Karnataka Assembly Live: ಇಡಿಗೆ ಹೆದರುವುದಿಲ್ಲ, ನಿಮ್ಮನ್ನು ಬಲಿ ಹಾಕಿಯೇ ಸಿದ್ಧ: ವಾಲ್ಮೀಕಿ ಹಗರಣ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ - Vistara News

ಪ್ರಮುಖ ಸುದ್ದಿ

Karnataka Assembly Live: ಇಡಿಗೆ ಹೆದರುವುದಿಲ್ಲ, ನಿಮ್ಮನ್ನು ಬಲಿ ಹಾಕಿಯೇ ಸಿದ್ಧ: ವಾಲ್ಮೀಕಿ ಹಗರಣ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ

Karnataka Assembly Live: ಆಂಧ್ರಪ್ರದೇಶ, ತೆಲಂಗಾಣಕ್ಕೆ ಹೋಗಿರುವುದು 89 ಕೋಟಿ ಮಾತ್ರ. ಅದನ್ನು ವಾಪಸು ತರುವ ಕೆಲಸ ಮಾಡ್ತಿದ್ದೇವೆ. ನಾವು ಯಾರನ್ನು ಸಹ ರಕ್ಷಣೆ ಮಾಡುವುದಿಲ್ಲ. ಇವರ ಕಾಲದಲ್ಲಿ ನಡೆದ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಇವರು ಹೀಗೆ ಮಾಡುತ್ತಿದ್ದಾರೆ. ನಾವು ಈ ಬಿಜೆಪಿ ಹಾಗೂ ಇಡಿಗೆ ಹೆದರುವುದಿಲ್ಲ ಎಂದು ಸಿಎಂ ನುಡಿದರು. ಸಿಎಂ ಭಾಷಣಕ್ಕೆ ಪ್ರತಿಪಕ್ಷ ಬಿಜೆಪಿ ಸದಸ್ಯರು ಬಾವಿಗಿಳಿದು ಪ್ರತಿಭಟಿಸಿ ಅಡ್ಡಿ ಒಡ್ಡಿದರು.

VISTARANEWS.COM


on

Karnataka assembly live cm siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: “ನಾವು ಇಡಿಗೆ, ಬಿಜೆಪಿಗೆ ಹೆದರುವುದಿಲ್ಲ. ತಪ್ಪು ಮಾಡಿದವರನ್ನು ರಕ್ಷಿಸುವುದಿಲ್ಲ. ನಿಮ್ಮನ್ನು ಬಲಿ ಹಾಕಿಯೇ ಸಿದ್ಧ” ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ವಿಧಾನಸಭೆಯಲ್ಲಿ (Vidhan Sabha) ಬಿಜೆಪಿ ಸದಸ್ಯರಿಗೆ ಗುಡುಗಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ (Valmiki Corporation Scam) ಕುರಿತು ನಡೆದ ಚರ್ಚೆಗೆ ಅವರು ಇಂದು ಕಲಾಪದಲ್ಲಿ (Karnataka Assembly Live) ಉತ್ತರ ನೀಡಿದರು.

ʼʼನೀವು ಕಳ್ಳರು, ಲೂಟಿಕೋರರು ಎಂದು ನಿಮ್ಮನ್ನು ಅಲ್ಲಿ ಕೂರಿಸಿದ್ದಾರೆ. ತಾಕತ್ ಇದ್ಯಾ ಅಂದವರು 64ಕ್ಕೆ ಬಂದಿರಿ. ನಾವು 136 ಶಾಸಕರು ಗೆದ್ದು ಬಂದೆವು. ಬೊಮ್ಮಾಯಿ- ಯಡಿಯೂರಪ್ಪ ಆಡಳಿತಾವಧಿಯಲ್ಲಿ ಕೋಟ್ಯಂತರ ರೂಪಾಯಿ ಹಗರಣಗಳು ನಡೆದಿವೆ. ಎಲ್ಲದರ ಬಗ್ಗೆಯೂ ತನಿಖೆ ನಡೆಸುತ್ತೇವೆ. ಯಾರು ತಪ್ಪು ಮಾಡಿದ್ದರೋ ಅವರನ್ನು ಜೈಲಿಗೆ ಕಳುಹಿಸುತ್ತೇವೆ. ನಿಮ್ಮನ್ನು ಬಲಿ ಹಾಕಿಯೇ ಸಿದ್ಧ” ಎಂದು ಸಿಎಂ ಹೇಳಿದರು.

ಆಂಧ್ರಪ್ರದೇಶ, ತೆಲಂಗಾಣಕ್ಕೆ ಹೋಗಿರುವುದು 89 ಕೋಟಿ ಮಾತ್ರ. ಅದನ್ನು ವಾಪಸು ತರುವ ಕೆಲಸ ಮಾಡ್ತಿದ್ದೇವೆ. ನಾವು ಯಾರನ್ನು ಸಹ ರಕ್ಷಣೆ ಮಾಡುವುದಿಲ್ಲ. ಇವರ ಕಾಲದಲ್ಲಿ ನಡೆದ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಇವರು ಹೀಗೆ ಮಾಡುತ್ತಿದ್ದಾರೆ. ನಾವು ಈ ಬಿಜೆಪಿ ಹಾಗೂ ಇಡಿಗೆ ಹೆದರುವುದಿಲ್ಲ ಎಂದು ಸಿಎಂ ನುಡಿದರು. ಸಿಎಂ ಭಾಷಣಕ್ಕೆ ಪ್ರತಿಪಕ್ಷ ಬಿಜೆಪಿ ಸದಸ್ಯರು ಬಾವಿಗಿಳಿದು ಪ್ರತಿಭಟಿಸಿ ಅಡ್ಡಿ ಒಡ್ಡಿದರು.

ʼಬೊಮ್ಮಾಯಿ ಕಾಲದಲ್ಲಿ ಹಗರಣ ಆಗಿದೆ. ದೇವರಾಜ ಅರಸು ಟ್ರಕ್ ಟರ್ಮಿನಲ್ 50 ಕೋಟಿ ಅವ್ಯವಹಾರ ಆಗಿದೆ. ವೀರಯ್ಯ ಬಂಧನವಾಗಿದ್ದಾರೆ. ನಿಮಗೆ ನಾಚಿಕೆ ಆಗಲ್ವಾ?ʼ ಎಂದ ಸಿಎಂ ಬಿಜೆಪಿ ಕಾಲದ 21 ಹಗರಣಗಳ ದಾಖಲೆ ಬಿಡುಗಡೆ ಮಾಡಿದರು. ಕಿಯೋನಿಕ್ಸ್‌ನಲ್ಲಿ 500 ಕೋಟಿ ಅವ್ಯವಹಾರ ಆಗಿದೆ. ಆಗ ಯಡಿಯೂರಪ್ಪ ಸಿಎಂ, ಬಸವರಾಜ ಬೊಮ್ಮಾಯಿ ಗೃಹ ಸಚಿವರಾಗಿದ್ದರು. ಕೋವಿಡ್ ಹಗರಣ, ಭದ್ರಾ ಮೇಲ್ದಂಡೆ ಯೋಜನೆ ಸೇರಿ 40 ಸಾವಿರ ಕೋಟಿ ಹಗರಣ ನಡೆದಿದೆ. ಪಿಎಸ್ಐ ಹಗರಣ ಯಾರ ಕಾಲದಲ್ಲಿ ನಡೆಯಿತು? 40% ಕಮಿಷನ್ ಹಗರಣ ಸಿಎಂ ಬೊಮ್ಮಾಯಿ ಕಾಲದಲ್ಲಿ. ಕಾರ್ಕಳ ಪರುಶುರಾಮ ಥೀಮ್ ಪಾರ್ಕ್ ಹಗರಣ, ಬಿಟ್ ಕಾಯಿನ್ ಹಗರಣ ನಡೆಯಿತು. 750 ಕೋಟಿಗೂ ಹೆಚ್ಚು ಹಣ ಯಡಿಯೂರಪ್ಪ ಆಪ್ತರ ಬಳಿ ಸಿಕ್ಕಿತು. ಇಡಿ ಮತ್ತು ಸಿಬಿಐ ಬರಲಿಲ್ಲ. ಈಶ್ವರಪ್ಪ ರಾಜ್ಯಪಾಲರಿಗೆ ದೂರು ಕೊಟ್ಟರು. ಕೆಕೆಆರ್‌ಡಿಬಿ 200 ಕೋಟಿ ಹಗರಣ ನಡೆಯಿತು. ಆಗ ಕಂದಾಯ ಹಗರಣ ಆಶೋಕ್ ಸಚಿವರಾಗಿದ್ದರುʼ ಎಂದು ಸಿಎಂ ವಿವರಿಸಿದರು.

ಸಿಎಂ ಸಿದ್ದರಾಮಯ್ಯ ಅವರು ನೀಡಿದ ಲಿಖಿತ ಉತ್ತರದ ಪೂರ್ಣ ಪಾಠ ಇಲ್ಲಿದೆ:

ಮಾನ್ಯ ಅಧ್ಯಕ್ಷರೆ,
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದ ಹಗರಣ ಕುರಿತ ಮುಂದುವರೆದ ಉತ್ತರವನ್ನು ಸದನದಲ್ಲಿ ಲಿಖಿತ ರೂಪದಲ್ಲಿ ಮಂಡಿಸುತ್ತಿದ್ದೇನೆ.

1) ಬಿ.ಜೆ.ಪಿ. ಯವರ ಹುನ್ನಾರ ಇಷ್ಟೆ. ಒಂದು, ಮುಖ್ಯಮಂತ್ರಿಯ ಹೆಸರಿಗೆ ಮಸಿ ಬಳಿಯುವುದು. ಎರಡನೆಯದು, ಸರ್ಕಾರ ಪರಿಶಿಷ್ಟ ಜಾತಿ/ ಪಂಗಡಗಳ ವಿರುದ್ಧ ಎಂದು ಬಿಂಬಿಸುವುದು. ಈ ಎರಡೂ ಎಂದಾದರೂ ಸಾಧ್ಯವೆ? ಇಡೀ ಬಿಜೆಪಿ, ಬಿಜೆಪಿಯ ನಾಯಕತ್ವ ಸಂವಿಧಾನ ಜಾರಿಗೆ ಬಂದ ದಿನದಿಂದಲೂ ದಮನಿತ ಸಮುದಾಯಗಳ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿರುದ್ಧವಾಗಿದೆ. ಮಹಿಳೆಯರ ವಿರುದ್ಧವಾಗಿದೆ. ದಮನಿತರ ಪರವಾದ ಪ್ರತಿ ನಿಲುವು, ಪ್ರತಿ ಕಾಯ್ದೆ, ಯೋಜನೆಗಳನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ನೇತೃತ್ವದ ಸರ್ಕಾರಗಳೆ.

2) ಇದೇ ಬಿಜೆಪಿ ಆಡಳಿತದಲ್ಲಿದ್ದಾಗ ಯಾವ ಯಾವ ನಿಗಮಗಳಲ್ಲಿ ಏನೇನೆಲ್ಲ ನುಂಗಿದ್ದಾರೆ ಎಂದು ಕೂಡ ಚರ್ಚೆ ನಡೆಯುತ್ತಿದೆ. ನುಂಗುವುದರಲ್ಲಿ ಜಾಣರಾಗಿರುವ ಬಿಜೆಪಿಯವರು ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದಾರೆ. ಇದಕ್ಕಿಂತ ದುರಂತ ಬೇರೆ ಇಲ್ಲ. ವಿರೋಧ ಪಕ್ಷದವರು ತಮ್ಮ ಅಜೆಂಡಾ ಸಾಧಿಸಿಕೊಳ್ಳಲು ಯಾವ ಸುಳ್ಳನ್ನು ಬೇಕಾದರೂ ಹೇಳಬಲ್ಲರು ಎಂಬುದು ಇಲ್ಲಿ ಸಾಬೀತಾಗಿದೆ.

3) ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಈ 89.63 ಕೋಟಿಗಳಷ್ಟು ಹಣ ಅಕ್ರಮವಾಗಿ ಹೈದರಾಬಾದಿನ ಆರ್ ಬಿ ಎಲ್ ಬ್ಯಾಂಕಿಗೆ ವರ್ಗಾವಣೆಯಾಗಿರುತ್ತದೆ. [ಈ 89.63 ಕೋಟಿಗಳಲ್ಲಿ 5 ಕೋಟಿ ರೂ ವಾಪಸ್ಸು ಬಂದಿರುತ್ತದೆ]. 89.63 ಕೋಟಿ ರೂಪಾಯಿಗಳಲ್ಲಿ 45,02,98,000 ರೂಪಾಯಿಗಳು ಉಳಿತಾಯ ಖಾತೆಯಿಂದ ವರ್ಗಾವಣೆಯಾಗಿರುತ್ತವೆ. ಇನ್ನುಳಿದ 44.60 ಕೋಟಿ ರೂಪಾಯಿಗಳನ್ನು ನಿಗಮವು ಇಟ್ಟಿದ್ದ ಫಿಕ್ಸೆಡ್ ಡಿಪಾಸಿಟ್ ಮೇಲೆ ಓವರ್ ಡ್ರಾಫ್ಟ್ ತೆಗೆದಿದ್ದಾರೆ. ಓವರ್ ಡ್ರಾಫ್ಟ್ ಎಂದರೆ ಒಂದು ರೀತಿಯ ಸಾಲವೇ. ಇದು ಅತ್ಯಂತ ಪರಿಣತರಾದ, ಪಳಗಿದ ಖದೀಮರ ಕೆಲಸವೆ. ನಿಗಮವು ದಿನಾಂಕ: 30-3-2024 ರಂದು 50.00 ಕೋಟಿ ರೂಪಾಯಿಗಳನ್ನು ಫಿಕ್ಸೆಡ್ ಡಿಪಾಸಿಟ್ ನಲ್ಲಿಟ್ಟಿದೆ. ಸ್ಪಿಕ್ಸ್‌ಲಿ ಸ್ಪೀಕಿಂಗ್, ಈ 50.00 ಕೋಟಿ ಫಿಕ್ಸೆಡ್ ಡಿಪಾಸಿಟ್ ನಮ್ಮ ವಶದಲ್ಲಿಯೇ ಇದೆ. ಯಾಕೆಂದರೆ ಅದು ಫಿಕ್ಸೆಡ್ ಡಿಪಾಸಿಟ್.

4) ವಿರೋಧ ಪಕ್ಷದವರು [ ವಿಜಯೇಂದ್ರ ಹೇಳಿದ ಎರಡನೆ ಸುಳ್ಳು ರಾಜ್ಯ ಸರ್ಕಾರವು ಸಿಬಿಐನವರು ಎಫ್‌ಐಆರ್ ದಾಖಲಿಸಿದ ಮೇಲೆ ಎಸ್.ಐ.ಟಿ. ರಚಿಸಿದೆ ಎಂದು ಹೇಳಿದ್ದಾರೆ. ವಾಸ್ತವವಾಗಿ ನಮ್ಮಲ್ಲಿ ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಿನಾಂಕ 28- 5-2024 ರಂದು ಕ್ರೈಂ ನಂ. 118/2024 ರಂತೆ ಏಫ್ ಐ ಆರ್ ದಾಖಲಾಗಿದೆ. ರಾಜ್ಯ ಸರ್ಕಾರವು 31-5-2024 ರಂದು ಆದೇಶ ಹೊರಡಿಸಿ ಎಸ್.ಐ.ಟಿ. ರಚಿಸಿದೆ. ಸಿಬಿಐ ದಿನಾಂಕ 3-6-2024 ರಂದು ಎಫ್‌ಐಆರ್ ದಾಖಲಿಸಿದ್ದಾರೆ.

5) ದಿನಾಂಕ: 03.06.2024 ರಂದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಜನರಲ್ ಮ್ಯಾನೇಜರ್ (ಹೆಚ್.ಆರ್.) ಗಿರೀಶ್ ಚಂದ್ರ ಜೋಶಿ ಎನ್ನುವವರು ಎಂ.ಜಿ. ರಸ್ತೆ ಶಾಖೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶ್ರೀಮತಿ ಸುಚಿಸ್ಮಿತಾ ರಾವುಲ್, ಚೀಫ್ ಮ್ಯಾನೇಜರ್ (ಬ್ರಾಂಚ್ ಹೆಡ್) ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಹಾಗೂ Prevention of Corruption Act ರ Section 17(A) ರಡಿ ತನಿಖೆ ಮಾಡಲು ಅನುಮತಿ ನೀಡಿ ಸಿ.ಬಿ.ಐ. ಗೆ ಪತ್ರ ಬರೆದಿರುತ್ತಾರೆ. 17(A) ರಡಿ ತನಿಖೆ ಮಾಡಲು ಅನುಮತಿ ನೀಡಿ ಸಿ.ಬಿ.ಐ. ಗೆ ಪತ್ರ ಬರೆದಿರುತ್ತಾರೆ.

