Supreme Court: ಕ್ರಿಮಿನಲ್ ಮೊಕದ್ದಮೆಯಿಂದ ರಾಜ್ಯಪಾಲರಿಗೆ ವಿನಾಯಿತಿ; ಪರಿಶೀಲಿಸಲು ಸುಪ್ರೀಂ ಕೋರ್ಟ್‌ ಸಮ್ಮತಿ - Vistara News

ದೇಶ

Supreme Court: ಕ್ರಿಮಿನಲ್ ಮೊಕದ್ದಮೆಯಿಂದ ರಾಜ್ಯಪಾಲರಿಗೆ ವಿನಾಯಿತಿ; ಪರಿಶೀಲಿಸಲು ಸುಪ್ರೀಂ ಕೋರ್ಟ್‌ ಸಮ್ಮತಿ

Supreme Court: ಮಹತ್ವದ ಬೆಳವಣಿಗೆಯೊಂದರಲ್ಲಿ ಕ್ರಿಮಿನಲ್ ಮೊಕದ್ದಮೆಯಿಂದ ರಾಜ್ಯಪಾಲರಿಗೆ ಸಂಪೂರ್ಣ ವಿನಾಯಿತಿ ನೀಡುವ ಸಾಂವಿಧಾನಿಕ ನಿಬಂಧನೆಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ಒಪ್ಪಿಕೊಂಡಿದೆ. ಮಹಿಳೆ ತನ್ನ ವಿರುದ್ಧ ನೀಡಿದ ಲೈಂಗಿಕ ಕಿರುಕುಳ ದೂರಿಗೆ ಸಂಬಂಧಿಸಿದಂತೆ ರಾಜ್ಯಪಾಲ ಬೋಸ್ ಅವರು ಕೋರಿರುವ ವಿನಾಯಿತಿಯನ್ನು ಅರ್ಜಿಯು ಪ್ರಶ್ನಿಸಿದೆ.

VISTARANEWS.COM


on

Supreme Court
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕ್ರಿಮಿನಲ್ ಮೊಕದ್ದಮೆಯಿಂದ ರಾಜ್ಯಪಾಲರಿಗೆ ಸಂಪೂರ್ಣ ವಿನಾಯಿತಿ ನೀಡುವ ಸಾಂವಿಧಾನಿಕ ನಿಬಂಧನೆಯನ್ನು (Blanket immunity) ಪರಿಶೀಲಿಸಲು ಸುಪ್ರೀಂ ಕೋರ್ಟ್ (Supreme Court) ಶುಕ್ರವಾರ ಒಪ್ಪಿಕೊಂಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ.ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠವು ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ.ಆನಂದ ಬೋಸ್ (CV Ananda Bose) ವಿರುದ್ಧ ರಾಜಭವನದ ಮಾಜಿ ಮಹಿಳಾ ಉದ್ಯೋಗಿಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರದಲ್ಲಿ ಭಾರತದ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಅವರ ಸಹಾಯವನ್ನು ಕೋರಿತು.

ಮಹಿಳೆ ತನ್ನ ವಿರುದ್ಧ ನೀಡಿದ ಲೈಂಗಿಕ ಕಿರುಕುಳ ದೂರಿಗೆ ಸಂಬಂಧಿಸಿದಂತೆ ರಾಜ್ಯಪಾಲ ಬೋಸ್ ಅವರು ಕೋರಿರುವ ವಿನಾಯಿತಿಯನ್ನು ಅರ್ಜಿಯು ಪ್ರಶ್ನಿಸಿದೆ. ಮಹಿಳೆಯ ಪರವಾಗಿ ಹಾಜರಾದ ಹಿರಿಯ ವಕೀಲ ಶ್ಯಾಮ್ ದಿವಾನ್, “ತನಿಖೆ ನಡೆಸುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ಆರೋಪಕ್ಕೆ ಸಂಬಂಧಿಸಿದಂತೆ ಈಗಲೇ ಪುರಾವೆಗಳನ್ನು ಸಂಗ್ರಹಿಸಬೇಕು. ರಾಜ್ಯಪಾಲರು ಅಧಿಕಾರದಿಂದ ಕೆಳಗಿಳಿಯುವವರೆಗೂ ವಿಚಾರಣೆ ಅನಿರ್ದಿಷ್ಟವಾಗಿ ಮುಂದೂಡಲು ಸಾಧ್ಯವಿಲ್ಲ. 361ನೇ ವಿಧಿಯ ಕಲಂ 2ರ ಅಡಿಯಲ್ಲಿ ರಾಜ್ಯಪಾಲರಿಗೆ ನೀಡಲಾದ ವಿನಾಯಿತಿಯಿಂದ ತನಿಖೆಯನ್ನು ತಪ್ಪಿಸಲು ಸಾಧ್ಯವಿಲ್ಲʼʼ ಎಂದು ವಾದಿಸಿದರು.

ಹೆಚ್ಚುವರಿಯಾಗಿ ಕ್ರಿಮಿನಲ್ ಮೊಕದ್ದಮೆಯಿಂದ ರಾಜ್ಯಪಾಲರಿಗೆ ನೀಡಬಹುದಾದ ವಿನಾಯಿತಿಗೆ ಸಂಬಂಧಿಸಿದಂತೆ ನಿರ್ದಿಷ್ಟ ಮಾರ್ಗಸೂಚಿಗಳನ್ನು ರೂಪಿಸಲು ನಿರ್ದೇಶನಗಳನ್ನು ನೀಡುವಂತೆ ಅರ್ಜಿದಾರರು ನ್ಯಾಯಾಲಯವನ್ನು ಕೋರಿದರು.

“ಸಂವಿಧಾನದ 361ನೇ ವಿಧಿಯ ಕಲಂ (2)ರ ಅಡಿಯಲ್ಲಿ ರಾಜ್ಯಪಾಲರಿಗೆ ನೀಡಲಾಗುವ ರಕ್ಷಣೆಯ ವ್ಯಾಪ್ತಿಗೆ ಸಂಬಂಧಿಸಿದ ವಿಷಯವನ್ನು ಅರ್ಜಿಯು ಪ್ರಶ್ನಿಸುತ್ತದೆ” ಎಂದು ನ್ಯಾಯಪೀಠವು ರಾಜ್ಯ ಸರ್ಕಾರ ಮತ್ತು ಇತರರಿಗೆ ನೀಡಿದ ನೋಟಿಸ್‌ನಲ್ಲಿ ತಿಳಿಸಿದೆ.

ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ ವಿನಾಯಿತಿ ನೀಡುವ 361ನೇ ವಿಧಿಯ ಪ್ರಕಾರ, ಅವರ ವಿರುದ್ಧ ಯಾವುದೇ ನ್ಯಾಯಾಲಯದಲ್ಲಿ, ಯಾವುದೇ ಕ್ರಿಮಿನಲ್ ವಿಚಾರಣೆಯನ್ನು ಪ್ರಾರಂಭಿಸಬಾರದು ಅಥವಾ ಮುಂದುವರಿಸಬಾರದು. ರಾಷ್ಟ್ರಪತಿ ಅಥವಾ ರಾಜ್ಯಪಾಲರ ಬಂಧನಕ್ಕೆ ಯಾವುದೇ ನ್ಯಾಯಾಲಯದಿಂದ ಹೊರಡಿಸುವಂತಿಲ್ಲ.

