Honor 200 Series : ಒಂದೇ ದಿನ 2 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ ಹಾನರ್ - Vistara News

ಬೆಂಗಳೂರು

Honor 200 Series : ಒಂದೇ ದಿನ 2 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ ಹಾನರ್

Honor 200 Series: ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಪೋರ್ಟ್ ಫೋಲಿಯೊವನ್ನು ವಿಸ್ತರಿಸುತ್ತಿರುವ ಹಾನರ್ ಇಂದು ತನ್ನ ಹಾನರ್ 200 ಸರಣಿಯನ್ನು ಬಿಡುಗಡೆ ಮಾಡಿದೆ. ಹಾನರ್ 200 ಪ್ರೊ 5ಜಿ ಮತ್ತು ಹಾನರ್ 200 5ಜಿ ಒಳಗೊಂಡಿರುವ ಈ ಹೊಸ ಸರಣಿಯು ಶಕ್ತಿ ಮತ್ತು ಸೃಜನಶೀಲತೆಯ ಗಡಿಗಳನ್ನು ದಾಟುತ್ತದೆ, ಅದ್ಭುತ ಎಐ-ಚಾಲಿತ ಪೋರ್ಟ್ರೇಟ್ ಸಾಮರ್ಥ್ಯಗಳು, ಇಮ್ಮರ್ಸಿವ್ ಡಿಸ್‌ಪ್ಲೇಗಳು, ದೃಢವಾದ ಹಾರ್ಡ್‌ವೇರ್ ಕಾರ್ಯಕ್ಷಮತೆ ಮತ್ತು ಅರ್ಥಗರ್ಭಿತ ಬಳಕೆದಾರ-ಕೇಂದ್ರಿತ ಎಐ ಅನುಭವಗಳೊಂದಿಗೆ ಗ್ರಾಹಕರಿಗೆ ಉನ್ನತ ದರ್ಜೆಯ ಅನುಭವವನ್ನು ನೀಡುತ್ತದೆ.

VISTARANEWS.COM


on

Honor Released Honor 200 Pro 5G and Honor 200 5G Smartphones
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಮಾರುಕಟ್ಟೆ ವಿಸ್ತರಣೆ ಮಾಡುತ್ತಿರುವ ಪ್ರಮುಖ ಮೊಬೈಲ್ ತಯಾರಿಕ ಕಂಪನಿ ಹಾನರ್ (Honor 200 Series), ಶುಕ್ರವಾರ (ಜುಲೈ 19ರಂದು) ತನ್ನ ಹಾನರ್ 200 ಸರಣಿ (Honor 200 Series) ಎರಡು ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡಿದೆ. ಹಾನರ್ 200 ಪ್ರೊ 5ಜಿ ಮತ್ತು ಹಾನರ್ 200 5ಜಿ ಬಿಡುಗಡೆಗೊಂಡಿರುವ ಮೊಬೈಲ್​ಗಳು. ಎಐ-ಚಾಲಿತ ಪೋರ್ಟ್ರೇಟ್ ಸಾಮರ್ಥ್ಯಗಳು, ಇಮ್ಮರ್ಸಿವ್ ಡಿಸ್‌ಪ್ಲೇ, ದೃಢ ಹಾರ್ಡ್‌ವೇರ್ ಕಾರ್ಯಕ್ಷಮತೆ ಮತ್ತು ಬಳಕೆದಾರ-ಕೇಂದ್ರಿತ ಎಐ ಅನುಭವವನ್ನು ಈ ಸ್ಮಾರ್ಟ್​​ಫೋನ್ ನೀಡುತ್ತದೆ.

ಹಾನರ್ 200 ಪ್ರೊ 5ಜಿ

ಹಾನರ್ 200 ಪ್ರೊ 5ಜಿ ಓಷಿಯನ್ ಸಿಯಾನ್ ಮತ್ತು ಬ್ಲ್ಯಾಕ್ ಎಂಬ ಎರಡು ಬಣ್ಣಗಳಲ್ಲಿ ಲಭ್ಯವಿದ್ದು, ಇದರ ಬೆಲೆ 57,999 ರೂಪಾಯಿ. ಜುಲೈ 20 ರ ಮಧ್ಯರಾತ್ರಿ 12 ಗಂಟೆಯಿಂದ Amazon.in, ಬ್ರಾಂಡ್ ವೆಬ್ಸೈಟ್ – explorehonor.com ಮತ್ತು ಮೇನ್‌ಲೈನ್ ಮಳಿಗೆಗಳಲ್ಲಿ ಮಾರಾಟ ಪ್ರಾರಂಭವಾಗಿದೆ. ಜುಲೈ 20ರಿಂದ 23 ರ ವರೆಗೆ ಸ್ಮಾರ್ಟ್‌ ಫೋನ್ ಅನ್ನು ಎಲ್ಲಾ ಗ್ರಾಹಕರಿಗೆ 8000 ರೂ.ಗಳ ರಿಯಾಯಿತಿಯೊಂದಿಗೆ ನೀಡಲಾಗಿದೆ. ಇದಲ್ಲದೆ, ಐಸಿಐಸಿಐ ಬ್ಯಾಂಕ್ ಮತ್ತು ಎಸ್‌ಬಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಹೊಂದಿರುವವರು 3000 ರೂ.ಗಳ ರಿಯಾಯಿತಿಯನ್ನು ಪಡೆಯಬಹುದು. ಹೆಚ್ಚುವರಿಯಾಗಿ, ಗ್ರಾಹಕರು ಕೆಲವು ಆಯ್ದ ಮುಖ್ಯ ಲೈನ್ ಅಂಗಡಿಗಳಲ್ಲಿ 8,499 ಮೌಲ್ಯದ ಉಚಿತ ಹಾನರ್ ಉಡುಗೊರೆಗಳನ್ನು ಪಡೆಯಬಹುದು. ಅಥವಾ 2000 ರೂಪಾಯಿ ಕೂಪನ್ ರಿಯಾಯಿತಿ ಪಡೆಯಬಹುದು.

ಇದನ್ನೂ ಓದಿ: Kannada New Movie: ಜು.26ರಂದು ’ಕುಬುಸʼ ಚಿತ್ರ ರಾಜ್ಯಾದ್ಯಂತ ಬಿಡುಗಡೆ

ಹಾನರ್ 200 5ಜಿ

ಹಾನರ್ 200 5ಜಿ ಮೂನ್‌ಲೈಟ್ ವೈಟ್ ಮತ್ತು ಬ್ಲ್ಯಾಕ್ ಎಂಬ ಎರಡು ಬಣ್ಣಗಳಲ್ಲಿ ಲಭ್ಯವಿದೆ. 12 ಜಿಬಿ ರ್ಯಾಮ್​ ಮತ್ತು 512 ಜಿಬಿ ಸ್ಟೋರೇಜ್​ನೊಂದಿಗೆ ಇದು ಲಭ್ಯವಿದೆ. ಇದರ 39,999 ರೂಪಾಯಿ. ಆದರೆ, 8 ಜಿಬಿ ಮತ್ತು 256 ಸ್ಟೋರೇಜ್ ಹೊಂದಿರುವ ಮೊಬೈಲ್ 34,999 ರೂಪಾಯಿ. ಜುಲೈ 20 ರಿಂದ 23 ರವರೆಗೆ ಸ್ಮಾರ್ಟ್‌ ಫೋನ್‌ ಅನ್ನು 1000 ರೂ.ಗಳ ರಿಯಾಯಿತಿ ಮತ್ತು 2000 ರೂ.ಗಳ ಬ್ಯಾಂಕ್ ಡಿಸ್ಕೌಂಟ್​ನೊಂದಿಗೆ ಖರೀದಿ ಮಾಡಬಹುದು. ಗ್ರಾಹಕರು ಮೇನ್ ಲೈನ್ ಸ್ಟೋರ್ ಗಳಲ್ಲಿ 8,499 ಮೌಲ್ಯದ ಉಚಿತ ಹಾನರ್ ಗಿಫ್ಟ್​ಗಳನ್ನು ಪಡೆಯಬಹುದು. ಎಲ್ಲ ಸೇರಿದರೆ ಜುಲೈ 20 ರಿಂದ 23 ರಂದು 29,999* ರೂಪಾಯಿಗಳಿಗೆ ಮೊಬೈಲ್ ಲಭ್ಯವಾಗುತ್ತದೆ.

