Women's Asia Cup 2024 : ಪಾಕಿಸ್ತಾನ ವಿರುದ್ಧ ಭರ್ಜರಿ 7 ವಿಕೆಟ್​ ವಿಜಯ ಸಾಧಿಸಿದ ಭಾರತದ ಮಹಿಳೆಯರು - Vistara News

ಪ್ರಮುಖ ಸುದ್ದಿ

Women’s Asia Cup 2024 : ಪಾಕಿಸ್ತಾನ ವಿರುದ್ಧ ಭರ್ಜರಿ 7 ವಿಕೆಟ್​ ವಿಜಯ ಸಾಧಿಸಿದ ಭಾರತದ ಮಹಿಳೆಯರು

Women’s Asia Cup 2024 ಡಂಬಲಾದ ರಣಗಿರಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಪಾಕಿಸ್ತಾನ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆದರೆ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಳ್ಳಲು ಸಾದ್ಯವಾಗದೇ 19. 2 ಓವರ್​ಗಳಲ್ಲಿ 108 ರನ್​ಗಳಿಗೆ ಆಲ್​ಔಟ್ ಆಯಿತು. ಪ್ರತಿಯಾಗಿ ಆಡಿದ ಭಾರತ14.1 ಓವರ್​ಗಳಲ್ಲಿ3 ವಿಕೆಟ್​ಗೆ 109 ರನ್ ಬಾರಿಸಿ ಸುಲಭ ಜಯ ದಾಖಲಿಸಿತು.

VISTARANEWS.COM


on

Women's Asia Cup 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಲೊಂಬೊ: ಮಹಿಳೆಯರ ಏಷ್ಯಾ ಕಪ್​ ಟೂರ್ನಿಯ ಬಲಿಷ್ಠ ತಂಡವಾಗಿರುವ ಭಾರತ ತಂಡ, ಏಷ್ಯಾ ಕಪ್​ 2024ರ (Women’s Asia Cup 2024) ತನ್ನ ಮೊದಲ ಪಂದ್ಯದಲ್ಲಿ ಸಾಂಪ್ರದಾಯಿಕ ಪ್ರತಿಸ್ಪರ್ಧಿ ಪಾಕಿಸ್ತಾನವನ್ನು ನಿರಾಯಸವಾಗಿ ಸೋಲಿಸಿದೆ. ಈ ಮೂಲಕ ಹಾಲಿ ಚಾಂಪಿಯನ್ ಹರ್ಮನ್​ಪ್ರೀತ್​ ಕೌರ್ ನೇತೃತ್ವದ ಬಳಗ ತನ್ನ ವಿಜಯದ ಅಭಿಯಾನವನ್ನು ಆರಂಭಿಸಿದೆ. ಭಾರತ ತಂಡದ ಮಹಿಳೆಯರ ಆಟದ ಮುಂದೆ ಪಾಕಿಸ್ತಾನದ ವನಿತೆಯರು ಬಹುತೇಕ ಮಂಕಾದರು. ಗೆಲುವಿನ ನಿರೀಕ್ಷೆಯನ್ನು ಮಾಡಲೂ ನೆರೆಯ ರಾಷ್ಟ್ರದ ಆಟಗಾರರಿಗೆ ಅವಕಾಶ ಕೊಡಲಿಲ್ಲ.

ಡಂಬಲಾದ ರಣಗಿರಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಪಾಕಿಸ್ತಾನ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆದರೆ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಳ್ಳಲು ಸಾದ್ಯವಾಗದೇ 19. 2 ಓವರ್​ಗಳಲ್ಲಿ 108 ರನ್​ಗಳಿಗೆ ಆಲ್​ಔಟ್ ಆಯಿತು. ಪ್ರತಿಯಾಗಿ ಆಡಿದ ಭಾರತ14.1 ಓವರ್​ಗಳಲ್ಲಿ 3 ವಿಕೆಟ್​ಗೆ 109 ರನ್ ಬಾರಿಸಿ ಸುಲಭ ಜಯ ದಾಖಲಿಸಿತು.

ಸಾಧಾರಣ ಗುರಿಯನ್ನು ಬೆನ್ನಟ್ಟಿದ ಭಾರತ ತಂಡ ಅತ್ಯುತ್ತಮವಾಗಿ ಬ್ಯಾಟಿಮಗ್ ಮಾಡಿತು. ಮೊದಲ ವಿಕೆಟ್​ಗೆ ಶೆಫಾಲಿ ವರ್ಮ(40 ರನ್​), ಸ್ಮೃತಿ ಮಂಧಾನಾ (45 ರನ್​) 85 ರನ್ ಬಾರಿಸಿದರು. ಹೀಗಾಗಿ ಭಾರತಕ್ಕೆ ಗೆಲುವಿನ ಅವಕಾಶ ಸೃಷ್ಟಿಯಾಯಿತು. ಇಬ್ಬರೂ ಬ್ಯಾಟರ್​ಗಳು ಪಾಕ್ ಬೌಲರ್​ಗಳನ್ನು ಮುಲಾಜಿಲ್ಲದೆ ದಂಡಿಸಿದರು. ಶಫಾಲಿ 29 ಎಸೆತಕ್ಕೆ 6 ಫೋರ್​, 1 ಸಿಕ್ಸರ್ ಸಮೇತ 40 ರನ್ ಬಾರಿಸಿದರೆ, ಸ್ಮೃತಿ ಮಂಧಾನಾ 31 ಎಸೆತಕ್ಕೆ 9 ಫೋರ್ ಹೊಡೆದರು. ಆದರೆ, ಸ್ಮೃತಿ ಮಂಧಾನಾ ಅರ್ಧ ಶತಕದ ಹಾದಿಯಲ್ಲ ಮುಗ್ಗಿರಿಸಿದರು. ಬಳಿಕ ಬಂದ ದಯಾಳನ್​ ಹೇಮಲತಾ 11 ಎಸೆತಕ್ಕೆ 14 ರನ್ ಬಾರಿಸಿ ಔಟಾದರು. ನಂತರ ಶಫಾಲಿ ಔಟಾದರು. ನಾಯಕಿ ಹರ್ಮನ್ ಪ್ರೀತ್ ಕೌರ್​ 5 ರನ್ ಹಾಗೂ ಜೆಮಿಮಾ ರೋಡ್ರಿಗಸ್​ 3 ರನ್ ಬಾರಿಸಿ ಗೆಲವು ತಂದುಕೊಟ್ಟರು.

