ್ನು ಹೊರತುಪಡಿಸಿದರೆ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 278ರಲ್ಲಿ ರಾತ್ರಿ ವೇಳೆ ವಾಹನಗಳು ಸಾಗದಂತೆ ಕೊಡಗು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮಡಿಕೇರಿ ಮೂಲಕ ಸಾಗುವ ಈ ರಸ್ತೆಯೂ ಬಂದ್ ಆಗಿರುವ ಕಾರಣ ಮಂಗಳೂರು ಮತ್ತು ಬೆಂಗಳೂರು (Bangalore To Mangalore) ನಡುವಿನ ಸಂಪರ್ಕ ಬಹುತೇಕ ಕಡಿತಗೊಂಡಿದೆ. ಇನ್ನು ಚಾರ್ಮಾಡಿ ಘಾಟ್ ಒಂದೇ ಉಳಿದಿದ್ದು ಅದರ ಮೇಲೆ ವಾಹನ ದಟ್ಟಣೆ ಜಾಸ್ತಿಯಾಗಲಿದೆ. ಆ ರಸ್ತೆಯಲ್ಲೂ ಅಲ್ಲಲ್ಲಿ ಗುಡ್ಡ ಕುಸಿತದ ಪ್ರಕಣಗಳು ಸಂಭವಿಸುತ್ತಿರುವುದರಿಂದ ಸಂಚಾರ ಸುರಕ್ಷಿತವಲ್ಲ.

ಶಿರಾಡಿಘಾಟ್ ನ ದೊಡ್ಡತಪ್ಪು ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿತ್ತು. ಅಲ್ಲಿ ಇನ್ನಷ್ಟು ಭೂಕುಸಿತ ಸಂಭವಿಸುವ ಸಾಧ್ಯತೆಗಳಿವೆ. ಜುಲೈ 18ರಿಂದ ಅನ್ವಯವಾಗುವಂತೆ ಈ ರಸ್ತೆಯ ಮೂಲಕ ಪ್ರಯಾಣ ಮಾಡದಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ರಸ್ತೆ ದುರಸ್ತಿ ಆಗುವ ತನಕ ಎಲ್ಲ ರೀತಿಯ ವಾಹನ ಸಂಚಾರ ನಿಷೇಧ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ನಿರಂತರ ಮಳೆ ಸುರಿಯುತ್ತಿರುವ ಕಾರಿನ ಮತ್ತಷ್ಟು ಭೂ ಕುಸಿತದ ಉಂಟಾಗುವ ಸಾಧ್ಯತೆಗಳಿವೆ. ಮುಂಜಾಗ್ರತಾ ಕ್ರಮವಾಗಿ ಸಂಚಾರ ನಿಷೇಧಿಸಿ ಡಿಸಿ ಸಿ ಸತ್ಯಭಾಮ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನಿಂದ -ಮಂಗಳೂರಿಗೆ ತೆರಳುವ ವಾಹನಗಳು ಚಾರ್ಮಾಡಿ ಘಾಟ್ ಮೂಲಕ ಅವರ ಸೂಚನೆ ನೀಡಿದ್ದಾರೆ.

ಗುಡ್ಡ ಕುಸಿತದ ಭೀತಿ, ಮಡಿಕೇರಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್​​

