Valmiki Corporation Scam: ಮೃತ ಅಧೀಕ್ಷಕ ಚಂದ್ರಶೇಖರನ್‌ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಿದ ಸಿಎಂ - Vistara News

ಪ್ರಮುಖ ಸುದ್ದಿ

Valmiki Corporation Scam: ಮೃತ ಅಧೀಕ್ಷಕ ಚಂದ್ರಶೇಖರನ್‌ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಿದ ಸಿಎಂ

Valmiki Corporation Scam: ನಮ್ಮ ಸರ್ಕಾರಕ್ಕೆ ಮಸಿ ಬಳಿಯಬೇಕು ಎಂದು ವಿಪಕ್ಷದವರು ಪ್ರಯತ್ನಿಸುತ್ತಿದ್ದಾರೆ. ವಾಲ್ಮೀಕಿ ನಿಗಮದ ಅಕ್ರಮದ ಬಗ್ಗೆ ನಿಗಮ ಅಧಿಕಾರಿಗಳು, ಬ್ಯಾಂಕ್ ಸಿಬ್ಬಂದಿಯ ಮೇಲೆ ದೂರು ದಾಖಲಾಗಿದೆ. ಸರ್ಕಾರಕ್ಕೂ ಇದಕ್ಕೂ ಸಂಬಂಧ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

Valmiki Corporation Scam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಾಲ್ಮೀಕಿ ನಿಗಮ ಅಕ್ರಮಕ್ಕೆ (Valmiki Corporation Scam) ಸಂಬಂಧಿಸಿದಂತೆ ಆತ್ಮಹತ್ಯೆ ಮಾಡಿಕೊಂಡಿದ್ದ ಅಧೀಕ್ಷಕ ಚಂದ್ರಶೇಖರನ್‌ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ಪರಿಹಾರ ಘೋಷಣೆ ಮಾಡಿದೆ. ಅಧಿಕಾರಿಯ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲು ಪರಿಹಾರ ನೀಡಲಾಗುತ್ತದೆ, ಈ ಬಗ್ಗೆ ಅಧಿವೇಶನದಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರಕ್ಕೆ ಮಸಿ ಬಳಿಯಬೇಕು ಎಂದು ವಿಪಕ್ಷದವರು ಪ್ರಯತ್ನಿಸುತ್ತಿದ್ದಾರೆ. ದಲಿತರ ಪರವಾಗಿ ಮಾತನಾಡಬೇಕು, ಸಿಂಪತಿ ಗಿಟ್ಟಿಸಿಕೊಳ್ಳಬೇಕು ಅಂತ ಮಾಡುತ್ತಿದ್ದಾರೆ. ನಾವು ದಲಿತರ ಪರವಾಗಿದ್ದೀವಿ, ನಮ್ಮ ಗ್ಯಾರಂಟಿ ಯೋಜನೆಗಳು ಹಿಂದುಳಿದವರ ಪರ ಇವೆ. ನಮ್ಮ ಗ್ಯಾರಂಟಿ ಯೋಜನೆಗೆ ಜಾತಿ, ಧರ್ಮ ಇಲ್ಲ. ಕಾನೂನಿಗೆ ವಿರುದ್ಧ ಯಾರಿದ್ದರೂ, ನಾವು ಅವರ ವಿರುದ್ಧ ಫೈಟ್ ಮಾಡುತ್ತೇವೆ ಎಂದು ತಿಳಿಸಿದರು.

ಆತ್ಮಹತ್ಯೆ ಮಾಡಿಕೊಂಡಿರುವ ಚಂದ್ರಶೇಖರನ್‌ ಪತ್ನಿ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗುತ್ತಿದೆ ಎಂದು ಹೇಳಿದ್ದಾರೆ. ಅದಕ್ಕೆ ಆ ಕುಟುಂಬಕ್ಕೆ 25 ಲಕ್ಷ ಹಣ ಪರಿಹಾರ ಘೋಷಣೆ ಮಾಡುತ್ತಿದ್ದೇವೆ. ಈಗ ಪರಿಹಾರ ಘೋಷಣೆ ಮಾಡಬಾರದಿತ್ತು, ಅಧಿವೇಶನದಲ್ಲಿ ಪರಿಹಾರ ಘೋಷಣೆ ಮಾಡುತ್ತೇನೆ ಎಂದು ತಿಳಿಸಿದರು.

ಅಧಿಕಾರಿಗಳೇ ಚಂದ್ರಶೇಖರನ್‌ ಆತ್ಮಹತ್ಯೆಗೆ ಕಾರಣ

ಆತ್ಮಹತ್ಯೆ ಮಾಡಿಕೊಂಡ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಡೆತ್ ನೋಟ್‌ನಲ್ಲಿ ಹೇಳಿದ್ದಾರೆ. ವಾಲ್ಮೀಕಿ ನಿಗಮದ ಎಂಡಿ ಪದ್ಮನಾಭ, ಚೀಪ್ ಅಕೌಂಟ್ ಅಫೀಸರ್ ಪರಶುರಾಮ, ಎಂಜಿ ರಸ್ತೆ ಯೂನಿಯನ್‌ ಬ್ಯಾಂಕ್‌ ಚೀಫ್‌ ಮ್ಯಾನೇಜರ್ ಸುಚಿಸ್ಮಿತಾ ಕಾರಣ ಅಂತ ಬರೆದಿದ್ದಾರೆ.

ಅಕೌಂಟ್ ಸೂಪರಿಂಟೆಂಡೆಂಟ್ ಚಂದ್ರಶೇಖರ್ ತಮಿಳುನಾಡಿನ ಭೋವಿ ಜನಾಂಗದವರು. ಶಿವಮೊಗ್ಗದ ವಿನೋಬಾ ನಗರದಲ್ಲಿ ವಾಸವಾಗಿದ್ದಾರೆ. ಹೆಂಡತಿ ದೊಡ್ಡಪ್ಪನ ಅಂತ್ಯಕ್ರಿಯೆಗೆ ಹೋದಾಗ ಈತ ಮೇ 26 ನೇಣಿಗೆ ಶರಣಾಗಿದ್ದ. ಆ‌ಮೇಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಟಿವಿ ಹಿಂಭಾಗದಲ್ಲಿ ಒಂದು ನೋಟ್ ಬುಕ್ ಸಿಗುತ್ತೆ, ಅದರಲ್ಲಿ ಡೆತ್‌ಗೆ ಕಾರಣ ಬರೆದಿದ್ದ. ಅದರಲ್ಲಿ ಸ್ಪಷ್ಟವಾಗಿ ಎಂಡಿ ಪದ್ಮನಾಭ, ಮುಖ್ಯ ಲೆಕ್ಕಾಧಿಕಾರಿ ಪರಶುರಾಮ, ಎಂಜಿ ರೋಡ್ ಶಾಖೆ ಮ್ಯಾನೇಜರ್ ಸುಚಿಸ್ಮಿತಾ ನನ್ನ ಸಾವಿಗೆ ಕಾರಣ ಅಂತ ಎಂದು ಸ್ಪಷ್ಟವಾಗಿ ಬರೆದಿದ್ದ ಎಂದು ಸಿಎಂ ತಿಳಿಸಿದರು.