ರಕ್ಷಣೆ ಒದಗಿಸಿ

ಈ ಪ್ರಕರಣದ ಬಗ್ಗೆ ಪಶ್ಚಿಮ ಬಂಗಾಳ ಪೊಲೀಸರು ತನಿಖೆ ನಡೆಸಬೇಕು ಮತ್ತು ಮಹಿಳೆ ಮತ್ತು ಆಕೆಯ ಕುಟುಂಬಕ್ಕೆ ರಕ್ಷಣೆ ನೀಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ. ಏಪ್ರಿಲ್ 24 ಮತ್ತು ಮೇ 2ರಂದು ರಾಜ್ಯಪಾಲರ ನಿವಾಸದಲ್ಲಿ ಆನಂದ ಬೋಸ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ರಾಜಭವನದ ಗುತ್ತಿಗೆ ಉದ್ಯೋಗಿಯಾಗಿದ್ದ ಮಹಿಳೆ ಕೋಲ್ಕತಾ ಪೊಲೀಸರಿಗೆ ದೂರು ನೀಡಿದ್ದರು.

ಇದನ್ನೂ ಓದಿ: West Bengal Governor: ರಾಜ್ಯಪಾಲರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ; TMC ಆಕ್ರೋಶ

ಆರೋಪಗಳನ್ನು ತಳ್ಳಿ ಹಾಕಿದ ರಾಜ್ಯಪಾಲ

ರಾಜ್ಯಪಾಲ ಸಿ.ವಿ.ಆನಂದ್‌ ಬೋಸ್‌ ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪಗಳನ್ನು ಅಂದೇ ತಳ್ಳಿ ಹಾಕಿದ್ದರು. ಈ ಕುರಿತು ಪ್ರತಿಕ್ರಿಯಿಸಿದ್ದ ಅವರು, ʼʼಸತ್ಯ ಎಂದಿಗೂ ಗೆದ್ದೇ ಗೆಲ್ಲುತ್ತದೆ. ಇಂತಹ ಕಟ್ಟು ಕಥೆಗಳನ್ನು ನಿಜ ಎಂದು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ನನ್ನ ಗೌರವಕ್ಕೆ ಚ್ಯುತಿ ತಂದು ತೇಜೋವಧೆ ಮಾಡುವ ಉದ್ದೇಶದಿಂದ ಈ ರೀತಿ ಮಾಡಲಾಗುತ್ತಿದೆ. ಬಂಗಾಳದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ನನ್ನ ಹೋರಾಟ ನಿಲ್ಲಿಸಲು ಇದೊಂದು ಪಿತೂರಿ ಅಷ್ಟೇ. ಆದರೆ ನನ್ನ ಈ ಹೋರಾಟ ಎಂದಿಗೂ ನಿಲ್ಲುವುದಿಲ್ಲ. ನನ್ನ‌ ವಿರುದ್ಧ ಆರೋಪ ಮಾಡಿರುವ ಮಹಿಳೆ ಕಾಂಗ್ರೆಸ್‌ನ ಏಜೆಂಟ್‌ʼʼ ಎಂದು ಅವರು ತಿರುಗೇಟು ಕೊಟ್ಟಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Keshav Prasad Maurya: ʼಮಾನ್ಸೂನ್‌ ಆಫರ್‌ʼ ಕೊಟ್ಟ ಅಖಿಲೇಶ್‌ ಯಾದವ್‌ಗೆ ಬಿಜೆಪಿ ಟಾಂಗ್‌

Keshav Prasad Maurya:ಅಖಿಲೇಶ್‌ ಯಾದವ್‌ ಅವರು ಹಗಲುಗನಸು ಕಾಣುತ್ತಿದ್ದಾರೆ. ಸಮಾಜವಾದಿ ಪಕ್ಷವೊಂದು ಮುಳುಗುತ್ತಿರುವ ಹಡಗು. 2017ನಂತಹ ಸೋಲು ಎಸ್‌ಪಿಗೆ ಕಟ್ಟಿಟ್ಟ ಬುತ್ತಿ. 2027ರಲ್ಲಿ ಬಿಜೆಪಿ ಮತ್ತೊಮ್ಮೆ ಹ್ಯಾಟ್ರಿಕ್‌ ಗೆಲುವು ಸಾಧಿಸುವುದು ಖಚಿತ. ಬಿಜೆಪಿ ಕಾರ್ಯಕರ್ತರು ಮಾನ್ಸೂನ್‌ ಆಫರನ್ನು ತಂದೆ ತರುತ್ತಾರೆ. ಎಸ್‌ಪಿ ಒಂದು ಸಾಯುತ್ತಿರುವ ಪಕ್ಷ. ಯಾದವ್‌ ಅವರು ಮುಂಗೇರಿಲಾಲ್‌ನ ಹಗಲುಗನಸಿನಂತೆ ಕನಸು ಕಾಣುತ್ತಲೇ ಇರಲಿ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

VISTARANEWS.COM


on

Keshav Prasad Maurya
Koo

ಲಖನೌ: ಉತ್ತರಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯಾನಾಥ್‌(Yogi Adityanath) ಮತ್ತು ಡಿಸಿಎಂ ಕೇಶವ್‌ ಪ್ರಸಾದ್‌ ಮೌರ್ಯ(Keshav Prasad Maurya) ನಡುವಿನ ಭಿನ್ನಮತವನ್ನೇ ಅಸ್ತ್ರವನ್ನಾಗಿಸಿಕೊಂಡಿರುವ ಸಮಾಜವಾದಿ ಪಕ್ಷ ಮುಂಬರುವ ವಿಧಾನಸಭೆಯಲ್ಲಿ ಮತ್ತೆ ಗದ್ದುಗೆ ಏರುವುದು ಖಚಿತ, ಬಿಜೆಪಿ ಸೋಲು ನಿಶ್ಚಿತ ಎಂದು ಹೇಳಿಕೆ ನೀಡುತ್ತಿದ್ದಾರೆ. ಅದೂ ಅಲ್ಲದೇ ಮಳೆಗಾಲದ ಆಫರ್‌! 100 ಶಾಸಕರನ್ನು ತನ್ನಿ ಸರ್ಕಾರ ರಚಿಸಿ ಎಂದು ಅಖಿಲೇಶ್‌ ಯಾದವ್‌(Akhilesh Yadav) ಕೂಡ ಟ್ವೀಟ್‌ ಮಾಡಿ ಬಿಜೆಪಿಯನ್ನು ಕೆಣಕಿದ್ದರು. ಇದೀಗ ಇದಕ್ಕೆ ಕೇಶವ್‌ ಪ್ರಸಾದ್‌ ಯಾದವ್‌ ತಿರುಗೇಟು ನೀಡಿದ್ದಾರೆ.