ಮಡಿಕೇರಿ: ಕೊಡುಗು ಸೇರಿದಂತೆ ರಾಜ್ಯದ ಎಲ್ಲೆಡೆ ಸತತ ನಾಲ್ಕು ದಿನಗಳಿಂದ ಮಳೆ ಸುರಿಯುತ್ತಿದೆ (Rain News). ಹೀಗಾಗಿ ಘಟ್ಟ ಪ್ರದೇಶಗಳಲ್ಲಿ ಗುಡ್ಡ ಕುಸಿತ ಪ್ರಕರಣಗಳು ಸಂಭವಿಸುತ್ತಿವೆ. ಗುಡ್ಡದ ಸುತ್ತಮುತ್ತಲಿನ ಪ್ರದೇಶದ ನಿವಾಸಿಗಳ ಆತಂಕ ಇದರಿಂದಾಗಿ ಹೆಚ್ಚಾಗಿದೆ. ಇದೇ ವೇಳೆ ಕರ್ನಾಟಕದ ಪ್ರಮುಖ ಘಾಟಿಗಳಲ್ಲಿ ಹಾದು ಹೋಗಿರುವ ರಸ್ತೆ ಇಕ್ಕೆಲಗಳಲ್ಲಿ ಮಣ್ಣು ಕುಸಿತ ಉಂಟಾಗುತ್ತಿರುವ ಕಾರಣ ಮಡಿಕೇರಿ ಮೂಲಕ ಮಂಗಳೂರಿಗೆ ಸಂಪರ್ಕ ಕಲ್ಪಿಸುವ 275 ಬಂದ್ ಮಾಡಲಾಗಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

ಮಡಿಕೇರಿ ಮಂಗಳೂರು ರಸ್ತೆಯ ಕರ್ತೋಜಿ ಬಳಿ ಗುಡ್ಡ ಕುಸಿಯುವ ಭೀತಿ ಉಂಟಾಗಿದ್ದು, ಯಾವುದೇ ಕ್ಷಣದಲ್ಲಿ ಗುಡ್ಡ ಜಾರಿ ರಸ್ತೆಗೆ ಬರುವ ಸಾಧ್ಯತೆಗಳಿವೆ. ಹೀಗಾಗಿ ಜುಲೈ 18ರಿಂದ 22ರವರೆಗೆ ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿ 275 ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಗುರುವಾರದಿಂದ 5 ದಿನಗಳ ಕಾಲ ರಾತ್ರಿ 8ರಿಂದ ಬೆಳಗ್ಗೆ 6 ಗಂಟೆವರೆಗೆ ಅಧಿಕಾರಿಗಳು ರಸ್ತೆ ಪ್ರಯಾಣಕ್ಕೆ ನಿರ್ಬಂಧ ಹೇರಿದ್ದಾರೆ ಕರ್ತವ್ಯ ನಿರತ ಅಧಿಕಾರಿಗಳ ವಾಹನ ಹೊರತುಪಡಿಸಿ ಉಳಿದ ವಾಹನ ಸಂಚಾರ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಡ್ಡ ಕುಸಿಯು ಭೀತಿ ಹುಟ್ಟಿಸಿರುವ ಗುಡ್ಡದ ಮಣ್ಣು ತೆರವು ಕಾರ್ಯ ಆರಂಭ ಮಾಡಲಾಗಿದೆ. ಅದೇ ರೀತಿ ಮಡಿಕೇರಿ ಬಳಿ ಬ್ಯಾರಿಕೇಡ್ ಹಾಕಿ ವಾಹನಗಳು ಮುಂದಕ್ಕೆ ಸಾಗದಂತೆ ಅಧಿಕಾರಿಗಳು ತಡೆಯುತ್ತಿದ್ದಾರೆ ಅದೇ ರೀತಿ ದಕ್ಷಿಣ ಕನ್ನಡದ ಮಾಣಿ ಬಳಿಯಲ್ಲೇ ವಾಹನಗಳಿಗೆ ತಡೆದು ಚಾರ್ಮಾಡಿ ಮಾರ್ಗವಾಗಿ ಹೋಗುವಂತೆ ಸೂಚನೆ ನೀಡಲಾಗುತ್ತಿದೆ. ರಸ್ತೆ ಬಂದ್ ಮಾಡುವ ನಿರ್ಧಾರ ತೆಗೆದುಕೊಂಡಿರು ಕಾರಣ ವಾಹನ ಸವಾರರು ಪರದಾಡುವಂತಾಗಿದೆ, ಮಂಗಳೂರು ಕಡೆ ಹೋಗುವ ವಾಹನ ಸವಾರರ‌ ಪರದಾಡುವಂತಾಗಿದೆ.