ಆತ್ಮಹತ್ಯೆ ಮಾಡಿಕೊಂಡ ಮೇಲೆ ಅವನ ಹೆಂಡತಿ ಕವಿತಾ, ಮೇ 27 ತಾರೀಖು ಕಂಪ್ಲೆಂಟ್ ಕೊಟ್ಟಿದ್ದರು. ಎಫ್‌ಐಆರ್‌ ಆದಮೇಲೆ ಕೇಸ್‌ ಕೋರ್ಟ್‌ಗೆ ಹೋಗುತ್ತದೆ. 3 ಜನರ ಮೇಲೆ ಎಫ್‌ಐಆರ್‌ ಆಗಿತ್ತು. ಮೇ 28ರಂದು ನಿಗಮದ ಎಂಡಿ ರಾಜಶೇಖರ್ ಕಂಪ್ಲೆಂಟ್ ಕೊಟ್ಟಿದ್ದರು. ಬ್ಯಾಂಕ್ ಅಧಿಕಾರಿಗಳು ಸುಚಿಸ್ಮಿತಾ ಮೇಲೆ ಕಂಪ್ಲೆಂಟ್ ಕೊಟ್ಟಿದ್ದರು. ಇದೆಲ್ಲಾ ಆದಮೇಲೆ ನನಗೆ ಪೋಲೀಸರು ಮಾಹಿತಿ ನೀಡಿದ್ದರು. ಹೀಗಾಗಿ ತನಿಖೆಗಾಗ ನಾನು ಎಸ್‌ಐಟಿ ರಚನೆ ಮಾಡಿದ್ದೆ ಎಂದು ತಿಳಿಸಿದರು.

ಇನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಶಿವಕುಮಾರ್ ಹೆಸರೇ ಇಲ್ಲ. ಸಾಯಿತೇಜ ಎಂಬಾತನನ್ನು ಕರೆಸಿ ಶಿವಕುಮಾರ್ ಎಂದು ಹೆಸರಿಟ್ಟಿದ್ದರು. ಇವನು ಯಾರು ಎಂದು ಪರಿಶೀಲನೆ ಮಾಡಲ್ಲ. ಅಧಿಕಾರಿ ದೀಪಾ ನೋಡಿಲ್ಲ, ಕೃಷ್ಣಮೂರ್ತಿಯೂ ನೋಡಿಲ್ಲ. ಬ್ಯಾಂಕಿನವರೇ ಅವರ ಬ್ಯಾಂಕಿನ ಅಧಿಕಾರಿಗಳ ಮೇಲೆ ದೂರು ಕೊಟ್ಟಿದ್ದಾರೆ. ಇವರ ಮೇಲೆ ತನಿಖೆ ನಡೆಸಲು ಅನುಮತಿ ನೀಡಿದ್ದರು ಎಂದು ತಿಳಿಸಿದರು.

CM Siddaramaiah: ವಾಲ್ಮೀಕಿ ನಿಗಮ ಅಕ್ರಮಕ್ಕೆ ಸರ್ಕಾರ ಹೊಣೆಯಲ್ಲ; ಚಂದ್ರಶೇಖರನ್‌ ಆತ್ಮಹತ್ಯೆಗೆ ಅಧಿಕಾರಿಗಳು ಕಾರಣ ಎಂದ ಸಿಎಂ!

ಈ ಹಗರಣದಲ್ಲಿ ಎಸ್‌ಐಟಿ, ಸಿಬಿಐ ತನಿಖೆ ಮಾಡುತ್ತಿವೆ. ಇಡಿ ಸುಮೊಟೋ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿವೆ. ನಾಗೇಂದ್ರ ಬಂಧನವಾಗಿದೆ, ದದ್ದಲ್ ಮನೆ ಮೇಲೆ ದಾಳಿ ಮಾಡಿ ತನಿಖೆ ನಡೆಸಿದ್ದಾರೆ. ಎಸ್‌ಐಟಿ 12 ಮಂದಿಯನ್ನು ವಶಕ್ಕೆ ಪಡೆದು, ಈ ಪೈಕಿ 9 ಆರೋಪಿಗಳನ್ನು ಜೈಲಿಗೆ ಕಳುಹಿಸಿದ್ದಾರೆ, ಮೂವರು ಕಸ್ಟಡಿಯಲ್ಲಿ ಇದ್ದಾರೆ. ತನಿಖೆ ವೇಳೆ 85 ಕೋಟಿ ರೂ.ಗಳಲ್ಲಿ 34 ಕೋಟಿ ಕೋಟಿ ವಾಪಾಸ್ ಬಂದಿದೆ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

GT World Mall: ರೈತ ಫಕೀರಪ್ಪರನ್ನು ಮನೆಗೆ ಆಹ್ವಾನಿಸಿ ಸತ್ಕರಿಸಿದ ಜಿ.ಟಿ.ಮಾಲ್‌ ಮಾಲೀಕ

GT World Mall: ಜಿ.ಟಿ.ಮಾಲ್‌ ಮಾಲೀಕ ಎಸ್‌.ಟಿ.ಆನಂದ್‌ ಅವರು ರೈತ ಫಕೀರಪ್ಪ ಹಾಗೂ ಪುತ್ರ ನಾಗರಾಜ್‌ ಅವರನ್ನು ಶುಕ್ರವಾರ ಬೆಂಗಳೂರಿನ ನಿವಾಸಕ್ಕೆ ಕರೆಸಿಕೊಂಡು ಸನ್ಮಾನ ಮಾಡಿದ್ದಾರೆ. ಅಲ್ಲದೇ ಮಾಲ್‌ನಲ್ಲಿ ಸಿಬ್ಬಂದಿ ಮಾಡಿದ ತಪ್ಪಿಗೆ ಕ್ಷಮೆಯಾಚನೆ ಮಾಡಿದ್ದಾರೆ.

