Road Rage: ರಸ್ತೆಯಲ್ಲಿ ಗೂಂಡಾಗಿರಿ, ಇನೋವಾ ಚಾಲಕನ ಮೇಲೆ ಫಾರ್ಚುನರ್‌ನಲ್ಲಿದ್ದ ತಂಡದಿಂದ ತೀವ್ರ ಹಲ್ಲೆ - Vistara News

ಬೆಂಗಳೂರು

Road Rage: ರಸ್ತೆಯಲ್ಲಿ ಗೂಂಡಾಗಿರಿ, ಇನೋವಾ ಚಾಲಕನ ಮೇಲೆ ಫಾರ್ಚುನರ್‌ನಲ್ಲಿದ್ದ ತಂಡದಿಂದ ತೀವ್ರ ಹಲ್ಲೆ

Road Rage: ಈ ಘಟನೆ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಫಾರ್ಚುನರ್ ಕಾರಿನಲ್ಲಿ ಇದ್ದ ಪುಂಡರ ಗುಂಪು, ಮುಂದೆ ಇದ್ದ ಇನೋವಾ ಕಾರು ಚಾಲಕ ತಮ್ಮ ವಾಹನ ಮುಂದೆ ಹೋಗಲು ಬಿಟ್ಟಿಲ್ಲ ಎಂದು ಆತನನ್ನು ಹೊರಗೆಳೆದು ಅವನ ಮೇಲೆ ಹಲ್ಲೆ ನಡೆಸಿದೆ.

VISTARANEWS.COM


on

road rage bangalore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ತಮ್ಮ ಐಷಾರಾಮಿ ಫಾರ್ಚುನರ್ ಕಾರು (Fortuner Car) ಹೋಗೋಕೆ ದಾರಿ ಬಿಡಲಿಲ್ಲ ಎಂದು ಬಾಡಿಗೆ ಇನೋವಾ ಕಾರಿನ (Innova Car) ಚಾಲಕನ ಮೇಲೆ ಒಂದು ತಂಡ ಯದ್ವಾತದ್ವಾ ಹಲ್ಲೆ (Assault Case) ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಜಧಾನಿಯಲ್ಲಿ ನಡೆಯುತ್ತಿರುವ ರೋಡ್‌ ರೇಜ್‌ (Road Rage) ಪ್ರಕರಣಗಳಿಗೆ ಇದು ಇನ್ನೊಂದು ಸೇರ್ಪಡೆ.

ರಸ್ತೆಯಲ್ಲಿ ಸಿನಿಮೀಯ ರೀತಿಯಲ್ಲಿ ಚಾಲಕನ ಮೇಲೆ ತಂಡ ಹಲ್ಲೆ ನಡೆಸಿದೆ. ಕಾಲಿನಿಂದ ತುಳಿದು, ಕರಾಟೆ ಕಿಕ್‌ ನೀಡಿ ಡ್ರೈವರ್‌ನನ್ನು ಗಾಯಗೊಳಿಸಲಾಗಿದೆ. ಈ ಘಟನೆ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಫಾರ್ಚುನರ್ ಕಾರಿನಲ್ಲಿ ಇದ್ದ ಪುಂಡರ ಗುಂಪು, ಮುಂದೆ ಇದ್ದ ಇನೋವಾ ಕಾರು ಚಾಲಕ ತಮ್ಮ ವಾಹನ ಮುಂದೆ ಹೋಗಲು ಬಿಟ್ಟಿಲ್ಲ ಎಂದು ಆತನನ್ನು ಹೊರಗೆಳೆದು ಅವನ ಮೇಲೆ ಹಲ್ಲೆ ನಡೆಸಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಡಾ. ಪ್ರಜ್ವಿತ್ ರೈ ಎಂಬವರು ಪೋಸ್ಟ್ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಅಸಹಾಯಕನ ಮೇಲೆ ಹೀಗೆ ಹಲ್ಲೆ ಮಾಡಲಾಗಿದೆ. ಈ ರೀತಿ ಅಸಹಾಯಕರ ಮೇಲೆ ದರ್ಪ ತೋರುವವರಿಗೆ ಶಿಕ್ಷೆ ಆಗಬೇಕು ಎಂದು ಪೋಸ್ಟ್ ಹಾಕಿದ್ದಾರೆ. ಪೋಸ್ಟ್‌ಗೆ ʼದರ್ಶನ್ʼ ಮತ್ತು ʼರೇಣುಕಾಸ್ವಾಮಿʼ ಹೆಸರಿನ ಹ್ಯಾಶ್‌ಟ್ಯಾಗ್ ಹಾಕಲಾಗಿದೆ. ಸದ್ಯ ಘಟನೆ ಸಂಬಂಧ ಪೊಲೀಸರು ಮಾಹಿತಿ ಪಡೆದಿದ್ದಾರೆ.

Dengue fever: ಶಂಕಿತ ಡೆಂಗ್ಯು ಜ್ವರಕ್ಕೆ ಯುವತಿ ಸಾವು

ದಾವಣಗೆರೆ: ಜ್ವರದಿಂದ ಬಳಲುತ್ತಿದ್ದ ಯುವತಿಯೊಬ್ಬರು ಸಾವಿಗೀಡಾಗಿದ್ದಾರೆ. ಡೆಂಗ್ಯು ಜ್ವರದಿಂದ ಸಾವನ್ನಪ್ಪಿರುವ ಶಂಕೆ ಇದ್ದು, ಪರೀಕ್ಷಾ ವರದಿ ಬರಬೇಕಿದೆ.

ರೇಖಾ ಎನ್ (19) ಸಾವನ್ನಪ್ಪಿದ ಯುವತಿ. ದಾವಣಗೆರೆ ಜಿಲ್ಲೆಯ‌ ಜಗಳೂರ ಪಟ್ಟಣದ ರಾಮಾಲಯ ರಸ್ತೆ ನಿವಾಸಿ ರೇಖಾ ಕಳೆದ ಕೆಲ ದಿನಗಳ ಹಿಂದೆ ನಾಮಕರಣ ಶಾಸ್ತ್ರ ಕಾರ್ಯಕ್ರಮಕ್ಕೆ ಬಳ್ಳಾರಿಗೆ ತೆರಳಿದ್ದರು. ಅಲ್ಲಿ ತೀವ್ರ ಜ್ವರದಿಂದ ಬಳಲಿದ್ದ ರೇಖಾಗೆ ಬಳ್ಳಾರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ. ಬಳ್ಳಾರಿಯಲ್ಲಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಅಧಿಕೃತ ವರದಿ‌ ನಿರೀಕ್ಷಿಸಲಾಗಿದೆ. ಈ ಬಗ್ಗೆ ಜಗಳೂರು ತಾಲೂಕು ವೈದ್ಯಾಧಿಕಾರಿ ಡಾ. ವಿಶ್ವನಾಥ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Road Rage Case: ಬೆಂಗಳೂರಲ್ಲಿ ಕಿಡಿಗೇಡಿಗಳಿಂದ ಕಾರು ಮಾಲೀಕನ ಕಾಪಾಡಿದ ಡ್ಯಾಶ್‌ ಕ್ಯಾಮೆರಾ; ವಿಡಿಯೊ ಇದೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