6) ಸಿ.ಬಿ.ಐ.ಗೆ ಬರೆದಿರುವ ಈ ಪತ್ರದ ಮುಖ್ಯಾಂಶಗಳನ್ನು ನಾನು ಅನುಬಂಧ-1 ರಲ್ಲಿಟ್ಟು ಸದನದಲ್ಲಿ ಮಂಡಿಸುತ್ತಿದ್ದೇನೆ. ಈ ಎರಡರಲ್ಲೂ ಬ್ಯಾಂಕಿನವರೆ ಒಪ್ಪಿಕೊಂಡಿರುವ ಹಾಗೆ ಬ್ಯಾಂಕಿನ ಸಿಬ್ಬಂದಿಗಳೇ ನೇರವಾಗಿ ಈ ಹಗರಣದಲ್ಲಿ ಶಾಮೀಲಾಗಿದ್ದಾರೆ ಎಂಬುದು ಕಂಡುಬರುತ್ತದೆ.

7) ದಿನಾಂಕ 28-5-2024 ರಂದು ಮಹರ್ಷಿ ವಾಲ್ಮೀಕಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಎನ್ನವವರು ನಿಗಮದ ಹಣ ಖಾಲಿಯಾಗಿರುವುದರ ಕುರಿತು ಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುತ್ತಾರೆ. ದಿನಾಂಕ: 28.05.2024 ರಂದು ಶ್ರೀ ಎ. ರಾಜಶೇಖರ, ಪ್ರಧಾನ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಇವರು ನಿಗಮದಲ್ಲಿ ನಡೆದ ಅವ್ಯವಹಾರದ ಕುರಿತು ಎ. ಮಣಿಮೇಖಲೈ, ಎಂ.ಡಿ. & ಸಿ.ಇ.ಓ., ಯುಬಿಐ, ಶ್ರೀ ನಿತೇಶ್ ರಂಜನ್, ಶ್ರೀ ರಾಮಸುಬ್ರಮಣ್ಯಂ, ಶ್ರೀ ಸಂಜಯ್‌ ರುದ್ರ, ಶ್ರೀ ಪಂಕಜ್ ದ್ವಿವೇದಿ, ಕಾರ್ಯನಿರ್ವಾಹಕ ನಿರ್ದೇಶಕರು ಯುಬಿಐನ ಮುಖ್ಯ ವ್ಯವಸ್ಥಾಪಕರಾದ ಶ್ರೀಮತಿ ಶುಚಿಸ್ಮಿತಾ ರವುಲ್, ಎಂ.ಜಿ. ರಸ್ತೆ ಶಾಖೆ ಇವರುಗಳ ವಿರುದ್ಧ ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಿಸಿರುತ್ತಾರೆ.

8) ಅಕ್ರಮ ನಡೆದಿದೆಯೆಂದು ಗೊತ್ತಾದ ಕೂಡಲೆ ಎಫ್.ಐ.ಆರ್ ರಿಜಿಸ್ಟರ್ ಆಗಿದೆ. ಅಕ್ರಮದ ಕುರಿತು ತನಿಖೆ ಮಾಡಲು ಸಮರ್ಥ ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ದಿನಾಂಕ: 31-5-2024 ರಂದು ಎಸ್‌ಐಟಿ ರಚಿಸಿದ್ದೇವೆ. ಮೇಲಿನ ಎರಡೂ ಕ್ರಿಮಿನಲ್ ಕೇಸುಗಳನ್ನು ತನಿಖೆ ಮಾಡುವ ಉದ್ದೇಶದಿಂದಲೇ 4 ಜನ ಪೊಲೀಸ್ ಅಧಿಕಾರಿಗಳ ತಂಡವನ್ನು ರಚಿಸಲಾಗಿದೆ. ಎಚ್‌ಡಿ 64 ಸಿಐಡಿ 2024 ರ ಆದೇಶದಂತೆ ಈ ತಂಡ ರಚನೆಯಾಗಿದೆ.

9) ಎಸ್.ಐ.ಟಿ.ಯು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮಾಡುತ್ತಿದೆ. ಎಸ್.ಐ.ಟಿ. ರಚನೆಯಾದ ಕೂಡಲೆ ಕೂಡಲೆ ಕಾರ್ಯಪ್ರವೃತ್ತವಾದ ಈ ತಂಡವು ಕೆಳಕಂಡವರುಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ.

  1. ಜೆ ಜಿ ಪದ್ಮನಾಭ, ಪ್ರಧಾನ ವ್ಯವಸ್ಥಾಪಕ ಮಹರ್ಷಿ ವಾಲ್ಮೀಕಿ ನಿಗಮ
  2. ಪರಶುರಾಮ್ ದುರ್ಗಣ್ಣನವರ್ ಲೆಕ್ಕಾಧೀಕ್ಷಕ
  3. ಸತ್ಯನಾರಾಯಣ ಇಟಕಾರಿ ಅಧ್ಯಕ್ಷರು ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋ
    ಆಪರೇಟಿವ್ ಸೊಸೈಟಿ ನಿಯಮಿತ
  4. ನೆಕ್ಕುಂಟೆ ನಾಗರಾಜ್‌- ಇವರು ಹಿಂದೆ ಶ್ರೀರಾಮುಲು ಜೊತೆ ಇದ್ದರು.
  5. ನಾಗೇಶ್ವರರಾವ್, ನೆಕ್ಕುಂಟೆ ನಾಗರಾಜ್ ಅವರ ಭಾವಮೈದುನ
  6. ಎಂ ಚಂದ್ರ ಮೋಹನ್, ಹೈದರಾಬಾದ್
  7. ಗಾದಿರಾಜು ಸೂರ್ಯನಾರಾಯಣ ವರ್ಮ, ಹೈದರಾಬಾದ್
  8. ಜಗದೀಶ್ ಜಿ ಕೆ ಉಡುಪಿ
  9. ತೇಜ ತಮಟಂ, ಬೆಂಗಳೂರು
  10. ಪಿಟ್ಟಲ ಶ್ರೀನಿವಾಸ ಗಚ್ಚಿ ಬೌಲಿ
  11. ಸಾಯಿತೇಜ ಹೈದರಾಬಾದ್
    12.ಕಾಕಿ ಶ್ರೀನಿವಾಸ ರಾವ್, ಆಂಧ್ರಪ್ರದೇಶ.

10) ವಿರೋಧ ಪಕ್ಷದವರು ಉದ್ದೇಶಪೂರ್ವಕವಾಗಿಯೆ ಅನೇಕ ವಿಚಾರಗಳನ್ನು ಮರೆಮಾಚುತ್ತಿದ್ದಾರೆ. ಪ್ರಮುಖವಾಗಿ, ಬ್ಯಾಂಕಿನವರೆ ದಿನಾಂಕ 3-6-2024 ರಂದು ಸಿಬಿಐಗೆ ನೀಡಿರುವ ದೂರಿನಲ್ಲಿ ಒಪ್ಪಿಕೊಂಡಿರುವ ಹಾಗೆ ಎಂಜಿ ರಸ್ತೆಯ ಬ್ರಾಂಚಿನ ಅಧಿಕಾರಿಗಳು ನೇರವಾಗಿ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಬ್ಯಾಂಕಿನ ಅಧಿಕಾರಿಗಳು ಶಿವಕುಮಾರ ಎಂಬ ಅಕ್ರಮ ವ್ಯಕ್ತಿ [ಇದುವರೆಗೆ ತಿಳಿದು ಬಂದ ಮಾಹಿತಿಯ ಪ್ರಕಾರ ಹೈದರಾಬಾದಿನ ಸಾಯಿತೇಜ ಎಂಬ ವ್ಯಕ್ತಿಯನ್ನು ಶಿವಕುಮಾರ ಎಂದು ಹೇಳಿ ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದಾರೆ] ಯ ವಿವರಗಳನ್ನು ಸರಿಯಾಗಿ ಪರಿಶೀಲಿಸದೆ ಅಕ್ರಮವಾಗಿ ಹಣ ವರ್ಗಾಯಿಸಲು ನೆರವಾಗಿದ್ದಾರೆ. ಈ ಮಾತನ್ನು ನಾನು ಹೇಳುತ್ತಿಲ್ಲ. ಬ್ಯಾಂಕಿನವರೆ ಹೇಳಿದ್ದಾರೆ. ಈ ಅಕ್ರಮ ವ್ಯಕ್ತಿಗೆ ಚೆಕ್ ಬುಕ್ಕನ್ನು ಕೊಟ್ಟಿದ್ದು ಯಾಕೆ? ಆ ಚೆಕ್ಕುಗಳನ್ನು ಆಧರಿಸಿ
NEFT / RTGS ಮಾಡಲು ಅವಕಾಶಕೊಟ್ಟಿದ್ದು ಏಕೆ?

  • ಎಂಜಿ ರಸ್ತೆಯ ಶಾಖೆಯ ಮುಖ್ಯಸ್ಥರು ಉಪ ಮುಖ್ಯಸ್ಥರು ಚೆಕ್ಕುಗಳನ್ನು ಸರಿಯಾಗಿ ಪರಿಶೀಲಿಸದೆ ಅಕ್ರಮ ಎಸಗಿದ್ದಾರೆ ಎಂದು ಬ್ಯಾಂಕಿನವರೆ ಹೇಳಿದ್ದಾರೆ. ಇದನ್ನೆಲ್ಲ ಆಧರಿಸಿಯೇ ಬ್ಯಾಂಕಿನ ಮೇಲಧಿಕಾರಿಗಳು ಸಿಬಿಐಗೆ ಬರೆದ ದೂರಿನಲ್ಲಿ ತಮ್ಮ ಸಿಬ್ಬಂದಿಯ / ಅಧಿಕಾರಿಗಳ ತಪ್ಪುಗಳನ್ನು ಒಪ್ಪಿಕೊಂಡಿದ್ದಾರೆ.
  • ವಿರೋಧ ಪಕ್ಷದವರಿಗೆ ನಾನು ಕೇಳಬಯಸುವುದೇನೆಂದರೆ, ಯೂನಿಯನ್ ಬ್ಯಾಂಕು ರಾಷ್ಟ್ರೀಕೃತ ಬ್ಯಾಂಕ್ ಅಥವಾ ಖಾಸಗಿ ಬ್ಯಾಂಕೊ? ರಾಷ್ಟ್ರೀಕೃತ ಬ್ಯಾಂಕು ಹೌದಾದರೆ ಕೇಂದ್ರದ ಯಾವ ಇಲಾಖೆಯ ಕೆಳಗೆ ಬರುತ್ತಾರೆ? ಹಣಕಾಸು ಇಲಾಖೆಯ ಕೆಳಗೆ ತಾನೆ? ಹಣಕಾಸು ಇಲಾಖೆ ಯಾರ ಅಧೀನದಲ್ಲಿದೆ? ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಹಗರಣದ
    ಜವಾಬ್ದಾರಿಯನ್ನು ಹೊರುತ್ತಾರೆಯೆ? ನಾನು ಯಾಕೆ ಈ ಪ್ರಶ್ನೆಯನ್ನು ಕೇಳಿದೆ ಎಂದರೆ 47.16 ಕೋಟಿ ರೂಗಳ ರಾಜ್ಯದ APMC ಯಲ್ಲಿ ಹಗರಣ ನಡೆದಾಗ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದರು. ಬೊಮ್ಮಾಯಿ ಗೃಹ ಸಚಿವರು ಹಾಗೂ ಎಪಿಎಂಸಿ ಸಚಿವರೂ ಆಗಿದ್ದರು. ಈಗ ವಾಲ್ಮೀಕಿ ನಿಗಮದಲ್ಲಿ ಯಾವ ನಿಗಮದಲ್ಲಿ ಯಾವ ರೀತಿ ಹಗರಣ ನಡೆದಿತ್ತೊ ಅದೇ ರೀತಿಯಲ್ಲಿ ಹಗರಣ ನಡೆದಿತ್ತು. ಆದರೆ ಬ್ಯಾಂಕಿನವರು ತಮ್ಮ ಸಸ್ಪೆನ್ಸ್ ಅಕೌಂಟಿನಲ್ಲಿದ್ದ ಹಣವನ್ನು ತೆಗೆದು ವಾಪಸ್ಸು ತುಂಬಿದ್ದರು. ಈಗ ಹಣ ವಾಪಸ್ಸು ತುಂಬಿ ಎಂದು ಸಿಬಿಐಗೆ ಪತ್ರ ಬರೆದಿದ್ದಾರೆ. ವಾಪಸ್ಸು ಕಟ್ಟದಂತೆ ತಡೆದ ಶಕ್ತಿಗಳು ಯಾವುವು? ಎಂಬುದು ಕೂಡ ತನಿಖೆಯಿಂದ ಬಯಲಾಗಬೇಕು. ಸಸ್ಪೆನ್ಸ್ ಖಾತೆಯಿಂದ ಹಣ ವಾಪಾಸ್ ಕೊಟ್ಟರೆ ಲೂಟಿ ಮಾಡಿದವರಿಂದ ವಸೂಲಿ ಮಾಡುವುದು ಯಾವಾಗ? ಅದಕ್ಕೆ ಯಾರು ಜವಾಬ್ದಾರರು?

II) ವಾಲ್ಮೀಕಿ ಅಭಿವೃದ್ಧಿ ನಿಗಮದ ಹೆಸರಿನಲ್ಲಿ ಹಾಗೂ ಇತರೆ ಯಾವುದೇ ನಿಗಮದಲ್ಲಿ ಖಾತೆ ತೆರೆಯುವುದು, ವರ್ಗಾಯಿಸುವುದು ಮತ್ತು ತಮಗೆ ಬಿಡುಗಡೆಯಾದ ಅನುದಾನಗಳನ್ನು ಸಮರ್ಪಕ ರೀತಿಯಲ್ಲಿ ಜನರ ಕಲ್ಯಾಣಕ್ಕೆ ಬಳಸುವುದು ಮುಖ್ಯಸ್ಥರಾದ ವ್ಯವಸ್ಥಾಪಕ ನಿರ್ದೇಶಕರ ಜವಾಬ್ದಾರಿಯಾಗಿರುತ್ತದೆ.

12) ದಿನಾಂಕ:26.02.2014 ರಂದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಎಂ.ಜಿ.ರಸ್ತೆ ಶಾಖೆಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಒಂದು ಪತ್ರವನ್ನು ಸಲ್ಲಿಸಿರುತ್ತಾರೆ. ಆ ಪತ್ರದಲ್ಲಿ ಉಳಿತಾಯ ಖಾತೆಯನ್ನು ವ್ಯವಸ್ಥಾಪಕ ನಿರ್ದೇಶಕರು ಮತ್ತು ಲೆಕ್ಕಾಧಿಕಾರಿಯವರು ಜಂಟಿಯಾಗಿ ನಿರ್ವಹಿಸುತ್ತಾರೆಂದು ತಿಳಿಸಿದ್ದು, ಎರಡು ಮಾದರಿ ಸಹಿ, ಇತರೆ ಕೆ.ವೈ.ಸಿ. ವಿವರಗಳು ಹಾಗೂ ದಾಖಲೆಗಳನ್ನು ಸಲ್ಲಿಸಿರುತ್ತಾರೆ.