ಅಖಿಲೇಶ್‌ ಯಾದವ್‌ ಅವರು ಹಗಲುಗನಸು ಕಾಣುತ್ತಿದ್ದಾರೆ. ಸಮಾಜವಾದಿ ಪಕ್ಷವೊಂದು ಮುಳುಗುತ್ತಿರುವ ಹಡಗು. 2017ನಂತಹ ಸೋಲು ಎಸ್‌ಪಿಗೆ ಕಟ್ಟಿಟ್ಟ ಬುತ್ತಿ. 2027ರಲ್ಲಿ ಬಿಜೆಪಿ ಮತ್ತೊಮ್ಮೆ ಹ್ಯಾಟ್ರಿಕ್‌ ಗೆಲುವು ಸಾಧಿಸುವುದು ಖಚಿತ. ಬಿಜೆಪಿ ಕಾರ್ಯಕರ್ತರು ಮಾನ್ಸೂನ್‌ ಆಫರನ್ನು ತಂದೆ ತರುತ್ತಾರೆ. ಎಸ್‌ಪಿ ಒಂದು ಸಾಯುತ್ತಿರುವ ಪಕ್ಷ. ಯಾದವ್‌ ಅವರು ಮುಂಗೇರಿಲಾಲ್‌ನ ಹಗಲುಗನಸಿನಂತೆ ಕನಸು ಕಾಣುತ್ತಲೇ ಇರಲಿ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಕಳೆದ ಜೂನ್ 14ರಂದು ಲಖನೌದಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಲೋಕಸಭೆ ಚುನಾವಣೆಯ ಹಿನ್ನಡೆಗೆ ‘ಅತಿಯಾದ ಆತ್ಮವಿಶ್ವಾಸ’ ಕಾರಣ ಎಂದು ಸಿಎಂ ಯೋಗಿ ಆದಿತ್ಯನಾಥ್ ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ ಲೋಕಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು ಸೇರಿದಂತೆ ರಾಜ್ಯ ಬಿಜೆಪಿಯ ಹಲವು ನಾಯಕರು, ಯೋಗಿ ಆದಿತ್ಯನಾಥ್ ಅವರ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ತಮ್ಮ ಸೋಲಿಗೆ ಯೋಗಿ ಅವರ ಆಡಳಿತ ಶೈಲಿಯೇ ಕಾರಣ ಎಂದು ಆರೋಪಿಸುತ್ತಿದ್ದರು. ಸಿಎಂ ಯೋಗಿ ಆದಿತ್ಯಾನಾಥ್‌ ಮತ್ತು ಡಿಸಿಎಂ ಕೇಶವ್‌ ಪ್ರಸಾದ್‌ ಮೌರ್ಯ ನಡುವಿನ ಮುಸುಕಿನ ಗುದ್ದಾಟ ಬಹಿರಂಗವಾಗಿದೆ. ಇಬ್ಬರ ನಡುವಿನ ಭಾರೀ ಭಿನ್ನಮತದ ಬೆನ್ನಲ್ಲೇ ಕೇಶವ್ ಪ್ರಸಾದ್ ಮೌರ್ಯ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ(JP Nadda) ಅವರನ್ನು ಭೇಟಿ ಮಾಡಿದ್ದರು.

ಅಖಿಲೇಶ್‌ ಯಾದವ್‌ ಗೆ ತಿರುಗೇಟು

ಏತನ್ಮಧ್ಯೆ, ಮೌರ್ಯ ಅವರ ಪೋಸ್ಟ್ ಅನ್ನೇ ಅಸ್ತ್ರವನ್ನಾಗಿಸಿಕೊಂಡು ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ವ್ಯಂಗ್ಯವಾಡಿದೆ. ಈ ಬಗ್ಗೆ ಎಸ್ಪಿ ನಾಯಕ ಅಖಲೇಶ್‌ ಯಾದವ್‌ ಬಿಜೆಪಿಯನ್ನು ಟೀಕಿಸಿದ್ದರು. ಇದಕ್ಕೆ ಟಾಂಗ್‌ ಕೊಟ್ಟ, ಕೇಶವ್ ಪ್ರಸಾದ್ ಮೌರ್ಯ, ಇಂದು ಬಿಜೆಪಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪ್ರಬಲವಾಗಿದೆ ಮತ್ತು 2027 ರಲ್ಲಿ ಯುಪಿ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂದು ಹೇಳಿದರು.

ಇದನ್ನೂ ಓದಿ:Uttar Pradesh Politics: ಉತ್ತರಪ್ರದೇಶದಲ್ಲಿ ಬಿಜೆಪಿ ಹೀನಾಯ ಸೋಲಿಗೆ ಇತ್ತು ಆ 6 ಪ್ರಮುಖ ಕಾರಣಗಳು

Continue Reading

ದೇಶ

Pooja Khedkar: IAS ಟ್ರೈನಿ ಅಧಿಕಾರಿ ಪೂಜಾ ಖೇಡ್ಕರ್‌ ವಿರುದ್ಧ FIR ದಾಖಲಿಸಿದ UPSC

Pooja Khedkar: UPSC ತನ್ನ ಅಧಿಕೃತ ಪ್ರಕಟಣೆ ಹೊರಡಿಸಿದ್ದು, 2022ರ ನಾಗರಿಕ ಸೇವಾ ಪರೀಕ್ಷೆಯಲ್ಲಿ ಪೂಜಾ ಮನೋರಮಾ ದಿಲೀಪ್ ಖೇಡ್ಕರ್ ಅವರು ನಕಲಿ ದಾಖಲೆ ಸೃಷ್ಟಿಸಿರುವ ಆರೋಪವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ವಿವರವಾದ ಮತ್ತು ಸಂಪೂರ್ಣ ತನಿಖೆ ನಡೆಸಿದೆ. ಅವರನ್ನು ಮುಂಬರುವ ಪರೀಕ್ಷೆಗಳಿಂದ ಡಿಬಾರ್‌ ಮಾಡಲಾಗಿದೆ ಎನ್ನಲಾಗಿದೆ.

VISTARANEWS.COM


on

Pooja Khedkar
Koo

ಹೊಸದಿಲ್ಲಿ: ಮಹಾರಾಷ್ಟ್ರ ಕೇಡರ್‌ನ ಐಎಎಸ್‌ ಅಧಿಕಾರಿ, ಅತಿಯಾದ ದರ್ಪ, ನಕಲಿ ದಾಖಲೆ ಸೃಷ್ಟಿಯಿಂದಲೇ ದೇಶಾದ್ಯಂತ ಗಮನ ಸೆಳೆದಿರುವ ಟ್ರೈನಿ ಅಧಿಕಾರಿ (Trainee IAS Officer) ಪೂಜಾ ಖೇಡ್ಕರ್‌ (Pooja Khedkar) ವಿರುದ್ಧ ಕೇಂದ್ರ ಲೋಕ ಸೇವಾ ಆಯೋಗ(UPSC) ಎಫ್‌ಐಆರ್‌ ದಾಖಲಿಸಿದೆ. ಅಲ್ಲದೇ ನಾಗರಿಕ ಸೇವಾ ಪರೀಕ್ಷೆ-2022 ರ ಉಮೇದುವಾರಿಕೆಯನ್ನು ರದ್ದುಗೊಳಿಸುವಂತೆ ಶೋಕಾಸ್‌ ನೊಟೀಸ್‌ ಜಾರಿಗೊಳಿಸಲಾಗಿದೆ.

UPSC ತನ್ನ ಅಧಿಕೃತ ಪ್ರಕಟಣೆ ಹೊರಡಿಸಿದ್ದು, 2022ರ ನಾಗರಿಕ ಸೇವಾ ಪರೀಕ್ಷೆಯಲ್ಲಿ ಪೂಜಾ ಮನೋರಮಾ ದಿಲೀಪ್ ಖೇಡ್ಕರ್ ಅವರು ನಕಲಿ ದಾಖಲೆ ಸೃಷ್ಟಿಸಿರುವ ಆರೋಪವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ವಿವರವಾದ ಮತ್ತು ಸಂಪೂರ್ಣ ತನಿಖೆ ನಡೆಸಿದೆ. ಅವರನ್ನು ಮುಂಬರುವ ಪರೀಕ್ಷೆಗಳಿಂದ ಡಿಬಾರ್‌ ಮಾಡಲಾಗಿದೆ ಎನ್ನಲಾಗಿದೆ.