VISTARANEWS.COM


on

GT World Mall
Koo

ಬೆಂಗಳೂರು: ಹಾವೇರಿ ಮೂಲದ ರೈತ ಫಕೀರಪ್ಪ ಅವರು ಪಂಚೆ ಧರಿಸಿದ್ದ ಹಿನ್ನೆಲೆಯಲ್ಲಿ ಜಿ.ಟಿ.ಮಾಲ್‌ (GT World Mall) ಪ್ರವೇಶಕ್ಕೆ ನಿರಾಕರಿಸಿದ ಘಟನೆಗೆ ವ್ಯಾಪಕ ವಿರೋಧ ವ್ಯಕ್ತವಾದ ಬೆನ್ನಲ್ಲೇ ಆಡಳಿತ ಮಂಡಳಿ ಕ್ಷಮೆಯಾಚಿಸಿತ್ತು. ಬಳಿಕ ಬಿಬಿಎಂಪಿ ಅಧಿಕಾರಿಗಳು ಮಾಲ್‌ ಅನ್ನು ಒಂದು ವಾರದ ಕಾಲ ಬಂದ್‌ ಮಾಡಿಸಿದ್ದಾರೆ. ಇದೀಗ ಮಾಲೀಕ ಎಸ್‌.ಟಿ.ಆನಂದ್‌ ಅವರು ರೈತ ಫಕೀರಪ್ಪ ಅವರನ್ನು ಮನೆಗೆ ಆಹ್ವಾನಿಸಿ ಸನ್ಮಾನ ಮಾಡಿದ್ದು, ಸಿಬ್ಬಂದಿಯಿಂದ ನಡೆದಿದ್ದ ಅಚಾತುರ್ಯಕ್ಕೆ ಕ್ಷಮೆಯಾಚಿಸಿದ್ದಾರೆ.

ಜಿ.ಟಿ.ಮಾಲ್‌ ಮಾಲೀಕ ಎಸ್‌.ಟಿ.ಆನಂದ್‌ ಅವರು ರೈತ ಫಕೀರಪ್ಪ ಹಾಗೂ ಪುತ್ರ ನಾಗರಾಜ್‌ ಅವರನ್ನು ಶುಕ್ರವಾರ ನಗರದ ನಿವಾಸಕ್ಕೆ ಕರೆಸಿಕೊಂಡು ಸನ್ಮಾನ ಮಾಡಿದ್ದಾರೆ. ಈ ವೇಳೆ ರೈತ ಫಕೀರಪ್ಪ ಹಾಗೂ ಪುತ್ರನಿಗೆ ಉಪಾಹಾರ ನೀಡಿ ಸತ್ಕರಿಸಲಾಗಿದ್ದು, ಮಾಲೀಕ ಆನಂದ್‌ ಅವರು ಸ್ವತಃ ಕೈತುತ್ತು ತಿನ್ನಿಸಿದ್ದು ಕಂಡುಬಂದಿದೆ. ರೈತ ಫಕೀರಪ್ಪಗೆ ಸನ್ಮಾನ ಮಾಡುವಾಗ ಮಾಲೀಕ ಕೂಡ ಪಂಚೆ, ಬನಿಯನ್‌ ಧರಿಸಿದ್ದರು.

ಈ ವೇಳೆ ಮಾತನಾಡಿರುವ ಮಾಲೀಕ ಆನಂದ್‌ ಅವರು, ನಾವು ಕೂಡ ರೈತ ಕುಟುಂಬದವರೇ ಆಗಿದ್ದು, ಕೃಷಿಕರ ಬಗ್ಗೆ ಅಪಾರ ಗೌರವವಿದೆ. ನೀವು ನಮ್ಮ ಮನೆಗೆ ಬಂದಿರುವುದು ಸಂತಸ ತಂದಿದೆ. ನಾನು ಕೂಡ ಸರ್ಕಾರಿ ಶಾಲೆಯಲ್ಲೇ ಓದಿದ್ದು. ನಾವು ಯಾವತ್ತೂ ಯಾರನ್ನೂ ಅವಮಾನ ಮಾಡಿಲ್ಲ, ಅನಾಕರಿವಾಗಿ ನಡೆದುಕೊಂಡವರಲ್ಲಿ. ಏನೋ ನಮ್ಮ ಸಿಬ್ಬಂದಿಯಿಂದ ತಪ್ಪಾಗಿದೆ. ದಯವಿಟ್ಟು ನೀವು ಕ್ಷಮಿಸಬೇಕು ಎಂದು ರೈತ ಫಕೀರಪ್ಪರನ್ನು ಕೋರಿದ್ದಾರೆ.

ಇದನ್ನೂ ಓದಿ | GT World Mall: ಅನ್ನದಾತರಿಗೆ ಅವಮಾನ; ತೆರಿಗೆ ಪಾವತಿಸದ್ದಕ್ಕಾಗಿ ಜಿಟಿ ಮಾಲ್‌ ಸೀಲ್ ಮಾಡಿದ ಬಿಬಿಎಂಪಿ

ಏನಿದು ಘಟನೆ?

ಬೆಂಗಳೂರಿನ ಮಾಗಡಿ ರಸ್ತೆಯ ಬಳಿ ಇರುವ ಜಿಟಿ ವರ್ಲ್ಡ್‌ ಮಾಲ್‌ಗೆ ಜುಲೈ 16ರಂದು ಪಂಚೆ ಧರಿಸಿ ತೆರಳಿದ್ದ ಹಾವೇರಿ ಮೂಲದ ರೈತ ಫಕೀರಪ್ಪ ಅವರನ್ನು ಒಳ ಹೋಗಲು ಬಿಟ್ಟಿರಲಿಲ್ಲ. ಈ ಕುರಿತು ಪ್ರಶ್ನಿಸಿದಾಗ, ʼಪಂಚೆ ಧರಿಸಿದವರನ್ನು ಒಳಗೆ ಬಿಡುವುದಿಲ್ಲ, ಈ ಬಗ್ಗೆ ನಮಗೆ ಸೂಚನೆ ಇದೆʼ ಎಂದು ಸೆಕ್ಯುರಿಟಿ ಸಿಬ್ಬಂದಿ ಮುಖ್ಯಸ್ಥರು ಹೇಳಿದ್ದಾರೆ. ಯಾಕೆ ಬಿಡುವುದಿಲ್ಲ ಎಂದು ಮರುಪ್ರಶ್ನಿಸಿದ ರೈತರ ಮಗನಿಗೆ ʼನಿಮ್ಮ ಮೇಲೆ ಕೇಸ್‌ ಹಾಕುತ್ತೇವೆʼ ಎಂದು ಸೆಕ್ಯೂರಿಟಿ ಬೆದರಿಸಿದ್ದರು. ಬಳಿಕ ಘಟನೆ ಬಗ್ಗೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರೈತ ಫಕೀರಪ್ಪಗೆ ಆಡಳಿತ ಮಂಡಳಿ ಕ್ಷಮೆಯಾಚನೆ ಮಾಡಿತ್ತು.