Karnataka rain : ವ್ಯಾಪಕವಾಗಿ ಸುರಿಯುತ್ತಿರುವ ಮಳೆಯು ನಾನಾ ಅವಾಂತರವನ್ನೇ (Rain Effect) ಸೃಷ್ಟಿಸಿದೆ. ಚಿಕ್ಕಮಗಳೂರಲ್ಲಿ ಹಳ್ಳ ದಾಟಲು ಹೋದ ಜಾನುವಾರುವೊಂದು ನೀರುಪಾಲಾಗಿದೆ. ಜೋರಾಗಿ ಬೀಸಿದ ಬಿರುಗಾಳಿ ವಿಂಡ್‌ ಫ್ಯಾನ್‌ ನೆಲಕಚ್ಚಿದೆ.

VISTARANEWS.COM


on

By

karnataka Rain
Koo

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಲ್ಲಿ ಭಯಂಕರ ಮಳೆಯಾಗುತ್ತಿದ್ದು, ಹಳ್ಳ-ಕೊಳ್ಳಗಳು (Karnataka Rain) ಉಕ್ಕಿ ಉರಿಯುತ್ತಿದೆ. ಹೀಗೆ ಉಕ್ಕಿ ಉರಿಯುತ್ತಿದ್ದ ನೀರಿನಲ್ಲಿ ಹಳ್ಳ ದಾಟಲು ಹೋದ ಎಮ್ಮೆಯೊಂದು ನೀರುಪಾಲಾಗಿದೆ. ಕಳಸ ತಾಲೂಕಿನ ಮಾವಿನ ಹೊಲ ಬಳಿ ಘಟನೆ ನಡೆದಿದೆ. ಜನರ ಕಣ್ಣೆದುರೇ ರಭಸವಾದ ಹಳ್ಳದಲ್ಲಿ ಜಾನುವಾರು ಕೊಚ್ಚಿ ಹೋಗಿದೆ. ಈವರೆಗೂ ಕಳಸ ತಾಲೂಕಿನಲ್ಲೇ ಮೂರು ಹಸುಗಳು ಬಲಿಯಾಗಿವೆ.

ಬಳ್ಳಾರಿಯಲ್ಲಿ ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಎರಡು ದಿನಗಳಿಂದ ಬೀಸುತ್ತಿರುವ ಬಿರುಗಾಳಿಗೆ ತಡರಾತ್ರಿ ವಿಂಡ್ ಫ್ಯಾನ್ ನೆಲಕ್ಕೆ ಉರುಳಿದೆ. ನಿನ್ನೆ ಶುಕ್ರವಾರ ತಡರಾತ್ರಿ ಸಂಡೂರಿನ ಹೀರಾಳ್ ಬಳಿ ಇರುವ ಬೃಹತ್ ವಿಂಡ್ ಫ್ಯಾನ್ ಧರೆಗೆ ಉರುಳಿದೆ. ತಡ ರಾತ್ರಿಯಾಗಿರುವುದರಿಂದ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಜಿಂದಾಲ್ ಕಂಪನಿಗೆ ಸೇರಿದ ವಿಂಡ್ ಫ್ಯಾನ್ ಬಿದ್ದ ಪರಿಣಾಮ ಕೆಲಸ ತೆರಳುವವರಿಗೆ ತೊಂದರೆ ಆಯ್ತು. ವಿದ್ಯುತ್ ಉತ್ಪಾದನೆಗಾಗಿ ಜಿಂದಾಲ್ ಕಂಪನಿಯವರು ರೈತರ ಹೊಲದಲ್ಲಿ ವಿಂಡ್‌ ಫ್ಯಾನ್‌ ಅಳವಡಿಸಿದ್ದರು. ಚೋರನೂರು ಹೋಬಳಿಯಲ್ಲಿ ಬೃಹತ್ ಪ್ರಮಾಣದ ವಿಂಡ್ ಫ್ಯಾನ್‌ಗಳನ್ನು ಅಳವಡಿಸಲಾಗಿದೆ.

ಬೆಳೆಗಳನ್ನು ನುಂಗಿ ಹಾಕಿದ ಬಳ್ಳಾರಿ ನಾಲೆ

ಬಳ್ಳಾರಿ ನಾಲೆಯ ರುದ್ರ ನರ್ತನವನ್ನು ಡ್ರೋಣ್ ಕಣ್ಣು ಬಿಚ್ಚಿಟ್ಟಿದೆ. ಹೊಲ ಗದ್ದೆಗಳು ಹಾಗೂ ಅದರಲ್ಲಿದ್ದ ಬೆಳೆಗಳು ನಾಶವಾಗಿವೆ. ವಡಗಾಂವಿ, ಶಹಪೂರ, ಅನಗೋಳ, ಯಳ್ಳೂರು ಗ್ರಾಮದ ರೈತರ ಬೆಳೆ ಸರ್ವನಾಶವಾಗಿವೆ. ಸಾವಿರಾರು ಹೆಕ್ಟರ್ ಪ್ರದೇಶದಲ್ಲಿ ಬೆಳೆದ ಬೆಳೆ ನೀರು ಪಾಲಾಗಿದೆ. ಪಕ್ಕದಲ್ಲಿಯೇ ಇರುವ ಮನೆಗಳಿಗೂ ನೀರು ನುಗ್ಗುವ ಆತಂಕ ಎದುರಾಗಿದೆ. ಯಾವಾಗ ಮನೆಗೆ ನೀರು ನುಗ್ಗುತ್ತೊ ಎಂಬ ಆತಂಕದಲ್ಲಿಯೇ ಜನರು ದಿನದೂಡುತ್ತಿದ್ದಾರೆ. ಬಳ್ಳಾರಿ ನಾಲೆಯ ನೀರು ಎಲ್ಲ ಕಡೆ ನುಗ್ಗಿ ಆತಂಕ ಸೃಷ್ಟಿಸಿದೆ.