ಪೂಜಾ ಅವರು ಅಂಗವೈಕಲ್ಯ ಪ್ರಮಾಣಪತ್ರವನ್ನು ಪಡೆಯಲು ಸುಳ್ಳು ವಿಳಾಸ ಮತ್ತು ನಕಲಿ ಪಡಿತರ ಚೀಟಿಯನ್ನು ಬಳಸಿದ್ದಾರೆ ಎನ್ನುವ ಮಾಹಿತಿ ಬಹಿರಂಗಗೊಂಡಿದೆ.

ಪುಣೆಯ ಯಶವಂತರಾವ್ ಚವಾಣ್ ಸ್ಮಾರಕ ಆಸ್ಪತ್ರೆ 2022ರ ಆಗಸ್ಟ್ 24ರಂದು ಪೂಜಾಗೆ ಅಂಗವೈಕಲ್ಯ ಪ್ರಮಾಣಪತ್ರವನ್ನು ನೀಡಿದೆ. ಅದರಲ್ಲಿ ಪೂಜಾ ಖೇಡ್ಕರ್ ಅವರ ವಿಳಾಸವನ್ನು ʼʼಪುಣೆ ಜಿಲ್ಲೆಯ ಪ್ಲಾಟ್ ಸಂಖ್ಯೆ 53, ದೇಹು ಅಲಂಡಿ ರಸ್ತೆ, ತಲವಾಡೆ, ಪಿಂಪ್ರಿ ಚಿಂಚ್ವಾಡ್” ಎಂದು ಉಲ್ಲೇಖಿಸಲಾಗಿದೆ. ಆದರೆ ಈ ಸ್ಥಳದಲ್ಲಿ ಯಾವುದೇ ಮನೆ ಇಲ್ಲ. ಬದಲಾಗಿ ಥರ್ಮೋವರ್ಟಾ ಎಂಜಿನಿಯರಿಂಗ್ ಕಂಪನಿ ಎಂಬ ಕಾರ್ಖಾನೆ ಇದೆ. ಕುತೂಹಲಕಾರಿ ಸಂಗತಿಯೆಂದರೆ, ಕೆಂಪು-ನೀಲಿ ದೀಪವನ್ನು ಅಕ್ರಮವಾಗಿ ಬಳಸಿದ ನಂತರ ವಶಪಡಿಸಿಕೊಳ್ಳಲಾದ ಖೇಡ್ಕರ್ ಅವರ ಆಡಿ ಕಾರು ಈ ಕಂಪನಿಯ ಹೆಸರಿನಲ್ಲಿ ನೋಂದಾಯಿಸಲ್ಪಟ್ಟಿದೆ.

ಅಲ್ಲದೆ ಅಂಗವೈಕಲ್ಯ ಪ್ರಮಾಣಪತ್ರಗಳನ್ನು ಪಡೆಯಲು ಸರ್ಕಾರವು ಆಧಾರ್ ಕಾರ್ಡ್‌ ಅನ್ನು ಕಡ್ಡಾಯಗೊಳಿಸಿದ್ದರೂ ಪೂಜಾ ಅದರ ಬದಲು ಪಡಿತರ ಚೀಟಿ ಹಾಜರುಪಡಿಸಿದ್ದರು ಎಂದು ದಾಖಲೆಯಲ್ಲಿ ಉಲ್ಲೇಖಿಸಲಾಗಿದೆ. ನಕಲಿ ಪಡಿತರ ಚೀಟಿಯನ್ನು ತಯಾರಿಸಲು ಪೂಜಾ ನಕಲಿ ವಿಳಾಸವನ್ನು ಬಳಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಪೂಜಾ ಖೇಡ್ಕರ್ ಮೊಣಕಾಲಿನಲ್ಲಿ ಶೇ. 7ರಷ್ಟು ಅಂಗವೈಕಲ್ಯವನ್ನು ಹೊಂದಿದ್ದಾರೆ ಎಂದು ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ.

ಸಿವಿಲ್‌ ಸರ್ವಿಸ್‌ ಆಯ್ಕೆಯ ಸಮಯದಲ್ಲಿ ಈ ಅಂಗವೈಕಲ್ಯ ಪ್ರಮಾಣಪತ್ರದಿಂದ ಪೂಜಾ ಅವರಿಗೆ ಅದು ಹೇಗೆ ರಿಯಾಯಿತಿ ಸಿಕ್ಕಿತು ಎನ್ನುವ ಪ್ರಶ್ನೆಯೂ ಎದ್ದಿದೆ. ಯಾಕೆಂದರೆ ಪೂಜಾ ʼಬೆಂಚ್‌ಮಾರ್ಕ್‌ ಅಂಗವೈಕಲ್ಯ ಹೊಂದಿರುವ ವ್ಯಕ್ತಿʼ ವಿಭಾಗದಲ್ಲಿ ವಿನಾಯಿತಿ ಕೋರಿದ್ದರು. ಆದರೆ ಯುಪಿಎಸ್‌ಸಿ ನಿಯಮದ ಪ್ರಕಾರ ಈ ರಿಯಾಯಿತಿ ಶೇ. 40ಕ್ಕಿಂತ ಕಡಿಮೆ ಇಲ್ಲದ ವ್ಯಕ್ತಿಗೆ ದೊರೆಯಬೇಕು. ಆದರೆ ಪೂಜಾ ಅವರ ಪ್ರಮಾಣಪತ್ರದಲ್ಲಿ ಅವರ ಅಂಗವೈಕಲ್ಯದ ಪ್ರಮಾಣವನ್ನು ಶೇ. 7 ಎಂದು ಉಲ್ಲೇಖಿಸಲಾಗಿದ್ದು, ಇದು ಯುಪಿಎಸ್‌ಸಿ ಮಿತಿಗಿಂತ ತುಂಬಾ ಕಡಿಮೆ ಇದೆ.

ಈ ಹಿಂದೆ ಅವರು ತಮ್ಮ ಅಂಗವೈಕಲ್ಯ ಪ್ರಮಾಣಪತ್ರವನ್ನು ಪರಿಶೀಲಿಸುವ ವೈದ್ಯಕೀಯ ತಪಾಸಣೆಯನ್ನು ತಪ್ಪಿಸಿಕೊಂಡಿದ್ದರು. ನಂತರ ಖಾಸಗಿ ವರದಿಯನ್ನು ಸಲ್ಲಿಸಿದ್ದರು. ಸದ್ಯ ಪೂಜಾ ಸಲ್ಲಿಸಿದ ಪ್ರಮಾಣಪತ್ರಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವಂತೆ ಪುಣೆಯ ಅಂಗವಿಕಲರ ಆಯುಕ್ತರ ಕಚೇರಿ ಪೊಲೀಸರಿಗೆ ಸೂಚಿಸಿದೆ.