ಭಾರತದ ಬೌಲಿಂಗ್​ಗೆ ನಲುಗಿದ ಪಾಕ್​

ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ ಭಾರತದ ಬೌಲಿಂಗ್ ದಾಳಿಗೆ ಮುಗ್ಗರಿಸಿತು. ಗುಲ್ ಫೆರೋಜಾ 5 ರನ್​ಗೆ ಔಟಾದರೆ ಮುನೀಬಾ 11 ರನ್​ಗೆ ವಿಕೆಟ್ ಒಪ್ಪಿಸಿದರು. ಮೂರನೇ ಕ್ರಮಾಂಕದಲ್ಲಿ ಬಂದ ಸಿದ್ರಾ ಅಮಿನ್ 25 ರನ್ ಬಾರಿಸಿ ತಂಡದ ಗರಿಷ್ಠ ಸ್ಕೋರರ್​ ಎನಿಸಿಕೊಂಡರು. ಆದರೆ, ಅಲಿಯಾ ರಿಯಾಜ್​ 6 ರನ್ ಹಾಗೂ ನಾದಿಯಾ ದರ್​ ರನ್​ ಬಾರಿಸಿ ಔಟಾಗುವುದರೊಂದಿಗೆ ಭಾರತದ ಮೇಲುಗೈ ಆರಂಭವಾಯಿತು. ತೌಬಾ ಹಸನ್ 22 ರನ್ ಬಾರಿಸಿ ಸ್ವಲ್ಪ ಹೊತ್ತು ಆಡಿದರು. ಕೊನೆಯಲ್ಲಿ ಫಾತಿಮಾ ಸನಾ ಕೂಡ 22 ಕೂಡ ರನ್​ ಬಾರಿಸುವ ಮೂಲಕ ತಂಡದ ಮೊತ್ತ 100 ರ ಗಡಿ ದಾಟುವಂತೆ ನೋಡಿಕೊಂಡರು.

ಇದನ್ನೂ ಓದಿ: Women’s Asia Cup 2024 : ಏಷ್ಯಾ ಕಪ್​ನ ಮೊದಲ ಪಂದ್ಯದಲ್ಲೇ ಗೆದ್ದು ಇತಿಹಾಸ ಸೃಷ್ಟಿಸಿದ ನೇಪಾಳ ಮಹಿಳಾ ತಂಡ

ಭಾರತ ಪರ ದೀಪ್ತಿ ಶರ್ಮಾ 20 ರನ್ ವೆಚ್ಚದಲ್ಲಿ 3 ವಿಕೆಟ್ ಉರುಳಿಸಿದರೆ, ರೇಣುಕಾ ಸಿಂಗ್, ಪೂಜಾ ವಸ್ತ್ರಾಕರ್​ ಹಾಗೂ ಕನ್ನಡತಿ ಶ್ರೇಯಾಂಕಾ ಪಾಟೀಲ್ ತಲಾ 2 ವಿಕೆಟ್ ಉರುಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Ben Stokes : ದೊಡ್ಡ ಮೊತ್ತ ಪಡೆದು ಮುಂಬೈ ತಂಡ ಸೇರಲಿದ್ದಾರೆ ಬೆನ್ ಸ್ಟೋಕ್ಸ್​​

Ben Stokes: ದಿ ಟೆಲಿಗ್ರಾಫ್ ವರದಿಯ ಪ್ರಕಾರ, ಬೆನ್ ಸ್ಟೋಕ್ಸ್ ಎಸ್ಎ 20 ನ ಮೂರನೇ ಆವೃತ್ತಿಯಲ್ಲಿ ಕೇಪ್ ಟೌನ್ ಮೂಲದ ಫ್ರಾಂಚೈಸಿಗಾಗಿ ಆಡುವುದನ್ನು ಕಾಣಬಹುದು. ಮುಂದಿನ ಜನವರಿಯಲ್ಲಿ ನಡೆಯಲಿರುವ ಸ್ಪರ್ಧೆಯಲ್ಲಿ ಆಡಲು ಇಂಗ್ಲೆಂಡ್ ಟೆಸ್ಟ್ ನಾಯಕನಿಗೆ 800,000 ಪೌಂಡ್ (ಅಂದಾಜು 8.65 ಕೋಟಿ ರೂ.) ವರೆಗೆ ಆಫರ್ ನೀಡಲಾಗಿದೆ ಎಂದು ವರದಿ ತಿಳಿಸಿದೆ.

VISTARANEWS.COM


on

Ben Stokes
Koo

ಬೆಂಗಳೂರು: ದಕ್ಷಿಣ ಆಫ್ರಿಕಾದ ಪ್ರೀಮಿಯರ್ ಫ್ರ್ಯಾಂಚೈಸ್ ಲೀಗ್ ಎಸ್ಎ 20 ಯ ಮುಂದಿನ ಆವೃತ್ತಿಯಲ್ಲಿ ಇಂಗ್ಲೆಂಡ್ ಸ್ಟಾರ್ ಬೆನ್ ಸ್ಟೋಕ್ಸ್ (Ben Stokes) ಎಂಐ ಕೇಪ್ ಟೌನ್​ ತಂಡಕ್ಕೆ ಆಡಲು ಸಹಿ ಹಾಕಲು ಸಜ್ಜಾಗಿದ್ದಾರೆ ಎಂದು ವರದಿಯಾಗಿದೆ. ಎಸ್ಎ 20 ಅನ್ನು 2023 ರಲ್ಲಿ ಒಟ್ಟು ಆರು ತಂಡಗಳೊಂದಿಗೆ ಪ್ರಾರಂಭಿಸಲಾಯಿತು. ಎಲ್ಲಾ ತಂಡಗಳು ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್ ಮಾಲೀಕರ ಒಡೆತನದಲ್ಲಿವೆ. ಎಂಐ ಕೇಪ್ ಟೌನ್ ಅಂಬಾನಿ ಒಡೆತನದ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಪಾಲುದಾರ ತಂಡವಾಗಿದೆ.