ಬೆಂಗಳೂರಿನ ವಿಜಯನಗರದ ನಿವಾಸಿಯಾದ ನಾಗರಾಜ್ ಎಂಬವರ ತಂದೆ ಮೂಲತಃ ರೈತರಾಗಿದ್ದಾರೆ. ಅವರು ಹಾವೇರಿಯಿಂದ ಬೆಂಗಳೂರಿನಲ್ಲಿರುವ ಮಗನ ಮನೆಗೆ ಬಂದಿದ್ದರು. ಜು. 16ರಂದು ತಮ್ಮ ವೃದ್ಧ ತಂದೆಯವರಿಗೆ ಸಿನಿಮಾ ತೋರಿಸಿ ಖುಷಿಪಡಿಸಲು ನಿರ್ಧರಿಸಿದ ನಾಗರಾಜ್, ತಂದೆಯನ್ನು ಜಿಟಿ ಮಾಲ್‌ಗೆ ಕರೆದೊಯ್ದಿದ್ದರು. ಸಾಮಾನ್ಯವಾಗಿ ಪಂಚೆ ಉಡುವ ಹವ್ಯಾಸವಿರುವ ಅವರು ಎಂದಿನಂತೆಯೇ ಪಂಚೆ ಉಟ್ಟು ಮಗನ ಜೊತೆಗೆ ಮಾಲ್‌ಗೆ ತೆರಳಿದ್ದರು. ಆದರೆ, ಮಾಲ್‌ನೊಳಗೆ ಪ್ರವೇಶಿಸಲು ಸಿಬ್ಬಂದಿ ನಿರಾಕರಿಸಿದ್ದರು. ಬಳಿಕ ಮಾಲ್‌ ವಿರುದ್ಧ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದರಿಂದ ಬಿಬಿಎಂಪಿ ಅಧಿಕಾರಿಗಳು ಮಾಲ್‌ ಅನ್ನು ಒಂದು ವಾರದ ಕಾಲ ಮುಚ್ಚಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Women’s Asia Cup 2024 : ಏಷ್ಯಾ ಕಪ್​ನ ಮೊದಲ ಪಂದ್ಯದಲ್ಲೇ ಗೆದ್ದು ಇತಿಹಾಸ ಸೃಷ್ಟಿಸಿದ ನೇಪಾಳ ಮಹಿಳಾ ತಂಡ

Women’s Asia Cup 2024 :

VISTARANEWS.COM


on

Women's Asia Cup 2024
Koo

ಕೊಲೊಂಬೊ: ನೇಪಾಳ ಮಹಿಳಾ ತಂಡವು ಶುಕ್ರವಾರ (ಜುಲೈ 19) ಮಹಿಳಾ ಏಷ್ಯಾ 2024 ರಲ್ಲಿ (Women’s Asia Cup 2024) ವಿಜಯದೊಂದಿಗೆ ತನ್ನ ಅಭಿಯಾನ ಪ್ರಾರಂಭಿಸಿದೆ. ಅದಕ್ಕಿಂತ ಮಿಗಿಲಾಗಿ ಐತಿಹಾಸಿಕ ಗೆಲುವು ದಾಖಲಿಸಿದೆ. ಹೇಗೆಮದರೆ ಏಷ್ಯಾ ಕಪ್ ಟೂರ್ನಿಗೆ ಪ್ರವೇಶ ಪಡೆದ ಒಂದು ದಶಕಕ್ಕೂ ಹೆಚ್ಚು ಸಮಯದ ನಂತರ ನೇಪಾಳವು ಸ್ಪರ್ಧೆಯಲ್ಲಿ ತಮ್ಮ ಮೊದಲ ಗೆಲುವನ್ನು ದಾಖಲಿಸಿದೆ. ಶ್ರೀಲಂಕಾದ ಡಂಬುಲ್ಲಾದಲ್ಲಿ ನಡೆದ ಪಂದ್ಯಾವಳಿಯ ಆರಂಭಿಕ ಪಂದ್ಯದಲ್ಲಿ ಯುಎಇ ವಿರುದ್ಧ ಆರು ವಿಕೆಟ್ ಗಳ ಆಕರ್ಷಕ ಗೆಲುವಿನೊಂದಿಗೆ ಅವರು ಪಂದ್ಯಾವಳಿಯಲ್ಲಿ ತಮ್ಮ ಅಭಿಯಾನವನ್ನು ಪ್ರಾರಂಭಿಸಿದರು.

ನೇಪಾಳ ಮಹಿಳಾ ತಂಡ 2012ರಲ್ಲಿ ಏಷ್ಯಾಕಪ್​​ಗೆ ಪದಾರ್ಪಣೆ ಮಾಡಿತ್ತು. ಅವರು ಆ ಆವೃತ್ತಿಯಲ್ಲಿ 3 ಪಂದ್ಯಗಳನ್ನು ಆಡಿ ಎಲ್ಲಾ ಪಂದ್ಯಗಳನ್ನು ಕಳೆದುಕೊಂಡರು. 2016ರ ಏಷ್ಯಾಕಪ್​ಗೆ ನೇಪಾಳ ಅರ್ಹತೆ ಪಡೆದರೂ ಒಂದೂ ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಅವರು 5 ಪಂದ್ಯಗಳನ್ನು ಆಡಿ ಎಲ್ಲಾ ಪಂದ್ಯಗಳನ್ನು ಸೋತರು. 2018 ಮತ್ತು 2022ರಲ್ಲಿ ನೇಪಾಳ ತಂಡ ಏಷ್ಯಾಕಪ್​ಗೆ ಅರ್ಹತೆ ಪಡೆಯಲು ವಿಫಲವಾಗಿತ್ತು. ಇದೀಗ ಐತಿಹಾಸಿಕ ಗೆಲುವಿನೊಂದಿಗೆ ಏಷ್ಯಾ ಕಪ್ ಗೆ ಮರಳಿದೆ.

ನೇಪಾಳದ ಐತಿಹಾಸಿಕ ಗೆಲುವು

ಟಾಸ್ ಗೆದ್ದು ನೇಪಾಳ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಆಯ್ದುಕೊಂಡ ಯುಎಇಯನ್ನು ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 115 ರನ್ ಗಳಿಗೆ ನಿಯಂತ್ರಿಸಿತು. ಒಂದು ಹಂತದಲ್ಲಿ ಯುಎಇ 4 ವಿಕೆಟ್ ನಷ್ಟಕ್ಕೆ 46 ರನ್ ಗಳಿಸಿತ್ತು. ಖುಷಿ ಶರ್ಮಾ (39 ಎಸೆತಗಳಲ್ಲಿ 36 ರನ್) ಮತ್ತು ಕವಿಶಾ ಎಗೊಡಗೆ (26 ಎಸೆತಗಳಲ್ಲಿ 22 ರನ್) ಕುಸಿತವನ್ನು ತಪ್ಪಿಸಿದರು.