ವಿಶೇಷತೆ ಏನು?

ಹಾನರ್ 200 ಸರಣಿಯು ಟ್ರಿಪಲ್-ಕ್ಯಾಮೆರಾ ಹೊಂದಿದೆ. 50 ಎಂಪಿ ಪೋರ್ಟ್ರೇಟ್ ಮೇನ್​ ಕ್ಯಾಮೆರಾ, 50 ಎಂಪಿ ಪೋರ್ಟ್ರೇಟ್ ಟೆಲಿಫೋಟೋ ಕ್ಯಾಮೆರಾ, 12 ಎಂಪಿ ಅಲ್ಟ್ರಾ-ವೈಡ್ ಲೆನ್ಸ್ ಮತ್ತು 50 ಎಂಪಿ ಪೋರ್ಟ್ರೇಟ್ ಸೆಲ್ಫಿ ಕ್ಯಾಮೆರಾ ಇದರಲ್ಲಿದೆ.

ಇದನ್ನೂ ಓದಿ: Uttara Kannada News: ಭೂಕುಸಿತದಿಂದ ಕೊಚ್ಚಿ ಹೋದ ಟ್ಯಾಂಕರ್‌; ಗ್ರಾಮಸ್ಥರೀಗ ಗ್ಯಾಸ್ ಸ್ಫೋಟ ಅಪಾಯದಿಂದ ಪಾರು

ಎರಡೂ ಮೊಬೈಲ್​ಗಳು ಎಐ-ಚಾಲಿತ ಕಣ್ಣಿನ ಕಂಫರ್ಟ್ ಮತ್ತು ಅಮೋಲೆಡ್ ಕ್ವಾಡ್ ಕರ್ವ್ಡ್ ಡಿಸ್‌ಪ್ಲೇಗಳನ್ನು ಹೊಂದಿವೆ. ದಿ ಹಾನರ್‌ನ ಮ್ಯಾಜಿಕ್ ಎಲ್ಎಂ ಎಐನೊಂದಿಗೆ ಮ್ಯಾಜಿಕ್ಒಎಸ್ 8.0 (ಆಂಡ್ರಾಯ್ಡ್ 14) ನಲ್ಲಿ ಕಾರ್ಯನಿರ್ವಹಿಸುತ್ತವೆ. ಹಾನರ್ 200 ಪ್ರೊನಲ್ಲಿ ಸ್ನ್ಯಾಪ್‌ ಡ್ರ್ಯಾಗನ್‌ 8 ಎಸ್ ಜೆನ್​ 3 ಮತ್ತು ಹಾನರ್ 200 ನಲ್ಲಿ ಸ್ನ್ಯಾಪ್ ಡ್ರ್ಯಾಗನ್ 7 ಜೆನ್​​ 3 ಚಿಪ್​ಸೆಟ್​ ಇದೆ.

ಹಾನರ್ 200 ಸರಣಿಯು ಮಿಂಚಿನ ವೇಗದ 100W ವೈರ್ಡ್ ಹಾನರ್ ಸೂಪರ್ ಚಾರ್ಜಿಂಗ್​ ವ್ಯವಸ್ಥೆ ಹೊಂದಿದೆ. ಕೇವಲ 41 ನಿಮಿಷಗಳಲ್ಲಿ ಹಾನರ್ 200 ಪ್ರೊ ಅನ್ನು ಚಾರ್ಜ್ ಮಾಡಬಹುದು. ಪ್ರೊ ರೂಪಾಂತರವು 66W ವೈರ್‌ಲೆಸ್ ಹಾನರ್ ಸೂಪರ್ ಚಾರ್ಜ್ ಕೆಪಾಸಿಟಿ ಹೊಂದಿದೆ.

ಬಿಡುಗಡೆ ಕುರಿತು ಎಚ್‌ಟೆಕ್ ನ ಜಂಟಿ ವ್ಯವಸ್ಥಾಪಕ ನಿರ್ದೇಶಕ ಸಿಪಿ ಖಂಡೇಲ್ವಾಲ್ ಮಾತನಾಡಿ, ಹಾನರ್ 200 ಸರಣಿಯ ಬಿಡುಗಡೆಯು ಭಾರತದಲ್ಲಿ ಸ್ಮಾರ್ಟ್ ಫೋನ್ ಅನುಭವವನ್ನು ಮರುವ್ಯಾಖ್ಯಾನಿಸುವ ಕುರಿತ ಮಹತ್ವದ ಮೈಲಿಗಲ್ಲಾಗಿದೆ. .

ಇದನ್ನೂ ಓದಿ: Sbi Recruitment: ಎಸ್‌ಬಿಐನಲ್ಲಿ 1,040 ಎಸ್‌ಸಿಒ ಹುದ್ದೆಗಳಿಗೆ ಅರ್ಜಿ ಅಹ್ವಾನ

ನಮ್ಮ ಗ್ರಾಹಕರ ನಿರೀಕ್ಷೆಗಳನ್ನು ಪೂರೈಸುವುದು ಮಾತ್ರವಲ್ಲದೆ ಮೀರುವ ನವೀನ ಉತ್ಪನ್ನಗಳನ್ನು ತಲುಪಿಸಲು ನಾವು ಬದ್ಧರಾಗಿದ್ದೇವೆ ಮತ್ತು ಹಾನರ್ 200 ಸರಣಿಯು ಈ ಬದ್ಧತೆಗೆ ಉದಾಹರಣೆಯಾಗಿದೆ ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Assault Case: ಫುಡ್ ಡೆಲಿವರಿ ಬಾಯ್‌ನ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಹಲ್ಲೆ; ಸಿಸಿಟಿವಿಯಲ್ಲಿ ಸೆರೆ

Assault Case: ಬೆಂಗಳೂರಿನ ವಿನಾಯಕ ನಗರ ಲೇಔಟ್‌ನಲ್ಲಿ ಜೊಮ್ಯಾಟೊ ಡೆಲಿವರಿ ಬಾಯ್‌ ಮೇಲೆ ಹಲ್ಲೆ ನಡೆದಿದೆ. ಮೂವರು ಯುವಕರು, ಡೆಲಿವರಿ ಬಾಯ್ ಮೇಲೆ ಏಕಾಏಕಿ ಹಲ್ಲೆ ಮಾಡಿ, ಮೊಬೈಲ್ ಹಾಗೂ ಹಣ ದೋಚಿ ಎಸ್ಕೇಪ್ ಆಗಿದ್ದಾರೆ.