ದಿ ಟೆಲಿಗ್ರಾಫ್ ವರದಿಯ ಪ್ರಕಾರ, ಬೆನ್ ಸ್ಟೋಕ್ಸ್ ಎಸ್ಎ 20 ನ ಮೂರನೇ ಆವೃತ್ತಿಯಲ್ಲಿ ಕೇಪ್ ಟೌನ್ ಮೂಲದ ಫ್ರಾಂಚೈಸಿಗಾಗಿ ಆಡುವುದನ್ನು ಕಾಣಬಹುದು. ಮುಂದಿನ ಜನವರಿಯಲ್ಲಿ ನಡೆಯಲಿರುವ ಸ್ಪರ್ಧೆಯಲ್ಲಿ ಆಡಲು ಇಂಗ್ಲೆಂಡ್ ಟೆಸ್ಟ್ ನಾಯಕನಿಗೆ 800,000 ಪೌಂಡ್ (ಅಂದಾಜು 8.65 ಕೋಟಿ ರೂ.) ವರೆಗೆ ಆಫರ್ ನೀಡಲಾಗಿದೆ ಎಂದು ವರದಿ ತಿಳಿಸಿದೆ.

ಬೆನ್ ಸ್ಟೋಕ್ಸ್ ಇತ್ತೀಚಿನ ದಿನಗಳಲ್ಲಿ ಟಿ 20 ಯಿಂದ ದೂರವಿದ್ದರೂ, ಅವರು ಇನ್ನೂ ವಿಶ್ವದ ಅತ್ಯುತ್ತಮ ಆಲ್​ರೌಂಡರ್​ಗಳಲ್ಲಿ ಒಬ್ಬರು. ಅವರು ಇತ್ತೀಚೆಗೆ ನಿಯಮಿತವಾಗಿ ಬೌಲಿಂಗ್ ಪುನರಾರಂಭಿಸಿದ್ದಾರೆ. ಇದು ಅವರನ್ನು ಇನ್ನಷ್ಟು ಮೌಲ್ಯಯುತವಾಗಿಸುತ್ತದೆ. 2022 ರಲ್ಲಿ ಟಿ 20 ವಿಶ್ವಕಪ್ ಗೆದ್ದ ಇಂಗ್ಲೆಂಡ್ ತಂಡದ ಭಾಗವಾಗಿರುವ ಅನುಭವಿ ಆಲ್​ರೌಂಡರ್​ ಐಪಿಎಲ್​​ನಲ್ಲಿ ಯಶಸ್ಸನ್ನು ಅನುಭವಿಸಿದ್ದಾರೆ. ಅಲ್ಲಿ ಅವರು 2017 ರಲ್ಲಿ ಎಂವಿಪಿ ಎಂದು ಹೆಸರಿಸಲ್ಪಟ್ಟರು.

ಭಾರತ ಸರಣಿಯಿಂದ ಬೆನ್ ಸ್ಟೋಕ್ಸ್ ಹೊರಗುಳಿಯಲಿದ್ದಾರೆ

ಒಂದು ವೇಳೆ ಬೆನ್ ಸ್ಟೋಕ್ಸ್ ಮುಂಬೈ ಇಂಡಿಯನ್ಸ್ ಕೇಪ್​ಟೌನ್​ ಸಹಿ ಹಾಕಿದರೆ, ಅವರು ಸಂಪೂರ್ಣ ಎಸ್ಎ 20 ಆಡಲು ಸಜ್ಜಾಗಿದ್ದಾರೆ ಮತ್ತು ಭಾರತ ವಿರುದ್ಧದ 5 ಪಂದ್ಯಗಳ ಟಿ 20 ಐ ಸರಣಿಯಿಂದ ಹೊರಗುಳಿಯಲಿದ್ದಾರೆ ಎಂದು ವರದಿ ತಿಳಿಸಿದೆ. ಆದಾಗ್ಯೂ, ಟೆಸ್ಟ್ ಋತುವಿನತ್ತ ಗಮನ ಹರಿಸಲು ಕಳೆದ ತಿಂಗಳು ಟಿ 20 ವಿಶ್ವಕಪ್​​ನಿಂದ ಹೊರಗುಳಿದ ನಂತರ ಇಂಗ್ಲೆಂಡ್ ಟೆಸ್ಟ್ ನಾಯಕ ಪ್ರಸ್ತುತ ಇಂಗ್ಲೆಂಡ್​ನ ಟಿ 20 ತಂಡದಲ್ಲಿ ಭಾಗಿಯಾಗಿಲ್ಲ.

ಚಾಂಪಿಯನ್ಸ್​ ಟ್ರೋಫಿಗಾಗಿ ಇಂಗ್ಲೆಂಡ್​ನ ಯೋಜನೆಗಳಲ್ಲಿ ಉಳಿದರೆ ಸ್ಟೋಕ್ಸ್ ಫೆಬ್ರವರಿಯಲ್ಲಿ ಭಾರತದ ವಿರುದ್ಧ ಏಕದಿನ ಸರಣಿಯನ್ನು ಆಡಬಹುದು. ಆ ಸಂದರ್ಭದಲ್ಲಿ, ಅವರು ಎಸ್ಎ 20 ನಲ್ಲಿ ಕೆಲವು ಪಂದ್ಯಗಳನ್ನು ಕಳೆದುಕೊಳ್ಳಬಹುದು. ಬೆನ್ ಸ್ಟೋಕ್ಸ್ ಈವರೆಗೆ 43 ಟಿ 20 ಪಂದ್ಯಗಳನ್ನು ಆಡಿದ್ದಾರೆ ಮತ್ತು 500 ಕ್ಕೂ ಹೆಚ್ಚು ರನ್ ಗಳಿಸುವುದರ ಜೊತೆಗೆ 26 ವಿಕೆಟ್​​ಗಳನ್ನು ಪಡೆದಿದ್ದಾರೆ.