ದಡಕ್ಕೆ ಅಪ್ಪಳಿಸುತ್ತಿರುವ ಬೃಹತ್ ಗಾತ್ರದ ಅಲೆಗಳು

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಮಳೆಯ ಜತೆಗೆ ಸಮುದ್ರದ ಅಲೆಗಳು ಅಬ್ಬರಿಸುತ್ತಿದೆ. ಕಡಲತೀರದಲ್ಲಿ ದಡಕ್ಕೆ ಬೃಹತ್ ಗಾತ್ರದ ಅಲೆಗಳು ಅಪ್ಪಳಿಸುತ್ತಿದೆ. ಉಡುಪಿ ತಾಲೂಕಿನ ಮಲ್ಪೆ ಸಮೀಪದ ಗುಜ್ಜರಬೆಟ್ಟುವಿನಲ್ಲಿ ರಕ್ಕಸ ಗಾತ್ರದ ಅಲೆಗೆ ತಡೆಗೋಡೆ, ತೆಂಗಿನ ಮರ ಸಮುದ್ರ ಪಾಲಾಗಿದೆ. ಈಗಾಗಲೇ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯನ್ನೂ ನೀಡಲಾಗಿದೆ.

ಇದನ್ನೂ ಓದಿ: Murder Case : ಪತ್ನಿಗೆ ಗುಂಡು ಹಾರಿಸಿ ಕೊಂದು ಪೊಲೀಸರಿಗೆ ಶರಣಾದ ಪತಿ!

ಚೋರ್ಲಾ ಮಾರ್ಗದಲ್ಲಿ ಬಿರುಕು ಬಿಟ್ಟ ಸೇತುವೆ

ಗೋವಾ ಮಾರ್ಗವಾಗಿ ತೆರಳುವ ವಾಹನ ಸವಾರರಿಗೆ ಬೆಳಗಾವಿ ಪೊಲೀಸರು ಬದಲಾವಣೆ ಸೂಚಿಸಿದ್ದಾರೆ. ಚೋರ್ಲಾ ಮಾರ್ಗದಲ್ಲಿ ಸೇತುವೆ ಬಿರುಕುಗೊಂಡಿರುವ ಹಿನ್ನೆಲೆಯಲ್ಲಿ ಚೋರ್ಲಾ ಮಾರ್ಗದ ಬದಲಾಗಿ ಖಾನಾಪುರ ಮಾರ್ಗವಾಗಿ ಪ್ರಯಾಣಿಸಲು ಸೂಚನೆ ನೀಡಲಾಗಿದೆ. ಜಾಂಬೋಟಿ ಚೋರ್ಲಾ ಮಾರ್ಗದಲ್ಲಿ ಸತತ ಮಳೆ ಹಿನ್ನೆಲೆಯಿಂದಾಗಿ ಪೀರಣವಾಡಿ ಕ್ರಾಸ್‌ನಿಂದ ಖಾನಾಪುರ ಮಾರ್ಗವಾಗಿ ಚಲಿಸಲು ಸೂಚನೆ ನೀಡಲಾಗಿದೆ.

ಚಿಕ್ಕೋಡಿ: ಮಹಾರಾಷ್ಟ್ರ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮುಂದುವರೆದ ಮಳೆ ಅಬ್ಬರದಿಂದಾಗಿ ನಿಪ್ಪಾಣಿ ತಾಲೂಕಿನ ಹಲವು ಗ್ರಾಮಗಳಿಗೆ ನೆರೆಯ ಆತಂಕ ಶುರುವಾಗಿದೆ. ಅಪಾಯದ ಮಟ್ಟ ಮೀರಿ ದೂದಗಂಗಾ ನದಿ ಹರಿಯುತ್ತಿದ್ದು, ಕಾರದಗಾ ಗ್ರಾಮದ ಬಂಗಾಲಿಬಾಬಾ ದರ್ಗಾ ಜಲಾವೃತಗೊಂಡಿದೆ. ನದಿ ನೀರು ಕ್ರಮೇಣ ಏರಿಕೆ ಆಗುತ್ತಿದ್ದು, ಗ್ರಾಮಕ್ಕೆ ನುಗ್ಗುವ ಆತಂಕವಿದೆ.

ಇತ್ತ ಬೆಳಗಾವಿ ನಗರದ ಹಲವು ಬಡಾವಣೆ ಜನರು ಆತಂಕದಲ್ಲೇ ದಿನದೂಡುವಂತಾಗಿದೆ. ಈಗಾಗಲೇ ಹೊಲ ಗದ್ದೆಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಸಿಯಾಗಿದೆ. ಬೆಳಗಾವಿ ನಗರಕ್ಕೆ ಹೊಂದಿಕೊಂಡಿರುವ ವಡಗಾಂವಿ ಅನಗೋಳ , ಶಹಪೂರ ಯಳ್ಳೂರು ಗ್ರಾಮಗಳಿಗೂ ಆತಂಕ ಹೆಚ್ಚಿದೆ. 2,500ಕ್ಕೂ ಹೆಚ್ಚು ಎಕರೆ ಪ್ರದೇಶ ನೀರಲ್ಲಿ ಮುಳುಗಿದೆ. ಸದ್ಯ ಭತ್ತ, ಕಬ್ಬು, ಜೋಳ ಬೆಳೆಗಳು ನೀರಲ್ಲಿ ತೇಲುತ್ತಿದೆ. ಪ್ರತಿ ವರ್ಷವೂ ಬಳ್ಳಾರಿ ನಾಲೆಯಿಂದ ಸಾವಿರಾರು ಎಕರೆ ಪ್ರದೇಶಕ್ಕೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗುತ್ತಿದೆ.

ಸೇತುವೆ ಮುಳುಗಡೆ- ಗ್ರಾಮಗಳ ಸಂಪರ್ಕ ಕಡಿತ

ಹಾವೇರಿಯ ಕುಮದ್ವತಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದ್ದು, ಮೂರು ಗ್ರಾಮಗಳ ಸಂಪರ್ಕ ಸೇತುವೆ ಕಡಿತದಿಂದಾಗಿ ವಾಹನಗಳ ಸಂಚಾರ ಸ್ಥಗಿತಗೊಂಡಿದೆ. ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಎಲಿವಾಳ ಮತ್ತು ರಟ್ಟಿಹಳ್ಳಿಯ ಸೇತುವೆ ನೀರಿನಲ್ಲಿ ಮುಳುಗಿ ಸಂಪರ್ಕ ಕಡಿತಗೊಂಡಿದೆ. ಯಡಗೋಡ ಮತ್ತು ಬಡಸಂಗಾಪುರ ಸಂಪರ್ಕ ಸೇತುವೆ ಬಂದ್ ಆಗಿದೆ. ಸೇತುವೆ ಮೇಲೆ ಗ್ರಾಮಸ್ಥರು ಓಡಾಡದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Rajakaluve Encroachment: ರಾಜಕಾಲುವೆ ಒತ್ತುವರಿದಾರರಿಗೆ ಮತ್ತೆ ನಡುಕ, ತೆರವಿಗೆ ಬಿಬಿಎಂಪಿ ಸಿದ್ಧತೆ

Rajakaluve Encroachment: ಇದುವರೆಗೆ ಮಾಡಿರುವ ಸಮೀಕ್ಷೆಯಲ್ಲಿ 3182 ಕಟ್ಟಡಗಳನ್ನು ಡೆಮಾಲಿಷನ್‌ಗಾಗಿ ಗುರುತು ಮಾಡಲಾಗಿದೆ. ರಾಜಕಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡಿರುವುದರಿಂದ ಮಳೆ ನೀರು ಹರಿಯಲು ತಡೆ ಉಂಟಾಗಿ ನಗರದಲ್ಲಿ ಪ್ರವಾಹ ಸೃಷ್ಟಿಯಾಗುವ ಭೀತಿ ಸೃಷ್ಟಿಯಾಗಿದೆ.