ಇದನ್ನೂ ಓದಿ: Suryakumar Yadav : ಮುಂದಿನ ಆವೃತ್ತಿಯಲ್ಲಿ ಹಾರ್ದಿಕ್ ಪಾಂಡ್ಯಗೆ ಮುಂಬೈ ಇಂಡಿಯನ್ಸ್ ನಾಯಕತ್ವವೂ ನಷ್ಟ

ಆದಾಗ್ಯೂ ಯುಎಇ ಇನ್ನೂ ಸವಾಲಿನ ಮೊತ್ತವನ್ನು ದಾಖಲಿಸಲು ಸಾಧ್ಯವಾಗಲಿಲ್ಲ. 116 ರನ್​ಗಳ ಗುರಿ ಬೆನ್ನತ್ತಿದ ನೇಪಾಳ 17 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಆರಂಭಿಕ ಆಟಗಾರ್ತಿ ಸಂಜನಾ ಖಡ್ಕಾ ಅಜೇಯ 72 ರನ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಅವರು 48 ಎಸೆತಗಳಲ್ಲಿ 11 ಬೌಂಡರಿಗಳನ್ನು ಗಳಿಸಿದರು. ಅವರನ್ನು ಹೊರತುಪಡಿಸಿದರೆ ನೇಪಾಳದ ಯಾವುದೇ ಬ್ಯಾಟರ್​ 10ಕ್ಕಿಂತ ಹೆಚ್ಚು ರನ್ ಗಳಿಸಲು ಸಾಧ್ಯವಾಗಲಿಲ್ಲ. ಯುಎಇ ಪರ ಎಗೊಡೇಜ್ 12 ರನ್​ಗೆ 3 ವಿಕೆಟ್ ಪಡೆದು ಮಿಂಚಿದರು.

ಹಾಲಿ ಚಾಂಪಿಯನ್ ಭಾರತ ವಿರುದ್ಧ ಸೆಣಸುವ ಮೊದಲು ನೇಪಾಳ ಪಾಕಿಸ್ತಾನವನ್ನು ಎದುರಿಸಲಿದೆ. ಮತ್ತೊಂದೆಡೆ, ಯುಎಇ ಪಾಕಿಸ್ತಾನವನ್ನು ಎದುರಿಸುವ ಮೊದಲು ಮೊದಲು ಭಾರತವನ್ನು ಎದುರಿಸಲಿದೆ.

Continue Reading

Latest

Self Harming : ವಾಟರ್‌ ಟ್ಯಾಂಕ್‌ ಮೇಲಿನಿಂದ ಜಿಗಿದ ವಿದ್ಯಾರ್ಥಿ; ವಿಡಿಯೋ ಇದೆ

Self Harming ದುಡ್ಡಿದ್ದವರದ್ದು ಒಂದು ಸಮಸ್ಯೆಯಾದರೆ, ದುಡ್ಡಿಲ್ಲದವರದ್ದು ಇನ್ನು ರೀತಿಯ ಪರಿಸ್ಥಿತಿ. ಪಂಜಾಬ್‌ನ 19 ವರ್ಷದ ವಿದ್ಯಾರ್ಥಿಯೊಬ್ಬ ಆರ್ಥಿಕ ಸಮಸ್ಯೆಗಳಿಂದ ಬೇಸತ್ತು ಸಾವಿನ ಮೊರೆ ಹೋಗಿದ್ದಾನೆ. ನೀರಿನ ಟ್ಯಾಂಕ್ ಹತ್ತಿ ಅದರ ಮೇಲಿನಿಂದ ಕೆಳಕ್ಕೆ ಹಾರಿದ್ದಾನೆ.ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಯುವಕನ ಎರಡೂ ಕಾಲುಗಳು ಮುರಿದು ಕಾಲುಗಳ ಮೂಳೆಗಳು ಹೊರಗೆ ಬಂದಿದ್ದು, ಗಂಭೀರವಾಗಿ ಗಾಯಗೊಂಡ ಯುವಕನನ್ನು ಇಲ್ಲಿನ ವೈದ್ಯರು ಪರೀಕ್ಷಿಸಿದಾಗ, ಅವನು ಮೃತಪಟ್ಟಿದ್ದಾನೆ ಎಂಬುದಾಗಿ ತಿಳಿದುಬಂದಿದೆ.