ಇದನ್ನೂ ಓದಿ: Women’s Asia Cup 2024 : ಏಷ್ಯಾ ಕಪ್​ನ ಮೊದಲ ಪಂದ್ಯದಲ್ಲೇ ಗೆದ್ದು ಇತಿಹಾಸ ಸೃಷ್ಟಿಸಿದ ನೇಪಾಳ ಮಹಿಳಾ ತಂಡ

ಅವರು ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಇಂಗ್ಲೆಂಡ್ ತಂಡವನ್ನು ಮುನ್ನಡೆಸುವಲ್ಲಿ ನಿರತರಾಗಿದ್ದಾರೆ. ಮೊದಲ ಟೆಸ್ಟ್ ಪಂದ್ಯವನ್ನು ಇಂಗ್ಲೆಂಡ್ ಇನ್ನಿಂಗ್ಸ್ ಮತ್ತು 114 ರನ್​​ಗಳಿಂದ ಗೆದ್ದು ಸರಣಿಯಲ್ಲಿ ಮುನ್ನಡೆ ಸಾಧಿಸಿದೆ. ಇಂಗ್ಲೆಂಡ್ 2022 ರ ನಂತರ ತಮ್ಮ ಮೊದಲ ಟೆಸ್ಟ್ ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿದೆ ಮತ್ತು ನಡೆಯುತ್ತಿರುವ ಕಾರ್ಯಯೋಜನೆಯಲ್ಲಿ ವೆಸ್ಟ್ ಇಂಡೀಸ್ ಅನ್ನು ಸೋಲಿಸಲು ತಮ್ಮನ್ನು ಬೆಂಬಲಿಸಲಿದೆ.

Continue Reading

ಕರ್ನಾಟಕ

GT World Mall: ರೈತ ಫಕೀರಪ್ಪರನ್ನು ಮನೆಗೆ ಆಹ್ವಾನಿಸಿ ಸತ್ಕರಿಸಿದ ಜಿ.ಟಿ.ಮಾಲ್‌ ಮಾಲೀಕ

GT World Mall: ಜಿ.ಟಿ.ಮಾಲ್‌ ಮಾಲೀಕ ಎಸ್‌.ಟಿ.ಆನಂದ್‌ ಅವರು ರೈತ ಫಕೀರಪ್ಪ ಹಾಗೂ ಪುತ್ರ ನಾಗರಾಜ್‌ ಅವರನ್ನು ಶುಕ್ರವಾರ ಬೆಂಗಳೂರಿನ ನಿವಾಸಕ್ಕೆ ಕರೆಸಿಕೊಂಡು ಸನ್ಮಾನ ಮಾಡಿದ್ದಾರೆ. ಅಲ್ಲದೇ ಮಾಲ್‌ನಲ್ಲಿ ಸಿಬ್ಬಂದಿ ಮಾಡಿದ ತಪ್ಪಿಗೆ ಕ್ಷಮೆಯಾಚನೆ ಮಾಡಿದ್ದಾರೆ.

VISTARANEWS.COM


on

GT World Mall
Koo

ಬೆಂಗಳೂರು: ಹಾವೇರಿ ಮೂಲದ ರೈತ ಫಕೀರಪ್ಪ ಅವರು ಪಂಚೆ ಧರಿಸಿದ್ದ ಹಿನ್ನೆಲೆಯಲ್ಲಿ ಜಿ.ಟಿ.ಮಾಲ್‌ (GT World Mall) ಪ್ರವೇಶಕ್ಕೆ ನಿರಾಕರಿಸಿದ ಘಟನೆಗೆ ವ್ಯಾಪಕ ವಿರೋಧ ವ್ಯಕ್ತವಾದ ಬೆನ್ನಲ್ಲೇ ಆಡಳಿತ ಮಂಡಳಿ ಕ್ಷಮೆಯಾಚಿಸಿತ್ತು. ಬಳಿಕ ಬಿಬಿಎಂಪಿ ಅಧಿಕಾರಿಗಳು ಮಾಲ್‌ ಅನ್ನು ಒಂದು ವಾರದ ಕಾಲ ಬಂದ್‌ ಮಾಡಿಸಿದ್ದಾರೆ. ಇದೀಗ ಮಾಲೀಕ ಎಸ್‌.ಟಿ.ಆನಂದ್‌ ಅವರು ರೈತ ಫಕೀರಪ್ಪ ಅವರನ್ನು ಮನೆಗೆ ಆಹ್ವಾನಿಸಿ ಸನ್ಮಾನ ಮಾಡಿದ್ದು, ಸಿಬ್ಬಂದಿಯಿಂದ ನಡೆದಿದ್ದ ಅಚಾತುರ್ಯಕ್ಕೆ ಕ್ಷಮೆಯಾಚಿಸಿದ್ದಾರೆ.

ಜಿ.ಟಿ.ಮಾಲ್‌ ಮಾಲೀಕ ಎಸ್‌.ಟಿ.ಆನಂದ್‌ ಅವರು ರೈತ ಫಕೀರಪ್ಪ ಹಾಗೂ ಪುತ್ರ ನಾಗರಾಜ್‌ ಅವರನ್ನು ಶುಕ್ರವಾರ ನಗರದ ನಿವಾಸಕ್ಕೆ ಕರೆಸಿಕೊಂಡು ಸನ್ಮಾನ ಮಾಡಿದ್ದಾರೆ. ಈ ವೇಳೆ ರೈತ ಫಕೀರಪ್ಪ ಹಾಗೂ ಪುತ್ರನಿಗೆ ಉಪಾಹಾರ ನೀಡಿ ಸತ್ಕರಿಸಲಾಗಿದ್ದು, ಮಾಲೀಕ ಆನಂದ್‌ ಅವರು ಸ್ವತಃ ಕೈತುತ್ತು ತಿನ್ನಿಸಿದ್ದು ಕಂಡುಬಂದಿದೆ. ಸನ್ಮಾನ ಮಾಡುವಾಗ ಮಾಲೀಕ ಕೂಡ ಪಂಚೆ, ಬನಿಯನ್‌ ಧರಿಸಿದ್ದರು.

ಈ ವೇಳೆ ಮಾತನಾಡಿರುವ ಮಾಲೀಕ ಆನಂದ್‌ ಅವರು, ನಾವು ಕೂಡ ರೈತ ಕುಟುಂಬದವರೇ ಆಗಿದ್ದು, ಕೃಷಿಕರ ಬಗ್ಗೆ ಅಪಾರ ಗೌರವವಿದೆ. ನೀವು ನಮ್ಮ ಮನೆಗೆ ಬಂದಿರುವುದು ಸಂತಸ ತಂದಿದೆ. ನಾನು ಕೂಡ ಸರ್ಕಾರಿ ಶಾಲೆಯಲ್ಲೇ ಓದಿದ್ದು. ನಾವು ಯಾವತ್ತೂ ಯಾರನ್ನೂ ಅವಮಾನ ಮಾಡಿಲ್ಲ, ಅನಾಗರಿಕವಾಗಿ ನಡೆದುಕೊಂಡವರಲ್ಲ. ನಮ್ಮ ಸಿಬ್ಬಂದಿಯಿಂದ ತಪ್ಪಾಗಿದೆ. ದಯವಿಟ್ಟು ನೀವು ಕ್ಷಮಿಸಬೇಕು ಎಂದು ರೈತ ಫಕೀರಪ್ಪರನ್ನು ಕೋರಿದ್ದಾರೆ.