ಇದನ್ನೂ ಓದಿ:Pooja Khedkar: ಅಂಗವೈಕಲ್ಯ ಪ್ರಮಾಣಪತ್ರಕ್ಕಾಗಿ ನಕಲಿ ವಿಳಾಸ ನೀಡಿದ್ದ ಪೂಜಾ ಖೇಡ್ಕರ್‌; ಮತ್ತೊಂದು ಕಳ್ಳಾಟ ಬಯಲು

Continue Reading

ಪ್ರಮುಖ ಸುದ್ದಿ

Microsoft Windows Outage: ಮೈಕ್ರೊಸಾಫ್ಟ್​​ ಸಮಸ್ಯೆ ; ಬೆಂಗಳೂರು ಸೇರಿದಂತೆ ದೇಶದ ವಿಮಾನ ನಿಲ್ದಾಣಗಳಲ್ಲಿ ಅಲ್ಲೋಲಕಲ್ಲೋಲ

Microsoft Windows Outage: ಬೆಂಗಳೂರಿನಿಂದ ನಾನಾ ಪ್ರದೇಶಗಳಿಗೆ ಹೊರಟಿದ್ದ ವಿಮಾನಗಳಿಗೆ ಪ್ರಯಾಣಿಕರಿಗೆ ಬೋರ್ಡಿಂಗ್ ಆಗಲು ಸಾಧ್ಯವಾಗಲಿಲ್ಲ. ನಿಲ್ದಾಣದ ಅಲ್ಲಲ್ಲಿ ಪ್ರಯಾಣಿಕರು ಆತಂಕದಲ್ಲಿ ಕಂಡು ಬಂದರು. ವಿಳಂಬ ಮತ್ತು ಇತರ ಸಮಸ್ಯೆ ಬಗ್ಗೆ ಪ್ರಯಾಣಿಕರಿಗೆ ಮಾಹಿತಿ ನೀಡಲು ವಿಮಾನಯಾನ ಸಂಸ್ಥೆಗಳಿಗೆ ಸಲಹೆ ನೀಡಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯದ (ಎಂಒಸಿಎ) ಮೂಲಗಳುತಿಳಿಸಿವೆ. ಅಲ್ಲದೆ, ಸಮಸ್ಯೆ ಪರಿಹರಿಸಲು ಸಮನ್ವಯ ಸಾಧಿಸಲಾಗುತ್ತದೆ ಎಂದೂ ತಿಳಿಸಿದರು.

VISTARANEWS.COM


on

Microsoft Windows Outage
Koo

ನವದೆಹಲಿ: ಜಾಗತಿಕವಾಗಿ ಮೈಕ್ರೋಸಾಫ್ಟ್ ಕಾರ್ಯನಿರ್ವಹಣೆ ಸ್ಥಗಿತಗೊಂಡ (Microsoft Windows Outage) ಕಾರಣ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (BIAL) ಸೇರಿದಂತೆ ಭಾರತದ ಎಲ್ಲ ವಿಮಾನ ನಿಲ್ದಾಣಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ಮಾಹಿತಿ ದೊರಕದೆ ಪ್ರಯಾಣಿಕರು ಸಮಸ್ಯೆ ಎದುರಿಸಿದ್ದು ಎಲ್ಲಡೆ ಅಲ್ಲೋಲಕಲ್ಲೋಲ ಉಂಟಾಗಿದೆ. ಇಂಡಿಗೊ, ಅಕಾಸಾ ಏರ್, ಸ್ಪೈಸ್ ಜೆಟ್, ಏರ್ ಇಂಡಿಯಾ, ವಿಸ್ತಾರಾ ಮತ್ತು ಇತರ ವಿಮಾನಯಾನ ಸಂಸ್ಥೆಗಳ ಚೆಕ್-ಇನ್ ವ್ಯವಸ್ಥೆಗಳಿಗೆ ಸಮಸ್ಯೆಯಾಗಿವೆ. ಹೀಗಾಗಿ ದೇಶಾದ್ಯಂತ ಹಲವಾರು ವಿಮಾನ ನಿಲ್ದಾಣಗಳ ಕಾರ್ಯಾಚರಣೆಗೆ ಅಡಚಣೆ ಉಂಟಾಯಿತು. ರಾಷ್ಟ್ರ ರಾಜಧಾನಿ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಲವಾರು ವಿಮಾನಗಳನ್ನು ರದ್ದುಪಡಿಸಲಾಯಿತು.

ಬೆಂಗಳೂರಿನಿಂದ ನಾನಾ ಪ್ರದೇಶಗಳಿಗೆ ಹೊರಟಿದ್ದ ವಿಮಾನಗಳಿಗೆ ಪ್ರಯಾಣಿಕರಿಗೆ ಬೋರ್ಡಿಂಗ್ ಆಗಲು ಸಾಧ್ಯವಾಗಲಿಲ್ಲ. ನಿಲ್ದಾಣದ ಅಲ್ಲಲ್ಲಿ ಪ್ರಯಾಣಿಕರು ಆತಂಕದಲ್ಲಿ ಕಂಡು ಬಂದರು. ವಿಳಂಬ ಮತ್ತು ಇತರ ಸಮಸ್ಯೆ ಬಗ್ಗೆ ಪ್ರಯಾಣಿಕರಿಗೆ ಮಾಹಿತಿ ನೀಡಲು ವಿಮಾನಯಾನ ಸಂಸ್ಥೆಗಳಿಗೆ ಸಲಹೆ ನೀಡಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯದ (ಎಂಒಸಿಎ) ಮೂಲಗಳುತಿಳಿಸಿವೆ. ಅಲ್ಲದೆ, ಸಮಸ್ಯೆ ಪರಿಹರಿಸಲು ಸಮನ್ವಯ ಸಾಧಿಸಲಾಗುತ್ತದೆ ಎಂದೂ ತಿಳಿಸಿದರು.

ಬೆಂಗಳೂರು ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರು ಸಾಲುಗಟ್ಟಿ ನಿಂತಿದ್ದರು. ಬೋರ್ಡಿಂಗ್ ಪಾಸ್​ ಪಡೆಯಲು ಸಾಧ್ಯವಾಗದೇ ಮುಂದಕ್ಕೆ ಸಾಗಲಾಗದೆ ತೊಂದರೆಗೆ ಒಳಪಟ್ಟರು. ಸ್ಥಳೀಯವಾಗಿ ಇದ್ದ ಸಿಬ್ಬಂದಿಗಳು ಕೂಡ ಅದಕ್ಕೊಂದು ಪರಿಹಾರ ಸೂಚಿಸಲು ಸಾಧ್ಯವಾಗಲಿಲ್ಲ. ದೂರದ ಊರಿಗೆ ಪ್ರಯಾಣಕ್ಕೆ ಹೊರಟ ಜನರು ಆತಂಕ್ಕೆ ಒಳಗಾದರು.

ಮೈಕ್ರೋಸಾಫ್ಟ್ ವಕ್ತಾರರೊಬ್ಬರು ಮಾಹಿತಿ ನೀಡಿ, ಥರ್ಡ್​ ಪಾರ್ಟಿ ಸಾಫ್ಟ್​ವೇರ್ ಅಪ್​ಡೇಟ್​ನಿಂದಾಗಿ ವಿಂಡೋಸ್ ಸಾಧನಗಳ ಮೇಲೆ ಪರಿಣಾಮ ಬೀರಿದೆ. ನಾವು ಶೀಘ್ರದಲ್ಲೇ ಪರಿಹಾರವನ್ನು ಒದಗಿಸುತ್ತೇವೆ ಎಂದು ಹೇಳಿದ್ದಾರೆ.