13) ದಿನಾಂಕ: 04.03.2024 ರಂದು ವ್ಯವಸ್ಥಾಪಕ ನಿರ್ದೇಶಕರು ಮತ್ತು ಲೆಕ್ಕಾಧಿಕಾರಿಗಳು ಜಂಟಿಯಾಗಿ ಬ್ಯಾಂಕಿಗೆ ಪತ್ರವನ್ನು ನೀಡಿದಂತೆ ಅಕ್ರಮ ಪತ್ರ ನೀಡಲಾಗಿದೆಯೆಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಈ ಉಳಿತಾಯ ಖಾತೆಗೆ ಸಂಬಂಧಪಟ್ಟಂತೆ ಎಲ್ಲಾ ರೀತಿಯ ವ್ಯವಹಾರಗಳನ್ನು ಅಂದರೆ, ಚೆಕ್‌ಬುಕ್ ಪಡೆಯುವುದು, ಫಿಕ್ಸೆಡ್ ಡೆಪಾಸಿಟ್ ರಸೀದಿಯನ್ನು ಪಡೆಯುವುದು, ಓವರ್ ಡ್ರಾಫ್ಟ್ ದಾಖಲೆಗಳನ್ನು ಪಡೆಯುವುದು ಹಾಗೂ ನಿಗಮದ ಎಲ್ಲಾ ವ್ಯವಹಾರಗಳನ್ನು ಈ ಖಾತೆಯಲ್ಲಿ ನಿರ್ವಹಿಸಲು ನಕಲಿ ಪತ್ರವೊಂದನ್ನು ಸೃಷ್ಟಿಸಿ, ಅದರಲ್ಲಿ ನಿಗಮದಲ್ಲಿಯೇ ಇಲ್ಲದ ಶ್ರೀ ಶಿವಕುಮಾರ್‌ ಎಂಬ ಅಕ್ರಮ ವ್ಯಕ್ತಿಯನ್ನು ಸೃಷ್ಟಿಸಿ ಅವನನ್ನು ಕಿರಿಯ ಲೆಕ್ಕಾಧಿಕಾರಿ ಎಂದು ಹೇಳಿ ಆತನೇ ಇನ್ನು ಮುಂದಿನ ಅಧಿಕೃತ ಸಹಿದಾರ ಎಂದು ಅನಧಿಕೃತವಾಗಿ ಮಾಡಿ ಆತನ ವಶಕ್ಕೆ ಚೆಕ್ ಬುಕ್‌ನ್ನು ನೀಡಬೇಕೆಂದು ತಿಳಿಸುವ ಪತ್ರವೊಂದನ್ನು ನೀಡಿ, ಚೆಕ್‌ಬುಕ್ಕನ್ನು 04.03.2024 ರಂದು ಪಡೆದಿರುವುದಾಗಿ ತಿಳಿದು ಬಂದಿರುತ್ತದೆ. ಈ ಶಿವಕುಮಾರ್ ಎಂಬ ವ್ಯಕ್ತಿ ನಿಜವಾಗಿ ವಾಲ್ಮೀಕಿ ನಿಗಮದ ಸಿಬ್ಬಂದಿಯೆ? ಎಂಬ ಬಗ್ಗೆ ಬ್ಯಾಂಕಿನ ಮ್ಯಾನೇಜರ್ ತಿಳಿದುಕೊಳ್ಳುವ ಪ್ರಯತ್ನವನ್ನೆ ಮಾಡಲಿಲ್ಲ.

14) ನಿರ್ದೇಶಕರ ಮಂಡಳಿ ಸಭೆ ದಿನಾಂಕ;30-3-2024 ರಂದು ನಡೆಯಿತೆಂದು ಬ್ಯಾಂಕಿಗೆ ತಿಳಿಸಲಾಗಿದೆಯೆಂಬಂತೆ ದಾಖಲೆಗಳನ್ನು ಸೃಷ್ಟಿಸಲಾಗಿದೆ. ಆದರೆ ಚುನಾವಣೆಯ ಕೋಡ್ ಆಫ್ ಕಂಡಕ್ಟ್ ಇರುವಾಗ ಯಾವ ಸಭೆ ನಡೆಯಲು ಹೇಗೆ ಸಾಧ್ಯ?

15) ಚುನಾವಣಾ ಸಂದರ್ಭದಲ್ಲಿ ಇಷ್ಟು ದೊಡ್ಡ ಪ್ರಮಾಣದ ವ್ಯವಹಾರಗಳು ನಡೆಯುವಾಗ ಆದಾಯ ತೆರಿಗೆ ಇಲಾಖೆಯವರು ಬ್ಯಾಂಕನ್ನು ಬ್ಯಾಂಕನ್ನು ಕೇಳಲಿಲ್ಲವೆ? ಬ್ಯಾಂಕಿನವರು ಚುನಾವಣಾ ಆಯೋಗದ ಗಮನಕ್ಕೆ ತರಬೇಕಾಗಿಲ್ಲ. ಯಾಕೆ ತರಲಿಲ್ಲ? ಬ್ಯಾಂಕಿನ ಮ್ಯಾನೇಜರ್ ಆದಿಯಾಗಿ ಅನೇಕ ಅಧಿಕಾರಿ, ಸಿಬ್ಬಂದಿಗಳು ವಾಲ್ಮೀಕಿ ನಿಗಮದ ಅಧಿಕಾರಿ ಸಿಬ್ಬಂದಿ ಮತ್ತು ಹೊರಗಿನ ಖಾಸಗಿ Fraud ಮಾಡುವ ವ್ಯಕ್ತಿಗಳು ಸೇರಿ ಇದು ಮಾಡಿರುವ ಹುನ್ನಾರ ಎಂದು ವ್ಯಕ್ತವಾಗುತ್ತದೆ. ತನಿಖೆಯಿಂದ ಈ ಎಲ್ಲಾ ಅಂಶಗಳು ಬಯಲಾಗುತ್ತವೆ.

16) ನಿಗಮದವರು ಹೊಸ ಖಾತೆ ತೆರೆಯಬೇಕಾದರೆ, ಖಾತೆ ವರ್ಗಾವಣೆ ಮಾಡಬೇಕಾದರೆ ಆರ್ಥಿಕ ಇಲಾಖೆಯ ಗಮನಕ್ಕೆ ತರಬೇಕು, ಅನುಮತಿ ಪಡೆದುಕೊಳ್ಳಬೇಕು. ಆದರೆ ಈ ಯಾವ ಕೆಲಸವನ್ನೂ ಮಾಡಿಲ್ಲ. ನೇರವಾಗಿ ಖಾತೆಯ ವಿವರವನ್ನು ಖಜಾನೆ-2 ರಲ್ಲಿ ಅಪ್ ಲೋಡ್ ಮಾಡಿದ್ದಾರೆ. ದಿನಾಂಕ: 19.03.2024 ರಂದು ಡಿಡಿಓ ಕಛೇರಿ, ಅಂದರೆ ನಿರ್ದೇಶಕರು, ಪರಿಶಿಷ್ಟ ಪಂಗಡಗಳ ಇಲಾಖೆಯ ವ್ಯವಸ್ಥಾಪಕರು ಹೊಸ ಬ್ಯಾಂಕ್ ಖಾತೆಯನ್ನು ಕೆ-2 ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಇದನ್ನು ಡಿ.ಡಿ.ಓ.ರವರು (ನಿರ್ದೇಶಕರು, ಪರಿಶಿಷ್ಟ ಪಂಗಡಗಳ ಇಲಾಖೆ) ಅನುಮೋದಿಸಿದ್ದಾರೆ. ಡಿ.ಡಿ.ಒ.ರವರ ಜವಾಬ್ದಾರಿಯ ಮೇಲೆ ದಿನಾಂಕ 25-2-2024 ರಂದು 43.33 ಕೋಟಿ ರೂಪಾಯಿಗಳನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಎಂಜಿ ರಸ್ತೆಯ ಶಾಖೆಗೆ ಉಳಿತಾಯ ಖಾತೆಗೆ ವರ್ಗಾಯಿಸಲಾಗಿದೆ. ವರ್ಷದ ಕಡೆಯಲ್ಲಿ ಆಯವ್ಯಯದಲ್ಲಿ ಕಲ್ಪಿಸಿದ ಅನುದಾನವನ್ನು ಎಲ್ಲರಿಗೂ ಬಿಡುಗಡೆ ಮಾಡುವ ಹಾಗೆಯೇ ಈ ಖಾತೆಗೂ ಹಣ ಬಿಡುಗಡೆಯಾಗಿದೆ. ಯೂನಿಯನ್ ಬ್ಯಾಂಕು ಕೂಡ ರಾಷ್ಟ್ರೀಕೃತ ಬ್ಯಾಂಕೆ, ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಕಳ್ಳತನ ನಡೆದಿದೆ.

ಅಶೋಕ್ ಅವರು ನಿಗಮಕ್ಕೆ ಹಣ ಯಾಕೆ ಬಿಡುಗಡೆ ಮಾಡಿದ್ದು ಎಂದು ಕೇಳಿದ್ದಾರೆ. ಹಣ ವರ್ಷ ವರ್ಷವೂ ಬಿಡುಗಡೆಯಾಗಲೇಬೇಕು. ಇಲ್ಲದಿದ್ದರೆ ಲ್ಯಾಪ್ಸ್ ಆಗುತ್ತದೆ. ವಿಚಾರ ಇರುವುದು ಹಣ ಯಾಕೆ ಬಿಡುಗಡೆ ಮಾಡಿದ್ದು ಎಂಬುದಲ್ಲ. ಬಿಡುಗಡೆ ಮಾಡಿದ ಹಣವನ್ನು ಹೇಗೆ ಬಳಕೆ ಮಾಡಲಾಗುತ್ತದೆ ಎಂಬುದು ಮುಖ್ಯ. ಬಿಡುಗಡೆ ಮಾಡಿದ ಹಣಕ್ಕೆ ನಾನು ಟ್ರಸ್ಟಿ ಎಂಬ ನೈತಿಕತೆ ಪ್ರತಿಯೊಬ್ಬರಿಗೂ ಇರಬೇಕಾಗುತ್ತದೆ. ಕಳ್ಳತನ ಮಾಡಿ ಎಂದು ನಾವು ಹಣ ಬಿಡುಗಡೆ ಮಾಡುತ್ತೇವಾ? ಆದರೆ ಕಳ್ಳತನ ಮಾಡಿದ್ದಾರೆ. ಕಳ್ಳತನ ಮಾಡಿದವರು ಯಾರೇ ಆಗಿದ್ದರೂ ಕಳ್ಳರೆ, ಕಳ್ಳರನ್ನು ಈ ಸರ್ಕಾರವು ಸಹಿಸುವುದಿಲ್ಲ. ಬಿಜೆಪಿಯವರು ಇಮ್ಯುನಿಟಿ ಬೂಸ್ಟರ್ ನೀಡಿದ ಹಾಗೆ ನಾವು ನೀಡುವುದಿಲ್ಲ.

18) ಯಾವುದೇ ಸಂದರ್ಭದಲ್ಲಿ ಕಳ್ಳರು ಏಕಾಏಕಿ ಹುಟ್ಟುವುದಿಲ್ಲ. ಅವರು ಪ್ರೊಫೆಶನಲ್ ಆಗಬೇಕಾದರೆ ಅವರಿಗೆ ಹಿಂದೆ ಬಹಳ ಇಮ್ಯುನಿಟಿ ಸಿಕ್ಕಿರುತ್ತದೆ. ಹಾಗಾಗಿ ಕಳ್ಳರು ಎಲ್ಲಿಂದ ಪ್ರಾರಂಭವಾದರು? ಹೇಗೆ ಪ್ರಾರಂಭವಾದರು? ಅವರನ್ನು ಬೆಳೆಸಿದವರು ಯಾರು? ಎಂಬುದೆಲ್ಲ ಬಹಳ ಮುಖ್ಯವಾದ ಸಂಗತಿಗಳು. ಈ ಎಲ್ಲವುಗಳನ್ನು ತನಿಖಾ ಸಂಸ್ಥೆಗಳು ಗಮನದಲ್ಲಿಟ್ಟುಕೊಂಡು ತನಿಖೆ ನಡೆಸಬೇಕಾಗಿದೆ.

19) ಈ ವಿಷಯದಲ್ಲಿ ಆರೋಪಿಗಳಾಗಿರುವ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ. ಪದ್ಮನಾಭ 2017-18 ನೇ ಸಾಲಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಬೆಂಗಳೂರು ನಗರ ಜಿಲ್ಲೆಯಲ್ಲಿ ಜಿಲ್ಲಾ ವ್ಯವಸ್ಥಾಪಕರಾಗಿರುವ ಸಂದರ್ಭದಲ್ಲಿ ಈ ವಾಲ್ಮೀಕಿ ನಿಗಮದಲ್ಲಿ ಮಾಡಿದ ಮಾದರಿಯಲ್ಲಿ 4.96 ಕೋಟಿಗೂ ಹೆಚ್ಚು ಅವ್ಯವಹಾರ ನಡೆಸಿದ್ದ ಆರೋಪದ ಮೇಲೆ ಅಮಾನತ್ತಾಗಿ ಇಲಾಖಾ ವಿಚಾರಣೆ ಪ್ರಾರಂಭಿಸಲಾಗಿತ್ತು. ಆದರೆ, ಅವರನ್ನು ನಿಮ್ಮ ಸರ್ಕಾರ ಆರೋಪಮುಕ್ತಗೊಳಿಸಿ ಆದೇಶಿಸಿತ್ತು.

20) ಹಾಗಿದ್ದರೆ, ಈ ಪದ್ಮನಾಭನನ್ನು ಆರೋಪಮುಕ್ತಗೊಳಿಸಿದ್ದಾಗ ಅಧಿಕಾರದಲ್ಲಿ ಬಿಜೆಪಿ ಸರ್ಕಾರವೆ ಇತ್ತು. ಹಾಗಾಗಿ ಆರೋಪ ಮುಕ್ತಗೊಳಿಸಿ ಅವನಿಗೆ ಇನ್ನೂ ದೊಡ್ಡ ದರೋಡೆ ಮಾಡಲು ಇಮ್ಯುನಿಟಿಯನ್ನು ಒದಗಿಸಿಕೊಟ್ಟಿದ್ದು ಬಿಜೆಪಿ ಸರ್ಕಾರವೇ ಅಲ್ಲವೆ? ಬಿಜೆಪಿ ಸರ್ಕಾರದ ಅಧೀನದಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿಗಳು ಪ್ರಕರಣವನ್ನು ಸರಿಯಾಗಿ ನಿಭಾಯಿಸಿದ್ದರೆ ಆತ ಆರೋಪಮುಕ್ತನಾಗುತ್ತಿದ್ದನೆ?

21) ಪರಿಶಿಷ್ಟ ಜಾತಿ/ ಪಂಗಡಗಳ, ಹಿಂದುಳಿದವರ, ರೈತರ, ಕಾರ್ಮಿಕರ, ರೈತರ, ಮಹಿಳೆಯರ ಏಳಿಗೆಗಾಗಿ ಅವರ ಬದುಕು ಸುಧಾರಿಸುವುದಕ್ಕಾಗಿ ನಮ್ಮ ಸರ್ಕಾರ ಯಾವುದೇ ತ್ಯಾಗಕ್ಕೂ ಸಿದ್ಧ. ಈ ವರ್ಗಗಳ ಕಲ್ಯಾಣಕ್ಕಾಗಿ ಮೀಸಲಿಟ್ಟ ಒಂದು ರೂಪಾಯಿಯನ್ನೂ ಕದಿಯಲು ಬಿಡುವುದಿಲ್ಲ. ದುರುಪಯೋಗವಾಗಲು ಬಿಡುವುದಿಲ್ಲ.

22) ಬಿ.ಜೆ.ಪಿ. ಸರ್ಕಾರದ ಅವಧಿಯಲ್ಲಿ ಅಸಂಖ್ಯಾತ ಹಗರಣಗಳು ನಡೆದಿವೆ. ಕೆಲವು ಮುಖ್ಯ ಹಗರಣಗಳ ಮಾಹಿತಿಯನ್ನು ಸದನದಲ್ಲಿ ಸದನದಲ್ಲಿ ಅನುಬಂಧ-2 ಅನುಬಂಧ-2 ರಲ್ಲಿಟ್ಟು ಮಂಡಿಸುತ್ತಿದ್ದೇನೆ. ತಿಂದವರು ತಿಂದುಕೊಂಡು ಹೋಗಲಿ ಎಂದು ಬಿಡುವುದಕ್ಕೆ ನಮ್ಮದು ಯಡಿಯೂರಪ್ಪನವರ ಸರ್ಕಾರವಲ್ಲ, ಬೊಮ್ಮಾಯಿಯವರ ಸರ್ಕಾರವೂ ಅಲ್ಲ. ಮೋದಿ ಸರ್ಕಾರವೂ ಅಲ್ಲ. ಯಾರೇ ತಪ್ಪೆಸಗಿದ್ದರೂ ಅವರನ್ನು ಬಿಡುವ ಪ್ರಶ್ನೆಯೇ ಇಲ್ಲ. We will not compromise with corruption.