VISTARANEWS.COM


on

Assault Case
Koo

ಬೆಂಗಳೂರು: ಫುಡ್ ಡೆಲಿವರಿ ಮಾಡಲು ಬಂದಿದ್ದ ವೇಳೆ ಜೊಮ್ಯಾಟೊ ಡೆಲಿವರಿ ಬಾಯ್ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ (Assault Case) ನಗರದ ವಿನಾಯಕ ನಗರ ಲೇಔಟ್‌ನಲ್ಲಿ ನಡೆದಿದೆ. ಮಂಗಳವಾರ ಮಧ್ಯೆ ರಾತ್ರಿ 1 ಗಂಟೆ ವೇಳೆ ಡೆಲಿವರಿ ಬಾಯ್‌ ಮೇಲೆ ನಡೆದಿರುವ ಹಲ್ಲೆಯ ವಿಡಿಯೊ, ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ವಿನಾಯಕ ನಗರ ಲೇಔಟ್‌ನಲ್ಲಿ ಮನೆಯೊಂದರಿಂದ ಹೊರಬರುತ್ತಿದ್ದಾಗ ಡಿಯೋ ಸ್ಕೂಟರ್‌ನಲ್ಲಿ ಹೋದ ಮೂವರು ಯುವಕರು, ಡೆಲಿವರಿ ಬಾಯ್ ಮೇಲೆ ಏಕಾಏಕಿ ಹಲ್ಲೆ ಮಾಡಲು ಮುಂದಾಗಿದ್ದಾರೆ. ಯುವಕರು ಮಾರಕಾಸ್ತ್ರ ತೆಗೆಯುತ್ತಿದ್ದಂತೆ ಡೆಲಿವರಿ ಬಾಯ್ ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆತನನ್ನು ಅಟ್ಟಾಡಿಸಿಕೊಂಡು ಹೋಗಿರುವ ಯುವಕರು, ಮೊಬೈಲ್ ಹಾಗೂ ಹಣ ದೋಚಿ ಎಸ್ಕೇಪ್ ಆಗಿದ್ದಾರೆ. ಡೆಲಿವರಿ ಬಾಯ್‌ ಮೇಲೆ ನಡೆದ ದಾಳಿ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದನ್ನೂ ಓದಿ | Viral Video: ರೀಲ್ ಶೋಕಿಗಾಗಿ ನಡುರಸ್ತೆಯಲ್ಲಿ ಮಳೆಯಲ್ಲಿ ಮೈಚಳಿ ಬಿಟ್ಟು ಕುಣಿದ ಮಹಿಳೆ!

ಬಸ್‌ನಿಂದ ಆಯತಪ್ಪಿ ಕೆಳಗೆ ಬಿದ್ದು ವಿದ್ಯಾರ್ಥಿ ಸಾವು

ಉಡುಪಿ: ಬಸ್‌ನಿಂದ ಕೆಳಗೆ ಬಿದ್ದು ವಿದ್ಯಾರ್ಥಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ನಡೆದಿದೆ. ಮಾಳ ಗ್ರಾಮದ ಹುಕ್ರಟ್ಟೆಯ ಜನಿತ್ ಶೆಟ್ಟಿ (19) ಮೃತ. ಕಾರ್ಕಳದಿಂದ (Karkala News) ಬಸ್‌ನಲ್ಲಿ ಕಾಲೇಜಿಗೆ ಪ್ರಾಯಾಣಿಸುತ್ತಿದ್ದಾಗ ವಿದ್ಯಾರ್ಥಿ ಕೆಳಗೆ ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದ. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾನೆ.

ಮೃತ ಜನಿತ್ ಶೆಟ್ಟಿ ನಿಟ್ಟೆ ವಿದ್ಯಾಸಂಸ್ಥೆಯ ದ್ವಿತೀಯ ಪಿಯು ವಿದ್ಯಾರ್ಥಿಯಾಗಿದ್ದು, ಕಾರ್ಕಳದಿಂದ ಬಸ್‌ನಲ್ಲಿ ಕಾಲೇಜಿಗೆ ಪ್ರಾಯಾಣಿಸುತ್ತಿದ್ದಾಗ ಕೆಳಗೆ ಬಿದ್ದಿದ್ದ. ಈ ವೇಳೆ ಹಿಂಬದಿಯ ಚಕ್ರ ಹರಿದು ಗಂಭೀರ ಗಾಯಗೊಂಡಿದ್ದ. ತಕ್ಷಣ ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ವಿದ್ಯಾರ್ಥಿ ಜನಿತ್ ಮೃತಪಟ್ಟಿದ್ದಾರೆ. ಮೃತ ವಿದ್ಯಾರ್ಥಿ ತಾಯಿ ಮತ್ತು ತಂಗಿಯನ್ನು ಅಗಲಿದ್ದಾನೆ.

ಫೇಸ್‌ಬುಕ್ ಸುಂದರಿ ಹಿಂದೆ ಬಿದ್ದು 1.4 ಲಕ್ಷ ಕಳೆದುಕೊಂಡ ಪುರೋಹಿತ!

ಮಂಡ್ಯ: ಫೇಸ್‌ಬುಕ್ ಸುಂದರಿ ಹಿಂದೆ ಬಿದ್ದ ಪುರೋಹಿತನಿಗೆ ಪಂಗನಾಮ ಬಿದ್ದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಸುಂದರಿ ಮಾತಿಗೆ ಮರುಳಾಗಿ ಲಕ್ಷ ಲಕ್ಷ ಹಣ ಕಳೆದುಕೊಂಡ (Fraud Case) ಅರ್ಚಕ, ಇದೀಗ ನ್ಯಾಯಕ್ಕಾಗಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

ಮಂಡ್ಯದ ಪಾಂಡವಪುರದ ಪಟ್ಟಸೋಮನಹಳ್ಳಿ ಗ್ರಾಮದ ಶಿವಶೈಲ ದೇವಸ್ಥಾನದ ಅರ್ಚಕ‌ ವಿಜಯ್ ಕುಮಾರ್ ಹಣ ಕಳೆದುಕೊಂಡವರು. ಕುಟುಂಬದಿಂದ ದೂರವಾಗಿ ಅರ್ಚಕ ಒಬ್ಬರೇ ವಾಸಿಸುತ್ತಿದ್ದು, ಇವರಿಗೆ ಕೆಲ ದಿನಗಳ ಹಿಂದೆ ಫೇಸ್‌ಬುಕ್‌ನಲ್ಲಿ ಸಿರಿ ಶ್ರೇಷ ಸರಿತಾ ಎಂಬ ಸುಂದರಿ ಪರಿಚಯವಾಗಿದ್ದಾಳೆ. ಹೀಗಾಗಿ ಆಕೆ ಜತೆ ಪ್ರತಿ ದಿನ ವಿಜಯ್ ಕುಮಾರ್ ಚಾಟಿಂಗ್ ಮಾಡುತ್ತಿದ್ದರು.