VISTARANEWS.COM


on

Self Harming
Koo


ಪಂಜಾಬ್: ಇತ್ತೀಚೆಗೆ ಸಣ್ಣ-ಪುಟ್ಟ ಕಾರಣಕ್ಕೆ ಪ್ರಾಣ ಕಳೆದುಕೊಳ್ಳುವ ಅನೇಕ ಘಟನೆಗಳು ಆಗಾಗ ವರದಿಯಾಗುತ್ತಿರುತ್ತದೆ. ಅದರಲ್ಲೂ ಯುವಕರೇ ಹೆಚ್ಚಾಗಿ ದುಡುಕಿ ಇಂತಹ ನಿರ್ಧಾರಕ್ಕೆ ಬರುತ್ತಾರೆ. ಅಂತಹದ್ದೇ ಒಂದು ಘಟನೆ ಹರ್ಯಾಣದಲ್ಲಿ ನಡೆದಿದೆ. ಈ ಹಣಕಾಸಿನ ಸಮಸ್ಯೆಯಿಂದ ನೊಂದು 19 ವರ್ಷದ ವಿದ್ಯಾರ್ಥಿಯೊಬ್ಬ ನೀರಿನ ಟ್ಯಾಂಕ್‍ ಮೇಲಿನಿಂದ ಹಾರಿ ಆತ್ಮಹತ್ಯೆ (Self Harming)ಮಾಡಿಕೊಂಡಿದ್ದಾನೆ. ಈ ಆಘಾತಕಾರಿ ಘಟನೆ ಹರ್ಯಾಣದ ಖರಾರ್ ನ ಖಾನ್ಪುರ್ ಗ್ರಾಮದಲ್ಲಿ ಗುರುವಾರ ನಡೆದಿದ್ದು, ಈ ಭಯಾನಕ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಸುಮಿತ್ ಚಿಕ್ರಾ(19)ಎಂದು ಗುರುತಿಸಲಾಗಿದೆ. ಈತ ಪಂಜಾಬ್‍ನ ಘರುವಾನ್ ಗ್ರಾಮದ ಚಂಡೀಗಢ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದ. ಆತ ತನ್ನ ಹೆತ್ತವರಿಗೆ ಏಕೈಕ ಮಗ ಎನ್ನಲಾಗಿದೆ. ಆರ್ಥಿಕ ಸಮಸ್ಯೆಗಳಿಂದಾಗಿ ಒತ್ತಡವನ್ನು ಅನುಭವಿಸುತ್ತಿದ್ದ ವಿದ್ಯಾರ್ಥಿ ಈ ರೀತಿ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ನೀರಿನ ಟ್ಯಾಂಕ್‍ನಿಂದ ಜಿಗಿಯುವ ಮೊದಲು ವಿದ್ಯಾರ್ಥಿ ತನ್ನ ಕೈಯ ಮಣಿಕಟ್ಟನ್ನು ಕತ್ತರಿಸಲು ಪ್ರಯತ್ನಿಸಿದನು ಎಂಬುದಾಗಿ ತಿಳಿದುಬಂದಿದೆ. ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ವಿಡಿಯೊದಲ್ಲಿ ಯುವಕ ನೀರಿನ ಟ್ಯಾಂಕ್ ಹತ್ತಿ ಟ್ಯಾಂಕ್‍ನ ಅಂಚಿನಲ್ಲಿ ನಿಂತಿರುವುದನ್ನು ಕಾಣಬಹುದು. ಯುವಕ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಡೆಯಲು ಇಬ್ಬರು ಪುರುಷರು ನೀರಿನ ಟ್ಯಾಂಕ್‍ನ ಮೆಟ್ಟಿಲುಗಳನ್ನು ಹತ್ತುತ್ತಿರುವುದನ್ನು ಸಹ ಕಾಣಬಹುದು. ಅವರು ನೀರಿನ ಟ್ಯಾಂಕ್‍ನ ನಾಲ್ಕನೇ ಮಹಡಿಯನ್ನು ತಲುಪಿದಾಗ, ಯುವಕ ಅವರನ್ನು ಮೇಲಿನಿಂದ ಗಮನಿಸಿದನು. ನಂತರ ಅವರು ತನನ್ನು ರಕ್ಷಿಸಲು ಬರುತ್ತಿರುವುದನ್ನು ನೋಡಿ ಅವನು ಮುಂದೆ ಓಡಿ ನೀರಿನ ಟ್ಯಾಂಕ್‍ನಿಂದ ಹಾರಿದನು. ಈ ಘಟನೆಯನ್ನು ತನ್ನ ಮೊಬೈಲ್ ಪೋನಿನಲ್ಲಿ ರೆಕಾರ್ಡ್ ಮಾಡುತ್ತಿದ್ದ ವ್ಯಕ್ತಿಯು ಯುವಕ ನೆಲಕ್ಕೆ ಬೀಳುತ್ತಿದ್ದಂತೆ ಆಘಾತದಿಂದ ಕಿರುಚುವುದನ್ನು ಕೇಳಬಹುದು. ಜಿಗಿತದ ಪರಿಣಾಮ ಎಷ್ಟಿತ್ತೆಂದರೆ ಯುವಕ ನೆಲದ ಮೇಲೆ ಬಿದ್ದ ನಂತರ ಮತ್ತೆ ಮೇಲೆ ಜಿಗಿದು ನಂತರ ಮತ್ತೆ ಬಿದ್ದಿದ್ದಾನೆ.

ನೆಲಕ್ಕೆ ಬಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ನೀರಿನ ಟ್ಯಾಂಕ್‍ನ ಮೆಟ್ಟಿಲುಗಳನ್ನು ಏರುತ್ತಿದ್ದ ಇಬ್ಬರು ಪುರುಷರು, ಯುವಕ ಜೀವಂತವಾಗಿದ್ದಾನೆಯೇ ಎಂದು ಪರೀಕ್ಷಿಸಲು ಕೆಳಗೆ ಓಡಿ ಬರುತ್ತಿರುವುದು ಕಂಡುಬಂದಿದೆ.
ಯುವಕನನ್ನು ತಕ್ಷಣ ಖರಾರ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಯುವಕನ ಎರಡೂ ಕಾಲುಗಳು ಮುರಿದು ಕಾಲುಗಳ ಮೂಳೆಗಳು ಹೊರಗೆ ಬಂದಿದ್ದು, ಗಂಭೀರವಾಗಿ ಗಾಯಗೊಂಡ ಯುವಕನನ್ನು ಇಲ್ಲಿನ ವೈದ್ಯರು ಪರೀಕ್ಷಿಸಿದಾಗ, ಅವನು ಮೃತಪಟ್ಟಿದ್ದಾನೆ ಎಂಬುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: ಬಿಸ್ಕೆಟ್‌ಗೆ ಆಸೆ ಪಟ್ಟು ಹೋಗಿದ್ದ ಪುಟ್ಟ ಬಾಲಕಿ ಕಾಮುಕನ ಕೈಗೆ ಸಿಕ್ಕಿ ಕೊಲೆಯಾದಳು

Continue Reading

ಕ್ರೀಡೆ

Suryakumar Yadav : ಮುಂದಿನ ಆವೃತ್ತಿಯಲ್ಲಿ ಹಾರ್ದಿಕ್ ಪಾಂಡ್ಯಗೆ ಮುಂಬೈ ಇಂಡಿಯನ್ಸ್ ನಾಯಕತ್ವವೂ ನಷ್ಟ

Suryakumar Yadav: ಭಾರತದ ಆಲ್ರೌಂಡರ್ ಕಳೆದ ಆವೃತ್ತಯ ಐಪಿಎಲ್ ಸಮಯದಲ್ಲಿ ತೀವ್ರ ಟೀಕೆ ಮತ್ತು ಟ್ರೋಲ್​​ಗಳನ್ನು ಎದುರಿಸಿದ್ದರು. ಅಲ್ಲಿ ಅವರು ನಾಯಕನಾಗಿ ಮತ್ತು ಆಲ್​ರೌಂಡರ್ ಆಗಿ ಪ್ರಭಾವ ಬೀರಲು ವಿಫಲಗೊಂಡಿದ್ದರು. ರೋಹಿತ್ ಶರ್ಮಾ ಬದಲಿಗೆ ಮುಂಬೈ ಇಂಡಿಯನ್ಸ್ ತಂಡದ ನಾಯಕನನ್ನಾಗಿ ಮಾಡಿದ್ದಕ್ಕಾಗಿ ಅವರನ್ನು ಪಂದ್ಯಾವಳಿಯುದ್ದಕ್ಕೂ ಅಭಿಮಾನಿಗಳು ಗುರಿಯಾಗಿಸಿದ್ದರು. ಆದರೆ, ಟಿ20 ವಿಶ್ವ ಕಪ್​ನಲ್ಲಿ ಪಾಂಡ್ಯ ಪರಿಸ್ಥಿತಿಯನ್ನು ತಮ್ಮ ಕಡೆಗೆ ಒಲಿಸಿಕೊಂಡರು.