VISTARANEWS.COM


on

Rajakaluve Encroachment
Koo

ಬೆಂಗಳೂರು: ರಾಜಕಾಲುವೆ ಒತ್ತುವರಿದಾರರಿಗೆ (rainwater drain) ಮತ್ತೆ ನಡುಕ ಆರಂಭವಾಗಿದೆ. ಬಿಬಿಎಂಪಿಯಿಂದ (BBMP) ರಾಜಕಾಲುವೆ ಒತ್ತುವರಿ (Rajakaluve Encroachment) ಸರ್ವೆ ನಡೆಯುತ್ತಿದ್ದು, ಮಳೆ ನಿಂತ ನಂತರ ಒತ್ತುವರಿ ತೆರವು (Rajakaluve clearance) ಮಾಡಲು ಬಿಬಿಎಂಪಿ ಸನ್ನದ್ಧವಾಗಿದೆ.

ಇದುವರೆಗೆ ಮಾಡಿರುವ ಸಮೀಕ್ಷೆಯಲ್ಲಿ 3182 ಕಟ್ಟಡಗಳನ್ನು ಡೆಮಾಲಿಷನ್‌ಗಾಗಿ ಗುರುತು ಮಾಡಲಾಗಿದೆ. ರಾಜಕಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡಿರುವುದರಿಂದ ಮಳೆ ನೀರು ಹರಿಯಲು ತಡೆ ಉಂಟಾಗಿ ನಗರದಲ್ಲಿ ಪ್ರವಾಹ ಸೃಷ್ಟಿಯಾಗುವ ಭೀತಿ ಸೃಷ್ಟಿಯಾಗಿದೆ. ಹೀಗಾಗಿ ಒತ್ತುವರಿ ತೆರವು ಮಾಡಲು ಬಿಬಿಎಂಪಿ ತೀರ್ಮಾನಿಸಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಬೆಂಗಳೂರು ಉಸ್ತುವಾರಿಯೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಕೂಡ ಒತ್ತುವರಿ ತೆರವು ಮಾಡಲು ಬಿಬಿಎಂಪಿಗೆ ಕಠಿಣ ಸೂಚನೆ ನೀಡಿದ್ದಾರೆ.

ಯಾವ ವಲಯದಲ್ಲಿ ಎಷ್ಟು ಕಟ್ಟಡ ಡೆಮಾಲಿಷನ್‌ಗೆ ಗುರುತು?

ಮಹಾದೇವಪುರ ವಲಯದಲ್ಲಿ 1651 ಕಟ್ಟಡಗಳ ಗುರುತು
ಯಲಹಂಕ ವಲಯದಲ್ಲಿ 588 ಕಟ್ಟಡಗಳು ಗುರುತು.
ಬೊಮ್ಮನಹಳ್ಳಿ ವಲಯದ 368 ಕಟ್ಟಡಗಳ ಗುರುತು
ಪೂರ್ವ ವಲಯ 237 ಕಟ್ಟಡಗಳ ಗುರುತು
ಆರ್ ಆರ್ ನಗರ 75 ಕಟ್ಟಡಗಳ ಗುರುತು

ಇಷ್ಟು ಕಟ್ಟಡಗಳನ್ನು ಕೆಡವಲು ಬಿಬಿಎಂಪಿ ಗುರುತು ಮಾಡಿಕೊಂಡಿದೆ. ಇದರಲ್ಲಿ ಪ್ರಭಾವಿಗಳ, ಶ್ರೀಮಂತರ ಒತ್ತುವರಿಗಳು ಕೂಡ ಸೇರಿವೆ. ಕೆಲವು ಕಡೆ ಭಾರಿ ಅಪಾರ್ಟ್‌ಮೆಂಟ್‌ಗಳು ಒತ್ತುವರಿ ಮಾಡಿಕೊಂಡಿದ್ದು, ಕಾನೂನು ತಗಾದೆಯೂ ಇದೆ. ಆಗಸ್ಟ್‌ನಿಂದ‌ ಡೆಮಾಲಿಷನ್ ಕಾರ್ಯಾಚರಣೆ ಶುರುವಾಗಲಿದೆ. ಮಳೆಗಾಲದ ಹಿನ್ನೆಲೆಯಲ್ಲಿ ಪ್ರವಾಹ ಪ್ರದೇಶದಲ್ಲಿರುವ ಒತ್ತುವರಿ ಮೊದಲು ತೆರವು ಮಾಡಿಕೊಳ್ಳಲಾಗುತ್ತದೆ. ತಹಶಿಲ್ದಾರರ ಮುಖಾಂತರ ತೆರವು ಕಾರ್ಯಾಚರಣೆಗೆ ಆದೇಶ ನೀಡಲಾಗಿದೆ.

ಒತ್ತುವರಿ ಕಂಡರೆ ತಿಳಿಸಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳ ಒತ್ತುವರಿ ಅಥವಾ ಅತಿಕ್ರಮಣ ಗುರುತಿಸಲು ಸಹಾಯ ಮಾಡುವಂತೆ ಸಾರ್ವಜನಿಕರನ್ನು ಮಹಾನಗರ ಪಾಲಿಕೆ ಈ ಹಿಂದೆ ಕೋರಿತ್ತು. ರಾಜಕಾಲುವೆ ಒತ್ತುವರೆ ಮಾಡಿ ಅಲ್ಲಿ ಕಟ್ಟಡ ನಿರ್ಮಿಸಿರುವುದು ಯಾರಿಗಾದರೂ ತಿಳಿದಿದ್ದರೆ ಅಥವಾ ಗಮನಕ್ಕೆ ಬಂದರೆ ವಲಯಗಳ ಈ ನಿರ್ದಿಷ್ಟ ಕಚೇರಿಗಳ ಅಧಿಕಾರಿಗಳಿಗೆ ದೂರನ್ನು ನೀಡುವಂತೆ ಬಿಬಿಎಂಪಿ ಪತ್ರಿಕಾ ಪ್ರಕಟಣೆ ನೀಡಿತ್ತು.