ವಿಜಯ್ ಕುಮಾರ್ ಬಗ್ಗೆ ತಿಳಿದುಕೊಂಡ ಯುವತಿ, ವಸತಿ, ಆರೋಗ್ಯ ಸಮಸ್ಯೆ ಅಂತ ಹೇಳಿ ಹಂತ ಹಂತವಾಗಿ ಹಣ ಪೀಕಿದ್ದಾಳೆ. ಈ ರೀತಿ ಸುಮಾರು 1 ಲಕ್ಷದ 40 ಸಾವಿರದಷ್ಟು ಹಣವನ್ನು ಸುಂದರಿ ಪಡೆದಿದ್ದಾಳೆ. ಬಣ್ಣ ಬಣ್ಣದ ಮಾತುಗಳಿಂದ ವಿಜಯ್ ಕುಮಾರ್‌ಗೆ ಬಲೆ ಹಾಕಿದ ಸುಂದರಿ ಮಾತು ನಂಬಿ ಫೋನ್ ಪೇ ಮೂಲಕ ವಿಜಯ್ ಹಣ‌ ಕಳುಹಿಸಿದ್ದರು. ಹಣ ಕೊಟ್ಟ ಬಳಿಕ ಭೇಟಿ ಆಗುವಂತೆ ಸುಂದರಿಗೆ ವಿಜಯ್ ಒತ್ತಾಯ ಮಾಡಿದ್ದಾರೆ. ಆದರೆ, ಇಂದು, ನಾಳೆ ಎಂದು ಫೇಸ್‌ಬುಕ್‌ ಬ್ಲಾಕ್ ಮಾಡಿ ಎಸ್ಕೇಪ್ ಆಗಿದ್ದಾಳೆ.

ಸುಂದರಿ ಮಾಯವಾದ ಬಳಿಕ ತಾನು ಮೋಸ ಹೋಗಿರುವ ಬಗ್ಗೆ ವಿಜಯ್ ಕುಮಾರ್‌ಗೆ ಮನವರಿಕೆಯಾಗಿದ್ದು, ಹಣ ವಾಪಸ್ ಕೊಡಿಸುವಂತೆ ಪೊಲೀಸರ ಮೊರೆ ಹೋಗಿದ್ದಾರೆ. ಮಂಡ್ಯದ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಲಾಗಿದ್ದು, ಈ ಪೊಲೀಸರು ತನಿಖೆ ನಡೆಸಲು ಮುಂದಾಗಿದ್ದಾರೆ.

Kolkata Doctor Murder Case: ಕೋಲ್ಕತಾ ವೈದ್ಯೆಯ ಅತ್ಯಾಚಾರ- ಕೊಲೆ ಎಸಗುವ ಮುನ್ನ 2 ವೇಶ್ಯಾಗೃಹಗಳಿಗೆ ಭೇಟಿ ನೀಡಿದ್ದ ಕಾಮುಕ!

ಅರ್ಚಕನಿಗೆ ಮೋಸ ಮಾಡಿರುವ ಯುವತಿಯ ಫೇಸ್‌ಬುಕ್‌ ಪ್ರೊಫೈಲ್‌ನಲ್ಲಿ ತೆಲಂಗಾಣದ ಸೋಶಿಯಲ್‌ ಮೀಡಿಯಾ ಸ್ಟಾರ್‌ ಬರ‍್ರೆಲಕ್ಕ ಕರ್ನೆ ಶಿರೀಷಾ ಅವರ ಫೋಟೊ ಇದೆ. ಅಲ್ಲದೇ ಆ ಖಾತೆಯಲ್ಲಿ ಇನ್ನೂ ಅನೇಕ ಯುವತಿಯರ ಫೋಟೊಗಳೂ ಇವೆ. ಹೀಗಾಗಿ ಫೇಕ್‌ ಫೇಸ್‌ಬುಕ್‌ ಖಾತೆ ಸೃಷ್ಟಿಸಿ ಅರ್ಚಕನಿಗೆ ಮೋಸ ಮಾಡಿದವರ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Continue Reading

ಪ್ರಮುಖ ಸುದ್ದಿ

Thawar Chand Gehlot: ರಾಜ್ಯಪಾಲರಿಗೆ ಬಂತು ಬುಲೆಟ್‌ಪ್ರೂಫ್‌ ಕಾರು! ಥಟ್‌ ಅಂತ ಯಾಕೀ ಬದಲಾವಣೆ?

Thawar Chand Gehlot: ಮಂಗಳೂರಿನ ಕಾಂಗ್ರೆಸ್‌ ಮುಖಂಡ ಐವನ್‌ ಡಿಸೋಜಾ, ಬಾಂಗ್ಲಾದೇಶದ ಪ್ರಧಾನಿಗೆ ಆದ ಸ್ಥಿತಿಯೇ ರಾಜ್ಯಪಾಲರಿಗೂ ಆಗಲಿದೆ ಎಂದು ಹೇಳಿದ್ದರು. ರಾಜಭವನಕ್ಕೆ ನುಗ್ಗಲೂ ಕಾಂಗ್ರೆಸ್‌ ಕಾರ್ಯಕರ್ತರು ಯತ್ನಿಸಿದ್ದರು.

VISTARANEWS.COM


on

thawar chand gehlot car
Koo

ಬೆಂಗಳೂರು: ಕರ್ನಾಟಕ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot) ಅವರ ವಾಹನದಲ್ಲಿ ಗುಪ್ತಚರ ಇಲಾಖೆಯ ಸಲಹೆ ಮೇರೆಗೆ ಬದಲಾವಣೆ ಮಾಡಲಾಗಿದೆ. ಇದುವರೆಗೆ ಸಾಮಾನ್ಯ ಕಾರು ಬಳಸುತ್ತಿದ್ದ ರಾಜ್ಯಪಾಲರು (Karnataka Governor) ಇನ್ನು ಮುಂದೆ ಬುಲೆಟ್‌ ಪ್ರೂಫ್‌ ಕಾರು (Bullet proof Car) ಬಳಸಲಿದ್ದಾರೆ.

ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ವಿರುದ್ಧ ಪ್ರಾಸಿಕ್ಯೂಷನ್​ಗೆ (prosecution) ಅನುಮತಿ ನೀಡಿದ ಬಳಿಕ ರಾಜ್ಯದ ಎಲ್ಲೆಡೆ ಕಾಂಗ್ರೆಸ್‌ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ರಾಜಭವನಕ್ಕೆ ನುಗ್ಗಲೂ ಕಾಂಗ್ರೆಸ್‌ ಕಾರ್ಯಕರ್ತರು ಯತ್ನಿಸಿದ್ದರು. ಅವರನ್ನು ಪೊಲೀಸರು ಬಂಧಿಸಿದ್ದರು. ಇನ್ನು, ರಾಜ್ಯದ ಹಲವೆಡೆ ಗವರ್ನರ್‌ಗೆ ʼಗೋ ಬ್ಯಾಕ್‌ʼ ಪ್ರತಿಭಟನೆ ನಡೆಸಲಾಗಿತ್ತು. ಜೊತೆಗೆ, ರಾಜ್ಯಪಾಲರ ಫೋಟೋಗೆ ಚಪ್ಪಲಿ ಹಾರ ಹಾಕಲಾಗಿತ್ತು. ಕೆಲವು ಕಾಂಗ್ರೆಸ್ ನಾಯಕರಂತೂ ಎಲ್ಲೆ ಮೀರಿದ ಹೇಳಿಕೆಗಳನ್ನು ನೀಡಿದ್ದರು.