VISTARANEWS.COM


on

Suryakumar Yadav:
Koo

ಬೆಂಗಳೂರು: ಟಿ 20 ವಿಶ್ವಕಪ್​​ನಲ್ಲಿ ಭಾರತ ತಂಡದ ವಿಜಯ ಅಭಿಯಾನದಲ್ಲಿ ಪ್ರಮುಖ ಪಾತ್ರ ವಹಿಸಿದ ನಂತರ ಆಲ್​ರೌಂಡರ್​ ಹಾರ್ದಿಕ್ ಪಾಂಡ್ಯ (Hardik Pandya) ಅವರ ಅದೃಷ್ಟ ಬದಲಾಗಿದೆ ಎಂದರೆ ಸುಳ್ಳು. ಯಾಕೆಂದರೆ ಅವರು ಭಾರತ ಟಿ20 ತಂಡದ ಸ್ಥಾನ ಕಳೆದುಕೊಂಡಿದ್ದಾರೆ. ಅವರನ್ನು ಮುಂಬರುವ ಲಂಕಾ ಪ್ರವಾಸಕ್ಕೆ ಭಾರತ ತಂಡದ ನಾಯಕತ್ವ ಬಿಡಿ, ಕನಿಷ್ಠ ಉಪನಾಯಕತ್ವವೂ ಕೊಟ್ಟಿಲ್ಲ. ಸೂರ್ಯಕುಮಾರ್ ಯಾದವ್ (Suryakumar Yadav) ನಾಯಕರಾಗಿದ್ದರೆ, ಶುಭ್​ಮನ್ ಗಿಲ್​ ಉಪನಾಯಕರಾಗಿದ್ದಾರೆ. ಇವೆಲ್ಲದರ ಹಿನ್ನೆಲೆಯಲ್ಲಿ ಅವರನ್ನು ಮುಂದಿನ ವರ್ಷ ಮುಂಬೈ ಇಂಡಿಯನ್ಸ್​​ ತಂಡದ ನಾಯಕತ್ವದಿಂದಲೂ ತೆಗೆದು ಹಾಕಲಾಗುತ್ತದೆ ಎನ್ನಲಾಗಿದೆ.

ಭಾರತದ ಆಲ್ರೌಂಡರ್ ಕಳೆದ ಆವೃತ್ತಯ ಐಪಿಎಲ್ ಸಮಯದಲ್ಲಿ ತೀವ್ರ ಟೀಕೆ ಮತ್ತು ಟ್ರೋಲ್​​ಗಳನ್ನು ಎದುರಿಸಿದ್ದರು. ಅಲ್ಲಿ ಅವರು ನಾಯಕನಾಗಿ ಮತ್ತು ಆಲ್​ರೌಂಡರ್ ಆಗಿ ಪ್ರಭಾವ ಬೀರಲು ವಿಫಲಗೊಂಡಿದ್ದರು. ರೋಹಿತ್ ಶರ್ಮಾ ಬದಲಿಗೆ ಮುಂಬೈ ಇಂಡಿಯನ್ಸ್ ತಂಡದ ನಾಯಕನನ್ನಾಗಿ ಮಾಡಿದ್ದಕ್ಕಾಗಿ ಅವರನ್ನು ಪಂದ್ಯಾವಳಿಯುದ್ದಕ್ಕೂ ಅಭಿಮಾನಿಗಳು ಗುರಿಯಾಗಿಸಿದ್ದರು. ಆದರೆ, ಟಿ20 ವಿಶ್ವ ಕಪ್​ನಲ್ಲಿ ಪಾಂಡ್ಯ ಪರಿಸ್ಥಿತಿಯನ್ನು ತಮ್ಮ ಕಡೆಗೆ ಒಲಿಸಿಕೊಂಡರು.

ಇದನ್ನೂ ಓದಿ: Paris Olympics 2024 : ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಲಿರುವ 117 ಭಾರತೀಯ ಕ್ರೀಡಾಪಟುಗಳ ಸಂಪೂರ್ಣ ವಿವರ ಇಲ್ಲಿದೆ

ಅವರು ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಪ್ರಭಾವ ಬೀರಿದರು ಮತ್ತು 17 ವರ್ಷಗಳ ಸುದೀರ್ಘ ಅಂತರದ ನಂತರ ಭಾರತವು ಟಿ 20 ವಿಶ್ವಕಪ್ ಗೆಲ್ಲಲು ಸಹಾಯ ಮಾಡಿದರು. ಟೂರ್ನಿಯಲ್ಲಿ ಅವರ ಅದ್ಭುತ ಆಲ್​ರೌಂಡ್​ ಪ್ರದರ್ಶನವು ಅವರನ್ನು ಮತ್ತೊಮ್ಮೆ ಮೇಲಕ್ಕೆ ಕೊಂಡೊಯ್ದಿತು. ಹೀಗಾಗಿ ರೋಹಿತ್​ ಸ್ಥಾನ ತುಂಬಲು ಟಿ20 ತಂಡಕ್ಕೆ ಆಯ್ಕೆ ಮಾಡಲಾಗುತ್ತದೆ ಎಂದು ಅಂದಾಜಿಸಲಾಗಿತ್ತು. ಟಿ 20 ವಿಶ್ವಕಪ್​ನಲ್ಲಿ ಪಾಂಡ್ಯ ಉಪನಾಯಕರಾಗಿದ್ದರೂ, ಸೂರ್ಯಕುಮಾರ್ ಯಾದವ್​ಗೆ ಆಟದ ಕಿರು ಸ್ವರೂಪದಲ್ಲಿ ತಂಡವನ್ನು ಮುನ್ನಡೆಸುವ ಜವಾಬ್ದಾರಿಯನ್ನು ನೀಡಲಾಗಿದೆ. ಅಷ್ಟೇ ಅಲ್ಲ, ಪಾಂಡ್ಯ ತಂಡದ ಉಪನಾಯಕನನ್ನೂ ಕಳೆದುಕೊಂಡಿದ್ದಾರೆ.

ಮುಂದಿನ ಐಪಿಎಲ್​ ಕತೆ?