Continue Reading
Advertisement
Kiran Kumar
ಕರ್ನಾಟಕ9 mins ago

ವಿಸ್ತಾರ ನ್ಯೂಸ್‌ ಕಾರ್ಯನಿರ್ವಾಹಕ ನಿರ್ದೇಶಕ ಹುದ್ದೆಯಿಂದ ಕಿರಣ್‌ ಕುಮಾರ್‌ ಡಿ ಕೆ ಅಮಾನತು

Valmiki Corporation Scam
ಪ್ರಮುಖ ಸುದ್ದಿ11 mins ago

Valmiki Corporation Scam: ಮೃತ ಅಧೀಕ್ಷಕ ಚಂದ್ರಶೇಖರನ್‌ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಿದ ಸಿಎಂ

Pooja Khedkar
ದೇಶ24 mins ago

Pooja Khedkar: IAS ಟ್ರೈನಿ ಅಧಿಕಾರಿ ಪೂಜಾ ಖೇಡ್ಕರ್‌ ವಿರುದ್ಧ FIR ದಾಖಲಿಸಿದ UPSC

CM Siddaramaiah
ಕರ್ನಾಟಕ38 mins ago

CM Siddaramaiah: ವಾಲ್ಮೀಕಿ ನಿಗಮ ಅಕ್ರಮಕ್ಕೆ ಸರ್ಕಾರ ಹೊಣೆಯಲ್ಲ; ಚಂದ್ರಶೇಖರನ್‌ ಆತ್ಮಹತ್ಯೆಗೆ ಅಧಿಕಾರಿಗಳು ಕಾರಣ ಎಂದ ಸಿಎಂ!

Ishan Kishan
ಕ್ರಿಕೆಟ್41 mins ago

Ishan Kishan: ಟೀಮ್​ ಇಂಡಿಯಾದಲ್ಲಿ ಇಶಾನ್ ಕಿಶನ್​ಗೆ ಬಾಗಿಲು ಬಂದ್​?

Krishan Kumar Daughter Tishaa Dies Of Cancer At 21
ಬಾಲಿವುಡ್49 mins ago

Krishan Kumar: ಕೇವಲ 21ನೇ ವಯಸ್ಸಿಗೆ ನಿಧನ ಹೊಂದಿದ ‘ಅನಿಮಲ್’ ಸಿನಿಮಾ ನಿರ್ಮಾಪಕನ ಮಗಳು

Indian Navy Recruitment
ಉದ್ಯೋಗ1 hour ago

Indian Navy Recruitment: ಭಾರತೀಯ ನೌಕಾ ಪಡೆಯಲ್ಲಿದೆ 741 ಹುದ್ದೆ; 10ನೇ ತರಗತಿ ಪಾಸಾದವರಿಗೂ ಇದೆ ಅವಕಾಶ

Microsoft Windows Outage
ಪ್ರಮುಖ ಸುದ್ದಿ1 hour ago

Microsoft Windows Outage: ಮೈಕ್ರೊಸಾಫ್ಟ್​​ ಸಮಸ್ಯೆ ; ಬೆಂಗಳೂರು ಸೇರಿದಂತೆ ದೇಶದ ವಿಮಾನ ನಿಲ್ದಾಣಗಳಲ್ಲಿ ಅಲ್ಲೋಲಕಲ್ಲೋಲ

Dengue Fever
ಬೆಂಗಳೂರು1 hour ago

Dengue Fever : ಡೆಂಗ್ಯೂ ಭೀತಿ- ಸೊಳ್ಳೆಗಳ ನಾಶಕ್ಕೆ ಫೀಲ್ಡಿಗಿಳಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

Accident Video
Latest1 hour ago

Accident Video: ಸ್ಕೂಟರ್‌ಗೆ ಅಪ್ಪಳಿಸಿದ ಕಾರು; 30 ಅಡಿ ದೂರ ಎಗರಿ ಬಿದ್ದ ಮಹಿಳಾ ಕಾನ್‌ಸ್ಟೇಬಲ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ4 hours ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ5 hours ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ1 day ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ1 day ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಟ್ರೆಂಡಿಂಗ್‌