ಇದನ್ನೂ ಓದಿ | GT World Mall: ಅನ್ನದಾತರಿಗೆ ಅವಮಾನ; ತೆರಿಗೆ ಪಾವತಿಸದ್ದಕ್ಕಾಗಿ ಜಿಟಿ ಮಾಲ್‌ ಸೀಲ್ ಮಾಡಿದ ಬಿಬಿಎಂಪಿ

ಏನಿದು ಘಟನೆ?

ಬೆಂಗಳೂರಿನ ಮಾಗಡಿ ರಸ್ತೆಯ ಬಳಿ ಇರುವ ಜಿಟಿ ವರ್ಲ್ಡ್‌ ಮಾಲ್‌ಗೆ ಜುಲೈ 16ರಂದು ಪಂಚೆ ಧರಿಸಿ ತೆರಳಿದ್ದ ಹಾವೇರಿ ಮೂಲದ ರೈತ ಫಕೀರಪ್ಪ ಅವರನ್ನು ಒಳ ಹೋಗಲು ಬಿಟ್ಟಿರಲಿಲ್ಲ. ಈ ಕುರಿತು ಪ್ರಶ್ನಿಸಿದಾಗ, ʼಪಂಚೆ ಧರಿಸಿದವರನ್ನು ಒಳಗೆ ಬಿಡುವುದಿಲ್ಲ, ಈ ಬಗ್ಗೆ ನಮಗೆ ಸೂಚನೆ ಇದೆʼ ಎಂದು ಸೆಕ್ಯುರಿಟಿ ಸಿಬ್ಬಂದಿ ಮುಖ್ಯಸ್ಥರು ಹೇಳಿದ್ದಾರೆ. ಯಾಕೆ ಬಿಡುವುದಿಲ್ಲ ಎಂದು ಮರುಪ್ರಶ್ನಿಸಿದ ರೈತರ ಮಗನಿಗೆ ʼನಿಮ್ಮ ಮೇಲೆ ಕೇಸ್‌ ಹಾಕುತ್ತೇವೆʼ ಎಂದು ಸೆಕ್ಯೂರಿಟಿ ಬೆದರಿಸಿದ್ದರು. ಬಳಿಕ ಘಟನೆ ಬಗ್ಗೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರೈತ ಫಕೀರಪ್ಪಗೆ ಆಡಳಿತ ಮಂಡಳಿ ಕ್ಷಮೆಯಾಚನೆ ಮಾಡಿತ್ತು.

ಬೆಂಗಳೂರಿನ ವಿಜಯನಗರದ ನಿವಾಸಿಯಾದ ನಾಗರಾಜ್ ಎಂಬವರ ತಂದೆ ಮೂಲತಃ ರೈತರಾಗಿದ್ದಾರೆ. ಅವರು ಹಾವೇರಿಯಿಂದ ಬೆಂಗಳೂರಿನಲ್ಲಿರುವ ಮಗನ ಮನೆಗೆ ಬಂದಿದ್ದರು. ಜು. 16ರಂದು ತಮ್ಮ ವೃದ್ಧ ತಂದೆಯವರಿಗೆ ಸಿನಿಮಾ ತೋರಿಸಿ ಖುಷಿಪಡಿಸಲು ನಿರ್ಧರಿಸಿದ ನಾಗರಾಜ್, ತಂದೆಯನ್ನು ಜಿಟಿ ಮಾಲ್‌ಗೆ ಕರೆದೊಯ್ದಿದ್ದರು. ಸಾಮಾನ್ಯವಾಗಿ ಪಂಚೆ ಉಡುವ ಹವ್ಯಾಸವಿರುವ ಅವರು ಎಂದಿನಂತೆಯೇ ಪಂಚೆ ಉಟ್ಟು ಮಗನ ಜೊತೆಗೆ ಮಾಲ್‌ಗೆ ತೆರಳಿದ್ದರು. ಆದರೆ, ಮಾಲ್‌ನೊಳಗೆ ಪ್ರವೇಶಿಸಲು ಸಿಬ್ಬಂದಿ ನಿರಾಕರಿಸಿದ್ದರು. ಬಳಿಕ ಮಾಲ್‌ ವಿರುದ್ಧ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದರಿಂದ ಬಿಬಿಎಂಪಿ ಅಧಿಕಾರಿಗಳು ಮಾಲ್‌ ಅನ್ನು ಒಂದು ವಾರದ ಕಾಲ ಮುಚ್ಚಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Women’s Asia Cup 2024 : ಏಷ್ಯಾ ಕಪ್​ನ ಮೊದಲ ಪಂದ್ಯದಲ್ಲೇ ಗೆದ್ದು ಇತಿಹಾಸ ಸೃಷ್ಟಿಸಿದ ನೇಪಾಳ ಮಹಿಳಾ ತಂಡ

Women’s Asia Cup 2024 :