ಕಳೆದ ವರ್ಷ ಹೈಕೋರ್ಟ್, ರಾಜಕಾಲುವೆಯನ್ನು ಅತಿಕ್ರಮಣ ಮಾಡಿರುವ ಬಗ್ಗೆ ಸಮೀಕ್ಷೆ ನಡೆಸಿ ಗುರುತಿಸಿ 10 ದಿನಗಳ ಒಳಗೆ ವರದಿ ನೀಡುವಂತೆ ಬಿಬಿಎಂಪಿಗೆ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಸಾರ್ವಜನಿಕರ ಸಹಕಾರ ಕೋರಿದ್ದು, ಸಾರ್ವಜನಿಕರು ಅತಿಕ್ರಮಣವಾದ ರಾಜಕಾಲುವೆ ಪ್ರದೇಶವನ್ನು ಸ್ಪಷ್ಟವಾಗಿ ಫೋಟೋ ಸಹಿತ ನಿರ್ದಿಷ್ಟ ಅಧಿಕಾರಿಗಳಿಗೆ ಕಳುಹಿಸುವಂತೆ ತಿಳಿಸಿತ್ತು. ನೂರಾರು ಫೋಟೋಗಳು ಬಂದಿದ್ದವು.

ಇದನ್ನೂ ಓದಿ: Road Accident: ರಾಜಕಾಲುವೆಗೆ ಬಿದ್ದ ಬೈಕ್‌ ಸವಾರನ ಮೃತದೇಹ ಪತ್ತೆ

Continue Reading

ಪ್ರಮುಖ ಸುದ್ದಿ

Assembly Monsoon Session: ಮುಂಗಾರು ಅಧಿವೇಶನಕ್ಕೆ ಮುನ್ನವೇ 2 ಕೋಟಿ ಖರ್ಚು ಮಾಡಿ ವಿಧಾನಸೌಧ ಸಿಂಗಾರ!

Assembly Monsoon Session: ವಿಧಾನಸಭೆ ಒಳಾಂಗಣ ರೋಸ್‌ವುಡ್ ಡೋರ್, ಕಾರ್ಪೆಟ್, ಫ್ಲೋರ್ ಮ್ಯಾಟ್, ಪಿಲ್ಲರ್‌ಗಳಿಗೆ ರೋಸ್ ವುಡ್ ಕ್ಲಾಡಿಂಗ್ ಸೇರಿದಂತೆ ರೀ ಫರ್ನಿಶಿಂಗ್ ಮಾಡಲಾಗಿದೆ. ಸ್ಪೀಕರ್ ಕಚೇರಿಗೆ ಹೊಸ ಬಾಗಿಲು, ಫ್ಲೋರ್ ಮ್ಯಾಟ್, ಇತರೆ ನವೀಕರಣ ಮಾಡಲಾಗಿದೆ. PWD ಕೆಲಸವನ್ನು ಸ್ಪೀಕರ್ ಕಚೇರಿಯಿಂದಲೇ ನಿರ್ವಹಣೆ ಮಾಡಲಾಗಿದೆ.

VISTARANEWS.COM


on

Assembly monsoon session UT Khader karnataka assembly live
Koo

ಬೆಂಗಳೂರು: 16ನೇ ವಿಧಾನಸಭೆಯ ಮಳೆಗಾಲದ ಅಧಿವೇಶನಕ್ಕೆ (Vidhan Sabha Session, Assembly monsoon session) ) ಮುನ್ನವೇ ವಿಧಾನಸೌಧವನ್ನು (Vidhana Soudha) ಹೊಸದಾಗಿ ಶೃಂಗರಿಸಲಾಗಿದ್ದು, ಸುಮಾರು 2 ಕೋಟಿ ರೂಪಾಯಿ ವೆಚ್ಚದಲ್ಲಿ ಒಳಾಂಗಣವನ್ನು (renovation) ನವೀಕರಣಗೊಳಿಸಲಾಗಿದೆ. ಸ್ಪೀಕರ್‌ ಯು.ಟಿ ಖಾದರ್‌ (Speaker UT Khader) ಅವರು ಮುತುವರ್ಜಿ ವಹಿಸಿ ಈ ನವೀಕರಣ ನಡೆಸಿದ್ದು, ಇದೀಗ ಒಳಾಂಗಣ ಹೈಟೆಕ್ ಸ್ಪರ್ಶದಿಂದ ಕಂಗೊಳಿಸುತ್ತಿದೆ.

ವಿಧಾನಸಭೆ ಒಳಾಂಗಣ ರೋಸ್‌ವುಡ್ ಡೋರ್, ಕಾರ್ಪೆಟ್, ಫ್ಲೋರ್ ಮ್ಯಾಟ್, ಪಿಲ್ಲರ್‌ಗಳಿಗೆ ರೋಸ್ ವುಡ್ ಕ್ಲಾಡಿಂಗ್ ಸೇರಿದಂತೆ ರೀ ಫರ್ನಿಶಿಂಗ್ ಮಾಡಲಾಗಿದೆ. ಸ್ಪೀಕರ್ ಕಚೇರಿಗೆ ಹೊಸ ಬಾಗಿಲು, ಫ್ಲೋರ್ ಮ್ಯಾಟ್, ಇತರೆ ನವೀಕರಣ ಮಾಡಲಾಗಿದೆ. PWD ಕೆಲಸವನ್ನು ಸ್ಪೀಕರ್ ಕಚೇರಿಯಿಂದಲೇ ನಿರ್ವಹಣೆ ಮಾಡಲಾಗಿದೆ.

ಮಧ್ಯಾಹ್ನ ಹೊತ್ತು ಊಟದ ಲಾಂಜ್‌ನಲ್ಲಿ ಶಾಸಕರಿಗೆ ವಿಶ್ರಾಂತಿ ಪಡೆಯಲು ಅಳವಡಿಸಲಾದ ರಿಕ್ಲೈನರ್‌ಗಳ ಬಗೆಗೆ ನಿನ್ನೆ ಸ್ಪೀಕರ್‌ ಕಲಾಪದಲ್ಲಿ ಹೇಳಿದ್ದರು. ಶಾಸಕರ ಗೈರುಹಾಜರು ತಪ್ಪಿಸಲು ಈ ಕ್ರಮ ತೆಗೆದುಕೊಂಡಿರುವುದಾಗಿ ತಿಳಿಸಿದ್ದರು.

ಯಾವುದಕ್ಕೆ ಎಷ್ಟೆಷ್ಟು ಖರ್ಚು?