23) ಕಳ್ಳರಿಗೆ ಇಮ್ಯುನಿಟಿ ಸಿಕ್ಕಾಗ ಮಾತ್ರ ಬಲಿತುಕೊಳ್ಳುತ್ತಾರೆಂದು ಆಗಲೆ ಹೇಳಿದೆ. ಹಿಂದಿನ ಇಬ್ಬರು ಮುಖ್ಯ ಮಂತ್ರಿಗಳ ಕಾಲದಲ್ಲಿ ಈ ಕಳ್ಳರನ್ನು ಮಟ್ಟ ಹಾಕಿದ್ದರೆ, ಅಥವಾ ಮೋದಿ ಸರ್ಕಾರ ಖದೀಮ ಬ್ಯಾಂಕ್ ಮ್ಯಾನೇಜರುಗಳನ್ನು ಮಟ್ಟ ಹಾಕಿದ್ದರೆ ಇಂದು ದೇಶದಲ್ಲಿ ಈ ರೀತಿಯ ಪ್ರಕರಣಗಳು ನಡೆಯುತ್ತಿದ್ದವೆ? ದೇಶದ ಎಷ್ಟೊಂದು ಬ್ಯಾಂಕುಗಳಲ್ಲಿ ಈ ರೀತಿಯ ಪ್ರಕರಣಗಳು ನಡೆದಿವೆ ಎಂಬ ಮಾಹಿತಿಯನ್ನು ಆರ್‌ಬಿಐ ಪ್ರಕಟಿಸಬೇಕು ಆಗ ಸತ್ಯಾಂಶ ಹೊರಬರುತ್ತದೆ.

24) ಕರ್ನಾಟಕದಲ್ಲಿ ಕಳೆದ 5-6 ವರ್ಷಗಳಲ್ಲಿ ಅನೇಕ ಬ್ಯಾಂಕುಗಳಲ್ಲಿ ಫ್ರಾಡುಗಳು ನಡೆದಿವೆ. ರಾಷ್ಟ್ರೀಕೃತ ಬ್ಯಾಂಕುಗಳು ಯಾರ ಅಧೀನದಲ್ಲಿವೆ? ಆ ಖದೀಮ ಮ್ಯಾನೇಜರುಗಳು ಯಾರ ಅಧೀನದಲ್ಲಿದ್ದಾರೆ? ಕೇಂದ್ರದ ಹಣಕಾಸು ಸಚಿವರ ಅಧೀನದಲ್ಲಿದ್ದಾರೆ ತಾನೆ? ಅಂತಿಮವಾಗಿ ಮೋದಿಯವರ ಅಧೀನದಲ್ಲಿದ್ದಾರೆ ತಾನೆ? ನಮ್ಮ ಜನರ ದುಡ್ಡನ್ನು ಹೇಗೆಂದರೆ ಹಾಗೆ ಲೂಟಿ ಮಾಡುವುದಕ್ಕಾ ಈ ಬ್ಯಾಂಕುಗಳು ಇರುವುದು?

25) ಇದೇ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಿಂದೆಯೂ ಹಗರಣಗಳಾಗಿವೆ. ಹಗರಣಗಳನ್ನು ಹೊರತರುವ ಕೆಲಸವನ್ನು ನಾವು ಮಾಡುತ್ತೇವೆ. ವಿವಿಧ ಆರೋಪಿಗಳಿಂದ 34.25 ಕೋಟಿ ಹಣ ವಸೂಲಿ ಮಾಡಲಾಗಿದೆ. ಇದುವರೆಗೆ ಸರ್ಕಾರವು 85,25,07,698 ರೂ. ಹಣವನ್ನು (ರೂ. 85.25 ಕೋಟಿ) ವಿವಿಧ ಹಂತಗಳಲ್ಲಿ ತನ್ನ ವಶಕ್ಕೆ ಪಡೆದಿದೆ. ಉಳಿದದ್ದನ್ನು ವಶಕ್ಕೆ ಪಡೆಯುವ ಕೆಲಸ ಮಾಡುತ್ತಿದೆ. ಈ ವಿವರನ್ನು ಅನುಬಂಧ-2 ರಲ್ಲಿಟ್ಟು ಮಂಡಿಸುತ್ತಿದ್ದೇನೆ. ನಿಮ್ಮ ಅವಧಿಯಲ್ಲಿ ನಡೆದಿರುವ ಹಗರಣಗಳಲ್ಲಿ ಎಷ್ಟು ಮೊತ್ತವನ್ನು ರಿಕವರಿ ಮಾಡಿದ್ದೀರಿ ಹೇಳಿ? ನಾವು ತಪ್ಪು ಮಾಡಿದವರನ್ನು ಜೈಲಿಗೂ ಕಳಿಸಿದ್ದೇವೆ. ಹಣವನ್ನೂ ವಾಪಸ್ಸು ತರುತ್ತಿದ್ದೇವೆ. ಆದರೆ ನೀವು ಕಳ್ಳರು ಇನ್ನಷ್ಟು ಕಳ್ಳರಾಗುವಂತೆ ಮಾಡಿದಿರಿ. ಲೂಟಿ ಮಾಡಿದ ಹಣವನ್ನೂ ವಾಪಸ್ಸು ತರಲಿಲ್ಲ.

26) ಅಂತಿಮವಾಗಿ, ಈಗಾಗಲೇ ಈ ಹಗರಣದ ತನಿಖೆಯನ್ನು ರಾಜ್ಯ ಸರ್ಕಾರವು CID, SIT ಗೆ ನೀಡಿ ಆದೇಶಿರುತ್ತದೆ. ಸಿ.ಬಿ.ಐ. ಹಾಗೂ ಇ.ಡಿ. ಸಂಸ್ಥೆಗಳೂ ಕೂಡ ತನಿಖೆ ನಡೆಸುತ್ತಿವೆ. ಈ ಹಗರಣದಲ್ಲಿ ಯಾರು ಯಾರು ಭಾಗಿಯಾಗಿದ್ದಾರೆ ಹಾಗೂ ನಿಗಮದ ಖಾತೆಯಿಂದ ಯಾರ ಖಾತೆಗಳಿಗೆ ಹಣ ವರ್ಗಾವಣೆಯಾಗಿರುತ್ತದೆ ಹಾಗೂ ಇದರ ಮೂಲ (Ultimate) ಫಲಾನುಭವಿಗಳು ಯಾರು ಎಂಬುದು ತನಿಖೆಯು ಪೂರ್ಣಗೊಂಡ ನಂತರವೇ ತಿಳಿಯುತ್ತದೆ. ಕಾರಣಕರ್ತರು ತನಿಖೆ ನಡೆಯುತ್ತಿರುವಾಗ ನಾನು ಯಾವುದೇ ವ್ಯಕ್ತಿಯ ಬಗ್ಗೆ ಸ್ಪಷ್ಟವಾಗಿ ಇವರೇ ಎಂದು ಹೇಳಿದರೆ ತಪ್ಪಾಗುತ್ತದೆ. ಹಾಗೂ ತನಿಖಾ ಸಂಸ್ಥೆಯ ತನಿಖೆಯನ್ನು ದಾರಿ ತಪ್ಪಿಸಿದಂತಾಗುತ್ತದೆ. ಆದುದರಿಂದ, ತನಿಖೆ ಮುಗಿಯುವವರೆಗೂ ಕಾಯಬೇಕಾಗುತ್ತದೆ. ತದನಂತರ ತನಿಖೆಯ ಫಲಿತಾಂತದ ಆಧಾರದ ಮೇಲೆ ತಪ್ಪಿಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ಹಾಗೂ ನಿಗಮಕ್ಕೆ ಹಣ ವಾಪಸ್ಸು ಪಡೆಯುವ ಕೆಲಸ ಮಾಡಬೇಕಾಗುತ್ತದೆ.

27) ರಾಜ್ಯ ಸರ್ಕಾರವು ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಜೆ.ಜಿ. ಪದ್ಮನಾಭ, ಹಾಗೂ ಲೆಕ್ಕಾಧೀಕ್ಷಕ ಪರಶುರಾಮ್ ದುರ್ಗಣ್ಣನವರ್ ಇವರನ್ನು ಅಮಾನತ್ತು ಮಾಡಿದೆ. ಎಸ್.ಐ.ಟಿ. ಯು ಬಂಧಿಸಿ ಜೈಲಿಗೆ ಅಟ್ಟಿದೆ. ಇಲಾಖೆಯ ಸಚಿವರಾಗಿದ್ದ ನಾಗೇಂದ್ರ ಅವರು ರಾಜೀನಾಮೆ ನೀಡಿ ವಿಚಾರಣೆ ಎದುರಿಸುತ್ತಿದ್ದಾರೆ. ಅವರನ್ನು ಇ.ಡಿ. ಯು ಬಂಧಿಸಿದೆ. ಹಾಗೆಯೇ, ಬ್ಯಾಂಕಿನ ಸಿಬ್ಬಂದಿಗಳನ್ನು ಸಹ ಎಸ್.ಐ.ಟಿ. ಯವರೆ ಅರೆಸ್ಟ್ ಮಾಡಿ ಜೈಲಿಗೆ ಅಟ್ಟಿದ್ದಾರೆ.

28) ಈ ಹಗರಣದಲ್ಲಿ ಹಣಕಾಸು ಇಲಾಖೆಯ ಯಾವುದೇ ಪಾತ್ರ ಇರುವುದಿಲ್ಲ. ಹಣಕಾಸು ಇಲಾಖೆಯ ಆದೇಶದಂತೆ, ಆಯವ್ಯಯದಲ್ಲಿ ತಿಳಿಸಿದಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯು ನಿಗಮಕ್ಕೆ 4 ಕಂತುಗಳಲ್ಲಿ ಅನುದಾನ ಬಿಡುಗಡೆ ಮಾಡಿರುತ್ತದೆ. ಆಡಳಿತ ಇಲಾಖೆಯ ಆದೇಶದ ನಂತರ ಸಂಬಂಧಪಟ್ಟ DDO (Drawing and Disbursing Officer) (ನಿರ್ದೇಶಕರು, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ) ಇವರು ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕೋರಿಕೆಯಂತೆ, ಖಜಾನೆಯಿಂದ ಹಣ ಸೆಳೆದು ನಿಗಮದ ಖಾತೆಗೆ ಜಮೆ ಮಾಡಿರುತ್ತಾರೆ. ಇದು ಇಲಾಖೆಯಲ್ಲಿ ಪ್ರತಿ ಕಂತಿನ ಹಣವನ್ನು ಸೆಳೆಯಲು ಇರುವಂತಹ ವಿಧಾನ (Procedure).

ಮಾನ್ಯ ವಿರೋಧ ಪಕ್ಷದ ನಾಯಕರು ಎನ್.ಟಿ.ಟಿ. ಮಾಡ್ಯೂಲ್ ಬಗ್ಗೆ ಪ್ರಸ್ತಾಪಿಸಿದ್ದಾರೆ. ಅದರಿಂದ ಎಲ್ಲಾ ಬ್ಯಾಂಕ್ ಖಾತೆಗಳಲ್ಲಿ ನಡೆಯುವ ಟ್ರಾನ್ಸಾಕ್ಷನ್ ಆರ್ಥಿಕ ಇಲಾಖೆಗೆ ತಿಳಿಯುವುದರಿಂದ ಈ ಹಗರಣದ ಬಗ್ಗೆ ಮಾಹಿತಿ ಇದ್ದರೂ ಆರ್ಥಿಕ ಇಲಾಖೆ ಏನೂ ಮಾಡಿರುವುದಿಲ್ಲವೆಂದು ಆರೋಪಿಸಿದ್ದಾರೆ. ಆದರೆ, ಎನ್.ಟಿ.ಟಿ. ಮಾಡ್ಯೂಲ್‌ನ್ನು 2022 ರಲ್ಲಿ ಜಾರಿ ಮಾಡಲಾಗಿದೆ. ಇದರಲ್ಲಿ ದಾಖಲಾಗಿರುವ ಎಲ್ಲಾ ಬ್ಯಾಂಕ್ ಖಾತೆಗಳಲ್ಲಿ ಆಯಾ ದಿನ ಎಷ್ಟು ಹಣ ಬ್ಯಾಲೆನ್ಸ್ ಇದೆ ಎಂದು ಮಾಹಿತಿ ಖಜಾನೆಗೆ ಲಭ್ಯವಾಗುತ್ತದೆ. ಈ ಮಾಹಿತಿಯನ್ನು ಖಜಾನೆಯಿಂದ ಹಣ ಬಿಡುಗಡೆಗೊಳಿಸಲು ಓಪನಿಂಗ್ ಬ್ಯಾಲೆನ್ಸ್ ನಿರ್ಧಿಷ್ಟಪಡಿಸಲು ನೆರವಾಗುತ್ತದೆ. ಆಧಾರದ ಮೇಲೆ ಹೊಸದಾಗಿ ಹಣ ಬಿಡುಗಡೆಗೊಳಿಸಲು ನಿರ್ಧಾರ ಮಾಡಲಾಗುವುದು. ಇದನ್ನು ಹೊರತುಪಡಿಸಿ ಯಾವುದೇ ಖಾತೆಯಲ್ಲಿರುವ ಪ್ರತಿದಿನದ ವಹಿವಾಟಿನ ಮಾಹಿತಿ ಬ್ಯಾಂಕ್‌ಗಳಿಂದ ಆರ್ಥಿಕ ಇಲಾಖೆಗೆ ಲಭ್ಯವಾಗುವುದಿಲ್ಲ.

29) ವಿರೋಧ ಪಕ್ಷದವರು ನಿಗಮದಲ್ಲಿ ನಡೆದಿರುವ ಹಗರಣದ ಕುರಿತು ಮಾತನಾಡುವಾಗ ಮುಖ್ಯಮಂತ್ರಿಗಳನ್ನು, ಆರ್ಥಿಕ ಇಲಾಖೆಯನ್ನು ಗುರಿ ಮಾಡುತಿದ್ದಾರೆ. ಆದರೆ, ರಾಜ್ಯದಲ್ಲಿ ಹಗರಣಗಳ ಸರಮಾಲೆಯನ್ನೇ ನಡೆಸಿರುವ ಯೂನಿಯನ್ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಹಾಗೂ ಇನ್ನಿತರೆ ಬ್ಯಾಂಕುಗಳು ಯಾರ ಅಧೀನದಲ್ಲಿ ಬರುತ್ತವೆ? ವಿರೋಧ ಪಕ್ಷದವರಿಗೆ ಅರ್ಥವಾಗದಿದ್ದರೆ ಬಿಡಿಸಿ ಹೇಳುತ್ತೇನೆ. ಇವೆಲ್ಲವೂ ರಾಷ್ಟ್ರೀಕೃತ ಬ್ಯಾಂಕುಗಳು, ಕೇಂದ್ರ ಸರ್ಕಾರದ ಹಣಕಾಸು ಇಲಾಖೆಯ ಅಧೀನದಲ್ಲಿ ಬರುತ್ತವೆ. ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವರಾಗಿದ್ದಾರೆ. ದೇಶದಲ್ಲಿ ಹೆಚ್ಚು ಬ್ಯಾಂಕಿಂಗ್ ಹಗರಣಗಳು ಪ್ರಾರಂಭವಾಗಿದ್ದೇ ಕಳೆದ 6-7 ವರ್ಷಗಳಿಂದ ಉದಾಹರಣೆಗೆ, ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕಿನಲ್ಲಿ ಆಗಿರುವ ಬೃಹತ್ ಹಗರಣದ ಕುರಿತು ಯಾಕೆ ಕೇಂದ್ರ ಸರ್ಕಾರ ಯಾವುದೇ ಕ್ರಮವಹಿಸದೆ ಸುಮ್ಮನಿದೆ? ಬಡ ಠೇವಣಿದಾರರಿಗೆ ಮರಳಿಸಲಾಗಿದೆ? ಬ್ಯಾಂಕಿನ ಆಡಳಿತ ಮಂಡಳಿಯಲ್ಲಿದ್ದ ಬಲಿಷ್ಠ ರಾಜಕಾರಣಿಗಳಿಗೆ ಯಾವ ಶಿಕ್ಷೆ ಆಯಿತು? ಜಯನಗರ, ಬಸವನಗುಡಿಯ ಜನ ಮನೆಮನೆಗಳಲ್ಲಿ, ಬೀದಿ ಬೀದಿಗಳಲ್ಲಿ ಹಗರಣದಲ್ಲಿ ಭಾಗವಹಿಸಿದ್ದವರು ವಿಧಾನಸೌಧ, ಪಾರ್ಲಿಮೆಂಟಿಗೂ ಹೋಗಿದ್ದಾರೆ ಎಂದು ಮಾತನಾಡುತ್ತಿದ್ದಾರೆ. ಕೇಂದ್ರ ಸರ್ಕಾರದ ಸೆಲೆಕ್ಟಿವ್ ಅಪ್ರೋಚ್‌ನಿಂದಾಗಿ ಹಗರಣಗಳು ಹೆಚ್ಚಾಗುತ್ತಿವೆಯೇ ಹೊರತು,
ಕಡಿಮೆಯಾಗುತ್ತಿಲ್ಲ. ವಿರೋಧ ಪಕ್ಷಗಳ ಮುಖಂಡರ ಮೇಲೆ ಹಗರಣಗಳ ಆರೋಪಗಳಿದ್ದರೆ ಅವರನ್ನು ಬಿ.ಜೆ.ಪಿ. ಗೆ ಸೇರಿಸಿಕೊಂಡ ನಂತರವೇ ಹಗರಣ ಮುಕ್ತ ಮಾಡಲಾಗುತ್ತಿದೆ. ಹೀಗಿದ್ದರೆ ಯಾವ ಕಳ್ಳರಿಗೆ ತಾನೆ ಭಯ ಹುಟ್ಟಲು ಸಾಧ್ಯ? ವಿರೋಧ ಪಕ್ಷದವರನ್ನು ನೋಡಿದರೆ ಇಲ್ಲಿ ಗಂಟೆಗಟ್ಟಲೆ ನಿಂತು ನೈತಿಕತೆಯ ಬಗ್ಗೆ ಪಾಠ ಮಾಡುತ್ತಾರೆ.