ಮಂಗಳೂರಿನ ಕಾಂಗ್ರೆಸ್‌ ಮುಖಂಡ ಐವನ್‌ ಡಿಸೋಜಾ, ಬಾಂಗ್ಲಾದೇಶದ ಪ್ರಧಾನಿಗೆ ಆದ ಸ್ಥಿತಿಯೇ ರಾಜ್ಯಪಾಲರಿಗೂ ಆಗಲಿದೆ ಎಂದು ಹೇಳಿದ್ದರು. ಈ ಕುರಿತು ಅವರ ಮೇಲೆ ಕೇಸು ದಾಖಲಿಸಲಾಗಿದೆ. ಈ ಎಲ್ಲದರ ಹಿನ್ನೆಲೆಯಲ್ಲಿ, ಎಚ್ಚರಿಕೆ ವಗಹಿಸುವಂತೆ ಗುಪ್ತಚರ ಇಲಾಖೆಯು ರಾಜ್ಯಪಾಲರಿಗೆ ಸೂಚನೆ ನೀಡಿದೆ. ಹೀಗಾಗಿ, ಪ್ರವಾಸದಿಂದ ಬೆಂಗಳೂರಿಗೆ (Bengaluru) ವಾಪಸ್ ಆಗಿರುವ ಗೆಹ್ಲೋಟ್​ ಅವರು ಎಚ್ಚರಿಕೆ ಹೆಜ್ಜೆಯನ್ನಿಟ್ಟಿದ್ದಾರೆ. ನಿನ್ನೆ ಇಂದೋರ್‌ನಿಂ ವಾಪಸ್ ಆಗಿರುವ ರಾಜ್ಯಪಾಲರಿಗೆ ರಾಜ್ಯದ ಗುಪ್ತಚರ ಇಲಾಖೆಯಿಂದ ಬಿಪಿ ಕಾರು ನೀಡಲಾಗಿದೆ.

ರಾಜ್ಯಪಾಲರಾಗಿ ಗೆಹ್ಲೋಟ್ ಅವರು ರಾಜ್ಯಕ್ಕೆ ಆಗಮಿಸಿದ ಬಳಿಕ ಅವರು ಬುಲೆಟ್ ಪ್ರೂಫ್ ಇರುವ ಕಾರನ್ನು ಪಡೆದುಕೊಳ್ಳದೆ ಸಾಮಾನ್ಯ ಇನ್ನೋವಾ ಕಾರನ್ನೇ ಬಳಕೆ ಮಾಡಿದ್ದರು. ಕಳೆದ ಬಾರಿ ರಾಜ್ಯಪಾಲರು ಬುಲೆಟ್ ಪ್ರೂಫ್ ಕಾರು ಬಳಸುತ್ತಿದ್ದರು. ಆದರೆ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ಬೆನ್ನಲ್ಲೇ ಬುಲೆಟ್ ಪ್ರೂಫ್ ಕಾರು ಪಡೆದಕೊಂಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.

ಜೊತೆಗೆ, ಆಗಸ್ಟ್ 29ನೇ ತಾರೀಖಿನವರೆಗೆ ರಾಜ್ಯದಲ್ಲಿನ ಎಲ್ಲಾ ಕಾರ್ಯಕ್ರಮಗಳನ್ನು ರಾಜ್ಯಪಾಲರು ಕ್ಯಾನ್ಸಲ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇದರ ನಡುವೆಯೇ ರಾಜ್ಯಪಾಲರು ಹೈಕೋರ್ಟ್ ಆದೇಶಕ್ಕಾಗಿ ಕಾಯುತ್ತಿದ್ದಾರೆ. ಈ ಹಿನ್ನೆಲೆಯಲ್ಲೇ ನೃಪತುಂಗ ವಿವಿ ಮೊದಲ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮಕ್ಕೆ ಕೂಡ ಗೈರಾಗಿದ್ದಾರೆ. ಸಾರ್ವಜನಿಕ ಕಾರ್ಯಕ್ರಮಗಳಿಂದ ರಾಜ್ಯಪಾಲರು ದೂರ ಉಳಿದಿದ್ದಾರೆ. ಜೊತೆಗೆ ರಾಜ್ಯಪಾಲರ ವಿರುದ್ಧ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಲು ಕರೆ ಕೊಟ್ಟಿವೆ.

ವಿಶ್ವವಿದ್ಯಾಲಯಗಳ ವಾರ್ಷಿಕ ಘಟಿಕೋತ್ಸವಗಳಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಬೇಕಿತ್ತು. ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಘಟಿಕೋತ್ಸವ ಆಯೋಜನೆ ಮಾಡಲಾಗಿದ್ದು, 2020-21 ರಿಂದ 2022-2023 ನೇ ಸಾಲಿನ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತದೆ. ಇದರಲ್ಲಿ 792 ವಿದ್ಯಾರ್ಥಿಗಳಿಗೆ ಪದವಿ, 16 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ ಮಾಡಬೇಕಿತ್ತು. ಆದರೆ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ನೃಪತುಂಗ ವಿವಿಯ ಮೊದಲ ಘಟಿಕೋತ್ಸವ ನಡೆದಿದೆ. ಈಗಾಗಲೇ ರಾಜ್ಯಪಾಲರ ವಿರುದ್ಧ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಲು ಕರೆ ಕೊಟ್ಟಿವೆ.

ನೃಪತುಂಗ ವಿವಿಯ ಮೊದಲ ಘಟಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ವಿವಿ ಕುಲಪತಿ ಪ್ರೊ. ಶ್ರೀನಿವಾಸ್ ಎಸ್.ಬಳ್ಳಿ , ಸಿಂಡಿಕೇಟ್ ಸದಸ್ಯರು ಭಾಗಿಯಾಗಿದ್ದರು. ಇಸ್ರೋ ವಿಜ್ಞಾನಿ ನಂದಿನಿ ಹರಿನಾಥ, ಸ್ವಾಮಿ ವಿವೇಕಾನಂದ ಯೂಥ್ ಮೂವ್‌ಮೆಂಟ್‌ನ ಡಾ.ರಾಮಸ್ವಾಮಿ ಬಾಲ ಸುಬ್ರಮಣಿಯನ್, ಇನ್ಫೋಸಿಸ್‌ನ ದಿನೇಶ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದೆ.

ಇದನ್ನೂ ಓದಿ: HD Kumaraswamy: ನನ್ನ ಬಂಧಿಸಲು ನೂರು ಸಿದ್ದರಾಮಯ್ಯ ಬರಬೇಕು ಎಂದ ಎಚ್‌ಡಿಕೆ

Continue Reading

ಕ್ರೈಂ

Fraud Case: ʼಗಟ್ಟಿಮೇಳ ನಿಲ್ಸಿʼ ಗಂಡನನ್ನು ತರಾಟೆಗೆ ತೆಗೆದುಕೊಂಡ ಮೊದಲ ಹೆಂಡತಿ, ಮದುವೆ ಮನೆಯಲ್ಲಿ ಗಲಾಟೆ

Fraud Case: ನೋಹನ್‌ ಕಾಂತ್‌ ಎಂಬಾತ ಮದುವೆಯಾಗುತ್ತಿರುವ ಸಂದರ್ಭದಲ್ಲಿ, ಆತನ ಮೊದಲನೇ ಹೆಂಡತಿ ರಶ್ಮಿ ಹಾಗೂ ಅವರ ಅಕ್ಕ ರೋಸಿ ಎಂಬವರು ಮದುವೆ ಮನೆಗೆ ಆಗಮಿಸಿ ಗಲಾಟೆ ಎಬ್ಬಿಸಿದ್ದಾರೆ. ನೋಹನ್‌ ಕಾಂತ್‌ ತನ್ನಿಂದ ವಿಚ್ಛೇದನ ಪಡೆಯದೆ ಎರಡನೇ ಮದುವೆಯಾಗುತ್ತಿದ್ದಾನೆ ಎಂದು ರಶ್ಮಿ ಆರೋಪಿಸಿದ್ದಾರೆ.