ಟರ್ಮಿನಲ್​ನಲ್ಲಿ ಸಿಕ್ಕಿ ಹಾಕಿಕೊಂಡ ಪ್ರಯಾಣಿಕರು

ತಾಂತ್ರಿಕ ದೋಷದ ಕಾರಣ ವಿಮಾನ ನಿಲ್ದಾಣದ ಒಳಗಿನ ದೃಶ್ಯಗಳು ಸಮಸ್ಯಾತ್ಮಕವಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಜನರು ತಮ್ಮ ಕಷ್ಟಗಳನ್ನು ವಿವರಿಸಿದ್ದರು. ಪ್ರಯಾಣಿಕರು ಟರ್ಮಿನಲ್​ನಲ್ಲಿ ಸಿಲುಕಿಕೊಂಡಿರುವ ವಿಡಿಯೊಗಳಿಗೆ.

ಮೈಕ್ರೋಸಾಫ್ಟ್ ಸಮಸ್ಯೆಯು ಬ್ಯಾಂಕುಗಳು ಹಣ ವರ್ಗಾವಣೆಗೂ ಬಾಧಿಸಿದೆ. ವಿಶ್ವಾದ್ಯಂತ ಮೈಕ್ರೋಸಾಫ್ಟ್ ಬಳಕೆದಾರು ನಾನಾ ರೀತಿಯ ಸಮಸ್ಯೆಗೆ ಒಳಗಾಗಿದ್ದಾಎತ. ಮೈಕ್ರೋಸಾಫ್ಟ್ 365 ಅಪ್ಲಿಕೇಶ ನ್​​ಗಳು ಮತ್ತು ಸೇವೆಗಳಿಗೆ ತೊಂದರೆಯಾಗಿದೆ. ಸಮಸ್ಯೆಗೆ ನಿಖರ ಕಾರಣ, ಸ್ವರೂಪ ಅಸ್ಪಷ್ಟ. ಮೈಕ್ರೋಸಾಫ್ಟ್ ತನ್ನ ಎಕ್ಸ್ ಪೋಸ್ಟ್​​ನಲ್ಲಿ ಪರಿಸ್ಥಿತಿ ಸುಧಾರಿಸುತ್ತಿದೆ ಎಂದು ಸೂಚಿಸಿದ್ದರೂಹೇಳಿದಂತೆ ಆಗಿಲ್ಲ.

ಡೌನ್​ಡಿಟೆಕ್ಟರ್​ ವೀಸಾ, ಎಡಿಟಿ ಸೆಕ್ಯುರಿಟಿ, ಅಮೆಜಾನ್ ಮತ್ತು ಅಮೆರಿಕನ್ ಏರ್​ಲೈನ್ಸ್​ ಮತ್ತು ಡೆಲ್ಟಾದಂತಹ ವಿಮಾನಯಾನ ಸಂಸ್ಥೆಗಳಿಗೆ ಹೆಚ್ಚಿನ ತೊಂದರೆ ಆಗಿವೆ.

ವಿಮಾನ ನಿಲ್ದಾಣಗಳಲ್ಲಿ ಅಧ್ವಾನ

ಐಟಿ ಸಮಸ್ಯೆಯಿಂದಾಗಿ ದೆಹಲಿ ವಿಮಾನ ನಿಲ್ದಾಣದ ಕೆಲವು ಸೇವೆಗಳ ಮೇಲೆ ತಾತ್ಕಾಲಿಕವಾಗಿ ಪರಿಣಾಮ ಬೀರಿದೆ ಎಂದು ದೆಹಲಿ ವಿಮಾನ ನಿಲ್ದಾಣವು ಸೋಶಿಯಲ್ ಮೀಡಿಯಾ ಪೋಸ್ಟ್​​ನಲ್ಲಿ ತಿಳಿಸಿದೆ. ನಮ್ಮ ಪ್ರಯಾಣಿಕರ ತೊಂದರೆ ಕಡಿಮೆ ಮಾಡಲು ನಾವು ಎಲ್ಲಾ ಪಾಲುದಾರರೊಂದಿಗೆ ಸತತವಾಗಿ ಕೆಲಸ ಮಾಡುತ್ತಿದ್ದೇವೆ. ವಿಮಾನ ಮಾಹಿತಿಗಾಗಿ ಪ್ರಯಾಣಿಕರು ಸಂಬಂಧಪಟ್ಟ ವಿಮಾನಯಾನ ಸಂಸ್ಥೆ ಅಥವಾ ಸಹಾಯ ಕೇಂದ್ರಕ್ಕೆ ಸಂಪರ್ಕಿಸಲು ತಿಳಿಸಲಾಗಿದೆ ಹೇಳಿದೆ.

ವಿಮಾನಯಾನ ಸಂಸ್ಥೆ ಇಂಡಿಗೊ ಎಕ್ಸ್ ಪೋಸ್ಟ್​ ಮಾಡಿ ” ಮೈಕ್ರೋಸಾಫ್ಟ್ ಸ್ಥಗಿತದಿಂದ ನಮ್ಮ ವ್ಯವಸ್ಥೆಗಳಿಗೆ ತೊಂದರೆ ಆಗಿವೆ. ಇದು ಇತರ ಕಂಪನಿಗಳ ಮೇಲೂ ಪರಿಣಾಮ ಬೀರುತ್ತಿದೆ. ಬುಕಿಂಗ್, ಚೆಕ್-ಇನ್, ನಿಮ್ಮ ಬೋರ್ಡಿಂಗ್ ಪಾಸ್ ಮತ್ತು ​ವಿಮಾನಗಳ ಹಾರಾಟದ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಿದೆ.

ಸ್ಪೈಸ್ ಜೆಟ್ ಸಂಸ್ಥೆ, ನಾವು ಪ್ರಸ್ತುತ ತಾಂತ್ರಿಕ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಈ ಸಮಸ್ಯೆಯನ್ನು ಪರಿಹರಿಸಲು ನಮ್ಮ ತಂಡವು ಕೆಲಸ ಮಾಡುತ್ತಿದೆ. ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ. ಸಮಸ್ಯೆ ಪರಿಹರಿಸಿದ ನಂತರ ವಿಷಯ ತಿಳಿಸುತ್ತೇವೆ ಎಂದು ಹೇಳಿದೆ.

ಏರ್​ ಇಂಡಿಯಾ ಪ್ರತಿಕ್ರಿಯಿಸಿ, ಪ್ರಸ್ತುತ ಮೈಕ್ರೋಸಾಫ್ಟ್ ಸ್ಥಗಿತದಿಂದಾಗಿ ನಮ್ಮ ಡಿಜಿಟಲ್ ವ್ಯವಸ್ಥೆಗಳ ಮೇಲೆ ತಾತ್ಕಾಲಿಕವಾಗಿ ಪರಿಣಾಮ ಬೀರಿವೆ. ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ. ಸಂದರ್ಭಕ್ಕೆ ಅನುಗುಣವಾಗಿ ತಮ್ಮ ಪ್ರಯಾಣವನ್ನು ಯೋಜಿಸಿ ಎಂದಿದೆ.

ಇದನ್ನೂ ಓದಿ: Paris Olympics 2024 : ಪ್ಯಾರಿಸ್ ಒಲಿಂಪಿಕ್ಸ್ ಭದ್ರತೆಗಾಗಿ ಭಾರತೀಯ ಸೇನೆಯ ಶ್ವಾನದಳ!