30) ನಾನು ಪದೆ ಪದೆ ಈ ಸದನಕ್ಕೂ ನಾಡಿನ ಜನರಿಗೂ ಭರವಸೆ ನೀಡಬಯಸುತ್ತೇನೆ. ನಾವು ಪರಿಶಿಷ್ಟ ಜಾತಿ, ಪಂಗಡ, ದಮನಿತ ಸಮುದಾಯದವರಿಗೆ ಒದಗಿಸಿದ ಪ್ರತಿ ಪೈಸೆಯನ್ನೂ ಖರ್ಚು ಮಾಡುತ್ತೇವೆ ಮತ್ತು ಗುಣಾತ್ಮಕವಾಗಿ ವಿನಿಯೋಗಿಸುತ್ತೇವೆ ಹಾಗೂ ಈ ಪ್ರಕರಣದಲ್ಲಿ ಭಾಗಿಯಾಗಿರುವ ಕಳ್ಳರು ಯಾರೇ ಇದ್ದರೂ ಅವರನ್ನು ನಿರ್ಧಾಕ್ಷಿಣ್ಯವಾಗಿ ಶಿಕ್ಷಿಸುತ್ತೇವೆ. ಬಿ.ಜೆ.ಪಿ. ಅವಧಿಯ ಎಲ್ಲ ಹಗರಣಗಳನ್ನೂ ತನಿಖೆಗೆ ಒಪ್ಪಿಸುತ್ತೇವೆ.

ಇದನ್ನೂ ಓದಿ: Karnataka Assembly Live: ವಿಧಾನಸಭೆಯಲ್ಲಿ ಶಾಸಕರಿಗೆ ಮಧ್ಯಾಹ್ನ ಮಲಗಲು ವ್ಯವಸ್ಥೆ ಮಾಡಿಸಿದ ಸ್ಪೀಕರ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Pralhad Joshi: ಚುನಾವಣೆ ವೇಳೆ ಮಾತ್ರ ಕಾಂಗ್ರೆಸ್ ಬಣ್ಣ ಬಣ್ಣದ ಕಥೆ ಕಟ್ಟುತ್ತದೆ: ಪ್ರಲ್ಹಾದ್‌ ಜೋಶಿ

Pralhad Joshi: ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ನಿಜವಾಗಿ ಬಡವರ ಮೇಲೆ ಕಿಂಚಿತ್ತೂ ಕಾಳಜಿ ಇಲ್ಲ. ಚುನಾವಣೆ ವೇಳೆ ಮಾತ್ರ ಅವರನ್ನು ಓಲೈಸಿಕೊಳ್ಳಲು ಬಣ್ಣ ಬಣ್ಣದ ಕಥೆ ಕಟ್ಟಿ ರಾಜಕಾರಣ ಮಾಡುತ್ತದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

VISTARANEWS.COM


on

Congress creates colorful stories only during elections Minister Pralhad Joshi alleges
Koo

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷ ಚುನಾವಣೆ ವೇಳೆ ಮಾತ್ರ ಬಡವರ ಪರ, ಪರಿಶಿಷ್ಟರ ಪರ ಎನ್ನುತ್ತ ಬಣ್ಣ ಬಣ್ಣದ ಕತೆ ಕಟ್ಟುತ್ತದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಟೀಕಿಸಿದ್ದಾರೆ.

ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ನಿಜವಾಗಿ ಬಡವರ ಮೇಲೆ ಕಿಂಚಿತ್ತೂ ಕಾಳಜಿ ಇಲ್ಲ. ಚುನಾವಣೆ ವೇಳೆ ಮಾತ್ರ ಅವರನ್ನು ಓಲೈಸಿಕೊಳ್ಳಲು ಬಣ್ಣ ಬಣ್ಣದ ಕಥೆ ಕಟ್ಟಿ ರಾಜಕಾರಣ ಮಾಡುತ್ತದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: Paris Olympics 2024 : ಪ್ಯಾರಿಸ್ ಒಲಿಂಪಿಕ್ಸ್ ಭದ್ರತೆಗಾಗಿ ಭಾರತೀಯ ಸೇನೆಯ ಶ್ವಾನದಳ!

ಇಂದಿರಾ ಕ್ಯಾಂಟಿನ್ ತಾನೇ ಮುಚ್ಚುತ್ತಿದೆ ಕಾಂಗ್ರೆಸ್ ಸರ್ಕಾರ

ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ಬಿಜೆಪಿ ಅಲ್ಲ, ಈಗ ಕಾಂಗ್ರೆಸ್ ಸರ್ಕಾರವೇ ಮುಚ್ಚುತ್ತಿದೆ. ಬಡವರು ಮತ್ತು ಶ್ರಮಿಕ ವರ್ಗದವರ ಹಸಿವು ನೀಗಿಸುತ್ತಿದ್ದ ಇಂದಿರಾ ಕ್ಯಾಂಟೀನ್‌ಗಳನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ನಾವು ಮುಚ್ಚಿಸಲು ಹೊರಟಿದ್ದೇವೆಂದು ಆಗ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿತ್ತು. ಆದರೆ, ಈಗ ಕಾಂಗ್ರೆಸ್ ಸರ್ಕಾರವೇ ಮುಚ್ಚಲು ಹೊರಟಿದೆ ಎಂದು ಜೋಶಿ ಆರೋಪಿಸಿದ್ದಾರೆ.

ಗ್ಯಾರಂಟಿ ಯೋಜನೆ ನಿಭಾಯಿಸಲಾಗದೆ ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿದ್ದ ಧನಕ್ಕೆ ಕೈ ಹಾಕಿದ ಕಾಂಗ್ರೆಸ್ ಸರ್ಕಾರ ಇಂದಿರಾ ಕ್ಯಾಂಟಿನ್‌ಗಳಿಗೆ ಬೀಗ ಹಾಕುತ್ತಿದೆ ಎಂದಿದ್ದಾರೆ.

ಇಂದಿರಾ ಕ್ಯಾಂಟಿನ್‌ಗಳಿಗೆ ಕಳೆದೊಂದು ವರ್ಷದಿಂದ ಆಹಾರ ಪೂರೈಸುತ್ತಿದ್ದ ಗುತ್ತಿಗೆದಾರರಿಗೆ ಬರೋಬ್ಬರಿ 47 ಕೋಟಿ ರೂ. ಬಿಲ್ ಪಾವತಿಸಲಾಗದೆ ಬಾಗಿಲು ಮುಚ್ಚಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: KPSC Recruitment 2024: ಕೆಪಿಎಸ್‌ಸಿ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಕಾಂಗ್ರೆಸ್ ನಾಯಕರು ತಾವು ಬಡವರ ಪರ ಎನ್ನುತ್ತಾರೆ ಹೊರತು ಮಾತಲ್ಲಿ ಹೇಳಿದ್ದನ್ನು ಕಾರ್ಯರೂಪಕ್ಕೆ ತರುವುದಿಲ್ಲ. ಆ ಇಚ್ಛಾಸಕ್ತಿ ಮುಖ್ಯಮಂತ್ರಿ ಅವರಿಗಿಲ್ಲ ಎಂದು ಆರೋಪಿಸಿ ಪ್ರಲ್ಹಾದ್‌ ಜೋಶಿ ಟ್ವೀಟ್ ಮಾಡಿದ್ದಾರೆ.

Continue Reading

ಪ್ರಮುಖ ಸುದ್ದಿ

Paris Olympics 2024 : ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಲಿರುವ 117 ಭಾರತೀಯ ಕ್ರೀಡಾಪಟುಗಳ ಸಂಪೂರ್ಣ ವಿವರ ಇಲ್ಲಿದೆ

Paris Olympics 2024 :

VISTARANEWS.COM


on

Paris Olympics 2024
Koo

ಬೆಂಗಳೂರು: ಜುಲೈ 26 ರಿಂದ ಪ್ರಾರಂಭವಾಗುವ ಪ್ಯಾರಿಸ್ ಒಲಿಂಪಿಕ್ಸ್​​ಗೆ (Paris Olympics 2024) ಭಾರತ 117 ಕ್ರೀಡಾಪಟುಗಳನ್ನು ಕಳುಹಿಸಿದೆ. 2021 ರಲ್ಲಿ 121 ಕ್ರೀಡಾಪಟುಗಳು ಟೋಕಿಯೊಗೆ ಹೋದ ನಂತರ ಇದು ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತದಎರಡನೇ ಅತಿದೊಡ್ಡ ನಿಯೋಗವಾಗಿದೆ. 47 ಮಹಿಳಾ ಮತ್ತು 70 ಪುರುಷ ಕ್ರೀಡಾಪಟುಗಳು ಭಾರತೀಯ ತಂಡದ ಭಾಗವಾಗಿದ್ದಾರೆ.

ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್​ಗಳು 29 ಕ್ರೀಡಾಪಟುಗಳೊಂದಿಗೆ ಅತಿದೊಡ್ಡ ಪ್ರಾತಿನಿಧ್ಯ ಹೊಂದಿದ್ದರೆ, ಶೂಟರ್​ಗಳು 21 ಕ್ರೀಡಾಪಟುಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ವೇಟ್​ಲಿಫ್ಟಿಂಗ್ನಲ್ಲಿ 2021 ರ ಟೋಕಿಯೊ ಕ್ರೀಡಾಕೂಟದಲ್ಲಿ ಬೆಳ್ಳಿ ಗೆದ್ದ ಮೀರಾಬಾಯಿ ಚಾನು ಮಾತ್ರ ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ. ಈಕ್ವೆಸ್ಟ್ರಿಯನ್, ಜೂಡೋ ಮತ್ತು ರೋಯಿಂಗ್ ಸಹ ಒಬ್ಬ ಕ್ರೀಡಾಪಟುವನ್ನು ಹೊಂದಿದೆ.

ಒಲಿಂಪಿಕ್ಸ್ ಇತಿಹಾಸದಲ್ಲಿ ಮೊದಲ ಬಾರಿಗೆ ಕ್ರೀಡಾಪಟುಗಳಷ್ಟೇ ಸಹಾಯಕ ಸಿಬ್ಬಂದಿಯೂ ಒಲಿಂಪಿಕ್ಸ್​ಗೆ ಕ್ರೀಡಾಕೂಟಕ್ಕೆ ತೆರಳಿದ್ದಾರೆ. 67 ತರಬೇತುದಾರರು ಮತ್ತು 72 ಇತರ ಸಹಾಯಕ ಸಿಬ್ಬಂದಿ ಪ್ಯಾರಿಸ್​ಗೆ ಪ್ರಯಾಣಿಸಲಿದ್ದಾರೆ.

ಭಾರತೀಯ ಕ್ರೀಡಾಪಟುಗಳ ಒಟ್ಟು ವಿವರ

  • ಆರ್ಚರಿ – 6 ಕ್ರೀಡಾಪಟುಗಳು
  • ಅಥ್ಲೆಟಿಕ್ಸ್ – 29 ಕ್ರೀಡಾಪಟುಗಳು
  • ಬ್ಯಾಡ್ಮಿಂಟನ್ – 7 ಕ್ರೀಡಾಪಟುಗಳು
  • ಬಾಕ್ಸಿಂಗ್ – 6 ಕ್ರೀಡಾಪಟುಗಳು
  • ಈಕ್ವೆಸ್ಟ್ರಿಯನ್ – 1 ಕ್ರೀಡಾಪಟು
  • ಗಾಲ್ಫ್ – 4 ಕ್ರೀಡಾಪಟುಗಳು
  • ಹಾಕಿ – 19 ಕ್ರೀಡಾಪಟುಗಳು
  • ಜೂಡೋ – 1 ಕ್ರೀಡಾಪಟು
  • ರೋಯಿಂಗ್ – 1 ಕ್ರೀಡಾಪಟುಗಳು
  • ಶೂಟಿಂಗ್ – 21 ಕ್ರೀಡಾಪಟುಗಳು
  • ಈಜು – 2 ಕ್ರೀಡಾಪಟು
  • ನೌಕಾಯಾನ – 2 ಕ್ರೀಡಾಪಟುಗಳು
  • ಟೇಬಲ್ ಟೆನಿಸ್ – 8 ಕ್ರೀಡಾಪಟುಗಳು
  • ಟೆನಿಸ್ – 3 ಕ್ರೀಡಾಪಟುಗಳು
  • ವೇಟ್ ಲಿಫ್ಟಿಂಗ್ – 1 ಕ್ರೀಡಾಪಟು
  • ಕುಸ್ತಿ – 6 ಕ್ರೀಡಾಪಟುಗಳು

ಚೆಫ್​ ಡಿ ಮಿಷನ್​ ಗಗನ್​ ನಾರಂಗ್, ಇಬ್ಬರು ಉಪ ಚೆಫ್ ಡಿ ಮಿಷನ್, ಪ್ರೆಸ್ ಅಟ್ಯಾಚ್, ಇಬ್ಬರು ಪ್ರಧಾನ ಕಚೇರಿ ಅಧಿಕಾರಿಗಳು ಮತ್ತು ಐದು ವೈದ್ಯಕೀಯ ತಂಡದ ಸದಸ್ಯರು ಸೇರಿದಂತೆ 21 ಅಧಿಕಾರಿಗಳನ್ನು ಗೇಮ್ಸ್ ವಿಲೇಜ್​​ನಲ್ಲಿ ಉಳಿದುಕೊಂಡಿದ್ದಾರೆ. ಉಳಿದ 10 ಅಧಿಕಾರಿಗಳಿಗೆ (ಎಂಟು ವೈದ್ಯಕೀಯ ತಂಡದ ಸದಸ್ಯರು, ಸಾಮಾಜಿಕ ಮಾಧ್ಯಮ ಅಟ್ಯಾಚ್ ಮತ್ತು ತಂಡದ ಅಧಿಕಾರಿ) ಗೇಮ್ಸ್ ವಿಲೇಜ್​​ನ ಹೊರಗಿನ ಹೋಟೆಲ್​​ಗಳಲ್ಲಿ ಉಳಿದುಕೊಳ್ಳಲಿದ್ದಾರೆ.

ಇದನ್ನೂ ಓದಿ: Paris Olympics 2024 : ಪ್ಯಾರಿಸ್ ಒಲಿಂಪಿಕ್ಸ್ ಭದ್ರತೆಗಾಗಿ ಭಾರತೀಯ ಸೇನೆಯ ಶ್ವಾನದಳ!