ಮುಂಬರುವ ತಿಂಗಳುಗಳಲ್ಲಿ ಹಾರ್ದಿಕ್ ಪಾಂಡ್ಯಗೆ ಎಲ್ಲವೂ ತಮ್ಮ ಪರವಾಗಿ ಹೋಗಲಿಕ್ಕಿಲ್ಲ. ವರದಿಯ ಪ್ರಕಾರ, ಐಪಿಎಲ್​​ನ ಮುಂದಿನ ಋತುವಿಗೆ ಮುಂಚಿತವಾಗಿ ಮುಂಬೈ ಇಂಡಿಯನ್ಸ್​​ ಕೆಲವೊಂದು ಬದಲಾವಣೆ ಮಾಡಬಹುದು. ಮೆಗಾ ಹರಾಜು ನಡೆಯಬೇಕಾಗಿರುವುದರಿಂದ, ಫ್ರಾಂಚೈಸಿ ಹಲವಾರು ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಪಾಂಡ್ಯ ಅವರನ್ನು ಉಳಿಸಿಕೊಳ್ಳುವಲ್ಲಿ ಅವರು ಯಾವುದೇ ದೊಡ್ಡ ಸವಾಲನ್ನು ಎದುರಿಸುವುದಿಲ್ಲವಾದರೂ, ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ಮತ್ತು ಜಸ್ಪ್ರೀತ್ ಬುಮ್ರಾ ಅವರಂತಹ ಆಟಗಾರರನ್ನು ಉಳಿಸಿಕೊಳ್ಳುವಾಗ ಅವರಿಗೆ ಎಲ್ಲವೂ ಸಲೀಸಾಗಿಲ್ಲ. ನಾಯಕ ಸ್ಥಾನದಿಂದ ನಿರ್ಗಮಿಸಿದ ನಂತರ ರೋಹಿತ್ ಫ್ರಾಂಚೈಸಿಯನ್ನು ತೊರೆಯಲು ನಿರ್ಧರಿಸಬಹುದು. ಹಾಗಾದರೂ ಸೂರ್ಯಕುಮಾರ್ ಅವರು ನಾಯಕರಾಗಬಹುದು.

ಬುಮ್ರಾ ನಾಯಕತ್ವದ ಪಾತ್ರವನ್ನು ಪ್ರೀತಿಸುತ್ತಾರೆ ಮತ್ತು ಮುಂಬೈ ಇಂಡಿಯನ್ಸ್ ಅವರನ್ನು ಉಳಿಸಿಕೊಳ್ಳಲು ಎಲ್ಲ ಪ್ರಯತ್ನಗಳನ್ನು ಮಾಡಬಹುದು ಇವೆಲ್ಲವೂ ಪಾಂಡ್ಯ ಅವರನ್ನು ಕೇವಲ ಒಂದೇ ಒಂದು ಋತುವಿನ ಮುಂಬೈ ಇಂಡಿಯನ್ ನಾಯಕರನ್ನಾಗಿ ಮಾಡಬಹುದು.

Continue Reading
Advertisement
GT World Mall
ಕರ್ನಾಟಕ2 mins ago

GT World Mall: ರೈತ ಫಕೀರಪ್ಪರನ್ನು ಮನೆಗೆ ಆಹ್ವಾನಿಸಿ ಸತ್ಕರಿಸಿದ ಜಿ.ಟಿ.ಮಾಲ್‌ ಮಾಲೀಕ

Viral Video
Latest3 mins ago

Viral Video: ಮಗಳೊಂದಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಗುಪ್ತಾಂಗ ತೋರಿಸಿದ ವಿಕೃತ ಕಾಮಿ!

Sadageri village free from gas leakage risk says DC Lakshmipriya
ಕರ್ನಾಟಕ4 mins ago

Uttara Kannada News: ಭೂಕುಸಿತದಿಂದ ಕೊಚ್ಚಿ ಹೋದ ಟ್ಯಾಂಕರ್‌; ಗ್ರಾಮಸ್ಥರೀಗ ಗ್ಯಾಸ್ ಸ್ಫೋಟ ಅಪಾಯದಿಂದ ಪಾರು

Reliance Jio first quarter profit at Rs 5445 crore
ದೇಶ8 mins ago

Reliance Jio: ರಿಲಯನ್ಸ್ ಜಿಯೋಗೆ ಮೂರೇ ತಿಂಗಳಲ್ಲಿ ಎಷ್ಟು ಲಾಭ ನೋಡಿ; 5,445 ಕೋಟಿ ರೂ!

Women's Asia Cup 2024
ಪ್ರಮುಖ ಸುದ್ದಿ23 mins ago

Women’s Asia Cup 2024 : ಏಷ್ಯಾ ಕಪ್​ನ ಮೊದಲ ಪಂದ್ಯದಲ್ಲೇ ಗೆದ್ದು ಇತಿಹಾಸ ಸೃಷ್ಟಿಸಿದ ನೇಪಾಳ ಮಹಿಳಾ ತಂಡ

Self Harming
Latest24 mins ago

Self Harming : ವಾಟರ್‌ ಟ್ಯಾಂಕ್‌ ಮೇಲಿನಿಂದ ಜಿಗಿದ ವಿದ್ಯಾರ್ಥಿ; ವಿಡಿಯೋ ಇದೆ

NHAI FastTag
ದೇಶ47 mins ago

NHAI FastTag: ಇನ್ನೂ ಫಾಸ್ಟ್ ಟ್ಯಾಗ್ ಅಳವಡಿಸಿಕೊಂಡಿಲ್ಲವೇ? ಹಾಗಿದ್ದರೆ ದುಪ್ಪಟ್ಟು ಶುಲ್ಕ ಕಟ್ಟಲು ಸಿದ್ದರಾಗಿ!

Suryakumar Yadav:
ಕ್ರೀಡೆ56 mins ago

Suryakumar Yadav : ಮುಂದಿನ ಆವೃತ್ತಿಯಲ್ಲಿ ಹಾರ್ದಿಕ್ ಪಾಂಡ್ಯಗೆ ಮುಂಬೈ ಇಂಡಿಯನ್ಸ್ ನಾಯಕತ್ವವೂ ನಷ್ಟ

Bangladesh Violence
ವಿದೇಶ1 hour ago

Bangladesh Violence: ಭಾರೀ ಪ್ರೊಟೆಸ್ಟ್‌; ಜೈಲಿಗೆ ಬೆಂಕಿ; ನೂರಾರು ಕೈದಿಗಳು ಪರಾರಿ

Opposition party leader R Ashok statement about Valmiki Development Corporation scam
ಕರ್ನಾಟಕ1 hour ago

R Ashok: ಹಗರಣದ ವಿರುದ್ಧ ಮಾತನಾಡಿದ ಸದಸ್ಯರ ಬಾಯಿ ಮುಚ್ಚಿಸಿದ ಸ್ಪೀಕರ್‌; ಆರ್‌. ಅಶೋಕ್‌ ಆಕ್ರೋಶ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ8 hours ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ9 hours ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ1 day ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ1 day ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ5 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಟ್ರೆಂಡಿಂಗ್‌