VISTARANEWS.COM


on

Women's Asia Cup 2024
Koo

ಕೊಲೊಂಬೊ: ನೇಪಾಳ ಮಹಿಳಾ ತಂಡವು ಶುಕ್ರವಾರ (ಜುಲೈ 19) ಮಹಿಳಾ ಏಷ್ಯಾ 2024 ರಲ್ಲಿ (Women’s Asia Cup 2024) ವಿಜಯದೊಂದಿಗೆ ತನ್ನ ಅಭಿಯಾನ ಪ್ರಾರಂಭಿಸಿದೆ. ಅದಕ್ಕಿಂತ ಮಿಗಿಲಾಗಿ ಐತಿಹಾಸಿಕ ಗೆಲುವು ದಾಖಲಿಸಿದೆ. ಹೇಗೆಮದರೆ ಏಷ್ಯಾ ಕಪ್ ಟೂರ್ನಿಗೆ ಪ್ರವೇಶ ಪಡೆದ ಒಂದು ದಶಕಕ್ಕೂ ಹೆಚ್ಚು ಸಮಯದ ನಂತರ ನೇಪಾಳವು ಸ್ಪರ್ಧೆಯಲ್ಲಿ ತಮ್ಮ ಮೊದಲ ಗೆಲುವನ್ನು ದಾಖಲಿಸಿದೆ. ಶ್ರೀಲಂಕಾದ ಡಂಬುಲ್ಲಾದಲ್ಲಿ ನಡೆದ ಪಂದ್ಯಾವಳಿಯ ಆರಂಭಿಕ ಪಂದ್ಯದಲ್ಲಿ ಯುಎಇ ವಿರುದ್ಧ ಆರು ವಿಕೆಟ್ ಗಳ ಆಕರ್ಷಕ ಗೆಲುವಿನೊಂದಿಗೆ ಅವರು ಪಂದ್ಯಾವಳಿಯಲ್ಲಿ ತಮ್ಮ ಅಭಿಯಾನವನ್ನು ಪ್ರಾರಂಭಿಸಿದರು.

ನೇಪಾಳ ಮಹಿಳಾ ತಂಡ 2012ರಲ್ಲಿ ಏಷ್ಯಾಕಪ್​​ಗೆ ಪದಾರ್ಪಣೆ ಮಾಡಿತ್ತು. ಅವರು ಆ ಆವೃತ್ತಿಯಲ್ಲಿ 3 ಪಂದ್ಯಗಳನ್ನು ಆಡಿ ಎಲ್ಲಾ ಪಂದ್ಯಗಳನ್ನು ಕಳೆದುಕೊಂಡರು. 2016ರ ಏಷ್ಯಾಕಪ್​ಗೆ ನೇಪಾಳ ಅರ್ಹತೆ ಪಡೆದರೂ ಒಂದೂ ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಅವರು 5 ಪಂದ್ಯಗಳನ್ನು ಆಡಿ ಎಲ್ಲಾ ಪಂದ್ಯಗಳನ್ನು ಸೋತರು. 2018 ಮತ್ತು 2022ರಲ್ಲಿ ನೇಪಾಳ ತಂಡ ಏಷ್ಯಾಕಪ್​ಗೆ ಅರ್ಹತೆ ಪಡೆಯಲು ವಿಫಲವಾಗಿತ್ತು. ಇದೀಗ ಐತಿಹಾಸಿಕ ಗೆಲುವಿನೊಂದಿಗೆ ಏಷ್ಯಾ ಕಪ್ ಗೆ ಮರಳಿದೆ.

ನೇಪಾಳದ ಐತಿಹಾಸಿಕ ಗೆಲುವು

ಟಾಸ್ ಗೆದ್ದು ನೇಪಾಳ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಆಯ್ದುಕೊಂಡ ಯುಎಇಯನ್ನು ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 115 ರನ್ ಗಳಿಗೆ ನಿಯಂತ್ರಿಸಿತು. ಒಂದು ಹಂತದಲ್ಲಿ ಯುಎಇ 4 ವಿಕೆಟ್ ನಷ್ಟಕ್ಕೆ 46 ರನ್ ಗಳಿಸಿತ್ತು. ಖುಷಿ ಶರ್ಮಾ (39 ಎಸೆತಗಳಲ್ಲಿ 36 ರನ್) ಮತ್ತು ಕವಿಶಾ ಎಗೊಡಗೆ (26 ಎಸೆತಗಳಲ್ಲಿ 22 ರನ್) ಕುಸಿತವನ್ನು ತಪ್ಪಿಸಿದರು.

ಇದನ್ನೂ ಓದಿ: Suryakumar Yadav : ಮುಂದಿನ ಆವೃತ್ತಿಯಲ್ಲಿ ಹಾರ್ದಿಕ್ ಪಾಂಡ್ಯಗೆ ಮುಂಬೈ ಇಂಡಿಯನ್ಸ್ ನಾಯಕತ್ವವೂ ನಷ್ಟ

ಆದಾಗ್ಯೂ ಯುಎಇ ಇನ್ನೂ ಸವಾಲಿನ ಮೊತ್ತವನ್ನು ದಾಖಲಿಸಲು ಸಾಧ್ಯವಾಗಲಿಲ್ಲ. 116 ರನ್​ಗಳ ಗುರಿ ಬೆನ್ನತ್ತಿದ ನೇಪಾಳ 17 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಆರಂಭಿಕ ಆಟಗಾರ್ತಿ ಸಂಜನಾ ಖಡ್ಕಾ ಅಜೇಯ 72 ರನ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಅವರು 48 ಎಸೆತಗಳಲ್ಲಿ 11 ಬೌಂಡರಿಗಳನ್ನು ಗಳಿಸಿದರು. ಅವರನ್ನು ಹೊರತುಪಡಿಸಿದರೆ ನೇಪಾಳದ ಯಾವುದೇ ಬ್ಯಾಟರ್​ 10ಕ್ಕಿಂತ ಹೆಚ್ಚು ರನ್ ಗಳಿಸಲು ಸಾಧ್ಯವಾಗಲಿಲ್ಲ. ಯುಎಇ ಪರ ಎಗೊಡೇಜ್ 12 ರನ್​ಗೆ 3 ವಿಕೆಟ್ ಪಡೆದು ಮಿಂಚಿದರು.

ಹಾಲಿ ಚಾಂಪಿಯನ್ ಭಾರತ ವಿರುದ್ಧ ಸೆಣಸುವ ಮೊದಲು ನೇಪಾಳ ಪಾಕಿಸ್ತಾನವನ್ನು ಎದುರಿಸಲಿದೆ. ಮತ್ತೊಂದೆಡೆ, ಯುಎಇ ಪಾಕಿಸ್ತಾನವನ್ನು ಎದುರಿಸುವ ಮೊದಲು ಮೊದಲು ಭಾರತವನ್ನು ಎದುರಿಸಲಿದೆ.