ವಿಧಾನಸೌಧದ ಪಶ್ಚಿಮ ಭಾಗದ ಅಸೆಂಬ್ಲಿ ಪ್ರವೇಶದ್ವಾರ, ಅಸೆಂಬ್ಲಿ ಪ್ರವೇಶದ ಮುಂಭಾಗ ಮತ್ತು ಹಿಂಭಾಗದ ಪಿಲ್ಲರ್‌ಗಳಿಗೆ ರೋಸ್ ವುಡ್ ಕ್ಲಾಡಿಂಗ್ ಮತ್ತು ಮುಂಭಾಗದ ಪಿಲ್ಲರ್ ಮತ್ತು ಹೊಸ ಬಾಗಿಲಿನ ನಡುವೆ 1 ವಾಲ್ ಕ್ಲಾಡಿಂಗ್ ಹಾಕಲು- 43 ಲಕ್ಷ

ಅಸೆಂಬ್ಲಿ ಪ್ರವೇಶ, ಆಡಳಿತ ಮತ್ತು ವಿರೋಧ ಪಕ್ಷದ ಲಾಂಜ್ ಪ್ರವೇಶ ಕಾರಿಡಾರ್, ಪಶ್ಚಿಮ ಭಾಗದ ಅಸೆಂಬ್ಲಿ ಪ್ರವೇಶ ಹಂತಗಳಿಗೆ ನೆಲದ ಕಾರ್ಪೆಟ್ ಹಾಕಲು- 32 ಲಕ್ಷ 50 ಸಾವಿರ

ಪಾಲಿಕಾರ್ಬೊನೇಟ್ ಶೀಟ್‌ನಿಂದ ಒಳಗಿನ ಕಾರಿಡಾರ್ ಓಪನ್ನಿಂಗ್‌ನ 3 ಅಸೆಂಬ್ಲಿ ಪ್ರವೇಶದ್ವಾರದ ಸುತ್ತಲೂ 10 ರಿಂದ 12 ಮಿಮೀ ದಪ್ಪದ ಟಫನ್ ಗ್ಲಾಸ್ ವಿಭಾಗವನ್ನು ಒದಗಿಸುವುದು ಮತ್ತು ಪ್ಯಾರಪೆಟ್ ರಂಧ್ರಗಳನ್ನು ಮುಚ್ಚುವುದು- 8 ಲಕ್ಷ 90 ಸಾವಿರ

ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಕ್ಕೆ ಯಾಂತ್ರಿಕೃತ ರಿಕ್ಲೈನರ್ ಕುರ್ಚಿಗಳನ್ನು ಒದಗಿಸುವುದು- 23 ಲಕ್ಷ 60 ಸಾವಿರ

ಅಸೆಂಬ್ಲಿ ಪ್ರವೇಶ ಕಾರಿಡಾರ್ ಮತ್ತು ಪೂರ್ವ ಭಾಗದ ಸೆಂಟ್ರಲ್ ಹಾಲ್ ಮತ್ತು ಗ್ರ್ಯಾಂಡ್ ಸ್ಟೆಪ್ ಪ್ರವೇಶ ಗೋಡೆಗಳಿಗೆ ಪೇಂಟಿಂಗ್ ಮತ್ತು ಪಾಲಿಶಿಂಗ್ ಮಾಡುವುದು- 14 ಲಕ್ಷ 80 ಸಾವಿರ

ಸಿಎಂ ಚೇಂಬರ್, ಪ್ರೆಸ್ ಲಾಂಜ್, ಸಚಿವರ ಲಾಂಜ್ ಮತ್ತು ಮಹಿಳಾ ಲಾಂಜ್‌ನ ಶೌಚಾಲಯ ನವೀಕರಣ- 18 ಲಕ್ಷ 50 ಸಾವಿರ

ಮೊದಲ ಮಹಡಿಯ ಸೆಂಟ್ರಲ್ ಹಾಲ್‌ನಲ್ಲಿ ತಾತ್ಕಾಲಿಕ ಅಡಿಗೆ, ಊಟ, ಕುರ್ಚಿಗಳು, ಟೇಬಲ್‌ಗಳು, ವಿಭಜನೆ, ಬ್ಯಾರಿಕೇಡ್‌ಗಳನ್ನು ಹಾಕುವುದು ಮತ್ತು ಊಟದ ಟೇಬಲ್, ಟ್ಯಾಪ್ ಕ್ಲಾತ್‌ಗಳು, ಆಡಳಿತ ಮತ್ತು ವಿರೋಧ ಪಕ್ಷದಲ್ಲಿ ಕುರ್ಚಿಗಳನ್ನು ಹಾಕುವುದು ಅಧಿವೇಶನದಲ್ಲಿ ಅಸೆಂಬ್ಲಿಗೆ ಇತರ ಸಂಬಂಧಿತ ಕೆಲಸಗಳಿಗೆ- 27 ಲಕ್ಷ 75 ಸಾವಿರ

ಕಾರ್ಪೆಟ್, ಕುರ್ಚಿಗಳು, ಸೋಫಾಗಳು ಮತ್ತು ಅವುಗಳನ್ನು ತೊಳೆಯುವುದು, ನೀರು ಸರಬರಾಜು, ಪೇಂಟಿಂಗ್ ಮತ್ತು ಇತರ ಸಂಬಂಧಿತ ಕೆಲಸಗಳಿಗೆ- 10 ಲಕ್ಷ 35 ಸಾವಿರ

ಮೊದಲನೇ ಮಹಡಿಗೆ ಸ್ಟೇನ್‌ಲೆಸ್ ಸ್ಟೀಲ್ ನೇಮ್ ಬೋರ್ಡ್‌ಗಳಲ್ಲಿ ಅಸೆಂಬ್ಲಿ ಪ್ರವೇಶ ಕಾರಿಡಾರ್‌ನ ಎರಡೂ ಬದಿಗಳಿಗೆ ಸ್ಟೇನ್‌ಲೆಸ್ ಸ್ಟೀಲ್ ಗ್ರಿಲ್‌ಗಳನ್ನು ಒದಗಿಸುವುದು, ಅಸೆಂಬ್ಲಿ ಪ್ರವೇಶ ನಾಮ ಫಲಕ ಅಳವಡಿಕೆಗೆ- 16 ಲಕ್ಷ 60 ಸಾವಿರ

ಒಟ್ಟು 1 ಕೋಟಿ 96 ಲಕ್ಷ ವ್ಯಯ ಮಾಡಲಾಗಿದ್ದು, ಈ ಮೂಲಕ ವಿಧಾನಸೌಧ ಹೈಟೆಕ್ ಜೊತೆ ಆಧುನಿಕ ಮಾಡಲಾಗಿದೆ.