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತೀಯ ಕ್ರೀಡಾಪಟುಗಳ ಸಂಪೂರ್ಣ ಪಟ್ಟಿ

ಅಥ್ಲೆಟಿಕ್ಸ್

  1. ಸರ್ವೇಶ್ ಕುಶಾರೆ: ಪುರುಷರ ಹೈಜಂಪ್
  2. ನೀರಜ್ ಚೋಪ್ರಾ: ಪುರುಷರ ಜಾವೆಲಿನ್ ಥ್ರೋ
  3. ಕಿಶೋರ್ ಕುಮಾರ್ ಜೆನಾ: ಪುರುಷರ ಜಾವೆಲಿನ್ ಥ್ರೋ
  4. ಅವಿನಾಶ್ ಸಾಬ್ಲೆ: ಪುರುಷರ 3000 ಮೀಟರ್ ಸ್ಟೀಪಲ್​ಚೇಸ್
  5. ಪಾರುಲ್ ಚೌಧರಿ: ಮಹಿಳೆಯರ 3000 ಮೀಟರ್ ಸ್ಟೀಪಲ್​ಚೇಸ್
  6. ಅಕ್ಷದೀಪ್ ಸಿಂಗ್: ಪುರುಷರ 20 ಕಿ.ಮೀ ರೇಸ್ವಾಕ್
  7. ವಿಕಾಸ್ ಸಿಂಗ್: ಪುರುಷರ 20 ಕಿ.ಮೀ ರೇಸ್ವಾಕ್
  8. ತಜಿಂದರ್​ಪಾಲ್ ಸಿಂಗ್ ತೂರ್: ಪುರುಷರ ಶಾಟ್ ಪುಟ್
  9. ಪರಮ್​ಜಿತ್​ ಬಿಶ್ತ್: ಪುರುಷರ 20 ಕಿ.ಮೀ ರೇಸ್​ವಾಕ್
  10. ಸೂರಜ್ ಪನ್ವಾರ್: ಪುರುಷರ 20 ಕಿ.ಮೀ ರೇಸ್​ವಾಕ್​​ ಮಿಶ್ರ ರಿಲೇ
  11. ಪ್ರಿಯಾಂಕಾ ಗೋಸ್ವಾಮಿ: ಮಿಶ್ರ ಮ್ಯಾರಥಾನ್ ರೇಸ್​ವಾಕ್​​
  12. ಮುಹಮ್ಮದ್ ಅಜ್ಮಲ್ ವರಿಯತೋಡಿ: ಪುರುಷರ 4*400 ಮೀಟರ್ ರಿಲೇ
  13. ಸಂತೋಷ್ ಕುಮಾರ್ ತಮಿಳರಸನ್: ಪುರುಷರ 4×400 ಮೀಟರ್ ರಿಲೇ
  14. ರಾಜೇಶ್ ರಮೇಶ್: ಪುರುಷರ 4×400 ಮೀಟರ್ ರಿಲೇ
  15. ಅಮೋಜ್ ಜೇಕಬ್: ಪುರುಷರ 4×400 ಮೀಟರ್ ರಿಲೇ
  16. ಮೊಹಮ್ಮದ್ ಅನಾಸ್ ಯಹಿಯಾ: ಪುರುಷರ 4×400 ಮೀಟರ್ ರಿಲೇ
  17. ಅಬ್ದುಲ್ಲಾ ಅಬೂಬಕ್ಕರ್: ಪುರುಷರ ಟ್ರಿಪಲ್ ಜಂಪ್
  18. ಪ್ರವೀಣ್ ಚಿತ್ರವೇಲ್: ಪುರುಷರ ಟ್ರಿಪಲ್ ಜಂಪ್
  19. ಜೆಸ್ವಿನ್ ಆಲ್ಡ್ರಿನ್: ಪುರುಷರ ಲಾಂಗ್ ಜಂಪ್
  20. ಅನ್ನು ರಾಣಿ: ಮಹಿಳಾ ಜಾವೆಲಿನ್ ಥ್ರೋ
  21. ಪಹಲ್ ಕಿರಣ್: ಮಹಿಳೆಯರ 400 ಮೀಟರ್, ಮಹಿಳೆಯರ 4×400 ಮೀಟರ್ ರಿಲೇ
  22. ಜ್ಯೋತಿ ಯರ್ರಾಜಿ: ಮಹಿಳೆಯರ 100 ಮೀಟರ್ ಹರ್ಡಲ್ಸ್
  23. ಅಂಕಿತಾ: ಮಹಿಳೆಯರ 5000 ಮೀ.
  24. ಜ್ಯೋತಿಕಾ ಶ್ರೀ ದಂಡಿ: ಮಹಿಳೆಯರ 4*400 ಮೀಟರ್ ರಿಲೇ
  25. ಪೂವಮ್ಮ ರಾಜು ಮಾಚೆಟ್ಟಿರ: ಮಹಿಳೆಯರ 4*400 ಮೀಟರ್ ರಿಲೇ
  26. ಶುಭಾ ವೆಂಕಟೇಶನ್: ಮಹಿಳೆಯರ 4×400 ಮೀಟರ್ ರಿಲೇ
  27. ವಿದ್ಯಾ ರಾಮ್​​ರಾಜ್: ಮಹಿಳೆಯರ 4×400 ಮೀಟರ್ ರಿಲೇ
  28. ಪ್ರಾಚಿ: ಮೀಸಲು ಕ್ರೀಡಾಪಟು
  29. ಮಿಜೋ ಚಾಕೋ: ಮೀಸಲು ಕ್ರೀಡಾಪಟು
  30. ಆರ್ಚರಿ ಸ್ಪರ್ಧಿಗಳು
  31. ಧೀರಜ್ ಬೊಮ್ಮದೇವರ
  32. ತರುಣ್​​ದೀಪ್ ರಾಯ್​
  33. ಪ್ರವೀಣ್ ಜಾಧವ್
  34. ದೀಪಿಕಾ ಕುಮಾರಿ
  35. ಭಜನ್ ಕೌರ್
  36. ಅಂಕಿತಾ ಭಕತ್
  37. ಬ್ಯಾಡ್ಮಿಂಟನ್
  38. ಪಿ.ವಿ.ಸಿಂಧು: ಮಹಿಳಾ ಸಿಂಗಲ್ಸ್
  39. ಅಶ್ವಿನಿ ಪೊನ್ನಪ್ಪ: ಮಹಿಳಾ ಡಬಲ್ಸ್
  40. ತನಿಶಾ ಕ್ರಾಸ್ಟೊ: ಮಹಿಳಾ ಡಬಲ್ಸ್
  41. ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ: ಪುರುಷರ ಡಬಲ್ಸ್
  42. ಚಿರಾಗ್ ಶೆಟ್ಟಿ: ಪುರುಷರ ಡಬಲ್ಸ್
  43. ಎಚ್ಎಸ್ ಪ್ರಣಯ್: ಪುರುಷರ ಸಿಂಗಲ್ಸ್
  44. ಲಕ್ಷ್ಯ ಸೇನ್: ಪುರುಷರ ಸಿಂಗಲ್ಸ್
  1. ಬಾಕ್ಸಿಂಗ್
  2. ನಿಖಾತ್ ಝರೀನ್: ಮಹಿಳೆಯರ 50 ಕೆ.ಜಿ
  3. ಪ್ರೀತಿ ಪವಾರ್: ಮಹಿಳೆಯರ 54 ಕೆ.ಜಿ
  4. ಜೈಸ್ಮಿನ್ ಲಂಬೋರಿಯಾ: ಮಹಿಳೆಯರ 57 ಕೆ.ಜಿ
  5. ಲೊವ್ಲಿನಾ ಬೊರ್ಗೊಹೈನ್: ಮಹಿಳೆಯರ 75 ಕೆ.ಜಿ
  6. ಅಮಿತ್ ಪಂಗಲ್: ಪುರುಷರ 51 ಕೆ.ಜಿ
  7. ನಿಶಾಂತ್ ದೇವ್: ಪುರುಷರ 71 ಕೆ.ಜಿ
  8. ಈಕ್ವೆಸ್ಟ್ರಿಯನ್​​
  9. ಅನುಷ್ ಅಗರ್ವಾಲ್: ಇಂಡಿವಿಜುವಲ್ ಡ್ರೆಸೇಜ್​
  10. ಗಾಲ್ಫ್
  11. ಶುಭಂಕರ್ ಶರ್ಮಾ: ವೈಯಕ್ತಿಕ
  12. ಗಗನ್ಜೀತ್ ಭುಲ್ಲರ್: ನನ್ನ ವೈಯಕ್ತಿಕ
  13. ಅದಿತಿ ಅಶೋಕ್: ಮಹಿಳಾ ವೈಯಕ್ತಿಕ
  14. ದೀಕ್ಷಾ ದಾಗರ್: ಮಹಿಳಾ ವೈಯಕ್ತಿಕ

ಪುರುಷರ ಹಾಕಿ ತಂಡ

  1. ಪಿ.ಆರ್.ಶ್ರೀಜೇಶ್
  2. ಹರ್ಮನ್ಪ್ರೀತ್ ಸಿಂಗ್
  3. ಜರ್ಮನ್ಪ್ರೀತ್ ಸಿಂಗ್
  4. ಹಾರ್ದಿಕ್ ಸಿಂಗ್
  5. ವಿವೇಕ್ ಸಾಗರ್ ಪ್ರಸಾದ್
  6. ಮನ್ದೀಪ್ ಸಿಂಗ್
  7. ಶಂಶೇರ್ ಸಿಂಗ್
  8. ಅಭಿಷೇಕ
  9. ಲಲಿತ್ ಕುಮಾರ್ ಉಪಾಧ್ಯಾಯ
  10. ಪ್ರಿನ್ಸ್ ಪಾಲ್
  11. ಸುಖ್ಜೀತ್ ಸಿಂಗ್
  12. ಅಮಿತ್ ರೋಹಿದಾಸ್
  13. ಗುರ್ಜಂತ್ ಸಿಂಗ್
  14. ಮನ್ಪ್ರೀತ್ ಸಿಂಗ್
  15. ಸುಮಿತ್
  16. ನೀಲಕಂಠ ಸಿಂಗ್
  17. ಸಂಜಯ್
  18. ಜುಗ್ರಾಜ್ ಸಿಂಗ್
  19. ಕೃಷ್ಣ ಪಾಠಕ್

ಜೂಡೋ

ತುಲಿಕಾ ಮಾನ್: ಮಹಿಳೆಯರ 78 ಕೆಜಿ+ ವಿಭಾಗ

ರೋಯಿಂಗ್

    ಬಲರಾಜ್ ಪನ್ವಾರ್: ಪುರುಷರ ಸಿಂಗಲ್ ಸ್ಕಲ್ಸ್

      ಸೇಯ್ಲಿಂಗ್​

      1. ವಿಷ್ಣು ಸರವಣನ್: ಪುರುಷರ ದೋಣಿ
      2. ನೇತ್ರಾ ಕುಮನನ್: ಮಹಿಳಾ ದೋಣಿ

      ಶೂಟಿಂಗ್

      1. ಸರಬ್ಜೋತ್ ಸಿಂಗ್: ಪುರುಷರ 10 ಮೀಟರ್ ಏರ್ ಪಿಸ್ತೂಲ್
      2. ಅರ್ಜುನ್ ಸಿಂಗ್ ಚೀಮಾ: ಪುರುಷರ 10 ಮೀಟರ್ ಏರ್ ಪಿಸ್ತೂಲ್
      3. ಅರ್ಜುನ್ ಬಬುಟಾ: ಪುರುಷರ 10 ಮೀಟರ್ ಏರ್ ರೈಫಲ್
      4. ಸಂದೀಪ್ ಸಿಂಗ್: ಪುರುಷರ 10 ಮೀಟರ್ ಏರ್ ರೈಫಲ್
      5. ಐಶ್ವರಿ ಪ್ರತಾಪ್ ತೋಮರ್: ಪುರುಷರ 50 ಮೀಟರ್ ರೈಫಲ್ 3ಪಿ
      6. ಸ್ವಪ್ನಿಲ್ ಕುಸಲೆ: ಪುರುಷರ 50 ಮೀಟರ್ ರೈಫಲ್ 3ಪಿ
      7. ಅನೀಶ್ ಭನ್ವಾಲಾ: ಪುರುಷರ 25 ಮೀಟರ್ ರ್ಯಾಪಿಡ್ ಫೈರ್ ಪಿಸ್ತೂಲ್
      8. ವಿಜಯ್​ವೀರ್ ಸಿಧು: ಪುರುಷರ 25 ಮೀಟರ್ ರ್ಯಾಪಿಡ್ ಫೈರ್ ಪಿಸ್ತೂಲ್
      9. ಅನಂತ್ ಜೀತ್ ಸಿಂಗ್ ನರುಕಾ: ಪುರುಷರ ಸ್ಕೀಟ್
      10. ಪೃಥ್ವಿರಾಜ್ ತೊಂಡೈಮನ್: ಪುರುಷರ ಬಲೆ
      11. ಮನು ಭಾಕರ್: ಮಹಿಳೆಯರ 25 ಮೀಟರ್ ಪಿಸ್ತೂಲ್, 10 ಮೀ ಪಿಸ್ತೂಲ್
      12. ಇಶಾ ಸಿಂಗ್: ಮಹಿಳೆಯರ 25 ಮೀಟರ್ ಪಿಸ್ತೂಲ್
      13. ರಾಜೇಶ್ವರಿ ಕುಮಾರಿ: ಮಹಿಳಾ ಬಲೆ
      14. ಶ್ರೇಯಸಿ ಸಿಂಗ್: ಮಹಿಳಾ ಬಲೆ
      15. ಎಲವೇನಿಲ್ ವಲರಿವನ್: ಮಹಿಳೆಯರ 10 ಮೀಟರ್ ಏರ್ ರೈಫಲ್
      16. ರಮಿತಾ: ಮಹಿಳೆಯರ 10 ಮೀಟರ್ ಏರ್ ರೈಫಲ್
      17. ಸಿಫ್ಟ್ ಕೌರ್ ಸಾಮ್ರಾ: ಮಹಿಳೆಯರ 50 ಮೀಟರ್ ರೈಫಲ್ 3ಪಿ
      18. ಅಂಜುಮ್ ಮೌದ್ಗಿಲ್: ಮಹಿಳೆಯರ 50 ಮೀಟರ್ ರೈಫಲ್ 3ಪಿ
      19. ರೈಜಾ ಧಿಲ್ಲಾನ್: ಮಹಿಳಾ ಸ್ಕೀಟ್
      20. ಮಹೇಶ್ವರಿ ಚೌಹಾಣ್: ಮಹಿಳಾ ಸ್ಕೀಟ್
      21. ರಿದಮ್ ಸಾಂಗ್ವಾನ್: ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್.
      22. ಈಜು
      1. ಶ್ರೀಹರಿ ನಟರಾಜ್: ಪುರುಷರ 100 ಮೀಟರ್ ಬ್ಯಾಕ್​ಸ್ಟ್ರೋಕ್​
      2. ಧಿಂಧಿ ದೇಸಿಂಘು: ಮಹಿಳೆಯರ 200 ಮೀಟರ್ ಫ್ರೀಸ್ಟೈಲ್​

      ಟೇಬಲ್ ಟೆನ್ನಿಸ್

      1. ಮಣಿಕಾ ಬಾತ್ರಾ
      2. ಶ್ರೀಜಾ ಅಕುಲಾ
      3. ಅರ್ಚನಾ ಗಿರೀಶ್ ಕಾಮತ್
      4. ಐಹಿಕಾ ಮುಖರ್ಜಿ (ಮೀಸಲು ಆಟಗಾರ್ತಿ )
      5. ಶರತ್ ಕಮಲ್
      6. ಹರ್ಮೀತ್ ದೇಸಾಯಿ
      7. ಮಾನವ್ ಠಕ್ಕರ್
      8. ಜಿ ಸತ್ಯನ್

      ಟೆನಿಸ್

      1. ರೋಹನ್ ಬೋಪಣ್ಣ: ಪುರುಷರ ಡಬಲ್ಸ್
      2. ಶ್ರೀರಾಮ್ ಬಾಲಾಜಿ: ಪುರುಷರ ಡಬಲ್ಸ್
      3. ಸುಮಿತ್ ನಗಾಲ್: ಪುರುಷರ ಸಿಂಗಲ್ಸ್
      4. ವೇಟ್ ಲಿಫ್ಟಿಂಗ್
      1. ಮೀರಾಬಾಯಿ ಚಾನು: ಮಹಿಳೆಯರ 49 ಕೆಜಿ

      ಕುಸ್ತಿ

      1. ಆಂತಿಮ್ ಪಂಗಾಲ್: ಮಹಿಳೆಯರ 53 ಕೆಜಿ
      2. ವಿನೇಶ್ ಫೋಗಟ್: ಮಹಿಳೆಯರ 50 ಕೆಜಿ
      3. ಅಂಶು ಮಲಿಕ್: ಮಹಿಳೆಯರ 57 ಕೆಜಿ
      4. ನಿಶಾ: ಮಹಿಳೆಯರ 68 ಕೆಜಿ
      5. ರಿತಿಕಾ ಹೂಡಾ: ಮಹಿಳೆಯರ 76 ಕೆಜಿ
      6. ಅಮನ್ ಸೆಹ್ರಾವತ್: ಪುರುಷರ 57 ಕೆಜಿ

      ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ ಪಿ.ವಿ.ಸಿಂಧು ಮತ್ತು ಶರತ್ ಕಮಲ್ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತದ ಧ್ವಜಧಾರಿಗಳಾಗಿದ್ದಾರೆ. ನೀರಜ್ ಚೋಪ್ರಾ ತಮ್ಮ ಚಿನ್ನದ ಪದಕ ಉಳಿಸಿಕೊಳ್ಳುವ ಸಾಧ್ಯತೆಗಳು ಇರುವುದರಿಂದ ಎಲ್ಲರ ಕಣ್ಣುಗಳು ಅವರ ಮೇಲೆ ನೆಟ್ಟಿವೆ. ಬ್ಯಾಡ್ಮಿಂಟನ್ ಪುರುಷರ ಡಬಲ್ಸ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಪ್ಯಾರಿಸ್​​ನಲ್ಲಿ ಚಿನ್ನದ ಪದಕ ಗೆಲ್ಲುವ ನೆಚ್ಚಿನ ಆಟಗಾರರು.