VISTARANEWS.COM


on

fraud Case chikkaballapura
Koo

ಚಿಕ್ಕಬಳ್ಳಾಪುರ: ಗಂಡ (Husband) ಇನ್ನೊಂದು ಮದುವೆ (Marriage) ಆಗುತ್ತಿರುವ ಸಂದರ್ಭದಲ್ಲಿ ಮೊದಲನೇ ಹೆಂಡತಿ (First Wife) ಹಾಗೂ ಆಕೆಯ ಅಕ್ಕ ಮದುವೆ ಮನೆಗೆ ನುಗ್ಗಿ ಗಲಾಟೆ ಎಬ್ಬಿಸಿದ ಘಟನೆ ಚಿಕ್ಕಬಳ್ಳಾಪುರ ನಗರದ ಕ್ರೈಸ್ಟ್ ಚರ್ಚ್‌ನಲ್ಲಿ ನಡೆದಿದೆ. ವರ ಮೋಸ (fraud Case) ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ನೋಹನ್‌ ಕಾಂತ್‌ ಎಂಬಾತ ಮದುವೆಯಾಗುತ್ತಿರುವ ಸಂದರ್ಭದಲ್ಲಿ, ಆತನ ಮೊದಲನೇ ಹೆಂಡತಿ ರಶ್ಮಿ ಹಾಗೂ ಅವರ ಅಕ್ಕ ರೋಸಿ ಎಂಬವರು ಮದುವೆ ಮನೆಗೆ ಆಗಮಿಸಿ ಗಲಾಟೆ ಎಬ್ಬಿಸಿದ್ದಾರೆ. ನೋಹನ್‌ ಕಾಂತ್‌ ತನ್ನಿಂದ ವಿಚ್ಛೇದನ ಪಡೆಯದೆ ಎರಡನೇ ಮದುವೆಯಾಗುತ್ತಿದ್ದಾನೆ ಎಂದು ರಶ್ಮಿ ಆರೋಪಿಸಿದ್ದಾರೆ.

ಚಿಕ್ಕಬಳ್ಳಾಪುರ ನಗರದ ನಿವಾಸಿ ನೋಹನ್ ಕಾಂತ್ ಹಾಗೂ ಬೆಂಗಳೂರು ಮೂಲದ ನಿವಾಸಿ ರಶ್ಮಿ 2018ರಲ್ಲಿ ವಿವಾಹವಾಗಿದ್ದರು. ವಿಚ್ಛೇದದ ಪಡೆದೇ ಎರಡನೇ ಮದುವೆಯಾಗುತ್ತಿರುವುದಾಗಿ ಗಂಡ ನೋಹನ್ ಕಾಂತ್ ಸ್ಪಷ್ಟನೆ ನೀಡಿದ್ದಾನೆ. ಈ ಹಂತದಲ್ಲಿ ಮದುವೆ ಮನೆಯಲ್ಲಿ ಪರಸ್ಪರರ ನಡುವೆ ಜೋರು ವಾಗ್ವಾದ ನಡೆದಿದ್ದು, ಸಂಬಂಧಿಕರು ಪರಸ್ಪರ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದರು. ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಪೊಲೀಸರು ಭೇಟಿ ನೀಡಿ ಎರಡೂ ಕಡೆಯವರ ಮನವೊಲಿಸುವ ಕಾರ್ಯ ನಡೆಸಿದ್ದಾರೆ.

ಗಂಡ- ಹೆಂಡತಿ ನಡುವೆ ಮೂಗು ತೂರಿಸಿದವನಿಗೆ ಚಾಕು ಇರಿತ

ಬೆಂಗಳೂರು: ಗಂಡ ಹೆಂಡತಿ ನಡುವೆ ಮೂಗು ತೂರಿಸಿದವನೊಬ್ಬ ಚಾಕು ಇರಿತಕ್ಕೊಳಗಾಗಿ ಇದೀಗ ಆಸ್ಪತ್ರೆ ಸೇರಿದ್ದಾನೆ. ತಂಗಿ ಹಾಗೂ ಭಾವನ ಸಂಸಾರದ ನಡುವೆ ಬಂದ ಯುವಕನಿಗೆ ಆಕೆಯ ಅಣ್ಣನೇ ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾನೆ.

ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯ ಪಂತರಪಾಳ್ಯದಲ್ಲಿ ಘಟನೆ ನಡೆದಿದೆ. ಕಾರ್ತಿಕ್ ಚಾಕು ಇರಿತಕ್ಕೆ ಒಳಗಾಗಿರುವ ಯುವಕ. ಈತ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಆಟೋ ಓಡಿಸಿಕೊಂಡು ಇರುತ್ತಿದ್ದವನು ಮಹಿಳೆಯೊಬ್ಬಳ ಹಿಂದೆ ಬಿದ್ದಿದ್ದ. ಈಕೆಗೆ ಮದುವೆಯಾಗಿತ್ತು. ಮದುವೆಯಾಗಿರುವುದು ತಿಳಿದಿದ್ದರೂ ಮಹಿಳೆ ಜೊತೆ ಮಾತನಾಡಲು ಹಾತೊರೆಯುತ್ತಿದ್ದ.

ಬೇಡ ಬೇಡ ಅಂದರೂ ಮಹಿಳೆಯ ಹಿಂದೆ ಬಿದ್ದಿದ್ದ ಯುವಕನಿಗೆ ಮಹಿಳೆಯ ಗಂಡ ಹಾಗೂ ಅಣ್ಣ ಹಲವು ಬಾರಿ ವಾರ್ನಿಂಗ್‌ ಮಾಡಿದ್ದರು. ತಂಗಿ- ಭಾವನ ಮಧ್ಯೆ ಬರಬೇಡ ಎಂದು ಆಕೆಯ ಅಣ್ಣ ವಿನೋದ್ ಎಚ್ಚರಿಸಿದ್ದ. ಆದರೆ ಕಾರ್ತಿಕ್‌ ತನ್ನ ಚಾಳಿ ಬಿಟ್ಟಿರಲಿಲ್ಲ. ಸೋಮವಾರ ರಾತ್ರಿ ಹನ್ನೊಂದು ಗಂಟೆ ಸುಮಾರಿಗೆ ಪಂತರಪಾಳ್ಯಕ್ಕೆ ಆಕೆಯ ಮನೆ ಕಡೆಗೆ ಕಾರ್ತಿಕ್‌ ಹೋಗಿದ್ದ.