ಏರ್ ಇಂಡಿಯಾ ಎಕ್ಸ್​​ಪ್ರೆಸ್​ “ಡಿಜಿಟಲ್ ಸಮಸ್ಯೆಗಳು ಜಾಗತಿಕವಾಗಿ ಅನೇಕ ವಿಮಾನಯಾನ ಸಂಸ್ಥೆಗಳು ಮತ್ತು ವಿಮಾನ ನಿಲ್ದಾಣಗಳ ಕಾರ್ಯಾಚರಣೆಗಳ ಮೇಲೆ ತಾತ್ಕಾಲಿಕವಾಗಿ ಪರಿಣಾಮ ಬೀರಿವೆ. ದಯವಿಟ್ಟು ನಿಮ್ಮ ಪ್ರಯಾಣವನ್ನು ಯೋಜಿಸಿ ಎಂದಿದೆ.

ಆಕಾಸಾ ಏರ್​​, ನಮ್ಮ ಸೇವಾ ಪೂರೈಕೆದಾರರೊಂದಿಗಿನ ಮೂಲಸೌಕರ್ಯ ಸಮಸ್ಯೆಗಳಿಂದಾಗಿ, ಬುಕಿಂಗ್, ಚೆಕ್-ಇನ್ ಮತ್ತು ಬುಕಿಂಗ್ ಸೇವೆಗಳನ್ನು ನಿರ್ವಹಿಸುವುದು ಸೇರಿದಂತೆ ನಮ್ಮ ಕೆಲವು ಆನ್ಲೈನ್ ಸೇವೆಗಳು ತಾತ್ಕಾಲಿಕವಾಗಿ ಲಭ್ಯವಿರುವುದಿಲ್ಲ ಎಂದು ತಿಳಿಸಿದೆ.

ವಿಸ್ತಾರಾ ಏರ್​ಲೈನ್ಸ್ “ನಮ್ಮ ಸೇವಾ ಪೂರೈಕೆದಾರರು ಎದುರಿಸಿದ ಜಾಗತಿಕ ಸ್ಥಗಿತದಿಂದಾಗಿ ನಮ್ಮ ಕಾರ್ಯಾಚರಣೆಗಳಲ್ಲಿ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಸಾಧ್ಯವಾದಷ್ಟು ಬೇಗ ಸಮಸ್ಯೆಯನ್ನು ಪರಿಹರಿಸುತ್ತೇವೆ ಎಂದು ಹೇಳದೆ.

Continue Reading

ದೇಶ

Kangana Ranaut: “ರಾಜಕಾರಣಿಗಳು ರಾಜಕೀಯ ಬಿಟ್ಟು ಪಾನಿಪೂರಿ ಮಾರಬೇಕೆ?”- ಕಂಗನಾ ಕೆಂಡಾಮಂಡಲ

Kangana Ranaut: ಸಾಮಾಜಿಕ ಜಾಲತಾಣ ಖಾತೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಂಗನಾ ‘ರಾಜಕಾರಣದಲ್ಲಿ ಮೈತ್ರಿ, ಒಪ್ಪಂದಗಳು, ಮತ್ತು ಪಕ್ಷದ ವಿಭಜನೆ ಹೊಂದಿರುವುದು ತೀರಾ ಸಾಮಾನ್ಯವಾಗಿದೆ ಮತ್ತು ಸಂವಿಧಾನಾತ್ಮಕವಾಗಿದೆ. ಕಾಂಗ್ರೆಸ್‌ ಪಕ್ಷವು 1907ರಲ್ಲಿ ವಿಭಜನೆಯಾಯಿತು. 1971ರಲ್ಲಿ ಮತ್ತೊಮ್ಮೆ ವಿಭಜನೆ ಆಯಿತು. ರಾಜಕಾರಣಿಗಳು ರಾಜಕೀಯದಲ್ಲಿ ರಾಜಕಾರಣದ ಮಾಡದೇ, ಪಾನಿಪುರಿ ಮಾರಬೇಕೆ?’ ಎಂದು ಬರೆದುಕೊಂಡಿದ್ದಾರೆ.

VISTARANEWS.COM


on

Koo

ಹೊಸದಿಲ್ಲಿ: ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರು ‘ದ್ರೋಹದ ಬಲಿಪಶು’ ಎಂದು ಕರೆದಿದ್ದ ಜ್ಯೋತಿರ್‌ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ(Swami Avimukteshwaranand Saraswati) ಅವರ ವಿರುದ್ಧ ಬಿಜೆಪಿ ಸಂಸದೆ ಹಾಗೂ ನಟಿ ಕಂಗನಾ ರಣಾವತ್(Kangana Ranaut) ಕಿಡಿ ಕಾರಿದ್ದಾರೆ. ಎಕ್ಸ್‌ನಲ್ಲಿ ವಾಗ್ದಾಳಿ ನಡೆಸಿದ ಕಂಗನಾ, ಪರೋಕ್ಷವಾಗಿ ಶಿಂಧೆ ಅವರನ್ನು ‘ವಿಶ್ವಾಸಘಾತುಕ’ ಹಾಗೂ ‘ದ್ರೋಹಿ’ ಎಂದು ಕರೆಯುವ ಮೂಲಕ ಸ್ವಾಮಿ ಅವಿಮುಕ್ತೇಶ್ವರಾನಂದ ಅವರು ಎಲ್ಲರ ಭಾವನೆಗಳಿಗೆ ಘಾಸಿ ಉಂಟುಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇನ್ನು ರಾಜಕಾರಣಿಗಳು ರಾಜಕೀಯ ಬಿಟ್ಟು ಪಾನೀಪೂರಿ ಮಾರಬೇಕೆ ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣ ಖಾತೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಂಗನಾ ‘ರಾಜಕಾರಣದಲ್ಲಿ ಮೈತ್ರಿ, ಒಪ್ಪಂದಗಳು, ಮತ್ತು ಪಕ್ಷದ ವಿಭಜನೆ ಹೊಂದಿರುವುದು ತೀರಾ ಸಾಮಾನ್ಯವಾಗಿದೆ ಮತ್ತು ಸಂವಿಧಾನಾತ್ಮಕವಾಗಿದೆ. ಕಾಂಗ್ರೆಸ್‌ ಪಕ್ಷವು 1907ರಲ್ಲಿ ವಿಭಜನೆಯಾಯಿತು. 1971ರಲ್ಲಿ ಮತ್ತೊಮ್ಮೆ ವಿಭಜನೆ ಆಯಿತು. ರಾಜಕಾರಣಿಗಳು ರಾಜಕೀಯದಲ್ಲಿ ರಾಜಕಾರಣದ ಮಾಡದೇ, ಪಾನಿಪುರಿ ಮಾರಬೇಕೆ?’ ಎಂದು ಬರೆದುಕೊಂಡಿದ್ದಾರೆ.