        Continue Reading

        ಪ್ರಮುಖ ಸುದ್ದಿ

        Valmiki Corporation Scam: ಮೃತ ಅಧೀಕ್ಷಕ ಚಂದ್ರಶೇಖರನ್‌ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಿದ ಸಿಎಂ

        Valmiki Corporation Scam: ನಮ್ಮ ಸರ್ಕಾರಕ್ಕೆ ಮಸಿ ಬಳಿಯಬೇಕು ಎಂದು ವಿಪಕ್ಷದವರು ಪ್ರಯತ್ನಿಸುತ್ತಿದ್ದಾರೆ. ವಾಲ್ಮೀಕಿ ನಿಗಮದ ಅಕ್ರಮದ ಬಗ್ಗೆ ನಿಗಮ ಅಧಿಕಾರಿಗಳು, ಬ್ಯಾಂಕ್ ಸಿಬ್ಬಂದಿಯ ಮೇಲೆ ದೂರು ದಾಖಲಾಗಿದೆ. ಸರ್ಕಾರಕ್ಕೂ ಇದಕ್ಕೂ ಸಂಬಂಧ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

        VISTARANEWS.COM


        on

        Valmiki Corporation Scam
        Koo

        ಬೆಂಗಳೂರು: ವಾಲ್ಮೀಕಿ ನಿಗಮ ಅಕ್ರಮಕ್ಕೆ (Valmiki Corporation Scam) ಸಂಬಂಧಿಸಿದಂತೆ ಆತ್ಮಹತ್ಯೆ ಮಾಡಿಕೊಂಡಿದ್ದ ಅಧೀಕ್ಷಕ ಚಂದ್ರಶೇಖರನ್‌ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ಪರಿಹಾರ ಘೋಷಣೆ ಮಾಡಿದೆ. ಅಧಿಕಾರಿಯ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲು ಪರಿಹಾರ ನೀಡಲಾಗುತ್ತದೆ, ಈ ಬಗ್ಗೆ ಅಧಿವೇಶನದಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

        ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರಕ್ಕೆ ಮಸಿ ಬಳಿಯಬೇಕು ಎಂದು ವಿಪಕ್ಷದವರು ಪ್ರಯತ್ನಿಸುತ್ತಿದ್ದಾರೆ. ದಲಿತರ ಪರವಾಗಿ ಮಾತನಾಡಬೇಕು, ಸಿಂಪತಿ ಗಿಟ್ಟಿಸಿಕೊಳ್ಳಬೇಕು ಅಂತ ಮಾಡುತ್ತಿದ್ದಾರೆ. ನಾವು ದಲಿತರ ಪರವಾಗಿದ್ದೀವಿ, ನಮ್ಮ ಗ್ಯಾರಂಟಿ ಯೋಜನೆಗಳು ಹಿಂದುಳಿದವರ ಪರ ಇವೆ. ನಮ್ಮ ಗ್ಯಾರಂಟಿ ಯೋಜನೆಗೆ ಜಾತಿ, ಧರ್ಮ ಇಲ್ಲ. ಕಾನೂನಿಗೆ ವಿರುದ್ಧ ಯಾರಿದ್ದರೂ, ನಾವು ಅವರ ವಿರುದ್ಧ ಫೈಟ್ ಮಾಡುತ್ತೇವೆ ಎಂದು ತಿಳಿಸಿದರು.

        ಆತ್ಮಹತ್ಯೆ ಮಾಡಿಕೊಂಡಿರುವ ಚಂದ್ರಶೇಖರನ್‌ ಪತ್ನಿ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗುತ್ತಿದೆ ಎಂದು ಹೇಳಿದ್ದಾರೆ. ಅದಕ್ಕೆ ಆ ಕುಟುಂಬಕ್ಕೆ 25 ಲಕ್ಷ ಹಣ ಪರಿಹಾರ ಘೋಷಣೆ ಮಾಡುತ್ತಿದ್ದೇವೆ. ಈಗ ಪರಿಹಾರ ಘೋಷಣೆ ಮಾಡಬಾರದಿತ್ತು, ಅಧಿವೇಶನದಲ್ಲಿ ಪರಿಹಾರ ಘೋಷಣೆ ಮಾಡುತ್ತೇನೆ ಎಂದು ತಿಳಿಸಿದರು.

        ಅಧಿಕಾರಿಗಳೇ ಚಂದ್ರಶೇಖರನ್‌ ಆತ್ಮಹತ್ಯೆಗೆ ಕಾರಣ

        ಆತ್ಮಹತ್ಯೆ ಮಾಡಿಕೊಂಡ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಡೆತ್ ನೋಟ್‌ನಲ್ಲಿ ಹೇಳಿದ್ದಾರೆ. ವಾಲ್ಮೀಕಿ ನಿಗಮದ ಎಂಡಿ ಪದ್ಮನಾಭ, ಚೀಪ್ ಅಕೌಂಟ್ ಅಫೀಸರ್ ಪರಶುರಾಮ, ಎಂಜಿ ರಸ್ತೆ ಯೂನಿಯನ್‌ ಬ್ಯಾಂಕ್‌ ಚೀಫ್‌ ಮ್ಯಾನೇಜರ್ ಸುಚಿಸ್ಮಿತಾ ಕಾರಣ ಅಂತ ಬರೆದಿದ್ದಾರೆ.

        ಅಕೌಂಟ್ ಸೂಪರಿಂಟೆಂಡೆಂಟ್ ಚಂದ್ರಶೇಖರ್ ತಮಿಳುನಾಡಿನ ಭೋವಿ ಜನಾಂಗದವರು. ಶಿವಮೊಗ್ಗದ ವಿನೋಬಾ ನಗರದಲ್ಲಿ ವಾಸವಾಗಿದ್ದಾರೆ. ಹೆಂಡತಿ ದೊಡ್ಡಪ್ಪನ ಅಂತ್ಯಕ್ರಿಯೆಗೆ ಹೋದಾಗ ಈತ ಮೇ 26 ನೇಣಿಗೆ ಶರಣಾಗಿದ್ದ. ಆ‌ಮೇಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಟಿವಿ ಹಿಂಭಾಗದಲ್ಲಿ ಒಂದು ನೋಟ್ ಬುಕ್ ಸಿಗುತ್ತೆ, ಅದರಲ್ಲಿ ಡೆತ್‌ಗೆ ಕಾರಣ ಬರೆದಿದ್ದ. ಅದರಲ್ಲಿ ಸ್ಪಷ್ಟವಾಗಿ ಎಂಡಿ ಪದ್ಮನಾಭ, ಮುಖ್ಯ ಲೆಕ್ಕಾಧಿಕಾರಿ ಪರಶುರಾಮ, ಎಂಜಿ ರೋಡ್ ಶಾಖೆ ಮ್ಯಾನೇಜರ್ ಸುಚಿಸ್ಮಿತಾ ನನ್ನ ಸಾವಿಗೆ ಕಾರಣ ಅಂತ ಎಂದು ಸ್ಪಷ್ಟವಾಗಿ ಬರೆದಿದ್ದ ಎಂದು ಸಿಎಂ ತಿಳಿಸಿದರು.

        ಆತ್ಮಹತ್ಯೆ ಮಾಡಿಕೊಂಡ ಮೇಲೆ ಅವನ ಹೆಂಡತಿ ಕವಿತಾ, ಮೇ 27 ತಾರೀಖು ಕಂಪ್ಲೆಂಟ್ ಕೊಟ್ಟಿದ್ದರು. ಎಫ್‌ಐಆರ್‌ ಆದಮೇಲೆ ಕೇಸ್‌ ಕೋರ್ಟ್‌ಗೆ ಹೋಗುತ್ತದೆ. 3 ಜನರ ಮೇಲೆ ಎಫ್‌ಐಆರ್‌ ಆಗಿತ್ತು. ಮೇ 28ರಂದು ನಿಗಮದ ಎಂಡಿ ರಾಜಶೇಖರ್ ಕಂಪ್ಲೆಂಟ್ ಕೊಟ್ಟಿದ್ದರು. ಬ್ಯಾಂಕ್ ಅಧಿಕಾರಿಗಳು ಸುಚಿಸ್ಮಿತಾ ಮೇಲೆ ಕಂಪ್ಲೆಂಟ್ ಕೊಟ್ಟಿದ್ದರು. ಇದೆಲ್ಲಾ ಆದಮೇಲೆ ನನಗೆ ಪೋಲೀಸರು ಮಾಹಿತಿ ನೀಡಿದ್ದರು. ಹೀಗಾಗಿ ತನಿಖೆಗಾಗ ನಾನು ಎಸ್‌ಐಟಿ ರಚನೆ ಮಾಡಿದ್ದೆ ಎಂದು ತಿಳಿಸಿದರು.

        ಇನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಶಿವಕುಮಾರ್ ಹೆಸರೇ ಇಲ್ಲ. ಸಾಯಿತೇಜ ಎಂಬಾತನನ್ನು ಕರೆಸಿ ಶಿವಕುಮಾರ್ ಎಂದು ಹೆಸರಿಟ್ಟಿದ್ದರು. ಇವನು ಯಾರು ಎಂದು ಪರಿಶೀಲನೆ ಮಾಡಲ್ಲ. ಅಧಿಕಾರಿ ದೀಪಾ ನೋಡಿಲ್ಲ, ಕೃಷ್ಣಮೂರ್ತಿಯೂ ನೋಡಿಲ್ಲ. ಬ್ಯಾಂಕಿನವರೇ ಅವರ ಬ್ಯಾಂಕಿನ ಅಧಿಕಾರಿಗಳ ಮೇಲೆ ದೂರು ಕೊಟ್ಟಿದ್ದಾರೆ. ಇವರ ಮೇಲೆ ತನಿಖೆ ನಡೆಸಲು ಅನುಮತಿ ನೀಡಿದ್ದರು ಎಂದು ತಿಳಿಸಿದರು.

        CM Siddaramaiah: ವಾಲ್ಮೀಕಿ ನಿಗಮ ಅಕ್ರಮಕ್ಕೆ ಸರ್ಕಾರ ಹೊಣೆಯಲ್ಲ; ಚಂದ್ರಶೇಖರನ್‌ ಆತ್ಮಹತ್ಯೆಗೆ ಅಧಿಕಾರಿಗಳು ಕಾರಣ ಎಂದ ಸಿಎಂ!

        ಈ ಹಗರಣದಲ್ಲಿ ಎಸ್‌ಐಟಿ, ಸಿಬಿಐ ತನಿಖೆ ಮಾಡುತ್ತಿವೆ. ಇಡಿ ಸುಮೊಟೋ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿವೆ. ನಾಗೇಂದ್ರ ಬಂಧನವಾಗಿದೆ, ದದ್ದಲ್ ಮನೆ ಮೇಲೆ ದಾಳಿ ಮಾಡಿ ತನಿಖೆ ನಡೆಸಿದ್ದಾರೆ. ಎಸ್‌ಐಟಿ 12 ಮಂದಿಯನ್ನು ವಶಕ್ಕೆ ಪಡೆದು, ಈ ಪೈಕಿ 9 ಆರೋಪಿಗಳನ್ನು ಜೈಲಿಗೆ ಕಳುಹಿಸಿದ್ದಾರೆ, ಮೂವರು ಕಸ್ಟಡಿಯಲ್ಲಿ ಇದ್ದಾರೆ. ತನಿಖೆ ವೇಳೆ 85 ಕೋಟಿ ರೂ.ಗಳಲ್ಲಿ 34 ಕೋಟಿ ಕೋಟಿ ವಾಪಾಸ್ ಬಂದಿದೆ ಎಂದರು.

        Continue Reading

        ಕರ್ನಾಟಕ

        CM Siddaramaiah: ವಾಲ್ಮೀಕಿ ನಿಗಮ ಅಕ್ರಮಕ್ಕೆ ಸರ್ಕಾರ ಹೊಣೆಯಲ್ಲ; ಚಂದ್ರಶೇಖರನ್‌ ಆತ್ಮಹತ್ಯೆಗೆ ಅಧಿಕಾರಿಗಳು ಕಾರಣ ಎಂದ ಸಿಎಂ!

        CM Siddaramaiah: ವಾಲ್ಮೀಕಿ ನಿಗಮದಲ್ಲಿ ಅಕ್ರಮ ಆಗಿಲ್ಲ ಎಂದು ನಾವು ಹೇಳ್ತಿಲ್ಲ. ಅಕ್ರಮ ಯಾರು ಮಾಡಿದ್ದಾರೆ, ಇದಕ್ಕೆ ಯಾರು ಜವಾಬ್ದಾರಿ ಇದ್ದಾರೆ ಅವರ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

        VISTARANEWS.COM


        on

        CM Siddaramaiah
        Koo

        ಬೆಂಗಳೂರು: ವಾಲ್ಮೀಕಿ ನಿಗಮದ ಅಕ್ರಮದ ಬಗ್ಗೆ ನಿಗಮ ಅಧಿಕಾರಿಗಳು, ಬ್ಯಾಂಕ್ ಸಿಬ್ಬಂದಿಯ ಮೇಲೆ ದೂರು ದಾಖಲಾಗಿದೆ. ಸರ್ಕಾರಕ್ಕೂ ಇದಕ್ಕೂ ಸಂಬಂಧ ಇಲ್ಲ. ಈ ಹಗರಣದಲ್ಲಿ ಎಸ್‌ಐಟಿ, ಸಿಬಿಐ ತನಿಖೆ ಮಾಡುತ್ತಿವೆ. ಇಡಿ ಸುಮೊಟೋ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ನಾಗೇಂದ್ರ ಬಂಧನವಾಗಿದೆ, ದದ್ದಲ್ ಮನೆ ಮೇಲೆ ದಾಳಿ ಮಾಡಿ ತನಿಖೆ ನಡೆಸಿದ್ದಾರೆ. ಯಾರು ತಪ್ಪು ಮಾಡಿದ್ದಾರೋ, ಅವರಿಗೆ ಶಿಕ್ಷೆ ಆಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.

        ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿವೇಶನದಲ್ಲಿ ಈ ಬಾರಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು ಎಂದು ಹೇಳಲಾಗಿತ್ತು. ಆದರೆ, ಬಿಜೆಪಿ- ಜೆಡಿಎಸ್‌ನವರು ವಾಲ್ಮೀಕಿ ಹಗರಣ ಚರ್ಚೆಗೆ ತಂದರು. ನಿಯಮ 69ರಡಿ ಚರ್ಚೆಗೆ ಅವಕಾಶ ನೀಡಲಾಗಿದೆ. ನಾವೇನು ಚರ್ಚೆಗೆ ವಿರೋಧ ಮಾಡಲಿಲ್ಲ, ಗುರುವಾರ ಮಧ್ಯಾಹ್ನದವರೆಗೂ ಚರ್ಚೆ ಮಾಡಿದರು. ಒಟ್ಟು 7 ಗಂಟೆಗೂ ಹೆಚ್ಚು ಕಾಲ ಚರ್ಚೆ ಮಾಡಿದರು ಎಂದು ತಿಳಿಸಿದರು.