ಈ ವೇಳೆ ಮಹಿಳೆಯ ಅಣ್ಣ ವಿನೋದ್‌, ತನ್ನ ಭಾವ ಸತೀಶ್ ಹಾಗೂ ಗೆಳೆಯ ಸೂರ್ಯನ ಜೊತೆ ಬಂದು ವಿನೋದ್‌ ಅನ್ನು ಅಟಕಾಯಿಸಿಕೊಂಡು ಚಾಕುವಿನಿಂದ ಇರಿದಿದ್ದಾನೆ. ನಾಯಂಡಹಳ್ಳಿಯ ಪಂತರಪಾಳ್ಯದಲ್ಲಿ ಕಾರ್ತಿಕ್‌ನನ್ನು ಲಾಕ್ ಮಾಡಿ ತಲೆ ಮತ್ತು ಹೊಟ್ಟೆಗೆ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದಾರೆ. ಸದ್ಯ ಘಟನೆ ಸಂಬಂಧ ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ: Kolkata Doctor Murder Case: ಕೋಲ್ಕತಾ ವೈದ್ಯೆಯ ಅತ್ಯಾಚಾರ- ಕೊಲೆ ಎಸಗುವ ಮುನ್ನ 2 ವೇಶ್ಯಾಗೃಹಗಳಿಗೆ ಭೇಟಿ ನೀಡಿದ್ದ ಕಾಮುಕ!

Continue Reading

ಬೆಂಗಳೂರು

Assault Case: ಗಂಡ- ಹೆಂಡತಿ ನಡುವೆ ಮೂಗು ತೂರಿಸಿದವನಿಗೆ ಚಾಕು ಇರಿತ

Assault Case: ಬೇಡ ಬೇಡ ಅಂದರೂ ಮಹಿಳೆಯ ಹಿಂದೆ ಬಿದ್ದಿದ್ದ ಯುವಕನಿಗೆ ಮಹಿಳೆಯ ಗಂಡ ಹಾಗೂ ಅಣ್ಣ ಹಲವು ಬಾರಿ ವಾರ್ನಿಂಗ್‌ ಮಾಡಿದ್ದರು. ತಂಗಿ- ಭಾವನ ಮಧ್ಯೆ ಬರಬೇಡ ಎಂದು ಆಕೆಯ ಅಣ್ಣ ವಿನೋದ್ ಎಚ್ಚರಿಸಿದ್ದ. ಆದರೆ ಕಾರ್ತಿಕ್‌ ತನ್ನ ಚಾಳಿ ಬಿಟ್ಟಿರಲಿಲ್ಲ.

VISTARANEWS.COM


on

stabbing assault case
Koo

ಬೆಂಗಳೂರು: ಗಂಡ ಹೆಂಡತಿ (Wife – Husband) ನಡುವೆ ಮೂಗು ತೂರಿಸಿದವನೊಬ್ಬ ಚಾಕು ಇರಿತಕ್ಕೊಳಗಾಗಿ (Assault Case) ಇದೀಗ ಆಸ್ಪತ್ರೆ ಸೇರಿದ್ದಾನೆ. ತಂಗಿ ಹಾಗೂ ಭಾವನ ಸಂಸಾರದ ನಡುವೆ ಬಂದ ಯುವಕನಿಗೆ ಆಕೆಯ ಅಣ್ಣನೇ ಚಾಕುವಿನಿಂದ ಇರಿದು (Stabbing) ಗಾಯಗೊಳಿಸಿದ್ದಾನೆ.

ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯ ಪಂತರಪಾಳ್ಯದಲ್ಲಿ ಘಟನೆ ನಡೆದಿದೆ. ಕಾರ್ತಿಕ್ ಚಾಕು ಇರಿತಕ್ಕೆ ಒಳಗಾಗಿರುವ ಯುವಕ. ಈತ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಆಟೋ ಓಡಿಸಿಕೊಂಡು ಇರುತ್ತಿದ್ದವನು ಮಹಿಳೆಯೊಬ್ಬಳ ಹಿಂದೆ ಬಿದ್ದಿದ್ದ. ಈಕೆಗೆ ಮದುವೆಯಾಗಿತ್ತು. ಮದುವೆಯಾಗಿರುವುದು ತಿಳಿದಿದ್ದರೂ ಮಹಿಳೆ ಜೊತೆ ಮಾತನಾಡಲು ಹಾತೊರೆಯುತ್ತಿದ್ದ.

ಬೇಡ ಬೇಡ ಅಂದರೂ ಮಹಿಳೆಯ ಹಿಂದೆ ಬಿದ್ದಿದ್ದ ಯುವಕನಿಗೆ ಮಹಿಳೆಯ ಗಂಡ ಹಾಗೂ ಅಣ್ಣ ಹಲವು ಬಾರಿ ವಾರ್ನಿಂಗ್‌ ಮಾಡಿದ್ದರು. ತಂಗಿ- ಭಾವನ ಮಧ್ಯೆ ಬರಬೇಡ ಎಂದು ಆಕೆಯ ಅಣ್ಣ ವಿನೋದ್ ಎಚ್ಚರಿಸಿದ್ದ. ಆದರೆ ಕಾರ್ತಿಕ್‌ ತನ್ನ ಚಾಳಿ ಬಿಟ್ಟಿರಲಿಲ್ಲ. ಸೋಮವಾರ ರಾತ್ರಿ ಹನ್ನೊಂದು ಗಂಟೆ ಸುಮಾರಿಗೆ ಪಂತರಪಾಳ್ಯಕ್ಕೆ ಆಕೆಯ ಮನೆ ಕಡೆಗೆ ಕಾರ್ತಿಕ್‌ ಹೋಗಿದ್ದ.

ಈ ವೇಳೆ ಮಹಿಳೆಯ ಅಣ್ಣ ವಿನೋದ್‌, ತನ್ನ ಭಾವ ಸತೀಶ್ ಹಾಗೂ ಗೆಳೆಯ ಸೂರ್ಯನ ಜೊತೆ ಬಂದು ವಿನೋದ್‌ ಅನ್ನು ಅಟಕಾಯಿಸಿಕೊಂಡು ಚಾಕುವಿನಿಂದ ಇರಿದಿದ್ದಾನೆ. ನಾಯಂಡಹಳ್ಳಿಯ ಪಂತರಪಾಳ್ಯದಲ್ಲಿ ಕಾರ್ತಿಕ್‌ನನ್ನು ಲಾಕ್ ಮಾಡಿ ತಲೆ ಮತ್ತು ಹೊಟ್ಟೆಗೆ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದಾರೆ. ಸದ್ಯ ಘಟನೆ ಸಂಬಂಧ ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಪತ್ನಿಯ ಅನುಮಾನಾಸ್ಪದ ಸಾವು; ಜನರ ಆಕ್ರೋಶಕ್ಕೆ ಹೆದರಿ ಗಂಡ ಕೂಡ ಆತ್ಮಹತ್ಯೆ