ಬದರಿ ಶಂಕರಾಚಾರ್ಯ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿರುವ ಕಂಗನಾ. ತನ್ನ ಪ್ರಜೆಗಳನ್ನು ರಾಜನೇ ಶೋಷಿಸಲು ಆರಂಭಿಸಿದರೆ ವಿಶ್ವಾಸಘಾತುಕತನವೇ ಅಂತಿಮವಾದ ಧರ್ಮ ಎಂದು ಧರ್ಮ ಕೂಡ ಹೇಳುತ್ತದೆ. ಇಂತಹ ಕ್ಷುಲ್ಲಕ ಹೇಳಿಕೆಗಳ ಮೂಲಕ ಸ್ವಾಮಿ ಅವಿಮುಕ್ತೇಶ್ವರಾನಂದ ಅವರು ಹಿಂದೂ ಧರ್ಮವನ್ನು ಅವಮಾನಿಸಿದ್ದಾರೆ. ಶಂಕರಾಚಾರ್ಯ ಅವರು ತಮ್ಮ ಮಾತುಗಳು ಹಾಗೂ ಪ್ರಭಾವವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ವಿಶ್ವಾಸಘಾತಕ ಹಾಗೂ ದ್ರೋಹಿ ಎಂದು ಆರೋಪಿಸುವ ಮೂಲಕ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರ ವಿರುದ್ಧ ಅವಹೇಳನಾಕಾರಿ ಪದಗಳನ್ನು ಬಳಸಿ ನೆಮ್ಮಲ್ಲರ ಭಾವನೆಗಳಿಗೂ ಧಕ್ಕೆ ಉಂಟುಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಉತ್ತರಾಖಂಡದ ಜ್ಯೋತಿರ್‌ಮಠದ 46ನೇ ಶಂಕರಾಚಾರ್ಯರಾಗಿರುವ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಸೋಮವಾರ ಮುಂಬಯಿಯಲ್ಲಿನ ಉದ್ಧವ್ ಠಾಕ್ರೆ ಅವರ ‘ಮಾತೋಶ್ರೀ’ ನಿವಾಸಕ್ಕೆ ಭೇಟಿ ನೀಡಿದ್ದರು. ಉದ್ಧವ್ ಠಾಕ್ರೆ ಅವರು ಮತ್ತೆ ಮಹಾರಾಷ್ಟ್ರ ಸಿಎಂ ಆಗುವವರೆಗೂ ತಮ್ಮ ನೋವು ನಿವಾರಣೆಯಾಗುವುದಿಲ್ಲ.ಹಿಂದೂ ಧರ್ಮದ ಅನುಯಾಯಿಗಳಾದ ನಾವು, ಪಾಪ ಮತ್ತು ಪುಣ್ಯದಲ್ಲಿ ನಂಬಿಕೆ ಇರಿಸಿದ್ದೇವೆ. ಅತಿ ದೊಡ್ಡ ಪಾಪ ಎಂದರೆ ದ್ರೋಹ. ಉದ್ಧವ್ ಠಾಕ್ರೆ ಅವರಿಗೆ ವಂಚಿಸಲಾಗಿದೆ” ಎಂದು ಶಿಂಧೆ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಕೆಲವು ದಿನಗಳ ಹಿಂದೆ ವಿಪಕ್ಷ ನಾಯಕ ರಾಹುಲ್‌ ಗಾಂಧಿಹಿಂದೂಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದರು. ಅವರ ಹೇಳಿಕೆ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿತ್ತು. ಆ ಸಂದರ್ಭದಲ್ಲೂ ರಾಹುಲ್‌ ಪರ ಉತ್ತರಾಖಂಡದ ಜ್ಯೋತಿರ್ ಮಠದ 46ನೇ ಶಂಕರಾಚಾರ್ಯ, ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಬೆಂಬಲ ಸೂಚಿಸಿದ್ದಾರೆ.

ಇದನ್ನೂ ಓದಿ: Uttar Pradesh Politics: ಉತ್ತರಪ್ರದೇಶದಲ್ಲಿ ಬಿಜೆಪಿ ಹೀನಾಯ ಸೋಲಿಗೆ ಇತ್ತು ಆ 6 ಪ್ರಮುಖ ಕಾರಣಗಳು

Continue Reading
Advertisement
Keshav Prasad Maurya
ದೇಶ3 mins ago

Keshav Prasad Maurya: ʼಮಾನ್ಸೂನ್‌ ಆಫರ್‌ʼ ಕೊಟ್ಟ ಅಖಿಲೇಶ್‌ ಯಾದವ್‌ಗೆ ಬಿಜೆಪಿ ಟಾಂಗ್‌

karnataka Weather Forecast
ಮಳೆ4 mins ago

Karnataka Weather : ವಾಯುಭಾರ ಕುಸಿತ ಎಫೆಕ್ಟ್‌; ವಾರಾಂತ್ಯದಲ್ಲಿ ಭಾರಿ ಮಳೆ ಎಚ್ಚರಿಕೆ, ಶಾಲೆಗಳಿಗೆ ರಜೆ ಘೋಷಣೆ

Salman Khan-Akshay Kumar
Latest5 mins ago

Salman Khan-Akshay Kumar: ಸಲ್ಮಾನ್ ಖಾನ್ – ಅಕ್ಷಯ್ ಕುಮಾರ್ ಜೋಡಿಯಾಗಿ ನಟಿಸಿದ 4 ಅತ್ಯುತ್ತಮ ಚಿತ್ರಗಳಿವು!

Bengaluru power cut July 20th power outage in many parts of Bengaluru
ಬೆಂಗಳೂರು10 mins ago

Bengaluru Power Cut: ಬೆಂಗಳೂರಿನ ಹಲವೆಡೆ ನಾಳೆ ಕರೆಂಟ್‌ ಇರಲ್ಲ!

Congress creates colorful stories only during elections Minister Pralhad Joshi alleges
ಕರ್ನಾಟಕ14 mins ago

Pralhad Joshi: ಚುನಾವಣೆ ವೇಳೆ ಮಾತ್ರ ಕಾಂಗ್ರೆಸ್ ಬಣ್ಣ ಬಣ್ಣದ ಕಥೆ ಕಟ್ಟುತ್ತದೆ: ಪ್ರಲ್ಹಾದ್‌ ಜೋಶಿ

Natasha ponawala jeweled kurta
ಫ್ಯಾಷನ್26 mins ago

Natasha ponawala jewelled kurta: ರಿಯಲ್‌ ಜ್ಯುವೆಲ್ಡ್ ಕುರ್ತಾ ಧರಿಸಿದ್ದ ಏಕೈಕ ಫ್ಯಾಷನ್‌ ಐಕಾನ್‌ ನತಾಶಾರ ‘ಮೊಗಲ್‌ ರಾಣಿ’ ಲುಕ್‌!

Kubusa Kannada film release on 26th July
ಕರ್ನಾಟಕ27 mins ago

Kannada New Movie: ಜು.26ರಂದು ’ಕುಬುಸʼ ಚಿತ್ರ ರಾಜ್ಯಾದ್ಯಂತ ಬಿಡುಗಡೆ

Paris Olympics 2024
ಪ್ರಮುಖ ಸುದ್ದಿ40 mins ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಲಿರುವ 117 ಭಾರತೀಯ ಕ್ರೀಡಾಪಟುಗಳ ಸಂಪೂರ್ಣ ವಿವರ ಇಲ್ಲಿದೆ

Karnataka Rain
ಮಳೆ54 mins ago

Karnataka Rain : ಉಕ್ಕಿ ಹರಿಯುತ್ತಿದ್ದ ಹೊಳೆಯಲ್ಲಿ ಕೊಚ್ಚಿ ಹೋದ ಕಾರ್ಮಿಕ; ಮನೆಯ ಗೋಡೆ ಕುಸಿದು ಗೃಹಿಣಿ ಸಾವು

Kiran Kumar
ಕರ್ನಾಟಕ1 hour ago

ವಿಸ್ತಾರ ನ್ಯೂಸ್‌ ಕಾರ್ಯನಿರ್ವಾಹಕ ನಿರ್ದೇಶಕ ಹುದ್ದೆಯಿಂದ ಕಿರಣ್‌ ಕುಮಾರ್‌ ಡಿ ಕೆ ಅಮಾನತು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ5 hours ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ6 hours ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ1 day ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ1 day ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ5 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಟ್ರೆಂಡಿಂಗ್‌