ಇದನ್ನೂ ಓದಿ: Karnataka Assembly Live: ಇಡಿಗೆ ಹೆದರುವುದಿಲ್ಲ, ನಿಮ್ಮನ್ನು ಬಲಿ ಹಾಕಿಯೇ ಸಿದ್ಧ: ವಾಲ್ಮೀಕಿ ಹಗರಣ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ

Continue Reading

ಕ್ರೈಂ

Obscene Act: ಡ್ರೈವಿಂಗ್‌ ಹೇಳಿಕೊಡುವ ನೆಪದಲ್ಲಿ ಖಾಸಗಿ ಅಂಗ ತೋರಿಸಿದ ಟ್ರೇನರ್‌, ಯುವತಿಯ ದೂರು

Obscene Act: ಯುವತಿಯನ್ನು ಕಾರು ಚಾಲನೆಯ ನೆಪದಲ್ಲಿ ಕೂರಿಸಿಕೊಂಡು ಕರೆದುಕೊಂಡು ಖಾಸಗಿ ಅಂಗ ಪ್ರದರ್ಶಿಸಿ ಟ್ರೇನರ್‌ ಅಸಭ್ಯ ವರ್ತನೆ ತೋರಿದ್ದಾನೆ. ನ್ಯಾಷನಲ್ ಪಬ್ಲಿಕ್ ಸ್ಕೂಲ್ ಫ್ಲೈಓವರ್‌ನಲ್ಲಿ ಈ ಘಟನೆ ನಡೆದಿದೆ. 18 ವರ್ಷದ ಯುವತಿಯ ಜೊತೆ ಕಾರ್ ಡ್ರೈವಿಂಗ್ ಟ್ರೈನರ್ ಅಸಭ್ಯ ವರ್ತನೆ ತೋರಿದ್ದಾನೆ.

VISTARANEWS.COM


on

odscene act driver
Koo

ಬೆಂಗಳೂರು: ರಾಜಧಾನಿಯಲ್ಲಿ ಮಹಿಳೆಯರಿಗೆ ಪುಂಡ ಪೋಕರಿಗಳ‌ ಕಿರುಕುಳ ಹೆಚ್ಚಾಗುತ್ತಿದೆ ಎಂಬ ದೂರುಗಳ ನಡುವೆ, ಇನ್ನೊಂದು ಅಂಥದೇ ಘಟನೆ ನಡೆದಿದೆ. ಕಾರ್ ಡ್ರೈವಿಂಗ್ (Car driving) ಹೇಳಿಕೊಡುವ‌ ನೆಪದಲ್ಲಿ ಟ್ರೈನರ್ (Driving trainer) ಒಬ್ಬ ಅಸಭ್ಯ ವರ್ತನೆ (Obscene Act) ತೋರಿಸಿದ್ದಾನೆ.

ಯುವತಿಯನ್ನು ಕಾರು ಚಾಲನೆಯ ನೆಪದಲ್ಲಿ ಕೂರಿಸಿಕೊಂಡು ಕರೆದುಕೊಂಡು ಖಾಸಗಿ ಅಂಗ ಪ್ರದರ್ಶಿಸಿ ಟ್ರೇನರ್‌ ಅಸಭ್ಯ ವರ್ತನೆ ತೋರಿದ್ದಾನೆ. ನ್ಯಾಷನಲ್ ಪಬ್ಲಿಕ್ ಸ್ಕೂಲ್ ಫ್ಲೈಓವರ್‌ನಲ್ಲಿ ಈ ಘಟನೆ ನಡೆದಿದೆ. 18 ವರ್ಷದ ಯುವತಿಯ ಜೊತೆ ಕಾರ್ ಡ್ರೈವಿಂಗ್ ಟ್ರೈನರ್ ಅಸಭ್ಯ ವರ್ತನೆ ತೋರಿದ್ದಾನೆ.

ಬಸವೇಶ್ವರ ನಗರದ ಮಾರುತಿ ಡ್ರೈವಿಂಗ್ ಸ್ಕೂಲ್‌ನಲ್ಲಿ ಯುವತಿ ಟ್ರೈನಿಂಗ್‌ಗೆ ಸೇರಿದ್ದರು. ಈ ವೇಳೆ ಅಣ್ಣಪ್ಪ ಎಂಬಾತ ಪರ್ಸನಲ್ ಟ್ರೈನರ್ ಆಗಿ ಡ್ರೈವಿಂಗ್ ಕಲಿಸಿಕೊಡಲು ಮುಂದಾಗಿದ್ದ. ಆದರೆ ಕಳೆದ ವಾರ ಬೆಳಗ್ಗೆ 6.30ಕ್ಕೆ ಕಾರ್‌ನಲ್ಲಿದ್ದ ಅಣ್ಣಪ್ಪ ಅಸಭ್ಯ ವರ್ತನೆ ತೋರಿದ್ದಾನೆ. ಯುವತಿ ಪಕ್ಕದಲ್ಲಿ ಕೂತು ಖಾಸಗಿ ಅಂಗ ಪ್ರದರ್ಶನ ಮಾಡಿದ್ದಾನೆ. ಈ ಬಗ್ಗೆ ಬಸವೇಶ್ವರ ನಗರ ಠಾಣೆಗೆ ಯುವತಿ ದೂರು ನೀಡಿದ್ದಾರೆ. ಅಣ್ಣಪ್ಪನ ವಿರುದ್ಧ FIR ದಾಖಲಿಸಿ ಪೊಲೀಸರು ಬಂಧಿಸಿದ್ದಾರೆ.

ರಸ್ತೆಯಲ್ಲಿ ಗೂಂಡಾಗಿರಿ, ಇನೋವಾ ಚಾಲಕನ ಮೇಲೆ ಫಾರ್ಚುನರ್‌ನಲ್ಲಿದ್ದ ತಂಡದಿಂದ ತೀವ್ರ ಹಲ್ಲೆ

ಬೆಂಗಳೂರು: ತಮ್ಮ ಐಷಾರಾಮಿ ಫಾರ್ಚುನರ್ ಕಾರು (Fortuner Car) ಹೋಗೋಕೆ ದಾರಿ ಬಿಡಲಿಲ್ಲ ಎಂದು ಬಾಡಿಗೆ ಇನೋವಾ ಕಾರಿನ (Innova Car) ಚಾಲಕನ ಮೇಲೆ ಒಂದು ತಂಡ ಯದ್ವಾತದ್ವಾ ಹಲ್ಲೆ (Assault Case) ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಜಧಾನಿಯಲ್ಲಿ ನಡೆಯುತ್ತಿರುವ ರೋಡ್‌ ರೇಜ್‌ (Road Rage) ಪ್ರಕರಣಗಳಿಗೆ ಇದು ಇನ್ನೊಂದು ಸೇರ್ಪಡೆ.