Continue Reading

Latest

Self Harming : ವಾಟರ್‌ ಟ್ಯಾಂಕ್‌ ಮೇಲಿನಿಂದ ಜಿಗಿದ ವಿದ್ಯಾರ್ಥಿ; ವಿಡಿಯೋ ಇದೆ

Self Harming ದುಡ್ಡಿದ್ದವರದ್ದು ಒಂದು ಸಮಸ್ಯೆಯಾದರೆ, ದುಡ್ಡಿಲ್ಲದವರದ್ದು ಇನ್ನು ರೀತಿಯ ಪರಿಸ್ಥಿತಿ. ಪಂಜಾಬ್‌ನ 19 ವರ್ಷದ ವಿದ್ಯಾರ್ಥಿಯೊಬ್ಬ ಆರ್ಥಿಕ ಸಮಸ್ಯೆಗಳಿಂದ ಬೇಸತ್ತು ಸಾವಿನ ಮೊರೆ ಹೋಗಿದ್ದಾನೆ. ನೀರಿನ ಟ್ಯಾಂಕ್ ಹತ್ತಿ ಅದರ ಮೇಲಿನಿಂದ ಕೆಳಕ್ಕೆ ಹಾರಿದ್ದಾನೆ.ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಯುವಕನ ಎರಡೂ ಕಾಲುಗಳು ಮುರಿದು ಕಾಲುಗಳ ಮೂಳೆಗಳು ಹೊರಗೆ ಬಂದಿದ್ದು, ಗಂಭೀರವಾಗಿ ಗಾಯಗೊಂಡ ಯುವಕನನ್ನು ಇಲ್ಲಿನ ವೈದ್ಯರು ಪರೀಕ್ಷಿಸಿದಾಗ, ಅವನು ಮೃತಪಟ್ಟಿದ್ದಾನೆ ಎಂಬುದಾಗಿ ತಿಳಿದುಬಂದಿದೆ.

VISTARANEWS.COM


on

Self Harming
Koo


ಪಂಜಾಬ್: ಇತ್ತೀಚೆಗೆ ಸಣ್ಣ-ಪುಟ್ಟ ಕಾರಣಕ್ಕೆ ಪ್ರಾಣ ಕಳೆದುಕೊಳ್ಳುವ ಅನೇಕ ಘಟನೆಗಳು ಆಗಾಗ ವರದಿಯಾಗುತ್ತಿರುತ್ತದೆ. ಅದರಲ್ಲೂ ಯುವಕರೇ ಹೆಚ್ಚಾಗಿ ದುಡುಕಿ ಇಂತಹ ನಿರ್ಧಾರಕ್ಕೆ ಬರುತ್ತಾರೆ. ಅಂತಹದ್ದೇ ಒಂದು ಘಟನೆ ಹರ್ಯಾಣದಲ್ಲಿ ನಡೆದಿದೆ. ಈ ಹಣಕಾಸಿನ ಸಮಸ್ಯೆಯಿಂದ ನೊಂದು 19 ವರ್ಷದ ವಿದ್ಯಾರ್ಥಿಯೊಬ್ಬ ನೀರಿನ ಟ್ಯಾಂಕ್‍ ಮೇಲಿನಿಂದ ಹಾರಿ ಆತ್ಮಹತ್ಯೆ (Self Harming)ಮಾಡಿಕೊಂಡಿದ್ದಾನೆ. ಈ ಆಘಾತಕಾರಿ ಘಟನೆ ಹರ್ಯಾಣದ ಖರಾರ್ ನ ಖಾನ್ಪುರ್ ಗ್ರಾಮದಲ್ಲಿ ಗುರುವಾರ ನಡೆದಿದ್ದು, ಈ ಭಯಾನಕ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಸುಮಿತ್ ಚಿಕ್ರಾ(19)ಎಂದು ಗುರುತಿಸಲಾಗಿದೆ. ಈತ ಪಂಜಾಬ್‍ನ ಘರುವಾನ್ ಗ್ರಾಮದ ಚಂಡೀಗಢ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದ. ಆತ ತನ್ನ ಹೆತ್ತವರಿಗೆ ಏಕೈಕ ಮಗ ಎನ್ನಲಾಗಿದೆ. ಆರ್ಥಿಕ ಸಮಸ್ಯೆಗಳಿಂದಾಗಿ ಒತ್ತಡವನ್ನು ಅನುಭವಿಸುತ್ತಿದ್ದ ವಿದ್ಯಾರ್ಥಿ ಈ ರೀತಿ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ನೀರಿನ ಟ್ಯಾಂಕ್‍ನಿಂದ ಜಿಗಿಯುವ ಮೊದಲು ವಿದ್ಯಾರ್ಥಿ ತನ್ನ ಕೈಯ ಮಣಿಕಟ್ಟನ್ನು ಕತ್ತರಿಸಲು ಪ್ರಯತ್ನಿಸಿದನು ಎಂಬುದಾಗಿ ತಿಳಿದುಬಂದಿದೆ. ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ವಿಡಿಯೊದಲ್ಲಿ ಯುವಕ ನೀರಿನ ಟ್ಯಾಂಕ್ ಹತ್ತಿ ಟ್ಯಾಂಕ್‍ನ ಅಂಚಿನಲ್ಲಿ ನಿಂತಿರುವುದನ್ನು ಕಾಣಬಹುದು. ಯುವಕ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಡೆಯಲು ಇಬ್ಬರು ಪುರುಷರು ನೀರಿನ ಟ್ಯಾಂಕ್‍ನ ಮೆಟ್ಟಿಲುಗಳನ್ನು ಹತ್ತುತ್ತಿರುವುದನ್ನು ಸಹ ಕಾಣಬಹುದು. ಅವರು ನೀರಿನ ಟ್ಯಾಂಕ್‍ನ ನಾಲ್ಕನೇ ಮಹಡಿಯನ್ನು ತಲುಪಿದಾಗ, ಯುವಕ ಅವರನ್ನು ಮೇಲಿನಿಂದ ಗಮನಿಸಿದನು. ನಂತರ ಅವರು ತನನ್ನು ರಕ್ಷಿಸಲು ಬರುತ್ತಿರುವುದನ್ನು ನೋಡಿ ಅವನು ಮುಂದೆ ಓಡಿ ನೀರಿನ ಟ್ಯಾಂಕ್‍ನಿಂದ ಹಾರಿದನು. ಈ ಘಟನೆಯನ್ನು ತನ್ನ ಮೊಬೈಲ್ ಪೋನಿನಲ್ಲಿ ರೆಕಾರ್ಡ್ ಮಾಡುತ್ತಿದ್ದ ವ್ಯಕ್ತಿಯು ಯುವಕ ನೆಲಕ್ಕೆ ಬೀಳುತ್ತಿದ್ದಂತೆ ಆಘಾತದಿಂದ ಕಿರುಚುವುದನ್ನು ಕೇಳಬಹುದು. ಜಿಗಿತದ ಪರಿಣಾಮ ಎಷ್ಟಿತ್ತೆಂದರೆ ಯುವಕ ನೆಲದ ಮೇಲೆ ಬಿದ್ದ ನಂತರ ಮತ್ತೆ ಮೇಲೆ ಜಿಗಿದು ನಂತರ ಮತ್ತೆ ಬಿದ್ದಿದ್ದಾನೆ.