        ಯಾವುದೇ ತುರ್ತು ವಿಚಾರವನ್ನು ಪ್ರಸ್ತಾಪ ಮಾಡಿದಾಗ ವಿಪಕ್ಷದವರಿಗೆ ಅವಕಾಶ ಇದೆ, ಅಷ್ಟೇ ಸರ್ಕಾರಕ್ಕೂ ತನ್ನ ನಿಲುವು ಹೇಳುವ ಹಕ್ಕಿದೆ. ನಾಗೇಂದ್ರ ರಾಜೀನಾಮೆ ಕೊಟ್ಟಮೇಲೆ ನಾನೆ ಆ ಇಲಾಖೆ ಖಾತೆ ಇಟ್ಟುಕೊಂಡಿದ್ದೇನೆ. ನಾವು ಅಕ್ರಮ ಆಗಿಲ್ಲ ಅಂತ ಹೇಳ್ತಿಲ್ಲ, ಅಕ್ರಮ ಆಗಿದೆ ಅಂತಲೇ ಹೇಳಿದ್ದೇವೆ. ಅಕ್ರಮ ಯಾರು ಮಾಡಿದ್ದಾರೆ, ಇದಕ್ಕೆ ಯಾರು ಜವಾಬ್ದಾರಿ ಇದ್ದಾರೆ ಅವರ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.

        ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ವಸಂತನಗರ ಬ್ಯಾಂಕ್‌ನಲ್ಲಿ ಹಣ ಇಡಲಾಗಿತ್ತು. ಇಲಾಖೆಯ ಎಂಡಿಗೆ ಹಣ ನೋಡಿಕೊಳ್ಳುವ ಜವಾಬ್ದಾರಿ ಇರುತ್ತದೆ. ಮಿನಿಸ್ಟರ್ ಪಾಲಿಸಿ ಮೇಕರ್ ಅಷ್ಟೇ, ಎಂಡಿ ಎಕ್ಸಿಕ್ಯೂಟಿವ್ ಹೆಡ್ ಆಗಿರುತ್ತಾರೆ. ಇಲಾಖೆ ಅಧ್ಯಕ್ಷರು ಇದಕ್ಕೆ ಜವಾಬ್ದಾರರಲ್ಲ ಎಂದು ಹೇಳಿದರು.

        ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ವಸಂತನಗರ ಬ್ರಾಂಚ್ ಮ್ಯಾನೇಜರ್ ಶೋಭನಾ, ಎಂಜಿ ರೋಡ್‌ನ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಗೆ ಹಣ ವರ್ಗಾವಣೆ ಮಾಡಿದ್ದರು. ಬೇರೆ ಬೇರೆ ಕಡೆಯಿಂದ ಒಟ್ಟು 187 ಕೋಟಿ 33 ಲಕ್ಷ ಹಣ ವರ್ಗಾವಣೆ ಆಗಿದೆ. ಚೀಫ್‌ ಮ್ಯಾನೇಜರ್ ಸುಚಿಶ್ಮಿತಾ ರಾವ್, ಡೆಪ್ಯುಟಿ ಮ್ಯಾನೇಜರ್ ದೀಪಾ, ಕೃಷ್ಣ ಮೂರ್ತಿ ಕ್ರೆಡಿಟ್ ಆಫೀಸರ್ ಬ್ಯಾಂಕ್ ಉಸ್ತುವಾರಿ ಹೊತ್ತಿದ್ದಾರೆ. 187.33 ಕೋಟಿಯಲ್ಲಿ 89.63 ಕೋಟಿ ತೆಲಂಗಾಣದ ಹೈದರಾಬಾದ್ ಬ್ಯಾಂಕ್‌ಗೆ ಹೋಗಿದೆ ಎಂದು ತಿಳಿಸಿದರು.

        ಒಟ್ಟು 217 ಅಕೌಂಟ್‌ಗೆ ಹಣ ಹೋಗಿದೆ. ರತ್ನಾಕರ ಕೋ ಆಪರೇಟಿವ್ ಲಿಮಿಟೆಡ್‌ಗೆ ಹೋಗಿದೆ 89 ಕೋಟಿ ಹೋಗಿದೆ. ಆ 3 ಜನ ಬ್ಯಾಂಕ್ ಅಧಿಕಾರಿಗಳು ಕೇಳಬೇಕಲ್ಲವೇ ಎಂದು ಪ್ರಶ್ನಿಸಿದರು.

        ಅಧಿಕಾರಿಗಳೇ ಚಂದ್ರಶೇಖರನ್‌ ಆತ್ಮಹತ್ಯೆಗೆ ಕಾರಣ

        ಆತ್ಮಹತ್ಯೆ ಮಾಡಿಕೊಂಡ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಡೆತ್ ನೋಟ್‌ನಲ್ಲಿ ಹೇಳಿದ್ದಾರೆ. ವಾಲ್ಮೀಕಿ ನಿಗಮದ ಎಂಡಿ ಪದ್ಮನಾಭ, ಚೀಪ್ ಅಕೌಂಟ್ ಅಫೀಸರ್ ಪರಶುರಾಮ, ಎಂಜಿ ರಸ್ತೆ ಯೂನಿಯನ್‌ ಬ್ಯಾಂಕ್‌ ಚೀಫ್‌ ಮ್ಯಾನೇಜರ್ ಸುಚಿಸ್ಮಿತಾ ಕಾರಣ ಅಂತ ಬರೆದಿದ್ದಾರೆ.

        ಅಕೌಂಟ್ ಸೂಪರಿಂಟೆಂಡೆಂಟ್ ಚಂದ್ರಶೇಖರ್ ತಮಿಳುನಾಡಿನ ಭೋವಿ ಜನಾಂಗದವರು. ಶಿವಮೊಗ್ಗದ ವಿನೋಬಾ ನಗರದಲ್ಲಿ ವಾಸವಾಗಿದ್ದಾರೆ. ಹೆಂಡತಿ ದೊಡ್ಡಪ್ಪನ ಅಂತ್ಯಕ್ರಿಯೆಗೆ ಹೋದಾಗ ಈತ ಮೇ 26 ನೇಣಿಗೆ ಶರಣಾಗಿದ್ದ. ಆ‌ಮೇಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಟಿವಿ ಹಿಂಭಾಗದಲ್ಲಿ ಒಂದು ನೋಟ್ ಬುಕ್ ಸಿಗುತ್ತೆ, ಅದರಲ್ಲಿ ಡೆತ್‌ಗೆ ಕಾರಣ ಬರೆದಿದ್ದ. ಅದರಲ್ಲಿ ಸ್ಪಷ್ಟವಾಗಿ ಎಂಡಿ ಪದ್ಮನಾಭ, ಮುಖ್ಯ ಲೆಕ್ಕಾಧಿಕಾರಿ ಪರಶುರಾಮ, ಎಂಜಿ ರೋಡ್ ಶಾಖೆ ಮ್ಯಾನೇಜರ್ ಸುಚಿಸ್ಮಿತಾ ನನ್ನ ಸಾವಿಗೆ ಕಾರಣ ಅಂತ ಎಂದು ಸ್ಪಷ್ಟವಾಗಿ ಬರೆದಿದ್ದ ಎಂದು ಸಿಎಂ ತಿಳಿಸಿದರು.

        ಆತ್ಮಹತ್ಯೆ ಮಾಡಿಕೊಂಡ ಮೇಲೆ ಅವನ ಹೆಂಡತಿ ಕವಿತಾ, ಮೇ 27 ತಾರೀಖು ಕಂಪ್ಲೆಂಟ್ ಕೊಟ್ಟಿದ್ದರು. ಎಫ್‌ಐಆರ್‌ ಆದಮೇಲೆ ಕೇಸ್‌ ಕೋರ್ಟ್‌ಗೆ ಹೋಗುತ್ತದೆ. 3 ಜನರ ಮೇಲೆ ಎಫ್‌ಐಆರ್‌ ಆಗಿತ್ತು. ಮೇ 28ರಂದು ನಿಗಮದ ಎಂಡಿ ರಾಜಶೇಖರ್ ಕಂಪ್ಲೆಂಟ್ ಕೊಟ್ಟಿದ್ದರು. ಬ್ಯಾಂಕ್ ಅಧಿಕಾರಿಗಳು ಸುಚಿಸ್ಮಿತಾ ಮೇಲೆ ಕಂಪ್ಲೆಂಟ್ ಕೊಟ್ಟಿದ್ದರು. ಇದೆಲ್ಲಾ ಆದಮೇಲೆ ನನಗೆ ಪೋಲೀಸರು ಮಾಹಿತಿ ನೀಡಿದ್ದರು. ಹೀಗಾಗಿ ತನಿಖೆಗಾಗ ನಾನು ಎಸ್‌ಐಟಿ ರಚನೆ ಮಾಡಿದ್ದೆ ಎಂದು ತಿಳಿಸಿದರು.

        ಇನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಶಿವಕುಮಾರ್ ಹೆಸರೇ ಇಲ್ಲ. ಸಾಯಿತೇಜ ಎಂಬಾತನನ್ನು ಕರೆಸಿ ಶಿವಕುಮಾರ್ ಎಂದು ಹೆಸರಿಟ್ಟಿದ್ದರು. ಇವನು ಯಾರು ಎಂದು ಪರಿಶೀಲನೆ ಮಾಡಲ್ಲ. ಅಧಿಕಾರಿ ದೀಪಾ ನೋಡಿಲ್ಲ, ಕೃಷ್ಣಮೂರ್ತಿಯೂ ನೋಡಿಲ್ಲ. ಬ್ಯಾಂಕಿನವರೇ ಅವರ ಬ್ಯಾಂಕಿನ ಅಧಿಕಾರಿಗಳ ಮೇಲೆ ದೂರು ಕೊಟ್ಟಿದ್ದಾರೆ. ಇವರ ಮೇಲೆ ತನಿಖೆ ನಡೆಸಲು ಅನುಮತಿ ನೀಡಿದ್ದರು ಎಂದು ತಿಳಿಸಿದರು.

        ಈ ಹಗರಣದಲ್ಲಿ ಎಸ್‌ಐಟಿ, ಸಿಬಿಐ ತನಿಖೆ ಮಾಡುತ್ತಿವೆ. ಇಡಿ ಸುಮೊಟೋ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿವೆ. ನಾಗೇಂದ್ರ ಬಂಧನವಾಗಿದೆ, ದದ್ದಲ್ ಮನೆ ಮೇಲೆ ದಾಳಿ ಮಾಡಿ ತನಿಖೆ ನಡೆಸಿದ್ದಾರೆ. ಎಸ್‌ಐಟಿ 12 ಮಂದಿಯನ್ನು ವಶಕ್ಕೆ ಪಡೆದು, ಈ ಪೈಕಿ 9 ಆರೋಪಿಗಳನ್ನು ಜೈಲಿಗೆ ಕಳುಹಿಸಿದ್ದಾರೆ, ಮೂವರು ಕಸ್ಟಡಿಯಲ್ಲಿ ಇದ್ದಾರೆ. ತನಿಖೆ ವೇಳೆ 85 ಕೋಟಿ ರೂ.ಗಳಲ್ಲಿ 34 ಕೋಟಿ ಕೋಟಿ ವಾಪಾಸ್ ಬಂದಿದೆ ಎಂದರು.

        Continue Reading
        Advertisement
        Keshav Prasad Maurya
        ದೇಶ3 mins ago

        Keshav Prasad Maurya: ʼಮಾನ್ಸೂನ್‌ ಆಫರ್‌ʼ ಕೊಟ್ಟ ಅಖಿಲೇಶ್‌ ಯಾದವ್‌ಗೆ ಬಿಜೆಪಿ ಟಾಂಗ್‌

        karnataka Weather Forecast
        ಮಳೆ4 mins ago

        Karnataka Weather : ವಾಯುಭಾರ ಕುಸಿತ ಎಫೆಕ್ಟ್‌; ವಾರಾಂತ್ಯದಲ್ಲಿ ಭಾರಿ ಮಳೆ ಎಚ್ಚರಿಕೆ, ಶಾಲೆಗಳಿಗೆ ರಜೆ ಘೋಷಣೆ

        Salman Khan-Akshay Kumar
        Latest5 mins ago

        Salman Khan-Akshay Kumar: ಸಲ್ಮಾನ್ ಖಾನ್ – ಅಕ್ಷಯ್ ಕುಮಾರ್ ಜೋಡಿಯಾಗಿ ನಟಿಸಿದ 4 ಅತ್ಯುತ್ತಮ ಚಿತ್ರಗಳಿವು!

        Bengaluru power cut July 20th power outage in many parts of Bengaluru
        ಬೆಂಗಳೂರು10 mins ago

        Bengaluru Power Cut: ಬೆಂಗಳೂರಿನ ಹಲವೆಡೆ ನಾಳೆ ಕರೆಂಟ್‌ ಇರಲ್ಲ!

        Congress creates colorful stories only during elections Minister Pralhad Joshi alleges
        ಕರ್ನಾಟಕ13 mins ago

        Pralhad Joshi: ಚುನಾವಣೆ ವೇಳೆ ಮಾತ್ರ ಕಾಂಗ್ರೆಸ್ ಬಣ್ಣ ಬಣ್ಣದ ಕಥೆ ಕಟ್ಟುತ್ತದೆ: ಪ್ರಲ್ಹಾದ್‌ ಜೋಶಿ

        Natasha ponawala jeweled kurta
        ಫ್ಯಾಷನ್26 mins ago

        Natasha ponawala jewelled kurta: ರಿಯಲ್‌ ಜ್ಯುವೆಲ್ಡ್ ಕುರ್ತಾ ಧರಿಸಿದ್ದ ಏಕೈಕ ಫ್ಯಾಷನ್‌ ಐಕಾನ್‌ ನತಾಶಾರ ‘ಮೊಗಲ್‌ ರಾಣಿ’ ಲುಕ್‌!

        Kubusa Kannada film release on 26th July
        ಕರ್ನಾಟಕ27 mins ago

        Kannada New Movie: ಜು.26ರಂದು ’ಕುಬುಸʼ ಚಿತ್ರ ರಾಜ್ಯಾದ್ಯಂತ ಬಿಡುಗಡೆ

        Paris Olympics 2024
        ಪ್ರಮುಖ ಸುದ್ದಿ40 mins ago

        Paris Olympics 2024 : ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಲಿರುವ 117 ಭಾರತೀಯ ಕ್ರೀಡಾಪಟುಗಳ ಸಂಪೂರ್ಣ ವಿವರ ಇಲ್ಲಿದೆ

        Karnataka Rain
        ಮಳೆ54 mins ago

        Karnataka Rain : ಉಕ್ಕಿ ಹರಿಯುತ್ತಿದ್ದ ಹೊಳೆಯಲ್ಲಿ ಕೊಚ್ಚಿ ಹೋದ ಕಾರ್ಮಿಕ; ಮನೆಯ ಗೋಡೆ ಕುಸಿದು ಗೃಹಿಣಿ ಸಾವು

        Kiran Kumar
        ಕರ್ನಾಟಕ1 hour ago

        ವಿಸ್ತಾರ ನ್ಯೂಸ್‌ ಕಾರ್ಯನಿರ್ವಾಹಕ ನಿರ್ದೇಶಕ ಹುದ್ದೆಯಿಂದ ಕಿರಣ್‌ ಕುಮಾರ್‌ ಡಿ ಕೆ ಅಮಾನತು

        Sharmitha Gowda in bikini
        ಕಿರುತೆರೆ10 months ago

        Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

        Kannada Serials
        ಕಿರುತೆರೆ9 months ago

        Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

        Bigg Boss- Saregamapa 20 average TRP
        ಕಿರುತೆರೆ9 months ago

        Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

        galipata neetu
        ಕಿರುತೆರೆ8 months ago

        Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

        Kannada Serials
        ಕಿರುತೆರೆ10 months ago

        Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

        Kannada Serials
        ಕಿರುತೆರೆ10 months ago

        Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

        Bigg Boss' dominates TRP; Sita Rama fell to the sixth position
        ಕಿರುತೆರೆ9 months ago

        Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

        geetha serial Dhanush gowda engagement
        ಕಿರುತೆರೆ7 months ago

        Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

        varun
        ಕಿರುತೆರೆ8 months ago

        Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

        Kannada Serials
        ಕಿರುತೆರೆ10 months ago

        Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

        karnataka Rain
        ಮಳೆ5 hours ago

        Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

        Karnataka Rain
        ಮಳೆ6 hours ago

        Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

        Karnataka Rain
        ಮಳೆ1 day ago

        Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

        Uttara Kannada Landslide
        ಮಳೆ1 day ago

        Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

        Karnataka Rain
        ಮಳೆ3 days ago

        Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

        karnataka Rain
        ಮಳೆ3 days ago

        Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

        karnataka Weather Forecast
        ಮಳೆ4 days ago

        Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

        karnataka Rain
        ಮಳೆ4 days ago

        Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

        karnataka weather Forecast
        ಮಳೆ5 days ago

        Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

        Karnataka Rain
        ಮಳೆ5 days ago

        Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

        ಟ್ರೆಂಡಿಂಗ್‌