ರಸ್ತೆಯಲ್ಲಿ ಸಿನಿಮೀಯ ರೀತಿಯಲ್ಲಿ ಚಾಲಕನ ಮೇಲೆ ತಂಡ ಹಲ್ಲೆ ನಡೆಸಿದೆ. ಕಾಲಿನಿಂದ ತುಳಿದು, ಕರಾಟೆ ಕಿಕ್‌ ನೀಡಿ ಡ್ರೈವರ್‌ನನ್ನು ಗಾಯಗೊಳಿಸಲಾಗಿದೆ. ಈ ಘಟನೆ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಫಾರ್ಚುನರ್ ಕಾರಿನಲ್ಲಿ ಇದ್ದ ಪುಂಡರ ಗುಂಪು, ಮುಂದೆ ಇದ್ದ ಇನೋವಾ ಕಾರು ಚಾಲಕ ತಮ್ಮ ವಾಹನ ಮುಂದೆ ಹೋಗಲು ಬಿಟ್ಟಿಲ್ಲ ಎಂದು ಆತನನ್ನು ಹೊರಗೆಳೆದು ಅವನ ಮೇಲೆ ಹಲ್ಲೆ ನಡೆಸಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಡಾ. ಪ್ರಜ್ವಿತ್ ರೈ ಎಂಬವರು ಪೋಸ್ಟ್ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಅಸಹಾಯಕನ ಮೇಲೆ ಹೀಗೆ ಹಲ್ಲೆ ಮಾಡಲಾಗಿದೆ. ಈ ರೀತಿ ಅಸಹಾಯಕರ ಮೇಲೆ ದರ್ಪ ತೋರುವವರಿಗೆ ಶಿಕ್ಷೆ ಆಗಬೇಕು ಎಂದು ಪೋಸ್ಟ್ ಹಾಕಿದ್ದಾರೆ. ಪೋಸ್ಟ್‌ಗೆ ʼದರ್ಶನ್ʼ ಮತ್ತು ʼರೇಣುಕಾಸ್ವಾಮಿʼ ಹೆಸರಿನ ಹ್ಯಾಶ್‌ಟ್ಯಾಗ್ ಹಾಕಲಾಗಿದೆ. ಸದ್ಯ ಘಟನೆ ಸಂಬಂಧ ಪೊಲೀಸರು ಮಾಹಿತಿ ಪಡೆದಿದ್ದಾರೆ.

ಇದನ್ನೂ ಓದಿ: Shiradi Ghat: ಭೂಕುಸಿತ; ಶಿರಾಡಿ ಘಾಟ್​ನಲ್ಲಿ ಸಂಚಾರ ನಿಷೇಧ ​; ಬೆಂಗಳೂರು- ಮಂಗಳೂರು ಸಂಪರ್ಕ ಬಹುತೇಕ ಕಟ್​

Continue Reading
Advertisement
Shami-Sania Mirza
ಕ್ರೀಡೆ5 mins ago

Shami-Sania Mirza: ಸಾನಿಯಾ ಮಿರ್ಜಾ ಜತೆ ಮದುವೆ?; ಮೊದಲ ಬಾರಿಗೆ ಸ್ಪಷ್ಟನೆ ಕೊಟ್ಟ ಶಮಿ

Viral Video
ವೈರಲ್ ನ್ಯೂಸ್19 mins ago

Viral Video: ನೋಡ ನೋಡ್ತಿದ್ದಂತೆ ಕುಸಿದು ಬಿತ್ತು ಕ್ಲಾಸ್‌ರೂಂ ಗೋಡೆ; ಒಳಗಿದ್ದ ಮಕ್ಕಳ ಕತೆ ಏನಾಯ್ತು ಗೊತ್ತಾ? ವಿಡಿಯೋ ಇದೆ

karnataka Rain
ಮಳೆ40 mins ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

First Drug Testing Olympics
ಕ್ರೀಡೆ46 mins ago

First Drug Testing Olympics: ಒಲಿಂಪಿಕ್ಸ್​ನಲ್ಲಿ ಮೊದಲ ಬಾರಿಗೆ ಮಾದಕ ದ್ರವ್ಯ ಸೇವನೆ ಪ್ರಕರಣ ಬೆಳಕಿಗೆ ಬಂದದ್ದು ಯಾವಾಗ?

Actor Darshan Renuka Swamy assault scene recorded on iPhone
ಸಿನಿಮಾ54 mins ago

Actor Darshan: ರೇಣುಕಾ ಸ್ವಾಮಿ ಹಲ್ಲೆ ದೃಶ್ಯ ಐಫೋನ್‌ನಲ್ಲಿ ರೆಕಾರ್ಡ್‌; ಸಿನಿಮಾ ಶೈಲಿಯಲ್ಲಿ ನಡೆದಿತ್ತು ಕೃತ್ಯ!

Doda Encounter
ದೇಶ1 hour ago

Doda Encounter: ಜಮ್ಮು ದಾಳಿ ಹಿಂದೆ ಇದ್ಯಾ ಪಾಕ್‌ ಮಾಜಿ ಸೈನಿಕರ ಕೈವಾಡ? ಉಗ್ರರಿಗಿದ್ಯಾ ಸೇನಾ ತರಬೇತಿ?

Rajakaluve Encroachment
ಬೆಂಗಳೂರು1 hour ago

Rajakaluve Encroachment: ರಾಜಕಾಲುವೆ ಒತ್ತುವರಿದಾರರಿಗೆ ಮತ್ತೆ ನಡುಕ, ತೆರವಿಗೆ ಬಿಬಿಎಂಪಿ ಸಿದ್ಧತೆ

Paris Olympics
ಕ್ರೀಡೆ2 hours ago

Paris Olympics: ಟ್ರ್ಯಾಕ್‌ & ಫೀಲ್ಡ್ ವಿಭಾಗದಲ್ಲಿ ಚಿನ್ನ ಗೆದ್ದರೆ ಅಥ್ಲೀಟ್​ಗಳಿಗೆ ಸಿಗಲಿದೆ ಭಾರೀ ಮೊತ್ತದ ನಗದು ಬಹುಮಾನ

Murder case
ಕೊಡಗು2 hours ago

Murder Case : ಪತ್ನಿಗೆ ಗುಂಡು ಹಾರಿಸಿ ಕೊಂದು ಪೊಲೀಸರಿಗೆ ಶರಣಾದ ಪತಿ!

Shraddha Kapoor On Rumours Of Wedding To Rahul Mody
ಬಾಲಿವುಡ್2 hours ago

Shraddha Kapoor: ಮದುವೆ ಬಗ್ಗೆ ಶ್ರದ್ಧಾ ಕಪೂರ್ ಹೇಳಿದ್ದೇನು? ಹುಡುಗ ಯಾರು?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ40 mins ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ24 hours ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ1 day ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ2 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ4 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ5 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ5 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ5 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

ಟ್ರೆಂಡಿಂಗ್‌