ನೆಲಕ್ಕೆ ಬಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ನೀರಿನ ಟ್ಯಾಂಕ್‍ನ ಮೆಟ್ಟಿಲುಗಳನ್ನು ಏರುತ್ತಿದ್ದ ಇಬ್ಬರು ಪುರುಷರು, ಯುವಕ ಜೀವಂತವಾಗಿದ್ದಾನೆಯೇ ಎಂದು ಪರೀಕ್ಷಿಸಲು ಕೆಳಗೆ ಓಡಿ ಬರುತ್ತಿರುವುದು ಕಂಡುಬಂದಿದೆ.
ಯುವಕನನ್ನು ತಕ್ಷಣ ಖರಾರ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಯುವಕನ ಎರಡೂ ಕಾಲುಗಳು ಮುರಿದು ಕಾಲುಗಳ ಮೂಳೆಗಳು ಹೊರಗೆ ಬಂದಿದ್ದು, ಗಂಭೀರವಾಗಿ ಗಾಯಗೊಂಡ ಯುವಕನನ್ನು ಇಲ್ಲಿನ ವೈದ್ಯರು ಪರೀಕ್ಷಿಸಿದಾಗ, ಅವನು ಮೃತಪಟ್ಟಿದ್ದಾನೆ ಎಂಬುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: ಬಿಸ್ಕೆಟ್‌ಗೆ ಆಸೆ ಪಟ್ಟು ಹೋಗಿದ್ದ ಪುಟ್ಟ ಬಾಲಕಿ ಕಾಮುಕನ ಕೈಗೆ ಸಿಕ್ಕಿ ಕೊಲೆಯಾದಳು

Continue Reading
Advertisement
Cargo container ship
ದೇಶ58 mins ago

Cargo container ship: ಕಾರ್ಗೋ ಶಿಪ್‌ನಲ್ಲಿ ಭಾರೀ ಅಗ್ನಿ ಅವಘಡ; ಸುಟ್ಟು ಕರಕಲಾದ ಸರಕುಗಳು-ವಿಡಿಯೋ ಇದೆ

Reliance Industries Announces First Quarter Results 17448 crore rs profit declaration
ವಾಣಿಜ್ಯ1 hour ago

Reliance Industries: ರಿಲಯನ್ಸ್ ಇಂಡಸ್ಟ್ರೀಸ್‌ ಮೊದಲ ತ್ರೈಮಾಸಿಕ ಫಲಿತಾಂಶ ಪ್ರಕಟ; 17,448 ಕೋಟಿ ರೂ. ಲಾಭ

Ben Stokes
ಕ್ರೀಡೆ2 hours ago

Ben Stokes : ದೊಡ್ಡ ಮೊತ್ತ ಪಡೆದು ಮುಂಬೈ ತಂಡ ಸೇರಲಿದ್ದಾರೆ ಬೆನ್ ಸ್ಟೋಕ್ಸ್​​

Sexual harassment
ದೇಶ2 hours ago

Sexual Harassment: ಪೋರ್ನ್‌ ವಿಡಿಯೋ ತೋರಿಸಿ ಕಿರುಕುಳ; ಜಿಂದಾಲ್‌ ಕಂಪನಿಯ ಹಿರಿಯ ಅಧಿಕಾರಿ ವಿರುದ್ಧ ಮಹಿಳೆ ಆರೋಪ

Vastu Tips
ಧಾರ್ಮಿಕ3 hours ago

Vastu Tips: ಮನೆಯಲ್ಲಿ ಸಂಪತ್ತು ಸದಾ ತುಂಬಿರಬೇಕೆ? ಈ ನಿಯಮ ಪಾಲಿಸಿ

Women's Asia Cup 2024
ಪ್ರಮುಖ ಸುದ್ದಿ3 hours ago

Women’s Asia Cup 2024 : ಪಾಕಿಸ್ತಾನ ವಿರುದ್ಧ ಭರ್ಜರಿ 7 ವಿಕೆಟ್​ ವಿಜಯ ಸಾಧಿಸಿದ ಭಾರತದ ಮಹಿಳೆಯರು

GT World Mall
ಕರ್ನಾಟಕ3 hours ago

GT World Mall: ರೈತ ಫಕೀರಪ್ಪರನ್ನು ಮನೆಗೆ ಆಹ್ವಾನಿಸಿ ಸತ್ಕರಿಸಿದ ಜಿ.ಟಿ.ಮಾಲ್‌ ಮಾಲೀಕ

Viral Video
Latest3 hours ago

Viral Video: ಮಗಳೊಂದಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಗುಪ್ತಾಂಗ ತೋರಿಸಿದ ವಿಕೃತ ಕಾಮಿ!

Sadageri village free from gas leakage risk says DC Lakshmipriya
ಕರ್ನಾಟಕ3 hours ago

Uttara Kannada News: ಭೂಕುಸಿತದಿಂದ ಕೊಚ್ಚಿ ಹೋದ ಟ್ಯಾಂಕರ್‌; ಗ್ರಾಮಸ್ಥರೀಗ ಗ್ಯಾಸ್ ಸ್ಫೋಟ ಅಪಾಯದಿಂದ ಪಾರು

Reliance Jio first quarter profit at Rs 5445 crore
ದೇಶ3 hours ago

Reliance Jio: ರಿಲಯನ್ಸ್ ಜಿಯೋಗೆ ಮೂರೇ ತಿಂಗಳಲ್ಲಿ ಎಷ್ಟು ಲಾಭ ನೋಡಿ; 5,445 ಕೋಟಿ ರೂ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ11 hours ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ12 hours ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ1 day ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ1 day ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ5 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ5 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಟ್ರೆಂಡಿಂಗ್‌