ಮಂಡ್ಯ: ಗಂಡನ ಮನೆಯಲ್ಲಿ ಗೃಹಿಣಿಯೊಬ್ಬಳ ಶವ ನೇಣು (Woman Self Harming) ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಇದಾದ ಕೆಲವೇ ಗಂಟೆಗಳಲ್ಲಿ ಗಂಡನ ಶವ ಕೂಡ (Couple Death) ಕೆರೆಯಲ್ಲಿ ಪತ್ತೆಯಾಗಿದೆ. ಗಂಡನ ಮನೆಯ ಉಳಿದವರು ನಾಪತ್ತೆಯಾಗಿದ್ದು, ಗೃಹಿಣಿ ಸಾವಿನಿಂದ ಜನರಲ್ಲಿ ಹುಟ್ಟಿಕೊಂಡಿರುವ ಆಕ್ರೋಶದ ಪರಿಣಾಮ ಅಂಜಿ ತಲೆ ಮರೆಸಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಕೆ‌.ಆರ್.ಪೇಟೆ ತಾಲೂಕಿನ ಮಂದಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಸ್ವಾತಿ (21) ಅನುಮಾನಾಸ್ಪದವಾಗಿ ಮೃತಪಟ್ಟಿರುವ ಗೃಹಿಣಿ. ಮೋಹನ್ (26) ಆತ್ಮಹತ್ಯೆ ಮಾಡಿಕೊಂಡಿರುವ ಪತಿ. ಪತ್ನಿಯ ಸಾವಿಗೆ ಹೆದರಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಸ್ವಾತಿ ಸಾವು ಆತ್ಮಹತ್ಯೆಯೋ ಕೊಲೆಯೋ ಎಂಬುದು ಖಚಿತವಾಗಿಲ್ಲ. ಇದು ಗಂಡನ ಮನೆಯವರಿಂದ ಆಗಿರುವ ಕೊಲೆ (Murder) ಎಂದು ಸ್ವಾತಿ ಪೋಷಕರು ಆರೋಪಿಸಿದ್ದಾರೆ.

ನೆನ್ನೆ ರಾತ್ರಿ ಮೋಹನ್ ಮನೆಯಲ್ಲಿ ಪತ್ನಿ ಸ್ವಾತಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಘಟನೆ ಬಳಿಕ ಗಂಡ ಮೋಹನ್ ಹಾಗು ಆತನ ಪೋಷಕರು ಮನೆಯಿಂದ ನಾಪತ್ತೆಯಾಗಿದ್ದರು. ಮೃತ ಯುವತಿಯ ಪೋಷಕರು ಗಂಡ ಹಾಗು ಆತನ ಮನೆಯವರ ವಿರುದ್ಧ ಕೊಲೆ ಆರೋಪ ಮಾಡಿದ್ದು, ರಾತ್ರಿ ಯುವತಿಯ ಸಂಬಂಧಿಕರು ಗಂಡನ ಮನೆಗೆ ನುಗ್ಗಿ ಬೆಂಕಿ ಹಚ್ಚಿ ದಾಂಧಲೆ ಎಸಗಿದ್ದರು.

ಇಂದು ಬೆಳಿಗ್ಗೆ ಕೆರೆಯಲ್ಲಿ ಗಂಡ ಮೋಹನ್ ಶವ ಪತ್ತೆಯಾಗಿದೆ. ಸ್ಥಳಕ್ಕೆ ಕಿಕ್ಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ದಂಪತಿಗೆ ಒಂದುವರೆ ವರ್ಷದ ಹೆಣ್ಣು ಮಗುವಿದ್ದು, ದಂಪತಿಯ ಸಾವಿನಿಂದ ಅದು ಅನಾಥವಾಗಿದೆ.

ಇದನ್ನೂ ಓದಿ: Assault Case : ಬೆಂಗಳೂರಿನಲ್ಲಿ ನಿಲ್ಲದ ರೋಡ್‌ ರೇಜ್‌ ಕಿರಿಕ್‌; ಕಾರಿನ ಮೇಲೆ ಕಲ್ಲು ಎತ್ತಿಹಾಕಿ ಪುಂಡಾಟ

Continue Reading
Advertisement
Jagan Mohan Reddy
ದೇಶ5 hours ago

Jagan Mohan Reddy: ಬರೀ ಎಗ್‌ ಪಫ್ಸ್‌ಗಾಗಿ ಒಂದಲ್ಲ.. ಎರಡಲ್ಲ ಬರೋಬ್ಬರಿ 3.6 ಕೋಟಿ ರೂ. ವೆಚ್ಚ- ಜಗನ್‌ ಮತ್ತೊಂದು ಹಗರಣ ಬಯಲು

Census
ದೇಶ5 hours ago

Census: ಮುಂದಿನ ತಿಂಗಳಿಂದ ಜನಗಣತಿ ಆರಂಭ ಸಾಧ್ಯತೆ; ಮೋದಿ ಸರ್ಕಾರದಿಂದ ಮಹತ್ವದ ನಿರ್ಧಾರ

Air store Released
ದೇಶ6 hours ago

Air store released: ಪೋಖ್ರಾನ್‌ ಬಳಿ ತಪ್ಪಿದ ಭಾರೀ ಅವಘಡ; ಏಕಾಏಕಿ ಏರ್‌ಸ್ಟೋರ್‌ ರಿಲೀಸ್‌ ಮಾಡಿದ ಯುದ್ಧ ವಿಮಾನ

Indian hockey team
ಕ್ರೀಡೆ6 hours ago

Indian hockey team: ಭುವನೇಶ್ವರದಲ್ಲಿ ಭಾರತೀಯ ಹಾಕಿ ತಂಡದಿಂದ ರೋಡ್ ಶೋ

Fetus In Baby
ವಿಜ್ಞಾನ7 hours ago

Fetus In Baby: ಏಳು ತಿಂಗಳ ಮಗುವಿನ ಹೊಟ್ಟೆಯಲ್ಲಿ ಭ್ರೂಣ ಪತ್ತೆ!

CEAT Cricket Awards
ಕ್ರೀಡೆ7 hours ago

CEAT Cricket Awards: ವರ್ಷದ ಅತ್ಯುತ್ತಮ ಏಕದಿನ ಬ್ಯಾಟರ್​ ಪ್ರಶಸ್ತಿ ಗೆದ್ದ ವಿರಾಟ್​ ಕೊಹ್ಲಿ

Pharma Company Blast
ದೇಶ7 hours ago

Pharma Company Blast: ಫಾರ್ಮಾ ಕಂಪನಿಯಲ್ಲಿ ಭಾರೀ ಬ್ಲಾಸ್ಟ್‌- 17ಮಂದಿ ಬಲಿ; ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಭೀತಿ

Starbucks CEO
ವಿದೇಶ7 hours ago

Starbucks CEO: ಸಿಕ್ರೆ ಇಂಥಾ ಕೆಲ್ಸ ಸಿಗ್ಬೇಕಪ್ಪಾ! 1600 ಕಿ.ಮೀ ದೂರ ಆಫೀಸ್‌..ದಿನಾ ಓಡಾಡೋಕೆ ಕಂಪನಿ ಜೆಟ್‌! ಈತ ಪುಣ್ಯವಂತನೇ ಸರಿ

Viral News
ಕ್ರಿಕೆಟ್8 hours ago

Viral News: ಸಿದ್ಧಿ ವಿನಾಯಕನ ಸನ್ನಿಧಿಯಲ್ಲಿ ಟಿ20 ವಿಶ್ವಕಪ್​ ಟ್ರೋಫಿಗೆ ಪೂಜೆ ಸಲ್ಲಿಸಿದ ರೋಹಿತ್​ ಶರ್ಮ, ಜಯ್​ ಶಾ

ಕರ್ನಾಟಕ8 hours ago

Almatti Dam: ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